ಒಟ್ಟು 1821 ಕಡೆಗಳಲ್ಲಿ , 103 ದಾಸರು , 1474 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀ ಗಣೇಶ ಪ್ರಾರ್ಥನೆ ಅಗ್ರಪೂಜಾ ವಿಘ್ನರಾಜ ಅಗ್ನಿಜಾಗ್ರಜ ಮಹೋಜ ಪ. ಲಗ್ನವಾಗಲಿ ಹರಿಪದಾಬ್ಜ ನಿಗ್ರಹೀತ ಕಾಮಬೀಜ ಅ.ಪ. ಭಾನುತೇಜ ಭಕ್ತಿಭಾಜ ಧ್ಯಾನಗಮ್ಯ ಮುನಿಸಮಾಜ ದೀನಕಾಮದ ಕಲ್ಪಭೂಜ ಗಾನಲೋಲ ಭಾವ ನಿಯಾತ್ಮಜ 1 ಚತುರಭುಜ ಸಚ್ಚರಿತ ವಿರಜ ಯತಿವರೇಣ್ಯಗಣ ವಿರಾಜ ಮತಿಮತಾಂವರ ನತಬಿಡೌಜ ಪಂಕಜ 2 ರುಕುಮಿಣೀಜ ರುದ್ರಗಣವ್ರಜ ಭಕುತ ವತ್ಸಲ ಮನೋಜ ಮುಖಮತಂಗಜ ಮೂಷಿಕಧ್ವಜ ಲಕುಮಿನಾರಾಯಣ ಗುಣಜ್ಞ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಶ್ರೀ ಗಣೇಶ ಪ್ರಾರ್ಥನೆ ಅಗ್ರಪೂಜಾ ವಿಘ್ನರಾಜ ಅಗ್ನಿಜಾಗ್ರಜ ಮಹೋಜ ಪ. ಲಗ್ನವಾಗಲಿ ಹರಿಪದಾಬ್ಜ ನಿಗ್ರಹೀತ ಕಾಮಬೀಜಅ.ಪ. ಭಾನುತೇಜ ಭಕ್ತಿಭಾಜ ಧ್ಯಾನಗಮ್ಯ ಮುನಿಸಮಾಜ ದೀನಕಾಮದ ಕಲ್ಪಭೂಜ ಗಾನಲೋಲ ಭಾವ ನಿಯಾತ್ಮಜ 1 ಚತುರಭುಜ ಸಚ್ಚರಿತ ವಿರಜ ಯತಿವರೇಣ್ಯಗಣ ವಿರಾಜ ಮತಿಮತಾಂವರ ನತಬಿಡೌಜ ಪಂಕಜ 2 ರುಕುಮಿಣೀಜ ರುದ್ರಗಣವ್ರಜ ಭಕುತ ವತ್ಸಲ ಮನೋಜ ಮುಖಮತಂಗಜ ಮೂಷಿಕಧ್ವಜ ಲಕುಮಿನಾರಾಯಣ ಗುಣಜ್ಞ 3
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀ ಗುರು ಜಗನ್ನಾಥಾರ್ಯ ಕರುಣಿಸಯ್ಯ ಮೊರೆಹೊಕ್ಕೆ ತ್ವತ್ವದಕೆÉ ಮರಿಯದಲೆ ಪಿಡಿ ಕೈಯ್ಯ ಪ ಪ್ರಹ್ಲಾದನನುಗ್ರವು ಎಲ್ಲ ಕಾಲದಲಿ ನಿ ನ್ನಲ್ಲಿ ಸಂಪೂರ್ಣವಾಗಿರುವದೆಂಬ ಸೊಲ್ಲು ಲಾಲಿಸಿ ನಿನ್ನ ಪಲ್ಲಾವಾಂಘ್ರಿಗೆ ನಮಿಪೆ ಬಲ್ಲಿದನೆ ಹರಿಧ್ಯಾನದಲ್ಲಿ ನಿಲ್ಲಿಸು ಮನವ 1 ಜನಕಾಗ್ರಜಾತಾರ್ಯ | ನರನಿಸಿ ಜನಿಸುತ ಮಂತ್ರಮುನಿ ನಿಲಯ ಮುನಿವರ್ಯ ಶ್ರೀ ರಾಯರ ಗುಣಸ್ತವನ ವಿರಚಿಸುತ ಪ್ರಣತರಿಗೆ ಪಠಿಸುತ್ತ ಮನದಿಚ್ಛೆ ಪಡೆವುದರೆ ಅನುಕೂಲಿಸಿದ ಜ್ಞಾನಿ 2 ಶ್ರೀಶಾಮಸುಂದರನ ದಾಸವರ್ಯರ ಉಪ ದೇಶವನು ಕೊಂಡು ಉಪಾಸನೆಯನು ಲೇಸಾಗಿ ಬಿಡದೆ ಪ್ರತಿವಾಸರದಿ ಗೈದಂಥ ಭೂಸುರಾಗ್ರಣಿಯಾದ ಪ್ರತಿವಾಸರದಿ ಗೈದಂಥ ಭೂಸುರಾಗ್ರಣಿಯಾದ ಕೋಸಿಗೆ ವಾಸ 3
--------------
ಶಾಮಸುಂದರ ವಿಠಲ
ಶ್ರೀ ಗುರುಕರುಣವು ಸೋಜಿಗವು ಕೌತುಕವು ಧ್ರುವ ಗುರುಹಸ್ತ ಪರುಷಸದೃಶ ನಿದರುಶÀದೋರುತಿಹ್ಯ ಅಗಣಿತ ತೇಜೋಮಯ ಪ್ರಕಾಶ ಇದು ಅನಿಮಿಷ ನೇತ್ರಲಿ ನೋಡುವದು ನೋಡುವದು ಘನ ಮಹಿಮೆಯೊಳು ಬೆರದಾಡುವದು ಬೆರದಾಡುವದು ತನ್ನೊಳು ತಾ ನಲಿದಾಡುವದು ನಲಿದಾಡುವದು ಅನುಭವ ಸುಖ ಸೂರ್ಯಾಡಿ ಸದ್ಗತಿ ಮುಕ್ತಿಯನೆ ಪಡೆವದು ಶ್ರೀಗುರುದಾಸರು 1 ಗುರುವುಪದೇಶ ಜ್ಞಾನಪ್ರಕಾಶ ಅತಿಸಂತೋಷ ಛೇದಿಸುವುದು ಭವಪಾಶ ಇದು ನಿದ್ರಸ್ಯ ಕರ್ನಲಿ ಕೇಳ್ವದು ನಿದ್ರಸ್ಯ ಕರ್ನಲಿ ಕೇಳ್ವದು ಲಯ ಲೀಲೆಯೊಳು ಆಲಿಸುವದು ಆಲಿಸುವದು ಪರಿಪರಿ ಶ್ರುತಿಗ್ಹೇಳೆನಿಸುವದು ಹೇಳೆನಿಸುವದು ಪತಿತಜೀವನ ಪಾವನಗೈಸುವದು ಸದ್ಗುರು ಮಹಿಮೆಯ ತಿಳಿಯದು ತಿಳಿಯದೀ ಶ್ರೀಗುರು ದಾಸರು 2 ಗುರು ನಿಜಬೋಧ ಬಲು ಅಗಾಧ ಪರಮ ಆಹ್ಲಾದ ತಿಳಿದವ ಜನ್ಮಕ ವಿರಹಿತವಾದ ಇದು ಅತಿಸೂಕ್ಷ್ಮಗತಿ ಭೇದಿಸುವದು ಭೇದಿಸುವದು ಗುರುಪಾದವೆಗತಿ ನಿಶ್ಚೈಸುವದು ನಿಶ್ಚೈಸುವದು ಸಮ್ಯಕಙÁ್ಞನವು ಸಾಧಿಸಿ ಆತ್ಮದಿ ಜೀವನ್ಮುಕ್ತನಾಗುವದು ಸದ್ಗುರು ಪಾದವು ಸಾಧಿಸಿ ಸಾಧಿಸಿ ಶ್ರೀಗುರುದಾಸರು 3 ಗುರುಕೃಪೆಜ್ಞಾನನ ಅಳಿವುದಙÁ್ಞನ ತಿಳಿವದು ಯಾತನ ಕಳೆವದು ಜನ್ಮ ಜರಾಮರಣ ಇದು ಪೂರ್ವ ಕಲ್ಪನೆಯು ಕಲ್ಪನೆಯು ಆತ್ಮಙÁ್ಞನದ ವರ್ತನೆಯು ವರ್ತನೆಯು ಸಾಯಸವಳಿದು ಯತ್ನವು ಪ್ರಯತ್ನವು ಶ್ರೀಗುರು ಭಕ್ತಿಯು ಮಾಡಿರಯ್ಯ ಮಾಡಿರಯ್ಯ ಸದ್ಗುರುದಾಸರು4 ಗುರುಙÁ್ಞನ ದೀಕ್ಷಾ ಕರುಣಾ ಕಟಾಕ್ಷ ಸದ್ಗತಿಮೋಕ್ಷ ತೋರುತಿಹ್ಯ ಗುರುತಾನೆ ಪ್ರತ್ಯಕ್ಷ ಇದು ಭಾಸ್ಕರ ಗುರು ಕೃಪಾದೃಷ್ಟಿಯು ಅಮೃತದ ದೃಷ್ಟಿಯು ಜೀವನ ಸಂತುಷ್ಟಿಯು ಮುರಿಯಿತು ಮಹಿಪತಿ ಹುಟ್ಟುವ ಹೊಂದುವ ಬಟ್ಟೆಯು ತ್ರಾಹಿ ತ್ರಾಹಿ ಗುರುನಾಥ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಶ್ರೀ ಗ್ರಂಥಮಾಲಿಕ ಮಧ್ವಸ್ತೋತ್ರ ಜಯ ಮಧ್ವ ಮುನಿರಾಯ ನಿನ್ನ ಚಾರು ತೋಯಜಾಂಘ್ರಿಯಲಿ ನಾ ಶರಣು ಅಹ ಮಾಯೇಶನಿಗೆ ಪ್ರಿಯ ಮುಖ್ಯಪ್ರಾಣನೇ ಎನ್ನ ಕರ್ಮ ದೋಷ ಮನ್ನಿಸಿ ಕಾಯೋ ಪ ಭಾವಿ ವಿರಂಚಿ ಮಹೋಜ ಜಯಾ - ದೇವಿ ಸಂಕರ್ಷಣ ತನೂಜ ಸೂತ್ರ ಸಂವಿದ್ ಬಲಾದಿ ಸುಭ್ರಾಜ ಶ್ರಧ್ಧಾ - ದೇವಿ ಹೃದಬ್ಜವಿರಾಜ ಅಹ ಇನಶಶಿ ಋಷಿಕುಲ ತಿಲಕ ಶ್ರೀವರನಂಘ್ರಿ ವನರುಹ ನಿಷ್ಠ ಹನುಮಭೀಮ ಮಧ್ವ 1 ಜಯತು ಶ್ರೀಹರಿ ರಾಮಚಂದ್ರ ಭಕ್ತ ಜಯದ ಮೋದದ ಅರ್ತಿಹಂತ ಕೃಷ್ಣ ಜಯತು ಕಾರುಣ್ಯ ಸಮುದ್ರ ಭಕ್ತ ಜಯದ ಕ್ಷೇಮದ ಜ್ಞಾನ ಸುಖದ ಅಹ ರಾಮವಚನ ಕಾರ್ಯರತ ಹನುಮಗೆ ನಮೋ ನಮೋ ಕುರುಕುಲ ಹರ ಭೀಮ ಕೃಷ್ಣೇಷ್ಟಗೆ 2 ಜಯತು ಶ್ರೀಹರಿ ವೇದವ್ಯಾಸ ಭಕ್ತ ಜಯದ ಹೃತ್ತಿಮಿರ ನಿರಾಸ ಮಾಳ್ಪ ಸೂರ್ಯ ಸ್ವಕಾಂತಿ ಪ್ರಕಾಶ ಮಧ್ವ - ರಾಯಗೆ ನಿಜಗುರು ಶ್ರೀಶ ಅಹ ವೈದಿಕಶಾಸ್ತ್ರದಿಂದಲೇ ವೇದ್ಯ ಶ್ರೀಶನ ಹಿತದಿ ನಮಗೆ ತೋರ್ಪಾನಂದ ಮುನಿಗೆ ನಮೋ 3 ಅಸುರರು ಪುಟ್ಟಿ ಭೂಮಿಯಲಿ ಸಾಧು ಭೂಸುರರೆಂದು ತೋರುತಲಿ ವೇದ ಶಾಸ್ತ್ರಕ್ಕೆ ಅಪಾರ್ಥ ಪೇಳಿ ಮೋಹ ವಶವಾಗೆ ಸುಜನರಲ್ಲಿ ಅಹ ಶ್ರೀಶನಾಜೆÉ್ಞ ಯತಾಳಿ ಮಧ್ವಾಭಿದಾನದಿ ಮೋಸ ದುರ್ಮತ ಧ್ವಾಂತ ಭಾಸ್ಕರನುದಿಸಿದಿ 4 ಮಧ್ಯಗೇಹರ ಮನೆಯಲ್ಲಿ ಮುಖ್ಯ ವಾಯುವೇ ಶಿಶುರೂಪ ತಾಳಿ ಬಲ ಸಂನ್ಯಾಸ ಸುಪ್ರಮೋದದಲಿ ಅಹ ಮಧ್ಯಗೇಹರ ಪುರುಷೋತ್ತಮತೀರ್ಥರ ಭಾಗ್ಯಕ್ಕೆ ಎಣೆವುಂಟೇ ಮೂರ್ಲೋಕದೊಳಗೆ 5 ಪುರುಷೋತ್ತಮಾಚ್ಚ್ಯುತಪ್ರೇಕ್ಷ ತೀರ್ಥ ಗುರುಗಳ ಸೇವಿಸಿ ಮೋಕ್ಷ ಮೋದ ಉರುಗುಣಸಿಂಧು ನಿರ್ದೋಷನಾದ ಶಿರಿವರನು ಕಮಲಾಕ್ಷ ಅಹ ಭಾರಿ ಪ್ರಸಾದವ ದಯದಿ ಬೀರಲ್ಲೇವೆ ದೊರೆಯುವದೆಂದು ಬೋಧಿಸಿದೆಯೋ ಮಧ್ವ 6 ಶ್ರೀಶ ವೇದವ್ಯಾಸನಲ್ಲಿ ಗೀತಾ ಭಾಷ್ಯ ಸಮರ್ಪಿಸಿ ಅಲ್ಯಿಲ್ಲಿ ಉಪ - ದೇಶಕೊಂಡು ಮತ್ತಿಲ್ಲಿ ಬಂದು ವ್ಯಾಸನಭಿಪ್ರಾಯದಲ್ಲಿ ಅಹ ಸರಿಯಾದ ತತ್ವಬೋಧಕ ಗ್ರಂಥಗಳ ಮಾಡಿ ಬೀರಿದ ಅಧಿಕಾರಿಗಳಿಗೆ ನೀ ದಯದಿ ಮೂಲಗ್ರಂಥಗಳು ಮೂವತ್ತು ಏಳು 7 ಳಾಳುಕ ಪ್ರಿಯತಮವಾದ್ದು ಭಕ್ತಿ ಪರ - ಕೈವಲ್ಯ ತೋರುವುದು ಅಹ ಪುನರಪಿ ಬದರಿಗೆ ಪೋಗಿ ಶ್ರೀಶನ ಕಂಡು ಧನ್ಯ ಮನದಿ ಬಂದು ಶಾಸ್ತ್ರ ಬೋಧಿಸಿದಿ 8 ಸೂತ್ರ ಭಾಷ್ಯಗೀತಾ ತಾತ್ಪರ್ಯ ಸೂತ್ರಾಣುಭಾಷ್ಯ ವಿಷ್ಣು ತತ್ವನಿರ್ಣಯಾ ಋಗ್ಭಾಷ್ಯ ತತ್ವೋ - ಭಾಗವತ ತಾತ್ಪರ್ಯ ಅಹ ನಿರ್ಣಯ ಶ್ರೀಮಹಾಭಾರತ ತಾತ್ಪರ್ಯ ಕರ್ಮ ನಿರ್ಣಯ 9 ಸನ್ನ್ಯಾಯ ವಿವರಣ ತಂತ್ರಸಾರ ಅನುವ್ಯಾಖ್ಯಾನವು ಸದಾಚಾರ ಸ್ಮøತಿ ಅನುತ್ತಮ ದ್ವಾದಶಸ್ತೋತ್ರ ಯತಿ ಪ್ರಣವ ಕಲ್ಪದಿ ಪ್ರಣವಸಾರ ಅಹ ಉಪನಿಷದ್ಭ್ಬಾಷ್ಯವು ಹತ್ತು ಉತ್ಕøಷ್ಟವು ಷಟ್ಟ್ರಶ್ನಕಾಠಕ ಬೃºದಾರಣ್ಯಾಖ್ಯ 10 ಮನನ ಮಾಡಲು ಐತರೇಯ ಪುನಃ ಶ್ರವಣ ಮಾಡಲು ತೈತಿರೀಯ ಸಂ - ಚಿಂತಿಸಲು ಈಶಾವಾಸ್ಯ ಬಹು ಘನವಿದ್ಯಾಯುತವು ಛಾಂದೋಗ್ಯ ಅಹ ಅರ್ಥವಣಮಾಂಡೂಕ್ಯ ತಲವ ಕಾರೋಕ್ತವು ಸತತ ಸಂಸ್ಮರಣೀಯ ಜ್ಞಾನದಾಯಕವು11 ಕೃಷ್ಣಾಮೃತ ಮಹಾರ್ಣದಿ ಬಾಲ ಕೃಷ್ಣ ಜಯಂತಿ ನಿರ್ಣಯದಿ ಭಕ್ತಿ ಜ್ಞಾನ ಸಾಧನವ ಬೋಧಿಸಿ ನರ - ಸಿಂಹನ ನಖಸ್ತುತಿ ಮುದದಿ ಅಹ ಪಠಿಸೆ ಭದ್ರದ ಕಥಾಲಕ್ಷಣದಲಿ ವಾದ ಮಾಡುವ ಬಗೆ ತೋರ್ದಿಯೈನೃಹರಿಯ ನಮಿಸಿ 12 ಅವಿದ್ಯಾ ಆವೃತವು ಬ್ರಹ್ಮ ಅದ್ಯಸ್ಥ ಜಗತೆಂಬ ಮತವ ತರಿದು ಮಾಯಾವಾದ ಖಂಡನವ ಮಾಡಿ ನ್ಯಾಯ ಪ್ರಮಾಣ ಲಕ್ಷಣವ ಅಹ ನುಡಿದು ಪ್ರಪಂಚ ಮಿಥ್ಯಾತ್ವಾನುಮಾನ ಖಂ - ಡನವ ಉಪಾಧಿಖಂಡನ ಸಹಗೈದಿ 13 ಪಂಚಭೇದ ಸತ್ಯ ಹರಿಯೇ ಸರ್ವೋತ್ತಮ ಸುಹೃದ ಶಿರಿ ವರನೇ ಸ್ವತಂತ್ರ ಪ್ರಮೋದ ಸ್ವಾಮಿ ಸೃಷ್ಟಾ ಪಾತಾ ಅತ್ತಾತ್ರಾಹ ಅಹ ತತ್ವ ವಿವೇಕವು ತತ್ವ ಸಂಖ್ಯಾನವು ನಿತ್ಯ ಸುಪಠನೀಯ ಹರಿ ಸರ್ವೋತ್ಕøಷ್ಟ 14 ನೀನಿಂತು ನುಡಿಸಿದೀ ನುಡಿಯು ನಿನ್ನ ಸನ್ನಿಧಾನದಿ ಸಮರ್ಪಣೆಯು ನಾನು ಏನೂ ಓದದ ಮಂದಮತಿಯು ನೀನು ಪೂರ್ಣಪ್ರಜ್ಞನು ಜೀವೋತ್ತಮನು ಅಹ ಎನ್ನ ಕೊರತೆಗಳ ನೀಗಿಸಿ ಹೃಸ್ಥಶ್ರೀ 'ಪ್ರಸನ್ನ ಶ್ರೀನಿವಾಸ' ನ್ನೊ ಲಿಸೋ ಎನಗೆ ಜೀಯ 15
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಜಗನ್ನಾಥದಾಸ ನಮಿಪೆ ಗುರುರಾಜ ಸಾತ್ವಿಕವಪುಷ ಪ ಈ ಜಗದೊಳು ನಿಮಗೆಣೆಗಾಣೆ ಸತತ ನಿ - ವ್ರ್ಯಾಜದಿ ಹರಿಯ ಗುಣೋಪಾಸನೆ ಮಾಳ್ಪ ಅ.ಪ. ಹರಿದಾಸ ಕುಲವರ್ಯರೆನಿಸಿ ಕಲ್ಪತರುವಂದದಿ ಚರ್ಯ ಚರಿಸುತ ಧರೆಯೊಳು ಮೆರೆವ ಮಹಾತ್ಮರ ಚರಣೇಂದ್ರೀವರಯುಗ್ಮ ದರುಶನ ಮಾಳ್ಪರ ದುರಿತರಾಶಿಗಳಿರಗೊಡದೆ ನೆರೆ ಪರಮಮುಕ್ತಿಯ ದಾರಿ ತೋರುತ ಸಿರಿಸಹಿತ ಹರಿ ತೋರುವಂದದಿ ಕರುಣ ಮಾಳ್ಪ ಸುಗಣಮಹೋದಧಿ 1 ರವಿಯು ಸಂಚರಿಸುವಂತೆ ಭೂವಲಯದಿ ಕವಿಶ್ರೇಷ್ಠ ಚರಿಸಿದೆಯೋ ಅವಿರುದ್ಧ ತ್ರಯಿಜ್ಞಾನ ಪ್ರವಹಂಗದಲಿ ಭುವನೈಕ ವೇದವದ್ಯನ ಶ್ರವಣಭಕುತಿಯಿಂದ ದಿವಸ ದಿವಸದಿ ಪ್ರೀತಿ ಬಡಿಸುತ ಧ್ರುವವರನಂಘ್ರಿಗಳಿಗರ್ಪಿಸಿ ಭುವನ ಪಾವನ ಮಾಡಲೋಸುಗ ಅವನಿ ತಳದಿ ವಿಹರಿಸುತಿಹ ಗುರು 2 ಅಹೋ ರಾತ್ರಿ ಕ್ಷಣ ಬಿಡದೆ ಸನ್ಮನ ಹೃ - ದ್ಗುಹಾಧೀಶನನು ಬಿಡದೆ ಅನುದಿನ ಸ್ಮರಿಸುತ ಸಹನದಿ ಶಮದಮಯತು ನಿಯಮಗಳನ್ನು ವಹಿಸಿ ಶ್ರೀದವಿಠಲನಂಘ್ರಿಯ ಮಹಿಮೆ ತೋರುತ ಪೂಜಿಸುತ ಬಲು ಮಹಿತಪೂರ್ಣಾನಂದತೀರ್ಥರ ವಿಹಿತ ಶಾಸ್ತ್ರಗಳರಿತು ಬೋಧಿಪ 3
--------------
ಶ್ರೀದವಿಠಲರು
ಶ್ರೀ ತುಳಜಾ ಮಹಾತ್ಮೆ ಅಧ್ಯಾಯ ಒಂದು ರಾಗ:ಸೌರಾಷ್ಟ್ರ ತಾಳ:ತಿವಿಡೆ ಸಿರಿಯ ಸಹಿತಾಗಿರುವ ವೆಂಕಟಗಿರಿಯ ರಮಣನ ಮರೆತು ಎಲ್ಲವನು|| ಚರಕೆರಗುವೆನು|| 1 ಧರೆಯೊಳಗವನ ಮೆಟ್ಟಿ ಹಾರುವ ಹಿರಿಯ ಕವಿಗಳಿಗೆಲ್ಲಾ ನಾನೇ ಕಿರಿಯನೆಂದೆನಿಸಿ ಅವರನು ಮರೆಯದಲೆ ನೆನೆವೆ|| ಕಿರಿಯನಾದರೇನು? ನಾ ಈ ಧರೆಯೊಳಗೆ ಎಲ್ಯಿದ್ದರೇನು? ಮರೆಯದಲೇ ಮಾಡುವರು ಗುರುಗಳು ಮಮತೆ ಎನ ಮೇಲೆ||2 ಕೇವಲಾನಂತಾದ್ರಿ ರಮಣನ ಭಾವ ತಿಳಿಸುವ ನಮ್ಮ ಗುರುಗಳು ಭಾರ ಭಾವದಲ್ಲಿ ಪೇಳುವೇನು ತುಳುಜಾದೇವಿಯ ಮಹಿಮೆಯನು|| 3 ಪದ್ಯ ಪೂರ್ವದಲಿ ಕೃತಯುಗ ಪೂರ್ವದಲ್ಲಿ| ದ್ವಿಜವಯ ನೀರ್ವಕದ್ರುಮನೆಂದು ಊರ್ವಿಯಲ್ಲಿ ಪ್ರಖ್ಯಾತ ಸರ್ವದಾ ಮಾಡುವನು ಸರ್ವರಿಗೆ ಸಮ್ಮತಪೂರ್ವಧರ್ಮವು ಭಕ್ತಿ ಪೂರ್ವಕವಾಗಿ|| ಸರ್ವ ಸ್ತ್ರೀಯ ರೊಳಗ ಪೂರ್ವ ಸುಂದರಿಯಾಗಿ ಇರ್ವಳಾತನ ಮಡದಿ ಊರ್ವಶಿಯ ಪೋಲುವಳು ಊರ್ವಿಯಲಿ ಪತಿಸೇವೆ ಸರ್ವದಾ ಮಾಡುತಲೆ ಇರ್ವಳಾತೆಯು ಮನಃ ಪೂರ್ವಕವಾಗಿ||1 ಆ ಕಾಂತನಿಂದಲ್ಲಿ ತಾಕೂಡಿ ತನ್ನ ಮನಕೆ ಬೇಕಾದ ಸೌಖ್ಯದನೇಕ ವರ್ಷಗಳಲ್ಲಿ ಸ್ವೀಕಾರ ಮಾಡಿದಳು ಶ್ರೀಕಾಂತನ ದಯದಿ ಆಕೆಯ ಹೆಸರುಂಟು ಅನಭೂತಿ ಯಂತೆಂದು|| ಆ ಕರ್ದಮಾಖ್ಯ ದ್ವಿಜತಾಕಾಲದಿಂದ ಭೂತೋಕವನು ಬಿಟ್ಟು ಪರಲೋಕಕೆ ಪೋಗುತಿರೆ ಆಕೆ ಪತಿವುತೆಯು ಎಂಬಾಕೆ ಸಹಗಮನವೆಂಬ ಸಹಗಮನೆಂಬೊ ಆಶಾರ್ಯ ಮಾಡುತಿರೆ| ಆ ಕಾಲದಲ್ಲಿ ಆಯಿತಾಕಾಶವಾಣಿ|| ಪದ ಬ್ಯಾಡ ಬ್ಯಾಡಮ್ಮ ಬ್ಯಾಡದು || ನೀ ಮಾಡೋಕಾರ್ಯ ಬ್ಯಾಡ|| ಬ್ಯಾಡು ಬ್ಯಾಡುಮ್ಮ ಕೇಳು ಮಾಡತಕ್ಕ ಕಾರ್ಯದೂರ ನೋಡಿ ಮಾಡುಬೇಕು ಇಂಥ ಮೂಢ ಬುದ್ಧಿ ಮಾಡುವದು||ಪ ಪತಿಯ ಸರಿಯು ಹಿತಕರಿಲ್ಲವು || ಪತಿವ್ರತೆಗೆ ತನ್ನ ಪತಿಯ ಹೊರತು ಗತಿಯು ಇಲ್ಲವು || ಸುಳ್ಳಲ್ಲವು|| ಪತಿಯು ಇಲ್ಲದಿದ್ದರೇನು ಸುತರು ಸುಗುಣರುಂಟು ನಿನಗೆ ಸುತರು ಇರಲು ಪತಿಯ ಕೂಡಿ ಗತಿಯಸಮ್ಮತವು ಅಲ್ಲ|| 1 ಪತಿಯ ಬಿಟ್ಟು ಸ್ಥಿತಿ ಅಧರ್ಮವೇ| ಆ ಸತಿಗೆ ತನ್ನ ಪತಿಯ ಕೂಡೆ ಗತಿಯು ಧರ್ಮವೇ|| ಸತ್ಕರ್ಮವೇ|| ಪತಿಯ ಮ್ಯಾಲೆ ಸತಿಯು ಊಂಟು ಸತಿಗೆ ಸಮ್ಮತವು ಸತ್ಯ ಪತಿಯಿಂದಲೇ ಪತಿಯಲೋಕ ಗತಿಯು ಪತಿವುಲೆಯೇ ನಿನಗೆ||2 ಮುಖ್ಯಮಾತು ನೀನು ಕೇಳಿದ್ದು|| ಗರ್ಭಿಣಿಯು ಮತ್ತು ಮಕ್ಕಳುಳ್ಳ ಸ್ತ್ರೀಯು ಮಾಳ್ಪುದು || ಧರ್ಮಲಿಲ್ಲದ್ದು|| ಮಕ್ಕಳುಳ್ಳವಳು ನೀನು ಮಕ್ಕಳನ್ನು ಪಾಲಿಸುವುದು ಮುಖ್ಯನಂತಾದ್ರಿ ರಮಣ ತಕ್ಕ ಮುಕ್ತಿಕೂಡುವ ನಿನಗೆ|| 3 ಪದ್ಯ ಆ ಕಾಲಕ್ಕಾಗಿರುವ ಆಕಾಶವಾಣಿಯನ್ನು ತಾ ಕೇಳಿ ಅನುಭೂತಿ|| ಕಾಲ ಮೇರು ಶೈಲದಲ್ಲಿ|| 1 ಚಾರು ಮಂದಾಕಿನಿಯ ತೀರದಲ್ಲಿ ಪರ್ಣದ ಕುಟೀರವನ್ನು ಹಾರಿಸುತಾ ಬಂದನಾ ನಾರಿ ಇದ್ದಲ್ಲಿ||2 ಆಗ ಆಕೆಯ ಕಂಡು ಹೋಗಿ ಬದಿಯಲಿ ನಿಂತು ಹೀಗೆಂದು ಮನಸಿನಲಿ ಯೋಗಿಯಂತಲಿ ನಿಶ್ಚಳಾಗಿಹಳು ದಾವಾಕಿ ದೈವಯೋಗದಲ್ಲಿ ನೋಡಿದರೆ ಯೋಗಿಗಳು ತಮ್ಮ ಉದ್ಯೋಗಿವನ್ನು ಬಿಡುವರು ಹೀಗೆಂದು ಅನುಭೂತಿಯಾಗಿ ಮೋಹಿಸಿ ನುಡಿದ ಭೋಗ ಬಯಸುತಲೇ|| 3 ಪದ ರಾಗ:ಶಂಕರಾಭರಣ ನೀಪೇಳೆ ದಾವದಾವದು ನಿನ್ನ ಜೀವಕ್ಕ ಬೇಕು ಹೇಳೆ|| ಪ ನಿತ್ಯ ಶೋಷಣ ಮಾಡುಬ್ಯಾಡೇ|| 1 ದೇವತೆಗಳು ಎಲ್ಲಾರು ಬಿಡದೆ ಎನ್ನ ಕೋಕರಾಗಿಹರು|| ಸಾವಿರ ಸ್ತ್ರೀಯರು ಸೇವಿಸುವರು ಎನ್ನ ಸೇವಿಸುವರು ನಿನ್ನನ್ನು 2 ಚಿಕ್ಕ ಪ್ರಾಯದಲ್ಲಿ ನೀನು ಇರುವಿ ನಿನ್ನ ತಕ್ಕ ಪುರುಷನು ನಾನು|| ಮುಖ್ಯನಂತಾದ್ರೀಶ ಸಿಕ್ಕ ನಿನಗೆ ನಿನ್ನ ತಕ್ಕಂತೆ ಆಯಿತ್ಹೇಳೆ|| 3 ಪದ್ಯ ಧ್ಯಾನದಲ್ಲಿರಲು ದುಷ್ಟ ದನುಜೇಶ್ವರನು ತಟ್ಟನೆ ಮಾಡಿ ದುಕೃಷ್ಟ ತಾಳ ಧ್ವನಿಯು ಕಟ್ಟು ಇಲ್ಲದೇ ಒಳ್ಳೆ ಗಟ್ಟಿ ವದರಿಸಿ ನೋಡಿ ಒಂದಿಷ್ಟು ನುಡಿಯದೆ ಇರಲು, ದಿಟ್ಟಾಗಿ ತನಗೆ ರೀತಿ|| ಸಿಟ್ಟಲೇ ನುಡಿದಾಳು ಆ ಪತಿವುತೆ|| 1 ದಾ ಪೇಳಲೋ ನೀ ಧಿಟ್ಟ ದಾರಿಲ್ಯಾತಕೆ ಬಂದ್ಯೊ ನೀ ಪಾಪಿಷ್ಠ|| ದೂರದಲ್ಲಿ ಇರೋ ನೀ ದುಷ್ಟ || ಧೈರ್ಯದಿ ನೀ ಎನ್ನ ಮುಟ್ಟಿದ್ಯೋ ಭ್ರಷ್ಟ|| 2 ಸುಖಭರಿತ || ಲಗುಬಗೆಯಲಿ ಮೋಹಿಸುತ || ಬಗೆ ಬಗೆಯಲ್ಲಿ ಮಾತನಾಡಿದನು ನಗುನಗುತ| 3 ಪದ, ರಾಗ:ಶಂಕರಾಭರಣ ಮರುಳು ಗೊಂಡೆನೇ || ತರುಳೆ ನೊಂದೆನೆ|| ಮರಳು ಗೊಂಡೆ ತರುಳೆ ನಿನ್ನ ಹೊರಳಿ ನೋಡುವ ಯ್ಹರಳಿನೋಟಕೆ|| ಪ ಮಾನ್ಯ ಮಾನಣಿ || ರನ್ನೆ ಶಿರೋಮಣಿ || ಚೆನ್ನವಾದ ಚಿನ್ನದಂಥ ನಿನ್ನ ದೇಹವನ್ನು ಕಂಡು|| 1 ಮಾತುಲಾಲಿಸೆ|| ಪ್ರೇತಿ ತೋರಿಸೆ ||ಪ್ರೀತಿ ಎಂಬೊದ್ಯಾತಕಿನ್ನ ಸೋತು ಕಾಮಾಪೂರದಲ್ಲಿ|| 2 ನಿಂತು ಮರೆತೆನಾ || ಅನಂತಾದ್ರೀಶನಾ || ಎಂಥಹವರಿಗೆ ಭ್ರಾಂತಿ ಬಿಡಿಸುವಂಥ ನಿನ್ನ ಕಾಂತಿ ನೋಡಿ|| 3 ಆರ್ಯಾ ಇಂಥಾ ಮಾತವು ಕೇಳಿ || ಚಿಂತಾಕ್ರಾಂತಳಾದಳಾಗ ಆಗ ಆ ಬಾಲಿ|| ಬಂದಿತು ಇಂಥಾ ಘೋರಾ || ಚಿಂತಿಸ ಬೇಕಿನ್ನು ಇವನ ಸಂಹಾರಾ|| 1 ಶಾಪಿಸ ಬಾರದು ಜ್ಞನಿ || ಶಾಪಿಸಿದವರ ಅಗುವುದು ತಪಹಾನಿ|| ಪರಿ ಮನಸಿಗೆ ತಂದು ವ್ಯಾಪಾರವು ಮಾಡಿದಳು ಮತ್ತೊಂದು| 2 ಎಂಬಾಕೆ ನಾಮವೇ ತುಳಜಾ|| 3 ಪದ ರಾಗ :ಸಾರಂಗ ತಾಳ :ತಿವಿಡಿ ಸ್ವರಷಡ್ಜ ಸಲಹಬೇಕೆಂದು ನಿಲ್ಲದೆ|| ಪ ಪಾಶಾಕೃಷ್ಟ ಧರಿಸುತಾ||1 ವರೆಂದು || ದಯಮಾಡಿ ವರಗÀಳ ನೀಡುವಳು ಹಿಡಿಯಂದು|| ಕಾರುಣ್ಯಸಿಂಧು|| ಗಾಢನೆ ಧ್ವನಿ ಮಾಡುತಲೇ ಹಾರ್ಯಾಡುತಲೇ ತ್ವರ ಮಾಡಿಸುತಲೇ ಓಡಿ ಬರುತಿಹ ಪ್ರೌಢಗಣಗಳ ಕೂಡಿ ಸಿಂಹಾರೂಢಳಾಗಿ||2 ಎಂತು ಪೊಗಳಲಿ ನಾನು|| ಅತ್ಯಂತ ಬಹಳಾದಂತ ಮಹಿಮೆಗಳನು ಎಂತೆಂಥವರು ಬೇಕಂತ ಹುಡುಕಿದರೇನು|| ಹಿಗಂತ ಆಕೆಯ ಅಂತೂ ತಿಳಿಯದು ಇನ್ನು|| ಗುಣವತಿ ತಾನು|| ಶಾಂತಿಯಿಂದ ಅನಂತಾದ್ರೇಶನ ಕಾಂತಯಳ ಪೋಲುವಂತ ದೇವಿಯು ಚಿಂತೆಯಲಿ ತನ ಚಿಂತಿಸಿರುವಳ ಚಿಂತೆ ಬಿಡಿಸ ಬೇಕಂತ ಧಾವಿಸಿ|| 3 ಆರ್ಯಾ ಸಾರ ಪರಮಾದರದಿಂದ ಕೂತು ಕೇಳಿದವರು || ಪರಿಪೂಜಿಸುತಾ ತುಳಜಾ ತಾನಾಗುವಳು ಪ್ರತ್ಯಕ್ಷ|| 1 ವರಕವಿತಾ ರಚನಕ್ಕೆ|| ತುಳಜಾದೇವಿಯ ದಿವ್ಯ ಚರಿತಕ್ಕೆ || ಚರಿಸದು ಎನ್ನ ಉಪಾಯ|| ಗುರು ಕೃಪೆಯಿಂದಾಯಿತೊಂದಧ್ಯಾಯ|| ಶ್ರೀಹರೇ ಪ್ರಸೀದ||
--------------
ಅನಂತಾದ್ರೀಶ - ಕಥನಕಾವ್ಯಗಳು
ಶ್ರೀ ತುಳಸಿ ಇಂದಿರೆ ವಂದೆ ಆನಂದೀ ತುಳಸೀದೇವಿ ನಂಬಿದೆ ಸುರಸುಂದರಿ ಪ ಎಂದೆಂದಿಗೂ ನಾ ನಿನ್ನಧೀನವೆ ಮಾತೆ ಸಿಂಧುಶಯನ ಪ್ರಿಯೆ ವರದೆ ಆನಂದದೆ ಅ.ಪ ಆದಿಕಾರಣ ವಿಷ್ಣು ಪ್ರಿಯಳೆ ಶ್ಯಾಮಲೆ ಕೋಮಲೆ ವಿಧಿಶರ್ವವಂದಿತೆ ವಿದ್ಯಾಧರಾದಿ ಅರ್ಚಿತೆ ಆದರದಲಿ ನಿನ್ನ ಪಾದಪಂಕಜಗಳ ಪ್ರತಿದಿನ ಸ್ಮರಿಪೆನೆ ವೃಂದಾವನಸ್ಥಿತೆ ತುಳಸಿ ಸುರೇಶ್ವರಿ1 ಈರಾರು ಅಕ್ಷರ ಮಂತ್ರ ಸುಪ್ರತಿಪಾದ್ಯೆ ನಾರದನುತೆ ನಾರಾಯಣ ಮನಃಪ್ರಿಯಳೆ ಪಾತಕ ಬಹು ಪಾಪಹಾರಿಣಿ ನಿನ್ನ ಎನ್ನ ವರದೆ ತುಳಸೀದೇವಿ 2 ನಿನ್ನ ಸ್ಮರಣೆ ಮಾಡೆ ಸರ್ವತ್ರ ವಿಜಯವಹುದೆ ನಿನ್ನ ಸಂದರ್ಶನದಿ ಸರ್ವಪಾಪವು ಪೋಪುವೆ ಪಾತಕ ತಾಪಾದಿ 1 ಗಳಳಿಯೆ ಘನ್ನ ಪ್ರಸನ್ನ ಶ್ರೀನಿವಾಸನ ನಿಜಸತಿ ವಿರಜೆ ತುಳಸೀಮಾತೆ 3
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ಧ್ರುವಚರಿತ್ರೆ ಪದ ಭಜ ಭಜ ಭಜ ಶ್ರೀ ಗಣರಾಜ ತ್ಯಜ ತ್ಯಜ ತ್ಯಜ ತಾಮಸ ಬೀಜ ಪ ಶಂಕರ ಪುತ್ರ ಶುಭಂಕರ ವರನಿಜ ಪಾದ ಸರೋಜ 1 ಲಂಬೋದರ ಪೀತಾಂಬರಧರ ಕರು ಣಾಂಬುಧಿ ವರ ದೇವ ಮಹೀಜ 2 ಶ್ರೀಶಾನಂತಾಜದ್ರೀಶ ವರಾನ್ವಿತ ದಾಸ ಸುವೃತ ಮಾನಸ ಪೂಜ 3 ಆರ್ಯಾ ರಾಜ ಸುಪೂಜಿತ ರಾಜ ರಾಜ ನೃಪ ರಾಜ್ಯ ಮಾಡುತಾ ಇರುತಿಹನು ದುರ್ಜನ ಪುರುಷರ ತರ್ಜನ ಮಾಡುವ ಸಜ್ಜನ ಆತ್ಮಾರಿಂಗ್ಯತಿ ಪ್ರಿಯನು 1 ದೀನ ಬಂಧು ಬಹುದಾನವಂತ ಉ ಪಾದ ಎಂಬುವ ಹೆಸರು ಮಾನಿತರೊಳಗತಿ ಮಾನಯುಕ್ತರು ಮಾನಿನಿಯರು ಇಬ್ಬರು ಇಹರು2 ಸುರಚಿ ಗಣ್ಯಳು ಪಟ್ಟದರಸಿ ಸುನೀತಿಯು ವಿರಸದಿ ಆರಸಗ ನಿಷ್ಟ್ರಿಯಳು 3 ಮುತ್ತಿನಂಥ ವರಪುತ್ರರಿಬ್ಬರು ಉತ್ತಮನೆಂಬ ಸುರುಚಿಪುತ್ರಾ ಉತ್ತಮ ಗಣ್ಯ ಗುಣೋತ್ತಮ ಧ್ರುವನು ಮತ್ತ ಸುನೀತಿಗೆ ತಾ ಪುತ್ರಾ 4 ಮಂದಿರದೊಳಗೆ ವಸುಂಧರೇಶನು ಛಂದದಿ ತಾ ಸುಖದಿಂದಿರಲು ಒಂದಿನದಲಿ ಬಹುಸುಂದರಸಭಿಯಲ್ಯಾ ನಂದದಿ ಬಂದು ತಾ ಕುಳಿತಿರಲು 5 ಶ್ಲೋಕ ಕೂಡಿಸಿತಾ ತೊಡಿಯಲ್ಲಿ| ಮುದ್ದಿಸಿದಾ ಸಭಿಯಲ್ಲಿ | 1 ಛಂದ ನೋಡಿ ಧ್ರುವನು ತಾ ಹರುಷದಿಂದಲಿ ಓಡಿ ಬಂದನು ರಾಜ ಸಭಿಯಲಿ ಕೂಡಬೇಕು ತಾ ಎಂದು ತೊಡಿಯಲಿ ಇಂದು ಮನದಲಿ 1 ನಾಥ ಭೂಮಿಪಾ ನೋಡಿ ಬಾಲನ ಪ್ರೀತಿಯಿಂದಲ್ಯೊಂದು ಮಾತನಾಡನು ತಾತ ಸುತಗೆ ಬಾಯೆಂದು ಕರೆಯನು ಆತ ಧ್ರುವನು ತಾ ಅನಾಥನಾದನು 2 ಆಗ ಸುರುಚಿ ಬಾಲನ್ನ ನೋಡುತಾ ಬ್ಯಾಗನುದರದಲ್ಲಿ ಬಹಳ ಗರ್ವಿತಾ ಯೋಗ್ಯವಲ್ಲ ಕೂಡಲಿಕ್ಕೆ ತೊಡಿಯಲಿ ಹೀಂಗ ದುಷ್ಟ ಮಾತುಗಳು ಬಾಯಲ್ಲಿ 3 ಪದ ಬಾರದೊ ಧ್ರುವಾ ನಿನಗೆ ಸಿಂಹಾಸನ ಪದವಿ ಬಾರದೊ ಧ್ರುವಾ ನಿನಗೆ ಸಾರಸಿಂಹಾಸನವು ಪ ಏರ ಬೇಕೆಂಬುವಂಥಾ ಘೋರತನವ ಬಿಡು ಅ.ಪ ಅನ್ಯಳ ಮಗನೊ ನೀ ಯನ್ನಲಿ ಜನಿಸಿಲ್ಲಾ ಚೆನ್ನಿಗ ಉತ್ತುಮಾಗಿನ್ನ ನೀ ಸರಿಯೇನೋ 1 ಇಂದಿನಾ ಮನೋರಥಾ ಎಂದಿಗಾವುದಲ್ಲಾ ಕಂದ ಸುನೀತಿಯಾ ಮುಂದ ಕೂಡಾಲಿ ಪೋಗೊ 2 ಇಚ್ಛಿ ಮಾಡಾದಿರೋ ಹೆ ಚಿನ್ನಾ ಶ್ರೀ ವತ್ಸನಾರಾಧನಿ ಮಾಡಿಲ್ಲಾ 3 ವೀರ ಸಿಂಹಾಸನ ಏರಬೇಕಾದರೆ ವಾರಿಜನಾಭ ನಾರಾಧನಿ ಮಾಡೊನೀ 4 ` ಚೆನ್ನಿಗಾನಂತಾದ್ರೀಶ್ನ ' ನೀ ಪೂಜಿಸಿ ಯೆನ್ನಲ್ಲಿ ಪುಟ್ಟಾದೆ ಉನ್ನತ ಪದವಿಯು 5 ಶ್ಲೋಕ ಅತ್ಯಂತ ಘೋರತರ ವಾಕ್ಯಗಳನ್ನು ತಾಳಿ ಸಂತಪ್ತನಾದ ಮನದಲ್ಲಿ ಸುನೀತಿ ಬಾಲಾ ಪುತ್ರನ್ನ ನೋಡಿ ಪಿತ ಸುಮ್ಮನೆ ಕೂತನಾಗಾ ತಾತನ್ನು ಬಿಟ್ಟು ನಡದಾ ಧ್ರುವ ತಾನು ಬ್ಯಾಗಾ 1 ಶ್ವಾಸೋಚ್ಛ್ವಾಸವು ಬಾಯಿಲಿಂದ ಬಿಡುತಾ ಕಣ್ಣಿಂದ ನೀರ ಹೋಗುತಾ ಸೂಸು ಬಾಹುವ ದು:ಖದಿಂದ ಮರಗಿತಾ ರೋದನಾ ಮಾಡುತಾ ಬಂದಾ ತೀವ್ರದಿ ತಾಯಿ ಸನ್ನಿಧಿಯಲ್ಲಿ ಆಳುತಾಗ ತುಟಿ ಬಿರಿಗಿಸಿ ಬಂದಾ ಕಂದನ ಮುಂದ ಕುಳ್ಳಿರಿಸಿ ಸತಿ ಕೇಳ್ಯಾಳು ವಿಚಾರಿಸಿ 2 ಪದ ಕಂದ ನೀ ಬ್ಯಾಗ ಹೇಳೊ ಎಲ್ಲೊ ನಿನಗೆ ಇಂದು ಬಡಿದವರ್ಯಾರು ನಿನಗೆ ಪ ಎಂದು ಪೋಗದಲೆ ತನಯ ನೀನು ಇಂದು ಪೋಗಿದ್ದಿಯೊ ದಾರ ಮನಿಗೆ 1 ಘೋರತರ ದು:ಖವೇನೊ ಈ ಪರಿ ನೀರ ತುಳಕುವ ಕಣ್ಣುಗಳಿಗೆ 2 ಏನಂತ ಪೇಳಲಿ ಸ್ವಲ್ಪ ಇಲ್ಲಾ `ಅನಂತಾದ್ರೀಶನ ' ದಯವು ನಮಗೆ 3 ಪದ ತನಯನ ಕೇಳಲು ಹೀಂಗೆ ಪೌರಜನರು ನುಡದರಲ್ಯಾಗೆ ಅರುಚಿನುಡಿಗಳ ಲ್ಹ್ಯಾಂಗೆ ಆ ಸುರುಚಿ ನುಡಿದಳ್ಹಾಂಗೆ 1 ಕೇಳಿದಳೀ ಪರಿವಾಣಿ ಮನ ಪನ್ನಗ ವೇಣಿ ಸಾಗರ ಬಿದ್ದಳು ತರುಣಿ ತಾ ಕೂಗುತ ಕೋಕಿಲವಾಣಿ 2 ಒಡಲೊಳು ಕಿಚ್ಚುರದಂತೆ ಬಹು ಮಿಡುಕೊಳು ತಾಮನದಂತೆ ನಡುಗುತ ಹಿಮ ಹೊಡದಂತೆ ತಾ ನುಡು(ಡಿ)ವಳು ಕರುಣಾದಂತೆ 3 ಏನು ಮಾಡಲಿ ಇನ್ನಯ್ಯೋ ಬಹು ದೀನಳಾದೆ ನಯ್ಯಯ್ಯೊ ಮಾನದ ಪತಿಯೆನ ಕಾಯೊ ಗುರು ಮಾನಸ ದು:ಖವ ತಿಳಿಯೋ4 ಶರಣು ಕೇಳು ದೇವೇಶಾಯನ್ನೊಳು ಕರುಣಾಬಾರದೆ ಲೇಶಾ ಚರಣಕೆರಗುವೆನು ಶ್ರೀಶಾ ಮರಣ ಕುಡಾ`ನಂತದ್ರೀಶ' 5 ಛಂದ ನಾರಿ ಸುರುಚಿಯಾ ಮಾತು ಮರಿಯದೆ ಘೊರ ದು:ಖದಾಪಾರ ತಿಳಿಯದೆ ನೀರ ಧಾರಿಯ ಕಣ್ಣಲ್ಯುದುರುತಾ ಧೈರ್ಯ ಭಾವ ತಾ ಬಿಟ್ಟಳು ಸರುತಾ 1 ಸುಂದರಾಂಗಿಯು ನೊಂದು ಮನದೊಳು ಕಂದಧ್ರುವನ ತಾ ಮುಂದ ನುಡದಳು ಬಂದ ತಾಪವ ಸಹಿಸಬೇಕಯ್ಯಾ ಇಂದು ಮನಸಿನಾ ಕೋಪ ತಾಳಯ್ಯಾ 2 ಕೇಳು ಬಾಲನೆ ರಾಜಯನ್ನನು ಭಾಳ ತುಚ್ಛವ ಮಾಡುತಿಹನು ಭಾಳ ಲಜ್ಜದಿ ಸುನೀತಿ ಭಾರ್ಯಳೆಂದು ಹೇಳಲಿಕ್ಕೆ ನಾಚುತಿಹನು 3 ಯನಗ ಪುತ್ರ ನೀನಾದ ಕಾರಣಾ ನಿನಗ ಮಾಡುವಾ ಅರಸು ನಿರ್ಘೃಣಾ ಕನಸಿಲಿಲ್ಲವೊ ಯನಗ ಹಿತಕರು ತನಯ ವೈಯಲಿಲ್ಲವೊ ಯನ್ನದೇವರು 4 ಮಿಥ್ಯವಲ್ಲವೊ ಸುರುಚಿ ನುಡಿಗಳು ಸತ್ಯ ವಾದ ಮಾತುಗಳು ನುಡಿದಳು ಪಥ್ಯವೆ ಸರಿ ಪರಮ ನಿನಗಿವೆ ಪೊತ್ತುಗಳಿಯದೆ ಪೋಗರಣ್ಯಕೆ 5 ಗುರ್ವನುಗ್ರಹ ಶಿರಸಿ ಗ್ರಹಿಸೈಯ್ಯಾ ಶರ್ವಸಖಗ ನೀ ಪೂಜಿಮಾಡಯ್ಯಾ ಪೂರ್ವದಲ್ಲಿ ನಿನ್ನ ಮುತ್ಯ ಮಾಡಿದಾ ಸಾರ್ವಭೌಮ ಆಧಿಪತ್ಯ ಏರಿದಾ 6 ಇಂದಿರೇಶನಾ ಬ್ರಹ್ಮ ಪೂಜಿಸಿ ಮುಂದ ಏರಿದಾ ಸತ್ಯಲೋಕ ನೇಮಿಸಿ ಕಂದ ಭಜಿಸು ನೀ ಛಂದದಿ ಧ್ರುವಾ ಮುಂದ ಕೇಶವಾನಂದ ಸುರಿಸುವಾ 7 ಶ್ಲೋಕ ಜನನಿಯಾಡಿದ ವಾಕ್ಯವು ಕೇಳಿ ಆಗಾ ಮನಿ ಆಸಿಯು ಬಿಟ್ಟು ನಡದಾನು ಬ್ಯಾಗಾ ಘನಾರಣ್ಯಕೆ ಪೋಗಲು ಶೋಕಸಿಂಧು ಸಿಂಧು 1 ಆರ್ಯಾ ಇಂದಿರೇಶನಾ ಸುಂದರ ಗುಣಗಳ ಬಂದಾಕ್ಷಣಹೀಗೇಂದು ನುಡದನು ಕಂದಗ ಮುನಿ ಆ ಸಮಯದಲಿ 1 ನಿಲ್ಲೆಲೊ ಬಾಲಕ ಬಲ್ಲಿದರಣ್ಯದಿ ನಿಲ್ಲದೆ ಪೋಗುತಿ ಎಲ್ಲಿಗೆ ನೀ ಯೆಲ್ಲಿಂದ ಬಂದಿ ನೀ ಫುಲ್ಲಲೋಚನ ಯೆಲ್ಲ ಬಳಗ ಬಿಟ್ಟಿಲ್ಲಿಗೆ ನೀ 2 ಕಂದ ಬಿಟ್ಟ ನೀ ಬಂದ ಕಾರಣಾ ಇಂದು ತಾಯಿ ತಂದೆಗಳೆಲ್ಲ ಸುಂದರಾನನಾ ಛಂದದಿ ನುಡಿನೀ ಮಂದಿರ ವೃತ್ತಾಂತಗಳೆಲ್ಲಾ 3 ಶ್ರೇಷ್ಠನಾರದ ನೀ ಅಷ್ಟುಲೋಕವಾ ದೃಷ್ಟಿಲಿ ನೋಡುವಿ ಇಷ್ಟರಿಯಾ ಕೆಟ್ಟ ಮಾತು ಆದುಷ್ಟ ಮಳಾಯಿಯು ಎಷ್ಟು ನುಡದಳೊ ಯನಗÀಯ್ಯಾ4 ಏನು ಪೇಳಲಿ ನಾನು ಮುನೀಶ್ವರ ಮಾನ ಗೇಡಿ ಮಾಡಿದಳೆನ್ನಾ ಮಾನ ಹೋಗಿ ಅಪಮಾನಿತನಾಗಿ ಕಾನನ ಶೇರಿದೆ ನಾ ಮುನ್ನ 5 ಮಾನಪಮಾನಗಳೆನಾದರೂ ಸರಿ ಧ್ಯಾನಕ ತರಬಾರದು ನೀನು ನಾನಾ ಲೀಲಿಯಾ ಮಾಡುವ ಬಾಲಕಗೇನು ಚಿಂತೆ ಕೇಳರೆ(ಳುವೆ?) ನಾನು 6 ಶಾಂತನಾಗು ಗುಣವಂತ ಬಾಲ ನಿ ನ್ನಂತರಂಗ ಚಿಂತಿಯು ಬಲ್ಲೆ ಚಿಂತಿಸಿ ಬಂದ್ಯೋ ನೀ ಸತತ ಸುಖ ಭಗವಂತನನೆ ಬ(ರ?) ಬೇಕಂತಿಲ್ಲೆ 7 ಎಂಥವರಿಗೆ ಭಗವಂತ ದೊರಕ ನಿ ನ್ನಂಥ ಬಾಲನಾ ಗತಿಯೇನು ಕಾಂತನಯನ ಶ್ರೀಕಾಂತ ದೊರಕ ಛೀ ಭ್ರಾಂತಿ ಬಿಟ್ಟು ತ್ವರ ನಡಿ ನೀನು 8 ಪದ ನಡಿನಡಿ ನಡಿ ಧ್ರುವಾನೆ ತಿರುಗಿ ಮನಿಗೆ ನಡಿ ನಡಿ ನಡಿ ದೊಡ್ಡ ಅಡವಿಯು ಸೇರಾದೆ ಹುಡುಗ ಬುದ್ಧಿಯನು ಬಿಡು ತಡಮಾಡದೆ ಪ ಅಂಬಕಗಳಿಗೆ ತಾನು ತೋರಾನು ಪೀ ತಾಂಬರಧರ ದೇವಾನು ಅಂಬುಜನಾಭನ ನಂಬಿ ಭಜಿಸುವಂಥ ಹಂಬಲ ಬಿಟ್ಟು ವಿಳಂಬನ ಮಾಡದೆ 1 ಕಾಲಾವಲ್ಲವೋ ಬ್ಯಾಡಯ್ಯ ವಿಗ(ಹಿ?)ತವಾದ ಕಾಲಕೆ ತಪ ಮಾಡಯ್ಯ ಕಾಲಕಾಲಕೆ ಸ್ತನ ಪಾಲನುಂಬುವ ಸಣ್ಣ ಬಾಲ ಈ ವಚನ ಬಿಟ್ಟು ಕಾಲಗಳಿಯದೆ 2 ದೇಶದೇಶವ ತಿರುಗಿ ಬಹಳ ಕಾಸೋಸಿ ಇಂದಲೆ ಮರುಗಿ ಕ್ಲೇಶಾದಿ `ಅನಂತಾದ್ರೀಶ' ದೊರಕ ಘಾಸಿ ನೀ ಆಗದೆ 3 ಆರ್ಯಾ ಮುನಿಯ ವಚನ ನೃಪತನಯ ಕೇಳಿ ಬಹುವಿನಯದಿಂದಲಿ ಹೀಗೆಂದಾ ಘನದು:ಖದಿ ಯನ್ನ ಮನಿಗೆ ಪೋಗಲಿಕ್ಕೆ ಮನಸುವಲ್ಲದು ವಲ್ಲೆಂದಾ 1 ಪದ ಮನಿಗೊಲ್ಲೆ ವಲ್ಲೆ ಮುನಿರಾಯಾಪ ಬಹುತಲ್ಲಣಗೊಳು ತಿಹ(ಹೆ?)ನೈಯ್ಯಾ ಅ.ಪ ಶೋಣೀತ ವಸ್ತ್ರನೆ ಪಾಣಿವಿನಾದಿತ ವೀಣಾಧರ ಕೇಳಯ್ಯ 1 ದುಷ್ಟಮಳಾಯಿಯ ಕೆಟ್ಟಮಾತು ಒಂದಿಷ್ಟು ಸಹಿಸಲಾರೈಯ್ಯ 2 ದೀನದಯಾಳುವೆ ಮಾನಗಳಿದು ಮು ನ್ನೇನು ಉಳಸಲಿಲ್ಲೈಯ್ಯ 3
--------------
ಅನಂತಾದ್ರೀಶ - ಕಥನಕಾವ್ಯಗಳು
ಶ್ರೀ ಪ್ರಾಣೇಶ ದಾಸರಾಯರ ಸ್ತೋತ್ರ ಸಾನುರಾಗದಲಿ ಸ್ಮರಿಸುವರ ಭಕುತಿಯನ್ನು ಕೊಡುತಿಹರು ಪ ವರಕಾಶ್ಯೊಪಸದ್ಗೋತ್ರದಿ ಲಿಂಗಸು - ಗುರು ಕರಣಿಕರಲಿ ಸಂಜನಿಸಿ ತಿರುಕಾರ್ಯರ ಪರತನುಭವಯೋಗೀಂ - ದ್ರರು ಯಂಬ ಸುನಾಮದಿ ಕರಿಸಿ 1 ಕೆಲವುಕಾಲ ಲೌಕಿಕವನುಸರಿಸುತ ಲಲನೆ ತರಳರಿಂದೊಡಗೂಡಿ ಬಲು ವಿನಯದಿ ಸಾಧುಗಳರ್ಚಿಸಿ ನಿ - ರ್ಮಲ ವೈರಾಗ್ಯ ಮನದಿ ಕೂಡಿ2 ಮೂಜಗದೊಳು ಪ್ರಖ್ಯಾತರೆನಿಸಿದ ಶ್ರೀ ಜಗನ್ನಾಥಾರ್ಯರ ಪಾದಾಂ - ಭೋಜ ಭಜಿಸಿ ಪ್ರಾಣೇಶಾಂಕಿತವನು ತಾಜವದಿಂದವರಲಿಪಡೆದ 3 ಶ್ರೀಶಪಾದಯುಗ್ಮಗಳಲಿ ಸದ್ರತಿ ದಾಸಜನಗಳಲಿ ಸದ್ಭಕುತಿ ಹೇಸಿಭವದ ಸುಖದಾಸೆ ಜರಿದು ಸಂ - ತೋಷದಿ ಧರಿಸಿಹ ಸುವಿರಕುತಿ 4 ನೇಮದಿ ಯಮನಿಯಮವ ವಹಿಸಿ ತಾ ಮುದದಲಿ ನಲಿಯುತ ಕೀರ್ತಿಸುತಿಹ ಶ್ರೀ ಮನೋಹರನ ಸುಗುಣರಾಶಿ 5 ಪರಿಪರಿ ಹರಿಕಥೆವರ ಪ್ರಮೇಯಗಳ ಸರ್ವಜ್ಞ್ಞರ ಉಕ್ತ್ಯನುಸರಿಸಿ ವಿರಚಿಸಿ ಹರಿಮಂದಿರದ ಸುಪಥ ಪಾ - ಮರರಿಗೆ ಸೌಕರ್ಯವಗೈಸಿ 6 ವರದೆಂದ್ರರ ಪದಸರಸಿಜ ಸೇವಿಸಿ ಹರುಷದಲವರ ಕರುಣ ಪಡೆದ ವರವೃಂದಾವನ ಸಂಸ್ಥಾಪಿಸಿ ಪರಿಪರಿಯಿಂದಲಿಯಾರಾಧಿಸಿದ7 ಜ್ಞಾನದಿಲಯವನು ಚಿಂತಿಸುತಾ ಚಿತ್ರ ಬಾನುಸಪ್ತಮಿ ಯಾಶ್ವಿಜಶುದ್ಧ ಜಾನಕಿ ಪತಿಪದ ಧೇನಿಸಿಹರಿಪುರ ಕೀನರ ದೇಹ ಜರಿದು ಸಾರ್ದ 8 ಪರಮಭಾಗವತರೆನಿಸುವರಿವರನ ವರ ತನದ ಸುಮಾಲಿಕೆ ಸತತ ಸ್ಮರಿಸುವ ಭಕುತರ ಪುರುಷಾರ್ಥಗಳನು ವರದೇಶವಿಠಲನ ಕೊಡುವ ತ್ವರಿತ 9
--------------
ವರದೇಶವಿಠಲ
ಶ್ರೀ ಬ್ರಹ್ಮದೇವರ ಸ್ತವನ ಬ್ರಹ್ಮಾ ಮಾಂ ಪಾಲಯಸುಬ್ರಹ್ಮಣ್ಯ ಪಿತನ ಪಿತನೇ ಪ ವಾಕು ಲಾಲಿಸೊ ವರಪ್ರದಾ ಶ್ರೀಕರ ಹರಿಯವ ಲೋಕನ ಮಾರ್ಗವನೀ ಕೊಡುತೆನಗೆ ವಿವೇಕವ ತೋರೋ 1 ಸುಳಿ ನಾಭೀ ಪದುಮ ಭೂ | ಕಲಿಮಲಘ್ನ ಸ್ವಯಂಭೂಅಳಿಕುಲ ದೇಣಿ ವಾಣಿ ಸಂಸೇವ್ಯನೆ |ಅಳಿದ ಅವಿದ್ಯಗಳ ಸಲಹೊ ಸುರಜೇಷ್ಟಾ 2 ಭವ ತವ ಶರ್ವಾವ್ಯಕುತಿಗೈದು ಮುಖ ನಾಲ್ಕರಿಂದಸುಖಿಪೆ ಚತುರ ಮುಖ ಪರಮೇಷ್ಠೀ 3 ದಶದಶಾನಂದಾ ಶೃತ ಧೃತೀ | ಯಶ ಪೊಗಳಲಳವೆ ಸಕಲ ಮತೀವಿಷಧರನುತ ಮಮ ಧೀ ಪ್ರಸರಣವಿಷಯ ವಿರಲಿ ತವ ಮನಸಿನೊಳಗೇ 4 ವಿಶ್ವ ಸೃಜನೇ | ಬುದ್ಧ್ಯಾಭಿಮಾನಿ ವಂದಿತನೆಮಧು ವೈರಿಯ ಪದ ಸೇವಕ ವಿಧಿಮಧುಕರ ತವ ಪದ ಪಲ್ಲವ ತೋರೋ 5 ಸಂಚಿತ ದುರಿತ ಗಮನ ಹರಿಮಂಚ ಯೋಗ್ಯನುತ |ಮುಂಚೆ ಮನವ ಹರಿಚಿಂತನೆಲಿರಸೋ 6 ಋಜುನಿಕರಕ್ಯಧಿಕನೇ | ನಿಜ ವೈಭವದಿ ಮೆರೆವನೇಅಜ ಗುರು ಗೋವಿಂದ ವಿಠಲನ ಪದಬಿಸಜ ಕಾಂಬ ಋಜು ಮಾರ್ಗದಲ್ಲಿಡು 7
--------------
ಗುರುಗೋವಿಂದವಿಠಲರು
ಶ್ರೀ ಮುದ್ದುಮೋಹನದಾಸರು ಮುದದಿ ಪಾಲಿಸೊ | ಮುದ್ದು ಮೋಹನರಾಯಾ | ಮದ್ಗುರುವರ ಪ್ರೀಯಾ ಪ ಮಧ್ವೇಶನ ಪದ ಪದುಮ ಪೂಜಿಪ ಮಧುಪಾ ಪರಿಹರಿಸೆಲೊ ತಾಪಾ ಅ.ಪ. ಜನುಮ ಪೊತ್ತೆ ನೀ ದೊಡ್ಡ ಬಳ್ಳಾಪುರದೀ | ಅನುನಯದಲಿ ಓದೀ |ಗುಣವಂತೆಯು ಕನ್ಯೆಯ ತಾ ಸ್ವೀಕರಿಸೀ | ಕನ್ಯಾಸೆರೆ ಬಿಡಿಸೀ |ವನಜನಾಭನನು ಕಾಣಲು ಮನಮಾಡೀ | ಶ್ರೀ ವರರನು ಬೇಡೀ |ಗಾನ ಲೋಲ ಮುದ್ದು ಮೋಹನ ವಿಠ್ಠಲನಾ ಘನನಾಮ ಪೊತ್ತೆ ನಿನ್ನಾ 1 ಅಂಗಜಗಳು ಕದಲರ್ಧಾಂಗಿಯನಾಳೀ | ಯಾತ್ರೆಗೆ ಮನತಾಳೀ |ಗಂಗೆಯಾತ್ರೆ ಮೂರೊಂದು ಬಾರಿ ಮಾಡೀ | ಉಡುಪಿಗೆ ಬಲುಬಾರೀ | ತುಂಗ ಮಹಿಮ ನಮ್ಮ ವೆಂಕಟ ನಿಲಯನ್ನಾ | ತುಂಗೆ ತೀರಗನನ್ನಾ |ಭಂಗವಿಲ್ಲದಾನೇಕ ಬಾರಿ ನೋಡೀ | ಮಂಗಳಾಂಗನ ಪಾಡೀ 2 ಸಿರಿ ವಿಜಯ ವಿಟ್ಠಲನ ನಿಜಪುರದಲ್ಲೀ | ಸಂಸ್ಥಾಪಿಸುತಲ್ಲೀ |ಪರಮ ಶಿಷ್ಯರಿಗುಪದೇಶಗಳನ್ನಾ | ವಿರಚಿಸಿದಿಯೊ ಘನ್ನಾ |ಪರಿಸರ ಮತ ಸರ್ವೋತ್ತಮವೆಂದೂ | ಸಾರಿದೆ ದಯಾಸಿಂಧೂ 3 ಸಿರಿ ತಂದೆ ಮುದ್ದು ಮೋಹನರಾ | ಉದ್ಧರಿಸಿದ ಧೀರಾ |ಮಧ್ವ ಮತಾಗಮ ಸದ್ವನದಿ ವಿಹಾರ | ಬುಧಜನರಘ ಹರಾ |ವಿದ್ವದಾರ್ಯ ಮುದ್ದು ಮೋಹನ ರಾಯ | ಮುದ ಬೇಡುವೆ ಜೀಯ 4 ಕೃತನಿತ್ಯಾಹ್ನಿಕನಾಗಿ ತೆವಳಿ ಬಂದೂ | ಚಕ್ರದಿ ಕುಳಿತಂದೂ |ವತ್ಸರ ವಿಳಂಬಿ ವದ್ಯ ಕಾರ್ತೀಕದೀ | ಚತುರ್ದಶಿ ನಡುದಿನದಿ|ಅತುಳ ಮಹಿಮ ಗುರುಗೋವಿಂದ ವಿಠಲನ್ನ | ಹೃದಯಾಬ್ಜದಿ ಪವನಾ | ಆತುಮಾಂತರದಿ ಕಾಣುತಲವನಾ | ಕಿತ್ತೊಗೆದೆಯೊ ತನುವಾ 5
--------------
ಗುರುಗೋವಿಂದವಿಠಲರು
ಶ್ರೀ ರಘುಕಾಂತ ತೀರ್ಥರ ಸ್ತೋತ್ರ ಪದಕಂಜಸಾರಿಭಜಿಪ ಭಕ್ತರ ದೂರವೋಡಿಸುವ ಶಕ್ತ ವಿರಕ್ತ ಪ ದಿನಕರ ಕುಲಜಾತ ವನಜಾರಾಧ್ಯಸು - ಮನಸವ್ರಾತ ಸನ್ನುತ ಇನಕೋಟಿಪ್ರಭೆಗಾತ್ರ ಮನಸಿಜ ಪಿತಸ - ನ್ಮುನಿಗಣನುತ ರಾಮಚಂದ್ರ ಪಾದಭೃಂಗ 1 ಯತಿಕುಲ ರತುನ ಭಕುತಸುರತರುವೆ ಸ - ದ್ಗತಿ ದಾತಾ ಜಿತಮದನ ಪತಿತಪಾವನ ಮುನಿ ಯತಿ ರಘುದಾಂತತೀ ಪಾದ ಪಂಕೇಜ 2 ಕಾಮಿತಫಲದ ನಿಸ್ಸೀಮ ಮಹಿಮ ಭಕ್ತ ಪ್ರೇಮ ಪಾವನ ಚರಿತ ಸಾಮಜವರದ ಶ್ರೀ ವರದೇಶವಿಠಲನ ಪ್ರೇಮ ಪಾತ್ರ ಮಹಾ ಮಹಿಮ ನಿಷ್ಕಾಮ3
--------------
ವರದೇಶವಿಠಲ
ಶ್ರೀ ರಘುವರತೇ ನಮೋ ನಮೋ ಪ ಆಶ್ರಿತ ಪರಿಪಾಲತೇ ನಮೋ ನಮೋ ಅ.ಪ ಸರಸಿಜಭವಪಿತ ಸರಸಿಜಲೋಚನ ಪರಮಪುರಷ ಖಗಪತಿ ಗಮನ ಸುರಕಿನ್ನರ ಭೂಸುರನರವರನುತ ಸೂರಿಜನಪ್ರಿಯತೇ ನಮೋ ನಮೋ 1 ಮದನಕೋಟಿ ಲಾವಣ್ಯ ಶರಣ್ಯ ನಾ- ರದ ವೀಣಾಗಾನ ವಿಲೋಲ ಮುದತೀರ್ಥವರದ ಮುನಿಜನಪಾಲಕ ಸದಮಲಾತ್ಮಕತೇ ನಮೋ ನಮೋ 2 ರಾಮಭೂವರ ವಿರಾದಾಂತಕಬಲ- ರಾಮಾನುಜ ರಘುರಾಮವಿಭೋ ಸೋಮಸೂರ್ಯನಯನ ಶುಭ- ತಮ ಶ್ರೀ ಗುರುರಾಮವಿಠ್ಠಲತೇ ನಮೋ 3
--------------
ಗುರುರಾಮವಿಠಲ
ಶ್ರೀ ರಘೂತ್ತಮತೀರ್ಥರು ನೋಡಿದೆ ಗುರುಗಳ ನೋಡಿದೆ ಪ ನೋಡಿದೆನು ಗುರುಗಳ ಪಾದಾಬ್ಜವ ಪಾಡಿದೆನು ಸನ್ಮಹಿಮೆಗಳ ನಾ ಬೇಡಿದೆನು ಮನದಣಿಯೆ ವರಗಳ ಈಡು ಇಲ್ಲದೆ ಕೊಡುವ ಪ್ರಭುಗಳ ಅ.ಪ. ಪಂಚಕೃಷ್ಣಾರಣ್ಯಕ್ಷೇತ್ರ ಪಿನಾಕಿಯ ತೀರದಲ್ಲಿ ನಿಂತು ಮಿಂಚುತಿಹ ಕಾಷಾಯದಂಡ ಕಮಂಡಲವ ಧರಿಸುತ್ತ ಧರೆಯೊಳು ಪಂಚಬಾಣದ ಪಿತನ ಗುಣಗಳ ಅಂಚೆಯದಿ ಪೊಗಳುತ್ತ ಹರುಷದಿ ಸಂಚಿತಾಗಾಮಿಗಳ ಕಳೆದು ಪ್ರಪಂಚದಲಿ ಮೆರೆವಂಥ ಗುರುಗಳ 1 ಅಲವಬೋಧರ ಭಾಷ್ಯಟೀಕಾ ಭಾವವನು ಸುಜನರಿಗೆ ಬೋಧಿಸಿ ಕಲುಷಮತಗಿರಿ ಸಮುದ(ದಾ)ಯಂಗಳ ಕುಲಿಶದಂದಲಿ ಖಂಡಿಸುತಲಿ ಮೂಲರಾಮ ದಿಗ್ವಿಜಯರಾಮರ ಪಾದಕಮಲಕೆ ಭೃಂಗನೆನಿಸುತ ಶೀಲಭಕ್ತಿ ವಿರಕ್ತಿಮತಿಗಳ ಪಾಲಿಸುತ ಯತಿಮೌಳಿ ರತುನರ 2 ಕಾಮಧೇನು ಸುಕಲ್ಪತರು ಚಿಂತಾಮಣಿಯವೋಲ್ ಕಾಮಿತಾರ್ಥವ ಪ್ರೇಮದಲಿ ಬೀರುತ್ತ ಅಧ್ಯಾತ್ಮದಿ ತಾಪತ್ರಯ ಕಳೆಯುವ ಸ್ವಾಮಿ ಶ್ರೀಹರಿ ಶ್ರೀದವಿಠಲನ ದಾಸಾಗ್ರಣಿಯೆನಿಸಿ ಮರೆವರ ನೇಮದಿಂದಲಿ ಶ್ರೀ ರಘೂತ್ತಮ ಮೌನಿವರ್ಯರ ಕರುಣ ಬಯಸುತ 3
--------------
ಶ್ರೀದವಿಠಲರು