ಒಟ್ಟು 1384 ಕಡೆಗಳಲ್ಲಿ , 97 ದಾಸರು , 1214 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಹರಿಯೇಕಾಯೋ ಶರಧಿಶಯನನೇ ಸಿರಿದೇವಿಯರಸ ಪರಮಾತ್ಮ ಪರಾತ್ಪ್ಪರನೇ ಪ ಬಿರುದ ಧರಿಸಿ ಮೆರೆಯವೆ ನೀ ಧರೆಯೊಳು ಶುಭಚರಿತನೆ ಅ.ಪ ವರರುಕ್ಮಾಂಗದ ಪ್ರಹ್ಲಾದರು ದ್ರೌಪದಿ ವಿಭೀಷಣಶ- ಸಿರಿ ನಾಮದ ಮಹಿಮೆಯು 1 ಬುದ್ಧಿವಂತರೆಲ್ಲ ಮನವ ತಿದ್ದಿಕೊಳುತಲಹರ್ನಿಶಿಯಲಿ ವುದ್ಧವಪ್ರಿಯ ನಿನ್ನಪಾದ ಪದ್ಮಮಧುಪರೆನಿಪರು 2 ಗಹನವಳವಡುವಡಲ್ಲವು ಮಹಿಯೊಳು ಪಾಮರರಿಗೆ 3 ಪರ ಸುಖವನು ತಾವ್ಕೋರದೆ ಸದ್ಭಕುತಿಯಿಂದ ಸೇವಿಪರು 4 ಹೊರಳಿ ಹೊರಳಿ ನೋಯ್ವರು ಶ್ರೀ ಗುರುರಾಮ ವಿಠಲನೇ 5
--------------
ಗುರುರಾಮವಿಠಲ
ಹರಿಲೀಲೆ ಹರಿಲೀಲೆ ಪ ಜಗದೊಳು ಸುಜನರು ಬಳಲುತಲಿರುವುದು ಅ.ಪ ಉಚ್ಚಕುಲದಿ ಪುಟ್ಟಿ ಸ್ವಚ್ಛ ಜ್ಞಾನದಿಂದ ಅಚ್ಯುತನಂಘ್ರಿಯ ಪೂಜಿಸುತಿರಲು ತುಚ್ಛ ಜನರುಗಳು ಸ್ವೇಚ್ಭೆಯಿಂದಲಿ ಹುಚ್ಚು ಹರಟೆಗಳ ಹರಟುವುದೆಲ್ಲವು 1 ಪಂಡಿತರೆಲ್ಲ ಅಖಂಡ ಕಲೆಗಳಿಗೆ ಮಂಡನರೆನಿಸಿ ಭೂಮಂಡಲದಿ ಭಂಡಿ ಭಂಡಿ ಧನರಾಶಿಗಳಿರಲಾಗಿ ಪಿಂಡಕ್ಕಿಲ್ಲದೆ ತಿರುಗುತಲಿರುವುದು 2 ಮನವ ತೊರೆಯುತ ಕಾಮಿನಿಯರುಗಳು ಗಾನವ ಮಾಡಲು ಆನಂದಿಪರು ಜ್ಞಾನಿ ದಾಸರುಗಳು ಭಕುತಿಯಿಂದ ಹರಿ ಗಾನವ ಮಾಡಲು ಮಾನಸದಿರುವುದು 3 ಪನ್ನಗಶಯನನು ತನ್ನ ಭಕುತರಿಗೆ ಹೆಣ್ಣು ಹೊನ್ನು ಮಣ್ಣಿನ ಆಸೆ ಯನ್ನು ಬಿಡಿಸಿ ಅವರನ್ನು ಉದ್ಧರಿಸಿ ಪ್ರ ಸನ್ನನಾಗುವೆ ನಾನೆನ್ನುತ ಪೇಳ್ವುದು 4
--------------
ವಿದ್ಯಾಪ್ರಸನ್ನತೀರ್ಥರು
ಹರಿಹರರಿಬ್ಬರು ಒಲಿದು ಮಾತಾಡಲು ಕೊಳವ ಕಂಡಲ್ಲಿ ಎಲೆತೋಟ ಕೊಳವ ಕಂಡಲ್ಲಿ ಎಲೆತೋಟದೊಳಗಾಡುವ ಹೆಣ್ಣಿನ ಕಂಡು ಹರ ಮರುಳಾದ ಪ. ತೆಂಗಿನ ತಿಳಿಗೊಳ ನಿಂಬೆ ಕಿತ್ತಲೆ ಬಾಳೆ ಹೊಂಬಾಳೆ ಅಡಿಕೆ ಬನಗಳು ಹೊಂಬಾಳೆ ಅಡಿಕೆ ಬನದೊಳಗಾಡುವ ರಂಭೆಯ ಕಂಡು ಹರ ಮರುಳಾದ 1 ಅರಿಸಿನ ತಿಳಿಗೊಳ ಹಲಸು ಕಿತ್ತಲೆ ಬಾಳೆ ಬೆರಸಿ ಮಲ್ಲಿಗೆಯ ಬನದೊಳು ಬೆರಸಿ ಮಲ್ಲಿಗೆಯ ಬನದೊಳಗಾಡುವ ಸರಸಿಜಾಕ್ಷಿಯ ಕಂಡು ಹರ ಮರುಳಾದ 2 ಮೊಲ್ಲೆ ಮಲ್ಲಿಗೆ ಜಾಜಿ ಅಲ್ಲೆ ಪಾರಿಜಾತ ನಿಲ್ಲದೆ ನುಡಿವೊ ಗಿಳಿಗಳು ನಿಲ್ಲದೆ ನುಡಿವೊ ಗಿಳಿಗಳು ನುಡಿಗಳ ಚೆಲುವೆಯ ಕಂಡು ಹರ ಮರುಳಾದ 3 ಸೋಗೆ ನವಿಲುಗಳು ಗಿಳಿಹಿಂಡು ತುರುಗಳು [ಕೋಗಿಲೆ ನಲಿಯೊ ಪಂಸೆಗಳು] [ಕೋಗಿಲೆ ನಲಿಯೊ ಪಂಸೆಯೊಳಾಡುವ] ಸೊ- ಬಗಿಯ ಕಂಡು ಹರ ಮರುಳಾದ 4 ಚೆಲುವ ಚರಣಗಳು ಜಂಘೆ ಜಾನೂರು ಕಟಿ ವಳಿಪಂಙÂ್ತ ಜಠರ ವಕ್ಷಸ್ಥಳವು ವಳಿಪಂಙÂ್ತ ಜಠರ ವಕ್ಷಸ್ಥಳಗಳ ಹೆಣ್ಣಿನ ಸ್ತನವ ವರ್ಣಿಸಲಾರಿಗಳವಲ್ಲ 5 ಕಾಲುಂಗುರ ಅಕ್ಕಿ ಪಿಲ್ಯ ಜೋಡುಮೆಂಟಿಕೆಗಳು ವೀರಮುದ್ರಿಕೆಯು ಕಿರುಪಿಲ್ಯ ವೀರಮುದ್ರಿಕೆಯು ಕಿರುಪಿಲ್ಯ ನಿಟ್ಟಿದ್ದ ಬಾಲೆಯ ಕಂಡು ಹರ ಮರುಳಾದ 6 ನಡು ಬಳುಕಿ ಮುಡಿ ಸಡಲಿ ಉಡಿಗಂಟೆ ಹೊಳೆಯುತ ಕೊರಳ ಪದಕ ಹಾರ ಒಲೆಯುತ ಕೊರಳ ಪದಕ ಹಾರ ಒಲೆಯುತ ಹೆಣ್ಣಿನ ಇರವ ವರ್ಣಿಸಲಾರಿಗಳವಲ್ಲ 7 ಹಸಿರು ಕುಪ್ಪಸಗಳು ಮುಂಗೈನಗಗಳು ನಳಿತೋಳುಬಂದಿ ಬಳೆಗಳು ನಳಿತೋಳುಬಂದಿ ಬಳೆಗಳು ಹೆಣ್ಣಿನ ಥಳುಕು ವರ್ಣಿಸಲಾರಿಗಳವಲ್ಲ8 ಹಾರ ಹೀರಾವಳಿ ಕೇಯೂರ ಕಂಕಣ ತೋಳ ಭಾಪುರಿ ಭುಜಕೀರ್ತಿ ತೋಳ ಭಾಪುರಿ ಭುಜಕೀರ್ತಿನಿಟ್ಟಿಹ ಇಂದುಮುಖಿಯ ಕಂಡು ಹರ ಮರುಳಾದ 9 ಅರಳೋಲೆ ಮೂಗುತಿ ಹಣೆಯ ಹಚ್ಚೆಯ ಬೊಟ್ಟು ಕದಪು ಕನ್ನಡಿಯು ಕುಡಿಹುಬ್ಬು ಕದಪು ಕನ್ನಡಿಯು ಕುಡಿಹುಬ್ಬು ಹೆಣ್ಣಿನ ಬೆಳಕÀ ವರ್ಣಿಸೆ ಹರಗಳವಲ್ಲ 10 ನೊಸಲು ಕಸ್ತೂರಿಗಳು ಎಸೆವ ಬೈತಲೆಗಳು ಕುರುಳು ಕೂದಲುಗಳು ಕುಂತಲಗಳು ಕುರುಳು ಕೂದಲುಗಳು ಕುಂತಲಗಳು ಹೆಣ್ಣಿನ ಜಡೆಯ ವರ್ಣಿಸಲಾರಿಗಳವಲ್ಲ 11 ಕುಂಭಕುಚದ ಮೇಲೆ ಗಂಧವ ಪೂಸಿದಳೆ ಅಂದಕೆ ಹಿಡಿದಳೆ ಕಮಲವ ಅಂದಕೆ ಹಿಡಿದಳೆ ಕಮಲವ ಕಡೆಗಣ್ಣ ಚಂದ ಬಂದ್ಹರನ ಕಂಗೆಡಿಸಿತು 12 ತÉೂೀರ ಕುಚದ ಮೇಲೆ ಸಾದು ಗಂಧವ ಪೂಸಿ ಆಯಕೆ ಹಿಡಿದಳೆ ಕಮಲವ ಆಯಕೆ ಹಿಡಿದಳೆ ಕಮಲವ ಕಡೆಗಣ್ಣ ಢಾಳ ಬಂದ್ಹರನ ಕಂಗೆಡಿಸಿತು 13 ಕಕ್ಕಸ ಕುಚದಮೇಲೆ ಅಷ್ಟಹಾರಗಳು ಹೊಳೆಯೆ ಹಸ್ತಕಟ್ಟುಗಳು ಹೊಳೆಯುತ ಹಸ್ತಕಟ್ಟುಗಳು ಹೊಳೆವುತ್ತ ಹೆಣ್ಣಿನ ದೃಷ್ಟಿ ಬಂದ್ಹರನ ಕಂಗೆಡಿಸಿತು 14 ಅಮ್ಮಾಲೆ ಆಡೋಳು ಒಮ್ಮೊಮ್ಮೆ ನೋಡೋಳು ತÀನ್ನೊಳಗೆ ತಾನು ನಗುವೋಳು ತÀನ್ನೊಳಗೆ ತಾನು ನಗುವೋಳು ಬೊಮ್ಮನ ಮಗನ ಮರುಳು ಮಾಡಿ ನಡೆದಳು 15 ನೋಡಳು ನುಡಿಯಳು ಹರನ ಕೂಡೆ ಮಾತಾಡಳು ಓಡುತ್ತ ಚೆಂಡ ಹೊಯ್ವಳು ಓಡುತ್ತ ಚೆಂಡ ಹೊಯ್ವವೇಗವ ಕಂಡು ಮೂರುಕಣ್ಣವನು ಮರುಳಾದ 16 ಕೆದರಿದ ಕೆಂಜೆಡೆ ಕೊರಳ ರುದ್ರಾಕ್ಷಿ ಕರದಿ ತ್ರಿಶೂಲ ಹೊಳೆಯುತ ಕರದಿ ತ್ರಿಶೂಲ ಹೊಳೆಯುತ ಹೆಣ್ಣಿನ ನುಡಿಸುತ್ತ ಹಿಂದೆ ನಡೆದನು 17 ರೂಢಿಗೊಡೆಯನ ಕೂಡೆ ಆಡುವ ವನಿತೆ ನೋಡೆ ನೀ ಎನ್ನ ಕಡೆಗಣ್ಣ ನೋಡೆ ನೀ ಎನ್ನ ಕಡೆಗಣ್ಣ ಹೆಣ್ಣಿನ ಕಾಡುತ ಹಿಂದೆ ನಡೆದನು 18 ಪೀತಾಂಬರದ ಮುಂಜೆರಗನು ಕಾಣುತ್ತ ಸೋತೆ ಬಾರೆಂದು ಕರೆದನು ಸೋತೆ ಬಾರೆಂದು ಕರೆದ ಧ್ವನಿಯ ಕೇಳಿ ಕಾಂತೆ ಬನದೊಳು ಮರೆಯಾದಳು 19 ಮಂಗಳ ಮಹಿಮಗೆ ಅಂಜಿಕೆ ಇಲ್ಲದೆ ಗಂಗೆ ಪೊತ್ತವನ ತಿರುಗಿಸಿದ ಗಂಗೆಪೊತ್ತವನ ತಿರುಗಿಸಿದ ತನ್ನಯ ಮುಂದಣ ಅಂದವೆಲ್ಲ ಇಳುಹಿದ 20 ಸೃಷ್ಟಿಯನೆಲ್ಲ ಹೊಟ್ಟೆಯೊಳಿಂಬಿಟ್ಟು ವಟಪತ್ರ ಶಯನನಾಗಿ ಮಲಗಿದ ವಟಪತ್ರ ಶಯನನಾಗಿ ಮಲಗಿದ ಉಡುಪಿನ ಕೃಷ್ಣನೆಂದ್ಹರನು ತಿಳಿದನು 21 ಭೂಮಿಯನೆಲ್ಲ ಈರಡಿ ಮಾಡಿದ ಆಲದೆಲೆ ಮೇಲೆ ಮಲಗಿದ ಆಲದೆಲೆ ಮೇಲೆ ಮಲಗಿದ ಶ್ರೀಹಯ- ವದನನೆಂದು ಹರ ತಿಳಿದನು 22
--------------
ವಾದಿರಾಜ
ಹರಿಹರೀ ಎನ್ನ ದೋಷವಳಿಯೊ ಪ ಕರಿವರದ ಕೃಪೆಮಾಡು ನಿತ್ಯಮಿತ್ರನೆ ಕೃಷ್ಣ ಅ.ಪ. ಬೇಲಿ ಎದ್ದು ಹೊಲವ ಮೆದ್ದರೆ ಬ್ಯಾರಿನ್ನು ಪಾಲಿಪರು ಯಾರೆಯ್ಯ ಶೀಲರೊಡೆಯ ಫಾಲಾಕ್ಷಸಖ ನಿನ್ನ ಅಚುಂಬಿತ ಕಾರುಣ್ಯ ಶ್ರೀಲಕ್ಷ್ಮೀ ಶ್ರುತಿ ರಾಸಿ ವರ್ಣಿಪರೊ ಗುಣನಿಧಿಯೆ 1 ಯಾತನೆಲ್ಹಣ್ಣಾದೆ ಪೂತನಿಯ ಅಸುಹರನೆ ಪಾತಕಕೆ ಕೊನೆಗಾಣೆ ಪಾರ್ಥಸೂತ ಆತ್ಮಬಂಧುವೆ ಇನ್ನು ತಡಮಾಡೆ ತಡಿಲಾರೆ ಪೂತನ ಮಾಡೆನ್ನ ಪ್ರಾಣೇಶ ಪ್ರಿಯಬಂಧು 2 ದೋಷಪುಂಜನು ನಾನು ಶೇಷಶಯನನೆ ಬಲ್ಲ ಪೋಷಕನು ನೀನೆಂದು ವೇದರಾಸಿ ಘೋಷಿಪವು ಅನವರತ ಕಾಪಾಡು ಶ್ರುತಿವಾಕು ದೋಷಕರ ಜಯೇಶವಿಠಲನೆ ಮೈದೋರು 3
--------------
ಜಯೇಶವಿಠಲ
ಹಸಿದು ನಾ ಬಳಲಲೇಕೋ ಈಸಮಯದಲ್ಲಿ ಬಿಸಿಯೂಟ ಮಾಡುವೆನು ಪ ಹಸನಾದ ಶೇಷಶಯನ ನಾಮದಡುಗೆಯು ವಸುಮತೀಧವ ನಾಮರಸಾಯನವಿರೆ ಅ.ಪ ಹರಿ ಹರಿ ಪರಮಾನ್ನವು ದುರಿತಾರಿ ಶೌರಿ ಕರಿಗಡುಬು ಗರುಗೊಬ್ಬಟ್ಟು ನರಸಿಂಹ ವಾಮನ ಅಂಬೊಡೆ ಹೂರಿಗೆಗಳು ಕರಿವರದ ರವೆಯುಂಡೆ ಸಜ್ಜಿಗೆಯಿರಲು 1 ದುಷ್ಟಮರ್ದನನೆನ್ನುವ ಇಷ್ಟವಾದ ಹುಳಿಸಾರು ಮೊಸರುಗಳು ವಾಸುದೇವ ಸಣ್ಣಕ್ಕಿಯನ್ನವು ಮಾಧವ ಬೆಣ್ಣೆಕಾಯ್ಸಿದ ತುಪ್ಪವಿದೆ 2 ನಾರಾಯಣನೆನ್ನುವ ಸಾರವಾದ ಹುಳಿಯನ್ನ ಮೊಸರನ್ನವು ಸಾರಸಾಕ್ಷ ಶ್ರೀಶ ಕ್ಷೀರ ಸಕ್ಕರೆಯಿದ್ದು ಮಾರಜನಕನೆಂಬ ಹಪ್ಳಳುಪ್ಪಿನಕಾಯಿರೆ3 ಪರಿಪರಿಯನ್ನಗಳು ಸರಿಯಾಗಿ ಭಕ್ಷ್ಯ ಕರಿದೆಡೆ ಮಾಡಿರಲು ಅರಿತು ಸವಿಯನೋಡಿ ಮರೆಯದೆ ಭುಂಜಿಸಿ ನಿರುತ ನಿಜಾನಂದ ಪಡೆಯದೆ ಬರಿದೆ 4 ಗೋಪಾಲನೆಂದೆಂಬೊ ಸೀಪಿನ ಎಳನೀರು ಸೀ ಪಾನಕವಿಹುವು ತಾಪತ್ರಯಹರ ಹೆಜ್ಜಾಜಿಕೇಶವ ಆಪದುದ್ಧಾರಕನೆಂಬಮೃತವುಣದೆ 5
--------------
ಶಾಮಶರ್ಮರು
ಹಸೆಗೆ ಕರೆಯುವ ಹಾಡು ಇಂದಿರಾ ದೇವಿಯ ರಮಣ ಬಾವೃಂದಾರಕ ಮುನಿ ವಂದ್ಯ ಬಾ ಶೋಭಾನೇ ಪ ಸಿಂಧು ಶಯನ ಗೋವಿಂದ ಸದÀಮಲಾನಂದ ಬಾತಂದೆಯ ಕಂದ ಬಾ ಮಾವನಾ ಕೊಂದ ಬಾ ಗೋಪಿಯಕಂದ ಬಾ ಹಸೆಯ ಜಗುಲಿಗೇ ಅ.ಪ. ಕೃಷ್ಣವೇಣಿಯ ಪಡೆದವನೆ ಬಾಕೃಷ್ಣನ ರಥ ಹೊಡೆದವನೆ ಬಾಕೃಷ್ಣೆಯ ಕಷ್ಟವ ನಷ್ಟವ ಮಾಡಿದ ಕೃಷ್ಣನೆ ಬಾ ||ಯದುಕುಲ ಶ್ರೇಷ್ಠ ಬಾಸತತ ಸಂತುಷ್ಟನೆ ಬಾಉಡುಪೀಯ ಕೃಷ್ಣ ಬಾ ಹಸೆಯ ಜಗುಲಿಗೇ 1 ನಾಗಾರಿ ಮಧ್ಯಳೆ ಹೊಂತಕಾರಿ ಬಾ ||ಬಲು ದುರಿತಾರಿ ಬಾಬಹು ವೈಯ್ಯಾರಿ ಬಾಸುಂದರ ನಾರೀ ಬಾ ಹಸೆಯ ಜಗುಲಿಗೇ 2 ಮಣಿ ಖಣಿಯೇ ಬಾಸೌಭಾಗ್ಯದ ಪನ್ನಗವೇಣಿ ಬಾ ||ಪರಮ ಕಲ್ಯಾಣಿ ಬಾನಿಗಮಾಭಿಮಾನೀ ಬಾಭಾಗ್ಯದ ನಿಧಿಯೇ ಬಾ ಹಸೆಯ ಜಗುಲಿಗೇ 3 ಸಿರಿ ಮೋಹನ ವಿಠಲನ ಸತಿಯೇ ಬಾವೇದಾವತಿಯೇ ಬಾಬಲು ಪತಿವ್ರತೆಯೇ ಬಾ ಹಸೆಯ ಜಗುಲಿಗೇ 4
--------------
ಮೋಹನದಾಸರು
ಹಿಂಗದೆ ಮನದಣಿಯ ರಂಗನ ಭಜಿಸೊ ಪ ರಂಗನ ಭಜಿಸೊ ಕೃಷ್ಣನ ಭಜಿಸೊ ಅ ಯಾತಕೆ ಸುಮ್ಮನಿರುವೆಪಾತಕ ಹೆಚ್ಚಿ ಮೆರೆವೆನೀತಿಯ ತಪ್ಪಿ ನೀನಿರುವೆಭೂತಳ ಭೋಗ ಸ್ಥಿರವೆ 1 ಗೆಜ್ಜೆಯ ಕಟ್ಟಿ ಆಡೊಲಜ್ಜೆಯ ಬಿಟ್ಟು ಪಾಡೊಮುಜ್ಜಗನ ಕೊಂಡಾಡೊಸಜ್ಜನರ ಜೊತೆಗೂಡೊ2 ಪನ್ನಗರಾಜ ಶಯನನಪನ್ನಗಭೂಷಣ ನುತನಉನ್ನಂತ ಗುಣದವನಚೆನ್ನಾದಿ ಕೇಶವನ3
--------------
ಕನಕದಾಸ
ಹುಚ್ಚು ಹಿಡಿಯಿತು ಎನಗೆ | ಹುಚ್ಚು ಹಿಡಿಯಿತು ಪ ಸ್ವಚ್ಛ ಭಾಗವತವ ಕೇಳಿ | ಅಚ್ಯುತನ್ನ ಮಹಿಮೆ ಎಂಬಮೆಚ್ಯಮದ್ದು ಶಿರಕೆ ಏರಿ | ಹುಚ್ಚು ಹಿಡಿಯಿತು ಅ.ಪ. ಶ್ರವಣ ಸ್ತವನ ಸ್ಮರಣೆ ಸೇವೆ | ಅವನ ಅರ್ಚನೆ ವಂದನೆ ಸಖ್ಯಅವ ದಾಸ್ಯ ಆತ್ಮ ಅರ್ಪಣ | ನವವು ವಿಧದ ಭಕ್ತಿಗಳಿಪ 1 ಸಪ್ತ ದಿನದ ಕ್ಲುಪ್ತಿಯಿಂದ | ಸರ್ಪಶಯನ ಮಹಿಮೆ ಶ್ರವಣಶೃತಿ ಬಧಿರ ವಾಯ್ತು ಆತ್ಮ | ರಿಕ್ತ ವಿಷಯ ಶ್ರವಣಕೆಲ್ಲ 2 ಸ್ತವನ ಮಾಳ್ಪ ಶುಕರ ದೇಹ | ಭವಣೆ ಮರೆತು ಕೀರ್ತಿಸಿದರುಅವರ ಕಂಡು ಲೋಕವಾರ್ತೆ | ಸ್ತವನ ಗೈವರ ದೂಡುವಂಥ 3 ಹರಿಯ ಸ್ಮರಿಸಿ ಪ್ರಹಲ್ಲಾದ | ಹರಿಯ ಕಂಡು ಭವವ ಗೆದ್ದಸ್ಮರಿಸಿ ಸ್ಮರಿಸಿ ಅದನ ನಾನು | ನರರ ನಡುವೆ ಮೂಕನಾಗ್ದ 4 ನಿತ್ಯ ಮಾಳ್ಪ ಹರಿಯ ಸೇವೆಅರ್ತುಸಂತರ ಸೇವೆ ವ್ಯತಿ | ರಿಕ್ತಕೆಲ್ಲ ಪ್ರತಿಯ ಭಟಿಪ 5 ಅಂಬೆ ರಮಣನರ್ಚಿಸೀದ | ಕುಂಬಾರ ಭೀಮನ ಕೇಳಿ ನಾನುಅಂಬುಜಾಕ್ಷನರ್ಚನೆಗಲ್ಲದ | ತುಂಬಿದ್ವ್ಯೊಭವ ಚೆಲ್ಲುವಂಥ 6 ಕೃಷ್ಣ ವಂದನ ಅಕ್ರೂರ ಗೈದು | ಸುಷ್ಠು ಹರಿಯ ರೂಪ ಕಂಡಜಿಷ್ಣು ಸಖನ ನಮಿಸದವರ | ಭ್ರಷ್ರ್ರರೆಂದು ಬೈಯ್ಯುವಂಥ 7 ನಿತ್ಯ ನೆನೆಯದವರ | ಕ್ಷಣವು ಅವರ ಸಂಗಜರಿವ 8 ಪಾರ್ಥ ಸಖ್ಯತನದಿ ಪರಮ | ಅರ್ಥ ಪಡೆದುದನ್ನ ಕೇಳಿನಿತ್ಯ ಸಖನ ಮರೆತ ಜನರು | ವ್ಯರ್ಥರೆಂದು ಅರ್ಥಿಲಿ ನಗುವ9 ಭೃತ್ಯ ಬಲಿಯು ತನ್ನನಿತ್ತಸತ್ಯ ವಾರ್ತೆ ಕೇಳಿ ಕೇಳಿ | ಪ್ರವೃತ್ತಿ ಗೈದಿನ್ಯತ ನೆದಿ 10 ನಿಚ್ಚ ಗುರು ಗೋವಿಂದ ವಿಠಲ11
--------------
ಗುರುಗೋವಿಂದವಿಠಲರು
ಹೃತ್ಪದ್ಮದೊಳಿದ್ದು ಹೃತ್ತಾಪಗಳ ಕಳೆಯೊ ಜೀ- ವತ್ಪಿತಾಮಹ ಜನಕನೇಪ ಮೃತ್ಪಿಂಡದಂತೆನ್ನ ಉತ್ಪತ್ತಿಗೆ ಕ- ಣ್ಣೆತ್ತಿ ನೋಡಲರಿಯಾ ಜೀಯಾ ಅ.ಪ ನಿತ್ಯ ನಿತ್ಯ ಜಗವೆಲ್ಲವು ನಿತ್ಯವು ನಿತ್ಯತ್ವವೆಲ್ಲ ಸರಿಯೇ ಏನಿದ್ದರೇನು ಅನಾದಿಕರ್ಮದ ಬವಣೆ ಬೆನ್ನಟ್ಟಿ ಬರುತಿರ್ಪುದ- ಜ್ಞಾನಾಂಧಕಾರದಿಂ ಧ್ಯಾನವನು ತಿಳಿಯದೇ ಕಾನನದೊಳಿಪ್ಪೆನೋ ಜ್ಞಾನಗಮ್ಯನೆಂದು ಸಾರುತಿದೆ ಶ್ರುತಿ ಶಾಸ್ತ್ರ ಜ್ಞಾನಗುರು ದೊರೆತಿಲ್ಲವೋ ಸಾನುರಾಗದಿ ನೀನೆ ಸಾಧನಕೆ ಕರುಣಿಸಿ ಧ್ಯಾನದಲಿ ಮನಸು ನಿಲಿಸೋ ಉಳಿಸೋ 1 ಬಂಧ ಮೋಕ್ಷಕೆ ಎಲ್ಲ ಮನವೆ ಕಾರಣವೆಂದು ಎಂದೆಂದಿಗು ಪೇಳುತಿಹರು ಸಿಂಧುಶಯನನೆ ಭವಬಂಧಮೋಚಕನೆಂದು ವಂದಿಸಿ ಪೊಗಳುವರೊ ಮಂದರೊದ್ಧರ ನಿನ್ನ ಮಂದಮತಿಯಿಂದಲಿ ವಂದಿಸಲು ನಾನರಿಯೆನೊ ಕಂದರ್ಪಜನಕ ನೀ ಮಂದಭಾಗ್ಯನ ಮನವ ನೋಯಿಸದೆ ನಿನ್ನ ಪದದಲ್ಲಿರಿಸೊ ಅಂದೆ ಎನ್ನಯ ಭವಬಂಧನಾಶವಾಗುವು- ದೊಂದೆ ನಿನ್ನನು ಬೇಡುವೆನೊ ಜೀಯ 2 ಜೀವರೆಲ್ಲರು ಗುಣತ್ರಯಾವರಣದಿಂದ ಕರ್ಮ- ಪ್ರವಹದೊಳಿಪ್ಪರೊ ಕವಿಸಿ ಮೋಹವ ನೀನು ಭವಕೆ ಕಾರಣವಹುದು ದೇವೇಶ ನಿನ್ನಾಟವೋ ಶ್ರವಣದಿಂದಲಿ ಭವಬಂಧಮೋಚಕನೆಂದು ತವ ಬಿರುದು ಸಾರುತಿದೇಕೋ ಭಾವ ಬಲ್ಲವರಾರೋ ಕಾವ ಕರುಣಿ ನೀನೆ ಭಾವಜನ ಪಿತನು ಅದೇ ಭವಪಾಶ ಬಿಡಿಸೆ ನಾ ಭಕುತಿಪಾಶದಿಂದ ಪಾದ ಬಿಗಿವೆನಯ್ಯ ಜೀಯ 3 ಸ್ವಾತಂತ್ರ್ಯವೆಲ್ಲಿಹುದು ಸ್ವಾಮಿತ್ವವೆಲ್ಲಿಹುದು ಅ- ಸ್ವತಂತ್ರನಾಗಿಪ್ಪೆನೊ ಕಾತುರದಿ ನಾ ಮಾಳ್ಪ ಕ್ರಿಯೆಗಳೆಲ್ಲವು ಎನ್ನ ಸ್ವಾತಂತ್ರ್ಯವೆಂದ್ಹೇಳುವೆ ನೀ ತಂತ್ರಿಯಾಗಿದ್ದೆನ್ನ ನಡೆಸುವುದನರಿಯೆ ಕು- ತಂತ್ರವನು ನಾ ಮಾಡುವೆ ಸ್ವಾ- ತಂತ್ರನು ನೀನು ಸೂತ್ರನಾಮಕ ದೇವ ಮಂತ್ರಿಯಾಗೀದೇವ ಯಂತ್ರ ನಡೆಸುವ ಎಂತಾದರಡಿಗಡಿಗೆ ಅತಂತ್ರನಾಗಿಹೆ ನಾನೇ ಭ್ರಾಂತಿಪರಿಹರಿಸಿ ಕಾಯೊ ಶೌರೇ 4 ಭಕ್ತಿ ಇಲ್ಲದೆ ನಿನ್ನ ಭಕ್ತನಾಗುವುದೆಂತೋ ಭುಕ್ತಮಾತ್ರನು ನಾನು ಮುಕ್ತರೊಡೆಯ ನೀನು ಯುಕ್ತಿತೋರಿಸು ಎನಗೆ ಭಕ್ತಾಪರಾಧಸಹಿಷ್ಣು ಶಕ್ತ ನೀನಹುದೊ ವೇದೋಕ್ತ ಮಹಿಮಾತೀತ ಸಕ್ತವಾಗಲಿ ನಿನ್ನ ಪದದಿ ಮನಸು ವ್ಯಕ್ತನಲ್ಲವೊ ಸರ್ವ ಸಾರಭೋಕ್ತನು ನೀನು ಭಕ್ತವತ್ಸಲ ಪುರುಷಸೂಕ್ತಮೇಯ ಅಪ್ರಮೇಯ ಯುಕ್ತಿಮಾತಲ್ಲಿದು ಭಕ್ತಿಪೂರ್ವಕ ನಿನ್ನ ಭಕ್ತ ಶ್ರೇಷ್ಠರ ಸೇವೆ ಕೊಟ್ಟು ರಕ್ಷಿಸೊ ದೇವಾ 5 ನಾದಕ್ಕೆ ಪರನಾಗಿ ವಾದಕ್ಕೆದೊರೆಯೇ ನೀ ವೇದವೇದಾಂತವೇದ್ಯ ಸಾಧನವು ಕಾಣೆ ಸಾಧನಶರೀರವಿದು ಸಾದರದಿ ಕರುಣಿಸಿದೆ ಅನಿರುದ್ಧದೇವ ಬಾಧಿಪುದು ಬಂಧಗಳು ಅನಾದಿಕರ್ಮದಿ ಬಂದು ನಾ ಅಧಮತಮಸಾಧನವನ್ನೆಸಗಿದೆ ನೀ ದಯಾಸಿಂಧು ಎಂದಡಿಗಡಿಗೆ ಬೇಡುವೆನು ಕೃದ್ಧನಾಗದೆ ಇನ್ನು ಉದ್ಧರಿಸು ತಂದೇ ಎಂದೇ 6 ಶಂಖಚಕ್ರಾಂಕಿತನೆ ಮಂಕುಬುದ್ಧಿಯ ಬಿಡಿಸೋ ಅಂಕಿತವೆನಗೆ ಇಲ್ಲ ಅಂಕೆ ಇಲ್ಲವೊ ನಿನ್ನ ನೆನೆಹುದಕೆ ಎಂದಿಗೂ ಶಂಕೆಯ ಪಡುವನಲ್ಲ ವೇಂಕಟಾದ್ರಿಯ ವಾಸ ಶ್ರೀ ವೇಂಕಟೇಶನು ಮಮಕುಲಸ್ವಾಮಿ ದೈವವೆಂದನುದಿನ ಸಂಕಟಾಗಾಮಿಗಳ ಕಂಟಕವ ಹರಿಸಿ ಪದ ಪಂಕಜದಿ ಮನವ ನಿಲ್ಲಿಸೋ ಬಿಂಕದ ಮಾತಲ್ಲ ಪಂಕಜದಳಾಯತಾಕ್ಷ ಅಕ- ಳಂಕಮಹಿಮ ಕಾಯೋ ಜೀಯಾ7
--------------
ಉರಗಾದ್ರಿವಾಸವಿಠಲದಾಸರು
ಹೊನ್ನ ತಾ ಗುಬ್ಬಿ ಹೊನ್ನ ತಾ ಚೆನ್ನ ಗೋಪಾಲ ಚೆಲುವ ಕೃಷ್ಣನ ಕೈಗೆ ಪ. ಆಗಮವನು ತಂದು ಅಜಗಿತ್ತ ಕೈಗೆ ಸಾಗರವನೊತ್ತಿಕ್ಕಿ ಸುಧೆಯಿತ್ತ ಕೈಗೆ ನಾಗಶಯನ ನರಸಿಂಹನ ಕೈಗೆ 1 ಬಲಿಯ ದಾನವ ಬೇಡಿ ಬಂದಂಥ ಕೈಗೆ ಛಲದಿಂದ ಕ್ಷತ್ರಿಯರ ಕೊಂದಂಥ ಕೈಗೆ ಕಲಿ ವಿಭೀಷಣಗಭಯವಿತ್ತಂಥ ಕೈಗೆ ಬಲುಗಿರಿಯ ಬೆರಳಲ್ಲಿ ಆತಂಥ ಕೈಗೆ 2 ಪತಿವ್ರತೆಯರ ವ್ರತವಳಿದಂಥ ಕೈಗೆ ಹಿತವಾಜಿಯನೇರಿ ದುರುಳಮರ್ದನ ಕೈಗೆ ಸತಿ ಶಿರೋಮಣಿ ಲಕ್ಷ್ಮೀಕಾಂತನ ಕೈಗೆ ಚತುರ ಹೆಳವನಕಟ್ಟೆÉ ರಂಗನ ಕೈಗೆ 3
--------------
ಹೆಳವನಕಟ್ಟೆ ಗಿರಿಯಮ್ಮ
ಹೋತಾರ ಪರುವಾಸ ಶ್ರೀ ಲಕ್ಷ್ಮೀಶಾ ಪ ಶ್ರವಣ ಮನನ ನಿದಿಧ್ಯಾಸನಗಳಿಂದ ಭವ ಪರಿಹಾರ ನಿಮ್ಮ ನಾಮ ಗೋವಿಂದ 1 ಭಕ್ತ ----------------------- ----------------ಭಜಿಸುವನೇಕ 2 ಪನ್ನಗಶಯನ ಸುಪನ್ನಗ ವಾಹನ ಹೆನ್ನೆವಿಠಲರಾಯ ಮೋಹನ 3
--------------
ಹೆನ್ನೆರಂಗದಾಸರು
ಹ್ಯಾಂಗಾದರು ಎನ್ನ ನೀ ರಕ್ಷಿಸ ಬೇಕೋ ಸಾಗರಶಯನ ಕೃಷ್ಣಾ ಪ ಭಾಗವತರ ಸಂಗ ಬೇಗದಿಂದಲಿ ಇತ್ತು ಹೋಗಲಾಡಿಸು ಭವವ ಶ್ರೀ ಕೃಷ್ಣ ಅ.ಪ ಬಾಲೇರ ಸಲುವಾಗಿ ಕೀಳು ಜನರಲ್ಲಿ ಶೀಲ ಜರಿದು ಯಾಚಿಸಿ ಕಾಳಿ ಮರ್ಧನ ನಿನ್ನ ಒಲುಮೆಯ ಪಡೆಯದೆ ಕಾಲ ಬಲಿಗೆ ಸಿಕ್ಕೆನೊ ಶ್ರೀ ಕೃಷ್ಣ 1 ಅಂಗಜನಾಟಕೆ ಹಗಲಿರುಳೆನ್ನದೆ ಪರ ಅಂಗನೆರ ಕೂಡಿ ಮಂಗಳಮಹಿಮ ತುರಂಗ ವದನ ದೇವ ಭಂಗಕ್ಕೆ ಗುರಿಯಾದೆನೊ ಶ್ರೀ ಕೃಷ್ಣ 2 ದುರುಳರ ಸಂಗವನೆಲ್ಲ ಜರಿದು ಶ್ರೀ ನರಹರೆ ಕಾರುಣ್ಯದಲಿ ಭಕ್ತನ ಅರಿಷಟ್ಕರನೆ ಕೊಂದು ಕರಿವರದನೆ ಘೋರ ನರಕಕ್ಕೆ ಭಯ ತಪ್ಪಿಸೋ ಶ್ರೀಕೃಷ್ಣ 3
--------------
ಪ್ರದ್ಯುಮ್ನತೀರ್ಥರು
ಹ್ಯಾಂಗಾದರ್ಹಾಂಗಾಗಲಿ ಎ- ನ್ನಿಂಗಿತವ ನೀ ಬಲ್ಲೆ ರಂಗಯ್ಯಪ ಮಂಗಳಾಂಗ ನೀ ಕೊಟ್ಟು ಸಲಹೋ ಶುಭಾಂಗ ಅ- ನಂಗಜನಕ ಭುಜಂಗಶಯನ ಮಾ- ತಂಗವರದ ಶ್ರೀ ರಂಗನಾಥನೇ1 ದೇವಾ ನಾ ಸದ್ಭಾವದಲ್ಲಿ ನಿನ್ನ ಪಾದ ಪದುಮ ನಿರುತ ಧೇನಿಸುವೆ ಪವಮಾನ ಜೀವೋತ್ತಮ ನೀ ಧರ್ಮೋತ್ತಮನೆನ್ನುವ ಭಾವ ಎನಗಾವಕಾಲದಿ ಇರಲಿ ಬೇಡೆನು ಇತರ ಸಂಪದವಾ 2 ಶ್ರೀಶಾ ಶ್ರೀ ವೆಂಕಟೇಶ ನಿರ್ದೋಷ ಗುಣ ವಾಸನೆ ನಿನ್ನ ದಾಸಜನಭವಪಾಶ ಕ್ಲೇಶ- ನಾಶನವ ಗೈಸಿ ಸಲಹುವುದು ಶೇಷಶಯನ ಶ್ರೀ ರಂಗಶಾಯಿ 3
--------------
ಉರಗಾದ್ರಿವಾಸವಿಠಲದಾಸರು
ಹ್ಯಾಗೆ ದರುಶನ ಪಾಲಿಸುವೆ ವಿಠ್ಠಲನೆ ಹ್ಯಾಗೆನ್ನ ಪೊರೆವೆ ವಿಠ್ಠಲನೆ ಪ. ನಾಗಶಯನನೆ ನಿನ್ನ ನೋಡಬೇಕೆಂದು ಮನ ಈಗ ತವಕಿಸುತಿಹುದು ಹ್ಯಾಗೆ ಮಾಡಲಿ ವಿಠಲ ಅ.ಪ. ಅರಿಯದಾ ದೇಶದಲಿ ಆಲ್ಪರಿದು ಅನ್ಯರಿಗೆ ಬರಿದಾಯ್ತು ಬಯಕೆ ವಿಠ್ಠಲನÉ ಪರಿ ಹರಿಯೆ ನೀನಲ್ಲದಲೆ ಪೊರೆಯುವರ ಕಾಣೆ ವಿಠ್ಠಲನÉ 1 ಕೈಯಲ್ಲಿ ಕಾಸಿಲ್ಲ ಮೈಯಲ್ಲಿ ಬಲವಿಲ್ಲ ಹ್ಯಾಗೆ ಬರಲಿನ್ನು ವಿಠ್ಠಲನೆ ನ್ಯಾಯದಿಂದಲಿ ಹಿಂದಿನಾ ಭಕ್ತರಂದದಲಿ ಕಾಯಬಾರದೆ ಎನ್ನ ಪೇಳೂ ವಿಠ್ಠಲನೆ 2 ಭಕ್ತ ಸುರಧೇನೆಂಬೊ ಬಿರುದು ಕೇಳೀ ಬಂದೆ ಚಿತ್ತಕ್ಕೆ ಬರದೆ ವಿಠ್ಠಲನೆ ಭಕ್ತರಾ ಕೂಟದಲಿ ಸೇರಲಿಲ್ಲವೆ ನಾನು ಭಕ್ತವತ್ಸಲನಲ್ಲವೇನೊ ವಿಠ್ಠಲನೆ 3 ತಂದೆ ತಾಯಿಯು ನೀನೆ ಬಂಧು ಬಳಗವು ನೀನೆ ಇಂದಿರೇಶನೆ ಕಾಯೊ ಸತತ ವಿಠ್ಠಲನೇ ಹಿಂದಿನವರನು ಪೊರೆದ ಕೀರ್ತಿ ಉಳಿಯಲು ಈಗ ಕುಂದನೆಣಿಸದೆ ಕಾಯಬೇಕೊ ವಿಠ್ಠಲನೇ 4 ಕರುಣಿ ಎನ್ನಯ್ಯ ಕಂಗೆಡಿಸದಲೆ ಕಾಪಾಡೊ ಚರಣವೇ ಗತಿ ಎಂದು ಬಂದೆ ವಿಠ್ಠಲನೆ ಗುರು ಅಂತರ್ಯಾಮಿ ಎನ್ನಭಿಮಾನ ನಿನದೈಯ್ಯ ಸಿರಿಯರಸ ಗೋಪಾಲಕೃಷ್ಣವಿಠ್ಠಲನೆ 5
--------------
ಅಂಬಾಬಾಯಿ
ಹ್ಯಾಗೆ ದೊರಕೀತು ನಿನ್ನ ಚರಣವು ನಾಗಶಯನನೆನ್ನಂಥ ಪಾಪಿಗೆ ಪ ನೀಗಿ ಹೋಯಿತು ಅರ್ಧವಯವು ಆಗಯೀಗಯಾ ವಾಗಲೋ ಹೋಗುವುದು ದೇಹ ಭೋಗದಾಸೆಯು ನೀಗವಲ್ಲದು ಎನಗೆ ಇನ್ನು ಅ.ಪ ಮನದಕ್ಲೇಶವು ಕಡಿಯವಲ್ಲದು ನೀಚತನದ ನೆನವು ಎನ್ನೊಳಳಿಯವಲ್ಲದು ಸಾಚನಾಗಿ ನಿನ್ನ ಧ್ಯಾನದಿ ಮನವುಯೆಂಬುದು ಕ್ಷಣವು ನಿಲ್ಲದು ಕ್ಷಣವು ಬಿಡದೆ ಅನ್ಯರೊಡವೆಯ ಮನದೊಳನುದಿನ ನೆನೆದು ನೆನೆದು ಘನ ಪಾಪಾತ್ಮನಾಗಿ ಚರಿಸುವೆ ಜ್ಞಾನ ಬಾರದು ಎನಗೆ ಇನ್ನು 1 ಒಡವೆವಸ್ತ್ರದ ಆಸೆ ಬಿಡವಲ್ಲದು ಪಾಪಿಮನವು ಮಡದಿ ಮಕ್ಕಳ ಮಮತೆ ತೊರೀವಲ್ಲದು ಒಡನೆ ತಿಳಿದು ಕೆಡುವ ಕಾಯದ ಮೋಹ ಮರೀವಲ್ಲದು ಜಡಮತಿಯು ಬಿಡದು ಎಡರು ಪ್ರಪಂಚ ತೊಡರಿನೊಳು ಮನ ವಡರಿ ಬಿಡದಲೆ ಮಿಡುಕಿ ಮಿಡುಕಿ ಕಡೆಯುಗಾಣದೆ ಕಷ್ಟಬಡುತಿಹೆ ಬಿಡದು ವಿಷಯದಾಸೆ ಎನಗೆ 2 ದಾಸಜನ ವ್ಯಾಸಂಗ ಮೊದಲಿಲ್ಲ ಪಾಪಿಜನುಮ ದೋಷಗುಣಗಳು ಒಂದುಬಿಟ್ಟಿಲ್ಲ ಒಡನೆನುಡಿದ ಭಾಷೆಗಳನು ತಿಳಿದು ನಡೆಸಿಲ್ಲ ಆಸೆ ಹರಿದಿಲ್ಲ ನಾಶಮಾಡಿತು ಹೇಸದಲೆ ಇನ್ನು ಮೋಸಗಾರನ ಪೋಷಿಸುವುದು ಶ್ರೀಶ ಶ್ರೀರಾಮ ನಿನಗೆ ಕೂಡಿತು 3
--------------
ರಾಮದಾಸರು