ಒಟ್ಟು 5098 ಕಡೆಗಳಲ್ಲಿ , 128 ದಾಸರು , 3277 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಿಮಿರ ಭರದಿ ಬಿಟ್ಟೋಡಿತು ಪ ಶ್ರುತಿ ಶಾಸ್ತ್ರವೆಂಬ ಕಂಜಗಳತಿ ರಮ್ಯದಿಂದರಳಿದವುಕ್ಷಿತಿಯೋಳು ಕುಮುದದಂತೆ ದುರ್ಮತಗಳೆಲ್ಲ ಕುಗ್ಗಿದವು ||ಇತರ ದೇವಂಗಳಿಂತು ಭಜಿಸಿದೆ ರಘುಪತಿಯೆ ದೈವ ಮಧ್ವ ಮತವೆ ಸಿದ್ಧಾಂತವುಸತತವನು ಹರಿ ಸರ್ವೋತ್ತಮನೆಂದುತುತಿಸುವ ಕಾಂತಿಯು ತುಂಬಿತು ಜಗದೊಳು 1 ಚಕ್ರವಾಕ ಧ್ವನಿಗೈದವು ||ಸಾರಿ ಸಾರಿಗೆ ಹೊತ್ತು ಯೇರುವ ತೆರದಲಿಶ್ರೀರಮಣನ ಚರಣಾರವಿಂದವು ನಿತ್ಯಆರಾಧಿಸುವ ವಿಚಾರವಿದೆನುತಲಿತಾರತಮ್ಯ ಜ್ಞಾನ ತೋರಿದರಿಳಿಯೊಳು 2 ಅಂದವಾದಲಾದಿನ್ನೆ ಹನುಮಂತನೊಡೆಯ(ಮುಂದಿನ ಪಾದಗಳು ಸಿಕ್ಕಿಲ್ಲ)
--------------
ಮೋಹನದಾಸರು
ತಿರುಪತಿ ಯಾತ್ರೆಯ ಮಾಡಿ ತಿರುಪತಿ ಪ ತಿರುಪತಿಯಾತ್ರೆಯ ಮಾಡಿ ಮನದ ದುರಿತಪಾಪಗಳನೀಡಾಡಿ ಆಹ ಸ್ಮರಕೋಟಿ ತೇಜನ ದರುಶನಲಾಭವು ದೊರಕಿದ ಸುಜನರ ಚರಿತೆಯ ಕೇಳುತ್ತ ಅ.ಪ ಸುಟ್ಟು ಹೋಗುವದಿದು ಚಂದ ಮೆಟ್ಟು ಮೆಟ್ಟಿಲನೇರುವ ವೃಂದ ಜನ ಸೃಷ್ಟಿಗೊಡೆಯ ಗೋವಿಂದ ಆಹಾ ದಿಟ್ಟಮನದಿ ಪರಮೇಷ್ಠಿಪಿತನ ಪಾಡಿ ಗಟ್ಯಾಗಿ ಗೋವಿಂದ ಗೋವಿಂದನೆನುವರು1 ಗಾಳಿಗೋಪುರವನ್ನೆ ದಾಟಿ ಭಕ್ತ- ರಾ ಮಂಟಪಕೆ ಉಂಟೆ ಸಾಟಿ ತಾಳ ಮೇಳದವರ ಗಲಾಟೀಯಿಂದ ಶೋಭಿಪ ಪವನನಕೋಟಿ ಕೇಳಿ ನೋಡುತ್ತ ಭಕುತಿಸೂರ್ಯಾಡುತ್ತ ಮಹಿಮೆ ಕೊಂ- ಡಾಡುತ್ತ ಪಾಡುತ್ತ ಕುಣಿವ ಸಜ್ಜನರೆಲ್ಲ 2 ಸ್ವಾಮಿ ಪುಷ್ಕರಣಿಯ ಸ್ನಾನ ಮಾಡಿ ಆ ಮಹವರಹದೇವರನ್ನ ಕಾಮ- ಧೇನೆಂಬ ಶ್ರೀ ಗುರುಗಳನ್ನ ನೋಡಿ ಆ ಮಹಾ ಅಶ್ವತ್ಥರಾಜನ್ನ ಸ್ತುತಿಸಿ ನೇಮದಿ ದಿಗ್ಗಾವಿ ಆಚಾರ್ಯರಿಗೆ ನಮಿಸಿ ಶ್ರೀಧರನಾಲಯ ದ್ವಾರಕ್ಕೆ ಪೋಗಲು 3 ಮೂರು ದ್ವಾರಗಳನ್ನೆ ದಾಟಿ ಮು- ರಾರಿಯ ಗುಡಿಸುತ್ತ ಕೋಟೆಯಲ್ಲಿ ಸಾರುವ ಭಕುತರ ಭೇಟಿಯಿಂದ ಅ- ಪಾರ ಜನುಮದ ಪಾಪಮೂಟೆ ಪೋಗಿ ಬೇಗದಿ ವಿಮಾನ ಶ್ರೀನಿವಾಸನ ನೋಡಿ ಸಾಗರಶಯನನ ದರುಶನ ಕೊಡುಕೊಡು ಎಂದು 4 ಕೊಪ್ಪರಿಗೆಯು ಮನೆಯಂತೆ ಹಣ ತಪ್ಪದೆ ಸುರಿಯುವರಂತೆ ನ- ಮ್ಮಪ್ಪ ವೆಂಕಟಸ್ವಾಮಿಯಂತೆ ತಪ್ಪನಾಡುವರ ಶಿಕ್ಷಿಪನಂತೆ ಆಹಾ ಕ್ಷಿಪ್ರದಿ ಶ್ರೀಧರನಪ್ಪಣೆಯಂದದಿ ಅಪ್ರಮೇಯನ ಸೇವೆಗೊಪ್ಪುವ ಸುಜನರು 5 ಹೇಮದ್ವಾರದಿ ನಿಂತ ಜನರು ನಮ್ಮ ಸ್ವಾಮಿ ಶೃಂಗಾರ ನೋಡುವರು ಶ್ರೀನಿ- ವಾಸನೆ ಸಲಹು ಎಂಬುವರು ಪಾಹಿ ಪಾಹಿ ಶ್ರೀಪತಿ ಎನ್ನುತಿಹರು ಶ್ರೀಶ ಗೋವಿಂದ ಗೋವಿಂದ ಗೋವಿಂದ ಮಾಧವ ಮಾತುಳಾಂತಕ ದೇವ ಮಾತು ಲಾಲಿಸು ಎಂದು6 ಚರಣದಂದಿಗೆ ಗೆಜ್ಜೆವಲಿಯೆ ಪೊನ್ನ ಸರಪಳಿ ಪಾಡಗ ನಲಿಯೆ ಒಳ್ಳೆ ಜರದ ಪೀತಾಂಬರ ಹೊಳೆಯೆ ಪಟ್ಟೆ ವರವಲ್ಲಿ ಹೊಳೆಯುತ್ತ ಮೆರೆಯೆ ಆಹ ಸರಗಳು ವಲಿಯುತ್ತ ಪದಕಂಗಳ್ಹೊಳೆಯುತ್ತ ಉರದಲ್ಲಿ ಶ್ರೀದೇವಿ ಇರುವ ವೈಭವ ನೋಡಿ7 ವರಶಂಖು ಚಕ್ರ ಹಸ್ತದಲಿ ದಿವ್ಯ ಸಿರದಿ ಕಿರೀಟ ಮೆರೆಯುತಲಿ ಪಟ್ಟೆ ತಿಲುಕ ಕಸ್ತೂರಿ ಹೊಳೆಯುತಲಿ ಥಳ ಥಳ ಹೊಳೆವ ಮುಖಕಾಂತಿಯಲಿ ಅಹ ಕಡೆಗಣ್ಣ ನೋಟದಿ ಜಗವಮೋಹನ ಮಾಳ್ಪ ಅಗಣಿತ ಮಹಿಮನ ಸುಗುಣವ ಪಾಡುತ್ತ 8 ಕರುಣಿಗಳರಸನೆ ದೇವ ತನ್ನ ಶರಣು ಹೊಕ್ಕವರನ್ನೆ ಕಾವ ತನ್ನ ಭಜಕರಿಗಭಯವ ನೀವ ಇನ್ನು ಸರಿಯುಂಟೆ ಶ್ರೀರಮಾದೇವ ಅಹ ಪರಿಸರನೊಡೆಯನ ನಿರುತದಿ ಧ್ಯಾನಿಸಿ ದುರಿತಗಳಳಿದು ಸದ್ಗತಿಯ ಪಡೆವರೆಲ್ಲ 9 ಕಾಲಹರಣ ಮಾಡದಂತೆ ತ್ರಿ- ಧಾಮನ ಸ್ಮರಿಸುವ ಚಿಂತೆಯಲ್ಲಿ ಆಲಸ್ಯ ತೊರೆದಿಹರಂತೆ ಶ್ರೀನಿ- ವಾಸನೆ ಇದಕ್ಹೊಣೆಯಂತೆ ಅಹ ಕಾಲಕಾಲಕೆ ತಕ್ಕ ಲೀಲೆಯ ತೋರುವ ಪಾದ ಧ್ಯಾನಿಪ ಸುಜನರು 10 ಹತ್ತವತಾರದ ಹರಿಯು ತನ್ನ ಭಕ್ತರು ಸ್ತುತಿಸುವ ಧ್ವನಿಯ ಕೇಳಿ ಚಿತ್ತದಿ ನಲಿಯುವ ಪರಿಯು ಸುರರು ವಿಸ್ತರಿಸುವ ದಿನಚರಿಯು ಅಹ ಭಕ್ತರ ಸ್ತುತಿಸಲು ಮತ್ತವರಿಗೊಲಿಯುವ 11
--------------
ನಿಡಗುರುಕಿ ಜೀವೂಬಾಯಿ
ತಿರುಪತಿ ವೆಂಕಟರಮಣ ನೀನು ಧರಣಿಯೊಳ್ಸರ್ವರಿಗಧಿಕ ತಿರುಪತಿ ವೇಂಕÀಟರಮಣ ಪ ಸ್ವಾಮಿ ಪುಷ್ಕರಿಣಿಯ ತಟದಿ ವಾಸ ಮಾಡಿಕೊಂಡಿರುವೆಯೊ ನೀನು | ಭೂಮಿಯೊಳಗೆಲ್ಲ ಸಾಧು ಸಜ್ಜನರು ನೇಮದಿಂದಲಿ ನಿನ್ನ ಸೇವಿಪರು 1 ಮಂಜುಗುಣಿಯ ಪುರದೊಳಗೆ ಬಂದು ಕಂಜಾಕ್ಷ ವರ ಚಕ್ರ ಶಂಖ ಮತ್ತೆ ಶರಚಾಪಗಳನ್ನೆತ್ತಿ ಮೆರೆದೀ 2 ಜಗಕೆಲ್ಲ ಶೇಷಾದ್ರಿಯಂಥ ಕ್ಷೇತ್ರವಿಲ್ಲೆಂದು ತೋರಿಸುತಿರುವಿ | ಖಗವರನನ್ನೇರಿ ತಿರುಗಿ ಬಂದು ತಿರುಪತಿ ಕ್ಷೇತ್ರದೊಳಿರುವಿ 3 ಪಾದ ಮುಟ್ಟದೆ ಜಾನುಗಳಿಂದ | ಬಂದು ಸಾಲಿಗ್ರಾಮದ ಮಾಲೆಯನ್ನು ಪಾದಕರ್ಪಿಸಿ ಸ್ತುತಿಸಿದರು ನಿನ್ನ 4 ಬಂದು ರಾಜೇಶ ಹಯಮುಖ ನಿನಗೆ | ಮಾಲೆ ಹಾಕುತ ಮುಂದೆ ನಿಂದಳು ಶಂಕೆಯಿಲ್ಲದೆ ನಮಿಸಿದಳು ಮುದದಿ 5
--------------
ವಿಶ್ವೇಂದ್ರತೀರ್ಥ
ತಿರುಮಲೇಶನೆ ನಿನ್ನ ಚರಣ ಪಂಕಜಯುಗಲ ನೆರೆನಂಬಿದವ ಧನ್ಯನೋ ಪ ಗುರು ಮೂಲ ಪುರುಷ ನಾರಪ್ಪಯ್ಯ ಮುನಿಗೊಲಿದು ಕುರಿಕಿಹಳ್ಳಿಯಲಿ ಬಂದಾ ನಿಂದಾ ಅ.ಪ ವರಋಷಿಯ ಪೂರ್ವದಲಿ ತಿರುಪತಿಯ ಮುಟ್ಟಿ ಮಲ- ಗಿರಲು ಸ್ವಪ್ನವ ಕಾಣುತ ತುರುರೂಪದಲಿ ನಾನೆ ಬರುವೆ ಕಾ- ರ್ಪರ ವನಕೆ ದರುಶನವÀÀ ಕೊಡುವೆ ನಿರುತ ಬರುತ ಬರುತಲಿ ವಿಪ್ರ ತಿರುಗಿ ನೋಡಲು ಪದದಿ ಕಿರುಗಜ್ಜೆಗಳ ನುಡಿಸುತಾ ಕುರಿಕಿ ಹಳ್ಳಿಯ ಸುಮಂದಿರನೆನಿಸಿ ಸಿರಿಸಹಿತ ವರಶಿಲೆಯ ಮೇಲೆ ಪಾ ಲ್ಗರಿದು ನೆಲೆಸಿರುವಂಥ 1 ತೋಂಡಮಾನಕ್ಷಿತಿಪ ಪುಂಡಲೀಕಾದಿ ಬಹು ತೋಂಡರಿಗೆ ಒಲಿದು ದೇವಾ ಕುಂಡಲಿ ಪರ್ವತದಿ ತಂಡತಂಡದಿ ಭಕುತ ಮಂಡಲಿಗೆ ಫಲವ ಕೊಡುವ ದುಂಡುಮುತ್ತಿನಹಾರ ಮುಕುಟ ರತ್ನಾಭರಣ ಮಂಡಿತನಾಗಿ ಮೆರೆವ ಕಂಡೆನಾನಿಮ್ಮ ಪದ ಪುಂಡಲೀಕವನು ಈ ಗುಂಡಿನಾ ತಿಮ್ಮಯ್ಯನೆಂದು ಕರೆಸಿಕೊಳುವಿ 2 ಕರಮುಗಿವೆ ಮನ್ಮನದಿ ಕರುಣದಲಿ ತೋರೋತವ ಪರಮ ಸುಂದರ ಚರಣವ ನಿರುತ ಸ್ಮರಿಸುವ ಜನರ ದುರಿತ ತಿಮಿರಕೆ ದಿವಾ ಕರನೆನಿಸಿ ಸುಖವಗರಿವಾ ಸೇವ್ಯ ಕಾರ್ಪರನಿಲಯನೆನಿಸೆ ಬಹು ಶರಣು ಜನರನು ಪೊರಿಯುವಾ ವರಕೃಷ್ಣ ಗರ್ಭದಲಿ ಒಪ್ಪುವ ಪಿಪ್ಪಲಸ್ಥಶ್ರೀ ನರಹರಿಯ ಬಳಿಯಲಿರುವಾಮೆರೆವಾ 3
--------------
ಕಾರ್ಪರ ನರಹರಿದಾಸರು
ತಿರುಮಲೇಶವಿಠಲಾ | ಪೊರೆಯ ಬೇಕಿವಳಾ ಪ ನಿರುತ ನಿನ್ನಯ ನಾಮ | ಸ್ಮರಣೆ ಸುಖ ಕೊಡುತಾ ಅ.ಪ. ಸ್ವಪ್ನದಲಿ ತವರೂಪ | ಕನ್ಯೆತಾ ಕಾಣುತ್ತಾಉನ್ನಂತ ಹರ್ಷದಲಿ | ಭಿನ್ನವಿಸಿ ಇಹಳೋ |ಪನ್ನಗಾರಿಧ್ವಜನೆ | ಮನ್ನಿಸುತ ಮನ್ಮಾತಕನ್ಯೆಗಭಯದನಾಗಿ | ನನ್ನೆಯಿಂ ಸಲಹೋ 1 ಶೂನ್ಯ | ಭೋಧಾತ್ಮ ಶ್ರೀ ಹರಿಯೆಭೇದಪಂಚಕ ವರುಹಿ | ಮಧ್ವಮತ ದೀಕ್ಷಾ |ಸಾಧಿಸುವುದಿವಳಲ್ಲಿ | ಹೇದಯಾಂಬುದೆ ಪೂರ್ಣಭೋದಮುನಿಯ ಸನ್ನುತನೆ | ವೇದಾಂತ ವೇದ್ಯಾ 2 ವ್ರಾತ ಸಮತೆಲಿಯುಂಬಭೂತಿಕರುಣಿಸು ಹರಿಯೆ | ವಾತಾಂತರಾತ್ಮಾ |ಧಾತಾಂಡ ಸೃಜಿಸಿ ಹರಿ | ಓತ ಪ್ರೋತನು ಇರಲುಮಾತನೊಪ್ಪಿಸೆ ನಿನಗೆ | ಏತರವ ನಾನೂ 3 ಹರಿಗುರೂ ಸದ್ಭಕ್ತಿ | ಹಿರಿಯರಾ ಸತ್ಸೇವೆಕರುಣಿಸುತ ಸಾಧನದ | ವರಮಾರ್ಗ ತೋರೋ |ಶರಣಜನ ವಾತ್ಸಲ್ಯ | ಬಿರಿದು ಪೊತ್ತಾಮೇಲೆಕರುಣಾಬ್ಧಿಪೂರ್ಣೆಂದು | ಕರಪಿಡಿಯೊ ಇವಳಾ 4 ಸಾಮಗಾನವಿಲೋಲ | ಭಾಮೆರುಕ್ಷ್ಮಿಣಿಲೋಲಸಾಮಾಜಾವರವರದ | ಭೂಮಗುಣಪೂರ್ಣ |ಕಾಮಾರಿಸನ್ನುತನೆ | ಕಾಮಿತಪ್ರದನಾಗೊಕಾಮನಯ್ಯನೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ತಿರುವಲ್ಲಿಕೇಣಿ (ಚೆನ್ನೈ) ದರುಶನ ಮಾಡುವ ಬಾಬಾರೋ ಪ ಪರಮ ಪುರುಷನವ ಪಾರ್ಥನ ಸೂತನು ವರಗೀತಾಮೃತವುಸುರಿದವನು ಅ.ಪ ಶರನಿಧಿಯೊಳು ಮಿಂದು ಐತರುವವರಿಗೆ ವರದಾಭಯಕರ ತೋರುವವನು ಪರಮಾಚಾರ್ಯಗೆ ದರುಶನವಿತ್ತು ಪರಭಕ್ತಿಯ ಸಾರಿದನಿವನು 1 ಚಾರು ವೇದಂಗಳ ತುರಗವ ಗೈದ ಧಾರುಣಿಯನು ರಥಹೂಡಿದನು ಮರುತಾತ್ಮಜನನು ಧ್ವಜಕೇರಿಸಿದನು ದುರುಳ ಕೌರವನ ಧುರದಿ ಸೋಲಿಸಿದನು2 ಹತ್ತವತಾರದಿ ಬಂದವನಿವನೇ ಮತ್ತದೈತ್ಯರನೆಲ್ಲ ಕೊಂದವನಿವನೇ ಉತ್ತಮಭಕ್ತರ ಕಾಯಲು ಮಾಂಗಿರಿ ಅತ್ತ ನಿಂದಾ ರಂಗನಾಥನು ಇವನೇ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತಿಳಿ ಆದೆ ದೇವನು ಇರುತಿಹೆ ನೀ ಪ ಅದು ಕೊನೆಯಾಚೆಗೆ ಬೇರಿಲ್ಲ ಅದು ಮನಸಿಗೆ ನಿಲುಕುವದಲ್ಲ ಅದನನು ಭವದಲಿ ತಿಳಿಯಲ್ಲ ಬಿಡು ಮನಸಿನ ಗೊಡವೆಯನೆಲ್ಲ ಇದೆ ಜ್ಞಾನಾಗ್ನಿಯು ಸುಡುತಿಹುದೋ ಒದಗಿದ ಕರ್ಮದ ಕಾಷ್ಮಗಳ 1 ಮನವಡಗಿದ ಪದ ಪರಿಚಯವ ತನಿನಿದ್ರೆಯ ಮೀರಿದ ಸ್ಥಿತಿಯ ಅನುಭವದಲಿ ತರುವುದೆ ಯೋಗ ಅದನೇ ಯತ್ನದಿ ಸಾಧಿಸು ತಾ ನನಸಿನಲೇ ಗುರು ಮುಖದಿಂದ ಕೇಳಿ ನಿವೇಕದಿ ತಿಳಿ ಬೇಗಾ 2 ಎಚ್ಚರವಿದು ತಿಳಿ ಕನಸೆಂದು ಅಚ್ಚಳಿಯದ ಸ್ಥಿತಿ ನಾನೆಂದು ನಿಚ್ಚಳದಲಿ ನಿಶ್ಚಯಿಸುವದು ತುಚ್ಛದ ತೋರಿಕೆ ಎಂದು ತಿಳಿ ಸಚ್ಚಿತ್‍ಶಂಕರ ಬೋಧವನಾ 3
--------------
ಶಂಕರಭಟ್ಟ ಅಗ್ನಿಹೋತ್ರಿ
ತಿಳಿ ತಿಳಿ ನೀ ತಿಳಿ ತಿಳಿ ನೀ ಅಳಿಯದಾಗಿಹ ಸ್ಥಿರಪದವಾ ಪ ತೋರಿ ಅಡಗುವ ಜಗಕಾಧಾರ ತೋರಿಕೆ ಅಡಗಲು ತಾನುಳಿವಾ ಪಾರಮಾರ್ಥವೆ ತಾನೆನುತಾ 1 ಅನಿಸಿಕೆಯೆಲ್ಲವು ಪುಸಿಯಿಹುದೆಂದು ಘನಾನುಭವವಾ ನೀ ಪಡೆಯುತಲಿ ಅನುದಿನ ಮನನವ ಮಾಳ್ಪುದು ನಿನ್ನೋಳು ಅನುಭವವಾ ದೃಢಪಡಿಸೈ ವಿನುತ ಶಂಕರಗುರುನುಡಿಯಾ 2
--------------
ಶಂಕರಭಟ್ಟ ಅಗ್ನಿಹೋತ್ರಿ
ತಿಳಿ ಸತ್ಯರೂಪವÀ ಪರಮಾನುಭವವ ಸುವಿಚಾರದಿಂದ ಯೋಚಿಸು ಜೀವಾ ಪ ನಾ ನೀನು ಎನುವಾ ಇದು ಅದು ಎನುವ ನಾನಾತ್ಮಭಾವಾ ಪುಸಿಯಿದು ಜೀವಾ ಏನೊಂದು ಮಿಲ್ಲದೆ ತಾನುಳಿದಿರುವ ಸ್ವಾನುಭವಾತ್ಮಾ ಸತ್ಯನಾಗಿರುವ 1 ಕರ್ತೃವೆನಿಸದ ಭೋಕ್ತøವೆನಿಸದ ಅನಿಸಿಕೆಯಳಿದಾ ನಿತ್ಯನಿರಂಜನ ಮಾಯಾವಿಲಾಸದಿ ತೋರುವನೀಪರಿ ಕನಸಿನೊಲಿದುವೇ ಪುಸಿ ಈ ಜಗವು 2 ಅವಿಚಾರಗಳಿಗೆ ಬೇರಾಗಿ ತೋರೇ ಸುವಿಚಾರದಿಂ ನೋಡೇ ತಿಳಿವುದು ಇದುವೇ ಅದೇ ಪರಮಾತ್ಮನೇ ನೀನಿರುವಿಯಿದೋ ಗುರು ಶಂಕರರಾರ್ಯನ ವರಬೋಧವಿದೋ 3
--------------
ಶಂಕರಭಟ್ಟ ಅಗ್ನಿಹೋತ್ರಿ
ತಿಳಿಯದು ಶ್ರೀ ಗುರು ಮಹಿಮೆ ಧ್ರುವ ತೋರುವ ರೂಪದ ಮಾಟ ನಿರ್ಮಿಸಿಹ್ಯ ಬ್ರಹ್ಮ ವಿಷ್ಣು ಮಹೇಶ ಉತ್ಪತ್ತಿ ಸ್ಥಿತಿ ಲಯದಾಟ ಮೋಹದ ಅವ್ಹಾಟ ಬ್ಯಾರಿಹ ಅನಿಮಿಷ ನೋಟ 1 ಕಂಭ ಸೂತ್ರದ ವಿಚಾರ ನಿತ್ಯವಿಲ್ಲದನಿತ್ಯದ ಆಟವು ನಂಬಬಾರದು ಸಂಸಾರ ನಂಬಿದವರು ಇಂಬಿಲ್ಲಿದೆ ಹೋದರು ಮಿತಿ ಇಲ್ಲದೆ ಅಪಾರ ನಿಲುಕಡೆ ಇಲ್ಲದೆ ಸೂರ್ಯಾಡುವ ಬಗೆ ಇದು ಯಾತನೆ ಶರೀರ 2 ಕಂಡಂತಾಗುವುದೇನು ಸಂತೋಷ ಕಂಡಂತನುಭವಿಸುವದೇನು ಕ್ಲೇಶ ಪರಿ ಹೋದರು ಶತಂ ಭೀಷ್ಮ ತೋರು ಗುರು ಜಗದೀಶ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಿಳಿಯದೊ ನಿನ್ನಾಟ ತಿರುಪತಿಯ ವೆಂಕಟ ಪ. ನೀರೊಳು ಯಳವ ಮೋರೆಯ ನೆಳಲ ನೋಡುವಿ ಸುಳಿವರಂಬುಧಿ ಇಳೆಯನಾಳುವ ಭಳಿರೆ ಭಾರ್ಗವ ಖಳನ ಛೇದಿಸಿ ಕೊಳಲ ದನಿಯನು ನಳಿನಮುಖಿಯರಿಗೆ ನಾಚಿಸುವದಿದೊಳಿತೆಯೇಳು ಹವಣಗಾರನೆ 1 ಆರುಬಲ್ಲರು ನಿನ್ನ ಶ್ರೀ ಲಕ್ಷ್ಮಿಯ ಮನಸಿಗೆ ತೋರದಿಹ ಪರಬ್ರಹ್ಮ ಉಳಿದವರು ಬಲ್ಲರೆ ನೀರಜಾಸನ ಬೊಮ್ಮಾ ಇದು ನಿಮ್ಮ ವರ್ತಿ ಭಾರ ಬೆನ್ನಲಿ 2 ಭೂರಿ ಮಾರ ಜನಕನೆ ಮೆರಿವೆ ಕೋಮಲಾಂಗನೆ 3 ಸಕಲ ಮಾಯವಿದೇನೊ ತ್ರಿವಿಕ್ರಮನ ಪಾಲಿಸಿ ಸಕಲನುಳಿಹಿದೆ ನೀನು ಭಕುತಿಯಿಂದಲಿ ಸ್ತುತಿಪರಿಗೆ ಸುರಧೇನು ಸುಮನಸರ ಭಾನೂ ಅಖಿಳವೇದೋದ್ಧಾರ ಗಿರಿಧರ 4 ನಿಖಿಳ ಭೂಮಿಯ ತಂದ ನರಹರಿ ಯುಕುತಿಯಲಿ ಆಳಿದೆ ಭಕ್ತವೃಂದಕೆ ಸುಖವ ತೋರುವ ವೇಣು ಗೋಪಾಲನೆ ರುಕುಮನನುಜೆಯ ರಮಣ ಬೌದ್ಧನೆ ಲಕ್ಷುಮಿಯರಸನೆ ಕಲ್ಕಿ ರೂಪನೆ 5 ನಿನ್ನ ರೂಪವಿದೆಲ್ಲಾ ನೋಡುವರಿಗೆ ಕಣ್ಣು ಸಾಸಿರವಿಲ್ಲಾ ಪಾಡಿ ಪೊಗಳಲು ರಂನ್ನಘಾತಿದೆನಲ್ಲಾ ಕಂಣಮುಚ್ಚದೆ ಬೆಂನ್ನ ತೋರುವೆ ಮಂಣ ಕೆÉದಿರದಿ 6 ಚಿಂಣಗೊಲಿದನೆ ಸಂಣವಾಮನ ಪುಣ್ಯಪುತ್ರನೆ ಹಂಣುಸವಿದನೆ ಬೆಂಣೆಗಳ್ಳನೆ ಹೆಂಣುಗಳ ವ್ರತಗಳೆವ ಹೆಳವನಂದು ಗೆಲಿಸಿದ ರಂಗ ದೇವೋತ್ತುಂಗನೆ 7
--------------
ಹೆಳವನಕಟ್ಟೆ ಗಿರಿಯಮ್ಮ
ತಿಳಿಯಿರೋ ಸಮ್ಮಿಂದ ಹೇಳುವೆ ಸುಧಾನಂದ ಪ ಉಂಬವ ತಾನಾರು ಉಣಬಲ್ಲವನಾರುಸಂಭವಿಸುವನಾರು ಸಮನಿಸಿ ಇಂಬಾಗಿಹನಾರು 1 ಕಣ್ಣಿಂದಲೆ ನೋಡಿ ನೋಡುವ ಕಣ್ಣು ಕಾಂಬುದೆ ಖೋಡಿಕಣ್ಣೊಳಗದೆ ನೋಡಿ ಕಂಡಾ ಕಣ್ಣಹುದೆಂದಾಡಿ 2 ಕಿವಿಯಿಂದಲೆ ಕೇಳಿ ಕಿವಿಯನು ಕಿವಿಯೆ ಗಯ್ಯಾಳಿಕಿವಿಯೆ ದಿವಾಳಿ ಕಿವಿಗಾ ಕಿವಿಗರಿವಹುದ್ದೇಳಿ 3 ನಾಲಗೆ ನುಡಿಯಿರಲಿ ನುಡಿವುದೆ ನಾಲಗೆ ಬರಿ ತೊಗಲುನಾಲಗೆಯೊಳಗಿರಲು ಮೂಲದ ನಾಲಗೆಯಲಿ ಬರಲು 4 ಮೂಗಿನ ಮೂಲಕ ಪ್ರಾಣ ಅರಿವಡೆ ಮೂಗು ಬಲ್ಲುದೆ ಕೋಣಮೂಗರಿದವ ಜಾಣ ಮೂಗದು ನಿರ್ವಾಣ5 ತನುವಿನ ಒಳಗಿರ್ದು ಚೇತನ ಜನಿಸುತಲಿರುತಿರ್ದುಇನಿತಾದಲಿರ್ದು ಬೆಳಗುವ ತಾನೆ ತಾನಿರ್ದು 6 ರೂಪಕೆ ವಿರಹಿತನೆ ತೋರ್ಪಾ ರೂಪವೇ ತಾನಿಹನಾಲೇಪಕೆ ದೂರಿಹನಾ ಚಿದಾನಂದಪತಿ ಗುರುವವನಾ7
--------------
ಚಿದಾನಂದ ಅವಧೂತರು
ತಿಳಿಯೊ ಮನವೆ ನಿಜವಸ್ತು ಖೂನ ಅಳಿಯೊ ದೇಹ ನಾನೆಂಬುವಭಿಮಾನ ಹೊಳಿಯೊ ಸದ್ಗುರು ಪಾದದಲಿ ನೀ ಪೂರ್ಣ 1 ಹುಟ್ಟಿ ಬಂದೇನು ಪುಣ್ಯ ಪುರುಷಾರ್ಥ ಘಟ್ಟಿಗೊಳ್ಳದೆ ನಿಜ ಸುಹಿತಾರ್ಥ ನಿಷ್ಠೆ ಹಿಡಿಯದನ ಜನ್ಮ ವ್ಯರ್ಥ ಮುಟ್ಟಿ ತೋರುವ ಶ್ರೀ ಗುರು ಪರಮಾರ್ಥ 2 ಗುರ್ತು ತಿಳಿಯೊ ಜನುಮಕೆ ಬಂದ ಮ್ಯಾಲೆ ಮರೆತು ಮೈಮರೆವದೇನು ತಾ ಮೇಲೆ ಅರ್ತು ನಡೆವದು ನಿನಗೇನು ಸೋಲು ಕರ್ತು ಸದ್ಗುರು ಸ್ಮರಿಸೋ ಆವಾಗಲೂ 3 ಎಲ್ಲಾರಂಥ ತಾನಲ್ಲೊ ಗುರುನಾಥ ಸುಲ್ಲಭದಿಂದ ದೋರುವ ಸುಪಥ ಅಲ್ಲೆ ದೋರ್ವದು ಸಕಲ ಹಿತಾರ್ಥ ಬಲ್ಲ ಮಹಿಮರೆ ತಿಳಿವರೀ ಮಾತ 4 ಭಾಸುತದೆ ಭಾಸ್ಕರ ಕೋಟಿ ಕಿರಣ ಲೇಸಾಗಿ ಹೋಗೊ ಗುರುವಿಗೆ ಶರಣ ದಾಸಮಹಿಪತಿ ಸ್ವಾಮಿ ದೀನೋದ್ಧಾರಣ ಭಾಸಿ ಪಾಲಿಸುವ ತಾ ಸುಕರಣ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಿಳಿಯೋ ಮನವೇ ನಿಜ ಘನವಾ | ಕಳಿಯೋ ಹಮ್ಮಿನ ಅವಗುಣವಾ ಪ ಸದ್ಗುರು ಶರಣವ ನೀ ಬ್ಯಾಗ | ಸದ್ಗುಣದಲಿಹುದು ಜಗದೊಳಗ | ತದ್ಗತ ಬೋಧವರೆದು ಈಗ | ಸದ್ಗತಿ ಕಾಣಿಸುವದು ನಿನಗ 1 ಪಿಡಿಯದೆ ನಾನಾ ಬಯಕೆಯನು | ತಡೆಯದೆ ಬಿಡು ಕುಜನಾಶ್ರಯನು | ಇಡು ಗುರು ಪದ ಭಕುತಿಯನು | ಪಡೆ ದೃಷ್ಟಿಯ ಘನ ಸಮತೆಯನು 2 ಬ್ಯಾರೆ ಬ್ಯಾರೆ ನಗದಾಕಾರಾ | ತೋರಿದರೇನದು ಬಂಗಾರಾ | ಈ ರೀತಿ ಮಾಯದ ವ್ಯವಹಾರಾ | ಈರೇಳು ಜಗ ಚಿನ್ಮಯ ಸಾರಾ 3 ಗೋಡಿಯಿಂದಲಿ ಚಿತ್ರಗಳೆಲ್ಲಾ | ರೂಢಿಸಿ ದೋರಿತು ಜನರೆಲ್ಲಾ | ಆಡಲು ಯರಡಕ ಹೊರತಿಲ್ಲಾÀ | ನೋಡಲಾಯಿತು ತಾನೇಯಲ್ಲಾ 4 ಹಾಲುಕ್ಕಿದ ಸೋರೆಯ ಪರಿಯಾ | ಜ್ಯಾಳಿಸಬ್ಯಾಡಾ ಯುವ ಬರಿಯಾ | ಕೇಳಿಕೋ ಮಹಿಪತಿ ಸುತ ಧೋರಿಯಾ | ಬಾಳು ಗಳೆದು ದುಸ್ತರಿಯಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ತುಂಗಭದ್ರ ನದಿ ತೀರದಿ ನೆಲಸಿಹನ್ಯಾರೆ ಪೇಳಮ್ಮಯ್ಯ ಪ. ರಂಗ ತಾನು ಇಲ್ಲಿರುತಿಹನಮ್ಮ ಅ.ಪ. ಶಂಖ ಚಕ್ರ ತ್ರಿಶೂಲವ ಧರಿಸಿಹನ್ಯಾರೇ ಪೇಳಮ್ಮಯ್ಯ ಶಂಕಿಸದಂದದಿ ತೋರುವನಮ್ಮ 1 ಈ ಪರಿರೂಪವ ಧರಿಸಲು ಕಾರಣವೇನೇ ಪೇಳಮ್ಮಯ್ಯ ಈ ಪರಿರೂಪವ ಧರಿಸಿಹನಮ್ಮ 2 ಪರಿ ಶುದ್ಧ ಸಾತ್ವಿಕರಿಗೆ ಹ್ಯಾಗೇ ಪೇಳಮ್ಮಯ್ಯ ಶುದ್ಧ ಜ್ಞಾನವನಿತ್ತು ಸಲಹುವನಮ್ಮ 3 ವಿಷ್ಣು ಭಕ್ತರ ಮನಸಿಗೆ ತೋರುವ ಮತಿ ಏನೇ ಪೇಳಮ್ಮಯ್ಯ ಬಿಟ್ಟಿರಲಾರದ ಗುಟ್ಟು ಕಾಣಮ್ಮ 4 ಪರಿ ಲೀಲೆ ಇದೇನೆ ಪೇಳಮ್ಮಯ್ಯ ಹರಿಯು ತಾನು ಒಲಿಯನು ಕಾಣಮ್ಮ 5 ಪರಿ ಹ್ಯಾಗೇ ಪೇಳಮ್ಮಯ್ಯ ಪರಿ ಧರಿಸುವದೊಂದರಿದೇನಮ್ಮ 6 ಹರಿಹರ ಕ್ಷೇತ್ರದಿ ನೆಲಸಿಹ ಸ್ವಾಮಿಯ ಭಜಿಸುವದ್ಹ್ಯಾಗೇ ಪೇಳಮ್ಮಯ್ಯ ಕರಕರೆ ಭವವನು ಕಳೆಯಬೇಕಮ್ಮ 7 ಶ್ರೀಸತಿ ಪಾರ್ವತಿ ಸಹಿತದಿ ನೆಲಸಿಹನ್ಯಾರೇ ಪೇಳಮ್ಮಯ್ಯ ಶೇಷಭೂಷಣ ಸಹ ಶ್ರೀನಿವಾಸ ಕಾಣಮ್ಮ 8
--------------
ಅಂಬಾಬಾಯಿ