ಒಟ್ಟು 3600 ಕಡೆಗಳಲ್ಲಿ , 124 ದಾಸರು , 2704 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನಿಂದು ದರ್ಶನ ನೀಡೊ ಅರವಿಂದ ಮಧ್ಯದಲಿ ಕಂದರ್ಪಜನಕ ದೇವ ಪ. ನಂದಕಂದನೆ ನಿನ್ನ ಮಂದಮತಿ ನಾನೆಂತು ವಂದಿಸಿ ಸ್ತುತಿಪೆನಯ್ಯ | ಜೀಯ ಅ.ಪ. ಸತ್ವಗುಣವಾರಿಧಿಯೆ ತತ್ವಗಳ ತಿಳಿಸೆನಗೆ ಉತ್ತಮ ಪಥವ ತೋರೋ ನಿತ್ಯ ಸಂಸಾರದಲ್ಲಿ ಸುತ್ತಿಸದೆ ನಿನ್ನಪದ ಭೃತ್ಯಸಂಗದಲಾಡಿಸೊ | ಸತತ 1 ವಿಶ್ವತೈಜಸಪ್ರಾಜ್ಞತುರಿಯ ರೂಪಗಳಿಂದ ವಿಶ್ವೇಶ ದೇಹದೊಳಗೆ ವಿಶ್ವವ್ಯಾಪಕ ಹರಿಯೆ ಸ್ವಪ್ನ ಜಾಗ್ರತೆ ಸುಷುಪ್ತಿ ವಿಶ್ವಮಯ ಜೀವಕೀವೆ | ಕಾವೆ 2 ತತ್ವಾಧಿಪತಿಗಳೊಳು ವ್ಯಾಪ್ತನಾಗಿರುತ ನೀ ಮತ್ತೆಲ್ಲ ಕಾರ್ಯ ಮಾಳ್ಪೆ ಚಿತ್ತಾಭಿಮಾನಿ ಶ್ರೀ ಮಾರುತಾಂತರ್ಯಾಮಿ ವ್ಯಾಪ್ತನಾಗಿರುವೆ ಜಗದಿ | ಮುದದಿ 3 ಮಧ್ಯನಾಡೀ ಹೃದಯ ಮಧ್ಯಪದ್ಮದ ಮಧ್ಯೆ ಇದ್ದೆನೆಗೆ ರೂಪ ತೋರೋ ಒದ್ದಾಡುವೆನೊ ಭವದಿ ಉದ್ಧರಿಸಬೇಕಿನ್ನು ಒದ್ದು ತಾಪತ್ರಯವನು | ನೀನು 4 ಶ್ರೀನಿವಾಸನೆ ನಿನ್ನ ಧ್ಯಾನ ಅನವರತದಲಿ ಮಾನಸದಲೆನಗೆ ನೀಡೋ ಶ್ರೀನಿಧೇ ಗೋಪಾಲಕೃಷ್ಣವಿಠ್ಠಲ ಎನ್ನ ಸಾನುರಾಗದಲಿ ಸಲಹೋ ಎಲವೋ 5
--------------
ಅಂಬಾಬಾಯಿ
ನಿನಗಿಂತ ಅಧಿಕರು ನಿನ್ನಯ ಭಕುತರು ಇದಕೆ ಅನುಮಾನಗೊಳಬೇಡ ಅಂಬುಧಿಶಯನ ಪ ಪದಿನಾಲ್ಕು ಲೋಕಗಳು ಪೊತ್ತೆನೆಂದೆನಬೇಡ ಅದುಸಹಿತ ನಿನ್ನನು ಹೃದಯದೊಳಗೆ ಹುದುಗಿಕೊಂಡಿಪ್ಪರೋ ಪದುಮನಾಭನೆ ಕೇಳೊ ಇದರಿಂದ ಸರಿಮಿಗಿಲು ಆರೊ ಜನದೊಳಗೆ 1 ವನಜಾಂಡಗಳೆಲ್ಲ ಪೊತ್ತೆನೆಂದೆನಬೇಡ ಕೊನೆಯ ನಾಲಿಗೆಯಲ್ಲಿ ನಿನ್ನ ನಿಲಿಸಿ ಭಾರ ಇಲ್ಲದಂತಿಪ್ಪರೊ ಘಣಿಶಯನ ಅಧಿಕಸಮರಾರೊ ಜಗದೊಳಗೆ 2 ಅಣುಮಹತ್ತು ಆದೆನೆಂದೆನೆಬೇಡವೊ ಗಣನೆ ಇಲ್ಲದೆ ನಿನ್ನ ಕರದಿ ಮುಚ್ಚಿ ಘಣಿ ಆಹಾರಗಾಮಿ ನಾ ವಿಜಯವಿಠ್ಠಲ ನಿನಗೆ ಮಣಿದು ಲೆಕ್ಕಿಸರೋ ನಿನ್ನನು ಮೆಚ್ಚಿದಾಳುಗಳು3
--------------
ವಿಜಯದಾಸ
ನಿನಗಿನಿತು ಮಮಕಾರವಿರಲೆನಗೆ ಭಯವೇನು ಚಿನುಮಯನೆ ಧನ್ಯ ನಾನು ಪಜನಕ ನೀನೆನಗಾದೆ ತನುಜ ನಾ ನಿನಗಾದೆ ಘನಮಹಿಮ ಕಾಮಧೇನು ನೀನು ಅ.ಪಜನ್ಮಕೋಟಿಗಳಲ್ಲಿ ಪುಣ್ಯಕರ್ಮಗಳನ್ನು ಮುನ್ನ ಮಾಡಿಸಿದೆ ನೀನುಮುನ್ನಿನಾ ದೇಹಗಳು ಭಿನ್ನವಾಗಲು ಕರ್ಮವಿನ್ನುಳಿವ ಬಗೆಯದೇನುಚಿನ್ಮಯನೆ ತನುಕರಣ ಭಿನ್ನವಾದರು ಸಾಕ್ಷಿ ನಿನ್ನೊಳಿಂಬಿಟ್ಟೆಯವನುಸನ್ನುತನೆ ಬಾಲಕನಿಗುಣ್ಣ ಕಲಿಸುವ ತೆರದಿ ನಿನ್ನನಿತ್ತುದೇನೆಂಬೆನು ನಾನು 1ದುಷ್ಟಸಂಗವ ಬಿಡಿಸಿ ದುರ್ಬುದ್ದಿಯನು ಕೆಡಿಸಿ ಶಿಷ್ಟರೊಳು ತಂದು ನಿಲಿಸಿಕಷ್ಟಸಾಧನಗಳನು ಮುಟ್ಟಲೀಸದೆ ಸುಲಭ ನಿಷ್ಠೆಯಲಿ ಚಿತ್ತವಿರಿಸಿಹುಟ್ಟುಹೊಂದುಗಳನ್ನು ಕೊಟ್ಟು ಮೋಹಿಸುತಿರುವ ಪುಟ್ಟ ಫಲಗಳ ತೇಲಿಸಿಮುಟ್ಟಿ ನಿನ್ನಯ ಪದವನಿಟ್ಟು ಹೃದಯಾಂಬುಜದಲಿಷ್ಟಮೋಕ್ಷವ ತೋರಿಸಿ ನಿಲಿಸಿ 2ವಿದ್ಯವಿಸ್ತರವಾದರದ್ದುವದು ಗರ್ವದಲಿ ಬುದ್ಧಿ ನಿಲ್ಲದು ನಿನ್ನಲಿಇದ್ದು ವೃದ್ಧರ ಪಥದಿ ಹೊದ್ದಿ ಶುದ್ಧತ್ವವನು ಶ್ರದ್ಧೆ ಸೇರದು ನಿನ್ನಲಿಉದ್ದುರುಟುತನದಿಂದ ಬಿದ್ದು ವಾದದ ಮಡುಹವದ್ದು ಸುಕೃತವ ಕಾಲಲಿಇದ್ದ ನಿಜಸ್ಥಿತಿುವಗೆ ಸಿದ್ಧವಾಗದುಯೆಂದು ನಿರ್ಧರಿಸಿ ನೀನೆ ದಯದಿ ಇಲ್ಲಿ 3ಅನಿಮಿತ್ತ ಬಂಧು ನೀನೆಂಬುದನು ಫಲುಗುಣನು ಮನದೊಳೆಣಿಸಿದುದಿಲ್ಲವೆಅಣುಮಾತ್ರದುಪಕಾರ ಜನರಿಂದ ನಿನಗುಂಟೆ ಮನಕೆ ದೂರ ನೀನಲ್ಲವೆವನಜಭವ ದಿಕ್ಪಾಲ ಮನುಗಳೈಶ್ವರ್ಯಗಳು ನಿನಗೆ ಗಣನೆಗೆ ಬರುವವೆಇನಿತು ಬ್ರಹ್ಮಾಂಡಗಳ ನೆನದು ನಿರ್ಮಿಸಿ ಬಳಿಕ ಕ್ಷಣದೊಳಳಿಸುವದಿಲ್ಲವೆ ನಿಜವೆ 4ನಿನ್ನ ಭಜಿಸುವ ಭಾವವಿನ್ನುಂಟೆ ಜಡಮತಿಗೆ ಅನ್ಯವಿಷಯದಿ ಮೋಹಿಸೆತನ್ನ ಮರೆದತಿದುಃಖದುನ್ನ ತದ ಸಂಸಾರ ವೆನ್ನದೆನ್ನುತ ದುಃಖಿಸೆನಿನ್ನ ನೆನಯದೆ ಬಹಳ ಜನ್ಮವೇಗದ ನದಿಯಲುನ್ನಿಸುವ ಕರ್ಮ ಹೊದಿಸೆಭಿನ್ನ ಬುದ್ಧಿಯಲೊಂದಿ ತನ್ನ ತಾನರಿಯದಿರೆ ನಿನ್ನಿಂದ ಮುಕ್ತನೆನಿಸೆ ನಿಲಿಸೆ 5ಚಲಿಸದಂದದಿ ಮನವ ನಿಲಿಸಿ ನಿನ್ನೊಳು ಬಾಹ್ಯವಳಿವ ಬಗೆುಲ್ಲವಲ್ಲನಳಿನನಾಭನೆ ನೀನು ಸುಲಭನೇ ಯೋಗಿಗಳು ಬಳಲುವರು ಕಾಣರಲ್ಲನಿಲುವೆ ಮನದಲಿ ನೀನೆ ಸಲಹೆಂದು ಭಜಿಸಿದರೆ ಗೆಲರೆ ಸಂಸೃತಿಯನೆಲ್ಲತಿಳುಹಿ ಸುಲಭದ ದಾರಿಯೊಳಗೆನ್ನ ನೀನಿರಲು ಬಳಲುವಿಕೆುಲ್ಲವಲ್ಲಾ ಲಲ್ಲಾ 6ಬಿನುಗು ಭೋಗವನುಂಡು ಜುಣುಗಿ ಮತ್ತದರಲ್ಲಿ ಮನವೆರಗಿ ಮುಳುಗುತಿಹುದುತನುವಿನಭಿಮಾನದಲಿ ನೆನಹು ತಗ್ಗದು ಮತ್ತೆ ಕನಲಿ ಮುರಿದೇಳುತಿಹುದುಅನುವರಿಯದಂಧತಮದಲಿ ತಾನು ನೆರೆಹೊಕ್ಕು ಘನದುಃಖಬಡುತಲಿಹುದುಇನಿತವಸ್ಥೆಯಲಿರುವ ಮನಕೆ ಸಿಕ್ಕಿರಲೆನ್ನ ದಿನಕರನೆ ಕೈವಿಡಿವುದು ಸೆಳೆದು 7ಧ್ಯಾನ ಧಾರಣೆುಂದ ನಿನ್ನ ಮೂರ್ತಿಯ ನಿತ್ಯ ಮಾನಸದಿ ನಿಲಿಸಬೇಕುಧ್ಯಾನಾಂಗ ನಿಯಮಗಳನಭ್ಯಾಸವಂ ಮಾಡಿ ತಾನು ತಾನಾಗಬೇಕುಏನೊಂದ ಕಂಡರೂ ನಾಮರೂಪವ ಬಿಟ್ಟು ನೀನೆಂದು ನಿಲ್ಲಬೇಕುಏನೆಂಬೆನಿವನೆಲ್ಲ ನೀನೆ ಸಾಧಿಸಿಕೊಟ್ಟು ದೀನನನು ಸಲಹಬೇಕು ಸಾಕು 8ಪರಮ ಕರುಣಾನಿಧಿಯೆ ಪರಿಪೂರ್ಣ ಪರಮೇಶ ಪರಮಸಂವಿದ್ರೂಪನೇಶರಣಜನಸುರಧೇನು ದುರಿತಭೂಧರಕುಲಿಶ ಕರಿವರನ ರಕ್ಷಿಸಿದನೇಮರೆಯೊಕ್ಕೆ ನಿನ್ನಡಿಯ ಮರವೆಯನು ಪರಿಹರಿಸು ಅರಿವಿನೊಳು ಪೊಗಿಸು ನೀನೆತಿರುಪತಿಯ ನೆಲೆವಾಸ ವರದ ವೆಂಕಟರಮಣ ಅರವಿಂದದಳನೇತ್ರನೆ ಅಜನೆ 9ಓಂ ಜಲಕ್ರೀಡಾಸಮಾಸಕ್ತಗೋಪೀವಸ್ತ್ರಾಪಹಾರ ಕಾಯ ನಮಃ
--------------
ತಿಮ್ಮಪ್ಪದಾಸರು
ನಿನಗೇನು ಘನವೇನು ವನಜಾಕ್ಷ ವೆಂಕಟೇಶ ಮನಕೆ ಬೇಕಾದುದ ಇತ್ತು ರಕ್ಷಿಸುವರೆ ಪ ದೇಶ ನಿನ್ನದು ಬಹುಕೋಶ ನಿನ್ನದು ಜಗ ದೀಶ ನಿನ್ನನು ಭಾಗ್ಯಲಕುಮಿ ಸೇವಿಸುವಳು ಆಸೆಯಿಂದಲಿ ನಿನ್ನ ಚರಣವ ಮೊರೆಹೊಕ್ಕೆ ದೋಷವ ಕಳೆದು ಎನ್ನ ಲೇಸಿತ್ತು ಸಲಹಯ್ಯ 1 ಅಣುವಾಗಲೂ ಬಲ್ಲೆ ಮಹತ್ತಾಗಲೂ ಬಲ್ಲೆ ಅಣುಮಹತ್ತಿನೊಳಗೆ ಗುಣವ ತೋರಲು ಬಲ್ಲೆ ಕ್ಷಣಕೆ ಮುನಿಯ ಬಲ್ಲೆ ಆ ಕ್ಷಣಕೆ ರಕ್ಷಿಸಬಲ್ಲೆ ಗುಣಗಳವಗುಣಗಳ ನೋಡದೆ ಸಲಹಯ್ಯ 2 ಬಟ್ಟೆನು ಕೈಯ ಮುಟ್ಟಿ ರಕ್ಷಿಪರಿಲ್ಲ ಬೆಟ್ಟದೊಡೆಯ ಮನದಭೀಷ್ಟವೆಲ್ಲವನಿತ್ತು ದೃಷ್ಟಿಯಿಂದಲೆ ನೋಡಿ ಒಟ್ಟೈಸಿ ಸಲಹಯ್ಯ 3 ತಂದೆ ತಾಯಿಗಳಿಲ್ಲ ಬಂಧು ಬಾಂಧವರಿಲ್ಲ ಕುಂದು ಹೆಚ್ಚಿಯೆ ನಿರ್ಬಂಧ ಬಡಿಸುತಿದೆ ಮಂದರಾದ್ರಿಯ ಗೋವಿಂದ ನಿನ್ನಯ ಪಾದ ದ್ವಂದ್ವವ ತೋರಿಸಿ ಚಂದದಿ ಸಲಹಯ್ಯ 4 ಮನದ ಸಂಕಲ್ಪಕೆ ಅನುಗುಣವಾಗಿಯೆ ಘನವಿತ್ತು ಕರೆದೊಯ್ದು ವಿನಯದಿ ಮನ್ನಿಸಿ ಮನೆಗೆ ಕಳುಹು ನಮ್ಮ ವರಾಹತಿಮ್ಮಪ್ಪನೆ ತನು ಮನದೊಳಗನುದಿನದಿನ ಸಲಹಯ್ಯ 5
--------------
ವರಹತಿಮ್ಮಪ್ಪ
ನಿನ್ನ ಅರುಸುತನಕ್ಕೇನೆಂಬೆನೊ ವೆಂಕಟೇಶಾ ಘನ್ನಗಿರಿಯ ವಾಸ ಕಮಲಾಸನ ಜನಕ ತಿರುಮಲೇಶಾ ಪ ಹರುವ ಸರ್ಪಯಿರುವ ಚೋರ ಶರಧಿ ಉರೆವ ಕಿಚ್ಚು ಕರೆವ ಮೃತ್ಯು ಸುರಿವ ಮಳೆ ಬಿರುವನೆಲ್ಲ ಹೊಡೆವ ದೈತ್ಯಾ ತೊರೆವ ಸನ್ನ್ಯಾವ ಮೇರೆ ತಪ್ಪಿ ಭರದಿ ತನಗೆ ಇದಿರು ಬಂದವ ಕಾಣುತತಿ ಹರಿಯ ನಾಮ ಮುಟ್ಟುವ ದೇವ ಶ್ರೀನಿವಾಸಾ1 ಸೃಷ್ಟಿ ಜನರಿಗೊಂದು ಆಳು ಕೊಟ್ಟು ವೇಗದಿಂದ ಕರಿಯ ಲಟ್ಟಿದವರ ಕಾಣೆನಯ್ಯಾ ಎಷ್ಟೆಷ್ಟು ದೂರದಿಂದಲಿ ಕಟ್ಟಿಕೊಂಡು ಹೊನ್ನು ಹಣಗಳ ತಮಗೆ ತಾನೆ ಅಟ್ಟಹಾಸದಿಂದ ಮಂಗಳವ ಪಾಡಿ ಪೊರ ಮಟ್ಟ ಒಪ್ಪ ತಿರುವೆಂಗಳಾ2 ಹದಿನೆಂಟು ಜಾತಿಯವರು ಒದಗಿ ಮುದದಿಂದ ಕುಣಿದು ಪದೋಪದಿಗೆ ಹಾಡಿ ಪಾಡುತ ಹದುಳವಾದ ಪಂಚವಾದ್ಯ ಎದುರುನಿಂದು ಧ್ವನಿಯ ಮಾಡುತಾ ದಾಸರೆಂಬೊ ಅಟ್ಟಹಾಸದ ಮಾತು ನುಡಿಯುತ್ತ ನಿತ್ಯ ನಿನ್ನ ಮದುವೆಯೆಂದು ಸುಖವು ಸುರಿಯುತ್ತಾ 3 ಎಲ್ಲರಿಲ್ಲಿಗೆ ಬಂದರೇನು ಯಿಲ್ಲ ಪು ಣ್ಯಲೇಶ ಮಾತ್ರ ಸಲ್ಲದಯ್ಯಾ ಮುಕ್ತಿಗವರು ಇಲ್ಲೆ ಸುಖವು ಬಟ್ಟು ಕಡಿಗೆ ಎಲ್ಲೆಲ್ಲಿ ಜನಿಸಿ ಬಹು ಭವದ ಪಲ್ಲಡಿಯೊಳಗೆ ಜನಿಸಿ ಜ್ಞಾನ ವಿಲ್ಲದೆ ಸಲ್ಲುವರು ದುರಿತವ ವಹಿಸಿ 4 ಮನುಜರೆಣಿಕೆ ಏನು ಮತ್ತೆ ವನಜ ಸಂಭವ ಈಶ ಮುಖ್ಯ ಅನಿಮಿಷರೆಲ್ಲ ಬಂದು ಭಯದಿ ಮನಸಿನಲಿ ನಿನ್ನ ಅರಸುತನದ ಶೌರ್ಯ ಮಣಿದು ನಮಸ್ಕರಿಸುತಾ ವಾಲ್ಗೈಸುತಾ ಹೊಣಿಯೊ ವಿಜಯವಿಠ್ಠಲ ಎನುತಾ 5
--------------
ವಿಜಯದಾಸ
ನಿನ್ನ ಕರುಣಕೆಯ ಕಾಣೆನಾ | ವಿಠಲರಾಯಮನ್ನುಜನ್ನ ರೂಪ ಧರಿಪನಾಅನ್ನ ವಸನವಿತ್ತು ಪಿತಗೆ | ಚನ್ನ ಸೇವೆ ಮಾಳ್ಪದೇವೆಘನ್ನ ಸಾಧ್ಯ ಸಾಧನವೆಂದು | ಮನ್ನಣೆಯ ತೋರ್ದೆ ಜಗಕೆ ಅ.ಪ. ಪಂಥ ಜನರ ಸಂದಣೀಯಲಿ | ಮೆರೆಯುತ್ತಿದ್ದಪಂಢರಪುರದ ಸುಪ್ರದೇಶದಿಪುಂಡರೀಕ ನಯನ ಭಕ್ತ | ಬಂಡುಣೀಯ ಮನವ ನೋಡೆಅಂಡಾ ನಂತಕೀಶ ಮನುಜ | ದಿಂಡು ಧರಿಸಿ ಬಂದು ನಿಂತ 1 ಇಂದು ಭಾಗ ಸರಿತು ತೀರದಿ | ಪುಂಡಲೀಕತಂದೆ ಪಾದಸೇವೆ ಭರದಲಿ |ಬಂದ ಮನುಜ ವೇಷ ಹರಿಗೆ | ನಿಂದಿರೆಂದು ಪ್ರಾರ್ಥಿಸುತ್ತಅಂದ ಅನ್ಯ ಪೀಠವಿರದೆ | ಒಂದು ಇಟ್ಟಗಿ ಪೀಠವಿತ್ತ2 ಸಿಂಧು | ಸುಷ್ಠು ಒತ್ತಿಪ ದಯಾಸಿಂಧು3 ಶಾಸ್ತ್ರ ಬಹಳ ಶೃತನು ಎನುತಲೂ | ಶುದ್ಧಮೇಧ ಶಕ್ತಿ ಬಹಳ ಯುತನು ಎನುತಲೂ | ಯುಕ್ತಿಗಾಗ್ಯ ವಲಿವನಲ್ಲ | ಮುಕ್ತಿದಾತ ಲಕ್ಷ್ಮೀನಲ್ಲಭಕ್ತಿ ಮುಡುಪು ಯಿತ್ತು ತುತಿಪ | ಭಕ್ತ ಜನರ ಬಿಡದೆ ಪಾಲಿಪ4 ಭಾವ ದ್ರವ್ಯ ಕ್ರಿಯವು ಎಂಬುದಾ | ಮಹತು ಎನಿಪಈ ವಿಧ ದ್ವೈತತ್ರಯಗಳಾ |ಭಾವದಲ್ಲಿ ಚರಿಸುವಂಥ | ಭಾವವಿತ್ತು ಸಲಹೊ ಗುರುಗೋವಿಂದ ವಿಠಲ ಭಕ್ತಿಪಂಥ | ದೇವನೆಂದು ಮೆರೆವ ವಿಠಲ 5
--------------
ಗುರುಗೋವಿಂದವಿಠಲರು
ನಿನ್ನ ಕಾಣಬಂದೆನಯ್ಯ ಚೆನ್ನಕೇಶವಾ ನಿನ್ನ ಕಂಡು ನಲಿದೆ ರಮಾರನ್ನ ಮಾಧವಾ ಪ ಜಳದಿ ಮುಳುಗಿ ತೊಳಲಿ ಬಳಲಿ ಬಹಳನೊಂದೆನು ತಳವ ಬಯಸಿ ಬಳಸಿ ಬಳಸಿ ನಡುವೆ ನಿಂದೆನೊ ಬಳಿಯ ಬಳಗವಿಲ್ಲ ನೋವಿನಿಂದ ಬೆಂದೆನೋ ಸುಳಿಗೆ ಸಿಲುಕಿ ಅಳುಕಿ ಬಳುಕಿ ವಿಧಿಯ ಬೈದೆನೋ 1 ಕರವ ಮುಗಿದು ಕರೆವೆ ನಿನ್ನ ಕರುಣದಿ ಬಾರೋ ಮರುಗಿ ಮರುಗಿ ಕೊರಗಿದೆನಗೆ ಚರಣವ ತೋರೋ ಕರಿಯ ಪೊರೆದೆ ತರಳಗೊಲಿದೆ ಮರುಕವ ಬೀರೋ ಶಿರವ ಚರಣಕಿರಿಸುವೆ ಮಾಂಗಿರಿಯರಂಗ ಬಾರೋ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಿನ್ನ ದರುಶನಕೆ ಬಂದವನಲ್ಲವೊ ಪುಣ್ಯವಂತರ ದಿವ್ಯ ಚರಣ ನೋಡಲಿ ಬಂದೆ ಪ ಎಲ್ಲೆಲ್ಲಿ ನಿನ್ನ ವ್ಯಾಪ್ತತನವಿರಲಿಕ್ಕೆ ಇಲ್ಲಿಗೆ ಬರುವ ಕಾರಣವಾವುದೊ ಸೊಲ್ಲಿಗೆ ಕಂಭದಲಿ ತೋರಿದ ಮಹಾಮಹಿಮ ಅಲ್ಲಿ ಇಲ್ಲೇನಯ್ಯ ಬಲ್ಲ ಭಜಕರಿಗೆ1 ಕರೆದಾಗಲೆ ಓಡಿ ಬಂದೊದಗುವ ಸ್ವಾಮಿ ಮರಳಿ ಗಾವುದ ಎಣಿಸಿ ಬರಲ್ಯಾತಕೊ ನೆರೆ ನಂಬಿದವರಿಗೆ ಆವಲ್ಲಾದರೇನು ಅರಿದವರ ಮನದೊಳಗೆ ನಿಂದಾಡುವ ಚಂದವಾ 2 ಕಠಿನವೊ ನಿನ್ನ ಭಕುತರನ ನೋಡುವ ಲಾಭ ಸಟೆಯಲ್ಲಾ ವೇದಗಳು ಸಾರುತಿವಕೊ ವಟು ಮೊದಲಾದ ವೈಷ್ಣವಾಗ್ರೇಸರಂಘ್ರಿ ತ್ರಿಟಿಯಾದರೂ ಎನಗೆ ಸೋಕಲು ಗತಿಗೆ ದಾರಿ3 ಧ್ಯಾನಕ್ಕೆ ಸಿಲುಕುವನೆ ನಿನ್ನ ಕಾಣಲಿಬಹುದು ಜ್ಞಾನಿಗಳು ಎಂತು ಬರುವರೊ ಅಲ್ಲಿಗೆ ಅನಂತ ಜನುಮದಲ್ಲಿ ಜಪ ತಪ ಹೋಮ ವ್ರತ ಏನೇನು ಮಾಡಿದರು ಇಷ್ಟು ಜನ ಕೂಡುವದೇ4 ನೀನಿದ್ದ ಸ್ಥಾನದಲಿ ಸಕಲ ಪುಣ್ಯಕ್ಷೇತ್ರ ನೀನಿದ್ದ ಸ್ಥಾನದಲಿ ಸರ್ವತೀರ್ಥ ನೀನಿದ್ದ ಸ್ಥಾನದಲಿ ಸಮಸ್ತ ತಾತ್ವಿಕರು ನಾನಿತ್ತ ಬರುವುದು ನಿನಗೆ ತಿಳಿಯದೆ ಸ್ವಾಮಿ5 ಇದನೆ ಲಾಲಿಸು ಜೀಯಾ ನಿನ್ನದೊಂದೇ ಮೂರ್ತಿ ನಿದರುಶನವಲ್ಲದೆ ಮಿಗಿಲಾವುದೊ ಪದೋಪದಿಗೆ ಮಧ್ವಮತ ಹೊಂದಿದ ಸುಜನರ ಹೃದಯದೊಳಗಾನಂತಪರಿ ನಿನ್ನ ರೂಪಗಳು 6 ಭಳಿರೆ ತಿರುಮಲರಾಯ ನಿನ್ನ ಕರುಣಾ ರಸಕೆ ವೊಲಿದು ಭಕುತರಿಗಾಗಿ ಮದುವೆ ಹಮ್ಮಿಕೊಂಡೆ ಸುಲಭ ದೇವರದೇವ ವಿಜಯವಿಠ್ಠಲ ವೆಂಕಟಾ7
--------------
ವಿಜಯದಾಸ
ನಿನ್ನ ದಾಸನು ನಾನು ಎಂತಾಹೆನಯ್ಯಅನ್ನಂತ ಅಪರಾಧಕಾಕರಾದವನು ಪ. ಅರುಣೋದಯವ ಜರಿದು ಆಹ್ನಿಕ ಕರ್ಮವ ತೊರೆದುಪೊರೆವ ನಿನ್ನಡಿಯ ಮರೆದುದುರುಳರಿಗೆ ಬಾಯ್ದೆರೆದು ದೈನ್ಯದಲಿ ಪಲ್ಗಿರಿದುಮರಿಯಾದೆಗೆಟ್ಟು ತಿರಿದುಇರುಳು ಹಗಲೆನ್ನದೆ ಈ ವಿಧದಿ ಹೊಟ್ಟೆಯಹೊರೆದು ಇದು ಪುಣ್ಯ ಇದು ಪಾಪವೆಂದರಿಯದವ 1 ಜಟ್ಟಿಗಳ ಮನೆಯ ನಾಯಂತೆ ಒಳ್ಳೆಬಟ್ಟೆಗಳತೊಟ್ಟವರ ಹಿಂದೆ ತಿರುಗಿಅಟ್ಟುಂಡು ಬಾಳಿಬದುಕಿದ ತಮ್ಮ ಹಿರಿಯರುಕೆಟ್ಟು ಮುರಿದುದನು ಪೇಳಿಉಟ್ಟ ಅರಿವೆಯ[ಕೋರಿ] ಹೊಟ್ಟೆ ಬಾಯನೆ ತೋರಿಕೊಟ್ಟುದಕೆÉ ತೃಪ್ತನಾಗದೆ ಅವರ ಬಯ್ವವನು 2 ವೃತ್ತಿ ಅಲ್ಲದ ಶೂದ್ರ ವೃತ್ತಿಗಳನನುಸರಿಸಿ ಅ-ಕೃತ್ಯ ಶತಗಳನು ಮಾಡಿಸತ್ಯ ಶೌಚಂಗಳ ಬಿಟ್ಟು ಶ್ರವಣ ಮನನಾದಿ ಪ್ರ-ಸಕ್ತಿಗಳ ಹೋಗಲಾಡಿಉತ್ತಮರು ತಾಯಿತಂದೆ ಗುರುಹಿರಿಯರುಗಳಅರ್ಥಗಳನಪಹರಿಸಿ ಅವರ ನಿಂದಿಸುವನು 3 ಪರ್ವ ಉಪರಾಗ ದ್ವಾದಶಿ ಅಯನಗಳಲ್ಲಿಸರ್ವವಿಹಿತಗಳ ಮೀರಿಉರ್ವಿಯೊಳು ಉಳ್ಳ ಯೋಗ್ಯರನೆಲ್ಲ ಹಳಿದೆನ್ನನಿರ್ವಾಹಗಳನೆ ತೋರಿದುರ್ವಿಚಾರದಿ ಸ್ವಲ್ಪಧನಕಾಗಿ ಎನ್ನೊಳಿಹಪೂರ್ವಸಂಚಿತಮಂತ್ರ ತುಚ್ಛರಿಗೆ ಮಾರಿದವ 4 ಛಲ ಚಾಡಿ ಡಂಭ ಮಿಥ್ಯಾಜ್ಞಾನ ದುರ್ವಿಷಯಕುಲಸತಿಯ ಕೂಡೆ ಕಲಹಕಳವು ಕಠಿಣೋಕ್ತಿ ದುಷ್ಟಾನ್ನಭೋಜನ ಮದುವೆ-ಗಳ ಮುರಿವ ಪಾಪಚಿಂತೆಹಳಿವ ಹರಿವಾಸರ ವ್ರತಭಂಗದಿಂದ ನಾನಾಗಿಸುಲಭ ಹಯವದನನ್ನ ಮರೆತ್ಹಾಳುಹರಟೆಯವ 5
--------------
ವಾದಿರಾಜ
ನಿನ್ನ ದಾಸರ ದಾಸ ನಾನಯ್ಯ-ಹರಿ- ಯನ್ನನುಪೇಕ್ಷಿಪರೇನಯ್ಯ ಪ ಕಾಮಕ್ರೋಧಗಳಿನ್ನೂ ಬಿಡಲಿಲ್ಲ-ನಿನ್ನ- ಪ್ರೇಮವೆನ್ನೊಳುಕಾಲಿಡಲಿಲ್ಲ ತಾಮಸಬೀಜವ ಸುಡಲಿಲ್ಲ1 ಆಚಾರದಲಿ ಕಾಲಗತಿಯಿಲ್ಲ-ಬಲು-ನೀಚರ ಸಂಗಕೆ ಮಿತಿಯಿಲ್ಲ ಪ್ರಾಚೀನ ಕರ್ಮಕ್ಕೆ ಚ್ಯುತಿಯಿಲ್ಲ-ಇದ- ಗೋಚರಪಡಿಸುವ ಮತಿಯಿಲ್ಲ 2 ದೇಹದಿ ಬಲವಿಲ್ಲವಾದರೂ-ವ್ಯಾ- ಮೋಹವು ಬಿಡದಲ್ಪವಾದರೂ ಗೇಹದಿ ಸುಖವಿಲ್ಲದಿದ್ದರು-ಈ ಸೋಹಮೆಂಬುದಕಿಲ್ಲ ಬೆಸರು 3 ದಾಸರ ಸಂಗದೊಳಾಡಿಸು-ಹರಿ-ವಾಸರವ್ರತದೊಳು ಕೂಡಿಸು ವಾಸುದೇವನೆ ನಿನ್ನ ಪಾಡಿಸು-ಸಿರಿವಾಸನಾಮದ ಸವಿ ಯಾಡಿಸು4 ಶರಣವತ್ಸಲನಹುದಾದರೆ-ಘನ-ಕರುಣಾರಸನಿನಗುಳ್ಳರೆ ವಿಠಲ ನೀನೆ ನಮ್ಮದೊರೆ 5
--------------
ಸರಗೂರು ವೆಂಕಟವರದಾರ್ಯರು
ನಿನ್ನ ದಾಸರದಾಸ ನಾನಯ್ಯ ಹರಿ ಎನ್ನನುಪೇಕ್ಷಿಪರೇನಯ್ಯ ಪ ಪ್ರೇಮವೆನ್ನೊಳು ಕಾಲಿಡಲಿಲ್ಲ ಭವ ತಾಮಸ ಬೀಜವ ಸುಡಲಿಲ್ಲ 1 ನೀಚರ ಸಂಗಕೆ ಮಿತಿಯಿಲ್ಲ ಗೋಚರಪಡಿಸುವ ಮತಿಯಿಲ್ಲ 2 ದೇಹದಿ ಬಲವಿಲ್ಲವಾದರೂ ವ್ಯಾ ಮೋಹವು ಬಿಡದಲ್ಪವಾದರೂ ಸೋಹಮೆಂಬುದಕಿಲ್ಲ ಬೇಸರು3 ದಾಸರ ಸಂಗದೊಳಾಡಿಸು ಹರಿ ವಾಸರವ್ರತದೊಳು ಕೂಡಿಸು ಸಿರಿ ವಾಸನಾಮದ ಸವಿಯೂಡಿಸು 4 ಕರುಣಾರಸನಿನಗುಳ್ಳರೆ ಸಿರಿವರದವಿಠಲ ನೀನೆ ನಮ್ಮ ದೊರೆ 5
--------------
ವೆಂಕಟವರದಾರ್ಯರು
ನಿನ್ನ ನಂಬಿದವರ್ಗೆ ನಿನ್ನಂದವೆ ಬಂದುದಿನ್ನೇನಿನ್ನೇನು ಪ್ರಸನ್ನ ರಾಘವ ದಶ'ಧವಾುತೆ'್ಮುರ'ನ್ನೇನಿನ್ನೇನು ಪಕೊರಳು ಗೊ್ಯುಕತೆುಂದ ಕಂಗೆಡುತಿದೆ ಲೋಕ'ನ್ನೇನಿನ್ನೇನುಪರರ ಬಾಧೆಗೆ ಕಲ್ಲುಹೊರುವಾಟ ಒದಗಿದುದಿನ್ನೇನಿನ್ನೇನುಧರೆಯ ಬಗೆದು ಬೆರತಿಂಬ ಕಾಲವು ಬಂದುದಿನ್ನೇನಿನ್ನೇನುಕರುಳ ಬಗೆದು ರಕ್ತಗುಡಿವ ಭಯವು ತೋರಿತಿನ್ನೇನಿನ್ನೇನು 1ದಾನಗೈಯಲು ಸ್ಥಾನ ಹಾನಿಯಾಗುವದಾುತಿನ್ನೇನಿನ್ನೇನುಜ್ಞಾನ ಕುಲದಿ ಪುಟ್ಟ ಕ್ಷಾತ್ರ ಜೀವನ ಬಂದುದಿನ್ನೇನಿನ್ನೇನುಮಾನಿನಿ ದುರುಳನಾಧೀನವಾಗುವದಾುತಿನ್ನೇನಿನ್ನೇನುಸೂನುವ ಪರರೆತ್ತಿಕೊಂಡೊಯ್ವ ತೆರಬಂದುದಿನ್ನೇನಿನ್ನೇನು 2ಉಟ್ಟ ಬಟ್ಟೆಯು ಪೋಪ ಸಮಯ ತಾನೊದಗಿದುದಿನ್ನೇನಿನ್ನೇನುದಿಟ್ಟ 'ಪ್ರರು ರಾವುತರಾಗುವಂತಾುತಿನ್ನೇನಿನ್ನೇನುದಿಟ್ಟಿಸಿ ನೋಡೆ ನೀನೆಮ್ಮನೆನ್ನುವರಾಗದಿನ್ನೇನಿನ್ನೇನುಹುಟ್ಟು ಹೊಂದುಗಳಡಗುವ ಕಾಲ ತಾ ಬಂದುದಿನ್ನೇನಿನ್ನೇನು 3ಕರುಣದಿಂದೀಕ್ಷಿಸಿ ಕಾಯ್ವವ ನೀನಿರಲಿನ್ನೇನಿನ್ನೇನುದುರಿತ ಕೋಟಿಗಳ ದ'ಪುದು ನಿನ್ನಯ ನಾಮ'ನ್ನೇನಿನ್ನೇನುಸ್ಮರಣೆ ಮಾತ್ರದಿ ಧನ್ಯರಹೆವಾವು ಭಯ ಪೋಪುದಿನ್ನೇನಿನ್ನೇನುವರ ವಾರಣಸೀವಾಸದಿಚ್ಛೆ ಪುಟ್ಟಿದುದೆಮಗಿನ್ನೇನಿನ್ನೇನು 4ಕರುಣದಿಂ ಚಿಕ್ಕನಾಗಪುರದಿ ನೀನೆಲಸಿದೆುನ್ನೇನಿನ್ನೇನುಗುರುವಾಸುದೇವಾರ್ಯ ರೂಪುದಾಳಿದೆಯಾಗಿುನ್ನೇನಿನ್ನೇನುಕರೆದು ಜ್ಞಾನಾಮೃತವೊರೆದು ರಕ್ಷಿಸಿದೆ ನೀನಿನ್ನೇನಿನ್ನೇನುಚರ[ಣ ಕಮಲಗಳ ನಂಬಿದೆವು ನಾನಿನ್ನೇನಿನ್ನೇನು] 5
--------------
ತಿಮ್ಮಪ್ಪದಾಸರು
ನಿನ್ನ ನಂಬಿದೆ ಶಾರದೇ | ಭಕ್ತಿಗೆ ಮತಿ- | ಯನ್ನು ಪಾಲಿಸ ಬಾರದೇ ಪ ನಿನ್ನ ನಂಬಿದೆ ನಾನು | ಎನ್ನ ಜಿಹ್ವೆಯೊಳ್ ನೀನು | ಖಿನ್ನತ್ವಗೊಳ್ಳದೆ | ಸನ್ನುತೆ ನೆಲಸವ್ವ ಅ.ಪ ಜಡಮತಿಯನು ತ್ಯಜಿಸಿ | ನೀ ದಯದಿಂದ | ದೃಢಮತಿಯನು ಪಾಲಿಸಿ || ಕಡಲ ಶಯನ ಸೊಸೆ | ಪೊಡವಿಗಧಿಕವಾದ | ಮೃಡನ ಸ್ಮರಿಪ ಜ್ಞಾನ | ತಡೆಯದೆ ಕರುಣಿಸು 1 ತ್ವತ್ಸಂಗವನು ಪಾಲಿಸಿ | ನೀ ದಯದಿಂದ | ದುಸ್ಸಂಗವನು ಛೇದಿಸಿ || ಸತ್ಸಂಗವೆನಗಿತ್ತು | ಮತ್ಸಂಗ ನೀನಾಂತು | ತ್ವತ್ಸುಗುಣ ನುಡಿಗಳ | ಹೃತ್ಸರೋಜದೊಳಿರಿಸೆ 2 ಸನುಮತ ಪಥಗಾಣಿಸಿ | ಕಏತೆಗಳ | ಮನದಲ್ಲಿ ಸ್ಥಿರಗೊಳಿಸಿ || ಜನನ ಮರಣವೆಂಬ | (ವನ) ದೊಳಗೆನ್ನನು | ವಿನಯದಿ (ಂದಲಿ) ಪಾರ | ಗಾಣಿಸೆ ಶಾರದೆ 3 ದಾಸನೆಂದೆನಿಸೆಯೆನ್ನ | ಕೀತಿ9ಗಹಿತ | ದೋಷವ ತ್ಯಜಿಸೆ ಮುನ್ನ || ಕ್ಲೇಶಗೈವರ ಮನ | ಲೇಸಿನೊಳ್ ವಂಚಿಸಿ | ವಾಸವ ಕರುಣಿಸೆ 4 ಚಿನುಮಯಾತ್ಮಕನಿರುವ | ವೈಕುಂಠದ | ಘನತರ (ಸತ್) ಪದವಿಯ || ಪತಿ | ಪಿತ ಶ್ರೀನಿವಾಸನ | (ಅನುಯಾಯಿ) ಸೇವೆಗ | ಳೆನಗಿತ್ತು ಪಾಲಿಸೆ 5
--------------
ಸದಾನಂದರು
ನಿನ್ನ ನಂಬಿದೆನಯ್ಯ ಚನ್ನಕೇಶವರಾಯ ಇನ್ನಾದಾರೂ ಕೃಪೆಯ ತೋರಿಸಯ್ಯ ಪ ಎನ್ನ ಕರ್ಮದ ಫಲದಿ ಬನ್ನಗೊಂಡಿಹೆನಯ್ಯ ನಿನ್ನ ಚರಣವನೆನಗೆ ಸನ್ನಿಹಿತ ಮಾಡಯ್ಯ ಅ.ಪ ನಡೆವುದೂ ನಿನಗಾಗಿ ನುಡಿವುದೂ ನಿನಗಾಗಿ ಪಡೆವುದೂ ನಿನಗಾಗಿ ಎನ್ನಿಸಯ್ಯ ಕೊಡುವವನು ನೀನಾಗಿ ಪಡೆವವನು ನಾನಾಗಿ ಪೊಡವಿಯಲೆಷ್ಟುದಿನ ಬಾಳ್ವುದಯ್ಯ 1 ಕಲಿಯುಗದಿ ಭಜನೆಯಿಂದಲೆ ಭವವು ಕಳೆವುದೆಂದು ಉಲಿದರೈ ವ್ಯಾಸಾದಿ ಮುನಿವರ್ಯರು ಕಲುಷ ಪೂರಿತನಾಗಿ ಬಲುನೊಂದೆ ಕೈ ಪಿಡಿಯೊ ಮಾಂಗಿರಿರಂಗ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನಿನ್ನ ನೋಡಲಿ ಬಂದೆ ಘನ್ನ ಮಹಿಮನೆ ಕೃಷ್ಣಾ ಮನ್ನಿಸಿ ಕೃಪೆಯ ಮಾಡೊ ಪ. ನಿನ್ನ ದರುಶನವಿತ್ತು ಎನ್ನ ಪಾಪವ ಕಳೆದು ನಿನ್ನ ಪಾದವನೆ ತೊರೋ ಸ್ವಾಮಿ ಅ.ಪ. ರಜತಪೀಠಾಪುರದಿ ರಮ್ಯ ಮಂದಿರದಲ್ಲಿ ರಾಜಿಸುತ್ತಿಹ ದೇವನೆ ಕುಜನಮರ್ಧನ ಎನ್ನ ರಜ ತಮೋಗುಣ ಕಳದು ನಿಜಭಕ್ತರೊಡನಾಡಿಸಿ ಸುಜನವಂದಿತ ನಿನ್ನ ಭಜನೆಯಿಂದಲಿ ನಲಿದು ನಿಜರೂಪ ನೋಡುವಂತೆ ವಿಜಯಸಾರಥಿಯೆ ನೀ ಈ ತೆರದಿ ಪೊರೆಯದಿರೆ ಭಜಿಸಲ್ಯಾತಕೆ ನಿನ್ನನು ದೇವ 1 ಶ್ರೀ ತಂದೆ ಮುದ್ದುಮೋಹನದಾಸರೆಂತೆಂಬ ನೀತ ಗುರುದ್ವಾರದಿಂದ ನಾ ತಿಳಿದು ಬಂದೆ ನಿನ್ನಯ ಮಹಿಮೆ ಜಾಲಗಳ ಪ್ರೀತನಾಗಿ ಕಾಯೋ ನೀತಿಯಲ್ಲವು ನಿನಗೆ ಮಹಿಮೆ ತೋರದೆ ಎನ್ನ ಘಾತಿಗೊಳಿಸುವರೆ ಹೀಗೆ ನಾಥ ನಿನ್ನಗಲಿ ನಾನರಘಳಿಗೆ ಇರಲಾರೆ ಸೋತು ಬಂದಿಹೆನೊ ಭವದಿ ಮನದಿ 2 ಸತ್ಯಸಂಕಲ್ಪ ನೀನಾದಡೆ ಎನಗಿನ್ನು ಅತ್ಯಧಿಕ ರೂಪ ತೋರೊ ಮೃತ್ಯು ಬೆನ್ಹತ್ತಿ ಆಯುಷ್ಯವ ಪರಿಹರಿಸುವುದು ಎತ್ತ ಪೋದರು ಬಿಡದೆಲೊ ಭೃತ್ಯತನವನೆ ವಹಿಸಿ ನಿನ್ನ ತೋರೆಂದೆನಲು ಮತ್ತೆ ಕರುಣವಿಲ್ಲವೆ ಚಿತ್ತಜಾಪಿತ ನಿನ್ನ ಒಲುಮೆ ಮಾರ್ಗವನರಿಯೆ ಚಿತ್ತಕ್ಕೆ ತಂದು ಕಾಯೊ ಕೃಷ್ಣ 3 ಆನಂದಮುನಿವರದ ಆನಂದ ಕಂದನೆ ಆನಂದನಿಲಯವಾಸ ಆನಂದರತ್ನಪ್ರಭಾದಿಂದ ರಾಜಿತನೆ ಆನಂದಮೂರ್ತಿ ಕೃಷ್ಣ ಆನಂದಗೋಕುಲದಿ ಆನಂದದಲಿ ಮೆರೆದು ಆನಂದ ಸುಜನಕಿತ್ತೆ ನೀನಿಂದು ಎನ್ನ ಮನಕೆ ಆನಂದವನೆ ಇತ್ತು ಆನಂದರೂಪ ತೋರೊ ಕೃಷ್ಣ 4 ಥರವಲ್ಲ ನಿನಗೆನ್ನ ಕರಕರೆಗೊಳಿಸುವುದು ಪೊರೆವರಿನ್ಯಾರು ಜಗದಿ ಮರೆತು ಗರ್ವದಿ ಎನ್ನ ಮರೆವರೆ ನೀನ್ಹೀಗೆ ಗುರುಗಳಂತರ್ಯಾಮಿಯೆ ಸರ್ವನಿಯಾಮಕ ಸರ್ವವ್ಯಾಪಕನೆಂಬ ಬಿರುದು ಪೊತ್ತಿಲ್ಲವೇನೊ ಕರುಣಾಳು ಗೋಪಾಲಕೃಷ್ಣವಿಠ್ಠಲ ನಿನ್ನ ಪರಿಪರಿಯ ರೂಪ ತೋರೊ ಕೃಷ್ಣ 5
--------------
ಅಂಬಾಬಾಯಿ