ಒಟ್ಟು 3042 ಕಡೆಗಳಲ್ಲಿ , 124 ದಾಸರು , 2171 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪಕ್ಕಿವಾಹನ ದಯಸಿಂದು ನೀ ಎನ್ನ ಚಿಕ್ಕ ಮನತುರಗವನ್ನು ನೀನೆ ತಿದ್ದೊ ಪ ಕತ್ತಲೆಯೊಳು ಬಲು ಕಾಲಕಳದೆಯಾಗಿ ಮತ್ತೆ ಬೆಳಕು ಕಂಡು ಬೆದರುತಿದೆ ಕತ್ತಲಂಜಿಕೆ ತೋರಿ ಬೆಳಕಿನ ರುಚಿಯನು ಇತ್ತು ಕುಶಲಗತಿ ಕಲಿಸಯ್ಯ 1 ಹಿಂದಕ್ಕೆ ತಿರಗದೆ ತಾನಾಗಿ ಬ್ಯಾಗನೆ ಮುಂದಕೆ ನಡೆದು ಪರರ ಬೆಳಸುಗಳ ಒಂದನ್ನ ಬಯಸದೆ ಪದ್ಧತಿ ಬಿಡದಂತೆ ಒಂದಾಗಿ ಗಮ್ಯಸ್ಥಾನವ ಸೇರಿಸಯ್ಯ 2 ವಿಧಿನಿಷೇಧಗಳೆಂಬ ಗಿಲಕಿಯ ದನಿಗೈಸಿ ಹೆದರಿಸೊ ಸನ್ಯಾಯ ಕಶದಿಂದಲೀ ಮುದದಿ ಭಕುತಿ ಗುಣವ ಕೊರಳು ಕಟ್ಟಿ ಬಿಗಿದು ಪದುಮಾಕ್ಷ ನಿನ್ನ ಪಾದವ ಸ್ತುತಿಸಯ್ಯ 3 ಉತ್ತಮ ಗುಣವುಳ್ಳ ವಾಜಿಯಿದನೆ ಮಾಡಿ ವಸ್ತು ಎನ್ನದು ಮಾತ್ರವೆಂದೆನಿಸಿ ಚಿತ್ತಕೆ ಬಂದಂತೆ ಇದಿರಾರು ನೀ ನಿತ್ಯ ಹತ್ತಿ ಹರಿಸುವನು ಸನ್ಮತವೆನಗೆ 4 ಲೇಸಾದಾ ಹಯಗಳೊಳು ನೀನೆವೆ ಜಗದೊಳು ಲೇಸು ಮಾಡಿದೆಯೆಂಬ ವಾರ್ತಿ ಕೇಳಿ ವಾಸುದೇವವಿಠಲ ನಿನಗೆ ಬಿನ್ನೈಸಿದೆ ದಾಸನ ಮಾತು ಲಾಲಿಸೆ ಕಾಯೋ ಸರ್ವೇಶ5
--------------
ವ್ಯಾಸತತ್ವಜ್ಞದಾಸರು
ಪಂಚರೂಪಾತ್ಮಕ ನೀನೇ ಈ ಪಾಂಚಭೌತಿಕ ದೇಹದಿ ಸಂಚರಿಸೂವೆ ಪ ಸ್ಥೂಲರಸವನು ಇತ್ತು ಸಲಹೂವೆ ಅ.ಪ ರಸಪಾಯುಆಪಜಿಹೆÀ್ವನಾಸಿಕ ಗಂಧ ಪೃಥುವಿ ಉಪಸ್ಥಯುಕ್ತ ಕೋಶವಹುದಯ್ಯ ಆ ಶನೈಶ್ವರ ವರುಣ ಭೂದೇವಿಯಿಂದಲಿ ಸೇವಿಪ ಸತತ ಲೇಶವಾದರು ಬಿಡದೆ ತಾ ಖಂಡಾಖಂಡ ರೂಪದಿ ದೇಶ ಕಾಲಗಳಲ್ಲಿ ನೆಲೆಸಿ ಕೋಶಕಾರ್ಯವ ಗೈವೆ ಪ್ರಾಣನಿಂ ಉಭಯಪಕ್ಷಗಳು ಧೇನಿಸುತಿಹರು ಭುಜದ್ವಯ ಶ್ರೀಶ ನಿನ್ನಯ ಮಧ್ಯದೇಶವೆ ಈ ಶರೀರದÀ ಮಧ್ಯಭಾಗವು ಪ್ರಸಿದ್ಧ ಪುರುಷನೆ ನಿನ್ನಿಂದೋಷಧಿಗಳು ಓಷಧಿಗಳಿಂದನ್ನವೆಲ್ಲವು ಪೋಷಣೆ ಎಲ್ಲ ಅನ್ನದಿಂದಲೆ ದೋಷದೂರ ನೀನನ್ನದನ್ನದಾ1 ಪಾಣಿತ್ವಗ್ವಾಯು ಸ್ಪರ್ಶ ನೇತ್ರ ತೇಜ ಪಾದರೂಪಗಳಿಂದಲಿ ಕಾಣಿಸಿಕೊಳ್ಳುವುದು ಪ್ರಾಣಮಯದ ಕೋಶವು ತಾನಲ್ಲಿಹ ಪ್ರದ್ಯುಮ್ನ ಮೂರುತಿ ಸತತ-ಗಣಪತಿ ಅಗ್ನಿ ವಾಯು ಮರೀಚಿಗಳೆಲ್ಲರೂ ಸನ್ನುತಿಪರೋ ಪ್ರಾಣಾಧಾರನಾಗಿಹೆ ತ್ರಾಣ ನಿನ್ನಿಂದ ಸ್ಥೂಲದೇಹಕೆ ಅ- ಪಾನ ನಿಂದೊಡಗೂಡಿ ನೆಲೆಸಿಹೆ ಪ್ರಾಣಪತಿ ಪ್ರದ್ಯುಮ್ನ ನಿನ್ನಯ ಶಿರದ ಸ್ಥಾನವು ಪ್ರಾಣನಲ್ಲಿಹುದೋ ದಕ್ಷಿಣೋತ್ತರಪಕ್ಷವಿರುತಿಹುದೋ ಕಾಣಿಪುದು ಮಧ್ಯದೇಶವು ಆಗಸದೊಳು ಉ- ದಾನ ವಾಯುವಿನಲ್ಲಿ ಇರುತಿಹುದೋ ಧೇನಿಪೋರು ಪೃಥುವಿಯು ಪಾದವೆಂಬುದು ಸ- ಮಾನ ವಾಯುವಿನಲಿ ಇರುತಿಹುದು ಜ್ಞಾನ ರೂಪದಿ ಈ ಪರಿಯಲಿ ರೂಪವಿರುತಿಹುದು ಪ್ರಾಣಿಗಳಿಗಾಯುಷ್ಯವಿತ್ತು ಪ್ರಾಣಪ್ರೇರಕನಾಗಿ ಪೊರೆಯುವೆ ಪ್ರಾಣಧಾರಣೆ ನಿನ್ನದಯ್ಯಾ ಪ್ರಾಣನುತ ಪ್ರದ್ಯುಮ್ನಮೂರುತೆ2 ತತ್ವಯುತವಾಕ್ಯೋಕ್ತಾಗಸ ಶಬ್ದ ಈತೆರ ಯುಕ್ತವಾದೀ ಕೋಶವು ಇದಕೆ ಖ್ಯಾತವಾದ ಮನೋಮಯ ಕೋಶದೊಳು ಸತತ ರುದ್ರೇಂದ್ರಾದಿ ಸುರರೆಲ್ಲರು ವಂದಿಸುತಿಹರು ಖ್ಯಾತ ಸಂಕÀರುಷಣನೆ ಖಂಡಾಖಂಡರೂಪದಿ ನೆಲೆಸಿ ಕೋಶದಿ ಪ್ರೀತಿಯಿಂದಲಿ ವ್ಯಾನನೊಡಗೂಡಿ ನೀನೆ ಯಜ್ಞಭುಕುವು ಯಜುರ್ವೇದವೆ ನಿನ್ನ ಶಿರವಹುದು ಶ್ರುತಿಗಳೊಳು ಭುಜದ್ವಯಂಗಳಾಗಿಹುದು ನುತಿಪ ಪಾಂಚರಾತ್ರಾಗಮ ವೆಂಬುದೆ ನಾಮಕಂಗಳೆನಿಪುದೆ ನಿನ್ನ ಪಾದದ್ವಯಂಗಳು ಖ್ಯಾತ ನಿನ್ನಯ ರೂಪ ಮಹಿಮೆಯ ತಿಳಿಯಲಸದಳವೋ ಜಾತರಹಿತ ನಿನ್ನ ವರ್ಣಿಸೆ ಮಾತು ಮನಸಿಗೆ ನಿಲುಕದಂತಿಹೆ ಖ್ಯಾತ ನೀನಹುದೊ ಮನೋಮಯ ಪ್ರೀತಿಯಿಂದಲಿ ಸಲಹೋ ಎನ್ನನು 3 ಮಹತ್ತತ್ವ ಪ್ರಾಚುರ್ಯದಿಂದಿಹ ಈ ವಿಜ್ಞಾನಮಯಕೋಶದಿ ಶ್ರೀಹರಿ ವಾಸುದೇವಾ ನೀನೆ ನೆಲೆಸಿಹೆ ಅಹರಹ ಬ್ರಹ್ಮ ವಾಯುಗಳಿಂದಲಿ ಮಹಾಪೂಜೆ ವಂದನೆಗೊಳುತಿಹೆ- ಖಂಡಾಖಂಡದಿ ತುಂಬಿಹೆ ದೇಹದೊಳು ಉದಾನನಿಂದೊಡಗೂಡಿ ಸಹಾಯನಾಗಿಹೆ ಜೀವಿಗಳಿಗೆ ಬಾಹ ದುರಿತದಿಂ ಪಾರುಗಾಣಿಸೋ ದೇಹ ದೇಹಿಯ ರೂಪ ನೀ ಸ್ವಗತಭೇದವಿವರ್ಜಿತನೆ ಶಿರವೆ ನಿನ್ನಯ ಶ್ರದ್ಧವೆಂಬೊರು ಮಹಾ ಭುಜಂಗಳೆ ಋತುಸತ್ ಎಂದೆನಿಸಿಕೊಳುತಿಹುದು ಇಹುದು ಮಧ್ಯದೇಶವೆ ಜಗಕೆ ಆಶ್ರಯವೆನಿಪ ಯೋಗಾವು ಮಹವೆಂಬುದೆ ಪಾದವೆನಿಸಿತು ಸೂರ್ಯತೇಜದೊಳು ಮಹಾ ಪ್ರಳಯದಿ ಉದರದೊಳಿಟ್ಟು ಇಹಪರದಿ ರಕ್ಷಿಸುವೆ ದೇವ4 ನಂದಮಯ ಕೋಶವು ತನ್ಮಯ ಅವ್ಯಕ್ತತತ್ವದಿಂದಲಿ ನನ್ನೀಯಿಂದ ಆನಂದಮಯ ಮೂರುತಿ ನಾರಾಯಣನೀ ಕೋಶಾಂತರ್ಗತನು ನೀನೆ ಸಮಾನನೊಡಗೂಡಿಹೆ ಅನಾದಿಲಿಂಗವ ಭಂಗಗೈಸುವಳೋ ಘನಮಹಿಮ ನಿನ್ನ ಅನುಸರಿಸಿ ತಾನಿಪ್ಪಳೋ ಛಿನ್ನ ಭಕ್ತರಿಗೊಲಿಯಳೋ ಅವಿ ಚ್ಛಿನ್ನ ಭಕ್ತರ ಜನನಿ ಎನಿಪಳೋ ಪ್ರಾಪ್ಯನು ಎಂದು ಪ್ರಿಯವೆಂದು ಘನ ದಕ್ಷಿಣೋತ್ತರ ಪಕ್ಷವೆನಿಪೋವು ತನ್ನ ಮಧ್ಯದ ಪ್ರದೇಶವೆಂಬೋದು ಜ್ಞಾನ ಸುಖ ಆನಂದ ಪಾದಗಳು ಬ್ರಹ್ಮನಾಮಕ ವಾಯುವೆಂಬುವರೋ ಆನಂದಮೂರುತಿ ಮಹಿಮೆ ಎಂತಿಹುದೋ ಭಿನ್ನನಾಮದಿ ಕರೆಸುತಲಿ ತಾ ಅ ಭಿನ್ನನಾಗಿ ಚರಿಸಿ ಕೋಶದಿ ಘನಕಾರ್ಯವ ನಡೆಸುತಿರ್ಪೆ ಪನ್ನಗಾದ್ರಿ ಶ್ರೀ ವೇಂಕಟೇಶನೆ 5
--------------
ಉರಗಾದ್ರಿವಾಸವಿಠಲದಾಸರು
ಪಟ್ಟಿಯು ಬಂದಿಲ್ಲ ಕೃಷ್ಣ ಪಟ್ಟಿಯು ಬಂದಿಲ್ಲ ಪಟ್ಟಿಯು ಬಾರದೆ ಕಟ್ಟಲು ಸಾಧ್ಯವೆ ಪ ನಿಷ್ಠುರ ಮಾಡದೆ ಇಷ್ಟ ಬಂದುದ ಮಾಡೊ ಅ.ಪ ಬುದ್ಧಿಯು ಸಾಲದೆ ಬಿದ್ದೆನೋ ಸಾಂಕೆ ಬದ್ದನಾಗಿರುವೆನೋ ತೀರಿಸಲು ಇದ್ದು ಇಲ್ಲೆಂಬುವ ಸುದ್ದಿಯ ಪೇಳುವ ಕ್ಷುದ್ರ ನಾನಲ್ಲವೋ ಉದ್ಧರಿಸಯ್ಯ 1 ಕೊಟ್ಟ ಭಾಗ್ಯವನು ದೂಷ್ಯ ರೀತಿಯಲಿ ಕುಟ್ಟಿ ಕೋಲಾಹಲ ಮಾಡಿದೆನೊ ಇಷ್ಟು ದಿನವು ಬಡ್ಡಿ ಕಟ್ಟಲಿಲ್ಲವೆಂದು ಸಿಟ್ಟು ಮಾಡಿದರೆ ಕೆಟ್ಟು ಹೋಗುವೆನೊ 2 ಭೃತ್ಯರ ಸಲಹುವ ಸತ್ಯ ಸಂಕಲ್ಪನೆ ಭೃತ್ಯನಾಗಿ ನಾ ಸೇವೆಯ ಮಾಡುವೆ ಭಕ್ತರು ಈ ಜನ ಭಕ್ತ ಪ್ರಸನ್ನ ನಾ ನಿತ್ತ ಸಾಲಗಳು ಉತ್ತಾರಾಯಿತೆಂಬೊ 3
--------------
ವಿದ್ಯಾಪ್ರಸನ್ನತೀರ್ಥರು
ಪಂಡರಿಯ ಪುರನಾಥ | ಭಕುತರ ದಾತಾ | ಅಂಡಲೆದು ಜನುಮಗಳ | ಬೆಂಡಾದೆ ಹರಿಯೇ ಪ ಸೂಕರ ಖರದ | ಹೇನು ಹಕ್ಕಿಯ ಮೃಗದಯೋನಿ ಯೋನಿಯ ಚರಿಸಿ | ಬೇನೆಗ್ವೊಳಗಾದೇಮಾನನಿಧಿ ಕಾರುಣ್ಯ | ವೇನ ಬಣ್ಣಿಪೆನಯ್ಯಮಾನವನ ಮಾಡೆನ್ನ | ನೀನಾಗಿ ಪೊರೆದೇ 1 ಕರ್ಮ ಕೋಟಿಗಳಲ್ಲಿ | ಮರ್ಮಗಳ ಮರೆತಲ್ಲಿಒಮ್ಮನದಿ ಸೂತ್ರಗಳ ತದ್ಭಾಷ್ಯಂಗಳಾ ||ಪೇರ್ಮೆಯಲಿ ನೋಡದಲೆ | ಕರ್ಮಚರಿಸಿದೆನಲ್ಲೆಭರ್ಮ ಗರ್ಭನನಯ್ಯ | ನಿರ್ಮಮನ ಮಾಡಯ್ಯ 2 ಸಕಲ ಶಾಸ್ತ್ರಾರ್ಥಗಳ | ಸಕಲ ಸಾರನೆ ಅಖಳಭಕುತ ಜನ ಸಂಸೇವ್ಯ | ಮಧ್ವಮುನಿ ವಂದ್ಯ ||ಸಕಲಾತ್ಮಕನೆ ಗುರು | ಗೋವಿಂದ ವಿಠಲಯ್ಯಸಕಲಕೂ ನೀನೇ ಚೇ | ಷ್ಟಕನೆಂದು ತಿಳಿಸೊ3
--------------
ಗುರುಗೋವಿಂದವಿಠಲರು
ಪಂಢರಿನಾಥ ವಿಠಲ | ತೊಂಡನನು ಸಲಹೊ ಪ ಅಂಡಜಾದಿಪತುರಗ | ಕುಂಡಲಿಯ ಶಯನಾ ಅ.ಪ. ಭವ ಸಮುದ್ರಕೆ ಪೋತ | ತವಪಾದವಾಶ್ರಯಿಸಿಬವಣೆಗಳ ಕಳೆವೆನೆನೆ | ತವಕದಿಂದಿರುವಾ |ಇವನ ಕೈ ಪಿಡಿಯುತ್ತ | ಧೃವವರದ ಸಲಹೋಮಾಧವನೆ ಭಿನ್ನವಿಪೆ ಶ್ರೀ | ಪವನ ವಂದಿತನೇ 1 ಅಂತರಂಗದ ದೈತ್ಯ | ಸಂತತಿಯು ಕೊಡುತಿಪ್ಪಸಂತಾಪ ಹರಿಸಿ ಮ | ಧ್ವಾಂತರಾತ್ಮಾ ಹರಿಯೆಸಂತತವು ತವನಾಮ | ಚಿಂತೆಯಲ್ಲಿರಿಸುತ್ತಸಂತಸವ ಬಡಿಸೊ ಶ್ರೀ | ಕಂತುಹರಸಖನೇ 2 ಇಂದು | ಆಶಿಸುತ್ತಿಹನೇ |ಲೇಸಾದ ಸತ್ಪಂಥ | ದಾಶಯವ ತಿಳಿಸುತ್ತದಾಸನಾಗೆಂದೆನುತ | ಆಶಿಷವನೀವೇ 3 ಹರಿಗುರೂ ಸದ್ಭಕ್ತಿ | ಪರತತ್ವ ಸುಜ್ಞಾನಮರುತ ಮತ ದೀಕ್ಷೆಯನು | ವಿಷಯ ವೈರಾಗ್ಯ |ಕರುಣಿಸುತ ತರಳನ್ನು | ಪೊರೆಯೆಂದು ಬಿನ್ನೈಪೆಕರಿವರದ ಕಮಲಾಕ್ಷ | ಕಾರುಣ್ಯ ನಿಧಿಯೇ 4 ಗಾನಲೋಲನೆ ಇವಗೆ | ಧ್ಯಾನ ಸಾಧನ ಕೊಟ್ಟುಕಾಣಿಸೋ ಹೃದ್ಗುಹದಿ | ಮೌನಿಜನವಂದ್ಯ |ಜಾಣಗುರೂಗೋವಿಂದ | ವಿಠಲ ಮಧ್ಭಿನ್ನತವನೀನಾಗಿ ಸಲಿಸೆಂದು | ಆನಮಿಸಿ ಬೇಡ್ವೆ5
--------------
ಗುರುಗೋವಿಂದವಿಠಲರು
ಪಂಢರಿಯ ಬಿಟ್ಟಲ್ಲಿ ಹೆಂಡತಿಯ ಕರಕೊಂಡುಬಂದ ಕಾರಣ ತಿಳಿಯದೋಹೆಂಡತಿಯ ಕಾಟವೊ ಇದು ನಿನ್ನ ಆಟವೊಭಕ್ತಭೂ'ುಗೆ ಓಟವೊಪಂಢರಿಯ ಬಿಟ್ಟಿಲ್ಲಿ ಬಂದ ಕಾರಣವೇನುಪೇಶಯ್ಯ ಪಾಂಡುರಂಗಾsಚಂದ್ರಭಾಗಾ ತೀರ ಸುಂದರ ಮಂದಿರವುಇಂದಿರಾರಮಣ ನಿನಗಲ್ಲಿ 1ಅರುಣೋದಯಕೆ ನಿತ್ಯ ಪಂಚಾಮೃತದ ಸ್ನಾನನವನೀತ ಬಾು ತುಂಬಾsಜರತಾರಿ ಮುಂಡಾಸು ಭರ್ಜರಿ ನಿಲುವಂಗಿಸೊಂಪಿನಂಚಿನ ಮಡಿಯು ನನಗೆತರತರದ ಪುಷ್ಪಗಳು ಎಳೆ ತುಳಸಿ ವನಮಾಲಿಕೊರಳೊಳಗೆ ವೈಜಯಂತಿಪರಿಮಳದ ಗಂಧ ಕಸ್ತೂರಿ ಫಣಿಯಲಿಟ್ಟುವೈಭವದಿ ಪೂಜಿಸುವರು 2ಅಂದಚೆಂದದ ರತ್ನ ಮುತ್ತಿನಾಭರಣಗಳುತರತರದ ಸೊಗಸಾದ ಪಂಚಪಕ್ವಾನ್ನಗಳುಸರಿಯಾಗಿ ಮಧ್ಯಾಹ್ನ ಮಾಪೂಜೆ ನಡೆಯುವದುಭಕ್ತರಿಗೆ ಲೆಕ್ಕ'ಲ್ಲಾ sಪಾದಕ್ಕೆ ಹಣೆ ಹಚ್ಚಿ ತಿಕ್ಕುವರು ಮೇಲೆದ್ದುನಿಂತುಬಿಡುವರು ಅಲ್ಲಿ ದಬ್ಬಿದರು ಎಚ್ಚರಿಲ್ಲಾಇಂಥ ಭಕ್ತಿಯ ಭಾವ ಇನ್ನೆಲ್ಲಿಯೂ ಕಾಣೆಭಕ್ತವತ್ಸಲ 'ಠ್ಠಲಾs 3ಗೋಧೂಳಿ ಕಾಲಕ್ಕೆ ಪಾದಪೂಜೆಯು ಮಹಾಧೂಪ ದೀಪೋತ್ಸವಗಳುsಆಪಾದಮೌಳಿ ಪರ್ಯಂತ ದರ್ಶನ ಪಾದಸ್ಪರ್ಶದಾ ಆನಂದವೋsರಾತ್ರಿ ಹತ್ತಕ್ಕೆ ಶಯನೋತ್ಸವದ ವೈಭವವುನೋಡಿದವರೇ ಧನ್ಯರುsಸಚ್ಚಿದಾನಂದಮೂರ್ತಿ ಅಲ್ಲಿ ಪ್ರತ್ಯಕ್ಷಭಕ್ತರಿಗೆ ಕಾಣುತಿಹನು 4ಸತ್ಯವಾದೀ ಜಗಕೆ ಪಂಚಭೇದವು ನಿತ್ಯಸರ್ವತ್ರ ತಾರತಮ್ಯಸೃಷ್ಟ್ಯಾದಿ ಅಷ್ಟ ಕರ್ತೃತ್ವ 'ಠ್ಠಲಗುಂಟು'ಠ್ಠಲನೆ ಸವೋತ್ತಮಾsಹರಿಯು ಸರ್ವೋತ್ತಮನು ವಾಯು ಜೀವೋತ್ತಮನುಮೂಲಗುರು ಮುಖ್ಯ ಪ್ರಾಣನುಮಧ್ವಮತವೇ ಮತವು ಸಕಲಶ್ರುತಿಸಮ್ಮತವುನಿತ್ಯ ತತ್ತ್ವಜ್ಞಾನವುs 5ಅಣುರೇಣು ಪರಿಪೂರ್ಣ ಸರ್ವಗುಣ ಸಂಪನ್ನನಿರ್ದೋಷ ನಿರ್'ಕಾರಾsಸರ್ವತಂತ್ರ ಸ್ವತಂತ್ರ ಸರ್ವಾಂತರ್ಯಾ'ುಸರ್ವಜ್ಞ ಸರ್ವಸ್ವಾ'ುsಸಚ್ಚಿದಾನಂದಾತ್ಮ ಪೂರ್ಣಾತ್ಮ ಪರಮಾತ್ಮನಿತ್ಯತೃಪ್ತನು ಶ್ರೀಹರಿsನಿರ್ಗುಣ ನಿರಾಕಾರ ಅ'ುತಗುಣ ಆಕಾರತ್ರಿಗುಣವರ್ಜಿತ ತ್ರಿಧಾಮಾs 6ಕಾರ್ಯಕಾರಣ ಅಂಶಿ ಅಂಶಾವತಾರಅಂತರ್ಯಾ'ುಯಾಗಿ ಇಹನುsಪ್ರೇರ್ಯಪ್ರೇರಕನಾಗಿ ಬಾದ್ಯ ಬಾಧಕನಾಗಿವ್ಯಾಪ್ಯ ವ್ಯಾಪಕನು ತಾನುsಯಾರು ತನ್ನನೆ ನಂಬಿ ಸರ್ವಸ್ವವನು ನೀಡಿದಾಸರಾಗುವರೊ ಅವರನ್ನುsಕ್ಲೇಶಗಳ ಕಳೆದು ಭವಪಾಶ ಬಂಧವ ಬಿಡಿಸಿಶ್ರೀಶ ಕೈಪಿಡಿದು ಪೊರೆವಾs 7'ಷ್ಣು ಸರ್ವೋತ್ತಮತ್ವ ತಿಳಿಯದ ಜ್ಞಾನಶೂನ್ಯರಿಗೆಬೇಸತ್ತು ಇಲ್ಲಿ ಬಂದ್ಯಾ sಭಕ್ತ ಪ್ರಹ್ಲಾದನವತಾರ ರಾಯರು ಇಲ್ಲಿಬಂದದ್ದು ಕೇಳಿ ಬಂದ್ಯಾ sಮಧ್ವಸಿದ್ಧಾಂತ ಪದ್ಧತಿಗೆ ಅನುಸರಿಸಿಪೂಜೆಗೊಂಬಲು ಬಂದೆಯಾsಮುದ್ದುಭೂಪತಿ'ಠಲ ಬಿದ್ದೆ ನಿನಪಾದಕ್ಕೆಉದ್ಧಾರ ಮಾಡೊ ಸ್ವಾ'ು 8ಫಲಶ್ರುತಿಚಿತ್ತನಿರ್ಮಲರಾಗಿ ಭಕ್ತಿಭಾವದಿ ನಿತ್ಯ'ಠ್ಠಲಾಷ್ಟಕ ಪಠಿಸಲು'ಠ್ಠಲನು ಕೈಪಿಡಿದು ಕಷ್ಟಗಳ ಪರಿಹರಿಸಿಇಷ್ಟಾರ್ಥಗಳ ಕೊಡುವನುsಸತ್ಯ'ೀ ಮಾತಿದಕೆ ಸಾಕ್ಷಿ ಬೇಕಾದರೆಪ್ರತ್ಯಕ್ಷ ಪಾಂಡುರಂಗಾsಕಾವೇರಿ ಶ್ರೀರಂಗ ಕಂಬೆವರದರಾಜಗಲಗಲಿಯ ನರಸಿಂಗನೋs 9
--------------
ಭೂಪತಿ ವಿಠಲರು
ಪತಿ ಗೋಪಾಲ | ವಿಠಲ ಕಾರುಣಿಕಾ ಪ ನೀನಾಗಿ ಒಲಿದಿವನ | ಪೊರೆಯೆ ಪ್ರಾರ್ಥಿಸುವೇ ಅ.ಪ. ಉತ್ತಮ ಸುಸಂಸ್ಕøತಿಯ | ಪೊತ್ತು ಜನಿಸುತ ಸರ್ವಕರ್ತೃ ನಿನ್ನಯ ಸೇವೆ | ಅರ್ಥಿಯಂ ಗೈವೆ |ಅರ್ಥಿಸುವ ನಿನ್ನ ದಾಸತ್ವ ದೀಕ್ಷೆಯನೂಸುಪ್ರೀಶ ತೋರ್ದಪರಿ | ಇತ್ತಿಹೆನೊ ಅದಗೇ 1 ಕರ್ಮನಾಮಕನೆ ದುಷ್ಕರ್ಮಗಳ ಪರಿಹರಿಸಿನಿರ್ಮಲ ಸುಸಾಧನಕೆ | ಸನ್ಮಾರ್ಗ ತೋರೋ |ಮನ್ಮಥನ ಜನಕ ತವ | ನಾಮಸ್ಮರಣೆಯ ಕವಚಪೇರ್ಮೆಯಿ ತೊಡಿಸಿ ಸ | ದ್ಧರ್ಮರಥನೆನಿಸೋ 2 ವೃದ್ಧ ಜನಗಳ ಸೇವೆ | ಬುದ್ಧಿಪೂರ್ವಕಗೈದುಮಧ್ವಮತ ಸಚ್ಛಾಸ್ತ್ರ | ತಿದ್ದಿ ಪೇಳುವಲೀ |ಶುದ್ಧಬುದ್ದಿಯನಿತ್ತು | ಉದ್ದರಿಸಬೇಕಿವನಹದ್ದುವಾಹನದೇವ | ಮಧ್ವಾಂತರಾತ್ಮಾ 3 ಅಧಿಭೂತ ಅಧ್ಯಾತ್ಮ | ಅದಿದೈವದೊಳು ನಿನ್ನಅದುಭೂತ ವ್ಯಾಪ್ತಿಯನೆ | ವದಗಿಸಿ ಮನಕೇ |ಬುಧ ಜನೇಢ್ಯನೆ ದೇವ | ಸದಯದೀ ತರಳಂಗೆಹೃದಯದಲಿ ಮೈದೋರಿ | ಮುದವನೇ ಬೀರೋ 4 ದೀರವನು ಎಂದೆನಿಪ | ಪಾವಮಾನೀಯ ಪ್ರಿಯಕೇವಲಾನಂದಮಯ | ಮಾವಿನೋಧೀಸಾವಧಾನದಿ ತರಳ | ಭಾವುಕಗೆ ಒಲಿಯೆಂದುಓದಿ ಭಿನ್ನವಿಪೆ ಗುರು | ಗೋವಿಂದ ವಿಠಲ 5
--------------
ಗುರುಗೋವಿಂದವಿಠಲರು
ಪತಿ ವಿಠಲ | ಉದ್ದರಿಸೊ ಇವಳ ಪ ಮೋದದಾಯಕನಾಗಿ | ಶ್ರೀದ ಶ್ರೀಹರಿಯೇ ಅ.ಪ. ದಾಸರಾಯರ ಕರುಣ | ವಾಶ್ರಯಿಸಿ ದಿನದಿನದಿಲೇಸು ಕೊಂಡಾಡುತಲಿ | ಮೇಶ ದಾಸರನೂಭಾಸುರ ಸುಗಾನ ಉ | ಲ್ಲಾಸದಲಿ ಮೈಮರೆದುಕೇಶವನ ಗುಣವನಧಿ | ಈಸುವಂತೆಸಗೋ 1 ವ್ಯಾಜ ಕರುಣೀಮಾಜದಲೆ ವೆಂಕಟನ | ನೈಜ ರೂಪವ ಕಂಡವ್ಯಾಜದಲ್ಲಿಂಕಿತಳು | ವಾಜಿ ಮುಖ ಹರಿಯೇ 2 ವಲ್ಲಭೆಯು ಶ್ರೀ ತುಳಸಿ | ಚೆಲ್ವಶಿಲೆ ಸುತ್ತುತಲಿನಲ್ಲ ಹರಿಪರಿ ಪೂರ್ಣ | ಎಲ್ಲೆಡೆಯಲೆಂಬಾಸೊಲ್ಲನಿವಳಿಗೆ ತೋರಿ | ಸಲ್ಲಿಸಿಹ ಹರಿಸೇವೆಬಲ್ಲವರ ಬಲ್ಲರೋ | ಘುಲ್ಲಕರಿಗಲ್ಲಾ 3 ಹರಿಗುರೂ ಸದ್ಭಕ್ತಿ | ಗುರು ಹಿರಿಯರ ಸೇವೆ ಕರುಣಿಸುತ ಕನ್ಯೆಯನು | ಪೊರೆಯುವುದು ಸತತಗಿರಿಜೆ ದರ್ಶನ ಫಲಕೆ | ಸರುವ ಮಂಗಳವಿತ್ತುನಿರುತ ಸಲಹೆಂದಿವಳ | ಪ್ರಾರ್ಥಿಸುವೆ ಹರಿಯೇ 4 ಮಧ್ವರಾಯರ ಮತದಿ | ಶುದ್ಧ ಬುಧಿಯನಿತ್ತುಮಧ್ವೇಶ ಹರಿಪಾದ | ಹೃದ್ಗುಹದಿಕಾಂಬಅಧ್ಯಾನಲ್ಲಿವಳ | ಬದ್ಧಳನೆ ಮಾಡಿ ಪೊರೆಮಧ್ವಾಂರಾತ್ಮ ಗುರು | ಗೋವಿಂದ ವಿಠಲಾ5
--------------
ಗುರುಗೋವಿಂದವಿಠಲರು
ಪತಿ ವಿಠಲ ನೀನಿವಳ ಕಾಯಬೇಕೊ ಪ ಕರುಣಾದ್ರ್ರ ಹೃದಯ ನಿನ್ನಡಿಗೆ ಮೊರೆಯಿಡುವೇ ಅ.ಪ. ಮಾನವ ಸುಜನ್ಮದಲಿ ನೀನಿವಳ ತಂದಿರುವೆಜ್ಞಾನಸಾಧನವ ಮಾರ್ಗ ಕಾಣದಲೆ ಬರಿದೇ |ಮಾನಿನಿಯ ಆಯುಷ್ಯ ಬರಿದೆ ಪೋಯಿತು ಹರಿಯೆನೀನಾಗಿ ಸಲಹಿವಳ ದೀನಜನ ಬಂಧೋ 1 ಪಂಚಭೂತಾತ್ಮಕದ ಈ ದೇಹ ಸ್ಥಿರವಲ್ಲಕೊಂಚಮತಿಯನು ಕಳೆದು ಸರ್ವಾಂತರಾತ್ಮ |ಪಂಚಭೇದವನರುಹಿ ಮುಂಚೆ ತರತಮ ತಿಳಿಸಿಪಂಚ ಪಂಚಾತ್ಮಕನೆ ಸಲಹ ಬೇಕಿವಳಾ 2 ಹರಿಗುರೂ ಸದ್ಭಕ್ತಿ ಮರಳಿ ವೈರಾಗ್ಯವನೆ ಕರುಣಿಸೂವುದು ಹರಿಯೆ ದುರಿತಾಂಧ ರವಿಯೆ ಹರಿಗೋಲುಭವನಿಧಿಗೆ ಎಂದೆನಿಪ ತವನಾಮ ಸ್ಮರಣೆ ಸಂತತವಿತ್ತು ಪೊರೆಯ ಬೇಕಿವಳಾ 3 ಜೇನು ಸವಿಯಂತಿಪ್ಪ ಆನಂದಕರ ಶಾಸ್ತ್ರಮಾನನಿಧಿ ಮಧ್ವಾಖ್ಯ ಸಾನುರಾಗದಲೀ |ಕ್ಷೋಣಿಸುರರುದ್ಧಾರ ಕಿತ್ತಿಹುದ ನೀನರುಹಿಜ್ಞಾನಗಮ್ಯನೆ ಕಾಯೊ ಪ್ರಾಣಾಂತರಾತ್ಮ 4 ಇಂದೀವರಾಕ್ಷಹರಿ ದ್ವಂದ್ವಗಳ ಸಹನೆಯನುತಂದೆ ಕರುಣಿಸಿ ಕಾಯೊ ಕಂಜದಳ ನೇತ್ರಅಂದು ಇಂದಿಗು ಮುಂದೆ ಎಂದೆಂದು ಗತಿ ನೀನೆಎಂದು ನಂಬಿಹೆ ಗುರು ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಪತಿತಪಾವನಾನಾಥ ಬಂಧು ಪ ಗತಿಶೂನ್ಯನಾಗಿ ಮನದಿ ಗತಿ ಏನೆಂದಳಲಿದೆನು ಗತಿನೀನೆ ಎಂಬಜನರ್ಯಾವತ್ತು ಭಾರವಹಿಸೀದಭವ 1 ಸತತ ನೀನೆ ಗತಿಯು ಎಂದು ನುತಿಪಭಕ್ತಿರ್ಹಿತದಬಂಧು ಬಟ್ಟೆ ವ್ಯರ್ಥ ದೇವ 2 ತಂದೆ ನೀನೆಗತಿಯೆನ್ನಲು ಬಂದಿ ಕಂಬ ಒಡೆದು ನೀನು ಮಂದರೋದ್ಧರ ಕರುಣಾಮಂದಿರನೆಂದು ನಂಬಿದೆ ಶ್ರೀರಾಮ3
--------------
ರಾಮದಾಸರು
ಪಥ ಕೇಳಿನ್ನು ಪ ಅಂತರಂಗದಲಿ ಶಾಂತಿಯ ತಾಳಿ | ಅಂತರಾತ್ಮನು ನೀನೆನ್ನು | ಸತಿಸುತರಿಗೆ ಗತಿಯೇ ನಂಬಿದೆ | ಗತಿಯಿದ್ದದ್ದಾಗುವದೆನ್ನು | ಅತಿಶಯ ದುಷ್ಕರ್ಮಿಗಳು ನಿಂದಿಸೆ | ಕೃತ ಪೂರ್ವದ ಫಲವೆನ್ನು || ಸತತ ದ್ರವ್ಯವ ಬಯಸಿ ಗಳಿಸಿದೆ | ಗತಿಯಾಗುವದದು ಏನು ? | ಪತಿತ ಪಾವನ ರಘೂನಾಥನ | ನಾಮವ ಗುಪಿತದಿ ಜಪಿಸೊ ನೀನು 1 ಅಣ್ಣ ತಮ್ಮ ತಾಯಿ ತಂದೆ ಬಳಗದ | ಕಣ್ಣು ಮುಂದಿರಬೇಡಿನ್ನು | ಬಣ್ಣ ಬಣ್ಣ ಮಾತುಗಳಾಡಲು | ಪುಣ್ಯವು ಅದರಲಿ ಏನು ? || ಹೆಣ್ಣು ನೋಡಿ ಮನದಲಿ ಹಿಗ್ಗುವಿ | ಮಣ್ಣು ಕೂಡಿತದು ಏನು ? | ಹಣ್ಣು ಹಾಲು ಮೃಷ್ಟಾನ್ನಕಿಂತ ನೀ | ಉಣ್ಣು ಬ್ರಹ್ಮಾನಂದಾಮೃತವನ್ನು 2 ಅಂಶವುಳಿಯಬೇಕೆಂದರೆ ಈ ಜಗ- | ದಂಶವು ನನ್ನದು ಎನ್ನು | ಮಾಂಸಪಿಂಡ ಮುಖಾಂಡ ದಹನವು ಹುತಾಶನಗಾಹುತಿ ಎನ್ನು | ಕಂಸನ ತಂಗಿಯ ಮಗ ಪಾರ್ಥಗೆ ಹೇಳಿದ | ಸಂಶಯವ್ಯಾತಕೆ ಇನ್ನು | ಹಂಸ ಪರಮರ ಐಕ್ಯವ ತಿಳಿಯದೆ | ಹಂಸೋಹಂ ಎಂದರದೇನು ? 3 ನೋಡಿದುದೆಲ್ಲಾ ಪುಸಿಯೆಂದು | ಮಾಡೋ ನಿಶ್ಚಯವಿನ್ನು | ಆಡಬೇಡ ಅನೃತ ವಚನವನು | ಆಡುತಲಿರು ಸತ್ಯವನು | ಕೂಡಬೇಡ ಕಾಮಂದಿಯ ಸಂಗ | ಕೇಡು ತಪ್ಪದದಿನ್ನು | ರೂಢಿಯೊಳಗೆ ನರನಾಗಿ ಪುಟ್ಟಿ | ಮಾಡುತ ನಡಿ ಧರ್ಮವನು 4 ಮೂರ್ತಿ ಪಡಿ | ನಾದವನಾಲಿಸು ನೀನು 5
--------------
ಭಾವತರಕರು
ಪದುಮನಾಭನ ಚರಿತೆಯು ಪರಮಾದ್ಭುತವು ಪ ಯದುಕುಲ ಲೋಲನ ವಿಧ ವಿಧ ಲೀಲೆಯೊ ಪದೇ ಪದೇ ನೆನೆಯಲು ಪರಮಹರುಷ ಮನಕೆ ಅ.ಪ. ದೇವತೆಗಳ ಮೊರೆ ಲಾಲಿಸಿ ಭುವಿಯೊಳು ದೇವಕಿ ಸುತನಾಗಿ ಜನಿಸಿದನು ಗೋವಳರೊಡಗೂಡಿ ಗೋವ್ಗಳ ಕಾಯ್ದ ಬೃಂ ದಾವನ ಲೋಲನು ಶ್ರೀವೇಣುಗೋಪಾಲ 1 ಕಾಮಜನಕ ಸರ್ವಕಾಮಿತದಾಯಕ ಕಾಮಿನಿಯರ ಕೂಡೆ ಕ್ರೀಡಿಸಿದನನಘ ಆ ಮಹಾಭಕ್ತ ಅಕ್ರೂರನಿಗೊಲಿದನು ತಾಮಸ ಕಂಸನ ಧ್ವಂಸಗೈದನು ದೇವ 2 ಕರಿಗಿರೀಶ ಮುಚುಕುಂದ ವರಪ್ರದ ಸರಸಿಜಾಕ್ಷ ಶ್ರೀರುಕ್ಮಿಣಿರಮಣ ಸುರರಿಪು ನರಕಾಸುರ ಸಂಹಾರಕ ಸುರಮಾತೆಗೆ ಕುಂಡಲಿಗಳನಿತ್ತನು 3
--------------
ವರಾವಾಣಿರಾಮರಾಯದಾಸರು
ಪದ್ಮೇಶ ವಿಠ್ಠಲನೆ | ಪೊರೆಯ ಬೇಕಿವನಾ ಪ ಸನ್ಮುದವ ನೀನಿತ್ತು ಪ್ರೇಮದಲಿ ಸಲಹೋ ಅ.ಪ. ಮನೊಮಾನಿ ಒಡೆಯನೇ | ಮನಸಿನಲಿ ನೀನಿದ್ದುಮನೊ ವಿಕಾರಕ್ಕೆಡೆಯು | ಉಚಿತವೇ ಹರಿಯೇ |ಮನಶಾಂತಿ ಕರುಣಿಸುತ | ಘನ್ನ ಸಾಧನಗೈಸೆಗುಣ ಉಳ್ಳವನು ಇವನು | ಅನಿಲಾಂತರಾತ್ಮಾ 1 ಆದಿ ಮೂರುತಿ ಹರಿಯೆ ಭೇಧ ಪಂಚಕತಿಳಿಸಿಮೋದ ತೀರ್ಥರ ಶಾಸ್ತ್ರ | ಭೋಧ ವದಗಿಸುತಾಸಾಧನ ಸುಮಾರ್ಗದಲಿ | ನೀದಯದಲಿಡು ಇವನವೇದಾಂತ ವೇದ್ಯ ಹರಿ | ಬಾದರಾಯಣನೇ 2 ತೈಜಸನು ನೀನಾಗಿ | ಯೋಜಿಸಿದ ಅಂಕಿತವಮಾಜದಲೆ ಇತ್ತಿಹೆನೊ | ಕಾರುಣ್ಯಮೂರ್ತೇಮೂಜಗಜ್ಜನ್ಮಾದಿ | ಕಾರಣನೆ ಸಂಸಾರಗೋಜುಗಳ ಬಿಡಿಸೊ ನಿ | ವ್ರ್ಯಾಜ ಮೂರುತಿಯೇ 3 ಸಾಧು ಸತ್ಸಂಗಗಳ | ನೀ ದಯದಿ ಕೊಟ್ಟವಗೆಕಾದುಕೋ ಕೈ ಬಿಡದೆ | ಯಾದವರೊಡೆಯಾಬಾಧೆ ಮನಸಿಗೆ ಬಂದಿ | ಹುದ ಕಳೆದು ಸಂತವಿಸುಮೋದ ಮುನಿ ಸಂಪ್ರೀಯ | ಧನ್ವಂತ್ರಿ ದೇವಾ 4 ಪತಿ ಗುರೂ | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಪದ್ಯ ಅಥಃ ಪ್ರಥÀಮೋಧ್ಯಾಯ ಪಾದ ವಾರಿಜಕೆರಗುತ ನೀರಜ ಮುಖಿ ಸರಸ್ವತಿಯಾ || ಸಾರ ಭಕ್ತಿಲಿ ಸ್ತುತಿಸಿ ಪೇಳುವೆ ಸತ್ಯ ಚಾರು ಕಥೆಯಾ ಪ ಸುರಮುಖಿವಂದಿತ ಸರಸಿಜ ಭವಪಿತ ಶರಧಿ ಕರಿವರದಾ | ಹರುಷದಿಂದಲಿ ನಿನ್ನ ಚರಿತೆ ಕೊಂಡಾಡಲು ವರವ ಪಾಲಿಸು ದಯದಿಂದ 1 ಶರನಿಧಿ ಸಂಭೂತೆ ಸುರಜೇಷ್ಟ ಸ್ಮರಮಾತೆ ಪುರಹರ ವಂದಿತೆ ಖ್ಯಾತೆ || ಸ್ಮರಿಸಿ ಬೇಡುವೆ ನಿನ್ನ ಧೊರಿಯ ವರ್ಣಿಸಲೀಗ ಗರಿಯೆ ವರವ ಸುಖದಾತೆ 2 ಹರಿಕುಲೋತ್ತುಮ ನಿನ್ನ ಸರಸಿಜ ಪದಯುಗ ನೆರೆನಂಬಿದೆನು ಮುದಿಂದ || ಹರಿಸುಚರಿತ್ರವು ಅರುಹಲು ಎನ್ನಗೆ ಸ್ಥಿರ ಬುದ್ಧಿಕೊಡು ವಾಯುಕಂದ 3 ಗಿರಿಜೇಶ ಶಚಿಪತಿ ಸುರತತಿಗೆರಗುವೆ ಪರಮ ಸುಭಕ್ತಿ ಪೂರ್ವಕದಿ || ಹರಿದಾಸ ವರ್ಗಕೆ ಶುಭನೀಡಲೆನಗೆಂದು ಶಿರಬಾಗಿ ಬೇಡುವೆ ಮನದಿ 4 ಘನತರ ನೈಮಿಷವನದೊಳು ವಾಸಿಪ ಮುನಿ ಸೂತನಲ್ಲಿಗೆ ಬಂದು | ವಿನಯದಲಿ ವಿಜ್ಞಾಪನ ಮಾಡಿಕೊಂಡರು ಶೌನಕಾದಿಗಳೆಲ್ಲ ನಿಂದು 5 ಕ್ಷಿತಿಯೊಳು ಮನದಾಸೆ ಹಿತದಿಂದ ನೀಡುವ | ವ್ರತದಾವದ್ಹೇಳಿರೆನುತ || ಅತಿ ಭಕ್ತಿಯಿಂದ ಕೇಳುವ ಮುನಿಗಳ ಕಂಡು ಕಥಿಸಿದನಾಗೆತಿ ಸೂತಾ 6 ಛಂದದಿ ಕೇಳಿರಿ ಒಂದೆ ಮನದಿ ಈಗಾ | ನಂದದಿ ನಾರದ ತಾನೂ || ಹಿಂದಕ್ಕೆ ಈತೆರ ನಂದನ ಗೋ ವಿಂದನ ಪ್ರಶ್ನೆ ಮಾಡಿದನೂ 7 ಕಾರುಣ್ಯದಿಂದಲಿ ಸಾರಸೋದ್ಭವಕು | ಮಾರ ನಾರದ ಮುನಿವರಗೆ || ಶೌರಿ ಪೇಳಿದ ಕಥೆ ಸಾಧುವೆ ಮೋದದಿ ನಿಮಗೆ 8 ವರಸುರ ಲೋಕಾದಿ ಚರಿಸುತ್ತನಾರದ | ಹರುಷದಿ ಭೂಮಿಗೆ ಬರಲು || ನರರತಿ ಕಷ್ಟದಿ ಮರುಗುವದಂ ನೋಡಿ | ಪೊರೆಟರು ಹರಿಗ್ಹೇಳಿ ಕೊಳಲು 9 ಪದುಮಜ ಸುತ ನಾರದ ಮುನಿ ವೇಗದಿ | ವಿದುಧರ ವಂದಿತನಾದ || ಯದುಪನಲ್ಲಿಗೆ ಬಂದು ಮುದಮನದಿಂದಲಿ | ವಿಧ ವಿಧದಲಿ ಸ್ತುತಿಗೈದಾ 10 ಅಗಣಿತ ಮಹಿಮನೆ ತ್ರಿಗೂಣ ವರ್ಜಿತ ತ್ರಿವಿಕ್ರಮನೆ || ಪೊಗಳುವ ತವ ಪದಯುಗಕೆರಗುತ ನಾನು ಜಗದುತ್ವತ್ತಿ ಕಾರಣನೆ 11 ಮಗಳಲ್ಲಿ ಪುಟ್ಟದಿ ಮಗನನ್ನು ಕುಟ್ಟದಿ | ಮಗನ ಮಗಳ ಮದುವ್ಯಾದಿ || ಮಗನ ಮಗನ ವರಪಡೆದಾತನ ಜೈಸಿ ಮಗನ ಮಗನ ನೀನು ತಂದಿ 12 ಸಿಂಧುಜರಿಪ್ರಸಖ ನಂದನ ಕೊಂದನ | ತಂದೆಯ ತಂದೆಯಾ ಸುತೆಯಾ || ನಂದಿನಿಯಳಿಗಾಗಿ ನೊಂದಿದಿ ನೀ ನರ ರಂದದಿ ಕವಿಗಣಗೇಯಾ 13 ಘನ್ನ ಮಹಿಮ ನಿನ್ನ ಅನಂತ ಚರಿಯವ ಬಣ್ಣಿಸ ಬಲ್ಲೆನೆ ದೇವಾ || ಪನ್ನಗರಾಜಗಾಗಣ್ಯವಾಗಿಪ್ಪುದು ಮನ್ನಿಸು ಎನ್ನ ಬಿನ್ನಪವಾ 14 ಬಾ ಮುದ್ದು ನಾರದನೆ ಬಾ ಮುನಿವರ್ಯನೆ ಬಾ ಮೂರು ಭುವನ ಸಂಚಾರಿ ನೇಮದಿಂದಲಿ ನಿನ್ನ ಕಾಮಿತ ಪೇಳೀಗ ಪ್ರೇಂದಿಂದಲಿ ವೀಣಾಧಾರಿ 15 ಮುರಹರ ನಿನ್ನಗೆ ಅರಿಯದ ವಾರ್ತೆಯು | ಧರಣಿ ತ್ರಯದಿ ಉಂಟೇನೋ || ನರರತಿ ಕಷ್ಟದಿ ಮರುಗುತಲಿಪ್ಪರು ಹರಿಪೇಳಿದಕುಪಾಯವನು 16 ಸತ್ಯಲೋಕೇಶನ ಪುತ್ರನೆ ನಿನ್ನಯ | ಉತ್ತಮ ಪ್ರಶ್ನೆಗೆ ನಾನು || ಚಿತ್ತೈಸು ಮುನಿವರ ನೀನು 17 ನಾರದ ಶ್ರೀ ಸತ್ಯನಾರಾಯಣ ವ್ರತ ಧಾರುಣಿಯೊಳಗಿನ ಜನರು ಆರು ತಮ್ಮ ಪರಿವಾರದಿಂದಲಿ ಗೈಯ್ಯೆ ಭೂರಿ ಸೌಖ್ಯದಿ ಮೆರೆವರೋ 18 ದೇವನೆ ಈ ನಿನ್ನ ಸೇವಕನಿಗೆ ಸತ್ಯ || ದೇವನೆ ವ್ರತದ ವಿಧಾನ || ಸಾವಧಾನದಿ ಪೇಳು ಭಾವ ಜಪಿತ ಏಕೋ ಭಾವದಿ ಕೇಳುವೆ ಮುನ್ನ 19 ಬುಧನುತ ನಾರದ ಘೃತಕ್ಷೀರ ಶರ್ಕರ | ಕದಳಿ ಗೋಧೂ ಮಾದಿಗಳನು || ಪದುಳದಿಂದಲಿ ಸುಪಾಕಗೈದು ಮೇಣ್ ವಿಧ ವಿಧ ಪಕ್ವಾದಿಗಳನು 20 ಪರಮ ಭಕ್ತಿಯಲಿಂದ ಪರಿವಾರ ಸಹಿತದಿ ಧರುಣಿಸುರನ ಪರಿಮುಖದಿ ತುರಧೂಳಿಕಾಲದಿ ಪರಿಪರಿ ಪೂಜಿಸಿ ಹರಿಗರ್ಪಿಸಲಿ ಬೇಕು ಮುದದಿ 21 ಈರೀತಿಗೈವರ ಕೋರಿಕೆಯನು ದಯ | ವಾರಿಧಿ ಶಾಮಸುಂದರನೂ || ನಿತ್ಯ ವಾರಿಜಸಹಿತದಿ ಸೇರಿ ತಾ ನಲಿದಾಡುತಿಹನೂ 22 ಇತಿ ಪ್ರಥಮೋಧ್ಯಾಯ ಸಂಪೂರ್ಣಂ ಅಥಃ ದ್ವಿತೀಯೋಧ್ಯಾಯಃ ಅತಿ ಮೋದದಿಂದಲಿ ಮತಿಯುತರೆ ಈಗ ಪೃಥವಿಯೊಳಗೆ | ಪೂರ್ವದಲಿ || ವ್ರತಗೈದ ಸುಗುಣರ ಇತಿಹಾಸ ನಿಮ್ಮಗೆ ಕಥಿಸುವೆ ಹಿತದಿಂದ ಕೇಳಿ 1 ಕಾಶಿಯೊಳಗೆ ಒಬ್ಬ ಭೂಸುರ ಬಡತನ ಕ್ಲೇಶದಿ ವಾಸಿಸುವದನು || ಶ್ರೀಶ ಅವನ ನೋಡಿ ಪೋಷಿಸಲು ವೃದ್ಧ ವೇಷದಿ ಮಾತನಾಡಿಸಿದನು 2 ಭೂತವಕದಿ ವಿಪ್ರನಾಥನೆ ತವ ಮುಖ ಪಾಥೋಜ ಬಾಡಿದ ಬಗೆಯಾ ಈ ತೆರ ದುಃಖದಿ ನೀ ತಿರಗುವಂಥ ಮಾತು ಪ್ರೀತಿಲಿ ಪೇಳಯ್ಯಾ 3 ಕಥಿಸುವೆ ಹೇವಿಪ್ರ ಹಿತದಿಂದ ನೀಯನ್ನ | ಸ್ಥಿತಿಯಾ ಲಾಲಿಸು ಮನದಿಂದಾ || ಗತಿಗೆಟ್ಟು ಚರಿಸುವೆ ಪೃಥಿವಿಯೊಳಗೆ ಈಗ ಅತಿ ಬಡತನ ದೆಶೆಯಿಂದಾ 4 ಶ್ರೇಷ್ಟನೆ ದಾರಿದ್ರ್ಯ ಕಷ್ಟ ತೊಲಗುವಂಥ | ಥಟ್ಟನೆ ನೀ ಪೇಳುಪಾಯಾ || ಘಟ್ಪ್ಯಾಗಿ ನಿನ್ನ ಉತ್ಕøಷ್ಟ ಪಾದಾಂಬುಜ ಮುಟ್ಟಿ ಸೇವಿಪೆ ಮಹರಾಯಾ 5 ಮಿಡುಕುತ್ತ ವಿಪ್ರನು ನುಡಿದ ಮಾತನುಕೇಳಿ | ಕಡಲಜಪತಿ ಕವಿಗೇಯಾ || ಕಡುದಯದಲಿ ಪೇಳ್ದ ಬಡತನ ಕಳೆಯುವ ಪೊಡೆವಿಯೊಳಿದ್ದ ಉಪಾಯಾ 6 ಸಾರುವೆ ಕೇಳಯ್ಯ ಮಾರಜನಕ ನಿಜ | ನಾರಾಯಣನ ಸು ವ್ರತವಾ ಆರು ಜಗದಿ ಭಕ್ತಿ ಪೂರ್ವಕ ಮಾಳ್ವರು ದಾರಿದ್ರ್ಯ ಹರಿ ದೂರಗೈವಾ 7 ಮುದುಕನ ನುಡಿಕೇಳಿ ಮುದಮನದಿಂದಲಿ ಸದನಕ್ಕೆ ದ್ವಿಜ ಬಂದು ತಾನೂ ಸುದತಿ ಸಹಿತನಾಗಿ ಸತ್ಯನಾಥಾನ ಪೂಜೆ ವಿಧ ವಿಧದಲಿ ಮಾಡಿದನೂ 8 ಹರುಷದಿ ಈ ರೀತಿ ಧರಣಿ ದೇವನು ಮಾಡೆ | ಶಿರಿಸತಿ ಸುತರಿಂದ ತಾನೂ || ಧರೆಯೊಳು ಸುಖಬಿಟ್ಟು ಪರಮ ದುರ್ಲಭವಾದ ಪಥ ಹಿಡಿದನೂ 9 ಸೂತರೆ ಅತ್ಯಂತ ಕೌತುಕವಾಗಿಹ ಧಾತ ಪಿತನ ಈ ವ್ರತವು ಭೂತಳದೊಳಗೆಂತು ಖ್ಯಾತಿಯ ಪೊಂದಿತು ಪ್ರೀತಿಲಿ ಪೇಳಿರಿ ನೀವು 10 ಸತಿಸುತ ಪರಿವಾರ ಸಹಿತಾ ಅತಿ ಹಿತದಲಿ ಮನೋರಥ ಪೂರೈಸುವ ಈ ವ್ರತ ಮಾಡುತಿರಲಾಗತ್ವರಿತಾ 11 ಚರಣನೋರ್ವನು ಶಿರದಿ ಕಾಷ್ಟಭಾರವ ಧರಿಸಿ ಮಾರಲು ಬೀದಿಗಳಲಿ ಬರುತಿರೆ ಮಾರ್ಗದಿ ಧರಣಿದೇವನೆ ಮಂ ದಿರ ಕಂಡ ಪರಮ ಮೋದದಲಿ 12 ಶ್ರೀನಿವಾಸನ ಘನಧ್ಯಾನದಿಂರ್ಚಿಪ ಕ್ಷೋಣಿ ಸುರನ ನೋಡಿ ಜವದಿ ಮಾನವ ಕೇಳಿದ ಏನಿದೆಂದೆನು ತಲಾಕ್ಷಣದಿ 13 ಶೂದ್ರನ ನುಡಿ ಕೇಳಿ ಆ ದ್ವಿಜ ಪೇಳ್ದನು ಶುದ್ಧ ಮನದಿ ಚರಣೋಧ್ಭವ ಗೈದನಿ ಶುದ್ಧನ ಪಾದಾರ್ಚನವಾ 14 ಹರುಷದಿಂದಲಿ ಸತ್ಯ ಹರಿ ಪೂಜಿಸಿದ ಶೂದ್ರ ಪರಮ ಸೌಜನ್ಯದಿ ಇದ್ದು ಕೊನೆಗೆ ಪರಿವಾರಯುತನಾಗಿ ತೆರಳಿದ ಸ್ಥಿರ ಉಳ್ಳ ಶಿರಿಶಾಮಸುಂದರನ ಪುರಿಗೆ 15 ಇತಿ ದ್ವಿತೀಯೋಧ್ಯಾಯ ಸಂಪೂರ್ಣಂ ಅಥಾಃತೃತೀಯೋಧ್ಯಾಯ ಋಷಿ ಜನಗಳೆ ಕೇಳಿ ವಸುಧಿ ತ್ರಯದಿ ಘನ ಪೆಸರಾದ ಇನ್ನೊಂದು ಕಥೆಯಾ ಉಸುರುವೆ ಕೇಳ್ವರ ವ್ಯಸನವು ಪರಿಹಾರ ಪುಸಿಯಲ್ಲಿ ಈ ನುಡಿ ಖರಿಯಾ 1 ವರ ಉಲ್ಕಮುಖನೆಂಬ ಧರಣೀಶನೋರ್ವನು ಹರುಚದಿಂದಲಿ ತನ್ನ ಹಿತದಾ ಶರಧಿ ತೀರದಿ ನಿಜ ಹರಿಯನ್ನು ಪೂಜಿಸುತಿರ್ದ 2 ಕ್ಷೋಣಿಪಾಲಕನಿದ್ದ ಆ ನದಿತೀರದಿ | ವಾಣಿಜ್ಯ ಮಧುನಾಯಕನೂ || ಸಾನುರಾಗದಿ ಬಂದು ಶ್ರೀನಿಧಿ ವ್ರತದ ವಿ ಧಾನವೇನೆಂದು ಕೇಳಿದ 3 ಭೂಮಿಪಾಲಕ ಮಧುನಾಮಕ ವೈಶ್ಯನ ಆ ಮೃದು ನುಡಿಕೇಳಿ ಜವದಿ ಕಾಮಿತದ ಸತ್ಯ ಸ್ವಾಮಿಯ ವ್ರತ್ತದಾ ನೇಮವ ಪೇಳ್ವ ಸಮ್ಮುದದಿ 4 ರಕ್ಕಸಾರಿಯ ಕಥಾ ಭಕ್ತಿಲಿ ಕೇಳುತ ಲಕ್ಕುಮಿಯುತ ಮುದದಿಂದ ಮಕ್ಕಳೆನಗಾಗಲು ಚಕ್ರಿಯ ಸುವೃತ ಅಕ್ಕರದಲಿ ಮಾಳ್ಪೆನೆಂದ 5 ಈ ರೀತಿ ಧೃಡ ಬ್ಯಾಪಾರಿಯು ತಾಗೈದು ಶೌರಿ ಪ್ರಸಾದ ಸ್ವೀಕರಿಸಿ || ಸಾರಿ ಪೇಳಿದ ತನ್ನಾಗಾರಕ್ಕೆ ಬಂದು ತಾ ನಾರಿಯ ಮುಂದೆ ವಿಸ್ತರಿಸಿ 6 ಸತಿ ಶಿರೋಮಣಿ ಲೀಲಾ ವತಿಯು ತನ್ನ ಮಂದಿರದಿ || ಪತಿ ಕರುಣದಿ ಗರ್ಭ ವತಿ ತಾನಾದಳಾಕ್ಷಣದಿ 7 ಹತ್ತನೆ ಮಾಸದ ಉತ್ತಮ ಪುತ್ರಿಯ ಪೆತ್ತಳು ಆ ನಾರಿ ತಾನೂ || ಅತ್ಯಂತ ಸನ್ಮುದ ಚಿತ್ತನಾಗಿ ಸಾಧು ಮರ್ತನು ಹರಿವ್ರತವನ್ನು 8 ಸತಿ ಲೀಲಾವತಿ ತನ್ನ ಪತಿಗಭಿವಂದಿಸಿ ನಿಂದು || ಅತಿ ಭಕ್ತಿಯಿಂದಲಿ ಕಥಿಸಿಕೊಂಡಳಲ ಯದು ಪತಿ ವ್ರತ ಮಾಡಬೇಕೆಂದು 9 ಸುದತಿಯ ನುಡಿಕೇಳಿ ಮಧುನಾಮಕ ಸಾಧು ವಿಧಿಸಿದ ಸುತೆ ಕಲಾವತಿಯಾ || ಮದುವೆಯ ಕಾಲದಿ ಉದುಪನರ್ಚಿಪೆನೆಂದು ಮುದದಿಂದ ಪೇಳ್ದನುಪಾಯಾ 10 ಪರಿಪರಿ ಸೌಖ್ಯದಿಂದಿರುತಿರೆ ವೈಶನ ತರುಳೆಗೆ ಪೂರ್ಣಯೌವನವು | ಬರಲು ಮಾಡಿದ ತಕ್ಕವರ ತಂದು ಲಗ್ನವ ಮರೆತು ಬಿಟ್ಟನು ಹರಿವ್ರತವಾ 11 ಶ್ರೀಮಂತವೈಶ್ಯನು ಪ್ರೇಮದಿಂದಲಿ ತನ್ನ ಜಾಮಾತನೊಡನೆ ವ್ಯಾಪಾರಾ ನೇಮದಿ ಗೈಯಲು ಗ್ರಾಮ ತ್ಯಜಿಸಿ ಪೋದಾ ಆ ಮಹಾಪುರ ರತ್ನಸಾರಾ&ಟಿbs
--------------
ಶಾಮಸುಂದರ ವಿಠಲ
ಪನ್ನಗ ನಗಾಧೀಶ ಅಗಣಿತ ಗುಣಾನಂದ ಚಿದ್ಘನ ಪರೇಶ ಪ. ಜಗದ ಜೀವರಿಗೆ ಬಗೆ ಬಗೆ ವೇಷವ ತೊಡಿಸಿ ಸೊಗಸಿನಿಂದಲಿ ನೋಡಿ ನಗುತಲಿಹೆಯೊ ತ್ರಿಗುಣಮಾನಿನಿಯೊಡನೆ ಹಗಲಿರುಳು ಕ್ರೀಡಿಸುತ ಮಿಗೆ ಹರುಷದಿಂದಿರುವ ಖಗವರಧ್ವಜ ಹರಿಯೆ 1 ನಾನಾವತಾರದಲಿ ನಂಬಿದ ಸುರಾದಿಗಳಿ- ಗಾನವಾರಿಧಿಯ ಸ್ನಾನ ಮಾಡಿಸುವಿ ದೀನತ್ವದಲಿ ನಿನ್ನ ಧ್ಯಾನವೇ ಗತಿಯೆಂದು ನಾನಿದಿರು ಬಂದೆರಗೆ ಮಾನಿಸದೆ ಮರುಳಾಗಿ 2 ಅಂತರಾತ್ಮಕನಾಗಿ ಚಿಂತನಾದಿಗಳ ಬಲ ವಂತದಲಿ ನೀನೆ ಮಾಡಿಸಿದ ಮೇಲೆನ್ನ ಇಂತು ಬಳಲಿಸುವ ದುರಂತ ಮಹಿಮನೆ ನಿನಗೆ ಕಂತು ಬ್ರಹ್ಮರ ಜನಕ 3 ನಾನು ನನ್ನದು ಎಂಬ ಮಾನವಿತ್ತದರಿಂದ ಈ ನಳಿನಜಾಂಡವದೊಳು ನಾನು ಸಿಲುಕಿಹೆನು ಮಾನಾಭಿಮಾನಿಗಳ ನೀನೀವುದರಿಂದ ದೀನತನ ಕಳದು ಸನ್ಮಾನ ಪಾಲಿಸು ದೇವ 4 ತಂದೆತಾಯಿಗಳು ನಿಜ ಬಂಧುಬಳಗಗಳೆಲ್ಲ ಒಂದೊಂದು ಜನ್ಮದಲಿ ಬ್ಯಾರೆಬ್ಯಾರಹರು ಎಂದೆಂದಿಗೂ ನೀನೆ ತಂದೆ ನಿನ್ನರಸಿ ತಾ- ಯ್ಯೆಂದು ತಿಳಿಹೆನು ಮುಚಕುಂದ ರಕ್ಷಕ ಸ್ವಾಮಿ 5
--------------
ತುಪಾಕಿ ವೆಂಕಟರಮಣಾಚಾರ್ಯ