ಒಟ್ಟು 3520 ಕಡೆಗಳಲ್ಲಿ , 121 ದಾಸರು , 2542 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ನೀ ಮನದೊಳು ಜಪಿಸೆಲೊ ಮನುಜ ಪ ಸಾರದ ಪದವಿಯ ಸೇರಿರುತಿರುವರೆ ಅ.ಪ ಸಂಚರಿಸದೆ ನಿಶ್ಚಿಂತೆಯೊಳಿರುವರೆ 1 ಪೃಥಿವಿಯ ಭೋಗವಸ್ಥಿರವೆನುತ 2 ನಿಲ್ಲಿಸಿ ಭಾವಿಸಲಲ್ಲಿರುತಿಹನು 3 ಹೊಂದುತೆಲ್ಲ ಗೋವಿಂದನಿಚ್ಛೆಯೊಳು 4 ನಿರತಾನಂದದೊಳಿರು ನೀ ನಿಜದೊಳು 5
--------------
ಸದಾನಂದರು
ನೀ ಮುನಿದು ಇಳೆಯೊಳಗೇ| ಸುರಮುನಿ ಜನಪಾಲನ ಮನದಲಿ ಬಂದದಿ ನೆರೆಯದೇ ಸಾರುವದೀಗ ಪ ನಿನ್ನಯ ಒಪ್ಪುವ ಮಾರ್ಗವ ನೋಡುತ| ಮುಚ್ಚನು ಕುಡಿಗಂಗಳ ಯವಿಯಾ| ಪನ್ನಗವೇಣೀ ನಿನ್ನವಿಯೋಗ ದುಗುಡದೀ| ಕುಳಿತನುಡಗಿ ಅವಯವ ಸೋಹ್ಯಾ 1 ನಿನ್ನ ಕಾಣುವೆ ನೆಂಬಂಥ ವಾಣಿಯಲೆದ್ದು ಲಜ್ಜಿಸಿ ಹಿಂದಕ ಕಾಲೆಳೆದಾ| ಘನ್ನ ವಿರಹ ತಾಪದ ದೆಶೆಯಿಂದಲಿ ಕಿಡಿ ಕಿಡಿ ಜ್ವಾಲಾಂಗನು ಆದಾ 2 ಕಪಟದಿ ಬಂದು ನೋಡುವೆ ನಿನ್ನೆನುತಲಿ ಯಾಚಕ ರೂಪತಾಳಿದನು| ವಿಪುಳಾಂಗ ತಾಳಲಾದರದೇ ನಿನ್ನ ಕುವರಿಯ ತೊರೆಂದೆ ಚಂದನು ಶರಧಿಯನು3 ದಿನದೊಳಗರಗಳಗಿ ಗಮಿಸದು ಯನುತಲಿ ವನದೋಳು ಪೋಗಿ ಹೊತ್ತುಗಳೆವಾ|ಮನಿ ಮನಿ ಪೊಕ್ಕು ಗೋಕುಲದಲಿ ನಿನ್ನನು ಅರಸುತಿಹನು ಪಾವನ ದೇವಾ4 ಕ್ಷತ್ರೀಯರು ನಿಷ್ಠುರರೆಂದು ನಿನ್ನಮ್ಯಾಲಿನ ಕೋಪದಿ ಕಂಡ ವೃತವಳದಾ| ಅತಿತವನೋಡದೇ ತಾನಾಗಿ ಬಂದನು ಹಯವೇ ನೋಡೆ ಜೀವನ ಜಗದಾ 5 ಕುವಲಯ ಲೋಚನೆ ಕೂಡಿದ ನಿಮ್ಮಿರ್ವರ ಹಾಸ್ಯದ ಮುಖವನು| ಜವದೀ ಅವನಿಲಿ ಕಂಡೆನು ಧನ್ಯಧನ್ಯಾದೆನು ಮಹಿಪತಿ ಸುತ ಪ್ರಭುವಿನ ದಯದೀ6
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನೀ ವೆಂಕಟೇಶ ಪರಿಪಾಲಯ ಸುಗುಣಾಲಯ ಪ ಶಿಖಾಮಣಿ ಸೇವಕ ಸುಚಿಂತಾಮಣಿ ಅ.ಪ ಕಮಲಲೋಚನ ಭಕ್ತ ಕಮಲಲೋಚನ ಶಕ್ತ ವಿಮಲ ಚರಿತಪೂರ ಕಮನೀಯ ಶರೀರ1 ಧೀರ ದಶರಥ ಕುಮಾರ ಬುಧ ಜನವಿಹಾರ ವೀರ ಹಂ ಪರಿವಾರ ಕ್ರೂರಸುರ ವಿಹಾರ 2 ಸರಸಿಜಾಸನನುತ ಸುರಮುನಿಸೇವಿತ ಹರಿಣಾರಿಧಾರಾಗಾರ ವರದ ವಿಠಲಾಕಾರ 3
--------------
ವೆಂಕಟವರದಾರ್ಯರು
ನೀಚಮತಿ ಎಲೆ ನೀಚಮತಿ ಊಚನೆನಿಸಿಕೊಂಬ ಯೋಚನೆ ಬಿಡುಕಂಡ್ಯ ಪ ತರಿಯದೆ ಕುಟಿಲತ್ವ ಮರೆಯದೆ ದುಶ್ಚಟ ಧರೆಯ ಭೋಗವ ನೆಚ್ಚಿ ಶರಣರ್ವೇಷÀವÀ ತಾಳಿ ಮರವೆ ಮಾಯದಿ ಬಿದ್ದು ಒರಲುವ ನರರಿಗೆ ಬರಿದೆ ಬೋಧಿಪೆನೆಂಬ ಭ್ರಮೆಯಿಂದ ಫಲವೆ 1 ಮಾಯಮೋಹಿಗಳ ಉಪಾಯದಿ ಕೂಡಿಸಿ ಸೇವಿಸದಾಹಾರ ಸೇವಿಸುತನುದಿನ ಕಾಯಬಲಿಸಿ ಕುಣಿವ ಮಾಯಮೋಹಿಯ ಬರಿ ಬಾಯ ಬ್ರಹ್ಮತ್ಯಬಂಧ ಬಯಲಪ್ಪುದೇನೆಲೆ 2 ಧರಿಸಿದ ಲಾಂಛನ ಅರಿಯದೆ ಮೇಲೆ ನೀ ಬರಿದೆ ಕಾವಿಯನ್ಹೊದ್ದು ಕರದಿ ಕಮಂಡಲ ಧರಿಸಿ ಮರುಳರಿಗೆಲ್ಲ ಪರತತ್ತ್ವವರಿಯಲು ಜರೆಮರಣದು:ಖವು ಪರಹಾರಮೆಂತೆಲೆ 3 ಭವಭವದಲಿ ಬಟ್ಟಬವಣೆಯ ಸ್ಮರಿಸಿದೆ ಭವಗೆಲಿಸುವ ಅನುಭವ ತಿಳಿಯದೆ ಸ ದ್ಭವಿಗಳ ನೆರೆಯಿಸಿ ಕವಿತೆ ಬಿಡಿಸಿ ಬಹು ಸವಿಮಾತ್ಹೇಳಲು ಮೂಲಭವಭೀಜಳಿಯುವುದೆ 4 ತನ್ನ ತನ್ನದುಯೆಂಬ ಭಿನ್ನವಿಲ್ಲದೆಸದಾ ತನ್ನ ಸ್ವರೂಪ ಪರರನ್ನು ಬಗೆದು ನಿತ್ಯ ಸನ್ನುತ ಶ್ರೀರಾಮನುನ್ನತಂಘ್ರಿಗೆ ಪೊಂದಿ ಧನ್ಯರಾಗದೆ ನರಕುನ್ನಿಯೆನಿಸುವರೇನೋ5
--------------
ರಾಮದಾಸರು
ನೀನಲ್ಲದನ್ಯವೆನಗಿಲ್ಲ ನಾರದ ವರದಏನೆಂಬೆ ಸರ್ವರಿಗು ನೀನೆಯಹುದಾದಡೆಯು ಪಧನದ ಬಲವುಳ್ಳವರು ಧರ್ಮಗಳ ಮಾಡುವರುಮನದ ಮೇಧಾವಿಗಳು ಮಂತ್ರಿಸುವರು ತನುವಿನಲಿ ತ್ರಾಣಿಗಳು ತೀರ್ಥಗಳ ಪಡೆಯುವರುಅನುವದಿಸಿ ವೇದಗಳನವರಾಢ್ಯರಹರು 1ತನುವ ದಂಡಿಸಿ ಪೂಜ್ಯ ತನುವಾದರವರ್ಗುಂಟುಧನದ ತ್ಯಾಗದಿ ಮುಂದೆ ದೈನ್ಯ ಹರವುಮನವ ನಿಗ್ರಹಿಸಿದರೆ ಮುಖ್ಯ ಜ್ಞಾನವುಬಹುದುಇನಿತಾದರವರ್ಗಿರುವದೇನುಂಟು ನನಗೆ 2ಇತರ ಮಾತುಗಳಾಡದೀ ವಾಕನೊಳಗಿರಿಸಿಮಿತವಾಗಿ ಸತ್ಯಯುತಮಾಗಿ ನುಡಿಸಿಅತಿದೋಷಗಳು ಹೋಗಿಯವರ್ಗೆ ಮುಂದಣ ಭವದಿವಿತತವಾಹದವಿದ್ಯೆ ವಿವರಿಸಲಿದುಂಟೆ 3ಸತತವೂ ಧನವಿಲ್ಲ ಸಾಧು ಸಮ ತನುವಿಲ್ಲವ್ರತತೀರ್ಥಗಳಲಾಡಿದೊಡಲಿದಲ್ಲಮತಿಯಲ್ಲಿ ನೋಡಿದರೆ ಮಂತ್ರ ಮನನಗಳಿಲ್ಲಸ್ತುತಿ ಮಾಳ್ಪ ಸೂಕ್ತಗಳ ಸೊಲ್ಲು ತಾನಿಲ್ಲ 4ಹಿಂದಾದ ಮುಂದೆ ಬಹ ಹೊಂದಿದೀ ಭವ ಸಹಿತತಂದೆ ಕಣ್ದೆರಪಾಗಿ ತಾ ತೋರಿತುಬಿಂದು ಸಾಧನವಿಲ್ಲದೊಡಲೊಂದು ಲಭಿಸಿರಲುಬಂಧವನು ಬಿಡಿಸುವರೆ ಬಂದೆ ಗುರುವಾಗಿ 5ಪರಮ ಕರುಣಾಸಿಂಧು ಪತಿತ ಪಾವನ ಶೀಲದುರಿತಾಂಧಕಾರಕ್ಕೆ ದಿವಸಕರನುಹರಿ ದೀನವತ್ಸಲನು ಹಾಗನಾಥರ ತಾನುಹೊರೆವನೆಂಬೀ ಮಾತು ಹುಸಿಯಾಗಲಿಲ್ಲ 6ನನ್ನನೀಪರಿಯಲ್ಲಿ ನೋಡಿ ಸಲಹಿದ ಮೇಲೆುನ್ನೇಕೆ ಸಂದೇಹವಿದೆ ಚೋದ್ಯವುಸನ್ನುತನೆ ತಿರುಪತಿಯ ಸ್ವಾಮಿ ವೆಂಕಟರಮಣನಿನ್ನಡಿಯ ಸ್ಮರಣೆಯನು ನನಗಿತ್ತೆಯಾಗಿ 7ಕಂ|| ಭೃಗುವಾರದರ್ಚನೆಯನಿದಭೃಗುಸುತೆ ಸಹ ನೀನು ಕೊಳುತೆ ರಕ್ಷಿಸುಯೆನ್ನಂಹೊಗಲಾರೆನು ಭವಸಿಂಧುವನಿಗಮಾರಾಧಿತನೆ ದೇವ ವೆಂಕಟರಮಣಾಓಂ ಯಜ್ಞ ಭೋಕ್ತ್ರೇ ನಮಃ
--------------
ತಿಮ್ಮಪ್ಪದಾಸರು
ನೀನಲ್ಲದಲೆ ಇನ್ನು ನಾನಾರ ಕೂಗಲೊ ಮಾನನಿಧಿ ಗೋಪಾಲ ಶ್ರೀನಿಧಿಯೇ ಪ. ಶ್ರೀನಿವಾಸನೆ ಎನ್ನ ನಾನಾ ಪರಿಯ ಕಷ್ಟ ನೀನೆ ಬಿಡಿಸಿ ಸಲಹೊ ಮಾನಾಭಿಮಾನದೊಡೆಯ ಅ.ಪ. ಕಡುಕೋಪದಿಂ ಖಳನು ಹುಡುಗನ ಬಾಧಿಸೆ ದೃಢ ಭಕ್ತಿಯಿಂದ ನಿನ್ನಡಿಯ ಭಜಿಸೆ ಕೆಡಹಿ ಅಸುರನ ಕೊಂದು ಒಡನೆ ಭಕ್ತನ ಕಾಯ್ದೆ 1 ತೊಡೆಯನೇರಲು ಬರೆ ಜಡಿದು ನೂಕಲು ತಾಯಿ ಒಡನೆ ಮನದಿ ನೊಂದು ಪೊಡಮಡುತ ಅಡವಿ ಅಡವಿ ತಿರುಗಿ ದೃಢದಿ ಭಜಿಸೆ ಧ್ರುವ ಒಡನೆ ಓಡಿ ಬಂದು ದೃಢಪಟ್ಟ ಕೊಡಲಿಲ್ಲೆ 2 ಕರಿ ಕರೆಯೆ ತಡೆಯದೆ ಸಲಹಿದ ಪೊಡವೀಶ ನೀನಲ್ಲೆ ಕಡುಕರುಣಿ ಬಡವಗೆ ಸಿರಿಯಿತ್ತೆ ಮಡದಿಗಕ್ಷಯವಿತ್ತೆ ಕಡುದ್ರೋಹಿಗಳ ಕೊಲಿಸಿ ಒಡನೆ ಐವರ ಕಾಯ್ದೆ3 ಚಿನುಮಯ ಗುಣಪೂರ್ಣ ಅಣು ಮಹತ್ ಅಂತರಾತ್ಮ ಎಣಿಸಲಾಹೊದೆ ನಿನ್ನ ಘನ ಮಹಿಮೆ ಮನಸಿಜಪಿತ ಸರ್ವ ಮನನಿಯಾಮಕ ಹರಿ ಮನದಲ್ಲಿ ನೀ ನಿಲ್ಲೊ 4 ಶ್ರೀಪದ್ಮಭವನುತ ನಾ ಪಾಮರಾಳಿಹೆ ಗೋಪಾಲಕೃಷ್ಣವಿಠಲ ಶ್ರೀಪತಿಯೆ ನೀ ಪಾರು ಮಾಡದೆ ಕಾಪಾಡುವವರ್ಯಾರೊ ತಾಪ ಬಿಡಿಸಿ ಸಲಹೋ5
--------------
ಅಂಬಾಬಾಯಿ
ನೀನುಪೇಕ್ಷೆಯ ಮಾಡೆ ಬೇರೆ ಗತಿಯಾರೆನಗೆನಿಗಮಗೋಚರ ಮುಕುಂದ ಪ ಗಾನರಸಲೋಲ ಆಗಮಶೀಲ ಭಕ್ತಪರಿಪಾಲಸನ್ನುತ ಗೋಪಾಲ ಬಾಲ ಅ ಸಿರಿನಲ್ಲ 1 ದಿವಿಜ ಮುನಿವಂದ್ಯ ಅಭಿಮಾನಿ ಎನ್ನನೂ ಸಲಹದೆ - ಬರಿದೆ 2 ಈಶಣತ್ರಯದ ಬಯಲಾಸೆಯಲಿ ಭ್ರಮೆಗೊಂಡುಬೇಸರದಿ ಮನದಿ ನೊಂದುಹೇಸಿಗೆಯ ಸಂಸಾರ ಮಾಯಕ್ಕೆ ಸಿಲುಕಿ ನಾಘಾಸಿ ಪಡಲಾರೆನಿಂದುವಾಸುದೇವನೆ ನಿನ್ನ ಪೊಂದಿ ಬದುಕುವೆನೆಂದುಆಸೆ ಪಡುತಿಹೆನು ಇಂದುದಾಸನೆಂದೆನಿಸಿ ಡಂಗುರ ಹೊಯ್ಸಿ ಬಡದಾದಿಕೇಶವನೆ ಕರುಣಿಸಯ್ಯಾ ಬಂದು3
--------------
ಕನಕದಾಸ
ನೀನೆ ಅನಾಥ ರಕ್ಷಕ ಪ ನಿಖಿಲ ದ್ವೈತ್ಯ ಶಿಕ್ಷಕ ಅ.ಪ ವಿಧಿ ಸೃಷ್ಟಿಯೊಳಿಲ್ಲದ ರೂಪದಿ ದಿತಿ ಸುತನುದರ ಬಗೆದು ಭೇದಿಸಸುರನ ಮೋದದಲಿ ಕರುಳನು ಧರಿಸಿದೆ 1 ಶರಣಸುರರ್ತನಗೆನ್ನುತ ಹರಶರಭಾಕೃತಿಯಂಬತಿ ಘೋರ ಯುದ್ಧದಿ ಧಾರುಣಿಯೊಳಗೆ ಕೆಡಹಿ ತುಳಿದೆ 2 ಅಷ್ಟಮುಖಭೇರುಂಡನೆಂದು ಸೃಷ್ಟಿಯೊಳ್ ಪ್ರಸಿದ್ಧವಾಯ್ತು ದಿಟ್ಟಗುರುರಾಮ ವಿಠ್ಠಲ ಪ್ರಹ್ಲಾದವರದ 3
--------------
ಗುರುರಾಮವಿಠಲ
ನೀನೆ ಕೃಪಾಳು ಶ್ರೀ ಚನ್ನಕೇಶವನೇ ಜ್ಞಾನಿಗಳನ್ನು ಕಾವ ಸನಕವಂದಿತನೆ ಪ ಶರಣರ ಪೊರೆಯುವ ಪ್ರಣವ ಸ್ವರೂಪನೆ ಸ್ಮರಿಸುವ ದಾಸರ ಮರೆಯ ಬೇಡಯ್ಯ ಅ.ಪ. ದೀನರ ಸಲಹುವ ಭಕ್ರವತ್ಸಲನೇ ಮಾನಿನಿ ದ್ರೌಪದಿ ಮಾನ ಕಾಯ್ದವನೇ ಮೌನದಿಂದಲಿ ನಿಂನ ಧ್ಯಾನ ತತ್ವರನಾದೇ ಪನ್ನಗಶಯನನೇ ಸಲಹೊ ಕರುಣದಲೀ1 ಸನ್ನುತ ಹರಿ ನಿಂನ ಕೀರ್ತನೆ ಪಾಡುವೆ ಜಾನ್ಹಕಿ ರಮಣ ಶ್ರೀ ಕಾಕುತ್ಸ್ಥರಾಮಾ ಹೀನನ ಮಾತನ್ನು ನಲಿಯುತ್ತ ಕೇಳಿ ನೀ ಸಾನುರಾಗದಿ ಕಾಯಾ ಧೇನು ಪಾಲಕನೇ2 ಪಂಕಜನೇತ್ರ ಶ್ರೀ ಪರಮ ಪಾವನನೇ ಲಂಕೇಶನಿಗೆ ಯಮನಾದ ಶ್ರೀಧರನೇ ಶಂಕೆಯಿಲ್ಲದೆ ಕಾಯೊ ದೂರ್ವಾಪುರೇಶನೆ ಅಮಿತ ಸದ್ಗುಣಿಯೇ 3
--------------
ಕರ್ಕಿ ಕೇಶವದಾಸ
ನೀನೆ ತಾಯಿಯು ನೀನೆ ತಂದೆಯು ನೀನೆ ಬಾಂಧವನು ರಂಗ ಪ ನೀನೆ ನಿತ್ಯನನಾದಿದೇವನು ನೀನೆ ಸತ್ಯಲೋಕೇಶನೀಶನು ಅ.ಪ ಲೋಕಭರಿತ ಅನೇಕಚರಿತ ಲೋಕಪಾಲಕನು ವಿಭವ ಲಯಗಳೇಕಕರ್ತನು ಶ್ರೀಕರಾ ಕೃಪಾಕರಾಸುರ ಭೀಕರಾಂಗನು ಪಿನಾಕಿ ವಿನುತನೂ ಕಳತ್ರನು 1 ನಂದಗೋಪನ ಕಂದ ಕೃಷ್ಣ ನೀನೆಂದು ನಂಬಿದೆನೋ ಮಂದಹಾಸವದನವ ನಾನೆಂದು ನೋಡುವೆನೋ ಸುಂದರಾರವಿಂದ ಪಾದವನೆಂದು ಪೂಜಿಪೆನೋ ತಂದೆ ಮಾಂಗಿರಿರಂಗನೊಲವನೆಂದು ಪಡೆದೇನೋ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ನೀನೆ ನಿರ್ದಯನಾಗಲಿನ್ನೇನು ಗತಿಯೋ ದೀನಜನಮಂದಾರ ಜಾನಕೀ ಮನೋಹರ ಪ ಪಿತ ಮಾತೆಯರ ಸುತರ ಹಿತದಿಂದ ನೋಡದಿರೆ ಕ್ಷಿತಿಯೊಳಗಿತರರು ಹಿತದಿಂ ನೋಡುವರೊ ಪಿತ ನೀನೆ ಮೂಜಗಕೆ ನುತಿಸುವ ಭಕ್ತರ ಸ್ಥಿತಿ ವಿಚಾರಿಸದಿರೆ ಗತಿಯೇನು ಮುಂದೆ 1 ಲೋಕ ಎರಡೇಳು ನೀ ಕರುಣದೊಡಲೊಳಿಟ್ಟು ಜೋಕೆ ಮಾಡುವಿ ನಿನ್ನೊಳ್ಯಾಕೆ ದಯವಿಲ್ಲ ಬೇಕೆಂದು ನಿನ್ನಪಾದ ಏಕಭಕ್ತಿಲಿ ನುತಿಪೆ ಮೂಕನಾಗಲು ಬೇಡ ಶ್ರೀಕರನೆ ದಯಮಾಡೊ 2 ನರಜನ್ಮವಿತ್ತೆನಗೀಪರಿ ಬವಣೆ ಬರಲಿಕ್ಕೆ ಕರುಣವನಿತು ನಿನಗೆ ಬರಲಿಲ್ಲವೇನೋ ಹರಿಯೆನ್ನ ಬರೆಹ ಹೀಗೆ ಬರೆದದ್ದೇ ತಪ್ಪು ನೀ ಮರೆಯಾದರೆ ಬಿಡದಯ್ಯಾ ತ್ವರೆಬಾರೋ ಶ್ರೀರಾಮ 3
--------------
ರಾಮದಾಸರು
ನೀನೆ ಬಲ್ಲಿದನೋ ರಂಗಾನಿನ್ನ ದಾಸರು ಬಲ್ಲಿದರೋ ಪ ನಾನಾ ತೆರದಿ ನಿಧಾನಿಸಿ ನೋಡಲುನೀನೆ ಭಕ್ತರಾಧೀನನಾದ ಮ್ಯಾಲೆ ಅ.ಪ ಪರಮ ಪುರುಷ ಪರಬೊಮ್ಮನೆಂದೆನುತಲಿನಿರುತದಿ ಶ್ರುತಿಯು ಕೊಂಡಾಡಲು ನಿನ್ನನುನರ ಧರ್ಮಜನರ ಮನೆಯ ಒಳಗೆ ನಿಂ-ದ್ಹರುಷದಿಂದ ಕರೆದಲ್ಲಿ ಪೋದ ಮ್ಯಾಲೆ 1 ಪುರುಹೂತ ಸಹಿತ ಸುರ-ವ್ರತವು ನಿನ್ನನು ವಾಲೈಸುತಿರೆಭೂತಳದೊಳು ಸಂಪ್ರೀತಿಯಿಂದಪಾರ್ಥನ ರಥಕೆ ನೀ ಸೂತನಾದ ಮ್ಯಾಲೆ 2 ಜಲಜಭವಾಂಡದೊಡೆಯನೆಂದೆನಿಸುವಬಲು ಬಲು ದೊಡ್ಡವನಹುದಾದಡೆಒಲಿದು ಸದ್ಗತಿಯೀವೆ ಅನುದಿನದಲಿ ನೀಬಲಿಯ ಮನೆಯ ಬಾಗಿಲ ಕಾಯ್ದ ಮ್ಯಾಲೆ 3 ಧುರದೊಳು ಪಣೆಯನೆಚ್ಚೊಡೆದ ಭೀಷ್ಮನಮರಳಿಪುದೆನುತಲಿ ಚಕ್ರವ ಪಿಡಿಯಲುಹರಿ ನಿನ್ನ ಕರುಣದ ಜೋಡÀು ತೊಟ್ಟರಲವ -ನಿರವ ಕಂಡು ಸುಮ್ಮನೆ ತಿರುಗಿದ ಮ್ಯಾಲೆ 4 ತರಳನು ಕರೆಯಲು ಒಡೆದು ಕಂಬದಿ ಬಂದುನರಮೃಗ ವೇಷದಿ ಭಕುತರ ತೆತ್ತಿಗನಾದೆಕರುಣದಿ ಸಲಹೋ ಶ್ರೀರಂಗವಿಠಲ ನಿನ್ನಸ್ಮರಿಪರ ಮನದಲಿ ಸೆರೆಯ ಸಿಕ್ಕಿದ ಮ್ಯಾಲೆ 5
--------------
ಶ್ರೀಪಾದರಾಜರು
ನೀನೆ ರಕ್ಷಿಸಬೇಕು ಹೀನಬುದ್ಧಿಯ ನರನ ಪಯೇನೆಂಬೆ ವಿಷಯಗಳೊಳು ಮನಮುಳುಗಿ ಧ್ಯಾನವನೊಮ್ಮೆಯು ಮಾಡದ ಮರುಳ ಅ.ಪಕಂಡುದನೆಲ್ಲವ ಬಯಸಿ ದಂಡಿಸಲಾರದೆ ಮನವಕೆಂಡಕೆ ಮುತ್ತುವ ಶಲಭನ ತೆರದಿ ಕಂಡು ನೊಂದು ಮತ್ತದ ಬಿಡದಿರಲು 1ಕಾಯವ ನಿತ್ಯವಿದೆಂದು ಹೇಯದಿ ತೋರಲು ಕಂಡು ನೋಯದೆ ತಾಪತ್ರಯಗಳನುಂಡು ಆಯಸಗೊಳುತಿರಲಿದ ನೀ ಕಂಡು 2ದುಃಖದಿ ನೋವರ ನೋಡಿ ಸುಕ್ಕುತಲಾಕ್ಷಣದೊಳಗೆದುಃಖವು ಬಂದರೆ ಪರಿಹರವಾಗದೆ ಸಿಕ್ಕಿರೆ ಬಲೆಯೊಳು ದುಃಖಿಸುತಿರಲು 3ಪ್ರಾಚೀನ ಕರ್ಮಗಳು ವೀಚಿಗಳಂದದಿ ಬರಲುಸೂಚಿಸಿ ಶಿಕ್ಷಿಪ ಶಾಸ್ತ್ರದ ನೆಳಲೊಳು ಚಾಚದೆ ತಾವೆ ತಾವಾಗಿರಲು 4ದುರಿತಗಳೆ ಬಹುವಾಗಿ ಸ್ಫುರಿಸುತ್ತಲಿರಲಾಗಿಮರುಗುವ ರಕ್ಷಕ ನೀನಿರಲಾಗಿ ಮರೆಯೊಗದಿರಲೀ ದುರಿತವ ನೀಗಿ 5ದ್ವಂದ್ವಗಳೊಂದೆಂದೊಮ್ಮೆ ನಿಂದಿರೆ ಕರ್ಮದ ಹೆಮ್ಮೆಹೊಂದದು ಎಂದಿಗು ಅದು ತನ್ನ ಸೊಮ್ಮೆಯೆಂದಿಗೆ ಹೃದಯದಿ ನಿಲುವೆ ನೀನೊಮ್ಮೆ 6ಮಾನವ ಬಿಟ್ಟರೆ ಬುದ್ಧಿ ಜ್ಞಾನದ ಸಾಧನ ಸಿದ್ಧಿತಾನೇ ಬರುವುದು ಪುಣ್ಯಸಮೃದ್ಧಿ ಜ್ಞಾನಾತ್ಮಕ ಕೃಷ್ಣ ನೀನಿರು ಹೊದ್ದಿ 7ಭಜಿಸಿದನೆ ಭಕ್ತಿಯಲಿ ಯಜಿಸಿದನೆ ಯಾಗದಲಿದ್ವಿಜತನವನ್ನಾದರು ಬಿಡದಿದ್ದನೆ ಅಜಮಿಳನೆ ನಿನ್ನೊಲವಿಗೆ ಸಾಕ್ಷಿ 8ಕರುಣಕಟಾಕ್ಷವ ನೀನು ುರಿಸಲು ಧನ್ಯನು ನಾನುತಿರುಪತಿ ನಿಲಯ ಶ್ರೀ ವೆಂಕಟ ಕಾಣು ಗುರು ವಾಸುದೇವರೂಪಿನ ಚಿದ್ಭಾನು 9ಓಂ ದಾನವೇಂದ್ರ ವಿನಾಶಕಾಯ ನಮಃ
--------------
ತಿಮ್ಮಪ್ಪದಾಸರು
ನೀನೇ ಶ್ರಾದ್ಧದನ್ನವನುಂಡವಾ ನಾನರಿಯದಂತೆ ಯೆನ್ನ ಗೃಹದೊಳು ಶ್ರೀವೈಷ್ಣವನಾಗಿ ಪ ಬಾಣಸಿಗಾದವರು ನೀನೋ ನಾರಾಯಣಿಯೋ ಕ್ಷೋಣಿಯೊ ರವಿಯೋ ಜಾಹ್ನವಿಯೊ ರತಿಯೋ ವಾಣಿಯೋ ಸುರಧೇನುವೋ ಬಂದಾತಧನಂಜಯನೂ ತಾನೆ ಎನ್ನ ಆದ್ದಾಗಾಯ ತೆಲೆದೇವಾ1 ತಿಳಿದೆ ನಾನೀಗ ನಿನ್ನನು ಕೂಡೆ ಬಂದಿದ್ರ್ದ ಬಿಳಿಯ ಚುಟ್ಟಿನ ಯೆಣ್ಣೆಗೆಂಪಿನವನೂ ಕುಳಿತವನು ಕೈಯಪುಸ್ತುಕದವನು ಕಂಕುಳೊಳ ಗಿಳಿದ ಮಡಿಗಡೆಯವರಾರು ಪೇಳೆಲೆ ದೇವಾ 2 ಆವಾವ ಸ್ಥಾನಕಾರಾರ ನೇಮಿಸಿದೆ ನೀ ದೇವಾ ಉಪಾಧ್ಯರಾರಭಿಶ್ರವಣವನು ಪೇಳ್ದ ಕೋವಿದರಾರು ಶ್ರೀವೈಷ್ಣವರಾರೆಲೆದೇವ 3 ಜನನ ಸ್ಥಿತಿಲಯಕೆ ಕಾರಣಭೂತನೋರ್ವ ನೀ ನೆನುತ ವೇದಾಂತಗಳು ಪೊಗಳುತಿರಲೂ ಇನಿತಕ್ಕೆ ಯೆಂದನ್ನದಗಳು ಕುಡಿತೇಪಾಲ್ಗೇ ಮನವ ಸೋತುದ ಬಿಡುವೆಯಾ ನಿತ್ಯತೃಪ್ತಾ 4 ಗುರುಗಳಂದದಲಿ ಶ್ರೀವೈಷ್ಣವ ನೀನಾಗಿ ಶರಣನಾ ಪಿತೃಗಳಿಗೇ ಶ್ರಾಧ್ಧವನುಂಡುದದೂ ಪಿರಿಯದಾಯ್ತು ಎನ್ನ ನೂರೂಂದು ಕುಲಕೆಲ್ಲಾ ಪರಮಪದವಾಯ್ತು ವೈಕುಂಠಚೆನ್ನಿಗರಾಯಾ 5
--------------
ಬೇಲೂರು ವೈಕುಂಠದಾಸರು
ನೀರ ತರಂಗಿಣಿ ತೀರ ನಾರಸಿಂಹ ಪ ಸಾರಿದೆನೊ ತವಪಾದ ಪಂಕಜ ತೋರು ಮನದಲಿ ತವಕದಿ ಅ ನಾರದನುತ ಚಿಚ್ಛರೀರವ ಶ್ರೀ ಭೂದು ರ್ಗಾರಮಣ ದುರಿತಾರಿ ಬ್ರಹ್ಮ ಸ ಮೀರ ಮುಖ ವಿಬುಧಾರ್ಚಿತ ಚಾರು ಚರಣಯುಗ ಕ್ಷೀರಾಬ್ಧಿ ಶಯನ ಮ ದ್ಭಾರ ನಿನ್ನದು ಮೂರು ಲೋಕದ ಸೂರಿಗಮ್ಯ ಸುಖಾತ್ಮಕ 1 ವೇದವೇದ್ಯ ಸಂಸಾರೋದಧಿ ತಾರಕ ಛೇದ ಭೇದ ವಿಷಾದವೇ ಮೊದ ಶ್ರೀದ ಶ್ರೀಶ ಅನಂತ ಆಪ್ತಕಾಮ ಬಾದರಾಯಣ ಭಕ್ತವರ ಪ್ರ ಹ್ಲಾದಪೋಷಕ ಪಾಹಿ ಮಾಂ 2 ಹೋತಹೃದ್ಯ ಜಗನ್ನಾಥವಿಠಲ ನಿನ್ನ ಮಾತು ಮಾತಿಗೆ ಸ್ಮರಿಸುತಿಹ ಸ ಚ್ಚೇತನರನು ನೀ ಸರ್ವದಾ ವೀತಶೋಕ ಭವಭೀತಿ ಬಿಡಿಸಿ ತವ ದೂತರೊಳಗಿಡು ಮಾತರಿಶ್ವಗ ಭೂತಭಾವನ ಭವ್ಯದ3
--------------
ಜಗನ್ನಾಥದಾಸರು