ಒಟ್ಟು 7530 ಕಡೆಗಳಲ್ಲಿ , 133 ದಾಸರು , 4766 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೇಳು ಒಳ್ಳೆವರ ಕೂಡಾ ನಿನ್ನ ಹಿತವ ಪ್ರಾಣೀ | ತಾಳಿ ನರದೇಹದಿಂದ ಮಾಡುವರೇ ಹಾನಿ ಪ ಮುತ್ತಿನಂಥಾ ದಿನವಿದು | ಸಿಕ್ಕದಣ್ಣಾ ಮುಂದ | ಚಿತ್ತ ಸ್ಥಿರವಾ ಮಾಡಿ ಹರಿಯ ನೆನೆಯಬೇಕು ಇಂದ 1 ಬಾಲನಾಗಿ ಕೆಲವು | ದಿನದಿಂದ ಯೌವನದಿ | ಮ್ಯಾಲ ಯೆಚ್ಚರವ ಬಿಟ್ಟು | ಹರಿಗೆ ವಿಮುಖನಾದಿ 2 ಜರೆಯು ಬಂದ ಕಾಲದಲ್ಲಿ | ತನುವು ತನ್ನದಲ್ಲಾ | ಸರಕು ಮನೆಯೊಳಿಲ್ಲಾ 3 ಈಗಳವೆ ಯಚ್ಚರಿತು | ಹರಿಯಾ ಬಲಗೊಂಡು | ಹಿಂಡು 4 ಶರಣು ಹೋಗುವಾ | ಭಾವಭಕ್ತಿಯಲ್ಲಿ ದಾವಪ್ರೇಮಿ | ತಾರಿಸುವಾ ಗುರು ಮಹಿಪತಿಸುತ ಸ್ವಾಮಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕೇಳು ಜೀವನವೆ ನೀ ಮಧ್ವಮತವನುಸರಿಸಿ ಶ್ರೀಲೋಲನಂಘ್ರಿಯನು ನೆನೆದು ಸುಖಿಸೊ ಪ. ನರನಾಗಿ ಪುಟ್ಟುವುದು ದುರ್ಲಭವೆಲವೊ ಭೂ- ಸುರಕುಲದಿ ಜನಿಸುವುದು ಬಹು ದುರ್ಲಭ ಪರಮ ಸುಕೃತವದೇನು ಫಲಿಸಿತೊ ನಿನಗೀಗ ದೊರಕಿದೀ ಜನುಮವನು ಸಫಲ ಮಾಡೊ 1 ಅರಘಳಿಗೆ ಮಾತ್ರವೆ ಪೊತ್ತು ಪೋಗಲು ಆಯು ಕೊರತೆಂದು ತಿಳಿ ನಿನ್ನ ಕ್ಲುಪ್ತದೊಳಗೆ ಮರಳುತನದಲಿ ಬರಿದೆ ದಿನಗಳಿಯಬ್ಯಾಡೆಲವೊ ಸ್ಥಿರವಲ್ಲ ಈ ದೇಹ ಸ್ವಪ್ನಸಮವೊ 2 ದುರುಳರೊಡನಾಡಿ ದುರ್ವಿಷಯ ಲಂಪಟನಾಗಿ ನರಕಯಾತನೆಗೆ ಗುರಿಯಾಗದಿರೆಲೊ ಎರಡುದಿನದೋಡ್ಯಾಟ ಇರಬಂದುದಲ್ಲವಿದು ಪರಗತಿಗೆ ಸಾಧನ ಮಾಡಿಕೊಳ್ಳೊ 3 ಹೋಗುತಿವೆ ಹೋಗುತಿವೆ ದಿವಸ ವ್ಯರ್ಥವಾಗಿ ಹೀಗೆ ಮೈಮರೆದಿಹುದು ನಿನಗೊಳ್ಳಿತೆ ಬ್ಯಾಗ ಹರಿಯನು ಭಜಿಸು ಬಾ ಈ ಮಾತಲ್ಲ ನೀ ಹೋಗಿನೋಡಲು ಯಮನ ಬಾಧೆ ಬಿರುಸೊ4 ಏನ ಹೇಳಲಿ ನಿನ್ನ ಮಂದಮತಿಯನು ಹಿಂದೆ ಶ್ವಾನಸೂಕರ ಮೊದಲಾದ ನೀಚ- ಯೋನಿಗಳೊಳಗೆ ಬಂದು ಅಂದದನು ಕ್ರಮಿಸಿದವನು ಆ ನೋವನಾಗಲೆ ಮರೆದಿಯಲ್ಲೊ 5 ಮುನ್ನ ದುಷ್ಕರ್ಮವ ಮಾಡಿದ ಪ್ರಾಣಿಗಳು ಉನ್ನತ ನೀಚ ದೇಹಗಳ ಧರಿಸಿ ಬನ್ನಬಡುತಿಹುದು ನೀ ನೋಡಿ ನೋಡಿ ಮತ್ತೆ ದುರ್ನಡತೆಯನು ಮಾಡಲುದ್ಯೋಗಿಪೆ 6 ಎಂಬತ್ತು ನಾಲ್ಕು ಲಕ್ಷ ಯೋನಿಗಳೊಳಗೆ ಕುಂಭಿಣಿಯೊಳಗೆ ತಿರುತಿರುಗಿ ಪಾಪ ಉಂಬುದನುಚಿತವೆಂದು ಮನ ಹೇಸಿ ವಾಕರಿಸಿ ನಂಬುನಾರಾಯಣನ ಇನ್ನಾದರೂ 7 ಜನನಿಯ ಗರ್ಭವಾಸ ದುಃಖ ಅತಿಶಯವೊ ಜನನ ಮರಣದ ದುಃಖ ಬಲು ಅಧಿಕವೊ ಘನ ನರಕದಾ ದುಃಖ ಪೇಳಲೊಶವಲ್ಲ ನಿನ- ಗಿನಿತಾದರೂ ನಾಚಿಕಿಲ್ಲವೇನೊ 8 ಸಾರಿ ಪೇಳುವೆನೀಗ ಪುಟ್ಟಿ ಬೆಳೆದಳಿವ ಸಂ- ಸಾರ ಸುಖವಲ್ಲ ಮಹ ದುಃಖಪುಂಜ ಘೋರ ಸಂತಾಪಕ್ಕೆ ಕಡೆಮೊದಲಿಲ್ಲವೊ ವಾರಿಜಾಂಬಕನ ಮರೆಯೊಕ್ಕು ಬದುಕೊ 9 ಹಿಂದೆ ಬಹುಜನುಮದಲಿ ಬಂದು ಬಳಲಿದ ಬವಣೆ ಒಂದೊಂದು ನೆನೆಸಿಕೊಳಲತಿ ಕಷ್ಟವೊ ಮುಂದಾದರು ಸರಿ ಎಚ್ಚೆತ್ತು ಬಿಡದೆ ಗೋ- ವಿಂದನ ಪದಾಂಬುಜವ ಧ್ಯಾನ ಮಾಡೊ 10 ಮಾರಿ ಇಲ್ಲಿದೆಯೆಂದು ಕೇಳುತಲಿ ಪೋಗಿ ನೀ ಭೂರಿ ಭಯಕೊಳಗಹದು ನೀತಿಯಲ್ಲ ದೂರ ತಿಳಿದು ನೋಡಿ ದುರ್ಮಾರ್ಗವನು ಜರಿದು ಸೇರಿ ಸಜ್ಜನರ ಸುಪಥವ ಪಡೆಯೊ 11 ನಿನ್ನಯ ಸ್ವರೂಪಕ್ಕೆ ಹೀಗಾಗುವುದೆಂದು ಪುಣ್ಯವನೆ ಗಳಿಸಿಕೊ ಬ್ಯಾಗ ನೀನು ಇನ್ನು ಈ ಧರೆಯಲ್ಲಿ ಬಿಟ್ಟು ಹೋಗುವ ದೇಹ- ವನ್ನು ಪೋಷಿಸಿಕೊಂಡು ಹಿಗ್ಗಬೇಡ 12 ವನಿತೆಸುತರನು ಪೊರೆಯಬೇಕೆಂಬ ಬುದ್ಧಿಯಲಿ ಧನದಾಸೆಯಿಂದಲಗಣಿತ ಪಾಪವ ಕ್ಷಣದೊಳಗೆ ಸಂಪಾದಿಸಿಕೊಂಬೆ ಎಲೊ ಮೂಢ ನಿನಗಿವರು ಕೊನೆಗೆ ಸಂಗಡ ಬರುವರೆ 13 ಕೆಡಬ್ಯಾಡ ವ್ಯರ್ಥಮೋಹಕೆ ಸಿಲುಕಿ ಜವನವರು ಪಿಡಿದೊಯ್ದು ಕಡಿದಿರಿದು ಕೊಲ್ಲುವಾಗ ಬಿಡಿಸುವವರಾರಿಲ್ಲ ಈಗಳೆ ಮುಂದರಿತು ಕಡಲಶಯನನ ಪೊಂದಿ ಮುಕುತಿ ಪಡೆಯೊ 14 ಈಗಲೇನೊ ಇನ್ನು ಕ್ಷಣಕೇನು ಬಪ್ಪುದೊ ನೀ ಗರುತರಿಯದಲೆ ಹಿತ ರಾಗದಲಿ ಸರ್ವವನು ಎನ್ನದೆಂದಾಡದಿರು ನಾಗಾರಿಗಮನನಾಧೀನವೆನ್ನೊ 15 ನೀ ಮಗುಳೆ ಮಹಿಯೊಳಗೆ ಕಂಡುಕಂಡುದ ಬಯಸಿ ಭ್ರಾಮಕರ ನುಡಿಗೇಳಿ ಭ್ರಾಂತಿಗೊಳದೆ ಕಾಮಾದಿಗಳ ತ್ಯಜಿಸಿ ಸತ್ಕರ್ಮವನು ಮಾಡಿ ಶ್ರೀಮನೋ ಹರನಿಗರ್ಪಣೆಯ ಮಾಡೊ16 ಏನುಧಾವತಿಗೊಳಲೇನೇನು ಫಲವಿಲ್ಲ ಮಾನವಜನುಮ ಜೊಳ್ಳು ಮಾಡಬ್ಯಾಡ ಆನಂದತೀರ್ಥರ ಪಾದಕಮಲವ ಪೊಂದಿ ಅಚ- ಲಾನಂದವಿಠಲನ್ನ ನೀನೊಲಿಸಿಕೊ 17
--------------
ಅಚಲಾನಂದದಾಸ
ಕೇಳು ಶ್ರೀನಿವಾಸ ಕಷ್ಟವ ತಾಳಲಾರೆ ಶ್ರೀಶ ಕಂಜಜೇಶ ಪ. ಮಾತ ಕೇಳದಿರುವ ಮನ ಬಹು ಕಾತರಗೊಂಡಿರುವ ರೀತಿಯಿಂದ ಬಹು ಸೋತೆನು ಷಡ್ರಿಪು ಜಾತ ಬಂಧಿಸಿರುವ 1 ಕಟ್ಟಿ ಸಹಿಸಲಾರೆ ಮೊದಲ ವಿಠಲ ನೀ ಕೈಬಿಟ್ಟರೆ ಮಾಜದು ಅಟ್ಟಹಾಸ ತೋರೆ 2 ಉದಯ ಮೊದಲುಗೊಂಡು ನಾನಾ ವಿಧದಲಿ ಭ್ರಮೆಗೊಂಡು ಸದಯ ನಿನ್ನ ಪಾದಾಬ್ಜ ನೆನೆಯದೆ ಚದುರೆಯ ಮನಗೊಂಡು 3 ನಿತ್ಯ ಕರ್ಮವೆಲ್ಲ ಕಂಬಳಿ ಬುತ್ತಿಯಾಯಿತಲ್ಲ ಕತ್ತರಿಸಿ ಬ್ರಹ್ಮೆತ್ತಿಯನ್ನು ಪುರು- ಸಿರಿನಲ್ಲ 4 ತಲ್ಲಣಗೊಳಿಸುವುದು ತುದಿಮೋದ- ಲಿಲ್ಲದೆ ದಣಿಸುವುದು ನಿಲ್ಲೆ ನಡೆಯ ಮಲಗೆಲ್ಯು ಬಿಡದು ದೂ- ರೆಲ್ಲು ಪೇಳಗೊಡದು 5 ಮೆಲ್ಲ ಮೆಲ್ಲನೆದ್ದು ನೀ ಮನ ದಲ್ಲಿ ಸೇರುತ್ತಿದ್ದು ನಿಲ್ಲಲು ತೀರಿತಲ್ಲದೆ ಲೋಕ ದೊಳಿಲ್ಲ ಬೇರೆ ಮದ್ದು 6 ನಿತ್ಯ ನಿನ್ನ ಮುಂದೆ ಸೇವಾ ವೃತ್ತಿ ಮಾಳ್ಪದೊಂದೆ ಎತ್ತಾರಕವೆಂದಾಶ್ರಯಿಸದೆ ಮೇ- ಲೊತ್ತಿ ಬೇಗ ತಂದೆ 7 ಭೃತ್ಯರ ಬಿಡನೆಂದು ಶ್ರುತಿ ಶಿರ ವೃತ್ತಿ ವಚನವೆಂದು ಸತ್ಯವೆಂದು ನಂಬಿದ ನೀನರಿಯೆಯ ಔತ್ತರೆಯ ಬಂಧು 8 ವಿಜಯಸೂತನಿಂದ ಪಾದವ ಭಜಿಸಿದ ಮ್ಯಾಲೆನ್ನ ನಿಜ ಜನದೊಳು ಸೇರಿಸುವುದು ಚಿತ ಸಾಮಜ ವರದನೆ ಮುನ್ನ 9 ಭವ ಪರಿಪಾಲ ಪಾಲಿಸು ವ್ರಜ ಯುವತಿ ಲೋಲಾ ಪಾದ ಪಂ- ಕಜ ಕೊಡು ಗೋಪಾಲ 10
--------------
ತುಪಾಕಿ ವೆಂಕಟರಮಣಾಚಾರ್ಯ
ಕೈಕೊಂಡ - ನೃಹರಿ ಕೈಕೊಂಡ ಪ ಕೈಕೊಂಡ ಪೂಜೆಯ ನೃಹರಿ | ತ್ರೈಲೋಕ್ಯಕನಾಥನು ಅಸುರಾರಿ | ಆಹತೋಕನ ಸಲಹಲು | ಏಕಮೇವನ ಲೀಲೆಕೈಕೊಂಡ ಅವತಾರ | ಆ ಕಂಬೋದ್ಭವನಾಗಿಅ.ಪ. ಭಕ್ತಿ ಭಾವದಿ ಪರಾಶರ | ಬಹುತಪ್ತ ಭಾವದಿ ಕೃಷ್ಣೇ ತೀರ | ದಲ್ಲಿಸಕ್ತನಿರೆ ಧ್ಯಾನ ಗೋಚರ | ನಾಗಿವ್ಯಕ್ತನು ಷೋಡಶಕರ | ಆಹದೃಪ್ತ ದಾನವ ಧ್ವಂಸಿ | ದೀಪ್ತಾನಂತ ತೇಜಮೂರ್ತಿ ಕಾಣಿಸಿದನ | ವ್ಯಕ್ತನಾಗಿದ್ದಂಥ 1 ಕಟಿಸೂತ್ರ ಸ್ಮರ ಕೋಟಿ ಲಾವಣ್ಯಕರ ಪಾಶ ಅಸಿಕುಂತ | ವರದಾ ಭಯವು ಹಸ್ತ 2 ಕಂಬು ಚಕ್ರ ಚರ್ಮಕರ | ಮತ್ತೆಅಂಬುಜ ಶಾಂಙÁ್ರ್ಞದಿಧರ | ಗದಸಂಭೃತ ತುಳಸಿಯ ಹಾರ | ಮತ್ತೆಇಂಬಿನ್ವ್ಯೊ ಜಯಂತಿ ಹಾರ | ಆಹಅಂಬುಜದಳ ನೇತ್ರ | ಇಂಬಾಗಿ ಕರಪಾತ್ರತುಂಬ ಪೀಯುಷಧಿ | ಪೊಂಬಸಿರ ವಂದ್ಯನು 3 ಶ್ರೀವತ್ಸ ಲಾಂಛನ ಭೂಷ | ತನ್ನಭ್ರೂವಿಲಾಸದಿ ಬ್ರಹ್ಮ ಈಶ | ರಿಗೆತಾವೊಲಿದೀವ ಆವಾಸ | ಯೆನುತವ ವೇದಂಗಳು ಅನಿಶ | ಆಹಮಾವಿನೋದಿಯ ಗುಣ | ಸಾವಕಾಶಿಲ್ಲದೆಸಾರ್ವದ ಪೊಗಳುತ್ತ | ಭಾವದೊಳ್ಹಿಗ್ಗುವವು 4 ಪೊತ್ತು ರೂಪವ ಬಲಪಾದ | ಚಾಚುತ್ತ ರಕ್ಕಸನೊಡಲಗಾಧ | ಇಟ್ಟುವತ್ತುತ ತೊಡೆಯಲ್ವಿನೋದ | ದ್ವಯಹಸ್ತ ನಖದಿ ಉದರ ಬಗೆದ | ಆಹಕಿತ್ತುತ ಕರುಳನ್ನ | ಕತ್ತಿನೊಳ್ಹಾಕುತಭಕ್ತನ ಸಂಬಂಧ | ಎತ್ತಿ ತೋರ್ದ ಜಗಕೆ 4 ಪಂಚ ಮೋಕ್ಷಪ್ರದ ಹರಿ | ಆಯ್ತುಪಂಚಾಮೃತಭಿಷೇಕ ಅವಗೆ | ಮತ್ತೆಪಂಚಕಲಶಾರ್ಚನವು ಆವಗೆ | ಆಯ್ತುಪಂಚ ಕುಂಭಾಭಿಷೇಕವಗೆ | ಆಹಸಂಚಿಂತಿಸುತ ಹೃ | ತ್ಪಂಕಜದೊಳು ನೋಡೆಸಂಚಿಂತಾಗಮ ನಾಶ | ಕೊಂಚವು ಪ್ರಾರಬ್ಧ 6 ಶಾಲಿಗ್ರಾಮದ ಶಿಲ ಏಕ | ಪೊತ್ತುಪೋದಕ ಬಾಹು ಅಲೀಕ | ಶತಶಾಲೀವಾಹನವೆಂಬ ಶಕ | ದೊಳುಜ್ವಾಲಾ ನರಹರಿ ನಾಮಕ | ಆಹಯೇಳು ಐದೊರ್ಷದ | ಭಾಳ ತಪಕೆ ಮೆಚ್ಚಿಶೀಲ ದ್ವಿಜ ದಂಪತಿ | ಗೊಲಿದು ಪೇಳಿದ ಹೀಗೆ 7 ಭೀಮಕ ರಾಜಗೆ ಪೇಳು | ತೃಣಜಾಲವ ಹಾಕೆ ನೀರೊಳು | ಅಲ್ಲಿಜ್ವಾಲೆ ಉದ್ಭವಿಸಲು ಬಲು | ನೀರಮೇಲಕ್ಕೆ ಒಳಗಿಂದ ಬರಲು | ಆಹತೋಳೆರಡಲಿ ರಾಜ | ಮೇಲೆತ್ತೆ ಬರುವನುತಾಳ ಮೇಳ್ವೈಭವ | ದೊಳಗೆ ಸ್ಥಾಪಿಸಲೆಂದು 8 ಅಂಗಹೀನರೆ ಕೇಳಿ ಆವ | ನಿಮ್ಮಭಂಗಿಪ ಮೂಕಾಂಧ ಭಾವ | ನೀಗಿಶೃಂಗಾರ ರೂಪ ಸ್ವಭಾವ | ನರಸಿಂಗ ಕೊಡುವೆನು ಸೇವ | ಆಹ ಹಿಂಗದೆ ಕೊಡುವೆನು | ಅಂಗಜ ಪಿತ ನರಸಿಂಗಪುರವೆಂದು | ಸಂಗೀತವಾಗಲಿ 9 ವತ್ಸರ ಸೌಮ್ಯವು ಪುಷ್ಯ | ದಿನದರ್ಶ ವ್ಯಾಸತೀರ್ಥ ಶಿಷ್ಯ | ಆದರ್ಶ ದಾಸರ ದಿನ ಭವ್ಯ | ಭಕ್ತವತ್ಸಲ ಸ್ವೀಕಾರ ಆಲ್ಪ್ಯ | ಆಹಉತ್ಸವ ಕೊಳ್ಳುತ | ಉತ್ಸಾಹವೆನಗಿತ್ತುಮತ್ಸ್ಯಾದಿ ದಶರೂಪಿ | ಕೃತ್ಸ್ನ ಕಾರುಣ್ಯನು 10 ಪರಾಶರಗೊಲಿದ ಸುಶೀಲ | ಖಗವರನು ಭೂದೇವಿಯು ಬಲ | ಎಡವರಲಕ್ಷ್ಮೀ ಪ್ರಹ್ಲಾದ ಬಾಲ | ಸುರವರರಿಂದ ಸ್ತುತ್ಯ ವಿಶಾಲ | ಆಹಗುರು ಗೋವಿಂದ ವಿಠ್ಠಲ | ಗುರು ಬಿಂಬ ನರಸಿಂಗಶರಣರ ಅಪಮೃತ್ಯು | ಹರಿಸಿ ಸಂತತ ಕಾಯ್ವ11
--------------
ಗುರುಗೋವಿಂದವಿಠಲರು
ಕೈತುತ್ತ ಹಾಕುವೆ ಬಾರೋ ರಂಗ ಮೈತುಂಬಾ ಒಡವೆಯ ಇಡುವೆನು ಬಾರೋ ಪ ಬೈತಲೆ ಬಾಚಿ ಹೂ ಮುಡಿಸುವೆ ಬಾರೋ ತೈ ತೈ ತೈ ಎಂದು ಕುಣಿದಾಡು ಬಾರೋ ಅ.ಪ ಬಿಸಿ ಬಿಸಿಯನ್ನವ ಮೊಸರಲಿ ಕಲಸಿ ಹಸುವಿನ ಬೆಣ್ಣೆಯ ಅದರ ಮೇಲಿರಿಸಿ ಕೇಸರಿ ಬೆರೆಸಿ ತುಸು ಏಲಕ್ಕಿಯ ಪುಡಿಮಾಡಿರಿಸಿ 1 ಬಸಿರಲ್ಲಿ ಜಗಂಗಳ ತುಂಬಿಹೆನೆಂದು ಹಸಿವಿಲ್ಲವೆನಬೇಡ ಅಸುರರಕೊಂದು ಬಿಸದ ಕಾಳಿಂಗನ ತುಳಿದೆದ್ದುನಿಂದು ಬಸವಳಿದಿರ್ಪೆನೀನಮರರ ಬಂಧು 2 ಹೊಸ ಪೀತಾಂಬರ ಕಟಿಬಂಧವಿಡುವೆ ವಿಸರವ ಪಸರಿಪ ಹೂಗಳ ಮುಡಿವೆ ರಸಸವಿನಾದದ ಕೊಳಲನು ಕುಡುವೆ ನಸುನಗೆ ತೋರೋ ಮಾಂಗಿರಿರಂಗ ನಲಿವೆ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕೈಯ ತೋರಿದ ಬಗೆಯ, ಅಮ್ಮಮ್ಮ ಯಾದವಗಿರಿ ಕಲ್ಯಾಣಿ ನೀನು ಪ ವತ್ಸರ ಚೈತ್ರ ದ್ವಿತೀಯೇಕಾದಶಿಯೊಳುಪ್ರಕಟಿತಾ ಶುಕ್ರವಾರದೊಳು ತನ್ನಭಕುತರಿಗುತ್ಸಾಹ ಸಂಧ್ಯಕಾಲದೊಳು 1 ಕಡಗ ಕಂಕಣ ಗೀರುಗಂಧ ಮಿಗೆಕಡು ಚೆಲುವಿನ ಬಣ್ಣ ಕುಪ್ಪುಸದಿಂದನಡು ಬೆರಳುಂಗುರದಿಂದ ಕೈಯಬೆಡಗ ನೋಡಿದ ಜನರಿಗೆ ಪುಟ್ಟಿತಾನಂದ 2 ಜನರೆಲ್ಲ ಯದುಶೈಲೋತ್ಸವವ ಕೇಳಿಘನ ಕಾಲದೇಶದಜಿತ ಭಯವನಿಮಗೆ ಬಿನ್ನೈಪೆನು ನಯವ ಕೊಟ್ಟಮನೋಹರುಷದಿ ನಮಗಿತ್ತ ವೈಭವವ 3 ಚೆಲುವರಾಯನ ರಥೋತ್ಸವದೀ ತೀರ್ಥಕೊಲಿದು ಗಂಗಾದೇವಿ ಬರುವ ಸಂಭ್ರಮವನೆಲೆಯ ಸರ್ವರಿಗನುಭವವ ಕೋಟಿಮನೋಹರುಷವನ್ನು ನಮಗಿತ್ತ ವೈಭವವ 4 ನಿನ್ನ ಮೋಹದ ಕಂದ ನಾನೊ ಕೇಳೆನಿನ್ನೊಮ್ಮೆ ದಿವ್ಯ ಹಸ್ತಂಜವನೀವಚೆನ್ನಿಗ ವರದ ವೆಂಕಟಾದಿಕೇಶವನುತನ್ನ ನಂಬಿದ ಭಕ್ತರಾಶ್ರಿತ ಕಾಮಧೇನು 5
--------------
ಕನಕದಾಸ
ಕೈಯ ಮುಗಿವೆನು ಮಹಾಲಿಂಗ ಜಗ- ದೈಯನೆ ವೃಷಭತುರಂಗ ಪ. ಧೈರ್ಯಸಾಹಸ ಸಮುದ್ರ ರುದ್ರ ಸುರ- ವರ್ಯನೆ ಸದಯಾಪಾಂಗ ಅ.ಪ. ಕೆಂಡಗಣ್ಣಿನ ಪರಶಿವನೆ ಸುಪ್ರ- ಚಂಡ ಚಂಡಿಕಾಧವನೆ ಮಂಡೆಯೊಳಗೆ ಭಾಗೀರಥಿಯ ತಾಳ್ದ ಕಂಡಪರಶು ಪಾವನನೆ 1 ಚಂದ್ರಕಲಾಧರ ಹರನೆ ಗೋ- ವಿಂದನ ವರ ಕಿಂಕರನೆ ಸುಂದರ ಶುದ್ಧಸ್ಫಟಿಕಶರೀರನೆ ವೃಂದಾರಕ ಮುನಿವೃಂದವಂದಿತನೆ2 ಪಾವಂಜೆ ಕ್ಷೇತ್ರವಾಸ ಪರಿ- ಪಾಲಿಸು ಫಣಿಪತಿಭೂಷ ದೇವ ಲಕ್ಷ್ಮೀನಾರಾಯಣದಾಸನ ಕಾವ ಕಲ್ಮಷವಿನಾಶ 3
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಕೈಯ ಮುಗಿವೆನು ಮಹಾಲಿಂಗ ಜಗ- ದೈಯನೆ ವೃಷಭತುರಂಗ ಪ. ಧೈರ್ಯಸಾಹಸ ಸಮುದ್ರ ರುದ್ರ ಸುರ- ವರ್ಯನೆ ಸದಯಾಪಾಂಗಅ.ಪ. ಕೆಂಡಗಣ್ಣಿನ ಪರಶಿವನೆ ಸುಪ್ರ- ಚಂಡ ಚಂಡಿಕಾಧವನೆ ಮಂಡೆಯೊಳಗೆ ಭಾಗೀರಥಿಯ ತಾಳ್ದ ಕಂಡಪರಶು ಪಾವನನೆ1 ಚಂದ್ರಕಲಾಧರ ಹರನೆ ಗೋ- ವಿಂದನ ವರ ಕಿಂಕರನೆ ಸುಂದರ ಶುದ್ಧಸ್ಫಟಿಕಶರೀರನೆ ವೃಂದಾರಕ ಮುನಿವೃಂದವಂದಿತನೆ2 ಪಾವಂಜೆ ಕ್ಷೇತ್ರವಾಸ ಪರಿ- ಪಾಲಿಸು ಫಣಿಪತಿಭೂಷ ದೇವ ಲಕ್ಷ್ಮೀನಾರಾಯಣದಾಸನ ಕಾವ ಕಲ್ಮಷವಿನಾಶ3
--------------
ತುಪಾಕಿ ವೆಂಕಟರಮಣಾಚಾರ್ಯ
ಕೈವಲ್ಯ ಮನದ ವೈಶಾಲ್ಯ ಧ್ರುವ ಅದ್ವೈತಾಗಮ್ಯಗೋಚರನದ್ವಿತೀಯ ಅಧ್ಯಾತ್ಮ ವಿದ್ಯದಾಗರ ಸಿದ್ಧರಪ್ರಿಯ ಸದ್ಗತಿ ಸುಖಸಾಗರ ಸದ್ಗುಣಾಲಯ ಬೋಧ ಪೂರ್ಣೋದಯ 1 ಆದಿತ್ಯಕೋಟಿ ಪ್ರಕಾಶ ಸದೋದಿತ ಸಾಧು ಹೃದಯನಿವಾಸ ಭೇದಾತೀತ ಶುದ್ಧಾತ್ಮ ಸುಖಸಂತೋಷ ಸದಾ ಸುಶಾಂತ ಸದಮಲಾನಂದಘೋಷ ಆದಿದೇವ ಸಾಕ್ಷಾತ2 ಕೈವಲ್ಯನಿಧಿ ನಿಶ್ಚಯ ದೇವಾಧಿದೇವ ಅಕ್ಷಯ ಶ್ರೀವಾಸುದೇವ ಭವಾತ್ಮ ಭಜಕಹೃದಯ ಸರ್ವರೊಳಿ ಹ್ಯ ಬಾಹ್ಯಾಂತ್ರ ಭಾಸುತಿಹ್ಯ ಮಹಿಪತಿ ಮನದೈವ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೊಕೊಕೋ ಎನ್ನಿರೊ ಕುಂಭಿನಿಯವರೆಲ್ಲಕೊಕೊಕೋ ಎನ್ನಿರೊ - ನಮ್ಮ ಪ ಗೋಕುಲದೊಳಗೊಬ್ಬ ಕಳ್ಳ ಬರುತಾನೆಂದುಕೊಕೊಕೋ ಎನ್ನಿರೊ ಅ ಹೊದ್ದಿ ಮೊಲೆಯನುಂಡವಳಸುವನೆ ಕೊಂದಮುದ್ದುಗಾರ ಕಳ್ಳ ಕೊಕೊಕೋ ಎನ್ನಿರೊಕದ್ದುಕೊಂಡೊಯ್ವ ರಕ್ಕಸರನೆಲ್ಲರ ಕಾಲಲೊದ್ದೊರಸಿದ ಕಳ್ಳ ಕೊಕೊಕೋ ಎನ್ನಿರೊಹದ್ದು ಹಗೆಯ ಹಾಸಿಗೆಯ ಮೇಲೊರಗಿದಮುದ್ದುಗಾರ ಕಳ್ಳ ಕೊಕೊಕೋ ಎನ್ನಿರೊಅರ್ಧದೇಹನ ಕೈಯ ತಲೆಯ ಕಪಟದಿಂದಕದ್ದು ಬಿಸುಟ ಕಳ್ಳ ಕೊಕೊಕೋ ಎನ್ನಿರೊ 1 ಮಣಿ ಮಲ್ಲಿಗೆ ದಂಡೆಯರಂಜೆ ಕದ್ದ ಕಳ್ಳ ಕೊಕೊಕೋ ಎನ್ನಿರೊಗುಂಜಿಯ ದಂಡೆಯ ಕಲ್ಲಿಯ ಚೀಲದಮಂಜು ಮೈಯ್ಯ ಕಳ್ಳ ಕೊಕೊಕೋ ಎನ್ನಿರೊಅಂಜದೆ ಗೊಲ್ಲರ ಹಳ್ಳಿಯೊಳಗೆ ಹಾಲನೆಂಜಲಿಸಿದ ಕಳ್ಳ ಕೊಕೊಕೋ ಎನ್ನಿರೊಸಂಜೆ ಬೈಗಿನಲ್ಲಿ ಕರೆಯುವ ಸತಿಯರಅಂಜಿಸಿದ ಕಳ್ಳ ಕೊಕೊಕೋ ಎನ್ನಿರೊ 2 ಕೇಸರಿ ಎಂಬ ರಕ್ಕಸರನೆಲ್ಲರ ಕೊಂದವೇಷಧಾರಿ ಕಳ್ಳ ಕೊಕೊಕೋ ಎನ್ನಿರೊಮೋಸದಿ ಬಲಿಯ ದಾನವ ಬೇಡಿ ಅನುದಿನಬೇಸರಿಸಿದ ಕಳ್ಳ ಕೊಕೊಕೋ ಎನ್ನಿರೊಮೀಸಲ ಅನ್ನವ ಕೂಸಾಗಿ ಸವಿದುಂಡವೇಷಧಾರಿ ಕಳ್ಳ ಕೊಕೊಕೋ ಎನ್ನಿರೊಸಾಸಿರ ನಾಮಕ್ಕೆ ಹೆಸರಾದ ಚಪ್ಪನ್ನದೇಶದ ದಾರಿಗಳ್ಳ ಕೊಕೊಕೋ ಎನ್ನಿರೊ 3 ಆಕಳೊಳಾಡಿ ಪರಲೋಕಕೆ ನಡೆದಂಥಆಕೆವಾಳ ಕಳ್ಳ ಕೊಕೊಕೋ ಎನ್ನಿರೊಭೂಕಾಂತೆಯ ಸೊಸೆಯರನೆತ್ತೆ ಬಲುಹಿಂದನೂಕಿ ತಂದ ಕಳ್ಳ ಕೊಕೊಕೋ ಎನ್ನಿರೊಗೋಕುಲದೊಳು ಪುಟ್ಟಿ ಗೊಲ್ಲರೆಲ್ಲರ ಕೈಲಿಸಾಕಿಸಿಕೊಂಡ ಕಳ್ಳ ಕೊಕೊಕೋ ಎನ್ನಿರೊಸಾಕಾರನಾಗಿ ಈ ಲೋಕವನೆಲ್ಲವಆಕ್ರಮಿಸಿದ ಕಳ್ಳ ಕೊಕೊಕೋ ಎನ್ನಿರೊ4 ಕ್ಷೀರವಾರಿಧಿ ವೈಕುಂಠನಗರಿಯನುಸೇರಿಸಿದ ಕಳ್ಳ ಕೊಕೊಕೋ ಎನ್ನಿರೊದ್ವಾರಾವತಿಯನು ನೀರೊಳು ಬಚ್ಚಿಟ್ಟಊರುಗಳ್ಳ ಬಂದ ಕೊಕೊಕೋ ಎನ್ನಿರೊದ್ವಾರಕೆಯಾಳುವ ಉಭಯದಾಸರ ತನ್ನಊರಿಗೊಯ್ದ ಕಳ್ಳ ಕೊಕೊಕೋ ಎನ್ನಿರೊಕಾರಣಾತ್ಮಕ ಕಾಗಿನೆಲೆಯಾದಿಕೇಶವಕ್ಷೀರ ಬೆಣ್ಣೆಯ ಕಳ್ಳ ಕೊಕೊಕೋ ಎನ್ನಿರೊ 5
--------------
ಕನಕದಾಸ
ಕೊಟ್ಟಿಗೋತ್ಸವ ಗೀತೆ ಕೊಟ್ಟೊಗೋತ್ಸವ ನೋಡಿ ಸೃಷ್ಟಿಗೀಶ್ವರನ ಪ. ವಾಸುದೇವನ ಸಹಸ್ರಸ್ತಂಭಮಂಟಪವ ದಾಸರು ಬಂದು ಶೃಂಗಾರವ ಮಾಡಿ ದೇಶದ ಮೇಲುಳ್ಳ ಬೊಂಬೆಗಳನು ರಚಿಸಿ ಲೇಸಾದ ಮೇಲುಕಟ್ಟುಗಳ ಕಟ್ಟಿದರು 1 ಸೃಷ್ಟಿಗೀಶ್ವರನಾದ ರಂಗನಾಥನಿಗೆ ಕೊಟ್ಟಿಗೋತ್ಸವವನ್ನು ನಡೆಸಬೇಕೆನುತ ಕಟ್ಟಿ ಕಂಕಣವನ್ನು ನಾಲ್ಕುವೇದಗಳಿಂದ ಭಟ್ಟರು ಓದಿ ಪೇಳಿದರು ಸಂಭ್ರಮದಿ 2 ವಜ್ರದ ಕಿರೀಟವಿಟ್ಟು ರತ್ನದಂಗಿಯ ತೊಟ್ಟು ಅರ್ಜುನಸಖ ಸಂಭ್ರಮದಲಿ ಪೊರಟು ಸ್ವರ್ಗದ ಬಾಗಿಲೊಳಗೆ ತಾ ನಿಂದು ಮೂರ್ಜಗವೆಲ್ಲ ಮೋಹಿಸುತಲೆ ಬಂದು 3 ಮಂದಹಾಸದಲಿ ನಿಂದು ಮಂಟಪದಲಿ ಬಂದ ಆಳ್ವಾರರಿಗಾಸ್ಥಾನವಿತ್ತು ಚಂದದಿಂದ ದಿವ್ಯ ಪ್ರಬಂಧವ ಕೇಳಿ ಒಂದುಅಂಕಣ ಬಿಡದೆ ಬಂದ ಶ್ರೀರಂಗ 4 ಸಂಕ್ರಾಂತಿಯಲಿ ಶಂಕರನ ಪ್ರಿಯನು ಶಂಕೆ ಇಲ್ಲದೆ ಆಭರಣವನು ಧರಿಸಿ ಪಂಕಜಮುಖಿಯರೊಡಗೊಂಡು ಹರುಷದ ಲಂಕಾರವಾಗಿ ಬಂದನು ಮಂಟಪಕೆ 5 ಮತ್ತೆ ಮರುದಿನದಲ್ಲಿ ಭಕ್ತವತ್ಸಲನು ಮುತ್ತಿನಅಂಗಿ ಮುಂಡಾಸನಳವಡಿಸಿ ಮುತ್ತಿನಛತ್ರಿ ಚಾಮರ ಸೂರೆಪಾನದಿ ಮುತ್ತರಸಿಯ ಮಂಟಪಕೆ ನಡೆತಂದ 6 ಅರ್ಥಿಯಿಂಬಂದು ತಾ ಅಶ್ವವನೇರಿ ಮತ್ತೆ ಬೇಟೆಯಮೃಗವನೆ ಕೊಂದು ಸಂ ಕ್ರಾಂತಿಯ ಪಾರ್ವೇಟೆಯನಾಡಿ ಸಂತೋಷದಿ ಬಂದ 7 ನಾರಿವೇಷವ ಆಳ್ವಾರರಿಗೆ ಧರಿಸಿ ಪೇರಿಯ ತಾ ಬಿಟ್ಟು ತೇಜಿಯನೇರಿ ಚೋರತನವ ಮಾಡಿದ ಭಕ್ತರಿಗೆ ಮೂಲಮಂತ್ರವ ಪೇಳಿ ಮುಕ್ತಿಯನಿತ್ತ 8 ಮಿಂದು ಮಡಿಯನುಟ್ಟು ಅಂದು ರಾತ್ರಿಯಲಿ ಹ ನ್ನೊಂದು ವಿಧ ಭಕ್ಷ್ಯಗಳನು ತಾ ಗ್ರಹಿಸಿ ಬಂದ ಆಳ್ವಾರರಿಗೆ ಮುಕ್ತಿಯನಿತ್ತು ಬಂದು ಆಸ್ಥಾನದಿ ನಿಂದ ಶ್ರೀರಂಗ 9 ಭಕ್ತರು ಮಾಡಿದ ಪ್ರಬಂಧವನೆಲ್ಲ ಭಕ್ತಿಯಿಂದಲೆ ಪೇಳಿದ ಆಚಾರ್ಯರಿಗೆ ಯುಕ್ತಿ ತೋರಿದ ಪರಾಶರವ್ಯಾಸರಿಗೆ ಬ್ರಹ್ಮ ರಥವನಿತ್ತ ಬ್ರಹ್ಮಾಂಡರೂಪ 10 [ಶೌ]ರಿಯು ತಾನಿರಲು ಮೇಘಮಂಡಲದಂತೆ ತೋರುವುದು ತಾರಕೆಯಂತೆ ಮೈಯುಡುಗೆ ವಾರಿಜನಾಭನ ಮುತ್ತಿನಂಗಿಯ ನೋಡು ವವರಿಗೆ ತಾ ಆನಂದವಾಗಿಹುದು 11 ಕ್ಷೀರಸಾಗರದಲ್ಲಿ ಪವಡಿಸಿಹ ಹರಿಗೆ ಕ್ಷೀರಬಿಂದುಗಳು ಮೈಯೊಳಗೆ ಬಿದ್ದಂತೆ ವಾರಿಜನೇತ್ರಗೆ ವಜ್ರದನಾಮವು ಧರಿಸಿದರು ಹೇಮದ ಪಾದಹಸ್ತಗಳ 12 ಮುತ್ತಿನಂಗಿಸೇವೆ ನೋಡಬೇಕೆನುತ ಹತ್ತುಸಾವಿರ ಪ್ರಜೆ ಬಂದು ನಿಂತಿರಲು ಇತ್ತು ಕಾಣಿಕೆಯನು ನೋಡಿ ವೆಂಕಟರಂಗನ ಮುಕ್ತರಾದೆವೆಂದು ಭಕ್ತರು ನುಡಿದರು 13
--------------
ಯದುಗಿರಿಯಮ್ಮ
ಕೊಡಬೇಕು ದಾನಗಳ ಸತ್ಕಾರ್ಯಕೆಬಿಡಬೇಕು ಕೈಸಡಿಲು ಮೋಕ್ಷಸಾಧನೆಗೆ ಪಬೇಡದಲೆ ಕೊಡುವವರು ರೂಢಿಯೊಳಗುತ್ತಮರುಬೇಡಿದರೆ ಕೊಡುವ ದಾನಿಯು ಮಧ್ಯಮಬೇಡಿದರು ಕಾಡಿದರು ಕೊಡದವರು ಅಧಮರುಕೊಡೆದೆ ಬಡಬಡಿಸುವವರು ಮೂರ್ಖ ಅಧಮಾಧವುರು 1ದುಡ್ಡು ಇದ್ದರೆ ಮಾತ್ರ ದೊಡ್ಡವರು ಅನಬೇಡದುಡ್ಡಿದ್ದು ದಾನ ಧರ್ಮವು ನಡೆಯಬೇಕುದುಡ್ಡು ಕಾಯುವ ಸರ್ಪಕ್ಕೆ ಇಹ'ಲ್ಲ ಪರ'ಲ್ಲಬಿದ್ದು ಹೋದರೆ ಅವರ ಬಾಯೊಳಗೆ ಮಣ್ಣು 2ಧನಿಕರಿಗೆ ಭೂಷಣವು ದಾನಧರ್ಮವು ಸದಾಧನ'ದ್ದ ಜಿಪುಣತಾ ಜೀವಂತ ಹೆಣವುಧನ'ದ್ದು ದಾನಮಾಡುವ ಪುಣ್ಯವಂತರಿಗೆಘನಮ'ಮ ನಮ್ಮ ಭೂಪತಿ'ಠ್ಠಲನೊಲಿಯುವನು 3ತಾುಯ ಹರಕೆ
--------------
ಭೂಪತಿ ವಿಠಲರು
ಕೊಂಡಾಡಲಳವೆ ನಿನ್ನಯ ಕೀರ್ತಿ ಭೂ- ಮಂಡಲದೊಳು ಹಯಗ್ರೀವಮೂರ್ತಿ ಪ. ವೇದಂಗಳ ಜಲದಿಂದ ತಂದೆ ನೀ ಪೋದ ಗಿರಿಯ ಬೆನ್ನೊಳಾಂತು ನಿಂದೆ ಮೇದಿನಿಯ ಕದ್ದೊಯ್ದನ ಕೊಂದೆ ಸಂ- ವಾದದಿಂದ ಕಂಬದಿಂದಲಿ ಬಂದೆ 1 ಚರಣಾಗ್ರದಲಿ ನದಿಯನು ಪೆತ್ತೆ ತೀಕ್ಷ್ಣ ಪರಶು ಪಿಡಿದು ಬಾಹುಜರ ಕಿತ್ತೆ ನೆರೆನಂಬಿದಗೆ ಸ್ಥಿರಪಟ್ಟವನಿತ್ತೆ ದೊಡ್ಡ ದುರುಳಕಾಳಿಂಗನ ಶಿರದಿ ನಿಂತೆ 2 ಪರವ್ರತೆಯರ ಮಾನಭೇದನ ಚತುರ ತುರಗವೇರಿ ನಲಿವನ ಕ್ಷಿತಿಯೊಳುತ್ತಮ ವಾದಿರಾಜನ ಸ್ವಾಮಿ ಸತತ ರಕ್ಷಿಪ ಶ್ರೀ ಹಯವದನ 3
--------------
ವಾದಿರಾಜ
ಕೊಡಿಸೆ ಭಕ್ತರ ಒಡಂಬಡಿಸೆ ಮೊಲೆಯುಣ್ಣಿಸಿ ತೊಟ್ಟಿಲೊಳ್ ಮಾಯೆ ನೀನೊಬ್ಬಳೆ ತಾಯೆ ಭಕ್ತರ ಸಂತತ ಕಾಯೆ ಶಾಂತೇಶ್ವರಿ ಮಾಹಾಮಾಯೆ ನಾನಿನ್ನ 1 ಸಪ್ತಸ್ವರ ಭೇದವ ತಿಳಿಸಿದ್ಯಾಕೆ ನೀನು ಪೇಳುವ ನುಡಿ ಪುಸಿಯಲ್ಲ ನಾನಿನ್ನ 2 ವರಕೊಲ್ಲಾಪುರದ ಶ್ರೀ ದುರ್ಗಾಂಬಾ ನಾನಿನ್ನ ಪಾದದ ಸ್ಮರಣೆ ಬಿಡೆನು ಶ್ರೀ ಮೂಕಾಂಬಾ ಅಡಿಗಡಿಗೆ ನಾ ಶ್ರೀ ಮೂಕಾಂಬೆ ನಾನಿನ್ನ 3
--------------
ಭಟಕಳ ಅಪ್ಪಯ್ಯ
ಕೊಡು ಕೃಷ್ಣನೇ ಎನ್ನ ಸಾಲವ ಬೇಗ ಕೊಡದಿದ್ದರೆ ಬಿಡೆನೊ ಪ. ತಡ ಮಾಡಿದೊಡೆ ನಿನ್ನಾಟದ ಬೆಡಗನು ಪೊಡವಿಗೆ ತಿಳಿಸುವೆನು ಜೋಕೆ ಅ.ಪ. ನೀರ ಪೊಕ್ಕರು ಬಿಡೆ ನಿನ್ನ ಭವ ವಾರಿಧಿ ದಾಟಿಸುವೆಂಬೆ ಭಾರ ಪೊತ್ತರೆ ನೀನೇ ಎನ್ನ ಸಂಸಾರ ಭಾರಕೆಂಬೇ ದೇವ ಕೋರೆ ತೋರಲು ಅಂಜುವೆನೆ ಭೂಮಿಯ ಮೇರೆ ಸಿಲಿಕದೋಡಿದರೂ ದೃಢವನು ಕೊಡದಿದ್ದರೂ ಬಿಡೆ ನಾ 1 ಕಂಬದೊಳಡಗಲು ಬಿಡೆನು ನಿನ್ನ ಡಿಂಬ ಭಜಿಪೆ ನರಹರಿಯೆ ಸಂಭ್ರಮದೊಳು ಬ್ರಹ್ಮಚಾರಿಯಾಗಲು ನಿನ್ನ ಹಂಬಲು ಬಿಡೆ ಕೊಡಲಿಯನು ತೋರಲು ಕದಂಬ ಬಾಹು ಛೇದಿಸಲು ರಾಮ ಕೊಡದಿದ್ದರೆ ದೃಢನಾ ದೇವ 2 ಒಂದು ಸ್ಥಳದಿ ಪುಟ್ಟಿ ತಿಳಿಸದೆ ಇ ನ್ನೊಂದು ಸ್ಥಳಕೆ ಪೋಗೆ ಕೃಷ್ಣಾ ಅಂದದ್ವಸನ ಬಿಟ್ಟು ಸುಂದರಿಯರ ವ್ರತ ಛಂದದಿ ಕಳೆದುನೀ ತೇಜೀಯೇರಲು ಸುಂದರ ಶ್ರೀ ಶ್ರೀನಿವಾಸ ನಿನ್ನಡಿ ದೃಢ ಕೊಡದಿದ್ದರೆ ಬಿಡೆನಾ 3
--------------
ಸರಸ್ವತಿ ಬಾಯಿ