ಒಟ್ಟು 157 ಕಡೆಗಳಲ್ಲಿ , 49 ದಾಸರು , 144 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶ್ರೀಯತಿವೃಂದ ಸ್ತೋತ್ರ ಯತಿಗಳ ಸತತ ಸಂಸ್ತುತಿಸುವೆ ಅತಿತ್ವರಿತದಲಿ ದುರಿತಗಳ ತರಿವೆ ಪ ಮೋದತೀರ್ಥಾದಿ ಸುಬೋಧೇಂದ್ರ ಪರಿಯಂತ ಮೋದದಿಂದವರ ಶ್ರೀಪಾದಕ್ಕೆ ನಮಿಪೆ 1 ಅಜನಪಿತನಪಾದ ಭಜಿಸುವ ಭಕುತ ನಿಜವಾಗಿ ಪಾಲಿಪ ಸುಜನೇಂದ್ರ ತೀರ್ಥ 2 ಆನತಜನ ಪಾಪಕಾನನದಹಿಪ ಕೃ ಶಾನನಂತಿಪ್ಪ ಸುಙÁ್ಞನೇಂದ್ರ ತೀರ್ಥ 3 ದುರ್ಮತಧ್ವಂಸ ಸದ್ಧರ್ಮ ಸಂಸ್ಥಾಪಕ ಕರ್ಮಂದಿವರ ಸುಧರ್ಮೇಂದ್ರ ತೀರ್ಥ 4 ಅಗಣಿತಮಹಿಮ ಮೂಜಗದೊಳು ಪ್ರಖ್ಯಾತ ನಿಗಮಾಗಮಜ್ಞ ಶ್ರೀ ಸುಗುಣೇಂದ್ರ ತೀರ್ಥ 5 ಸಸುಪ್ರಸಿದ್ಧ ಮುನಿ ವಿಪ್ರಸಮೂಹವ ಕ್ಷಿಪ್ರದಿಪಾಲಿಪ ಸುಪ್ರಙÉ್ಞಂದ್ರಾಖ್ಯ 6 ಶ್ರೀಶ ಪದಾರ್ಚಕ ಸುಕೃತೀಂದ್ರ 7 ಮೂಲೋಕ ವಿಖ್ಯಾತ ಶ್ರೀಲೋಲನಂಘ್ರಿ ಕೀ - ಲಾಲಜಮಧುಪ ಸುಶಿಲೇಂದ್ರ ಮುನಿಪ 8 ವರದೇಶ ವಿಠಲನ ಪರಿಪರಿ ಪೂಜಿಪ ಪರಮಹಂಸರ ಪಾದಕ್ಕೆರಗಿ ಬಿನ್ನೈಪೆ 9
--------------
ವರದೇಶವಿಠಲ
ಶ್ರೀವೆಂಕಟೇಶ ಪಾಹಿ ತಾವಕ ಭಕ್ತಿಂ ದೇಹಿ ಪ ವಾರಿಜನೇತ್ರಾ ವಾರಿದಗಾತ್ರಾ ನಾರದಸನ್ನುತಪಾತ್ರ ನರಮಿತ್ರ ಸುಚರಿತ್ರ 1 ಅಂಡಜಯಾನ ಕುಂಡಲಿಶಯನ ಖಂಡಪರಶು ಪರಿಪಾಲನ ಮುನಿಲಾಲನ ಸುರಖೇಲನ 2 ಪಂಕಜ ಚರಣ ಸಂಕಟಮೋಚನ ಕಾರಣ ಭವತಾರಣ ಗುಣಪೂರಣ 3 ದಶರಥಬಾಲಾ ದಶಮುಖಕಾಲ ದಶಶತಲೋಚನಪಾಲಾ ಭೂಪಾಲಾ ಸುರಮುನಿಲೋಲ4 ನವನೀತ ಚೋರ ಬೃಂದಾವನವಿಹಾರ ಬಹುದಾರಾ ಧುರಧೀರ 5 ಅಜನುತಪಾದ ಅಪಹೃತ ಖೇದ ಕಲುಷ ನಿರ್ಭೇದ ನುತವೇದ ಸುರಮೋದ 6 ವರವ್ಯಾಘ್ರಾಚಲ ವಿಹರಣ ಶೀಲ ವರದವಿಠಲ ಗೋಪಾಲ ಶ್ರೀಲೋಲ ಬಹುಲೀಲಾ 7
--------------
ವೆಂಕಟವರದಾರ್ಯರು
ಶ್ರೀಹರಿ ಸ್ತೋತ್ರ ಪಾಲಿಸೆನ್ನನು ಶ್ರೀ ಹರಿಯೆ ಸಿರಿದೇವಿ ಧೊರೆಯೇ | ಸರಸಿಜಾಸನ ಪಿತನೇ|| ಪ ಪಾರ್ಥಸೂತ ಪನ್ನಗಗಿರಿ ನಿಲಯ ಪವಮಾನ ವಂದ್ಯ | ಶ್ರೀ ಭೂರಮಣನೇ ಸೃಷ್ಟಿಗೊಡೆಯನೆ | ಕ್ಲೇಶ ಕಳೆಯುವ ಕೈಟಭಾರಿ ಕರುಣ ಶರಧಿಯೆ ಅ.ಪ ಬ್ರಹ್ಮಾದಿ ಮನುಜಾಂತ ಶ್ರವಣ ಮನನ ಧ್ಯಾನ ದಿಂದಲೇ ಕಾಂಬೋರು ನಿನ್ನ ರೂಪ ಯೋಗ್ಯತಾನುಸಾರ | ನಿಯಮ ಭಂದ ಮೋಕ್ಷ ಕರ್ತನೆ | ಶಾಂತಿ ಕೈತಿ ಜಯಾ ರಮಣನೀನೇ ಮೋಕ್ಷದಾಯಕ ಮಾಯಾಪತಿಯೇ ಸರ್ವ ಆಶ್ರಯ ಲಕ್ಷ್ಮೀ ರಮಣನೇ ಸಮರು ಅಧಿಕರು ಇಲ್ಲದಂಥಾ | ಸಾರ್ವಭೌಮನೇ ಆದಿಮೂಲನೆ ಅಪ್ರಮೇಯನೆ ಅನಿರುದ್ಧ ಮಾರುತಿ | ಎನ್ನ ಅಪವಳಿಗಳನೆ ತಂದು ಚÉನ್ನವಾಗಿ ನಿನ್ನ ತೋರಿಸಿದ 1 ಸದೋಷಿ ನಾನಹುದೋ ಸಂಕರ್ಷಣ ಮದ್ದೋಷ ಪರಿಹರಿಸೋ ನಿಗಮ ವೇದ್ಯನೆ ನಿನ್ನಧೀನವು ಎಲ್ಲಾ | ವಿಶ್ವ ತೇಜಸ ಪ್ರಾಜ್ಞರೂಪನೇ ಮೂರು ಸ್ಥಿತಿಯಲ್ಲಿ ಮುಖ್ಯ ಪ್ರವರ್ತಕ | ಅಂಡ ಪಿಂಡ ಬ್ರಹ್ಮಾಂಡದಲ್ಲಿ ಒಳ ಹೊರಗೆ ವ್ಯಾಪ್ತನೆ ವಿಶ್ವತೋಮುಖ ವಿಧಿಭವ ನುತ ವಿಚಿತ್ರ ಮಹಿಮ ವಿಭೂತಿರೂಪನೇ ವಾಸುದೇವನೇ ವಾರಿಜಾಸನ ವಂದ್ಯ ವರಾಹನೆ ಇರುವ ತಾ¥ಟಿÀ ಹರಿದು 2 ನಿರ್ಗುಣ ಗುಣ ಭರಿತಾ ನಿನ್ನ ಪರೋಕ್ಷ ಬೇಡುವೆ ಬಹುವಿಧದಿ ಭವದ ಕ್ಲೇಶಗಳ ಬಿಡಿಸೋ ಭಕ್ತವತ್ಸಲ | ಪತಿ ಸನ್ನುತ | ಪರಮ ಹಂಸೋಪಸ್ಯ ತುರ್ಯನೆ ಆತ್ಮ ಅಂತರಾತ್ಮ | ಪರಮ ಆತ್ಮ ಜ್ಞಾನಾತ್ಮ ನೀನೆ | ಕೂರ್ಮ ಕ್ರೋಢ ನರಹರಿ ಮಾಣವಕ | ಮೋದ ಕೊಡುವ ಮುದ್ದು ಬುದ್ಧನೆ | ಕಠಿಣ ಖಳರ ಕಡಿವ ಕಲ್ಕಿಯೆ ಅನಂತ ಗುಣ ಕ್ರಿಯಾ ರೂಪದಲಿ ನೀ ಸ್ವಗತ ಭೇದ ವಿವರ್ಜಿತಾತ್ಮನೇ | ನಿರಂಜನ ನಾರಾಯಣನೇ | ಪತಿ ಪ್ರಭಂಜನ ಪ್ರಿಯ ರಾಗರಹಿತ ರಾಘವೇಂದ್ರ ಸಂಸೇವ್ಯ ನರಹರಿಯೆ | ಅಜನ ತಾತ ಪ್ರಸನ್ನ ಶ್ರೀನಿವಾಸ ಲಕ್ಷ್ಮೀ ಈಶ ಹರಿಯೆ | ಪ್ರಣತಾರ್ತಿಹರ ಪ್ರಮೋದಿ ನೀನೇ 3
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀಹರಿಗೆ ಪ್ರಥಮಾಂಗ ಮಧ್ವಮೂರ್ತಿ ಪ ದೇಹ ಚತುರದಿ ಇದ್ದು ಜಗವ ಸಲಹುವೆ ದೊರೆಯೆ ಅ.ಪ. ಅಮೃತರೂಪನೆ ಹರಿಯ ಅಮೃತಮಯ ಭಕ್ತಿಯೊಳು ರಮೆ ಸಹಿತ ರಾಜಿಪನ ಅಚ್ಛಿನ್ನ ಅರ್ಚಕನೆ ಸಮರರಿಯೆ ನಿನಗಿನ್ನು ಅಜನುಳಿದು ಜೀವರೊಳು 1 ನಿನ್ನ ನಾಮಸ್ಮರಣೆ ನಿಸ್ವಾರ್ಥಿಯ ಕಥನ ನಿನ್ನ ವೈಭವ ಧ್ಯಾನ ಅಮೃತಪಾನ ನಿನ್ನ ಗುಣ ಕ್ರಿಯ ರೂಪ ನೆನೆನೆನೆದು ಸುಖಿಸುವನು ಧನ್ಯ ಸುರಕುಲದವನು ಜೀವನ್ಮುಕ್ತನವನಿಯೊಳು 2 ನಿನ್ನಲ್ಲಿ ಹರಿ ಇದ್ದು ಜಗವ ನಡೆಸುವ ತಾನು ನಿನ್ನಲ್ಲಿ ಶ್ರೀಹರಿಯ ಒಲುಮೆ ಅಮಿತ ನಿನ್ನ ಕರವಶ ಮುಕ್ತಿ ಮಾಡಿಹನು ಯದುಪತಿಯು ನಿನ್ನ ದಾಸರೆ ಹರಿಯ ಪುರವಾಸಿಗಳು ಸ್ವಾಮಿ3 ಜ್ಞಾನ ಬಲ ಭಕ್ತಿ ವೈರಾಗ್ಯ ಲಾಘವ ಶಕ್ತಿ ಧ್ಯಾನ ವಿದ್ಯಾ ಬುದ್ಧಿ ಕುಶಲ ತೇಜ ಪೂರ್ಣಪ್ರಾಜ್ಞತೆ ಸಿರಿಯ ಮಾಧುರ್ಯ ಶುಭವಾಕು ಪೂರ್ಣಧೈರ್ಯವು ಕಾರ್ಯ ಪೂರ್ಣ ನಿನ್ನಲಿ ಅಭಯ 4 ವಾಣಿ ಭಾರತಿ ನಿನ್ನ ವೈಭವವ ನೆನೆನೆನೆದು ಧೇನಿಸುತ ಆನಂದಮಗ್ನರಾಗಿ ಕಾಣದಲೆ ಕೊನೆ ಮೊದಲು ತತ್ವದ ಕಮಲದಲಿ ಜೇನಾಗಿ ಕ್ರೀಡಿಪರೊ ಮೈಮರೆದು ಸುಖ ಸುರಿದು 5 ಶಿವ ಶೇಷ ದ್ವಿಜ ರಾಜ ಸುರರಾಜ ಮೊದಲಾದ ಕಮಲ ರಜವ ಲವ ಬಿಡದೆ ಪೊತ್ತಿಹರೊ ಆನಂದ ಶರಧಿಯಲಿ 6 ಅಮಿತ ವೈಭವ ಗಾತ್ರ ಕಾಳಕೂಟವನುಂಡು ಮೆರೆದ ಮಹಿಮ ಶ್ರೀಲೋಲ ನಿನ್ನಲ್ಲಿ ಆನಂದ ಲೀಲೆಗಳ ಕೊಲಾಹಲದಿ ಮಾಳ್ಪ ಕಾರುಣ್ಯರೂಪದಲಿ 7 ರೇಣು ತೃಣ ಕಾಷ್ಟ ಬಹಿರಂತರದಲ್ಲಿ ಘನ ಮಹತ್ತು ಅಣು ಜೀವ ಚಿದ್ದೇಹದಲ್ಲಿ ಅನವರತ ಅಲ್ಲಿಪ್ಪ ಸರ್ವಮಂಗಳ ಹರಿಯ ಗುಣನಿಕರಗತ ಚಿತ್ರ ಜಗದಸುವೆ ನಿರ್ದೋಷ 8 ರಾಮದೂತನೆ ಹನುಮ ಹರಿ ಧೌತ್ಯಯನಗೀಯೊ ಬಂಟ ಸತತ ಹರಣ ವೃಕೋದರ ವೀರ ಶ್ರೀ ಮನೋಹರನÀಲ್ಲಿ ದಾಸ್ಯ ದೀಕ್ಷೆಯ ದೇಹಿ 9 ಪನ್ನಗ ರುದ್ರ ಸುರಗಣವು ಮೊದಲಾದ ಚರಾಚರ ಭ್ರೂ ಚಲನ ಮಾತ್ರದಿಂದ ಖರೆ ಸೃಷ್ಟಿ ಸ್ಥಿತಿ ಮುಕ್ತಿಯೈದುವರೊ ಘನ ಮಹಿಮ ವರ ವೇದ ಪ್ರತಿಪಾದ್ಯ 10 ಪರಮಮಂಗಳ ಜಯೇಶವಿಠಲನಂಘ್ರಿ ಸರಸಿಜವ ಬಿಡದ ಮಧುಪರಾಜ ಶರಣರಿಗೆ ಸುಜ್ಞಾನ ಶರಧಿಯನು ಪೊಂದಿಸಿದೆ ಕರುಣನಿಧಿ ಆನಂದಮುನಿ ನಿನ್ನ ಕೃಪೆ ಮುಕ್ತಿ 11
--------------
ಜಯೇಶವಿಠಲ
ಸಂಪ್ರದಾಯ ಶೃಂಗಾರದಂಥ ಶುಭಾಂಗಿ ನೀ ಏಳು ಕಂಗಳ ನೋಟದ ಕಡು ಚೆಲ್ವೆ ನಿನ್ನ ಪಾ- ದಂಗಳಿಗೆರಗುವೆ ಎನುತ ಮಾಲಕ್ಷುಮಿ(ಯ?) ಅಂಗನೆಯರ್ಹಸೆಗೆ ಕರೆದರು 1 ಅಜನಜನಕನರಗಿಳಿಯೆ ನೀ ಏಳು ಪದಮನಾಭನ ಪಟ್ಟದರಸಿ ನೀ ಏಳು ತ್ರಿಜಗಭೂಷಿತನೆದೆ ಮ್ಯಾಲೆ ಹೊಂದಿರುವಂಥ ಮದಗಜಗಮನೆ ಮಾಲಕ್ಷ್ಮಿ ಬಾರೆನುತಲಿ ಮುದದಿಂದಲಿ ಹಸೆಗೆ ಕರೆದರು 2 ಸೋಮವದನೆ ಸುಗುಣೆ ಜಾಣೆ ನೀ ಏಳು ಕೋಮಲ ಕೋಕಿಲವಾಣಿ ನೀ ಏಳು ಹೇಮಮಾಣಿಕ್ಯ ನಾಗವೇಣಿಯೆ ನಮ್ಮ ಭೀಮೇಶಕೃಷ್ಣನ ನಿಜರಾಣಿ ಮಾಲಕ್ಷುಮಿ ಪಟ್ಟದರಾಣಿ ಬಾ ಹಸೆಗೆ ಕರೆದರು 3
--------------
ಹರಪನಹಳ್ಳಿಭೀಮವ್ವ
ಸಂಪ್ರದಾಯದ ಹಾಡುಗಳು ಕೋಲು ಹಾಡು ಆಕಾಶಕಭಿಮಾನಿ ಶ್ರೀಕಂಠ ವರಪುತ್ರಏಕದಂತನೆ ವಿಘ್ನೇಶ ಕೋಲೆಏಕದಂತನೆ ವಿಘ್ನೇಶ ನಿನ್ನ ಪದಏಕ ಚಿತ್ತದಲಿ ಬಲಗೊಂಬೆ ಕೋಲೆ 1 ನೆನೆಯಕ್ಕಿ ನೆನೆಗಡಲೆ ಗೊನೆಯ ಬಾಳೆಯ ಹಣ್ಣುಘನವಾದ ಚಿಗುಳಿ ತಂಬಿಟ್ಟು ಕೋಲೆಘನವಾದ ಚಿಗುಳಿ ತಂಬಿಟ್ಟು ತಂದೀವೆಗಣಪತಿ ಮತಿಯ ಕರುಣಿಸು ಕೋಲೆ 2 ಜಾಹ್ನವಿ ಜಾಹ್ನವಿ ಜನಕ ನಾರಾಯಣನಗಧರನ ಮುನ್ನ ಬಲಗೊಂಬೆ ಕೋಲೆ 3 ಮಚ್ಛ ಕೂರುಮ ವರಹ ನರಸಿಂಹ ವಾಮನಸ್ವಚ್ಛ ಭೃಗುರಾಮ ರಘುರಾಮ ಕೋಲೆಸ್ವಚ್ಛ ಭೃಗುರಾಮ ರಘುರಾಮ ಕೃಷ್ಣ ಬೌದ್ಧಅಚ್ಛ ಕಲ್ಕಿಯ ಬಲಗೊಂಬೆ ಕೋಲೆ 4 ಈಶ ಬ್ರಹ್ಮರಿಗೆ ನಿಯಾಮಕನಾಗಿದ್ದುಪೋಷಿಸುತಿಪ್ಪ ಪರಮಾತ್ಮ ಕೋಲೆಪೋಷಿಸುತಿಪ್ಪ ಪರಮಾತ್ಮನಾದ ಶ್ರೀಕೇಶವನ ಮೊದಲೆ ಬಲಗೊಂಬೆ ಕೋಲೆ 5 ನೀರಿಗಾಶ್ರಯನಾಗಿ ನೀರೊಳು ಮಲಗಿಪ್ಪನೀರಜ ನೇತ್ರ ನಿಗಮಾತ್ಮ ಕೋಲೆನೀರಜ ನೇತ್ರ ನಿಗಮಾತ್ಮನಾದ ಶ್ರೀನಾರಾಯಣನ್ನ ಬಲಗೊಂಬೆ ಕೋಲೆ 6 ಯಾದವ ಕುಲಜನೆ ಸಾಧುಗಳರಸನೆಮಾದೇವಿಗಾಶ್ರಯನಾಗಿಪ್ಪ ಕೋಲೆಮಾದೇವಿಗಾಶ್ರಯನಾಗಿ ಪಾಲಿಸುವಮಾಧವನ್ನ ಮೊದಲೆ ಬಲಗೊಂಬೆ ಕೋಲೆ 7 ಚಂದದಿಂದ ವೇದ ವೃಂದ ಪ್ರತಿಪಾದ್ಯನೆಇಂದಿರಾದೇವಿ ರಮಣನೆ ಕೋಲೆಇಂದಿರಾದೇವಿ ರಮಣನಾದ ಗೋ-ವಿಂದನ್ನ ಮೊದಲೆ ಬಲಗೊಂಬೆ ಕೋಲೆ 8 ಸೃಷ್ಟಿಯೊಳಗೆಲ್ಲ ವ್ಯಾಪ್ತನಾಗಿರುತಿಪ್ಪವೈಷ್ಣವಕುಲಕೆ ತಿಲಕನೆ ಕೋಲೆವೈಷ್ಣವ ಕುಲಕೆ ತಿಲಕನಾದ ಶ್ರೀವಿಷ್ಣುವಿನ ಮೊದಲೆ ಬಲಗೊಂಬೆ ಕೋಲೆ 9 ಅಧಮನಾಗಿದ್ದಂಥ ಅಸುರನ ಸಂಹರಿಸಿಮುದವ ಬೀರಿದನೆ ಸುರರಿಗೆ ಕೋಲೆಮುದವ ಬೀರುತ ಸುರರ ಪಾಲಿಸುವಂಥಮಧುಸೂದನನ್ನ ಬಲಗೊಂಬೆ ಕೋಲೆ 10 ಚಿಕ್ಕ ಬ್ರಾಹ್ಮಣನಾಗಿ ಬಲಿಯ ದಾನವ ಬೇಡಿಆಕ್ರಮಿಸಿದನೆ ತ್ರಿಲೋಕವ ಕೋಲೆಆಕ್ರಮಿಸಿ ತ್ರಿಲೋಕವನಳೆದ ತ್ರಿ-ವಿಕ್ರಮನ್ನ ಮೊದಲೆ ಬಲಗೊಂಬೆ ಕೋಲೆ 11 ಭೂಮಿಯೊಳಗೆ ಅತಿ ಸಂಭ್ರಮನಾಗಿದ್ದಕಾಮಿತಾರ್ಥಂಗಳ ಕರೆವನೆ ಕೋಲೆಕಾಮಿತಾರ್ಥಂಗಳ ಕರೆದು ಭಕ್ತರ ಪೊರೆವವಾಮನನ್ನ ಮೊದಲೆ ಬಲಗೊಂಬೆ ಕೋಲೆ 12 ವೇದಾಭಿಮಾನಿಗೆ ಸಾದರವಾಗಿಪ್ಪಬೌದ್ಧ ಮೂರುತಿಯೇ ಭವದೂರ ಕೋಲೆಬೌದ್ಧ ಮೂರುತಿಯೇ ಭವದೂರನಾದ ಶ್ರೀಶ್ರೀಧರನ್ನ ಮೊದಲೆ ಬಲಗೊಂಬೆ ಕೋಲೆ 13 ಸಾಕಾರ ಮೂರುತಿ ಸರ್ವೇಂದ್ರಿ ನಿಯಾಮಕನಾಕೇಶ ವಂದ್ಯ ನಳಿನಾಕ್ಷ ಕೋಲೆನಾಕೇಶ ವಂದ್ಯ ನಳಿನಾಕ್ಷನಾದ ಹೃಷಿ-ಕೇಶ ಹರಿಯ ಬಲಗೊಂಬೆ ಕೋಲೆ 14 ಪದುಮ ಸಂಭವ ಪಿತ ಪದುಮಿನಿ ವಲ್ಲಭಪದುಮ ಪೊಕ್ಕುಳಲಿ ಪಡೆದನೆ ಕೋಲೆಪದುಮ ಪೊಕ್ಕುಳಲ್ಲಿ ಪಡೆದು ಪಾಲಿಸುವಂಥಪದುಮನಾಭನ ಮುನ್ನ ಬಲಗೊಂಬೆ ಕೋಲೆ 15 ಕಾಮಿನಿ ಯಶೋದೆ ಒರಳಿಗೆ ಕಟ್ಟಲುಶ್ರೀ ಮನೋಹರ ಶೆಳೆದೊಯ್ದ ಕೋಲೆಶ್ರೀ ಮನೋಹರ ಶೆಳೆದು ಪಾಪವ ಕಳೆದದಾಮೋದರನ್ನ ಬಲಗೊಂಬೆ ಕೋಲೆ 16 ಕಿಂಕರರ ಚಿತ್ತ ದುರ್ವಿಷಯಕ್ಕೆರಗಲುಪಂಕಜನಾಭ ಶಳೆದನೆ ಕೋಲೆಪಂಕಜನಾಭ ಶಳೆದು ತನ್ನಲ್ಲಿಡುವಸಂಕರುಷಣನ್ನ ಬಲಗೊಂಬೆ ಕೋಲೆ 17 ಏಸು ಬ್ರಹ್ಮಾಂಡದೊಳು ವಾಸವಾಗಿರುತಿಪ್ಪದಾಸವರ್ಗವನೆ ಪೊರೆವನೆ ಕೋಲೆದಾಸ ವರ್ಗವನೆ ಪೊರೆವನೆ ನಮ್ಮ ಶ್ರೀವಾಸುದೇವನ್ನ ಬಲಗೊಂಬೆ ಕೋಲೆ 18 ಅದ್ವೈತ ಮಹಿಮನೆಸದ್ವೈಷ್ಣವರ ಪೊರೆವನೆ ಕೋಲೆಸದ್ವೈಷ್ಣವರ ಪೊರೆವನೆ ಅಜನಯ್ಯಪ್ರದ್ಯುಮ್ನ ಹರಿಯ ಬಲಗೊಂಬೆ ಕೋಲೆ 19 ಅನಿಮಿಷ ದೈತ್ಯರ ಮನಕೆ ಸಿಲುಕದಿಪ್ಪಸನಕಾದಿ ವಂದ್ಯ ಸಕಲೇಶ ಕೋಲೆಸನಕಾದಿ ವಂದ್ಯ ಸಕಲೇಶನಾಗಿಪ್ಪಅನಿರುದ್ಧ ಹರಿಯ ಬಲಗೊಂಬೆ ಕೋಲೆ 20 ಕ್ಷರಾಕ್ಷರದೊಳು ಪರಮೋತ್ತಮನಾದಕರಿರಾಜ ವರದ ಕವಿಗೇಯ ಕೋಲೆಕರಿರಾಜ ವರದ ಕವಿಗೇಯನಾದ ಶ್ರೀಪುರುಷೋತ್ತಮನ್ನ ಬಲಗೊಂಬೆ ಕೋಲೆ 21 ಅಕ್ಷಯ ಮೂರುತಿ ಮೋಕ್ಷದಾಯಕ ಸ್ವಾಮಿಕುಕ್ಷಿಯೋಳ್ ಜಗವ ರಕ್ಷಿಪ ಕೋಲೆಕುಕ್ಷಿಯೋಳ್ ಜಗವ ಪಾಲಿಪ ನಮ್ಮ ಅ-ದೋಕ್ಷಜ ಹರಿಯ ಬಲಗೊಂಬೆ ಕೋಲೆ 22 ಕ್ರೂರ ಖಳನುದರ ಸೀಳಿ ಪ್ರಹ್ಲಾದನಕಾರುಣ್ಯದಿಂದ ಕಾಯ್ದನ ಕೋಲೆಕಾರುಣ್ಯದಿಂದ ಕಾಯ್ದನ ನಮ್ಮ ಶ್ರೀನಾರಸಿಂಹನ್ನ ಬಲಗೊಂಬೆ ಕೋಲೆ 23 ಸಚ್ಚಿದಾನಂದನೆ ಸಕಲಗುಣ ಪರಿಪೂರ್ಣಮುಚುಕುಂದ ವರದ ಮುನಿನುತ ಕೋಲೆಮುಚುಕುಂದ ವರದ ಮುನಿನುತನಾದ ಶ್ರೀಅಚ್ಯುತನ ಮೊದಲೆ ಬಲಗೊಂಬೆ ಕೋಲೆ 24 ದುರ್ಧರ್ಷರಾಗಿದ್ದ ಖಳರ ಸಮುದಾಯವಮರ್ದನ ಮಾಡಿದ ಮಹಮಹಿಮ ಕೋಲೆಮರ್ದನ ಮಾಡಿದ ಮಹಮಹಿಮನಾದ ಜ-ನಾರ್ದನ್ನ ಮೊದಲೆ ಬಲಗೊಂಬೆ ಕೋಲೆ 25 ಇಂದ್ರಾನುಜನಾಗಿ ಸ್ವರ್ಗದೊಳಿರುತಿದ್ದುಸಾಂದ್ರ ಸುಖವೀವೆ ಸುರರಿಗೆ ಕೋಲೆಸಾಂದ್ರ ಸುಖವಿತ್ತು ಸುರರ ಪಾಲಿಸುವ ಉ-ಪೇಂದ್ರನ ಮೊದಲೆ ಬಲಗೊಂಬೆ ಕೋಲೆ 26 ಪರಮ ಭಕ್ತರ ಪಾಪ ಪರಿಹಾರವನೆ ಮಾಡಿಪರಮ ಪದವಿಯ ಪಾಲಿಪ ಕೋಲೆಪರಮ ಪದವಿಯ ಪಾಲಿಪ ನಮ್ಮ ಶ್ರೀ-ಹರಿಯ ಮೊದಲೆ ಬಲಗೊಂಬೆ ಕೋಲೆ 27 ಶಿಷ್ಟ ಪಾಲಕ ಉತ್ಕøಷ್ಟ ಜ್ಞಾನಾನಂದಕೃಷ್ಣೆಯ ಕಷ್ಟ ಬಿಡಿಸಿದ ಕೋಲೆಕೃಷ್ಣೆಯ ಕಷ್ಟ ಬಿಡಿಸಿದ ನಮ್ಮ ಶ್ರೀ-ಕೃಷ್ಣನ್ನ ಮೊದಲೆ ಬಲಗೊಂಬೆ ಕೋಲೆ 28 ಅನಿರುದ್ಧಾದಿ ರೂಪ ವಿಶ್ವಾದಿ ಅಜಿತಾದಿಸನತ್ಕುಮಾರಾದಿ ಅಜಾದಿ ಕೋಲೆಸನತ್ಕುಮಾರಾದಿ ಅಜಾದಿ ರೂಪನಾದಘನ ಮಹಿಮನ್ನ ಬಲಗೊಂಬೆ ಕೋಲೆ 29 ಹಯಗ್ರೀವ ದತ್ತ ಋಷಭ ಸಂಕರ್ಷಣಭಯರಹಿತ ಬಾದರಾಯಣ ಕೋಲೆಭಯರಹಿತ ಬಾದರಾಯಣ ಮಹಿದಾಸವಯಿಕುಂಠ ಹರಿಯ ಬಲಗೊಂಬೆ ಕೋಲೆ 30 ಆತ್ಮಾದಿ ವಾಸುದೇವಾದಿ ಮೂರುತಿಶ್ರೀ ತರುಣೇಶ ವಿಶ್ವೇಶ ಕೋಲೆಶ್ರೀ ತರುಣೇಶ ವಿಶ್ವೇಶ ರೂಪನಾದಜ್ಯೋತಿರ್ಮಯನ ಬಲಗೊಂಬೆ ಕೋಲೆ 31 ಮುನಿ ವೇದವ್ಯಾಸ ಸನತ್ಕುಮಾರ ಮೂರ್ತಿಮಿನಗುವ ದತ್ತಾತ್ರೇಯನೆ ಕೋಲೆಮಿನಗುವ ದತ್ತಾತ್ರೇಯ ಹಯಗ್ರೀವದನುಜಾಂತಕನ್ನ ಬಲಗೊಂಬೆ ಕೋಲೆ 32 ಕಂಗಳಾಪಾಂಗದಿಂ ಕಮಲಾಸನಾದಿಗಳಸಂಗಾತ ಸೃಷ್ಟಿಪ ಮಹಲಕ್ಷ್ಮೀ ಕೋಲೆಸಂಗಾತ ಸೃಷ್ಟಿಪ ಮಹಲಕ್ಷ್ಮೀ ನಿನ್ನ ಪಾ-ದಂಗಳಿಗೆರಗಿ ಬಲಗೊಂಬೆ ಕೋಲೆ 33 ಮಾಯಾ ಜಯಾಕೃತಿ ಶಾಂತಿ ಇಂದಿರಾದೇವಿಕಾಮನ ಜನನಿ ಜಯಂತಿ ಕೋಲೆಕಾಮನ ಜನನಿ ಜಯಂತಿ ಜಾನಕಿ ಸತ್ಯ-ಭಾಮಾ ರುಕ್ಮಿಣಿಯ ಬಲಗೊಂಬೆ ಕೋಲೆ 34 ಪರಮೇಷ್ಠಿ ಪರಮೇಷ್ಠಿ ನಿನ್ನ ಪದಪದುಮವ ಮುನ್ನ ಬಲಗೊಂಬೆ ಕೋಲೆ 35 ಹನುಮ ಭೀಮ ಮಧ್ವ ಮುನಿರಾಯ ಮಾರುತಿದನುಜಾರಿ ಭಕ್ತ ವಿರಕ್ತ ಕೋಲೆದನುಜಾರಿ ಭಕ್ತ ವಿರಕ್ತ ನಿನ್ನ ಪಾದವನಜವ ಮುನ್ನ ಬಲಗೊಂಬೆ ಕೋಲೆ 36 ವಾಣಿ ಅಜನ ಮುದ್ದು ರಾಣಿ ಪಲ್ಲವ ಪಾಣಿಜಾಣೆ ಕೊಡೆಮಗೆ ಮತಿಗಳ ಕೋಲೆಜಾಣೆ ಕೊಡೆಮಗೆ ಮತಿಗಳ ನಿನ್ನ ಪಾದರೇಣುವಿನ ಮುನ್ನ ಬಲಗೊಂಬೆ ಕೋಲೆ 37 ಭಾರತಿದೇವಿ ನಿನ್ನ ವಾರಿಜ ಚರಣವಬಾರಿ ಬಾರಿಗೆ ಭಜಿಸುವೆ ಕೋಲೆಬಾರಿ ಬಾರಿಗೆ ಭಜಿಸುವೆ ಎಮಗೆ ಶ್ರೀನಾರಾಯಣನಲ್ಲಿ ರತಿ ಕೊಡು ಕೋಲೆ 38 ಇಂದ್ರನ ಗೆದ್ದು ಸುಧೆ ತಂದು ಮಾತೆಯಬಂಧನ ಕಡಿದ ಬಲುಧೀರ ಕೋಲೆಬಂಧನ ಕಡಿದ ಬಲುಧೀರನಾದ ಖ-ಗೇಂದ್ರನ್ನ ಮುನ್ನ ಬಲಗೊಂಬೆ ಕೋಲೆ 39 ಸಾಸಿರ ಮುಖದಿಂದ ಶ್ರೀಶನ್ನ ತುತಿಸಿ ಶ್ರೀವಾಸುದೇವಂಗೆ ಹಾಸಿಕೆ ಕೋಲೆವಾಸುದೇವಂಗೆ ಹಾಸಿಕೆಯಾದ ಮಹ-ಶೇಷನ್ನ ಮುನ್ನ ಬಲಗೊಂಬೆ ಕೋಲೆ 40 ಅಪರಿಮಿತ ಕಾರ್ಯ ತ್ರಿಪುರ ದಹನನೆಚಪಲ ಮೂರುತಿ ಚಂದ್ರಚೂಡ ಕೋಲೆಚಪಲ ಮೂರುತಿ ಚಂದ್ರಚೂಡ ಭಜಕರಅಪಮೃತ್ಯು ಹರನ ಬಲಗೊಂಬೆ ಕೋಲೆ 41 ಖಗ ಶೇಷಶಂಭು ರಾಣಿಯರ ಬಲಗೊಂಬೆ ಕೋಲೆ 42 ಶಕ್ರ ಕಾಮಾದಿ ದೇವರ್ಕಳ ಚರಣಕ್ಕೆಅಕ್ಕರದಿಂದ ಅಭಿನಮಿಪೆ ಕೋಲೆಅಕ್ಕರದಿಂದ ಅಭಿನಮಿಸಿ ಪೇಳ್ವೆ ದೇ-ವಕ್ಕಿ ನಂದನನ ಚರಿತೆಯ ಕೋಲೆ 43 ಪದ್ಮನಾಭ ನರಹರಿತೀರ್ಥಶ್ರೀ ಮಾಧವಾರ್ಯ ಅಕ್ಷೋಭ್ಯ ಕೋಲೆಶ್ರೀ ಮಾಧವಾರ್ಯ ಅಕ್ಷೋಭ್ಯ ಜಯತೀರ್ಥಸ್ವಾಮಿಗಳ ಮೊದಲೆ ಬಲಗೊಂಬೆ ಕೋಲೆ 44 ನ್ಯಾಯಾಮೃತ ತರ್ಕ ತಾಂಡವ ಚಂದ್ರಿಕೆನ್ಯಾಯ ಗ್ರಂಥಗಳ ರಚಿಸಿದ ಕೋಲೆನ್ಯಾಯ ಗ್ರಂಥಗಳ ರಚಿಸಿದ ನಮ್ಮ ವ್ಯಾಸ-ರಾಯರ ಮುನ್ನ ಬಲಗೊಂಬೆ ಕೋಲೆ 45 ಜನನಿ ಗರ್ಭದಿಂದವನಿ ಸ್ಪರ್ಶಿಸದೆಜನಿಸಿ ಬ್ರಹ್ಮಣ್ಯ ಮುನಿಗಳ ಕೋಲೆಜನಿಸಿ ಬ್ರಹ್ಮಣ್ಯ ಮುನಿಗಳ ಮೃದು ಹಸ್ತವನಜ ಸಂಭವನ ಬಲಗೊಂಬೆ ಕೋಲೆ 46 ಶ್ರೀಪಾದರಾಯರಲಿ ಸಕಲ ವಿದ್ಯವನೋದಿಶ್ರೀಪತಿ ಪ್ರೀತಿ ಪಡಿಸಿದ ಕೋಲೆಶ್ರೀಪತಿ ಪ್ರೀತಿ ಪಡಿಸಿದ ವ್ಯಾಸಮುನಿಭೂಪನ ಮೊದಲೆ ಬಲಗೊಂಬೆ ಕೋಲೆ 47 ದೇಶಾಧಿಪತಿಗೆ ಬಂದ ಕುಯೋಗವನೆ ನೂಕಿತಾ ಸಿಂಹಾಸನವೇರಿ ಮೆರೆದನೆ ಕೋಲೆತಾ ಸಿಂಹಾಸನವೇರಿ ಮೆರೆದನೆ ವ್ಯಾಸ ಮು-ನೀಶನ್ನ ಮೊದಲೆ ಬಲಗೊಂಬೆ ಕೋಲೆ 48 ದಂಡ ಕಮಂಡಲು ಧರ ಪಂಡಿತಾರಾಧಾರಕುಂಡಲಿಶಯನನ ಭಜಕರ ಕೋಲೆಕುಂಡಲಿ ಶಯನನ ಭಜಕ ರಾಘವೇಂದ್ರರಕೊಂಡಾಡಿ ಪದನ ಗುಣಿಸುವೆ ಕೋಲೆ 49 ತಂತ್ರ ಸಾರಗಳಿಗೆ ಅರ್ಥವನ್ನು ಸ್ವ-ತಂತ್ರದಿಂದಲಿ ರಚಿಸಿದ ಕೋಲೆ ಸ್ವ-ತಂತ್ರದಿಂದಲಿ ರಚಿಸಿದ ರಾಘವೇಂದ್ರರಪಂಥವಿದ್ದಲ್ಲಿ ಬಲಗೊಂಬೆ ಕೋಲೆ 50 ವೇದಶಾಸ್ತ್ರಾಮೃತ ಸಾರಬಲ್ಲ ರಾಮವೇದವ್ಯಾಸರ ಭಜಕರ ಕೋಲೆವೇದವ್ಯಾಸ ಭಜಕ ರಾಘವೇಂದ್ರರಪಾದವಿದ್ದಲ್ಲಿ ಬಲಗೊಂಬೆ ಕೋಲೆ 51 ತುಂಗಭದ್ರಾ ತೀರ ಮಂತ್ರಾಲಯದಲ್ಲಿಮಂಗಳ ಮಹಿಮರೆನಿಪರೆ ಕೋಲೆಮಂಗಳ ಮಹಿಮರೆನಿಪ ರಾಘವೇಂದ್ರ-ರಂಘ್ರಿ ಕಮಲವ ಬಲಗೊಂಬೆ ಕೋಲೆ 52 ಗುರು ರಾಘವೇಂದ್ರರ ಚರಣ ಪಂಕಜವನ್ನುಸ್ಥಿರ ಬುದ್ಧಿಯಿಂದ ಸ್ಮರಿಸುವೆ ಕೋಲೆಸ್ಥಿರ ಬುದ್ಧಿಯಿಂದ ಸ್ಮರಿಸಿ ನಾ ಪೇಳ್ವೆನುಸರಸಿಜಾಕ್ಷನ್ನ ಚರಿತೆಯ ಕೋಲೆ 53 ರಾಜರಾಜೇಶ್ವರ ಸತ್ಯಾಭಿನವ ತೀರ್ಥರಾಜಕರಾಬ್ಜ ಸಂಭೂತ ಕೋಲೆರಾಜಕರಾಬ್ಜ ಸಂಭೂತ ಸತ್ಯಾಧಿ-ರಾಜರ ಮೊದಲೆ ಬಲಗೊಂಬೆ ಕೋಲೆ 54 ಕ್ಷೀರನದಿಯ ತೀರ ವೇಲೂರ ಪುರವಾಸಸಾರ ಸಜ್ಜನರ ಪೊರೆವನೆ ಕೋಲೆಸಾರ ಸಜ್ಜನರ ಪೊರೆವ ಸತ್ಯಾಧಿರಾಜಧೀರ ಯತಿಗಳ ಬಲಗೊಂಬೆ ಕೋಲೆ 55 ಸತ್ಯಬೋಧರೆಂಬ ಸದ್ಗುರು ಚರಣವಚಿತ್ತದೊಳಿಟ್ಟು ಚರಿಸುವೆ ಕೋಲೆಚಿತ್ತದೊಳಿಟ್ಟು ಸ್ಮರಿಸಿ ನಾ ಪೇಳ್ವೆನುಚಿತ್ತದೊಲ್ಲಭನ ಚರಿತೆಯ ಕೋಲೆ 56 ಪುರಂದರ ರಾಯರಪರಮ ಕೃಪಾಪಾತ್ರ ವಿಜಯರಾಯ ಕೋಲೆಪರಮ ಕೃಪಾಪಾತ್ರ ವಿಜಯರಾಯರ ಪಾದಪರಮ ಭಕ್ತಿಯಲಿ ಸ್ಮರಿಸುವೆ ಕೋಲೆ 57 ದೇವ ನಾರಾಯಣ ಭೂದೇವಿ ಮೊರೆ ಕೇಳಿದೇವಕಿಯಲ್ಲಿ ಜನಿಸಿದ ಕೋಲೆದೇವಕಿಯಲ್ಲಿ ಜನಿಸಿ ಧಾರುಣಿದೇವಿ ಭಾರವನೆಲ್ಲನಿಳುಹಿದ ಕೋಲೆ 58 ಶಕಟ ಪೂತನಿ ವತ್ಸ ಬಕಧೇನುಕ ಕಂಸಮುಖಾದ್ಯರನ್ನು ಮಡುಹಿದ ಕೋಲೆಮುಖಾದ್ಯರನ್ನು ಮಡುಹಿ ವಸುದೇವ ದೇ-ವಕಿಯರ ಬಂಧನ ಬಿಡಿಸಿದ ಕೋಲೆ 59 ಹೆತ್ತ ತಾಯಿಯ ಮೊಲೆಯರ್ತಿಲಿ ನಲಿದುಂಡುಮತ್ತೆ ಬಾಲಲೀಲೆ ತೋರಿದ ಕೋಲೆಮತ್ತೆ ಬಾಲಲೀಲೆ ತೋರಿ ತೋಷವ ಪಡಿಸಿಮುತ್ಯಾಗೆ ಪಟ್ಟವ ಕಟ್ಟಿದ ಕೋಲೆ 60 ಜರೆಯ ಸುತನು ತಾನು ಜಗಳಕ್ಕೆ ಬಹನೆಂದುಕರೆಸಿದ ವಿಶ್ವಕರ್ಮನ್ನ ಕೋಲೆಕರೆಸಿದ ವಿಶ್ವಕರ್ಮನ್ನ ದ್ವಾರಕಪುರವ ನಿರ್ಮಿಸೆಂದಾಕ್ಷಣ ಕೋಲೆ 61 ದ್ವಾರಕಪುರದ ಶೃಂಗಾರ ವರ್ಣಿಸಲುಮೂರು ಕಣ್ಣವಗೆ ವಶವಲ್ಲ ಕೋಲೆಮೂರು ಕಣ್ಣವಗೆ ವಶವಲ್ಲ ನಾಲ್ಕಾರುಮೋರೆಯವರಿಗೆ ವಶವಲ್ಲ ಕೋಲೆ 62 ತಳಿರು ತೋರಣಗಳುಮೇರುವಿಗೆ ಪೊನ್ನ ಕಲಶವು ಕೋಲೆಮೇರುವಿಗೆ ಕಲಶ ಕನ್ನಡಿ ಮನೋ-ಹಾರವಾಗಿರುವುದು ಸಟೆಯಲ್ಲಿ ಕೋಲೆ 63 ಹದಿನಾರು ಸಾವಿರ ಚದುರೇರ ಮಂದಿರವುಮದನನಯ್ಯನ ಮನೆ ಮಧ್ಯ ಕೋಲೆಮದನನಯ್ಯನ ಮನೆ ಮಧ್ಯ ಪ್ರದೇಶಅದುಭುತವಾಗಿ ಬೆಳಗೋದು ಕೋಲೆ 64 ನಾರಿ ರುಕ್ಮಿಣಿ ಸತ್ಯಭಾಮೆದೇವಿ ಮತ್ತೆವಾರಿಜಮುಖಿಯರ್ ನಾಲ್ಕೆರಡು ಕೋಲೆವಾರಿಜಮುಖಿಯರ್ ನಾಲ್ಕೆರಡು ಸಹಿತಾಗಿವಾರಿಜನಾಭ ಕುಳಿತಿದ್ದ ಕೋಲೆ 65 ಶ್ರೀ ಭೂರಮಣನಾದ ಶ್ರೀಕೃಷ್ಣನರಮನೆಗೆಸುಭದ್ರೆ ಮುಯ್ಯ ತರುತಾಳೆ ಕೋಲೆಸುಭದ್ರೆ ಮುಯ್ಯ ತರುತಾಳೆ ಗಜಪುರಭೂ ಭುಜರೆಲ್ಲ ಬರುತಾರೆ ಕೋಲೆ 66 ಧರ್ಮ ಭೀಮಾರ್ಜುನ ನಕುಲ ಸಹದೇವರುಪೆರ್ಮೆಯಿಂದಲಿ ಪೊರವಂಟು ಕೋಲೆಪೆರ್ಮೆಯಿಂದಲಿ ಪೊರವಂಟು ದಿಕ್ಪಾಲರುಕೂರ್ಮೆಯಿಂದಲಿ ಬರತಾರೆ ಕೋಲೆ 67 ವಜ್ರ ಧರಿಸಿ ಉ-ಪೇಂದ್ರನರಮನೆಗೆ ಬರುತಾರೆ ಕೋಲೆ 68 ಸತಿ ಸ್ವಾಹಾದೇವಿಯ ಕೂಡಿಅತಿಶಯದಿಂ ಮೇಷವೇರುತ್ತ ಕೋಲೆಅತಿಶಯದಿಂ ಮೇಷವೇರಿ ಶಕ್ತಿಯ ಪಿಡಿದುಕ್ರ್ರತುಪತಿ ಮನೆಗೆ ಬರುತಾನೆ ಕೋಲೆ 69 ಯಮನು ಮಹಿಷವೇರಿ ಗಮನದಿಂದಲಿ ಸತಿಶಾಮಲಾದೇವಿ ಸಹಿತಲಿ ಕೋಲೆಶಾಮಲೆ ಸಹಿತ ದಂಡಾಯುಧ ಧರಿಸಿರಾಮನ ಮನೆಗೆ ಬರುತಾನೆ ಕೋಲೆ 70 ನಿರರುತಿ ತಾನೊಂದು ನರನ ಪೆಗಲನೇರಿಪರಮಾಪ್ತ ಸ್ತ್ರೀಯನೊಡಗೂಡಿ ಕೋಲೆಪರಮಾಪ್ತ ಸ್ತ್ರೀಯನೊಡನೆ ಕುಂತವ ಧರಿಸಿಧರಾಧರನ ಮನೆಗೆ ಬರುತಾನೆ ಕೋಲೆ 71 ವರುಣ ತಾನೊಂದು ಮಕರಿಯನೇರಿಕೊಂಡುಸಿರಿ ಭಾಗೀರಥಿಯನೊಡಗೊಂಡು ಕೋಲೆಸಿರಿ ಭಾಗೀರಥಿಯನೊಡನೆ ಪಾಶಧರಿಸಿಸಿರಿವತ್ಸನರಮನೆಗೆ ಬರುತಾನೆ ಕೋಲೆ 72 ಮರುತದೇವನೊಂದು ಎರಳೆಯನೇರಿತರುಣಿ ಪ್ರಾವಹಿಯೊಡಗೂಡಿ ಕೋಲೆ ತರುಣಿ ಪ್ರಾವಹಿಗೂಡಿ ಧ್ವಜ ಧರಿಸಿ ಶ್ರೀ-ಧರನ ಮನೆಗೇ ಬರುತಾನೆ ಕೋಲೆ 73 ವಿತ್ತಪತಿಯೊಂದು ಉತ್ತಮ ಹಯವೇರಿಚಿತ್ತದೊಲ್ಲಭೆಯ ಒಡಗೂಡಿ ಕೋಲೆಚಿತ್ತದೊಲ್ಲಭೆಯ ಒಡನೆ ಖಡ್ಗ ಧರಿಸಿಕರ್ತನ್ನ ಮನೆಗೆ ಬರುತಾನೆ ಕೋಲೆ 74 ಈಶಾನ ತಾನೊಂದು ವೃಷಭವೇರಿಕೊಂಡುಶ್ರೀ ಸತಿದೇವಿಯೊಡಗೂಡಿ ಕೋಲೆಶ್ರೀ ಸತಿದೇವಿಯೊಡಗೂಡಿ ಶೂಲ ಧರಿಸಿ ನಾ-ರಸಿಂಹನ ಮನೆಗೆ ಬರುತಾನೆ ಕೋಲೆ 75 ಹರಿಯೇ ಸರ್ವೋತ್ತಮ ಹರಿಯೇ ಪರದೇವತೆಹರಿದಾಸರೆಂಬೋ ಬಿರುದಿನ ಕೋಲೆಹರಿದಾಸರೆಂಬೋ ಬಿರುದಿನ ಹೆಗ್ಗಾಳೆಹಿರಿ ಬಾಗಿಲೊಳು ಹಿಡಿಸಿಹರು ಕೋಲೆ 76 ಒಬ್ಬನೆ ವಿಷ್ಣುವಿನ್ನೊಬ್ಬ ದೈವಗಳಿಲ್ಲೆಂ-ದಬ್ಬರದಿಂದ ನಾಗಸ್ವರ ಕೋಲೆಅಬ್ಬರದಿಂದ ನಾಗಸ್ವರಂಗಳಹೆಬ್ಬಾಗಿಲೊಳಗೆ ನುಡಿಸೋರು ಕೋಲೆ 77 ಖಳನ ಬೆನ್ನ ಚರ್ಮ ಸುಲಿದು ಭೇರಿಗೆ ಹಾಕಿಅಲವ ಬೋಧರೆ ಜಗದ್ಗುರು ಕೋಲೆಅಲವ ಬೋಧರೆ ಜಗದ್ಗುರುಗಳೆಂತೆಂದುಛಲದಿಂದ ಭೇರಿಯ ಹೊಡಿಸೋರು ಕೋಲೆ 78 ವಿಷ್ಣು ಸರ್ವೋತ್ತಮ ವಿಷ್ಣು ಪರದೇವತೆವಿಷ್ಣುದಾಸರೆಂಬ ಬಿರುದಿನ ಕೋಲೆವಿಷ್ಣುದಾಸರೆಂಬ ಬಿರುದಿನ ಠೆಕ್ಕೆಯಘಟ್ಯಾಗಿ ಎತ್ತಿ ನಿಲಿಸೋರು ಕೋಲೆ 79 ಮತದೊಳು ಮಧ್ವಮತ ವ್ರತದೊಳು ಹರಿದಿನಕಥೆಯೊಳು ಭಾಗವತವೆನ್ನಿ ಕೋಲೆಕಥೆಯೊಳ್ ಭಾಗವತವೆನ್ನಿ ಇದರಂತೆಪ್ರತಿಮೆಯೊಳ್ ವಿಷ್ಣು ಪ್ರತಿಮೆನ್ನಿ ಕೋಲೆ 80 ಈಚಲ ಬನದೊಳು ಗೋ ಕ್ಷೀರ ಕುಡಿದಂತೆನೀಚರ ಸಂಗ ಸುಜನರು ಕೋಲೆನೀಚರ ಸಂಗ ಸುಜನರು ಮಾಡಲುಈಚೆ ನೋಡುವರಿಗೆ ಅನುಮಾನ ಕೋಲೆ 81 ಸೂರಿ ಜನರ ಸಂಗ ಸುಧೆಯ ಪ್ರಾಶನೆಯಂತೆಹೋರಣೆ ಗುಣವುಳ್ಳ ಅಧಮರ ಕೋಲೆಹೋರಣೆ ಗುಣವುಳ್ಳ ಅಧಮರ ಸಹವಾಸನೀರುಳ್ಳಿ ತಿಂದ ತೆರನಂತೆ ಕೋಲೆ 82 ಒಳ್ಳೆ ಮನುಜರ ಸಂಗ ಮಲ್ಲಿಗೆ ಮುಡಿದಂತೆಖುಲ್ಲ ಕುಮತಿಯ ಸಹವಾಸ ಕೋಲೆಖುಲ್ಲ ಕುಮತಿಯ ಸಹವಾಸ ಮಾಡಲುಮುಲ್ಲಂಗಿ ತಿಂದು ತೇಗಿದಂತೆ ಕೋಲೆ 83 ಭಾವಜ್ಞರ ಸಂಗ ಶ್ಯಾವಿಗಿ ಉಂಡಂತೆಭಾವವನರಿಯದ ಬಲುಹೀನ ಕೋಲೆಭಾವವನರಿಯದ ಬಲುಹೀನರ ಸಂಗಬೇವಿನಹಾಲ ಕುಡಿದಂತೆ ಕೋಲೆ 84 ಬಾಳುವರ ಸಂಗ ಹಾಲೋಗರುಂಡಂತೆಬಾಳುವೆಗೆಟ್ಟ ಅಧಮರ ಕೋಲೆಬಾಳುವೆಗೆಟ್ಟ ಅಧಮರ ಸಹವಾಸಹೇಳಬಾರದ್ದು ತಿಂದಂತೆ ಕೋಲೆ 85 ಹರಿಗುರು ದ್ರೋಹಿ ಮರಳಿ ಮಾತೃ ದ್ರೋಹಿವರ ವೈಷ್ಣವ ದ್ರೋಹಿ ಪಿತೃ ದ್ರೋಹಿ ಕೋಲೆವರ ವೈಷ್ಣವ ದ್ರೋಹಿ ಸ್ವಾಮಿ ದ್ರೋಹಿನೆರಳು ಬಿದ್ದವರ ನೆರೆಹೊಲ್ಲ ಕೋಲೆ 86 ಕತ್ತೆ ಕುದುರೆ ಒಂದೆ ಅತ್ತೆ ಸೊಸೆಯು ಒಂದೆಹೆತ್ತಮ್ಮ ಒಂದೆ ಹೆಂಡ್ತೊಂದೆ ಕೋಲೆಹೆತ್ತಮ್ಮ ಒಂದೆ ಹೆಂಡ್ತೊಂದಾದ ಮೇಲೆವ್ಯರ್ಥದ ಮದುವೆ ನಿನಗ್ಯಾಕೆ ಕೋಲೆ 87 ಅಕ್ಕ ತಂಗಿಯು ಒಂದೆ ಮಕ್ಕಳು ಸೊಸೆ ಒಂದೆಚಿಕ್ಕಮ್ಮ ಒಂದೆ ಹೆಂಡ್ತೊಂದೆ ಕೋಲೆಚಿಕ್ಕಮ್ಮ ಒಂದೆ ಹೆಂಡ್ತೊಂದಾದ ಮೇಲೆರೊಕ್ಕ ವೆಚ್ಚ ಮಾಡಿ ಮದುವ್ಯಾಕೆ ಕೋಲೆ 88 ಹಿಟ್ಟು ಬೂದಿ ಒಂದೆ ರೊಟ್ಟಿ ಮುಚ್ಚಳ ಒಂದೆಕಟ್ಟಿಗೆ ಒಂದೆ ಕಬ್ಬೊಂದೆ ಕೋಲೆಕಟ್ಟಿಗೆಯೊಂದೆ ಕಬ್ಬೊಂದಾದ ಮೇಲೆಕಟ್ಟಿಗೆ ಯಾಕೆ ಮೆಲುವೊಲ್ಲೆ ಕೋಲೆ 89 ಹಾಲು ಮಜ್ಜಿಗೆಯೊಂದೆ ಕೋಳಿ ಕೋಗಿಲೆಯೊಂದೆಮಾಳಿಗೆ ಒಂದೆ ಬಯಲೊಂದೆ ಕೋಲೆಮಾಳಿಗೆಯೊಂದೆ ಬಯಲು ಒಂದಾದರೆಹೇಳಬಾರದ್ದು ತಿನವಲ್ಯ ಕೋಲೆ 90 ಗಂಗೆಯ ತಡಿಯಲ್ಲಿ ಲಿಂಗವನರ್ಚಿಸಿಅಂಗೈಯಲಿಟ್ಟು ಪೂಜಿಸುವೆ ಕೋಲೆಅಂಗೈಯಲಿಟ್ಟು ಪೂಜಿಸುವೆ ಎಲೆ ಪಾಪಿಲಿಂಗನು ನೀನು ವಂದ್ಹ್ಯಾಗೆ ಕೋಲೆ 91 ಶಿವನು ನೀನಾದರೆ ಶಿವೆಯು ನಿನಗೇನುಅವಿವೇಕಿ ಮನುಜ ಈ ಮಾತು ಕೋಲೆಅವಿವೇಕಿ ಮನುಜ ಈ ಮಾತು ಕೇಳಿದರೆಕವಿಗಳು ನಗರೆ ಕೈ ಹೊಯ್ದು ಕೋಲೆ 92 ವೇದ ಪ್ರಾಮಾಣ್ಯಂದು ಸುಜನರಿಗೆಲ್ಲಬೋಧಿಸುತಿಪ್ಪ ಬೌದ್ಧನ ಕೋಲೆಬೋಧಿಸುತಿಪ್ಪ ಬೌದ್ಧನ ಎಳೆದೊಯ್ದುಕಾದೆಣ್ಣೆಯೊಳು ಕೆಡುಹೋರು ಕೋಲೆ 93 ಇಲ್ಲಿ ಮಾತ್ರ ಭೇದ ಅಲ್ಲಿಯೊಂದೆ ಎಂಬಕ್ಷುಲ್ಲಕರ ಹಿಡಿದು ಹಲ್ಮುರಿದು ಕೋಲೆಕ್ಷುಲ್ಲಕರ ಹಿಡಿದು ಹಲ್ಮುರಿದು ಯಮರಾಯಕಲ್ಲುಗಾಣಕ್ಕೆ ಹಾಕಿಸುವ ಕೋಲೆ 94 ಅಪ್ಪ ನಾರಾಯಣನಿಪ್ಪಂಥ ಅರಮನೆಅಪ್ರಾಕೃತದ ವೈಕುಂಠ ಕೋಲೆಅಪ್ರಾಕೃತದ ವೈಕುಂಠವೆಂಬೋದುಸ್ವ ಪ್ರಕಾಶದ ಪರಮಾತ್ಮ ಕೋಲೆ 95 ಸುತ್ತ ವಿರಜಾನದಿ ಮತ್ತೆ ಆನಂದ್ವನಚಿತ್ತಜನೈಯ್ಯನರಮನೆಗೆ ಕೋಲೆಚಿತ್ತಜನೈಯ್ಯನರಮನೆ ಎಂಬುದುಉತ್ತಮೋತ್ತಮ ವೈಕುಂಠ ಕೋಲೆ 96 ನೀಲ ವೈಢೂರ್ಯ ನಿಚ್ಚಳ ವಜ್ರಅಚ್ಚ ಮಾಣಿಕ್ಯದ ಅಳವಟ್ಟು ಕೋಲೆಅಚ್ಚ ಮಾಣಿಕ್ಯದ ಅಳವಟ್ಟು ಹರಿಪುರಅಚ್ಯುತನಿಪ್ಪ ಅರವನೆ ಕೋಲೆ 97 ಸಿರಿಯು ತಾ ಮುರಹರನ ಪಟ್ಟಣದಲ್ಲಿವಿರಜೆಯೆಂತೆಂದು ಕರೆಸೋಳು ಕೋಲೆವಿರಜೆಯೆಂತೆಂದು ಕರೆಸಿ ವೈಕುಂಠಕ್ಕೆಪರಿಖಾ ರೂಪದಲ್ಲಿ ಮೆರೆವಳು ಕೋಲೆ 98 ಉತ್ತರದಿ ನಾಲ್ಕು ತತ್ಥಳಿಸುವ ದ್ವಾರಮುತ್ತು ಮಾಣಿಕ್ಯ ನವರತ್ನ ಕೋಲೆಮುತ್ತು ಮಾಣಿಕ್ಯ ನವರತ್ನ ಝಲ್ಲಿಯಎತ್ತಿ ಮೇಲ್ಕಟ್ಟು ಬಿಗಿದಿದೆ ಕೋಲೆ 99 ಜಯ ವಿಜಯಾದ್ಯೆಂಟು ದ್ವಾರಪಾಲಕರುಜಯದೇವಿ ರಮಣನರಮನೆಗೆ ಕೋಲೆಜಯದೇವಿ ರಮಣನರಮನೆ ಬಾಗಿಲೊಳ್‍ಜಯ ಜಯವೆನುತ ನಿಂದಾರೆ ಕೋಲೆ 100 ಕಸವೆಲ್ಲ ಪರಿಮಳ ಕೆಸರೆಲ್ಲ ಶ್ರೀಗಂಧಬಿಸರುಹ ನೇತ್ರನ ಅರಮನೆ ಕೋಲೆಬಿಸರುಹ ನೇತ್ರನ ಅರಮನೆಯೊಳಗೆಲ್ಲಕುಸುಮದ ಮಳೆಯು ಗರೆವುದು ಕೋಲೆ 101 ಕಾಜಿನ ನೆಲೆಗಟ್ಟು ರಾಜ ಮಾಣಿಕ ಗೋಡೆಈ ಜಡ ದ್ರವ್ಯವಲ್ಲಿಲ್ಲ ಕೋಲೆಈ ಜಡ ದ್ರವ್ಯವಲ್ಲಿಲ್ಲ ಪುಸಿಯಲ್ಲಶ್ರೀ ಜನಾರ್ದನನರಮನೆಯೊಳ್ ಕೋಲೆ 102
--------------
ಮೋಹನದಾಸರು
ಸರ್ಪಭೂಷಣನ ಸುತನ ಭಕ್ತಿಯಿಂದ ಬಲಗೊಂಡು ಮತ್ತೆ ಅಜನಸತಿಯ ಪಾದಕ್ಕೆ ಎರಗುವೆ 1 ಎಲ್ಲ ದೇವತೆಗಳಿಗೆ ಎರಗಿ ಭಕ್ತಿಯಿಂದ ಲಕ್ಷ್ಮೀ- ವಲ್ಲಭನ ಕತೆಗಳ ವರ್ಣಿಸುವೆನು 2 ಸ್ವಾಮಿ ಶ್ರೀಕೃಷ್ಣನ ಪ್ರೇಮವನ್ನು ಪಡೆದ ಸು- ದಾಮನೆಂಬೊ ಭಕ್ತ ಬಡವ ಬ್ರಾಹ್ಮಣಿದ್ದನು 3 ಸ್ನಾನ ಹೋಮ ಜಪವಮಾಡಿ ನೇಮ ನಿಷ್ಠೆಲಿಂದ ಉಪ್ಪು ಕಾಲ ಕಳೆಯುತಿದ್ದನು 4 ಅಶನವಿಲ್ಲ ವಸನವಿಲ್ಲ ಹಸಿದ ಮಕ್ಕಳನ್ನು ನೋಡಿ ವ್ಯಸನದಿಂದ ಪತಿಯ ಪಾದಕ್ಕೆರಗಿ ನಿಂತಳು 5 ತಂದೆ ತಾಯಿಗಳ ಕಡೆಯ ಬಂಧು ಬಳಗ ಯಾರು ಹತ್ತಿ ದ್ಹೊಂದಿದವರುಯಿಲ್ಲೆ ನಿಮಗೆ ಎಂದು ನುಡಿದಳು 6 ಪತ್ನಿ ಮಾತು ಕೇಳಿ ಪರಮ ಭಕ್ತಿಯಿಂದ ನುಡಿದ ಧ- ರ್ಮಾರ್ಥ ಕಾಮ್ಯಗಳನೆ ಕೊಡುವೋ ಮೋಕ್ಷದಾಯಕ 7 ಆದಿಮೂರುತಿ ಕೃಷ್ಣ ಓದಿಕೊಂಡ ಗೆಳೆಯನೊಬ್ಬ ಮಾಧವನ ಬಿಟ್ಟು ಮತ್ತೊಬ್ಬರಿಲ್ಲವು8 ಆತನ ಕಂಡು ಬಂದರ್ಯಾತರ ದಾರಿದ್ರ್ಯ ನಮಗೆ ಪ್ರೀತಿಯಿಂದ ಹೋಗಿಬನ್ನಿರೆಂದು ನುಡಿದಳು 9 ವರಮಾಲಕ್ಷ್ಮಿ ಅರಸು ಕೃಷ್ಣನರಮನೆಗೆ ಪೋಗಲಿಕ್ಕೆ ನ- ದರ ಏನುವೊಯ್ಲೆ ನರಹರಿಗೆ ಎಂದನು 10 ಲಕ್ಕುಮೀಶನ್ನ ದರ್ಶನಕ್ಕೆ ಒಯ್ಯಲಿಕ್ಕೆ ಮೂರು ಮುಕ್ಕು ಅವಲಕ್ಕಿ ತಿರಿದು ತಂದುಕೊಟ್ಟಳು 11 ಅದನು ಗಂಟು ಕಟ್ಟಿ ತನ್ನ ಹೆಗಲಮ್ಯಾಲೆ ಇಟ್ಟುಕೊಂಡು ನ- ಗಧರನ್ನ ನಗರಕ್ಕಾಗ ಬರುತಲಿದ್ದನು 12 ಲಕ್ಷಣಾದ ಶಕುನವ ಆ ಕ್ಷಣದಿ ಕಂಡು ವಿಪ್ರ ಲಕ್ಷ್ಮೀಪತಿಯ ದಯವು ನಮಗೆ ಆಗೋದೆಂದನು 13 ಹಾದಿಲ್ಹರಿವೊ ಜಲವ ಕಂಡು ಸ್ನಾನವನ್ನು ಮಾಡಿಕೊಂಡು ವೇದ ಪುಸ್ತಕವ ಹಿಡಿದು ಓದಿಕೊಳುತಲಿ 14 ಮಲ್ಲೆ ಮಲ್ಲಿಗೆ ದವನ ಅಲ್ಲೆಯಿದ್ದ ಫಲಗಳು ಲಕ್ಷ್ಮೀ- ವಲ್ಲಭಗೆ ಅರ್ಪಿತವೆಂದು ನಡೆದನು 15 ಗೋಪುರವ ಕಂಡು ದ್ವಾರಕಾಪುರಕ್ಕೆ ಕೈಯಮುಗಿದು ಶ್ರೀಪತಿಯ ಬಾಗಿಲಲಿ ಬಂದು ನಿಂತನು 16 ದ್ವಾರದಲ್ಲಿ ನಿಂತವರು ದಾರುಯೆಂದ್ವಿಚಾರಿಸಲು ನಾರಾಯಣನ ಸಖನು ನಾನೆಂದ್ಹೇಳುತಿದ್ದನು 17 ನುಡಿದ ನುಡಿಯ ಕೇಳುತ ನಡೆದು ಬಂದು ಚಾರಕರು ಒಡೆಯ ನಿಮ್ಮ ಗೆಳೆಯನಂತೆ ಬಡವ ಬ್ರಾಹ್ಮಣ 18 ಹುಟ್ಟ ಮೊದಲೆ ಅನ್ನ ತನ್ನ ಹೊಟ್ಟೆಗುಂಡ ಮನುಜನಲ್ಲ ಗಟ್ಟಿಗಾಳಿ ಬರಲೀಗ್ಹಾರುವಂತೆ ತೋರುವ 19 ಅಸ್ಥಿ ಚರ್ಮ ಆತನಂಗಕ್ಹತ್ತಿಕೊಂಡ ಹೊಟ್ಟೆಬೆನ್ನು ಮತ್ತೆ ನಡೆಯಲಾರ ಮಾತನಾಡಲಾರನು 20 ಒಡೆದ ಗುಂಡುತಂಬಿಗೆ ಬಡಿದನದರ ಸುತ್ತ ಮ್ಯಾಣ ಹಿಡಿದ ಗಂಟ ಬಿಡದಲ್ಹೊತ್ತು ನಡೆದು ಬಂದನು 21 ಮರದ ಗುಂಡು ಸರದಗುದ್ದಿ ಕೊರಳೊಳಗೆ ಹಾಕಿಕೊಂಡು ಎರಳೆ ಚರ್ಮ ಸುತ್ತಿ ಎಡದ ಬಗಲಲ್ಲಿಟ್ಟನು22 ದೊಡ್ಡನಾಮ ಹಚ್ಚಿಕೊಂಡು ಮುದ್ರೆಮಯ್ಯಲೊತ್ತಿಕೊಂಡು ಶುದ್ಧ ಚಂದ್ರಮನ ಕಾಂತಿ ತೋರುತಿದ್ದನು 23 ಛಿದ್ರವಾದ ಬಟ್ಟೆನುಟ್ಟು ಚಿಗುರು ತುಳಸಿ ಕಿವಿಯಲ್ಲಿಟ್ಟು ಪದ್ಮನಾಭ ಪಾಲಿಸೆನುತ ಕೂಗುತಿದ್ದನು24 ನಾಮಾಂಕಿತÀವ ಕೇಳಲು ಸುದಾಮನೆಂದು ಹೇಳುವ ನಾನಾ ಪರಿಯಲ್ನಿಮ್ಮ ಸ್ತುತಿಯ ಮಾಡುತಿದ್ದನು 25 ಅಪ್ಪುಣಾದರಾತನ ಇತ್ತ ಕರೆದು ತಾವೆನೆನಲು ಭಕ್ತರೊಡೆಯ ಭಾಳ ಸಂಭ್ರಮದಿ ಎದ್ದನು 26 ಕರವ ಪಿಡಿದು ಕುಳ್ಳಿರಿಸಿ ದಿವ್ಯಾಸನದ ಮ್ಯಾಲೆ ತರಿಸಿ ಚಾಮರದ ಗಾಳಿ ಹಾಕುತಿದ್ದನು 27 ಪನ್ನೀರು ತಂದು ಪಾದತೊಳೆದು ದ್ರಾಕ್ಷಿ ಕಿತ್ತಳೆ- ಹಣ್ಣು ಎಳನೀರು ತಂದು ಮೆಲಲು ಕೊಟ್ಟನು 28 ಮದುವೆ ಆಯಿತೇನೊ ಸಖನೆ ಎಂದು ಕೇಳಿದ 29 ಸೋಳಸಾವಿರ ಸತಿಯರಾಳುವೊ ಶ್ರೀರಮಣ ಕೇಳೊ ರಾಣಿವೊಬ್ಬಳಿರುವೊಳಯ್ಯ ನಮಗೆಯೆಂದನು 30 ಇಷ್ಟುದಿವಸ ಇಲ್ಲಿಗೆ ಬಾರದಿದ್ದ ಕಾರಣೇನು ಚಿಕ್ಕಂದಿನ ಸ್ನೇಹವೆಲ್ಲ ಮರೆತ್ಯ ಎಂದನು 31 ಬರದಲಿದ್ದೆ ನಾನು ಪಾಮರನೂ ಆದಕಾರಣ ಕಳುಹಿಕೊಟ್ಟಳೆನ್ನ ಭಾರ್ಯಳೀಗ ಎಂದನು 32 ಅಣ್ಣ ನಮ್ಮತ್ತಿಗೆ ನಮಗೇನು ಕಳಿಸಿದಳು ನಿನ್ನ ಹೆಗಲ ಗಂಟು ಬಿಚ್ಚಿ ತೋರಿಸೆಂದನು 33 ವಿಪ್ರ ನಾಚಿ ನೆಲನ ನೋಡುತಿರಲು ಕೃಷ್ಣ ಸಲಿಗೆಲಿಂದ ಗಂಟನೆಳೆದು ಬಿಚ್ಚಿಸಿದನು 34 ಸುಜನ ಜನರು ಮಾಡುವಂಥ ಭಜನೆಯೊಂದೆ ಸಾಕುಯೆನೆಗೆ ಹೇಮ ರತ್ನಾಭರಣವ್ಯಾತಕೆಂದನು 35 ಕುಂದಣದ ಪಾತ್ರೆಯೊಳಗೆ ತಂದು ಸುರುವೆ ಪ್ರತಕವನ್ನು ಮಂದರೋದ್ಧರನು ಮುಷ್ಟಿ ತೆಗೆದುಕೊಂಡನು36 ಮುಷ್ಟ್ಟಿಗೊಂದು ಬಾರಿ ಶ್ರೀಕೃಷ್ಣ ತೆಗೆದು ಮೆಲ್ಲುತಿರಲು ಕಷ್ಟ ದಾರಿದ್ರ್ಯವೆಲ್ಲ ಹರಿದು ಹೋಯಿತು 37 ಎರಡನೇ ಮುಷ್ಟಿ ಪಾಲ್ಗಡಲಶಯನ ಮುಕ್ಕುತಿರಲು ಸಡ- ಸಡಗರ ವೈಕುಂಠಪದವಿ ಮುಕ್ತಿ ಆಯಿತು 38 ಮೂರನೇ ಮುಷ್ಟಿಗೆ ನಾರಿ ರುಕ್ಮಿಣಿ ಬಂದು ಕೃಷ್ಣಯೇನು ಕೊಡುವಿ ಕರವ ಪಿಡಿದಳು 39 ಭಾವನವರು ತಂದುಕೊಟ್ಟ ದೂರದ ಪದಾರ್ಥವನ್ನು ನೀವೆ ಸವಿಯ ನೋಡುವೋದು ದಾವ ನೀತಿಯು40 ಅಕ್ಕ ಕಳಿಸಿದ್ದು ಅವಲಕ್ಕಿ ನಮಗಿಲ್ಲದ್ಹಾಗೆ ಮುಕ್ಕಿ ಬಿಡುವರೇನೊ ಎಂದು ನÀಕ್ಕಳಾಗಲೆ41 ಇಷ್ಟು ಮಂದಿಯೊಳಗೆ ಎನ್ನ ಮುಷ್ಟಿ ಹಿಡಿದು ನಿಲ್ಲುವಂಥ ದಿಟ್ಟತನಗಳೆಲ್ಲ್ಲಿ ಕಲಿತೆ ಹೇಳೆಯೆಂದನು 42 ಚಿಕ್ಕ ಸತ್ಯಭಾಮೆ ನೋಡಿ ನಕ್ಕಾಳೆಂಬೊ ನಾಚಿಕಿಲ್ಲ ಮುಕ್ಕು ಅವಲಕ್ಕಿಗೆನ್ನ ಕÀರವ ಪಿಡಿವೋರೆ 43 ಸರ್ವರೊಳಗೆ ಅಧಿಕಳೆಂಬೊ ಗರುವಿನ ರುಕ್ಮಿಣಿಗೆ ಬುದ್ಧಿ ಕರೆದು ಹೇಳಬಾರೆ ಸತ್ಯಭಾಮೆಯೆಂದನು 44 ಎನ್ನ ಭಕ್ತರಲ್ಲಿ ಪ್ರೇಮ ನಿನಗೆ ಉಂಟಾದರೆ ಇನ್ನೂ ಒಂದು ಮುಕ್ಕು ನಿನಗೆ ಕೊಡುವೆನೆಂದನು45 ಅಕ್ಕಗಾಡೋ ಮಾತಕೇಳಿ ಚಿಕ್ಕ ಸತ್ಯಭಾಮೆ ತಾನು ಅಕ್ಕರದಿ ಬಂದು ಕೃಷ್ಣನೆದುರು ನಿಂತಳು 46 ರಂಗ ನಿನ್ನ ಪಟ್ಟದರ್ಧಾಂಗಿಯಾದ ರುಕ್ಮಿಣಿಗೆ ಮುಂಗೈ ಹಿಡಿವೋದಕ್ಕೆ ದಾರಭಯವೇನೆಂದಳು47 <ಈಔಓಖಿ ಜಿಚಿಛಿe='ಓuಜ
--------------
ಹರಪನಹಳ್ಳಿಭೀಮವ್ವ
ಸಾಕೇತಪುರ ವಾಸಿ ಕಪಟವೇಷ | ಶ್ರೀಕಮಲನಾಭನ ನಖದಲಿ ಕಾಶೀ ಪ ವಿಶ್ವತೋಮುಖ ಬ್ರಹ್ಮ ವಿಶ್ವತೋಚಕ್ಷು | ವಿಶ್ವ ವಿಶ್ವಬಾಹು ವಿಶ್ವರೂಪ ರೂಪ || ವಿಶ್ವ ಬ್ರಹ್ಮಾಂಡ ಆಧಾರ ಕಾರಣ | ವಿಶ್ವೇಶ್ವರ ಪ್ರಾಣ ಮಂತ್ರ ರಾಮ ರಾಮ 1 ಪರಿಯಂತ ರೋಮಕೂಪ | ಅಗಣಿತ ಕಮಲಜ | ಹಸ್ತಿ ಚರ್ಮಾಂಬರರು ಇದ್ದು ನೆಲೆಗಾಣರು | ನಾಸ್ತಿ ವಿಷ್ಣು ಪರದೈವ ಇಹಪರದಲಿ2 ಕಷ್ಟವಿಲ್ಲದೆ ಮಕ್ಕಳಾಟಕೆ ತ್ವರದಿಂದ | ಸೃಷ್ಟಿಸುವ ಕಣ್ಣು ಎವೆ ಹಾಕುವ || ಅಷ್ಟರೊಳನೇಕ ಬ್ರಹ್ಮಾಂಡ ನಾಟಕ | ವಿಷ್ಣು ಕರ್ಮಾಣಿ ಪಶ್ಯತೆ ಪಶ್ಯತೆ 3 ನಿತ್ಯ ತೃಪ್ತಿ ನಿರಾಹಾರಿ ನಿತ್ಯಾನಂದ | ಮೃತ್ಯು ಹಾ ಕಾಲಪ್ರಮಾಣ ಪರುಷಾ || ಶರಧಿ | ಸತ್ಯ ಸಂಕಲ್ಪ ನಿಷ್ಠನಾಹಂತೆ 4 ಅಜನಯ್ಯ ಅದ್ಭುತ ಮಹಿಮ ಪುರುಷೋತ್ತಮ | ಭುಜಧರನಯ್ಯಯಾ | ಅಮಿತಕಾಯಾ | ವಿಜಯಸಾರಥಿ ವಿಚಕ್ಷಣ ದೀಪ್ತ ಮೂರುತಿ | ಭುಜಗಂಗಿರಿ ವಿಜಯವಿಠ್ಠಲ ವೆಂಕಟೇಶಾ 5
--------------
ವಿಜಯದಾಸ
ಸಾರಿ ಭಜಿಸಿರೋ ವಾದಿ ರಾಜ ಗುರುಗಳಾಘೋರ ಸಂಕಟದಿಂದಾ ಪಾರು ಮಾಳ್ಪರಾ ಪಭುಜಗುಣಸ್ಥರಾ ಅಜನ ಪದಕೆ ಅರ್ಹರಾಸುಜನವಂದ್ಯರಾ ವಾಜಿವದನ ದಾಸರಾ 1ವಕ್ರತರ್ಕದಾ ವಾದಿ ಸೊಕ್ಕು ಮುರಿದರಾಯುಕ್ತಮಲ್ಲಿಕಾ ರಚಿಸಿ ಮುಕ್ತಿ ತೋರ್ಪರಾ 2ಕುದುರೆ ಮೋರೆಯಾ ದೇವ ಮುದದಿ ಮೆಲುವನುಕಡಲೆ ಹೂರಣಾ ನೀವು ಕೊಡಲು ಅನುದಿನಾ3ಭೂತರಾಜನು ಸೋತ ದಾಸನಾದನುಅತಿ ಮಹತ್ವದಾ ಸೇವೆ ಸತತ ಮಾಳ್ವನು 4ಭಕ್ತಿುಂದಲಿ ಇವರ ಸ್ತುತಿಯ ಮಾಡಲುಭೂಪತಿ'ಠ್ಠಲಾ ಒಲಿದು ವರವಾ ಕೊಡುವನು 5'ಜುೀಂದ್ರರು
--------------
ಭೂಪತಿ ವಿಠಲರು
ಸೀತಾರಾಮ ಶ್ರೀರಘುರಾಮ ಕಾ ಕುತ್ಸ್ಥರಾಮ ಕರುಣಾಳು ರಾಮ ಪ ಉತ್ತಮ ಗುರುಗಳಿಗೆ ಭಕ್ತಿಯಿಂದಲೆ ಎರಗಿ ಭಕ್ತವತ್ಸಲನ ಚರಿತ್ರೆ ಪೇಳುವೆನು 1 ಆದಿಮೂರುತಿಮಹಿಮೆ ವೇದಂಗಳರಿಯದು ಎನ್ನ ಭೇದಬುದ್ಧಿಗೆ ಇದು ಬೋಧವಾಗುವುದೆ 2 ಪತಿತಪಾವನ ನಿಮ್ಮ ಸ್ತುತಿಯ ಮಾಡುವುದಕ್ಕೆ ಮತಿಯ ಪಾಲಿಸಿ ಸದ್ಗತಿಯ ಕೊಡೆನೆಗೆ 3 ಆದಿಸೃಷ್ಟಿಯಲಿ ಆದುದು ಈ ಆತ್ಮ ಬಾಧೆಯ ಪಡುತಿಹುದು ಭವರೋಗದಲಿ 4 ಜನನ ಮರಣವೆಂಬ ಜಾಡ್ಯವನು ಬಿಡಿಸಿ ನಿನ್ನ ಚರಣದೊಳಿರಿಸೆನ್ನ ಕರುಣವಾರಿಧಿಯೆ 5 ಹೃಷಿಕೇಶವ ಎನ್ನ ಹೃದಯದೊಳಗೆ ಇದ್ದು ವಿಷಯಕೆ ಎನ್ನನು ವಶವ ಮಾಡುವರೇ 6 ದೆ ಮನ್ನಿಸಿ ರಕ್ಷಿಸೊ ಪನ್ನಗಶಯನ 7 ಪಾರ್ಥಸಾರಥಿ ನಿಮ್ಮ ಪಾದವ ನಂಬಿದೆ [ಅರ್ಥಿಯಿಂ] ಪಾವನ ಮಾಡೆನ್ನ ಪರಮಪುರುಷನೆ 8 ನಿಮ್ಮ ಪಾದದ ಭಕ್ತಿ ನಿಮ್ಮ ಪಾದದ ಸ್ತುತಿ ನಿಮ್ಮ ಪೊಗಳುವ ಮತಿಗತಿಯ ಕೊಡೆನಗೆ 9 ತಂದೆತಾಯಿಯು ನೀನೇ ಬಂಧುಬಳಗವು ನೀನೆ ಆ ನಂದದಿಂದಲಿ ಕಾಯೊ ಇಂದಿರಾರಮಣ 10 ಸುರರೆಲ್ಲ ಪೋಗಿ ಮೊರೆಯಿಡಲಾಗಿ ಅರಿತನು ಭೋಗಿಶಯನ ತಾನಾಗಿ11 ವಸುಧೆಯ ಭಾರವನಿಳುಹುವೆನೆಂದು ದಶರಥನುದರದಿ ಜನಿಸಿ ತಾ ಬಂದು 12 ಪಂಕಜನೇತ್ರ ಪರಮಪವಿತ್ರ [ಸು]ಕೋಮಲಗಾತ್ರ ಕೌಸಲ್ಯಪುತ್ರ 13 ಪುತ್ರರ ನೋಡಿ ಸಂತೋಷಗೂಡಿ ಅರ್ತಿಯಿಂದಲೆ ಚೌಲ ಉಪನಯನ ಮಾಡಿ 14 ನೋಡಿ ಕೌಶಿಕನ ಚಿಂತೆಯ ಮಾಡಿ ಕೂಡಿ ಅನುಜನ ಮುನಿವರನೊಡನೆ ವೋಡಿ 15 ಕರೂಶದೇಶಕೆ ಬಂದು ತಾಟಕಿಯನು ಕೊಂದು ಮ ಹ ಸ್ತ್ರೀಯೆಂದು ಆನಂದದಿ ಗ್ರಹಿಸಿ 16 ಮಾರೀಚನ ಹಾರಿಸಿ ಕ್ರತುವನ್ನು ಪಾಲಿಸಿ ತೋರಿಸಿ ಗಂಗೆಯ ಆನಂದದಿಂ ಸ್ತುತಿಸಿ 17 ಮಾಡಿ ಶಿಲೆಯ ಪಾವನ ಮಿಥಿಲಪುರಕೆ ವೋಡಿ ನೋಡಿ ಧನುವ ಮುರಿದು ಜಾನಕಿ ಕೂಡಿ 18 ಮಾರ್ಗದಲ್ಲಾಗ ಭಾರ್ಗವನ ಆಗ್ರಹವ ಬೇಗ ಮುರಿದು ತಾ ಶೀಘ್ರದಿಂ ಬಂದ 19 ಸತಿ ಸಹಿತನಿಂದು ರಾಜ್ಯ ಗ್ರಹಿಸುವೆನೆಂದ ಮಾತೆಗಾನಂದ 20 ಮಾತೆಗೆ ವಂದಿಸಿ ಸೀತೆಯನೊಡಗೊಂಡು ಸು ಮಿತ್ರೆಜಾತನ ಸಹಿತ ರಘುನಾಥ ತಾ ಪೊರಟ 21 ಪೋಗಿ ಜನಕನಿಗಾಗಿ ವನಕೆ ತಾ ಯೋಗಿ 22 ಬೇಗ ಭರತನಿಗಾಗಿ ಪಾದುಕೆಗಳ ಅನು ರಾಗದಿಂದಿತ್ತು ಯೋಗದಿಂ ಪೋಗಿ 23 ಅತ್ರಿಮಹಾಮುನಿ ಇತ್ತ ಆಭರಣವ ವಸ್ತ್ರವ ಗ್ರಹಿಸಿದ ಪುರುಷೋತ್ತಮನು 24 ವಿರಾಧನ ಕೊಂದು ಹರುಷದಿಂ ಬಂದು ಕರುಣದಿಂದ ನಿಂದು ಋಷಿಗಳಿಗಭಯವ[ನಿತ್ತು] 25 ದನುಜೆನಾಸಿಕವರಿದು ಖರದೂಷಣರ ತರಿದು ತಾನೊಲಿದು ಸತಿಗೆ ಗುಹೆಯಲ್ಲಿ ನಲಿದು26 ಬಂದು ರಾವಣ ಜಾನಕಿಯ ಕದ್ದೊಯ್ಯಲಂದು ಕೊಂದು ಮಾರೀಚನ ಗೃಧ್ರಗೆ ಮೋಕ್ಷಾವ [ನಿತ್ತು] 27 ಕಬಂಧನ ಗೆಲಿದು ಪಂಪಾತೀರದಿ ನಲಿದು ಶಬರಿಯಿತ್ತ ಫಲವನ್ನು ಸವಿದು ಹರಿಗೆ ತಾನೊಲಿದು 28 ಕುಟ್ಟಿ ವಾಲಿಯ[ನು] ರವಿಜಗೆ ಪಟ್ಟವ ಕಟ್ಟಿ ಸೃಷ್ಟಿಜಾತೆಯನರಸಲು ಕಪಿಗಳನಟ್ಟಿ 29 [ಭರದಿವಾನರ] ಕೈಲಿ ಉಂಗುರವಿರಿಸೆ ಆ ಮಾರುತಿ ಕಪಿಗಳುವೆರಸಿ ಜಾನಕಿ[ಯ]ನರಸೆ 30 ಶರಧಿಯನ್ಹಾರಿ ಸೀತೆಯ ನೋಡಿ ಗುರುತನು ತೋರಿ ದುರುಳನೊಡನ್ಹೋರಿ ಮಣಿಯ ತಂದನಾಧಾರಿ 31 ವನವನ್ನು ಮುರಿದು ಅಕ್ಷನ ತರಿದು ಅಸ್ತ್ರಕ್ಕೆ ಅ [ವನೊ]ಲಿದು ರಾವಣನೆದುರಲ್ಲಿ ನಲಿದು 32 ಪುರವೆಲ್ಲ ಸುಟ್ಟು ವಿಭೀಷಣನ ಗುಟ್ಟು ಬಾಲ ಶರಧಿಯೊಳಿಟ್ಟು ಕಪಿಗಳ ಸೇರಿದನಷ್ಟು 33 ಭಂಗಿಸಿ ಮಧುವನವ ಭರದಿಂದ [ರಾಮನೆಡೆಗೆ] ಲಂಘಿಸಿ ಮಾತೆಯ ಕಂಡೆವೆಂದೊಂದಿಸಿ ಮಣಿಯನಿರಿಸೆ 34 [ವರರಾಮ] ತಾ ನೋಡಿ ವ್ಯಸ ಮಾಡಿ ಹರಿಯನ್ನು ಕೂಡಿ ಆಲಿಂಗನೆ ಮಾಡಿ 35 ಹರಿಗನ ಕೂಡಿ ಭರದಿಂದಲೋಡಿ ಶರಧಿಯ ನೋಡಿ ಯೋಚನೆ ಮಾಡಿ 36 ವರುಣನ ವಂದಿಸಿ ವಿಭೀಷಣನ ಮನ್ನಿಸಿ ಶರಧಿಯ ಬಂಧಿಸಿ ಅಂಗದನ ಸಂಧಿಗೆ ಕಳುಹಿಸಿ 37 ಇಂದ್ರಜಿತುವೊಡನೆ ಛಂದದಿಂದಲೆ ಕಾದಿ ಬಂದ ಸರ್ಪಾಸ್ತ್ರವ ಖಗನಿಂದ ಬಿಡಿಸಿ 38 ಹಂಗಿಸಿ ರಾವಣನಕಿರೀಟವ ಮೈಯೆಲ್ಲ ನಡುಗಿಸಿ ಭಂಗಿಸಿ ತಾ ಜಗದೊಡೆಯನೆಂದೆನಿಸಿ 39 ಕುಂಭನಿಕುಂಭ ಕುಂಭಕರ್ಣರ ಕೊಂದು ಕುಂಭಿನಿಯೊಳು ನಿಂದನಂಬುಜನಾಭ 40 ಪತಿತಪಾವನ [ನನುಜನ] ಪಿತಾಮಹಾಸ್ತ್ರದಿ ಕಟ್ಟೆ ಹಿತದಿಂದೌಷಧಿ ತಂದ ಮಾರುತನ ಕುಮಾರ 41 ಮಾಯೆ ಸೀತೆಯನರಿ[ಯದೆ] ಮೋಹಪಡು ತ ಉ ಪಾಯದಿಂದಲೆ ಬಂದ ಮಾಯಾವಿಯೆಡೆಗೆ 42 ತಮ್ಮ ಲಕ್ಷ್ಮಣ ತಾನು ಹೆಮ್ಮೆಯಿಂದಲೆ ಕಾದಿ ಒಮ್ಮೆ [ಲೆ] ಅಸ್ತ್ರಗಳ ಸುಮ್ಮಾನದಿಂ ಬಿಟ್ಟು 43 ಸತ್ಯಮೂರುತಿ ಪವಿತ್ರ ತಾನಾದರೆ ಅಸ್ತ್ರವೆ ಶತ್ರುವ ಜಯಿಸಲೆಂದನಾಗ 44 ಎಂದು ಬಾಣವಬಿಡೆ ಇಂದ್ರಜಿತುವ ಕೊಂದು ಆ ನಂದದಿಂ ಲಕ್ಷ್ಮಣನ ಹೊಂದಿತಾ ಬಾಣ 45 ವಿರೂಪಾಕ್ಷ ಯೂಪಾಕ್ಷ ಶೋಣಿತಾಕ್ಪನ ಕೊಂದು ಮ ಕರಾಕ್ಷನ ಕೊಂದ ಮಹಾನುಭಾವರಾವಣನ 46 ಮೂಲಬಲವನ್ನೆಲ್ಲ ಲೀಲೆಯಿಂದಲೆ ನಿ ರ್ಮೂಲನ ಮಾಡಿ[ದ] ಲೀಲಾವಿನೋದದಿ 47 ಬಂಧುಗಳೆಲ್ಲರು ಮರಣ ಪೋಗಲು ಕಂಡು ಬಂದ ರಾವಣನು ತಾನು ಒಂದೆಮನಸಿನಲಿ 48 ಯಾರು ಇಲ್ಲದಾಗ ಚೋರತನದಲ್ಲಿ ನಾರಿಯ ಕದ್ದೊಯ್ದ ಧೀರ ಬಾರೆಂದ [ರಾಮ] 49 ಅಸ್ತ್ರಕ್ಕೆ ಅಸ್ತ್ರವ ಒತ್ತಿ ಬಿಡಲು ಆಗ ಮತ್ತೆ ಆಕಾಶವ ಮುತ್ತಿತು ಬಾಣ 50 ರಾಮರಾವಣರ್ಯುದ್ಧ ನೋಡಿ ಮಹಾಸುರರೆಲ್ಲ ಪ್ರೇಮದಿಂದಲೆ [ಹರಸಿದರು] ಆನಂದಗೂಡಿ 51 ಕತ್ತರಿಸಿದ [ರಾವಣನ]ಶಿರ ಮತ್ತೆ ಬೆಳೆಯಲು ನೋಡಿ ಚಿತ್ತದಿಂ ನೆನೆದು [ರಾಮ] ಬ್ರಹ್ಮಾಸ್ತ್ರದಿಂ ಕಡಿದ 52 ದಶಕಂಠನೆಂತೆಂಬ ಹಸನಾದ ವೃಕ್ಷವ ದಶರಥಸುತವಾತ ಬಂದು ಮುರಿಯಿತು 53 ರಾವಣನೆಂತೆಂಬ ವಾರಣ[ದ ಕೋಡ] ವೀರ ರಾ ಘವನೆಂಬ ಕೇಸರಿಯು ಮುರಿಯಿತು 54 ಪುಲಸ್ತ್ಯಪುತ್ರನೆಂಬ ರಾಜವೃಷಭವನ್ನು ಇಕ್ಷ್ವಾಕು [ಕುಲದ] ವ್ಯಾಘ್ರವು ಭಕ್ಷಿಸಿತಾಗ 55 [ಆಮಹಾ] ರಾಕ್ಷಸೇಂದ್ರನೆಂಬ ಜ್ವಲಿಸುವ ಅಗ್ನಿಯ [ಶ್ರೀ] ರಾಮಜೀಮೂತವು ಬಂದು ಕೆಡಿಸಿತು 56 ಸುರರೆಲ್ಲ ಜಯವೆಂದು ಪುಷ್ಪಗಳರಳನ್ನು ಕರೆಯಲು ಶಿರದಲ್ಲಿ ಧರಿಸಿದ [ತಾ] ಪರಮಪುರುಷನು 57 ರಾಕ್ಷಸೇಂದ್ರ [ವಿಭೀಷಣ]ಗೆ ಮಾಡಿ ರಾಜ್ಯಾ ಭಿಷೇಕವ ಮೂರ್ಜಗದಲಿ ಕೀರ್ತಿ ಪಡೆದ ರಾಘವ 58 ತಂದೆಗೆರಗಿ ಅಗ್ನಿತಂದ ಸೀತೆಯ ನೋಡಿ ಆ ನಂದದಿಂದಲೆ ಕೂಡಿನಿಂದ ರಾಘವನು 59 ಅಜಭವಸುರರೆಲ್ಲ ಭುಜಗಶಯನನ ನೋಡಿ ನಿಜವಾಗಿ ಸ್ತೋತ್ರ ಮಾಡಿದರು ನಿರ್ಮಲದಿ 60 ವೇದವನಿತ್ತು ಅಜನಿಗೆ ಭಾರವ ಹೊತ್ತು [ಆ] ಧಾರುಣಿಯ ತಂದು ಕಂಬದಿಂ ಬಂದು 61 ದಾನವ ಬೇಡಿ ಕ್ಷತ್ರಿಯಕುಲವನೀಡಾಡಿ ಜಾನಕಿಯ ತಂದು ಪ್ರಲಂಬನ ಕೊಂದು 62 ಕಾಳಿಯ ಒತ್ತಿ ಕುದುರೆಯ ಹತ್ತಿ ಜಗ ವೆಲ್ಲ ಸುತ್ತಿ ನಿಮ್ಮ ದರ್ಶನ ಮುಕ್ತಿ 63 ಜಗದೋದ್ಧಾರ ದುರಿತಕ್ಕೆ ದೂರ ಜಗಕೆ ಆಧಾರ ದುಷ್ಟರಿಗೆ ಕ್ರೂರ 64 ಪೃಥುವಿಯ ಪಾಲ ದಿಟ್ಟಗೋಪಾಲ ಸತ್ಯದಲಿ ಶೀಲ ರುಕ್ಮಿಣೀಲೋಲ 65 ಅರಿ ನಿ ಸ್ಸೀಮ ಭಕ್ತರಾಪ್ರೇಮ 66 ವಿಶಾಲನೇತ್ರ ಪರಿಪೂರ್ಣಗಾತ್ರ [ವ ರ] ಸೀತಾಕಳತ್ರ ಸುಗ್ರೀವಮಿತ್ರ 67 [ರಾಜ] ದಶರಥ ಬಾಲ ಜಾನಕೀಲೋಲ ಮೂರ್ಜಗಪಾಲ ಕೀರ್ತಿವಿಶಾಲ 68 ಸತ್ಯಮೂರುತಿ ಪವಿತ್ರ ನೀನೆ ಜಗಕೆ ಕರ್ತನೂ ಕಾರಣಮೂರ್ತಿಯೂ ನೀನೆ 69 ನಂದನಕಂದ ಮುಕುಂದ ಗೋವಿಂದ ಇಂದಿರಾರಮಣ ನೀನೆಂದು ಪೊಗಳಿದರು 70 ಪುಷ್ಪಕವನು ಏರಿ ಲಕ್ಷ್ಮೀಸಹಿತವಾಗಿ [ರಾಮ]<
--------------
ಯದುಗಿರಿಯಮ್ಮ
ಸೀಸಪದ್ಯ ಧರಣಿ ಮೊರೆಯನು ಕೇಳಿ ಸರಸಿಜಾಸನ ಸಕಲ ಸುರರ ಸಹಿತದಿ ಶರಧಿಶಯನಗÀರುಹೆ ವಸುದೇವ ದೇವಕಿ ಸುತನೆನಸಿ ಅಜನಯ್ಯ ವಸುಮತಿಯಲವತರಿಸಿ ಲೀಲೆಯಿಂದ ದುರುಳ ದೈತ್ಯರ ಸದೆದು ಪರಿಪಾಲಿಸಿದ ಸಾಧು ಸುಜನರನ್ನು ನಿಜಭಕ್ತ ಪಾಂಡವರ ನೆಂಟನೆಂದೆನಿಸಿ ಭೂ ಭುಜ ಸುಯೋಧನ ಮುಖ್ಯ ದುರುಳರನ್ನು ಸದೆಬಡಿಸಿದಾ ಬಳಿಕ ಮದದಿ ಕೊಬ್ಬಿದ ಯದು ಬಳಗವನು ವಿಪ್ರಶಾಪದಿಂದ ಕೊಲಿಸಿ ಪದುಮಸಂಭವಜನಕ ಕರಿಗಿರೀಶನು ತನ್ನ ಸದನಕ್ಕೈದಿದ ಸರ್ವವ್ಯಾಪ್ತ ಸರ್ವೇಶ
--------------
ವರಾವಾಣಿರಾಮರಾಯದಾಸರು
ಸೋಬಾನವೆನ್ನಿರೆ ಶ್ರೀದೇವಿ ಅರಸಗೆ ನಾಭಿಯಲೆ ಅಜನ ಪಡೆದವಗೆ ಪ. ಬರಿಯ ಮಾಣಿಕದ ಹಸೆಗೆ ಕಿರಿಯ ಚನ್ನಿಗ ಬಾರೊಸರಿಯವರು ನೋಡಿ ನಗುವಂತೆ ಸರಿಯವರು ನೋಡಿ ನಗುವಂತೆ ಎನುತಲೆ ದೊರೆಗಳು ನುಡಿದು ಕರೆದರು1 ಮುತ್ತು ಮಾಣಿಕದ ಹಸೆಗೆ ಭಕ್ತವತ್ಸಲ ಬಾರೋಹತ್ತು ದಿಕ್ಕುಗಳ ಬೆಳಗುತ ಹತ್ತು ದಿಕ್ಕುಗಳ ಬೆಳಗುತ ಎನುತಲಿಮಿತ್ರಿ ಸುಭದ್ರಾ ಕರೆದಳು2 ಚದುರ ರಾಮೇಶನ ಮುದಿಮಾರಿವನಿತೆಯರು ಬದಿಯಲಿ ಬನ್ನಿ ಹಸೆಮ್ಯಾಲೆ ಬದಿಯಲಿ ಬನ್ನಿ ಹಸೆಮ್ಯಾಲೆ ಎನುತಲಿ ಸುದತೆÉ ಸುಭದ್ರಾ ಕರೆದಳು3
--------------
ಗಲಗಲಿಅವ್ವನವರು
ಸ್ಮರಿಸುವೆನು ಸದ್ಭಕ್ತಿಯಲಿ ಶ್ರೀರಾಮನ ಗುಣಧಾಮನ ಸಿರಿವಿರಿಂಚಾದ್ಯಮರಗಣ ಸಂಸ್ತುತ್ಯನ ಸಂತೃಪ್ತನಾ ಪ ಆದಿಯಲಿ ಝಷನಾಗಿ ನಿಗಮವ ತಂದನ ಮುನಿವಂದ್ಯನ ಭೂಧರಾಧರ ದಿವಿಜರಿಗೆ ಸುಧೆಗರೆದನ ಸುರವರದನ ಕಾದು ಕಿಟರೂಪದಲಿ ಭೂಮಿಯ ತಂದನ ಗುಣವೃಂದನ ಬಾಧಿಸಿದ ರಕ್ಕಸನ ತರಿದು ಪ್ರಲ್ಹಾದನ ತಾ ಪೊರೆದನ 1 ತುಳಿದನ ಅವಗೊಲಿದನ ಕೊಡಲಿ ಪಿಡಿದಾ ಕ್ಷತ್ರಿಕುಲ ವಿರಾಮನ ಭೃಗು ರಾಮನ ಮೃಡನೊರದಿ ಯುನ್ಮತ್ತ ದೈತ್ಯರು ಬಾಧಿಸೆ ಧರಿ ಪ್ರಾರ್ಥಿಸೆ ಜಡಜ ಪೀಠಾದ್ಯಮರರಾ ಮೊರೆ ಕೇಳ್ದನ ಧರೆಗಿಳಿದನ 2 ದಶರಥನ ಸತಿಯುದರದಲಿಯವತರಿಸಿದ ಮುದಗರಿಸಿದ ಬಿಸರುಹಾಪ್ತನ ವಂಶವನು ಉದ್ಧರಿಸಿದ ಮೈಮರಸಿದ ದಶದಿಶೆದಿ ಸುರರೆಲ್ಲ ಪೂಮಳೆಗರೆದರು ಸುಖಸುರಿದರು ಅಸಮಲೀಲೆಯ ತೋರ್ದರಘುಕಲಚಂದ್ರನ ಸುಖಸಾಂದ್ರನ 3 ಗಾಧಿಸುತನಧ್ವರವ ಕಾಯ್ದ ಸಮರ್ಥನ ಜಗಕರ್ತನ ವೇದಧನು ಮೊದಲಾದ ಕಲೆಗಳ ತಿಳಿದನ ಮುನಿಗೊಲಿದನ ಹಾದಿಯಲಿ ಶಿಲೆಯಾದ ಅಹಲ್ಯಳ ಪೊರೆದನ ಸಿರಿವರದನ ಮೋದದಲಿ ಹರಧನು ಮುರಿದ ಗಂಭೀರನ ಬಹುಶೂರನ 4 ಜನಕಭೂಪತಿ ತನುಜಳೆನಿಸಿದಸೀತೆಯ ಭೂಜಾತೆಯಾ ಘನಹರುಷದಲಿ ವಲಿಸಿಕರವನು ಪಿಡಿದನ ಯಶಪಡೆದನ ದನುಜರುಪಟಳತೋರಲಾಕ್ಷಣ ಸೀಳ್ಪನ ಸುರರಾಳ್ದನ ತನಗೆ ತಾನೇ ಸೋಲಿಸಿದ ಜನಮೋಹನ ಖಗವಾಹನ 5 ಜನಕನಾಜ್ಞವ ಪಾಲಿಸಿದ ದಯವಂತನ ಅಘಶಾಂತನ ಅನುಜಸತಿಸಹ ಪುರದಿ ತಾಪೊರಮಟ್ಟನ ಅತಿಧಿಟ್ಟನ ವನದಿ ಬಹು ಮುನಿಗಳ ಕಾರಾರ್ಚಿತನಾದನ ಸುಪ್ರಸಾದನ ಅನುಜ ಭರತಗೆ ದಯದಿ ಪಾದುಕೆ ಕೊಟ್ಟನ ಸಂತುಷ್ಟನ 6 ಮನುಜರಂದದಿ ಸತಿವಿಯೋಗವತೋರ್ದನ ಕುಜನಾರ್ದನ ವನಿತೆಯಂಜಲ ಫಲಗಳನು ತಾಮೆದ್ದನ ಶ್ರುತಿಸಿದ್ಧನ ದನುಜರಿಪು ಹನುಮಂತನನು ಸಾರೆ ಗರೆದನ ಕರುಣಿಸಿದನ ವನಜ ಸಖಸುತನೊಡನೆ ಸಖ್ಯವ ಮಾಡ್ಡನ ವರನೀಡ್ಡನ 7 ಲೀಲೆಯಿಂದಲಿ ತಾಳ ಮರಗಳ ಸೀಳ್ದನ ನೆರೆಬಾಳ್ದನ ವಾಲಿಯನು ಸಂಹರಿಸಿದತಿಬಲವಂತನ ಶ್ರೀಕಾಂತನ ಮೇಲೆನಿಪ ರಕ್ಕಸರನೆಲ್ಲರ ತುಳಿದನ ಅಸುಸೆಳೆದನ ಶ್ರೀಲತಾಂಗಿಯ ಕ್ಷೇಮವಾರ್ತೆಯ ಕೇಳ್ದನ ಮುದತಾಳ್ದನ 8 ಗಿರಿಗಳಿಂದಲಿ ಶರಧಿಯನು ಬಂಧಿಸಿದನ ಸಂಧಿಸಿದನ ಹರಿಗಳೆಲ್ಲರ ಕೂಡಿಲಂಕೆಯ ಸಾರ್ಧನ ರಣದಿರ್ದನ ಉರುಪರಾಕ್ರಮಿ ರಾವಣನ ಶಿರಕಡಿದನ ಹುಡಿಗೆಡೆದನ ವರವಿಭೀಷಣ ಭಕ್ತಗಭಿಷೇಚಿಸಿದನ ಪೋಷಿಸಿದನ 9 ಸಿರಿಸಹಿತ ಪುಷ್ಪಕವನೇರಿದ ಚಲುವನ ಅತಿ ಪೊಳೆವನ ತ್ವರದಿಶೃಂಗರಿಸಿದ ಅಯೋಧ್ಯಕೆ ಬಂದನ ಅಲ್ಲಿ ನಿಂದನ ಭರತ ಪ್ರಾರ್ಥಿಸಲಾಕ್ಷಣದಿ ಮೊರೆ ಕೇಳ್ದನ ಧರಿಯಾಳ್ದನ ಸರಸಿಜಾಸನ ಪ್ರಮುಖರಾರ್ಚನೆ ಕೊಂಡನ ಕೋದಂಡನ 10 ಮರುತಸುತನಿಗೆ ಅಜನ ಪದವಿಯನಿತ್ತನ ಬಹುಶಕ್ತನ ಚರಣಸೇವಕ ಜನಕಭೀಷ್ಟದಾತನ ವಿಖ್ಯಾತನ ನಿರುತ ಸನ್ಮುನಿಹೃದಯ ಮಂದಿರ ವಾಸನ ಜಗದೀಶನ ಸ್ಮರಣೆ ಮಾತ್ರದಿ ದುರಿತರಾಶಿಯ ತರಿದನ ಸುಖಗರೆವನ 11 ದೇವಕೀ ವಸುದೇವ ಸುತನೆಂದೆನಿಪನ ಜಗಕಧಿಪನ ಮಾವನನು ಸಂಹರಿಸಿ ಶಕಟನ ಕೊಂದನ ಆನಂದನ ಗೋವು ಕಾಯುತ ಗಿರಿಯ ಬೆರಳಲಿ ಆಂತನ ಬಹುಶಾಂತನ ಗೋವ್ರಜದಿ ಗೋಪಿಯರ ವಸನವ ಕಳೆದನ ಅಹಿತುಳಿದನ 12 ಲೋಕನಾಥನು ಪಾರ್ಥಸಾರಥಿಯಾದನ ಸುಪ್ರಮೋದನ ನೇಕ ಪರಿಭಗವತ್ಸುಗೀತೆಯ ಪೇಳ್ದನ ತಮಸೀಳ್ದನ ಆ ಕುರು ಕುಲವ ತರಿದ ಪಾಂಡವ ಪ್ರಾಣನ ಸುಪ್ರವೀಣನ ಆಕುರುಪ ಭೀಷ್ಮನಿಗೆ ಮುಕ್ತಿಯ ಕೊಟ್ಟನ ಅತಿಶ್ರೇಷ್ಟನ 13 ಕಪಟನಾಟಕ ನಗ್ನರೂಪದಿ ನಿಂತನ ನಿಶ್ಚಿಂತನ ತ್ರಿಪುರದಲಿ ಜಲಜಾಕ್ಷಿಯರ ವ್ರತ ಭÀಂಗನ ನಿಸ್ಸಂಗನ ಕೃಪಣವತ್ಸಲ ತುರಗವೇರಿ ತಾನಡೆದನ ಅಸಿಪಿಡಿದನ ಅಪರಿಮಿತ ಬಹುಕ್ರೂರ ಯವನ ವಿಘಾತನ ಪ್ರಖ್ಯಾತನ 14 ಈ ವಿಧದಿ ಬಹುಲೀಲೆ ಗೈವ ಸುಚರಿತನ ಜಗಭರಿತನ ಭಾವಶುದ್ಧಿಲಿ ಭಜಿಸುವವರಘಕಡಿವನ ಗತಿಕೊಡುವನ ಪಾವಮಾನಿ ಮತಾನುಗರ ಕರಪಿಡಿವನ ಭವತಡೆವನ ದೇವತತಿ ಸದ್ವಿನುತ ವರದೇಶ ವಿಠಲನ ನಿಷ್ಕುಟಿಲನ 15
--------------
ವರದೇಶವಿಠಲ
ಸ್ವಾಮಿ ನಮ್ಮ ದೇವದತ್ತ ಬ್ರಹ್ಮಾನಂದ ಅವಧೂತ ಸಮಸ್ತಜನದಾತ ಬ್ರಹ್ಮಾದಿಗಳೊಂದಿತ ಧ್ರುವ ಕುಡಲಿಕ್ಕೆ ತಾ ಉದಾರಿ ಬಲು ದೊಡ್ಡ ಉಪಕಾರಿ ಕಡೆಗಾಣಿಸುವ ಧೊರಿ ನಿಜ ನೀಡುತಿಹ್ಯ ಸಾರಿ ಬಡವರಿಗೆ ಆಧಾರಿ ಭಕ್ತಜನ ಸಹಕಾರಿ ಪರಿ ಮಾಡುತಿಹ್ಯ ಮನೋಹರಿ 1 ಬೀರುತಿಹ್ಯ ನಿಜನೋಡಿ ಕರದಲ್ಲಭಯ ನೀಡಿ ಗುರುತಿಟ್ಟಿದೆ ಸೂರ್ಯಾಡಿ ಶರಣರು ನಿಜಗೂಡಿ ಅರುವ್ಹೆ ಅಂಜನ ಮಾಡಿ ಕುರುವ್ಹೆದೋರುದಿದರಡಿ ಧರೆಯೊಳಿದೆ ಕೊಂಡಾಡಿ ಗುರುನಾಥನೆಂದು ಪಾಡಿ 2 ಅನಾಥ ಬಂಧುನೀತ ದೀನದಯಾಳು ಸಾಕ್ಷಾತ ಅನುದಿನದೆ ಪ್ರಖ್ಯಾತ ಘನಗುರು ಶ್ರೀನಾಥ ಮನೋಭಾವ ಪೂರಿತ ಎನಗುಳ್ಳ ದೇವದತ್ತ ದಾತ ಭಾನುಕೋಟಿ ಉದಿತ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸ್ವಾಮಿಯ ನೋಡುವ ಬನ್ನಿ ನಮ್ಮ ಸುಪ್ರೇಮೀಯ ನೋಡುವ ಬನ್ನಿ ಪ ಎಂಟು ಮೈಯವನಂತೆ ಎಸೆವೈದು ಮುಖವಂತೆ ಯರ್ದಾಂಗಿಯ ಪಡೆದಿಹನಂತೆ ಅಂತ ಸ್ವಾಮಿಯ ನೋಡುವ ಬನ್ನಿ 1 ಮಾಧವನೆ ಶರವಂತೆ ಭೂಧರನೆ ಧನುವಂತೆ ಭೂಮೀಯೇ ರಥವಂತೆ ಸೊಮ ಸೂರ್ಯರೇ ಗಾಲಿಗಳಂತೆ ಅಂತ ಸ್ವಾಮಿಯ ನೋಡುವ ಬನ್ನಿ 2 ವಾಜಿ ವೇದಗಳಂತೆ ಒದನೊದಗಿ ಬಹವಂತೆ ಅಮೃತ ಶರಧಿಯ ಅಲ್ಲಿ ಬತ್ತಳಕೆಯಂತೆ ಅಂತ ಸ್ವಾಮಿಯ ನೋಡುವ ಬನ್ನಿ 3 ಹರಿಯವರ ಶರವಂತೆ ಅಜನು ಸಾರಧಿಯಂತೆ ದುರುಳ ತಾರಕ ಸುತರ ಪುರವ ಮುರಿದಿಹನಂತೆ ಅಂತ ಸ್ವಾಮಿಯ ನೋಡುವ ಬನ್ನಿ 4 ಇದುವೆ ಭೂ ಕೈಲಾಸವೆಂದು ತೋಷದಿ ಬಂದು ಸಾಕಾರವಾಗಿಲ್ಲ ನೆಲಸಿಹರಂತೆ ಮುದದಿ ಲೋಕಗಳೆಲ್ಲ ಕೈವಶವಂತೆ ಅಂತಸ್ವಾಮಿಯ ನೋಡುವಬನ್ನಿ 5
--------------
ಕವಿ ಪರಮದೇವದಾಸರು