ಒಟ್ಟು 216 ಕಡೆಗಳಲ್ಲಿ , 49 ದಾಸರು , 184 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಂದರ ಧರನೆಂಬೊ ಕೋಲಸುಂದರಾಂಗನೆಂಬೊ ಯಾದವೇಂದ್ರಚಂದ್ರನೆಂಬೊ ಕೋಲ ಪಿಡಿದು ನಿಂತಾರು ಪ. ಹದಿನಾರು ಸಾವಿರ ಮಂದಿಮುದದಿಂದ ಹೆಜ್ಜೆಯನಿಕ್ಕುತ ಚದುರೆಯರು ಕೋಲಾಟಕ್ಕಾಗಿಒದಗಿ ನಿಂತಾರು1 ನೂರು ಮಂದಿ ನಾರಿಯರೆಲ್ಲಹಾರಭಾರ ಅಲಿಯುತಲೆಮುರಾರಿಯ ಮುಂದೆಲ್ಲಸಾಲು ಸಾಲಿಲೆನಿಂತರು 2 ನೀಲ ವರ್ಣನ ಮಡದಿಯರೆಲ್ಲಮೇಲಾದ ಕೋಲಾಟಕ್ಕಾಗಿಬಾಲೆಯರು ಬಂದೆಲ್ಲಸಾಲಾಗಿ ನಿಂತರು3 ಚಕ್ರಧರನ ಮಡದಿಯರೆಲ್ಲಚಕ್ಕನೆ ಕೋಲಾಟಕ್ಕಾಗಿನಕ್ಕು ಮುಗುಳನಗೆಯಸಖ್ಯದಲೆ ನಿಂತರು 4 ಪ್ರೇಮದಿಂದ ನಾರಿಯರೆಲ್ಲಭಾವೆ ರುಕ್ಮಿಣಿಗೆ ಎರಗಿಶ್ರೀಮಂತ ಧೀಮಂತ ನಮ್ಮಸ್ವಾಮಿ ಗೆಲಿಸೆಂದು 5 ಅಂಗನೆಯರು ರಾಮೇಶನ ಮಂಗಳ ಮಹಿಮೆಯಬೆಳದಿಂಗಳ ತುಂಬಿದರುಮೋಹನಾಂಗ ಚಂದ್ರಗೆ 6
--------------
ಗಲಗಲಿಅವ್ವನವರು
ಮಂದಹಾಸನ ಮುಖವ ಸಖಿಯೆ ಎಂದು ಕಾಂಬೆನೆ ಒಂದೊಂದು ನಿಮಿಷ ಯುಗವಾಗಿ ರಂಗಯ್ಯ ಬಾರೊ ತಂಗಿ ನಾ ಹ್ಯಾಂಗಿರಬೇಕಪ. ಒಂದಿನ ಸುಭದ್ರ ಮಂದಿರದೊಳು ಕುಳಿತುತಂದೆಯ ಭಾಗ್ಯ ಸ್ಮರಿಸುತ ಹಿಗ್ಗುತ ತಂದೆ ಭಾಗ್ಯ ಸ್ಮರಿಸುತ ಹಿಗ್ಗುತ ಇಂದಿರಾಪತಿ ನೆನೆದಾಳ 1 ಹೆಣ್ಣು ಸುಭದ್ರ ತಮ್ಮ ಅಣ್ಣನ ಭಾಗ್ಯವಬಣ್ಣ ಬಣ್ಣದಲೆ ಸ್ಮರಿಸುತಬಣ್ಣ ಬಣ್ಣದಲೆ ಸ್ಮರಿಸುತ ಹಿಗ್ಗುತ ಕಣ್ಣು ಮುಚ್ಚುತಲೆ ತೆರೆಯುತಲೆ2 ತಿಂಗಳಿಗೆ ಸುಭದ್ರಾ ಬಂದೆನ ನಿನ್ನ ನೋಡಲುಒಂದೇ ಮನದಿಂದ ಇರುಯೆಂದಒಂದೆ ಮನದಿಂದ ಇರುಯೆಂದ ಕಳುಹಿದ ಇಂದೆನ್ನ ಮನಸ್ಸು ಕಲಕಿತ 3 ಕೈವಲ್ಯಪತಿಯ ದಯದಿಂದ ಸಲುಹಿದವೈಭವದೊಳಗÀÉ ಮರೆತಾನವೈಭವದೊಳಗÀÉ ಮರೆತಾನ ಮುಯ್ಯವ ಒಯ್ದರೆ ನೋಡಿ ಬರಬೇಕ 4 ಕೃಷ್ಣರಾಯರ ಮನೆಯ ಅಷ್ಟೈಶ್ವರ್ಯವಎಷ್ಟು ವರ್ಣಿಸಲ್ವಶವಲ್ಲಎಷ್ಟು ವರ್ಣಿಸಲ್ವಶವಲ್ಲ ಮುಯ್ಯವ ಒಯ್ದರ ನೋಡಿ ಬರಬೇಕ 5 ಗೊಲ್ಲಾಧೀಶನ ಭಾಗ್ಯ ಚಲುವಿ ಸುಭದ್ರಸೊಲ್ಲುಸೊಲ್ಲಿಗೆ ನುತಿಸುತ ಹಿಗ್ಗುತಸೊಲ್ಲುಸೊಲ್ಲಿಗೆ ನುತಿಸುತ ಹಿಗ್ಗುತ ಎಲ್ಲರ ಮನಸ್ಸು ಎರಗೀತ6 ಗೋಕುಲೇಶ ರಾಮೇಶ ಯಾಕೆ ಮಥುರೆ ಬಿಟ್ಟವಾಕ್ಕುಪೇಳೆಂದು ವನಿತೆಯರುವಾಕ್ಕುಪೇಳೆಂದು ವನಿತೆಯರು ನುಡಿಯಲುಸಾಕಲ್ಯದಿಂದ ತಿಳಿಸಿದಳು7
--------------
ಗಲಗಲಿಅವ್ವನವರು
ಮಧ್ವಮುನಿಯೇ ಎನ್ನ ಹೃತ್ಕುಮುದ ಚಂದ್ರ ಪ ಅದ್ವೈತಮತಾರಣ್ಯ ದಹನ ಗುಣಸಾಂದ್ರ ಅ.ಪ. ನೊಂದೆ ಎಂಭತ್ನಾಲ್ಕು ಲಕ್ಷಯೋನಿಗಳಲ್ಲಿ ಒಂದೇ ಪ್ರಕಾರ ಸಂಚgಣೆಯಿಂದ ಒಂದೊಂದು ಕರ್ಮಗಳನರಸಿ ನೋಡಲು ಅದ- ರಿಂದ ಭವಾಬ್ಧಿಗೆ ಬಂದುಪಾಯವ ಕಾಣೆ 1 ನೀರು ಚಳಪಳಕಾಸಿ ಆರಲಿಟ್ಟು ಹೆಪ್ಪು ನೀರಿನಿಂದಲಿ ಕೊಡಲು ಬಪ್ಪುದೇನೊ ಮಾರುತೀ ನಿನ್ನ ಕೃಪೆ ಪಡೆಯದಲೆ ಉಳಿದವರ ಕಾರುಣ್ಯವಾಗಲು ಮೋಕ್ಷಸಾಧನವಿಲ್ಲ2 ಹರಿಸಿರಿಗೆ ಎರಗುವ ಸತ್ವ ಶರೀರನೆ ನಿರುತ ಎನ್ನೊಳಗಿಪ್ಪ ಮೂಲಗುರುವೆ ನೆರೆ ನಂಬಿದೆನೊ ಸ್ವಾಮಿ ವಿಜಯವಿಠ್ಠಲರೇಯನಚರಣದಲ್ಲಿರುವಂತೆ ಸಾಧ್ಯವಾಗಲಿ ಮನಸು 3
--------------
ವಿಜಯದಾಸ
ಮರಿಯಾದೆ ಅಲ್ಲವೊ ನಿನಗೆ ಮನವೆ ಪ ಸರಿಯಾಗಿ ನಡೆಯದೆ ನೀ ಚಪಲ ಪಡುವದು ಅ.ಪ ಪರಧನ ಪರಕಾಮಿನಿಯರ ನೋಡಿ ಎರಗುತ ತನಗದು ಬೇಕೆಂಬದು 1 ಆಶೆಯಿಂದಲಿ ವೃಥಾಯಾಸವಲ್ಲದೆ ಏನು ಲೇಸು ಕಾಣೆನು ಬಲು ಘಾಸಿಪಡುವೆ 2 ಮಾತು ಮಾತಿಗೆ ನಾನು ನನ್ನದೆಂಬೋದು 3 ನಿಂತಲ್ಲಿ ನಿಲ್ಲದೆ ಸಂತತ ದುರ್ವಿಷಯ ಭ್ರಾಂತಿಯೊಳು ಮುಳುಗಿ ಚಿಂತಿಸುವದು4 ಗುರುರಾಮವಿಠಲನ ಸಿರಿನಾಮದ ರುಚಿ ಸುರಿದು ತೃಪ್ತಿಗೊಳದೆ ಬರಿದೆ ಮರುಗುವೆ5
--------------
ಗುರುರಾಮವಿಠಲ
ಮಲ್ಲೆ ಮಲ್ಲಿಗೆ ಕೋಲ ಝಲ್ಲಿ ಮುತ್ತಿನ ಕೋಲನಲ್ಲೆಯರು ನಲಿ ನಲಿದು ಚಲುವ ರಂಗನ ಪಾಡಿಉಲ್ಲಾಸ ಬಡುವ ಕೋಲ ಅಮ್ಮಯ್ಯಪ. ಚಾರು ವÀದನಳೆ ದಿವ್ಯಥೋರ ಕುಚಗಳ ಆ ಭಾರಕೆ ಬಳಕುವಳೆ ವಿಸ್ತಾರ ಜಘನಳೆ ಚಲ್ವಳೆ ಅಮ್ಮಯ್ಯ 1 ನಾರಿಕೇಲದಂತೆ ಕರಗಳೆ ಉರಗಳೆ ವರಜಾನು ಜಂಗಿಗಳ ಚರಣಗಳ ನಖಗಳಬೆರಳುಗಳಿಗೆ ಎರಗುವೆನು ಅಮ್ಮಯ್ಯ 2 ಕಟಿ ಕಂಬು ನಮ್ಮಯ್ಯ 3 ಅಂಬುಜಾಂಬಳ ಪಾದವೆಂಬೊ ಕಮಲಗಳಬೆರಳೆಂಬೊ ಹವಳಗಳ ನಖವೆಂಬೊ ಚಂದ್ರಗಳ ಸಂಭ್ರಮದಿ ಎರಗುವೆ ನಮ್ಮಯ್ಯ4 ಸಿಂಧು ಸಪ್ತದಿಗಂಧರ್ವ ಲೋಕದಲಿಲ್ಲ ಹಿಂದಿಲ್ಲ ಮುಂದಿಲ್ಲವೆಂದೆ ನಮ್ಮಯ್ಯ 5 ಮಂದಾರ ಗಿರಿಮೇರು ಮಂದಾರದÀಲೆ ಮೇಲೆಂಬೊ ಮಾರ್ಜನ ತಪ ಒಂದು ಲೋಕದಲಿಲ್ಲವೆಂದು ದ್ರೌಪತಿಗ್ಹೇಳಿ ಬಂದೆನಮ್ಮಯ್ಯ 6 ಮಿತ್ರೆಯರ ಮುಯ್ಯಕ್ಕೆ ಮತ್ತೆಲ್ಲಿ ಸರಿಯಿಲ್ಲ ಸತ್ಯಲೋಕದಲಿಲ್ಲಮೃತ್ಯು ಲೋಕದಲಿಲ್ಲ ಅತ್ಯಂತ ತೆಳಗಿಹೊ ರತ್ನ ಲೋಕದಲಿಲ್ಲಹತ್ತು ದೆಸೆಗಿಲ್ಲವೆಂದೇ ನಮ್ಮಯ್ಯ 7 ಭಕ್ತವತ್ಸಲ ಸ್ವಾಮಿ ಅತ್ಯಂತ ಪ್ರೇಮದಲೆ ಸತ್ಯಭಾಂವೆರ ಅರಸು ಅರ್ಥಿಲೆ ಬಂದದ್ದುಚಿತ್ತಕ್ಕೆ ತಾ ಎಂದೆ ನಮ್ಮಯ್ಯ 8 ವೈಭವದ ಮುಯ್ಯವು ವೈಕುಂಠದಲಿಲ್ಲ ಕೈವಲ್ಯವೆನಿಪ ಸೇತುದ್ವೀಪದೊಳಗಿಲ್ಲಭಯವಿಲ್ಲವೆನಿಪ ಅನಂತಾಸನದಲಿಲ್ಲಐವರ ಅರಸಿಗೆ ಹೇಳಿಬಂದೆನಮ್ಮಯ್ಯ 9 ಕೈವಲ್ಯಪತಿ ತಾನು ದಯಮಾಡಿ ಬಂದದ್ದುದಯವ ಬಹಳಮ್ಮ ಐವರದು ಎನುತಲೆ ಕೈಮುಗಿದು ಹೇಳಿ ಬಂದೆ ನಮ್ಮಯ್ಯ10 ನಲ್ಲೆಯರ ಮುಯ್ಯಕ್ಕೆ ಎಲ್ಲೆಲ್ಲೂ ಸರಿಯಿಲ್ಲ ಸಪ್ತದ್ವೀಪದಲಿಲ್ಲಮೇರುವಿನಲಿಲ್ಲ ಈ ಭಾಗ್ಯವೆಲ್ಲ ಸ್ವರ್ಗದಲಿಲ್ಲಚಲ್ವಿ ದ್ರೌಪತಿಗೆ ಹೇಳಿ ಬಂದೆ ನಮ್ಮಯ್ಯ 11 ಬಲ್ಲಿದ ಅತಳ ವಿತಳ ಸುತಳ ಮಹಾತಳ ತಳಾತಳ ರಸಾತಳದಲಿಲ್ಲಈ ಮುಯ್ಯಕ್ಕೆಲ್ಲಿ ಸರಿ ಹೇಳಿ ಬಂದೆನಮ್ಮಯ್ಯ12 ಬೊಮ್ಮ ಲೋಕದಲಿಲ್ಲಸುಮನ ಸಾರಿರುವೋ ಸ್ವರ್ಗಲೋಕದಲಿಲ್ಲ ಅಮ್ಮಿಳ್ಳ ಪಾತಾಳವೆಂದೆ ನಮ್ಮಯ್ಯ13 ರಮಿಯರಸನು ತಂದ ಜಮ್ಮನೇ ನಿಮ್ಮ ಭಾಗ್ಯವು ಬಹಳ ಅಮ್ಮ ದ್ರೌಪತಿ ಎಂದು ಜುಮ್ಮನೆ ಹೇಳಿ ಬಂದೆನಮ್ಮಯ್ಯ 14
--------------
ಗಲಗಲಿಅವ್ವನವರು
ಮಾತನಾಡಲೆ ಜಾಣೆ ಮೋಹನಿಭಿ ಮದಯಾನೆ| ರೀತಿ ನಿನಗುಚಿತವೇನೇ|ಯಾತಕಿದು ಮನ ಮುನಿಸು| ಎನ್ನೊಳು ಸುಖಬೆರೆಸು ಪ್ರೀತಿ ರತಿಸೊಬಗು ದೊರೆನಾರೀ ಪ ತಿಂಗಳಾನನೆ ನಿನ್ನ ತೋಳಿಂಬವಿಲ್ಲದಿರೆ| ಕಂಗಳಿವೆ ಗೊಡವಲ್ಲೆ ನಲ್ಲೆ| ಅಂಗ ದವಯವವು ತಮ್ಮ ಅರ್ಥಿಯನೆ ಜರಿದವಾ| ಲಿಂಗನವ ಬಯಸಿ ನೋಡೆ ನೀಡೇ1 ಮುಂದಕಡಿಯಿಡಲಾರೆ ಮನಸೋತವಗೆ ದಯ| ದಿಂದಕರ ಪಲ್ಲವಾರೆ ದೋರೆ| ಬಂದ ನಿನ್ನಯ ವಿರಹ ಬಹಳ ತಾಪಕ ಸರಸಾ| ನಂದ ಮಳೆಯಗರಿಯೇ ವೆರಿಯೇ 2 ಏಣಾಕ್ಷಿ ಕೇಳಿನ್ನಯ ದೇವನೀಗ ಯಾಚಕನು| ತಾನಾಗಿಬಂದೆನಲ್ಲೆ ನಿಲ್ಲೆ| ತಾ ನೊಲಿದು ಅಧರಾಮೃತ ಫಲವೇ ಸೂರೆಯನು| ಮೌನದಲಿ ಕೊಡಲಿಬಾರೇ ನೀರೇ 3 ಕಾಂತೆ ನಿನ್ನ ವಿಯೋಗ ಕೇಳು ಜನವನ ವಾಗೆ| ಎಂತಶನ ಶುಚಿ ಹೇಳೆ ಕೇಳೆ| ಕಂತುವಿನ ಶರಗಳರಕಂ ಮಡುವಂ ಪೊಕ್ಕೆಗುಣ| ವಂತೆ ಫಣೀ ವೇಣಿ ಪಿಡಿಯೇ ಜಡಿಯೆ4 ಮಂದಗಮನೆ ಬುದ್ದಿಮೋಹಿಸುವದೇನು|ನಿಜ| ಛಂದ ವಾಜಿಯಲಿ ಕೂಡೆ ನೋಡೇ| ಎಂದ ವಚನನಲಿದು ಎರಗಿ ಗಿರಿ ಮಹಿಪತಿ|ನಂದ ನೊಡೆಯನ ನೆರದಳೇ ತರಳೇ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಾಧವ ಮುಕುಂದ ಹರಿ ದನುಜಾರಿದಯಾವಾರಿಧಿ ಅನುದಿನದಿ ನಿಮ್ಮ ಚರಣವ ನಂಬಿದವರಿಗಿಂಥ ಬಿನುಗುದುರಿತಗಳು ಬಾಧಿಸುವುದ್ಯಾತಕೊ ಸ್ವಾಮಿ ಪ. ತರುಣಿಕುಲರಾಮನೊಳು ತೊಡಕು ಬೇಡವು ಸೀತೆ(ಯ) ಹರಿಗೆ ಒಪ್ಪಿಸು ಎನಲು ಊರ ಹೊರಗೋಡಿಸಿರಲು ಭರದಿಂದ ಬಂದು ಮರೆಹೊಗಲು ವಿಭೀಷಣನು ಚರಣಕಮಲಕೆ ಎರಗಲು ಕರವ ಪಿಡಿದೆತ್ತಿ ಅಭಯವನಿತ್ತು ಲಂಕೆಯ ಸ್ಥಿರಪಟ್ಟಕಟ್ಟಿದ ಕರುಣಾಳುಗಳ ದೇವ 1 ಒದೆದೆಳೆದು ಪತಿಗಳೈವರ ಮುಂದೆ ದ್ರೌಪದಿಯ ನಡುಸಭೆಯೊಳು ನಿಲ್ಲಿಸಲು ಉಡುವ ಸೀರೆಯ ಸೆಳೆವೆನೆಂದು ದುಶ್ಯಾಸ(ನ) ಕೈ ದುಡುಕುತಿರಲಾಕ್ಷಣದಲಿ ಕೆಡುವದಭಿಮಾನ ಶ್ರೀ ಹರಿ ನೀನೆ ಕಾಯೊ ಎನ್ನೆಂ- ದೊದರುತಿರಲು ನುಡಿಯಲಾಲಿಸಿ ನಾನಾಪರಿಯ ವಸ್ತ್ರವನಿತ್ತು ಉಡಿಸಿ ಅಭಿಮಾನ ರಕ್ಷಿಸಿದಂಥ ಶ್ರೀಕಾಂತ 2 ಉತ್ತಾನಪಾದರಾಜ (ನ)ಣುಗ ತಮ್ಮಯ್ಯನ ಮತ್ತ ತೊಡೆಯೇರಿಇರಲು ನಿತ್ಯದಲಿ ಸುರುಚಿ ಸುನೀತಿ ಕುಮಾರಕನ ಎತ್ತಿ ಕಡೆಯಕ್ಕೆ ನೂಕಲು ನಿತ್ತ ವಿಚಾರವಿಲ್ಲದಂತೆ ಸತ್ಯಮೂರುತಿ ಹೆಳವನಕಟ್ಟೆರಂಗಯ್ಯ ಭಕ್ತವತ್ಸಲನೆಂಬೊ ಬಿರುದು ನಿನ್ನದು ಸ್ವಾಮಿ 3
--------------
ಹೆಳವನಕಟ್ಟೆ ಗಿರಿಯಮ್ಮ
ಮಾನನಿಧಿ ಶ್ರೀಕೃಷ್ಣ ಮಧುರೆಗೈದುವನಂತೆಏನು ಪಥವಮ್ಮ ನಮಗೆ ಪ ಮಾನವೇನಿನ್ನಿದಕೆ ಮಾನಿನಿಯರೆಲ್ಲರುಆಣೆಯನು ಕಟ್ಟಿವನಿಗಡ್ಡ ನಿಲ್ಲುವ ಬನ್ನಿ ಅ.ಪ. ಕಳ್ಳತನವೇ ನಮ್ಮ ವಲ್ಲಭರು ಈ ಸುಳುವುಎಲ್ಲವನು ಬಲ್ಲರಮ್ಮಒಲ್ಲದಲೆ ನಮ್ಮ ಬಿಟ್ಟರೆ ಒಳಿತು ವನಜಾಕ್ಷಎಲ್ಲಿಗೈದಿದರೆ ನಾವಲ್ಲಿಗೈದುವ ಬನ್ನಿ1 ಇಂದುದಯದಿ ಮೊದಲು ಇಂದೀವರಾಕ್ಷಿಯರುಗೋವಿಂದನ ಬಳಿಗೈದುವಒಂದು ಕಡೆಯಲಿ ಕುಳಿತು [ವನಜಾಕ್ಷಿಯೋರ್ವ ಕೈಯಂದಲಲ್ಲಿಗೆ ಕಳುಹಿ] ಕೇಳ್ವೆವೇನು ಪೇಳುವನೋ 2 ಹರಿಣಾಂಕವದನೆಯರು ನೆರೆದು ಬರುತಿರೆ ಕಂಡುಪರಮ ಹರುಷದಲಿ ಬಂದುಸರಿ ರಾತ್ರಿಯೊಳು ಹೀಗೆ ಬರುವುದೇನೆಂದೆನಲುಎರಗಿ ಬಿನ್ನೈಸಿದರು ಅಂಬುಜದಳಾಕ್ಷನಿಗೆ3 ಶ್ಲೋಕ ಹಲವು ಕಾಲವು ನಿನ್ನ ಸ್ನೇಹ ಸುಖವ ಹಾರೈಸಿಕೊಂಡಿರುತಿಹಲಲನಾವ್ಯೂಹವ ಬಿಟ್ಟು ಅಕ್ರೂರನೊಡನೆ ನೀ ಮಧುರೆಗೆ ಪೋದರೆಕಳೆಯಲಾಪವೇ ಕಾಂತ ಕೇಳು ದಿನವ ಈ ಕಂತುವಿನ ಬಾಧೆಗೆಘಳಿಗೊಂದು ಯುಗವಾಗಿ ತೋರುತಿÀಹುದೋ ಜಲಜಾಕ್ಷ ನೀನಿಲ್ಲದೆ ಪದ ಮಾಧವ ಕೃಪಾಕರನೆ4 ಶ್ಲೋಕ ಬಾಲಭಾವದಲಿಂದಲಂಗಸುಖವ ಬಹುಬಗೆಯಲಿಂದುಳುಹಿದೆಲೋಲಲೋಚನೆ ನಿಮ್ಮ ಬಿಟ್ಟು ಪುರದ ನಾರೇರಿಗಾನೊಲಿದರೆನೀಲಕಂಠನು ಮೆಚ್ಚ ನೋಡು ನಿಜವ ನಿಮಗ್ಯಾತಕೀ ಸಂಶಯಕಾಲಕ್ಷೇಪವನಲ್ಲಿ ಮಾಡೆ ಕಿಂಚಿತ್ಕಾಲದೊಳಾನೈದುವೆ ಪದ ಪಾಲಿಸಿರೆನಗಪ್ಪಣೆಯ ಪಾಟಲ ಸುಗಂಧಿಯರೆಕಾಲಹರಣವ ಮಾಡದೆನಾಳೆ ಉದಯಕೆ ಪೋಗಿ ನಾಲ್ಕೆಂಟು ದಿನದೊಳುವ್ಯಾಳೆಗಿಲ್ಲಿಗೆ ಬರುವೆ ಕಾಳಾಹಿವೇಣಿಯರೆ 5 ಶ್ಲೋಕ ಮಾರನಯ್ಯನೆ ಕೇಳು ಅಲ್ಲಿರುತಿಹ ನಾರೇರು ಬಲು ನಿಪುಣರೋನೀರಜಾಂಬಕ ನೋಡು ನಿನ್ನ ಮನವ ನಿಮಿಷಾರ್ಧದೊಳುಸೆಳೆವರೋಮಾರಕೇಳಿಯ ಶಾಸ್ತ್ರಮರ್ಮವರಿದ ಆ ನಾರೇರು ನೆರೆಯಲುಗಾರು ಪಳ್ಳಿಯಲಿಪ್ಪ ಗೋಪಿಯರ ವಿಚಾರಂಗಳ ಸ್ಮರಿಪೆಯಾ ಪದ ಬಿಲ್ಲ ಹಬ್ಬವೆ ಸುಳ್ಳು ಬಿಸುರುಹಾಕ್ಷಿಯರಿಕ್ಷುಬಿಲ್ಲಿನುತ್ಸವಕೆ ನಿನ್ನಖುಲ್ಲ ಅಕ್ರೂರನನು ಕಳುಹಿ ಕರೆಸಿದರಲ್ಲಿವಲ್ಲಭೆಯರನ್ನು ನೆರೆವೆ ನಮ್ಮೆಲ್ಲರನು ಮರೆವೆ 6 ಶ್ಲೋಕ ನಾರೀಹಾರ ಕಿರೀಟ ಕುಂಡಲಯುಗ ಕೇಯೂರವಲಯಾದಿಗಳುಚಾರು ವಸ್ತ್ರ ಸುಗಂಧ ಪುಷ್ಪನಿಚಯ ಹಾರಂಗಳಂ ಧರಿಸದೆಮಾರ ಕೇಳಿಯ ಮಾತಿಲಿಂದಲವರ ಮನಸೆಮ್ಮೊಳೊಂದಾಗದೆನಾರೇರೊಲುಮೆಯುಂಟೆ ಲೋಕದೊಳಗೆ ನನ್ನ್ಯಾತಕೆ ದೂರ್ವಿರೇ ಪದ ಮಲ್ಲಯುದ್ಧವ ನೋಡಬೇಕೆನುತ ನಮ್ಮಾವಅಲ್ಲಿಗೆ ಕರೆಸಲದಕೆಇಲ್ಲದಪವಾದ ಈ ಸುಳ್ಳು ಸುದ್ದಿಗಳ ನೀ -ವೆಲ್ಲ ಸೃಜಿಸಿದಿರಿ ಸರಿಯಲ್ಲ ನಿಮಗಿಳೆಯೊಳಗೆ 7 ಶ್ಲೋಕ ವಾರಿಜಾಂಬಕ ವಾರಿಜಾರಿವದನ ವಾರಾಶಿಜಾವಲ್ಲಭವಾರಿವಾಹನಿಭಾಂಗ ವಾಸವನುತ ವಾಕೆಮ್ಮದೊಂದಾಲಿಸೋವಾರಿಜೋದ್ಭವನಯ್ಯ ನಿನ್ನ ವಿರಹ ವಾರಾಶಿಯೊಳು ಮುಳುಗಿಹನಾರೀನಿಚಯವ ಪಾರುಗಾಣಿಸು ಕೃಪಾನಾವೆಯಲಿಂದೆಮ್ಮನು ಪದ ಮಾರನೆಂಬುವನು ಬಲು ಕ್ರೂರ ನಮ್ಮಗಲಿ ನೀ ಊರಿಗ್ಹೋದುದನು ಕೇಳಿವಾರಿಜಾಸ್ತ್ರವನು ಎದೆಗೇರಿಸೆಮ್ಮನು ಬಿಡದೆಹೋರುವನು ಅಹÉೂೀ ರಾತ್ರಿಯಲಿ ತಪಿಸುತ 8 ಶ್ಲೋಕ ನೀಲಕುಂತಳೆ ಕೇಳು ನಿಮ್ಮ ಮನೆಯೊಳಾ ನೆಲುವಿನ ಮ್ಯಾಲಿನಪಾಲು ಬೆಣ್ಣೆಯ ಕದ್ದು ಮೆದ್ದು ಬಹಳ ಕಾಲಂಗಳಂ ಕಳೆದೆನೆಬಾಲೆ ಮನ್ಮಥಬಾಣದೆಚ್ಚು ತಪಿಸೆ ಬಹು ಬಗೆಯಲಿಂದುಳುಹಿದಲೋಲಲೋಚನೆ ನಿಮ್ಮೊಳಾನು ಬಹಳ ಜಾರತ್ವಮಂ ಮಾಳ್ಪೆನೇ ಪದ ಬಟ್ಟಗಂಗಳೆ ನಿಮ್ಮ ಬಿಟ್ಟು ಘಳಿಗಿರಲಾರೆದುಷ್ಟ ಕಂಸನು ಕರೆಸಲುಅಟ್ಟಿದರೆ ಪೋಗದಿರೆ ಸಿಟ್ಟಿನಿಂದಲಿ ವ್ರಜಕೆಅಟ್ಟುಳಿಯ ಮಾಡುವನು ಅಂಬುಜಸುಗಂಧಿಯರೆ 9 ಶ್ಲೋಕ ಪತಿ ಸುತ ಪಿತೃ ಮುಖ್ಯ ಭ್ರಾತೃ ಬಾಂಧವರು ಎಂಬಅತಿಶಯ ನಮಗಿಲ್ಲ ಆಲಿಸೋ ಮಾತನೆಲ್ಲರತಿಪತಿಪಿತ ನೀನೇ ರಾತ್ರಿಯೊಳು ಕೊಳಲನೂದೆಕ್ಷಿತಿಪತಿ ನಿನ್ನೆಡೆಗೆ ಕ್ಷಿಪ್ರದಿಂ ಬಂದೆವಲ್ಲೊ ಪದ ಬಾಲತನದಲಿ ಯಮುನಾ ತೀರದಲಿ ನೀ ವತ್ಸ-ಪಾಲನೆಯ ಮಾಡುತಿರಲು ಆಕಾಲ ಮೊದಲಾಗಿ ಈ ವ್ಯಾಳೆ ಪರಿಯಂತರವುಕಾಲುಘಳಿಗಗಲದಿಹ ಕಾಂತೆಯರ ತ್ಯಜಿಸುವರೆ10 ಶ್ಲೋಕ ಪರಿಪರಿಯಲಿ ನಿಮ್ಮ ಪಾಲಿಸಿ ನೋಡೆ ಮುನ್ನಕರುಣಕೆ ಕೊರತಿಲ್ಲ ಕಾಂತೆ ಕೇಳೆನ್ನ ಸೊಲ್ಲತ್ವರಿತದಿ ಬಾರದಲೆ ತಡೆದು ನಾ ನಿಂತರಲ್ಲೆಸರಸಿಜಭವ ಮಾರರಾಣೆ ಕಾಣೆ ಪ್ರವೀಣೆ ಪದ ಕ್ಲುಪ್ತ ಕಾಲಕೆ ಬಂದುನೆರೆಯದಿದ್ದರೆ ನಾನು ಪರಮ ಪುರುಷೋತ್ತಮನೆ11 ಶ್ಲೋಕ ಮಾರನೆಂಬುವನಂದೆ ಮಡಿದನು ಶಿವನ ಮೂರನೆ ಕಣ್ಣಿಲಿನಾರೇರಿಲ್ಲದೆ ನಾಭಿಯಿಂದ ಪಡೆದ ಆ ಬ್ರಹ್ಮನೆಂಬಾತನ ನಾರಿ ಈರ್ವ ಕುಮಾರರಾಣೆ ಹರಿಯು ತಾನಿಟ್ಟನೇನೆಂಬೆವೆಮಾರಿ ಹೊರಗಿನ ಹೊರಗೆ ಹೊಯಿತೆಂಬೊ ತೀರಾಯಿತೆ ಭಾವುಕಿ ಪದ ಹಲವು ಮಾತುಗಳ್ಯಾಕೆ ಜಲಜಾಕ್ಷ ನಿನ್ನ ಪದನಳಿನಗಳ ನೆರೆ ನಂಬಿಹಒಲುಮೆಯಲ್ಲಿರುತಿಪ್ಪ ಲಲನೆಯರನೆಲ್ಲರನುಸಲಹೊ ಸಲಹದೆ ಮಾಣು ರಂಗವಿಠಲರೇಯ12
--------------
ಶ್ರೀಪಾದರಾಜರು
ಮುಕುತಿ ತಮಸು ಎರಡಿಲ್ಲೆ ಕಂಡ್ಯಾ ಮುಕುತಿ ಬೇರೆ ತಮಸು ಬೇರಿಲ್ಲ ಕಂಡ್ಯಾ ಪ ಗುರುಪಾದ ಒಡಗೊಂಡು ಮರುತ ಶಾಸ್ತ್ರವ ನೋಡಿ ಹರಿಯ ಗುಣಂಗಳ ಕೊಂಡಾಡುತ ಪರಮ ಉತ್ತಮರು ಬರಲು ಬನ್ನಿ ಬನ್ನೆಂದು ಎರಗಿ ತಕ್ಕೈಸಿ ಕೊಂಡುಂಬುವದೆ ಮುಕ್ತಿ 1 ನಾನು ನೀನು ಎಂದು ಜ್ಞಾನವನೆ ತಿಳಿಕೊಂಡು ತಾ ನಿಲ್ಲದಿಲ್ಲೆಂದು ಪೇಳಿಕೊಂಬಾ ಈ ನಾಡಿನೊಳಗಿವ ಹೀನವನು ಎಂಬರ್ಥ ಈ ನುಡಿ ಎನಿಸಿಕೊಂಬುದೆ ತಮಸು 2 ಒಂದರೊಳಾನಂತ ಅನಂತದಲಿ ಒಂದು ಒಂದೊಂದು ಅನಂತ ಹರಿಪ್ರೇರಕ ಎಂದು ಗ್ರಹಿಸಿ ಹರಿಗುರು ಹರಿದ್ವೇಷಿಗಳನ್ನ ನಿಂದಕವಾಗಿ ಬಾಳುವದೆ ಮುಕ್ತಿ 3 ಅನ್ನದಾ ಸಮಯ ಇಲ್ಲದೆ ಕಂಡಲ್ಲಿ ತಿನ್ನಲೋಡಿ ಸಮಯವೆನ್ನದೆ ಅನ್ಯರ ಬದುಕ ಪಹರಿಸುವ ಖಲು ಗನ್ನ ಫಾತಕನೆನಿಸಿಕೊಂಬುವದೆ ತಮಸು 4 ಮೀಸಲಾ ಮನದಲ್ಲಿ ವಾಸುದೇವನ ನಿಜ ವಾಸರದಲ್ಲಿ ಜಾಗರಾ ಮಾಡುವಾ ಆಶೆಬಡಕನಲ್ಲ ದೇಶದೊಳಗೆ ಹರಿ ದಾಸನೆಂದು ಪೇಳುವುದೆ ಮುಕ್ತಿ 5 ವ್ರತವಿಲ್ಲ ವಾವಿಲ್ಲ ಮತಿ ಮೊದಲು ಇಲ್ಲಾ ಕಥಾಶ್ರವಣ ಒಂದು ಕೇಳಲಿಲ್ಲ ಪಿತ ಮಾತರನ್ನ ಬೊಗಳುವ ನಾಯಿ ಕು ತ್ಸಿತನು ಎಂದೆನಿಸುವದೆ ತಮಸು 6 ಗುಣ ಒಳ್ಳೇದು ನೀತಿ ಮನ ಒಳ್ಳೇದು ಅಜ ತೃಣ ಜೀವಾದಿಯ ಭೇದಬಲ್ಲನಿವ ಗಣನೆಮಾಡ ವಿಜಯವಿಠ್ಠಲನಲ್ಲದೆ ಕ್ಷಣ ಹೀಗೆ ಎಂದೆನಿಸುವದೆ ಮುಕ್ತಿ 7
--------------
ವಿಜಯದಾಸ
ಮುತ್ತೂರೇಶ ಶ್ರೀ ಮರ್ಕಟಾ ತುಲಸÀದಲಾಯತಾಕ್ಷ ಶ್ರೀರಾಮದೂತಾ ಪ ಎತ್ತ ಚಲಿಸದಂತೆನ್ನ ಮನವ ತವ ಪಾದ ಸರೋಜದೊಳಿಟ್ಟು ಪತ್ತು ತಲೆಯನರಿಯಡಿದಾವರೆಯನು ನಿತ್ಯ ಭಜಿಸುವಂದದಿ ಮಾಡಯ್ಯ 1 ಆಂಜನೇಯಾ ಭೀಕರ ರೂಪಾ ದಾನವ ಘಾತಕರಾ ಸತಿ ಮೇದಿನಿ ಸುತೆಯಳ ಮಂಜುಮಾಡಿ ಖಲ ರಾವಣನೊಯ್ಯಲು ಅಂಜದಿರೆಂದವನಿಪ- ನಿಗಭಯವಿತ್ತು ಮಂಜುಂ ಕಾರ್ಯವ ನೆರೆದಪೆನೆಂದೀ 2 ಭಾರತೀಯ ಪವÀನತನಯ ಘನತರ ಕಾರ್ಯಕರ್ತಾ ಶ್ರೀರಾಮದೂತಾ ಘೋರತರದ ಅಪರಾರ್ಣವನು ಹಾರಿ ದಾಂಟಿ ಲಘು ದಶಮುಖಪುರವನು ವೀರರಾಘವನಂಘ್ರಿಗೆ ಎರಗಿದಿ ನೀ 3 ದಾನವನಾಶಾ ಜಾನಕೀತ್ರಾತ ದಶರಥಸುತ ಭಜಕಾ ಆನಂದತೀರ್ಥ ದಾನವ ಕೋಟಿಯ ನಡೆದು ಜವದಿ ನೀ ಮೌನಿ ಹರಿಗೆ ಸಹಾಯಾಗ್ರಣಿಯಾಗಿ ಹೀನ ರಕ್ಕಸ ದಶ- ಶಿರವನರಿಸಿ ನೀ ನರಸಿಂಹವಿಠಲನ ದಾಸನೆನಿಸಿದೀ 4
--------------
ನರಸಿಂಹವಿಠಲರು
ಮುಯ್ಯಾ ತಿರುಗಿಸಿದ ಹಾಡುಗಳು ಕಾಲಕಾಲಕ್ಕೆ ಗುರುಗಳ ಕಾಲಿಗೆ ಎರಗುವೆ ಕೋಲೆನ್ನಿ ಕೆಲದೆಯರು ಕೋಲೆನ್ನಿರೆ ಪ. ಸೊಲ್ಲು ಸೊಲ್ಲಿಗೆ ನಮಿಸಿ 1 ವೀತ ದೋಷನೆಂಬೊ ನೂತನ ಪುಷ್ಪ ಮುಡಿದು ಪ್ರೀತಿ ಬಡುವಗುರುಗಳ ಮಾತು ಮಾತಿಗೆ ನಮಿಸಿ2 ಬಾಲೆ ಗುರುಗಳ ಹೃದಯ ಆಲಯ ವಶವಾದ ಬಾಲಗೋಪಾಲನೆಂಬೊನೀಲ ಮಾಣಿಕವೆ ಬಿಗಿದು 3 ನಿತ್ಯ ಮೂರುತಿ ಎಂಬೊಮುತ್ತು ಮಾಣಿಕವೆ ಬಿಗಿದು4 ಸಿರಿ ರಮೆಯರಸನೆÉಂಬೊ ಬರಿಯ ಮಾಣಿಕವೆ ಬಿಗಿದು5
--------------
ಗಲಗಲಿಅವ್ವನವರು
ಮೂರ್ತಿ ಚಿನ್ಮಯಾತ್ಮಕ ರೂಪ ಸಂತತದಿ ನೆನೆವವರ ಸಲಹೊ ಕರುಣಿ ಪ. ತುಂಬಿ ಇರುತಿಹುದು ಎಂತು ನಿನ್ನಾಟ ಪೇಳ್ ನಿಗಮವೇದ್ಯ ಚಿಂತೆ ಎನಗೊಂದಿಲ್ಲ ಅಂತರಂಗದಿ ನೆಲೆಸಿ ಸಂತತದಿ ನಿನ ಧ್ಯಾನ ನೀಡೆಂಬೆನೊ 1 ದೇಶಾಧಿಪತಿಗಳಿಗೆ ಕೋಶ ತುಂಬದ ಚಿಂತೆ ದೇಶ ತಿರುಗುವನಿಗೆ ಹಣದ ಚಿಂತೆ ದೇಶಸ್ಥನಾದವಗೆ ರಾಜಭಟರಾ ಚಿಂತೆ ಕಾಶಿಯಲ್ಲಿರುವವಗೆ ಮನೆಯ ಚಿಂತೆ 2 ಜಾರಿಣಿಗೆ ವಿಟನೊಬ್ಬ ಬಾರದಿರುವ ಚಿಂತೆ ಚೋರನಿಗೆ ರವಿ ಮುಳುಗದಿರುವ ಚಿಂತೆ ಮಾರನಿಗೆ ಯೋಗಿಗಳ ಹೃದಯ ಭೇದಿಪ ಚಿಂತೆ ಪತಿ ಒಲುಮೆ ಪಡೆವ ಚಿಂತೆ 3 ಕರ್ಮತತ್ಪರರಿಗೆ ಹರಿಮರ್ಮವರಿಯದ ಚಿಂತೆ ಧರ್ಮಪುರುಷಗೆ ಕಲಿಬಾಧೆಯ ಚಿಂತೆ ವೇದಶಾಸ್ತ್ರಜ್ಞನಿಗೆ ವಾದಿಯ ಭಯ ಚಿಂತೆ ಹಾದಿ ನಡೆವಗೆ ದುಷ್ಟ ಜನರ ಚಿಂತೆ 4 ಸಾಧು ಸಜ್ಜನರಿಗೆ ಬಾಧೆ ಕೊಡುವರ ಚಿಂತೆ ಹಾದಿ ತಪ್ಪಿದ ಪಾಪಿಗೆ ಯಮನ ಚಿಂತೆ ವಾಣಿಜ್ಯತನದವಗೆ ಹಣವು ಗಳಿಸುವ ಚಿಂತೆ ಮಾನವಂತರಿಗೂನ ನುಡಿಯ ಚಿಂತೆ 5 ಇಂತೆಲ್ಲರಾ ಚಿಂತೆ ಇರಲಿ ಕೇಳ್ ಹರಿಯೆ ಚಿಂತೆ ಬಿಡಿಸೆನಗೆ ನೀನೊಲಿದು ದೊರೆಯೆ ಚಿಂತನೆಗೆ ಸಿಗದಿಹುದು ನಿನಗೆ ಸರಿಯೆ ಚಿಂತಿಪರಿಗೊಲಿವಂಥ ಸಿರಿಕಾಂತ ಹರಿಯೆ6 ಶಾಂತ ಮೂರುತಿ ಪರಮ ಕರುಣಾಳುವೆನ್ನುತಲಿ ಎಂತೆಂತೂ ಸಜ್ಜನರು ಸ್ತುತಿಪುದನು ಕೇಳುತಲಿ ಇಂತು ನಿನ ಪದವನಾನ್ಹಾರೈಸಿ ಬಂದರೂ ನಿಂತರೂ ಎದುರಲ್ಲಿ ನೀನೊಲಿಯಲಿಲ್ಲ 7 ಕರಮುಗಿದು ಎರಗಿದರೂ ಶಿರಬಾಗಿ ನಮಿಸಿದರೂ ಚರಣದಲಿ ತನುಮನ ಒಪ್ಪಿಸಿದರೂ ಕರಗಲಿಲವು ಮನಸು ಕರುಣಪುಟ್ಟಲು ಕಾಣೆ ಭರವಸೆಯು ನಿನ್ನಲ್ಲಿ ಮೂಡಲಿಲ್ಲ 8 ಶಿರದಿ ಕರವಿಡಲಿಲ್ಲ ತೊರೆದೆಯೊ ಜರಿದೆಯೊ ವರಭಕ್ತಿ ಸಾಲದೊ ಗುರುವಿಕೆಯೊ ದೊರೆತನವೊ ಅರಹೊಟ್ಟೆ ಜೀವಿಸುತ ಅರಿಯದೆ ಮತ್ತೊಂದು ಇರುಳು ಹಗಲಾಲ್ಪರಿವ ತೆರವು ತೋರದೊ ಮನಕೆ 9 ಸರಿಯಲ್ಲ ಸರಿಯಲ್ಲ ಕರುಣಾಳುವೆಂಬುವೋ ಬಿರುದುಳಿವ ತೆರವಿಲ್ಲ ಬಿಂಕಪಟ್ಟರೆ ಈಗ ಕರೆದು ಮನ್ನಿಸೊ ಪಾಂಡುರಂಗವಿಠ್ಠಲ ದೇವ ವರ ಪುಂಡಲೀಕಗೆ ಒಲಿದದ್ದು ನಿಜವಾಗೆ 10 ಪರಿಪರಿಯ ಭಕ್ತರನು ಪೊರೆದದ್ದು ನಿಜವಾಗೆ ಹರಿದಾಸ ಸಂತತಿಗೆ ಮನೆದೈವ ನಿಜವಾಗೆ ಸರಿಯಿಲ್ಲದಾ ದೈವ ನೀನೆಂದು ನಿಜವಾಗೆ ಹೊರವೊಳಗೆ ಒಂದಾಗಿ ಕರಪಿಡಿದು ಸಲಹಿನ್ನು 11 ಗುರುಕೊಟ್ಟ ವರಬಲದಿ ಶರಣು ಪೊಂದಿದೆ ನಿನಗೆ ಚರಣದಲಿ ಬಿದ್ದಿರುವೆ ಪರಮ ಪುರುಷನೆ ದೇವ ಸ್ಮರಪಿತನೆ ಗೋಪಾಲಕೃಷ್ಣವಿಠ್ಠಲ ನಿನ್ನ ಸ್ಮರಣೆ ಮಾಡಿದ ಮೇಲೆ ಭವದ ಭಯ ಉಂಟೆ 12
--------------
ಅಂಬಾಬಾಯಿ
ಮೂರ್ತಿ ಸ್ತೋತ್ರ ಗುರುವರ ದಕ್ಷಿಣಾ ಮೂರ್ತಿಗೆ ಎರಗುವೆ ಪುರಂದರ ಮುಖ ಸುರ ವೃಂದ ವಂದಿತರು ಪರಮಾತ್ಮನು ಶ್ರೀ ರಾಘವ ಸಿಂಹನ ಸುರತರು ಪ ಅಮೃತ ಕಲಶ ಅಭಯ ವಿದ್ಯಾಮುದ್ರಾ ದರ್ಶಕ ಕೈ ಪದ್ಮಗಳ್ ಸುಂದರ ತರ ಶುದ್ಧ ಸ್ಫಟಿಕಾಮಲವರ್ಣ ಇಂಥ ದಕ್ಷಿಣ ಮೂರ್ತಿಗೆ ಆನಮಿಸುವೆ 1 ಉರಗ ಭೂಷಣ ದಿವ್ಯ ಹೊಳೆವ ಆಭರಣಗಳ್ ಚಂದ್ರ ಚೂಡ ತ್ರಿನೇತ್ರ ಕೃಪಾಕರ ದಕ್ಷ ಪ್ರಜೇಶ್ವರಾ ದ್ಯಮರರಿಂದೀಡ್ಯ ಈ ದಕ್ಷಿಣ ಮೂರ್ತಿಯ ಸ್ಮರಿಸೆ ಸಂತೈಪರು 2 ಶ್ರೀಪತಿ ಜ್ಞಾನ ಪ್ರದರ್ಶಸಿ ತೇಜಸ್ ಐಶ್ವರ್ಯ ಈವೋರು ಅಪಮೃತ್ಯು ವಿಷರೋಗ ಪರಿಹರಿಸುವರು ಅಬ್ಜಜ ಪಿತ ಶ್ರೀ ಪ್ರಸನ್ನ ಶ್ರೀನಿವಾಸ ಹೃತ್ಪದ್ಮದಿ ಕಾಂಬ ಮೇಧಾಕೊಡುವರು | ಗುರುವರ ದಕ್ಷಣಾ ಮೂರ್ತಿಗೆ ಎರಗುವೆ 3
--------------
ಪ್ರಸನ್ನ ಶ್ರೀನಿವಾಸದಾಸರು
ಮೃಡ ನೀನಾದೆನಡುವೆ ಜಡನಾದೆನ್ನ ಮೃಡನ ಮಾಡಯ್ಯ 1ತನುವೆರಡರೊಳಗಿರುವ ತತ್ವ ಗಣವೆನಿಸುವದುತನುಗಣಕೆ ನೀ ಸ್ವಾ'ುಯಾಗಿರಲು ಬಳಿಕಜನರೆಲ್ಲ ನಿನ್ನಡಿಯ ತನು'ನಲಿ 'ಘ್ನಗಳಕೊನೆಗಂಡು ಮನದಭೀಷ್ಟವ ಪಡೆಯುತಿಹರು 2'ಘ್ನೇಶನೆಂಬೊಂದು ಪದಕೆ ವರ್ಣತ್ರಯವು'ಘ್ನವೆಂಬೆರಡು ವರ್ಣದಿ ಜ್ಞಾನವೊಂದು'ಘ್ನಹತಿಯದಕೀಶ 'ಘ್ನೇಶ ನೀನೆ ನಿರ್'ಘ್ನದಿಂ ಜ್ಞಾನವನು ಕೊನೆಗಾಣಿಸಯ್ಯ 3ಮೊದಲ ವರ್ಣವೆ ಸಾಕ್ಷಿಯದರ ಕಡೆಯದು ಮಾಯೆುದಕೊಡೆಯನೆನುತಿಹುದು ಮೂರನೆಯ ವರ್ಣಅದರಿಂದ ಕರಣಪ್ರೇರಕನೆಂಬ ಹದನಾಗಿವೊದಗಿದುದು 'ಘ್ನೇಶನೆಂಬ ನಿನ್ನ ನಾಮ 4ಪರಮಾತ್ಮ ನೀನೆಂದು ನೆರೆ ತಿಳಿದು ನಿನ್ನಡಿಗೆಎರಗಿದೆನು ವ್ಯವಹಾರ ದೆಸೆುಂದಲೀಗತಿರುಪತಿಯ ವೆಂಕಟನೆ ವರದ ಗಣಪತಿಯೆಂದುಮೆರೆಯುತಿಹೆ ರಾಮೇಶನಾಲಯಾವಾಸ 5
--------------
ತಿಮ್ಮಪ್ಪದಾಸರು
ಯತಿಗಳು ಶ್ರೀಜಯತೀರ್ಥರು ಕರುಣಿಸೊ ಜಯರಾಯಾ ಗುರುವರ್ಯ ಚರಣವೆ ಗತಿಯಯ್ಯ ಹೇ ಜಿಯಾ ಪ ರಘುನಾಥನ ಪುತ್ರ ಪವಿತ್ರ ರಾಘವನ ಪ್ರೀತಪ್ರಾತ್ರ ಚರಿತ್ರ ಮಘವನಾ ನೀ ನಘದೂರ ಶ್ರೀ ರಘುರಾಮನ ಕಿಂಕರನ ಅಮೋಘ ಸೇವಕನೊ 1 ಕುಕರ್ವಿಣಿಯ ತೀರಾ ಘೋರಕುವಾದಿಗಳ ಕು ಲಕುಠಾರ ಗಂಭೀರ ಸಕಲಶಾಸ್ತ್ರಸತ್ಸಾರ ಟೀಕಕರ ಕುಕವಿಶೃಗಾಲಕುಲಕಾಲಭಯಂಕರ 2 ಎರಗೋಳಾದ್ರಿಯೊಳು ಗುಹೆಯೊಳು ನಿರುತ ಪ್ರವಚನಗಳು ನಿತ್ಯದೊಳು ಮರುತಮತಾಂಬುಧಿಚಂದಿರ ಸುಂದರ ವರಸುಜ್ಞಾನಮಣಿಕಿರಣವ ತೋರಿದೆ 3 ಗುರು ಮಧ್ವಮುನಿ ತತ್ತ್ವಗ್ರಂಥದ ಕ್ಷೀರಶರಧಿಗೆ ಮಂಥಾ ವುನ್ನಂಥಾ ಮರುತನನುಗ್ರಹ ಪ್ರಗ್ರಹದಿಂದಲಿ ವರಮಥನದಿ ಇತ್ತೆ ಅಮೋಘವಸ್ತುಗಳೆಲ್ಲಾ4 ಉತ್ತಮ ಗ್ರಂಥವನಧೀ ಮಥನದಿ ಉತ್ತಮ ವಸ್ತುಗಳನಿತ್ತೆಯೊ ತತ್ತ್ವಪ್ರಕಾಶಿಕಾ ಮಹಾಲಕುಮಿಯು ಚಂದಿರನೇ ಪ್ರಮೇಯದೀಪಿಕಾ ಸುಧೆಯೇ ನ್ಯಾಯಸುಧಾಗ್ರಂಥ ಶ್ರೀ ಕೌಸ್ತುಭದಂತಿಹ ನ್ಯಾಯದೀಪಿಕಾ 5 ದುರುಳ ಮಾಯಾಖಂಡ ನಾಯುಧವೂ ಸರ್ವಜೀಯನೆ ಐರಾವತದಂತೆ ಋ ಗ್ಭಾಷ್ಯಟೀಕಾ ನ್ಯಾಯವಿವರಣವು ಉಚ್ಛೈಶ್ರವಸ್ಸು 6 ಕರ್ಮನಿರ್ಣಯ ಟೀಕಾ ವಜ್ರಾಯುಧ ಆ ಮಹಾಪಾರಿಜಾತ ವಿಖ್ಯಾತಾ ಶ್ರೀಮದ್ವಿಷ್ಣು ತತ್ತ್ವ ನಿರ್ಣಯ ಟೀಕೆಯು ಕಲ್ಪವು ಉಪನಿಷತ್ ಭಾಷ್ಯ ಟೀಕೆಯು 7 ಈಶಾವಾಸ್ಯ ಭಾಷ್ಯ ಟೀಕಾ ಸಂತಾನವೆಂಬೋ ಮಹಾವೃಕ್ಷಾ ಪ್ರ ಬಿಸಜ ಮಂದಾರ ಪ್ರಮಾಣ ಪದ್ಧÀ್ದತಿ ಹರಿಚಂದನಕೆ ಸಮನಾದ ವಾದಾವಳಿ 8 ಪಾಕಶಾಸನಾಂಶಾ ಕರುಣಿಸು ಶ್ರೀಕರಪದಪಾಂಸ ಯತೀಶಾ ನಾರ ಪತಿಯೆ ಶ್ರೀಕಾಗಿನೀ ತೀರದಿ ಏಕಾಂತದಿ ನಿಂದೆ ಲೋಕ ವಂದಿತ ದೇವಾ 9 ಮಂದಭಾಗ್ಯಜನರಾ ಪರಮಾ ನಂದದಿಂದಲಿ ನೋಡಿ ದಯಮಾಡಿ ತಂದೆಯಂದದಿ ಕಾಯ್ದಾನಂದವೀವೆ ನಿತ್ಯಾ10 ಪರಮಪಾತಕಿ ನಾನು ಗುರುವೆ ತವ ಪಾ ದ ರಕ್ಷಕವಚವ ತೊಡಿಸೊ ಉಳಿಸೋ ನಿರುತ ಶರಣರ ಕಾಯ್ವ ಶ್ರೀ ವೆಂಕಟೇಶನ ಪ್ರೀಯಾಉರಗಾದ್ರಿವಾಸವಿಠಲನ ದಾಸಾ 11
--------------
ಉರಗಾದ್ರಿವಾಸವಿಠಲದಾಸರು