ಒಟ್ಟು 824 ಕಡೆಗಳಲ್ಲಿ , 96 ದಾಸರು , 713 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇಂದು ಪನ್ನಗಶಯನ ಪ ಚೆನ್ನ ಪಾದಂಗಳಲಿ ಚಿನ್ನದಾ ಕಡಗರುಳಿಹನ್ನೆರಡು ನಿರುಗೆಗಳ ಹೊನ್ನ ಪೀತಾಂಬರಕೆರನ್ನಮಯದೊಡ್ಯಾಣವನ್ನು ಸುತ್ತಿದ ನಡುವುಚನ್ನ ಪದಗಳ ಮುಟ್ಟುವನ್ನಕ್ಕ ವನಮಾಲೆ 1 ನನ್ನೀಯಿಂದೆಸೆವ ಕಂಪನ್ನ ಕೌಸ್ತುಭದೆದೆಯುಕನ್ನಿಕೆಯು ಲಕ್ಷುಮಿಯ ಚಿಹ್ನ ಧರಿಸಿದ ವಕ್ಷಘನ್ನ ಚಕ್ಕರ ಶಂಖ ಸನ್ನೆ ಕೌಮೋದಕಿಯುಕನ್ನೈದಿಲೆಯ ವಿಡಿದ ಇನ್ನಂತು ನಾಲ್ಕೈಯು 2 ಪನ್ನೀರು ಬೆರೆತು ಬಾವನ್ನ ಕಂಪಿನ ಮೈಯುಬೆನ್ನಗಲ ಹೆಗಲು ದುಂಡನ್ನ ತೊಳಗುವ ಕೊರಳುಕನ್ನವುರ ಕುಂಡಲಂಗಳನ್ನು ಧರಿಸಿದ ಕಿವಿಯುಜೊನ್ನ ಪಸರಿಪ ನಗೆಯ ಮನ್ನಿಸುವ ಕೆಂದುಟಿಯು 3 ಮುನ್ನೂರು ಕೋಟಿ ರವಿ ಸನ್ನಿಭದ ಚೆಲ್ವ ಮೊಗಕನ್ನೀಲ ಕಣ್ಣು ಚಂದನ್ನ ಎಳಸಿನ ಮೂಗುಉನ್ನತದ ಹಣೆಮೇಲೆ ಸೊನ್ನಿ ಕತ್ತುರಿ ತಿಲಕಸೊನ್ನ ಮುಕುಟವ ಧರಿಸಲಿನ್ನುಳಿದ ಕರಿಗುರುಳು 4 ಮಾನವ ನಾನು ಇನ್ನೆಂತು ಬಣ್ಣಿಸುವೆನಿನ್ನ ಕೃಪೆಯಿಲ್ಲದಿದನೆನ್ನಲಪ್ಪುದೆ ದೇವಚನ್ನ ಗದುಗಿನ ವೀರನಾರಾಯಣನೆ ಮಣಿವೆ 5
--------------
ವೀರನಾರಾಯಣ
ಇಂದು ಧರಿಯೊಳು ಬ್ರಹ್ಮಾನಂದವನು ತುಂಬಿ ತುಳುಕತಿಹ್ಯಾನಂದಮಯ ಕಾಯದೊಳು ಕೌತುಕವು ನಾದಬಿಂದು ಕಳಿಯಲಿ ಸ್ತುತಿಸಲೆನ್ನಳವಲ್ಲ ಕ್ಷಿತಿಯೊಳು ಘನಮಹಿಮೆ ಅತಿಹರುಷವನು ದೋರುತಿಹ್ಯ ಸದ್ಗತಿ ಸುಖವು ಗುರುದಾಸರು 1 ಓಂಕಾರ ಮೊದಲಾದ ಶ್ರುತಿವೇದ ಘೋಷಗಳು ಧಿಮಿಧಿಮಿಸುವ ಮಹಾಶಬ್ದಗಳು ವಾದ್ಯಗಳು ಕೇಳುವದು ನೀದೃಶ್ಯೆಲಿ ಗರ್ಜಿಸುವ ಭೃಂಗಿಶಂಖನಾದ ಧ್ವನಿಯಗಳು ಭೋರಿಡುವ ಭೇರಿ ಮೃದಂಗ ವೇಣಿಯಗಳು ಚಿಣಿ ಚಿಣಿ ತಂತ್ರ ಮೊದಲಾದ ಸಂಕಾರಗಳು ಕೇಳಿ ಪಾವನವಾದೆನು 2 ಬೆರೆದು ನೋಡಲು ಅಂತರಾತ್ಮದೊಳು ಪ್ರಭೆಯಗಳು ಥಳಥಳಿಸುವಾ ಮಹಾತೇಜಗಳು ಪುಂಜಗಳು ಹೇಳಲಿನ್ನೇನದ ಹೊಳವಗಳು ಸುಳವಗಳು ನೋಡುವದು ಅನಿಮಿಷದಲಿ ರವಿ ಶಶಿ ತಾರೆಗಳು ಸೂಸುತಿಹ್ಯ ಕಿರಣಗಳು ಭಾಸಿಸುವ ನಾನಾವರ್ಣಗಳು ಛಾಯಗಳು ಬೆರಗಾದೆÀನಿಂದ 3 ವರ್ತಿಸುತ್ತಲಿಹ ಪ್ರವೃತ್ತಿ ನಿವೃತ್ತಿಗಳು ಅಂತರಾತ್ಮದ ವಾಯುಸ್ತುತಿಯಗಳು ಗತಿಯಗಳು ತಿಳಿವದೀ ಪ್ರಣಮ್ಯಲಿ ಸೂಸುತಿಹ ಶ್ವಾಸವುಚ್ಛ್ವಾಸನಿಯ ಭಾಸಿಗಳು ಶೋಭಿಸುವ ಜೀವನದ ಮಂತ್ರ ಸರ ಮಾಲೆಗಳು ಪಾವನವಾದೆನು 4 ಕರದ್ವಯಂ ಮುಗಿದು ವರಗುರುಚರಣಕಮಲಕಿ ನ್ನೆರಗಿ ಪರಮಾನಂದ ಹರುಷದಿ ಶಿರಸದಿ ಶ್ರೀಗುರುಮೂರ್ತಿಯ ನೆನೆವೆನು ಸದ್ಭಾವದಿಂದ ಸದ್ಗುರು ಪಾದಮಂಪಿಡಿದು ಸದ್ಬ್ರಹ್ಮರಸದೊಳು ಮುಳುಗಿ ಸದ್ಭಕ್ತಿಯಲಿ ಸದ್ಗತಿ ಸಾಧನವು ಸಾಧಿಸಿಹ್ಯ ಮಹಿಪತಿಯು ] ಶ್ರೀ ಗುರುಕೃಪೆಯಲಿನ್ನು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ಸಾರ್ಥಕವಾಯಿತು ಎನ್ನ ಜನನಾ ಚಂದ್ರ ಪುಷ್ಕರಣಿಯ ವಾಸ ರಂಗನ್ನ ಕಂಡು ಪ ಸುತ್ತೇಳು ಪ್ರಾಕಾರಗೋಪುರ ಮಹಾದ್ವಾರ ರತ್ನದ ಕವಾಟ ತೋರಣಗಳು ಕತ್ತಲೆ ಹರನಂತೆ ಕಣ್ಣಿಗೆ ತೋರುತಿದೆ ತುತ್ತಿಸಲಳವೆ ಅನಂತ ಜನುಮಕೆ 1 ಸಾಲು ಬೀದಿಗಳು ಒಂದೊಂದರ ಮಧ್ಯದಲಿ ಸಾಲು ಮಂಟಪ ಮುತ್ತಿನ ಚಪ್ಪರಾ ಕೀಲುಮಣಿಗಳಿಂದ ಬಿಗಿದ ಸೊಬಗು ಹೊಂ ಬಾಳೆಸ್ತಂಭಗಳೆಡಬಲದಲ್ಲಿ ಒಪ್ಪಲು 2 ಮುಂದೆ ಗರುಡಗಂಭ ಪವಳದ ಗವಾಕ್ಷಿ ಹಿಂದೆ ನೆರೆದ ಬಲು ಪರಿಯಂಗಡಿ ಸಂದಣಿಯಿಂದ ಭೂಸುರರು ಸ್ತೋತ್ರವ ಪೇಳೆ ಒಂದೊಂದು ಬಗೆಯಲ್ಲಿ ವಂದಿಸುವುದು ಕಂಡು 3 ಚಂದನ್ನನಿಂದೆ ಪೋಗಾಡಿದ ಸರೋವರ ಒಂದು ಸುರವನ್ನೆ ವೃಕ್ಷದಲ್ಲಿ ಮಿಂದು ಸಜ್ಜನರು ಕೈಗಳ ಮುಗಿದು ನಮೊ ಎಂದು ಕೊಂಡಾಡುವರು ವೇಗದಲ್ಲಿ 4 ಪ್ರಣವಾಕಾರವಾದ ವಿಮಾನ ಅದರ ಮೇಲೆ ಮಿನುಗುವ ವಾಸುದೇವಾದಿಗಳ ಮನದಣಿಯ ಕೊಂಡಾಡಿ ಮುದದಿಂದ ಪಾಡುತ್ತಾ ಫಣಿ ತಲ್ಪನಾಥ ಶ್ರೀ ಪರಮಪುರುಷನ ಕಂಡು 5 ಕಮಲಾಕ್ಷ ಕುಳಿರತೆರದಿ ಕದಪು ಕರ್ಣ ಕುಂಡಲ ಉರದಲ್ಲಿ ಕೌಸ್ತುಭ ಹಾರ ಪದಕ ಪಾವನ ಪಾದಾ6 ನಸುನಗೆ ಚತುರ್ದಶ ಲೋಕವ ಬಿಸಜ ಕರಗಳು ಭೂಷಣದಿಂದಲಿ ಬಿಸಜ ಭವನ ಪಡೆದು ನಾಭಿ ವಸನಕಟಿ ಮಿಸುಣಿಪ ವಡ್ಯಾಣ ಸರ್ವ ಲಕ್ಷಣನಾ 7 ಕಾಲ ಕಡಗ ಪೆಂಡೆ ಪೊಂಗೆಜ್ಜೆ ಅಂದಿಗೆ ವಾಲಾಯ ಪದತಳದಲಿ ರೇಖೆ ವಾಲಗ ಸಿರಿದೇವಿ ಪ್ರೀತಿಯಿಂದಲೆ ಮಾಡೆ ಸುರರು ಸಮ್ಮುಖದಲಿ ನುತಿಸೆ 8 ಉಭಯ ಕಾವೇರಿ ನಡುವೆಯಿದ್ದು ದಕ್ಷಿಣ ಅಭಿಮುಖವಾಗಿ ಪವಡಿಸಿದ ವಿ ಭೀಷಣದ ವರದ ರಂಗ ಮಂದಿರ ನಿಲಯಾ ವಿಬುಧೇಶ ವಿಜಯ ವಿಠ್ಠಲ ರಂಗನ ಕಂಡು9
--------------
ವಿಜಯದಾಸ
ಇಂದೆನ್ನ ಜನ್ಮ ಪಾವನವಾಯಿತು ತಂದೆ ಶ್ರೀಗುರು ನಿಮ್ಮ ಚರಣ ದರುಶನದಿ ಧ್ರುವ ಅರ್ಕ ಮಂಡಲಗಳು ರವಿಶಶಿ ಕಿರಣವು ಝಳಝಳಿಸುವ ಪ್ರಭೆ ನೋಡಿ ಅನಿಮಿಷದಾದೃಷ್ಟಿಲೆನ್ನ ಲಕ್ಷಿಯೊಳು ಸಾಕ್ಷಾತ್ವಸ್ತು ಗತಿಯು ನಿಮ್ಮ ಪ್ರಕಾಶವನು ಕಂಡಾಂಧತ್ವಗಳದಿನ್ನು 1 ಓಂಕಾರ ಮೊದಲಾದ ದ್ವಾದಶ ನಾದದಾ ಭೇದದಾ ಘೋಷವನು ಕೇಳಿನ್ನೀ ದೃಶ್ಯದಾ ಕರ್ಣಲೆನ್ನಾ ಲಯಲೀಲೆಯೊಳು ಸಾದೃಶ್ಯ ಮೂರ್ತಿಯು ನಿಮ್ಮ ಶ್ರುತಿಗಳು ಕೇಳಿ ಬಧಿರತ್ವವಾಗಳಿದಿನ್ನು 2 ಜಪವನ್ನು ತಿಳಿದು ಪ್ರಣಮ್ಯಲೆನ್ನ ಮೂರ್ತಿ ನಿಮ್ಮ ಮಂತ್ರವನು ತಿಳಿದು ಪಿಶಾಚತ್ವ ಕಳೆದಿನ್ನು 3 ಸ್ತುತಿ ಸ್ತೌತ್ಯ ಸ್ಮರಿಸುವ ದಿವ್ಯನಾಮಾಮೃತವ ನುಡಿದು ಪಯಸ್ವನೀ ಜಿಹ್ವೆಲೆನ್ನ ಮೂರ್ತಿ ನಿಮ್ಮ ಸ್ಮರಿತ ಗತಿವರಿತು ಮೂಕತ್ವ ಕಳೆದಿನ್ನು 4 ಚಿನ್ಮಯ ಚಿದ್ರೂಪ ಕಂಡು ಬೆರಗಾಗಿ ಮನ ಭ್ರಾಂತಿ ಅಜ್ಞಾನವನ್ನು ಜರಿಯಲೆನ್ನ ಏಕೋದೇವ ಈತ ವಿಶ್ವಾತ್ಮ ಹಂಸನೆಂದು ಸಂದೇಹ ಸಂಕಲ್ಪ ಬಾಧೆಯಾಗಳದಿನ್ನು 5 ಭಕ್ತಿ ಮುಕ್ತಿ ಉದಾರಿ ಆತ್ಮದಲಿ ಸಾರಿದೋರಿ ನಿಜ ಬೋಧಾಮೃತ ಬೆರೆದು ತಾರಿಸಲೆನ್ನ ಗರ್ಭಪಾಶದ ಬಲಿಯು ಹರಿದು ಧರೆಯೊಳಿನ್ನು ಉತ್ಪತ್ತಿ ಸ್ಥಿತಿ ಲಯದ ಬೀಜವನ್ನು ಹುರಿದಿನ್ನು 6 ಭಾಸ್ಕರಸ್ವಾಮಿಯ ಕರುಣಾಳು ಮೂರ್ತಿಯ ಮೂಢ ಮಹಿಪತಿಯ ಕೃಪಾಂಬುಧಿಯು ಕರುಣದಭಯ ಹಸ್ತವನು ಶಿರಸದಲ್ಲಿಡಲಾಗಿ ಧನ್ಯನಾದೆನು ಸತಿಪತಿ ಸಹಿತವಾಗಿನ್ನು 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇನ್ನೆಂದಿಗು ಮಾಡದಿರು ಶ್ರೀ ಕೃಷ್ಣ ಸರ್ವೋತ್ತಮನೆಂಬುವರಾ ಸಂಗನುದಿನ ಬಿಡದಿರು ಪ ಕೂಡಿರು ಇನ್ನು ವೇದ ಬಾಹ್ಯರ ದುರ್ಭೋಧಿಗಳ ಸಂಗೆಂದಿಗು ಹೋಗದಿರು ಶ್ರೀಧರನಂಘ್ರಿಯ ಚಿತ್ತದಿ ಬಿಡದಿರೊ ಶರಣರ ಹೊಂದಿರು ಮಂಡಲಿಸೇರದಿರು 1 ದುರ್ಮನುಜರಾದ ಈ ದುಷ್ಟದುರಾತ್ಮರ ಮಾತನೆ ಕೇಳದಿರು ಅನಿಮಿಷ ಬಿಡದಾ ಸಂತರ ಪಾದವು ಅರ್ಚಿಸುತಲಿ ಇರು ದುರ್ಗುಣವುಳ್ಳ ಪರಮ ಪತಿತ ಜನರ ಪಥವನೆ ಬಿಟ್ಟಿರು 2 ಸಕಲ ವೇದ ಶಾಸ್ತ್ರ ಮಂತ್ರ ಮರ್ಮಗಳ ಸರ್ವದಾ ತಿಳಿದಿರು ಇನ್ನು ವಿಕಟ ಕುಭಕ್ತರ ಶಾಸ್ತ್ರಗಳೆಂಬುವನೆಂದಿಗು ನೋಡದಿರು ರುಕ್ಮಿಣಿವರ ಶ್ರೀ ಹೆನ್ನೆವಿಠ್ಠಲನ ಭಕುತಿಯ ಬಿಡದಿರು ಕೂ------ಕತರಾದ ಕುಚೇಷ್ಟರ ಕೂಡಿ ಭಂಗವ ಬಡದಿರು 3
--------------
ಹೆನ್ನೆರಂಗದಾಸರು
ಇನ್ಯಾತಕನುಮಾನವಯ್ಯಾ ಪ ಅನ್ಯಥಾ ಗತಿ ಕಾಣೆ ನಿನ್ನ ಚರಣಗಳಾಣೆ ಅ.ಪ. ನಾಶರಹಿತನೆ ನಮಗೆ ಏಸೇಸು ಕಲ್ಪಕ್ಕು ವಾಸ ಏಕತ್ರದಲ್ಲಿ ನೀ ಸಾಕ್ಷಿಯಾಗಿದ್ದು ದಾಸನಾದವಗಪ್ರ- ಯಾಸದಿ ಫಲಗಳುಣಿಸಿ ಲೇಶ ಘನಮಾಡಿ ಸಂತೋಷಪಡುವಾ ನಿನ್ನ ದ್ವೇಷಿ ನಾನಲ್ಲವಯ್ಯ ದೇಶಕಾಲಾದಿಗಳಿಗೀಶ ನೀನೆಂದರಿದು ದಾಸನಾಗಿರುವೆನೆಂದಾಶೆ ಪುಟ್ಟಿದ ಬಳಿಕ 1 ನಿತ್ಯ ತೃಪ್ತನೆ ನಿನ್ನ ಕೃತ್ಯಕೇನೆಂಬೆನೋ ಸತ್ಯಸಂಕಲ್ಪ ಹರಿಯೇ ಮೃತ್ಯುಮಾರಿಗಳೆನಗೆ ಹತ್ತಿಕೊಂಡದರಿಂದ ಸತ್ತುಪುಟ್ಟುವೆಯಿನ್ನು ದತ್ತಕರ್ತೃತ್ವ ಬೆನ್ಹತ್ತಿಕೊಂಡದರಲ್ಲಿ ಅತ್ಯಪರಾಧಿಯಂದತ್ತ ಮೊಗದಿರುಗದಿರು ಭೃತ್ಯವತ್ಸಲನೆಂದಗತ್ಯ ಮನಸೋತ ಬಳಿಕ 2 ವೇದವೇದ್ಯ ಸ್ವಗತ ಭೇದವರ್ಜಿತ ಪೂರ್ಣ ಮಾಧವ ಮಹಿದಾಸ ಆದಿನಾರಾಯಣ ವಿನೋದ ವಿಷ್ವಕ್ಸೇನ ಶ್ರೀದವಿಠಲಾ ನಿನ್ನ ಕ್ರೋಧ ವರರೂಪ- ವಾದ ವಾರ್ತೆಯು ಕೇಳಿ ಧೈರ್ಯಬಿಡದಾ ಬಳಿಕಿನ್ನು 3
--------------
ಶ್ರೀದವಿಠಲರು
ಇಲ್ಲದ ಪದಾರ್ಥಕ್ಕೆ ಏನೇನೋ ಹೆಸರು ಬಿಡಿ ಪ ಬಲ್ಲೆ ಇವೆಲ್ಲಾ ನಾನೆಂಬುವರು ದುರ್ಜನರು | ನಿಜ ಅ.ಪ ನಾವೇ ದೇವರ ಮಾಡಿದೆವೋ ದೇವರು ನಮ್ಮನು ಮಾಡಿದನೋ ಭಾವಿಸಿ ನೋಡಿದರೆ ದೈವ ನಾವಲ್ಲದ್ಯಾರು 1 ವಿಷ್ಣು ಈಶ್ವರನು ಬ್ರಹ್ಮ ಎಲ್ಲಿರುವರು ನಾವೆ ವಿಶ್ವವ್ಯಾಪಕರು ವಿವಿಧ ರೂಪವಾಗಿಹೆವು 2 ಸರ್ವವೂ ಸುಳ್ಳವನಿಗೆ 3 ಬೆಳಕಿಗೆ ಕತ್ತಲು ವೈರಿ ಕತ್ತಲಿಗೆ ಬೆಳಕು ಶತ್ರು ಹೊಳವಿಗಿಂತಲೂ ಕತ್ತಲೆಯೇ ಲೇಸು ನಮಗೆ 4 ಪರಿಯಲಿ ನಿರುತ ಸಂಸಾರ ಚಕ್ರದಿ ದುರುಳರು ತೊಳಲುವರು 5
--------------
ಗುರುರಾಮವಿಠಲ
ಈತನೀಗ ವಾಸುದೇವನು ಲೋಕದೊಡೆಯ ಈತನೀಗ ವಾಸುದೇವನು ಪ ಈತನೀಗ ವಾಸುದೇವನೀ ಸಮಸ್ತ ಲೋಕದೊಡೆಯ ದೂತಗೊಲಿದು ತೇರನೇರಿ ತೇಜಿ ಪಿಡಿದು ನಡೆಸಿದಾತ ಅ ದನುಜೆಯಾಳ್ದನಣ್ಣನಯ್ಯನ ಪಿತನ ಮುಂದೆ ಕೌರವೇಂದ್ರನನುಜೆಯಾಳಿದವನ ಶಿರವ ಕತ್ತರಿಸುತ - ತನ್ನಅನುಜೆಯಾಳಿದವನ ಬೆಂಕಿ ಮುಟ್ಟದಂತೆ ಕಾಯ್ದ ರುಕ್ಮನನುಜೆಯಾಳಿದವನ ಮೂರ್ತಿಯನ್ನು ನೋಡಿರೊ1 ನರನ ಸುತನರಣ್ಯದಲ್ಲಿ ಗಿರಿಯೊಳ್ನಿಂತು ತನ್ನ ರೋಷದಿಶರಗಳನ್ನು ತೀಡುತಿಪ್ಪನ ಯೋಚಿಸಿಭರದಲವನ ಕರೆದು ಕುರುಹು ತೋರಿ ಪತ್ರವನ್ನು ಹಾರಿಸಿದವನಶಿರವನ್ನು ಛೇದಿಸಿದ ದೇವ ಕಾಣಿರೊ 2 ವೈರಿ ತೊಡೆಯ ಛೇದಿಸೆಂದು ಬೋಧಿಸಿಕಷ್ಟವನ್ನು ಕಳೆದು ಭಕ್ತರಿಷ್ಟವನ್ನು ಕಾದ ಉ-ತ್ಕøಷ್ಟ ಮಹಿಮನಾದ ದೇವ ಕಾಣಿರೊ 3 ಕ್ರೂರವಾದ ಫಣಿಪಬಾಣವನ್ನು ತರಣಿಜನೆಚ್ಚಾಗವೀರ ನರನತ್ತ ಬಪ್ಪುದನ್ನು ಈಕ್ಷಿಸಿ ಧಾರಿಣಿಯ ಪದದೊಳೌಕಿ ಚರಣಭಜಕ ನರನ ಕಾಯ್ದಭಾರಕರ್ತನಾದ ದೇವನೀತ ಕಾಣಿರೊ4 ವ್ಯೋಮಕೇಶನಿಪ್ಪ ದೆಸೆಯ ಸರ್ವ ಜಗಕೆ ತೋರುತಸಾಮಜವನೇರಿ ಬಹನ ಶಕ್ತಿಯನೀಕ್ಷಿಸಿಪ್ರೇಮದಿಂದ ಉರವನೊಡ್ಡಿ ಡಿಂಗರಿಗನ ಕಾಯ್ದ ಸಾರ್ವ-ಭೌಮ ಬಾಡದಾದಿಕೇಶವನ್ನ ನೋಡಿರೊ 5
--------------
ಕನಕದಾಸ
ಉತ್ಸವದಲಾಹ್ನಿಕವ ಕಡು ಜನರು ಕೇಳಿರಯ್ಯ ಪ. ಅರುಣ ಉದಯದೊಳೆದ್ದು ಆ ದ್ವಾರಪಾಲಕರುಭರದೆ ಘಂಟೆ ಸುವಿಘ್ನ ಮಾಡೆತರತರದ ಹರಿದಾಸರು ತಾಳ ಮೇಳಗಳಿಂದಪರಿಪರಿಯ ಗಾನ ಪಾಡೆ ತ್ವರಿತ ವಾದ್ಯಗಳಿಂದ ತರುವಾಯ ಭೋರಿಡೆ ಮುರಹರನುಪ್ಪವಡಿಸೆತರುಣ ಯತಿಗಳು ಎದ್ದು ಸ್ನಾನ ಜಪಗಳ ಮಾಡಿನಿರುತ ಶಂಖ ಭ್ರಮಣೆ ಮಾಡೆ ನೀಟಾಗಿಒಪ್ಪುತಿಹ ಉಡುಪಿಯ ಶ್ರೀಕೃಷ್ಣನ 1 ಘೃತ ನೆನೆಕಡಲೆಯುಶುದ್ಧಾದ ಪಾಲ್ಮೊಸರು ಶುಂಠಿ ಸಕ್ಕರೆಲಡ್ಡಿಗೆತಂದ ನೈವೇದ್ಯವ ಸವಿದು ತಾ ಪೂಜೆ ಮಾಡಿಸಿಕೊಂಬ 2 ಪದ್ಮನಾಭಗೆ ಬೇಗ ಪುರುಷಸೂಕ್ತದಭಿಷೇಕಮುದದಿಂದ ಮಾಡಿದ ಬಳಿಕವಿಧಿಯ ಪೂರ್ವಕವಾಗಿ ಅಗಿಲು ಗಂಧ ತುಲಸಿಮಾಲೆಅಧಿಕವಾಗಿ ಸಮರ್ಪಿಸಿ ಒದಗಿದ್ದ ಶುಂಠಿ ಬೆಲ್ಲ ಒಳಿತಾದ ಅನ್ನ ಸೂಪದಧಿ ಕ್ಷೀರ ಕದಳಿಫಲವು ಮುರಮರ್ದನನುಚೆಲುವ ತಾ ಹಂಸಪೂಜೆಯ ಕೊಂಬ ತದನಂತರದಲಿ ಮೃತ್ತಿಕೆಯ ತಾ ಗಣಿಯಕಟ್ಟಿಸಿಕೊಂಬ 3 ದಧಿ ದಿವ್ಯ ಮಧು ಸಕ್ಕರೆ ಸೀಯಾಳವು ಇಂ-ದಿರೇಶಗೆ ಬೇಗ ಶಿರದ ಮೇಲ-ಭಿಷೇಕ ಮುದದಿಂದ ಮಾಡಿದ ಬಳಿಕತಿರುಗಿ ನೈವೇದ್ಯವನು ತೀವ್ರದಿಂದಲೆ ಸ-ಮರ್ಪಿಸಿ ಚೆಲುವ ಮಂಗಳಾರತಿಯಿಂದಪಂಚಾಮೃತದ ಪೂಜೆಗೊಂಬ 4 ಜಲಜನಾಭಗೆ ಉಷ್ಣಜಲವ ತಂದ್ಹದ ಮಾಡಿಲಲಿತವಾಗಿ ಎರೆಯುತಒಳಿತಾದ ಹೆಸರ್ಹಿಟ್ಟಿನಲಿ ಒರೆಸಿ ಮೈಯನೆತೊಳೆದು ಸುಲಭಗೆ ಪಾಲನುಣಿಸಿ ಬಳಿಕಬಾಲಉಡಿಗೆಯಿಟ್ಟು ಬಹುನೈವೇದ್ಯವನರ್ಪಿಸಿಚೆಲುವ ಉದ್ವಾರ್ಚನೆ ಪೂಜೆಚೆಂದಾಗಿ ಮಾಡಿಸಿಕೊಂಬ 5 ಮಧ್ವ ಸರೋವರಜಲವು ಹೊಳೆವÀ ಚಿನ್ನ ಕಲಶÀದಲಿಶುದ್ಧದಲಿ ಶೋಧಿಸಿ ತುಂಬಿಸಿಬದ್ಧ ಘಂಟೆನಾದದಲಿ ಬಹುಬೇಗದಲಿಬಂದು ಸನ್ನಿಧಿಯಲಿ ಪೂಜಿಸಿವಿಧುರಥನೆ ಶಂಕರಥನೆ ಪುರುಷಸೂಕ್ತÀದಭಿಷೇಕಮುದದಿಂದ ಮಾಡಿದ ಬಳಿಕ ಸಜ್ಜಿ ಘೃತದೋಸೆ ಬೆಣ್ಣೆ ಸಾರು ನೈವೇದ್ಯವ ಸವಿದು ಚೆಲುವಮಂಗಳಾರತಿಯಿಂದ ಮುದದಿ ತೀರ್ಥಪೂಜೆಗೊಂಬ 6 ಉರು ಪದಕಾಭರಂಣಗಳು ಉನ್ನಂತತೋಳ್ಬಂದಿಕರಮುದ್ರೆ ಕಂಕಣಗಳು ಚರಣಾರವಿಂದಗಳಿಗೆ ಚಾರುಚಿನ್ನದ್ಹಾವಿಗೆಕಿರುಗೆಜ್ಜೆ ಕಾಲಲಂದುಗೆವರ ಪೀತಾಂಬರ ಕಟಿಗೆ ವಡ್ಯಾಣ ನೇವಳ ಇಟ್ಟುನಿರುತ ಸುವರ್ಣದ ಕವಚವುಕೊರಳ ಕೌಸ್ತುಭಹಾರ ಕೋಮಲ ಸುವರ್ಣಕುಂಡಲಸಿರಿಮೂರುತಿ ಸಣ್ಣ ನಾಮ ಶಿರದ ಜಾವಳ ಜಡೆ ಕಡಗೋಲು ನೇಣುಸಹಿತ7 ದಧಿ ಶುಂಠಿ ನಿಂಬೆರಸ ತಕ್ರಜಗದೇಕ ಸವಿದ ಪರಿಯ 8 ಬಗೆಬಗೆಯ ಮಂಗಳಾರತಿ ಬಾರಿಬಾರಿಗೆ ಮಾಡಿ ಚಾ-ಮರ ದರ್ಪಣಗಳೆಸೆಯೆ ನಗೆಮುಖದ ಕೃಷ್ಣ-ನಂಘ್ರಿಗೆ ಷೋಡಶ ಪೂಜೆಯ ಮಾಡಿಮುಗಿಸಿ ಗುರುರಾಯ ಬರಲುಹನುಮಂತದೇವರಿಗೆ ಹಸನಾದ ಭಕ್ಷ್ಯಭೋಜ್ಯಅನುದಿನದಲರ್ಪಿಸಿ ಪೂಜಿಸಿಮುನಿ ಮಧ್ವರಾಯರಿಗೆ ಮುದದಿಂದಲರ್ಪಿಸಿ9 ಅರಳು ಆರಚ್ಚು ಬೆಲ್ಲವುಆ ಕಾಲದಲರ್ಪಿಸಿ ಪೂಜಿಸಿ ಕರಣದಲಿ ನೋಡಿ ನಗುವ 10 ಪುಟ್ಟ ಕೃಷ್ಣರಾಯರಿಗೆ ಹೊನ್ನ ಕವಚವ ತೊಡಿಸಿಇಟ್ಟ ರನ್ನದ ಕಿರೀಟವುದಿಟ್ಟಾದ ಪದಕಂಗಳು ದಿವ್ಯಮುತ್ತಿನ ಸರಕಟ್ಟಿದ್ದ ಪೂಮಾಲೆ ಎಸೆಯೆಶ್ರೇಷ್ಠವಾದ ಧೂಪದೀಪ ಶ್ರೀಪತಿಗೆ ದೋಸೆ ಬೆಣ್ಣೆಗಟ್ಟುರುಳಿ ನೈವೇದ್ಯವು ಕಟಕಟನೆಶುಂಠೀಕಷಾಯುಂಡು ಬಾಯಿ ತೊಳೆದುತಟ್ಟನೆ ರಾತ್ರಿ ಪೂಜೆಯಗೊಂಡು ತಾ ಪಲ್ಲಕ್ಕಿಯೇರಿ ಬರುವ11 ಅರಳು ಬಹುಕೊಬರಿ ಚೂರುಗಳು ಆ ಕಾಲದಲಿ ಸೂಸಿ ಪೂಜಿಸೆ ಕರುಣದಲಿ ನೋಡಿ ನಗುವ 12 ಧೀರನಿಗೆ ಚತುರ್ವೇದ ದಿವ್ಯಶಾಸ್ತ್ರಪುರಾಣ ಚೆಲುವಗಷ್ಟಕ ಗೀತವುಭೇರಿಮೌಳಿ ಮೌಳಿವಾದ್ಯಮೌಳಿಮೌಳಿ ಚಕ್ರವಾದ್ಯತಾರತಮ್ಯದ ಸರ್ವವಾದ್ಯಗಳೆಸೆಯೆತಾರಿ ಸೇವೆಯ ಮಾಡಿ ಸ್ವಾಮಿ ವೀಳ್ಯ ಮಂತ್ರಾಕ್ಷತೆ ಕಾರುಣ್ಯದಲಿಬೆರೆಸಿ ಮಾರಜನಕಗೆ ಏಕಾಂತ ಸೇವೆಯ ಮಾಡಿ ನವಮಾರಜನಕನ ಹಂಪೂಜೆಯ ಜಾಗ್ರತೆಯಲಿ ನೋಡಿ ನಗುವ 13 ಹಡಗಿನಿಂದಲಿ ಬಂದು ಕಡಲ ತಡಿಯಲಿ ನಿಂದುಬಿಡದೆ ಯತಿಗಳ ಕೈಯ ಬಿಂಕದಿ ಪೂಜೆಗೊಂಬಆದಿ ಕೃಷ್ಣನ ಆಹ್ನಿಕವನು ಆಧಾರದಲಿಓದಿವಿನೋದದಲಿ ಪಠಿಪ ಜನರಿಗೆಆಧಿವ್ಯಾಧಿಗಳಟ್ಟಿ ಬಹು ಭಾಗ್ಯಗಳ ಕೊಡುವಮಾಧವನ ಕೃಪೆಯಿಂದಲಿವಾದಿರಾಜರಿಗೊಲಿದು ವಚನ ಶುದ್ಧೋಕ್ತದಲಿ ಹೇಳುವ ಜನರಿಗೆಬರುವ ದುರಿತವ ಕಳೆದು ಮೇಲಾಗಿ ರಕ್ಷಿಸಿಕೊಂಬ ಹಯವದನ 14
--------------
ವಾದಿರಾಜ
ಉರಗಗಿರಿವಾಸ ವಿಠಲ | ಪೊರೆಯ ಬೇಕಿವಳಾ ಪ ಪರಮಕರುಣಾಮೂರ್ತಿ | ಪ್ರಾರ್ಥಿಸುವೆ ಹರಿಯೇ ಅ.ಪ. ನಿರತ ನಿನ ಸ್ಮರಿಪರಘ | ಪರಿಹರಿಪೆ ನೆಂಬನುಡಿಪರಮ ಸಾರ್ಥಕ ಗೊಳಿಸೊ | ತರಳೇ ಇವಳಲ್ಲಿಕರುಣ ಸಾಗರ ನಿನ್ನ | ಬೇರೊಂದಪೇಕ್ಷಿಸದೆ |ಸರಸದಲಿ ತವರೂಪ | ಚಿಂತೆಯಲ್ಲಿಹಳೋ 1 ಮರುತ ಮತವನೆ ಪೊಂದಿ | ತರತಮದ ಸುಜ್ಞಾನ ಪರಪಂಚಬೇಧಗಳ | ಅರಿತು ಭಜಿಸುವಳೋನೆರೆನಂಬಿ ತವಪಾದ | ಹಾರೈಸುತಿರುತಿಹಳವರ ಸುಸಾಧನವನ್ನೆ | ಅಭಿದೃದ್ಧಿಗೊಳಿಸೊ 2 ಪತಿಸುತರು ಹಿತರಲ್ಲಿ | ವ್ಯಾಪ್ತ ಶ್ರೀಹರಿಯೆಂಬಮತಿಯಿಂದ ಸೇವಿಸುತ | ದ್ರವ್ಯ ವಿಭಮನಾಹತಗೈದು ಕತೃಪ್ವ | ಅಂತಕಾರಕ ಭ್ರಮವಕ್ಷಿತಿರಮಣ ಪರಿಹರಿಸಿ | ಆರ್ತಳುದ್ಧರಿಸೋ3 ಜ್ಞಾನ ಸದ್ವೈರಾಗ್ಯ | ಅನುವಂಶಿಕವಾಗಿನೀನಾಗಿ ಕರುಣಿಸಿಹೆ | ಜ್ಞಾನಾತ್ಮಹರಿಯೆಮೌನಿಕುಲ ಸನ್ಮಾನ್ಯ | ಜ್ಞಾನಿ ಜನಸಂಗವನುನೀನಾಗಿ ಕೊಟ್ಟಿವಳ ಉದ್ಧರಿಸೋ ಹರಿಯೆ 4 ಸರ್ವಜ್ಞ ಸರ್ವೇಶ | ಸರ್ವಾಂತಾರಾತ್ಮಕನೆದರ್ವಿ ಜೀವಿಯ ಹೃದಯ | ಗಹ್ವರದಿ ನಿನ್ನಾಭವ್ಯರೂಪವ ತೋರಿ | ಉದ್ದಾರ ಗೈ ಇವಳಾಶರ್ವವಂದ್ಯನೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಋಣವ ಮಾಡ್ದಧಮಗುಸುರಲೆುಲ್ಲ ನೀತಿಯಮನು ಮುಖ್ಯಸ್ಮøತಿಕರ್ತರೂ ಪಕಣುಗೆಟ್ಟಿನೀ ದೋಷ ಕಡಲೊಳಗೆ ಮುಳುಗಿ ಮುಂದಣ ಗತಿಯದೇನೆನಗೆ ಕರುಣಿಸೈ ಗುರುವೆ ಅ.ಪಹೇಮಾದ್ರಿ ಮಾಧ'ೀಯಾದಿ ಪ್ರಾಯಶ್ಚಿತ್ತ ನೇಮ 'ಧಿ ಕಾಂಡಗೆಗಳೊಳೂಕಾಮದಿಂದಲಿ ಮಹಾಪಾತಕಗಳನು ಮಾಡಿದೀ ಮಹಾ ತಂಡಗಳೊಳೂಭೂ'ು ಗೋ ದ್ವಿಜರಾಜ ಸ್ತ್ರೀ ದ್ರೋ'ಗಳೊಳು ಪರಭಾ'ುನೀಗಾ'ುಗಳೊಳೂತಾಮಸಾಧಮರೊಳಧರ್ಮನೆನಿಸಿಹೆನೆಂದೇ ಮರಳಿ ಮರಳಿ ಪೇಳಿಹುದಲ್ಲವೆ ಗುರುವೆ 1ಹದಿನೆಂಟು ಬಗೆ ಮಹಾ ಪೌರಾಣ ಕಥೆಗಳೊಳಗಧಮನೀ ಋಣವಂತನೆವದರುತಿವೆಯುಪಪುರಾಣಂಗಳಷ್ಟಾದಶಗಳಧಮನೀ ಋಣವಂತನೆಒದಗಿದೀ ಸಂಖ್ಯೆಯುಪಸ್ಮøತಿಗಳೊಳಗೂ ಪೇಳ್ವುದಧಮನೀ ಋಣವಂತನೆಸದಯತನ ಪುಟ್ಟದಾುತೀ ಪತಿತ 'ಷಯದಲಿಹದನೆನಂಮುಂದೆ ಮುಳುಗಿದೆನೆಲ್ಲೊ ಗುರುವೆ 2ಮೂರು ಮತ್ತೈದಾ ಭೇದ ಋಣ 'ದ್ದರೆಯು ತೀರುವರೆ ಮಾರ್ಗಗಳಿವೆತೀರದಿದ್ದರು ಜನುಮಗೊಡುವವಲ್ಲದೆ ವೃದ್ಧಿಸಿರಿ ಬೆಳೆಯದೆ ನಿಂತಿವೆಆರು ಬಗೆುಂ ಬಡ್ಡಿ ನುಡಿಯದಿದ್ದರು ದಿನವು'ುೀರಲಿದಕೊದಗುತಲಿವೆದಾರಿಯ ನನಗೀಪರಿಯ ಧನ ಋಣವ ದೈವಹೇರಿ ತಳವಳಿದೆನೈರಕ್ಷಿಸೈ ಗುರುವೆ 3ಕಾಶಿಗೈದುವರಾಗದಡ'ಯೊಳಿರುವರಾಗದೀಶ ಭಜನೆಯ ಗಣಿಸದೂುೀಷಣೆಗಳನು ಬಿಟ್ಟು ಸನ್ಯಾಸವನು ಮಾಡಲೀಸದೆ ತನವನರಸದೂದೇಶದೇಶವ ತಿರುಗೆ ತೀರ್ಥಗಳೊಳ್ಮಿಂದರೂಲೇಶ ಮಾತ್ರವು ಸವೆಯದೂಈ ಶರೀರವು ಬೀಳೆ ಕ್ರಮವಾಗಿ ತೊತ್ತು ಸತಿದಾಸಸುತ ಕತ್ತೆಭವಗೊಡುವದೈ ಗುರುವೆ 4ಋಣವು ಮಾಡಿದ ಪತಿತನುಂಬ ಪಂಕ್ತಿಯೊಳು ಜನರುಣಲಾಗದುಂಡರವನೂತನಯ ಪೌತ್ರರು ಸ'ತ ಪತಿತನಪ್ಪನು ನಿಮಂತ್ರಣಗೈಸೆ ಧನ ಋಣಿಯನೂಎಣಿಸಲಾ ಕಲ್ಪನರಕವು ಪಿತೃಗಳಿಗೆ ಕರ್ತನನುಭ'ಪ ನರಕಗಳನೂಎನುತ ಭೀಷ್ಮಾಚಾರ್ಯರುಸುರಿದರು ಧರ್ಮನಂದನಗೆ ಭಾರತ ಶಾಂತಿಪರ್ವದೊಳು ಗುರುವೆ 5ತಲೆಯೋಡ ಪಿಡಿದು ಚಂಡಾಲಗೇರಿಯಲಾದರಳುತ ಕೊಟ್ಟ ಪರಧನವಸಲಿಸದೆ ಕೆಟ್ಟು ಬಂದೆನು ಭಿಕ್ಷಗೊಡಿಯೆಂದುಹಲವು ನಿಂದ್ಯದ್ರವ್ಯವಾಅಳುಕದೆ ತಂದು ಜೀವನಗೈಯ್ದುದರಿಂದುಸಲೆಗೈದು ತಂದ ಋಣವಾಕಳಿವ ನವನರಕಗಳೆಂದು ಹರಿಶ್ಚಂದ್ರ 'ಭುತಿಳು'ದರು ದುರ್ಮನ ಬಿಡದಲ್ಲೊ ಗುರುವೆ 6ಸುತನ ಮಾರಿದ ದೋಷ ಸತಿಯ ಮಾರಿದ ದೋಷಪಿತೃ ಮಾತೃಹತ್ಯ ದೋಷಾಪತಿತನಾಗುವ ದೋಷ ಪತ್ರವನು ಬರದು ತನುಪತನವಾಗುವ 'ಶೇಷಯತನದಿಂದ ಮಾಡ್ದ ಪುಣ್ಯವು ಪೋಪದೋಷ ಪರಸುತ ಭೃತ್ಯನಪ್ಪ ದೋಷಜೊತೆಗೂಡಿ ಗಣಿಸದೆ ಸಾಲವನು ಮಾಡಿದೀಪತಿತನನು ನರಕಕಿಳುಹುವದೆಲ್ಲೊ ಗುರುವೆ 7ನಿತ್ಯಕರ್ಮವ ಮಾಡುವಧಿಕಾರ ಮೊದಲಿಲ್ಲಸತ್ತ ಸೂತಕಕಧಿಕವೂಹೆತ್ತ ತಾು ತಂದೆಗಳ ಮೃತ ದಿನದಿ ಪಿಂಡಗಳನಿತ್ತರವರನುಸಿರವೂಸತ್ತರೂ ಬಿಡದೆ ಬೆಂಬತ್ತಿ ಪೈಶಾಚದಂತೊತ್ತುವದೇಳೇಳು ಭವವೂಇತ್ತಲ್ಲದೆ ಬಡ್ಡಿಸಹ ಮೌಲ್ಯವನು ಪೋಗದೆತ್ತ ಹೋಗಲಿ ಯೇನಮಾಡಲೈ ಗುರುವೇ 8ವರುಷ ಸಾ'ರವಾದರೆಯು ಋಣದ ಮ'ಮೆಯನುಬರೆಯುವದಸಾಧ್ಯ ಗುರುವೆಪರಮ ಋಣಿಗಳು ಸ್ಮøತಿ ಪುರಾಣೇತಿಹಾಸಗಳೊಳರುಪುತಿಹರಿಂತು ಗುರುವೆಹರತು ಋಣಗತ್ತಲೆಯು ನಿನ್ನ ಪದಗಾಬಂತೆಕರುಣಿಸೈ ಬೇಗ ಗುರುವೆಮರೆಯೊಕ್ಕೆ ನಾನು ತಿಮ್ಮದಾಸ ಚಿಕ್ಕನಾಗಪುರವರನಿಲಯ ವಾಸುದೇವಾರ್ಯ ಸದ್ಗುರುವೆ 9
--------------
ತಿಮ್ಮಪ್ಪದಾಸರು
ಎಚ್ಚರಿಕೆಚ್ಚರಿಕೆ ಮನವೆ ಇನ್ನು | ಎಚ್ಚರಿಕೆಚ್ಚರಿಕೆ ಯಮನ ಪುರದ ಬಾಧೆ ಪ ಕಿಚ್ಚನಾದರು ಕೇಳಿ ದುಶ್ಚಿಂತನ ಬಿಡು ಅ.ಪ ಗಂಡ ಅತ್ತೆ ಮಾವ ಮೈದುನರ ಬೈವರ | ಖಂಡ ತುಂಡನೆ ಮಾಡಿ ಖಂಡವ ಕೊಯಿದು | ಕಂಡದೊಳಗೆ ಬೇಯ್ಸಿ ದಿಂಡುಗೆಡಹಿ ಕಟ್ಟಿ | ಮಂಡೆಯ ಒಡೆದು ಡಂಡದಿ ಶಿಕ್ಷಿಸಿ | ಹಿಂಡಿ ಹಿಪ್ಪೆಯ ಮಾಡಿ ಕೊಂಡೊಯ್ದು ಅಗ್ನಿಯ ಕುಂಡವ ಹೋಗಿಸುವರೊ-ಎದೆಯ ಮೇಲೆ | ಗುಂಡನೆ ಹೊರಿಸುವರೊ-ಬಾಯೊಳಗೆ | ಕೆಂಡವ ಸುರಿಸುವರೊ-ಕೋಟಿ ಜನ್ಮ ಚಂಡಾಲ ಯೋನಿಯಳಿಟ್ಟು ಬಾಧಿಸುವರೊ 1 ಉತ್ತಮ ಗುರು ಹಿರಿಯರುಗಳ ಬೈವರ | ತಿತ್ತಿಯ ಸುಲಿದು ಕತ್ತರಿಪ ಬಾಚೆಯ ತಂದು | ಕೆತ್ತಿ ಶರೀರಕ್ಕೆ ಹತ್ತೊ ನೀರನೆ ಚೆಲ್ಲಿ | ನೆತ್ತಿಯ ಕೊರೆದು ಖಾರವನೊತ್ತಿ ಹಾವಿನ ಹುತ್ತವ ಹೊಗಿಸಿ ವಿಷವನಿತ್ತು ಕೈ ಕಾಲು | ಕಿತ್ತು ಹೊಟ್ಟೆಯ ಕೊಯ್ವರೊ ಬೊಬ್ಬಿರಿ | ಯುತ್ತುರುಳು ಹಾಕುವರೊ ಬೆನ್ನೊಳಗೇ | ಎತ್ತಿ ಕರುಳ ತೆಗೆವರೊ ದೊಡ್ಡ ಬೆಟ್ಟ | ಹತ್ತಿಸಿ ತಲೆಕೆಳಗಾಗಿ ನೂಕಿಸುವರೊ 2 ಪರಧನ ಪರಸತಿ ಪರನಿಂದೆಗೆಳೆವರ | ಮರುಳುವ ಮರಳಿನೋಳ್ ಹೊರಳಿಸಿ ಅಸ್ಥಿಯ | ಮುರಿದು ಮುಟ್ಟಿಗೆ ಮಾಡಿ ಉರೆದ ಗುಂಡಿಗೆ ಸೀಳಿ | ಜಿಹ್ವೆ ಕೊರೆದು ತೈಲದೊಳಗೆ | ಅರಿವೆಯೆದ್ದಿ ಮೈಗೆ ಉರಿಯ ಸುತ್ತಲಿಕ್ಕೆ | ಉರವಣಿಸು ಕುಣಿಸುವರೊ-ಹೆರೆದಂಬಿಗೆ | ಗುರಿಮಾಡಿ ನಿಲಿಸುವರೊ ಉಕ್ಕಿನ ಕಂಭ | ಕ್ಕೊರಗಿಸಿ ನಿಲಿಸುವರೊ ಶೂಲಕೆ ಹಾಕಿ | ಎರಡು ಕಾಲೆಳೆದು ಕಾವಲಿ ಮೇಲೆ ನಿಲಿಸೀರೊ 3 ಹೆಣ್ಣುಮಾರಿ ಹೊನ್ನು ಕಟ್ಟಿದ ಮನುಜರ | ತುಂಬಿ | ಸುಣ್ಣದೊಳಗೆ ಹೂಳಿ ಜನ್ಮ ಕಳೆದು ಶಿರ | ವಣ್ಣಿಕಲ್ಲನೆ ಆಡಿ ಇನ್ನು ಉಕ್ಕಿನ ಕಾದ- | ಎಣ್ಣೆಯ ಸುರಿದು ನೀರನ್ನೆರದು ನರಮಾಂಸ- | ಉಣ್ಣೆಂದು ತಿನಿಸುವರೊ-ತಿತ್ತಿಯನಿಕ್ಕಿ | ಹಣ್ಣಣ್ಣು ಮಾಡುವರೊ-ಅಸೀಪತ್ರಾ- | ರಣ್ಯವ ಹೊಗಿಸುವರೊ-ಕ್ಷುಧೆಯೆನ್ನೆ | ತುಂಬಿ ಕುಟ್ಟಿ ಮೆಲ್ಲಿಸುವರೊ4 ವಾಸುದೇವನ ವಾಸರದಲ್ಲಿ ಉಂಬರ | ಹಾಸುಗಲ್ಲಿನ ಮೇಲೆ ಬೀಸಿ ಅಪ್ಪಳಿಸಿ ಆ- | ಕಾಶಕ್ಕೊಗೆದು ಖಡ್ಗ ರಾಸಿಯೋಳ್ ಬೀಳಲು | ಕೇಶ ಪಿಡಿದು ಕೆಡಹಿ ಘಾಸಿಸಿ ಬಾಯೊಳು | ತುಂಬಿ | ನಾಸಿಕ ಕೊಯ್ಸುವರೋ-ಕೀಸಿಸಿ ಗೂಟ | ಹೇಸದೆ ಬಡಿಸುವರೊ ಹಂದಿಯಂತೆ | ಈ ಶರೀರ ಸುಡಿಸವರೊ-ತಮಸಿನೊಳು | ಏಸು ಜನ್ಮಕೆ ಗತಿಯಲ್ಲವೆನಿಸುವರೊ 5 ಎಲ್ಲ ಒಂದೇ ಎಂಬ ಪಂಚ ಮಹಾಪಾತಕಿಯ | ಹಲ್ಲನ್ನು ಮುರಿದು ಗಂಟಲ ಶೀಳಿ ಅಂಗುಳಿಗೆ | ಮುಳ್ಳನ್ನು ತಂದೂರಿ ತಪ್ತ ಲೋಹದ ಮೇಲೆ | ಕುಳ್ಳಿರಿಸಿ ಕೊಡಲಿಯೊಳ್ ಎಲ್ಲವನು ಕಡಿದು | ಕೊಲ್ಲ ಬಡಿದು ಅಂಬಿನಲಿ ಚುಚ್ಚಿ ರಕ್ತ- | ಚೆಲ್ಯಾಡಿ ಬಗೆಯುವರೊ-ಉರಿಯ ಕೊಂಡ- | ದಲ್ಲಿ ಮುಳುಗಿಸಿಬಿಡವರೊ-ಹೊತ್ತು ಒಯ್ದು | ಕಲ್ಲುಗಾಣಕೆ ಹಾಕುವರೋ-ಕುಂಭೀಪಾಕ | ದಲ್ಲಿ ಕುದಿಸಿ ಬೇಯ್ಸಿ ಬೆಂಡು ಮಾಡುವರೊ6 ಒಂದು ನೋಡಿದರೊಂದು ಅಧಿಕ ಪಾಪಗಳಿವೇ- ನೆಂದು ಪೇಳಲಿ ಎನಗೊಂದಾದರಳವಲ್ಲ | ಹಿಂದಿನ ದುರ್ವಾರ್ತೆ ಮರೆದು ಮುಂದಾದರು | ನಂದತೀರ್ಥರ ಪಾದಾನಂದದಿ ಭಜಿಸಿ ಪು | ರಂದರನನು ಸರಿಸಿ-ವಿಜಯವಿಠ್ಠಲ | ನ್ಹೊಂದಿ ಪತಿಕರಿಸಿ-ಮುಕ್ತಿ ಮಾರ್ಗ- | ವಿಂದು ಆಶ್ರಿಯಿಸೊ ಗೋವಿಂದನ ಸ್ತುತಿಸಿ | 7
--------------
ವಿಜಯದಾಸ
ಎತ್ತಲಿಂದ ಬಂದೆ ಎನ್ನ ಒಗೆತನಕೆ ಎಲೆಖೋಡಿ ಸವತಿಎತ್ತಲಿಂದ ಬಂದೆ ಎನ್ನ ಒಗೆತನಕೆ ಪ ಕತ್ತಲು ಬೆಳುದಿಂಗಳಂತಾಯಿತುಮಿತ್ತು ಎತ್ತಲಿಂದ ಬಂದು ಸೇರಿತುಬಂದು ಎದುರಿಗೆ ಹಲ್ಲ ತೆರೆದಳುಒಂದು ಮಾತನು ಆಡದೆನ್ನೊಳುಒಂದನ್ನು ಸೇವೆಗೆ ಬರಗೊಡಳುಸಂದಿಯಲಿ ಲೊಟಕೆಯ ಹಾಕುತಲಿಹಳು1 ಹಾಲೊಳು ವಿಷವ ಹೊಯ್ದಂತೆ ಮಾಡಿದಳುಇಲ್ಲವನೆ ಹೇಳಿ ಕಾಲಕಾಲಲಿ ಎನ್ನ ಒದೆಸಿದಳುಬೇಳ ಮೇಳದಿ ತೊಡೆಯ ಮೇಲೆ ಹೊರಳಿಮೇಲೆಯೆ ಮೀಸೆಯ ಹುರಿ ಮಾಡುವಳು 2 ನೆರಳ ನೀರೊಳು ಬಗ್ಗಿ ನೋಡುವಳು ಎಬ್ಬಿ ತೆಗೆದುಮರಳಿ ಮರಳಿ ಒಡವೆಯ ನಿಡುವಳುಹೊರಯಿಕೆ ಒಳಯಿಕೆ ಮುರುಕಿಸಿ ನಡೆಯುತಲಿರೆ ಗಂಡಸು ಎಂದು ಅಣಕಿಸುತಿಹಳು3 ಮೋರೆಯನೀಗ ಎನಗೆ ತೋರಿಸಳುಸೀರೆ ಕುಪ್ಪುಸವ ಆರು ಕಾಣದಂತೆ ಉಡುವಳುದಾರಿಯ ಹಿಡಿ ನೀನಿರಬೇಡೆಂಬಳುನೂರು ಬಾರಿಯು ಸಾರಿದೆನೆಂಬಳು 4 ಒಗೆತನ ಕೊಂಡಳು 5 ಜನನ ಮರಣಗಳಳಿದು ಜಠರ ಬಾಧೆಗಳಳಿದುಘನ ಪುರುಷನಾಗಿ ಘನತಾನಾಗಿ ಇರುವನವನ6 ಪತಿ ಚಿದಾನಂದ ಮೂರುತಿ ತಾನಾದವನು7
--------------
ಚಿದಾನಂದ ಅವಧೂತರು
ಎಂಥ ಆಟವಿದು ಕ್ಷಿತಿಜಪತಿದೆಂಥ ಆಟವಿದು ಪ ಎಂಥ ಆಟ ಶ್ರೀ ಕಂತುಜನಕ ಭ ಕ್ತಾಂತರಂಗ ಸುರಚಿಂತಾಮಣಿಯೇ ನಿನ್ನದೆಂಥ ಅ.ಪ ಮಡುವಿನೊಳಡಗಿರುವ ಉರಗನ ಹೆಡೆಮೆಟ್ಟಿ ನಾಟ್ಯಮಾಡುವ ಸಡಗರದಲಿ ಗೊಲ್ಲ ರ್ಹುಡುಗರ ಕೂಡಿಸಿ ಒಡನೆ ಬಿಲ್ಲಿನಾಟ ರಚಿಸಿ ಮಧುರಪುರ ಬಿಡದೆ ಸೇರಿ ಗಡಕಡಿದು ಮಾವನ ಶಿರ ತಡೆಯದೆಮನಪುರಪಥವ ಪಿಡಿಸಿದ್ದು 1 ಗೋವಳರೊಡಗೂಡಿ ಗೋವುಗಳ ಕಾಯಲ ಡವಿಸೇರಿ ಮಾಯವೃಷ್ಟಿ ಅತಿಭರದಿ ಗೈಯಲಾಗ ಗೋವರ್ಧನ ಗಿರಿಯೆತ್ತೆ ಏಳುದಿನ ಗೋವುಗಳನು ಮತ್ತು ಗೋವಳರೆಲ್ಲರ ಜೀವ ಸಮಾನಮಾಡಿ ಪ್ರೇಮದಿ ಸಲಹಿದ್ದು 2 ಎಷ್ಟು ಕ್ಷೀರ ನೀಡೆ ಜನನಿಗಿನ್ನಿಷ್ಟೆಂದ್ಹಟ ಮಾಡೆ ಸಿಟ್ಟಿನಿಂದ ತಾಯಿ ಕಟ್ಟಲು ಒರಳಿಗೆ ಅಟ್ಟಹಾಸದಿ ಡುರುಕಿಟ್ಟು ನಡೆದು ಶಾಪ ಪಟ್ಟು ಪಟ್ಟಣಮುಂದೆಷ್ಟೋಕಾಲದಿಂದ ಕಷ್ಟಪಡುವರ ದಯದೃಷ್ಟಿಯಿಂ ಸಲಹಿದ್ದು 3 ದುರುಳ ಭಸ್ಮನಂದು ಹರನಿಂ ಉರಿಹಸ್ತವನು ಪಡೆದು ಪರಮಪಾಪಿ ವರ ಕರುಣಿಸಿದವನಿಗೆ ಮರುಳಮಾಡವನ ಕರವೆ ಅವನ ಮೇ ಲ್ಹೊರೆಸಿ ಉರುವಿಸಿ ಹರನ ರಕ್ಷಿಸಿದ್ದು 4 ಬತ್ತಲೆ ಪುರಗಳನ್ನು ಪೊಕ್ಕು ನೀ ಸತಿಯರ ವ್ರತಗಳನು ಹತಗೈದು ತ್ರಿಪುರದ ಪಥಪಿಡಿಸೆಮಪುರ ಹಿತದಿಂ ಸುರಗಣಕತಿಸೌಖ್ಯವ ನಿತ್ತು ಜತನಗೈದಿ ಸಿರಿಪತಿಯ ಶ್ರೀರಾಮನೆ ಸತತದಿಂಥ ಮಹಪತಿತ ಮಹಿಮದಿಹ 5
--------------
ರಾಮದಾಸರು
ಎಂಥ ಗರವು ನೋಡಮ್ಮಯ್ಯರುಕ್ಮಿಣಿಗೆಂಥ ಗರವು ನೋಡಮ್ಮಯ್ಯಕಂತುನಯ್ಯನ ಎನಗಂತ್ರವ ಮಾಡಿದ ಮಂತ್ರವ ಮಾಡಿದಳಮ್ಮಯ್ಯ ಪ. ಹಿಡಿದ ವೀಳ್ಯವ ನಾನು ಕೊಡುವೊ ಸಮಯದಿಬಂದು ಕಿಡಿ ಹಾಕಿದಳು ನೋಡಮ್ಮಯ್ಯಭಾವೆ ಕಿಡಿಯ ಹಾಕಿದಳು ನೋಡಮ್ಮಯ್ಯ ಹುಡುಗೆ ವೀಳ್ಯಕೆ ಮುಖಕೊಡಬಹುದುಕೃಷ್ಣನು ಬಿಡನು ಇವಳದೇನಮ್ಮಯ್ಯಇಂಥ ಭಿಡೆಯು ಇವಳದೇನಮ್ಮಯ್ಯ 1 ಮೋದ ಇಟ್ಟವಳಿಗೆಆದರವಿಲ್ಲ ನೋಡಮ್ಮಯ್ಯಏನೂ ಆದರವಿಲ್ಲ ನೋಡಮ್ಮಯ್ಯ ಕಾಡುತ ಕೊಟ್ಟ ವೀಳ್ಯವ ಮಾಧವಗೆಕೊಟ್ಟರೆ ಹೋದೀತು ಬುದ್ದಿ ನೋಡಮ್ಮಯ್ಯರುಕ್ಮಿಣಿಯಲ್ಲೆ ಹೋದೀತು ಬುದ್ಧಿ ನೋಡಮ್ಮಯ್ಯ 2 ಥಾಟು ಥೀಟಿನ ಭಾವೆ ಮಾಟ ಮಾಡಿದಳೇನಮ್ಮಯ್ಯಬೂಟಕತನ ನೋಡಮ್ಮಯ್ಯಬೂಟಕಗುಣದವಳ ಕೂಟಕೆ ಮೆಚ್ಚಿದಹರಿಯ ಆಟವÀ ನೋಡಮ್ಮಯ್ಯಮರುಳಾಟವ ಹರಿಯ ನೋಡಮ್ಮಯ್ಯ3 ಸೃಷ್ಟ್ಯಾದಿಕರ್ತಗೆ ಇಟ್ಟಳು ಮದ್ದಾನೆ ಧಿಟ್ಟತನವ ನೋಡಮ್ಮಯ್ಯರುಕ್ಮಿಣಿಯ ದಿಟ್ಟತನವ ನೋಡಮ್ಮಯ್ಯಎಷ್ಟು ಧೈರ್ಯವೆಂದು ಕೃಷ್ಣತಾ ಬೆರಗಾಗಿ ಬಿಟ್ಟನುವೀಳ್ಯವ ನೋಡಮ್ಮಯ್ಯ4 ವಟಪತ್ರ ಶಾಯಿಗೆ ಕುಟಿಲ ಮಂತ್ರವಮಾಡೊ ಚಟುಲತನ ನೋಡಮ್ಮಯ್ಯ ಭಾವೆಯ ಚಟುಲತನವ ನೋಡಮ್ಮಯ್ಯಸಟಿಯಲ್ಲ ಇವಳೆದೆ ಕಠಿಣತಿಶÀಯವೆಂದು ಮಿಟಿಮಿಟಿ ನೋಡಿದನಮ್ಮಯ್ಯಕೃಷ್ಣ ಮಿಟಿಮಿಟ ನೋಡಿದನಮ್ಮಯ್ಯ 5 ಭಾಳೆ ದಯಾಳು ಎಂದು ಹೇಳುವ ಶೃತಿಗಳುಕೇಳಿ ಆಟವು ನೋಡಮ್ಮಯ್ಯಹರಿಯ ಕೇಳಿ ಆಟವು ನೋಡಮ್ಮಯ್ಯಕಾಳ ಕೂಟವ ಕೈತಾಳವ ಹಿಡಿದಂತೆಆಳುವನಿವಳ ನೋಡಮ್ಮಯ್ಯಕೃಷ್ಣ ಆಳುವನಿವಳ ನೋಡಮ್ಮಯ್ಯ6 ಸರ್ವದಾ ತನ್ನ ಕೂಡ ಇರಬೇಕೆಂದೆನುತಲಿಎರೆದಳು ತೈಲವ ನೋಡಮ್ಮಯ್ಯಹರಿಗೆ ಎರೆದಳು ತೈಲವಮ್ಮಯ್ಯಭರದಿ ಕೋಪಿಸಿ ಕಣ್ಣು ತೆರೆದು ನೋಡುವರೆನ್ನಧರಿಸಲಿನ್ನೆಷ್ಟು ನೋಡಮ್ಮಯ್ಯನಾ ಧರಿಸಲಿನ್ನೆಷ್ಟು ನೋಡಮ್ಮಯ್ಯ 7 ಪುಂಡರೀಕಾಕ್ಷನ ಕೊಂಡಾಡಿ ಸುಖಿಸುವಹೆಂಡಿರು ಕಡಿಮೆಯೇನಮ್ಮಯ್ಯಹರಿಗೆ ಹೆಂಡಿರು ಕಡಿಮೆಯೇನಮ್ಮಯ್ಯಕೆಂಡವ ತುಂಬಿದ ಮಂಡಿ ತೋರಿಸಿದಂತೆಚಂಡಿಯನಾಳುವ ನಮ್ಮಯ್ಯಕೃಷ್ಣ ಚಂಡಿಯನಾಳುವ ನಮ್ಮಯ್ಯ8 ಧಿಟ್ಟಿಯರಿಬ್ಬರು ಕೋಪ ಬಿಟ್ಟರೆ ಇವರಿಗೆಎಷ್ಟು ಒಲುಮೆ ನೋಡಮ್ಮಯ್ಯನಾ ಎಷ್ಟು ಒಲುಮೆ ನೋಡಮ್ಮಯ್ಯಧಿಟ್ಟ ರಾಮೇಶನಲೆ ಇಟ್ಟರೆ ಇವರಿಗೆಎಷ್ಟರೆ ಗರ್ವ ನೋಡಮ್ಮಯ್ಯಬೇಡಿದ್ದು ಎಷ್ಟರೆ ಗರ್ವ ನೋಡಮ್ಮಯ್ಯ 9
--------------
ಗಲಗಲಿಅವ್ವನವರು