ಒಟ್ಟು 319 ಕಡೆಗಳಲ್ಲಿ , 70 ದಾಸರು , 267 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತಂದೆ ಶ್ರೀನಿವಾಸ ನೀನು ಬಂದು ಕಾಯೊ ಎನ್ನ ಸ್ವಾಮಿ ನಿಂತು ಕಾಯೋ ಎನ್ನ ಪ. ಇಂದಿರೆ ರಮಣನೆ ಬಂಧನ ಬಿಡಿಸೆನ್ನ ತಂದೆ ಗೋವಿಂದ ಅ.ಪ. ಖಗವಾಹನ ದೇವಾ ಸ್ವಾಮಿ ನಗೆಮೊಗದೊಡೆಯನೆ ನಾಗಶಯನನೆ ಯೋಗಿಗಳರಸನೆ ಬೇಗದಿ ಬಂದು ಕಾಯೋ ಎನ್ನನು 1 ಶೇಷಾಚಲ ನಿವಾಸ ಸ್ವಾಮಿ ಆಸೆಯ ಬಿಡಿಸೆನ್ನಾ ವಾಸುದೇವ ನಿನ್ನ ಲೇಸು ಕರುಣವ ತೋರಿ ನಿನ್ನ ದಾಸರ ಸಂಗದೊಳು ಇರಿಸೋ ಎನ್ನ 2 ರಾಮ ರಾಮ ಎಂಬೋ ನಿನ್ನ ನಾಮನೇಮದಿ ನುಡಿಸೆನೆಗೆ ರಮಾವಲ್ಲಭವಿಠಲ ಭಾಮೆಯರರಸನೆ ಪ್ರೇಮವ ತೋರೋ 3
--------------
ಸರಸಾಬಾಯಿ
ತನು ಮನ ಧನ ನಿನ್ನವಯ್ಯ ವನಜನಾಭ ಮಾರನಯ್ಯ ಪ ಮನಸು ನನಸು ನಿನ್ನವಯ್ಯ ಕನಸು ಕಿನಸು ನಿನ್ನವಯ್ಯ ದಿನ ದಿನ ದಿನ ಭಜಿಪೆನಯ್ಯ ಮನದಿ ನೆಲಸೋ ನೀ ರಂಗಯ್ಯ ಅ.ಪ ಸ್ನಾನ ಸಂಧ್ಯಾ ಜಪವು ತಪ ಧ್ಯಾನಪೂಜೆ ಧೂಪ ದೀಪ ದಾನ ಧರ್ಮ ನೇಮ ಲೋಪವೇನನರಿಯೆ ವಿಶ್ವರೂಪ 1 ಎನ್ನದೆಂಬುದಾವುದಿಲ್ಲ ಎನ್ನ ಕಾರ್ಯವೆನ್ನದಲ್ಲ ಎನ್ನ ಪೊರೆವರಾರು ಇಲ್ಲ ನಿನ್ನ ಬಿಟ್ಟರೇ ಗತಿಯಿಲ್ಲ2 ನಿನ್ನ ಸನ್ನಿಧಿ ಎನ್ನದೇಶ ನಿನ್ನ ಭಜನೆ ಎನ್ನ ಕೋಶ ನಿನ್ನ ಕೃಪೆಯೇ ಎನ್ನ ದೋಷನಾಶ ಸನ್ನುತಕಾಯೋ ಮಾಂಗಿರೀಶ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತನುವೆನ್ನದು ಚೇತನವೆನ್ನದು ಎಂದು ಅನುದಿನ ಪೋಷಣೆಯನು ಮಾಡಿದೆ ಹರಿ ಪ ಚಿನುಮಯ ನಿನ್ನನು ನೆನೆವೆನೆಂದರೆ ಮನ ತನುಮಧ್ಯೆಯರ ತನುವಿನೊಳಿರುತಿಹುದು ಅನಘ ನಿನ್ನನು ನೋಡುವೆ ನಾನೆನ್ನಲು ದೃಷ್ಟಿ ಕನಕಾಂಗಿಯರ ಕುಂಭಸ್ತನದ ಮೇಲಿಹುದಯ್ಯ1 ಚರಣದ ಪೂಜೆಯೊಳಿರುವೆನೆಂದರೆ ಕರವರೆಡು ಕೋಮಲೆಯರನರಸುವುವು ಹರಿಕಥಾಶ್ರವಣದೊಳಿರೆ ಈ ಕಿವಿಗಳು ಹರಿಣಾಕ್ಷಿಯರ ಕಂಠಸ್ವರಕೆ ಮೋಹಿಪವಯ್ಯ 2 ದುರಿತದೂರನ ನಾಮ ಸ್ಮರಿಸದು ನಾಲಿಗೆ ಸರಸಿಜಾಕ್ಷಿಯರೊಳು ಸರಸೋಕ್ತಿ ಪಡೆದು ಚರಣಶ್ರೀತುಳಸಿಯನರಿಯದೆ ನಾಸಿಕ ತರುಣಿಯ ಮೈಗಂಪನರಸಿ ಹಿಗ್ಗುವದಯ್ಯ 3 ನಿನ್ನಂಘ್ರಿಗೆರಗದೆ ಕುನ್ನಿಶರೀರವಿ ದುನ್ನುತಸ್ತನವುಳ್ಳ ಕನ್ನೆಯರೊಳ್ ತನ್ನ ಸುರತಸುಖವನೆ ಚಿಂತಿಸುವದು ಎನ್ನಾಧೀನದೊಳಿಲ್ಲ ನೀನೆ ಬಲ್ಲೆ 4 ಎರವಿನ ಸಿರಿಯಂತೆ ಕರಣಕಳೇವರ ಬರಿದೆ ನನ್ನದು ಎಂದು ಮೆರೆದೆ ನಾನು ಹರಿ ನಿನ್ನದೇ ಸರಿ ದುರಿತಸುಕೃತಕೆನ್ನ ಗುರಿಮಾಡದೆ ಕಾಯೋ ವರದವಿಠಲ ಕೃಷ್ಣ 5
--------------
ವೆಂಕಟವರದಾರ್ಯರು
ತನುವೆನ್ನದು ಚೇತನವೆನ್ನದು ಎಂದು ಅನುದಿನ ಪೋಷಣೆಯನು ಮಾಡಿದೆ ಹರಿ ಪ ಚಿನುಮಯ ನಿನ್ನನು ನೆನೆವೆಂನೆಂzರÀಮನ ತನುಮಧ್ಯೆಯರತನು ವಿನೊಳಿರುತಿಹುದು ಅನಘ ನಿನ್ನನು ನೋಡುವೆ ನಾನೆನ್ನಲು ದೃಷ್ಟಿ ಕನಕಾಂಗಿಯರ ಕುಂಭಸ್ತನದ ಮೇಲಿಹುದಯ್ಯ 1 ಚರಣದ ಪೂಜೆಯೊಳಿರುವೆನೆಂದರೆ ಕರವೆರಡು ಕೋಮಲೆಯರ ನರಸುವುವು ಹರಿಕಥಾಶ್ರವನದೊಳಿರದೆ ಈ ಕಿವಿಗಳು ಹರಿಣಾಕ್ಷಿಯರ ಕಂಠ ಸ್ವರಕೆಮೋಹಿಪವಯ್ಯ 2 ದುರಿತದೂರನ ನಾಮಸ್ಮರಿಸದು ನಾಲಿಗೆ ಸರಸಿಜಾಕ್ಷಿಯರೊಳು ಸರಸ್ತೋಕ್ತಿಪಡೆದು ಚರಣ ಶ್ರೀ ತುಳಸಿಯ ನರಿಯದೆ ನಾಸಿಕ ತರುಣಿಯ ಮೈಗಂಪನರಸಿ ಹಿಗ್ಗುವದಯ್ಯ 3 ನಿನ್ನಂಘ್ರಿಗೆರಗದೆ ಕುನ್ನಶರೀರ ವಿದುನ್ನತಸ್ತನವುಳ್ಳ ಕನ್ನೆಯರೋಳ್ ತನ್ನ ಸುರತಸುಖವನ್ನ ಚಿಂತಿಸುವದು ಯನ್ನಾಧೀನದೊಳಿಲ್ಲ ನೀನೇ ಬಲ್ಲಿ 4 ಎರವಿನ ಸಿರಿಯಂತೆ ಕರಣಕಳೇವರ ಬರಿದೆ ನನ್ನದು ಎಂದು ಮೆರೆದೆ ನಾನು ದುರಿತ ಕೃತಕೆನ್ನ ಗುರಿಮಾಡದೆ ಕಾಯೋ ವರದ ವಿಠಲ ಕೃಷ್ಣ 5
--------------
ಸರಗೂರು ವೆಂಕಟವರದಾರ್ಯರು
ತರಕಾರಿ ಹಾಡು ನಿನ್ನ ದಾಸರ ಬಿಟ್ಟನಾ ಬಾಳೆ ಕಾಯೋ ಪ ಮಾರ ಜನಕನೆ ಅಳಿದ ಮಾವನ್ನ ಕಾಯೋ ಸಾರಿ ಕರೆದರೆ ನೀ ಬಾರೆ ಕಾಯೋ ಮಾರ ಜನಕ ನರಸಿಂಹ ವಿಠಲ ನೀ ಮಾಡಿದ್ದೆಲ್ಲವು ಎನಗೆ ಸಮತೆ ಕಾಯೋ 1
--------------
ಓರಬಾಯಿ ಲಕ್ಷ್ಮೀದೇವಮ್ಮ
ತಾಮರಸ ಇನ್ನು ಕಾಂಬುವದೆಂದುಪನ್ನಗಾತನ ವಾಹನಾ ಪ ಕಣ್ಣು ಕಾಣದ ಹೀನ ಮಾನವನು ನಾನಾದೆಉನ್ನಂತ ಗುಣ ಪೂರ್ಣ ಕಾಯೋ ಯೆನ್ನ ಅ.ಪ. ಕರಿ ಮಕರಿ ಸೆಣಸ್ಯಾಡಿಹರುಷ ಕುಗ್ಗುತ ಮರುಕದೀ |ಹರಿ ಹರಿ ಹರಿ ಎಂದು | ಕರಿರಾಜ ಮೊರೆಯಿಡಲುತ್ವರದಿಂದ ನೀಯವನ | ಎಡರ ಹರಿಸಿದೆ ದೇವ 1 ಕುರುರಾಜ ಸಭೆಯಲಿ | ತರುಳೆ ದ್ರೌಪದಿ ಸೀರೆಕೌರವಾನುಜ ಸೆಳೆಯಲೂ |ನಾರಿಮಣಿ ನಿಜಪತಿಗಳೈ | ವರಲಿ ಮನ ತಿಳಿದುಹಿರಿಯ ಸಭಿಕರಿಗರುಹಲೂ | ವರ ವೃದ್ಧ ಭೀಷ್ಮಾದಿ |ಬಹುಮಂದಿ ಇರುತ ಕಾಲವ ಕಳೆಯಲು |ಆರಾದರೂ ಬಂದು ಪಾರು ಮಾಡಿದರೇನೊಶೌರಿ ನಿನ್ನನು ಕರೆಯೆ | ಪಾರು ಮಾಡಿದ ದೇವ 2 ಪಾರುಗಾಣಿಸೊ ಎನ್ನ | ಮೂರು ವಿಧ ತಾಪಗಳಮಾರ ಜನಕನೆ ಪ್ರಾರ್ಥಿಪೇ ದೂರ ಮಾಡಿಸೊ ಹರಿಯೆ | ಮೂರು ಗುಣದಿಂದೆನ್ನಬಾರಿ ಬಾರಿಗು ಬೇಡುವೆ |ದುರುಳ ತತ್ವರ ಕಾರ್ಯ | ಕಡೆಗೈಸಿ ಶ್ರೀ ಹರಿಯೆಸುರರ ಸಹಕಾರ ನೀಡೊ |ಗುರುಗಳಂತರ್ಯಾಮಿ | ಗುರು ಗೋವಿಂದ ವಿಠಲನೆಕರುಣದಲಿ ತವ ಚರಣ | ಸರಸಿಜವ ತೋರೋ 3
--------------
ಗುರುಗೋವಿಂದವಿಠಲರು
ತೋರೈಯ್ಯ ಚರಣವ ಕ್ಷೀರಾಬ್ಧಿಶಯನಾ ಪ. ಒಂದೂ ಅರಿಯದ ಮಂದಮತಿಯ ಬಂದೂ ನೀ ಕಾಯೋ ಸಿಂಧುಶಯನನೇ 1 ವಾರಿಧಿ ತಂದೆ ಕ್ಷೀರಾಬ್ಧಿ ಶಯನಾ ಪಾರು ಕಾಣಿಸಯ್ಯ | ಮಾರಾನಾಪಿತನೇ 2 ಶೇಷಾದ್ರಿ ವಾಸಾ ವಾಸುಕೀಶಯನಾ ರಮಾವಲ್ಲಭ ವಿಠಲ ಪೊರೆಯನ್ನ3
--------------
ಸರಸಾಬಾಯಿ
ದಯ ಬಾರದೇಕೋ ಹರೀ | ಹೇ ಮುರಾರೀ ಪ ದಯಾ ಪೂರ್ಣನೆಂದೂ | ತ್ರಯ ಪೇಳ್ವುದಯ್ಯ ಅ.ಪ. ವೈರಿ ಪ್ರೀತ ||ಯಾಮ ಯಾಮಕೆ ತವ | ನಾಮ ಸ್ಮøತಿಯನಿತ್ತುಕಾಮ ಜನಕ ಸಾರ್ವ | ಭೌಮನೆ ಕಾಯೋ1 ವಸ್ತುವೆಂದರೆ ನೀನೆ ಸರಿ | ನೀನೆ ದೈತ್ಯಾರಿಸ್ವಸ್ತಿವಾಚಕ ಶ್ರೀ ಹರೀ | ಹೇ ಶೌರೀ ||ವಾಸ್ತು ದೇವರೊಳು | ಶಿಸ್ತಿಗೆ ಬಿಂಬಿಸೆವಾಸ್ತು ನಿರ್ಮಾಣಕೆ | ಅಸ್ತು ಎಂದೆನಿಸೋ2 ಧಾನ್ಯದನಾಗೀಹ | ಧಾರುಣಿ ಎನಿಸೀಹಮಣ್ಣಿಗೆ ಪರ್ಯಾಯ | ಹೊನ್ನನಿತ್ತಿಹೆ ಜೀಯನಿನ್ನರ್ಚನೆಯ ಗೃಹ | ವನ್ನೂ ನಿರ್ಮಿಸಿ ಪೊರೆಮಾನ್ಯ ಮಾನದ ಗುರು | ಗೋವಿಂದ ವಿಠಲನೆ 3
--------------
ಗುರುಗೋವಿಂದವಿಠಲರು
ದಯ ಮಾಡೋ ಗುರುವೇ ದಯ ಮಾಡೋ ಪ ದಯ ಮಾಡೋ ಗುರುವೇ ನಿನಗೆದುರಾರೀ ಧರೆಯೊಳಗೆ ಸದಮಲ ಮೂರುತೀ ಶ್ರೀ ರಾಗವೇಂದ್ರಾ ಅ.ಪ ಭಕ್ತರ ಪೊರೆಯಬೇಕೆಂಬೀಕಾರಣದಿಂದ ಸಿದ್ಧ ಹಸ್ತಾನಾಗಿ ಬಂದು ನಿಂತಿರುವೇ ಕಂಡ ಕಂಡಾ ದೈವಂಗಳ ಪೂಜಿಸಿ ಪರಿಪರಿಸ್ತುತಿಸುತ ಬಳಲಿ ಬೆಂಡಾದೆನೈ ಸದ್ಗುರುವೇ 1 ಭಕ್ತಿಯಾ ಲಿಟ್ಟು ಮಾಡಿದಪರಾಧಂಗಳ ಒಂದೆಣಿಸಾದೆ ಎನ್ನನು ಮನಿಸು ಪ್ರಭುವೇ 2 ಶ್ರೀ ರಾಘವೇಣದ್ರಾ ದಾರಿಯಕಾಣೆ ಸಂತೈಸು ಜೀಯಾ 3 ಧೊರೆ ರಾಘವೇಂದ್ರಾ ಕಾಯೋ ಶ್ರೀ ಗುರು ರಾಘವೇಣದ್ರಾ 4
--------------
ರಾಧಾಬಾಯಿ
ದಯವ ಮಾಡೋರಂಗ ನಯದಿ ನೋಡೊ ದಯವು ನಯವು ನಿನಗಿರದಿದ್ದರೆ ಎನಗೆ ಕೇಳೊ ಪ ಭಯವು ಲಯವು ನಿನಗಿದೆಯೆಂಬುದು ನನ್ನ ಹಾಡೊ ಭಯ ಭೀತಿಗಳನು ಬಿಡಿಸುವುದೊಂದೇ ನಿನ್ನ ಪಾಡೊ ಅ.ಪ ಜನನ ಮರಣ ಮತ್ತಿರಲೆಂಬುದು ನೀನು ಬಲ್ಲೆ ಮನಸು ನೆನಸು ನಿನ್ನೆಡೆಗಿರೆ ವೈಕುಂಠವಲ್ಲೆ ರಂಗ ದಿನವು ಸ್ಮರಣೆಯ ಗೈಸುವ ರೀತಿಯ ನೀನೇ ಬಲ್ಲೆ 1 ಹಿಂದಿನ ಜನ್ಮದ ಪಾಪಗಳೆಲ್ಲವನಳಿಸೋ ರಾಮ ಇಂದಿನ ಜನ್ಮದ ನಾಮಸ್ಮರಣೆಯ ನುಡಿಸೋ ರಾಮ ಮುಂದಿನ ಭವಗಳ ನೀಗಿಸಿ ಕಾಯೋ ಸೀತಾರಾಮ ಇಂದಿರೆಯರಸ ಮುಕುಂದ ನೀ ಮಾಂಗಿರಿ ರಂಗಧಾಮ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ದಾಸರಾಯಾ ಎನ್ನ | ಬೆಂಬಿಡದಲೆ ಕಾಯೋ ಬಹು ಪರಿಯಿಂದ ದಾಸರಾಯಾ ಪ ಈರೇಳು ವರುಷವಾರಂಭಿಸಿ ಪ್ರತಿದಿನ | ದಾಸರಾಯ ಜಾವು ಮೂರುಗಳಲ್ಲಿ ಮುಕುಂದನ ಚರಣವ | ದಾಸರಾಯಾ | ಚಾರು ಮನಾಬ್ಜದಿ ಬಹಿರದಿ ಬಗೆ ಬಗೆ | ದಾಸರಾಯಾ | ಭೂರಿ ಭಕುತಿ ಭರಿತನಾಗಿ | ದಾಸರಯ್ಯಾ1 ಪುಂಗವ ಸುಮತೀಂದ್ರ ರಾಯ ಕರೆದ ನಿನ್ನ | ದಾಸರಾಯಾ | ಸಂಗೀತ ರಸನ ಪಾನಮಾಡಿ ಹರುಷದಿ | ದಾಸರಾಯಾ | ಹರಿ | ಡಿಂಗರೊಳುತ್ತುಂಗನೆನಿಸಿಕೊಂಡೆ ದಾಸರಾಯ 2 ಕುಶಲಗಾನವ ಕೇಳಿ ಗುರುಸತ್ಯ ಪೂರ್ಣರು | ದಾಸರಾಯಾ | ಪರಾ ವಸುನಾಮ ಗಂಧರ್ವನವತಾರ ನೀನೆಂದು | ದಾಸರಾಯಾ | ಪೆಸರಿಟ್ಟರಂದು ವಿದ್ವಜ್ಜನ ಮೆಚ್ಚಲು ದಾಸರಾಯಾ | ಎನ ಗೊಶವಹುದೇ ನಿಮ್ಮ ಮಹಿಮೆ ಕೊಂಡಾಡಲು |ದಾಸರಾಯಾ | 3 ಚರಿಸಿದೆ ಪುಣ್ಯಕ್ಷೇತ್ರಗಳ ಭಕುತಿಯಿಂದ | ದಾಸರಾಯಾ | ಪ್ರತಿ | ವರುಷ ಬಿಡದೆ ಶೇಷಗಿರಿಯವಾಸನ | ದಾಸರಾಯಾ | ಪರಿಯಂತ | ದಾಸರಾಯಾ | ಪರಿ ಚರಿಯವ ಕೈಕೊಂಡು ಪಡೆದೆ ಮಂಗಳಗತಿ ದಾಸರಾಯ 4 ಮುನಿಯು ಉಪೇಂದ್ರರಾಯರು ನಿಮ್ಮ ಚರಿತೆಯ | ದಾಸರಾಯಾಕೇಳಿ ಸಾನುರಾಗದಿ ಸರ್ವ ಮಂತ್ರೋಪದೇಶವ | ದಾಸರಾಯಾ | ಆನುಪೂರ್ವಕಮಾಡಿ ಅತಿ ಸಂತೋಷದಿ | ದಾಸರಾಯಾ | ಕೊಟ್ಟರು ಶ್ರೀ ನರಸಿಂಹ ಪ್ರತಿಮೆ ಸಾಲಿಗ್ರಾಮ | ದಾಸರಾಯಾ | 5 ಕಿಂಕರನೆನಿಸಿ ಪರಂದರದಾಸರೆ | ದಾಸರಾಯಾ | ಅವರಿಂ ದಂಕಿತ ವಹಿಸಿ ನಿಶ್ಯಂಕೆಯಿಂದ ನೀನು ದಾಸರಾಯಾ | ಪೊಂಕವ ಪೊಗಳುತ ಪೊಡವಿಯೊಳು ಚರಿಸಿದೆ | ದಾಸರಾಯಾ|ಭವ ಪಂಕವ ದಾಟ ಪರೇಶನನೈದಿದೆ | ದಾಸರಾಯಾ 6 ಪರಿಯಂತ ಕರ ಒಡ್ಡಲೊಲ್ಲೆನೆಂಬುವ ಛಲ | ದಾಸರಾಯಾ | ನಿನಗೆ ಸಲ್ಲಿತು ನಿಜ ಭಾಗವತರ ಪ್ರಿಯ | ದಾಸರಾಯಾ | ನಿಮ್ಮಾ ಅನುಭವೋಪಾಸನೆ ಏನು ತಿಳಿಯದು ದಾಸರಾಯಾ 7 ಕಮಲ ಧ್ಯಾನ ದಾಸರಾಯಾ | ಸ್ನಾನ ವರ ಮಂತ್ರ ಜಪ ತಪ ವಿಹಿತಾಚರಣೆಗಳು | ದಾಸರಾಯಾ ಪೆರತೊಂದು ಸಾಧನ ಮನ ವಾಕ್ಕಾಯಗಳಲಿ | ದಾಸರಾಯಾ | ನಾನೊಂದರಿಯೆ ದಯಾಬ್ಧಿ ಉದ್ಧರಿಸೆನ್ನ ಭವದಿಂದ ದಾಸರಾಯಾ 8 ನಾರಾಯಣಾತ್ಮಜ ಅನಂತಾರ್ಯರುದರದಿ ದಾಸರಾಯಾ |ಪುಟ್ಟಿ | ನೂರೊಂದು ಕುಲಗಳುದ್ಧಾರ ಮಾಡಿದೆ | ದಾಸರಾಯಾ | ಕಾರುಣ್ಯನಿಧಿ ಜಗನ್ನಾಥವಿಠಲ | ದಾಸರಾಯಾ | ನಿಮ್ಮ ಚಾರು ಚರಿತ್ರೆಯ ತುತಿಸಿ ಪಾವನನಾದೆ | ದಾಸರಾಯಾ 9
--------------
ಜಗನ್ನಾಥದಾಸರು
ದೀನಶರಣ ಮಾಮನೋಹರಾ ಕೃಪಾಪೂರಾ ಪ ಗಾನಲೋಲ ತರಣಿರುಚಿರ ನೀಲಗಾತ್ರ ಅ.ಪ ನೀರಜಾಕ್ಷ ನೀರಜಭವ ನಾರದಾದಿನುತಚರಣಾ ಚಾರುಚರಿತಾ ನಿಗಮವಿದಿತಾ | ವಾರಣೀಶನಮಿತಾ 1 ಸುಗುಣ ಭರಿತ ಮಾಂಗಿರೀಶ ಪಾರ್ಥಸೂತ್ರ [ಅಗಣಿತಗುಣಚರಿತ ಕಾಯೋ ನಾ ಶರಣಾಗತ] 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ದುಮು ದುಮು ಬಸವಂತನ ಹಬ್ಬಾ ಪ ರಾಮಕೃಷ್ಣ ಗೋವಿಂದ ಮುರಾರಿ | ಶಾಮ ಸುಂದರ ಸುರಜ ಸಹಕಾರಿ | ಕಾಮಿತ ಫಲಗಳ ನೀವ ಉದಾರಿ | ಶ್ರೀ ಮಾಧವನೇ ಕಾಯೋ ಚರಣವ ದೋರಿ 1 ಬನ್ನ ಬಡುತಲಿ ಬಲು ಭವದಲಿ ಬಂದೆ | ಮುನ್ನಿನ ತಪ್ಪವನೆಣಿಸದೆ ತಂದೆ | ಚೆನ್ನಾಗಿ ರಕ್ಷಿಸು ನಮೋ ನಮೋ ಎಂದೆ 2 ಈ ರೀತಿಯಿಂದಲಿ ಹರಿಯ ಕೊಂಡಾಡಿ | ಆ ರಾಧಿಪ ನವವಿಧದಲ್ಲಿ ಕೂಡಿ | ನಾರಕ ಭಯಗಳುವನು ಮೂಲದೀಡ್ಯಾಡೀ | ಸೂರ್ಯಾಡು ಸ್ವ ಸುಖ ಎಲೊ ಹುಚ್ಚು ಖೋಡಿ 3 ಮುನ್ನಿನ ಪುಣ್ಯದಿ ನರದೇಹ ತಾಳಿ | ಮಾನವನಾಗಿ ಹರಿಕಥೆ ಕೇಳಿ | ಚೆನ್ನಾಗಿ ವಿಷಯದಲನುದಿನ ಬಾಳೀ | ವೈರಿ ನೀನಾದೆ ಗೈಯ್ಯಾಳಿ 4 ಮೃಗಜಲ ಹೋಲುವ ವಿಷಯಾ ನಂದಾ | ಬಗೆದೆಲೋ ಶಾಶ್ವತವೆಂದು ನಿನ್ನಿಂದಾ | ಭಕುತಿಯ ಮಾರ್ಗವ ಬಿಟ್ಟೆಲೋ ಛಂದಾ | ಜಗ ದೊಳಗಾದೆಲೋ ನೀ ಮತಿ ಮಂದಾ 5 ಹೆಂಡರು ಮಕ್ಕಳು ಮಮತೆಯ ಸ್ಥೂಲಾ | ಖಂಡದಿ ಬಿದ್ದಿದೆ ಕಾಲಿಗೆ ಕೋಳಾ | ಅಂಡಲೆವುತ ಹೊಟ್ಟೆಹೊರೆದೆಲೋ ಮೂಳಾ 6 ಸುಖವಿಲ್ಲ ಇದರೊಳಗಿಂದು | ಪಾದ ಹೊಂದು 7 ತ್ವರಿತದಿ ಭಾವಭಕ್ತಿಗೆ ಗಮನವಿಟ್ಟು | ತರಳನಾಗಿ ಹೋಗದಿರೆಲೋ ಕೆಟ್ಟು 8 ಚಿನುಮಯ ಗೆಚ್ಚರಗಳೆದೆಲೋ ಭ್ರಾಂತಾ | ಕುಣಿಸ್ಯಾಡುತಿ ಹನು ಅಚ್ಯುತಾನಂತಾ 9 ಒಬ್ಬರು ಶಾಸ್ತ್ರದ ಮದದಲಿ ಬಿಗಿದು ಉಬ್ಬುಬ್ಬಿ ಕುಣಿದರು ಹೇಳಲೇನಿಂದು 10 ಅಷ್ಟಮದದಿಂದ ಕಣ್ಣು ಮುಚ್ಚಿ | ಕುಟ್ಟುವಾಗ ನೆಲ್ಲಿಕಾಲನು ಘಟ್ಟಿಸಿ 11 ಸಂತರ ಕಥೆ ಕಿವಿಯಲಿ ಕೇಳಲಿಲ್ಲಾ | ಭ್ರಾಂತನೆ ನಾಳೆ ಮುರಿವನು ಹಲ್ಲಾ 12 ನೆರೆದಹಿಸುತ ದುರ್ಮದ ಬೂದಿ ಚೆಲ್ಲಿ | ನರಜನ್ಮ ಸಾರ್ಥಕ ಮಾಡೆಲೊಹುಳ್ಳಿ 13 ಕಂದನು ಸಾರಿದಾ ಹೋಳಿಯಾ ವಂದಾ | ಭವ ಬಂದಾ 14
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದುರಿತಗಜ ಪಂಚಾನನ-ನರಹರಿಯೆ ದೇವರ ದೇವ ಕಾಯೊ ಗೋವಿಂದ ಪ ಹೆಸರುಳ್ಳ ನದಿಗಳು ಒಳಗೊಂಬೊ ಸಮುದ್ರನುಬಿಸುಡುವನೆ ಕಾಲುಹೊಳೆಗಳ ಗೋವಿಂದ 1 ಒಂದು ಮೊಲಕೆ ಆರು ಹುಲಿ ಬಂದು ಕವಿದಿದೆಬಂಧನ ಬಿಡೆಸೆನ್ನ ತಂದೆ ಗೋವಿಂದ 2 ಹೆತ್ತ ಮಕ್ಕಳು ಹುಚ್ಚರಾದರೆ ತಾಯಿ ತಂದೆಎತ್ತದೆ ನೆಲಕೆ ಬಿಸುಡುವರೆ ಗೋವಿಂದ 3 ಕರ್ಮ ಬೆನ್ನ ಬಿಡದಿದ್ದರೆನಿನ್ನ ವಾಲೈಸಲ್ಯಾಕೆ ಗೋವಿಂದ4 ಆಪÀತ್ತು ತಾಪತ್ರಯ ಬೆನ್ನ ಬಿಡದಿದ್ದರೆಶ್ರೀಪತಿ ಶರಣೆನ್ನಲ್ಯಾಕೆ ಗೋವಿಂದ5 ಅರಸು ಮುಟ್ಟಲು ದಾಸಿ ರಂಭೆಯಾದಳು ದೇವಪರುಷ ಮುಟ್ಟಲು ಲೋಹ ಸ್ವರ್ಣ ಗೋವಿಂದ 6 ಮಾನಾಭಿಮಾನದೊಡೆಯ ರಂಗವಿಠಲಜ್ಞಾನಿಗಳರಸನೆ ಕಾಯೋ ಗೋವಿಂದ 7
--------------
ಶ್ರೀಪಾದರಾಜರು
ದೂರ ಮಾಡುವರೇ ಶ್ರೀಶ ಪ ದೂರ ಮಾಡುವರೇದೂರ ಮಾಡುವರೇನೋ ಶ್ರೀಶದಾರಿ ಕಾಣದೆ ಮೊರೆಯನಿಡುವೆಆರು ಕಾಯುವರಿಲ್ಲ ಶ್ರೀಶಸಾರಸಾಕ್ಷ ಸಲಹೆ ಬೇಡುವೇ ಅ.ಪ. ಸಕ್ತಿ ಇಲ್ಲವೋ | ನಿನ್ನೊಳಾಸಕ್ತಿ ಇಲ್ಲವೋ |ಸಕ್ತಿ ನಿನ್ನಲ್ಲಿಲ್ಲದೇಲೇಮುಕ್ತಿ ಇಲ್ಲವೆಂದು ಶೃತಿಯಉಕ್ತಿ ಕೇಳಿ ಕೇಳಿದಾಗ್ಯೂ ವಿ-ರಕ್ತಿ ಪುಟ್ಟಲಿಲ್ಲ ಎನಗೆ ಭಕ್ತಿಮಾರ್ಗ ದೂರವಾಯ್ತೊ 1 ದುಷ್ಟ ವಿಷಯದೀ | ಮನವುಅಟ್ಟಿ ಪೋಗೋದೋ |ಎಷ್ಟು ಪೇಳಿದಾರೂ ಮನವುನೆಟ್ಟಗಾಗೋ ಪರಿಯ ಕಾಣೆಸೃಷ್ಠಿಗೀಶ ಮನವ ಅಭಿಧಸೊಟ್ಟ ಮನವ ಸರಿಯ ಪಡಿಸಿ | ಶ್ರೇಷ್ಠ ನನ್ನ ಮಾಡದ್ಹಾಂಗೆ 2 ಕೈಯ್ಯ ಬಿಡುವರೇ | ದಯಾಳು ವಿಷಯಧುಯ್ಯಲು ಕಳೆಯದೇ |ಪ್ರೇರ್ಯ ಪ್ರೇರಕನಾಗಿ ನೀನುಮಯ್ಯ ಮರೆಸಿ ಧೈರ್ಯಗೆಡಿಸೆಆರ್ಯರಿದನ ಸಯ್ಯೆಂಬೊರೇನೋಅಯ್ಯ ಕೈಯ್ಯ ಬಿಡದೆ ಕಾಯೋ | ಗುರು ಗೋವಿಂದ ವಿಠಲ 3
--------------
ಗುರುಗೋವಿಂದವಿಠಲರು