ಒಟ್ಟು 123 ಕಡೆಗಳಲ್ಲಿ , 41 ದಾಸರು , 111 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೊಬ್ಬಿನಲಿರಬೇಡವೊ - ಏ ನಮ್ಮ ನನುಜಾಕೊಬ್ಬಿನಲಿರಬೇಡವೊ ಪ.ಸಿರಿಬಂದ ಕಾಲಕೆ ಸಿರಿಮದವೆಂಬರುಬಿರಿದು ಬಿರಿದು ಮೇಲಕೆ ಮಾಳ್ಪರುಸಿರಿಹೋದ ಮರುರಿನ ಬಡತನ ಬಂದರೆಹುರುಕು - ಕಜ್ಜಿಯ ತುರಿಸಿ ತಿರುಗುವರಯ್ಯಾ 1ಒಡವೆ ವಸ್ತುವನಿಟ್ಟುಬಡಿವಾರ ಮಾಳ್ಪರುನಡೆಯಲಾರನೆಂದು ಬಳುಕುವರುಸಿಡಿಲು ಎರಗಿದಂತೆ ಬಡತನ ಬಂದರೆಕೊಡವ ಹೊತ್ತನಾರ ತರುವರಯ್ಯ 2ವ್ಯಾಪಾರ ಬಂದಾಗ ವ್ಯಾಪಾರ ಮಾಳ್ಪರುಶಾಪಿಸಿಕೊಂಡರು ಬಡವರ ಕೈಲಿಶ್ರೀಪತಿ ಪುರಂದರವಿಠಲರು ಮುನಿದರೆಭೊಪಾರದೊಳಗೆಲ್ಲ ತಿರಿದು ತಿಂಬರಯ್ಯ 3
--------------
ಪುರಂದರದಾಸರು
ಗೋವಿಂದ ನಮೋ ಗೋವಿಂದ ನಮೋ ಗೋವಿಂದ - ನಾರಾಯಣ |ಗೋವರ್ಧನ ಗಿರಿಯೆತ್ತಿದ ಗೋವಿಂದ - ನಮ್ಮ ರಕ್ಷಿಸೊ ಪ.ಅರ್ಥವಾರಿಗೆ ಪುತ್ರರಾರಿಗೆ ಮಿತ್ರಬಾಂಧವರಾರಿಗೆ |ಕರ್ತು ಯಮನವರೆಳೆದು ಒಯ್ಯಲು ಅರ್ಥ- ಪುತ್ರರು ಕಾಯ್ವರೆ 1ಮಂಚ ಬಾರದು ಮಡದಿ ಬಾರಳು ಕಂಚುಗನ್ನಡಿ ಬಾರದು |ಸಂಚಿತಾರ್ಥವ ದ್ರವ್ಯಬಾರದು ಮುಂಚೆ ಮಾಡಿರಿ ಧರ್ಮವ 2ಒಡವೆಯಾಸೆಗೆ ಒಡಲ ಕಿಚ್ಚಿಗೆ ಮಡದಿ ಬೆನ್ನಲ್ಲಿ ಬಾಹಳು |ಬಿಡದೆ ಯಮನವರೆಳದು ಒಯ್ಯಲು ಎಡವಿಬಿದ್ದಿತು ನಾಲಗೆ 3ಪ್ರಾಣವಲ್ಲಭೆ ತನ್ನ ಪುರುಷನ ಕಾಣದೆಯೆ ನಿಲಲಾರಳು |ಪ್ರಾಣ ಹೋಗಲು ಮುಟ್ಟಲಂಜುವಳುಜಾಣೆ ಕರೆದರೆ ಬಾರಳು 4ತಂದು ಬಂದರೆ ತನ್ನ ಪುರುಷಗೆ ಬನ್ನಿ ಬಳಲಿದಿರೆಂಬಳು |ಒಂದು ದಿನದಲಿ ತಾರದಿದ್ದರೆ ಹಂದಿನಾಯಂತೆ ಕೆಲೆವಳು 5ಉಂಟುಕಾಲಕೆ ನಂಟರಿಷ್ಟರು ಬಂಟರಾಗಿಯೆ ಕಾಯ್ವರು |ಕಂಟಕರು ಯಮನವರು ಎಳೆವಾಗ ನಂಟರಿಷ್ಟರು ಬಾರರು 6ದಿಟ್ಟತನದಲಿ ಪಟ್ಟವಾಳಿದ ಮೆಟ್ಟಿ ದಿತಿಜರಸೀಳಿದ |ಮುಟ್ಟಿ ಭಜಿಸಿರೊ ಶ್ರೀ ಪುರಂದರವಿಠಲೇಶನ ಚರಣವ 7
--------------
ಪುರಂದರದಾಸರು
ದೇವಿಯನೆತ್ತಿದನಾರೆಲಮ್ಮಾ ನಮ್ಮದೇವ ಸಿರಿಪತಿ ಕಾಣೆಲಮ್ಮಾದೇವಿ ನಮ್ಮ ದೇವರು ಬಂದರು ಕಾಣಮ್ಮ ಪ.ಕಣ್ಣೆವೆ ಇಕ್ಕದೆ ಮಾತಿಗೆ ಮನವಿಟ್ಟಸಣ್ಣದೊಡ್ಡನಾಹನಾರೆಲಮ್ಮಉನ್ಮತ್ತಖಳಸೋಮಕನವೈರಿಹೊಸ ಹೊನ್ನಬಣ್ಣದ ಮಚ್ಛವತಾರಿ ಅಲ್ಲೇನಮ್ಮ 1ಸಾರಿಸಾರಿಗೆ ಉಯ್ಯಾಲಿಡುತಲಿ ಮುಸುಡನುತೋರಿ ಜಾರಿದವನಾರೆಲಮ್ಮಆರಿಗು ಮೀರಿದಮಂದರಬೆನ್ನಲಿಭಾರಾಂತ ಶ್ರೀಕೂರ್ಮನಲ್ಲೇನಮ್ಮ 2ಘರ್ಘರಿಸುತ ಕಾಲಕೆದರಿ ಜಗದಗಲಭೋರ್ಗರೆವುತಲಿಹನಾರೆಲಮ್ಮದುರ್ಘಟ ದೈತ್ಯನ್ನ ದಂಷ್ಟ್ರದಿ ಚುಚ್ಚಿದನಘ್ರ್ಯವರಾಹದೇವನಲ್ಲೇನಮ್ಮ3ಕೂಗುತÀ ಕೊಲ್ಲುತ ಕಿಡಿಯನುಗುಳುತಲಗುಬಗೆದವನಾರೆಲಮ್ಮನೀಗಿದುಷ್ಟನ ಶರಣಾಗತ ಶಿಶುರಕ್ಷಯೋಗಿನರಹರಿ ಅಲ್ಲೇನಮ್ಮ4ಭೂಮಿ ಆಕಾಶಕೆ ಒಬ್ಬನೆ ಹಬ್ಬುತಸೀಮೆಯ ಮುಚ್ಚುವನಾರೆಲಮ್ಮಹೇಮಹೋಮದಿಮತ್ತಬಲಿಯನೊತ್ತ್ಯಾಳಿದಸಾಮದ ವಾಮನನಲ್ಲೇನಮ್ಮ 5ಸಾವಿರ ಕೈಯ್ಯವನಳಿದು ಕಡಿದು ತಾನೆಹೇವದಟ್ಟಿವನಾರೆಲಮ್ಮಈ ವಸುಧೆಯ ಭಾರವಿಳುಹಿದ ವೀರ ಭೂದೇವಕುಲದ ರಾಮನಲ್ಲೇನಮ್ಮ 6ಕರಡಿಕೋಡಗಕೊಂಡು ಕಡಲೊಳಗಾಡಿದಹುರುಡಿಲ್ಲದ ಬಿಲ್ಲನುಳ್ಳನಾರೆಲಮ್ಮಸರಕುಮಾಡಿ ರಕ್ಕಸರನೊದ್ದಸಮೀರಜವರದ ಸೀತಾರಾಮ ಅಲ್ಲೇನಮ್ಮ 7ಬಂಡಿ ಕುದುರಿ ಗೂಳಿ ಹಕ್ಕಿ ಸೀಳಿ ಗೊಲ್ಲಹೆಂಡಿರೊಳಾಡುವನಾರೆಲಮ್ಮಪಾಂಡವಪಾಲ ರುಕ್ಮಿಣಿ ವಿಜಯನುಬಂಡಿಕಾರ ಕೃಷ್ಣನಲ್ಲೇನಮ್ಮ 8ಉಡುಗೆಯನುಡದಂತರಾಟದಿ ಕದ ತಪ? ವಿದ್ದಮಡದೇರ ಕೆಡಿಸಿದನಾರೆಲಮ್ಮಮೃಡಸುರರುಬ್ಬಸಬಡಿಸುವ ಬೌದ್ಧರಕೆಡಿಪ ಮೋಹನ ಬುದ್ಧನಲ್ಲೇನಮ್ಮ 9ವಾಜಿಯನೇರಿ ಠೇವಿಡಿದು ಗಡಬಡಿಸಿಮೂಜಗ ಸುತ್ತುವನಾರೆಲಮ್ಮಮಾಜಿದ ಪುಣ್ಯವನೆತ್ತಿ ಕಲಿಯ ಕೊಂದಸೋಜಿಗದ ಕಲ್ಕಿ ಅಲ್ಲೇನಮ್ಮ 10ಮುಗ್ಧರಾಗಲಿ ಪ್ರೌಢ ಬಂಟರಾಗಲಿ ಕರೆದರೆದ್ದೋಡಿ ಬಂದವನಾರೆಲಮ್ಮಸಿದ್ಧಪುರುಷ ಪ್ರಸನ್ವೆಂಕಟಪತಿಸಾಧಿಸಿ ಪಾಡಿದಲ್ಲಿದ್ದನಮ್ಮ 11
--------------
ಪ್ರಸನ್ನವೆಂಕಟದಾಸರು
ನಾರಾಯಣ ನಿನ್ನ ನಾಮವನು ನೆನೆದರೆ |ಹಾರಿಹೋಹುದು ಪಾಪ ಜನ್ಮಜನ್ಮಾಂತರದಿ |ಶ್ರೀ ರಮಣ ನಿನ್ನ ಕೃಪೆಯಿತ್ತೆಮಗೆ ಮುಕ್ತಿಯ -ದಾರಿ ತೋರಿಸೊ ಮುರಾರಿ ಪಸಕಲ ವೇದ ಪುರಾಣ _ ಶಾಸ್ತ್ರವನು ತಿಳಿದೋದಿ |ತಿಯಿಂಭಕುತ ತಾಯ್ತಂದೆಗಳ ಚಿತ್ತವಿಡಿದರ |ರಕುಷಣೆಯ ಮಾಡಿ ಜಗದೊಳಗೆ ವಿಖ್ಯಾತ ಸುಕು -ಮಾರ ತಾನೆಸಿಸಿಕೊಂಡ1ಪ್ರಕೃತಿಯಲಿ ಹೋಮಕೋಸ್ಕರ ಸಮಿಥೆ ತರಹೋಗಿ |ಶುಕರುಮಗಳಿಂದ ಚಾಂಡಾಲಿಲೆಯ ಕಂಡು ತಾ - |ಮೂಕನಾಗಿನಿಂದು ಮೈಮರೆದು ಪಾತಾಕಿಯ ಬಹ -ದುರಿತವನು ತಾನರಿಯದೆ 2ನಿಲ್ಲು ನಿಲ್ಲೆಲೆ ಕಾಂತೆ, ನಿನಗೊಲಿದೆ ನೀನಾರೆ |ಸೊಲ್ಲಿಸೆನ್ನೊಡನೆ ಸತಿಯರ ಕುಲಕೆಕಟ್ಟಾಣಿ |ಚೆಲ್ಲೆನ್ನ ಮೇಲೆ ಕರುಣವನಿಂತು ಕೋಮಲೆಯೆನಿಲ್ಲೆಂದು ಸೆರಗ ಪಿಡಿದ 3ಎಲೊವಿಪ್ರ ಕೇಳು ನಾ ಕುಲಹೀನೆ ನಮ್ಮ ಮನೆ |ಹೊಲನೆನದು ಗೋಮಾಂಸ ಚರ್ಮದಾ ಹಾಸಿಕೆಯು |ಎಲುವಿನಾ ರಾಶಿ ಒದರುವ ನಾಯ ಹಿಂಡುಗಳು -ಬಹು ಘೋರಘೋರ ವಿಹುದು 4ಬಲೆಗೆ ಸಿಲ್ಕಿದ ಪಕ್ಷಿ ಬೇಟೆಗಾರನದಲೇ ? |ಕುಲವನ್ನು ಕೂಡೆ ನಾ ಕಾಮಿನೀರನ್ನಳೆ |ಚಲದಿಂದ ಬದುಕುವೆನು ಸುಖದಿಂದಲಿರುವೆ ನೀಒಲವು ನನಗೊಂದೆ ಎಂದ 5ವ್ಯರ್ಥ ಎನ್ನೊಡನೆ ಮಾತೇತಕೆಲೊ ಹಾರುವಾ |ಚಿತ್ತ ನನ್ನಲ್ಲಿ ಇದ್ದರೆ ಹೋಗಿ ನೀ ನಿನ್ನ |ಹೆತ್ತ ತಾಯ್ತಂದೆಯರ ಕೇಳು ಸಮ್ಮತಿಸಿದರೆ -ಮತ್ತೆ ನಿನಗೊಲಿವೆನೆನಲು 6ಅತ್ತ ಕಾಮಿನಿಯ ಒಡಗೊಡಿ ತನ್ನಯ ಪಿತನ |ಹತ್ತಿರಕೆ ಹೋಗಿ ಕೇಳಿದರೆ ಆತನು ಎಂದ |ಉತ್ತಮದ ಕುಲವನೀಡಾಡಿ ಈ ಪಾತಾಕಿಯ -ಹಸ್ತಕೊಳಗಾಗದಲಿರೈ 7ಆಗದಾಗದು ನನ್ನ ಕುಲಬಂಧು - ಬಳಗವನು |ನೀಗಿ ನಿನ್ನೊಡನೆ ಕೂಡುವೆನೆಂಬ ಮತವೆನಗೆ |ನಾಗಭೂಷಣನ ಪಣೆಗಣ್ಣಿಲುರಿದನ ಬಾಣತಾಗಿತೆನ್ನೆದೆಗೆ ಎಂದ 8ಕೂಗಿ ಹೇಳುವೆ ನಿನ್ನ ಕುಲವಳಿಯದಿರು ಎಂದ |ಹೋಗಿ ಕೂಡದೆ ನಿನ್ನ ಹೆತ್ತ ತಾಯ್ತಂದೆಗಳಿ - |ಗಾಗದಿದ್ದರೆ ಆಚೆಯಾ ಮನೆಯೊಳಗೆ ಹೋಗಿಇಬ್ಬರೂ ಇರುವೆವೆಂದ 9ಹಾಲಂತ ಕುಲವ ನೀರೊಳಗದ್ದಿ ಪೂರ್ವದಾ |ಶೀಲವನ್ನಳಿದು ಸತಿಯಳ ಕೂಡಿ ತಾನು ಚಾಂ - |ಡಾಲಿತಿಗೆ ಹತ್ತು ಮಕ್ಕಳನು ಪಡೆಕೊಂಡವರಲೀಲೆ ನೋಡುತಲಿ ಹಿಗ್ಗಿ 10ಬಾಳಿನಲ್ಲೀ ರೀತಿ ಅಜಮಿಳನು ಇರುತಿರಲು |ಕಾಲ ಬಂದೊದಗಿತ್ತು ಕರೆಯಿರೆವೆ ಪಾತಕನ |ಜೋಲುದುಟಿಡೊಂಕು ಮೋರೆಯ ಅಬ್ಬರದಿ ಯಮನ -ಆಳುಗಳು ಬಂದರಾಗ 11ಎಡಗೈಯೊಳಗೆಪಾಶ ಹಿಡಿದು ಚಮ್ಮತಿಗೆಗಳ |ಒಡನೆ ಜಾವಳಿನಾಯಿ ವಜ್ರಮೋತಿಯ ಕಾಯಿ |ತುಡಿಕಿರೋ ಕೆಡಹಿ ಕಟ್ಟಿರೋ ಪಾತಕನನೆಂದುಘುಡುಘುಡಿಸಿ ಬಂದರಾಗ 12ಗಡಗಡನೆ ನುಡುಗಿ ಕಂಗೆಟ್ಟು ಅಜಮಿಳನು ತಾ |ಕಡೆಯ ಕಾಲಕೆ ಅಂಜಿ ಮಗನ ನಾರಗನೆಂದು |ಒಡನೊಡನೆ ಕರೆಯಲ್ಕೆ ಯಮನಾಳ್ಗಳೋಡಿದರುಮುಟ್ಟಿದುದು ಹರಿಗೆ ದೂರು 13ಕೊರಳ ತುಳಸಿಯ ಮಾಲೆಯರಳ ಪೀತಾಂಬರದ |ವರಶಂಖ ಚಕ್ರದ್ವಾದಶನಾಮಗಳನಿಟ್ಟ |ಹರಿಯ ದೂತರು ಅಂಜಬೇಡ ಬೇಡನ್ನುತಲಿಹರಿದೋಡಿಬಂದರಲ್ಲಿ 14ಪುಂಡರೀಕಾಕ್ಷನೀ ಭೃತ್ಯನನು ಬಾಧಿಸುವ |ಲಂಡಿರಿವರಾರು ನೂಕಿರಿ ನೂಕಿರೆಂತೆಂದು |ದಂಡವನು ತೆಗೆದು ಬೀಸಾಡಿ ಯಮನವರಿಗು - |ದ್ದಂಡರಿವರೆಂದರಾಗ 15ತಂದೆ ಕೇಳಿರಿ ಒಂದು ಭಿನ್ನಪವ ಲಾಲಿಸಿರಿ |ಒಂದು ದಿನ ಹರಿಯೆಂದು ಧ್ಯಾನವನ್ನರಿಯ ನಾವ್ - |ಬಂದಾಗ ಆತ್ಮಜನ ನಾರಗನೆ ಎಂದೆನಲುಕುಂದಿದುವೆ ಇವನ ಪಾಪ ? 16ಹಂದೆ - ಕುರಿಗಳಿಗೆ ನಿಮಗಿಷ್ಟು ಮಾತುಗಳೇಕೆ |ನಿಂದಿರದೆ ಹೋಗಿ ನಿಮ್ಮೊಡೆಯನಿಗೆ ಪೇಳೆನಲು |ಸಂದಲಾ ಯಮಭಟರು ಅಜಮಿಳನ ಹರಿಭಟರುತಂದರೈ ವೈಕುಂಠಕೆ 17ಮದ್ಯಪಾನವ ಮಾಡಿ ಪೆಂಗಳನು ಒಡಗೂಡಿ |ಅದ್ದಿದೆನು ನೂರೊಂದು ಕುಲವ ನರಕದೊಳೆಂದು |ಹದ್ದಿನಾ ಬಾಯೊಳಗಿನುರಗನಂತಜಮಿಳನುಇದ್ದನವ ನೆರೆಮರುಗುತ 18ವಿಪ್ರಕುಲದಲಿ ಹುಟ್ಟಿ ವೇದಶಾಸ್ತ್ರವನೋದಿ |ಮುಪ್ಪಾದ ತಾಯಿ - ತಂದೆಗಳೆಲ್ಲರನು ಬಿಟ್ಟು |ಒಪ್ಪಿ ಧಾರೆಯನೆರೆದ ಕುಲಸತಿಯ ಬಿಟ್ಟು ಕಂ -ದರ್ಪನಾ ಬಲೆಗೆ ಸಿಕ್ಕಿ 19ವಿಪ್ರ ನಾನಾದರೂ ಜಗದಿ ನಿಂದ್ಯನು ಆಗಿ |ಇಪ್ಪೆ ನೀ ಪರಿಯೊಳೆನ್ನಂಥ ಪಾತಕಿಯಿಲ್ಲ |ತಪ್ಪಲಿಲ್ಲವೊ ಹಣೆಯಬರೆಹವಿದು ಭುವನದೊಳುಬೊಪ್ಪರೇ ವಿಧಿಯೆಂದನು 20ಇಳೆಯೊಳಗೆ ಶ್ರೀಪುರಂದರ ವಿಠಲನಾಮವನು |ನೆಲೆಯರಿತು ನೆನೆವರಿಗೆ ಯಮನ ಬಾಧೆಗಳಿಲ್ಲ |ಸುಲಭದಿಂದಲ್ಲಿ ಸಾಯುಜ್ಯಪದವಿಯು ಸತ್ಯಬಲುನಂಬಿ ಭಜಿಸಿ ಜನರು21
--------------
ಪುರಂದರದಾಸರು
ನೀ ದಯಾಪರನೊ, ನಿನ್ನವರ ಸಾಧನವೊ ? |ಮುದ್ದು ಹಯವದನ ಪೇಳಿದನ ಪ.ಮದಕರಿಯು ಸರಸಿಯೊಳು ಮಕರಿಬಾಧೆಗೆ ಸಿಲುಕಿ |ಪದುಮಾಕ್ಷ ಪದುಮೇಶ ಪದುಮನಾಭ ||ಪದುಮಸಂಭವನಯ್ಯಪಾಹಿ ಪಾಹಿ - ಯೆನಲು |ಒದಗಿ ರಕ್ಷಿಸದೆ ತವ ದಯೆಯೊ, ಸಾಧನವೊ ? 1ಅಂತ್ಯಜೆಯ ಸಹವಾಸದಲಿ ವಿಪ್ರವರನೊಬ್ಬ |ಸಂತಸದಿಂದ ಬಹುಕಾಲ ಕಳೆದು ||ಅಂತ್ಯಕಾಲಕೆ ತನ್ನ ಮಗನ ಕರೆಯಲು ಕಾಯ್ದೆ |ಚಿಂತಾಯತನೆ, ವೈರಾಗ್ಯ ಸಾಧನವೊ ? 2ಅವರವರ ಯೋಗ್ಯತೆಯನರಿತು ಪ್ರೇರಕನಾಗಿ |ಅವರಿಂದ ನುಡಿಸಿ ನುಡಿನುಡಿಗೆ ಹಿಗ್ಗಿ ||ಅವರಿಗೊಲಿದೆ ನಮ್ಮ ಪುರಂದರವಿಠಲ |ಅವನೀಶನಿನ್ನ ದಯವೊ ಸಾಧನವೊ ?3
--------------
ಪುರಂದರದಾಸರು
ನೆಚ್ಚಿದಿರೋ ಪ್ರಾಣಿ ಸಂಸಾರ ಸ್ಥಿರವೆಂದುಹುಚ್ಚು ಬುದ್ದಿಯಲಿ ನೀ ಕೆಡಬೇಡ ಪ.ಎಚ್ಚರಿತುಕೊಂಡು ಧರ್ಮದಿ ನಡೆ ಕಣ್ಣನುಮುಚ್ಚಿದ ಮೇಲುಂಟೆ - ನರಜನ್ಮ ಸ್ಥಿರವಲ್ಲ ಅಪಅಷ್ಟಕಂಬವನಿಕ್ಕಿ ತಾಕದುಪ್ಪರಿಗೆಯಕಟ್ಟಿದ ಮನೆ ಇದ್ದಂತಿಹುದುಹೊಟ್ಟೆತುಂಬ ಉಣದೆ ಧನವ ಗಳಿಸಿ - ಬಚ್ಚಿಟ್ಟಲ್ಲಿರದೆ ಸಂಗಡ ಬಾಹೋದಲ್ಲ 1ಅತಿ ಪ್ರೀತಿಯಿಂದ ಮದುವೆಯಾದ ಮೋಹದಸತಿ ತನ್ನ ಮರಣದ ಕಾಲಕ್ಕೆಗತಿಯಾವುದೆನುತಲೆ ಮರುಗಿದಪ್ಪಳಲ್ಲದೆಜತೆಯಾಗಿ ನಿನ್ನ ಸಂಗಡ ಬಾಹಳಲ್ಲ 2ಒಂದೊಂದು ಪರಿಯ ಬುಧ್ಧಿಯ ಪೇಳಿ ಸಲುಹಿದಕಂದ ನಿನ್ನಾವಸಾನ ಕಾಲಕೆಮುಂದೇನು ಸಂಸಾರ ನಡೆಸಲುಪಾಯವೇನೆಂದು ಚಿಂತಿಸುವ ಸಂಗಡ ಬಾಹನಲ್ಲ 3ನಾಟರಿಷ್ಟರು ಬಂಧು - ಬಳಗವುಹರಿ ಕೊಟ್ಟುದುಂಟಾದರೆ ಬಂದು ಉಣ್ಣುವರುಕಂತಕ ಬಂದರೆ ಹೊತ್ತು ಕಾಷ್ಠದೊಳಿಟ್ಟುಕಂತಿಯ ತಂದೊಟ್ಟಿ ಸುಡುವರು ಕಾಣೊ 4ಇಂತಿದು ಒಂದು ಪ್ರಯೋಜನ ನಿನಗಿಲ್ಲಅಂತ್ಯಕಾಲಕ್ಕೆ ಸಂಗಡ ಬಾಹುದುಕಂತುಜನಕ ನಮ್ಮ ಪುರಂದರವಿಠಲನಸಂತತ ಧ್ಯಾನದೊಳಿರು ಕಾಣೋ ಮನುಜಾ 5
--------------
ಪುರಂದರದಾಸರು
ಪಾಲಿಸಯ್ಯ ಪವನನಯ್ಯಕಾಲಕಾಲಕೆ ಹೃದಯಾಲಯದೊಳು ನಿನ್ನಶ್ರೀಶ ಸಂಸಾರವೆಂಬೊ ಸೂಸುವ ಶರಧಿಯೊ-ಮೂರು ಗುಣಗಳಿಂದ ಮೂರು ತಾಪಗಳಿಂದಕರುಣಾಸಾಗರ ನಿನ್ನ ಸ್ಮರಣೆ ಮಾತ್ರದಿ ಸಕಲ
--------------
ಗೋಪಾಲದಾಸರು
ಬಂದೆನೇಳೆ ಗೋವಿಂದ ನಾ ಇಂದುಮುಖಿ ನಿದ್ರೆ ಬಿಟ್ಟುಬಂದು ನೀ ಬಾಗಿಲ ತೆಗೆಯೆ ಗೋವಿಂದ ನೀ ಗೋವೃಂದವ ಕಾಯಲು ಹೋಗಯ್ಯ ಪ.ಸೋಮಕ ಖಳನ ಕೊಂದು ನೇಮದಿ ವೇದವ ತಂದಶ್ರೀ ಮತ್ಸ್ಯಾವತಾರ ಬಂದೆನೆ ಮತ್ಸ್ಸ್ಯನಾದರೆಆ ಮಹಾಂಬುಧಿಗೆ ಹೋಗಯ್ಯ 1ಸಿಂಧುಮಥÀನ ಕಾಲಕೆ ವೃಂದಾರಕರಿಗÉೂಲಿದಸುಂದರ ಕೂರ್ಮನು ಬಂದೆನೆ ಕೂರ್ಮನಾದರೆಮಂದರಹೊರಲು ಹೋಗಯ್ಯ2ಪ್ರಳಯಾಂಬುಗಿಳಿದೊಬ್ಬನ ಸುಲಭದಿ ಕೋರೇಲಿ ಸೀಳಿದಚೆಲುವ ವರಾಹನು ಬಂದೆನೆ ವರಾಹನಾದರೆಇಳೆಯ ಕೂಡಾಡ ಹೋಗಯ್ಯ 3ಸೊಕ್ಕಿ ಕಂಬವ ಗುದ್ದ್ದಿದ ರಕ್ಕಸನಂತರ ಮಾಲೆಯನಿಕ್ಕಿದ ನರಹರಿ ಬಂದೆನೆ ನರಹರಿಯಾದರೆಚಿಕ್ಕವನೊಳಾಡ ಹೋಗಯ್ಯ 4ಹೋಮವ ಮಾಡಿ ಮೀರಿದ ಭೂಮಿಪನುಕ್ಕ ಮುರಿದನೇಮದ ವಾಮನ ಬಂದೆನೆ ವಾಮನನಾದರೆನೇಮ ನಿಷ್ಠೆಗೆ ನೀ ಹೋಗಯ್ಯ 5ಭೂಭಾರವನಿಳುಹಿ ದ್ವಿಜರ್ಗೆ ಭಾಗ್ಯವ ಕೊಟ್ಟ ಶೌರ್ಯಶೋಭಿತಭಾರ್ಗವಬಂದೆನೆ ಭಾರ್ಗವನಾದರೆಆ ಬಾಲೇರಂಜಿಸ ಹೋಗಯ್ಯ 6ಸೀತೆಗಾಗಿ ರಾವಣನ್ನ ಘಾತಿಸಿದೆ ಕೇಳೆವಾತಜಾತ ವಂದ್ಯ ರಾಮ ಬಂದೆನೆ ರಾಮನಾದರೆ ಸರಯೂ ತೀರದಲ್ಲಿರ ಹೋಗಯ್ಯ 7ಸೋಳಸಾಸಿರ ಗೋಪೇರನಾಳುವ ಪ್ರೌಢ ಕಾಣೆ ಗೋಪಾಲ ಚೂಡಾಮಣಿ ಬಂದೆನೆ ಗೋಪಾಲನಾದರೆ ಗೋಪಾಲೇರೊಡನಾಡ ಹೋಗಯ್ಯ 8ದೃಢದಲ್ಲಿ ತಪವಿದ್ದ ಮಡದೇರ ಮನಗೆದ್ದಕಡುಮುದ್ದು ಬುದ್ಧ್ದ ಬಂದೇನೆ ಬುದ್ಧನಾದರೆ ಮಿಥ್ಯದಸಡಗರದಲ್ಲಿರ ಹೋಗಯ್ಯ 9ಪದ್ಮಗಂಧಿ ನಿನ್ನ ರತಿಗೊದಗಿದೆ ಬಿಂಕವಿನ್ನ್ಯಾಕೆಕುದುರೆಯೇರಿ ಕಲ್ಕಿ ಬಂದೆನೆ ಕಲ್ಕಿಯಾದರೆಕದನಕೆ ಜಾಣ ಹೋಗಯ್ಯ 10ವಲ್ಲಭನ ನುಡಿಕೇಳಿ ನಲ್ಲೆ ಸತ್ಯಭಾಮೆಪಾದಪಲ್ಲವಕೆರಗಿ ನಿಂತಳು ಪ್ರಸನ್ವೆಂಕಟಚೆಲುವ ನೀನೆಂದರಿಯೆನೆಂದಳು 11
--------------
ಪ್ರಸನ್ನವೆಂಕಟದಾಸರು
ಭಜಿಸಿ ಬಹು ಭಕುತಿಯಿಂದತ್ಯಜಿಪ ಭವಬಂಧನವ ಹರಿಯ ಪದವ ಪ.ಮನವೈರಿಯಂ ಪಿಡಿದು ಮಿತ್ರನಂ ಮಾಡಿ ಕೊಂಡನುನಯದಿ ವೈರಾಗ್ಯ ಘನಸಿರಿಯೊಳುದಿನದಿನಕೆ ಮುದವೇರಿ ತಾತ್ವಿಕರೊಡನೆ ಮಧ್ವಮುನಿರಾಯನೊರೆದಪರಿಹರಿಯ ಪಾದವ1ತುದಿಮೊದಲೆ ಸರ್ವಕಾಲಕೆ ಚಿಂತನೆಯ ಬಲಿದುಪದುಮಾಕ್ಷನಾಕೃತಿಯ ನೋಡಿ ದೃಢದಿಕದಲಗುಡದಂತಃಕರಣ ಸ್ನೇಹ ಸಾರವನುಹೃದಯ ಮಂಟಪದೊಳಗೆ ಹರಿಯ ಪದವ 2ಹರಿಪರಾತ್ಪರ ಲಕುಮಿ ಅರಸಿ ಅಜಕುವರ ಹರವರಪೌತ್ರ ಸುರಮುನಿಜನರು ದಾಸರುತರತಮದ ತಂತ್ರಸಾರ್ಥದಿಂನೆರೆನಂಬಿಅರಸ ಪ್ರಸನ್ವೆಂಕಟ ಶ್ರೀಹರಿಯ ಪದವ 3
--------------
ಪ್ರಸನ್ನವೆಂಕಟದಾಸರು
ಭ್ರಾಂತಿ ಬಿಡದೊ ಭಾಗ್ಯ ಪುರುಷನೆವಿಷಯಂಗಳಜರಿದುಶಾಂತಚಿತ್ತನಾಗೋತನಕಕಾಲಕಾಲಕೆ ಹರಿಕಥಾಶ್ರವಣ ಗುರುಗಳ ಮುಖದಿಂದಪಾಂಚಜನ್ಯ ಅರಿಪಾಣಿ ಸರ್ವೇಶ ತದ್ರಾಣಿ ಲಕುಮಿ ವಿ-ಪೂರಕ ಕುಂಭಕ ರೇಚಕದಿಂದಲಿ ಹೃದಯಸ್ಥ ಭೌತಿಕಅಂಶಿ ಅಂಶ ವೇಷಾಧಿಷ್ಠಾನ ಅಂತರ್ಯಾಮಿಗಳಹಂಚುಹಾಟಕ ಸಮದರ್ಶಿ ಎನಿಸಿ ಶೀತೋಷ್ಣವ ಸಹಿಸಿವಿಷಯಾವಿಷಯಂಗಳ ರೂಪವ ತಿಳಿದು ವಶವಾಗದನ್ಯಸ್ವತಂತ್ರ ಅಸ್ವತಂತ್ರ ವಸ್ತು ವಿವೇಕವ ತಿಳಿದುಸಕಲೇಂದ್ರಿಯಗಳಿಂದ ಶ್ರೀಹರಿಯ ವ್ಯಕತತಿಗೆ ತಂದುಬಿಂಬಭಾವಕ್ರಿಯ ದ್ರವ್ಯಾ ದ್ವೈತವ ತಿಳಿದು ಸರ್ವಗತ
--------------
ಗೋಪಾಲದಾಸರು
ಮನವೆ ಚಂಚಲ ಮತಿಯ ಬಿಡು - ನಮ್ಮ |ವನಜನಾಭನ ಪಾದಭಜನೆಯಮಾಡುಪ.ಬಡಮನುಜಗೆ ಬಾಯಬಿಡುವ ದೈನ್ಯದಲವನ |ಅಡಿಗಳಿಗೆರಗಲು ಕೊಡುವನೇನೊ ||ಕಡಲಶಯನ ಜಗದೊಡೆಯನ ನೆನೆಯಕ್ಕೆ - |ಪಿಡಿದು ತಾ ಸಲಹುವ ಬಿಡದಲೆಅನುಗಾಲ1ಬಲ್ಲಿದ ಭಕುತರ ಬಲ್ಲವ ಬಹುಸಿರಿ |ಯುಳ್ಳ ಕರುಣಿ ಲಕ್ಷ್ಮೀನಲ್ಲನಿರೆ ||ಕ್ಷುಲ್ಲಕರನು ಕಾಯಸಲ್ಲದೆಂದೆಂದಿಗುನಿಲ್ಲು ಹರಿಯ ಪಾದದಲ್ಲಿ ತಲ್ಲಣಿಸದೆ 2ಮುಗಿಲು ಮೇಲದೆಗಡೆ ಅಗಣಿತವಾದಾಪ - |ತ್ತುಗಳು ಬಂದಡರಲು ನಗುತಲಿರು ||ಜಗದಧೀಶನ ಮಹಿಮೆಗೆ ನಮೋ ನಮೋ ಎಂದು |ಪೊಗಳುತ ಬಾಳು ನೀ ಅಘಗಳ ಗಣಿಸದೆ 3ಆವಾವ ಕಾಲಕೆ ದೇವನಿಚ್ಛೆಯಿಂದ |ಆವಾವುದು ಬರೆ ನಿಜಸುಖವೆನ್ನು ||ಶ್ರೀವರ ಅನಾದಿಜೀವರ ಕ್ಲಪ್ತದಂತೆ |ಈವನು ನಿಜಸ್ವಭಾವ ಬಿಡದೆನಿತ್ಯ4ಕೇಶವಾಚ್ಯುತ ಶ್ರೀನಿವಾಸ ಮುರಾರೇ |ದೋಷರಹಿತ ದೀನ ಪೋಷಕನೆನ್ನು ||ಮೋಸಗೊಳಿಪ ಭವಪಾಶವ ಖಂಡಿಪ |ಶ್ರೀಶ ಪುರಂದರವಿಠಲನು ಜಗಕಿರೆ 5
--------------
ಪುರಂದರದಾಸರು
ಮರೆಯದಿರು ಮನವೆ ಮಾಧವನ ನಮ್ಮದುರಿತದಾರಿದ್ರ್ರ್ಯವನು ಹರಿಸಿ ಹೊರೆವವನಪ.ಆಳರಿತು ಊಳಿಗವ ಕೊಂಡುಂಡು ದಣಿವಂತೆಮೇಲಾಗಿ ಜೀವವನು ಕೊಡುವ ದೇವನಕಾಲಕಾಲಕೆ ಮಾಳ್ಪ ನಡೆತಪ್ಪು ನುಡಿತಪ್ಪುಆಲೋಚಿಸದೆ ಕರುಣಿಸುವ ಕರುಣನ 1ಮೂಢನಾಗಲಿ ಮತಿಯುಳ್ಳ ನರನಾಗಲಿಪಾಡಿದಾಕ್ಷಣ ಭೃತ್ಯನೆಂದು ಒಲಿದುಕೂಡಿಕೊಂಬುವ ದೊರೆಗಳಿಲ್ಲ ಹರಿಯಲ್ಲದಾನಾಡಾಡಿಬಣಗುಕಲ್ಲುಗಳ ಬೇಡಿ2ಮುನ್ನಾರು ಅನ್ಯದೇವರ ಭಜಿಸಿ ಭವಗೆದ್ದರಿನ್ನಾರು ಹರಿಯೊಲುಮೆಯಲಿ ದಣಿದರುನಿನ್ನ ಗುರುಗಳಿಂದರಿತು ನೆರೆನಂಬು ಪ್ರಸನ್ನ ವೆಂಕಟಪತಿಯ ಪಾದವನಜವ 3
--------------
ಪ್ರಸನ್ನವೆಂಕಟದಾಸರು
ಮೋಕ್ಷೋಪಾಯಕಾನಂದ ಮುನೀಂದ್ರನಶಿಕ್ಷಾ ಮಾರ್ಗಹುದಯ್ಯಲಕ್ಷ್ಷ್ಯಶ:ಲಕ್ಷಣವಾರ್ಹೇಳೇನುಲಕ್ಷದಿ ಗುಣವಿಲ್ಲಯ್ಯ ಪ.ಸುಕೃತತಾನಾದರೆ ಚಿರಕಾಲಕೆ ಒಮ್ಮೆಧಿಕೃತವಾಹುದು ಭವತುಷ್ಟಿಸುಖವೆಂಬುದು ಸ್ವರೂಪಾನಂದಾನುಭವವಿಕಸವಾಗುವ ಜ್ಞಾನದೃಷ್ಟಿ ಆಸುಖವಾಪೇಕ್ಷಿಸಿ ಪ್ರಕೃತವುದಾಸಿಪದಖಿಳ ಮಹಾತ್ಮರಭೀಷ್ಟಿಸಕಳಾನಿಷ್ಟವ ಸಾಗಿಸುವ ಶ್ರೀಸುಖತೀರ್ಥರ ಶುಭಗೋಷ್ಟಿ 1ಕಿವಿಯಲಿ ಸತ್ಶಾಸ್ತ್ತ್ರವಕೇಳಿಧ್ಯಾನಮನನವ ಸಾಧಿಪುದೆ ದೇವಸಾರ್ಥಿಕುವಲಯಪ್ರಿಯಕುಲತಿಲಕನು ಮೆಚ್ಚಿಹನವಭಕುತಿಯಪಥಕೀರ್ತಿಅವಿರಳ ಎದೆಗದ್ದಿಗೆಯೊಳು ಮೆರೆವನಸವಿಗುಣ ನಿರ್ಣಯವಾರ್ತಿವಿವರಿಸಿ ವಾರಂವಾರ ವರದ ಮದ್ಧವ ಜಗದ್ಗುರು ವರಮೂರ್ತಿ 2ಈಶ್ವರ ಸಾಕ್ಷಾತ್ಕಾರದ ಭೇದರಹಸ್ಯ ವಿಚಾರವಂತಯೋಗಿನಶ್ವರಾನಶ್ವರವರಿತ ವೈರಾಗ್ಯದಐಶ್ವರ್ಯಾನ್ವಿತಭೋಗಿಶಾಶ್ವತ ಪ್ರತ್ಯಕ್ಷಾದಿ ತ್ರಿಪ್ರಮಾಣಭಾಷ್ಯಕ ಶ್ರೀಪದಯೋಗಿವಿಶ್ವದೊಡೆಯ ಪ್ರಸನ್ವೆಂಕಟಪತಿ ಪದವಿಶ್ವಾಸಿಕ ಮುನಿಯೋಗಿ 3
--------------
ಪ್ರಸನ್ನವೆಂಕಟದಾಸರು
ವಾರಿಜನಾಭನ ಕರುಣವೆ ಸ್ಥಿರ ಸಂಸಾರ್ಯೆರವು ಕೇಳಾತ್ಮಜಾರುತದಾಯು ದೂರದ ಮುಕುತಿಯದಾರಿಯ ಪಾಥೇಯ್ಯೆಲ್ಲಾತ್ಮ ಪ.ಧರ್ಮದ ಸರಕಿಲ್ಲದವನೆಂದು ಬೇಗ್ಯಮಧರ್ಮ ಭಟರು ಬಂದರಲ್ಲೊಚರ್ಮದ ಮನೆ ಬಿಡಿಸಿದರು ಮುಟ್ಟಲು ನೋವಕರ್ಮಯಾತನೆ ಕೊಟ್ಟರಲ್ಲೊಹಮ್ರ್ಯನಿಕೇತನ ವೃತ್ತಿಕ್ಷೇತ್ರವನು ಅಧರ್ಮಿಗಳಗಲಿಪರಲ್ಲೊಮರ್ಮವರಿತು ತ್ರಾಟಿಸುವಾಗ ಶ್ರೀವಿಶ್ವಕರ್ಮನ ಪೂಜೆ ಹೋಯಿತೆಲ್ಲೊ 1ಹೆಡಗೈಯಕಟ್ಟಿಪರಿಘದೊಳು ಬಡಿವಾಗಮಡದಿ ಮಕ್ಕಳ ಸಹಾಯವೆಲ್ಲೊಒಡೆಯ ದಮ್ಮಯ್ಯ ನಮ್ಮಯ್ಯನೆಂದರೆಕಾಲಹಿಡಿದರೆ ಕೊಡಹಿದರಲ್ಲೊಸುಡುವ ಮಳಲು ಹುಡಿ ಕಲ್ಮುಳ್ಳೊಳೆಳೆವಾಗಹಿಡದೇಜಿ ಕೊಂಬುಕಾಳೆಲ್ಲೊಪೊಡವಿಲಿ ಬಂದಾಗ ಹರಿಸೇವೆ ಮಾಡದೆಕಡುಹುಂಟಾದರೆ ತೋರದೆಲ್ಲೊ 2ಕೀವು ರುಧಿರವಿಟ್ಟ ಕುಂಡದಿ ಮುಣುಗುವಾಗ್ಹ್ಯಾವಿನ ಮಾತೇನಾಯಿತಣ್ಣಸಾವುತೀನವ್ವಪ್ಪಾ ಮೊರೆಯ ಕೇಳೆಂದರೆಆವಾಗಬಾಧೆ ಕಾಣಣ್ಣಆವೈವಸ್ವತದಂಡ ಕೊಟ್ಟು ಬೊಗಳೆಂಬಾಗಚಾರ್ವಾಕತನವೆಲ್ಲಣ್ಣಆ ವಾಸುದೇವನ ಭಟಸಂಗ ನಿನಗೀಗ ವೈರ ಆಗೆಲ್ಲಿದಣ್ಣ 3ನಾಲಿಗೊಣಗಿ ನೀರು ಕೂಳೆಂದು ಅಳುವಾಗಹಾಲ ಶಾಲ್ಯೋದನವೆಲ್ಲೊಮ್ಯಾಲೆ ಮ್ಯಾಲ್ವೈತರಣಿ ಸ್ನಾನವ ಮಾಡುವಕಾಲಕೆ ಅಭ್ಯಂಗನವೆಲ್ಲೊಕಾಲನ ದೂತರ್ಗೆ ಕೊಟ್ಟುಳಿವೆನೆಂದರೆಹೂಳಿದ ಧನ ದೂರಾಯಿತಲ್ಲೊಕಾಲಕಾಲಕೆ ದ್ವಿಜಪಂಕ್ತಿಭೋಜನಸುಖವ್ಯಾಳೆ ತಪ್ಪಿತನ್ನವೆಲ್ಲೊ 4ಕಷ್ಟಿಸಿ ಬಳಲುವೆ ಹಾಹಾಯೆಂದಳಲುವೆಇಷ್ಟನೆಂಟರು ಹೋದರೆತ್ತಮುಷ್ಟಿಕುಠಾರಪ್ರಹಾರನೋಡುನಿನ್ನವರಿಷ್ಟತನವು ನಿಂತಿತೆತ್ತಶಿಷ್ಟರ ನೋಡದೆ ಸತ್ಕಾರ ಮಾಡದೆನಿಷ್ಠುರ ನುಡಿದೆ ಪ್ರಮತ್ತಕೃಷ್ಣ ನಮೊ ಎಂದು ಕಡೆಗಾಣಲರಿಯೆ ಎಳ್ಳಷ್ಟು ಪುಣ್ಯವ ಕಾಣೆನೆತ್ತ 5ಕಂಗೆಟ್ಟು ತಕ್ರನ್ನೆ ಕಾಸಿ ಸೀಸ್ಯೆರೆವಾಗಅಂಗಣದ ಪಶು ಬಹುದೂರಕೆಂಗೆಂಡಗಂಭವಪ್ಪಿಸುವರು ನಿನ್ನ ಪರಾಂಗನೆಭೋಗಿಚದುರಅಂಗ ಶೃಂಗಾರದ ಕೊನಬುಗಾರ ನಿನಗ್ಹಿಂಗುವದೆ ಯಮದ್ವಾರಮಂಗಳ ಮಹಿಮ ಮುಕುಂದ ಮುರಾರಿ ಶ್ರೀರಂಗನ ಭಕುತಿವಿದೂರ 6ಸುಟ್ಟರೆ ಹಿಡಿಬೂದಿ ಕೆಟ್ಟರೆ ಕ್ರಿಮಿಕಾಯಇಟ್ಟರಿರದು ವಾಯುವಿರದೆಹುಟ್ಟಿ ಸುಜನ್ಮದಿ ಜಾಣರಾಗದೆಬುಧರಟ್ಟುವರೆ ದಿವಸ ಬರಿದೆಇಟ್ಟಣಿಸಿದ ಭವಗತ ಸುಖದು:ಖವುಂಡುಟ್ಟು ರಾಮನ ಮನವಿರದೆಕಟ್ಟಕಡೆಲಿ ನರಕವನುಂಬೋದುಚಿತಲ್ಲದಿಟ್ಟನಾಗು ಮಾಯೆಯಜರಿದು7ನಿತ್ಯನೈಮಿತ್ಯಕಾಮ್ಯಾದಿ ಸತ್ಕರ್ಮವಮತ್ತೆ ತಿಳಿದು ನಡೆ ಆತ್ಮಹತ್ಯವಸತ್ಯ ಅನ್ಯವಧೂಜನಸಖ್ಯಪರವಿತ್ತದಂಜಿಕೆ ಇರಲ್ಯಾತ್ಮಕರ್ತಮೂರವತಾರಿ ಪೂರ್ಣ ಬೋಧಾಚಾರ್ಯರಭೃತ್ಯನಾಗಿ ಬಾಳೊ ಆತ್ಮಎತ್ತೆತ್ತ ನೋಡಲು ಬೆನ್ನಬಿಡದೆಕಾವಪ್ರತ್ಯಕ್ಷನಾಗಿ ಪರಮಾತ್ಮ 8ಮಂಗಳಾತ್ಮರಿಗೆಅಹರ್ನಿಶಿಶ್ರೀವರಅಂಗಜಜನಕನೆಚ್ಚರಿಕೆಸಂಗಡಿಸಿದ ವಿಷಯಂಗಳಿದ್ದರೇನುತಂಗಳ ಅನ್ನದೋಕರಿಕೆಹಿಂಗದೆ ವರಸಂಗ ಮಾಡಿದರೊಯಿವರುಮಂಗಳಾತ್ಮಕನಿದ್ದ ಪುರಕೆಬಂಗಾರ ಮನೆಯ ಪ್ರಸನ್ವೆಂಕಟೇಶನಡಿಂಗರರಿಗೆ ನರ್ಕಸರ್ಕೆ 9
--------------
ಪ್ರಸನ್ನವೆಂಕಟದಾಸರು
ಶ್ರೀ ಮಧ್ವರಾಯರ ಸೇವೆ ದೊರಕುವುದುಜನುಮ ಸಫಲ ಕಾಣಿರೋ ಪಶ್ರೀಮದಾನಂದ ತೀರ್ಥರ ಪಾದವ ನೆನೆವರುಸಾಮಾನ್ಯಸುರರುಕಾಣಿ-ಬೊಮ್ಮನಆಣಿಅ.ಪಜಗತು ಸತ್ಯವು ಅಲ್ಲ ಜಡ-ಜೀವ ಭೇದವಲ್ಲಅಗುಣನು ಪರಬೊಮ್ಮನು-||ಹೀಗೆ ನುಡಿವ ಜನರ ನಿಗಮಶಾಸ್ತ್ರದಿ ಗೆದ್ದುಜಗ ಸತ್ಯ ಸಗುಣ ಬ್ರಹ್ಮ ಎಂದು ಪೇಳುವ 1ಹರಿಸರ್ವೋತ್ತಮನಿತ್ಯತರುವಾಯ ರಮಾದೇವಿತರುವಾಯ ವಿಧಿಪ್ರಾಣರುಸರಸ್ವತಿಭಾರತಿಗರುಡ ಅನಂತ ರುದ್ರತರುವಾಯ ಆರು ದೇವಿಗಳು 2ಸೌಪರ್ಣಿವಾರುಣಿದೇವಿ ಅಪರ್ಣಾದೇವಿಯರು ಸಮರುದ್ವಿಪದಿ ಮನ್ವಾದಿಗಳು ||ಈಪರಿತಾರತಮ್ಯ ಜಪ-ಧ್ಯಾನಾರ್ಚನೆಯಿಂದಅಪವರ್ಗದನ ಸೇವೆಯ ಮಾಡಿರೊ ಎಂಬ 3ಒಂದೊಂದು ಯುಗದಲಿ ಅನಂತ ಸೇವೆಯ ಮಾಡಿಚೆಂದದಿಂದಲಿ ಲಾಲಿಸಿ ||ಇಂದಿರಾರಮಣ ಗೋವಿಂದನೇ ದೈವವೆಂದು |ಸಂದೇಹವಿಲ್ಲದೆ ಸಾಧಿಸಿ-ಮಾಯೀ ಸೋಲಿಸಿ 4ಹಿಮಗಿರಿಯಿಂದ ಸೇತುವೆಯ ಪರ್ಯಂತರಭ್ರಮಿಸುತ ಸುಜನರಿಗೆ ||ಕ್ರಮತತ್ತ್ವ ಬೋಧಿಸಿ ಕಮಲನಾಭನಮೂರ್ತಿಕ್ರಮವರಿತು ಸ್ಥಾಪಿಸಿ ಪೂಜಿಸಿರೆಂದ 5ಭೂತಳದೊಳು ರೌಪ್ಯಪುರದಿ ನೆಲಸಿ ಗೆದ್ದುಧಾತ್ರೀ ಮುದ್ರೆಯ ತೋರಿಸಿ ||ಈತನೇ ಹನುಮಂತ ಈತನೇ ಭೀಮಸೇನಈತನೇ ಭವಿಷ್ಯದ ಬ್ರಹ್ಮಜೀವೋತ್ತಮ6ಶ್ರೀಮದನಂತನೆ ಅನಂತಕಾಲಕೆಯೆಂದುಯಮಕ ಭಾರತ ತೋರಿಸಿಸ್ವಾಮಿ ಸರ್ವಾಂತರ್ಯಾಮಿ | ಸರ್ವಗುಣಪೂರ್ಣನೆಂದುಪ್ರೇಮಿಪುರಂದರವಿಠಲನ ದಾಸನಾದ7
--------------
ಪುರಂದರದಾಸರು