ಒಟ್ಟು 183 ಕಡೆಗಳಲ್ಲಿ , 56 ದಾಸರು , 157 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬಾರೊ ನಂದನಂದನ ಅರವಿಂದಲೋಚನ ಪ ಅರವಿಂದಲೋಚನ ಭವಬಂಧ ಮೋಚನ ಅ.ಪ ದುರುಳ ದುರ್ಯೋಧನನ ಅನುಜ ಕರದಿ ಎನ್ನ ಸೀರೆ ಪಿಡಿದು ಭರದಿ ಎಳೆಯುವ 1 ಅರಿಯದಂತೆ ಇರುವರೆಲ್ಲ ಕಿರಿಯ ಜನಗಳು ಹರಿಯೆ ಕರುಣಾನಿಧಿಯೇ ಎನ್ನ ಮೊರೆಯ ಕೇಳಲೊ 2 ಕಾಮ ಜನಕ ನಾಮಗಿರಿ ಶ್ರೀ ಸ್ವಾಮಿ ನರಹರೆ ಹೇಮಕಶಿಪು ತನುಜನಂತೆ ಪ್ರೇಮದಿ ಸಲಹೆಲೊ 3
--------------
ವಿದ್ಯಾರತ್ನಾಕರತೀರ್ಥರು
ಬಾಲಕ ಕಂಡೆನು ನಿನ್ನ | ಬಾಲಕ ಪ. ಬಾಲಕ ಕಂಡೆನು ನಿನ್ನಾ | ಮುದ್ದು ಬಾಲ ತೊಡಿಗೆ ಇಟ್ಟರನ್ನಾ | ಆಹ ಕಾಲ ಕಾಲದ ಪೂಜೆ ಮೇಲಾಗಿ ಕೈಕೊಂಡು ಪಾಲಿಪ ಸುಜನರ ಅ.ಪ. ವಸುದೇವ ಕಂದ ಗೋವಿಂದ ವಸುಧಿ ಭಾರವನಿಳುಹೆ ಬಂದಾ | ಪುಟ್ಟ ಹಸುಗಳ ಕಾಯ್ವ ಮುಕುಂದ | ರ ಕ್ಕಸರನೆಲ್ಲರ ತಾನೆ ಕೊಂದಾ | ಆಹಾ ಹಸುಮಕ್ಕಳೊಡಗೂಡಿ ಮೊಸರು ಬೆಣ್ಣೆಯ ತಿಂದು ಶಶಿಮುಖಿಯರಮನಕಸಮ ಸಂತಸವಿತ್ತು 1 ವಿಶ್ವವ್ಯಾಪಕನಾದ ಬಾಲಾ | ಸರ್ವ ವಿಶ್ವ ತನ್ನೊಳಗಿಟ್ಟ ಬಾಲಾ | ಸ ರ್ವೇಶ್ವರನೆನಿಸುವ ಬಾಲಾ | ಬ್ರಹ್ಮ ಈಶ್ವರ ಸುರ ಪರಿಪಾಲಾ | ಆಹ ವಿಶ್ವ ಪ್ರದೀಪಕ ವಿಶ್ವನಾಟಕ ಸರ್ವ ವಿಶ್ವಚೇಷ್ಟಕನಾದ 2 ಸಿರಿಗರಿಯದ ಗುಣನೀತಾ | ಮತ್ತೆ ಸಿರಿಯ ತನ್ನೊಳಗಿಟ್ಟಾತಾ | ಆ ಸಿರಿಯಲ್ಲಿ ತಾನಿರುವಾತಾ | ಸೃಷ್ಟಿ ಸಿರಿಯಿಂದ ಮಾಡಿಸುವಾತಾ | ಆಹ ಸಿರಿಯ ಬಿಟ್ಟಗಲದೆ ಸಿರಿಗೆ ಮೋಹಕನಾಗಿ ಸಿರಿ ಸೇವೆ ಕೈಕೊಂಬ ಸಿರಿಕಾಂತ ಶ್ರೀಕೃಷ್ಣ 3 ಪ್ರಳಯಾಂಬುವಟಪತ್ರ ಶಯನಾ | ಥಳ ಥಳಿಸುವ ಪದತಳ ಅರುಣಾ | ವರ್ಣ ಎಳೆಗೂಸಿನಂತಿಹ ಚಿಣ್ಣಾ | ಆರು ತಿಳಿಯಲಾಗದ ಗುಣಪೂರ್ಣ | ಆಹ ನಳಿನಭವನ ಪೊಕ್ಕಳಲಿ ಪಡದು ತನ್ನ ನಿಲಯ ತೋರಿಸಿ ಕಾಯ್ದ ಚಲುವ ಚನ್ನಿಗ ದೇವ4 ಸತಿ ಪ್ರಾಯ ಕೆಡಿಸದೆ ತನ್ನಾ | ಮೈಯ್ಯೋಳ್ ಸುತರ ಪಡೆದಂಥ ಸಂಪನ್ನಾ | ವೇದ ತತಿಗೆ ಶಿಲ್ಕದ ಸುಗುಣಾರ್ಣ | ಅ ದ್ಭುತ ರೂಪ ಜಗದೇಕ ಘನ್ನಾ | ಆಹ ಜಿತಮಾನಿಗಳಿಗೆ ಹಿತಕೃತಿ ಕಲ್ಪಿಸಿ ಜತನದಿ ಜಗಜೀವತತಿಗಳ ಕಾಯೂವ 5 ಸುರತತಿಗಳನೆ ನಿರ್ಮೀಸಿ | ಅವರೊಳ್ ತರತಮ ಭೇದ ಕಲ್ಪಿಸಿ | ತನ್ನ ವರಪುತ್ರನೋಶಕೆ ವಪ್ಪೀಸಿ | ಸೃಷ್ಟಿ ಗರಸನ್ನ ಮಾಡಿ ನೀ ನಿಲಿಸೀ | ಆಹ ಪರಮೇಷ್ಟಿ ಪದವಿತ್ತು ಸರುವ ಜೀವರ ಶ್ವಾಸಕ್ಕರಸನೆಂದೆನಿಸಿದ 6 ಸರಿ ಇಲ್ಲ ವಾಯುಗೆಂದೆನಿಸೀ | ತತ್ವ ಸುರರಿಗಧೀಶನೆಂದೆನಿಸೀ | ತನ್ನ ಶರಣರ ಕಾಯ್ವನೆಂದೆನಿಸೀ | ಅವ ನಿರುವಲ್ಲಿ ತಾ ಸಿದ್ಧನೆನಿಸೀ | ಆಹ ತರಣಿಜಗೊಲಿಯುತ್ತ ಕುರುಕುಲವಳಿಯುತ್ತ ಪರಮತ ಖಂಡಿಸಿ ಕರೆಯೆ ತನ್ನನು ಬಂದಾ 7 ತ್ರಿವಿಧ ಜೀವರಗತಿದಾತಾ | ನಮ್ಮ ಪವನನಂತರ್ಯಾಮಿ ಈತಾ | ಪದ್ಮ ಭವ ರುದ್ರ ತ್ರಿದಶರ ಪ್ರೀತಾ | ಭಕ್ತ ರವಸರಕೊದಗುವ ದಾತಾ ಪವನಜ ಸತಿಭಕ್ತ ನಿವಹ ತಾಪದಿ ಕೂಗೆ ಭುವಿಯಲ್ಲಿ ಪೊರೆದಂಥ 8 ಶೋಣಿತ ನೀಲ ಕಾಯಾ | ದೇವ ಅಕ್ಲೇಶ ಆನಂದಕಾಯಾ | ಯುಗಕೆ ತಕ್ಕಂಥ ವರ್ಣಸುಕಾರ್ಯ | ಮಾಳ್ಪ ರಕ್ಕಸಾಂತಕ ಕವಿಗೇಯಾ | ಆಹ ಪೊಕ್ಕಳ ನಾಡಿಯೊಳ್ ಸಿಕ್ಕುವ ಜ್ಞಾನಿಗೆ ದಕ್ಕುವ ಸುರರಿಗೆ ಠಕ್ಕಿಪ ದನುಜರ 6 ಸಚ್ಚಿದಾನಂದ ಸ್ವರೂಪ | ಭಕ್ತ ರಿಚ್ಛೆ ಸಲ್ಲಿಸಿ ಕಳೆವ ತಾಪಾ | ಶ್ರೀ ಭವ ಕೂಪಾ | ದಲ್ಲಿ ಮುಚ್ಚಿಡ ತನ್ನನ್ನೆ ಸ್ತುತಿಪಾ | ಆಹ ಅಚ್ಚ ಭಾಗವತರ ಮೆಚ್ಚಿ ಕಾಯುತ ಅಘ ಕೊಚ್ಚಿ ತನ್ನುದರದಿ ಬಚ್ಚಿಟ್ಟು ಕಾಯುವ 10 ವಲ್ಲನು ಸಿರಿಸತಿ ಪೂಜೆ | ಮತ್ತೆ ವಲ್ಲನು ಸುರ ಸ್ತುತಿ ಗೋಜೆ | ತಾ ನೊಲ್ಲನು ಮುನಿಗಳ ಓಜೆ | ಹರಿ ವಲ್ಲನು ಋಷಿಯಾಗವ್ಯಾಜೆ | ಆಹ ಬಲ್ಲಿದ ಭಕುತರ ಸೊಲ್ಲಿಗೊದಗಿ ಬಂದು ಚಲ್ವರೂಪದಿ ಹೃದಯದಲ್ಲಿ ನಿಲ್ಲುವ ಕರುಣಿ11 ಅಂಬುದಿಶಯನ ಶ್ರೀಕಾಂತಾ | ಸರ್ವ ಬಿಂಬನಾಗಿಹ ಮಹಶಾಂತ | ತನ್ನ ನಂಬಿದ ಸುಜನರ ಅಂತಾ | ರಂಗ ಅಂಬುಜ ಮಧ್ಯ ಪೊಳೆವಂಥಾ | ಆಹ ಭಂಜನ ಪಶ್ಚಿ- ಮಾಂಬುಧಿ ತಡಿವಾಸ ಶಂಬರಾರೀಪಿತ12 ಸ್ವಪ್ನದಿ ಗೋಪಿಕರ ತಂದು | ಎನ ಗೊಪ್ಪಿಸೆ ತನ್ನ ಕೂಸೆಂದು | ಚಿನ್ನ ದಪ್ಪಾರಭರಣವದೆಂದೂ | ನಾನು ವಪ್ಪದಿರಲು ಎತ್ತೆನೆಂದೂ | ಆಹಾ ತಪ್ಪಿಸಿಕೊಳ್ಳೆ ಮತ್ತೊಪ್ಪಿಸಿ ಪೋದಳು ಅಪ್ಪಿ ಎನ್ನ ತೋಳೊಳೊಪ್ಪಿದ ಶಿಶುರೂಪ 13 ಶ್ರೀ ಮಾಯಾಜಯ ಶಾಂತಿ ರಮಣಾ | ಕೃತಿ ನಾಮಕ ಶಿರಿವರ ಕರುಣಾ | ಪೂರ್ಣ ಹೇಮಾಂಡ ಬಹಿರಾವರ್ಣ | ವ್ಯಾಪ್ತ ಮಾ ಮನೋಹರ ಪ್ರಣವ ವರ್ಣಾ | ಆಹ ಸ್ವಾಮಿ ಸರ್ವೋತ್ತಮ ಧಾಮತ್ರಯದಿ ವಾಸ ಶ್ರೀಮದಾಚಾರ್ಯರ ಪ್ರೇಮ ಮೂರುತಿ ಮುದ್ದು14 ದ್ವಿ ದಳ ಮಧ್ಯದಿ ರಥ ನಿಲಿಸೀ | ಪಾರ್ಥ ನೆದೆಗುಂದೆ ತತ್ವಾರ್ಥ ತಿಳಿಸೀ | ನಿನ್ನ ಅದುಭುತ ರೂಪ ತೋರಿಸೀ | ಸ- ನ್ಮುದವಿತ್ತು ಕುರುಕುಲವರಸಿ | ಆಹ ವಿದುರನ ತಾತ ನಿನ್ನೊಡೆಯ ಬಾಣದಿ ಫಣೆ ಯದುವೀರ ಚಕ್ರ ಹಸ್ತದಿ ಧರಿಸುತ ಬಂದ 15 ನಿತ್ಯನೂತನ ದೇವ ದೇವಾ | ಸರ್ವ ಶಕ್ತ ನಿನ್ಹೊರತಾರು ಕಾವಾ | ಎನ್ನ ಚಿತ್ತದಿ ನೆಲಸು ಪ್ರಭಾವಾ | ಸರ್ವ ಕೃತ್ಯ ನಿನ್ನದೊ ವಿಜಯ ಭಾವಾ | ಆಹಾ ಮುಕ್ತಿ ಪ್ರದಾತನೆ ಮುಕ್ತರಿಗೊಡೆಯನೆ ತತ್ವ ನಿಯಾಮಕ ತತ್ವಾರ್ಥ ತಿಳಿಸೈಯ್ಯಾ 16 ಚರಣತಳಾರುಣ ಪ್ರಭೆಯೂ | ಹತ್ತು ನಖ ಪಂಕ್ತಿಯ ಪರಿಯೂ | ಗೆಜ್ಜೆ ಸರಪಳಿ ಪಾಡಗರುಳಿಯೂ | ಮೇಲೆ ಜರೆಯ ಪೀತಾಂಬರ ನೆರಿಗೆಯೂ | ಆಹ ವರ ಜಾನುಜಂಘೆಯು ಕರಿಸೊಂಡಲಿನ ತೊಡೆ ಸರ ಮಧ್ಯ ಉರುಕಟಿ ಕಿರಿಗೆಜ್ಜೆ ಉಡುದಾರ 17 ಸರಸಿಜೋದ್ಭವ ವರಸೂತ್ರ | ಮೇಲೆ ಮೆರೆವಂಥ ಸಿರಿಯ ಮಂದೀರ | ಹೃದಯ ವರರತ್ನ ಪದಕದ ಹಾರ | ಸ್ವಚ್ಛ ದರ ವರ್ಣ ಪೊಲ್ವ ಕಂಧಾರಾ | ಆಹ ಕರದ್ವಯ ಕಂಕಣುಂಗುರ ತೋಳ ಬಾಪುರಿ ಸುರರಿಗಭಯ ತೋರ್ಪ ಕರಕಮಲದ ಪುಟ್ಟ 18 ಮೊಸರರ್ಧ ಕಡದಿರೆ ಜನನೀ | ಬಂದು ಹಸುಗೂಸು ಮೇಲೆ ಬೇಡೆ ನನ್ನೀ | ಯಿಂದ ಮುಸುಗಿಟ್ಟು ಪಾಲ್ಕುಡಿಯಲು ನೀ | ಒಲೆ ಬಿಸಿ ಹಾಲುಕ್ಕಲು ಪೋಗೆ ಜನನೀ | ಆಹ ಹಸಿವಡಗದ ಕೋಪಕ್ಮಸರ್ಗಡಿಗೆಯ ವಡ- ದೆಸೆವ ಕಡಗೋಲ್ವಡಿದ್ಕೊಸರೋಡಿ ಬಂದ ಹೇ19 ಪದ್ಮ ಮುಖದ ಕಾಂತಿ ಸೊಂಪೂ | ಅಧರ ತಿದ್ದಿ ಮಾಡಿದ ದಂತ ಬಿಳುಪೂ | ತುಂಬಿ ಮುದ್ದು ಸುರಿಸುವ ಗಲ್ಲದಿಂಪೂ | ಕರ್ಣ ಕುಂಡಲ ಕೆಂಪೂ | ಆಹ ಮಧ್ಯ ಮೂಗುತಿ ನಾಸ ಪದ್ಮದಳಾಕ್ಷವು ಸದ್ಭಕ್ತರೇಕ್ಷಣ ಶುದ್ಧಾತ್ಮ ಸುಖಪೂರ್ಣ20 ಕಮಲಸಂಭವ ವಾಯುಚಲನಾ | ಹುಬ್ಬು ವಿಮಲ ಫಣೆ ತಿಲುಕದಹನಾ | ಮೇಲೆ ಭ್ರಮರ ಕುಂತಳ ಕೇಶ ಚನ್ನಾ | ವಜ್ರ ಅಮಿತ ಸುವರ್ಣ ಮುತ್ತೀನಾ | ಆಹ ಕಮನೀಯ ಮಕುಟವು ಸುಮನಸರೊಂದಿತ ಕಮಲ ತುಳಸಿಹಾರ ವಿಮಲಾಂಗ ಸುಂದರ 21 ಅಂತರ ಬಹಿರ ದಿವ್ಯಾಪ್ತಾ | ಸರ್ವ ರಂತರ ಬಲ್ಲ ನೀ ಗುಪ್ತಾ | ಜೀವ ರಂತರಂಗದಿ ವಾಸ ಸುಪ್ತಾ | ದಿಗ ಳಂತಾನೆ ನಡೆಸುವ ಆತ್ತಾ | ಆಹ ಸಂತತ ಚಿಂತಿಪರಂತರಂಗದಿ ನಿಂತು ಕಂತುಪಿತ ಇನಕೋಟಿಕಾಂತಿ ಮೀರಿದ ಪ್ರಭ22 ಎಚ್ಚತ್ತು ಇರುವ ಸರ್ವದಾ | ಕಾಲ ಮುಚ್ಚಿ ಕೊಂಡಿಪ್ಪೊದೆ ಮೋದಾ | ಅಜ ನುಚ್ವಾಸದುತ್ಪತ್ತಿಯಾದ | ಬಾಯ ಪಾದ | ಆಹ ಮುಚ್ಚೆ ಭೂವ್ಯೋಮವು ಹೆಚ್ಚಿನ ಕೋಪವು ಇಚ್ಚಿಪವನವಾಸ ಸ್ವೇಚ್ಛಾ ವಿಹಾರನೇ 23 ಗೊಲ್ಲರೊಡನಾಟ ಬಯಸೀ | ವಸ್ತು ವಲ್ಲದೆ ಪರಸ್ತ್ರೀಯರೊಲಿಸೀ | ಮತ್ತೆ ಚಲ್ವ ಕುದುರೆ ಏರಿ ಚರಿಸೀ | ತಾ ನೆಲ್ಲಿ ನೋಡಲು ಪೂರ್ಣನೆನಿಸೀ | ಆಹ ವಲ್ಲದೆ ದ್ವಾರಕೆ ಇಲ್ಲಿಗೈತಂದು ಮ ತ್ತೆಲ್ಲರ ಕಾಯುವ ಚೆಲ್ವ ಮಧ್ವೇಶ ಶ್ರೀ 24 ಗೋಪಿ ಕಂದನೆ ಮುದ್ದು ಬಾಲಾ | ಚೆಲ್ವ ರೂಪ ಸಜ್ಜನ ಪರಿಪಾಲಾ | ಗುರು ನಿತ್ಯ ನಿರ್ಮಾಲಾ | ದೇವಾ ಗೋಪಾಲಕೃಷ್ಣವಿಠ್ಠಾಲ | ಆಹ ಪರಿ ನಿಂತು ಮ ಕೊಂಡ ಶ್ರೀಪತಿ ಮರುತೇಶ 25
--------------
ಅಂಬಾಬಾಯಿ
ಬಾಲಲೀಲ ಲೋಲ ಕೃಷ್ಣನ|ನೆನೆವೆನಾ| ಬಾಲಲೀಲ ಲೋಲ ಕೃಷ್ಣ ಈ ಲೋಕಾಳಿ ಪಾಲಿಪಾ|ವಿ- ಶಾಲ ಬಾಲ ನೀಲಗಾತ್ರನಾ|ನೆನೆವೆನಾ ಪ ಪಡುಲ ಕರಿಯಕಣ್ಣಲಿಟ್ಟರು|ಒಡನೆ ಕೇಳಿ ಕರ್ತನೃಪನ| ಮಡದಿ ಜನಕನಹಿತ ಸರಿಕನಾ|ವೈರಿಯ ಒಡಲಲುದಿಸಿದಾತ್ಮಭವನ|ಸಡಗರದಿ ಕಿರಿಯ ತಮ್ಮನ ಪಡೆದ ಜನನಿಯಣ್ಣ ಕಂದನಾ||ನೆನೆವನಾ 1 ಮುದದಲಿಂದ ಮಸುಧೆಯನ್ನು|ಎದೆಯಲೊತ್ತಿ ನಡೆವನಿಂದ| ಒದಗಿ ತನ್ನ ಶರೀರ ತೊರೆದನಾ|ತಂದೆಯಾ ವಿದಿತ ಮುತೈಯ್ಯನ ಮಗನ|ಚದುರತಮ್ಮನರಸಿ ಪಡೆದ ಉರದಿ ಮಗಳ ಪ್ರಾಣದರಸನಾ||ನೆನೆವೆನಾ 2 ನೃಪನಬಿಂಕ ಶಿಷ್ಯರಿಂದ|ಅಪಹರಿಸಿದವನ ಮಗನ| ಚಪಲ ಬಾಣ ಬರಲು ಸ್ಥಳವನು|ತಪ್ಪಿಸಿ ವಿಷದ ಹರಿಸಿ ಕಾಯ್ದೆನೈವರ|ನಿಪುಣ ಮಹೀಪತಿನಂದನ| ಕೃಪೆಲಿ ಪೊರೆವ ಉತ್ತುಮೊತ್ಮನಾ||ನೆನೆವೆನಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬೋಧ ನಡತೆಯಲಿ ಕತ್ತೆಯಾದೆ ಪ ನೀರಲಿ ನೆರಳನೆ ನೋಡುವೆ ಹಣೆಗೆ ಗಂಧವ ತೀಡುವೆಹಾರ ತುರಾಯ್ಗಳ ಸೂಡುವೆ ಮೋರೆಯನೆತ್ತೆತ್ತ ಮಾಡುವೆ1 ಜಾರೆಯರೊಡನೆ ಬೆರೆವೆ ಕಿಸಿ ಕಿಸಿ ಹಲ್ಲನೆ ಕಿರಿವೆಬಾರದ ಪದವ ಒದರುವೆ ಹಮ್ಮಿನಿಂದೆಲ್ಲೆಲ್ಲಿ ಮೆರೆವೆ2 ಬಿಡುವೆನು ಗುರುಪಾದವೆಂಬೆ ಬೇಡಿತಿಯ ಕೂಡುವೆನೆಂಬೆಸುಡುವೆನು ಕಪನಿಯನೆಂಬೆ ಲಿಂಗವ ಕಟ್ಟಿರಿ ಎಂಬೆ 3 ವಿಧ ವಿಧ ವೇಷವ ಧರಿಸಿ ಬಹು ಜಾತಿಯಲಿ ಕೈ ಬೆರಳಿರಿಚಿದಾನಂದ ನೀ ಮೆರೆಸಿ ಬಾಳುವೆ ದೊಡ್ಡವನೆನಿಸಿ 4
--------------
ಚಿದಾನಂದ ಅವಧೂತರು
ಬ್ಯಾಡವೊ ಕುವಾದಿ ಬ್ಯಾಡವೊ ಪ ಬ್ಯಾಡವೊ ಕೇಳು ಕುವಾದಿ ನೀ ನಾಡುವದುಚಿತವಲ್ಲ ಧಾದಿ | ಆಹಾ | ಮೂಢ ನಿನಿಗದಾವ ಖೋಡಿ ಬೋಧಿಸಿದನೊ ನಾಡಿಗೊಡಿಯ ರಂಗಗೀಡು ನೇನೆಂಬದುಅ.ಪ ಎಲ್ಲ ಜೀವರು ದೇವವೊಂದೆ ಭೇದ ವಿಲ್ಲೆಂದಾಡುವುದು ಧಂದೆ ಯಮ ಕೊಲ್ಲದೆ ಬಿಡ ನಿನ್ನ ಮುಂದೆ ನಿನ್ನ ಹಲ್ಲು ಮುರಿವನೊಂದೊಂದೆ || ಆಹಾ || ಉಳ್ಳಿಗಡ್ಡಿಯ ಉದ್ದಿ ಬೆಳ್ಳಗೆ ತೊಳೆದರೆ ಅಲ್ಲಕ್ಕೆ ಸರಿಯೇನೊ ಬಲ್ಲವರೊಪ್ಪಾರು 1 ಇದ್ದು ನೀ ಇಲ್ಲೆಂತೆಂಬಿ ಕಾಲಿ ಲೊದ್ದರೆ ಬಲು ನೊಂದು ಕೊಂಬಿ ಇ ಲ್ಲಿದ್ದವರೆಲ್ಲ ಬ್ರಹ್ಮ ನಾನೆಂಬಿ ಆ ಪರ ಬುದ್ಧಿಯಿಂದ ಶುದ್ಧ ಎಂತೆಂಬಿ || ಆಹಾ || ಬಿದ್ದುಹೋಯಿತು ನಿನ್ನ ಸಿದ್ದಾಂತವೆಲ್ಲವು ಸದ್ದು ಎನ್ನ ಕೂಡ ಗೆದ್ದು ಹೋಗಲಾರಿ ಬ್ಯಾಡವೊ 2 ಒಬ್ಬ ಬ್ರಹ್ಮ ಎಲ್ಲಾ ಮಾಯವೊ ಇ ನ್ನೊಬ್ಬನೆ ಎಲ್ಲಿಹ ಸುಖವೊ ಕುಹಕ ಶಾಸ್ತ್ರವೆಲ್ಲ ಮೃಷವೋ ಉಬ್ಬಿ ಆಡುವುದು ನಿರಯವು || ಆಹಾ || ಈ ಬಗೆಯಾಯಿತು ನಿನಗೊಬ್ಬಗೆ ಈ ಮಾತು ಬ್ಯಾಡವೊ 3 ಒಂದೆ ಆದರೆ ನಿನಗೆಲ್ಲ ನಿನ ತಂದೆಯಿಂದ ನೀ ಪುಟ್ಟಿದ್ದೆಲ್ಲ ನಿನ್ನ ತಂದೆ ನೀನು ಒಂದೆ ಎಲ್ಲಿ ಇನ್ನು ಛಂದಾಗಿ ನೀ ತಿಳಿಯೊ ಸೊಲ್ಲ || ಆಹಾ || ಸತಿ ನಿನಗೇನಾದಳೊ ಮನುಜ ಮಂದ ಮತಿಯೆ ತಾಯಿಗಂಡ ನೀನಾದೆಲ್ಲೋ 4 ಅನ್ನಕ್ಕೆ ಪರಬ್ರಹ್ಮನೆಂಬಿ ಈಗ ಅನ್ನ ಚಲ್ಲಲು ದೋಷವೆಂಬಿ ನಿತ್ಯ ಚನ್ನಾಗಿ ಪರಿಪೂರ್ತಿಗೊಂಬಿ ಈ ಅನ್ನ ನಾನು ವೊಂದೆ ಎಂಬೀ || ಆಹಾ || ನಿನ್ನ ದೇಹಕ್ಕೆ ರೋಗವು ಬಂದರೆ ನೀನು ಅನ್ನವ ಬಿಟ್ಟಿನ್ನು ಚನ್ನಾಗಿ ಮಲುಗುವಿ 5 ಭೇದವಿಲ್ಲೆಂತೆಂದರೆ ನೀನು ಮಾದಿಗರೆಲ್ಲ ಒಂದೇನೊ ಸರಿ ಹೋದವರೆಂಜಲ ತಿನ್ನೋ ಕಹಿ ಸ್ವಾದವು ನಿನಗಿಲ್ಲವಿನ್ನು ||ಆಹಾ|| ಓದನಾದರು ವೊಂದೆ ಮೇದ್ಯವಾದರು ವಂದೇ ಭೇದವಿಲ್ಲದೆ ತಿಂದು ಹೋದಿಯೋ ನರಕಕ್ಕೆ 6 ಎಲ್ಲವೂ ಬ್ರಹ್ಮಸ್ವರೂಪಾ ಬ್ಯಾರೆ ಇಲ್ಲೆಂದು ನಿನಗೆ ರೂಪಾ ಭೇದವಿಲ್ಲೆಂತೆಂಬುವದು ನಿಶ್ಚಯವು ವಾಕು ಸಲ್ಲದೆ ಇನ್ನು ಪೋದಾವು ||ಆಹಾ || ಬಲ್ಲಿದ ಪುರುಷನು ಮೆಲ್ಲನೆ ನಿನ್ನ ಸತಿ ಯಲ್ಲಿ ಮಲಗಿದರೆ ನೆಲ್ಲಿ ನೀ ಸೈರಿಸಿ7 ನಾಶವಿಲ್ಲೆಂಬುದೆ ಸತ್ಯ ದೋಷ ಮಿಥ್ಯ ಜಗ ಭೃತ್ಯ ಬಿಡದೆ ನಿತ್ಯ ||ಆಹಾ|| ದ್ವಾಸುಪರ್ಣವೆಂಬೊ ಈ ಶ್ರುತಿಗರ್ಥವು ಲೇಸಾಗಿ ತಿಳಿಯದೆ ಘಾಶಿಪಡುವಿ ವ್ಯರ್ಥ 8 ಈಶನು ನೀನಾದರೇನು ಸರ್ವ ದೇಶ ಪೋಷಿಸದೆ ಇಪ್ಪೋರೆ ನಿನ್ನ ಸಾ ಹಸ ವ್ಯರ್ಥ ಮಾಡೋರೆ ಹರಿ ದಾಸರು ಕಂಡು ಸಹಿಸೋರೆ ||ಆಹಾ || ಸತಿ ಸುತರು ಕ್ಲೇಶ ಪಡುವುದು ಬಿಡಿಸಲಾರಿಯೊ ಲೇಶ 9 ಗುರುದೈವವಿಲ್ಲವೊ ನಿನಗೆ ಒಬ್ಬ ಸರಿಯಿಲ್ಲ ಈ ಧರೆಯೊಳಗೆ ಯಾರು ಹಿರಿಯ ಕಿರಿಯರಿಲ್ಲ ನಿನಗೆ ನೀನು ಖರ ಶಬ್ದಕಿಂತ ಹೊರಗೆ ||ಆಹಾ || ಎರಡಿಲ್ಲಾಯೆಂಬೊದೆ ಇರುಳಿಲ್ಲ ಹಗಲಿಲ್ಲಾ ನರಕ ಸ್ವರ್ಗ ವಂದೇ ಅರಿಯಾದೆ ಮುಳುಗುವಿ 10 ವಂದನೆ ನಿಂದ್ಯಗಳೊಂದೇ ನಿನಗೆ ಗಂಧ ದುರ್ಗಂಧವು ವಂದೇ ಕೆಟ್ಟ ಹಂದಿಯೆಲ್ಲ ನೀನು ವಂದೇ ನಿನ್ನ ಕೊಂದರೆ ದೋಷವಿಲ್ಲವೆಂಬೆ ||ಆಹಾ|| ಎಂದಿಗೂ ಈ ಮಾತು ನಿಂದಾವೆ ನಿನಗಿನ್ನು ಮುಂದಕ್ಕೆ ಬರಲಾರಿ ಮಂದಮತಿಯೆ ಖೋಡಿ11 ಜಗದೊಳಗೆ ನೀ ನಿಂತು ಇದು ಜಗವಲ್ಲವೆಂಬೋದಕ್ಕಿಂತು ನೋಡಿ ನಗುವರೋ ಅಶುದ್ಧ ಜಂತು ಜಿಂಹ್ವೆ ಬಿಗಿದು ಕೋಯಿಸುವ ಯಮನಿಂತು ||ಆಹಾ || ಹಗಲು ಇರುಳು ವಂದೆ ನಗುತ ನಗುತಾ ಕಂಡು ತೊಗಲು ದೇಹವು ನಿನ್ನದಗೆ ಮಾಡುವುದು ವ್ಯರ್ಥ 12 ಸ್ವಾಮಿ ನಿನಗೆ ಬ್ಯಾರಿಲ್ಲಾ ನಿತ್ಯ ನೇಮ ಕರ್ಮವು ಬ್ಯಾರೆ ಸಲ್ಲ ಒಂದು ಕಾಮಿನಿ ನಿನಗೆ ಬೇಕಲ್ಲ ಪೂರ್ಣ ಕಾಮನು ನೀನೆಂಬೆಯಲ್ಲಾ ||ಆಹಾ|| ಗ್ರಾಮ ಭೂಮಿಗಳ್ಯಾಕೊ ತಾಮಸ ನಿನಗಿನ್ನು ತಾಮಸರಿಗೆಲ್ಲ ಸ್ವಾಮಿಯಾಗಿರು ಹೋಗೋ 13 ಕಾಣದೆ ಬಗಳುವೆ ಮಾಯಿ ನಾಯಿ ನಿನಗೆ ತಂದೆ ತಾಯಿ ಇನ್ನು ಕಾಣುತ ಬೊಗಳೋದು ನಾಯಿ ಈ ನಾಯಿ ಕಚ್ಚಿ ನೀ ಸಾಯಿ ||ಆಹಾ || ಬಾಯ ಮುರಿವಾ ನಿನ್ನ ನ್ಯಾಯದಿಂದಲಿ ವಾಯು ಕಾಯ ಖಂಡ್ರಿಸುವನೊ 14 ಇಷ್ಟು ಹೇಳಿದರೆ ನೀ ಕೇಳಿ ನೀ ವ್ಯರ್ಥ ನಿಷ್ಠುರಾಡಿ ನೀ ಬಾಳೀ ನಿನ್ನ ಕಟ್ಟಿಗೆ ಮುರಿದಂತೆ ಶೀಳಿ ಬಾಯ ಕುಟ್ಟಿ ತುಂಬುವ ಯಮಧೂಳಿ ||ಆಹಾ|| ಸೃಷ್ಟಿಗೊಡಿಯ ನಮ್ಮ ವಿಜಯವಿಠ್ಠಲನ ಮುಟ್ಟಿ ಭಜಿಸದಲೆ ಭ್ರಷ್ಟ ಮನುಜ ನೀ ಅಷ್ಟವೆಂದೆಂಬೋದು ಬ್ಯಾಡವೊ 15
--------------
ವಿಜಯದಾಸ
ಭಕುತಿಯಲಿ ಭಜಿಸಿ ಹರಿಯ ಸುಖಿಸಬಾರದೇ ಪ ಪ್ರಕಟದಿ ಸಜ್ಜನ ನಿಕಟದಿ ತಾಮಸ| ಶಕಟ ಮುರಿದ ಸುರ ಮುಕುಟ ಮಣಿಯಾ ಅ.ಪ ತರಣೀಯಾ ಕೋಟಿ ಪ್ರಕಾಶದಿ ಧರಣಿಯಾ ರಮಣನ ನಾಮ| ಕರಿ ಕಿರಿಯನೆ ಶಿರಿ| ಗರುಡಗರಿಯದೇ ಭರದಿ ತಾ ಬರುತದೆ ಶರಣರಾ ಹೊರೆದ 1 ಮರುವಿನ ಕತ್ತಲೆ ನೂಕುವ ಚರಣವ ಅರವಿನ ದೀಪವ ಹಚ್ಚಿ| ಕುರುವಿನಾ ಚಿನ್ಮಯ ನೊಡಲು ಗುರುವಿನಾ| ಚರಣವ ಪೂಜಿಸಿ ಕರುಣವ ಸಾಧಿಸಿ ತರುಣೋಪಾಯದ ಚರಣವ ಬಲಿಯೋ 2 ಮನವಧಾನದಿ ನಿಲಿಸಿ ತನುವನಾ ಸೇವೆಗರ್ಪಿಸಿ| ಘನವನು ಮಾಡುತಾ ಸುಜನರಾ ಅನುವನು ಕನಸಿಲೇ| ಘನ ಗುರು ಮಹಿಪತಿ-ಜನ ಪ್ರಭುವಿನ ಅನುದಿನದಲಿ ಪಾಡಿ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಂಗಳ ಮುದ್ದು ಕೃಷ್ಣನಿಗೆ ಜಯ ಮದನ ಜನಕ ಬಾಲ ಹರಿಗೆ ಪ. ಕಡಗೋಲ ನೇಣು ಪಿಡಿದಗೆ ಪಾಲ್ ಗಡಿಗೆ ಒಡೆದು ಇಲ್ಲಿ ಓಡಿ ಬಂದವಗೆ ಕಡಲ ತಡಿಯಲಿ ನಿಂತವಗೆ ಅಷ್ಟ ಮಡದಿಯರರಸನೆಂತೆಂಬ ಪುರುಷಗೆ 1 ಯತಿವರರಿಂದರ್ಚಿತಗೆ ಬಹು ಜತನದಿ ಭಕ್ತವರ್ಗಗಳ ಕಾಯ್ವನಿಗೆ ಯತಿ ಮಧ್ವರಾಯಗೊಲಿದಗೆ ನಿತ್ಯ ಚ್ಯುತ ದೂರವಾದ ಸರ್ವೇಶನೆಂಬುವಗೆ 2 ಗರುಡನ್ನ ಎಡದಿ ನಿಲಿಸಿದಗೆ ಬಲದಿ ಮರುತನ್ನ ನಿಲಿಸಿ ಕೊಂಡ್ಹರುಷಪಡುವನಿಗೆ ಕಿರಿದ್ವಾರದಿ ಮಧ್ವ ಉಳ್ಳವಗೆ ನಮ್ಮ ಸಿರಿಪತಿ ಗೋಪಾಲಕೃಷ್ಣವಿಠ್ಠಲಗೆ 3
--------------
ಅಂಬಾಬಾಯಿ
ಮಾಡಿರೊ ಪಾಡಿರೊ | ಲೋಕದೊಳಗೆ ಇದೆ ಬೀರುತಾ ಸಾರುತಾ ಶ್ರೀಕಾಂತನ ವೊಲಿಸಿ ಪ ದಶಮಿ ಏಕಾದಶಿ ದ್ವಾದಶಿ ದಿನತ್ರಯ | ವಸುಧಿಯೊಳಗೆ ಮಹಾವ್ರತವೆಂದು ತಿಳಿದು ತ್ರಿ | ದಶರೆಲ್ಲ ಕೈ ಕೊಂಡು ಮಾಡಿದರಂದು ರಂ | ಜಿಸುವ ಸತ್ಕರ್ಮದಲ್ಲಿ | ಬಿಸಜನಾಭನು ಲಕುಮಿಗೆ ಪೇಳಿದ ವ್ರತ | ಹಸನಾಗಿ ಬೊಮ್ಮಗೆ ಅರಹು ಮಾಡಲು ದೇವ | ಋಷಿಗೆ ಅಜನು ಪೇಳಲಾ ಮುನಿ ಬೀರಿದಾ ದಶ ದಿಕ್ಕಿನೊಳಗೊಂದು 1 ಉದಯಕಾಲದೆಲೆದ್ದು ಸಂಸಾರಯಾತ್ರೆ ಎಂದು | ಬದಿಯಲ್ಲಿದ್ದವರೆಲ್ಲ ಹರಿದಾಸ ದಾಸಿಯರು ಹೃದಯದೊಳೀಪರಿ ಯೋಚಿಸಿ ಅಜ್ಞಾನ ಒಂದು ಕಡೆಗೆ ನೂಕಿ | ಸದಮಲನಾಗಿ ಸ್ನಾನಾದಿಯ ಮಾಡಿ ಮ ವಿಧಿ ಮುಗಿಸಿ ಶ್ರವಣ ಸಾರಾ ಹೃದಯರಿಂದಲಿ ಕೇಳಿ2 ಗೋವಿಂದನ ಚರಣಕೆ ಎತ್ತಿ ನಿರ್ಮಲ ಚಿತ್ತ | ದಿಂದಲಿ ನಲಿವುತ ಹಿಗ್ಗಿ ಹಾರೈಸಿ ಆನಂದ ವಾರಿಧಿಯಲ್ಲಿ | ಕುಂದದೆ ಸೂಸುತ ಗೆಳೆಯರ ಒಡಗೂಡಿ | ತಂದು ಪುಷ್ಪಗಳಿಂದ ಮಂಟಪವ ವಿರಚಿಸಿ | ಇಂದು ಸ್ಥಾಪಿಸಿ ತುತಿಸಿ 3 ಜ್ಞಾನಿಗಳೊಡನೆ ಕುಳ್ಳಿದ್ದು ಸುಜ್ಞಾನಿಗಳು ಶುದ್ಧ ಗಾ| ಆನನ ಕೂಗುತ ಹಾಡುತ ಪಾಡುತ | ಧ್ಯಾನವ ಗೈವುತಲಿ | ಕಾಣಬಾರದಂತೆ ಪ್ರಜೆದೊಳಗೆ ತೋರಿ | ಮಗುವಿನಂತೆ ಶ್ರೀನಿವಾಸನ ನೆನಸಿ 4 ಕೂಡಿ ಸೋಗು ವೈಯಾರದಿ | ಕಾಲಲಿ ಗೆಜ್ಜೆಯ ಕಟ್ಟಿ | ವಲಯಾಕಾರ | ಮೇಲು ಚಪ್ಪಳೆಯಿಂದ | ಬಾಲವೃದ್ಧರು ನಿಂದು ಕುಣಿಕುಣಿದಾಡಿ ಹಿ | ಯಾಲಲಿ ಹರಿಯ ಸಂಕೀರ್ತನೆ ಕೀರ್ತಿಸಿ | ಸೋಲದೆ ಘನಸ್ವರ ಸ್ವರದಿಂದಲಿ ಕೂಗಿ ವಿ | ಶಾಲ ಭಕುತಿ ಒಲಿಸಿ 5 ಕಿರಿಬೆವರೊದಕ ಮೊಗದಿಂದಿಳಿಯಲು | ಉರದಲಿ ಇದ್ದ ದೇವಗೆ ಅಭಿಷೇಚನೆ | ಪರವಶವಾಗಿ ಮೈಮರೆದು ತಮ್ಮೊಳು ತಾವು | ಕರದು ತರ್ಕೈಸುತಲಿ | ಕಿರಿನಗೆಯಿಂದ ತೋಳುಗಳು ಅಲ್ಲಾಡಿಸಿ | ಎರಡು ಭುಜವ ಚಪ್ಪರಿಸಿ ಏಕಾದಶಿ | ದುರಿತ ರಾಸಿಗೆ ಪಾವಕನೆಂದು ಕೂಗಿ ಬೊಬ್ಬಿರಿದು ಬಿರಿದು ಸಾರಿ6 ಮಧ್ಯ ಮಧ್ಯದಲಿ ಮಂಗಳಾರುತಿ ಎತ್ತಿ | ಮಧ್ವರಾಯರೆ ಮೂರು ಲೋಕಕೆ ಗುರುಗಳು | ಸಿದ್ಧಾಂತ ಮುನಿ ಸಮ್ಮತಾ | ಮಲ ಮೂತ್ರವನು ಕ್ರಿಮಿವ ಮನವು | ಮೆದ್ದಾ ಸದ್ದೋಷಿ ಚಂಡಾಲ ವೀರ್ಯಕ್ಕೆ ಬಿದ್ದವ ನಿಜವೆನ್ನಿ 7 ಸಾಗರ ಮೊದಲಾದ ತೀರ್ಥಯಾತ್ರೆಯ ಫಲ | ಭೂಗೋಳದೊಳಗುಳ್ಳ ದಾನ ಧರ್ಮದ ಫಲ | ಆಗಮ ವೇದಾರ್ಥ ಓದಿ ಒಲಿಸಿದ ಫಲ | ಯೋಗ ಮಾರ್ಗದ ಫಲವೊ | ಜಾಗರ ಮಾಡಿದ ಮನುಜನ ಚರಣಕ್ಕೆ ಬಾಗಿದವಗೆ ಇಂಥ ಫಲಪ್ರಾಪ್ತಿ ನಿರ್ದೋಷನಾಗುವ ವೈರಾಗ್ಯದಿ 8 ನಿತ್ಯಾ ನೈಮಿತ್ಯಕ ಮಾಡು ಮಾಡದಲಿರು | ಪೋಗಾಡದೆ ಸದಾಚಾರ ಸ್ಮøತಿಯಂತೆ ಅತ್ಯಂತ ಪಂಡಿತ ಪಾವನ್ನ | ಉತ್ತಮರೊಡಗೂಡಿ ಮೃಷ್ಟಾನ್ನ ಭುಂಜಿಸಿ | ಮೃತ್ಯು ಜೈಸಿ ಸದ್ಗತಿಗೆ ಸತ್ಪಥಮಾಡು | ಸತ್ಯ ಮೂರುತಿ ನಮ್ಮ ವಿಜಯವಿಠ್ಠಲರೇಯ | ನಿತ್ಯ ಬಿಡದೆ ಕಾವಾ 9
--------------
ವಿಜಯದಾಸ
ಮಾಧವಾ ನಿಮ್ಮ ನಾಮ ಸಾಲದೇ ಪ ಪರಗತಿ ಸುಖವನು ಸ್ಮರಿಸಲು ನಿನ್ನನಾ|| ಪರಿಪರಿ ತಪದಿಂದಾ ಚರಿಸುವ ದ್ಯಾತಕೆ ನಾ 1 ಕರಿಕಿರಿಯನ್ನಲು ಶರೆಯನು ಬಿಡಿಸಿದ| ಶರಣ ಪ್ರಹ್ಲಾದನ ದುರಿತದಿ ಕಾಯ್ದ2 ದ್ರೌಪದಿ ಸ್ಮರಿಸಲು ಆಪತ್ತ ಹರಿಸಿದ| ಆ ಪತಿತ-ಜಮಿಳ ಪಾಪದಿ ತರಿಸಿದ 3 ನೆನೆಯಲು ಪಿಂಗಳಾ ಕ್ಷಣದಿ ಗತಿಯ ಕೊಟ್ಟಾ| ಬಿನುಗು ಮಂಡೂಕನ ವಿಮಾನದಿ ಮೆರೆಸಿದಾ4 ದುರುಳನ ಕೈಯಿಂದ ಹರಣಿಯ ಕಾಯಿದಾ| ಗುರಿಯಾ ತಪ್ಪಿಸಿ ಸೆರೆ ಹೊರೆದ ಕಪೋತಕ5 ಹಲವು ಸಾಧನದಿಂದ ಬಳಲುವ-ದ್ಯಾತಕ| ತಿಳಿದವ ಬೇಡಿದ ಫಲವನೇ ಕೊಡುತಿಹ 6 ತಂದೆ ಮಹಿಪತಿ ನಂದನ ಸಾರಥಿ| ಎಂದೆಂದು ನನಗಿದೆ ಛಂರದಿ ಕುಡು ಕಂಡ್ಯಾ 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮುಯ್ಯದ ಹಾಡುಗಳು ನೋಡೆ ಧರಣಿ ನಿನ್ನ ಬೀಗರೋಡಿ ಬರುವುದಾ ಕಾಡು ಜನರು ನಗುವ ರೀತಿ ಮಾಡಿ ಮೆರೆವುದಾ ಪ. ಸುತ್ತ ನಾಲ್ಕು ಮುಖದಿ ವೇದ ತತ್ವ ಪೇಳ್ವ ಹಂಸ ಪಕ್ಷಿ ಹತ್ತಿಕೊಂಡು ಬಂದ ಹಳಬ ಮುತ್ಯನೊಬ್ಬನು ಹಸ್ತದೊಳಗಕ್ಷಮಾಲೆಯೆತ್ತಿ ಮಣಿಗಳೆಣಿಸುವಗಿ ನ್ನೆತ್ತ ಪೂಜೆಯಿಲ್ಲವೆಂಬರತ್ಯಾಶ್ಚರ್ಯವರಿಯೆಯ 1 ಮತ್ತೊಬ್ಬನ ನೋಡೆ ಮುದಿಯೆತ್ತನೇರಿ ಬರುವನಿವನ ಜೊತೆಯಲಿರುವ ಭೂತಗಣವು ಸುತ್ತ ಮೆರೆವುದ ಬತ್ತಲಿದ್ದು ಭಸ್ಮ ಪೂಸಿ ಕೃತ್ತಿವಾಸನನಾದ ಫಾಲ ನೇತ್ರ ರುಂಡಮಾಲಶೂಲವೆತ್ತಿ ಕುಣಿವ ಮುತ್ಯತನವ 2 ಗರುವದಿಂದ ಗಜವನೇರಿ ಬರ್ವನ ನೋಡಮ್ಮ ಶತ ಪರ್ವವನ್ನು ಪಿಡಿದ ಸಕಲ ಗೀರ್ವಾಣೀಶನ ಸರ್ವಾವಯವದಲ್ಲಿ ಕಣ್ಣಾಗಿರ್ವದೇನೊ ತಿಳಿಯದು ನಿ ಗರ್ವಿ ಶಿರೋಮಣಿಯೆ ಈತ ಪರ್ವತಾರಿಯೆಂಬುವುದನು 3 ಠಗರು ಕೋಣನೆಗಳ ಮೇಲೆ ಸೊಗಸಿನಿಂದಲೇರ್ದ ಕೆಲಸ ಬಗೆ ಬಗೆ ಬೈರೂಪ ವರ್ಣನೆಗಳು ಸಾಕಿನ್ನು ಸುಗುಣೆ ಮೊದಲೆ ತಿಳಿಯದೆ ನೀ ಮಗಳನೀವ ಭಾಷೆ ಕೊಟ್ಟ ಬಗೆಯ ಪೇಳೆ ಭಾಗ್ಯದ ಹಮ್ಮಿಗೆ ತಕ್ಕಂಥ ನಗೆಯ ಕೇಳೆ 4 ಎರಡು ಮಗುಗಳದರಳೊಂದು ಬಿರುದ ಹೊಟ್ಟೆ ಮೇಲೆ ಕಟ್ಟಿ ದುರಗ ಬೆಳೆವ ಪೋರ ನೋಡೆ ಕರಿಯ ಕುವರನು ಕಿರಿಯ ಕೂಸಿನೊಂದು ನವಿಲ ಮರಿಯನೇರುತ್ತಾರು ಮುಖದಿ ಮೆರೆವ ಛಂದವೇನನೆಂಬೆ ಥರವೆ ನಿನಗೆ ಮಿಸುಣಿ ಗೊಂಬೆ 5 ಅಳಿಯನ ಸಂಸ್ಥಿತಿಯ ನೋಡಿ ತಿಳಿವದೆಂತು ಸುಲಭವಲ್ಲ ಹಲವು ಜನರ ಕೂಡಿಕೊಂಡು ಸುಳಿವರೆ ಬಲ್ಲ ನೆಲೆಯ ಕಾಣದಖಿಳ ವೇದ ಕುಲವು ಭ್ರಮೆಯ ತಾಳ್ವದಿಂಥಾ ಕುಲವೆಂದರಿಯಳಾಗಿ ಲೋಕ ಚೆಲುವೆ ಮಗಳನಿತ್ತೆಯಲ್ಲೆ 6 ಆದರೀತ ಭಕ್ತಜನರ ಕಾದುಕೊಳುವನೆಂಬ ಗುಣವ ಶೋಧಿಪರಿಗೆ ಸಕಲಾನಂದ ಸಾಧಕನೆಂದು ಬೋಧಗೊಳದೆ ನುಡಿದ ಸ್ವಾಪರಾಧವೆಲ್ಲ ಕ್ಷಮಿಸಿ ನಮ್ಮ ಶ್ರೀದ ವೆಂಕಟಾದ್ರಿನಾಥ ಕಾದುಕೊಳಲಿ ಕರುಣವಿಡಲಿ 7
--------------
ತುಪಾಕಿ ವೆಂಕಟರಮಣಾಚಾರ್ಯ
ಯಾಕೆ ಕಷ್ಟ ಪಡುವೆ ಲೋಕನಾಯಕ ಮಾಯಾ ಜೋಕೆಯಿಂದ ಸಲಹು ನಮ್ಮ ಪ ಸಿರಿಯೆ ಪಟ್ಟದರಸಿ ನಿನಗೆ ಕಿರಿಯ ಮಡದಿ ಧರಣಿಯಾಗೆ ಹಿರಿಯ ಮಗನು ಸರ್ವಜನರೊಳಿರುತ ಕಾಮಿಸುವನು ಜಗವ 1 ಮಗನು ಜಗವ ನಿರ್ಮಿಸುವನು ಮಗುಳೆಲಯವಗೈವ ಮೊ- ಮ್ಮಗನು ನಿನ್ನ ದಾಸಿ ಈ ಜಗವ ಮೋಹಿಸುತ್ತಲಿರವಳು 2 ನೀರೊಳಿರುತ ಮೋರೆ ಮುಚ್ಚಿ ಕೋರೆ ಮಸೆದು ಕಂಬದಿಂದ ಹಾರಿಯೆಳೆದು ಧಾರಿಣಿಯ ಧೀರ ನೃಪರನ್ನೆಲ್ಲ ಕೊಂದು 3 ಊರುಬಿಟ್ಟು ಹಾರಿ ವನವ ಜಾರನಾಗಿ ಭಂಗಪಡಿಸಿ ನಾರಿಯರನು ದಾರ ತೇಜಿಯೇರಿ ಮೆರೆದು ಬಾರಿ ಬಾರಿ4 ಪರಮಪದವನಗಲಿ ಚಂಡ ಕರಣರಥವ ನುಳಿದು ಕ್ಷೀರ ಶರಧಿಯನ್ನು ಬಿಟ್ಟು ವ್ಯಾಘ್ರಗಿರಿಯೊಳಿರುವ ವರದವಿಠಲ5
--------------
ವೆಂಕಟವರದಾರ್ಯರು
ಯಾಕೆ ಜೀವನೆ ಒಣ ಉಸಾಬರಿ ನಿನ ಗ್ಯಾಕೆ ಲೋಕದ ಸುಳ್ಳೆ ಕಿರಿ ಕಿರಿ ಪ ಪಾದ ಬಿದ್ದು ಮೊರಿ ಪರ ಲೋಕ ಪದವಿ ಸಂಪಾದಿಸಿ ಮೆರಿ ಅ.ಪ ಇಷ್ಟಬಂಧು ಸತಿಸುತರೆಲ್ಲ ನೀನು ಬಿಟ್ಟು ಹೋಗ್ವಾಗ್ಯಾರು ದಿಕ್ಕಿಲ್ಲ ಎಷ್ಟು ಸಂಪಾದಿಸಿದ ಗಳಿಕೆಲ್ಲ ನೀನು ಕಟ್ಟಿಕೊಂಡು ಸಂಗಡೊಯ್ಯೋಣಿಲ್ಲ ಕುಟ್ಟಿ ಯಮದೂತರು ಕಟ್ಟಿ ಎಳೆಯುವಾಗ ನೀ ಗಟ್ಟಿ ಮಾಡಿದ್ದು ಎಲ್ಲ ಬಟ್ಟಬೈಲೆ 1 ಯಾರು ಮೆಚ್ಚಿದರು ಫಲವಿಲ್ಲ ನಿನ ಗ್ಯಾರು ಮುನಿದರೇನು ಕೆಡುಕಿಲ್ಲ ನೀರಮೇಲಿನ ಲಿಪಿಯಂತೆಲ್ಲಜಗ ಸಾರ ಸುಳ್ಳು ಖರೆವೊಂದಿಲ್ಲ ತೋರುವ ಬಿಸಿಲಿನ ವಾರಿಯಂತೆ ಮಾಯಾ ಕಾರ ತಿಳಕೋ ತೋರುವುದೆಲ್ಲ 2 ಬಂದಿ ಇಲ್ಲಿಗೆ ಬಹಳ ಲಗುಮಾಡಿ ಮತ್ತೆ ಮುಂದೆ ಹೋಗುವುದೆಲ್ಲಿ ತಿಳಿ ಮಂದನಾಗದೆ ಚಾಚಿ ಜ್ಞಾನಕುಡಿ ಅಲ್ಲಿ ನಿಂದು ನೋಡು ನಿಜ ಹುಡುಕಾಡಿ ಇಂದಿನ ಸಮಯವು ಮುಂದೆ ಸಿಗುವುದೇನೋ ತಂದೆ ಶ್ರೀರಾಮಪಾದಕ್ಹೊಂದಿ ಮುಕ್ತಿಯ ಪಡಿ3
--------------
ರಾಮದಾಸರು
ಯಾಕೆ ಪುಟ್ಟಿಸಿದಿ ನೀ ಸಾಕಲಾರದೆ ಜಗ-ದೇಕ ಕಾರಣಪುರುಷನೆ ಕೃಷ್ಣ ಪ ವಾಕು ಚಿಂತಿಸೆ ಇಂಥಕಾಕು ಮಾಡುವುದುಚಿತವೆ ಕೃಷ್ಣ ಅ.ಪ. ಒಡಲಿಗನ್ನವ ಕಾಣೆ ಉಡಲು ಅರಿವೆಯ ಕಾಣೆಗಡಗಡನೆ ನಡುಗುತಿಹೆನೋ ಕೃಷ್ಣಮಡದಿ ಮಾತೆಯರ ಬಿಟ್ಟು ಒಡಹುಟ್ಟಿದವರ ಬಿ -ಟ್ಟಡವಿ ಪಾಲಾದೆನಲ್ಲೋ ಕೃಷ್ಣಕುಡುತೆ ಕೊಡುವವರಿಲ್ಲ ನುಡಿಯ ಕೇಳುವರಿಲ್ಲಬಡತನವು ಕಂಗೆಡಿಸಿತೋ ಕೃಷ್ಣಕಡೆ ಹಾಯಿಸುವರ ಕಾಣೆ ನಡುಮಡುವಿನೊಳು ಕೈ ಬಿಡದೆ ದಡವನು ಸೇರಿಸೋ ಕೃಷ್ಣ 1 ಕೊಟ್ಟವರ ಸಾಲವನು ಕೊಟ್ಟು ತೀರಿಸದವರಪೊಟ್ಟೆಯೊಳು ಪುಟ್ಟಲಾಯ್ತೋ ಕೃಷ್ಣಎಷ್ಟು ಜನುಮದಿ ಮನಮುಟ್ಟಿ ಮಾಡಿದ ಕರ್ಮಕಟ್ಟೀಗ ಉಣಿಸುತಿಹುದೋ ಕೃಷ್ಣಸೃಷ್ಟಿಯೊಳಗೆನ್ನಂಥ ಕೆಟ್ಟ ಪಾಪಿಷ್ಠ ಜನಘಟ್ಟಿಸಲಿಲ್ಲವೇನೋ ಕೃಷ್ಣವಿಠ್ಠಲನೆ ನಿನ್ನ ಮನಮುಟ್ಟಿ ಭಜಿಸಿ ಹಿಂದೆಎಷ್ಟು ಜನ ಬದುಕಲಿಲ್ಲೋ ಕೃಷ್ಣ 2 ಆಳು ದೇಹವು ಗೇಣು ಕೀಳಾಗಿ ಪಲ್ಕಿರಿದುಖೂಳ ಜನರ ಮನೆಗೆ ಕೃಷ್ಣಹಾಳು ಒಡಲಿಗೆ ತುತ್ತು ಕೂಳಿಗೆ ಹೋಗಿ ಅವರವಾಲೈಸಲಾರೆನಲ್ಲೋ ಕೃಷ್ಣಬಾಳು ಈ ಪರಿಯಾದ ಮ್ಯಾಲೆ ಭೂಮಿಯಲಿ ಬಹುಕಾಲ ಕಳೆಯುವುದುಚಿತವೆ ಕೃಷ್ಣಆಲಸ್ಯ ಮಾಡದಲೆ ಈ ವ್ಯಾಳ್ಯದಲಿ ಅರಿತುಪಾಲಿಸಲು ಬಹು ಕೀರ್ತಿಯೋ ಕೃಷ್ಣ 3 ಸಿರಿ ಅರಸನೆಂದು ಶ್ರುತಿ ಸಾರುತಿದೆಬಂದುದೀಗೇನು ಸಿರಿಯೋ ಕೃಷ್ಣಒಂದೊಂದು ನಿಮಿಷ ಯುಗಕಿಂತಧಿಕವಾಗುತಿದೆಮುಂದೋರದ್ಹಾಂಗಾಯಿತೋ ಕೃಷ್ಣಸಂದೇಹವಿಲ್ಲ ಗೋವಿಂದ ಶ್ರೀಪದದಾಣೆತಂದೆ ನೀ ರಕ್ಷಿಸದಿರೆ ಕೃಷ್ಣಮುಂದೆ ಭಜಿಸುವರು ಹೀಗೆಂದು ವಾರುತೆ ಕೇಳಿಬಂದುದಪಕೀರ್ತಿ ಮಾತು ಕೃಷ್ಣ 4 ವತ್ಸರ ಈರೀತಿ ಕಾಲಕಳೆದೆನೋ ಕೃಷ್ಣವ್ಯರ್ಥವಾಯಿತು ಜನುಮ ಸಾರ್ಥಕಾಗದು ಕಣ್ಣುಕತ್ತಲೆಗವಿಸಿತಲ್ಲೋ ಕೃಷ್ಣಇತ್ತ ಬಾರೆಂತೆಂದು ಹತ್ತಿಲಿಗೆ ಕರೆದೊಂದುತುತ್ತು ಕೊಡುವರ ಕಾಣೆನೋ ಕೃಷ್ಣವಿಸ್ತರಿಸಲಾರೆ ಇನ್ನೆತ್ತ ಪೋಗಲೊ ನಿನ್ನಚಿತ್ತವ್ಯಾತಕೆ ಕರಗದೋ ಕೃಷ್ಣ 5 ಆರು ಗತಿ ನಿನಗಧಿಕರಾರು ಧಾರುಣಿಯೊಳಗೆತೋರಿಸೈ ಕರುಣನಿಧಿಯೆ ಕೃಷ್ಣಈರೇಳು ಲೋಕಕಾಧಾರವಾದವಗೆ ಬಲುಭಾರವಾದವನೆ ನಾನು ಕೃಷ್ಣಮೀರಿ ನುಡಿಯಲು ಹದಿನಾರೆರಡು ಪಲ್ಗಳುಬೇರು ಕಳಕಳಯಿತೋ ಕೃಷ್ಣತೋರು ಬಂಕಾಪುರದ ಧಾರುಣಿಪುರವಾಸವೀರ ನರಸಿಂಹದೇವ ಕೃಷ್ಣ 6 ಹರಿಯಾತ್ರೆ ಮಾಡಲಿಲ್ಲ ಹರಿಮೂರ್ತಿ ನೋಡಲಿಲ್ಲಹರಿದಾಸ ಸÀಂಗವಿಲ್ಲ ಕೃಷ್ಣಹರಿಸ್ಮರಣೆ ಮಾಡಲಿಲ್ಲ ಸುರನದಿಯ ಮೀಯಲಿಲ್ಲಧರಣಿ ಸಂಚರಿಸಲಿಲ್ಲ ಕೃಷ್ಣಅರಿತರಿತು ಮನ ವಿಷಯಕೆರಗಿ ಹರುಷವ ತಾಳಿಬರಿದಾಯಿತಾಯುವೆಲ್ಲ ಕೃಷ್ಣಮರುತಾಂತರ್ಗತ ಸಿರಿಯರಸ ಹರಿಯೆಂದುಹರುಷಾಬ್ದಿ ಮಗ್ನನಲ್ಲ ಕೃಷ್ಣ7 ಹರಿನಾರಾಯಣನೆಂದು ಕರವೆತ್ತಿ ಮುಗಿದೊಮ್ಮೆ ಮೈ ಮರೆದು ನಟಿಸಲಿಲ್ಲ ಕೃಷ್ಣಹರಿಸ್ಮರಣೆ ಸ್ಮರಿಸಿ ಸಿರಿತುಳಸಿ ಪುಷ್ಪವನುಕರವೆತ್ತಿ ನೀಡಲಿಲ್ಲ ಕೃಷ್ಣಸರ್ವಜ್ಞರಾಯರು ವಿರಚಿಸಿದ ಗ್ರಂಥವನುದರುಶನವೆ ಮಾಡಲಿಲ್ಲ ಕೃಷ್ಣಸ್ಮರಿಸಲಾರದ ಪಾಪ ಸ್ಮರಣೆಪೂರ್ವಕ ಮಾಡಿಸ್ಥಿರಭಾರನಾದೆನಲ್ಲೋ ಕೃಷ್ಣ 8 ದುರುಳಜನರೊಡನಾಡಿ ಹರಿಣಾಕ್ಷಿಯರ ಕೂಡಿಸರಿ ಯಾರು ಎಂದು ತಿರುಗಿ ಕೃಷ್ಣನಿರುತ ಕ್ಷುದ್ರವ ನೆನೆಸಿ ನೆರೆದೂರ ಮಾರಿ ಹೆಗ್ಗೆರೆಗೋಣನಂತೆ ತಿರುಗಿ ಕೃಷ್ಣಪರರ ಅನ್ನವ ಬಯಸಿ ಶರೀರವನೆ ಪೋಷಿಸಿಶಿರ ಒಲಿದು ಶಿಲೆಗೆ ಹಾಯಿದು ಕೃಷ್ಣಶರಣವತ್ಸಲನೆಂಬೊ ಬಿರುದು ಪಸರಿಸುವಂಥಕರುಣ ಇನ್ನೆಂದಿಗಾಹುದೊ ಕೃಷ್ಣ 9 ಉರಗ ಫಣಿ ತುಳಿಯಲೊಎರಡೊಂದು ಶೂಲಕ್ಹಾಯಲೊ ಕೃಷ್ಣಕೊರಳಿಗ್ಹಗ್ಗವ ಹಾಕಿ ಮರವೇರಿ ಕರಬಿಡಲೋಗರಗಸದಿ ಶಿರಗೊಯ್ಯಲೋ ಕೃಷ್ಣಕರುಣವಾರಿಧಿ ಎನ್ನ ಕರಪಿಡಿದು ಸಲಹದಿರೆಧರೆಯೊಳುದ್ಧರಿಪರ್ಯಾರೋ ಕೃಷ್ಣ 10 ಎಷ್ಟು ಹೇಳಲಿ ಎನ್ನ ಕಷ್ಟ ಕೋಟಿಗಳನ್ನುಸುಟ್ಟೀಗ ಬೇಯ್ಯುತಿಹವೋ ಕೃಷ್ಣಕಷ್ಟಬಟ್ಟ ಮಗನೆಂದು ದೃಷ್ಟಿ ನೀರೊರೆಸೆನ್ನಪೊಟ್ಟೆಯೊಳ್ಪಿಡಿವರ್ಯಾರೊ ಕೃಷ್ಣಕೃಷ್ಣನಾಮ ವಜ್ರಕ್ಕೆ ಬೆಟ್ಟ ದುರಿತವು ನೀಗಿಥಟ್ಟನೆ ಬಂದು ನೀನು ಕೃಷ್ಣಇಷ್ಟವನು ಸಲಿಸಿ ಗುಟ್ಟ್ಟಲಿ ಶ್ರೀರಂಗವಿಠಲ ಎನ್ನ ಕಾಯೋ ಕೃಷ್ಣ 11
--------------
ಶ್ರೀಪಾದರಾಜರು
ಯಾಚಕರು ಪರರ ಸಂಕಟ ಬಲ್ಲರೆಣ ಪ ಭೂ ಚಕ್ರದಲಿ ಗಾಳಿಯಂತೆ ತಿರುಗಲು ಬಿಡರುಅ.ಪ ಕಾಪೀನವನು ಧರಿಸಿ ಮುಖವ ಡೊಂಕನೆ ಮಾಡಿ ಕೋಪದಿಂದಲಿ ಕರವನೆತ್ತಲ್ಯಾಕೆ ಪಾಪಿ ಕೂಪವ ಮೀರಿ ಸಮುದ್ರವನು ನೆರೆ ದಾಟಿ ರೂಪಾಂತರದಿ ಮನೆ ಮನೆಯ ಪೊಕ್ಕರು ಬಿಡರು 1 ವಿಷವ ಸವಿದುಂಡು ಮಹ ಮಡುವ ಪ್ರವೇಶಿಸಿ ವಸುಧೆಯೊಳು ಬೇಡಿ ಕಿರಿತಂದುಂಡರು ವಸಿಸಿ ಮಾನಸದಿ ಗೃಹಕರ್ಮ ಮಾಡಲಿ ಬಿಡರು 2 ಜುಟ್ಟು ಜನಿವಾರವನು ಕಿತ್ತುಕೊಂಡು ಯತಿಯಾಗಿ ಕಟ್ಟ ಕಡೆಯಲಿ ಗೃಹಸ್ಥ ಧರ್ಮ ತೊರೆದು ಹುಟ್ಟುಗತಿ ಯಿಲ್ಲೆನಗೆ ಕೃಷ್ಣ ಕೃಷ್ಣ ವಿಜಯ ವಿಠ್ಠಲನ ಪಾದಕೆ ಮೊರೆಯಿಟ್ಟರು ಬಿಡರು 3
--------------
ವಿಜಯದಾಸ
ಯೆಂದಿಗೆ ಬರುತೀಯೆ ಸುಂದರ ಭಾರತಿ ಮಂದರೋದ್ಧರನ ತೋರಿಸೆಂದೆ ನಾ ಬಂದೆ ಪ. ಅಂಧಕಾರಣ್ಯದೊಳು ನಿಂದು ತತ್ತರಿಸುವೆನು ತಾಯೆ ಕುಂದುಗಳೆಣಿಸಾದಿರು ಆನಂದ ತೋರು ಅ.ಪ. ಹರಿಗೆ ಕಿರಿಯ ಸೊಸಿ ವಾತನಸತಿಯು ನೀನು ಪ್ರಖ್ಯಾತಿವಂತಳೇ ಏಕಾಂತ ಭಕ್ತಳೇ ತ್ರಿವಿಧ ಜೀವರೊಳಗೆ ನಿಂತು ತ್ರೀವಿಧ ಪ್ರೇರಣೆ ಮಾಡುವಿ ದೇನಿ ನಿನ್ನಾ ಮಹಿಮೆಗೆ ನಮೋ ಎಂಬೆ ಪುತ್ಥಳಿಯಾ ಬೊಂಬೆ 1 ಮಂದರೋದ್ಧರನ ಪಾದಸೇವಕಳೇ ನಿನಗೀಡೆ ನಲಿದಾಡೆ ಒಂದನಾದರೂ ಮಾತನಾಡೆ ವರಗಳ ನೀಡೆ ದಯಮಾಡಿ ನೋಡೆ ತವಪಾದವ ಕೊಡೆ ಕರವ ಜೋಡಿಸಿ ಬೇಡುವೆನಿಂದು ನಾ ಬಂದು 2 ಗರುಡ, ಶೇಷ ರುದ್ರಾದಿಗಳೊಡೆಯಳೇ ನೀನು ನಿನ್ನಡಿಗಳಿಗೆರಗುವೆ ನಾನು ತಡಮಾಡ ಬ್ಯಾಡಮ್ಮಾ ನಡೆದು ಬಾರಮ್ಮ ಭವ ಮಡುವಿನೊಳಗಿರುವೆನು ತೋರಿಸೋ ದಯಪಾಲಿಸೋ 3
--------------
ಕಳಸದ ಸುಂದರಮ್ಮ