ಒಟ್ಟು 235 ಕಡೆಗಳಲ್ಲಿ , 51 ದಾಸರು , 227 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪುಟ್ಟಿ ಬಂದಿಹೆಯಾ ಕಿಟ್ಟಯ್ಯಾ ಪ ಕೆಟ್ಟ ಲೋಕವನೆಲ್ಲ ನೆಟ್ಟನೆ ತಿದ್ದಲುಕಟ್ಟಿ ನೋಡು ಶ್ರಾವಣದಷ್ಟಮಿ ದಿನದಲ್ಲಿ 1 ಹೀನಾದ ಧರ್ಮದ ಜ್ಞಾನೋದಯ ಗೈಸಿದೀನರನುದ್ಧರಿಸಿ ಮಾನವನಾಗಿ 2 ಬಾಧಿಪ ಕುಜನರ ಛೇದಿಸಿ ಜಗದೊಳುಸಾಧು ಸುಜನರನು ಮೋದದಿ ಸಲುಹಲುಮೇದಿನಿಯೊಳು ನೀ ಉದಿಸಿ ಬಂದೆಯಾ 3 ಭಕ್ತರ ಮೊರೆ ಕೇಳಿ ಯುಕ್ತಿಯಿಂದ ಸಲುಹಲುಮುಕ್ತಿಯ ಸ್ಥಾನ ವೈಕುಂಠವ ಬಿಟ್ಟು 4 ಸುರ ಮುನಿಗಳಿಗಿಂತು ವರವಿತ್ತ ಕಾರಣ ಧರೆಯೊಳು ಗದುಗಿನ ವೀರನಾರಾಯಣ5
--------------
ವೀರನಾರಾಯಣ
ಪುಂಡರೀಕಾಂಬಕ ಪರಮದಯಾಳೊ ಬ್ರ- ಹ್ಮಾಂಡರರಸನಾಥ ಬಿನ್ನಹ ಕೇಳೊ ಪ. ನಂಬಿದವನು ಬಲ್ಲೆ ನಿನ್ನ ಪಾದವನು ಇಂಬಾಗಿ ಸಲಹುವಿ ಎನ್ನ ಮಾನವನು ಕುಂಬಾರ ಜನರೆಂಬ ಕುಹಕದ ನುಡಿಯ ಶಂಭುವಂದಿತ ತಾಳಲಾರೆ ಎನ್ನೊಡೆಯ 1 ಅಜ ಭವೇಂದ್ರಾದಿ ಲೋಕೇಶರು ನಿನ್ನ ಭಜಿಸಿ ಪೊಂದಿಹರತ್ಯಧಿಕ ಭಾಗ್ಯವನ್ನು ಕುಜನರು ಕುತ್ಸಿತಾಹಂಕಾರವನ್ನು ತ್ಯಜಿಸುವಂದದಿ ಎನ್ನೊಳಾಗು ಪ್ರಸನ್ನ 2 ಗರುಡಗಮನ ಗಜರಾಜನ ಪೊರೆದಂತೆ ತ್ವರೆಯಿಂದೆನ್ನನು ಕಾಯ್ದರಹುದು ನಿಶ್ಚಿಂತೆ ಉರಗರಾಜೇಂದ್ರ ಶಿಖರ ಸನ್ನಿವಾಸ ಸಿರಿಯರಮಣ ಶುಭಕರ ಶ್ರೀನಿವಾಸ 3
--------------
ತುಪಾಕಿ ವೆಂಕಟರಮಣಾಚಾರ್ಯ
ಪುರುಷಾರ್ಥ ಪ ವರದ ಅಭೀಷ್ಟೆಯ ಕರದು ಎನಗೆ ನೀ ವರದನೆಂಬೊ ನಿನ್ನ ಬಿರುದನ ರಕ್ಷಿಸು ಅ.ಪ ಅಜನ ಜನಕನÀಲ್ಲಿ ಇರುವಿಯೊ ವಿಜನ ದೇಶದಲ್ಲೀ ಸುಜನರು ಇದ್ದಲ್ಲಿ ಬರುವೆಯೊ ಭಜನೆಮಾಡುವಲ್ಲೀ ಸುಜನರ ತಾಪಕೆ ವ್ಯಜನನು ನೀನೂ ಸುಜನಕಲ್ಪತರು ಕುಜನಕುಠಾರಾ 1 ನಂದನಂದನನೂ ಅವನಿನ್ನ ಬಂಧನದೊಳಗಿಹನೂ ಅಂಧನಾಗಿ ನಾನೂ ಸಂಸೃತಿ ಬಂಧನದೊಳಗಿನ್ನೂ ನೊಂದೆನು ಬೆಂದೆನು ಬಂದೆನು ನಿನ್ನಲಿ ಕಂದನ ಲಾಲಿಸು ಒಂದಿನ ಬಿಡದೆ 2 ಮರೆತೆನು ನಾನಿನ್ನಾ ಅವಗುಣ ಮರೆತು ಪಾಲಿಸು ಮುನ್ನಾ ಪರತರಗುರು ನಿನ್ನಾ ಹೊರತು ಗತಿ ಗುರುತತಿಲ್ಲ ಮುನ್ನಾ ಅರಿತು ಅನಂತಾದ್ರಿ ನಿರತನ ತೋರಿಸು ಮೋದ ಪುರನಿರತ ಸದ್ಗುರುವೆ 3
--------------
ಅನಂತಾದ್ರೀಶರು
ಪೇಳಿದರೆ ತಿಳಿಯುವುದೆ ಮಾಯಮೋಹಿಗಳಿಗೆ ನೀಲಶ್ಯಾಮನ ದಿವ್ಯಗೂಢದಿಹಮಹಿಮೆ ಪ ಬಂಜೆಗ್ಹೊಳೆವುದೆ ಪ್ರಸೂತಿವೇದನೆ ಸುದ್ದಿ ಸಂಜೀವನ ಮಹಿಮೆ ತಿಪ್ಪೆ ತೃಣಕೆ ತಿಳಿಯುವುದೆ ಅಂಜುಬುರುಕಗ್ವೀರತ್ವ ಸಾರಸವಿದೋರುವುದೆ ವಂಜಗೊಳುಪಾಗುವುದೆ ಹರಿಭಕ್ತಿಸಾರ 1 ನಾಗನ್ಹೆಡೆಯೆತ್ತಾಡಲಮೇಧ್ಯಜಂತರಿಯುವುದೆ ಕೋಗಿಲೆಯು ಕೂಗಲು ಕಾಗೆ ತಿಳಿಯುವುದೆ ಗೂಗೆಗ್ಹೇಳಲು ಅರುಣಪ್ರಭೆ ನೋಡಬಲ್ಲುದೆ ಭಾಗವತರ ನಡೆ ಭವರೋಗಿಗ್ಹೊಳಪಹ್ಯದೆ 2 ರಾಜ್ಯದಾಡಳಿತವನು ಚಾಂಡಾಳ ತಿಳಿಯುವನೆ ತೇಜಿಯ ಮಹಯೋಗ ಪಾಜಿಗ್ಹುಟ್ವುದೆ ಭೋಜನದ ಸವಿಸಾರ ರೋಗಿಗ್ಹೇಳಲು ಫಲವೆ ರಾಜಿಪ ಪರಲೋಕ ಕುಜನರರಿಯುವರೆ 3 ಹೀನನಿಗತಿ ತಿಳಿಯುವುದೆ ಜ್ಞಾನಬೋಧಾಮೃತ ಶ್ವಾನನಿಗೆ ಸೇರುವುದೆ ರಾಗ ಸುಖಸ್ವಾದ ಕೋಣಗ್ಹೊಳೆವುದೆ ವೇಣು ಮೃದಂಗ ಸುಖವಾದ್ಯ ಧ್ಯಾನಮಹಿಮೆಯ ಫಲವು ಭವಿಗೆ ತಿಳಿಬಲ್ಲುದೆ 4 ನೇಮದೊರುಷವು ಸುರಿಯೆ ಕಲ್ಲು ನೀರು ಕುಡಿಯುವುದೆ ಕಾಮಿಗಳಗನುಭವದ ಹಾದಿ ತಿಳಿ ಬಲ್ಲುದೆ ಪಾಮರಧಮರಿಗಿಲ್ಲ ದೀನಜನನಾಥ ಶ್ರೀ ರಾಮನಡಿ ನಿಜಭಕ್ತಿ ಸಾಧ್ಯವಾಗುವುದೆ 5
--------------
ರಾಮದಾಸರು
ಪ್ರಭವನಾಮ ಸಂವತ್ಸರ ಸ್ತೋತ್ರ 145 ಪದ್ಮನಾಭ ಪದ್ಮೇಶ ಪದ್ಮಸಂಭವ ತಾತ ಮೋದಬಲ ಜ್ಞಾನಾದ್ಯಾಮಲ ಗುಣನಿಧಿಯೇ ಸತ್ಯಜಗತ್ ಸೃಷ್ಟಾದಿ ಕರ್ತನೀನೇ ಪ್ರಭವ ಸಂವತ್ಸರ ನಿಯಾಮಕನು ಸ್ವಾಮೀ ನಮಸ್ತೆ ಪ ಈ ಪ್ರಭವನಾಮ ನಿನ್ನ ನಿಯಾಮನಿಂ ಸೋಮನು ಈ ಸಂವತ್ಸರರಾಜನು ಮಂಗಳನು ಮಂತ್ರಿಃ ಸಸ್ಯ ಸೈನ್ಯಾಧಿಪರು ಶುಕ್ರ ವಿಧುಧಾನ್ಯಪತಿ ಬುದನು ರಸಪ ರವಿ ನಿರಸಗುರು ಹೀಗೆ ನಾಯಕರು ನವರು 1 ವಿಷ್ಣುನವ ಶ್ರೀನವ ನರವಾಯುನವ ಪತೀಶನÀವ ಶೇಷನವ ಈ ಬಗೆ ನವ ಮೂರ್ತಿ ಅಧಿಕಾರಿಗಳಿಂ ಸ್ಮರಣೀಯ ವರ್ಷನವನಾಯಕರೊಳೆ ವಾಯ್ವುಂತರ್ಗತನಾಗಿ ಶ್ರೀಸಹ ವಿಷ್ಣು ನೀನೆ ಇದ್ದು ಕೃತಿನಡೆಸಿ ಲೋಕವಕಾಯುತಿ2 ಸೋಮ ರಾಜನು ತನ್ನ ವಶದಿ ಸೈನ್ಯ ವೇಘಗಳಿಚ್ಚಿಹನು ಅಮಾತ್ಯತ್ಯ ಕುಜಗಿಹುದು ಶಿಷ್ಟಪಾಲನತಿದುಷ್ಟರ ತಿದ್ದುವುದಕ್ಕೆ ಅಮ್ಮಮ್ಮ ಏನೆಂಬೆ ಅಮೃತಕರ ಸೋಮದಿಯಲ್ಲಿದ್ದು ರಾಜ ರಾಜೇಶ್ವರ ನೀ ಕಮಲಾಸನಪಿತ ಪ್ರಸನ್ನ ಶ್ರೀನಿವಾಸ ಸಂತಾನಾದಿ ಭಾಗ್ಯ ವೀವಿ ಕರುಣಾಳು 3
--------------
ಪ್ರಸನ್ನ ಶ್ರೀನಿವಾಸದಾಸರು
ಪ್ರಸನ್ನ ರಾಮಾಯಣ ಸುಂದರಕಾಂಡ ಜಯ ಜಯ ಜಯ ರಾಮಚಂದ್ರ ಜಯ ರಾಮಭದ್ರ ಸರ್ವೇಶ ಜಯ ಜಯ ಜಯ ರಾಮ ಸ್ವರತ ಆಹ ಜಯ ಸೀತಾರಮಣ ನೀ ಭಯಬಂಧ ಮೋಚಕ ಜಲ ಸಂಭವಮುಖ ಸುರಸೇವ್ಯ ನಮೋ ನಮೋ ಪ ಶಾಶ್ವತ ಸುಗುಣಾಬ್ಧಿ ರಾಮ ಸವೇಶ್ವರನೆ ಬಲವೀರ್ಯ ಸಂಪೂರ್ಣಾರ್ಣವ ನಿನ್ನ ನಮಿಸಿ ಆಹ ಶೀಘ್ರ ಆ ಗಿರಿಯೆತ್ತಿ ಹನುಮ ಹಾರಲು ಆಗ ಸಾಗರ ಸರ್ವವು ಕಲಕಿ ಓಡಿತು ಕೂಡ 1 ಹಿಂದೆ ಪರ್ವತಗಳ ಪಕ್ಷ ಹನನ ಕಾಲದಿ ವಾಯು ತನ್ನ ಹಿತದಿ ರಕ್ಷಿಸಿದನು ಎಂದು ಆಹ ಹಿಮಗಿರಿಸುತ ಮೈನಾಕನು ಮೇಲೆ ಬಂದಾಗ ಹನುಮಗೆ ನಮಿಸಿ ವಿಶ್ರಮಿಸಿಕೊಳ್ಳೆಂದ2 ಶ್ರಮರಹಿತನು ಎಂದೂ ಹನುಮ ಶ್ರಮ ನಿವಾರಣ ಅನಪೇಕ್ಷ ಆಶ್ಲೇಷಿಸಿ ನಗವರನ ಆಹ ನಿಸ್ಸೀಮ ಪೌರುಷ ಬಲಯುತ ಹನುಮನು ನಿಲ್ಲದೆ ಮುಂದೆ ತಾ ಸುರಸೆಯೊಳ್ ಹೊಕ್ ಹೊರಟ 3 ಪರೀಕ್ಷಿಸೆ ಸುರಸೆಯ ಸುರರು ಪ್ರೇರಿಸಿ ವರವನ್ನು ಕೊಡಲು ಆಹ ಫಣಿಗಳ ತಾಯಿ ಅವಳು ಬಾಯಿ ತೆರೆಯಲು ಪೊಕ್ಕು ಲೀಲೆಯಿಂ ಹನುಮ ಹೊರಹೊರಟ4 ಸುರರು ಆನಂದದಿ ಆಗ ಸ್ತುತಿಸಿ ಹನುಮನ ಕೊಂಡಾಡಿ ಸುರಿಯಲು ಪುಷ್ಪದ ಮಳೆಯ ಆಹ ಶೀಘ್ರ ಪವನಜನು ಮುಂದೆ ತಾ ಹೋಗುತ್ತ ಸಿಂಹಿಕಾ ರಾಕ್ಷಸಿ ಛಾಯಾಗ್ರಹವ ಕಂಡ 5 ಸರಸಿಜಾಸನ ವರಬಲದಿ ಸಿಂಹಿಕಾ ಲಂಕಾ ಪೋಗುವರ ಸೆಳೆದು ತಾ ನಿಗ್ರಹಿಸುವಳು ಆಹ ಸೆಳೆಯೆ ಆ ರಾಕ್ಷಸಿ ಹನುಮನ ಛಾಯೆಯ ಸೀಳಿದ ಹನುಮ ಅವಳ ಶರೀರದಿ ಪೊಕ್ಕು 6 ತನ್ನ ನಿಸ್ಸೀಮ ಬಲವನು ತೋರಿಸಿ ಈ ರೀತಿ ಹನುಮ ಧುಮುಕಿದ ಲಂಬ ಪರ್ವತದಿ ಆಹ ತೋರ್ಪುದು ಲಂಕಾ ಪ್ರಕಾರದೊಲï ಈ ಗಿರಿ ತನ್ನ ರೂಪವ ಸಣ್ಣ ಹನುಮ ಮಾಡಿದನಾಗ 7 ಆಗಿ ಬಿಡಾಲದೊಲ್ ಸಣ್ಣ ಅಸಿತ ಕಾಲದಿ ಪೋಗೆ ಪುರಿಗೆ ಅಲ್ಲಿದ್ದ ಲಂಕಿಣಿ ತಡೆಯೆ ಆಹ ಅವಳ ಹನುಮ ಮುಷ್ಟಿಯಿಂದ ಕುಟ್ಟಿ ಜಯಿಸಿ ಅನುಮತಿಯಿಂದಲ್ಲೆ ಲಂಕೆಯೊಳ್ ಪೋದ 8 ಶ್ರೀಘ್ರ ಅಶೋಕ ವನದಲಿ ಶಿಂಶುಪಾವೃಕ್ಷ ಮೂಲದಲಿ ಸೀತಾ ಅಕೃತಿಯನು ಕಂಡ ಆಹ ಸೀತೆಗೆ ಏನೇನು ಭೂಷಣ ಉಂಟೋ ಸೀತಾ ಆಕೃತಿಗೂ ಸಹ ಅದರವೊಲಿತ್ತು 9 ಅವನಿಯೋಳು ನಿನ್ನ ವಿಡಂಬ ಅರಿತು ಅನುಸರಿಸಿ ಹನುಮ ಅದರಂತೆ ಪರಿಪಂಥಾವಳಿಗೆ ಆಹ ಅವಶ್ಯ ಮಾತುಗಳಾಡಿ ಅಂಗುಲೀಯಕವೀಯೆ ಚೂಡಾಮಣಿ ನಿನಗೆಂದು ಕೊಟ್ಟಳು 10 ಅರಿಯರು ರಾಕ್ಷಸರಿದನು ಅಮರರು ಕಲಿಮುಖರೆಲ್ಲ ಅವಲೋಕಿಸಿದರು ಈ ಕಾರ್ಯ ಆಹ ಅಮರರು ಲೋಕವಿಡಂಬವಿದೆಂದರಿಯೆ ಅಧಮ ಕಲ್ಯಾದಿಗಳ್ ಮೋಹಿತರಾದರು 11 ಕೃತಕೃತ್ಯವಾಗಿ ತಾ ಹನುಮ ಕೋವಿದೋತ್ತಮ ಬಲವಂತ ಕಾಣಿಸಿಕೊಳ್ಳುವ ಮನದಿ ಕಿಂಚಿತ್ತೂ ಭಯವೇನೂ ಇಲ್ಲದೆ ವನವನು ಕಡಿದು ಧ್ವಂಸವ ಗೈದ ಆ ಶಿಂಶುಪವ ಬಿಟ್ಟು 12 ಕುಜನ ರಾಕ್ಷಸರನು ಕೊಲ್ಲೆ ಕೂಗಿ ಆರ್ಭಟಮಾಡೆ ಹನುಮ ಕೇಳಿ ಚೇಷ್ಟೆಗಳ ರಾವಣನು ಆಹ ಕಪ್ಪು ಕಂಠನ ವರ ಆಯುಧಯುತರು ಕೋಟಿ ಎಂಬತ್ತರ ಮೇಲ್ ಭೃತ್ಯರ ಕಳುಹಿದ 13 ಆರ್ಭಟದಿಂದ ಘೋಷಿಸುತ ಅವರು ಆವರಿಸಿ ಹನುಮನ ಆಯುಧಗಳ ಪ್ರಯೋಗಿಸಲು ಆಹ ಪವನಜ ಮುಷ್ಟಿಪ್ರಹರದಿ ಆ ವೀರರೆಲ್ಲರ ಹಿಟ್ಟು ಮಾಡಿದ ಬೇಗ 14 ಕಡುಕೋಪದಿಂದ ರಾವಣನು ಕಳುಹಿದನು ಏಳು ಮಂತ್ರಿ ಕುವರರ ವರ ಬಲಯುತರ ಆಹ ಖಳರು ಈ ಏಳ್ವರ ಮೆಟ್ಟಿ ಷಿಷ್ಟವ ಮಾಡೆ ಕುಮತಿ ರಾಕ್ಷಸ ಸೈನ್ಯ ತೃತೀಯ ಭಾಗವು ಹೋಯ್ತು 15 ಅನುಪಮ ಬಲಕಾರ್ಯಕೇಳಿ ಅಧಮ ರಾವಣ ತನ್ನ ಸುತನ ಅಕ್ಷನ ಕಳುಹಲು ಹನುಮ ಆಹ ಅಕ್ಷನ ಚಕ್ರಾಕಾರದಿ ಎತ್ತಿ ಸುತ್ತಾಡಿ ಅವನ ಅಪ್ಪಳಿಸಿ ನೆಲದಿ ಚೂರ್ಣ ಮಾಡಿದ 16 ಅತಿ ದುಃಖದಿಂದ ರಾವಣನು ಅಕ್ಷನಗ್ರಜ ಇಂದ್ರಜಿತನ ಒಡಂಪಟ್ಟ ಸ್ವೇಚ್ಛದಿ ಹನುಮ ಬ್ರಹ್ಮಾಸ್ತ್ರಕೆ 17 ರಾವಣನಲಿ ಕೊಂಡು ಪೋಗೆ ರಾವಣ ಪ್ರಶ್ನೆಯ ಮಾಡೆ ರಾಮಗೆ ನಮಿಸಿ ಹನುಮನು ಆಹ ರಘುವರ ರಾಮ ದುರಂತ ವಿಕ್ರಮ ಹರಿ ರಾಕ್ಷಸಾಂತಕ ದೂತ ಮಾರುತಿ ತಾನೆಂದ 18 ರಘುವರ ಪ್ರಿಯೆಯನು ಬೇಗ ರಾಮಗರ್ಪಿಸಲೊಲ್ಲೆ ಎನ್ನೆ ಹನುಮ ಪ್ರಕೋಪದಿ ಅವನ ಆಹ ರಾಜ್ಯ ಮಿತ್ರ ಬಂಧು ಸರ್ವನಾಶ ರಾಘವ ಮಾಡುವನೆಂದು ಪೇಳಿದನು 19 ಅಜ ಶಿವ ಮೊದಲಾದ ಸರ್ವ ಅಮರೇಶ್ವರರು ತಾವು ತಡೆಯ ಆಶಕ್ತರು ರಾಮಬಾಣವನು ಆಹ ಅಂಥ ಬಾಣವ ಅಲ್ಪಶಕ್ತ ರಾವಣ ತಾಳೆ ಅಸಮರ್ಥನೆಂದ ಪ್ರಭಂಜನ ಸುತನು 20 ಪ್ರಭಂಜನ 1 ಸುತ ಮಾತು ಕೇಳಿ ಪ್ರಕುಪಿತನಾಗಿ ರಾವಣನು ಪ್ರಯತ್ನಿಸೆ ಹನುಮನ ಕೊಲ್ಲೆ ಆಹ ಪ್ರಕೃಷ್ಟ ಮನದಿ ವಿಭೀಷಣ ಬುದ್ಧಿ ಪೇಳಲು ಪುಚ್ಛಕ್ಕೆ ಬೆಂಕಿ ಹಚ್ಚೆಂದ ರಾಕ್ಷಸರಾಜ21 ಆತಿಭಾರ ವಸ್ತ್ರ ಕಟ್ಟುಗಳಿಂ ಅಧಮರು ಸುತ್ತಿ ಬಾಲವನು ಅಗ್ನಿಯ ತೀವ್ರದಿ ಹಚ್ಚೆ ಆಹ ಅಗ್ನಿಯ ಪರಸಖ ವಾಯು ಆದುದರಿಂದ ಅಂಜನಾಸುತ ನಿರಾಮಯನ ಸುಡಲೇ ಇಲ್ಲ 22 ಅಧಮ ರಾಕ್ಷಸರ ಚೇಷ್ಟೆಗಳ ಅಸಮ ಬಲಾಢ್ಯನು ಹನುಮ ಅನುಭವಿಸಿ ಕುತೂಹಲದಿ ಆಹ ಅಲ್ಲಲ್ಲಿ ಹಾರಿ ಆ ಲಂಕಾಪುರಿಯ ಸುಟ್ಟು ಅತಿ ಮುದದಲಿ ಗರ್ಜಿಸಿದ ರಾಮದೂತ 23 ಅಧಮ ಸಪುತ್ರ ರಾವಣನ ಅಲ್ಪ ತೃಣೋಪಮ ಮಾಡಿ ಅವರೆದುರಿಗೆ ಪುರಿ ಸುಟ್ಟು ಆಹ ಅಬ್ಧಿಯ ದಾಟೆ ವಾನರರು ಪ್ರಪೂಜಿಸೆ ಉತ್ತಮ ಮಧುವುಂಡು ಪ್ರಭುವೇ ನಿನ್ನಲಿ ಬಂದ 24 ಸಮಸ್ತ ವಾನರ ವರರೊಡನೆ ಸಮರ್ಥ ಹನುಮ ಧೀರ ಬಂದು ಶುಭಸೂಚಕ ಚೂಡಾಮಣಿಯ ಆಹ ಶ್ರೀಶ ನಿನ್ನಯ ಪಾದದ್ವಂದ್ವದಿ ಇಟ್ಟು ತಾ ಸನ್ನಮಿಸಿದ ಭಕ್ತಿಭರಿತ ಸವಾರ್ಂಗದಿ 25 ಭಕ್ತಿ ಸವೈರಾಗ್ಯ ಜ್ಞಾನ ಪ್ರಜ್ಞಾ ಮೇಧಾ ಧೃತಿ ಸ್ಥಿತಿಯು ಪ್ರಾಣ ಯೋಗ ಬಲ ಇಂಥಾ ಆಹ ತುಂಬಿ ಇರುವುವು ಈ ಪ್ರಭಂಜನ ವಾಯು ಹನುಮನಲಿ ಸರ್ವದಾ 26 ಸರ್ವೇಶ ರಾಮ ಅಗಾಧ ಸದ್ಗುಣಾರ್ಣವ ನೀ ಹನುಮನ ಸಂಪೂರ್ಣ ಭಕ್ತಿಗೆ ಮೆಚ್ಚಿ ಆಹ ಸಮ ಯಾವುದೂ ಇಲ್ಲದೆ ನಿನ್ನನ್ನೇ ನೀ ಕೊಟ್ಟೆ ಸುಪ್ರಮೋದದಿ ಹನುಮನ ಆಲಿಂಗನ ಮಾಡಿ27 ನೀ ನಿಂತು ನುಡಿಸಿದೀ ನುಡಿಯು ನಿನ್ನಡಿಗಳಿಗೆ ಅರ್ಪಣೆಯು ನಮ್ಯ ಮಾರುತಿ ಮನೋಗತನೆ ಆಹ ನೀರಜಾಸನ ತಾತ ಪ್ರಸನ್ನ ಶ್ರೀನಿವಾಸ ನಿನಗೆ ಪ್ರೀತಿಯಾಗಲೊ ಸುಹೃದ ಸಂತೃಪ್ತ 28
--------------
ಪ್ರಸನ್ನ ಶ್ರೀನಿವಾಸದಾಸರು
ಬಂದ ದುರಿತವಾ ಚನ್ನಕೇಶವಾ ನಂದನಂದನಾ ದೂರಮಾಡೆಲೋ ಪ ಆದಿದೇವನೇ ಮರೆಯ ಹೊಕ್ಕೆನೋ ಸಾದುವರ್ಯರ ಮನ್ನಿಸೋ ಹರೇ1 ಭವದಿ ನೊಂದೆನೋ ಬಂಧ ಬಿಡಿಸಲೋ ಅವನಿಪಾಲನೆ ಸಾನುರಾಗದೀ 2 ಸುಜನಪಾಲನೇ ಕುಜನ ಕಾಲನೇ ಭಜನೆ ಮಾಳ್ಪಿನೊ ರಕ್ಷಿಸೋ ಹರೇ 3
--------------
ಕರ್ಕಿ ಕೇಶವದಾಸ
ಬಂದ ಬಂದ ಹಿಮದ ಗಿರೀ | ಯಿಂದ ಅನಿಮಿತ್ತ ಬಂಧು | ಬದರಿವಾಸ | ಬಂದ | ಬಂದ ಪ ಇಂದಿರೆ ಅಜ ಭವ ಕ್ಷಿತಿ | ವೃಂದಾರಕ ವಹಬಂದನು ತಾ ಮಮ | ಮಂದಿರಕಿಂದೂ ಅ.ಪ. ಕೌಸ್ತುಭ ಉರ ಸಿರಿ ವತ್ಸಾಂಕಿತ ಸುರಚಿರೋದರವು | ಮೆರೆವ ತ್ರಿವಳಿಯಿಂವರ ಪಟ್ಟಕ ವಸನವು | ತರ್ಕ ಚಿಹ್ನಿತಕರಸುರ ಭೂಸುರರಿಗೆ | ವರ ಜ್ಞಾನದ ಹರಿ1 ಕಾಯ ಕಟಕ ಕರ | ಪುಟದಲಿ ಜಪಮಣಿಕಟಕ ಧರಿಸಿ ಸುರ | ತಟನಿ ತೀರಗ ಸುರಕಟಕವೆರಸಿ ಉತ್ | ಕೃಷ್ಟನು ಮಮ ಮಂದಿರಕೆ 2 ಸುಜನ ಸುರದ್ರುಮಕುಜನಾರಾತಿಯು | ರಜಮಾರನು ಸುರವ್ರಜವು ಪೊಗಳುತಿರೆ | ಮಝ ಭಾಪೆಸೆ ಮಮರಜವ ಕಳೆಯೆ ಗುರು ಗೋವಿಂದ ವಿಠಲ 3
--------------
ಗುರುಗೋವಿಂದವಿಠಲರು
ಬಂದು ನಿಂದಾ | ಕಣ್ಣ ಮುಂದೆ | ಬಂದು ನಿಂದಾ ಪ ಬಂದು ನಿಂದಾ ಭಾಗವತರ ಪ್ರಿಯಾ | ಮೂರ್ತಿ ಅಪ ಕುಟಿಲ ಕುಂತಲ ದೇವ | ವಟು ವೇಷದಿಂದಲಿ || ನಟನೆ ಮಾಡುತ ದಿವ್ಯ | ಪಟುತರದಲಿ ತಾನು 1 ಮುರಳಿನೂದುತ್ತ | ಮರುಳುಗೊಳಿಸಿ ಜನರ || ಕೊರಳ ಪದಕಹಾರ | ಧರಿಸಿ ತಾ ನಲಿಯುತ 2 ಸುಜನರ ಪೊರೆಯುವ | ಕುಜನರ ತರಿಯುವ | ಸಾರಥಿ ದಿವ್ಯ | ವಿಜಯವಿಠಲರೇಯಾ 3
--------------
ವಿಜಯದಾಸ
ಬಂದು ನಿಲ್ಲೆಲೊ ಮನಮಂದಿರದೊಳು ಹರಿ ಇಂದುವದನ ಆನಂದದಿಂದ ಪ. ಮುಂದಗಮನೆರ ಅಂದದಿ ಕೂಡ್ಯರ- ವಿಂದ ಮಧ್ಯದಿ ಬಹು ಸುಂದರ ವೆಂಕಟ ಅ.ಪ. ಗಜವ ಪಾಲಿಸಿದಂಥ ಭುಜಗಶಯನ ಹರೆ ತ್ರಿಜಗದೊಳಗೆ ದಿಗ್ವಿಜಯ ಮೂರುತಿ ಗೋ- ವ್ರಜವ ಪಾಲಿಸಿ ಭೂಭುಜರ ಪೊರೆದೆ ಅಂ- ಬುಜನೇತ್ರ ಅಜಪಿತ ಭಜಿಸಲಾಪೆನೆ ನಿನ್ನ ಭುಜಗ ಭೂಷಣವಂದ್ಯ ರಜ ತಮೊ ಸತ್ವದಿ ತ್ರಿಜಗವ ಸೃಷ್ಟಿಪೆ ಕುಜನರ ಶಿಕ್ಷಿಪೆ ರಜ ತಮೊ ದೂರನೆ ಸುಜನರ ಪೊರೆಯುವ ಋಜುಗಣವಂದಿತ 1 ವ್ಯಾಪ್ತಾ ಜಗದಿ ನಿರ್ಲಿಪ್ತ ಗುಣಗಳಿಂದ ಆಪ್ತ ಜೀವಕೆ ಸುಷುಪ್ತಿ ಕಾಲದಿ ನೀ ಗುಪ್ತನಾಗಿ ಪೊರೆವ ಶಕ್ತನಹುದೊ ತ್ರಿ- ಸಪ್ತ ಇಂದ್ರಿಯಗಳ ತೃಪ್ತಿಗೊಳಿಸು ನಿನ್ನೊಳ್ ಸಪ್ತ ಋಷಿಗಳಿಂದ ಗುಪ್ತರ್ಚನೆಗೊಂಬೆ ಸಪ್ತಜಿಹ್ವನೊಳು ವ್ಯಾಪ್ತನಾಗಿ ಸುರರ ತೃಪ್ತಿಪಡಿಸುವ ವ್ಯಾಪ್ತ ಮೂರುತಿಯೆ ಸಪ್ತ ಸಪ್ತ ಭುವನೇಶ ಪ್ರಕಾಶ 2 ವೇದಸುತಗೆ ಇತ್ತು ಆದರದಿ ಸುಧೆ ಮೋದದಿ ಸುರರಿಗುಣಿಸಿ ಭೂದೇವಿಯನು ಕಾಯ್ದೆ ಬಾಧಿಸೆ ಖಳ ಸುತನ ಭೇದಿಸಿ ಕಂಭ ಬಂದೆ ಪಾದದಿ ಗಂಗೆ ಪೆತ್ತು ಬಾಧೆ ಕ್ಷತ್ರಿಯರಿಗಿತ್ತೆ ಆದರದಲಿ ಸುಗ್ರೀವನ ಪೊರೆದೆ ಯಾದವ ವಂಶ ಮಹೋದಧಿ ಚಂದ್ರ ಸಾಧಿಸಿ ತ್ರಿಪುರರ ಛೇಧಿಸಿ ಕಲಿಮುಖ- ರಾದ ದುಷ್ಟರ ಸೀಳಿ ಬಾಧೆಯ ಬಿಡಿಸಿದೆ 3 ಪದ್ಮನಾಭನ ತೋರೊ ಪದ್ಮಸಂಭವ ಜನಕ ಪದ್ಮನಾಭನೆ ಹೃತ್ಪದ್ಮ ಮಧ್ಯದಿ ವಾಸ ಪದ್ಮ ಬಾಂಧವ ತೇಜ ಪದ್ಮ ನಯನಕರ ಪದ್ಮದಿಂದಲಿ ನೀ ಪದ್ಮಾವತಿಯ ಕೂಡ್ದೆ ಪದ್ಮವೈರಿಯ ಕೋಟಿ ಮುದ್ದು ಮುಖದ ತೇಜ ಪದ್ಮ ಉದರ ಷಟ್ಪದ್ಮದಿ ವಾಸ ಪದ್ಮ ಸರೋವರ ತೀರವಾಸ ಹೃ ತ್ಪದ್ಮ ಮಧ್ಯದಿ ಭೂಪದ್ಮಿನಿ ಸಹಿತ 4 ಆಪಾರ ಮಹಿಮನೆ ಗೋಪಾಲಕೃಷ್ಣವಿಠ್ಠಲ ಭೂಪರೈವರ ಕಾಯ್ದೆ ದ್ರೌಪದಿ ಮಾನದೊಡೆಯ ನೀ ಪ್ರೀತಿಯಿಂದ ಪೋಗಿ ತಾಪವ ಬಿಡಿಸಿದೆ ವ್ಯಾಪಕನೊ ಜಗಸ್ಥಾಪಕನೊ ಬಹು ರೂಪಕನೊ ದುಷ್ಟತಾಪಕನೊ ಹರಿ ಪಾಪ ಹರಿಸಿ ಕರ್ಮಲೇಪನ ಮಾಡದೆ ಪರಿ ಪರಿಯಿಂದ ಕಾಪಾಡೊ ಭಕ್ತರ5
--------------
ಅಂಬಾಬಾಯಿ
ಬಾರಯ್ಯ ಶ್ರೀ ಚನ್ನಕೇಶವ ದೊರಿಯೇ ತೋರಯ್ಯ ನೀಡು ಭಕ್ತಿಯನು ಶ್ರೀ ಹರಿಯೇ ಪ ಸುಜನರ ಪೊರೆವಂಥ ಭಕ್ತಾಭಿಮಾನಿ ಕುಜನರ ತರಿವಂಥ ಸುಗುಣನಿಧಾನೀ 1 ದಶರೂಪ ತಳೆದಂಥ ಸ್ವಾಮಿ ಮುರಾರೀ ದಶರಥ ನಂದನ ದುರ್ಜನರ ವೈರೀ 2 ವರ ದೂರ್ವಾಪುರದಲ್ಲಿ ನಿರುತನಾಗಿರುವೀ ತರಳ ಬಾಲಕರಿಗೆ ನಿತ್ಯದಿ ಸಿಗುವೀ 3
--------------
ಕರ್ಕಿ ಕೇಶವದಾಸ
ಬಾರೈ ಬೇಗ ಶ್ರೀರಾಮ ನಮೊ ಭಾನುಕುಲಾಂಬುಧಿ ಸೋಮ ನಮೊತೊರಿಸು ತವಪದಕಮಲ ನಮೊ ನೀರದಶ್ಯಾಮಲವದನ ನಮೊ ಪ ಅಜಹರಪ್ರಾರ್ಥಿತಮೋದ ನಮೊ ಅಯೋಧ್ಯನಗರವತಾರ ನಮೊಸುಜನಪಾಲ ಕುಜನಾರಿ ನಮೊ ಸನ್ಮುನಿಯಾಶ್ರಮ'ಹರ ನಮೊ1 ಸರಯೂತೀರ ಸಂಚಾರ ನಮೊ ಸತ್ಯಪರಾಕ್ರಮ ಸ್ವಾ'ು ನಮೊಪರಮಪುರುಷ ಪದ್ಮಾಕ್ಷ ನಮೊ ಪತಿತೋದ್ಧರ ಪರಮಾತ್ಮ ನಮೊ 2ಕ್ರೂರತಾಟಕಧ್ವಂಸ ನಮೊ ಮಾರೀಚಾದಿ 'ಚ್ಛೇದ ನಮೊಕಾರ್ಮುಕ'ದ್ಯಧುರೀಣ ನಮೊ ಕೌಶಿಕಮಖಸಂರಕ್ಷ ನಮೊ 3ಗೌತಮಸತಿಯಘಭಂಗ ನಮೊ ಕಾಂತಯಹಲ್ಯಾಸ್ತೌತ್ಯ ನಮೊ ಮಾತಾಪಿತಗುರುವೇ ನಮೊ ಮಮುದ್ಧರಿಸು ಮಹಾತ್ಮ ನಮೊ 4ಕ್ರೂರನು ಕುಟಿಲನು ಕುಮತಿ ನಮೊ ಕಲುಷಾರ್ಚಿತ ದುಷ್ಕರ್ಮಿ ನಮಸಾರರ'ತ ಸಂಸಾರಿ ನಮೊ ಸರ್ವ ದೋಷಪರಿಹಾರ ನಮೊ 5ಕೌಸಲೇಯಕನಕಾಂಬ್ರ ನಮೊ ದಾಶರಥೆ ದನುಜಾರಿ ನಮೊಶ್ರೀಶಚನ್ನಪುರಿಧಾಮ ನಮೊ ದಾಸವೈಷ್ಣವಕುಲಪ್ರೇಮ ನಮೊ 6ರಾಮರಾಮಜಯರಾಮ ನಮೊ ರಾಮತುಲಸಿದಳಧಾಮ ನಮೊರಾಮತುಲಸಿಗುರಸ್ವಾ'ು ನಮೊ ರಂಗಸ್ವಾ'ುದಾಸೇಶ ನಮೊ 7
--------------
ಮಳಿಗೆ ರಂಗಸ್ವಾಮಿದಾಸರು
ಬಾರೋ ವೆಂಕಟಗಿರಿನಾಥ| ದಯ- ದೋರೈ ಭಕುತರ ಪ್ರೀತ ಪ. ಮಾರಪಿತ ಗುಣಹಾರ ಮಂದರ- ಧಾರ ದೈತ್ಯಸಂಹಾರ ಸುಜನೋ ದ್ಧಾರ ಮಮಹೃದಯಾರವಿಂದಕೆ ಬಾರೋ ಕೃಪೆದೋರೋ ವೆಂಕಟ ಅ.ಪ. ವೃಷಭಾಸುರನೊಳು ಕಾದಿ ಸಾ- ಹಸವ ಮೆರೆಸಿದ ವಿನೋದಿ ವಶಗೈದು ದೈತ್ಯನ ಶಿರವ ಕತ್ತ- ರಿಸುತಲಿ ನೀನಿತ್ತೆ ವರವ ವಸುಧೆಯೊಳಗಿಹ ಸುಜನರನು ಮ- ನ್ನಿಸುತಲಿಷ್ಟವನಿತ್ತು ಕರುಣಾ- ರಸದಿ ಸಲಹುವ ಬಿಸಜನಾಭ ಶ್ರೀ- ವೃಷಭಾಚಲವೊಡೆಯ ವೆಂಕಟ 1 ಅಂಜನೆಯೆಂಬಳ ತಪಕೆ ಭಕ್ತ- ಸಂಜೀವನೆಂಬ ಶಪಥಕೆ ರಂಜಿಪ ಪದವಿತ್ತೆ ಮುದದಿ ಖಿಲ- ಭಂಜನಮೂರ್ತಿ ಕರುಣದಿ| ಮಂಜುಳಾಂಗ ಶ್ರೀರಂಗ ಸುರವರ ಕಂಜಭವವಿನುತಾದಿ ಮಾಯಾ- ರಂಜಿತಾಂಘ್ರಿ ಸರೋರುಹದ್ವಯ ಅಂಜನಾಚಲವೊಡೆಯ ವೆಂಕಟ 2 ಶೇಷನ ಮೊರೆಯ ತಾ ಕೇಳಿ ಬಲು ತೋಷವ ಮನಸಿನೊಳ್ತಾಳಿ ದೋಷರಹಿತನೆಂದೆನಿಸಿ ಕರು- ಣಾಶರಧಿಯ ತಾನೆ ಧರಿಸಿ ಶ್ರೀಶ ಹರಿ ಸರ್ವೇಶ ನತಜನ- ಪೋಷ ದುರ್ಜನನಾಶ ರವಿಶತ- ಭಾಸ ಕೌಸ್ತುಭಭೂಷ ವರ ಶ್ರೀ- ಶೇಷಾಚಲವಾಸ ವೆಂಕಟ 3 ಮಾಧವವಿಪ್ರ ವಿರಹದಿ ಭ್ರಷ್ಟ ಹೊಲತಿಗಳನು ಸೇರ್ದ ಮುದದಿ ಸಾದರದಲಿ ನಿನ್ನ ಬಳಿಗೆ ಬರೆ ನೀ ದಯಾನಿಧಿ ಕಂಡು ಅವಗೆ ಶೋಧಿಸುತ ಪಾಪಗಳೆಲ್ಲವ ಛೇದಿ ಬಿಸುಡುತ ನಿಂದು ವೆಂಕಟ- ಭೂಧರದ ನೆಲೆಯಾದ ನಾದವಿ- ಭೇದಬಿಂದು ಕಲಾದಿಮೂರುತಿ 4 ಧನಪತಿಯೊಳು ತಾನು ಸಾಲ ಕೊಂಡ ಘನಕೀರ್ತಿಯಿಂದ ಶ್ರೀಲೋಲ ವನಿತೆ ಪದ್ಮಾವತಿಪ್ರೀತ ಭಕ್ತ- ಜನಸುರಧೇನು ಶ್ರೀನಾಥ ವನಧಿಶಯನ ಮುರಾರಿ ಹರಿ ಚಿ- ಧ್ವನಿನಿಭಾಂಗ ಸುಶೀಲ ಕೋಮಲ ವನಜನಾಭ ನೀಯೆನ್ನ ಕೃಪೆಯೊಳ- ಗನುದಿನದಿ ಕಾಯೊ ಕೃಪಾಕರ 5 ಛಪ್ಪನ್ನೈವತ್ತಾರು ದೇಶದಿಂದ ಕಪ್ಪವಗೊಂಬ ಸರ್ವೇಶ ಅಪ್ಪ ಹೋಳಿಗೆಯನ್ನು ಮಾರಿ ಹಣ- ಒಪ್ಪಿಸಿಕೊಂಬ ಉದಾರಿ ಸರ್ಪಶಯನ ಕಂದರ್ಪಪಿತ ಭಜಿ- ಸಿರ್ಪವರ ಸಲಹಿರ್ಪ ಕುಜನರ ದರ್ಪಹರಿಸುತ ಕಪ್ಪಕಾಣಿಕೆ ಒಪ್ಪಿಗೊಂಬ ತಿಮ್ಮಪ್ಪಶೆಟ್ಟಿಯೆ 6 ಚಾರುಚರಣತೀರ್ಥವೀಂಟಿ ನಿನ್ನೊ- ಳ್ಸಾರಿ ಬರುವ ಪುಣ್ಯಕೋಟಿ ಸೇರಿದೆ ಕೊಡು ಮನೋರಥವ ಲಕ್ಷ್ಮೀ- ನಾರಾಯಣನೆನ್ನೊಳ್ದಯವ ತೋರು ನಿರತ ಸಮೀರಭವ ವರ- ದಾರವಿಂದದಳಾಕ್ಷ ತಿರುಪತಿ ವೀರ ವೆಂಕಟರಮಣ ಮದ್ಬಹು-ಭಾರ ನಿನ್ನದು ಪಾಲಿಸೆನ್ನನು 7
--------------
ತುಪಾಕಿ ವೆಂಕಟರಮಣಾಚಾರ್ಯ
ಬೊಮ್ಮ ಮೃಡ ಮುಖ್ಯ ಸುರರಿಗೆಡೆಯನೆನಿಪ ಮುದ್ದು ಉಡುಪಿಯ ಕೃಷ್ಣನ ಪ. ಪೊಡವಿಯೊಳಗೆ ತನ್ನ ಅಡಿಗಳ ಧೇನಿಪ-ರಡಿಗಡಿಗವರ ವಾಂಛಿತ ವÀಸ್ತುವಕಡೆದು ಕೊಡುವೆನೆಂದು ಕಡೆಗೋಲ ನೇಣನೆಪಿಡಿದಿಹ ಸಿರಿಯರಾ ದೃಢಕೆ ಮೆಚ್ಚಿದನ 1 ಹರಿಸರ್ವೋತ್ತಮನೆಂಬೊ ಪರಮಸಿದ್ಧಾಂತಕ್ಕೆ ಮ-ಚ್ಚರಿಸುವ ಕುಮತದ ಕುಜನರಭರದಿ ಬಂಧಿಸಿ ಬನ್ನಂಬಡಿದು ಶಿಕ್ಷಿಪೆನೆಂದುವರಪಾಶದಂಡಧಾರಿಯಾಗಿ ತೋರಿಪ್ಪನ 2 ಭಕ್ತವತ್ಸಲನೆಂಬೊ ಸುಲಭೋಕ್ತಿಯನು ಬಂದನಿಕರಕ್ಕೆ ಪೇಳಲು ದ್ವಾರಕಾಪುರಿಯಸುಖತೀರ್ಥಮುನಿಗೆ ಸುಖಕರನಾಗಿ ಬಂದಅಕುಟಿಲ ಕೃಷ್ಣ ಹಯವದನರಾಯನ 3
--------------
ವಾದಿರಾಜ
ಭಕುತರ್ಗೆ ಭಯಬಾರದು ಸುಖವೀವ ಕಾವದೇವನಕಾಕುಜನರಿಂದ ಬಂದಾನೇಕ ಶೋಕಂಗಳ ಕಳೆವÀಶ್ರೀರಂಗನ ದೇವೋತ್ತುಂಗನ ಭವಭಂಗನ ಪ. ಹಿರಣ್ಯಕನುದರ ವಿದಾರಣನ ಸ್ವಚರಣಕರಣ ಪ್ರಹ್ಲಾದನ ಭಯನಿವಾರಣನಕರಿವರ ಕರೆಯೆ ಮಕರಿಯ ಸೀಳಿದ ಸಿರಿಯನಾಳಿದಪಿರಿಯ ಶ್ರೀಹರಿಯ ಧೂರ್ತಾರಿಯ ಬಕವೈರಿಯ 1 ಯತಿಕುಲಪತಿಯ ಮಧ್ವಾಚಾರ್ಯರಕೃತಿಯಾಶ್ವರ್ಯ ಚಾತುರ್ಯಕೊಲಿದನಸತಿ ಸಭೆಯಲ್ಲಿ ಸಿರಿಪತಿ ನೀನೆ ಗತಿಯೆನೆಅತಿ ದೂರದಿಂದಕ್ಷಯವೆಂದ ಗೋವಿಂದನ ಮುಕುಂದನ2 ಕುಂಡಲ ಕೌಸ್ತುಭ ನೂಪುರ ಮೊದಲಾದ-ಲಂಕೃತಿಯಿಂದೊಪ್ಪುವ ನೀಲಗಾತ್ರನಪಂಕಜನೇತ್ರನ ಪರಮಪವಿತ್ರನ ಸುಚರಿತ್ರನ ಸುರಮಿತ್ರನ 3 ಗುರುವೆಂದರಿವ ಹರಿಯೆಂದು ಕರೆವ ತ-ಮ್ಮಿರವ ಮರೆವ ಸದ್ಗುಣ ವಿಸ್ತಾರವ-ನ್ನೊರೆವ ನಯನದಿ ಸುರಿವ ಪರಿವ ಸುಖಾಂಬುಧಿಕರೆವ ತೋರುವ ಖಳನಿರವ ಮುಕ್ತಿಗೆ ಕೂರುವ 4 ಹರಿಯನೆ ಪಾಡುವ ಹರಿಯ ಕೊಂಡಾಡುವಹರಿಯ ನೋಡುವ ಹರಿಯನೆ ಬೇಡುವದುರುಳರ ಕಾಡುವ ತಪದಿಂ ಬಾಡುವದುರಿತವ ಬಿಡುವ ಸುಕೃತವನೆ ಕೊಡುವ ಪಾಡಪಾಡುವ ನಲಿದಾಡುವ 5 ಹರಿಯನೆ ಸ್ಮರಿಸುವ ಹರಿಯನನುಸರಿಸುವಹರಿಯನೆ ಪರಿಹರಿಸುವ ಹರಿಯನೆಬೆರಿಸುವಹರಿಯನೆ ತೋರಿಸುವ ಹರಿಯನೆ ಮರೆಸುವಹರಿಪಾದಕೇರಿಸುವ ಸುಖರಸವ ಎರೆಸುವ 6 ಒಂದು ಕೈಯಲಿ ಕಡೆಗೋಲನೆ ಪಿಡಿದು ಮ-ತ್ತೊಂದು ಕೈಯಲಿ ನೇಣನಾಂತ ಶ್ರೀಕಾಂತನಮುಂದೆ ನಿಂದು ಒಲಿವುತ್ತ ನಲಿವುತ್ತತಂದೆ ಹಯವದನನರ್ಚಿಸುವ ಮೆಚ್ಚಿಸುವ ಹೆಚ್ಚಿಸುವ 7
--------------
ವಾದಿರಾಜ