ಒಟ್ಟು 157 ಕಡೆಗಳಲ್ಲಿ , 43 ದಾಸರು , 130 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲಕ್ಷ್ಮೀದೇವಿ ಕಮಲಾಕ್ಷಿ ತಾಯೆ ಸೂಕ್ಷ್ಮಮತಿಯನಿತ್ತು ಪೊರೆದು ರಕ್ಷಿಪದೇವಿ ಪ ಹರಿಯರಾಣಿ ಭುಜಗವೇಣಿ ಪರಿಪರಿಯ ಕ್ಲೇಶಗಳಳಿವ ದುರಿತದೂರನ ಕರಪಿಡಿಯುತ ಬಾ ಪರಿ ವೈಭವದಿ 1 ವಂದಿಸುವೆ ನಿನ್ನ ಪದಕೆ ಅಂಬುಜಾಕ್ಷಿ ಕರುಣವ ಮಾಡಿ ಕಂಬು ಕಂಧರನೊಡಗೂಡುತ ಬಾ ಸಂಭ್ರಮ ಸೂಸುತಲಿ 2 ಗೆಜ್ಜೆ ಪೈಜನಿ ಪಾಡಗರುಳಿಯು ಸಜ್ಜಾಗಿಹ ಕಾಲುಂಗುರ ಧ್ವನಿಯ ಮೂರ್ಜಗದೊಡೆಯನ ಕರಪಿಡಿಯುತ ಬಾ ಸಜ್ಜನ ರಕ್ಷಕಳೆ 3 ನಡುವಿಗೆ ನವರತ್ನದ ಪಟ್ಟಿ ಬಿಡಿಮುತ್ತುಗಳುದುರುವ ಪೀತಾಂಬರ ಬಡನಡÀು ಬಳುಕುತ ಅಡಿ ಇಡು ಬಾ ನಿ- ನ್ನೊಡೆಯನ ಕೂಡುತಲಿ 4 ಕರದಲಿ ಕಂಕಣ ಹಾಸರ ಬಳೆಗಳು ಬೆರಳಲಿ ಉಂಗುರ ಥಳಥಳಿಸುತಲಿ ಗರುಡಗಮನ ನೊಡಗೂಡುತ ಬಾ ಬಾ ಗರುವವು ಮಾಡದಲೆ5 ವಂಕಿನಾಗಮುರುಗಿ ಕರದಲಿ ಬಿಂಕದಿ ಪಿಡಿದಿಹ ತಾವರೆ ಕುಸುಮವು ಪಂಕಜಾಕ್ಷನೊಡಗೂಡುತ ಮನ ಶಂಕೆಯು ಮಾಡದಲೆ6 ಕಠ್ಠಾಣಿಸರ ಪದಕಗಳ್ಹೊಳೆಯುತ ಕಟ್ಟಿದ ಉಂಗುರಡ್ಡಿಕಿ ಶೋಭಿಸುತ ಚಿತ್ತಜನಯ್ಯನನೊಡಗೂಡುತ ಬಾ ಮತ್ತೆ ಹರುಷದಲಿ 7 ಥಳಥಳಿಸುವ ಗಲ್ಲಕೆ ಅರಿಶಿನವು ನಲಿಯುವ ಮೂಗುತಿ ಮುಖುರ ಬುಲಾಕು ಹೊಳೆವ ಮೀನು ಬಾವಲಿ ಚಳತುಂಬುಗಳ್ಹೊಳೆಯುತ ಘಳಿಲನೆ ಬಾರಮ್ಮ 8 ಕುರುಡಿ ಬಾವಲಿ ಬುಗುಡಿ ಚಂದ್ರ ಮುರುವಿನ ಕಾಂತಿ ಮುಗುಳ್ನಗೆ ಮುಖವು ಉರುಗಾದ್ರೀಶನ ಕರಪಿಡಿಯುತ ಬಾ ಕರೆ ಕರೆ ಮಾಡದಲೆ 9 ಘಣೆಯಲಿ ಕುಂಕುಮ ಬೈತಲೆ ಬಟ್ಟು ಥಳಥಳಿಸುವ ಕಣ್ಣಿಗೆ ಕಪ್ಪಿಟ್ಟು ಎಳೆಬಾಳೆಯ ಸುಳಿಯಂದದಿ ಬಳುಕುತ ಘಳಿಲನೆ ಬಾರಮ್ಮ10 ಕೆಂಪಿನ ರಾಗುಟಿ ಜಡೆ ಬಂಗಾರವು ಸಂಪಿಗೆ ಮಲ್ಲಿಗೆ ಸರಗಳ ಮುಡಿದು ಸೊಂಪಿಲಿ ಶ್ರೀ ಹರಿಯೊಡನಾಡುತ ನಲಿಯುವ ಸಂತಸ ತೋರಮ್ಮ11 ಇಂದಿರೆ ಶ್ರೀರಮೆ ಭಾರ್ಗವಿಯೆ ನಂದತ್ರಯಾ ಸದಾಸುಶೀಲೆ ಸುಗಂಧಿ ಸುಂದರಿ ಮಂದಗ ಮನೆಯೆ ಚಂದದಿ ಬಾರಮ್ಮ 12 ಸುತ್ತೆಲ್ಲ ಸುರಸ್ತ್ರೀಯರು ಮುತ್ತಿನ ಛತ್ರ ಚಾಮರದರ್ಪಣ ಪಿಡಿದು ನೃತ್ಯಗಾಯನ ಮಾಡುತ ಕರೆವರು ಸತ್ವರ ಬಾರೆನುತ 13 ಶ್ರಮ ಪರಿಹರಿಸೆನುತಲಿ ಬೇಡುವೆನು ಮಮತೆಲಿ ಕರಗಳ ಮುಗಿಯುತ ಬೇಡಲು ಕಮಲನಾಭ ವಿಠ್ಠಲನೊಡನೆ ಶ್ರೀ- ಕಮಲೆಯು ಬರುತಿಹಳು14
--------------
ನಿಡಗುರುಕಿ ಜೀವೂಬಾಯಿ
ಶೋಭನವೆ ಹರಿ ಶೋಭನವುವೈಭವಾಮಲ ಪಾವನ ಮೂರುತಿಗೆಶೋಭನವೆ ಶೋಭನವು ಪ. ಕುಂಡಲಿ ನಗರದ ರುಕ್ಮಿಣಿ ಸ್ವಯಂವರಗಂಡಕಿ ಕ್ಷೋಣಿಯ ತೀರದಲಿ ಚಂದ್ರಮಂಡಲ ಕ್ಷೋಣಿಜಾತೆ ಪ್ರಭೆದುಂದುಭಿ ಪಾರಿಜಾತ ಎಸೆಯೆ 1 ಕನ್ನಡಿ ಕಲಶವು ಕನಕದುಪ್ಪರಿಗೆ ಸು-ವರ್ಣ ಮಾಣಿಕದ ಗಗನದಲೆಸೆಯೆರನ್ನದ ಕಿಟಕಿ ಉಜ್ವ[ಲ]ಪನ್ನಗಾಸ್ಯಲಿ ಸು-ವರ್ಣ ಮಾಣಿಕದ ತೋರಣವೆ 2 ಪಚ್ಚದ ಪರಿಮಳ ತಳಿರುತೋರಣ ಕಟ್ಟಿನಿ[ಚ್ಚ]ಕಲ್ಯಾಣ ನೀಲವರ್ಣಉ[ಚ್ಚ]ಹವಾಯಿತು ಇರುಳಿನ ಚರಿತ್ರಾಅಚ್ಚುತನೆ ಗಮ್ಮನೆ ಬಾಹುದು 3 ಭೀಷ್ಮಕ ರುಕ್ಮಿಣಿ ಶಿಶುಪಾಲ[ಗೀವೆ]ನೆಂದುಸೇಸೆಯ ತಳೆದು ಧಾರೆನೆರೆಯೆಆ ಸಮಯದಲಿ ದ್ವಾರ[ಕೆ]ಕೃಷ್ಣಗೆಲೇಸಾದ ಓಲೆಯ ಬರೆದಳಾಕೆ 4 ಬರೆದೋಲೆಯ ಕಾಣಿಸಿ ತೆಗೆದೋದಿಪುರೋಹಿತ ಗಗ್ರ್ಯಾಚಾರ್ಯರುನಿರೂಪ ಕೊಡು ನಮಗೆ ನಿಗಮಗೋ- ಚರನು ಗರುಡವಾಹನ ಗಮ್ಮನೆಬಾಹೋನು 5 ಗವರಿಯ ನೋನುವ ಮದುವೆಯ ಸಡಗರಭುವನೇಶ ತಾ ತಡೆದನ್ಯಾಕೆಂದುತಾ ಚಿಂತಿಸಿದಳು ತಾವರೆಗಂಗಳೆಹವಣಿಸಿದಳು ವಿಲಕ್ಷಣಗಾಗಿ6 ಚಂದದಿ ರುಕ್ಮಿಣಿ ಮುತ್ತೈದೆರಿಗೆಲ್ಲಸಂಭ್ರಮದಿಂದ ಬಾಗಿಣ[ಬೀರೆ ಐ]ತಂದು ತಾಳಿಯ ಮಂಗಳಸೂತ್ರ ಮು-ಕುಂದ ಕಟ್ಟಿ ಕಲ್ಯಾಣವಾದ 7 ಅಂಬಿಕೆಗುಡಿಯಲಿ ಚಂದದಿಂದ ಪೂಜೆಯ ಮಾಡಿರಂಗ[ನ] ಕೂಡಿದ ಸಂಭ್ರಮದಿಂದಮಂದಾರಮಾಲೆಯ ಚಂದದಿಂದಲಿ ತಂದುರಂಗನ ಕೊರಳೊಳು ಹಾಕಿದಳು8 ಹಿಂದಿಂದ ಬಹ ರುಕುಮನ ಕಂಡುಭಂಗಿಸಿ ಕರೆದು ಭಂಗವ ಮಾಡಿಹಿಂದಿಂದ ಕರೆದು ಮುಂದಕೆ ಕಟ್ಟಿ ಮು-ಕುಂದ ಹಯವದನ ದ್ವಾರಕೆ ಪೊಕ್ಕ9
--------------
ವಾದಿರಾಜ
ಶ್ರೀಪತೀ-ಎನಗೇನು ಗತೀ ನನಗಾಗಲಿ ನಿನ್ನಲಿ ರತೀ ಪ ಚಪಲ ತನದಿ ಬಹು ಕಪಟಭಕುತಿನಟಿಸಿ ಗುಪಿತ ದೋಷಿಯು ಆದೆ ಅ.ಪ. ಬಟ್ಟೆ ನೋಡಲು ಬಹು ಛಂಧ-ಮೇಲೆ ಘಟ್ಟಿ ಬಣ್ಣದ ಕಾವಿ ಶಾಟಿ ಹಾಗೆ ಪಟ್ಟೆಮಡಿಗಳ ಭಾರೀ ಥಳಕೊ-ಬಹಳ ದಟ್ಟ ತುಳಸೀಸರಗಳ ಹೊಳಪೂ ಆಹಾ ಸೃಷ್ಠಿಗೊಡೆಯನೆ ಎನ್ನ ಕೆಟ್ಟ ತನಗಳನ್ನು ಎಷ್ಟೆಂದು ಬಣ್ಣಿಪೆ ನಿಟ್ಟ ನೆನೆಯದೆ ಪರರ ದೃಷ್ಟಿನೋಡುತ ಹಿಗ್ಗಿ ಅಟ್ಟಹಾಸದಿ ಕುಣಿದು ಮಾನವ ನನಗೇ 1 ವೇದ ವಾದಗಳೇನು ಕಾಣೆ-ಶುದ್ಧ ಸಾಧು ಕರ್ಮಗಳೊಂದು ಇಲ್ಲ-ಜನರ ಮೋದಗೋಸುಗವೇನೆ ಎಲ್ಲ_ಕಾಮ ಕ್ರೋಧವ ನಿಬಿಡಿತೇನೇ ಬಿಚ್ಚೆಹೃದಯಾ ಆಹಾ ಮಧ್ವರಾಯರ ಶಾಸ್ತ್ರ ಗ್ರಂಥ ಸಹ ತಿಳಿಯದೆಲೆ ಸಿದ್ಧ ಸಾಧಕನಂತೆ ಸಾಧುಲಿಂಗವ ತೋರಿ ಮುಗ್ಧಗೈಯ್ಯುತ ಮಂದಿ ಮೆದ್ದು ಪಕ್ವಾನ್ನಗಳ ಗೆದ್ದುಕೊಳ್ಳುವೆ ಬಹಳ ದಕ್ಷಿಣೆ ಬಹುಮಾನ 2 ನೇಮನಿಷ್ಠೆಗಳಾಟ ಹೊರಗೆ-ಗೃಹದಿ ಪ್ರೇಮವಿಲಾಸ ಆಟ ಕೂಟಜನ ಸ್ತೋಮರೆಲ್ಲವ ನುಡಿವ ನೀತಿ ಖ್ಯಾತಿ ಕಾಮುಕನಾಗಿ ಚರಿಸಿದೆ ಜಗದೀ ಆಹಾ ಹೇಮದಾಸೆಗೆ ಸೂಳೆ ಪ್ರೇಮವ ತೋರ್ಪಂತೆ ಕಾಮಿತಪ್ರದ ನಿನ್ನ ನಾಮ ಸವಿಯನುಣ್ಣದೆ ತಾಮಸರಿಗೆ ಉಪದೇಶ ನೀಡುತ ಸತ್ಯ- ಭಾಮೆಯರಸ ನಿನಗೆ ದೂರನಾದೆನಲ್ಲಾ 3 ಹಾಡಿಹಾಡುವೆ ಎತ್ತಿ ಸುತ್ತ ಜನರು ನೋಡಿ ಹಿಗ್ಗುತ ಬಾಪು ಬಾಪು ನುಡಿಗೆ ಹಾಡಿನಲ್ಲಿಹ ಸವಿಯುಣ್ಣ ದೇನೆ ಆಡಿ ಆಡಿಪೆ ಶಿರವ ಜ್ಞಾನಿಯಂತೆ ಆಹಾ ಕೇಡು ಚಿಂತಿಸಿ ಪರರ ಸ್ವಾರ್ಥಗೋಸುಗನಿತ್ಯ ಕಾಡಿ ಬೇಡುತ ಜನರ ದೂಡುತಿಹೆ ಸಂಸಾರ ಪ್ರೌಢ ಭಕ್ತರ ಗೋಷ್ಠಿಕೂಡಿ ಭಜಿಸದ ಎನ್ನ ಗಾಢ ಡಂಭಕೆ ಜಗದಿ ಈಡು ಕಾಣಿಸು ಸ್ವಾಮಿ4 ಭಾರಿ ಶಾಲುಗಳನ್ನೆ ಹೊದ್ದು-ನಿತ್ಯ ಕೇರಿಕೇರಿ ಪುರಾಣಗಳನ್ನು ಮೆದ್ದು-ಹಾರಿ ಹಾರುತ ತತ್ವರಾಶಿ ನುಡಿದು-ಊರು ಜ- ನರಮುಂದೆ ಪಾಂಡಿತ್ಯ ತೋರ್ಪೆ ಆಹಾ ತೋರಿ ತೋರುವೆ ಪರಮವೈರಾಗ್ಯ ಭಕ್ತಿಯ ದೂರಿ ದೂಡುವೆ ಪರರ ಹುಳುಕುಗಳನು ಎತ್ತಿ ಪಾರುಗಾಣದ ಕರುಣ ತೋರದಿದ್ದರೆ ಇನ್ನು 5 ಗುಡಿಗೆ ಹೋಗುವೆ ನಾನು-ನಿತ್ಯ ಅಲ್ಲಿ ಬೆಡಗು ಸ್ತ್ರೀಯರ ಹುಡುಕುವುದೇನೆ ಕೃತ್ಯ ದೃಢಭಕುತಿಯನು ಮಾಡಲೊಲ್ಲೆ ಸತ್ಯ-ನ ಮಡದಿ ಮಕ್ಕಳಿಗಿಲ್ಲ ಭೃತ್ಯಾನುಭೃತ್ಯಾ ಆಹಾ ಹುಡುಕೀ ನೋಡಿದಾಗ್ಯೂ ವಿರಕ್ತಿ ಭಕ್ತಿಗಳಿಲ್ಲ ಬಿಡಲು ಪೊರೆಯೆ ಪುರಾಣಶಾಸ್ತ್ರಗಳನ್ನು ನಿತ್ಯ ಎನ್ನ ಅನಾದಿ ನೀ ಕಲಿಸದಿದ್ದರೆ ಈಗ 6 ದೊಡ್ಡ ಪಂಡಿತ ನಾನೆಂಬ ಹೆಮ್ಮೆ-ಶುದ್ಧ ದಡ್ಡನೆಂಬುದ ಬಲ್ಲೆ ಮನದಿ-ಹಾಗೂ ಅಡ್ಡ ಬೀಳೆನು ಭಕ್ತ ಗಣಕೆ ಸುಳ್ಳು ವೊಡ್ಡುತವರನು ಹಳಿದೂ-ಕುದಿದೇ ಮನದೀ ಆಹಾ ದುಡ್ಡುಗೋಸುಗ ಬಹಳ ದೊಡ್ಡ ದಾಸನು ಎನಿಸೀ ಹೆಡ್ಡಮಂದಿಯ ಮುಂದೆ ದೊಡ್ಡ ಭಾಷಣ ಮಾಳ್ವೆ ಗುಡ್ಡದೊಡೆಯನೆ ಭಕ್ತಜಿಡ್ಡುಲೇಶವು ಕಾಣೆ ದೊಡ್ಡ ನಾಮವ ಹಾಕಿ ಸಡ್ಡೆ ಮಾಡದೆ ತಿರಿವ 7 ಕಚ್ಚಿ ಬಿಡದಿಹ ತುಚ್ಛ ಕಲಿಯು-ಬಹಳ ಮೆಚ್ಚಿ ಬಂದಿಹ ನವನು ಬಿಡುವನೇನು ಇಚ್ಛೆ ನನ್ನದು ನಡೆಯದೇ ನೊಂದು ತುಚ್ಛ ವಿಷಯದಿ ಸೆಳೆದು ಸೆಳೆಯುತಿಹನು ಆಹಾ ಇಚ್ಛೆಯಿಂದಲಿ ಜಗವ ಸೃಜಿಸಿ ಪಾಲಿಪಲೀಲೆ ಹಚ್ಚಿಕೊಂಡಿಹ ನಿನಗೆ ನನ್ನ ಪಾಲಿಪುದೇನು ಹೆಚ್ಚು ಕಾರ್ಯವೆ ಜೀಯ ಮುಚ್ಚಿಕೊಂಡಹ ನಿನ್ನ ಸ್ವಚ್ಛ ಬಿಂಬವ ತೊರಿ ಮೆಚ್ಚಿ ಕೊಡದಿರೆ ಜ್ಞಾನ 8 ಶ್ವಾಸಮತದಲಿ ಜನ್ಮ ವಿತ್ತೆ-ವಿಜಯ ದಾಸರ ಪ್ರಿಯ ಮೋಹನ್ನ ಪರಂಪರೆಯ ದಾಸನೆನಿಸಿ ಯೆನ್ನ ಮೆರೆಸಿ ಹೀಗೆ ದೋಷಿಗೈವುದು ಥರವೆ ಶ್ರೀಭಕ್ತಪ್ರಿಯ ಆಹಾ ವಾಸುದೇವನೆ ತುರ್ಯಲೇಸು ದೃಷ್ಟಿಯ ಬೀರೆ ನಾಶವಾಗದೆ ದೋಷ ಭಾಸವಾಗದೆ ಜ್ಞಾನ ಕಾಸುಬೀಡೆನು ಹಿರಿಯ ದಾಸರ ಗುಣ ನೋಡಿ ಲೇಸು ನೀಡೆಂತೆಂಬೆ ಶ್ರೀಕೃಷ್ಣವಿಠಲಾ9
--------------
ಕೃಷ್ಣವಿಠಲದಾಸರು
ಸಂತರೆನ ಬಹುದೈಯ್ಯಾ ಇಂಥವರಿಗೇ | ಅಂತರಂಗದ ಹರಿ ಏಕಾಂತ ಭಕುತರೀಗೇ ಪ ಸುಖಕ ಮೈಯ್ಯವ ಮರಿಯಾ | ದುಃಖಗಳಿದಿಂದೇ ನೋಯ | ಚಕಿತನಾಗನು ಕುಮತಿ ವಿಕಳ ನುಡಿಗೆ | ಪ್ರಕಟ ಸೌಖ್ಯಕ ಹಿಗ್ಗ | ಸಕಲರೊಳು ಹರಿಯೇ ವ್ಯಾಪಕ ವರಿದು ನಿರ | ಹಂಕೃತಿಯನುಳ್ಳರಿಗೇ 1 ಪರಮ ಭಾಗವತೆನಿಸಿ | ಪರರ ಮನಿಗಳಿಗ್ಹೋಗಿ | ಪಿರಿದು ವಿದ್ಯವ ತೋರಿ ಪೊರೆಯ ನೋಡಲಾ | ಪರಧನಕ ಕರವಿಕಲ | ಪರಸತಿಯರಿಗೆ ಕುರುಡ | ಪರರ ನಿಂದೆಗೆ ಮೂಕ ಪರವಶ್ಯಾದರಿಗೆ 2 ವೇಷಡಂಭಕವಿಲ್ಲಾ | ಕ್ಲೇಶ ಕರ್ಮಗಳಿಲ್ಲಾ | ಈ ಸಿರಿಯ ಸುಖದ ಮನದಾಶೆಯಿಲ್ಲಾ | ವಾಸುದೇವನ ಪದ | ಧ್ಯಾಸದನುಭವದಿ ನಟ | ಪರಿ ಸಂಸಾರ ಲೇಶ ದೋರ್ವರಿಗೆ 3 ಹರಿಯ ನಾಮವ ನೆನೆದು | ಹರಿಯ ಕೀರ್ತನೆಯಲ್ಲಿ | ಹರುಷಗುಡಿಗಟ್ಟಿ ತನು ಮರದು ನಿಂದು | ಬರುವ ಪ್ರೇಮಾಂಜಲಿಯ | ಭರಿತಲೋಚನನಾಗಿ | ತರಿಸಿ ತಾರಿಸುವ ಘನಕರುಣವಂತರಿಗೆ 4 ಇಂತು ದುರ್ಗಮವಿರಲು | ಸಂತರಾವು ನೀವೆಂದು | ಸಿಂತರವ ಹೋಗಿ ಜನ ಸಿಂತರಿಸುವಾ | ಭ್ರಾಂತ ಮೆಚ್ಚುವನಲ್ಲಾ | ಶಾತಗುರು ಮಹಿಪತಿ ಸ್ವಂತನುಜಗೆಂದಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಸಂತರೆನಬಹುದುದಯ್ಯ ಇಂತಿವರಿಗೆ ಅಂತರಂಗಲಿ ಹರಿಯ ಏಕಾಂತ ಭಕ್ತರಿಗೆ ಧ್ರುವ ಸುಖಕ ಮೈಯವ ಮರಿಯಾ ದು:ಖಗಳಿದಿರಿಡೆ ನೋಯಾ ಚಕಿತನಾಗನು ಕುಮತಿ ವಿಕಳ ನುಡಿಗೆ ಪ್ರಕಟಸ್ತೋತ್ರಕ ಹಿಗ್ಗ ನಿರಹಂಕೃತಿಯನ್ನುಳ್ಳರಿಗೆ 1 ಕ್ಲೇಶ ಕರ್ಮಗಳಿರಲು ಈ ಶಿರಿಯ ಸುಖದ ಮನದಾಶೆವಿರಲು ವಾಸುದೇವನ ಪದ ಧ್ಯಾಸದನುಭವ ದಿಟ ವೇಶ ಹರಿ ಸಂಸಾರ ಲೇಶದೋರ್ವರಿಗೆ 2 ಪರಮ ಭಾಗವತೆನಿಸಿ ಪರರ ಮನಗಳಿಗ್ಹೋಗಿ ಕರ ವಿಕರ ಪರಸತಿಯರಿಗೆ ಕೂರವು ಪರನಿಂದೆಗೆ ಮೂಕ ಪರವಶಾದರಿಗೆ 3 ಹರಿಯ ನಾಮವ ನೆನಿದು ಹರಿದು ಕೀರ್ತನೆಯಲ್ಲಿ ಹರುಷಗುಡಿಗಟ್ಟಿ ತನುಮರದು ನಿಂದು ಬರುದೆ ಪ್ರೇಮಾಂಜಲಿಗೆ ಭರಿತ ಲೋಚನನಾಗಿ ತರಿಸಿ ತಾರಿಸುವಂದ್ಯನ ಕರುಣವಂತರಿಗೆ 4 ಇಂತು ದುರ್ಗಮವಿರಲು ಸಂತರಾವು ನೀವೆಂದು ಸಿರಿತರವ ಹೋಗಿ ಜನ ಸಿಂತರಿಸುವಾ ಭ್ರಾಂತವೇಷಕ್ಕೆ ಸಿರಿಕಾಂತ ಮೆಚ್ಚನಲ್ಲಾ ಶಾಂತಗುಣ ಮಹಿಪತಿ ಸ್ವಂತಗೆಂದಾ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಸಂಪತ್ತು ನಿನಗಿಂದು ಪೊಸದಾಯಿತೆ | ಸಿಂಪಿನಲಿ ಪಾಲುಗುಡಿದದು ಮರದಿಯಾ ರಂಗ ಪ ಪಾಲು ಮೊಸರು ಕದ್ದು ಗೋವಳರೆಂಜಲನುಂಡು | ತಾಳ ಫಲಗಳ ಮೆದ್ದದು ಮರದಿಯಾ || ಕಾಲ ಕಾಲಕೆ ಇಲ್ಲಿ ಷಡುರಸಾಯನ ಸವಿದು | ಮೇಲಾಗಿ ಪೊಟ್ಟೆಯೆ ಪೊರೆವ ಅತಿಶಯವೇನು 1 ಕಂಡವರ ಕೈಯ್ಯ ಪಳ್ಳಿಯಲಿ ಹಳ ಹಳ ಎನಿಸಿ | ಕೊಂಡು ಭಂಡಾಗಿ ಇದ್ದದು ಮರದಿಯಾ || ವಾಹನ | ಕರ ಮುಗಿದು ಕೊಂಡಾಡುವ ಭರವೊ 2 ಮತಿಹೀನ ಖಳಗಂಜಿ ವನಧಿಯೊಳಗೆ ದ್ವಾರ | ವತಿಯಲ್ಲಿ ವಾಸವಾದದು ಮರದಿಯಾ || ಪ್ರತಿದಿವಸದಲ್ಲಿ ಸದ್ಭಕ್ತಿಯುಳ್ಳ ಶುದ್ಧ | ಯತಿಗಳಿಂದಲಿ ಪೂಜೆ ಕೈಗೊಂಬ ಸಂಭ್ರಮವೊ 3 ಈ ವೈವಸ್ವತ ಮನ್ವಂತರ ಉಳ್ಳತನಾಕಾ | ಕರ್ಮ ತಪ್ಪಲರಿಯದು || ಕೋವಿದರು ಪೇಳುವದು ಪುಸಿ ಎನ್ನದಿರು ದೇವ | ಈ ಉಡಪಿನ ಸ್ಥಾನ ನೆಚ್ಚಕೇನೊ ನಿನಗೆ 4 ಕ್ಲೇಶ ಕಳಿಯದಿರಲು | ಭಕುತವತ್ಸಲನೆಂಬ ಬಿರಿದು ಬರಿದೇ || ಮುಕುತೀಶ ಶಿರಿ ಕೃಷ್ಣ ವಿಜಯವಿಠ್ಠಲ | ವಿ |ರುಕತಿಯೆ ಇತ್ತರೆ ಕೀರ್ತಿ ಬಾಹದು ನಿನಗೆ 5
--------------
ವಿಜಯದಾಸ
ಸಮಾಜ ಚಿಂತನೆ :ನೀತಿಬೋಧನೆ ಅಜ್ಞಾನಿಗಳ ಕೂಡೆ ಅಧಿಕ ಸ್ನೇಹಕ್ಕಿಂತಸುಜ್ಞಾನಿಗಳ ಕೂಡೆ ಜಗಳವೇ ಲೇಸು ಪ ಉಂಬುಡುವುದಕಿಲ್ಲದರಸಿನೋಲಗಕಿಂತತುಂಬಿದೂರೊಳಗೆ ತಿರಿದುಂಬುವುದೆ ಲೇಸುಹಂಬಲಿಸಿ ಹಾಳ್ಹರಟೆ ಹೊಡೆವುದಕಿಂತ - ಹರಿಯೆಂಬ ದಾಸರ ಕೂಡೆ ಸಂಭಾಷಣೆಯೆ ಲೇಸು1 ಒಡನೆ ಹಂಗಿಸುವನೋಗರವನುಂಬುದಕಿಂತಕುಡಿನೀರು ಕುಡಿದುಕೊಂಡಿರುವುದೇ ಲೇಸುಬಿಡದೆ ಬಾಂಧವರೊಡನೆ ಕಡಿದಾಡುವುದಕಿಂತಅಡವಿಯೊಳಗಜ್ಞಾತ ವಾಸವೇ ಲೇಸು2 ಮಸೆಯುತಿಹ ಮತ್ಸರದ ನೆರೆಯೊಳಿರುವುದಕಿಂತಹಸನಿಲ್ಲದ ಹಾಳುಗುಡಿಯೇ ಲೇಸುಬಿಸಜಾಕ್ಷ ಕಾಗಿನೆಲೆಯಾದಿಕೇಶವರಾಯವಸುಮತಿಯೊಳು ನಿನ್ನ ದಾಸತ್ವವೇ ಲೇಸು 3
--------------
ಕನಕದಾಸ
ಸಲ್ಲದೋ ಎಲೋ ಮಾಯಿ ಸಲ್ಲದೊ ಎಲೊ ಮಾಯಿ ಎಲ್ಲಾ ಒಂದೆಂಬೋದು ಸೊಲ್ಲನಾಡಲು ಯಮ ಕೊಲ್ಲದಲೆ ಬಿಡಾ ಪ ಉಕ್ಕಿನ ಮಳಿಯ ರೋಮರೋಮದಲಿ ಬಡಿದು ಬೆಸಸಿ ಸದಾ ಗಂಡುತಗಲಿ ಗಟ್ಟಿ ಪಕ್ಕಿಯ ತಿವಿದು ಪಾಶದಲಿ ಬಿಗಿದು ಕಾ ಲಿಕ್ಕಿ ನೆಲಕೆ ವರಿಸಿ ಕೆಂಪಗೆ ಕಾಸಿ ಇಕ್ಕಳದಲಿ ಉಚ್ಚಿ ಕರುಳು ಬೈಲಿಗೆ ಹಾಕಿ ಪೊಕ್ಕಳಿಗೆ ತೇಳಾರು ಪೊಗಿಸಿ ಕಟ್ಟಿ ಕರ ಹೊಯಿದು ನಕ್ಕು ಯಮದೂತರು ನಿನ್ನ ಬಾಧಿಪÀರು 1 ನಿನ್ನ ಕಾಲಲಿ ಒದ್ದೊದ್ದು ಹೆಡಗುಡಿಯನು ಕಟ್ಟಿ ಗಾರ್ಧಭದ ಲದ್ದಿಯೊಳಡಿಗಿಸಿ ಸುತ್ತ ಉರಿಯನಿಕ್ಕಿ ಮದ್ದು ಮೈಯಿಗೆ ಮುಚ್ಚಿ ಮುದದಿಂದ ಬೇಯಿಸಿ ಹದ್ದು ಕಾಗೆಗೆ ನಿನ್ನ ಯೆಡೆ ಮಾಡುವರು ಅ ಮೇಧ್ಯವ ತಿನಿಸುವರು ಅರಗಲ್ಲಿಗೆ ಉದ್ದಿ ಉರುಳ ಬಿಡುವರು ಕೆಂಡದ ಮೇಲೆ ವೊದ್ದಿಸಿ ಪರಿಪರಿ ಭಂಗವಪಡಿಸುವರು 2 ವೈತರಣಿಯೊಳಗದ್ದಿ ಅದ್ರಿಯ ಹರಿ ಮಾತು ಪೊರಡದಂತೆ ಮಾಡಿ ಮುದ್ರೆ ಬಾಯಿಗೆ ಹಾಕಿ ತೂತು ಮೈಯಿಗೆ ತಂತಿಯ ಪೋಣಿಸಿ ಪೂತಿ ಗಂಧದೊಳು ಹೊರಳಿಸಿ ತಡಿಯದೆ ಯಾತಣೆಯಿಂದ ಬಿಸುಟು ಮೊಟ್ಟೆಯ ಕಟ್ಟಿ ಮೂತರ ಕುಡಿಸುವರು ಮೀಸಿಯನು ಕಿತ್ತಿ ಘಾತಿಸಿ ನೋಡುವರು ಮಹಾ ಪಾತಕನೆಂದು ವಿಧಿಯ ಮೇಲೆ ಗುದ್ದೋರು 3 ಹೆಡತಲೆಯಿಂದ ನಾಲಿಗೆಯ ತೆಗೆದು ಕ ಕ್ಕಾಡಿ ಮಾಡಿ ನವನಾರು ಸಂದುಗಳು ಸುಟ್ಟು ಕೈಕಾಲನು ಕಟ್ಟಿಸಿ ಸಾಸವಿ ಸುಣ್ಣ ತೊಡೆದು ಬೋರಿಗೆಯಿಂದ ಬಡಿದು ಬಸಿಗೆ ಹಾಕಿ ಒಡಲೊಳು ಸೀಸವರೆದು ಮರದ ಬೇಲೆಯಲಿ ಹೊಡೆದು ಸರ್ರನೆ ಸೀಳೋರು ಕುರಿಯಂತೆ ಕಡಿದು ಈ ಬಗೆ ಮಾಡೋರು ಕೀವಿನ ಮಡುವಿನೊಳಗೆ ಇಟ್ಟು ತಲೆಮೆಟ್ಟಿ ಕುಣಿವರೊ 4 ಮೂಗನು ಕೊಯಿದು ಕವಡಿಯ ಪೋಣಿಸಿ ಚೆ ನ್ನಾಗಿ ಅತ್ತರಾಟದಲ್ಲಿ ತಲೆಕೆಳಕಾಗಿ ಜೋಲುವಂತೆ ಝೋಲಿಯ ಹೊಡೆದು ಮಾತುಗಾಲೆ ನಿನ್ನ ತೂಗಹಾಕಿ ಬಾಗಿಸಿ ಇನ್ನೊಮ್ಮೆ ಬೊಗಳೆಂದು ಕುಡಕಾಸಿ ವೇಗನೆ ಬರೆ ಇಡುವರು ದು:ಖದ ಸಾಗರ ಉಣಿಸುವರು ಬೆಕ್ಕಿನಂತೆ ಕೂಗಲು ಕೇಳಿ ಸೈರಿಸದಲೆ ಇಪ್ಪರು 5 ಘಾಯವಡೆದಲ್ಲಿ ಇರಿದು ಉಪ್ಪನೆ ತುಂಬಿ ಬಾಯಿವರಳು ಮಾಡಿ ಭತ್ತವ ಥಳಿಸಿ ಕ್ರೂ ರಾಯುಧ ಕಿವಿಗೆ ಬಿರಿಯಿಟ್ಟು ಬಂಧಿಸಿ ಖೋಯೆಂದು ಕೆಡಹಿ ಬೊಬ್ಬಿರಿಯೇ ಚಿಂದಿ ಮಾಡಿ ನಾಯಿಗಳಿಂದ ಕಚ್ಚಿಸಿ ಸೂಜೀಯ ಆಯಕ್ಕೆ ಊರುವರು ಮರಕ್ಕೆ ಕಟ್ಟಿ ಊಯಾಲೆ ಆಡುವರು ಇಪ್ಪತ್ತೆಂಟು ನಾಯಕ ನರಕದಲ್ಲಿಟ್ಟು ತೆಗೆಯುವರು6 ಪರಿ ಬಾಧಿಗೆ ಇರೆ ನರಕ ನರಕದಲ್ಲಿ ಹೂಳಿ ಉಬ್ಬಸಗೈಸಿ ಉರ ಕಾಲದಲ್ಲಿಟ್ಟು ತರುವಾಯ ತೆಗೆದು ಪಾ ಮರ ದುರುಳನೆಂದು ಮಿಡುಕಿಸಿ ಮಹಾನಿತ್ಯ ನರಕದೊಳಗೆ ನೂಕಿ ಕಡೆಗಾಣದಂತೆ ವರಲುತಿರೆ ನಗುವರು ನಿರ್ಮಲವಾದ ಮರುತ ಮತದವರು ಪ್ರತಿದಿನ ಸಿರಿಪತಿ ವಿಜಯವಿಠ್ಠಲನ ನಂಬದ ಮಿಥ್ಯಾ 7
--------------
ವಿಜಯದಾಸ
ಸುಲಭದ ಮಾತಿದು ತಿಳಿದು ಪೇಳಿ ಹೊಲಬುದಪ್ಪಲು ಬೇಡ ಸುಲಿಗೆಯಾಹುದು ಮುಂದೆ ಪ ಅಂತರಿಕ್ಷದಲೊಂದು ನಿಂತಿಹ ವೃಕ್ಷವಾ- ನಂತಾನಂತವಾದೆಲೆಗಳುಂಟು ನಿಂತಿಹ ಎಲೆಗಳು ಬೀಳುವುದನು ನೋಡಿ ಮಂತ್ರಿಯೊಬ್ಬನು ಕುಳಿತು ಎಣಿಸುವನಯ್ಯ 1 ಭೂಮಿಯ ಮೇಲೊಂದು ಭೂಮಿಯು ಜನಿಸಲು ತಾ ಮನಸೋತನು ದೊರೆಯೊಬ್ಬನು ಪ್ರೇಮದಿ ರಾಜ್ಯವನಾಳುವ ಸಮಯಕ್ಕೆ ಸೀಮೆಯ ಮೇಲೆಲ್ಲ ಗುಡಿಗಟ್ಟಿತಯ್ಯ 2 ಕಡಗೋಲು ಮಿಡುಕಿತು ಒಡೆಯಿತು ಪಾತ್ರವು ಪಿಡಿದ ಬೆಣ್ಣೆಯೊಳೊಂದು ಗಿಡ ಹುಟ್ಟಿತು ಅಡವಿಯ ಮಧ್ಯದಿ ಹುಟ್ಟಿದ ಗಿಡವಿನ ಎಡೆಯೊಳು ಗಿಣಿ ಬಂದು ಮರಿಯಿಕ್ಕಿತಯ್ಯ 3 ಬಿಲ್ಲುಗಾರನು ಬಂದು ಬಲ್ಲಿದ ಪಕ್ಷಿಯ ಮೆಲ್ಲನೆ ಕೆಡೆಯಲು ಬೇಕೆನುತ ನೆಲ್ಲಿಯ ಎಲೆಯನ್ನು ಎಣಿಸಿ ಬೀಸಾಡುವ ನಲ್ಲನೊಬ್ಬನು ಕಂಡು ಹೊರಗಿಟ್ಟನಯ್ಯ 4 ಗುಡಿಯ ಬಾಗಿಲ ಮುಂದೆ ವೃಕ್ಷದ ಗಿಣಿಯನ್ನು ಮಡದಿಯೋರ್ವಳು ಕಂಡು ಒಳಗಿಟ್ಟಳು ಗಿಡುಗನ ಹಾವಸೆ ಒಡೆಯನು ಕಾಣುತ್ತ ಒಡಲಾಳು ಸುರಭಿಯ ಕಟ್ಟಿದನಯ್ಯ 5 ಮೂಗನು ಕಾಣುತ್ತ ಕೂಗ್ಯಾಡಿ ಕರೆಯಲು ಆಗಲೇ ಕಿವುಡನು ಧ್ವನಿಯ ಕೇಳಿ ಬೇಗದಿ ಕುರುಡನು ಬಂದು ಹಾಲೆರೆಯಲು ಆಗಲೆ ಪಕ್ಷಿಯು ಉಂಡು ಹಾರಿತಯ್ಯ6 ಬುದ್ದಿಹೀನನು ಕಂಡು ಶುದ್ಧ ಸ್ವಾಮಿಯೊಳು ತಿದ್ದಿದ ಗುಡಿಗಳು ಬಿದ್ದಮೇಲೆ ಎದ್ದು ಪಕ್ಷಿಯು ಹೋಗಿ ವರಾಹತಿಮ್ಮಪ್ಪನು ಇದ್ದಲ್ಲಿಗಾಗಿಯೆ ಹಾರಿಹೋಯಿತಯ್ಯ 7
--------------
ವರಹತಿಮ್ಮಪ್ಪ
ಸೂನು ಪ ನಡೆದು ಬರಲು ಒಬ್ಬ ಮಡದಿಯುಕೊಡಿರಿ ಸ್ಥಳವು ಎಂದು ನುಡಿಯುತಲಿಗಡಿಬಿಡಿಯಲಿ ನಮ್ಮ ನಡುಮನೆಯೊಳು ಬಂದು ಇಂಥಕಡುಮುದ್ದು ಬಾಲನ ಪಡೆದು ತೋರಿದಳಂತೆ 1 ಮಾತೆ ಬಾಣಂತಿಯು ನವಜಾತ ಶಿಶುವು ಸದ್ಯೋಜಾತನ ನಿಶೇಷ ಧಾತ್ರಿಧರನಾಥಾಅತಿಶಯ ಥಂಡಿ ಪ್ರಾತಃಕಾಲವು ತವಸೀತವಾಗಿದೆ ಎಂದು ಭೀತಿ ಉಂಟಾಗಿದೆ 2 ಒಂದು ನಾಲಕು ದಿನ ಸಂಧಿಸಿ ಗುಡಿ ವೃಜದಿಂದ ಕರದಿ ತನ್ನ ಕಂದನ್ನೆತ್ತಿಇಂದಿರೇಶನ ಪ್ರಿಯೇ ಒಂದಿನಿತು ಧ್ಯಾನಮಂದಿರದೊಳು ಬಂದು ಚಂದ ತೋರಿದಳಂತೆ 3
--------------
ಇಂದಿರೇಶರು
ಸ್ವಾಂತವ ತೊಳೆಯುತಲಿರಬೇಕು ಶಾಂತಿನಿಕೇತನವಾಗುವ ತನಕ ಪ ಶಾಂತ ಮೂರುತಿ ಶ್ರೀಶಾಂತನು ತನ್ನ ಏ ಕಾಂತ ಮಂದಿರವೆಂದೊಪ್ಪುವ ತನಕ ಅ.ಪ ಕಾಮ ಕ್ರೋಧವೆಂಬೊ ಕಸಗಳನು ನೇಮದಿಂದ ಗುಡಿಸುತಲಿರಬೇಕು ಪ್ರೇಮಜಲದ ಸೇಚನೆ ಮಾಡಿ ಹರಿ ನಾಮಸ್ಮರಣೆ ಧೂಪವ ಕೊಡಬೇಕು 1 ಕಲಿಪುರುಷನ ಓಡಿಸಬೇಕು ತಿಳಿಯ ವೈರಾಗ್ಯ ಭಕ್ತಿಗಳೆಂಬ ತಳಿರು ತೋರಣವ ಕಟ್ಟಲಿಬೇಕು ನಳಿನನಾಭನ ಮನ ಸೆಳೆಯುವ ತೆರದಿ 2 ಕಾಣಲು ಪರಮತತ್ವದ ದಿವ್ಯ ಜ್ಞಾನದ ಜ್ಯೋತಿಯ ಮುಡಿಸಲಿ ಬೇಕು ಜ್ಞಾನ ಸುಖಾದಿ ಸದ್ಗುಣ ನಿಧಿಯು ತಾನೆ ಪ್ರಸನ್ನನಾಗುತ ನೆಲೆಸುವ ಪರಿ3
--------------
ವಿದ್ಯಾಪ್ರಸನ್ನತೀರ್ಥರು
ಹಾದಿಯ ಕೊಡುಹರಿ ಪರಗತಿಯಾ ಸಾಧಿಸಿ ಬಂದೇ ಕೇಳಿ ಕೀರುತಿಯಾ ಪ ಕ್ಷಿತಿಯೊಳು ಭರತ-ಖಂಡದ ದೇಶದ ಪತಿತರ ತಾಂಡೆಯದ ನಾಯಕನು ಮತಿ ಹೀನ ಕಾಮಕ್ರೋಧರಾಗಿಹ ಪುಂಡರು ಪಥ ನಡೆಗುಡಿಸರು ಅತಿಬಲರು 1 ಆದಿಲಿ ಅಜಮಿಳಾ ತಾಂಡ್ಯ ಹೋದ ಬಳಿಕಾ ಹಾದಿ ಮುಗ್ಗಿತಿ ಕಡೆ ಬಹುದಿನದೀ | ಸಾದರಲೆನಗನಿ ಅಭಯವ ಕೊಟ್ಟರ | ಭೇದಿಸಿ ಜನರನು ನೆರಹುವೆನು 2 ಏನಾರೆ ಗೋಣಿಗೆ ಭಾವದ ಲಹರೆ ಕÉೂಂಡು ಮಾನು ಭಾವರ ಪ್ಯಾಟಿ ಹೋಗಿಸುವುದು ಘನಗುರು ಮಹಿಪತಿ ನಂದನ ಸಾರಥೀ ದೀನ ವತ್ಸಲನೆಂಬ ಬಿರುದಹುದು 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹೆಡಗುಡಿ ಕಟ್ಟಿ ಹೊಡೆಯಿರಿ ಇವನ | ಬಡತನ ಸಂತರಿಗ್ಹೇಳುವನ ಪ ಸೆಡಗರದಲಿ ಸಂಸಾರವ ಮಾಡುತ ಬಿಡದಾಶೆಯಲೀ ಮರಗುವನ ಅ. ಪ ಅನ್ನವ ಬೇಡುವ ಅತಿಥಿಯು ಬಂದರೆ | ನಿನ್ನೆ ನಾ ಉಪವಾಸೆಂಬುವನ | ಅನ್ಯಾಯದಲಿ ಪಾಪವ ಗಳಿಸಿ |ನಾಯ್ ಕುನ್ನಿಯಂತೆ ಎಲ್ಲರ ಬೊಗಳುವನ 1 ವಸ್ತ್ರವ ಕೊಡು ಎಂದವರಿಗೆ ಹರಕೊಂ- | ದೊಸ್ತ್ರವ ತೆರೆದು ತೋರುವನ | ವೇಶ್ಯಾ ಸ್ತ್ರೀಯರ ಕಂಡರೆ ಕರೆದು | ಉತ್ತಮ ವಸ್ತ್ರವನೀಯುವನ 2 ಮಂತ್ರವ ಅರಿಯದೆ | ತಂತ್ರವ ಮಾಡುತ | ಅಂತರ ಪೂಜೆಯ ಅರಿಯದವನ | ಅಂತರಂಗದಿ ಭವತಾರಕನಂಘ್ರಿಯ | ಶಾಂತದಿಂದಲಿ ಧ್ಯಾನಿಸದವನ 3
--------------
ಭಾವತರಕರು
ಹೋಗಿ ಗುಡಿಯೊಳಗುಂಡು ಬೇಗ ಬಾರೋಭೋಗಿ ವರ ಕಾಲಿಂಗ ನಾಗ ಮರ್ದನನೇ ಪ ಸರಸಿಜಾಸನ ಬ್ರಹ್ಮ ಸರಸತಿಯ ಒಡಗೂಡಿಸಿರಿ ರಮಣ ವೈಕುಂಠ ಗಿರಿವಾಸನೆಸುರ ನದಿಯ ಜಲದಿಂದ ಎರಡು ತುಳಸಿ ಗಂಧಪರಮ ಕುಸುಮಗಳಿಂದ ಪರಿಚರಿಸುತಲಿಹರು 1 ತರಣಿ ಸಹ ಬಂದಿಹನುಸುರರ ತರುಣಿಯರೆಲ್ಲ ನೆರಹಿಕೊಂಡಿಹರು2 ಸುಂದರಾಂಗಿಯು ಬಕುಲೆ ಮಿಂದು ಪಾಕವ ಮಾಡಿತಂದಿಹಳು ಕ್ಷಿರಾಬ್ಧಿ ನಂದನೆಯುಇಂದಿರೇಶಗೆ ಕಾಮಿತೊಂದೊಂದೆ ಬಡಿಸುವಳುನಂದ ಸುಕುಮಾರ ಗೋವಿಂದ ಗಜವರದಾ 3
--------------
ಇಂದಿರೇಶರು
ಹೋಯಿತು ಪರಶುರಾಮನ ದಂಡಿಲಿ ನಷ್ಟ ವಾಯಿತು ಜನರೆಲ್ಲ ಹೊಡೆತ ಕಡಿತದಿ ಪ ಮೇಧಿನಿಯೊಳಗಣ ಜನರಿಂಗೆ ದಂಡಿಂದ ಮಣಿ ಮುತ್ತು ತೀರ್ದುದು ಕಂಚು ತಾಮ್ರಗಳು ಬಹುಕಾಲ ಸಾಧಿಸಿದೊಡವೆ ಸಾಧನ ಸಂಪತ್ತುಗಳೆಲ್ಲ 1 ಉಡುವ ತೊಡುವ ಜವಳಿ ಅಡಕೆ ಮೆಣಸು ಭತ್ತ ಕಡಿತ ಕಂಠಗಳಾಬ್ರ ಮುಡಿ ಉಪ್ಪುಗುಢಕಲ್ಲು ಗಡಿಗೆ ಮಡಕೆ ಎಣ್ಣೆ ಕೊಡವು ಕಬ್ಬಿಣದ ಕತ್ತಿ ಅಡಿಯಿಟ್ಟ ಚಿಟ್ಟು ಪಾಟ್ಟಿಗಳೊಂದುಳಿಯದಂತೆ 2 ಕೊಟ್ಟದೊಳಗೆ ಇಟ್ಟವಸ್ತು ವಡವೆಯೆಲ್ಲ ನಷ್ಟವಾಯಿತು ಹಾರೆ ಕೊಡಲಿ ಗುದ್ದಲಿ ಕುಳ ಬಟ್ಟಲು ಹಂಡೆ ಕೊಪ್ಪರಿಗೆ ಇಕ್ಕುವ ಗುಂಡಿ ಮಣಿ ಮರಿಗೆ ಸರ್ವಸ್ವವು 3 ನಗ ಯೊತ್ತು ಉಂಗುರ ಜಪಮಣಿ ಮಾಲೆ ಹವಳ ಯಾ ರೆತ್ತುವ ನಗನಾಣ್ಯವೆಲ್ಲ ಸುಲಿಗೆಯಿಂದ 4 ಅಂಧಕಾರಕೆ ನೆರವಾದಂತೆ ದುರ್ಭಿಕ್ಷ ಬಂದಿತು ಸಂಗಡ ತಂಡುಲ ಗದ್ಯಾಣವೊಂದಕೈದಾಗಿ ಮುಗಿತು ಹರಿನಂದನ ಕೋಣೆ ಲಕ್ಷ್ಮೀಶನೊಬ್ಬನೆ ಬಲ್ಲ 5
--------------
ಕವಿ ಪರಮದೇವದಾಸರು