ಒಟ್ಟು 969 ಕಡೆಗಳಲ್ಲಿ , 89 ದಾಸರು , 850 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಎಂದಿಗೆ ದೊರಕುವನೋಪ. ಎಂದಿಗೆ ದೊರಕುವ ಸುಂದರ ಪುರುಷನು ಒಂದು ಗಳಿಗೆ ಯುಗ ಒಂದಾಗಿ ಕಳೆದೆನುಅ.ಪ. ಸರಿರಾತ್ರಿ ವೇಳ್ಯದಲಿ ಮೆಲ್ಲನೆ ಒಂದು ಸರಸವಾಡುತಲಿ ಪರಿಪರಿ ವಿಧದಲಿ ಸ್ಮರನ ಕಲೆಯ ತೋರಿ ವಿರಹಗೊಳಿಸಿ ನಾಳೆ ಬರುವೆನೆನ್ನುತ ಪೋದ 1 ಕೌಸ್ತುಭ ರತ್ನಾ- ಲಂಕೃತ ಶುಭಗ್ರೀವನ ಶಂಕರಾರ್ಚಿತನು ಮೀನಾಂಕಜನಕ ನಿಷ್ಕ- ಲಂಕ ಮಹಿಮನು ಶ್ರೀವೆಂಕಟರಮಣನು2 ಅಂಗಜಕೋಟಿರೂಪ ಪರಮ ಸದಯಾ- ಪಾಂಗನಿರತ ನಿರ್ಲೇಪ ಮಂಗಲ ಚರಿತ ಭುಜಂಗಶಯನ ನರ- ಸಿಂಗ ವರದ ಮಾತಂಗ ಶ್ರೀರಂಗನು3 ಚಂದಿರಶತವದನ ಶೋಭಿಪ ನವ ಕುಂದ ಕುಟ್ಮಲರದನ ಸಿಂಧುಶಯನ ಮುಚುಕುಂದಾಪ್ತ ಸಚ್ಚಿದಾ- ನಂದ ಗೋವಿಂದ ಮುಕುಂದ ನಂದನಕಂದ4 ಅಕ್ಷರಾರ್ಚಿತ ದೇವನು ಶರಣ ಜನ ಪಕ್ಷ ಪರಾತ್ಪರನು ಪಕ್ಷೀಂದ್ರ ತುರಗ ಪದ್ಮಾಕ್ಷ ತ್ರಿಲೋಕ ವಿ-ಲಕ್ಷಣಮೂರ್ತಿ ಶ್ರೀಲಕ್ಷ್ಮೀನಾರಾಯಣ5
--------------
ತುಪಾಕಿ ವೆಂಕಟರಮಣಾಚಾರ್ಯ
ಎಂದು ಕಾಂಬೆನೊ ರಾಘವೇಂದ್ರ ಗುರುಗಳನಾ | ಕಾಯ ಆನಂದ ನಿಧಿಯ ಪ ತಾಯಿಯಂದದಿ ನಮ್ಮ ಕಾಯುವ ಧಣಿಯಾ ನ್ಯಾಯ ಸದ್ಗುಣ ಪೂರ್ಣ ಮಾಯಿ ಜಗ ಹರಿಯಾ 1 ಮಾಯಾ ರಮಣನ ನಾಮ ಗಾಯನ ಪರನ ದಾಯಾದಿ ಕುಲವೈರಿ ಶ್ರೇಯ ಬಲಯುತನಾ2 ನರರೂಪ ಧರಿಸಿ ವಾನರÀ ಭಕ್ತವರನಾ ನರಶೌರಿ ಪ್ರೀಯ ದೀನರ ಕಾಯುತಿಹರಾ 3 ಜನರನ ಪೊರೆವನೆಂದೆನುತ ಭೂಮಿಯಲಿ ಜನಿಸಿದ ತನ್ನವನ್ನ ವನುತಿ ಸಹಿತದಲಿ 4 ದುರಿತ ವರೆಕೆ ತಾಮುರುತನಾಗಿಪ್ಪ ಗುರುವೆಂಬ ಸಿರಿಗೆ ಇವ ನಿರಂತರದಿ ಸುರಪಾ 5 ಭಕ್ತರ ಬಯಕೆ ಪೂರೈಪಾ ಸುರತರುವೇ ಶಕ್ತ ವಿರಕ್ತ ಹರಿಭಕ್ತ ಮದ್ಗುರುವೆ 6 ಭುವನದಿಂ ದಾಟಿಸೆ ನೌಕವಾಗಿಹಿನಾ ನವ ಭಕುತಿಯನೀವ ಕುವಿಕುಲ ವರನಾ 7 ಇವನೇ ಗತಿಯೆನೆ ಜ್ಞಾನ ತವಕದಿ ಕೊಡುವಾ 8 ನಿಂದಿಪ ಜನರಲ್ಲಿ ಪೊಂದಿಪ ಪ್ರೇಮ ವಂದಿಪ ಜನರಿಗೆ ಸತತ ಶ್ರೀ ರಾಮ 9 ಶ್ರೀನಿವಾಸ ಪುತ್ರ ಪರಮ ಪವಿತ್ರಾ ಜ್ಞಾನಿ ಜನರ ಮಿತ್ರ ವಿಹಿತ ಚರಿತ್ರಾ 10 ನಷ್ಟ ತುಷ್ಟಿಗೆ ಅಂಜಾ ದುಷ್ಟ ಶೇರಾ ಕಷ್ಟ ಕಳೆಯುವ ನಮ್ಮ ಕೃಷ್ಣ ಪಾರಿಜಾತ 11 ಪೊಳಲುರಿ ಸಖನಾ ಘನಪೊಳಿಯುವ ಪಾದಯುಗವಾ ಘಳಿಗಿ ಬಿಡದಲೆ ನೋಡುತ ನಲಿಯುತಿರುವಾ 12 ಅರಿದು ಈತನೇಯನ್ನ ಗುರುವೆಂಬಗೆ ರುದ್ರಾ ಧುರದೊಳು ಭೀಮ ಗುರುವಿಗತಾ ದಾರಿದ್ರ್ಯಾ 13 ಅನಿಮಿತ್ತ ಬಂಧು ಬ್ರಾಹ್ಮಣ ವಂಶಜಾ ಭವ ತ್ರಾತಾ 14 ತಪ್ಪು ನೋಡದಲೆ ಕಾಯುತಿಪ್ಪ ನಮ್ಮಪ್ಪ ಸರ್ಪ ತಲ್ಪನ ಧ್ಯಾನದಿಪ್ಪ ನಿಪ್ಪ 15 ಅರುಣಾಭಿ ಚರಣ ತಲೆಬೆರಳು ಪಂಕ್ತಿಗಳಾ ಸರಸಿಜ ಪೋಲ್ವ ಮೃದುತರ ಪಾದಯುಗಳಾ 16 ವಲಿದ ಭಕ್ತರಿಗಿಷ್ಟ ಸಲಿಸುವ ಪಾದ17 ಸಕಲ ರೋಗವ ಕಳೆವ ಅಕಳಂಕ ಪಾದ ಪಾದ 18 ಹರಿಯಂತೆ ಹರನೊಲ್ ಸಾಸಿರ ನಯನನಂತೆ ಶಿರಿಯಂತೆ ತೋರ್ಪ ಭಾಸ್ಕರ ನರನಂತೆ 19 ಸುಳಿರೋಮಗಳುಳ್ಳ ಚಲುವ ಜಾನುಗಳಾ ಎಳೆಬಾಳೆ ತೆರ ಊರು ಹೊಳೆವ ಸುಚೈಲ 20 ತಟಿತ ಸನ್ನಿಭವಾದ ಕಟಿಗಿಪ್ಪ ಸೂತ್ರ ನಟ ಶೇವಸಿವಲಿ ತಾನು ಪುಟಿಯು ಉದರಾ 21 ಎದೆಯಲಿಪ್ಪುದÀು ನಮ್ಮ ಪರಮೇಶನ ಮನೆಯೊ ವದಗಿ ಭಕ್ತರಿಗೆ ಕರುಣದಿ ಕಾಯ್ವ ಖಣಿಯೂ 22 ಹುತವಾಹನನಂತೆ ಭಾರತೀಕಾಂತನಂತೆ ಚತುರಾಶ್ಯ ಈ ಕ್ಷಿತಿಯಂತೆ ಇಹನಂತೆ23 ಹಸುವಿನಂದದಲಿ ಪಾಗಸನೊಳಿಹನ ವಸುಧಿಯೊಳಿಂತಿದೊಮ್ಮೆ ಪಸುಯನಿಸಿದನಾ 24 ಭೂಧರತನಂತೆ ವಸುಧರನಂತೆ ಭೂಧರನಂತೆ ಸೋದರನಂತೆ 25 ಚರ್ಚಿತ ಸುಂದರ ರೂಪ ಕಂಬು ಲೋಕ ಕಂಧರಾಯುತನ 26 ಕರೆದು ಭಕ್ತರಿಗಿಷ್ಟಗರಿಯುವ ಚೆಲ್ವಾ ವರ ರೇಖೆಯುತ ಶಿರಕರದಾ ವೈಭವನಾ 27 ಮಂಗಳದಾಯಕ ಅಂಗೈಯಿಯುಗಳಾ ಭಂಗಾರ ದುಂಗಾರ ಇಟ್ಟಿಪ ಬೆರಳು 28 ಕೆಂದುಟಿ ಮೊದನಾಗಿ ಇಂದಿಪ್ಪ ವದನಾ ಪೊಂದಿದ ದಂತಗಳಿಂದ ಸ್ವಾರಚನಾ29 ಹಸನಾದ ದೊಕರದಂತೆಸೆವ ಗಲ್ಲಗಳಾ ಬಿಸಜದಂತೆ ರಾಜಿಸುವ ನೇತ್ರಗಳಾ 30 ನಾಸಿಕದಲಿಪ್ಪ ಮೀಸಿ ದ್ವಂದ್ವಗಳಾ ದೇಶಾದಿ ಪಾಲ್ಮೂರು ವಾಸಿ ಕರ್ಣಗಳಾ 31 ಗಿಳಿಗೆ ವಾಚ್ಯಾಪದೊಳ ಹೊಳೆವಾ ಪುಚ್ಛಗಳಾ ತಿಲಕಾ ಮುದ್ರೆ ಪುಂಡ್ರಗಳುವುಳ್ಳ ಫಾಲಾ 32 ಹರಿಪಾದ ಜಲವನ್ನು ಧರಿಸಿದ ಶಿರವಾ ಶಿರಿಗೋವಿಂದ ವಿಠಲನ್ನಡಿಗೆಯರಗುವಾ ಶಿರವಾ33
--------------
ಅಸ್ಕಿಹಾಳ ಗೋವಿಂದ
ಎಂದು ಕಾಂಭುವೆ ರಂಗಯ್ಯ ನಾ ಪ ಇಂದ್ರಾನುಜಗುಣ ಸಾಂದ್ರನ್ನಾ | ಉಪೇಂದ್ರನ್ನಾ | ಸುರ್ಯನ್ನಾ ಚಂದ್ರನನಾ 1 ಮಂದರಧರ ನಂದನ್ನಾ | ಸಂದನ್ನಾ ಮುಕುಂದನ್ನಾ 2 ವಾತಜಕೇತುಳ್ಳಾತನ ಸ್ಯಂದನಾ | ಸೂತ ತ್ರೈಜಗ ತಾತನ್ನಾ 3 ಭೂತಳ ಸಂತತ ಪೊತ್ತಿಹ | ಯಾದವ |ಸಾಧಾನಾಧಾನಾಡನ್ನಾ 4 ಮಿತಾನಂತಿ ಭಗಾತ್ರ ವಿರಾಜಿತ | ಪತ್ರಿ ಮುಕುಟಧ್ವಜ ಸೂತ್ರನ್ನಾ5 ಸತ್ರಿ ನೇತ್ರ ಮಿತ್ರ ವಿಧಾತೃ | ಪಿತೃ ವಿಚಿತ್ರ ಚರಿತನ್ನು 6 ಗುರುವರ ಮಹಿಪತಿ - ದೊರೆಯಾ | ಮುರ ಅರಿಯಾ ಸುಖವರ್ಯಾ ನರಹರಿಯಾ 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಂದೆಂದಿಗೂ ನಾ ಬಿಡೆ ನಿನ್ನ ಚರಣಾ ಬಂದೆನ್ನ ಕಾಯೊ ಶ್ರೀ ವೇಂಕಟರಮಣಾ ಪ ಪಟ್ಟಿ ಪೀತಾಂಬರ ತೊಟ್ಟ ಮುತ್ತಿನ ಹಾರಾ ವೈಜಯಂತಿ ಸುಂದರ ವದನ ಶುಭಾಂಗ ಮನೋಹರಾ ಮಕರ ಕುಂಡಲಧರ ಮೋಹನ ರೂಪಾ1 ನಿತ್ಯ ಕಲ್ಯಾಣನೆ ನಿಗಮ ಗೋಚರನೆ ಅಕಳಂಕ ಚರಿತನೆ ಸಕಲರಪಾಲಿಪ ಅನಂತ ರೂಪಾ ಶ್ರೀ ವೆಂಕಟೇಶಾ2 ಪರಮ ಕಲ್ಯಾಣ ಗುಣಾರ್ಣವನೇ ದುರಿತ ವಿದೂರನೆ ಪರಮದಯಾ ನಿಧೆ ವರಗಿರಿವಾಸಾ 3 ಘಾಸಿ ಗೊಂಡಿಹೆ ಭರದಿ ಕ್ಲೇಶ ಪಾಶಂಗಳ ಪರಿಹರಿಸಯ್ಯಾ ವಾಸುದೇವನೆ ನಿಮ್ಮ ನಾಮ ಸ್ಮರಿಸುವಂತೆ ನಿತ್ಯ ಪಾಲಿಸು ಪ್ರಭುವೆ4 ಸುರಮುನಿ ವಂದ್ಯನೇ ಸುರನರ ಸೇವ್ಯನೇ ಶರಣರ ಪಾಲಿಪ ಸರ್ವೋತ್ತಮನೇ ತಿರುಪತಿವಾಸನೆ ತಿರುಮಲೆ ಶ್ರೀಶನೇ ಶೇಶಗಿರೀಶನೆ ಶ್ರೀ ವೇಂಕಟವಿಠಲನೇ 5
--------------
ರಾಧಾಬಾಯಿ
ಎನಗಳವೆ ನಿನ್ನ ಮಹಿಮೆಯನು ಪೊಗಳಲು ಹೀನಮತಿ ನಾ ಪನ್ನಂಗಶಯನ ಪ ನೀಲಶಾಮನೆ ನಿಮ್ಮ ಲೀಲೆ ಪೊಗಳಲ್ಕೆ ಬ್ರಹ್ಮ ಸಾಲವು ನಾಲ್ಕುವೇದವೆಂದು ನಾಲಿಗೆಯೋಳ್ವಾಣಿನಿಟ್ಟಿರುವನಂತೆ 1 ಸಾಸಿರ ಜಿಹ್ವೆಗಳಿಂದ್ಹೊಗಳಲ್ ಈಶಭಜನೆ ತೀರದೆಂದು ಶೇಷ ಇನ್ನು ಸಾಸಿರಜಿಹ್ವೆ ಆಶಿಸಿ ಬೇಡುವನಂತೆ2 ಪ್ರಾರ್ಥಿಸಲು ನಿಮ್ಮ ಚರಿತ ಶಕ್ತಿ ಸಾಲದಂಥವರಿಗೆ ಭಕ್ತಿಯಿಂ ಪೊಗಳುವೆನಿಷ್ಟೆ ಮುಕ್ತಿದಾಯಕ ಶ್ರೀರಾಮಯೆನುತ 3
--------------
ರಾಮದಾಸರು
ಎನಗೆ ಕಾರಣವೇನು ಪಾಪಕ್ಕೆ ುನ್ನುನಿನಗೆ ಕಾರಣವೆಂಬ ಮಾತಿನ್ನದೇಕೆ ಪಎನ್ನ ಸ್ಟೃಯ ಮಾಡ ಹೇಳಿದೆನೆ ಮತ್ತೆಅನ್ನವನಿತ್ತುಣ್ಣ ಕಲಿಸೆಂದೆನೆಮನ್ಮಥ ನೆಲೆಯಾಗಬೇಕೆಂದೆನೆ ಬೇಗಕನ್ನೆಯೊಬ್ಬಳ ಮುಂದೆ ನಿಲಿಸೆಂದೆನೆ ಸ್ವಾಮಿ 1ಜಾತಾದಿ ಷೋಡಶ ಕರ್ಮಗಳ ನಿತ್ಯಪ್ರೀತಿುಂದಲಿ ಮಾಡಿ ಸ್ವರ್ಗಗಳವೋತು ಪಾಪಗಳಿಂದ ನರಕಗಳ ಹೊಂದಿಯಾತನೆಗೊಳಿಪಂತಾಗೆಂದೆನೆ ವಿಧಿಗಳ 2ಮಡದಿ ಮಕ್ಕಳು ಮನೆವಾರ್ತೆಯೆಂಬ ಬಲುತೊಡಕಿನೊಳನ್ಯರೆನ್ನವರೆಂತೆಂಬಬಡಿಶಕ್ಕೆ ಸಿಲುಕಿಯೊದ್ದಾಡಿಕೊಂಬ ುಂಥಹೆಡಗುಡಿಯನು ಕಟ್ಟಿ ಕೊಲ್ಲೆಂದೆನೆ ಸ್ವಾಮಿ 3ಆಡಿಸಿದಂತೆ ನೀನಾಡುವೆನು ುೀಗನೋಡಿದರಿಲ್ಲ ಸ್ವತಂತ್ರವಿನ್ನೇನುಬೇಡಿಕೊಂಬೆನು ಪಾದಕ್ಕೆರಗೀಗ ನಾನು ನೀನುಕೂಡಿ ರಕ್ಷಿಸಬೇಕು ಕಪಟವಿನ್ನೇನು 4ಸೂತ್ರಧಾರಕ ನೀನು ಸಕಲಕ್ಕೆ ಮಾಯಾಮಾತ್ರವೀ ಜಗವಿದನಾಡಲಿನ್ನೇಕೆಪಾತ್ರ ಕೃಪೆಗೆ ನಾನು ಗುರು ನೀನಾಗಲ್ಕೆ ಸುಪವಿತ್ರ ಚರಿತ್ರ ವೆಂಕಟ ಮರೆಹೊಕ್ಕೆನು 5ಓಂ ಸತ್ಯಭಾಮಾಧವಾಯ ನಮಃ
--------------
ತಿಮ್ಮಪ್ಪದಾಸರು
ಎನ್ನ ಮನ ಅನ್ಯಕ್ಕೆರಗುತ್ತಿದೆ ಪ ಪತಿ ಅಂಗ ಸಂಗದೊಳಿರುತಿದ್ದು ಇದ್ದುಸತಿ ಉಪಪತಿಯನ್ನು ಬಯಸುವಂತೆಶ್ರುತಿ ತತ್ವ ಶಾಸ್ತ್ರಗಳರಿತಿದ್ದು ಇದ್ದು ದು-ರ್ಮತಿ ದುಷ್ಟ ಚರಿತೆಗೆ ಎಳೆಯುತಿದೆ ಎನ್ನ1 ನಿತ್ಯ ಉಣುತಿದ್ದು ಇದ್ದುಸುರೆಯ ಚಿಂತಿಸಿ ರುಚಿಗೊಳ್ಳುವಂತೆಕರಿ-ಸುರನದಿಯಲ್ಲಿ ಮೀಯುತಿದ್ದು ಇದ್ದುಪರಮ ಹರುಷದಿ ಕೆಸರ ಚೆಲ್ಲಿಕೊಂಬಂತೆ 2 ಪರಮ ಪಾವನ ಗುಣಪೂರ್ಣನೆ ನಿನ್ನಚರಣಯುಗಳವನ್ನು ಧ್ಯಾನಿಸುತನೆರೆಹೊರೆಯಲಿ ಮನ ಹೋಗದಂದದಲಿಕರುಣಿಸಿ ನಿಲ್ಲಿಸೊ ಸಿರಿಕೃಷ್ಣರಾಯ 3
--------------
ವ್ಯಾಸರಾಯರು
ಎನ್ನ ಸಲಹೋ ಚರಣವನ್ನು ದೋರಿ ಪರಮ| ನಿನ್ನ ಕಿಂಕರನೆಂದು ಘನ್ನದಯವನು ಬೀರಿ ಎನ್ನಾ ಪ ಶರಣ ಜನ ಮಾನ ರಕ್ಷಕನೇ ವರಕಮಲ ಕರಕಮಲ ಪದವಿಮಲ ಮಹಿಮನೇ ಸಕಲ ಗುಣಧಾಮ ಘನಶ್ಯಾಮ ಸುರ ರಿಪು ಮಥನ| ಗೋಕುಲರಿ ಸೋದರಾನಂತ ಗುಣಾ ಶ್ರೀ ಹರಿ ಭಕ್ತರ ವಸರಕೊದಗುವೆ ನೀ ಪರೋಪರಿ| ಸುಕಲ್ಪತರು ದನುಜ ಕುಲಸಂಹಾರ ಸರ್ವದುರಿತ ನಿವಾರಾ 1 ಅಖಿಳ ಶೃತಿ ಸ್ಮøತಿ ನಿಕರಲಿಂದ ನುತಿಸಿಕೊಂಬೆ| ವಿಕಸಿತನುಪಮ ವದನಬ್ಜ ಕುಲ ಅಬ್ಜರವಿ ಪ್ರಕಟದೊಳೊದಗಿ ಬಂದೆ ಸರಸೀರುಹ ನಯನ ಜಗದ ತಂದೇ| ಸಿರಿನಂದ ನಂದನ ಪರಮುದಾರೇ| ಸುರವೃಂದ ರಕ್ಷಕ ವರ ಮುರಾರೇ 2 ಶರಣಾಗತ ಜನರ ಪಾಲಾ| ಸಿರಿ ಉರಗಾರಿಗಮನ ಸೂರಾರಿ ಸಿಬಿಕುಲ| ಶೌರಿ ನರಸಹಕಾರಿ ಗಿರಿಧರನೇ| ಕರುಣಾಕರ ತ್ರಯದಿ ಸ್ಮರಣ ಮಾಳ್ಪರ ಭಯವ| ಹರಣ ಶರಣ ಕೌಸ್ತುಭಾಭರಣ ನೀಲವರಣಾನಂದ3 ವರ ಶ್ರೀರಮಣ ದೇವ ಜಗಜೀವ ಮಹಿಪತಿ ನಂದ ನೊಡಿಯ| ಪರಮಾನಂದ ಜೀವದೊರಿಯೇ| ಭವ ವಿನುತ ಮತಿ ಚರಿತಾ ಸಿಂಧೂರ| ನವನೀತ ಚೋರ ಜಗದೀಶ ಹರಿಯೇ4
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಮ್ಮಳವೇ ಪೊಗಳಲಮ್ಮಮ್ಮಾ ಬೊಮ್ಮನರಿಯ ನಿಮ್ಮ ಮಹಿಮಾ ಪ ಭೂತಳದೊಳರವು ಸಕಲ ಉಂಟೆಂದು ಖ್ಯಾತಿಯಿಂದ ನಾನಾತೆರದಿ ಸ್ತುತಿಸೆ ಮಾತಿಗೆ ವಿಗತ ಕಗತ ವಾಗೆ ಶೃತಿಗಳು ನೇತಿ ನೇತಿ ತಿರುಗಿದ ಬಳಿಕಾ 1 ಕುಸುಮನಾಭೇನನ ಸಾಮೀಪೆಂಬಾ ತವಕದಿ ಅಸಮ ತೆರದಿ ಪೊಗಳಲು ಚರಿತಾ ದ್ವಿಸಹಸ್ರ ಜಿವ್ಹಕ ಮೀರಿ ಪೊಗಳುತ ಅತಿ ಕುಶಿದು ತಲೆವಾಗಿ ತಾ ನಾಚಿದ ಬಳಿಕ2 ತರಣಿ ಕೋಟಿತೇಜ ಸ್ವರೂಪ ಜ್ಯೋತಿಯ ಅನ ವರತ ಹೃದಯ ಮಂದಿರದೊಳಿರಿಸಿ ಮೆರವುತ ನಿನಗತಿ ಬ್ರಯರಾದಾ ಭಕುತರಾ ಸ್ಮರಣೆ ಯೋಗ್ಯವಲ್ಲದೆ ಮಹಿಪತಿಸುತ ಪ್ರಿಯಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಎಲೆ ಮನಸೆ ನಾಂ ಪೇಳ್ವ ಬುದ್ಧಿ ಮಾತುಗಳ ಕಲಿತು ಜಾಣನಾಗಿ ನಿಜಸುಖದಿ ಬಾಳು ಪ ಪರನಿಂದೆ ಬೆರೆಸದಿರು ನಿರುತರನು ಜರಿಯದಿರು ದುರಿತದೊಳಗುರುಳದಿರು ಪರಚಿಂತೆ ಮಾಡು ಗುರುಹಿರಿಯ್ಹರಳಿಯದಿರು ದುರುಳರೊಳಗಾಡದಿರು ಹರಿಯಶರಣರ ಸೇವೆ ಸ್ಥಿರವಾಗಿ ಮಾಡು 1 ಮರವೆ ಪರದೆಯ ಹರಿ ಅರಿವಿನಮೃತ ಸುರಿ ಸ್ಥಿರಜಾನ್ಞದೊಳು ಸೇರಿ ಹರಿಚರಿತ ಬರಿ ಹರಿದಾಟವನು ಮರಿ ಜರೆಮರಣದು:ಖ ತರಿ ಪರಮಹರುಷದಿ ಮರೆ ದುವ್ರ್ಯಸನ ತೂರಿ 2 ಕ್ರೋಧವನು ಕಡೆಮಾಡು ವಾದಬುದ್ಧಿಯ ದೂಡು ಸಾಧುಜನರೊಳಗಾಡು ಶೋಧನ ಮಾಡು ಖೇದವನು ಈಡ್ಯಾಡು ವೇದದರ್ಥವ ಮಾಡು ಪಾದಸೇವೆಯ ಮಾಡು ಮಾಧವನ ಕೂಡು 3 ಕಾಮಲೋಭವ ಕಡಿ ಭೂಮಿಮೋಹವ ತೊಡಿ ಭಾಮೆಯರ ಪ್ರೇಮ ಬಿಡಿ ಕ್ಷೇಮಪಥ ಪಿಡಿ ತಾಮಸದೂರಮಾಡಿ ಸಾವಧಾನದ್ಹಿಡಿ ಪಡಿ ನೇಮದ್ಹುಡುಕಾಡಿ 4 ಮೋಸಪಾಶವ ಗೆಲಿ ಕ್ಲೇಶಗುಣಗಳ ತುಳಿ ದಾಸಜನರೊಳು ನಲಿ ಶಾಶ್ವತವ ತಿಳಿ ಹೇಸಿಕ್ವಾಸನೆಯಳಿ ದೋಷರಾಸಿಯಿಂದುಳಿ ಶ್ರೀಶ ಶ್ರೀರಾಮನಲಿ ದಾಸನಾಗಿ ಸೆಳಿ 5
--------------
ರಾಮದಾಸರು
ಎಲ್ಲಿಹನು ದೇವನೆಂದೆಲ್ಲು ಜನ ನುಡಿವರು ಸಲ್ಲುವುದೆ ಆಲಿಸಲು ಬಲ್ಲಗೀ ನುಡಿಯು ಇಲ್ಲೆಂದು ನುಡಿವರ್ಗೆ ಬಲ್ಲನಿತು ಪೇಳುವೆನು ಪುಲ್ಲನಾಭನ ಚರಿತವಾ ಹಿತವಾ ಪ ಕಲ್ಲಾಗಿ ಬಿದ್ದಿಪ್ಪಹಲ್ಯೆ ತಾ ಬಲ್ಲಳು ಎಲ್ಲ ಜಗ ಪಾವನನ ಸುಳ್ಳೆನ್ನಬಹುದೇ ಅಲ್ಲೆಂದರೀ ನುಡಿಗೆ ಹೊಲ್ಲ ಜಗವ ತುಂಬುವನು ಕಲ್ಲು ಮುಳ್ಳನು ಉದರದಿ ಜವನಿ 1 ತೋರೆಲವೊ ಹರಿಯನೆಂದೊದರಾಡೆ ರಕ್ಕಸನು ಘೋರ ಕಂಭದಿ ತೋರೆ ಹಾರಿ ತಲ್ಹಣವು ಘೋರ ರೂಪವ ತಾಳಿ ನಾರಸಿಂಹಾಖ್ಯದಿ ಚೂರ ಮಾಡಿದವನÀನು ಪರನು 2 ಧsÉೀನಿಪರ ಮನದೊಳಗೆ ಸಾನುರಾಗದಿ ಹರಿಯು ಸ್ಥಾನಗೊಳಿಪನು ಮನಕೆ ಆನಂದವೀವಾ ದಾನವಾಂತಕ ಶ್ರೀ ನರಸಿಂಹವಿಠಲನು ಆನತರ ನೆರೆ ಪೊರೆವನು ಬಿಡನು 3
--------------
ನರಸಿಂಹವಿಠಲರು
ಏಕಮೇವಾ | ಅದ್ವಿತೀಯನೆ ಪಾಹಿ | ಏಕಮೇವ ಪ ಏಕಮೇವ ತ್ರೈಲೋಕ ಜನಕ ಕರುಣಾಕರ ಹರಿಯೇ ಅ.ಪ. ಮಾನ್ಯ ಮಾನದ | ನಾನ್ಯಪ ಹರಿ ಸತ್‍ಶೂನ್ಯಾಭಿಧ ಸರಿ | ವಾಣ್ಯಾದಿಯ ಹರ 1 ಭವ ಸುರ | ಕರಣಶಕ್ತಿ ಹರ 2 ಉದರದೊಳಗೆ ಜಗ | ಹುದುಗಿಸಿ ಸರ್ವವಅದುಭುತ ತಮದಲಿ | ವಿಧಿಸಿದ ಹರಿಯೇ 3 ಪ್ರಲಯೋದಧಿ ಶಯ | ಚೆಲುವ ಬಾಲ ಬಲ್‍ಒಲವಿನಿಂದ ಪದ ಬೆ | ರಳನೆ ಸವಿದಾ 4 ಸೃಷ್ಟಿಗೊಡೆಯ ಲಯ | ಅಷ್ಟ ಭಾಗವಿರೆಚೇಷ್ಟಿಸಿ ದುರ್ಗೆಯ | ಹೃಷ್ಟಳ ಮಾಡಿದೆ 5 ಕರ್ಮ ತವಕೃತ್ಯವನಂತವು | ಭೃತ್ಯರ ಸುದತರು 6 ಕಮಲಾರಮಣನೆ | ಕಮಲಜಾದಿ ನುತನಿಮಿಷೋನ್ಮಿಕರ | ಸುಮನಸಕಪ್ಪುದೆ 7 ದುರ್ಗೆ ತುತಿಸೆ | ಕರ್ಗತ್ಲೆ ಕುಡಿದು ನಿಜಸರ್ಗಕೆಣಿಸಿದೇ | ದುರ್ಗಮ ಮಹಿಮ 8 ಮುಕ್ತರೊಡನೆ ಸೇ | ವ್ರ್ಯಕ್ತಿಗಳಲಿ ಅಭಿವ್ಯಕ್ತನು ಲೀಲಾ | ಸಕ್ತ ಸುಪುರುಷಾ 9 ಗೂಹಿಸಿ ಸರ್ವವ | ವ್ಯೂಹ ಚತುರಕೆಮೋಹಿಸಿ ಪುಮಜನ | ಬಾಹಿರ ತೆಗೆದ 10 ಪತಿ ತಾ ಸರ | ಸ್ವತಿ ಭಾರತಿ ಎಂಬಸುತೆಯರ ಪಡೆದು | ಸುತರೊಡನೈರಸಿದ12 ಪುಮಜಗೆ ಪ್ರಕೃತಿಯಿಂ | ಸುಮನಸ ಶೇಷನುಕ್ರಮದಿ ಸೂತ್ರನಿಂ ಜ | ನುಮವು ಕಾಲಿಗೆ 13 ಎರಡು ಒಂದು ತನು | ಹರನಿಗೆ ಬಂದವುಸರಸಿಜ ಸಂಭವ | ಮರುತೋರಗದಿಂ14 ಪತಿ ಸೇವೆಗೆ 15 ವಿಧ ವಿಧ ಜೀವರು | ಉದುಭವವಾದರುವಿಧಿ ಪಿತ ಮಹಿಮೆಯ | ಅದು ಭುತ ಕೇಳೀ 16 ಮುದದಿ ಇಟ್ಟ ತನ್ | ಉದರದೊಳೆಲ್ಲರಅದುಭುತ ಚರಿತ ಅನಿ | ರುದ್ಧ ಮೂರುತಿ 17 ಗುಣೋಪಾದಾನದಿ | ತನು ಸೂಕ್ಷ್ಮಗಳನುಅನಿರುದ್ಧನು ನಿ | ರ್ಮಾಣವ ಮಾಡಿದ 18 ಪರಿ ಬಹು ಲಿಂ | ಗೋಪ ಚಯಿವಗೈದಾಪರ ಬೊಮ್ಮನು | ಸ್ಥಾಪಿಸಿದನು ಜಗ 19 ಪದುಮ ಕಲ್ಪ ಮುನ್ | ಉದುಭವಿಸಿತು ಮತ್‍ತದನನು ಸಿತವರ | ಹದ ಕಲ್ಪೋದಯ 20 ಸರಸಿಜ ಭವನಿಂ | ವಿರಚಿಸಿದನು ಜಗವೈಡೇಳ್ಭುವನವು | ಭರಿತವು ಜೀವರಿಂ 21 ಈ ವಿಚಿತ್ರ ಸ | ರ್ಗಾವವ ತಿಳಿಯಲುಸೇವಿಸುವುದು ಸತ್ | ಕೋವಿದ ಜನಪದ 22 ಪಾವಮಾನಿ ನಿಜ | ಭಾವಕೆ ಸರಿಯಾಹಸೇವೆಗೊಲಿದ ಗುರು | ಗೋವಿಂದ ವಿಠ್ಠಲ 23
--------------
ಗುರುಗೋವಿಂದವಿಠಲರು
ಏಕೆ ನಿರ್ಧಯವೊ ಓ ರಾಮ ಶ್ರೀ ರಘುರಾಮ ಪ ಸ್ಮರಿಸಿ ಸ್ಮರಿಸಿ ನಾನು ಕರಗಿ ಬೆಂಡಾದೆನೊ ಕರುಣವಿಲ್ಲವೆ ನಿನಗೆ 1 ಪಾವನ ಚರಿತನೆ ಪಾವನ ಮಹಿಮನೆ ಪಾವನ ರೂಪನೆ ಬಾ 2 ಮಾನವ ಸೇವ್ಯನೆ ಧೇನುಪುರೀಶನೆ ಬಾ ಶ್ರೀ ರಘುರಾಮ ಧೇನುಪುರೀಶನೆ 3
--------------
ಬೇಟೆರಾಯ ದೀಕ್ಷಿತರು
ಏನಂತೆನ್ನಲಿ ಎನ್ನನುತಾಪ ನೀನಾದ್ದರಿಂದೆಂಬೆ ಗೈಯದೆ ಲೋಪ ಪ. ಕಣ್ಣೆದುರಾದ ಕಂದರ್ಪಲಾವಣ್ಯ ಸನ್ನುತ ಸಕಲ ಲೋಕೈಕಶರಣ್ಯ ಪುಣ್ಯಪುರುಷ ಸುಪ್ರಸನ್ನ ಕೇಳಮ್ಮ 1 ಕೆಂದಾವರೆಯಂತೆ ಚೆಂದುಳ್ಳ ಚರಣ ಸೌಂದರ್ಯಸಾರ ಪೀತಾಂಬರಾವರಣ ವಂದನೀಯ ಪೂರ್ಣಾನಂದ ಮುಕುಂದ ಸಂದೇಹವಿಲ್ಲ ತೋರಿದನು ಗೋವಿಂದ 2 ಶಂಕ ಚಕ್ರ ಗದಾ ಪಂಕಜಪಾಣಿ ಶಂಕರನುತ ಶ್ರೀವತ್ಸಾಂಕಿತ ಜನನಿ ಬಿಂಕದ ಕೌಸ್ತುಭಾಲಂಕೃತಗ್ರೀವ ವೆಂಕಟೇಶ ನಿಷ್ಕಳಂಕ ಕೇಳವ್ವ 3 ಚಂದ್ರಶತಾನನ ಕುಂದಸುಹಾಸ ಇಂದಿರಾ ಹೃದಯಾನಂದ ಪರೇಶ ಸುಂದರ ನಳಿನದಳಾಯತನಯನ ಮಂದರಧಾರ ಧರಾಧರಶಯನ 4 ಲಕ್ಷ್ಮೀನಾರಾಯಣ ಸುಕ್ಷೇಮಧಾಮ ಅಕ್ಷರಾರ್ಚಿತ ನೀಲನೀರದಶ್ಯಾಮ ಪಕ್ಷೀಂದ್ರವಾಹನ ಪಾವನಚರಿತ ಸಾಕ್ಷಿರೂಪ ಸಚ್ಚಿದಾನಂದಭರಿತ 5
--------------
ತುಪಾಕಿ ವೆಂಕಟರಮಣಾಚಾರ್ಯ
ಏನಂತೆನ್ನಲಿ ಎನ್ನನುತಾಪ ನೀನಾದ್ದರಿಂದೆಂಬೆ ಗೈಯದೆ ಲೋಪ ಪ. ಕಣ್ಣೆದುರಾದ ಕಂದರ್ಪಲಾವಣ್ಯ ಸನ್ನುತ ಸಕಲ ಲೋಕೈಕಶರಣ್ಯ ಪುಣ್ಯಪುರುಷ ಸುಪ್ರಸನ್ನ ಕೇಳಮ್ಮ 1 ಕೆಂದಾವರೆಯಂತೆ ಚೆಂದುಳ್ಳ ಚರಣ ಸೌಂದರ್ಯಸಾರ ಪೀತಾಂಬರಾವರಣ ವಂದನೀಯ ಪೂರ್ಣಾನಂದ ಮುಕುಂದ ಸಂದೇಹವಿಲ್ಲ ತೋರಿದನು ಗೋವಿಂದ 2 ಶಂಕ ಚಕ್ರ ಗದಾ ಪಂಕಜಪಾಣಿ ಶಂಕರನುತ ಶ್ರೀವತ್ಸಾಂಕಿತ ಜನನಿ ಬಿಂಕದ ಕೌಸ್ತುಭಾಲಂಕೃತಗ್ರೀವ ವೆಂಕಟೇಶ ನಿಷ್ಕಳಂಕ ಕೇಳವ್ವ 3 ಚಂದ್ರಶತಾನನ ಕುಂದಸುಹಾಸ ಇಂದಿರಾ ಹೃದಯಾನಂದ ಪರೇಶ ಸುಂದರ ನಳಿನದಳಾಯತನಯನ ಮಂದರಧಾರ ಧರಾಧರಶಯನ 4 ಲಕ್ಷ್ಮೀನಾರಾಯಣ ಸುಕ್ಷೇಮಧಾಮ ಅಕ್ಷರಾರ್ಚಿತ ನೀಲನೀರದಶ್ಯಾಮ ಪಕ್ಷೀಂದ್ರವಾಹನ ಪಾವನಚರಿತ ಸಾಕ್ಷಿರೂಪ ಸಚ್ಚಿದಾನಂದಭರಿತ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ