ಒಟ್ಟು 729 ಕಡೆಗಳಲ್ಲಿ , 88 ದಾಸರು , 609 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕರವ ಮುಗಿಪರಘವ ತೆಗೆವ ಗುರು ವಿಜಯದಾಸರಿಗಿನ್ನು ಪ ಭೇದವಿಲ್ಲಯೆಂಬ ಮಾಯವಾದಿ ರಾಮಶಾಸ್ತ್ರಿ ಬಂದುಪಾದಕೆರಗೆ ಅವನ ತಮವ ಛೇದಿಸಿ ಸುಜ್ಞಾನವಿತ್ತೆ 1 ವಾದಿಗಿರಿಗೆ ಇಂದ್ರಸ್ಥಾನೀಯರಾದ ಗುರುಗಳಿಂದ ಮು-ದ್ರಾಧಾರಣಿಯ ಕೊಡಿಸಿ ಪರಮ ಆದರದಿಂದ ಅವನ ಕಾಯ್ದೆ2 ಭಸುಮವನ್ನೆ ತೆಗಸಿ ಅವನ ನೊಸಲಲೂಧ್ರ್ವ ತಿಲಕ ಪಚ್ಚಿಸಿಎಸವ ಪಂಚಮುದ್ರಿ ದ್ವಾದಶ ನಾಮ ಧರಿಪಂತೆ ಮಾಡಿದೆ 3 ಸುರರು ಆತನತಾಮರಸ ಪದ ಧೂಳಿಗಯೆಂದು ಈ ಮರಿಯಾದಿಗಳ ಪೇಳಿದೆ 4 ಧರೆಯೊಳಿದ್ದ ಭಕ್ತ ಜನರ ಪೊರೆವನೆಂಬ ಬಿರಿದು ವೊಹಿಸಿಸಿರಿ ಮೋಹನ್ನ ವಿಠಲನಂಘ್ರಿ ಸರಸಿರುಹವ ಎನಗೆ ತೊರ್ದೆ 5
--------------
ಮೋಹನದಾಸರು
ಕರಿಯ ಮೋಚಿಸಿದ ಸಿರಿವರ ಬಂದ ಪ ಗೋವುಗಳ ಕಾವ ಕೃಪಾಸಿಂಧು ಬಂದ 1 ವಾತಸುತ ಭೀಮಸೇನಪ್ರಿಯ ಬಂದ 2 ಭಾನುಕೋಟಿಸುಪ್ರಕಾಶ ವ್ಯಾಸ ಬಂದ 3 ರಾಜ ಬಂದ ದಶರಥಸುತ ಬಂದ | ತೇಜಿಯೇರಿ ಮೆರೆದ ಕಲ್ಕಿದೇವ ಬಂದ 4 ಭಾಸುರಾಂಗ ದೇವ ಶ್ರೀನಿವಾಸ ಬಂದ 5 ನೀಲ ಬಂದ ಬಾಲಕೃಷ್ಣ ಬಂದ ಬಾಲಧ್ರುವರಾಯಗೊಲಿದ ರಂಗ ಬಂದ 6 ರಾಜೇಶ ಶ್ರೀಹಯಮುಖ ದೇವ ಬಂದ 7
--------------
ವಿಶ್ವೇಂದ್ರತೀರ್ಥ
ಕರುಣದಿಂದ ಕಾಯೊ ಎನ್ನನು ಉರಗಾದ್ರಿವಾಸ ವಿಠ್ಠಲ ದೇವ ಪ ತಂದೆ ವೆಂಕಟೇಶ ವಿಠ್ಠಲ ಬಂದು ಎನ್ನ ಹೃದಯದಲ್ಲಿ ನಿಂದು ನಾಮ ನುಡಿಸಿ ಪೇಳ್ವ ಚಂದ ಮನಕೆ ತಂದು ಕೊಡುತ 1 ವಾಸುದೇವ ನಿನ್ನ ಮಹಿಮೆ ತೋಷದಿಂದ ಭಜಿಸುವುದಕೆ ದೋಷಗುಣಗಳನ್ನೆ ಕಳೆದು- ಲ್ಲಾಸ ಮನಕೆ ಒದಗುವಂತೆ 2 ಮಂದಮತಿಗಳಾದ ಜನಕೆ ಮುಂದೆ ಗತಿಯ ಪಥವ ತೋರಿ ಬಂಧನಂಗಳನ್ನೆ ತರಿದು ತಂದೆ ಕಾಯೊ ಇಂದಿರೇಶ 3 ಬೊಕ್ಕಸದ ದ್ರವ್ಯ ಜನರು ವೆಚ್ಚಮಾಡುತಿರುಹ ತೆರದಿ ಮೆಚ್ಚಿ ಬಂದ ಜನರ ಮನದ ಇಚ್ಛೆ ಪೂರ್ತಿಗೊಳಿಸಿ ಪೊರೆದೆ 4 ಅಂತರಂಗದೊಳಗೆ ನಿನ್ನ ಚಿಂತೆ ಮರೆಯದಂತೆ ಕೊಟ್ಟು ಅಂತರಾತ್ಮ ಕಮಲನಾಭ ಸಂತೈಸಿ ಕಾಯೊ5 ಟ ಟ ಅಸ್ವತಂತ್ರ ಜೀವಾಂತರ್ಗತ ಶ್ರಿ ಭಾರತೀರಮಣ ಮುಖ್ಯ ಪ್ರಾಣಾಂತರ್ಗತ ಶ್ರೀ ಉರಗಾದ್ರಿವಾಸ ವಿಠ್ಠಲಾಭಿನ್ನ ಶ್ರಿ ಗುರುವಾಸುದೇವ ವಿಠ್ಠಲಾ ಭಿನ್ನ ಶ್ರೀ ತಂದೆ ವೆಂಕಟೇಶ ವಿಠ್ಠಲಾತ್ಮಕ ಶ್ರೀ ಕಮಲನಾಭ ವಿಠ್ಠಲಾಯ:ನಮ: ಟ ಶ್ರೀ ಕಮಲನಾಭ ವಿಠ್ಠಲ ದಾಸರಾದ ಜೀವೂಬಾಯಿ ಅವರು ರಚಿಸಿದ ಮೊತ್ತ ಮೊದಲ ಹಾಡು.
--------------
ನಿಡಗುರುಕಿ ಜೀವೂಬಾಯಿ
ಕರುಣಿಸೆನ್ನನು ಕರುಣಾನಿಧಿಯೆ ಪ ಹರಿ ಭಜಕರಾಗ್ರಣಿಯೆ ವರಕಪಿಶಿರೋಮಣಿಯೆ ಅ.ಪ ಧರಣಿತಳದಲ್ಲಿ ಪರಿಪೂರ್ಣವಾಗೀ ಇರುವ ವಾರ್ತೆಯ ಕೇಳಿ ಹರುಷ ಮನದಲಿ ನಿನ್ನ ಚರಣ ಪಂಕಜಯುಗ್ಮ ಭರದಿ ಭಜಿಪ ಎನ್ನ 1 ದುರುಳ ದೈತ್ಯನ ಶೀಳಿ ಧರಣಿಸುರಸುತನ ನೀ ಪೊರೆದ ಕೀರುತಿ ಕೇಳಿ ತ್ವರದೀ ಪಾದ ಸರಸಿಜ್ವದಯವನ್ನು ದುರುಳ ಮಾನವ ನಾ 2 ಜನಕ ಮಾಡಿದ ಋಣವ ಹುಣಿಸೆ ಬೀಜಗಳಿಂದ ಋಣಗಳೆದ ಘನ ಮಹಿಮೆ ಕೇಳಿ ಮನದಿ ಯೋಚಿಸಿ ಚರಣವನಜ ಭಜಿಸುವ ಎನ್ನ ಋಣ ಬಿಡಿಸೊ ಗುರುಜಗನ್ನಾಥ ವಿಠಲ ಪ್ರಿಯಾ 3
--------------
ಗುರುಜಗನ್ನಾಥದಾಸರು
ಕರುಣೆ ತೋರೋ ಕಣ್ಣ ತೆರೆದು ಗುರುವು ನೀನೆ ಗತಿಯು ನೀನೆ ಪ ತ್ವರದಿ ಜಪವ ಪೂರ್ಣ ಮಾಡಿ ಕರವ ಶಿರದಲಿಡುತ ಅ.ಪ. ಸಿರಿಯ ವರನ ಪರಮ ಭಕುತ ಸಿರಿದಮಣಿಗಳಲ್ಲಿ ನೀನು ಹಿರಿಯ ಅಹುದೊ ಜಗದ ಗುರುವೆ ಪರಮ ಕರುಣಾಕರನೆ ದೇವ 1 ಹರಿಯ ಆಜ್ಞದಂತೆ ನೀನು ಸರುವ ಪ್ರಾಣಿಗಳಲಿ ನಿಂದು ಹಿರಿದು ಜಪವನಾಚರಿಸಿ ಅವರು ಅರಿಯದಂತೆ ನಿರುತ ಪೊರೆವೆ 2 ಶರಧಿ ಮಥನದಿಂದ ಬಂದ ಗರಳನಂದು ಭುವನಗಳನು ಉರುಹುತಿರಲು ಹರಿಯ ಮನವ ಅರಿತು ನೀನು ಭರದಿ ಕುಡಿದೆ 3 ಪೊಗಳಲವೆ ನಿನ್ನ ಮಹಿಮೆ ಸುಗುಣಮಣಿ ಭಾರತಿಯ ಪತಿಯೆ ಅಗಜೆಯರಸನನ್ನು ಪೆತ್ತ ನಗಧರನ ಪ್ರೀತಿ ಪಾತ್ರ 4 ಅಜನಪದಕೆ ಅರುಹನಾದೆ ದ್ವಿಜ ಫಣೀಶಾದಿಗಳ ಗುರುವೆ ಭಜನೆಗೈವೆನೆಂತು ನಿನ್ನ ತ್ರಿಜಗವಂದ್ಯ ತ್ರಿಜಗಪೂಜ್ಯ 5 ತ್ರೇತೆಯಲಿ ಅಂಜನಿಯಳ ಪೂತ ಗರ್ಭದಿಂದ ಬಂದು ಪೋತನಾದ ರವಿಜನನ್ನು ಪ್ರೀತಿಯಿಂದ ಸಲಹಿದೆಯ್ಯ 6 ಅಂದು ಕಪಿಯ ವೃಂದವೆಲ್ಲ ಬಂದು ಶರಿಧಿ ತಟದಿ ನಿಂದು ಮುಂದೆ ದಾರಿ ಕಾಣದಿರಲು ಸಿಂಧುವನ್ನು ದಾಟಿ ಬಂದೆ 7 ಮಂಗಳಾಂಗಿ ಸೀತೆಯನ್ನು ಕಂಗಳಿಂದ ನೋಡಿ ಹಿಗ್ಗಿ ಅಂಗನೆಯ ಪಾದಕೆರಗಿ ಉಂಗುರವನಿತ್ತ ಧೀರ 8 ಫಲವ ಸವಿವ ನೆವದಿ ನೀನು ನಲಿದು ವನವ ಮುರಿದು ತುಳಿದೆ ಕಲಹಕಿಳಿದು ಬಂದ ಅಕ್ಷನ ಬಲಿಯಹಾಕಿ ಕುಣಿಯುತಿರ್ದೆ9 ಕುಲಿಶಧರನ ಗೆಲಿದ ವೀರ ಜಲಜಭವನ ಶರವ ಬಿಡಲು ಛಲದಿ ನೀನು ಅದನು ತಡೆದು ಮಲೆತು ನಿಂತ ಮಹಿಮಯುತನೆ 10 ವನಜಭವ ನಾಮನ ಕೇಳಿ ಕನಲಿ ಬಂದಾ ಶರಕೆ ಸಿಲುಕಿ ದನುಜ ಸಭೆಗೆ ಬಿಜಯಮಾಡಿ ಅನುವ ತಿಳಿದು ಬಂದ ದೇವ 11 ರಕ್ಕಸನ ಲೆಕ್ಕಿಸದೆ ಧಿಕ್ಕರಿಸಿ ಮಾತನಾಡಿ ಪಕ್ಕಿರಥನ ಬಲುಮೆಯನ್ನು ಹೆಕ್ಕಳಿಸಿ ನೀ ಪೊಗಳಿ ನಿಂದೆ 12 ಉಕ್ಕಿ ಬಂದ ರೋಷದಿಂದ ರಕ್ಕಸನು ಚರರ ಕರೆದು ಇಕ್ಕಿರಿವನ ಬಾಲಕುರಿಯ ತಕ್ಕ ಶಿಕ್ಷೆ ಮಾಡಿರೆನಲು 13 ಸುಟ್ಟಬಾಲ ನೆಗಹಿಕೊಂಡು ದಿಟ್ಟ ನೀನು ಪುರವನೆಲ್ಲ ಅಟ್ಟಹಾಸದಿಂದ ಮೆರೆದೆ 14 ಶರಧಿ ಹಾರಿ ಬಂದು ಸತ್ಯಸಂಧ ರಾಮಗೆರಗಿ ಇತ್ತು ಚೂಡಾಮಣಿಯನವನಾ ಚಿತ್ತ ಹರುಷಗೈದ ಧೀರ 15 ಹರಿಯು ತನ್ನ ಬೆರಳಿನಲ್ಲಿ ಗಿರಿಯನೆತ್ತಿ ನಿಂತನೆಂದು ಸರುವ ಗಿರಿಗಳನ್ನು ನೆಗಹಿ ಶರಧಿಗೊಡ್ಡಿ ಸೇತುಗೈದೆ 16 ಸುರರಿಗಮೃತವಿತ್ತನೆಂದು ಅರಸಿ ಸಂಜಿವನವ ನೀನು ಭರದಿ ತಂದು ಒರಗಿ ಬಿದ್ದ ಹರಿಯ ವೃಂದಕೆರೆದು ಮೆರೆದೆ 17 ಮಂದರಾದ್ರಿಯನ್ನು ಒಡೆಯ ಅಂದು ಬೆನ್ನಲಿ ಪೊತ್ತು ನಿಂದು ಸಿಂಧುವನ್ನು ಗೆಲಿದನೆಂದು ಬಂದೆ ಹಾರಿ ಲಂಕಪುರಿಗೆ 18 ಧರಣಿಧವಗೆ ನೆರಳಿನಂತೆ ಕಾಲ ಚರಿಸಿ ನೀನು ಅರಸಿನಂತೆ ಬಂಟನೆಂಬ ಕರೆಯವಾರ್ತೆ ಖರೆಯಗೈದೆ 19 ಕಾಲನೇಮಿ ಯತಿಯ ರೂಪ ಜಾಲದಿಂದ ವೇಳೆ ಕಳೆಯೆ ಶೀಲವಂತ ಅವನ ಸೀಳಿ ಬಾಲದಿಂದ ನಗವ ತಂದೆ 20 ವ್ಯಾಸಮುನಿಯ ಯಂತ್ರದಲ್ಲಿ ವಾಸವೆಂದು ತೂರಿಕೊಳುತ ದಾಸ ಜನರ ಆಸೆಗಳನು ಬೇಸರಾದೆ ನೀ ಸಲಿಸುವೆ 21 ನೀನು ಒಲಿಯೆ ರಾಮನೊಲಿವ ನೀನು ಮುನಿಯೆ ರಾಮ ಮುನಿವ ನಾನು ನಿನಗೆ ಅನ್ಯನಲ್ಲ ಸೂನುವಲ್ಲೇ ತಿಳಿದು ನೋಡೊ 22 ನಿನ್ನ ನಂಬಿ ಸರಮೆಯರಸ ಪನ್ನಗಾರಿರಥನ ಒಲುಮೆ- ಯನ್ನು ಪಡೆದು ಹರುಷವಾಂತು ಧನ್ಯನಾದ ಧರೆಯೆ ಮೇಲೆ 23 ನಿನ್ನ ಜರೆದ ಅವನ ಅಣ್ಣ ತನ್ನ ಬಂಧು ದೇಶ ಕೋಶ- ವನ್ನು ನೀಗಿಕೊಂಡು ಕೊನೆಗೆ ಮಣ್ಣುಗೂಡಿ ಪೋದನಯ್ಯ 24 ದಂತಿಪುರದ ದೊರೆಯೆ ಮಡದಿ ಕುಂತಿದೇವಿ ಕುವರನಾಗಿ ಕಂತುಪಿತನ ಮತವ ತಿಳಿದು ನಿಂತು ಖಳರ ಸದೆದ ಶೂರ 25 ಏಕಚಕ್ರ ನಗರದಲ್ಲಿ ಶೋಕ ಪಡುತಲಿರ್ದ ಜನರ ಕಾಕು ಬಕನ ಏಕಮುಷ್ಠಿಯಿಂದ ಕೊಂದೆ 26 ಕೀಚಕಾರಿ ನಿನ್ನ ಮಹಿಮೆ ಯೋಚನೆಗೆ ನಿಲುಕದಯ್ಯ ಯಾಚಿಸೂತಿ ದೀನನಾಗಿ ಮಾಚದಂತೆ ಸಲಹೊ ಸ್ವಾಮಿ 27 ಜರೆಯ ಸುತನ ಗರುವ ಮುರಿದು ಭರದಿ ಅವನ ತನುವ ಸೀಳಿ ಧರಣಿಧವರ ಸೆರೆಯ ಬಿಡಿಸಿ ಪರಮ ಹರುಷಗರೆದ ಧೀರ 28 ದುರುಳ ದುಶ್ಶಾಸನನ ಅಂದು ಧುರದಿ ಕೆಡಹಿ ಉರವ ಬಗೆದು ತಿರೆಯ ಹೊರೆಯ ಹರಿಸಿದಂಥ ಸರುವ ಪುಣ್ಯ ಹರಿಗೆ ಇತ್ತೆ 29 ಮಲ್ಲಯುದ್ಧದಲ್ಲಿ ನೀನು ಖುಲ್ಲ ದುರ್ಯೋಧನನ ತೊಡೆಗ ಸುರರು ನೋಡಿ ಫುಲ್ಲ ಮಳೆಯಗರೆದರಾಗ 30 ಸೃಷ್ಟಿಕರ್ತ ಕೃಷ್ಣ ನಿನ್ನ ಇಷ್ಟದೈವವೆಂದು ಅವನ ನಿಷ್ಠೆಯಿಂದ ಭಜಿಸಿ ಇಳೆಯ ಶಿಷ್ಟ ಜನರ ಕಷ್ಟ ಕಳೆದೆ 31 ಖಲರು ನಿನ್ನ ಬಲುಮೆ ನೋಡಿ ಗೆಲುವು ತಮಗೆ ಆಗದೆಂದು ಕಲಿಯುಗದಿ ವಿಪ್ರರಾಗಿ ಇಳೆಯ ಧವನ ಹಳಿಯುತಿರಲು 32 ಜಡಜನೇತ್ರ ನಿನ್ನ ಕರೆದು ಅಡಗಿಸಿವರವಾದವೆನಲು ನಡುವೆ ಮನೆಯು ಎಂಬ ದ್ವಿಜನ ಮಡದಿ ಗರ್ಭದಿಂದ ಬಂದೆ 33 ಯತಿಯು ನೀನೆಂದೆನಿಸಿಕೊಂಡು ಚ್ಯುತಿ ರಹಿತ ಪ್ರೇಕ್ಷರಿಂದ ಶ್ರುತಿಪುರಾಣ ವೇದಮಂತ್ರ ತತಿಗಳನು ಪಠಣಗೈದೆ 34 ಹರಿಯೆ ಹರನು ಹರನೆ ಹರಿಯೆಂ- ದುರುಳ ಖಳರ ಕರೆದು ಕರೆದು ಜರೆದು ಭರದಿ ಹರಿಯೆ ಶರಣೆಂದರುಹಿ ಮೆರೆದೆ 35 ಮಾಯ ಮತವ ಧಿಕ್ಕರಿಸಿ ನ್ಯಾಯ ಶಾಸ್ತ್ರವನ್ನು ರಚಿಸಿ ಕಾಯಭವನ ಪಿತನ ಹಳಿದ ನಾಯಿಗಳನು ಬಡಿದು ನಿಂದೆ 36 ಕೃತಕಭಾಷ್ಯ ರಚಿಸಿದಂಥ ದಿತಿಜರನ್ನಾನತರ ಮಾಡಿ ಗತಿಯ ತೋರಿ ಜನಕೆ ಸತ್ಯಾ- ವತಿಯ ಸುತನ ಒಲುಮೆ ಪಡೆದೆ 37 ಮಧ್ವಮತವ ಉದ್ಧರಿಸಿ ಶುದ್ಧವಾದ ಬುದ್ಧಿಗಲಿಸಿ ಹದ್ದುವಾಹನ ಮುದ್ದುಕೃಷ್ಣನ ಶ್ರದ್ಧೆಯಿಂದ ಬದ್ಧಗೈದೆ 38 ಅಷ್ಟಮಠವ ರಚನೆ ಮಾಡಿ ಶಿಷ್ಟಜನರ ಬಾಧೆ ಕಳದೆ ತುಷ್ಟರಾದ ದ್ವಿಜರು ನಿನ್ನ ಎಷ್ಟು ಪೊಗಳಿ ತೀರದಯ್ಯ 39 ದಾನಧರ್ಮವ ಮಾಡಲಿಲ್ಲ ಜ್ಞಾನಮಾರ್ಗ ಹಿಡಿಯಲಿಲ್ಲ ದೀನತನದ ಭವಣೆಯಿಂದ ನಾನು ಮರುಗಿ ಬಂದೆನೀಗ 40 ವಚನ ಮಾರ್ಗದಲ್ಲಿ ನಿನ್ನ ಪ್ರಚನೆ ಮಾಳ್ಪೆ ಕೇಳೊ ದೇವ ರಚಿಸಲಾರೆ ನಿಯಮಗಳನು ಉಚಿತ ತೋರಿದಂತೆ ಮಾಡೊ 41 ನಾರಸಿಂಹ ರಾಮಕೃಷ್ಣ ನಾರಿ ಸತ್ಯವತಿಯ ಮಗನ ಮೂರುತಿಗಳ ಹೃದಯದಲ್ಲಿ ಸೇರಿ ಭಜಿಪ ಭಾವಿ ಬ್ರಹ್ಮ 42 ವಾಯು ಹನುಮ ಭೀಮ ಮಧ್ವ ರಾಯ ನಿನ್ನ ನಂಬಿ ಬಂದೆ ಮಾಯ ಪಾಶದಿಂದ ಬಿಡಿಸಿ ಕೃಪಣ ಬಂಧು 43 ಜನುಮ ಜನುಮದಲ್ಲಿ ನೀನೆ ಎನಗಿ ಜನನಿ ಜನಕನಾಗಿ ಕನಸು ಮನಸುನಲ್ಲಿ ನಿನ್ನ ನೆನೆಸುವಂತೆ ಮತಿಯ ನೀಡೊ 44 ತುಂಗಭದ್ರ ತೀರ ವಾಸ ಭಂಗಬಾಳನು ಹೊರೆಯಲಾರೆ ಮಂಗಳಾಂಗ ಕಳುಹೊ ಎನ್ನ ರಂಗಈಶವಿಠಲ ಪುರಿಗೆ 45
--------------
ರಂಗೇಶವಿಠಲದಾಸರು
ಕರೆವರು ನಿನ್ನ ಹಸೆಗೆ ಪರಮ ಪುರುಷ ನೀನೆಂದು ಪ ಸರಸದಿಂದ ಸಿರಿಸಹಿತ ಬರಬೇಕು ನೀಂ ತ್ವರಿತದಲಿ ಅ.ಪ ನಾದದಶವಾದ್ಯಗಳು ಮೋದದಿಂದ ಮೊರೆಯಲು ವೇದಾಂತರಹಸ್ಯವೆಂಬ ವಿವಿಧ ಗೀತೆಗಳ ಪಾಡಿ 1 ತತ್ವಭಿಮಾನಿಗಳೆಂಬ ಮುತ್ತೈದೆಯರೆಲ್ಲ ಕೂಡಿ ಸೂರಿ ಜನಪ್ರಿಯನೆಂದು 2 ಎಂಟುದಳ ಪದ್ಮದೊಳು ನೆಂಟರಿಷ್ಟರೆಲ್ಲುರು ನೂ- ರೆಂಟು ಚಿತ್ರಗಳ ಬರೆದು ರಚಿಸಿ ರತ್ನ ಪೀಠವನ್ನು 3 ಧೀರ ಸಭೆಯಲ್ಲಿ ಹದಿನಾರು ನಿನ್ನಾಧೀನಗೈದು 4 ಯಾಮ ಯಾಮದಿ ಬಿಡದೆ ಕಾಮಿನೀ ಮಣಿಯರು ನಿ- ಷ್ಕಾಮ ಸುಖವೀವ ಗುರುರಾಮವಿಠಲ ಬಾರೆಂದು 5
--------------
ಗುರುರಾಮವಿಠಲ
ಕಾಕುತ್ಸ ರಘುನಾಥ ಶ್ರೀರಾಮಚಂದ್ರ ಭೂಕಾಂತೆ ಸಿರಿವಂತೆ ಜನಕಾತ್ಮಜೇಂದ್ರ ಪ ಪಾಕ ಶಾಸನ ಕಾಯ್ದ ದಶರಥ ಕಂದ ಲೋಕನಾಯಕ ಸ್ವಾಮಿ ಭಕ್ತರಾನಂದಾ ನಂಬಿದೆ ಹರಿ ನಿನ್ನ ಚರಣಯುಗ್ಮಗಳ ನಂಬಿದ ಶ್ರೀ ಹರಿ ದಿವ್ಯ ರೂಪಗಳಾ ನಂಬಿದೆ ನಿನ್ನ ಹರಿಲೀಲೆ ಮಹಿಮ ಕೀರ್ತಿಗ¼ À ನಂಬಿದೆ ಪಾಲಿಸೋ ತರಿದು ಕಷ್ಟಗಳ 1 ಸ್ಮರಿಸುವೆ ಭಜಿಸುವೆ ಶುಭ್ರ ನಾಮಗಳ ಪರಿಪರಿ ಪೊಗಳುವೆ ನಮಿಸುವೆ ಹರಿಯ ನಿರುತದಿ ಪಾಡುವೆ ನಿನ್ನ ಸ್ತೋತ್ರಗಳ ವಿರಚಿಸಿ ಮಾಡುವೆ ಹರಿ ಕೀರ್ತನೆಗಳ 2 ಭಕ್ತನ ಲಾಲಿಸೋ ದಾನವಾಂತಕನೇ ಭಕ್ತಿಯ ಪಾಹಿಸೂಕರ ರೂಪಧರನೇ ಭಕ್ತನ ಪಾಲಿಸೋ ದೇವ ನಿರ್ಮಲನೇಮುಕ್ತಿಯ ಪಾಲಿಸೋ ಚನ್ನಕೇಶವನೇ 3
--------------
ಕರ್ಕಿ ಕೇಶವದಾಸ
ಕಾಗಿಣಿ ತೀರದ ಯೋಗಿವರ್ಯ ಗುರುವೇ | ನಿನ್ನಲಿ ಮೊರೆಯಿಡುವೆ ಪ ಭೋಗಿಶಯನ ಗುಣ ಯೋಗದಿಂದ ಭಜಿಪಾ | ಹರಿ ಪದಾಬ್ಜ ಮಧುಪಾ ಅ.ಪ. ಸಿಂಗರವೆನಿಸಿದ ಮಂಗಳವೇಡಿಯಲಿ |ನೀನುದಿಸುತಲಲ್ಲೀಸಿಂಗರಿಸಿಹ ಬಲು ರಂಗ ಕುದುರೆ ನೇರಿ | ರಾವುತರೊಡಸೇರೀ ||ಕಂಗೆಡುತಲಿ ಬಲು ತುಂಗೆ ಕಾಗಿಣೀಯಾ | ಸಾರುತ ತನಹಯಾ ಹಿಂಗದೆ ನದಿಯಲಿ ಮಂಗಳ ಹಯವೇರಿ | ನೀರ್ಗುಡಿದ ಬಾಯಾರಿ 1 ಆಚೆ ತಟದಿ ಅಕ್ಷೋಭ್ಯಮುನಿಪ ನೋಡಿ | ಸ್ವಪ್ನದರ್ಥ ಮಾಡೀಸೂಚಿಸಿದನು ತವ ಶಿಷ್ಯನ ಕೈಯಲ್ಲೀ | ಬಂದ ಸಾದಿ ಅಲ್ಲೀ ||ಯಾಚಿಸಿದನು ಮುನಿ ಪದಕೇ ಬಾಗೀ | ತುರ್ಯಾಶ್ರಮಕಾಗೀಖೇಚರ ವಹನಾಜ್ಞೆಯೆಂದು ತ್ವರ್ಯಾ | ಮಾಡ್ದ ಸಾದಿ ಯತಿಯಾ 2 ತಂದೆ ಬಹು ಕೋಪದಿಂದ ಬಂದೂ | ಯತಿಯ ನಿಂದಿಸ್ಯಂದೂತಂದು ಮಗನ ಏಕಾಂತ ಗೃಹಕೆ ಆಗ | ಸತಿಯನು ಕೂಡಿಸಿ ವೇಗ ||ಅಂದು ಕಂಡು ಸರ್ಪಾಕೃತಿ ಪತಿಯಾ | ಚೀರಿದಳ್ ಬಲ್ಪರಿಯಾತಂದೆ ಕೊಂಡು ಮಗನರ್ಪಿಸಿದನುಯತಿಗೇ | ಕ್ಷಮೆ ಬೇಡಿದನಾಗೇ 3 ತ್ರ್ಯಕ್ಷನಂಶ ಅಕ್ಷೋಭ್ಯ ಮುನಿಪ ಆಗ | ಸನ್ಯಾಸ ವೇಗಭಿಕ್ಷುಕ ಮಧ್ವರ ಗ್ರಂಥ ಪೊತ್ತ ವೃಷಭ | ಎನುತೀತನ ಪ್ರಭಾ ||ಲಕ್ಷಿಸಿವರ ಕರೆದನೂ ನಾಮಾನ್ವರ್ಥ | ಯತಿಯನೆ ಜಯತೀರ್ಥಕುಕ್ಷಿಲಿ ಮೆರೆವರಗೋಳ ಗುಹೆಯು ಅಲ್ಲೀ | ರಚಿಸಿದ ಟೀಕೆಗಳಲ್ಲೀ4 ಮಧ್ವಭಾಷ್ಯಕೇ ರಚಿತ ಟೀಕಾ ಗ್ರಂಥಾ | ನೋಡಿದ ಮುನಿ ಮತ್ತವಿದ್ಯಾರಣ್ಯರ ಗೆದ್ದ ಆರ್ಯ ಧೀರಾ | ಅಕ್ಷೋಭ್ಯರ ಕುವರ ||ಅದ್ವೈತಾದಿಗಳೇಕವಿಂಶ ಪಂಥ | ಗೆಲ್ಲುತ ಸುಧೆ ಗ್ರಂಥಅದ್ವಿತೀಯ ಗುರುಗೋವಿಂದ ವಿಠ್ಠಲಗೇ | ಅರ್ಪಿಸಿದನು ಆಗೇ 5
--------------
ಗುರುಗೋವಿಂದವಿಠಲರು
ಕಾಪಾಡೆಲೆ ಸಕಲಾಪಧ್ಹಾರಿಣಿ ಕೊಲ್ಲಾಪುರಗತ ಕಮಲೆ ಪ. ಪರಿ ಹರಿಯ ದಯಾಪಾತ್ರಳೆ ಶುಭನೂಪುರಾದಿ ಸುಕಲಾಪೆ ಶೋಭಿತೆ ಭ್ರೂ-ಚಾಪ ಚಲನದಿಂದ ಪವಮಾನನಿ-ಗೆ ಪದದೇ ಭವತಾಪಗಳಳಿದು ಅ.ಪ. ಇಂದೀವರವರಮಂದಿರನಂದಿನಿ ಚಂದ್ರಜಯಿಪ ವದನೆಬೃಂದಾರಕ ಮುನಿವಂದಿತ ಪದಯುಗೆ ಕುಂದಕುಟ್ಮಲರದನೆ ಮದನೆ ಮುಕುಂದ ಹೃದಯಸದನೆಇಂದ್ರನೀಲನಭ ಸುಂದರತನು ಗುಣ-ಸಾಂದ್ರ ಇಂದುಮುಖಿ ಮಂದರಧರಗೋ-ವಿಂದ ಬಂಧುನುತೆ ಬೃಂದಾವನಪತಿನಂದನಂದನನಾನಂದಿನಿ ವಂದಿತೆ 1 ಕನ್ಯಾಮಣಿ ಜಗನ್ಮಾನ್ಯಾಮೃತ ಪಾವನ್ನಾಧರ ಬಿಂಬೆಘನ ಕಲಶ ಕುಚವನ್ನು ಧರಿಪ ಕಟಿಸಣ್ಣ ಘನನಿತಂಬೆ ಅಂಬೆ ಚಿನ್ನಪುತ್ಥಳಿ ಬೊಂಬೆಅನ್ನವಸನ ಧನಧಾನ್ಯಕಾಗಿ ಪರ-ರನ್ನ ಯಾಚಿಸಿ ಬಲು ಖಿನ್ನನಾಗುತಲಿನಿನ್ನನು ಮರೆದೆನು ಎನ್ನವಗುಣಗ-ಳನ್ನು ಎಣಿಸದಿರು ಮನ್ನಿಸು ಬಿನ್ನಪ 2 ಕಪೋಲ ಶೋಭಿತ ಕೀಲಾಲಜಾತಪಾಣಿಕೇಳಿಲಿ ಯಮುನಾಕೂಲದಿ ಹರಿ ದು-ಕೂಲಚೋರನ ರಾಣಿ ಜಾಣೆ ಶುಶ್ರೋಣೆ ಜಗತ್ರಾಣೆಕಾಳಕೂಟಸಮ ಕೀಳು ವಿಷಯದಲಿಬೀಳುವುದೆನ್ನ ಮನ ಕೀಳಿಸಿ ಶ್ರೀಗೋ-ಪಾಲವಿಠಲನನುಗಾಲ ಸೇವಿಪಂತೆಶೀಲವೀಯೆಯೆಂದು ಕೇಳುವೆ ಲಾಲಿಸೆ 3
--------------
ಗೋಪಾಲದಾಸರು
ಕಾಯೋ ಪರಮಾನಂದಾ ನಾರಾಯಣಾ | ತೋಯಜಾದಳ ನಯನ ಗರುಡ ಗಮನಾ ಪ ಕರವರಗ ದುಷ್ಟ ಜಲಚರ ಬಂದು ಪಿಡಿಯಲ್ಕೆ | ಭರದಿಂದ ನಿನ್ನ ಸ್ಮರಣೆಯಾ ಮಾಡಲು | ತ್ವರಿತದಿಂದಲಿ ದೇವ ಬಂದು ಆತನ ಮಹಾ | ದುರಿತವನು ಪರಿಹರಿಸಿ ಕಾಯಿದೆ ಹರಿಯೇ1 ಅರಗಿನಾ ಮನಿಯೊಳುಪಾಂಡವರುಸಿಲುಕಿರಲು | ಹರಿ ನೀನೇ ಗತಿಯೆಂದು ಸುಮ್ಮನಿರಲು | ಸಿರಿಲೋಲ ಅದುಕೊಂದು ಪಾಯವನು ರಚಿಸಿದಾ | ವರಕಡಿಗೆ ಪೊರಮಡಿಸಿಕಾಯಿದೆ ಹರಿಯೇ2 ಶರಣ ಪ್ರಲ್ಹಾದಂಗ ದನುಜ ಪೀಡಿಸುತಿರಲು | ಕರುಣ ಸಾಗರ ನಿಮ್ಮ ಧ್ಯಾನಿಸಲ್ಕೆ | ಕರುಳ ಬಗೆದುಕಾಯಿದೆ ಹರಿಯೇ | ನರಹರಿಯ ರೂಪದಿಂದ ಸ್ಥಂಬದೊಳಗುದ್ಭವಿಸಿ3 ದ್ರುಪದ ತನು ಸಂಭವಿಯ ಸೀರೆಯನ್ನು ಸೆಳೆಯಲ್ಕೆ | ತ್ರಿಪುರಾರಿ ಸಖ ನಿಮಗೆ ಮೊರೆಯಿಡಲು | ಕಪಟನಾಟಕ ದಯಾನಂದ ಹರಿಯೆ 4 ಈ ರೀತಿಯಲ್ಲಿ ಬಹು ಭಕ್ತರನು ಕಾಯಿದೆ | ಮುರಹರಿ ಧ್ಯಾನ ಸ್ಮರಣೆ ಯಂಬನದನು | ದಾರಿಯನು ಅರಿಯದ ಅಜ್ಞಾನಿಯ ಪರಾಧವನು ಸೈ ರಿಸುದು ಮಹಿಪತಿ ಸುತ ಪ್ರಿಯನೇ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಕಾರ್ಕಳದ ವೆಂಕಟರಮಣದೇವರ ಲಕ್ಷದೀಪೋತ್ಸವ ಪೀಠಿಕೆ ಉತ್ತಮರು ಕೇಳಿರೈ ಉಲ್ಲಾಸದಿಂದ ವರ- ಪೃಥ್ವಿಯೊಳು ಮೂಲಕಾಪುರದೊಳಗಿಹ ವಿಶ್ವಾ ಪ್ರವರವೆತ್ತ ವೆಂಕಟಕೃಷ್ಣನ ಪುತ್ರ ಲಕ್ಷ್ಮೀನಾರಾಯಣನು ಹರಿಪದಕಮಲ ಚಿತ್ತದೊಳ್ ಧ್ಯಾನಿಸುತ ಪೇಳ್ದನೀ ಕಾವ್ಯಮಂ ಪ್ರವರ್ತಿಸುವುದೆಲ್ಲ ಜನರು 1 ಧರೆಯೊಳುತ್ತಮವೆನಿಪ ವರ ಕಾರ್ಕಳಾಖ್ಯ ಪುರ- ದರಸ ಶ್ರೀವೆಂಕಟೇಶ್ವರನ ಲೀಲಾಭಿವಿ ಸ್ತರದ ದೀಪೋತ್ಸವದ ಪರಿವಿಲಾಸಕ ಕಾವ್ಯರಚನಾಗುಣಗಳಿಂದ ಸುರನಾರಿಯರು ಪೇಳ್ದ ಸಂವಾದ ತೆರನಂತೆ ವಿರಚಿಸಿದೆನೀ ಕೃತಿಯ ದೋಷವಿದ್ದರೆ ತಿದ್ದಿ ಸರ್ವ ಜನರು 2 ಶ್ರೀ ವಿಷ್ಣುನಿಗಮಾರ್ಗಮಾರ್ಚಿತ ಪದಂ ಪೀತಾಂಬರಾಲಂಕೃತಂ ಸೇವ್ಯಂ ಸದಾ ತತ್‍ಪದಂ ದೂರ್ವಾದಲಶ್ಯಾಮಲಂ ಶ್ರೀವತ್ಸಾಂಕಮುದಾರ ಮಂಗಲಕರಂ ಶ್ರೀ ಶ್ರೀನಿವಾಸಂ ಭಜೇ 3 ಆದಿಗುರು ವೇದವ್ಯಾಸರನು ವಂದಿಸುತ ಸಾದರದಿ ಮಧ್ವಯತಿವರರರ ನುತಿಸುತ ಭೂದಿವಿಜರಿಂಗೆರಗಿ ಬಳಿಕ ಕೂರ್ಮೆಯೊಳು ಮಾಧವನ ರಾಣಿ ಲಕ್ಷ್ಮಿಯನು ಮನಸಿನೊಳು 1 ಧ್ಯಾನಿಸುತ ಏಕದಂತನ ಪದವ ಭಜಿಸಿ ಮಾನದಿಂ ಶಾರದೆಯನೊಲವ ಸಂಗ್ರಹಿಸಿ ಶ್ರೀನಿವಾಸನ ಪುಣ್ಯಚರಿತೆಯನನುಸರಿಸಿ ನಾನಾ ಲೀಲೆಗಳನು ಕಾವ್ಯರಚನೆಯಲಿ ನಾನೊರೆವೆ 2 ಪರಮ ಪುರುಷನು ಪ್ರಥಮ ದಿನದಿ ಕಟ್ಟೆಯಲಿ ವರಪೂಜೆಗೊಂಡು ಮಂಟಪದಿ ವಿನಯದಲಿ ಚರಣವನು ತೋರಿ ಹನುಮ ಗರುಡನಲಿ ಪರಿವಿಲಾಸಕರ ಸೇವೆಗೊಂಡು ಕರುಣದಲಿ 3 ಭೋಗಿಪತಿಯಲಿ ಮಂಡಿಸಿದ ಲೀಲೆಗಳನು ನಾಗತೀರ್ಥದ ಗಂಭೀರೊತ್ಸಾಹಗಳನು ಭಾಗವತ ಯೋಗವನು ಭೋಜನಾಧಿಕವ ಭಾಗ್ಯೋದಯದ ಚೂರ್ಣೋತ್ಸವದ ವಿಲಾಸಕವನು 4 ಶ್ರೀ ನಾರಾಯಣನ ಕರುಣದಲಿ ವೇಣುಮತಿ ಪ್ರಾಸಯತಿಗಳ ಯುಕ್ತಿಯೆಲ್ಲ ನಾನರಿಯೆ ದೋಷವಿದ್ದರೂ ತಿದ್ದಿ ಬಲ್ಲಭಿ ಮಾನನಿಧಿಗಳನು ಮೆರೆಸುವದು ಭೂತಳದೊಳು ಶ್ರೀನಿವಾಸನು ಪಾಲಿಸುವನು ನಿತ್ಯದೊಳು5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಕಾರ್ಕಳದ ವೆಂಕಟರಮಣದೇವರ ಲಕ್ಷದೀಪೋತ್ಸವ ಪೀಠಿಕೆ ಉತ್ತಮರು ಕೇಳಿರೈ ಉಲ್ಲಾಸದಿಂದ ವರ- ಪೃಥ್ವಿಯೊಳು ಮೂಲಕಾಪುರದೊಳಗಿಹ ವಿಶ್ವಾ ಪ್ರವರವೆತ್ತ ವೆಂಕಟಕೃಷ್ಣನ ಪುತ್ರ ಲಕ್ಷ್ಮೀನಾರಾಯಣನು ಹರಿಪದಕಮಲ ಚಿತ್ತದೊಳ್ ಧ್ಯಾನಿಸುತ ಪೇಳ್ದನೀ ಕಾವ್ಯಮಂ ಪ್ರವರ್ತಿಸುವುದೆಲ್ಲ ಜನರು 1 ಧರೆಯೊಳುತ್ತಮವೆನಿಪ ವರ ಕಾರ್ಕಳಾಖ್ಯ ಪುರ- ದರಸ ಶ್ರೀವೆಂಕಟೇಶ್ವರನ ಲೀಲಾಭಿವಿ ಸ್ತರದ ದೀಪೋತ್ಸವದ ಪರಿವಿಲಾಸಕ ಕಾವ್ಯರಚನಾಗುಣಗಳಿಂದ ಸುರನಾರಿಯರು ಪೇಳ್ದ ಸಂವಾದ ತೆರನಂತೆ ವಿರಚಿಸಿದೆನೀ ಕೃತಿಯ ದೋಷವಿದ್ದರೆ ತಿದ್ದಿ ಸರ್ವ ಜನರು 2 ಶ್ರೀ ವಿಷ್ಣುನಿಗಮಾರ್ಗಮಾರ್ಚಿತ ಪದಂ ಪೀತಾಂಬರಾಲಂಕೃತಂ ಸೇವ್ಯಂ ಸದಾ ತತ್‍ಪದಂ ದೂರ್ವಾದಲಶ್ಯಾಮಲಂ ಶ್ರೀವತ್ಸಾಂಕಮುದಾರ ಮಂಗಲಕರಂ ಶ್ರೀ ಶ್ರೀನಿವಾಸಂ ಭಜೇ 3 ಆದಿಗುರು ವೇದವ್ಯಾಸರನು ವಂದಿಸುತ ಸಾದರದಿ ಮಧ್ವಯತಿವರರರ ನುತಿಸುತ ಭೂದಿವಿಜರಿಂಗೆರಗಿ ಬಳಿಕ ಕೂರ್ಮೆಯೊಳು ಮಾಧವನ ರಾಣಿ ಲಕ್ಷ್ಮಿಯನು ಮನಸಿನೊಳು 1 ಧ್ಯಾನಿಸುತ ಏಕದಂತನ ಪದವ ಭಜಿಸಿ ಮಾನದಿಂ ಶಾರದೆಯನೊಲವ ಸಂಗ್ರಹಿಸಿ ಶ್ರೀನಿವಾಸನ ಪುಣ್ಯಚರಿತೆಯನನುಸರಿಸಿ ನಾನಾ ಲೀಲೆಗಳನು ಕಾವ್ಯರಚನೆಯಲಿ ನಾನೊರೆವೆ2 ಪರಮ ಪುರುಷನು ಪ್ರಥಮ ದಿನದಿ ಕಟ್ಟೆಯಲಿ ವರಪೂಜೆಗೊಂಡು ಮಂಟಪದಿ ವಿನಯದಲಿ ಚರಣವನು ತೋರಿ ಹನುಮ ಗರುಡನಲಿ ಪರಿವಿಲಾಸಕರ ಸೇವೆಗೊಂಡು ಕರುಣದಲಿ3 ಭೋಗಿಪತಿಯಲಿ ಮಂಡಿಸಿದ ಲೀಲೆಗಳನು ನಾಗತೀರ್ಥದ ಗಂಭೀರೊತ್ಸಾಹಗಳನು ಭಾಗವತ ಯೋಗವನು ಭೋಜನಾಧಿಕವ ಭಾಗ್ಯೋದಯದ ಚೂರ್ಣೋತ್ಸವದ ವಿಲಾಸಕವನು 4 ಶ್ರೀ ನಾರಾಯಣನ ಕರುಣದಲಿ ವೇಣುಮತಿ ಪ್ರಾಸಯತಿಗಳ ಯುಕ್ತಿಯೆಲ್ಲ ನಾನರಿಯೆ ದೋಷವಿದ್ದರೂ ತಿದ್ದಿ ಬಲ್ಲಭಿ ಮಾನನಿಧಿಗಳನು ಮೆರೆಸುವದು ಭೂತಳದೊಳುಶ್ರೀನಿವಾಸನು ಪಾಲಿಸುವನು ನಿತ್ಯದೊಳು 5
--------------
ತುಪಾಕಿ ವೆಂಕಟರಮಣಾಚಾರ್ಯ
ಕುರುಣಾವಾರುಧೀಶ ಭಾರತೀಶ ಕರಪಿಡಿದು ಕಾಪ್ಯಾಡೊ ಕೊರವಿಯ ವಾಸ ಪ ಸುಜನರೆನ್ನಗೆ ಹಿಂದೆ ಸೂಚಿಸಿದ್ದರೊ ದ್ವಿಜ ಕುಲಾರ್ಚಿತ ಇಂದು ನಿನ್ನ ಭಕುತರಲ್ಲಿಡು ಎನ್ನ 1 ದಂತಿಪುರಪತಿಗೆ ಕೃತಾಂತನೆನಿಸಿದ ಧೀರ | ವಿಂತು ಪೊಗಳಲಿ ನಿನ್ನ ಮಹಿಮೆಯನು ಕುಂತಿಜನೆ ತವನಾಮ ಚಿಂತಿಯನು ಸಂತತದಲಿ ಸಲಹೋ ಧೀಮಂತ ನಂಬಿದೆ ಪರಮಾ 2 ಕಾಮಾರಿಸುತ ನಮೊ ಸೋಮಕುಲಭವ ಭೀಮ | ಶ್ರೀಮಧ್ವಮುನಿನಾಥವರ ಪ್ರದಾತ ಭೂಮಿಜಾತೆಯ ಪ್ರವೀತ ಶಾಮಸುಂದರದೂತ ಸ್ವಾಮಿಗುರು ತವನಾಮ ಸ್ಮರಿಪೆ ಘುನ್ನ 3
--------------
ಶಾಮಸುಂದರ ವಿಠಲ
ಕುಶಲವರೆ ಲಾಲಿಸಿರಿ ಕಥೆಯನೆಲ್ಲವ ಪೇಳ್ವೆ ಕುಶಲಮತಿಗಳೇ ನಿಮ್ಮ ಕೌತುಕವು ಸಹಜವಲೆ 1 ಬಿಸರುಹಾಕ್ಷನ ಚರಿತೆ ಚಿತ್ರತರಮಹುದಲ್ತೆ ಉಸುರುವೆನು ಪೂರ್ವ ವೃತ್ತಾಂತವನು ನಾ ಮೊದಲೆ 2 ಅಸುರರುಪಟಳದಿಂದ ವಸುಧೆ ಭಾರವು ಹೆಚ್ಚೆ ಬಿಸಜಭವಮುಖ ಸುರರ ಮೊರೆ ಕೇಳಿ ಮನ ಮೆಚ್ಚೆ 3 ಬಿಸಜನೇತ್ರನು ತಾನು ದಶರಥನ ಸುತನೆನಿಸಿ ವಸುಮತಿಯಲುದಿಸಿ ಸಜ್ಜನರ ಸಂತಸಗೊಳಿಸಿ 4 ಹಸುಳೆತನದಲಿ ಅಸುರೆ ತಾಟಕಿಯ ಸಂಹರಿಸಿ ಕುಶಿಕಸುತನಧ್ವರವ ಕಡು ರಕ್ಷಣೆಯ ಮಾಡಿ 5 ಅಶಮವಾಗಿದ್ದಹಲ್ಯೆಯ ತಾನುದ್ಧರಿಸಿ ಅಸಮಾಕ್ಷಚಾಪವನು ಲೀಲೆಯಲಿ ತುಂಡರಿಸಿ 6 ಕರ ಪದ್ಮವನು ಗ್ರಹಿಸಿ ಎಸೆವೆರಡು ರೂಪದಲಿ ಘನಲೀಲೆ ಪ್ರಕಟಿಸಿ 7 ಕುಶಲದಿಂ ಯುವರಾಜ ಪಟ್ಟಕ್ಕೆ ಸನ್ನಾಹ ವೆಸೆದಿರಲು ವಿಧಿಲೀಲೆಯೇನೆಂಬನಾಹ 8 ದಶರಥನ ಕಿರುಮಡದಿ ಪಡೆದ ವರಕನುವಾಗಿ ಸತಿ ಅನುಜ ಸಹಿತನಾಗಿ 9 ವಸುಮತಿಯೊಳವತರಿಸಿ ಬಂದ ಕಾರ್ಯವ ನೆನೆದು ಅಸಮ ನಾಟಕ ಸೂತ್ರಧಾರಿ ಅಡವಿಗೆ ನಡೆದು 10 ಎಸೆವ ಗಂಗೆಯ ದಾಟಿ ಗುಹನನ ಧನ್ಯನಗೈದು ಋಷಿ ಭರದ್ವಾಜರಿಂ ಸತ್ಕಾರವನು ಪಡೆದು 11 ವಸುಮತೀಧರ ಚಿತ್ರಕೂಟದಲಿ ನಿಂತಿರಲು ಅಸಮ ಭಕ್ತವರೇಣ್ಯ ಭರತ ತಾನೈತರಲು 12 ಬಿಸಜಾಂಘ್ರಿ ಸಂಪೂತ ವರ ಪಾದುಕೆಗಳನಿತ್ತು ಕುಶಲಮತಿ ತಾನವನ ಕಳುಹಿ ಯೋಚಿಸಿ ಮತ್ತು 13 ಪೆಸರಾಂತ ದಂಡಕಾ ವನ ಪ್ರವೇಶವ ಮಾಡಿ ಅಸುರರನೇಕರು ಅಂತಕನ ಬಳಿದೂಡಿ14 ಋಷಿವರ್ಯ ಶರಭಂಗಗೀಕ್ಷಣದಿ ಸುಗತಿಯನು ಹಸನಾಗಿ ಕರುಣಿಸಿದ ಬಳಿಕ ಕುಂಭೋದ್ಭವನು 15 ಒಸಗೆಯಿಂದಿತ್ತ ದಿವ್ಯಾಸ್ತ್ರಂಗಳ ಸಂಗ್ರಹಿಸಿ ಪಸರಿಸಿಹ ವಿಲಸಿತದ ಪಂಚವಟಿಯಲಿ ನೆಲಸಿ 16 ಒಸಗೆಯಿಂದಿರೆ ಬಂದ ಶೂರ್ಪನಖಿಗತಿಭಂಗ ವೆಸಗಿ ಸೋದರನಿಂದ ಶೋಭಿಸೆ ಶುಭಾಂಗ 17 ಮಾಯಾ ಮೃಗಾಕಾರ ದಸುರ ಮಾರೀಚನಂ ಸಂಹರಿಸಿ ರಘುವೀರ 18 ಅಸಮ ಸೋದರ ಸಹಿತ ಆಶ್ರಮಕ್ಕೈತಂದು ದೆಸೆದೆಸೆಯೊಳರಸೆ ತನ್ನರಸಿ ಕಾಣದಿರಲು 19 ಹುಸಿವೇಷದಿಂ ಬಂದ ಖಳ ಕುಲಾಗ್ರಣಿಯಿಂದ ಶಶಿಮುಖಿಯು ಹಗರಣವಾಗಿರಲು ನಿತ್ಯಾನಂದ 20 ದೆಸೆಗೆಟ್ಟವನ ಪರಿಯಲತಿಶಯದಿ ಶೋಕಿಸುತ ದೆಸೆದೆಸೆಯೊಳರಸುತ್ತಾ ಬಸವಳಿದು ತಾ ಬರುತ 21 ಎಸೆವವರ ಋಷ್ಯಮೂಕಮತಂಗಾಶ್ರಮದಿ ಬಿಸಜಾಪ್ತಸುತನ ಕಂಡವನೊಡನೆ ತಾ ಮುದದಿ 22 ಉಸುರಿ ವಾಲಿಯ ವಧೆಗೈವೆನೆಂದಭಯವನು ಎಸೆವ ವಿಲಸಿತ ಮಹಿಮ ಕರಿಗಿರೀಶನು ತಾನು 23
--------------
ವರಾವಾಣಿರಾಮರಾಯದಾಸರು
ಕೇಳಿರೋ ಕೇಳಿರೋ ಆಲಿಸಿ ಜನರು | ಕಲಿಯುಗದೊಳಗ ಒಡಿಯ ನಾಟವನು ಪ ಫುಲ್ಲನಾಭನ ಭಕ್ತಿ ಎಳ್ಳೆನಿತಿಲ್ಲಾ | ಹುಲ್ಲು ಕಲ್ಲು ದೈವಕ ಎರಗಿ ನಡೆವರು | ಬೆಲ್ಲವು ಕಹಿಯಾಗಿ ಸಿಹಿ ಬೇವಾಯಿತು | ಅಲ್ಲ-ಹುದೆಂಬುದು ಬಲ್ಲವರಾರು 1 ಸಾಧು ಸಂಗಕ ಕಾಲು ಏಳುವು ನೋಡಿ | ಸಾಧಿಸಿ ದುರ್ಜನರಾ ನೆರಿಯ ಸೇರುವರು | ಮಾಧವ ನಾಮ ಉಣ್ಣಲು ಮುಖರೋಗ | ಭೂದೇವಿ ನಿಸ್ಸಾರವಾದಳು ನೋಡಿ2 ನೀಚರಿಗುದ್ಯೋಗ ಊಚರಿಗಿಲ್ಲ | ಆಚಾರ ಸದ್ಗುಣ ಆಡವಿ ಸೇರಿದವು | ಯೋಚಿಸಿ ಒಬ್ಬರಿ ಗೊಬ್ಬರು ಕೇಡಾ | ಭೂಚಕ್ರದೊಳು ಎಲ್ಲಾ ತೀರಿ ತಿಂಬುರೈಯಾ3 ಇಲಿಯು ಹೆಗ್ಗಣ ಹೆಚ್ಚಿ ತೋಳ ಬಡಿದು | ದಾಳಿಯಿಟ್ಟವು ಲಂಕಾ ಯೋಧ್ಯದ ನಡುವೆ | ಇಳಿಯೊಳು ಹತ್ತೆಂಟು ಕಾಲ-ವೀಪರಿಯಾ | ತಲಿ ತಲಿಗಿನ್ನು ನಾಯಕರಾಗಿ ಇರಲು 4 ಮ್ಯಾಲೊಬ್ಬ ನಿಂದಲಿ ಸುಖದಲಿ-ರಲಿಕ್ಕೆ | ಕುಲ ಅನ್ಯ ಇಲ್ಲದ ರಾಜೇಶನಾ | ಕಾಲಿಲಿ ಸರ್ವ ಸಂಕರ ವಾಗುತಿರಲು | ಹೊಳೆವನು ಗುರುಮಹಿಪತಿ ಸುತ ಸ್ವಾಮಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು