ಒಟ್ಟು 271 ಕಡೆಗಳಲ್ಲಿ , 66 ದಾಸರು , 244 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಧರಣೆಯನಾಳ್ವ ಪಾರ್ಥಿವರಿಂಗೆ ಪ್ರಜೆಗಳು ಬೇಡವಾಯ್ತು ವರಹದ ಮೇಲಣಾಸೆಯಿಂದ ರಹಿತರ ಬಡಿವುದಾಯ್ತು ಪ ರಾಜ್ಯಕೆ ದಂಡ ಹಾಕಿದರು ತೀರಿತೆಲ್ಲಿ ಪ್ರಜೆಗಳ ಬಾಳು ನಜರು ಕೊಡುವುದಾಯ್ತು ತೆರತೆರುವುದರಿಂದ ವರಹಕೊಂಡು ಬಂದು ಏರೆಯ ರೂಪಾಯಿಗಳನು ಎತ್ತಿ ದಂಡಿಗೆ ಕೊಡುವುದಾಯ್ತು 1 ಮತ್ತೆ ಸೇನಭೋಗರು ಶಿರಸ್ತೆದಾರರು ಸಾವಿರ ಸಾವಿರ ವೆತ್ತಿ ಜನಕೆ ಬೆದುಕಮಾಳ್ವ ಕರಣಿಕರಿಗೆ ಪತ್ತು ನೂರು ಮೂರು ಸಾವಿರವೆಂದು ದಂಡವನುಕಟ್ಟಿ ವಿತ್ತವನ್ನು ಸೆಳೆದರದುವೆ ಬಿತ್ತು ಬೇರೆ ಪ್ರಜೆಗಳ ಮೇಲೆ 2 ಸೂಳೆ ಮಾಲೆಯರನು ಕರೆಸಿ ಜನಕೆ ಸಾವಿರದಂಡಕಟ್ಟಿ ಕೂಳತಿನಲು ಬಿಡದೆ ತರುಬಿವಾಲೆ ಮೂಗುತಿ ನಾಣ್ಯಗೊಂಡು ಬೀಳು ಕೊಟ್ಟು ಮನೆಗೆ ಅಂಗಡಿ ಸಾಲುವಳಿಗೆಯರನು ಕಾಲನಂತೆ ದಣಿಸಿ ರೊಕ್ಕದ ಜಾಳಿಗೆಯನು ಕೊಂಡು ಮೆರೆವ 3 ಸುಲಿಗೆಯಾಗ ದುಳಿಯಲಿಲ್ಲ ಬೆಳೆದ ಬೆಳೆಯ ನುಣ್ಣಲಿಲ್ಲ ಹೊಳಲ ಸುಟ್ಟು ಬಿಟ್ಟುದೆಲ್ಲ ಕುಲಕೆ ಪಶುಗಳುಳಿಯಲಿಲ್ಲ ತಲೆಯ ಚಂಬುಹಾರಿತಲ್ಲ ಜನರು ಸತ್ತು ಹೋದುದೆಲ್ಲ ಮಲೆತ ರಿಪುಗಳನ್ನು ಕುಟ್ಟಿ ಪ್ರಜೆಗಳ ಕಾಯ್ದು ಕೊಳ್ಳಲಿಲ್ಲ 4 ತಿರುಕರಿಂಗೆ ಸುಖಿಗಳಿಂಗೆ ಹರುವೆ ಸೊಪ್ಪುಮಾರ್ವರಿಂಗೆ ತರುಣಿಯರನು ಬಿಟ್ಟು ತಲೆಯ ಹೆರೆಸಿ ಕೊಂಡಲೆಗಳರಿಂಗೆಗೆ ಹಿರಿದು ಕಿರಿದು ಎಂದು ಬಿಡದೆ ಮರುತ ಸುತನ ಕೋಣೆಲಕ್ಷ್ಮಿ ಯರಸ ರುದ್ರರೂಪಧರಿಸಿ ಜನರಿಗಿನಿತು ಮಾಡಿದ 5
--------------
ಕವಿ ಪರಮದೇವದಾಸರು
ಧ್ಯಾನಕೆ ಮನವಿಲ್ಲ ಸುರಪಾನಕೆ ಕೊನೆಯಿಲ್ಲ ಪ ದಾನಧರ್ಮಕೆ ಕೈಯಿಲ್ಲ ಜ್ಞಾನದ ಸೊಲ್ಲಿಗೆ ಸ್ಥಳವಿಲ್ಲ 1 ಜೀವಕೆ ಅರಿವಿನ ಅರಿವಾಯ್ತಲ್ಲ ದೀವಿಗೆ ಆರಿ ಕತ್ತಲೆಯಹುದೆಲ್ಲ 2 ಚಿಂತೆಯಿಂದ ತುಂಬಿತು ಸಕಲಾಂಗ ಸಂತವಿಸೋ ಎನ್ನ ಮಾಂಗಿರಿರಂಗ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಧ್ಯಾನಿಸು ಮನವೆ ನೀ ಧ್ಯಾನಿಸು ಪ. ಧ್ಯಾನಿಸು ಮನವೆ ಶ್ರೀಹರಿಯ ಪಾದಧ್ಯಾನನಿರುತ ಈ ಪರಿಯ ಆಹಾಪ್ರಾಣಾಪಾನವ್ಯಾನೋದಾನಸಮಾನರ್ಗೆ ಪ್ರಾಣನಾಗಿಪ್ಪ ಮುಖ್ಯ ಪ್ರಾಣಾಂತರ್ಗತನ ನೀ ಅ.ಪ. ಪರಮಾಣು ಪ್ರದೇಶದಲ್ಲಿ ಪ್ರಾಣರಾಶಿ ಅನಂತುಂಟಲ್ಲಿ ಹೀಗೆಒರಲುತಿದೆ ವೇದದಲ್ಲಿ ದೃಷ್ಟಾಂತವ ಪೇಳ್ವೆ ಕೇಳು ದೃಢದಲ್ಲಿ ಆಹಾಪರಮಸೂಕ್ಷ್ಮ ವಟಮರನಾಗಿ ಅದರಲ್ಲಿಪರಿಮಿತಿಲ್ಲದರ ಫಲದಬೀಜವನರಿತು ನೀ 1 ನಿರುತ ಸುವರ್ಣಬ್ರಹ್ಮಾಂಡದಲ್ಲಿ ಹರಿ ಪೂರ್ಣವ್ಯಾಪ್ತ ಅಖಂಡನಾಗಿಮಿರುವುತಲಿಪ್ಪ ಮಾರ್ತಾಂಡ ತೇಜೋಕಿರಣದಂತಿರುವ ಪ್ರಚಂಡ ಆಹಾಹೊರಗೆ ಒಳಗೆ ಸರ್ವತ್ತರದಲ್ಲಿ ಹರಿಮಯ-ವರಿತು ನಿನಗೆ ಎಲ್ಲಿ ದೊರಕಿದ ಸ್ಥಳದಿಂದ 2 ಸಲಿಲಭೂಗಿರಿಲತೆ ನಾನಾವೃಕ್ಷಫಲಖಗಮೃಗ ಕಾನನತೃಣ ಪೊಳೆವಪಾವಕತರುಪವನ ಮುಕ್ತಸ್ಥಳ ಅವ್ಯಾಕೃತ ಗಗನ ಆಹಾಒಳಗೆ ಹೊರಗೆ ಹರಿ ಚಲಿಸದೆ ಇರುತಿಪ್ಪಸ್ಥಳದ ನಿಲುವಿನಂತೆ ತಿಳಿದು ನೀ ಅದರಂತೆ 3 ತೈಜಸ ನಿತ್ಯ 4 ಸಪ್ತಾವರಣ ಶರೀರದಿ ದಶಸಪ್ತದ್ವಿಸಹಸ್ರ ನಾಡಿಯಲಿ ದಶ-ಸಪ್ತದ್ವಿಸಹಸ್ರ ರೂಪದಲ್ಲಿ ಹರಿವ್ಯಾಪ್ತ ನಿರ್ಲಿಪ್ತಸ್ಥಾನದಲ್ಲಿ ಆಹಾಆಪ್ತನಂತಿರುವ ಸುಷುಪ್ತಿ ಸ್ವಪ್ನ ಜಾಗ್ರದಿತಪ್ತಕಾಂಚನದಂತೆ ದೀಪ್ತಿಸುತಿಪ್ಪನ 5 ಜೀವರಿಂದತ್ಯಂತ ಭೇದ ಪ್ರತಿಜೀವಾಂತರದಲಿ ಪ್ರಮೋದನಾಗಿಆವಾಗ ಚರಿಸುವ ವೇದ ಪೇಳುವುದು ಸತ್ಯಂಭಿದಾ ಆಹಾಈ ವೇದಾರ್ಥವು ಸಾವಧಾನದಿ ತಿಳಿದುಶ್ರೀವಾಯುಮತವ ಕೋವಿದರೊಡಗೂಡಿ6 ಶ್ರೀ ಕೇಶವನೆ ಮೂಲಾಸಿ ಶ್ರುತಿ ಏಕೋನಾರಾಯಣಾಸಿ ನಾನಾಲೋಕ ಸೃಷ್ಟಿಪದ ತಾನಾಸಿ ತಾರಕಮಂತ್ರ ಉಪದೇಶಿ ಆಹಾನೀ ಕೇಳು ನಿಗಮಾರ್ಥ ನೀಕರಿಸು ಸಂಶಯಏಕಮೇವಾದ್ವಿತೀಯನೆಂಬೊ ಕೃಷ್ಣನಂಘ್ರಿಯ 7 ಗಂಗಾಜನಕ ಸಿರಿರಂಗ ಉತ್ತುಂಗಗುಣಗಣತರಂಗ ಕಾ-ಳಿಂಗಸರ್ಪನ ಮದಭಂಗ ಭುಜಂಗಶಯನ ಅಮಲಾಂಗ ಆಹಾಪಿಂಗಳ ಇಡಾ ಮಂಗಳ ಸುಷುಮ್ನ ಸುಸಂಗಮ ಮಧ್ಯದಿ ತಿಮಿಂಗಿಲಂತಿಪ್ಪನ 8 ಮೂರ್ತಿ ಬಲು ಅದುಭುತದಿವ್ಯಕೀರ್ತಿಅದೆ ಪದುಮಜಾಂಡದಿ ಪರಿಪೂರ್ತಿ ದೊರೆವುದಕೆ ಬೇಕು ವಾಯುಸಾರ್ಥಿ ಆಹಾಅದೆ ಬಿಂಬಮೂರ್ತಿ ಜೀವದಾಕಾರವಾಗಿ ತಾಪದುಮಜಾಂಡದಲಿಪ್ಪ ಸದಮಲಾತ್ಮಕನ 9 ಧರೆಯನಳೆದ ದಿವ್ಯಚರಣ ಅದು ಮೆರವುತಿಪ್ಪುದು ಕೋಟಿ ಅರುಣನಂತೆಪರಿಪೂರ್ಣಭರಿತವು ಕಿರಣ ತನ್ನ ಸ್ಮರಿಸುವರಿಗೆ ಮಾಳ್ಪ ಕರುಣ ಆಹಾತರುಣಿಯಂದದಿ ನಖದಿ ಸುರನದಿಯ ಪೆತ್ತ ನೂ-ಪುರ ಗೆಜ್ಜೆಪೆಂಡೆಯ ಎರಡೈದು ಬೆರಳನು 10 ಹರಡು ಜಂಘೆಯುಗಜಘನ ಸುರುಚಿರ ರೇಖಧ್ವಜವಜ್ರ ನಾನಾ ದಿವ್ಯ ವರರೇಖೆಯಿಂದಲೊಪ್ಪುವನ ಜಾನು ಪರಮಶೋಭಿಸುವ ಸುಂದರನ ಆಹಾಉರುಟುಕದಳಿಸ್ತಂಭದಂತಿರುವೊ ಊರುದ್ವಯಸರಿಗಾಣೆ ಹರಿ ಉಟ್ಟ ವರಪೀತಾಂಬರವನು 11 ಕುಕ್ಷಿ ನಿಜ ಸುಖಪೂರ್ಣನ 12 ವೈಜಯಂತಿ ಮಂದಾರವನ್ನು ಮುದದಿಂದ ಧರಿಸಿದ ಧೀರ ಆಹಾಪದುಮಜಭವರಿಂದ ತ್ರಿದಶರು ತಿಳಿದಿನ್ನುಸದಾಕಾಲ ಧೇನಿಪರು ಹೃದಯಾಂಬರದಲ್ಲಿ 13 ಕಂಬುಕಂಧರ ಅತಿಗುರುತರ ಭುಜವು ಚತುರ ಆಹಾಮರಿ ಆನೆ ಸೊಂಡಿಲಂತಿರುವ ಬಾಹುಕೀರ್ತಿ ಕೇತಕಿಬೆರಳು ನಕ್ಷತ್ರದರಸಿನಂದದಿ ನಖ14 ಸಿರಿ ಭುಜಕೀರುತಿ15 ಕಂಬು ಅಗಣಿತ ಮಹಿಮನ16 ಮುಗುಳು ಮಲ್ಲಿಗೆ ಮೊಗ್ಗೆ ದಂತಪಂಕ್ತಿ ಜಗವಮೋಹಿಸುವ ಸುಶಾಂತ ಜಿಹ್ವೆನಿಗಮಕ್ಕೆ ವೇದ್ಯವಾದಂಥ ಬಹು ಬಗೆಯಲ್ಲಿ ಮೆರೆವ ಸುಪಂಥ ಆಹಾನಗುವ ವದನ ಝಗಝಗಿಸುವ ಕುಂಡಲಕರ್ಣಮಿಗೆ ಕೂರ್ಮಕದಪು ಸಂಪಿಗೆನಾಸಿಕವನ್ನು 17 ಕರುಣಶಾಂತಶುಭನೋಟ ಕಂಗಳೆರಡರ ಚೆಲ್ವಿಕೆ ಮಾಟ ಇನ್ನುಅರವಿಂದದಳವೆನ್ನು ದಿಟ ಇನ್ನು ತರಣಿಚಂದ್ರಮರ ಕೂಟ ಆಹಾಶರಣಜನರ ಮನೋಹರ್ಷವಾರ್ಧಿಗೆ ಚಂದ್ರದುರುಳ ದಿತಿಜತಿಮಿರಕ್ಕೆ ಭಾಸ್ಕರನ 18 ಚಾಪ ತಲೆಯ ತಗ್ಗಿಸುವಂಥಾ ರಚನಾಫಾಲದಲಿಟ್ಟ ತಿಲಕ ಸುಂದರ ಲೋಕ ಕಳವಳಗೊಳಿಸುವ ಸುಗುಣ ಆಹಾನಳಿನವದನದಲ್ಲಿ ಅಳಿಗಳಂತೊಪ್ಪುವಸುಳಿಗುರುಳಿನ ಮ್ಯಾಲೆ ಒಲೆವ ಅರಳೆಲೆಯನ್ನು 19 ನಿತ್ಯ ನಖ ಲಲಾಟ ಪರಿಯಂತ್ರನೋಟದಿಂದಲಿ ಈಶಕೋಟಿ ಸಹಿತನ 20 ನಿತ್ಯ 21
--------------
ಗೋಪಾಲದಾಸರು
ನಂದ ವೃಜ ಮಧುರಿ ದ್ವಾರಕೀಯೊಳಾಡಿದ ಕೂಸೆಎಂದು ಬಾಹುವಿ ಇಲ್ಲಿಗೆ ಪ ಮಧುರೆಯಲಿ ನೀಪುಟ್ಟಿ ಪಿತೃಗಳ ರಕ್ಷಿಸಿದಿಹಿತದಿಂದ ಯಾದವರ ತಲೆಯ ಕಾಯ್ದಿಮೃತವಾದ ಮಗುವನು ಗುರುಸತಿಯ ಮಾತಿಗೆ ಕೊಟ್ಟೆಪ್ರತಿಗಾಣೆನೊ ನಿನ್ನ ಬಲಕೆ ಛಲಕೆ 1 ವೈರಿ ಬಾಧೆಯ ಬಿಡಿಸಿಭೂರಿ ಸುಖವಿತ್ತು ಪೊರೆದಿ ಭರದಿ 2 ಸರಯು ತೀರದಿ ಅಯೋಧ್ಯಾ ಪುರದೊಳಗೆ ಕಾಂಚನದಪರಮ ಪೀಠದಿ ಕುಳಿತು ಸೀತೆಯೊಡನೆಹರಳು ಕೆತ್ತಿದ ನಾನಾ ಭೂಷಣಂಗಳನಿಟ್ಟುಮರುಳು ಮಾಡುವಿ ನಮ್ಮನೂ ನೀನು 3 ನಂದ ಗೋಕುಲದಿ ರವಿ ನಂದನೀಯ ತೀರದಲ್ಲಿಚಂದದಿಂದಲಿ ನಿಂತು ಕೊಳಲನೂದಿಮಂದಗಮನಿಯರ ಮನಸು ಮರುಳು ಮಾಡುತ ಸುಖವು ದ್ವಂದ್ವಲೋಕದಿ ಕೊಟ್ಟಿ ಭೆಟ್ಟಿ 4 ಸಿರಿ ಸಂಪತ್ತು ಬಲ್ಲೆಇಂದಿರೇಶನೆ ಎನ್ನ ಚಿತ್ತ ಮಂದಿರದೊಳು ನಿನ್ನಸುಂದರಾನನ ತೋರೋ ಬಾರೋ5
--------------
ಇಂದಿರೇಶರು
ನಂಬದಿರು ಈ ದೇಹ ನರಲೋಕವೆಂಬುದು ಸುಖವೆಂದು ಮಾಯಾ ಪ್ರಪಂಚವನು ಅನುಗಾಲಾ ನಂಬು ನಮ್ಮಂಬುಜಾಂಬಕನ ಪಾದಾಂಬುಜವ ನಂಬಿದರೆ ಮುಕ್ತಿಯಲಿ ಇಂಬುಂಟು ಮರುಳೆ ಪ ತಂದೆ ತಾಯಿ ತಮ್ಮ ಸುಖಕೆ ಏಕಾಂತದಲಿ ಒಂದು ದಿನಲಿರಲಾಗಲವರರೇತಸು ಬಿಂದುವಿನಲಿ ಉತ್ಪತ್ಯವಾಗಿ ಬೆರೆದಾಗ ದು ರ್ಗಂಧದೊಳು ಬಂದು ನಿಂದೂ ಬಂಧನದೊಳಗೆ ಸಿಲುಕಿ ಒಂದೆಂಟು ತಿಂಗಳು ಪೊಂದಿ ಯಾತನೆಬಟ್ಟು ಮಲಮೂತ್ರ ಹೇಸಿಕೆಯಿಂದ ಕುದಿದು ಬಿಂದು ಕೆಳಗೆ ಹೊರಳಿದಿರು ಮರುಳೆ 1 ತಾಮಸವ ಕವಿದು ಕಾವಳಗೊಂಡ ಕತ್ತಲೆಯ ಸೀಮೆಯೊಳಗೆ ಸಿಲ್ಕಿ ಬಾಲತ್ವತನದಲ್ಲಿ ನೀ ಮಂದನಾಗಿ ಮರುಳಾಟಕ್ಕೆ ಮನವು ಉಬ್ಬಿ ಮುಂಜಿಯನು ಕಟ್ಟಿ ಬಂಧುಬಳಗ ಪ್ರೇಮದಿಂದಲಿ ನೆರೆದು ಮೋಹದಲಿ ಒಬ್ಬ ಕೋಮಲೆಯ ಜತೆಮಾಡಲು ನೋಡಿ ಹಿಗ್ಗುತ್ತಾ ಛೀಮಾರಿಯಾಗಿ ತಿರುಗಲಿ ಬೇಡ ಮರುಳೆ 2 ಮದ ಮತ್ಸರ ಲೋಭ ಮೋಹ ಕಾಮಾದಿಯಲಿ ಮದನ ಬಲಿಗೆ ಬಿದ್ದು ಅಹಂಮತಿ ಪಂಕದಾ ಹುದಲಿನೊಳಗೆ ಮುಣುಗಿ ಮುಂಗಾಣದಲೆ ತನು ರೂಹ ತುಂಬಿ ಕಾಲವನು ಕಳೆದು ಮಕ್ಕಳ ಪಡೆದು ತುದಿಮೊದಲು ಧರ್ಮವನು ಮರೆದು ಮಮತೆಯಲ್ಲಿ ಸದರೆಂದಿಲ್ಲದಾ ದುಷ್ಕರ್ಮಗಳು ಮಾಡಿ ಮುದದಿಂದ ನರಕದೊಳು ಬೀಳುವಾ ಹುರುಳೆ 3 ಇದ್ದಾಗ ನೆಂಟರಿಷ್ಟರು ಬಂದು ಚೆನ್ನಾಗಿ ಹೊದ್ದಿಕೊಂಡು ನಿನ್ನ ಕೊಂಡಾಡಿ ನೂರಾರು ಸುದ್ದಿಯನು ಪೇಳಿ ನಡುಮನೆಯೊಳಗೆ ಇದ್ದು ನಿನ್ನಯ ಬದುಕು ಉದ್ದಿನ ಕಾಳಿನಷ್ಟು ಉಳಿಯಲೀಸದೆ ನಿತ್ಯಾ ಬದ್ಧವಿಲ್ಲದಲೆ ಕರಗಾತಿಂದು ಬಡತನಾ ಸಿದ್ಧನಾಗಲು ತಿಂದವರು ಹರದೋಡಿ ಎದ್ದು ಪೋಗಲು ಕೆಟ್ಟಬಾಯಿದೆರವಾ ಮರುಳೆ 4 ಬಿಡು ಬಿಡು ಅಕಟ ಸಂಸಾರ ಸಾಗರದ ಮಡುವಿನೊಳಗೆ ಬಿದ್ದು ಕಾಲ್ಗೆಡೆದು ಪೋಗದೆ ಹಿಡಿ ಹಿಡಿ ಪರಮ ಭಾಗವತರ ಸಂಗತಿಯ ಸರ್ವಜ್ಞತೀರ್ಥರ ಮತದ ಕರುಣವನು ಪಡೆಯಲು ಅಧಿಕಾರನಾಗಿ ಸಿರಿದೇವಿಯ ವೊಡಿಯ ವಿಜಯವಿಠ್ಠಲನಂಘ್ರಿ ನೆರೆ ನಂಬಿ ತಡಿಯದಲೆ ಸದ್ಗತಿಗೆ ಸೇರುವದು ಮರುಳೆ5
--------------
ವಿಜಯದಾಸ
ನಂಬಬೇಡಿ ಸಿರಿಯ ತನ್ನದೆ ? ಪ ನಂಬಬೇಡಿ ಸಿರಿಯು ತನ್ನದೆಂಬ ನಿಮಿಷದೊಳಗೇನಹುದೊಡಂಬತನವಿದೇಕೆ ಹರಿಯ ಪಾ-ದಾಂಬುಜವನು ಭಜಿಸಿ ನರರು ಅ ಜಲಧಿಯನ್ನು ಪೀರ್ದ ಮುನಿಯಜನನಿ ಪೆಸರ್ಗೆ ಕಿವಿಯನಾಂತಖಳನ ಬಲವ ನಂಬಲಾತುತಲೆಯ ತವಿಸಿದವನ ಸಿರಿಯುಗಳಿಗೆಯೊಳಗೆ ಕೀಲು ಸಡಿಲದೆ - ಎಣಿಕೆ ಇಲ್ಲದದಳವು ಯಮನನಗರಿಗೈದದೆ - ದೈವಕೃಪೆಯುತೊಲಗಲೊಡನೆ ದಾಳಿವರಿಯದೆ - ಕೇಳಿ ಜನರೆ 1 ಇಭ ನೃಪತಿ ಶೌರಿ ಮುನಿಯಲಂದು ಅವನ ಪದವು ಮುರಿಯದೆ - ಕೇಳಿ ಜನರೆ2 ಧರಣಿಯ ಮುನ್ನಾಳ್ದ ನಹುಷಸಗರರೆನಿಪ ಭೂಪತಿಗಳುಸಿರಿಯ ಜಯಿಸಲಿಲ್ಲ - ಮಿಕ್ಕನರರ ಪಾಡಿದೇನು ನೀವುಬರಿದೆ ಭ್ರಾಂತರಾಗಬೇಡಿರೊ - ಎಂದಿಗಾದರುಸ್ಥಿರವಿದಲ್ಲವೆಂದು ತಿಳಿಯಿರೊ - ಶ್ರೀ ಕಾಗಿನೆಲೆಯವರದ ಕೇಶವನನು ಭಜಿಸಿರೊ - ಕೇಳಿ ಜನರೆ 3
--------------
ಕನಕದಾಸ
ನಂಬಿದೆ ನಿಂನನು ಅಂಬುಜಲೋಚನ ಅಂಬುಜೋದ್ಭವ ಪಿತ ಅಂಬುಜ ರಮಣಾ ಪ ಹಲವು ಯೋನಿಗೆ ಬಿದ್ದು ಬಲೆ ದಾಟಿ ಬಂದೇ ಬಳಲುತ್ತ ಪರಿಪರಿ ದುಃಖಗಳಿಂದ ಬಲ್ಲವಿಲ್ಲ ಸಹಿಸಲು ಭವರೋಗ ವೈದ್ಯನೇ ವಲಿದೆನ್ನ ಪಾಲಿಸೋ ಸಾನುರಾಗದಲೀ 1 ಏನು ಮಾಡಲಿ ನಿಂನ ಚರಣ ಸೇರಲಿಕೇ ಹೀನ ಪಥವ ಪಿಡಿದು ಕಡು ನೊಂದೆನಯ್ಯ ಗಾನ ಲೋಲನೆ ಭಜಿಪ ಭಾಗ್ಯವ ಕೊಡಬೇಕು ನೀನೇ ಗತಿಯೆಂದು ಯಾದವ ಪತಿಯೇ 2 ಕತ್ತಲೆಯಾವರಿಸಿತು ದೇಶವೆಲ್ಲವ ಬತ್ತಲೆಯಾಗಿ ನಿಂತರು ಮೂಢಜನರು ಮೃತ್ಯು ತುತ್ತಿಗೆಯಂನ ಕೊಡದೆ ಕತ್ತಲೆ ನೀಗಿಆತ್ಮ ಜ್ಞಾನವ ನೀಡೋ ಚನ್ನಕೇಶವನೇ3
--------------
ಕರ್ಕಿ ಕೇಶವದಾಸ
ನಮಗೆಲ್ಲಿ ಮನೆಗಳಯ್ಯ ನಾರಾಯಣ ಪ ಕಮಲ ಬ್ರಹ್ಮಾಂಡ ಕೋಟಿ ಒಡಲೊಳು ತಾಳ್ದಂಥರಮಾಧವ ನಿಮಗೆ ನೀರೊಳಗೆ ವಾಸವಾಯಿತುಅ ಜಲನಿಧಿಯನುತ್ತರಿಸಿ ಲಂಕೆಯನೈವುದಕೆಕುಲಗಿರಿಯ ಕಿತ್ತು ತಂದು ಸೇತುವೆ ಕಟ್ಟಿಸಲೆ ದೈತ್ಯನ ಕೊಂದು ಸೀತೆಯ ತಂದನಿಗೆ ಗಿರಿತಲೆಯ ಮೇಲೆ ಇಹ ಪ್ರಾಪ್ತಿಯಾಯಿತು 1 ಪೃಥ್ವಿಯ ತಲೆಯನು ಪರೆಮಾಡಿ ತಾಳಿದಳುತ್ಯಾನಮಮ್ಮನ ತಂದೆಯ ಮೆಲುವನಮೃತ್ಯುನಾಶಕನೆಂದು ಸುತ್ತಿದ್ದಾನೆಹುತ್ತಿನೊಳಗೆ ಇಹ ಪ್ರಾಪ್ತಿಯಾಯಿತು 2 ನಾಡದೇವತೆಗಳ ಸೆರೆಗಳ ಬಿಡಿಸಿಕ್ರೀಡೆಯಾಯಿತು ನಿಮ್ಮ ದಯದಿಂದಲಿರೂಢಿಯೊಳತಿ ಸೇವಕನಾದ ಗರುಡನಿಗೆಬೋಡು ಮರದ ಮೇಲೆ ಇಹ ಪ್ರಾಪ್ತಿಯಾಯಿತು 3 ಜಲನಿಧಿ ಸುತನ ಮೊಮ್ಮಗನ ಕೊಂದ ಶೂರ ನಕುಲ ಸಹದೇವ ಪಾಂಡವರೈವರುಲಲನೆ ದ್ರೌಪದಿಯೊಂದಿಗೆ ವನವಾಸ ಹೋಗಿಹೊಲದೊಳಗೆ ಇಹ ಪ್ರಾಪ್ತಿಯಾಯಿತು4 ಇಂಥಿಂಥವರಿಗೆಲ್ಲ ಮನೆಯಿಲ್ಲದಿರಲು ನ-ನ್ನಂಥವನಿಗಿನ್ನೆಲ್ಲಿ ಇರಲು ಸಾಧ್ಯಕಂತುಪಿತ ಕಾಗಿನೆಲೆಯಾದಿಕೇಶವನೆ ನಿ-ಶ್ಚಿಂತನಾಗಿ ನಿಮ್ಮ ಗುಡಿಯಲಿಪ್ಪೆನು 5
--------------
ಕನಕದಾಸ
ನಮಿಸುವೇಂ ಜಗದಂಬೆ ನಿನ್ನಂ ಮುದದಿಂ ದೃಢದಿಂ ಮನವಾರೆ ನಾಂ ಪ ಉದಯಾದ್ರಿಯೊಳುದಿಸಿದ ನಾರೈ ಮನಿದೆ ಬಂದೇಂ ಬಳಿಸಂದೇಂ ಪದುಳದಿ ನಿಂದೇಂ ಅ.ಪ ಮೂಡಿದ ಕತ್ತಲೆಯೋಡಿÉಸಿ ಭರದಿಂ ನೋಡೆಚಿರಂ, ನಾಡೆಜಗಂ ಬೆಳಗಲಿ ಬೆಳಕಿಂ 1 ಭಾಮಿನಿಯರು ಸದ್ಭಾವನೆಯಿಂದಲಿ ದೇವಿಯ ಸಂಸೇವಿಸಿವೊಲ್ ತಾ ವರವಂ2 ಶೇಷಗಿರೀಶನ ದಾಸರು ನಾವೆನೆ ಭಾಷಾನಿಧಿಯಂ ಬಲಗೊಂಡಾಂ ಬೇಡುತ ನಲವಿಂ3
--------------
ನಂಜನಗೂಡು ತಿರುಮಲಾಂಬಾ
ನಮ್ಮ ಕುಲದೈವೀತ ಬೊಮ್ಮನ ಪಡೆದಾತ ಸಾಮಗಾಯನ ಪ್ರೀತ ಸ್ವಾಮಿನೀತ ಧ್ರುವ ವೇದ ಉದ್ಧರನೀತ ಮೇದಿನಿಯ ಪೊತ್ತಾತ ಸಾಧುಜನ ವಂದಿತ ಸದ್ವಸ್ತುನೀತ 1 ಧಾರುಣಿಯ ಗೆದ್ದಾತ ತರಳಗೊಲಿದಹನೀತ ದಾತ ಕರುಣಿ ಈತ 2 ಮೂರು ಪಾದಳಿದಾತ ಪರಶುಧರನಹುದೀತ ಸುರಜನರ ಪೂಜಿತ ಸರ್ವೋತ್ಮನೀತ 3 ಪವನಸುತಗೊಲಿದಾತ ಮಾವನ ಮಡುಹಿದಾತ ಭುವನತ್ರಯಲೀತ ದೇವನೀತ 4 ಬೆತ್ತಲೆಯು ಸುಳಿದಾತ ಉತ್ತಮ ಹಯವನೇರಿದಾತ ಭಕ್ತರಿಗೆ ಹೊರೆವಾತ ಶಕ್ತನೀತ 5 ಅಣುರೇಣುದೊಳೀತ ಅನುಕೂಲವಾದಾತ ಆನಂದೋ ಬ್ರಹ್ಮ ಅನಂತನೀತ 6 ಮಹಾಮಹಿಮನಹುದೀತ ಬಾಹ್ಯಾಂತ್ರಪೂರಿತ ಮಹಿಪತಿಯ ಸಾಕ್ಷಾತ ವಸ್ತುನೀತ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ನಮ್ಮ ರಂಗ ಮಧುರೆಗೆ ನಡೆತರಲು ಪ ಮಥುರೆಗೆ ನಡೆತರಲು ಅತಿ|ಹರುಷದಲಿ ಅಕ್ರೂರನೊಡನೆ| ರಥದಲಿ ಕುಳಿತು ಫಡ ಫಡಫಡಲೆಂದು| ಪಥದಲಿ ನಡಸ್ಯಾಡುತಲಿ 1 ಬಿಲ್ಲಹಬ್ಬದ ನೆವದಲ್ಲಿ|ಫುಲ್ಲಲೋಚನ ಮೋಹನ ಕೃಷ್ಣ| ಇಲ್ಲಿಗೆ ಬಂದನು ಎನುತಲಿ ಕೇಳಲು| ಎಲ್ಲರು ನಡೆದರು ನೋಡಲಾಗಿ 2 ಆಲಯದೊಳಗೆ ನಿಲ್ಲದೇ|ಬಾಲಕಿಯರು ತಮತಮ್ಮ| ಚಾಲವರುತಿಹಾ ತೊಟ್ಟಿಲೊಳಗಿನಾ|ಬಾಲಕರಿಗೆ ಮೊಲೆಗುಡದೆ 3 ಒಬ್ಬಳು ಅರೆಯಣ್ಣೆತಲೆಯಲಿ|ಒಬ್ಬಳು ತಿಗರವ ಹಚ್ಚಿದ ಮೈಯಲಿ ನಡೆದರು ಸಂಭ್ರಮದಿಂದ4 ಅಚ್ಚಮೈಯಲಿ ಕುಳಿತಿರೆ ಒಬ್ಬಳು|ಬಚ್ಚಲೊಳಗೆ ಮಜ್ಜಕನಾಗಿ ಅಚ್ಯುತನಾತುರದಿಂದಲಿ ಒಬ್ಬಳು ಎಚ್ಚರ ದೇಹದ ಬಿಟ್ಟು ನಡೆದಳು 5 ಎಲೆಳುಶಿಶುವೆಂದು ಬಗಲಿಲಿ|ಅಳತೆಯ ಮಾನವನಿರಿಸಿಕೊಂಡು| ನೆಲೆನೊಡದೇ ನಡೆದಳೊಬ್ಬಳು|ಚೆಲುವ ಕೃಷ್ಣನ ನೋಡಲಾಗಿ6 ಕದವನು ಒತ್ತಿಮುಂದಕ|ಒದಗದಿ ಕೆಲವರು ಮಾಳಿಗೆ ಏರಿ| ಸದಮಲಾನಂದಗ ತಲೆಯನು|ಬಾಗಿ ಪದುಮಕರವ ಮುಗಿದು7 ದಣ್ಣನೆ ನೋಡೀ ನೋಡುತಾ|ಕಣ್ಣುಪಾರಣೆ ಮಾಡಿಕೊಂಡು| ಮುನ್ನಿನ ದೋಷವ ಕರಗುವ ಪರಿಯಲಿ| ಪುಣ್ಯ ಸಾಮಗ್ರಿಯ ಮಾಡಿದರಂದು 8 ಕಂಡಾ ಪರಿಯ ರೂಪವಾ| ಧರಿಸಿಕೊಂಡು ಅಂತರಂಗದಲಿ|ತ್ವರಿತದಿಂದಲಿ ಧ್ಯಾಯಿಸುತಾ9
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಾನೇನು ನಿನ್ನಯ ಚರಣವ ಮಾಣೆನು ಪ ಮಾನವ ಕಾಯ್ವರನನ್ಯರ ಕಾಣೆನು ಅ.ಪ. ಕಣ್ಣನು ಬಿಡುತಲಿ ಬಿರಿಬಿರಿ ನೋಡುತಿಣ್ಣನೆ ಬೆಟ್ಟದ ಮೇಲೆ ಬಿಸಾಡುಮಣ್ಣನುಗ್ಗಲು ಹಲ್ಲಲ್ಲಿ ತೋಡುಸಣ್ಣನ ಉಗುರಿಲಿ ಹರಿಕೊಂಡು ನೋಡು 1 ಕಾಲಲಿ ತಲೆಯನು ತುಳಿಯುತೋಡಾಡುಮೇಲಾಗಿ ಕೊಡಲಿಯನೊಗೆದು ಈಡಾಡುಬಾಲದ ಮಂಗನ ಕರಡಿಯ ಛೂಬಿಡುಸೋಲಿಸಲಾವುದೆ ತಂತ್ರವ ಹೂಡು 2 ಮೃದು ನುಡಿಯಲಿ ಅವಮಾನಿಸಿ ನೂಕುಕುದುರೆಯ ತಂದೆನ್ನ ಮೈಮೇಲೆ ಹಾಕುಗದುಗಿನ ವೀರನಾರಾಯಣ ಸಾಕುಪದಗಳ ಸೇವೆಯು ನಿತ್ಯದಿ ಬೇಕು 3
--------------
ವೀರನಾರಾಯಣ
ನಾರಿಯರಲಿ ಮಾದರಿಯೆಂದೆನಿಸಿರಮ್ಮ ಮೂರುಕುಲಕೆ ಕೀರುತಿಯನು ತನ್ನಿರಮ್ಮ ಸೇರಿದ ಪತಿಮಂದಿರವನುದ್ಧರಿಸಿರಮ್ಮ ಬೇರೆ ಜನಕೆ ಸೋದರಿಯೆಂದರಿಯಿರಮ್ಮ ಅಬಲೆಯರಿರಬಹುದು ದೇಹ ಶಕುತಿಯಲಿ ಪ್ರಬಲಸ್ಥಾನ ನಿಮಗಿಹುದು ಸಮಾಜದಲ್ಲಿ ಶುಭಪರಂಪರೆಗಳ ಪತಿಗೆ ಕೋರಿರಮ್ಮ ಲಭಿಸುವುದತಿಸುಲಭದಿ ಪರಲೋಕವಮ್ಮ ಗೃಹಿಣಿಯೇ ಗೃಹವೆಂಬ ಮಾತನರಿಯಿರಮ್ಮ ಗಹನದ ಸಂಸಾರಪಥವ ಜರಿಯಬೇಡಿರಿ 10 ವಹಿಸಿರಿ ಗೃಹಕೃತ್ಯಗಳನು ಆದರದಲ್ಲಿ ಸಹಿಸಿರಿ ಸುಖದು:ಖಗಳನು ಖೇದವಿಲ್ಲದೆ ಶ್ರದ್ಧೆಯಿರಲಿ ಗೃಹಿಣಿಯ ಕಾರ್ಯದಲಿ ಸರ್ವದ ಸ್ಪರ್ಧೆಯ ಮಾಡಬೇಡಿ ಪುರುಷಗುಚಿತ ಕಾರ್ಯದಿ ತಿದ್ದಿರಮ್ಮ ವಿನಯದಿಂದ ಪತಿಯ ದೋಷವÀ ಹದ್ದಿನಂತೆ ಕಾಯಿರಮ್ಮ ಪತಿಯ ಶ್ರೇಯವ ದೈವದತ್ತವಿಹುದು ನಿಮ್ಮ ಮುಖದ ಕಾಂತಿಯು ಸೇರಿಸಿ ಫಲವೇನು ವಿವಿಧ ಸುಣ್ಣಬಣ್ಣವ ಹೂವುಗಳನು ಕಸಕಲದರ ಗಂಧವಿರುವುದೆ ಯಾವ ಕೃತಕ ಬೇಕಿದೆ ಸ್ವಭಾವ ಶೋಭೆಗೆ 20 ಅನುಗಾಲವು ಊರಿಗೆ ಉಪಕಾರಿಯಾದರು ಮನೆಗೆ ಮಾರಿಯಾಗಬೇಡಿರಮ್ಮ ಎಂದಿಗು ವಿನಯವಿರಲಿ ನಡೆನುಡಿಯಲಿ ಸರ್ವ ಜನರಲು ಪ್ರಣಯ ಸರಸ ಬೇಡಿರಮ್ಮ ಬಂಧು ಜನರಲಿ ದುಡಿದು ದಣಿದು ಉಶ್ಶೆನುತಲಿ ಬರುವ ಪತಿಯಲಿ ಕಿಡಿಕಿಡಿಯಾಗಲಿ ಬೇಡಿರಿ ತರಲು ಮರೆತರೆ ಬಡತನವಿರಬಹುದು ಸದ್ಯ ನಿಮ್ಮ ಪಾಲಿಗೆ ಅಡಿಗಡಿಗದನಾಡಬೇಡಿ ಒಡೆಯನೆದುರಲಿ ನೆರೆಮನೆ ವೆಂಕಮ್ಮನೊಂದು ಸೀರೆ ಕೊಂಡರೆ ಗುರು ಗುರುಗುಟ್ಟುತಲಿ ನೋಡಬೇಡಿ ಪತಿಯನು 30 ಮರುಕದಿ ಸಂತೈಸಲವನು ಮನವು ಕರಗದೆ ಸೆರೆಸೆರೆ ಕಣ್ಣೀರುಗಳನು ಸುರಿಸಬೇಡಿರಿ ತುಳಸಿಯ ಪೂಜೆಯನು ಮಾಡ ಮರೆಯಬೇಡಿರಿ ಕೆಲಸಗಳನು ದಿಟ್ಟತನದಿ ಮಾಡಿ ಮುಗಿಸಿರಿ ಕಲಿಯಿರಿ ಸಂಸಾರದಲಿ ನೆಪ್ಪು ನೇರವ ಹಳಿಯಬೇಡಿರಮ್ಮ ನೀವು ನೆರೆ ಹೊರೆ ಜನರ ಉಳಿಸಿ ಬಳಸಿರಮ್ಮ ತಂದ ಧಾನ್ಯವ ತಿಳಿಸಬೇಡಿ ಮನೆಯ ಗೋಪ್ಯ ಪರರಿಗೆಂದಿಗು ಕಾಲ ಕಳೆಯಬೇಡಿ ಕೆಲಸವಿದ್ದರೆ ಪ್ರಳಯ ಮಾಡಬೇಡಿ ಸಣ್ಣ ಪುಟ್ಟ ಮಾತಿಗೆ 40 ಸೊಟ್ಟ ಬೈತಲೆಯನು ತಗೆಯಲಿಷ್ಟಪಡದಿರಿ ಅಷ್ಟವಕ್ರದುಡುಪುಗಳನು ಧರಿಸಬೇಡಿರಿ ರಟ್ಟು ಮಾಡಬೇಡಿರಮ್ಮ ರೂಪು ರಚನೆಯ ಸಿಟ್ಟು ಮಾಡಬೇಡಿ ಮುದಿಯ ಬುದ್ಧಿವಾದಕೆ ಶ್ರವಣ ಮಾಡಿರಮ್ಮ ಹರಿಯ ಕಥೆಗಳನುದಿನ ಶ್ರವಣ ಮಾಡುವಾಗ ಹರಟೆ ನಿದ್ರೆ ಬೇಡವು ಕಿವಿಯ ಕಚ್ಚಬೇಡಿರಮ್ಮ ಪರರ ವಾಕ್ಯಕೆ ಲವಲವಿಕೆಯು ಬೇಡಿರಮ್ಮ ಚಾಡಿ ಚುದ್ರದಿ ರೂಢಿಯಿಲ್ಲದಿರುವ ನಡತೆ ಬೇಡಿರೆಂದಿಗು ಮೂಢರೆನಿಸಬೇಡಿ ಹಾಡುಹಸೆಯ ಕಲಿಯದೆ 50 ಪಾಡುಪಡುತ ಪತಿಗೆ ಹರುಷನೀಡಿ ಗೃಹದಲಿ ಪ್ರೌಢವಿದ್ಯೆ ಕಲಿತು ದುಡಿಯಬೇಡಿ ಪರರಿಗೆ ಬಣ್ಣವಿಲ್ಲದಿರುವುದು ಬಂಗಾರವಲ್ಲವು ಕಣ್ಣಿಗೆ ಹಿತವಲ್ಲದು ಶೃಂಗಾರವಲ್ಲವು ಉಣಲು ತಾ ದೊರೆಯದಿರಲು ಸಂಪತ್ತಲ್ಲವು ಅನ್ನ ಮಾಡಲರಿಯದಿರಲು ಹೆಣ್ಣದಲ್ಲವು ದುಂದುಗಾರಿಕೆಯನು ಕಲಿಯಬೇಡಿರೆಂದಿಗು ಮುಂದೆ ಕಾಲಚಕ್ರಗತಿಯನು ಮನದಿ ಯೋಚಿಸಿ ಬಂದ ಮಾತುಗಳನು ಬಾಯಿತಡೆದು ಆಡಿರಿ ನಂದಗೋಕುಲವನೆ ಮಾಡಿ ಗೃಹವ ನಗುತಲಿ 60 ಬಳಕೆಯಲ್ಲದಿರುವ ಕಲೆಯ ಕಲಿಯಬೇಡಿರಿ ಕಲಿಸಿರಮ್ಮ ಕೆಲಸಕಾರ್ಯ ಮಕ್ಕಳುಗಳಿಗೆ ಗಳಿಸಿರಮ್ಮ ಪುಣ್ಯಕೀರ್ತಿ ತಿಳಿಯಮನದಲಿ ಸುಲಭವು ಸಾಧನವು ನಿಮಗೆ ಪುಣ್ಯಲೋಕಕೆ ಮನವತಿ ಚಂಚಲತೆಯನ್ನು ಹೊಂದಬಿಡದಿರಿ ಅನುಮತಿ ಕೊಡಬೇಡಿ ದುಷ್ಟ ಜನರ ಬೋಧೆಗೆ ಘನಮತಿಯನು ಪೊಂದಿ ಸತಿಯ ಮಾರ್ಗ ತೋರಿರಿ ಗುಣವತಿಯೆಂದೆನಿಸಿರಮ್ಮ ಹಿರಿಯ ಜನರಲಿ ದುಡುಕಿನ ಹೆಣ್ಣೆಂದು ಹೆಸರು ಪಡೆಯಬೇಡಿರಿ ಸಿಡುಕಿನ ಮೋರೆಯನು ತೋರಬೇಡಿ ಜನರಿಗೆ 70 ಒಡಕಿನ ಬಾಯವಳು ಎಂದು ಎನಿಸಬೇಡಿರಿ ಕೆಡುಕ ಕೋರಬೇಡಿ ಕೋಪದಿಂದ ಪರರಿಗೆ ಧ್ವನಿಯು ಮಧುರವಿರಲಿ ನಿಮ್ಮ ಮಾತುಕಥೆಯಲಿ ಕೆಣಕಬೇಡಿ ಮರೆತುಬಿಟ್ಟ ಜಗಳ ಕದನವ ಇಣಕಿ ನೋಡಬೇಡಿ ಪರರ ನಡೆನುಡಿಗಳನು ಸಾರಥಿಯೆಂದೆನಿಸಿರಿ ಸಂಸಾರ ರಥದಲಿ ವೀರರಮಣಿಯೆಂಬ ದಿವ್ಯ ಕೀರುತಿ ಬರಲಿ ನಾರಿಯರಲಿ ಮಾದರಿಯನು ಪಡೆದು ತೋರಿದ ಭಾರತ ಭೂಮಾತೆಗೆ ಪ್ರತಿಬಿಂಬವೆನಿಸಿರಿ 80 ದೇಶಸೇವೆಯೆಂದು ರಾಜಕೀಯ ಬೇಡಿರಿ ಮೋಸ ಹೋಗಬೇಡಿ ಆಸೆ ತೋರುವ ನುಡಿಗೆ ಕಾಯ ಕ್ಲೇಶ ಬೇಡಿರಿ ಭಾಷಣ ಬಹಿರಂಗದಲ್ಲಿ ಭೂಷಣಲ್ಲವು ಸಿರಿರಮಣಗೆ ತುಳಸಿಗಿಂತ ಪುಷ್ಪವಿಲ್ಲವು ಹಿರಿಯತನಕೆ ಸತ್ಯಕ್ಕಿಂತ ಯುಕ್ತಿಯಿಲ್ಲವು ಅರಸಿ ನೋಡೆ ತಾಯಿಗಿಂತ ನಂಟರಿಲ್ಲವು ಕರಿಮಣಿ ಸಮ ನಾರಿಜನಕೆ ನಗಗಳಿಲ್ಲವು ದಾಸರ ನುಡಿ ಧರ್ಮಗಳ ಪ್ರಕಾಶ ಮಾಡಿತು ಸ್ತ್ರೀ ಸಮೂಹದಿಂದ ನಾಶವಾಗದುಳಿದವು 90 ಆ ಸುಧಾಮ ಸತಿಯರೆ ಈ ದೇಶದ ಸೊಬಗು ಮಾಸದಂತೆ ರಕ್ಷಿಸಿ ಪ್ರಾಚೀನ ನಡತೆಯ ನುಡಿಯಬೇಡಿರಮ್ಮ ಪರರ ವಂಚನೆನುಡಿಯ ಕೊಡಲಿ ಹಾಕಬೇಡಿರಮ್ಮ ಕುಳಿತ ಕೊಂಬೆಗೆ ಇಡಲಿಬೇಡಿ ಮತ್ಸರವನು ದೀರ್ಘ ಕಾಲದಿ ಪುಡಿಯನಿಡಲಿಬೇಡಿರಮ್ಮ ಪುಣ್ಯ ಕಾರ್ಯಕೆ ಸಣ್ಣನುಡಿಗಳೆಂದು ತಿಳಿಯಬೇಡಿರಿವುಗಳ ಭಿನ್ನ ಭಿನ್ನ ದೇಶಕಾಲದನುಭವಗಳಿದು ಬಣ್ಣವತಿಶಯೋಕ್ತಿಯಲ್ಲ ಅರಿತು ನೋಡಿರಿ ಘನ್ನ ಸುಗುಣಭರಿತ ಶ್ರೀ ಪ್ರಸನ್ನ ಸಲಹುವ 100
--------------
ವಿದ್ಯಾಪ್ರಸನ್ನತೀರ್ಥರು
ನಾಲ್ಕನೆಯ ಸಂಧಿ ಶಶಿಹಾಸ ಕಾಳಿಯನೊಲಿಸಿ ಪೊಸತಾಗಿ ತೋರಿತಾಶ್ಚರ್ಯ ಮಿಥ್ಯದ ವಿಷವನು ಉಣಿಸಿ ಕೃತ್ಯವೆ ಪಥ್ಯವಾದುದನು 1 ಕರುಣದ ಬಗೆಯ ತನುಜೆಯು ವಿಷಯು 2 ವಿಷಯೆ ಇದ್ದೆಡೆಗೆ ತಲೆಯ ತಗ್ಗುವಳು 3 ಪನ್ನಗಧರನ ಕೃಪೆಯಿಂದ ಸನ್ಮಾನವನೆ ಮಾಡಿದರು 4 ಜಾರಿದ ಕುರುಳನೋಸರಸಿ ಚಾರುಮಾಣಿಕಖಚಿತ ಪೀಠಕ್ಕೆ 5 ಹರಸಿ ಅಕ್ಷತೆಗಳನಿಟ್ಟು ಅರಸಿನಗಳ ತಿವರಿದರು 6 ಮಜ್ಜನ ತಂಬಿಗೆಯ ಲೋಕುಳಿಯ ಬೆನ್ನಲೋಕುಳಿಯನೆರೆದರು 7 ಮುಡಿಮೈಗಳನೋಸರಿಸಿ ದುಕೂಲವ ಬಡನಡುವಿಗೆ ಅಳವಡಿಸಿ ಜಡಿತದಾಭರಣಕರಡಿಗೆಯನು ತಂದಿಡುವರು ಇಕ್ಕೆಲದಲ್ಲಿ8 ಪಾಟಿಸಿ ತುರುಬನೋಸರಿಸಿ ಮಧ್ಯದಲಿ ಇಡುವರು 9 ಬೆಳಗುವ ಮೂಗುತಿಯ ಮಂದ ಗಮನೆಯರು ಹರುಷದಲಿ 10 ಮೂಗುತಿಯನಿಕ್ಕುವರು ಕೋಕಿಲಗಾನೆ ಕುಟಿಲಕುಂತಳದಾನೆ ಬಾಗಿದ ಬಾವುಲಿಗಳಲಿ11 ಇಟ್ಟರು ತೋಳ ಚಳರಕ್ಷೆ ಮಣಿಗಳ ಗಟ್ಟಿಕಂಕಣ ಚಳಕಗಳ ಬೆರಳ ಮುದ್ರಿಕೆಯು 12 ಕಡಗ ಮುತ್ತಿನ ಹತ್ತೆ ಕಡಗ ಎಡೆಪಣಿಚಿಂತಾಕದ ಸರಿಗೆಯ ತಂದಿಡುವರಂಗನಗೆ ನಾರಿಯರು 13 ಕಂಠೀಸರ ಬಿಲ್ಲಸರವು ಸರಸಿಜ ಗಂಧಿಯರೊಲಿದು 14 ಕಣಕಾಲುಗಳೆಸೆವ ಭಾವಕಿಯ ಸಾಲುಗಂಟೆ ಗೆಜ್ಜೆ ಸರಪಳಿ ಘಲಿರೆಂಬ ಕಾಲಂದಿಗೆಯನಿಡುವರು15 ಉಂಗುರ ಮುದ್ರಿಕೆಯಿಟ್ಟು ಮಂದಗಮನೆಗೆ ಒಪ್ಪಿದವು 16 ಸಾರಿಸಿ ಅಂಗಕ್ಕೆ ತಿಗುರಿ ಹಾವುಗೆಯನೆ ಮೆಟ್ಟಿಸಿದರು 17 ನಾರಿಯರೆಡಬಲದಲಿ ಕರವಿಡಿಯಲು ಚಾರುವದನೆ ಚಂಚಲಾಕ್ಷಿ ಬಂದೇರಿದಳೊಜ್ರದಂದಣವ 18 ಹೊತ್ತರು ಕಳಸ ಕನ್ನಡಿಯ ಹೊತ್ತಿದ ಕಾಳಂಜಿಯವರು 19 ಜಗಜಗ ಬೆಳಕುಗಳು ತುಂಬಿ ಜಗಜಗಿಸುವ ಜೊ‑ಂಪಿನ ಸುರೆಪಾನವು ನೆಗಪಿದವಗಣಿತವಾಗ20 ಉದುರು ಬಾಣ ಪುಷ್ಪಬಾಣ ಸದನದಿ ನಡೆತಂದಳಬಲೆ 21 ಹೊನ್ನಂದಣವನೆ ಇಳಿಸುವರು ಬಂದಳು ವಿವಾಹ ಮಂಟಪಕೆ 22 ಪಿಡಿದಳು ಮದನನರ್ಧಾಂಗಿ23 ಮುಕುಂದಗರ್ಪಿತವಾಗಲೆಂದು ಮಂದಾರಮಾಲೆ ಹಾಕಿದರು 24 ಪೊರೆಯಲಿ ತಂದು ನಿಲ್ಲಿಸಿದರು ಅರುಹಬೇಕೆಂದು ಕೇಳಿದರು 25 ಎನ್ನ ಪರಮ ಗುರುವೆಂದ 26 ಸಮಯವು ಲಗ್ನವೆಂದೆನುತ ಬ್ರಾಹ್ಮಣೋತ್ತಮರು ಹೇಳಿದರು 27 ಸಮಯವು ಲಗ್ನವೆಂದೆನುತ ಮೇಲೆ ಸೂಸಿದನು 28 ಶತಪತ್ರನಯನೆ ಸಮಗಾತ್ರೆ ಚಮತ್ಕಾರದಿಂದ ಸೂಸಿದಳು 29 ಸೊಡರುಗಳನೆ ಹಚ್ಚುವರು ಪಿಡಿದರು ಇತ್ತಂಡದಲ್ಲಿ 30 ಮುತ್ತೈದೆಯರೆಲ್ಲ ಅಲಂಕರದಿ ವಿಷಯೆ ಸಂಭ್ರಮದಿ 31 ಕೈಯಿಂದ ತೋರುವರು ಸುತ್ತ ನಕ್ಷತ್ರದ ಮಧ್ಯದಿ ಕಂಡಳು ಪ್ರತ್ಯಕ್ಷದಿಂದರುಂಧತಿಯ 32 ದಿನಕರ ಪ್ರತಿಬಿಂಬದಂತೆ ಅನುಕೂಲಗಳನೆ ಮಾಡಿದರು 33 ಮಾಡಿದನು ಶ್ರೀಪತಿಯ ಆಜ್ಯತಂಡುಲ ಆಪೋಶನೆ ಮಾಡಿದ ನಿರ್ಜರಪತಿ ಮೆಚ್ಚುವಂತೆ34 ಎಡೆಮಾಡಿ ಚಪ್ಪರದೊಳಗೆ ಭೋಜನಕೆ ಕುಳ್ಳಿರಿಸಿ 35 ಉಪ್ಪಿನೆÀಸರುಕಾಯಿ ಪರಿಪರಿ ಶಾಕವು ಹಪ್ಪಳ ಬಾಳಕಗಳನು ಅಪ್ಪಲು ಅತಿರಸ ಸೂಪಾಕ್ಷತಶಾಲ್ಯನ್ನ ಚಪ್ಪರದಲಿ ಬಡಿಸುವರು 36 ಕಾಮಿನಿಯರು ಕನಕದ ಹರಿವಾಣದಿ ಶಾವಿಗೆ ಪರಮಾನ್ನಘೃತವ ಭೂಮಕ್ಕೆ ಬಡಿಸಿದರಾಗ 37 ರಾಜೀವ ಮುಖಿ ತನ್ನ ಪತಿಗೆ ಮ- ಹಾಜನರೆಲ್ಲ ಉಂಡು ಕೈತೊಳೆದರು ಹೂಜಿಯಲ್ಲುದಕವ ಪಿಡಿದು38 ಸಂಭ್ರಮದಿಂದ ಸೂಸಿದರು39 ವಾಸುದೇವ ಕೃಷ್ಣ ಎನುತ ಮದನ ವಿಲಾಸದಿಂದಲಿ ನಿದ್ರೆಗೈದ 40
--------------
ಹೆಳವನಕಟ್ಟೆ ಗಿರಿಯಮ್ಮ
ನಿಂತು ಫುಗಡಿ ಹಾಕ ಭ್ರಾಂತತನವ್ಯಾಕ ಸಂತ ಜನನಿಯರು ನೋಡಿ ತಲೆಯ ದೂಗಬೇಕ ಪ ಆಶೆಯಲಿ ತಾನು ಕುಳಿತು ಹಾಕುದೇನು | ಘಾಸಿಯಾಗುವ ಆರುಮಂದಿಯಾ ಕೂಡಿದರೇ ನೀನು 1 ಗರುವ ತನ ಬಿಟ್ಟು ತಿರುಗಣೆಯಾ ನುಟ್ಟು | ಆರಹು ಶರಗಿನಿಂದ ಬಿಗಿದು ಹಾಕ ಮಲಕ ಗಂಟು 2 ಲಜ್ಜೆ ವಳಿದು ನೋಡೇ ಹರಿಯಸ್ತುತಿ ಮಾಡಿ | ಘಜ್ಜಿಗೆ ಬಂಡಮ್ಯಾಲ ಯಚ್ಚರ ಮೈಯ್ಯ ಮರೆಯಿಬ್ಯಾಡೇ 3 ಎರಡು ಸವೆ ನಿನೆಹಾ ಜ್ಞಾನ ಸಖೀ ಕೈಯ್ಯಾ | ಜರಿಯದಂತೆ ಹಿಡಿದು ತಿರುಗು ನಡವಿಧ ಪರಿಯಾ 4 ಫುಗಡಿ ಇದೇ ಆಡೀ ಪ್ರೇಮಭಾವ ಕೂಡೀ | ಮುಗುತಿ ಕೊಡುವ ತಂದೆ ಮಹಿಪತಿ ಸ್ವಾಮಿ ದಯಮಾಡಿ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು