ಒಟ್ಟು 1199 ಕಡೆಗಳಲ್ಲಿ , 100 ದಾಸರು , 964 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಆರಿಗಾರು ಇಲ್ಲವಯ್ಯ ಆರಿಗಾರು ಇಲ್ಲವಯ್ಯ ಪ ಮಡದಿಯೆಂಬಳು ಯಾಕೆಬಿಡದೆ ಪಂಕ್ತಿಯ ಊಟ ಎಂಬ ಭಾವ ಮೈದುನನೇಕೆಪಡದ ತಂದೆ ತಾಯಿ ಏಕೆ ಪಡಿತತ್ವ ಯಾಕೆಬಡಿಯುತ ಯಮನೀಗ ಒಯ್ಯೆ ಬಿಡಿಸಿಕೊಂಬರಿಲ್ಲ 1 ಅಣ್ಣತಮ್ಮನು ಯಾಕೆ ಅಳಿಯನು ಯಾಕೆಬಣ್ಣದ ಬಾಳು ತಾನೇಕೆ ಬಂಧುಗಳದೇಕೆಚಿನ್ನಕೊಪ್ಪರಿಗೆ ಯಾಕೆ ಚಿತ್ರಮನೆಯಾಕೆಕಣ್ಣ ಕಟ್ಟಿ ಕಾಲನೆಳೆಯ ಕಾವರಾರು ಇಲ್ಲವಯ್ಯ2 ಆರ ನಂಬಿದರು ನಿನ್ನಕಡೆ ಹಾಯಿಪರಿಲ್ಲನೂರು ಬಾರಿ ತಿಳಿದು ನೋಡು ನಿನ್ನೊಳಗೆಲ್ಲಧೀಧೀ ಚಿದಾನಂದ ಹೊಂದೆಯುಕ್ತಿಯಹುದೆಲ್ಲಬಾರೆ ಜನನ ಮರಣಕೆ ಸಂದೇಹವಿಲ್ಲ 3
--------------
ಚಿದಾನಂದ ಅವಧೂತರು
ಆರೂ ಸಂಗಡ ಬಾಹೋರಿಲ್ಲ ಪ ನಾರಾಯಣ ನಾಮ ನೆರೆ ಬಾಹೋದಲ್ಲದೆ ಅ ಪರಿಯಂತ ಗರ್ಭದಲಿಹೆತ್ತು ಅತ್ಯಂತ ನೋವು ಬೇನೆಗಳಿಂದಲಿತುತ್ತು ವಸ್ತ್ರವನಿಕ್ಕಿ ಸಲಹಿದಾ ತಾಯ್ತಂದೆಹೊತ್ತುಗಳೆವರಲ್ಲದೆ ಬೆನ್‍ಹತ್ತಿ ಬಹರೆ 1 ಹರಣ ದಾರು ಗತಿಯೆಂದಳುವಳು2 ಮನೆ ಮಕ್ಕಳು ತಮ್ಮ ಧನಕೆ ಬಡಿದಾಡುವರುಧನಕಾಗಿ ನಿನ್ನನೆ ನಂಬಿದವರುಅನುಮಾನವೇಕೆ ಜೀವನು ತೊಲಗಿದಾಕ್ಷಣದಿಇನ್ನೊಂದು ಅರಗಳಿಗೆ ನಿಲ್ಲಗೊಡರು 3 ಸುತ್ತಲು ಕುಳ್ಳಿರ್ದ ಮಿತ್ರ ಬಾಂಧವರೆಲ್ಲಹೊತ್ತು ಹೋದೀತು ಹೊರಗೆ ಹಾಕೆನುವರುಹಿತ್ತಲಾ ಕಸಕಿಂತ ಅತ್ತತ್ತ ಈ ದೇಹಹೊತ್ತುಕೊಂಡೊಯ್ದು ಅಗ್ನಿಯಲಿ ಬಿಸುಡುವರು 4 ಹರಣ ಹಿಂಗದ ಮುನ್ನು ಹರಿಯ ಸೇವೆಯ ಮಾಡಿಪರಗತಿಗೆ ಸಾಧನವ ಮಾಡಿಕೊಳ್ಳೊಕರುಣನಿಧಿ ಕಾಗಿನೆಲೆಯಾದಿಕೇಶವರಾಯನನಿರುತದಲಿ ನೆನೆನೆನೆದು ಸುಖಿಯಾಗೊ ಮನುಜ5 * ಈ ಕೀರ್ತನೆ ಪುರಂದರಾಸರ ಅಂಕಿತದಲ್ಲೂ ಇದೆ.
--------------
ಕನಕದಾಸ
ಆರೇನು ಮಾಡುವರು ಅವನಿಯೊಳಗೆ | ಕರ್ಮ ಫಣಿಯಲ್ಲಿ ಬರೆದುದಕೆ ಪ ಮಾಡಿದಡಿಗಿಯು ಕೆಡಲು ಮನಿಯ ಗಂಡನು ಬಿಡಲು | ಸತಿ ತನ್ನ ಕುಣಿಸ್ಯಾಡಲು ನಿಜದಿ || ಗೋಡೆಗೆ ಬರೆದ ಹುಲಿ ಘಡಘಡನೆ ತಿನಬರಲು | ಆಡಿದ ಮತುಗಳು ಅಖಿಳಿರು ನಿಜವೆನಲು 1 ಹೊಲ ಬೇಲಿ ಮೆಯ್ದರೆ ಮೊಲ ಇರಿಯ ಬಂದರೆ | ತಲೆಗೆ ತನ್ನ ಕೈ ಪೆಟ್ಟು ತಾಕಿದರೆ || ಹೆರಳು ಹಾವಾದರೆ ಗೆಳೆಯ ರಿಪುವಾದರೆ | ಕಲಿಸಿದ ಅವಲಕ್ಕಿ ಕಲಪರಟಿ ನುಂಗಿದರೆ 2 ಹೆತ್ತ ತಾಯಿ ಹಿಡಿದು ಮಕ್ಕಳಿಗೆ ವಿಷ ಹಾಕಿದರೆ | ಪೆತ್ತ ತಂದೆಯು ಹೊರಗೆ ಮಾಡಿದರೆ || ತೊತ್ತು ಅರಸಿಗೆ ಪ್ರತ್ಯುತ್ತರವನಾಡಿದರೆ | ಕತ್ತಲೆ ಬೆನ್ನಟ್ಟಿ ಕರಡ್ಯಾಗಿ ಬಂದರೆ 3 ಕಣ್ಣವೊಳಗಿನ ಗೊಂಬಿ ಕಾದ ಬಂದರೆ | ಹೆಣ್ಣಿನ ಹರಟೆ ಹೆಚ್ಚಾದರೆ | ಅನ್ನವನು ಉಣ್ಣಲು ಅಜೀರ್ಣವಾದರೆ | ಪುಣ್ಯಕ್ಷೇತ್ರಗಳಲ್ಲಿ ಪಾಪ ಅಟ್ಟಿಸಿದರೆ 4 ಏರಿ ಕುಳಿತ ಕುಂಬಿ ಎರಡಾಗಿ ಮುರಿದರೆ | ವಾರಿಧಿಗಳು ಮೇರೆ ಮೀರಿದರೆ || ಆರಿದ ಇದ್ದಲಿಗಳು ಅಗ್ನಿಯಾದರೆ | ನಮ್ಮ ವಿಜಯವಿಠ್ಠಲನಿರುವ ತನಕ 5
--------------
ವಿಜಯದಾಸ
ಆರೋಗಣೆ ಮಾಡಮ್ಮ ಮಂಗಳಗೌರಿ ಬೇಡಿಕೊಂಬೆನೆ ನಿನಗೆ ಬೇಡಿದಡಿಗೆ ಎಡೆ ಮಾಡಿ ತಂದಿಟ್ಟಿಹೆ ಜೋಡಿಸಿ ನಿನಗೆ ಕೈ ಮುಗಿವೆನೆ ಮಹಾತಾಯೆ ಪ ನಂದಿವಾಹನನರ್ಧಾಂಗಿಯ ಪೂಜಿಸಿ ಗಂಧಕುಂಕುಮದಿಂದ ತಂದು ಕಸ್ತೂರಿ ಕಮಲದ ಪುಷ್ಪಗಳುಡಿ ತುಂಬಿ ನೈವೇದ್ಯವ ತಂದಿರಿಸುವೆ ತಾಯೆ 1 ಅಚ್ಚ ಮುತ್ತಿನ ಹರಿವಾಣದಿ ಮಾಲತಿ ಬಟ್ಟ್ಟಿವಿ ಗೌಲಿಗಳು ಅಷ್ಟಗುಳ್ಳವು ಶಾವಿಗೆ ಪರಡಿ ಪಾಯಸ ಭಕ್ಷ ಎಣ್ಣೋರಿಗೆ ಭಾರಿಬಟ್ಟಲು ತುಪ್ಪ 2 ಮಂಡಿಗೆ ಚೂರ್ಮವು ಬುಂದ್ಯ ಬೀಸೋರಿಗೆ ದುಂಡುಗುಳ್ಳೋರಿಗೆಯು ಚೆಂದವಾಗಿದ್ದ ಚಕ್ಕುಲಿ ಕರ್ಜಿಕಾಯ್ಗಳು ಅಂದವಾದ ಕಾಯಿರಸ ಶಾಖ ಪಾಕವು 3 ಸಣ್ಣ ಅಕ್ಕಿಯ ಶಾಲ್ಯಾನ್ನಕೊಪ್ಪುವ ತವ್ವೆ ಇನ್ನು ದಧ್ಯನ್ನಗಳು ಸನ್ಮತವಾಗಿದ್ದ ಶಾವಿಗೆಫೇಣಿ ಸಕ್ಕರೆ ರುಬ್ಬಿದ ಆಂಬೊಡೆ ರುಚಿಯಾದ ಕಲಸನ್ನ 4 ಘೃತ ಸೀಕರ್ಣೆ ಕಾಯ್ಹಾಲು ಹೊಯ್ಗಡುವನಿಟ್ಟು ಸಾರು ಸಾಂಬಾರ ಚಟ್ಟಣಿ ಕೋಸಂಬರಿ ನೀರೆ ನಿನಗೆ ಪನ್ನೀರು ತಂದಿರಿಸುವೆ 5 ದೇವಿ ನಿನ್ನ ಮನೋಭಾವ ತಿಳಿದು ನಾ ಭೀಮೇಶಕೃಷ್ಣನಿಗೆ ಬ್ಯಾಗ ಸಮರ್ಪಣೆ ಮಾಡಲು ಮಹಾದೇವ ಸ್ವಾದ ಸವಿದಾಸುಖದಿಂದಡ್ವಿಳ್ಯವ ಕೊಳ್ಳೆ 6
--------------
ಹರಪನಹಳ್ಳಿಭೀಮವ್ವ
ಆವ ನ್ಯಾಯವೋ ಭಾವಜರಿಪುವಿನುತ ನಿಂದು ದಾವ ನ್ಯಾಯವೊ ಪ ಆವ ನ್ಯಾಯವೋ ದೇವ ದೇವ ಮಾವಕಂಸಜೀವಘಾತಕ ಅ.ಪ ಕಪ್ಪು ವರ್ಣನು ಭಕ್ತಜನರ ಲ್ಲಿರ್ಪೆ ಸದಾ ನೀನು ನಿ ನ್ನ ಪಾದದಿ ತಪ್ಪು ಎಲ್ಲನು ಒಪ್ಪಿಬಂದಿಹ್ಯ ಭಕ್ತಜನರ ತಪ್ಪು ಒಪ್ಪಿ ಕ್ಷಮಿಸಿ ದಯದಿ ದುರಿತ ನಿವೃತ್ತಿಗೈದು ಅಪ್ಪಿಕೊಂಡು ಸಲಹದಿರುವಿ 1 ತಂದೆ ತಾಯಿ ನೀನು ಎಂದು ನಂಬಿ ಬಂದು ಬಿದ್ದೆನು ನಿನ್ನ ಪಾದಕೆ ಮಂದಭಾಗ್ಯನು ನೊಂದು ಬೆಂದು ಸಂಸಾರವೆಂಬ ಸಿಂಧುವಿನೊಳು ತಾಪಬಡುತ ಬಂದು ಮೊರೆಯಬಿದ್ದ ಕಂದನ ಮಂದರಮಂದಿರ ಸಲಹದಿರುವಿ 2 ನಿನ್ನನರಿಯದ ಅಜಮಿಳನು ಬಿನುಗನೆನಿಸಿದ ಪಾಪಗೈದವ ಗಣನೆಯಿಲ್ಲದ ಕನಿಕರದಿಂದ ವನಿಗೊಲಿದು ಘನಪದವನಿತ್ತು ಪೊರೆದೆ ಚಿನುಮಯಾತ್ಮ ಸಿರಿಯರಾಮ 3
--------------
ರಾಮದಾಸರು
ಆವಳಿಗೆ ಪೆಣ್ಣೆಂದು ನುಡಿಯುವರೊ ನರರು ಅವಳೆ ಮುರಿದುತಿನ್ವ ರಕ್ಕಸ್ಯೆಂದೆನ್ನಿರೊ ಪ ಮುದ್ದು ಮುಖವನೆ ತೋರಿ ಬುದ್ಧಿನಾಶನ ಗೈದು ಶುದ್ಧಪದ್ಧತಿ ಕೆಡಿಸಿ ಇದ್ದಾಸ್ತಿಯಳಿದು ಬದ್ಧನೆನಿಸಿ ಮುಂದೆ ಬೇಡಿದ್ದು ಕೊಡದಿರೆ ಬಿಡದೆ ಒದ್ದು ನೂಕ್ವದರಿಯದೆ ಶುದ್ಧ ಮೂರ್ಖರಾಗಿ1 ತಂದೆ ತಾಯಿನಗಲಿಸಿ ಬಂಧುಬಳಗ ದೂರೆನಿಸಿ ಮಂದಿ ಮಕ್ಕಳೊಂದುಗಳಿಗೆ ಹೊಂದಿಇರಗೊಡದೆ ತಂದದ್ದೆಲ್ಲ ತಿಂದು ನಿಂದೆಯಾಡುತ ಯಮನ ಬಂಧಕ್ಕಟ್ಟುವುದರಿಯದೆ ಮಂದಮತಿಗಳಾಗಿ 2 ತನುಮನಧನ ಸೆಳೆದು ಘನತೆನಾಶಿಸಿ ಮುಂದೆ ಬಿನುಗರಲಿ ಬಿನುಗೆನಿಸಿ ತಿನುವುದೊಂದಿನದಿ ಮನದರಿತು ನೋಡದಿರು ಘನಮುಕ್ತಿಯನ್ನು ಕೊಡುವ ವನಜಾಕ್ಷ ಶ್ರೀರಾಮನಂ ಘನನೆಂದರಿಯದಲೆ 3
--------------
ರಾಮದಾಸರು
ಇಂದಿರಾ ಪಾಲಿಸು ಎನ್ನ ಇಂದಿರಾ ಪ ಇಂದಿರಾ ದೇವಿಯೆ ನಿನ್ನ | ಪಾದಪೊಂದಿದೆ ಸಲಹಬೇಕೆನ್ನಾ | ಆಹಕಂದರ್ಪ ಇಂದ್ರ ಫಣೀಂದ್ರ ಗರುಡ ಕಂದುಕಂಧರ ಬ್ರಹ್ಮಾದಿ ವಂದ್ಯಳೆ ಪಾಲಿಸು ಅ.ಪ. ಕೃತಿ ಶಾಂತಿ | ದುರ್ಗೆಭೂಮಿ ಶ್ರೀದೇವಿ ಜಯಂತಿ | ಲಕ್ಷ್ಮೀರಮೆ ದಕ್ಷಿಣೆ ಗುಣವಂತಿ | ಸತ್ಯಭಾಮೆ ರುಕ್ಮಿಣಿ ಮಹಾಕಾಂತಿ | ಆಹಈ ಮಹಾನಂತ ರೂಪ ನಾಮಗಳುಳ್ಳಕೋಮಲ ಗಾತ್ರಿಯೆ ಕಾಮಜನನಿ ಕಾಯೆ 1 ಶ್ರೀಭಾಗ ಮಹಾ ಪ್ರಳಯದಲ್ಲಿ | ಪದ್ಮನಾಭಾಗೆ ಬಹು ಭಕ್ತಿಯಲ್ಲಿ | ದಿವ್ಯಆಭರಣಗಳಾಕಾರದಲ್ಲಿ | ಮಿಕ್ಕವೈಭವನೇಕ ರೂಪಾದಲ್ಲಿ | ಆಹಸ್ವಾಭಿಮಾನದಿ ಬಹು ಶೋಭನ ಪೂಜೆಯಲಾಭಗಳೈದಿದ ಶೋಭನವಂತಳೆ 2 ದೇಶಕಾಲಾದಿಗಳಲ್ಲಿ | ಜೀವರಾಶಿ ವೇದಾಕ್ಷರದಲ್ಲಿ | ಇದ್ದುವಾಸುದೇವನ ಬಳಿಯಲ್ಲಿ | ಸರಿಸೂಸಿ ವ್ಯಾಪ್ತಿ ಸಮದಲ್ಲಿ | ಆಹಲೇಸಾಗಿ ಒಪ್ಪುತ್ತ ಈಶ ಕೋಟಿಯೊಳುವಾಸಾಳೆ ಎನ್ನಭಿಲಾಷೆ ಸಲ್ಲಿಸಬೇಕು3 ಭವ ಬಂಧಾ | ಆಹನೀನೆ ಕಳೆದು ದಿವ್ಯ ಜ್ಞಾನ ಭಕುತಿಯಿತ್ತುಪ್ರಾಣಪತಿಯ ಪಾದವನ್ನು ತೋರಿಸಬೇಕು 4 ನಿತ್ಯ ಭಾಗ್ಯವು ನಿನಗೊಂದೆ | ಅಲ್ಲರತ್ನಾಕರನು ನಿನ ತಂದೆ | ತಾಯಿರತ್ನಗರ್ಭಳು ಕೇಳು ಮುಂದೆ | ಪತಿಗತ್ಯಂತ ಪ್ರಿಯಳಾದೆ ಅಂದೆ | ಆಹಸತ್ಯಬೋಧರು ಮಾಳ್ಪ ಅತ್ಯಂತ ಪೂಜೆಯಿಂಯುಕ್ತೆ ಶಿರಿಯೆ ನಿನಗೆತ್ತ ಕತ್ತಲು ಕಾಣೆ 5 ಲೋಕ ಜನನಿಯು ಎಂದು ನಿನ್ನಾ | ಕೀರ್ತಿಸಾಕಲ್ಯವಾಗಿದೆ ಘನ್ನಾ | ಎನ್ನಸಾಕಲಾರದೆ ಬಿಡಲಿನ್ನಾ | ಮುಂದೆಯಾಕೆ ಭಜಿಸುವುದು ನಿನ್ನಾ | ಆಹಸಾಕಾರವಾಗಿನ್ನು ಬೇಕಾದ ವರಗಳನೀ ಕರುಣಿಸಿ ಎನ್ನ ಜೋಕೆ ಮಾಡಲಿ ಬೇಕು 6 ಆವ ಜನ್ಮದ ಪುಣ್ಯಫಲದಿ | ನಿನ್ನಸೇವೆ ದೊರಕಿತೊ ಈ ಕ್ಷಣದಿ | ಎನಗೀವ ಭವ್ಯ ಕೇಳು ಮನದಿ | ಆಹಶ್ರೀ ವ್ಯಾಸ ವಿಠಲನ್ನ ಸೇವಿಪ ಯತಿಗಳ ಸಹವಾಸವನೆ ಇತ್ತು ಭಾವ ಶುದ್ಧನ ಮಾಡು 7
--------------
ವ್ಯಾಸವಿಠ್ಠಲರು
ಇಂದಿರಾರಮಣನ ಮಂದಿರದಲ್ಲೆ ನಾ- ರಂದ ತಾ ಬರುತಿರಲು ಕಂಡು ಕೃಷ್ಣನು ಕರೆತಂದು ಮನ್ನಿಸಿ ಬಂದಕಾರಣವೇನೆಂದನು 1 ಕಾರಣವೇನುಂಟು ಕಾರಣಪುರುಷನ ಕಾಣಬೇಕೆಂದೆನುತ ಕಾಮಿಸಿಬಂದೆನೊ ಕೊರಳ ತುಳಸಿ ಮಾಲೆ ನೀಡೊ ನೀ ಎನಗೆಂದನು2 ಏನು ಬೇಡಿದರು ನಾ ಕÉೂಡುವೆನು ನಾರಂದ ಪ್ರಾಣಪದಕ ತುಳಸಿ ನೀಡಲಾರೆನೊ ಮುತ್ತಿನ್ಹಾರವ ಕೊಡುವೆ- ನೆಂದು ಹೇಳುತಿದ್ದನು ಹರಿಯು 3 ನೀಡದಿದ್ದರೆ ನಾನು ಬೇಡಿ ಬಿಡುವನಲ್ಲ ನೋಡಿಕೋಯೆಂದೆನುತ ಆಡಿದ ಮಾತು ತಪ್ಪುವರುಂಟೆ ಶ್ರೀಕೃಷ್ಣ ಹೋಗಿಬರುವೆನೆಂದನು 4 ಸತ್ಯಭಾಮೆಯ ಮನೆ ಹೊಕ್ಕನು ನಾರಂದ ಹೆತ್ತಮ್ಮ ಕೇಳೆನುತ ಸುತ್ತಿಬಂದೆನು ಸುರಲೋಕದ ವಾರ್ತೆಯ ವಿಸ್ತರಿಸ್ಹೇಳುವೆನು 5 ಇಂದ್ರಲೋಕದಲಿ ದೇವೇಂದ್ರ ಶಚಿಯ ಕೂಡ್ಯಾ ನಂದದಿ ಕುಳಿತಿದ್ದನೆ ಅ- ಲ್ಲಿಂದ ಕೈಲಾಸ ಮಾರುದ್ರ ಪಾರ್ವತಿದೇವಿ ಚೆಂದವನ್ವರಣಿಸಲೆ 6 ಸತ್ಯಲೋಕದಿ ಸರಸ್ವತಿ ಕೂಡಿ ಬ್ರಹ್ಮ ಭಾ ಳುತ್ಸವದಿಂದಿದ್ದನೆ ಹಸ್ತಿನಾವತಿಯ ಪಾಂಡವರು ದ್ರೌಪದಿದೇವಿ ಅರ್ಥಿಯ ನೋಡಿ ಬಂದೆ 7 ದ್ವಾರಾವತಿಗೆ ಬಂದೆ ದೇವಿ ನಿಮ್ಮರಸನು ನಾರಿ ರುಕ್ಮಿಣಿ ಸಹಿತ ಭಾಳ ಸಂಭ್ರಮದಿಂದ ಕುಳಿತಿದ್ದ ಕಣ್ಹಬ್ಬವಾಗಿ ನಾ ಬಂದೆನಿಲ್ಲೆ 8 ಕರೆದು ರುಕ್ಮಿಣಿ ಕರದಿಂದೆ ಆಲಂಗಿಸಿ ತೊಡೆಯಮ್ಯಾಲಿಟ್ಟಿದ್ದನೆ ಅರಳುಮಲ್ಲಿಗೆ ತುರುವಿ(ಬೀ) ನಲ್ಲಿಟ್ಟು ನಿನಗಿನ್ನು ಸರಿಯಿಲ್ಲವೆಂತೆಂಬನೆ 9 ಹಾರಪದಕ ಇಬ್ಬರಿಟ್ಟಾಭರಣ ಬ್ಯಾರೆ ಬ್ಯಾರಾಗಿ ತೋರವಲ್ಲೆ ಸೂರ್ಯಚಂದ್ರರು ಕೂಡಿದಂಥ ಮುಖವು ನೋಡಿ ನಾ ಬೆರಗಾಗಿದ್ದೆನೆ 10 ಸತ್ಯಭಾಮೆಯೆ ನಿನ್ನ ಹೆತ್ತ ತಾಯಿತಂದೆ ಮಿರ್ತಾಗಿದ್ದರೆ ನಿನಗೆ ಕೊಟ್ಟರೀ ಕಪಟನಾಟಕ ದಯಹೀನಗಿ- ನ್ನೆಷ್ಟು ನಾ ಸೈರಿಸಲೆ 11 ಒಂದೊಂದು ಗುಣಗಳ ವರಣಿಸಲಿಕ್ಕೆ ಹ ನ್ನೊಂದೊ (ದ್ವ?) ರುಷವು ಸಾಲದೆ ಕಂಡು ಬಂದ್ವಾರ್ತೆಯ ಖರೆಯ ನಾ ಹೇಳುವೆ ಸಂದೇಹ ಮಾಡದಿರೆ 12 ಕೇಳಿ ಸತ್ಯಭಾಮೆ ತಾಳಲಾರದೆ ಮುನಿ ಪಾದದ ಮ್ಯಾಲೆ ಬಿದ್ದು ಹೇಳಿ ಉಪಾಯ ಮುಂದಕೆ ಪೋಗೊ ಶ್ರೀ- ಕೃಷ್ಣ ತಾನೊಲಿದಿರುವಂದದಿ13 ದಾನವಾಂತಕÀನ ನೀ ದಾನವÀ ಮಾಡಲು ದಾವಜನ್ಮಕÀು ನಿನ್ನನು ತಾನಗಲದೆ ಮುಂದೆ ಸೇರಿಕೊಂಡಿರುವೊ ಉಪಾಯ ಹೇಳುವೆನೆಂದನು 14 ರಂಗರಾಯನ ಕರೆತಂದುಕೊಟ್ಟವರಿಗೆ ಹಿಂಗದೆ ಸೌಭಾಗ್ಯವ ಎಂದೆಂದಿಗವರ ರಕ್ಷಿಸುವೋನೆಂದೆನುತಲಿ ಅಂಗನೆಯರನಟ್ಟಿದಳು 15 ದೂತೇರ ಸಹಿತಾಗಿ ಬಂದು ತಾ ಭರದಿಂದೆ ಪ್ರೀತಿಲೆ ಸತ್ಯಭಾಮ ಮಾತುಳಾಂತಕ ನಮ್ಮ ಮನೆಗೆ ಬಾರೆನುತ ಶ್ರೀ- ನಾಥನೆಯೇಳೆಂದಳು16 ಮಡದಿ ರುಕ್ಮಿಣಿ ಭಾಮೆ ಮಂದಿರಕ್ಕೊ ್ಹೀಗುವೆ ಕಡುಕೋಪ ಮಾಡದಿರೆ ತಡೆಯದೆ ನಾಳೆ ಬರುವೆನೆಂದು ಶ್ರೀಕೃಷ್ಣ ಗ- ರುಡನ ಹೆಗಲೇರಿದ 17 ವಾರಕಾಂತೆಯರು ಬಾಜಾರ ಮಧ್ಯದಿ ಸೋಳಸಾವಿರ ಸತಿಯರನೆ ವಾರೆನೋಟದಿ ನೋಡಿ ನಗುತ ಸತ್ಯಭಾಮೆ ಬಾಗಿಲ ಮುಂದಿಳಿದ 18 ಎದುರಿಗೆ ನಿಂತು ತಾ ಚೆದುರೆ ಸತ್ಯಭಾಮೆ ಪದುಮ ಪಾದಕೆ ಎರಗಿ ಮುದದಿಂದ ಮುದ್ದು ಶ್ರೀಕೃಷ್ಣನ ಮುಂಗೈಯ್ಯ ಪಿಡಿದು ತಾ ನಡೆದಳಾಗ 19 ಕೃಷ್ಣರಾಯನೆ ನಿನ್ನ ಕೊಟ್ಟೇನು ದಾ ನವ ಬಿಟ್ಟೆನ್ನ ಅಗಲದಂತೆ ಸತ್ಯಭಾಮೆಯ ನೋಡಿ ನಗುತ ಈ ಕಾರ್ಯ ಅ- ಗತ್ಯಮಾಡೆಂದೆನುತ 20 ಎರೆದು ಪೀತಾಂಬರವುಡಿಸಿ ಮಾಣ Âಕ್ಯದ ಆ- ಭರಣವ ತಂದಿಟ್ಟಳು ತರಿಸಿ ತಾಂಬೂಲ ದಕ್ಷಿಣೆಯನ್ನು ಬ್ರಾಂಬರ ಕÀರೆಸಿದಳಾಕ್ಷಣದಿ 21 ಆಚಾರ್ಯ ನೀವ್ ಬನ್ನಿ ವಾಸುದೇವನ ದಾನ ಈ ಕ್ಷಣದಲ್ಲೆ ಕೊಡುವೆ ನಾಶರಹಿತ ನಮ್ಮ ಮನೆಯೊಳಗಿರಲಿಕ್ಕೆ ಗ್ರಾಚಾರವೇನೆಂದರು 22 ವಿದ್ಯಾರ್ಥಿಗಳು ಬನ್ನಿ ಮುದ್ದು ಶ್ರೀಕೃಷ್ಣನ ವಿಧ್ಯುಕ್ತದಲಿ ಕೊಡುವೆ ಮೂರ್ಜಗದೊಡೆಯ ತಾ ಮಂದಭಾಗ್ಯರ ಮನೇಲಿದ್ದಾನ್ಯಾತಕೆ ಎಂದಾರೆ 23 ಭಟ್ಟರೆ ನೀವ್ ಬನ್ನಿ ಸೃಷ್ಟಿಪತಿಯ ದಾನ ಕೊಟ್ಟು ಬಿಡುವೆನೆಂದಳು ಅಷ್ಟದರಿದ್ರರಿಗಾಲಕ್ಷ್ಮೀವಲ್ಲಭ ದಕ್ಕುವೋನಲ್ಲೆಂದರು 24 ಯತಿಗಳೆ ನೀವ್ ಬನ್ನಿ ಪೃಥಿವಿಗೊಡೆಯ (ನನು) ಹಿತದಿ ದಾನವ ಕೊಡುವೆ ಗತಿಯಿಲ್ಲ ನಮಗೆ ಶ್ರೀಪತಿ ಸಲಹÀಲು ನಿನ್ನ ಪತಿ ಬ್ಯಾಡ ನಮಗೆಂದರು&
--------------
ಹರಪನಹಳ್ಳಿಭೀಮವ್ವ
ಇಂದಿರೆ ಪ ಸಿಂಧು ಸಂಭೂತೆ | ಪೂರ್ಣ ಚಂದಿರ ಮುಖಿ ಸುಖದಾತೆ ಅ.ಪ ಇಂದೀವರಾಕ್ಷಿಯೆ | ಪೊಂದಿ ತ್ವತ್ವಾದಕೆ ವಂದಿಪೆ ಮನ್ಮನ ಮಂದಿರದೊಳು ಬಾರೆ || ಕೃತಿ ಶಾಂತಿ ಜಯಮಾಯೆ ಸೀತೆ ದೇವಿ ಪತಿತಪಾವನೆ ಕ್ಷಿತಿಜಾತೆ | ವಿಧಿ ಶಿತ ಕಂಧರಾದಿ ನಮಿತೆ | ಮಹ | ಪತಿವ್ರತೆ ಪರಮವಿಖ್ಯಾತೆ ಆಹಾ ಶೃತಿವಿನುತಳೆ ಸದಾ | ನುತಿಸಿ ಬೇಡಿ ಕೊಂಬೆ ಅತಿಹಿತದಲಿ ತವ ಪತಿಯ ಪಾದವ ತೋರೋ 1 ಹರಿಣಲೋಚನೆ | ಶ್ರೀರುಕ್ಮಿಣೀ | ಮದ ಕರಿ ಮಂದಗಮನೆ ಕಲ್ಯಾಣಿ ದ್ವಿಜ ಪರಿವಾರ ಸಂಸ್ತುತೆ ಜಾಣೆ | ಚಾರು ಚರಿತೆ ಚಂಚರೀಕ ಸುವೇಣಿ || ಆಹಾ || ಸಿರಿ ಸತ್ಯಭಾಮೆಯ | ಮರೆಯದೆ ಎನ್ನಯ ದುರಿತ ವಿಚ್ಛೇದಿಸಿ | ಹರಿಸ್ಮರಣೆ ನೀಡೆ 2 ಕಂಬು ಕಂಧರೆ ಕಾಮನ ತಾಯೆ ಅರ ಭವ ಚಂದನ ಗಂಧಿಯೆ | ನಂದ ನಂದನ ಶಾಮ ಸುಂದರವಿಠಲನ್ನ ಸಂದರುಶನವೀಯೆ 3
--------------
ಶಾಮಸುಂದರ ವಿಠಲ
ಇಂದಿರೆ ಚಂದಿರವದನೆ ಮಂದಗಮನೆ ಕಂದರ್ಪ ಕೋಟಿ ಲಾವಣ್ಯೆ ಪ ಮಂದನಾಗಿ ಭವಸಿಂಧುವಿಲಿ ಪೊಂದಿದೆ ಬಂದು ನೀ ಕರಪಿಡಿದು ಮುಂದಕೆ ಕರೆಯೆ ಅ.ಪ. ನಾಗವೇಣಿಯೆ ಸುರಶ್ರೇಣಿ ಅಗಣಿತಗುಣಮಣಿಯ ಹೊಗಳುವ ಮತಿ ನೀಡೆ ಕಲ್ಯಾಣಿ ಹಗಲಿರುಳು ನಡೆಯುವ ಬಗೆ ಬಗೆ ಕ್ರಿಯೆಗಳು ನಗಧರನೆ ಮಾಳ್ಪಾನೆಂಬ ಮಿಗೆ ಜ್ಞಾನ ಪಾಲಿಸೆ 1 ಸರಸಿಜೋದ್ಭವ ಮಾತೆ ವಿಖ್ಯಾತೆ ನಿಕರ ಸನ್ನುತೆ ಕಂಕಣಾಭರಣ ಭೂಷಿತೆ ಕರೆ ಕರೆಗೊಳಿಸುವ ಅಹಂ ಮಮತೆ ಶರಧಿಯು ತೆರೆಯಂತೆ ಬರುವುದು ಮರೆಸಿ ನೀ ಪೊರೆಯೆ 2 ಹರಿಗುಣ ಮಣಿಯೆಣಿಸುವ ಧೀರೆ ಪರಿಪರಿ ಅಲಂಕಾರೆ ಸ್ಮರಿಸದವರಿಗೆ ದೂರೆ ಅರಿದೂರ ವಿಜಯ ರಾಮಚಂದಿರವಿಠಲನ ನಿರುತ ಧೇನಿಸುವಂತೆ ಮರೆಯದೆ ಮಾಡೆ ತಾಯೆ 3
--------------
ವಿಜಯ ರಾಮಚಂದ್ರವಿಠಲ
ಇಂದು ಎನ್ನ ಜನುಮ ಸಾಫಲ್ಯವಾಯಿತು | ಬಂದು ಎನ್ನ ಮೊದಲೆ ಪುಣ್ಯ ಕೈಗೂಡಿತು ಧ್ರುವ ಭಾನುಕೋಟಿ ತೇಜವಾಗಿ ರೂಪದೋರಿತು ತಾನೆ ತನ್ನಿಂದೊಲಿದು ದಯವು ಬೀರಿತು ಜ್ಞಾನ ಭಕುತಿ ವೈರಾಗ್ಯವನ್ನು ಅರುಹಿತು ನಾನು ನೀನು ಎಂಬ ಅಹಂಭಾವ ಹರಿಯಿತು 1 ಎಂದು ಇಂದಿರೇಶನ ಕಾಣದ ಕಣ್ಣದೆರೆಯಿತು ಬಂದು ಬೀಳುವ ಭವಪಾಶದ ಬಲಿಯು ಹರಿಯಿತು ಚಂದವಾಗಿ ಸದ್ಗುರು ಕರುಣ ಮಳೆಯು ಗರೆಯಿತು ಹೊಂದಿ ಹರುಷ ಪಡುವಾನಂದ ಪಥವು ದೋರಿತು 2 ಕಣ್ಣು ಕಂಡು ಪಾವನವಾಯಿತು ವಾಸುದೇವನ ಎನ್ನ ಮನಸಿನಂತಾಯಿತು ಪುಣ್ಯಸಾಧನೆ ಧನ್ಯಗೈಸಿತು ಮಹಿಪತಿ ಪ್ರಾಣಜೀವನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ಕಂಡೆ ನಾ ಇಂದಿರಾಪತಿ ತಂದೆ ತಾಯಿ ಗೋವಿಂದನ ಬಂಧು ಬಳಗೆನಗೆಂದು ನಾ ನಂದ ಕಂದ ಮುಕುಂದನ 1 ಕಾಮಪೂರಿತ ಕಂಜಲೋಚನ ಸ್ವಾಮಿ ಕಾವನೈಯನ ಸಾಮಗಾಯನ ಪ್ರಿಯನ ಸೋಮಶೇಖರ ಧ್ಯೇಯನ 2 ಸಾನುಕೂಲ ಸಕಲಕ ಸಾಧನ ಭಾನುಕೋಟಿ ಪ್ರಕಾಶನ ಜ್ಞಾನಗಮ್ಯ ವಿನಾಶನ ದೀನ ಮಹಿಪತಿ ಈಶನ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ನಮ್ಮ ಸಲಹಯ್ಯಾ ಸಿರಿರಮಣಾ| ದುರಿತ ನಿವಾರಿಸು ಪೂರ್ಣ| ಮಂದಮತಿಗಳಾ ನೋಡದೆವೆ ನ್ಯೂನಾ| ಛಂದದಿಂದ ಕೊಡು ನಿನ್ನ ಚರಣ ಧ್ಯಾನಾ ಪ ಹಿಂದ ವ್ಯಾಧನೊಬ್ಬ ಹರಿಣಿ ಹಿಡಿಯಲಿ| ನಿಂತು ಚತುರ್ವಿಧ ಬಲಿಯಾನೊಡ್ಡಿರಲಿ| ಮೃಗ ಮೊರೆಯಿಡಲಿ| ಬಂದು ಕರುಣಿಸಿ ರಕ್ಷಿಸಿದ ಪರಿಲಿ 1 ಬಸಿರೊಳಗಿದ್ದ ಪರೀಕ್ಷಿತಗೆಂದು| ಎಸೆಯಲು ಬಾಣಗಳ ದ್ರೋಣಿ ಮುಳಿದು| ಬಿಸಜಾಕ್ಷ ನಿನ್ನ ಚಕ್ರ ಮರೆವಿಡಿದು| ಪರಿ ಬಂದು 2 ದಿನ ವತ್ಸಲ ದಯಾನಿಧಿ ಎನುವಾ| ಖೂನದೋರಿಸಯ್ಯಾ ಬಿರುದಿನ ಅನುವಾ| ನಿನೇ ತಾಯಿ ತಂದೆ ಬಂಧು ಸಖದೈವ| ಘನಗುರು ಮಹಿಪತಿ ಸುಖ ಜೀವಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಇಂದು ಮಂಗಳಕರ ದೋರಿತು ಎನಗೆ ಪ ಇಂದು ಮಂಗಳಕರ ದೋರಿತು ಎನಗೆ | ಇಂದು ಕುಲದೀಪಕ ಬಂದನು ಮನೆಗೆ 1 ರಂಗ ಬಂದನಂತರಂಗದೊಳಾಡುತ 2 ಇಂದಿರಾಪತಿ ಬಂದನು ಸುಖಬೀರುತ | ತಂದೆ ತಾಯಿ ಬಂಧು ಬಳಗೆನಗಾಗುತ 3 ತುಂಬಿ ತುಳುಕುತಾನಂದದೊಲವಿಲಿ | ಅಂಬುಜಾಕ್ಷ ಬಂದಾಮೃತಗರೆವುತ 4 ಎಂದೆಂದೆಗನಾನಂದದ ಮೂರುತಿ | ಸಾರಥಿ 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಇಂದು ಶೇಖರ ರಕ್ಷಿಸೋ ಎನ್ನ ತಂದೆ ಶಂಕರ ಹಿಂದೆ ಪೊಂದಿದ ದೇಹದ ಮತ್ತಿಂದು ಹಿಡಿಯುತ ಪ ಹಿಂದೆ ಬಿಸುಟೊಡಲು ಮರು ಕೊಳಿಸಿ ಸಾರಿ ಬಂದುದು ತಂದೆ ತಾಯಿಯ ಗಣನೆ ಉರ್ವಿಸಿಕವನು ಮೀರಿತು ಅಂದು ಮೊದಲು ಜನನೀಸ್ತನವನುಂಡು ಪಾಲಸವಿದುದು ಇಂದು ಕಂದು ಗೊರಳನೆ 1 ಕಾಲ ಬಾಲವನಿತೆ ಬಾಳು ಬದುಕಿನೊಳಗೆ ತೊಳಲಿ ಬಳಲಲು ಕಾಯದೊಳಗೆ ಮುಸುಕಲು ಕೊಳುವೋದೆ ಯಮಗೆ ಶೂಲ ಪಾಣಿ ನೀಲಕಂಠನೆ 2 ಎನ್ನದಾನದೆಂಬ ಹಮ್ಮವಶದಿ ಸುಮ್ಮನೆ ಹೊನ್ನು ಹೆಣ್ಣು ಮಣ್ಣು ಮೂರು ತನ್ನದೆಂದು ನಂಬುತ ಬನ್ನ ಬಟ್ಟು ಸಾಯುತ ಭವದಶರಧಿ ಬೇಗೆಯನ್ನು ಈಸಲಾರೆನೋ 3 ಸಿಂಧು ತೆರೆಯೊಳು ಮಂದ ಗಜವು ಕುಣಿಯೋಳ್ ಬಿದ್ದು ಏಳಲಾರದಂದದಿ ಇಂದ್ರಜಾಲದೊಳಗೆ ಸಿಲುಕಿಮಂದಗೆಟ್ಟು ನೊಂದೆನೋ 4 ದುರಿತ ಮರಣ ಕಾಲದೊಳಗೆ ನಾಮಸ್ಮರಣೆ ಯಾದಗುವಂದದಿ ತರಣಿ ತಮವ ಕಡಿಸಿ ಧರೆಯ ಬೆಳಗುವಂತೆ ಹೃದಯದಿ ಕರುಣದಿಂದಲಿ ನಿರುತಸಲಹೋ ಇಕ್ಕೆರಿ ಅಘೋರೇಶಲಿಂಗನೆ 5
--------------
ಕವಿ ಪರಮದೇವದಾಸರು