ಒಟ್ಟು 222 ಕಡೆಗಳಲ್ಲಿ , 53 ದಾಸರು , 209 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಪುರಂಜನೋಪಾಖ್ಯಾನ ಲಾವಣಿ ಗೆರಗಿ ಮಹೇಶ್ವರನಾ ಶಾರದೆಯ ಸರಸಿಜಸಂಭವನಾ | ಇಂದಿರೆ ಪರಮಭಕ್ತಿಯಲಿ ಪ್ರಾರ್ಥಿಸಿ ಸತ್ಕವಿ ಕರುಣಿಪುದು ಜ್ಞಾನ | ಚರಣಗಳಿಗೆ ಬಿನ್ನೈಸುವೆನಾ 1 ಯತಿಗಣಪ್ರಾಸೊಂದಾದರು ತಿಳಿಯದು ಮತಿಹೀನನು ನಾನು | ನಾನಾಚಮ- ತ್ಕøತಿಗಳರಿಯದವನು | ಆದರೀ ಕೃತಿಯಲಿ ತಪ್ಪೇನು | ಮತಿವಂತರಾಲಿಸುವುದು ನೀವಿದನು 2 ಒಂದರೊಳಗೆ ಎರಡಾಗಿ ಎರಡರೊಳು ಹೊಂದಿ ಮೂರ್ನಾಲ್ಕೈದಾಗಿ ಆರೇಳೆಂಟೊಂಬತ್ತುಗಳಾಗಿ | ಸಕಲದೊಳು ಹೊಂದಿರುವುದುತಾಗಿ ಕುಂದಿಲ್ಲದೆ ಇರುತಿರುವ ಮಹಾತ್ಮನ ರಂದವ ಚನ್ನಾಗಿ | ತಿಳಿದು ಸುಖ ತಂದವನೇಯೋಗಿ 3 ಮೊದಲು ಮಹತ್ ಸೃಷ್ಟಿಯಲಿ ಎಲ್ಲತ- ತ್ವದಲಿ ತೋರುತಿಹುದು ಬೇರೆಬೇರಾಗಿ ಕಾಣಿಸುವುದು ಅದುಭುತವಾಗಿಹ ಅನಾದಿ ಕರ್ಮತ್ರಿ- ವಿಧದಿ ಭಾದಿಸುವುದು | ಅದರೊಳು ಬಿ- ಡದೆ ತಾ ಮುತ್ತುವುದು ಎಂದಿಗು ನಿಜವತಿ ರಹಸ್ಯವಿದು 4 ಮೊಟ್ಟೆವೊಂದು ದಶಸಾವಿರವರುಷಗ ಳಿಟ್ಟು ಜಲದಿತಾನು | ಅದಕೆ ಕೈ- ಗೊಟ್ಟು ಎಬ್ಬಿಸಿದನು | ನಾನಾ ವಿಧ ವೆಷ್ಟಿ ಸಮಷ್ಟಿಗಳೆರಡೆಂದದರೊಳು ಗುಟ್ಟಂಗಡಿಸಿದನು | ಗುರಿಯಮಾ ಡಿಟ್ಟು ಚೇತನಗಳನು | ಅನೇಕವು ಪಟ್ಟಣ ರಚಿಸಿದನು 5 ಈ ಪಟ್ಟಣಕಾರ್ ಮಂದಿ ಇರುವರತಿ ಕಾಪಾಡುವರದರೊಳು ವ್ಯಾಪಾರಗಳನು | ಬಹುವಿಧಮಾಡುವ- ರಾಪುರ ಜನರುಗಳು | ಇವರುನಡೆ ಕೋಪಿಸೆ ಹಗಲಿರುಳು 6 ಎರಡು ಮಾರ್ಗದೊಳಿರುತಿಹರೆಲ್ಲರು ಹುರುಡಿಲ್ಲವುನೋಡೆ | ಗಜಿಬಿಜಿಯು ತರತರದಲಿಮಾಡೆ | ನಮಗಿದೆ ಸ್ಥಿರವೆನ್ನುತ ಕೂಡೆ | ಪರಿಪರಿ ಬಗೆಯಲಿ ಭೇದ ಪುಟ್ಟುವುದು ಕರೆಕರೆಯಂದುಡೆ | ವಳಗೆಕೆಲ ಬರುಹರುಷದಿ ನೋಡೆ | ಯುವಶೃಂ- ಗರುವು ಇದಕೆ ಈಡೆ 7 ಇದೆತನ್ನದೆನುತೋರ್ವಳು ಮಾನಿನಿ ಚದುರತನದಿ ಬಂದು | ಊರ ಮುಂದಿರುವ ವನದಿ ನಿಂದು | ಅವಳಿಗಿರು ವುದು ಜನ ಹನ್ನೊಂದು ಚದುರೆಯೈದುತಲೆ ಸರ್ಪವಾಡಿಸುತ ಜಾಣೆಯಿರುವಳಂದು | ತಾನೊಬ್ಬನ ಇಂದು | ಸುಖದೊಳಾ- ಳ್ಬೇಕುರಾಜ್ಯವೆಂದು 8 ಅರಸನೊಬ್ಬ ವಿಜ್ಞಾತನೆಂಬ ಭೂ- ಸುರನಸಹಿತನಾನಾ | ದೇಶಗಳ ತಿರುಗುತ ಉದ್ಯಾನ | ವನದಿಕಂ- ಡನು ಆತರುಣಿಯನ ಪರಮ ಮಿತ್ರನಹ ಬ್ರಾಹ್ಮಣನ ಮರೆತು ಹರುಷದಿ ಪೊಕ್ಕುವನ | ಸ್ಮರಶರಕೆ ತರಹರಿಸುತಲಿರೆ ಮನ | ಕೇಳಿದನು ನಗುತಲಿ ನಾರಿಯನ 9 ಯಾರೆ ಹುಡುಗಿ ನೀನ್ಯಾರೆ ನಿನ್ನ ಪೆಸ- ರೇನು ಪೇಳೆ ಹೆಣ್ಣೆ | ಮಾತನಾ- ಡೆಲೆ ತಾವರೆಗಣ್ಣೆ | ನಿನ್ನ ಮೈ- ಸುಲಿದ ಬಾಳೆಯ ಹಣ್ಣೆ ಯಾರದು ಈ ಜನ ಉರಗವೇನು ವನ- ವಾರದು ಶಶಿವದನೆ | ಈ ಪುರವ- ನಾಳುವನಾವವನೆ | ಒರ್ವಳಿ- ಲ್ಲಿರುವುದಕೇನ್ಹದನೆ 10 ಎನಲು ನಸುನಗುತವನಿತೆನುಡಿದಳೀ ಜನಗಳು ನನ್ನವರು | ಇಲ್ಲಿಕಾ- ಣುವ ಪುರ ನನ್ನೂರು | ಸರ್ಪನ- ನ್ನದು ಇದಕಿನ್ನಾರು | ಅರಸರಿಲ್ಲ ನಾನೊಬ್ಬಳಿರುವೆನೀ ವನದೊಳು ನೀನ್ಯಾರು | ನಿನ್ನಕಥೆ ವಿವರಿಸೆನಗೆ ತೋರು | ಯನ್ನ ಬಳಿ- ಗಿಷ್ಟವಿರಲುಸಾರು 11 ಎಲ್ಲಿ ನೋಡೆ ಸ್ಥಳವಿಲ್ಲವೆನಗೆ ನಿ- ನೆನ್ನ ಪುಷ್ಪಶರನು | ನೀನುಪೇ- ಪರಿ ವಲ್ಲಭನನು ಮಾಡಿಕೊ ಎನ್ನನು ಬಹು ಬಲ್ಲಿಯಳೆ ನೀನು | ನಿನ್ನಸರಿ ಚಲ್ವೆಯರಾರಿನ್ನು | ಇಬ್ಬ- ರಾಳ್ವೆಯೀವೂರನ್ನು 12 ಎನಲು ಹರುಷಗೊಂಡಾಕೆ ಸಮ್ಮತಿಸಿ ಜನವೆರಗಿತಂದು | ನುಡಿದಳಾಮೊಗದ- ಲಿನಗೆತಂದು | ನಿನ್ನಮೇಲ್ ಮನಸಾಯಿತುಯಿಂದು ನಿನ್ನನು ಮಾನವೇತಕಿಂದು | ಆಳು ಜನಸಹಿತ ಪುರವ ಮುಂದು ನೀನು ನಾನಿರುವೆವಾಗಿವಂದು 13 ಸರ್ವವನ್ನು ಭವದಿ ಆದರಿಸುತತತ್ಪುರ ಮಧ್ಯ | ದೊ ಳುಪ್ಪರಿಗೆಯೇರಿ ತ್ವರದಿ | ಸರ ಸಗಳನಾಡಿ | ಬಹುತರದಿ ಮುಳುಗಿ ಸಂಸಾರವೆಂಬಶರಧಿ 14 ಅನ್ನಪಾನಾಭರಣ ಕುಸುಮ ವಿನ್ನು ಗಂಧಧೂಪ | ತಾಂಬೂಲಗಳ ಮನ್ನಣೆಯಲಿ ಭೂಪ | ಪೊಂದಿದ ಸುಖ ವನು ನಾನಾರೂಪ | ನನ್ನದು ಎನ್ನುತಲಿ ಪ್ರತಾಪ | ಶಾಲಿತಾ- ರಾಜ್ಯವಾಳಿದನಾಗುತಭೂಪ 15 ದ್ವಾರಗಳೊಂಭತ್ತಾಪುರಕಿರುವುದು ಮೂರು ಪೂರ್ವದಲ್ಲಿ | ಮೇ- ಲೆರಡು ಕಿಟಕಿಗಳಿಹವಲ್ಲಿ | ಬಿಗಿಸಿ ಕಟ್ಟಿಹುದು ಕನ್ನಡಿಯಲಿ ತೋರುವುದುತ್ತರದಕ್ಷಿಣದೊಳೆರಡು ದ್ವಾರ ಪಶ್ಚಿಮದಲಿ ಕಾರಣವದರಲ್ಲಿ 16 ಮತ್ತದರೊಳಗಾರ್ಸುತ್ತು ಕೋಟೆ ಒಂ- ಬತ್ತು ಬಾಗಿಲ ಪುರದಿ | ಅನೇಕವು ಗೊತ್ತನಾವವಿಧವಿ | ಉತ್ತಮವಹಪುರದಿ | ಮುಖ್ಯವಾ- ಗಿರುವದೆರಡು ಬೀದಿ | ದೊರೆಯಮನೆ- ಯಿರುವುದು ವಿಸ್ತರದಿ17 ಇಂತರಮನೆಯಲಿ ದೊರೆ ಕಲಿಯಾಗುತ ಕಾಂತೆಯೊಡನೆ ಸೇರಿ | ಸದಾಸು- ಸ್ವಾಂತನಾಗಿಮೀರಿ | ಸೌಖ್ಯಹೊಂ- ದುತಲಾವೈಯ್ಯಾರಿ ನಿಂತರೆ ನಿಲುವನು ಕುಳಿತರೆ ಕೂಡುವ ಮಲಗಿದರೆ ನಾರಿ | ತಾನು ಮಲಗುವಯೇಕದಿ ಸೇರಿ | ಉಂಡ- ರುಣ್ಣುವನು ಅವಳನುಸಾರಿ 18 ಮನದಿಯೋಚಿಸದನೂ | ಈಗಲೆ ಮೃಗಯಾತ್ರೆಗೆತಾನೂ | ಸೊಗಸಿಂದ ಸೈನ್ಯವ ಕೂಡುತ ಪುಂ- ಚಪ್ರಸ್ಥವನವನು | ಪೊಕ್ಕು ಅ- ಲ್ಲಿರುವಮೃಗಗಳನ್ನು | ಹೊಡೆದು ಸಂ- ತೋಷದಿ ಸುಖಿಸುವೆನು 19 ಮೂರೆರಡು ಕುದುರೆಯೈದು ಮೇಲ್ ಮೂರು ಪತಾಕಿಗಳು | ಅ- ಚ್ಚೆರಡು ಎರಡು ಕೂಬರಗಳು | ಚಕ್ರ ವೆರಡುವರೂಥಗಳೇಳು ಆರಥಕೊಪ್ಪುವದೇ- ಕರಶ್ಮಿನಾಲ್ಕೊಂದು ವಿಕ್ರಮಗಳು | ಒಬ್ಬ ಸಾರಥಿ ಎರಡು ಗತಿಗಳು | ಬಿಗಿಸಿಹುದು ಕನಕಭೂಷಣಗಳು 20 ಪುರಂಜನ ಭೂ- ಕಾಂತಕರದಿ ಧನುವ | ಪಿಡಿದುಸು- ಸ್ವಾಮತದಿಂದಲನುವಾ | ಗಿಬಹ ಹನ್ನೊಂ- ದು ತನ್ನ ಜನನ | ಸಂತಸದಲಿ ಕೂ- ಡುತ ಹೊರಡುತ ತಾ ಪೊಕ್ಕನು ಕಾನನವಾ | ಶರಗಳಿಂ- ದ್ಹೊಡದು ಮೃಗನಿವಹವಾ | ಮೇರೆಯಿಲ್ಲ- ದೆ ತಟ್ಟುತ ಭುಜವಾ 21 ಇನಿತು ಬೇಟೆಯಾಡುವ ಕಾಲದಿ ತನ್ನ ಮನದಿ ನೆನೆದು ಸತಿಯಾ | ತಕ್ಷಣವೇ ಬಂದು ಸೇರಿ ಮನೆಯ | ಕಾಣದೆ ಹುಡುಕಿದನು ಯುವತಿಯ ಮಂಚದೊಳಿಹ ಸತಿಯ | ಕಂಡುಲಾ- ಲಿಸುತ ಚಮತ್ಕøತಿಯಾ | ನುಡಿಯಲುಪ- ಚರಿಸಿದನಾಕಾಂತೆಯ 22 ನೂರುವರುಷವೀರೀತಿಯವಳೊಡನೆ ನೂರುಹನ್ನೊಂದು ಮಕ್ಕಳನ್ನು | ಪಡೆದು ಸಂ- ಸಾರದಿ ಕಾಲವನು | ಯಾರೆ- ಮೀರಿ ಹೋದುದಿನ್ನು | ಮೊಮ್ಮಕ್ಕಳ ಪಡೆದನನೇಕರನು ದೇಶತುಂಬಿಸಿದ ತನ್ನ | ವರನು 23 ಉತ್ತರ ದಕ್ಷಿಣ ಪಾಂಚಾಲಗಳಾ ಳುತ್ತಲಿವನು ತನ್ನ | ಸುತರಬೆರೆ- ಯುತ್ತಸದಾ ಚಿನ್ನ | ಬೆಳ್ಳಿ ನವ- ರತ್ನರಾಶಿಗಳನಾ | ಮತ್ತೆ ಮತ್ತೆ ಕೂಡಿ- ಸುತೈಶ್ವರ್ಯದಿ ಮತ್ತನಾ | ಗುತಲನ್ಯಾ ಚಿಂತೆಯಿಲ್ಲದೆ ನಾ | ಬಲು ಪುಣ್ಯವಂತನೆ | ನ್ನುತ್ತತಿಳಿದಿರುವನಾ 24 ಚಂಡವೇಗವೆಂಬುವರಾ ತಮ್ಮತಮ್ಮ ಹೆಂಡಿರುಗಳು ತಾವು | ಸೇರಿಮು- ನ್ನೂರರವತ್ತು ಜನವು | ಗಂಧರ್ವರು ಬಂಡೆಬ್ಬಿಸಿ ಪುರವು | ದಂಡು ಮುಂದಾಗೆ ರಿಪುಬಲವು | ಕ್ಷೀಣಗತಿ ಹೊಂದುತಲಿರೆ ಪುರವು 25 ಸ್ತ್ರೀಜಿತನಾಗಿಹಕಾರಣದಲಿಯಾ ರಾಜಪುರಂಜನಗೆ | ಯತ್ನವಿ- ಲ್ಲದೆ ತನ್ನಯಪುರಿಗೆ | ಕೇಡುಬಂ- ದರು ತೋರದು ಕೊನೆಗೆ | ಶೋಕದಿ ಮನದೊಳಗೆ | ಮಿ ಡುಕುತಲಿರಲಾನೃಪತಿಮೇಗೆ | ಮತ್ತು ಶತ್ರುಗಳುನೆರೆಯೆ ಹೀಗೆ 26 ಯವನೇಶ್ವರನೊಬ್ಬನುಭಯಪ್ರಜ್ವಾ ರಾದಿ ಸೈನಿಕರನು | ಕಾಲಕನ್ಯಾಖ್ಯ ಯುವತಿಯನ್ನು | ಕರೆದುಕೊಂ- ಡೀಪುರವ ಸೇರಿದನು | ಬವರದಿ ಗೆದ್ದನು ಭವಿಸಿದನಾ ಕನ್ಯಾಮಣಿಪಟ್ಣವನು | ಭೋಗಿಸಿದ- ಳಾಪ್ರಜ್ವಾರನನು | ಸುಡಲುಪುರಿ ಕಂಡು ಪುರಂಜನನು 27 ಕಾಲಕನ್ಯೆ ತಾ ಲೀಲೆಯಿಂದಲಿ ನೃ- ಪಾಲನ ಹತ್ತಿಗೆಯಾ | ಪಿಡಿಯೆ ಹಾ- ಹಾಯೆನಲಾರಾಯಾ | ಅಬಲತೋ- ರದು ಮುಂದೆ ಉಪಾಯ | ಬಾಲಕರನು ಪತ್ನಿಯ | ನುಕೂಗಿಬಿಡು-
--------------
ಗುರುರಾಮವಿಠಲ
ಪುರಂದರ ಗುರುರಾಯಾ ಸತ್ಪ್ಪುಣ್ಯ ಕಾಯಾ ಪ ನಿರುತ ನಿನ್ನ ಚರಣ ಸೇವೆ ಕರುಣ ಮಾಳ್ಪದೋ ಜೀಯಾಅ.ಪ. ಬಹು ಜನ್ಮಗಳಲ್ಲಿ ನಾನು ಮಹ ಪುಣ್ಯ ಮಾಡಿದವರ ಸಹವಾಸದಲಿದ್ದು ಗ್ರಹದ ಮುಂದೆ ಗ್ರಹದಿಂದೆನಗೆ ಮಹಿಸುರ ಜನ್ನವಿತ್ತೆ 1 ಶ್ವಾನ ಸೂಕರನೊ ನಾನದನು ಕಾಣೆನೊ ಮತ್ತಾವನೊ ನಾನಾ ಜೀವನೊ ಆನು ಒಂದು ತಿಳಿಯೆ ಗುರುವೆ ನೀನೆ ಬಲ್ಲಿ ಎನಗೆ ಬಂದ ಅನಾದಿ ಶರೀರವ ಅಜ್ಞಾನವನ್ನೇ ತೆಜಿಸುವುದು2 ಯಾಚನೆ ದೇಹದಲ್ಲಿ ಊಚು ಭಾಗ್ಯವ ಜಯಸದಿಪ್ಪ ಯೋಚನೆಯಿಂದಲಿ ಕಮಲಲೋಚನ ನಿನ್ನಂಘ್ರಿಯಾ ಕರವ ಬಾಚೆನೊ ಹೀನರಿಗೆ ನಿನ್ನ ಪಾಚಕರ ಮನೆಯ ಪರಿಚಾರ ಸಿದ್ಧÀ್ದವಾಗಲಿ 3 ಹಿಂದೆ ಏನು ಪ್ರೇರಿಸಿದಿಯೊ ನಂದವ ನಾನರಿಯೆನೊ ತಂದೆ ತಾಯಿ ನೀನೆ ಎಂದು ಪೊರದಿ ಸಂದೇಹವಿಲ್ಲ ಯೆಂದು ಪೊರೆದದ್ದು ನಿನ ಕರುಣವಲ್ಲವೆ ಮತ್ತೆ ಭಾರವು ನಿನದೆಂದು ನಾ ಪ್ರಾರ್ಥಿಸುವೆ 4 ತಿರುಗುವುದು ಕುಳ್ಳಿರುವುದು ಬರುವುದು ಮತ್ತೇಳುವದು ಮರಳೆ ಮಾತನಾಡುವುದು ವಾಸರದಲ್ಲಿ ಬಿಡದೆ ಸಿರಿ ವಿಜಯವಿಠ್ಠಲನ್ನ ಕರದೊಳಿಪ್ಪಂತೆ ಮಾಳ್ಪದೊ ಜೀಯಾ 5
--------------
ವಿಜಯದಾಸ
ಪೂರ್ಣಪ್ರಜ್ಞರ ನೆನೆದು ಜ್ಞಾನಪೂರ್ಣರಾಗಿರೊ | ಆನಂದ ಜನನದಲಿ ಜನನಗಳ ನೀಗಿರೊಪ ಮಲಗಿ ಏಳುವಾಗ ಮಾತುಗಳನಾಡುವಾಗ | ಇಳಿಯ ಮೇಲಡಿಯಿಟ್ಟು ತಿರುಗುವಾಗ || ಜಲದಲಿ ಮಿಂದಘ್ರ್ಯೆ ಪ್ರಣವ ಜಪಿಸುವಾಗ | ಮಲಿನ ಸಂಕರನಳಿದಮಲಬೋಧನ ನೆನೆಯಿರೊ 1 ದೇವತಾ ಪೂಜೆಮಾಡಿ ಸ್ತೋತ್ರ ಪಠಿಸುವಾಗ | ಪಾವಕಾವನಿ ಸುರರ ಉಣಿಸುವಾಗ || ಕೋವಿದರ ಸಂಗಡ ಸಂತೋಷಬಡುವಾಗ | ಶ್ರೀ ವೀರ ವೈಷ್ಣವಾಚಾರ್ಯನ ನೆನೆಯಿರೊ2 ಸತಿಸುತರ ಕೂಡ ಹರಿ ಚರಿತೆಗಳ ಪೇಳುವಾಗ | ಪ್ರತಿ ದಿವಸÀ ಷಟ್ಕರ್ಮ ಮಾಡುವಾಗ || ಪತಿತ ಪಾವನ ವಿಜಯವಿಠ್ಠಲನ ಭಜಿಪ ಸದಾ |ಗತಿಯಾದ ಸುಜನರಿಗೆ ಯತೀಶ್ವರನ ನೆನೆಯಿರೊ3
--------------
ವಿಜಯದಾಸ
ಪೇಳುವೆ ಮನವೆ ನಿನಗೊಂದು ಕುಳಿತು ಲಾಲಿಪುದು ಮುಕ್ತಿಗೆ ಹಾದಿ ಎಂದು ಪ ಹರಿಯ ಚರಣಾಬ್ಜ್ಬಕೆ ಎರಗು ಬಡ ವರನ ಕಂಡರೆ ಅಕಟಾ ಎಂದು ಮರಗು ಹರಿ ಭಕುತಿಗೆ ನೀನೆ ಕರಗು ಇಹ ಪರದಲ್ಲಿ ಉತ್ತಮ ಯೆಂದೆನಿಸಿ ತಿರುಗು 1 ಅಹಂಕಾರ ಮಮಕಾರ ಬಿಟ್ಟು ಅಂಬು ರುಹಲೋಚನನ ಸುಮತವನ್ನೆ ತೊಟ್ಟು ಕುಹಕ ಮತಿಗಳನ್ನು ಬಿಟ್ಟು ಗುರು ದ್ರೋಹಿಗಳಾದವರ ಹೃದಯವÀ ಮೆಟ್ಟು 2 ಅಲ್ಪ ಬುದ್ಧಿಗಳನ್ನು ಮಾಣು ಒಂದು ಸ್ವಲ್ಪವಾದರು ಜ್ಞಾನದ ಮಾರ್ಗ ಕಾಣು ಬಲ್ಪಂಥದಲಿ ಬಾಹದೇನು ಬಿಡು ಅಲ್ಪಗಳ ಸಂಗ ಎಂದು ಸಾರಿದೆನು 3 ಸ್ವಾಮಿಯ ಪಾದವ ನೋಡು ನಿನ್ನ ಕಾಮ ಕ್ರೋಧಗಳೆಲ್ಲ ಕಳೆದು ಈಡಾಡು ನಾಮ ಕೀರ್ತನೆಗಳನ್ನು ಪಾಡು ತ್ರಿ ಧಾಮದೊಳಗೆ ಒಂದು ಇಂಬನೆ ಬೇಡು 4 ಎಚ್ಚತ್ತು ತಿಳಿದುಕೋ ಸೊಲ್ಲಾ ನಾನು ಮುಚ್ಚುಮೊರಿಲ್ಲದೆ ಪೇಳಿದೆನಲ್ಲಾ ಅಚ್ಚುತ ವಿಜಯವಿಠ್ಠಲನಲ್ಲದಿಲ್ಲ 5
--------------
ವಿಜಯದಾಸ
ಬಡವನಿಗೆ ನಂಟರುಂಟೆ ಪೊಡವಿಯಲಿ ಬಲಿದನಿಗೆ ತಂಟೆಯುಂಟೆ ಪ ಬಡವನನು ಕಂಡರೆ ಮಡದಿಯರು ಜರಿವರು ಬಲಿದನನು ಕಂಡರೆ ಹಲ್ಲುಗಳ ಕಿರಿವರು ಅ.ಪ ಸಿರಿಯ ಪೊಂದಿದ ಮನುಜ ಜಗದಲಿ ಸರಿಯೆಂದು ಎನಿಸುವನು ಮರುಕವಿಲ್ಲದೆ ನರರು ಪರಿಪರಿ ಜರಿವರು 1 ಕಾಸು ಪೊಂದಿದ ನರನ ಪರಿ ಹಾಸವೆ ಬಲು ಸೊಗಸು ಕಾಸಿನ ಮದದಿಂದ ಲೇಸವೂ ಇಲ್ಲದೆ ಕ್ಲೇಶ ಪಡುವನ ಕಂಡು ಮೀಸೆಯ ತಿರುವುವರು2 ಕ್ರೂರನಾದರು ಧನಿಕ ಇವನನು ಸೇರಲು ಬಯಸುವರು ಭಾರಿ ನಡತೆ ಇದ್ದು ಸೇರದಿರಲು ಧನ ಯಾರು ಕಂಡರು ಇವನ ಮೋರೆ ತಿರುಗುವರು 3 ಧನವಿದ್ದರೆ ಜೋಕು ಜಗದೊಳು ಘನತೆ ಏತಕೆ ಬೇಕು ಕನಸಿನಲ್ಲಿಯು ಧನ ಕಾಣದ ಮನುಜನ ಘನತೆಯು ಜನಗಳ ಮನಕೆಂತು ತೋರುವುದು 4 ಮದನ ಜಗದಲಿ ಕಾಸಿಲ್ಲದವನು ದನ ಕೋಶ ಪೊಂದಿದವನು ಕೀಶನಾದರು ಪ್ರೇಮ ಪಾಶಕ್ಕೆ ಬೀಳಲು ಆಸೆಯಪಡುವರು 5 ಹಣವಿದ್ದ ಪುರುಷನನ್ನು ಧರಣಿಯೊಳ್ ಕೆಣಕಿ ಬದುಕಬಹುದೆ ಗುಣಶಾಲಿಯಾದರು ಋಣಗಾರ ನರನನು ಕುಣಿಸುತ್ತ ಕ್ಲೇಶಕೆ ಹೊಣೆಯ ಮಾಡುವರು 6 ಝಣಿಝಣಿಸುವ ಧನವ ಪೊಂದಿರೆ ತೃಣವಂತೆ ಜಗವೆಲ್ಲ ಪಣಿಯಲಿ ಬೊಮ್ಮನು ಹಣವ ಬರೆಯದಿರೆ ಅಣಿಯಾದ ಜ್ಞಾನಿಯು ಹೆಣದಂತಾಗುವನು 7 ಶುಂಠನಾದರು ಧನಿಕ ಇವನಿಗೆ ಉಂಟೆ ಜಗದಿ ಎದುರು ಗಂಟು ಇಲ್ಲದವನ ನೆಂಟರು ಜರಿವರು ಕುಂಟು ಎತ್ತಿನಂತೆ ಒಂಟಿಯಾಗುವನು 8 ಹೊನ್ನು ಜರಠ ನರಗೆ ಸುಲಭದಿ ಹೆಣ್ಣು ಒದಗಿಸುವುದು ಸೊನ್ನೆಯಾದರೆ ಧನ ಚಿನ್ನದಂತಿರುವಗೆ ಇನ್ನಾರು ಕಾಣೆ ಪ್ರಸನ್ನ ಹರಿಯೇ ಗತಿ9
--------------
ವಿದ್ಯಾಪ್ರಸನ್ನತೀರ್ಥರು
ಬಂದಿರುವೆನು ಭೂಜಾತೆ | ಶರ- ದಿಂದುವದನೆ ವೋ ಸೀತೆ ಪ ಕೂಗುವುದೇತಕೆ ನಿಮ್ಮಯ ಪೆಸರೇ ನೀಗ ತಿಳಿಸಿರೈ ಸ್ವಾಮಿ | ನುಡಿ ಭಾಗವತ ಜನಪ್ರೇಮಿ ಅ.ಪ ಹೀನತಮವ ಮುರಿದಜಗೆ ಶೃತಿಗಳಿತ್ತ ಮೀನಾವತಾರನೆ ನಾನು | ಬಾ ಜಾನಕಿ ಬೇಗನೆ ನೀನು ಮೀನಾದರೆ ನೀರೊಳಗಿರುವುದು ಸರಿ ಮಾನಿನಿಯಲಿ ಕಾರ್ಯವೇನು | ನಡಿ ದೀನ ಜನರ ಸುರಧೇನು 1 ಕಮಲನಯನೆ ನಾ ಪೂರ್ವದಿ | ಗಜ- ಗಮನೆಯೆ ನೋಡನುರಾಗದಿ ಭ್ರಮೆಯಾತಕೆ ಕೇಳ್ ಕಠಿಣಾಂಗಗೆ ನಾ ಸಮಳೆ ನಿನಗೆ ನೀ ನೋಡು | ಸಂ ಭ್ರಮವಿದ್ದಲಿ ನಲಿದಾಡು 2 ವರಹಾರೂಪನೆ ಕಾಮಿನಿ | ಓ ತರುಣಿಯರೊಳಗೆ ಶಿರೋಮಣಿ ವರಾಹನಾದರೆ ಅಡವಿಯ ತಿರುಗುತ- ಲಿರದೇತಕೆ ಇಲ್ಲಿ ಬಂದೆ | ನಡಿ ಪರಿಪರಿ ಮೃಗಗಳ ಹಿಂದೆ 3 ಕರುಳ ಬಗೆದ ನರಸಿಂಹ | ನಾನು ಪರಮ ಪುರಷ ಪರಬ್ರಹ್ಮ ನರಸಿಂಹನು ನೀನಾದರೆ ನಡಿನಡಿ ಗಿರಿಗುಹೆಯೊಳಗಿರು ಹೋಗೈ | ಬಹು ಪರಿನುಡಿಗಳು ನಿನಗೇಕೈ 4 ಭೂಮಿಯ ದಾನವ ಬೇಡಿ ಬಲಿಯ ಗೆದ್ದ ವಾಮನ ನಾನೆಲೆ ನಾರಿ | ಸು ತ್ರಾಮಾದ್ಯರಿಗುಪಕಾರಿ ಬ್ರಾಹ್ಮಣನಾದರೆ ನಮಿಸುವೆ ಚರಣಕೆ ಹೋಮಧ್ಯಾನ ಜಪಮಾಡೈ | ನಿ ಷ್ಕಾಮ ಜನರ ಪಥನೋಡೈ 5 ದುರುಳನೃಪರ ಸಂಹರಿಸವನಿಯ ಭೂ ಸುರರಿಗೆ ಕೊಟ್ಟೆನೆ ದಾನವು | ಕೇಳ್ ಪರಶುರಾಮಾಭಿದಾನವು ವರಮಾತೆಯ ಶಿರವರಿದವ ನೀನಂತೆ ಸರಸವೇತಕೆನ್ನಲ್ಲಿ | ಮನ ಬರುವಲ್ಲಿಗೆ ತೆರಳಲ್ಲಿ 6 ತಾಯನುಡಿಗೆ ತಮ್ಮಗೆ ರಾಜ್ಯವ ಕೊಟ್ಟು ಪ್ರಿಯದಿ ವನದೊಳಗಿದ್ದೆನೆ | ದೈ ತ್ಯೇಯ ನಿಕರವನು ಗೆದ್ದೆನೆ ಸ್ರೀಯರಲ್ಲಿ ಹಿತವೇನು | ಕಮ ಲಾಯತಾಕ್ಷ ನಡಿ ನೀನು 7 ನಾರಿಯರನು ಕೂಡಿ ರಾಸ ಕ್ರೀಡೆಯೊಳ್ ತೋರಿದೆ ಪರಿಪರಿ ಚಿತ್ರವ | ವಿ- ಜಾರ ಪುರಷನಿಗೆ ಹೋಲುವಳಲ್ಲವು ಸಾರ ಪತಿವ್ರತೆ ನಾನು | ಇ- ನ್ನ್ಯಾರು ತಿಳಿಸು ಮತ್ತೆ ನೀನು 8 ಪತಿವ್ರತೆಯರ ಸದ್‍ವ್ರತವ ಕೆಡಿಸಿದಾ ಪ್ರತಿಮ ಬುದ್ಧನೆ ಲತಾಂಗಿ | ಓ ಮತಿವಂತಳೆ ಮೋಹನಾಂಗಿ ಕೃತಕವಾಡದಿರು ಒಲ್ಲೆ | ಕೇ ಳತಿ ಮೋಹಕ ನೀ ಬಲ್ಲೆ 9 ಹಲವು ನುಡಿಗಳೇನು ಕಲಿಯುಗಾಂತದಲಿ ಮಲೆತ ಮನುಜರನು ಕೊಲ್ವೆನೆ | ಓ ಲಲನೆ ನೋಡು ಬಲು ಚೆಲ್ವನೇ ಕಲಿತನವ ತೋರಿಸದಿರು ಈ ಪರಿ ಹಲವು ವೇಷ ನಿನಗೇಕೆ | ಕೇ ಳೆಲವೊ ಸ್ವಾಮಿ ನುಡಿ ಜೋಕೆ 10 ವೇಷವಲ್ಲ ಸರ್ವೇಶ ನಾನು ಪರಿ- ಪೋಷಿಸುವೆನು ನಿಜಭಕ್ತರ | ಸಂ- ತೋಷಿಸುವೆನು ಧರ್ಮಯುಕ್ತರ ಪೋಷಿಸುವನು ನೀನಾದರೆಲ್ಲಿ ನಿನ್ನ ವಾಸಪೇಳು ನಿಜವೀಗಾ | ಪರಿ ಹಾಸವೇಕೆ ನುಡಿಬೇಗ 11 ಪರಮಾತ್ಮನು ನಾ ಕೇಳೆ | ಎನ್ನ ಮರತೆಯೇನೆ ಎಲೆ ಬಾಲೆ ಅರಿತೆನೀಗ ಬಹು ಸಂತಸವಾಯಿತು ಎರಗುವೆ ಚರಣಕೆ ನಾನು | ನಿನ್ನ ಸರಿಯಾರೈ ದೊರೆ ನೀನು 12 ಧರೆಯೊಳಯೋಧ್ಯಾ ಪುರದರಸನ ಮಗ ಗುರುರಾಮವಿಠಲನೆ ನಾನು | ಓ ತರುಣಿ ನಿನಗೊಲಿದು ಬಂದೆನು ಧರಣಿ ತನಯೆ ನಸುನಾಚಿಕೆಯಿಂದಲಿ ಣಗಳನು ತೊಳೆದಳು ಬೇಗ 13
--------------
ಗುರುರಾಮವಿಠಲ
ಬರಿದೆ ಬಿಡದೆನ್ನ ಹರುಬೆಂಬೆಯೋತೆರಹುಗೊಡದು ಹರಿಸ್ಮರಣೆಗೆಂಬೆಯೊ ಪಒಲ್ಲೆನೆಂದರೆ ನಿನ್ನ ಕೊಲ್ಲುವುದೆ ಬರಿದುಸೊಲ್ಲಿಸದಿರೆ ನಿನ್ನನೀಯುವದೆತಲ್ಲಣಗೊಳದಿರೆ ವಟಯನೊಡೆಯುವದೆಬಲ್ಲೆನೆನ್ನಲಿದಾರಲು ಬಾಯಬಡಿವದೇನೊ 1ಪರರೊಳಿಪ್ಪುದೊ ನಿನ್ನ ಕರಣದೊಳಿಪ್ಪುದೊಹರುಬುತಿಂ ಬೀದಿಯಲಿರುತಿಪ್ಪುದೊತಿರುಗುತಿಪ್ಪುದೊ ಬೆಂಬಿಡದೆ ಸಾಲವಕೊಂಡಿಹುದೊಬರಿದೆ ಪತ್ರವೊ ಪೇಳು ಮರುಳೆ 2ಪರರು ನುಡಿಯುತಿರೆ ಮರುನುಡಿಯುವೆ ನೀನೆಕರೆಯದಿದ್ದರು ಪೋಗಿ ಬೆರೆಯುತಿಹೆತೊರೆದು ಬಿಡುವ ಬುದ್ಧಿ ಬರದಾದ ಕಾರಣಾಉರುಳಿಗೆ ಸಿಕ್ಕಿದುರುಗನಂತೆ ಹೊರಳುವೆ 3ಆಶಾ ಪಿಶಾಚಿ 'ಡಿದ ಕಾರಣ ನೀನುಮೋಸ ಹೋಗಿಯೆ ನೀನೆ ಮುಂಬರಿದುಹೇಸದೆ 'ೀನಾಯಗೆ ಮೈಗೊಡುವೆ ಬಪ್ಪನಾಶವನರಿಯೆ 'ರತಿುರುವುದಾ 4ಬೆರೆದು ಸಂಸಾರದೊಳಿರುವಂತೆ ಚಿಕ್ಕನಾಗಪುರವಾಸಿ ಗುರುವಾಸುದೇವಾರ್ಯನಾಚರಣ ಸೇವೆಯೊಳ್ಮನ'ರಿಸಿ ಬಾಳ್ದರೆ ಸುಖಶರಧಿಯಾಗುವೆ ದುಃಖವರುಗಸಿರದು ನಿನ್ನ 5
--------------
ವೆಂಕಟದಾಸರು
ಬಲ್ಲೆ ಬಲ್ಲೆನು ನಿನ್ನ ಬಾಳ ಪ್ರತಾಪವಎಲ್ಲಾ ಲೋಕ ಲೋಕದಿ ಪ ಭಂಗ ಪಡಿಸಿದೆ ನಿನಗೆಣೆ-ಯಿಲ್ಲ ಶನೈಶ್ಚರನೆ ಅ ಹರಿಹರ ಬ್ರಹ್ಮಾದಿಗಳ ಭಂಗಪಡಿಸಿದೆ ಕರುಣವಿಲ್ಲವೆ ನಿನಗೆ ಹರಿಶ್ಚಂದ್ರ ನಳಚಕ್ರವರ್ತಿ ಷೋಡಶ ಮಹಾರಾಯ ಪಾಂಡ್ಯರ ದಣಿಸಿ ತೋರಿಸಿದೆ ಮನೆ ಮನೆ ವಾರ್ತೆಗಳೆಲ್ಲವ ತಿರಿದುಂಡು ಮರುಳುಗೊಂಡು ಪರರ ಪೀಡಿಸಿ ಭ್ರಮೆಪಟ್ಟು ಲಜ್ಜೆಗೆಟ್ಟು ತಿರುಗುವಂದದಿ ಮಾಡಿದೆ 1 ಕಟ್ಟಿದ ಪಶು ಕರೆಯದು ತಾನಾಡಿದ ಮಾತು ಕಟ್ಟದು ಸಭೆಯೊಳಗೆ ಮೆಟ್ಟಿದ ನೆಲ ಮುನಿವುದು ಹೊನ್ನ ಹಿಡಿದರೆ ಬಕ್ಕಟ್ಟೆ ಬಯಲಹುದು ಉಟ್ಟದ್ದು ಹಾವಾಗಿ ಹರಿವುದು ಸಾಲಿ-ಗರಟ್ಟುಳಿ ಘನವಹುದು ಮುಟ್ಟ ಹೇಸುವರು ಕುರುಹ ನಾರಿಯರು ನೆಂಟರಿಷ್ಟರೆ ಕಾಣರು 2 ಸತಿ ಬದ್ಧದ್ವೇಷದಿ ಬೈವಳು ಇದ್ದ ಮನುಜರ ಪಾಡೇನು ನೀ ಬಂದು ಹೊದ್ದಿದ ಮಾತ್ರದಲಿ ನಿದ್ದೆ ಹಸಿವು ಬಳಲಿಕೆ ದಟ್ಟ-ದಾರಿದ್ರ್ಯವು ಕೈಗೊಂಬುದು 3 ಒಳ್ಳೆದಾಗಿದ್ದ ಸಂಗಾತಿಯ ಸ್ನೇಹವೆಲ್ಲವನು ಬಿಡಿಸಿ ಅಲ್ಲಲ್ಲಿ ಕೊಡುವ ದಾನಿಗಳ ಮನದಿ ಪೊಕ್ಕು ಇಲ್ಲಿಲ್ಲ ಹೋಗೆನಿಸಿ ಇಲ್ಲದ ಅಪವಾದ ಭಾಳ ಕಂಟಕ-ರೋಗದಲ್ಲಿ ನೋಯಿಸಿ ಒಲ್ಲೆನೀ ಜನ್ಮವೆಂದೆನಿಸಿ ಸಾಧಿಸಿ ಕಡೆಯಲ್ಲಿ ಗುಣ ತೋರಿಸಿ4 ದೇಶದೇಶದ ರಾಯರ್ಗಳನೆಲ್ಲರನು ಪರದೇಶಿಗಳನು ಮಾಡಿದೆ ವಾಸವನೆ ಬಿಡಿಸಿ ತಿರುಗಿಸಿ ಗಾಸಿ-ಯಿಂದಲೆ ನೋಯಿಸಿ ಶೇಷಶಯನ ಸರ್ವೇಶ ದೇವೇಶನೆ ಲೇಸು ಪಾಲಿಸೊ ಎನಗೆ ದೇಶದಂತರ್ಯಾಮಿ ನೆಲೆಯಾದಿಕೇಶವತೋಷದಿ ಸಲಹೊ ಎನ್ನ 5
--------------
ಕನಕದಾಸ
ಬಾಯಿಂದಾಗುವುದು ಭವಾಭವ ತಿಮ್ಮ ರಾಯನ ನಾಮವ ನುಡಿಯುತಲಿರು ಜೀವಾ ಪ. ರಸನೆಯ ಗೆಲಿದರೆ ವಿಷಯ ನಿವರ್ತಿಸಿ ವಶವಾಹುದಿತರೇಂದ್ರಿಯಗಳೆಂದು ವಸುದೇವ ಸುತನು ವಾಸವಿಗೆಂದು ನುಡಿಯ ಧ್ಯಾ- ನಿಸುತ ಜಾಗೃತನಾಗು ಮುಸುಕಿನೊಳಿಹ ಜೀವಾ 1 ಭವ ಕಂಡು ನಿಂದೆಯ ಮಾಡಿ ಪಿಕವದು ಕೊಂಡಾಡುವುದಾ ಮಾಡದಿದ್ದರೆ ನಗೆಗೀಡಾಹುದಿದರಿಂದ 2 ಮಧ್ವವಲ್ಲಭನಿಗರ್ಪಿತವಾದ ನೈವೇದ್ಯ ಶುದ್ಧ ತೀರ್ಥ ತುಳಸಿಯ ಸಹಿತ ಮೆದ್ದರೆ ಬಹಿರಂತಃ ಶುದ್ಧಿಯಾಗುವುದು ನಿ- ಷಿದ್ಧ ಭಕ್ಷಣದಿಂದ ನೀಚನೆಂದೆನಿಸುವ 3 ಶ್ರೀಯರಸನ ಜಿಹ್ವೆಯಲಿ ಪೊಗಳಲು ಯಮ ರಾಯನಾಳ್ಗಳು ನೋಡಲಂಜುವರು ಮಾಯಾ ಪ್ರಪಂಚದಿ ಮರುಳಾದ ಜನರೊಳು ನ್ಯಾಯವಾಡಲು ನಾನಾಪಾಯವ ಘಟಿಸುವ 4 ಕ್ಷೇತ್ರ ಕಳತ್ರಾದಿಗಳ ಬಿಟ್ಟು ತಿರುಗುವ ತೀರ್ಥಯಾತ್ರೆಯ ಮಾಡುವುದಕಧಿಕಾ ಸ್ತೋತ್ರದಿಂದ ಶ್ರೀ ಕಳತ್ರನ ಕರುಣೈಕ ಪಾತ್ರರ ಮಾಳ್ಪ ವಿಚಿತ್ರ ಸನ್ನಹವಾದ 5 ಹಲವು ಕರ್ಮದ ಶಾಸ್ತ್ರ ನೆಲೆಯರಿಯದೆ ತ- ತ್ಫಲವಾಗಬೇಕೆಂಬ ಛಲವಿಡೀವ ಕಲಿಯೊಳಗುದಿಸಿದ ಜನರಿಗೆ ಗತಿಯಾಗಿ ಜಲಜನಾಭನ ನಾಮ ನೆಲೆಯಾಗಿ ನುಡಿವಂಥ 6 ನಾಮಕೀರ್ತನೆಗೈಯ್ಯೆ ನಲಿವುತ ಬಹ ನಮ್ಮ ಶ್ರೀಮಹೀಯರಸ ವೆಂಕಟರಾಜನು ಕಾಮಿತಾರ್ಥವ ನೀಡಲ್ಲಧಿಕ ಸಾಧನವಿದು ಪಾಮರತೆಯ ಬಿಟ್ಟು ಪರಮಾರ್ಥದ ಗುಟ್ಟು 7
--------------
ತುಪಾಕಿ ವೆಂಕಟರಮಣಾಚಾರ್ಯ
ಬಾರೋ ಬಾರೋ ಕೋಪವಿನ್ಯಾತಕೆನ್ನ ಕೂಡಾ ರಂಗರಾಯಾ| ಸಾರಿದ ನಿನ್ನರಸಿಯ ತಪ್ಪನೊಳ್ಪರೇ ರಂಗರಾಯಾ ಪ ಚಲ್ವ ಕಣ್ದೆರೆವುತ ಮೊಗವತಿರಹುವರೇ ರಂಗರಾಯಾ| ಹಲ್ಲವ ಮಸೆಯುತ ಘುಡುಘುಡಿಸುವರೇ ರಂಗರಾಯಾ 1 ಭೀಕರಾಕೃತಿಯಾಗಿ ಕೊಡಲಿಯ ಪಿಡವರೇ ರಂಗರಾಯಾ| ಏಕಾಂಕಿಯಾಗಿ ಕದ್ದು ತಿರುಗುವರೇ ರಂಗರಾಯಾ 2 ಆಗೋಚರವಾಗದೇ ತುರಗೇರಿ ತ್ವರಿತದಿ ರಂಗರಾಯಾ| ಸುಮದಿ ಬಾ ಮಹಿಪತಿ ಸುತ ಜೀವನ ರಂಗರಾಯಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಬಾಲಗೋಪಾಲನ ತೋರೆಲೆ ಲಲನೆ ಲೀಲೆಗಳಲ್ಲಿ ಮುದದಿಂದ ಪ ಕಾಲ ಕಳೆಯುತಿರೆ ಬಾಲೆಯರು ಕೇಳೆ ಪೇಳದೆ ಅಗಲಿದನೆಮ್ಮ ಬಲು ಲೋಲನಾಗಿಹನಿವನಮ್ಮ ಎಮ್ಮ ಮೇಲೆ ಅತಿ ಕಠಿಣನಮ್ಮ ಮೋರೆ ಕೀಳು ಮಾಡುವನಿವನಮ್ಮ ಕೋಪ ಜ್ವಾಲೆಯಿಂದುರಿಯುವನಮ್ಮ ಬಲು ಬಾಲನಾಗಿಹನಿವನಮ್ಮ ಗುಣ ಶಾಲಿ ಮಾತೆಯ ಕೊಂದನಮ್ಮ ಕಪಿ ಜಾಲದೊಳತಿ ಪ್ರಿಯನಮ್ಮ ಪರ ಬಾಲೆಯೊಳತಿ ಮೋಹವಮ್ಮ ಮಾಯಾ ಜಾಲವ ಬೀಸುವನಮ್ಮ ಬಲು ಕೀಳನು ಮೇಲು ಮಾಡುವನು ಇಂಥಾ 1 ಸಾರಸಾಕ್ಷನ ವಿರಹವನು ಸೈರಿಸಲಾರೆವೆ ಕರುಣದಲಿ ತೋರೆ ಕೋರುವೆವು ವಿನಯದಲಿ ಅವ ನೀರೊಳಗಡಗಿದನೇನೆ ದೊಡ್ಡ ಮೇರು ಬುಡದಲಿಹನೇನೆ ಅವ ಚಾರು ಸೂಕರನಾಗಿಹನೇನೆ ಅವ ಬಾರಿ ಕಂಭದಲಿಹನೇನೆ ವೇಷ ಧಾರಿ ಬ್ರಹ್ಮಚಾರಿಯೇನೆ ಕ್ಷಿತಿ ಪಾರಿಯೆನಿಸಿ ತಿರುಗುವನೆ ಅವ ಸೇರಿಹನೆ ಹನುಮನನು ಅಯ್ಯೋ ಜಾರ ಚೋರನಿವನಮ್ಮ ಮಾನ ಮೀರಿ ಬತ್ತಲೆ ನಿಂತಿಹನೇ ವಾಜಿ ಏರುತ ಓಡುತಲಿಹನೇ ಇಂಥಾ 2 ವೇಣು ವಿನೋದದಿ ಕುಣಿಯುತಲಿ ಕಾಣುವುದೆಂತು ಪ್ರಸನ್ನ ಮಾಧವನ ಮೀನ ರೂಪವ ತಾಳಿದನ ಬಲು ಪೀನ ಶರೀರ ಕಂಠನ ಧರೆ ಯಾನನದಲ್ಲಿ ಪೊತ್ತಿಹನ ದುಷ್ಟ ದಾನವನನು ಸೀಳಿದವನ ಭೂಮಿ ದಾನವ ಯಾಚಿಸಿದವನ ಭೃಗು ಮುನಿಯೊಳವತರಿಸಿದನ ಕಡು ಕಾನನದೊಳು ತಿರುಗಿದನ ಸವಿ ವೇಣು ಗಾನವ ಮಾಡಿದನ ಬಹು ಮಾನಿನಿ ವ್ರತಗಳನಳಿದವನ ಪ್ರಸ ನ್ನಾನನ ತುರಗವಾಹನನ 3
--------------
ವಿದ್ಯಾಪ್ರಸನ್ನತೀರ್ಥರು
ಬುಗುರಿ ಆಡೋ ತಮ್ಮ ಬುಗುರಿ ಆಡೊ ಪ ಬಗೆ ಬಗೆ ಜನುಮದಿ ತಿರುಗಿ ತಿರುಗಿ ಬಂದೊದಗತನದನುಭವ ಪರಿಕಿಸಿ ನೋಡೊ ಅ.ಪ. ತನುವೆಂಬುದೆ ಕೊರಡಿನ ತುಂಡುದಿನದ ಕರ್ಮವೆ ಕೊನೇರು ದುಂಡುಮನವೆಂಬುವ ಮೊಳೆಯನು ಚುಚ್ಚಿಕೊಂಡುಘನ ಹರುಷದಿ ಕರದಲಿ ಕೊಂಡು 1 ಭವವೆಂಬುದೆ ನಿನ್ನ ಜಾಳಿಗೆ ನೋಡೋತವಕದಿ ಬಿಡದಲೆ ಬಿಗಿಗಿಸುತ್ತ್ಯಾಡೋಸವಿಯನುಂಡು ನೀ ಹರಿಯನು ಬೇಡೊಜವದಲಿ ಝಾಡಿಸಿ ಭರದಿ ಬೀಸಾಡೊ 2 ಧರೆಯ ಗದುಗಿನ ವೀರನಾರಾಯಣನಚರಣದಿ ಮೊಳೆಯೂರಿ ತಿರುಗುತಲಾಡೊಕರಣಗಳಳೆದು ಏಕ ಚಿತ್ತದಿಸ್ಮರಿಸುತ ನಿಂತು ನಿದ್ದೆಮಾಡೊ 3
--------------
ವೀರನಾರಾಯಣ
ಬೆಳಗುವಿರಿ ನೋಡೆ ದೇವಕುವರರಂತಿಹಿರಿ ಧೀರ ಗಂಭೀರತರ ಭಾವ ತೋರ್ಪುದು ಮುಖದಿ ನಾರು ವಸ್ತ್ರವ ಧರಿಸಿ ತಿರುಗುವಿರಿ ವನದಿ 1 ಕಂದರ್ಪನನು ಪೋಲ್ವ ಕಮನೀಯ ವಿಗ್ರಹರು ವೈರಿ ನಿಗ್ರಹರು | ಪುಟಕ್ಕಿಟ್ಟ ಚಿನ್ನದಂತೆ ಕಾಂತಿರಂಜಿತರು ಪಟುತರಂಗರು ಗಹನವಿಟದಿ ಪರಿವ್ರಾಜಕರು 2 ಆಜಾನುಬಾಹುಗಳು ಆಜಾನು ಜಂಘಗಳು ಆ ಜಟ ಮಂಡಲವು ರಾಜಿಸುತಲಿಹವು ದೃಢವಾದ ನಿಮ್ಮಡಿಗಳಿಡುವ ಧ್ವನಿಗಳ ಕೇಳಿ ಅಡವಿಯೊಡತನ ಪಡೆದ ಸಿಂಹಗಳು ನಡುಗುವುವು 3 ಧರೆಗಿಳಿದು ಬಂದಿರ್ಪ ರವಿ ಚಂದ್ರರಂದದಲಿ ನೆರೆ ಪ್ರಕಾಶಿಕರಾಗಿ ಕಂಗೊಳಿಸುತಿಹಿರಿ ಗುರುತರದ ಕಾರ್ಯತತ್ಪರರಾಗಿ ಬಂದಿರುವ ನರೆÉಭಾವ ತೋರುವುದು ಕರಿಗಿರೀಶನ ದಯದಿ 4
--------------
ವರಾವಾಣಿರಾಮರಾಯದಾಸರು
ಬೇಡಿಕೊಂಬೆಗೋಪಾಲ ಬೇಡುವೆನೈ ದಯ ಪ ಮಾಡಿ ಎನ್ನೊಳು ಬೇಗ ಗಾಢ ಮಹಿಮ ವರ ನೀಡೋ ಕೃಪಾಂಬುಧೇ ಅ.ಪ ಮರುಳನಾಗಿ ನಾನು ತಿರುಗುವೆ ಧರೆಯೊಳು ಸಿರಿವರ ನಿಮ್ಮಯ ಚರಣವ ಸ್ಮರಿಸದೆ ಪರಿ ನರಕಕ್ಕೆ ಗುರಿಯಾದೆ ಮುರಹರ ಕರುಣದಿಂ ಮನ್ನಿಸಿ ಪೊರೆ ಸುರವರ 1 ದೀನದಯಾಪರ ಜಾನಕೀ ಮನೋಹರ ನೀನೆ ಗತಿಯೆಂದು ಧ್ಯಾನಿಸಿ ಬೇಡುವೆ ಹೀನನ ಮಾಡದೆ ಧ್ಯಾನಿಪ ಭಕ್ತನಂ ಮಾನದಿಂ ರಕ್ಷಿಸು ವೇಣುಧರಹರಿ2 ಸುರುಪರೀಶ ಹರಿ ಚರಣದಾಸರ ಮೊರೆ ಕರುಣದಿ ಆಲಿಸಿ ಕರಪಿಡಿದು ಪೊರೆ ನೆರೆನಂಬಿದೆ ನಿಮ್ಮ ಚರಣವ ಪರಿಪರಿ ಪರಮಪಾವನ ಮಾಡು ಸಿರಿವರ ಶ್ರೀರಾಮ 3
--------------
ರಾಮದಾಸರು
ಬ್ರಹ್ಮಜ್ಞಾನಿಗಳ ನೋಡಿರೊ ಇಹ್ಹಿಹ್ಹಿಬ್ರಹ್ಮಜ್ಞಾನಿಗಳ ನೋಡಿರೋ ಪ ಜ್ಞಾನಿಗಳು ತಾವು ಅಂತೆ ತಾವೇ ಪರಬ್ರಹ್ಮರಂತೆಏನೋನೋ ಹುಚ್ಚುಮಾತು ಕೇಳಿರಯ್ಯ ಅಹ್ಹಹ್ಹ 1 ಜೊಂಡು ಹುಲ್ಲಿನಂತೆ ಮಂಡೆಗಳ ಬೆಳೆಸಿಕೊಂಡುಕಂಡ ಕಂಡಂತೆ ತಿರುಗುವವರ ನೋಡಿರಯ್ಯ ಅಹ್ಹಹ್ಹ 2 ಸಂಧ್ಯವಿಲ್ಲ ಸ್ನಾನವಿಲ್ಲ ಮುಂದೆ ಹೋಮ ತರ್ಪಣವಿಲ್ಲಅಂದು ತಾವೇ ಬ್ರಹ್ಮವಂತೆ ಕಂಡಿರೇನೋ ಅಹ್ಹಹ್ಹ3 ಕಾವಿ ಕೌಪವುಟ್ಟುಕೊಂಡು ಕಮಂಡಲು ಹಿಡಿದುಕೊಂಡುದೈವ ತಾನೇ ಎಂಬ ದೈವಗಳ ನೋಡಿರೋ ಅಹ್ಹಹ್ಹ4 ಇಂತು ಚಿದಾನಂದ ಗುರು ಭಕ್ತರಗಳ ನಿಂದ್ಯಮಾಡಿಅಂತು ಕಾಲನ ಅರಮನೆಯ ಕುರಿಗಳಾದರಹ್ಹಹ್ಹ 5
--------------
ಚಿದಾನಂದ ಅವಧೂತರು