ಒಟ್ಟು 125 ಕಡೆಗಳಲ್ಲಿ , 43 ದಾಸರು , 119 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸೋಜೀಗ ರೊಳಗತಿ ಸೋಜೀಗ ರಾಘವೇಂದ್ರಾ ಗುರು ಪ ಸೋಜೀಗ ವಲ್ಲವೆ ರಾಜಾ ಗುರುವು ನೀನು ನೈಜ ರೂಪದಿ ಬಂದು ಮಾಜಾದೆ ಪೊರೆವುದು ಅ.ಪ ಬೆಂಬಲ ನಿನಗೆಂದು ಸ್ತಂಭದಿ ಹರಿ ಬಂದ ಇಂಬು ಪಾಲಿಸು ಗುರುವೇ ನಂಬೀದ ಜನಗಣ ಡಿಂಭದಿ ನೀ ಮೂಡಿ ಅಂಬಕ ದೊಳು ಕಂಡೇ 1 ಇಲ್ಲ ಹರಿಯು ಎಂಬ ಕ್ಷುಲ್ಲ ಸಂಶಯ ವೆಂಬ ಹಲ್ಲು ಮುರಿದು ಭಕ್ತರಲ್ಲಿ ತುಂಬುವೆ ಭಕ್ತಿ ಇಲ್ಲದಿರಲು ನೀನು ಕಳ್ಳ ಕಲಿಯು ಜಗ ವೆಲ್ಲ ತುಂಬುತ ಶೃತಿ ಸುಳ್ಳು ಎನಿಸುತಿದ್ದಾ 2 ನಿರುತ ನೀಡುತ ಹರಿಕೆ ಕರೆದು ಪೊರೆವೆ ಜನರ ಸರಿಯು ಕಾಣೆನು ನಿನಗೆ ಹರಿಯ ಕಿಂಕರ ಶರಣು ಮರುತ ದೇವನ ಮತ ಮೆರೆಸಿ ಕುಣಿಸುತ್ತಿರುವೆ ಶರಣ ಜನರ ಪೊರೆವ ಪರಮಾಪ್ತ ಸಿದ್ಧವೋ 3 ಹುಣ್ಣು ಅಳಿಸಿ ಭಕ್ತಿ ಹಣ್ಣು ತಿನ್ನಿಸಿ ಜ್ಞಾನ ಕಣ್ಣು ಪಾಲಿಪ ಗುರು ಮಣ್ಣು ಗೂಡಿಸೊ ಭವವ ಸಣ್ಣವರೆಮ್ಮ ಶಂಕು ಕರ್ಣನೆ ಸಲಹೈಯ್ಯ ಗಣ್ಯರೊಳಗೆ ಗಣ್ಯ ಪೂರ್ಣ ಪ್ರಜ್ಞರ ಪ್ರೀಯಾ 4 ಹಿಂದೆ ಹೋಯಿತು ಹೊತ್ತು ಮುಂದೆ ಕಾದಿದೆ ಮೃತ್ಯು ಇಂದು ಭಾರವ ಪೊತ್ತು ಕಂದರೆಮ್ಮನು ಕಾಯೋ ಇಂದ್ರ ತಾತನ ಹೃದಯ ಮಂದೀರದಲಿ ನಲಿವ ಇಂದಿರೇಶ ಕೃಷ್ಣವಿಠಲ ರಾಯನ ತೋರು 5
--------------
ಕೃಷ್ಣವಿಠಲದಾಸರು
ಹರಹರ ವಿಶ್ವೇಶ್ವರ ಕರುಣಾಕರ ಪರಮ ಪುರುಷ ದೇವಾ ಚರಾಚರವ ತುಂಬಿಭರಿತವಾಗಿ ಸ್ಮರಿಸುವ ಭಕ್ತರ ತ್ವರಿತದಿ ಪಾಲಿಪ ಪ ಗಜಾಸುರನೆಂತೆಂಬ ದನುಜನ ವಿಜಯನಾಗಿ ತೊಗಲನ್ನು ಪೊತ್ತೆ ನಿಜಾನಂದವ ನೀವಾ ಚಿನ್ಮಯನೇ 1 ತನುಮನದೊಳಗೆಲ್ಲಾ ಹೊಳೆಯುತಲಿರ್ಪಾ ಜನಜನಿತಳಲ್ಲಿ ಪ್ರಣವರೂಪನಾದ ತುಂಬುತ್ತಾ ತುಳುಕುತ್ತಾ ಘನಪರಮಾನಂದಾ ಸಚ್ಚಿದ್ರೂಪಾ 2 ಒಳಹೊರಗೆಂಬೀ ಭೇದಗಳೆಲ್ಲವ (ಹೊರಗೆ ಒಳಗೆ) ಹರಣ ಮಾಡುತಿರ್ಪಾ ಹರನೇ ನಾನೀನಾದ ಕಾರಣ ಬೆರತು ನಿನ್ನೊಳು ಸ್ಮರಿಸುವೆ ಭರದಿ 3 ಚಿಂತೆಗಳೆಲ್ಲವನೀಗೆ ನಿಜಾನಂದ ಸಂತಸಗಳನೀವಾ ಅಂತವಿಲ್ಲದಾನಂತ ಪರಾತ್ಪರ ಶಾಂತಿ ಪದವನೀವ ಮಹಾದೇವಾ 4
--------------
ಶಾಂತಿಬಾಯಿ
ಹರಿ ಕೃಪೆಯಿಂದಲಿ ದೊರೆದಿತು ಯನಗೀ ಶಿರಿಕರ ತಂಬೂರಿಪ ನರಹರಿ ನಾಮ ಸ್ಮರಣೆಯಗೈಯುವಾ ನರಂಗೆ ಸಹಕಾರಿ ಅ.ಪ. ತಾಪತ್ರಯವನು ಲೊಪಗೈವ ಸುಖ ರೂಪಿನ ತಂಬೂರಿ ಶ್ರೀಪತಿ ಭಕ್ತಿನಿರೂಪಣದಿಂದಖಿಲಾಪತ್ಪರಿಹಾರಿ 1 ವಾಸುದೇವ ನಿಜದಾಸರು ಪಿಡಿಯುವ ಭಾಸುರ ತಂಬೂರಿ ವಾಸುಕಿ ಶಯನ ವಿಲಾಸದ ಕೀರ್ತಿವಿಕಾಸದ ಜಯಭೇರಿ 2 ಅಂಬುಜಭವನ ಕುಟುಂಬಿನಿಯ ಕರಾಲಂಬನ ತಂಬೂರಿ ತುಂಬುರನಾರದ ರಂಬುರುಹಾಕ್ಷನ ಹಂಬಲಿಗನುಸಾರಿ 3 ಗಂಧರ್ವರ ಕರಪೊಂದಿ ಮೆರೆವ ಬಲು ಸುಂದರ ತಂಬೂರಿ ಸುಂದರಿಯರ ನಲವಿಂದಲಿನುಡಿಸುವಾನಂದ ಸುಗುಣಧಾರಿ 4 ಶ್ರುತಿಯುತ ಮಾಗಲು ಮತಿಯುತರಿಗೆ ಸಮ್ಮತವಹತಂಬೂರಿ ಶ್ರುತಿಹೀನತೆಯಿಂದ ತಿಶಯಮಾಗದು ಕೃತಿಶತವನುಸಾರಿ 5 ಸುಕೃತ ಪರಿಪಾಕದ ತಂಬೂರಿ ಈ ಕಲಿದೋಷ ನಿರಾಕರಣೆಗೆ ಬಹು ಭೀಕರ ಮುಖಧಾರಿ 6 ಧರೆಯೊಳು ಪುಲಿಗಿರಿ ವರದ ವಿಠಲನ ಬಿರಿದಿನ ತಂಬೂರಿ ದುರಿತವೆಂಬ ಮದಕರಿಯನು ಸೀಳುವ ಹರ್ಯಕಾರಿ 7
--------------
ಸರಗೂರು ವೆಂಕಟವರದಾರ್ಯರು
ಹಿಗ್ಗದಿರು ಹಿಗ್ಗದಿರು ಮನುಜಪಶುವೆ | ಮುಗ್ಗಿತಗ್ಗುವುದು ಮುಂದರಿಯದಲೆ ಮರುಳಾದೆ ಪ ಆಯುದಲಿ ದ್ರೋಣಸುತ ಕೃಪ ವಿಭೀಷಣನೇನೊ | ಶ್ರೇಯದಲಿ ದಶರಥ ನಹುಷನೇನೊ || ಈಯುದ್ದಕೆ ಮಯಾರ ಧ್ವಜ ಶಿಬಿ ಬಲಿಯೇನೊ | ಮಾಯಾ ಬಿಡುವಲ್ಲಿ ಜಡ ಭರಿತ ನೀನೇನೊ 1 ಶೂರತ್ವದಲಿ ಭೀಷ್ಮ ಅಭಿಮನ್ಯು ನೀನೇನೊ | ಘೋರ ತಪಸಿನಲಿ ವಿಶ್ವಾಮಿತ್ರನೇನೊ || ವಿರುಕುತಿಯಲಿ ಸುರಸೈನ್ಯ ನಾಯಕನೇನೊ | ಹಾರುವ ಬಿಂಕದಲಿ ಗರುಡ ನೀನೇನೊ 2 ಬಲದಲ್ಲಿ ಬಲರಾಮ ಶಲ್ಯ ಕೀಚಕನೇನೊ | ತಿಳಿವಳಿಕೆಯಲಿ ವಿದುರ ಸಂಜಯನೇನೊ || ಒಲಿದು ಪಾಡುವಲಿ ನಾರದ ತುಂಬುರನೇನೊ | ಛಲ ಮಾಡುವಲ್ಲಿ ಧ್ರುವರಾಯ ನೀನೇನೊ 3 ಭಕುತಿಯಲಿ ಪ್ರಹ್ಲಾದ ಪುಂಡರೀಕನೇನೊ | ಭುಕುತಿಯಲಿ ಅಗಸ್ತ್ಯ ಬಕ ನೀನೇನೊ || ಉಕುತಿಯಲಿ ಸೂತ ಸಹದೇವ ಶೌನಕನೇನೊ | ಶಕುತಿಯಲಿ ವಾಲಿ ಯಮರಾಯ ನೀನೇನೊ 4 ಶುಕ ಜನಕ ಸನಕಾದಿಗಳೇನೊ | ಕರ್ಣ ನೀನೇನೊ || ಭೋಗ ಬಡುವಲ್ಲಿ ಮಹಾಭಾಗ ಇಂದ್ರನೇನೊ | ವೇಗದಲಿ ಪುರುಷ-ಮೃಗನು ನೀನೇನೊ 5 ಸಖತನ ಮಾಡುವಲ್ಲಿ ಶ್ವೇತವಾಹನನೇನೊ | ನಿಖಿಳ ಕಥೆ ಕೇಳುವಲ್ಲಿ ಪರೀಕ್ಷಿತನೇನೊ || ಅಖಿಳರನು ಗೆಲುವಲ್ಲಿ ಕಾರ್ತವೀರ್ಯನೇನೊ | ಸುಖದಲ್ಲಿ ಇಪ್ಪದಕೆ ಪವನ ನೀನೇನೊ 6 ವಿತ್ತದಲಿ ನೀನು ವೈಶ್ರವಣನೇನೊ | ಮತ್ತೆ ಕ್ಷಮೆಯಲಿ ಹರಿಶ್ಚಂದ್ರನೇನೊ | ಭೃತ್ಯತನ ಪಡೆವಲ್ಲಿ ಅಕ್ರೂರ ನೀನೇನೊ | ಸುತ್ತವಲಿ ಪ್ರಿಯವ್ರತ ರಾಯನೇನೊ 7 ವ್ರತದಲ್ಲಿ ಅಂಬರೀಷ ರುಕುಮಾಂಗದನೇನೊ | ಸ್ತುತಿಯಲ್ಲಿ ಮುಚುಕುಂದರಾಯನೇನೊ || ಅತಿ ಚೆಲುವತನದಲ್ಲಿ ಮನ್ಮಥ ನಕುಲನೇನೊ | ಕ್ರತು ಮಾಡುವಲ್ಲಿ ಧರ್ಮಪುತ್ರ ನೀನೇನೊ8 ಶಾಪಗಳ ಕೊಡುವಲ್ಲಿ ಬ್ರಹ್ಮಪುತ್ರನೇನೊ | ತಾಪ ತೋರುವಲ್ಲಿ ರವಿ ಅನಳನೇನೊ | ಕೋಪ ಮಾಡುವಲ್ಲಿ ಗಿರಿಜಾರಮಣನೇನೊ | ತಾಪಸಿರ ನಡುವೆ ವಸಿಷ್ಠ ನೀನೇನೊ9 ಉನ್ನತದಲಿ ನೀನು ಮೇರು ಪರ್ವತನೇನೊ | ಘನ ಮದದಲಿ ಧೃತರಾಷ್ಟ್ರನೇನೊ || ಇನ್ನು ಮತಿಯನ್ನು ಕೊಡುವಲಿ ಗಜಮೊಗನೇನೊ | ಮುನ್ನೆ ಕವನದಲ್ಲಿ ಶುಕ್ರದೇವನೇನೊ 10 ಹಮ್ಮಿನಲಿ ಬಾಳದಿರು ಹಿತವಾಗದೊ ನಿನಗೆ | ಆ ಮಹಿಮರ ಸರಿ ನೀನಲ್ಲವೊ || ಸಿರಿ ವಿಜಯವಿಠ್ಠಲರೇಯನ್ನ | ನೆಮ್ಮಬೇಕಾದರೆ ಸೋಹಂ ನಿರಾಕರಿಸು11
--------------
ವಿಜಯದಾಸ
ಉಪ್ಪವಡಿಸಯ್ಯ ಕೃಷ್ಣ ಪ.ಉಪ್ಪವಡಿಸೈ ಬೊಮ್ಮನಪ್ಪ ಭುವನಾವಳಿಯಸ್ವಪ್ಪನಾದಿ ತ್ರಯವನಪ್ಪಿ ಪಾಲ್ಗಡಲ ಮಗಳಪ್ಪಿ ಅಹಿವರನ ಸುಪ್ಪತ್ತಿಗೆಲಿ ಒರಗಿಪ್ಪತಿಮ್ಮಪ್ಪವ್ರಜದಿ ದಯದಿಅ.ಪ.ಅರುಣಮೂಡಣವೇರೆ ತ್ವರಿತ ತಮಕುಲ ಜಾರೆಹರಿದವಭ್ರದ ತಾರೆ ತರಣಿಕರ ಬಳಿ ಸಾರೆಸರಸಿಜವಿಕಸತೋರೆ ಮರುತ ಪರಿಮಳ ಬೀರೆ ನೆರೆದುಹರುಷ ದಿವಿಗಣ ಬೀರೆ ಮೊರೆಯುತಿವೆ ಸುರಭೇರೆಪರಮಹಂಸರು ಮೇರೆ ಮರೆದು ಸ್ಮರಿಸುತಲೈದಾರೆಸರ್ವವೇದ ಘೋಷ ಹರಿಪರವೆನುತಲೈದಾರೆ ಕರುಣದಲಿವಸುಧ್ಯೆರೆದಕಾಷ್ಠಗಂಧಕುಸುಮಸರ ತಂದಿಹಳುಬಿಸಜಲೋಚನ ನಿಮ್ಮ ಸೊಸೆ ವಾಣಿ ಭಾರತಿಯುಲ್ಲಸದಿ ಪೊಂಭಾಂಡದಲಿ ಬಿಸಿನೀರು ತುಂಬಿಹರುಪಶುಪಸುಸುಪರ್ಣವಸನಉರಗೇಶ ರತುನನಾಸನಮಾಲ್ಯಸುರಪತಿಕಲಶ ವಹಿಸಿ ವರುಣಸ್ಮರತಿಲಕಹಸನ ಮಾಡುವ ಪಾವುಗೆಶಶಿಧರಿಸಿ ನಿಂದ ಸಂತಸದಿಸ್ವರ್ಧುನಿಯು ಗೋದೆ ಗೋವರ್ಧಿನಿಯು ಗಾತ್ರೆಅಜನರ್ಧಾಂಗಿ ಸರಸ್ವತಿ ಶ್ರೀವರ್ಧಿನಿಯು ಕಾವೇರಿನಿರ್ದೋಷಿ ಸರಯು ತುಂಗಭದ್ರೆ ಕಾಳಿಂದಿ ನರ್ಮದ್ಯೆಮರ್ದಿತಘೌಘೆಯು ಕುಮುದ್ವತಿ ವಂಜರೆ ಭೀಮೆನಿರ್ಧೂತಕಲಿಮಲಕಪರ್ದಿನಿಯು ತಾಮ್ರಪರ್ಣಿಊಧ್ರ್ವಗತಿಪ್ರದ ನದಿ ಬಂದಿರ್ದವಿದೆ ತೀರ್ಥ ಕ್ರಮಕಿನ್ನರರು ಸುರನಾಯಕ ಮನ್ನೆಯರು ಸಲೆ ದೇವಗನ್ನೆಯರುಕಿಂಪುರುಷಪನ್ನಗರು ವಿದ್ಯಾಧರನಿಕರ ತುಂಬುರರು ನಿನ್ನಗುಣಕೀರ್ತನೆಯ ಮಾರ್ಗೋನ್ನತದಚೆನ್ನ ಭೂಪಾಳಿ ದೇವ ಧನಶ್ರೀ ದೇಶಾಕ್ಷಿಸನ್ನುತವಸಂತ ಮಲಹ ನವೀನ ಮಾಳ್ಪ ಶ್ರೀಘನ್ನ ಸ್ವನಾಮಂಗಳನು ಪಾಡುವರಿದಕೋ ಧನ್ಯ ಸಂಗೀತಲೋಲ4ಸುರಮುನಿ ಭೃಗು ವಸಿಷ್ಠ ನರಪಋಷಿ ಸನಕಾದ್ಯಮರೀಚ್ಯತ್ರಿ ಪುಲಸ್ತ್ಯ ಆಂಗಿರ ಚ್ಯವನ ಸೌಭರಿಯು ಭಾರಧ್ವಾಜಗಸ್ತ್ಯ ಪರಾಶರ ಕಶ್ಯಪ ಜಮದಗ್ನಿ ಗಾಗ್ರ್ಯಮಾರ್ಕಂಡೇಯ ಬಕದಾಲ್ಭ್ಯ ಕರಂಧಮೋದ್ಧಾಲಕನುವರದಾಂಕ ಜಹ್ನುಮುನಿ ವರ್ಣಿಕುಲದಗಣಿತರುನೆರೆನೆರೆದುತುತಿಸಿಸುಖಭರಿತರಾಗುತ ನಿಮ್ಮ ಚರಣದೂಳಿಗಕ್ಷಿತಿಪರೊಳು ಮರುತ ಪ್ರಿಯವ್ರತ ಪ್ರಾಚೀನ ಬರ್ಹಿಪ್ರಥು ಗಯ ಧ್ರುವಿಕ್ಷ್ವಾಕು ದಿತಿಜಸುತ ಮಾಂಧಾತಪ್ರತಿಸಗರ ನಹುಷಬಲಿಶತಧನ್ವಿದೇಹಿ ದಶರಥಶ್ರುತಕೀರ್ತಿ ಶಿಬಿ ದೇವವ್ರತ ಅಂಬರೀಷನು ಭರತದ್ವಯ ಪುರೂರವ ಯಯಾತಿ ರಂತಿದೇವ ಪರೀಕ್ಷಿತನು ಮುಚುಕುಂದ ನಳ ಶತಪುಣ್ಯಶ್ಲೋಕ ನೃಪರತಿನಂದಗೋಕುಲದ ಗೋವಿಂದಗಾರ್ತರು ನಿದ್ರೆಹೊಂದೆದ್ದಾನಂದದಿಂ ದೀಪಗಳ ಪ್ರಜ್ವಲಿಸಿಮಿಂದು ಬ್ರಾಹ್ಮಿಯಲುಟ್ಟು ಪೊಂದೊಡಿಗೆ ಮಣಿದೊಡಿಗೆವಂದಿಸುತ ಗೃಹದೇವರ ದಧಿಮಥಿಸಿ ಬೆಣ್ಣೆಯಇಂದಿರೆರಮಣ ಮೆಲ್ಲಲೆಂದು ತೆಗೆದಿಡಲರುಹಬಂದಿಹರು ಗೋವಳರು ಮುಂದೆದ್ದು ತಮ್ಮ ಏಳೆಂದುಶ್ರೀಪತಿಯೆ ಬ್ರಹ್ಮಾದಿ ತಾಪಸರ ಪ್ರಭು ಏಳುದ್ವೀಪ ದ್ವೀಪಾಂತರದ ಭೂಪರರಸನೆ ಏಳುಕಾಪುರುಷ ಕಾಳ ಕುಮುದಾಪಹರಹರಿಏಳು ಕೋಪಹೇಪಾರ್ಥಸಖಸುಪ್ರತಾಪ ಜಗ ಎರಡೇಳುವ್ಯಾಪಕನೆ ವಿಬುಧಕುಲಸ್ಥಾಪಕನೆ ಮೂರೇಳುಕೂಪಕುಲನಾಶಕ ಚಮೂಪ ಸಂಹರ ಏಳು ದ್ರೌಪದೀ ಬಂಧು ಏಳು 8ಶ್ರುತಿಯ ತರಲೇಳು ಭೂಭೃತವ ಹೊರಲೇಳುಶುಭಧೃತಿಯನಾಳೇಳು ದುರ್ಮತಿಯ ಸೀಳೇಳಮರತತಿಯ ಸಲಹೇಳು ನಿಜಪಿತನ ಕಾಯೇಳು ಮಹಿಸುತೆಗೆಸತಿಯರಾಳೇಳು ಪತಿವ್ರತೆರ ಗೆಲಲೇಳುಕಲಿಖತಿಯ ಕಳಿಯೇಳು ಪಂಡಿತರುಳುಹಲೇಳು ನಮಗತಿಶಯ ಪ್ರಸನ್ನವೆಂಕಟಪತಿ ಕೃಷ್ಣ ಸದ್ಗತಿದಾತ ತಾತಯೇಳೈ 9
--------------
ಪ್ರಸನ್ನವೆಂಕಟದಾಸರು
ಎಚ್ಚರದಲಿ ನಡೆ ಮನವೆ - ನಡೆಮನವೆ - ಮುದ್ದುಅಚ್ಯುತನ ದಾಸರ ಒಡಗೂಡಿ ಬರುವೆ ಪ.ಧರ್ಮವ ಮಾಡುವುದಿಲ್ಲಿ - ಇನ್ನುಬ್ರಹ್ಮನ ಸಭೆಯ ತೋರುವರು ಮುಂದಲ್ಲಿಕರ್ಮಯೋಜನೆಗಳು ಇಲ್ಲಿ - ಬೆನ್ನಚರ್ಮವ ಸುಲಿಸಿ ತಿನ್ನಿಸುವರು ಅಲ್ಲಿ 1ಅನ್ನದಾನವ ಮಾಳ್ಪುದಿಲ್ಲಿ - ಮೃಷ್ಟಾನ್ನವ ತಂದು ಮುಂದಿಡುವರು ಅಲ್ಲಿಅನ್ಯಾಯ ನುಡಿಯುವುದಿಲ್ಲಿ - ಭಿನ್ನಭಿನ್ನವ ಮಾಡಿ ತಿನ್ನಿಸುವರು ಅಲ್ಲಿ 2ಮೋಸವ ಮಾಡುವದಿಲ್ಲಿ - ಸೀಸಕಾಸಿ ಬಾಯೊಳಗೆ ಹೊಯ್ಯುವರಲ್ಲಿದಾಸರ ಪೂಜಿಪುದಿಲ್ಲಿ - ಉರ್ವೀಶಾಧಿಪತಿ ಬಂದನೆಂಬರು ಅಲ್ಲಿ 3ವಂಚನೆ ಮಾಡುವದಿಲ್ಲಿ - ಕಾದಹಂಚಿನ ಪುಡಿಯ ತಿನ್ನಿಸುವರು ಅಲ್ಲಿಪಂಚಾಮೃತದ ಪೂಜೆ ಇಲ್ಲಿ ನಿನಗೆಕಂಚು - ಕಾಳಾಂಜಿಯ ಪಿಡಿದಿಹರಲ್ಲಿ 4ಚಾಡಿಯ ನುಕಿವುದು ಇಲ್ಲಿ ಅದ -ನಾಡಿದ ನಾಲಗೆ ಸೀಳುವರಲ್ಲಿಬೇಡಬಂದರೆ ಬಯ್ವುದಿಲ್ಲಿ ನಿನ್ನ -ಓಡಾಡುವ ಕಾಲು ಕತ್ತರಿಪರಲ್ಲಿ 5ಮದ್ದಿಕ್ಕಿ ಕೊಲ್ಲುವುದಿಲ್ಲಿ ಒದ್ದು -ಹದ್ದು ಕಾಗೆಗಳಿಗೆ ಈಯುವರಲ್ಲಿಕ್ಷುದ್ರ ಬುದ್ಧಿಯ ನಡೆಪುದಿಲ್ಲಿ ದೊಡ್ಡ -ಗುದ್ದಲಿ ಬೆನ್ನೊಳು ಎಳೆಯುವರಲ್ಲಿ 6ಕೊಟ್ಟಭಾಷೆಗೆ ತಪ್ಪುವುದಿಲ್ಲಿ ಕೈಯ -ಕಟ್ಟಿ ಈಟಿಯಿಂದ ಇರಿಯುವರಲ್ಲಿಕೊಟ್ಟ ಧರ್ಮವ ನಡೆಸುವುದಿಲ್ಲಿ ಬಲುಶ್ರೇಷ್ಠ ನೀನೆಂದು ಕೊಂಡಾಡುವರಲ್ಲಿ 7ಆಲಯದಾನವು ಇಲ್ಲಿ ವಿ -ಶಾಲ ವೈಕುಂಠನ ಮಂದಿರವಲ್ಲಿಆಲಯ ಮುರಿಯುವುದಿಲ್ಲಿ ನಿನ್ನ -ಶೂಲದ ಮೇಲೇರಿಸಿ ಕೊಲುವರಲ್ಲಿ 8ತಂದೆ ಮಾತನು ಮೀರುವುದಿಲ್ಲಿ ಹುಲ್ಲು -ದೊಂದೆಯಕಟ್ಟಿ ಸುಡಿಸುವರಲ್ಲಿತಂದೆ ತಾಯ್ಗಳ ಪೂಜೆ ಇಲ್ಲಿ ದೇ -ವೇಂದ್ರನ ಸಭೆಯ ತೋರುವರು ಮುಂದಲ್ಲಿ 9ಗಂಡನ ಬೈಯ್ಯುವುದಿಲ್ಲಿ ಬೆಂಕೆಕೆಂಡವ ತಂದು ಬಾಯಲಿ ತುಂಬುವರಲ್ಲಿಕೊಂಡೆಯ ನಡಿಸುವುದಿಲ್ಲಿ ಬೆಂಕೆಕುಂಡವ ತಂದು ತಲೆಯಲಿಡುವರಲ್ಲಿ 10ಹೊನ್ನು ಹೆಣ್ಣನು ಬಯಸುವುದಿಲ್ಲಿ ನಿನ್ನಕಣ್ಣಿಗೆ ಸುಣ್ಣವ ತುಂಬುವರಲ್ಲಿಕನ್ಯಾದಾನವ ಮಾಳ್ಪುದಿಲ್ಲಿ ನಮ್ಮಚಿನ್ನಪುರಂದರವಿಠಲನೊಲಿವನು ಅಲ್ಲಿ11
--------------
ಪುರಂದರದಾಸರು
ಎಂತು ಶೋಭಿಸುತಿಹಳು ಈ ಕನ್ನಿಕೆಸಂತೋಷದಿಂದಲಿಸುರರುಸ್ತುತಿಸುತಿರಲುಪಮಂಧರಗಿರಿ ತಂದು ಸಿಂಧುವಿನೊಳಗಿಟ್ಟುಚಂದದಿಂ ಮಥಿಸಲಮೃತ ಪುಟ್ಟಲುಬಂದು ದಾನವರ ಪಹರಿಸಬೇಕೆನುತಿರಲುನಿಂದರುಸುರರುಮುಂದೋರದೆ ಚಿಂತಿಸೆಇಂದಿರಾಪತಿ ಇವರ ಭಾವವಕಂಡುಮನದಲಿ ಹರುಷಪಡುತಲಿಬಂದು ಅಸುರರ ಸುರರ ಮನ್ನಿಸಿನಿಂದ ಶ್ರೀ ಗೋವಿಂದ ಮುದದಲಿ 1ಸಾಲಾಗಿ ಕುಳಿತಿರಿ ಮೇಲಾದಮೃತವನ್ನುಲೀಲೆಯಿಂದಲಿ ಬಡಿಸುವೆನೆನ್ನಲುಕೇಳಿಅಸುರರು ಹರುಷತಾಳಿ ಸಂಭ್ರಮದಿಂದಸಾಲಾಗಿ ಕುಳಿತು ಆ ವೇಳೆ ನೋಡುತಲಿರಲುಶ್ರೀ ರಮಣ ಕರದಲ್ಲಿ ಕಲಶವÀಲೀಲೆಯಿಂದಲಿ ಪಿಡಿದು ನಿಲ್ಲಲುತಾಳಿ ಹರುಷವ ದಾನವರು ಸÀು-ಮ್ಮಾನದಿಂದಲಿ ನೋಡÀುತಿಹರು 2ಗಂಗೆಯ ಪಡೆದ ಪಾದಗಳ ಶೃಂಗಾರಅಂದಿಗೆ ಕಿರುಗೆಜ್ಹೆ ಸರಪಣಿಯುಚಂದುಳ್ಳ ಬೆರಳುಗಳಿಗೆ ಪಿಲ್ಲಿ ಕಿರುಪಿಲ್ಲಿ ಕಾ-ಲುಂಗರಗಳನಿಟ್ಟು ರಂಭೆಯಂತ್ಹೊಳೆಯಲುಬಂದಿ ಬಾಪುರಿ ಥಳಥಳಿಸುತಲಿಚಂದದನಾಗಮುರಿಗಿ ತಾಯಿತಸುಂದರಹಸ್ತಕಡಗ ಹಾಸರಇಂದಿರಾಕ್ಷಿ ಕೈ ಬಳೆಗಳ್ಹೊಳೆಯುತ 3ಹಲವು ಸೂರ್ಯರ ಕಾಂತಿ ಹೊಳೆವೊ ಪೀತಾಂಬರಸರಿಗೆ ಅಂಚಿನ ಕುಪ್ಪುಸವನೇ ತೊಟ್ಟುನಡುವಿಗೆ ನವರತ್ನ ಬಿಗಿದ ಪಟ್ಟೆಯನಿಟ್ಟುಸಡಗರದಲಿ ಆಣೆಮುತ್ತಿನ ಸರಗಳುಸರಗಿ ಏಕಾವಳಿಯು ವಜ್ರದಪದಕಗಳು ಥಳಕೆಂಬ ಸರಗಳುಕೊರಳ ಗೆಜ್ಜೆಟ್ಟಿಕೆಯು ಕಂಠಿಯುಮುರಳಿಸರ ಕಠ್ಠಾಣಿವಲಿಯುತ 4ಹೊಳೆವೊಗಲ್ಲಕೆ ಥಳಥಳಿಪ ಅರಿಶಿನಹಚ್ಚಿಹೊಳೆವೊ ಮೀನ್ ಬಾವುಲಿ ಕರ್ಣದಲಿಗಿಳಿಗೆಜ್ಜೆ ಚಳತುಂಬು ಬುಗುಡಿ ಬಾವುಲಿ ಚಂದ್ರಮುರುವುಸರಪಳಿಗಳು ಥಳಥಳ ಹೊಳೆಯಲುಆಣಿಮುತ್ತಿನ ಮುಖುರ ಬೇಸರಿಜಾಣೆ ನಾಶಿಕದಲ್ಲಿ ಹೊಳೆವ ಬು-ಲಾಕುನಿಟ್ಟಿ ಬೆಳಕು ಗಲ್ಲದಮೇಲೆ ಥಳಥಳ ಹೊಳೆವ ಕಾಂಚಿಯು 5ಸಣ್ಣ ಬೈತಲೆ ಬಟ್ಟು ಚಂದ್ರ ಸೂರ್ಯರ ನಿಟ್ಟುಹಿಂದೆ ಜಡೆಬಿಲ್ಲೆ ಗೊಂಡ್ಯಗಳನಿಟ್ಟುಚಂದ್ರ ಸೂರ್ಯರ ಪೋಲ್ವ ಚೌರಿ ರಾಗಟಿ ಜಡೆಬಂಗಾರ ಹೊಳೆಯುತ್ತ ಬಡನಡು ಬಳಕುತ್ತಕಂಗಳ ಕಡೆನೋಟದಿಂದಲಿಭಂಗಪಡಿಸುತ ಅಸುರ ಕೋಟಿಯಮಂದಗಮನದಿ ಅಡಿಯನಿಡುತಲಿಬಂದಳಮೃತದ ಕಲಶ ಪಿಡಿಯುತ 6ಕಂಗಳುಮುಚ್ಚಿ ಕುಳಿತಿರಲು ದಾನವ ಪಂಕ್ತಿಮುಂದೆ ಕಾಲ್ಗೆಜ್ಜೆ ಧ್ವನಿಯ ಮಾಡುತಅಂದಿಗೆ ಸರಪಣಿನಾದ ತುಂಬಲು ಭರದಿಸುಂದರಿ ಬಂದಿಹಳೆÀಂದು ದಾನವರೆಲ್ಲಮಂದಹಾಸದಿ ಮೈಮರೆತು ಮತ್ತೊಂದು ತೋರದೆ ಕಳವಳಿಸುತಲಿರೆಇಂದಿರೇಶನು ದೇವೆತೆಗಳಿಗೆಪೊಂದಿಸಿದ ಅಮೃತವನು ಹರುಷದಿ 7ಕಲಕಲಕೂಗುತ ಕಲಹಕೆನ್ನುತ ಬರೆಬಲವು ಸಾಲದೆ ಹಿಂದಿರುಗಲವರುಸುರರುಪುಷ್ಪದ ಮಳೆಕರೆದರು ದೇವನವರಋಷಿಗಳು ನೆರೆದು ಸ್ತುತಿಸಿ ಕೊಂಡಾಡಲುಪರಮಪುರುಷನೆ ಪುಣ್ಯಚರಿತನೆಗರುಡ ಗಮನನೆ ಉರಗಶಯನನೆಸರಸಿಜಾಕ್ಷನೆ ನಮಿಪೆವೆನ್ನುತಸನಕಾದಿಗಳು ಸಂಸ್ತುತಿಸೆ ದೇವನ 8ಪರಶಿವನಿದ ನೋಡಿ ಪರಿಪರಿ ಪ್ರಾರ್ಥಿಸಿತರುಣಿಯ ರೂಪವ ನೋಡಲನುವಾಗಲುಸರಸಿಜಾಕ್ಷನ ಸ್ತ್ರೀರೂಪ ನೋಡುತಲಿ ಮೈಮರೆದು ಕೈಮುಗಿದು ಕೊಂಡಾಡಿ ಸುತ್ತಿಸಿದನುಮರಳಿ ಭಸ್ಮಾಸುರನ ಭಾಧೆಗೆತರಹರಿಸಿ ಮುಂದೋರದಿರುವಸಮಯದಲಿ ಸ್ತ್ರೀರೂಪ ತಾಳುವತ್ವರದಿ ರಕ್ಷಿಸಿ ಪೊರೆದ ದೇವನು 9ಕಮಲಸಂಭವನಯ್ಯಕಮಲಜಾತೆಯ ಪ್ರಿಯಕಮಲಾಕ್ಷಕಂಸಾರಿಕರುಣಾನಿಧೆಶರಣು ಶರಣೆನ್ನುತ ನಭವ ತುಂಬಲು ಸ್ವರಸುರಗಂಧರ್ವರು ಪಾಡಿಪೊಗಳುತಿಹರೊ ದೇವಕನಕಗರ್ಭನ ಪಿತನೆ ರಕ್ಷಿಸುಕಮಲನಾಭ ವಿಠ್ಠಲನೆ ನಮಿಸುವೆಸವಿನಯದಿ ನಿನ್ನ ಸ್ತುತಿಪ ಭಾಗ್ಯವಕರುಣಿಸೆನಗೆ ಶ್ರೀ ಕರುಣಾನಿಧಿಯೆ 10
--------------
ನಿಡಗುರುಕಿ ಜೀವೂಬಾಯಿ
ಎಷ್ಟು ಮರುಗಿದರು ನಿನ್ನ ಹಣೆಯ ಬರೆಹಅಷ್ಟಲ್ಲದಿಲ್ಲ ಸ್ತುತಿ ವಚನದ ಫಲ ಕಂದಪ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಅಂಬರದೊಳಾಡುವ ಪಕ್ಷಿ ತನ್ನ ವಶವಹುದೇಉಂಬುವರ ಕರುಬಿದಡೆ ಉದರ ತುಂಬುವುದೇಕಂಬಳಿಯ ಕೊಡಲು ಕನಕಾಂಬರ ತನಗಹುದೆಹಂಬಲಿಸಿ ಹಲವ ಹಲುಬಿದಡೆಸಿರಿಬಹುದೆ1ಇಲ್ಲದುದ ಬಯಸಿ ಬೇಡಿದೊಡೆ ಭಂಗಬಹುದೊಬಲ್ಲೆನೆಂದೊಡೆ ಮಣಿಸದೆ ಬಿಡಳು ವಿಧಿಯುಬಲ್ಲಿದನು ಬಡವನಿವನೆಂದು ನೋಡರುಸಿರಿವಲ್ಲಭನ ಮಗಳ ಮೀರುವರಾರು ಕಡೆಗೆ2ಸಿರಿಗೆ ಹಿಗ್ಗದೆ ಬಡತನಕೆ ಬೆಂಡಾಗದಿರುಸೇರಿದ ನೆಲೆಯಲಾ ಸುಖ ಸಾವ ಕಾಲದಲಿಶರಣ ಜನಾಶ್ರಿತ ನೆಲೆಯಾದಿಕೇಶವನಚರಣಕಮಲವ ಭಜಿಸಿ ಸುಖಿಯಾಗು ಮನವೆ3
--------------
ಕನಕದಾಸ
ಏನಯ್ಯ ನಿನ್ನ ಸಂಗದಪರಿ - |ಮಾನಿನಿಯ ಮರುಳು ಮಾಡಿ ನೋಡಿದವಗೆ ಪಶಿರವ ತೂಗುವಳು, ಚಿತ್ರದ ಪ್ರತಿಮೆಯಂತಿಹಳು |ಕರವ ಗಲ್ಲದೊಳಿಟ್ಟು ಕಡುಸುಯ್ವಳು ||ಇರು ಇರುತಲೊಮ್ಮೊಮ್ಮೆ ಎದುರೆದ್ದು ನೋಡುವಳು |ಬರವ ಕಾಣದೆ ಕಂದಿ ಕುಂದಿ ಬಡವಾದಳೈ 1ಕಂಬನಿಯ ತುಂಬುವಳು ಕರೆವಳು ಪೆಸಗೊರ್ಂಡು |ಹಂಬಲಿಸುವಳು ಕಂಡ ಕಾಂತೆಯರೊಳು ||ಬೆಂಬಿಡದೆ ಜಡೆ ಮುಡಿಯೆ ತೊಡಿಗೆ ಬೀಸಾಡುವಳು |ಬಿಂಬವರಿತು ಪೊಗುಳುವಳು ನಿನ್ನ ಗುಣಗಣವ 2ಇನಿತರೊಳೇನಹುದೊ, ನಿನ್ನ ಮೇಲಣ ಸ್ನೇಹ |ಘನತಾಪದಿಂದ ಗೋಚರವಾಗಿದೆ ||`ಅನುತಾಪದಿಂದ ಸಲೆ ಬಳಲಿದ ಮಾನಿನಿಯ |ವನಜಾಕ್ಷಪುರಂದರ ವಿಠಲ ಬಂದು ಸಂತಯಿಸೊ3
--------------
ಪುರಂದರದಾಸರು
ಏನೆಂತೊಲಿದೆ ಇಂತವರಂತೆ ಕೆಡುಬುದ್ಧಿ - ಎನ್ನೊಳಿಲ್ಲಗುಣ |ಹೀನರಲ್ಲದ ದೀನ ಜನರ ಪಾಲಿಪ ಬುದ್ಧಿ ನಿನ್ನೊಳಿಲ್ಲ ಪತರಳ ಪ್ರಹ್ಲಾದನಂದದಿ ನಿನ್ನಯರೂಪ ಕೆಡಿಸಲಿಲ್ಲನರನಂತೆ ತನ್ನ ಬಂಡಿಯ ಬೋವನ ಮಾಡಿ ಹೊಡಿಸಲಿಲ್ಲ ||ಸುರನದೀಸುತನಂತೆ ಪಣೆಯೊಳು ಬಾಣವ ಸಿಡಿಸಲಿಲ್ಲದೊರೆ ಅಂಬರೀಷನಂದದಿ ಈರೈದು ಜನ್ಮವ ಪಡಿಸಲಿಲ್ಲ 1ನಾರದನಂತೆ ಕಂಡವರ ಕೊಂಡೆಯವ ನಾ ಪೇಳಲಿಲ್ಲ |ಪರಾಶರನಂತೆ ನದಿಯೊಳಂಬಿಗ ಹೆಣ್ಣ ಕೊಡಲಿಲ್ಲ ||ಆ ರುಕುಮಾಂಗದನಂತೆ ಸುತನ ಕೊಲ್ಲಲು ಧೃಢಮಾಡಲಿಲ್ಲಮಾರುತನಂತೆ ನೀನುಣುತಿದ್ದ ಎಡೆಯ ಕೊಂಡೋಡಲಿಲ್ಲ 2ವಿದುರನಂತೆ ನನ್ನ ಸದನವ ಮುರಿದು ನಾ ಕುಣಿಯಲಿಲ್ಲಮದಕರಿಯಂತೆ ಮಕರಿಯ ಬಾಯೊಳು ಸಿಕ್ಕಿ ಒದರಲಿಲ್ಲ ||ಹೆದರದೆ ಬಲಿಯಂತೆ ಭೂಮಿಯ ಧಾರೆಯನೆರೆಯಲಿಲ್ಲಸದರ ಮಾತುಗಳಾಡಿ ಶಿಶುಪಾಲನಂತೆ ನಾ ಜರೆಯಲಿಲ್ಲ3ಸನಕಾದಿ ಮುನಿಯಂತೆಅನುದಿನ ಮನದೊಳು ಸ್ಮರಿಸಲಿಲ್ಲಇನಸುತ ಕಪಿಯಂತೆ ವಂಚಿಸಿ ವಾಲಿಯ ಕೊಲಿಸಲಿಲ್ಲ ||ಬಿನುಗು ಬೇಡತಿಯಂತೆ ಸವಿದುಂಡ ಹಣ್ಣ ನಾ ತಿನಿಸಲಿಲ್ಲಘನ ಅಜಾಮಿಳನಂತೆ ಸುತನ ನಾರಗನೆಂದು ಕರೆಯಲಿಲ್ಲ4ವರ ಶೌನಕನಂತೆನಿತ್ಯ ಸೂತನ ಕಥೆ ಕೇಳಲಿಲ್ಲಪಿರಿದು ತುಂಬುರುನಂತೆ ನಾಟ್ಯ - ಸಂಗೀತವ ಪೇಳಲಿಲ್ಲ ||ಉರಗಾಧಿಪತಿಯಂತೆ ಉದರದೊಳಿಟ್ಟು ನಾ ತೂಗಲಿಲ್ಲಪಿರಿದು ಕುಚೇಲನ ತೆರನಂತೆ ಅವಲಕ್ಕಿ ಈಯಲಿಲ್ಲ 5ಭೃಗುಮುನಿಯಂತೆ ಗರ್ವದಿ ನಿನ್ನ ಎದೆಯನು ಒದೆಯಲಿಲ್ಲಅಗಣಿತ ಮಹಿಮ ನೀನಹುದೆಂದು ಧ್ರುವನಂತೆ ಪೊಗಳಲಿಲ್ಲ ||ಖಗರಾಜನಂತೆ ನಿನ್ನನು ಪೊತ್ತು ಗಗನದಿ ತಿರುಗಲಿಲ್ಲಅಗಜೆಯರಸನಂತೆ ಮಸಣದಿ ರಾಮನ ಸ್ಮರಿಸಲಿಲ್ಲ 6ಅವಹಿತದಲಿ ವಿಭೀಷಣನಂತೆ ಅಣ್ಣನ ಕೊಲಿಸಲಿಲ್ಲಯುವತಿ ದ್ರೌಪದಿಯಂತೆ ಪತ್ರಶಾಕವನುಣಬಡಿಸಲಿಲ್ಲ ||ತವೆ ಪುಂಡಲೀಕನಂದದಿ ಇಟ್ಟಿಗೆಯ ಮೇಲೆ ನಿಲಿಸಲಿಲ್ಲ ದೇವಇವರಂತೆಪುರಂದರ ವಿಠಲ ನಿನ್ನಯ ಕೃಪೆಯೆನ್ನೊಳಿಲ್ಲ7ಅಂಕಿತದಲ್ಲೂ ಇವೆ.)
--------------
ಪುರಂದರದಾಸರು
ಕಮಲನಾಭ ವೆಂಕಟೇಶ ಭಕ್ತ ಕಲ್ಪಭೂರುಹ ಶ್ರೀಕಮಲಪ್ರಾಣೇಶಾಪವಿಮಲ ವೈಕುಂಠಪುರೀಶಾ ಶಿವಕಮಲಸಂಭವನುತ ಕರ್ಬುರನಾಶಾ ಅ.ಪನಿರುಪಮ ಸುಂದರ ಗಾತ್ರಾನಿತ್ಯಪರಿಪೂರ್ಣ ವೈಭವಪರಮಪವಿತ್ರಾಶರನಿಧಿತನಯಕಳತ್ರಾಶೇಷಪರಿಜನಕೃತಘೋರಪಾಪಾಂಧ ಮಿತ್ರಾ1ಸನಕಸನಂದನ ವಿನುತಾಶಶಿದಿನಕರಶತಕೋಟಿ ದಿವ್ಯ ಸುಚರಿತಾಜನನ ಮರಣ ಕ್ಲೇಶರಹಿತ ಶ್ರೀವನಜಸುದರ್ಶನ ವನಮಾಲ ಧರಿತ2ಜಲಜಮಿತ್ರ ವಂಶ ಭೂಷಾ ಕ್ಷಾರಜಲಧಿಬಂಧನ ಪುಣ್ಯಜನ ಪ್ರಾಣ ಶೋಷಾತುಲಸೀ ರಾಮದಾಸ ಪೋಷಾ ಶ್ರೀತುಲಸೀ ಕಾನನಹಿತ ತುಂಬುರ ತೋಷಾ 3
--------------
ತುಳಸೀರಾಮದಾಸರು
ಕಲ್ಲುಸಕ್ಕರೆ ಕೊಳ್ಳಿರೊ - ನೀವೆಲ್ಲರು |ಕಲ್ಲುಸಕ್ಕರೆ ಕೊಳ್ಳಿರೊ ಪ.ಕಲ್ಲುಸಕ್ಕರೆ ಸವಿ ಬಲ್ಲವರೆ ಬಲ್ಲರು |ಫುಲ್ಲನಾಭಕೃಷ್ಣನ ದಿವ್ಯನಾಮವೆಂಬಅ.ಪಎತ್ತ ಹೇರುವುದಲ್ಲ ಹೊತ್ತು ಮಾರುವುದಲ್ಲ |ಒತ್ತೊತ್ತಿ ಗೋಣಿಯ ತುಂಬುವುದಲ್ಲ ||ಎತ್ತ ಹೋದರು ಮತ್ತೆ ಸುಂಕವು ಇದಕಿಲ್ಲ |ಹತ್ತೆಂಟು ಸಾವಿರಕೆ ಬೆಲೆಯಿಲ್ಲದಂತಹ 1ನಷ್ಟಬೀಳುವುದಲ್ಲ ನಾಶವಾಗುವುದಲ್ಲ |ಕಟ್ಟಿ ಇಟ್ಟರೆ ಮತ್ತೆ ಕೆಡುವುದಲ್ಲ ||ಎಷ್ಟು ದಿನವಿಟ್ಟರೂ ಕೆಟ್ಟು ಹೋಗುವುದಲ್ಲ |ಪಟ್ಟಣದೊಳಗೊಂದು ಲಾಭವೆನಿಸುವಂಥ 2ಸಂತೆಪೇಟೆಗೆ ಹೋಗಿ ಶ್ರಮಪಡಿಸುವುದಲ್ಲ |ಎಂತು ಮಾರಿದರದಕಂತವಿಲ್ಲ ||ಸಂತತ ಪುರಂದರವಿಠಲನ ನಾಮವ |ಎಂತು ನೆನೆಯಲು ಪಾಪ ಪರಿಹಾರವಲ್ಲದೆ 3
--------------
ಪುರಂದರದಾಸರು
ಕೇಳನೊಹರಿ ತಾಳನೋ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ತಾಳ ಮೇಳಗಳಿದ್ದು ಪ್ರೇಮವಿಲ್ಲದ ಗಾನ ಪ.ತಂಬೂರಿ ಮೊದಲಾದಅಖಿಳ ವಾದ್ಯಗಳಿದ್ದುಕೊಂಬು ಕೊಳಲ ಧ್ವನಿಸಾರವಿದ್ದು ||ತುಂಬುರು ನಾರದರ ಗಾನ ಕೇಳುವಹರಿನಂಬಲಾರ ಈ ಡಂಭಕದ ಕೂಗಾಟ 1ನಾನಾಬಗೆಯಭಾವ ರಾಗ ತಿಳಿದು ಸ್ವರಜಾÕನ ಮನೋಧರ್ಮ ಜಾತಿಯಿದ್ದು ||ದಾನವಾರಿಯ ದಿವ್ಯ ನಾಮರಹಿತವಾದಹೀನ ಸಂಗೀತ ಸಾಹಿತ್ಯವ ಮನವಿತ್ತು 2ಅಡಿಗಡಿಗಾನಂದ ಬಾಷ್ಪ ಪುಳಕದಿಂದನುಡಿನುಡಿಗೂ ಶ್ರೀ ಹರಿಯೆನ್ನುತ ||ದೃಢಭಕ್ತರನು ಕೊಡಿ ಹರಿಕೀರ್ತನೆಯ ಪಾಡಿಕಡೆಗೆ ಪುರಂದರವಿಠಲನೆಂದರೆ ಕೇಳ್ವ 3
--------------
ಪುರಂದರದಾಸರು
ಜಗಲಿಯ ಹಾಕಿದಳೆ ಬಗಳೆ ಜಗಲಿಯ ಹಾಕಿದಳೆಸೊಗಸೇನ ಹೇಳಲಿ ಶತ್ರುಗಳನೆ ತಂದುಝಗಿ ಝಗಿಸುತ ಎನ್ನಯ ಎದುರಿಗೆ ಕುಳಿತು ಕೊಳ್ಳಲುಪತಲೆಗಳು ಥರದ ಕಲ್ಲು ಒಳ್ಳೊಳ್ಳೆಯ ಎಲುವುಗಳು ಹಾಸುಗಲ್ಲುಬಲಿದ ಮಾಂಸದ ಕೆಸರನೆ ಹಾಕಿ ಮೆತ್ತಿಎಳೆದು ಹೆಣಗಳನು ತಂದು ಭರ್ತಿಯ ತುಂಬುತ1ಮೆದುಳನೆ ಮಲ್ಲವ ಮಾಡಿ ಮೇಲೆಯೆಪದರಂಗಾರವ ಮಾಡಿ ವಿಧವಿಧ ಚಿತ್ರವ ರಕ್ತದಿ ಬರೆದುತಿದಿಯ ಸುಲಿದು ಚರ್ಮವ ಹಾಸಿಗೆ ಹಾಕುತ2ಕತ್ತಿಯ ಹೆಗಲಲಿಟ್ಟು ಎನ್ನಯ ಸುತ್ತಮುತ್ತ ತಿರುಗಾಡುತ ಸತ್ಯ ಚಿದಾನಂದನ ರಾಣಿ ಬಗಳಾಮುಖಿಮತ್ತೆ ದುಷ್ಟರ ಕೊಂದು ವಿಶ್ರಾಂತಿ ಪಡೆಯಲು3
--------------
ಚಿದಾನಂದ ಅವಧೂತರು
ಜಯಮಂಗಳಂನಿತ್ಯ ಶುಭಮಂಗಳಂ<?xmಟ veಡಿsioಟಿ='1.0' eಟಿಛಿoಜiಟಿg='uಣಜಿ-8'?>ಜಯತುಂಗಲಕ್ಷ್ಮೀಪತಿ ನರಸಿಂಹಗೆಪ.ಕಂದರ್ಪನಯ್ಯಗೆ ಕೋಟಿ ಲಾವಣ್ಯಗೆಮಂದರೋದ್ಧಾರ ಮಧುಸೂದನನಿಗೆ ||ಕಂದ ಪ್ರಹ್ಲಾದನನು ಕಾಯ್ದ ದೇವನಿಗೆ ಶ್ರೀ -ಇಂದಿರಾ ರಮಣ ಸರ್ವೋತ್ತಮನಿಗೆ 1ಕರಿರಾಜ ವರದನಿಗೆ ಕರುಣಾ ಸಮುದ್ರನಿಗೆಸರಸಿಜೋದ್ಭವ - ಭವವಂದ್ಯ ಹರಿಗೆ ||ಗಿರಿಯರಸು ಕಾವೇರಿಪುರದ ರಂಗಯ್ಯಗೆಗಿರಿರಾಜಪತಿವಂದ್ಯ ಸುರರ ನಿಧಿಗೆ 2ಅಂಬರೀಷನ ಶಾಪ ಅಪಹರಿಸಿದವನಿಗೆತುಂಬುರ ನಾರದ ಮುನಿವಂದ್ಯಗೆ ||ಕಂಬುಕಂಧರಪುರಂದರ ವಿಠಲರಾಯಗೆಅಂಬುಜನಾಭಗೆ ಅಜನಪಿತಗೆ 3
--------------
ಪುರಂದರದಾಸರು