ಒಟ್ಟು 213 ಕಡೆಗಳಲ್ಲಿ , 52 ದಾಸರು , 177 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬೃಂದಾವನದಿ ನೋಡುವ ಬಾರೆ ಗೋ-ಪ ವಿಂದನಾಡುವ ಸಂದಣಿ ಸಾಲದೆ ಸಖಿ ಅ.ಪ. ಮುನಿಗಳು ತರು ಪಕ್ಷಿ ಮೃಗಂಗಳಾಗಿರೆಸನಕಾದಿಗಳು ಗೋವುಗಳಾಗಿರೆಅನಿಮಿಷರೆಲ್ಲರು ಗೋಪಾಲರಾಗಿರೆದನುಜಾಂತಕನು ಮನುಜನಂತಾಗಿರೆ 1 ತಳಿತ ತೋರಣದಿಂ ತಂಪಿನ ನೆಳಲಿಂಮಳೆಯಾಗಿ ಸುರಿವಾ ಮಕರಂದ ಜಲದಿಂಫಲ ಪುಂಜಗಳಿಂ ಶುಕಚಾಟುಗಳಿಂನಳಿನನಾಭನನುಪಚರಿಪ ವೃಕ್ಷಗಳುಳ್ಳ 2 ತಳಿತ ತರುಗಳೆಲ್ಲ ತಂತಮ್ಮ ಜಾತಿಯಉಲುಹನುಳಿದು ಕಣ್ಣುಮುಚ್ಚಿ ತೆರೆಯುತ್ತನಳಿನನಾಭನ ವೇಣುಗೀತೆಯ ರಸದಲ್ಲಿಮುಳುಗಿ ಮುನಿಗಳಂತಿಪ್ಪ ಪÀಕ್ಷಿಗಳುಳ್ಳ 3 ಚಿತ್ತಜನೈಯನ ವೇಣುನಾದವಎತ್ತಿದ ಕಿವಿಯಿಂದ ಸವಿಯುತಲಿಮತ್ತಾದ ಸುಖಜಲ ಕಡಲಾಗಿ ಹರಿಯಲುಚಿತ್ತರದಂತಿಪ್ಪ ತುರುವಿಂಡುಗಳುಳ್ಳ 4 ನಖ ತಿಂಗಳ ಬೆಳಕಿಗೆತುಂಗ ಚಂದ್ರಕಾಂತ ಶಿಲೆ ಒಸರಿಹಿಂಗದೆ ಹರಿದು ಕಾಳಿಂದಿಯ ಕೂಡಲುಗಂಗೆ ಯಮುನೆಯರ ಸಂಗಮದಂತಿಪ್ಪ 5 ಚಕೋರ ಚಕ್ರವಾಕಇರುಳು ಹಗಲು ಎಂದು ಹೋಗುತಲಿರುತಿಪ್ಪ6 ಹರಿಯ ಕೊಳಲ ಸ್ವರದತಿ ಮೋಹನಕೆತರುಮೊಗ್ಗೆಗಳಿಂ ಪುಳುಕಿತವಾಗೆಗಿರಿಯು ಝರಿಯಾ ನೆವದಿಂ ಕರಗಲುತೊರೆಯು ಸುಳಿಯ ನೆವದಿಂದ ತಾ ನಿಲ್ಲುವ7 ಕುಂಡಲ ತಾಳಮೇಳದ ರಭಸಕ್ಕೆನಲಿನಲಿದಾಡುವ ನವಿಲ ಹಿಂಡುಗಳುಳ್ಳ 8 ನಳನಳಿಸುವ ವನಮಾಲೆ ಇಂದ್ರಚಾಪಪೊಳೆವ ಪೊಂಬಟ್ಟೆ ಮಿಂಚು ವೇಣುಗಾನಎಳೆಯ ಗರ್ಜನೆ ಶ್ಯಾಮಮೇಘ ಕೃಷ್ಣಮಳೆಯ ಮೇಘವೆಂದು ಚಾತಕ ನಲಿಯುತ9
--------------
ವ್ಯಾಸರಾಯರು
ಬೇಗನೆ ಕರೆತಾರೇ ಸಖಿಯೇ [ಬೆಗನೆಕರೆತಾರೆ] ಪ ನಾಗಶಯನನವ ಕೂಗದೆ ಬಾರನೆ ಅ.ಪ ಪೂತನಿ ಶಿಶುಗಳ ಫಾತಿಸುತಿಹಳೆಂಬ ಮಾತನವಗೆ ಪೇಳೆ ಭೀತಿಯತೋರಿ ಆತುರದಿಂದವ ಐತರುವನೆ ಸಖಿ ಪ್ರೀತಿಯೊಳೀವೆನೀ ರತುನದ ಹಾರವ 1 ಕರಿ ಧ್ರುವ ಪ್ರಹ್ಲಾದ ತರುಣಿ ಪಾಂಚಾಲಿ ಮೊರೆಯಿಡುವುದ ಹೇಳೆ ಭರದಲಿ ಬರುವ ಉರಗನ ಗರಳದಿ ಕರುತುರು ನೋಯುವ ಪರಿಯ ಬಿತ್ತರಿಸಿ | ಮುರಳೀಧರಗೆ 2 ಸಂಗಡ ಬರದಿರೆ ಭಂಗಿಸುವರು ಗೋ ಪಾಂಗನೆಯರು ಎಂದು ರಂಗಗೆ ಹೇಳೇ ಇಂಗಿತಜ್ಞನು ನಮ್ಮ ಮಾಂಗಿರಿಯರಸನು ಸಂಗಡ ಬರುವನು ಸಂದೇಹವಿಲ್ಲ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಬ್ಯಾಡೋ ಒಬ್ಬರ ಮನೆಗೆ ನೀ ಪೋಗ ಬ್ಯಾಡೋ ಒಬ್ಬರ ಮನೆಗೆ ಪ ಗಾಡಿಕಾರನೆ ಕೃಷ್ಣ ಚಾಡಿ ಮಾತನು ಕೇಳಿ ಗಾಡನೆ ಕಿವಿಮುಚ್ಚಿ ಓಡಿಸಿದೆ ಗೋಪಿಯರ ಅ.ಪ ಕಟ್ಟಿದ್ದ ತುರುಕರುಗಳ ಬಿಚ್ಚಿ ಪೋಗುವದಿದು ನಿಶ್ಚಯವೆಂದು ಪೇಳ್ವರೊ ಸ್ವಚ್ಛ ಕರುಗಳ ಕಣ್ಣುಮುಚ್ಚಿ ಪಾಲೆಲ್ಲ ಕುಡಿದ ಅಚ್ಯುತನಿಗೆ ಬುದ್ಧಿ ಮತ್ತೆ ನೀ ಪೇಳೆಂಬರು 1 ಮಕ್ಕಳೆಲ್ಲರು ಕಯ್ಯೊಳು ಬಟ್ಲಲಿ ಅವ- ಲಕ್ಕಿಯ ತಿನ್ನುತಿರಲು ಘಕ್ಕನೆ ಬಡಿಯೆ ದಿಕ್ಕು ದಿಕ್ಕಿಗೆ ಚಲ್ಲೆ ಬಿಕ್ಕಿ ಬಿಕ್ಕಿ ಅಳುತಾರೆ ಗೋಪಕ್ಕ ನೀನೋಡೆಂಬರು 2 ವಾಸುದೇವಗೆ ಹರಕೆಯ ಮಾಡಿ ನವ- ನೀತ ಮೀಸಲು ಮಾಡಿರೆ ಮೀಸಲಳಿದು ಕೋತಿ ಮಾರ್ಜಾಲಗಳಿಗುಣಿಸಿ ನೀತಿ ಪೇಳುವ ಶ್ರೀನಾಥ ನೋಡೆಂಬರು 3 ಗೊಲ್ಲ ಬಾಲಕಿಯರೆಲ್ಲ ಪಾಲ್ಮೊಸರು ಮಾರೆ ಮೆಲ್ಲನೆ ಪೋಗುತಿರಲು ಗುಲ್ಲು ಮಾಡದೆ ಕವಣೆ ಕಲ್ಲಿಂದ ಕುಂಭ ಒಡೆಯೆ ಚಲ್ಲಿ ಪಾಲ್ಮೊಸರು ಸೂರೆ ನಲ್ಲೆ ನೀ ನೋಡೆಂಬರು4 ಮತ್ತೆ ಕೇಳಮ್ಮ ಯಶೋದೆ ನಾವೆಲ್ಲ ಆಣಿ ಮುತ್ತು ಪೋಣಿಸುತಿರಲು ಸುತ್ತ ಮುತ್ತಲು ನೋಡಿ ಮುತ್ತು ಸೂರೆ ಮಾಡಿದ ಕರ್ತೃ ಶ್ರೀ ಕಮಲನಾಭ ವಿಠ್ಠಲನ ನೋಡೆಂಬರು5
--------------
ನಿಡಗುರುಕಿ ಜೀವೂಬಾಯಿ
ಭಜಿಸಿರೋ ಭಜಿಸಿರೋ ಅಜನ ಪೆತ್ತವನಾ ಭುಜಗಶಯನ ಮದಗಜವ ಪೊರೆದನಾ ಪ ಭಜಕರ ಕೂಗಿಗೆ ನಿಜವ ತೋರುವನಾ ಸುಜನೋದ್ಧಾರನ ವಿಜಯ ರಾಘವನಾ ಅ.ಪ ರಾಗವಿದೂರನ ರಾಗೋಲ್ಲಾಸನ ರಾಗಕೆ ಒಲಿವನಾ ರಾಗವನುಣಿಪನ ರಾಗದಿ ಮುರಳಿಯ ಊದಿ ರಾಜಿಸುವನ ರಾಗದಿ ನಮಗನುರಾಗವನೀವನ1 ಶರಣರ ದುರಿತವ ಪರಿಹರಿಸುವನ ಧರಣಿಯನೀರಡಿ ಅಳೆದವನ ಕರುತುರುಗಳ ಕನಿಕರದಿಂಕಾಯ್ದನ ವರದಾಯಕ ಮಾಂಗಿರಿ ರಂಗಯ್ಯನ2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಭಾಗಣ್ಣಾ | ಗುರು ನಿನ್ನ ಪೊಗಳುವೆನಯ್ಯಾಕರುಣದಿ ಪಿಡಿಕೈಯ್ಯಾ | ಮುರಹರ ಕುವರಯ್ಯಾ ಪ ನಗಧರ ಮೊಮ್ಮಗ ಮಗನೀ ಯೆನ್ನನುಖಗವರ ವಹ ಪ್ರಿಯ ಪಾಲಿಸೊ ಜೀಯಾ ಅ.ಪ. ಜ್ಞಾನ ಸದ್ಭಕ್ತಿ ವಿರಕ್ತಿಯ ಮೂರ್ತೀ | ಸಾರುವೆ ತವಕೀರ್ತೀಗಾನ ಲೋಲನ ಸೇವಿಸೆ ಜಾಗರ್ತೀ | ಮಾಡುವೆ ಶರಣಾರ್ತೀ |ಘನ್ನ ಮಹಿಮ ಕಾರುಣ್ಯ ಮೂರುತೀಎನ್ನವ ಗುಣ ಮರೆದು ಸಲಹೊ ವಿಶ್ವಂಭರ 1 ಜಲಧಿ ವಿಹಾರನೆಸುಲಭದಿ ಸಾಧನ ಪಾಲಿಸೋ ಜೀಯ 2 ಅರುಹಲೇತಕೊ ಎನದುರಿತ ಸಮೂಹ | ನೀನಲ್ಲವೆ ದುರಿತಹರತುರು ತನ್ನ ಕರುವನೆ ಮರೆವುದೆ ಆಹಾ | ಪಾಲಿಸು ತವನೇಹಾಸಿರಿಪತಿ ಗುರುಗೋವಿಂದ ವಿಠಲನಚರಣಾಂಬುಜದೊಳು ನಿಲಿಸೆಲೊ ಮನವಾ 3
--------------
ಗುರುಗೋವಿಂದವಿಠಲರು
ಭಾರ್ಗವಿ ಪ ಮಹಾಲಕುಮಿ ಶ್ರೀಪತಿಗೆ ಸಮಾಸಮಳೆನಿಸಿರಲು ಅ.ಪ ಮಡುವ ಸೇರಿದ ಒಡೆಯ ಬಿಡದೆ ಮಂದರಗಿರಿಯ ಪೊಡವಿಬಗೆದು ಒಡೆದು ಕಡುಕ್ರೂರನಾದ ಬಡವನಂತೆ ಬೇಡಿ ಕೊಡಲಿ ಪಿಡಿದಿಹ ಕೆಡುಕ ಮಡದಿಯಾ ಕಳಕೊಂಡು ಕಡಹನೇರಿದ ಕ್ರಿಯಕೆ 1 ಮುಗುಧರನ ಮಾಡಿದ ಶುದ್ಧಸ್ತ್ರೀಯರನೆಲ್ಲಾ ಖಗಗಮನ ತಾ ತುರುಗವನು ಹತ್ತಿದಾಯೋಗ ಭೃಗುಮುನಿಯ ಅಪಚಯಕೆ ಕರವೀರಪುರದಲಿರೆ ನಾಗಗಿರಿಗಿಳಿದ ಪತಿಯ ಪರಿಣಯವನೆಸಗಿದೆ2 ನಾಗರಾಜನ ಕೂಗ ಕೇಳಿದಾಗ್ಹೇಳದಲೆ ಬೇಗ ಸಾಗಿಬಂದಾ ಸರಸಿನಾ ಬಳಿಗೇ ಅಂಗಜನ ವೈರಿಯ ಇಂಗಿತವನರಿತು ಹೆಂಗಳಾರೂಪದಲಿ ಮೋಹಿಸಿದ ಮಾಯಕ್ಕೆ 3 ಕ್ಷಮೆಯಸಾಗರಳೆ ನಿನ್ನ ಅನುಪಮ ಸನ್ಮಹಿಮೆ ಅಮಿತವಾಗಿಹುದು ಜಗಕಾರ್ಯದಿ ಅಮಮ ನೀನಿರಲು ನಾಭಿಕಮಲದಲಿ ಬ್ರಹ್ಮನ ಜ- ನುಮ ತೋರಿದ ಹರಿಯ ಸ್ವರಮಣನ ಕಾರ್ಯಕೆ4 ಗುಣತ್ರಯಂಗಳಭಿಮಾನಿ ಶ್ರೀ ವೇಂಕಟೇಶನರಾಣಿ ಎಣೆಯಂಟೆ ಹರಿಗುಣವನೆಣಿಸುವ ಪ್ರವೀಣೆ ಘನ್ನ ಉರಗಾದ್ರಿವಾಸವಿಠಲನ ಕರುಣ ಪೂರ್ಣಪಾತ್ರಳೆ ಹರಿಯ ವಕ್ಷಸ್ಥಳನಿವಾಸಿನಿಯೇ5
--------------
ಉರಗಾದ್ರಿವಾಸವಿಠಲದಾಸರು
ಮರೆತೆಯೆನೋ ರಂಗಾ ಮಂಗಳಾಂಗತುರು-ಕರ ಕಾಯ್ವಲ್ಲಿ ತೊಂಡನಾಗಿದ್ದೆನ್ನ ಪ ಕೋಲು ಕೈಯಲ್ಲಿ ಕೊಳಲು ಜೋಲುಗಂಬಳಿ ಹೆಗಲಮ್ಯಾಲೆ ಕಲ್ಲಿ ಚೀಲ ಕೊಂಕಳಲ್ಲಿಕಾಲಕಡಗವನಿಟ್ಟು ಕಾಡೊಳಿಹ ಪಶುಹಿಂಡಲಾಲಿಸುವ ಬಾಲಕರ ಮ್ಯಾಳದೊಳಗಿದ್ದೆನ್ನ1 ಮಣಿ ಕÀವಡÉಯನು ಕಾಡೊಳಿಹ ಗುಲಗಂಜಿಸಲ್ಲದೊಡವೆಯ ನೀನು ಸರ್ವಾಂಗಕೆಅಲ್ಲೆಸೆಯೆ ಧರಿಸಿ ನವಿಲಗರಿಗಳ ಗೊಂಡೆಅಲ್ಲಿ ಗೊಲ್ಲರ ಕೂಡ ಚೆಲ್ಲಾಟ ಮಾಡುತಲಿ 2 ಸಿರಿದೇವಿ ಬಂದು ಸೇರಿದ ಬಳಿಕ ಲೋಕದಲಿಸಿರಿ ಅರಸನೆಂದು ಸೇವಕರರಿವರೋಶರಣಾಗತರ ಪೊರೆವ ಶ್ರೀರಂಗವಿಠಲಯ್ಯನರಸಿಂಗ ನೀನಿರುವ ಪರಿಯು ಮುಂದಿನ ಸಿರಿಯು3
--------------
ಶ್ರೀಪಾದರಾಜರು
ಮಳೆಯ ಪಾಲಸಯ್ಯ ಮಂಗಳ- ನಿಳಯ ಪಾಲಿಸಮ್ಮ ಪ ಬಿನೆಯೊಳು ಮಳೆಯನು ತಳೆಯದೆ ತೃಣಗಳು ಬೆಳೆಯದ ಗೋವುಗಳಳವುವಯ್ಯ ಅ.ಪ ಗೋವಿಪುರ ಕುಲವ ಕಾಯುವ ದೇವನು ನೀನಲ್ಲವೇ ಮೇವುಗಳಿಲ್ಲದೆ ಗೋವುಗಳೆಲ್ಲವು ಸಾವುವು ನಿನ್ನೊಳಿದಾವನು ಕಾವನು 1 ಕರೆಯೊಳು ನೀರಿಲ್ಲ ಬಾವಿಗ- ಳೊರತೆಯ ಸೋರಿಲ್ಲ ತುರುಗಳು ಜೀವನದಿರವನು ಕಾಣದೆ ಹರಣವ ಬಿಡವುವು ಕರುಣದಿ ಬೇಗನೆ 2 ಬಲರಿಪುಖತಿಯಲಿ ಬಾಧಿಪೆ ಜಲಮಯ ರೀತಿಯಲಿ ಚಲಿಸದೆ ಕೊಡೆವಿಡಿದಳುಹಿದೆ ಕರದೊಳು ಚಲವನು ಗೋವ್ಗಳ ಬಳಗವನೀಗಳು 3 ಜಲನಿಧಿ ಕೃತ ಶಯನ ಶಾರದ ಜಲರುಹದಳನಯನ ಜಲಜರ ಮೂರುತಿ ಜಲಜಕರಗಳು ಜಲದಾಗರದಿಂ 4 ದಾರಿಯ ಜನರೆಲ್ಲ ಬಹು ಬಾ- ಯಾರಿ ಬರುವರಲ್ಲ ದೂರಗಿಂ ತಂದಿಹ ನೀರನು ಲೋಭದಿ ನಾರಿಯರೆಲ್ಲ ವಿಚಾರಿಸುತಿರ್ಪರು 5 ಬೆಳೆದಿಹ ಸತ್ಯಗಳು ಬಿಸಿಲಿನ ಜಳದಲಿ ಬಾಡಿಹುವು ನಡಿನ ನಯನ ನಿನ್ನೊಲುಮೆಯ ತೋರಿಸಿ ಘಳಲನೆ ಪೈರುಗಳಳಿಯುತ ತೆರದೊಳು 6 ಕರುಣಾನಿಧಿಯೆಂದು ನಿನ್ನನು ಶರಖಹೊಕ್ಕೆನಿಂದು ಶರಣಭರಣ ಪುಲಿಗಿರಿಯೊಳು ನೆಲೆಸಿಹ ವರದ ವಿಠಲ ದೊರೆ ವರದ ದಯಾನಿಧೆ 7
--------------
ವೆಂಕಟವರದಾರ್ಯರು
ಮಳೆಯ ಪಾಲಿಸ್ಯಯ್ಯ-ಮಂಗಳ-ನಿಳಯ ಲಾಲಿಸಯ್ಯ ಪ ಗೋವುಗಳಳಿವುವಯ್ಯಾ ಅ.ಪ. ಗೋವಿಪ್ರರ ಕುಲವ-ಕಾಯುವ-ದೇವನು ಸಾವುವುನಿನ್ನುಳಿದಾವನು ಕಾವನು1 ಕೆರೆಯೊಳು ನೀರಿಲ್ಲಾ-ಭಾವಿಗಳೊರತೆಯ ಸೊರಿಲ್ಲಾ ತುರುಗಳು ಜೀವನದಿರವನು ಕಾಣದೆ ಹರಣವ ಬಿಡುವುವು ಕರುಣದಿ ಬೇಗನೆ 2 ಬಲರಿಪುಖಾತಿಯಲಿ ಬಾಧಿಸೆ ಜಲಮಯ ರೀತಿಯಲಿ ಚಲಿಸದೆ ಕರದೊಳಾಚಲವನು ಕೊಡೆವಿಡಿದುಳುಹಿದೆ ಗೋವ್ಗಳ ಬಳಗವ ನೀಗಳುಂ 3 ಜಲನಿಧಿಕೃತ ಶಯನ ಶಾರದ ಜಲರುಹದಳನಯನ ಜಲಧೀದಿತಿ ಜಲಚರಮಾರುತಿ ಜಲಜಕರಗಳಿಂ ಜಲದಾಗರದಿಂ4 ದಾರಿಯಜನರೆಲ್ಲ-ಬಹುಬಾಯಾರಿ ಬರುವರಲ್ಲಾ ವಿಚಾರಿಸುತಿರ್ಪರು 5 ಬೆಳಿದಿಹ ಸಸ್ಯಗಳು ಬಿಸಲಿನ ಝಳದಲಿ ಬಾಡಿಹವು ನಳಿನನಯನ ನಿನ್ನೊಲುಮೆಯ ತೋರಿಸಿ ಘಳಿಲನೆ ಪೈರುಗಳುಳಿಯುವ ತೆರೆದೊಳು6 ಕರುಣಾನಿಧಿಯೆಂದುನಿನ್ನನು ಶರಣುಹೊಕ್ಕೆನಿಂದೂ ಶರಣಾಭರಣ ಪುಲಿಗಿರಿಯೊಳು ನೆಲಸಿಹ ವರದ ವಿಠಲದೊರೆವರದ ದಯಾನಿಧೆ 7
--------------
ಸರಗೂರು ವೆಂಕಟವರದಾರ್ಯರು
ಮಾಧವ ಗೀತೆ ಶರಣು ಹರಿಗೆ ಶರಣು ಸಿರಿಗೆ ಶರಣು ಬ್ರಹ್ಮವಾಣಿಯರಿಗೆ ಶರುಣು ಭವಗೆ ಶರಣು ಶಿವೆಗೆ ಶರಣು ಬೆನಕಗೆ ಶರಣು ತತ್ವಮಾನಿಗಳಿಗೆ ಶರಣು ಮುನಿ ಸಮೂಹಗಳಿಗೆ ಮಾಧವ 1 ಪರಮಭಕ್ತರಾಗಿ ಮೆರೆದ ಗುರು ಪುರಂದರಾದಿ ಸಾಧು ವರರ ವಚನ ಮಣಿಗಳನ್ನು ಮನದೊಳಾರಿಸಿ ಸರವ ಮಾಡಿ ಶರಣ ಜನರ ಕರುಣದೆಳೆಯೊಳಿದನು ಬಿಗಿಸಿ ಮಾಧವ 2 ಶ್ರೀಯೆ ಸತಿಯು ನಿನಗೆ ಬ್ರಹ್ಮರಾಯ ಹಿರಿಯ ಮಗನು ವೈನ- ತೇಯ ರಥವು ಖಾದ್ರವೇಯೆ ಶಯ್ಯೆ ಛತ್ರವು ಮನೆಯ ದಾಸಿ ಸುರನಿ ಮಾಧವ 3 ಪರ್ವತೇಶನಣುಗಿ ತಂಗಿ ಶರ್ವದೇವ ನರ್ಮ ಸಖಳು ಸರ್ವದುರಿತವಳಿವ ಗಂಗೆ ನಿನ್ನ ಪುತ್ರಿಯು ಸರ್ವಕರ್ತ ಸರ್ವಶಕ್ತ ಸರ್ವಕಾಲ ದೇಶ ವ್ಯಾಪ್ತ ಭೋಕ್ತ ಮಾಧವ 4 ನೀನೆ ತಾಯಿ ನೀನೆ ತಂದೆ ನೀನೆ ಬಂಧು ನೀನೆ ಬಳಗ ನೀನೆ ಸಖಳು ನೀನೆ ಗುರುವು ನೀನೆ ದ್ರವ್ಯವು ನೀನೆ ಧೃತಿಯು ನೀನೆ ಸ್ಮøತಿಯು ನೀನೆ ಮತಿಯು ಮಾಧವ 5 ನಿನ್ನ ನಾಮ ಪುಣ್ಯನಾಮ ನಿನ್ನ ರೂಪ ಮಾನ್ಯರೂಪ ಅನ್ಯ ದೈವರನ್ನು ಕಾಣೆ ಘನ್ನ ಭಕ್ತವರ್ಯರಾಣೆ ಮಾಧವ 6 ದೀನ ನಾನು ದಾನಿ ನೀನು ಹೀನ ನಾನು ಮಾನಿ ನೀನು ಏನ ಬಲ್ಲೆನೈಯ ನಾನು ಜ್ಞಾನಪೂರ್ಣನೈಯ ನೀನು ಮಾಧವ 7 ಹೃದಯದಲ್ಲಿ ನಿನ್ನ ರೂಪ ವದನದಲ್ಲಿ ನಿನ್ನ ನಾಮ ಉದರದಲ್ಲಿ ಅರ್ಪಿತಾನ್ನವಿತ್ತು ಅನುದಿನ ಒದಗಿ ಬಂದು ಬದಿಯಲಿದ್ದು ಮದಡ ಬುದ್ಧಿಯನ್ನು ಬಿಡಿಸಿ ಮಾಧವ 8 ಸ್ನಾನ ಮೌನ ಧ್ಯಾನ ತಪಗಳೇನು ಮಾಡಲೇನು ದೇವ ನೀನೆ ಕೃಪೆಯಿನೊಲಿಯದಿರಲು ಜ್ಞಾನ ಬಾರದು ಏನು ಹೀನ ಹಾನಿ ಬರಲು ನೀನು ಮಾತ್ರ ಬಿಡದಿರೆನ್ನ ಮಾಧವ 9 ನಿತ್ಯವಲ್ಲ ದೇಹವಿನ್ನು ವ್ಯರ್ಥವಾಗಿ ಪೋಪುದಾಯು ಮತ್ತೆ ಬರುವುದೇನು ನಿಜವು ಮತ್ರ್ಯಕಾಯವು ನಿತ್ಯ ನಿನ್ನ ಭಜಿಸುತಿಪ್ಪ ಮಾಧವ 10 ಅಂಬುಗುಳ್ಳೆಯಂತೆ ಇರುವ ಡಿಂಬವನ್ನು ನಂಬಿ ಕೆಟ್ಟು ಹಂಬಲಿಸುತ ವಿಷಯಗಳಿಗೆ ಡೊಂಬನಾದೆನು ಕಂಬಳಿಯೊಳು ಕಟ್ಟಿದನ್ನ ತಿಂಬುವನಿಗೆ ದೊರೆವ ಸುಖವು ಮಾಧವ 11 ಹೊಟ್ಟು ತಂದು ಕುಟ್ಟಿ ಕೇರಿ ಕಷ್ಟಪಟ್ಟು ತುಕ್ಕಿ ಬೀಸಿ ಅಟ್ಟಹಾಸದಿಂದ ರೊಟ್ಟಿ ಸುಟ್ಟು ತಿನ್ನಲು ಎಷ್ಟು ಸುಖವೊ ಅಷ್ಟೆಯಿನ್ನು ಭ್ರಷ್ಟ ಭವದಿ ಮಮತೆಯಿಡಲ ಮಾಧವ 12 ಹೊಟ್ಟೆಕಿಚ್ಚು ಪಡುವೆ ದೈವಕೆಷ್ಟು ಪೂಜೆ ಮಾಡೆ ಕರುಣ ಪುಟ್ಟಲೊಲ್ಲದದಕೆ ಬೆಟ್ಟದಷ್ಟು ಕೊಟ್ಟರು ಬೆಟ್ಟು ನೀರೊಳದ್ದಿ ಬಾಯೊಳಿಟ್ಟು ಚಪ್ಪರಿಸಲು ರುಚಿಯ ಮಾಧವ 13 ತಪ್ಪು ಸಾಸಿರಂಗಳನ್ನು ಒಪ್ಪಿಕೊಂಡು ಕಾವದೇವ ಮುಪ್ಪುರಂಗಳನ್ನು ಗೆಲಿಸಿದಪ್ರಮೇಯನೆ ಕಪ್ಪು ಮೇಘಕಾಂತಿಯಿಂದಲೊಪ್ಪುತಿಪ್ಪ ತಿರುಮಲೇಶ ಮಾಧವ 14 ಒರಳ ನೆಕ್ಕಿ ವ್ರತವ ಕೆಟ್ಟ ಮರುಳನಂದವಾಯ್ತು ದೇಹ ಧರಿಸಿದುದಕೆ ನಿನ್ನ ಬಿಟ್ಟು ನರರ ಸ್ತುತಿಸಲು ಹರಕು ಚಿಂದಿ ಬಿಡಿಸಲಿಲ್ಲ ಕರಕು ಅನ್ನ ಹೋಗಲಿಲ್ಲ ಮಾಧವ 15 ಮೊರಡು ತುರುವ ಹಿಡಿದು ಕಟ್ಟಿ ಕರೆದು ಕಷ್ಟ ಪಟ್ಟು ಪಾಲ ನುರಗಗಳಿಗೆ ಎರೆದ ತೆರದಲಾಯ್ತು ನಿನ್ನನು ತರಣಿ ಮುಣಗ ದುಡಿದು ಬಡಿದು ಮಾಧವ 16 ಕೆರವ ತಿಂಬ ನಾಯಿಗಿನ್ನು ಸುರುಚಿಯನ್ನ ಸೊಗಯಿಸುವುದೆ ನರಕ ಭಾಗಿ ಪಾಮರಂಗೆ ನಿನ್ನ ನಾಮವು ಗರಳದಂತೆ ತೋರ್ಪುದೈಯ ಗುರುಗಳಿಲ್ಲ ಹಿರಿಯರಿಲ್ಲ ಮಾಧವ 17 ಕ್ರೂರ ಮಾನವರೊಳುದಾರ ಧೀರ ಶೂರರೆಂದು ಸಾರಿ ಬಾರಿ ಬಾರಿಗಿನ್ನು ಪೊಗಳಿ ಬೊಬ್ಬೆಯಿಟ್ಟರು ಬಾರದವರಿಗೆಂದು ಕರುಣ ಘೋರತನದ ದನುಜರವರು ಶೌರಿ ಮಾಧವ 18 ಹಾಳು ಹೊಲಕೆ ನೀರನೆತ್ತಿ ತೋಳು ಬೀಳು ಹೋದವೋಲು ಖೂಳ ಜನಕೆ ಪೇಳಿಕೊಳ್ಳುತಿಹನು ಬಾಳ್ವೆಯು ದಾಳಿ ಮಾಳ್ಪ ವಿಷಯಗಳನು ಹೂಳಿ ಜ್ಞಾನ ಭಕ್ತಿಯನ್ನು ಮಾಧವ 19 ಎಷ್ಟು ನೀಲಿಯನ್ನು ತೊಳೆಯೆ ಬಿಟ್ಟು ಹೋಗದವರ ಬಣ್ಣ ದುಷ್ಟ ಮಾನವರಿಗೆ ಕರುಣ ಪುಟ್ಟದೆಂದಿಗು ಕಷ್ಟಪಟ್ಟು ಸೇವಿಸುವರ ಹೊಟ್ಟೆಯನ್ನು ಹೊಡೆದು ತಮ್ಮ ಮಾಧವ 20 ನಿರುತ ನಿನ್ನ ಕಥೆಯ ಬಿಟ್ಟು ನರರ ಕಥೆಗಳನ್ನು ಕೇಳಿ ಗುರುಗಳನ್ನು ಹಿರಿಯರನ್ನು ಜರೆಯುತಿಪ್ಪರು ಪೊರೆದ ತಂದೆ ತಾಯ ಮಾತ ಪರಿಕಿಸದಲೆ ತೊರೆದು ತಮ್ಮ ಮಾಧವ 21 ಪಟ್ಟದರಸಿಯನ್ನು ತೊರೆದು ಬಿಟ್ಟು ಪರರ ಸತಿಯ ಕೂಡಿ ಕೊಟ್ಟ ಸಾಲವನ್ನು ಕೊಡದೆ ನುಂಗುತಿಪ್ಪರು ಕರವ ಭಾಷೆಯನ್ನು ಕೊಟ್ಟು ಮೋಸ ಮಾಡುತಿಹರು ಮಾಧವ 22 ಉಂಡ ಮನೆಗೆ ಬಗೆವರೆರಡನವರು ಭಂಡರು ಕಂಡು ನುತಿಸಿ ಬೇಡಿಕೊಂಡರು ದಂಡಿಸುವರ ಕಂಡು ನಡುಗಿ ಮಾಧವ 23 ಕೊಳ್ಳರೊಳಗೆ ಸ್ನೇಹ ಬಹಳ ಸುಳ್ಳರೊಳಗೆ ಸೋಲುತಿಹರು ಒಳ್ಳೆಯವರ ಕಂಡವರ ಟೊಳ್ಳು ಮಾಳ್ಪರು ಬಳ್ಳೆಸುರಿದು ಬಲ್ಲಿದವರಿಗಳ್ಳೆ ಬಿರಿಯಲುಣಿಸಿ ದಣಿಸಿ ಮಾಧವ 24 ಮಾಡಿದಂಥ ಕೃತಿಯು ಮರೆತು ಕೇಡು ಬಗೆದು ಕಾಡುತಿಹನು ನೋಡರೊಮ್ಮೆಗಾದರವರು ಬಡವರೆಂಬುದ ಜಾಡೆಯರಿತು ನಿನ್ನ ನಾಮ ಪಾಡಿ ಪೊಗಳುತಿಹರಿಗೆಂದು ಮಾಧವ 25 ಶಾಕವ್ರತದೊಳೆಲ್ಲ ಶಾಕಂಗಳನ್ನು ಬಿಡುವ ತೆರದಿ ಬೇಕು ಬೇಕು ಎಂಬ ಬಯಕೆ ಬಿಡಲು ಬಾರದು ಸಾಕೆನಿಸದೆ ರತಿಯ ಸುಖದೊಳೇಕ ಚಿತ್ತನಾಗುವಂತೆ ಮಾಧವ 26 ನೇಮ ನಿಷ್ಠೆಯೆಂದು ಪರರ ಧಾಮದನ್ನ ಬಿಡುವವೋಲು ಕಾಮಲೋಭ ಮೋಹಗಳನು ಬಿಡಲು ಬಾರದು ನಿತ್ಯ ಪರರ ಮಾಧವ 27 ಹೇಸಿಗೆಯನು ಕಂಡು ಕರದಿ ನಾಸಿಕವನು ಹಿಡಿಯುವಂತೆ ಹೇಸಿ ವಿಷಯ ವಾಸನೆಯನು ಬಿಡಲು ಸಲ್ಲದು ಘಾಸಿಬಟ್ಟು ಪರರ ಸೇವೆಯಾಸೆಬಟ್ಟು ಮಾಡುವಂತೆ ಮಾಧವ 28 ವಿತ್ತ ಪದವಿ ಕಂಡು ಹರುಷ ಕ್ಲೇಶಗಳಿಗೆ ಸಿಲುಕು- ತಿರುಳು ಹಗಲು ಬಿಡದೆ ಕುದಿದು ತೊಳಲುತಿರುವೆನು ದುರುಳ ವಿಷಯಗಳಿಗೆ ಮನವ ಮಾಧವ 29 ಹೇಸಿ ವಿಷಯ ಸುಖವ ನಾನು ಲೇಸೆನುತ್ತೆ ತಿಳಿದು ಮಮತೆ ಯಾಸೆಯಲ್ಲಿ ಕಟ್ಟುಬಿದ್ದು ಕ್ಲೇಶಪಡುತಿಹೆ ಪಾಶಬಿಡಿಸಿ ದಾಸ ದಾಸ ದಾಸನಾಗಿಸೆನ್ನ ದೋಷ ಮಾಧವ 30 ಆಗದೆನಗೆ ಅಬುಜನಾಭ ಭಾಗವತವ ಕೇಳೆ ಮನಸು ಬೈಗು ಬೆಳಗು ಪೋಗುತಿಹುದು ಸಾಗಿ ಬಾರದು ಭೋಗ ಭಾಗ್ಯಗಳನು ಬಯಸಿ ರಾಗ ಲೋಭಗಳಲಿ ನೆಲಸಿ ಮಾಧವ 31 ಬಂದ ಕಾರ್ಯವಾಗಲಿಲ್ಲ ಎಂದು ಬ್ರಹ್ಮ ದೇಹ ಧರಿಸಿ ಮುಂದ ನೊಂದನರಿಯೆ ಮಾಧವ 32 ದಾಸ ವೇಷವನ್ನು ಹಾಕಿ ದೇಶ ದೇಶವನ್ನು ತುಕ್ಕಿ ಮೋಸಮಾಡಿ ಸುಜನರನ್ನು ಘಾಸಿಗೊಳಿಸಿದೆ
--------------
ಲಕ್ಷ್ಮೀನಾರಯಣರಾಯರು
ಮುರಳಿಯಧರ ಶ್ರೀ ಕೃಷ್ಣನ ನೋಡಲು ಏನೋ ಸಂತೋಷ ಏನೋ ವಿನೋದ ಪ ಹರಿವಳು ಯಮುನೆಯು ಮೆಲ್ಲನೆ ನೋಡಲು ಗೋವಿಂದನನು ಪರಮಾನಂದದಿ ಅ.ಪ ಕೊಳಲೂದಲು ಶ್ರೀಕೃಷ್ಣನು ನಾದದ ಸುಳಿ ಬಾಡುವುದೆಂಬುವ ಭೀತಿಯಲಿ ಜಲ ಮೂಲನು ಬೆಳದಿಂಗಳ ಕರಗಳ ತಳಿರುಗಳಿಂದಲಿ ತಳ ಸೇರಿಸುವ 1 ಶರಧಿ ತರಂಗಗಳೆದ್ದವು ರಂಗನ್ನ ವದನ ಶಕಾಂಕನ್ನ ನೋಡಿ ಅಂಗನೆಯರು ತಮ್ಮಂಗಗಳಲಿ ಭಂಗವ ಪಡೆದರನಂಗನ ಶರದಿ 2 ಭುವನವ ತುಂಬಿತು ಗಗನವು ತುಂಬಿತು ದಿವಿಜರ ಲೋಕಗಳೆಲ್ಲವು ತುಂಬಿತು ಕವಿಗಳು ಬೆರಗಾದರು ವರ್ಣಿಸಲೀ ಸವಿ ಮುರುಳಿಯು ನಾದದ ಪ್ರವಹನನು 3 ತುರುಗಳ ಪಯಧರ ಸ್ರವಿಸಿತು ಕ್ಷೀರವ ಕರೆದರು ಮೋದದ ಕಂಬನಿಯೆಲ್ಲರು ಮರೆತರು ನರಲೋಕದ ಮಂದಿಗಳು ಅರಿತು ಮೋಕ್ಷದ ಸುಖವೆಂತೆಂಬುದ 4 ಈಶನು ಕೈಲಾಸದಲಿ ಕುಣಿದನು ಶೇಷನು ಸಾಸಿರ ಫಣಿಗಳನಾಡಿದ ದೋಷರಹಿತ ವಾಣೀಶನ ವದನ ವಿ ಕಾಸವು ಬೆಳಗಿತು ನಾಕು ದಿಕ್ಕುಗಳ 5 ಆ ಸಮಯವ ಇತಿಹಾಸಗಳಲಿ ಕವಿ ವ್ಯಾಸರಿಗಲ್ಲದೆ ವರ್ಣಿಸಲಳವೆ ಭಾಸುರ ಸುಂದರ ವದನ ಪ್ರಸನ್ನನು ರಾಸಕ್ರೀಡೆಯ ರಸವನು ಹರಿಸುತ 6
--------------
ವಿದ್ಯಾಪ್ರಸನ್ನತೀರ್ಥರು
ಮುರುಳಿಯ ನೂದಿದನಾಗ ಹರಿ ವಿಧವಿಧರಾಗದೊಳೀಗ ಪ ತುರುಗಳ ಕಾಯುತ ತರಳರ ಒಡಗೂಡಿ ಸುರಮುನಿವಂದಿತ ಸರಸಿಜನಾಭನು ಅ.ಪ ಚಂದದ ಪಾಡಗರುಳಿಯು ಕಾ- ಲಂದುಗೆ ಕಿರುಗೆಜ್ಜೆ ಧ್ವನಿಯು ಹಿಂಡುಗೋವ್ಗಳ ವೃಂದದಿ ನಲಿಯುತ ಮಂದರೋದ್ಧರ ಗೋವಿಂದ ಮುಕುಂದನು1 ಉಟ್ಟ ಪೀತಾಂಬರ ಹೊಳೆಯೆ ನಡು ಕಟ್ಟಿದ ಚಲ್ಲಣ ಹೊಳೆಯೆ ಪರಮೇಷ್ಟಿ ಪಿತನು ತನ್ನ ಪುಟ್ಟ ಕರದಲಿ ಉತ್ತಮನಾದದ 2 ವಿಧವಿಧಹಾರಗಳಿಂದ ರನ್ನ ಪದಕದ ಮುತ್ತುಗಳಿಂದ ಹೃದಯದಿ ಶ್ರೀ ಭೂ ಸಹಿತದಿ ಮೆರೆಯಲು ಪದುಮನಾಭ ಶ್ರೀ ಚಲ್ವ ಮದನಗೋಪಾಲನು 3 ಕೋಟಿಸೂರ್ಯರಂದದಲಿ ಬಹು ಮಾಟದ ಮುಖಕಾಂತಿಯಲಿ ನೋಟದಿ ಜಗವನೆ ಮೋಹವಗೊಳಿಪ ಕಿರೀಟಿಯ ಪೊರೆದ ವೈರಾಟನು ಹರುಷದಿ 4 ಕರ್ಣದಿ ಬಾವುಲಿ ಹೊಳಪು ನವ- ರನ್ನ ಕಿರೀಟದ ಬೆಳಕು ಕನ್ನಡಿಯಂದದಿ ಕದುಪಿನ ಝಳಪು ಮೋ- ಹನ್ನ ಮಾಲೆನಿಟ್ಟ ಸೊಗಸಿನ ವಲಪು 5 ಮುಖದಲಿ ಮುಂಗುರುಳೊಲಿಯೆ ಪ್ರಿಯ ಸಖಿಯರು ಹರುಷದಿ ನಲಿಯೆ ಅಕಳಂಕ ಮಹಿಮನು ಗುಪಿತದಿ ಗೆಳೆಯರ ಸುಖವ ಪಡಿಸುತಲಿ ಸಖ್ಯದಿಂದ ಪ್ರಿಯನು 6 ತುರು ವೃಂದದಲಿ ಗೋ- ವಿಂದನು ಕುಣಿಕುಣಿಯುತಲಿ ಅಂಬರದಲಿ ದೇವದುಂದುಭಿ ಮೊಳಗಲು ಕಂಬು ಕಂಧರ ಹರಿ ಸಂಭ್ರಮ ಸೂಸುತ 7 ವಾಸವ ವಂದಿತ ಹರಿಯೆ ಸರ್ವೇಶ ಕೃಪಾಕರ ದೊರೆಯೆ ವಾಸುದೇವ ಸರ್ವೇಶನೆ ಭಕುತರ ಸಾಸಿರನಾಮದಿ ತೋಷಪಡಿಸುತಲಿ 8 ಪಾಹಿ ಪಾಹಿ ಶ್ರೀಶ ನಮೋ ಪಾಹಿ ಪಾಹಿ ಬ್ರಹ್ಮೇಶ ಪಾಹಿ ಪಾಹಿ ಪರಿಪಾಲಿಸು ನಮ್ಮನುಪಾಹಿ ಕಮಲನಾಭವಿಠ್ಠಲ ದಯಾನಿಧೆ 9
--------------
ನಿಡಗುರುಕಿ ಜೀವೂಬಾಯಿ
ಯಾಕೆ ಬಾರಯ್ಯ ನೀ ಏಕೋ ದೇವನೆ ಎನ್ನ ಏಕಾಕಾರದಲೆನ್ನ ಹೊರಿಯಲಾರೇನಯ್ಯ ಧ್ರುವ ನೀರ ಥೆರಿಯ ಕಡಿದು ಹೃದಯದಕರ ಚರಣದಿ ಭರದಿ ಮುಣಗಿ ನೀರ ನಡಿಗಿ ದಣದೇನಯ್ಯ 1 ವಾರಿಧಿಮಥನದಿ ಮೇರುಪರ್ವತವನ್ನು ಭಾರ ಬೆನ್ನಲಿ ಪೊತ್ತು ಬೆವರಿ ದಣಿದೇನಯ್ಯ2 ಧರಿಯ ಕದ್ದಸುರನ ಕೋರೆದಾಡಿಂದ ಸೀಳಿ ಭರದಿಂದ ಹೊಯಿದಾಡಿ ಹೋರಿ ದಣಿದೇನಯ್ಯ 3 ತರಳಗೊಲಿದು ಪ್ರಕಟಿಸಿ ದೈತ್ಯನ ಸೀಳಿ ಕರಳೊನಮಾಲಿಯ ಧರಿಸಿ ದಣಿದೇನಯ್ಯ 4 ಧರಿಯು ಮೂರಡಿ ಮಾಡಿ ಎರೆದು ದಾನವ ಬೇಡಿ ನರನ ಪಾತಾಳಕೊತ್ತಿ ಬಳೆದು ದಣಿದೇಯನಯ್ಯ 5 ಹಿರಿಯಳ ಶಿರವನು ಹರಿದು ಕತ್ತರಿಸಿನ್ನು ಕರದಲ್ಲಿ ಪರಶುವ ಪಿಡದು ದಣಿದೇನಯ್ಯ 6 ಶಿರಗಳ ಚೆಂಡಾಡಿ ರಾವಣೀಂದ್ರ ಜಿತನ ಶರದಿ ಕುಂಭಕರ್ಣನ ಎಚ್ಚದು ದಣಿದೇನಯ್ಯ 7 ಷತುರುಗಳ ಕಾಯಿದು ಉರುಗನ ತುಳದಿನ್ನು ಗಿರಿಯ ಬೆರಳಲೆತ್ತಿ ತೋರಿ ದಣಿದೇನಯ್ಯ 8 ಬರಿಯ ಬತ್ತಲೆ ಅಗಿ ಅರಿಯದೆ ತ್ರಿಪುರವ ಸೇರಿ ನಾರೇರ ವ್ರತವಳಿದು ದಣಿದೇನಯ್ಯ 9 ಏರಿ ಕುದುರಿಯ ತಿರುಹು ರಾಹುತನಾಗಿ ಪರಿ ರೂಪವ ತಾಳಿ ದಣಿದೇನಯ್ಯ 10 ಸರ್ವಾಪರಧವು ಕ್ಷಮೆಯಿಂದ ಮಹಿಪತಿಯ ಮನದೊಳು ಬಂದು ನಿಂದು ಹೊರೆದು ರಕ್ಷಿಸಯ್ಯ 11
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಯಾಕೆ ರಂಗ ನಿನಗೆ ಮಾಕಾಂತೆಯೊಳು ಗರ್ವ | ಲೋಕದೊಳು ಅಬಲೆಯೇನೋ ಕೇಳಯ್ಯಾ ನೀನು ಪ ಮೀನಾವತಾರವ ನೀನಂದು ವಿಡಿದರೆ | ಮೀನಾಂಬಕಿ ತಾನಾದಳೋ1 ಬೆಟ್ಟವ ಬೆನ್ನಿಲಿ ಕಷ್ಟದಿ ನೆಗೆದರೆ | ಬಟ್ಟ ಕುಚಗಳ ಹೊತ್ತಳೋ 2 ಧರೆಯ ಭಾರವ ತಾಳಿದರ ನಿನ್ನಾಭಾರವನು | ಧರಿಸಿದಳಂದಗಲದಲೆ 3 ಸಿಂಹಾನನನಾಗಿ ಮಹಿಮೆ ದೋರಿಸಿದರೆ | ಸಿಂಹದಂತೆ ನಡು ನಡುವಾದಳೋ 4 ಬಲಿ ಬಾಗಿಲಕಾಯಿದರೆ ನೆಲೆಸಿಹಳವಳಲ್ಲಿ | ಬಲಿಯಾ ಭಾಗ್ಯ ರೂಪವಾಗಿ5 ಸುರರ ಹೊರಿಯಲಿಕ್ಕೆ ಪರಶವ ಪಿಡಿದರೆ | ಪರಸಗೈಯ್ಯ ತಾನಾದಳೋ 6 ಹರನಾ ಚಾಪವನೆಗೆದರೆ ಅದನೆವೆ ಮುನ್ನೆ | ಕರೆದಲೆ ತ್ಯಾಡಿದಳೊ 7 ಸೆರೆಹರಿದು ಸ್ತ್ರೀಯರಾ ತಂದರೆ ನಾರದರಿಂದ | ಸೆರೆವಿಡಿಸೆ ಕೊಂಡಳೋ 8 ಮುಪ್ಪರ ಹೊಕ್ಕರೆ ನೀವಪ್ಪುತಲಿ ಹನಿನ್ನಾ | ಮುಪ್ಪುರದಲಿ ಮೆರೆದಳೋ 9 ತುರುಗವ ಏರಿಕೊಂಡು ತಿರುಗಲು ನಿನ್ನಾಕೂಡ | ತುರಗಮನಿ ತಾನಾದಳೋ 10 ಕಡೆಯಕಾಲಕ ನೀರೊಳೊಡಗೂಡಿ ಮಲಗಲು | ಒಡನೆ ವಟದೆಲೆ ಯಾದಳೋ11 ಗುರು ಮಹಿಪತಿ ಪ್ರಭು ಚರಿತೆಯಾ ನಿಮ್ಮೀರ್ವರ | ಭರದಿ ಹೇಳಲೆನ್ನಳವೇ 12
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಯಾದವರಾಯ ಬೃಂದಾವನದೊಳು ವೇಣುನಾದವ ಮಾಡುತಿರೆ ಪ ರಾಧೆ ಮುಂತಾದ ಗೋಪಿಯರೆಲ್ಲಮಧುಸೂದನ ನಿಮ್ಮನು ಸೇವಿಸುತ್ತಿರೆ ಅ ಸುರರು ಅಂಬರದಿ ಸಂದಣಿಸಿರೆ ಅ-ಪ್ಸರ ಸ್ತ್ರೀಯರು ಮೈಮರೆದಿರೆಕರದಲಿ ಕೊಳಲನೂದುತ ಪಾಡುತಸರಿಗಮ ಪದನಿ ಸ್ವರಗಳ ನುಡಿಸುತ 1 ಹರಬ್ರಹ್ಮರು ನಲಿದಾಡುತಿರೆ ತುಂ-ಬುರು ನಾರದರು ಪಾಡುತಿರೆಪರಿಪರಿ ವಿಧದಲಿ ರಾಗವ ನುಡಿಸುತತುರು ಹಿಂಡುಗಳ ಕೂಡುತ ಪಾಡುತ2 ತುರು ಹಿಂಡುಗಳ ತರತರದಲಿ ತನ್ನಕರದಿಂ ಬೋಳೈಸಿ ಸಂತೈಸುತಅರವಿಂದ ನಯನ ಆದಿಕೇಶವರಾಯಕರುಗಳ ಸಹಿತ ಗೋವ್ಗಳ ತಿರುಹುತ3
--------------
ಕನಕದಾಸ