ಒಟ್ಟು 5479 ಕಡೆಗಳಲ್ಲಿ , 130 ದಾಸರು , 3579 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

--------ಹರಿಯೆನ್ನ ಕೂಡಿಸೊ ಬಿಡದಿನ್ನು ಕೂಡಿಸು ಕೃಪಾನಿಧಿಯೆ ಕೂಡಿಸೆನ್ನ ಧೊರಿಯೆ ಪ ಉದಯದಲಿ ಏಳುತಲಿ ಊರ್ವೀಶ ನಿಮ್ಮಸ್ಮರಣೆ ಹೃದಯದಲಿ ಅನುಗಾಲ ಉಚಿತನಾಗಿ ಪದುಮನಾಭ ನಿಮ್ಮ ಪಾದವನೆ ಪೂಜಿಸುವ ಸದಮಲ ಜ್ಞಾನಿಗಳ ಸಂಗದೊಳಗೆ ಎನ್ನ 1 ನಿತ್ಯನೇಮ ವ್ರತದಲ್ಲಿ ಬೇಕಾಗಿ ಇರುತಲಿ ಅತ್ಯಂತ ಪುರುಷ ಆನಂದದಲ್ಲಿ ಕರ್ತೃ ನೀನಲ್ಲದೆ ಸರ್ವೋತ್ತಮರು ದಾರೆಂದು ನಿತ್ಯ ನೀನೆಂದು ತಿಳಿಯುವ (ತಿಳಿಸುವ ) ಆತ್ಮಕರಸಂಗ 2 ಅನುದಿನವು ನಿಮ್ಮ ಧ್ಯಾನ ಮನದಲ್ಲಿ ಮರೆಯದೆ ದಿನಗಳನು ಕಳೆವಂಥಾ ದ್ವಿಜೋತ್ತಮರಾ ಅನುಸರಿಸಿ ಅವರನನು ಅತಿಮೋದದಿಂದ ಬೆರೆದು ವನಜನಾಭನೆ ನಿಮ್ಮ ಭಜನೆ ಮಾಡುವರ ಸಂಗ 3 ವೇದಶಾಸ್ತ್ರಾದಿಗಳ ಭೇದಗಳನರಿತು ಸತ್ಯ ಬೋಧಗುರು ಕರುಣದಲಿ ಪೂರ್ಣರಾಗಿ ಸಾಧು ಸಜ್ಜನರಾದಂಥ ಸತ್ಪುರುಷರಾ ಸಂಗ 4 ಉಪವಾಸವನೆ ಮಾಡಿ ಉಚಿತ ಕರ್ಮಗಳಿಂದ ತಪಗಳನೆ ಮಾಡುವಂಥ ಧನ್ಯಜನರಾ ಸುಫಲಂಗಳನೆ ಪಡೆದು ಸೂತುತಲಿ ಇರುವರಾ ಅಪರಿಮಿತ ಮಹಿಮ ನಿನ್ನ ಹಾಡಿ ಪಾಡುವರಸಂಗ 5 ಪರಮಾತ್ಮ ನಿನ್ನ ಮಹಿಮೆ ಭಾವದಲಿ ಶೋಧಿಸಿ ಪರಿಪರಿಯಲಿರುವಂಥ ಭಾವಜ್ಞರಾ- ಚರಣೆಯನು ಮಾಡಿ ನಿಮ್ಮ ಸೇವೆಯನು ಮಾಡುವಂಥ ಪರಮ ಭಕ್ತರಾದ ಪುಣ್ಯವಂತರ ಸಂಗ 6 ಗಂಗಾದಿ ಸಕಲ ತೀರ್ಥಂಗಳನು ಆಚರಿಸಿ ಅಂಗಾದಿ ದೋಷವ ಕಳೆದ ಅಧಿಕ ಜನರಾ ಸಂಗಸುಖ ಅಬ್ಧಿಯೊಳು ಸಂತತವು ಬೆರೆವಂಥರಂಗ ' ಹೊನ್ನ ವಿಠ್ಠಲ’ ರಾಯ ಗೋವಿಂದ 7
--------------
ಹೆನ್ನೆರಂಗದಾಸರು
(1) ಸತಿ-ಪತಿ ಭಾವದ ಸ್ತುತಿಗಳು (ಜಾವಡಿಗಳು) ಎಂದಿಗೆ ತೀರಿದೆ ಸುಂದರನಾಯಕಿ ಅಂಗಜ ಬಾಣದ ಅತುರವನ್ನೂ ಪ ಚಂದ್ರಮುಖಿಯೇ ನೀ ನಾದಿನ ಹೇಳಲ್ ಬಂದೆನುನಾನಹುದೇ ಭಾವಕರನ್ನೇ ಕುಂದುಗಳನೀಪರಿ ಉಸುರುವೆ ಉಚಿತವೆ ಸಂದಣಿಯಾಗೆನ್ನೊಳಿಂದಿನ ಕಾಲಯೆಂದಿಗೆ 1 ಬಲ್ಲೆನು ನಿನ್ನಂ ಭಾವದ ಸೊಲ್ಲಂ ಬೆಲ್ಲದ ಮಾತನಾಡಿ ಕಳುಹಿಪೆನೇಂ ಬೊಲ್ಲಿದಿಗೆ ಸಾಕುಬಿಡು ಇಂಪಿನ ಕವಚತೊಡು ಸಲ್ಲಿದೆ ಸುಂಕವ ಸಮ್ಮತಿಯಿಂದಾ 2 ಮಾರನು ಬಂದೂ ಮನದೊಳು ನಿಂದೂ ದಾರಿಯನು ತಪ್ಪಿಸಿ ಧಣಿಸುವ ಕಾಣೆ ಓರದೆ ಕೋರಿದ ಕಾರ್ಯವ ತೀರಿಸೆ ಕಾಂಕಳು ನೀನಾಗಿ ಕಾಮಶಾಸ್ತ್ರವಂ 3 ಈ ಸುಖಸಂಪದ ಈಶ್ವರ ಬಲ್ಲಂ ಆಸೆಯ ತೋರಿ ನೀ ಮೋಸವಗೆಯ್ವೆ ದಾಸನು ವಂದಿಪ ಸುಖತೋರಿದೆ ದೇಶಿಕನಲೆ ತುಲಸಿರಾಮಾ 4
--------------
ಚನ್ನಪಟ್ಟಣದ ಅಹೋಬಲದಾಸರು
(3) ರೇವಣ್ಣ ಸಿದ್ದೇಶ್ವರ ಯತಿಗಳು ಬೆಂಗಳೂರು ಭೇಟಿ ಯೋಗಿಶೇಖರನಾಗಿ ಬೆಳಗುವ ಜಗದೊಳಗೆ ತಾ ನಿಜ ಪ ನಾಗಭೂಷಣನಡಿಗಳಂ ಪಿಡಿದಾಗ ಹೊಂದಿದನದ್ವಯಂ ಪದ ಜೋಗಿ ಜಂಗಮದೊಡೆಯ ನಮ್ಮಯ ರೇವಣಾಶಿದ್ಧೇಶ್ವರನೆ 1 ತಾನಿಹ ಶೈವಗಿರಿಯೊಳು ದೀನಜನಮಂದಾರ ಮುನಿಮಹ 2 ಅಂತರಾತ್ಮನೊಳಿಂತು ಹೊಂದಿಪ ರೆಂತು ಲೋಕೋಪಕಾರ ರಾಗಿಯು ಅಂತು ದಯಮಾಡಿರುವ ನೋಡಿ ಅ ನಂತ ಮಹಿಮನೆ ರುದ್ರಮುನಿ 3 ತತ್ಸ್ವರೂಪನು ತೋರಿ ಭುವನಕೆ ಸತ್ಸಹಾಯಕನಾದ ನಮ್ಮಯ ಮತ್ಸ್ಯಮೂರುತಿ ಪ್ರಿಯನೆ ಮುನಿಮಹಾ 4 ತಿರ್ಗಿ ಲೋಕಕೆ ಬಾರದಂದದಿ ಸ್ವರ್ಗಲೋಕದೊಳಿರುವ ಮುನಿಮಹಾ 5 ಭುವನದೊಳಗವತರಿಸಿಯಿರುತಿಹ ಸುಮನ ಸತ್ಯಸಮಾಜ ಭೋಜನೆ ತಾ ನಿವನೆನೆ ಹೊಳೆವ ಮುನಿಮಹಾ 6 ಬರುವ ಭಕ್ತರಿಗಾಗಿ ತನ್ನೊಳ ಗಿರುವ ಪರತತ್ವವನು ಭಕ್ತರ ಕರದುಕೊಡುವುದು ಕಂಡುಕೊಳ್ಳಿರೊ ತರುಣಿಮಣಿಯನು ಧರಸಿ ಧರೆಯೊಳು 7 ಪ್ರಣವಲಿಂಗದೊಳೈಕ್ಯಮಾಗುವ ಕಂಚಿವರದನ ಪ್ರೀಯನಾಗಿಯು 8
--------------
ಚನ್ನಪಟ್ಟಣದ ಅಹೋಬಲದಾಸರು
(39ನೇ ವರ್ಷದ ವರ್ಧಂತಿ) ಭೂವರ ಭಾಗ್ಯದೇವಿಯ ಕೂಡಿ ಶುಭಕಾರಿ ಪ. ಏಕೋನ ಚತ್ವಾರಿಂಶತಿವತ್ಸರವು ಸಂತು ರಾಕುತನದೊಳೆನಗೆ ಬೇಕು ಬೇಕೆಂಬಾಶಾಪಾಶವ ಸುಡಲಾರೆ ಭೀಕರಗೊಳಿಪ ಬಗೆ ಮಾಕಳತ್ರನೆ ಸುಮ್ಮನ್ಯಾಕುಪೇಕ್ಷಿಪೆ ಕರು ಣಾಕರ ಕಡೆಗಣ್ಣಿಂದಲಿ ನೋಡು ಕಮಲಾಕ್ಷ 1 ಹಲವು ಹಂಬಲಿಸುತ ಬಳಲಿದೆ ದಿನದಿನ ಗಳಿತವಾಗಿಹ ದೇಹದಿ ಬಲವು ಕುಂದಿತು ಒಂದು ನೆಲೆಯ ಕಾಣದು ಕಳ- ವಳಿಕೆಯಿಂದಲಿ ಮನವು ಮೊಲೆಯ ಕಂದನೊಳ್ ಫಲ ಸಲುವುದೆ ಮಾತೆಗೆ ನಳಿನನಾಭನೆ ಎನ್ನ ತಪ್ಪೆಣಿಸದಿನ್ನು 2 ನಿನ್ನ ನಾಮವ ನಂಬಿ ನೆನೆವರಿಗಖಿಳಾರ್ಥ ಸನ್ನಹ ಸುಲಭನೆಂದು ಮುನ್ನಿನ ಮುನಿಗಳು ನುಡಿದ ಮಾತನು ಶ್ರುತಿ ಸನ್ನುತ ಮರೆಯಲೆಂದು ಎನ್ನ ಮನೋರಥ ಕೊಡುತ ಕರುಣಾಸಿಂಧು ಪನ್ನಗಾಚಲನಾಥ ಪಾವನಕರ ಬಂಧು 3
--------------
ತುಪಾಕಿ ವೆಂಕಟರಮಣಾಚಾರ್ಯ
(4) ಕೆಂಗಲ್ಲು ಆಂಜನೇಯ ಕೆಂಗಲ್ಲ ಹನುಮಂತರಾಯ ನಮ್ಮ ರಂಗನಾಥಗೆ ಬಹು ಪ್ರಿಯ ಪ ಮಂಗಳಕರ ವಜ್ರಕಾಯ ಉ ತ್ತುಂಗ ವಿಕ್ರಮ ಪೊರೆ ಜೀಯ ಅ.ಪ ಶ್ರಾವಣ ಕಡೆ ಶನಿವಾರ ಬರೆ ಭಾವಿಸಿ ಭಕ್ತರು ಸೇರೆ ಆವಾವೆಡೆ ಜನ ಮೀರೆ ನಿನ್ನ ತೀವಿದ ಮನದಿ ಪಾಡುವರೊ ದೊರೆ 1 ಬಹುಭಜಕರು ಕುಣಿದಾಡಿ ಗುಣ ಸಾಹಸ್ರಗಳ ಕೊಂಡಾಡೀ ಶ್ರೀಹರಿ ವೈಭವ ನೋಡೀ ಮಹದಾನಂದದೊಳಗೋಲಾಡಿ2 ಪರಿ ವ್ಯಾದಗಳಿಂದ ಸಿರಿ ವರನುತ್ಸವ ಬಹುಚಂದ ತಿರುಪತಿ ಯಾತ್ರಿಕರಿಂದ ನೆರೆದೆಸೆವ ಕಲ್ಯಾಣ ಬೃಂದ 3 ತಾಳ ತಂಬೂರಿ ಮದ್ದಳೆಯ ಮೇಳ ತಮ್ಮಟೆಗಳ ಬಹು ಘೋಷ ಭೂಲೋಕದಿಂ ಸ್ವರ್ಗಕೈದಿ ಶ್ರೀ ಲೀಲೆಯ ತೋರ್ಪುದು ನಿಜದಿ 4 ವರಜಾಜಿ ಕೇಶವನ ನಾಮವನು ನಿರುತ ನೆನೆವ ಶರಣ ಪ್ರೇಮ ಕರುಣದಿ ಪೊರೆ ಪುಣ್ಯಧಾಮ ಸಿರಿ ಜಯಚಾಮನೃಪಸ್ತುತ್ಯ ಭೀಮ 5
--------------
ಶಾಮಶರ್ಮರು
(40ನೇ ವರ್ಷದ ವರ್ಧಂತಿ) ಕ್ಷಿಪ್ರ ಪ್ರಸಾದಕರ ದೊರೆಯೆ ಅಜಭವಾ- ದ್ಯ ಪ್ರಮೇಯಾ ಸಂತಸುಗುಣಾಬ್ಧಿ ಹರಿಯೆ ಪ. ಇಳೆಯೊಳಗೆ ನಾ ಬಂದು ಕಳೆದೆ ನಾಲ್ವತ್ವರುಷ ಉಳಿದ ಪರಿಮಿತಿಯರಿಯೆ ಗಳಿತವಾಯಿತು ದೇಹ ಬಳಲಿದೆನು ಬಯಲಾಸೆ ಬಲೆಯೊಳಿಂದಿನವರೆಗು ನಳಿನನಾಭನೆ ನಿನ್ನ ನಂಬಿದೆನು ಮನವರಿತು ಮುಳುಗಲಾರೆನು ಮೋಹ ಕಡಲ ಮಾಧವನೆ ತಿಳಿಯದೆ ನಿನಗೆ ಪೊನ್ನೊಡಲ ಮುಂದಿಂತು ದುರಿತ ಸಿಡಿಲ 1 ದೇವಾಧಿದೇವ ತವ ಸೇವಾನುಕರನ ಹೊ- ನ್ನಾವರದೊಳಿರಿಸಲಿನ್ಯಾವನರಸಲಿ ಕೃಷ್ಣ ಭಾವ ಶುದ್ಧಿಯನರಿತು ಭಜನೆ ಮಾಡುವದೆಂತು ಸಾವಕಾಶವಿದ್ಯಾಕೆ ಸಾಹಿತ್ಯಗಳು ಜೋಕೆ ನಿತ್ಯ ಕೈಗೊಂಬ ಕೀರ್ತಿ ಸಂ- ಭಾವನಾ ಸುಖವ ನಾನುಂಬಾ ತರವ ಸಂ- ಭಾವಿಸು ದಯಾಂಬೋಧಿ ದೀನಾವಲಂಬ 2 ರಕ್ಕಸಾಂತಕ ನೀನೆ ದಿಕ್ಕೆಂದು ನಿನ್ನಿದಿರು ಬಿಕ್ಕಿ ಬಿರಿದಳಲುವೆನು ಸೊಕ್ಕಿ ಕಾಡುವ ದೊಡ್ಡ ಜಕ್ಕಣಿಯ ಕಾಲಿಂದ ತಿಕ್ಕಿ ತೀರಿಸು ನಿನಗ- ಶಕ್ಯವಾವುದು ಸ್ವರ್ಣಪಕ್ಷ್ಯೇಂದ್ರಗಮನಕರ ಚಕ್ರಭೂಷಣ ವೆಂಕಟೇಶದಾಸ ಜನ ಕಕ್ಕರದಿ ತೋರು ಸಂತೋಷ ಭಕ್ತಿಫಲ ದಕ್ಕುವಂದದಿ ಮಾಡು ದುರಿತಾಬ್ಧಿಶೋಷ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಅಕ್ರೂರನ ಒಸಗೆ) ರಥವೋಗದಾ ಮುನ್ನ ಗೋಕುಲಕೆ ಮನ್ಮನೋ- ರಥ ಹೋಗಿರುವುದೇನೆಂಬೇ ಪ ಅತಿ ಕೌತುಕವದಾಯ್ತು ಖಳರಾಯನೊಲಿದು ಯದು- ಪತಿಯ ಕರೆತರುವುದೆಂದೆನಗೆ ಪೇಳಿರಲಿಕ್ಕೆ ಅ.ಪ. ಪತಿತರ್ಗೆ ನಾಮ ದುರ್ಲಭವಲಾ ಎನಗೆ ಶ್ರೀ- ಪತಿ ಸೇವೆ ತಾನಾಗಿ ದೊರೆತೂ ಶತಸಹಸ್ರಾನಂತ ಜನುಮಗಳ ಸು- ಕೃತಕೆ ಫಲವಾಯಿತೆಂದರಿತೂ ಗತ ಕಿಲ್ಬಿಷನಾದೆನೆಂಬುದಕಿದೇ ಸಾಕ್ಷಿ ಪಥದೊಳಗೆ ತಾವೆ ಮುಂದುವರಿದೂ ಮಿತಿಯಿಲ್ಲದಲೆ ಮಹಾ ಶಕುನಂಗಳಾಗುತಿವೆ ಪ್ರತಿ ಇಲ್ಲವೀ ಶುಭೋದಯಕೆ ಸೂರ್ಯೋದಯಕೆ 1 ಶ್ರೀ ಪದ್ಮಜಾದಿಗಳು ಸೇವಿಸುವ ಚರಣ ಯಮು- ನಾಪುಳಿನದಲಿ ಮೆರೆವ ಚರಣಾ ಗೋಪೀಯರ ಪೀನ ಕುಚಕುಂಕುಮಾಂಕಿತ ಚರಣಾ ತಾಪತ್ರಯಾವಳಿವ ಚರಣಾ ಗೋಪುರದ ಶಿಲತೃಣಾಂಕುರುಹ ತೋರುವ ಚರಣಾ ಆಪದ್ಬಾಂಧವನ ಚರಣಾ ಣಾ ಪೂರ್ಣಾ ಎನಗಭಯಕೊಡುವಾ ಪಿಡಿಲಾ 2 ನೋಡುವೆನು ನೀರದಶ್ಯಾಮಸುಂದರನ ಕೊಂ- ಡಾಡುವೆನು ಕವಿಗೇಯನೆಂದೂ ಮಾಡುವೆನು ಸಾಷ್ಟಾಂಗದಂಡ ಪ್ರಣಾಮ ಕೊಂ- ಡಾಡುವೆನು ಕೈ ಮುಗಿದು ನಿಂದೂ ಬೇಡುವೆನು ಭುವನೈಕದಾತನೆಂದಲ್ಲಿ ಕೊಂ ಡಾಡುವೆನು ದಾಸ್ಯ ಬೇಕೆಂದೂ ಈಡಿಲ್ಲದಿಂದಿನಾ ಮನಕೆನ್ನ ಬಯಕೆ ಕೈ- ಗೂಡುವುದು ನಿಸ್ಸಂದೇಹ ದೈವ ಸಹಾಯ 3 ಇರುವನೋ ಏಕಾಂತದೊಳಗಿರುವ ಕೇಳದಿರು ಬರುವನೋ ಬಂದವನ ಕಂಡೂ ಕರೆವನೋ ಕಿರಿಯಯ್ಯ ಬಾರೆಂದು ಬಿಗಿದಪ್ಪಿ ಬೆರೆವನೋ ಬೆರಸಿಯದನುಂಡೂ ಒರೆವನೋ ಒಡಲ ಧರ್ಮವನೆಲ್ಲ ವರಗಿನೇ ಜರಿಯನೋ ಜಗದೀಶ ಹಗೆಯವನೆನುತ ಬಗೆಯ 4 ಗೋಧೂಳಿಲಗ್ನಕೆ ಗೋಕುಲಕೆ ಬಂದು ಬೆರ- ಗಾಗಿ ಹೆಜ್ಜೆಗಳ ನೋಡಿ ಭೂದೇವಿಗಾಭರಣವೆನುತ ತೇರಿಳಿದು ಶ್ರೀ ಪಾದರಜದೊಳಗೆ ಪೊರಳಾಡೀ ಗೋದೋಹನದೊಳಿದ್ದ ರಾಮಕೃಷ್ಣರ ಕಂಡು ನಾ ಧನ್ಯ ಧನ್ಯನೆಂದಾಡೀ ಶ್ರೀದವಿಠಲ ಎರಗುವನಿತರೊಳು ಬಿಗಿದಪ್ಪಿ ಸಾದರಿಸಿದನು ಇದೆ ಸದನದಲಿ ಸ್ವಪ್ನದಲಿ 5
--------------
ಶ್ರೀದವಿಠಲರು
(ಅನಂತಚತುರ್ದಶಿಯ ದಿನದ ಪ್ರಾರ್ಥನೆ) ಪದ್ಮನಾಭ ಪರಿಪಾಲಿಸು ದಯದಿಂದ ಪದ್ಮಜಾದಿ ವಂದ್ಯ ಪರಮ ದಯಾಳೊ ಪದ್ಮಿಯಳರಸ ಹೃತ್ಪದ್ಮನಾಮಕ ಸ್ವರ್ಣ ಸದ್ಮ ವೃತ್ತಿಪದಪದ್ಮವ ತೋರೊ ಪ. ಚಿಂತಿತದಾಯಕ ಸಂತರ ಕುಲದೈವ ಕಂತು ಜನನಿಯೊಡಗೂಡಿ ನೀನು ನಿಂತು ಎನ್ನಲಿ ಕೃಪೆ ಮಾಡೆಂದು ನಮಿಪೆ ಧು- ರಂತ ಮಹಿಮ ನಿನ್ನ ಚರಣಾಬ್ಜಯುಗಲಾ 1 ಆದಿ ಮಧ್ಯಾಂತವಿದೂರ ನಿನ್ನಲಿ ಮಹ ದಾದಿ ತತ್ವಗಳೆಲ್ಲ ನಿಂತಿಹವು ಆದಿ ಭೌತಿಕ ಮೊದಲಾದ ತಾಪಗಳನ್ನು ಶ್ರೀದ ನೀ ಬಿಡಿಸಲು ಸದರವಾಗಿಹವು 2 ಒಂದರಿಂದೊಂದಾದರಿಂದ ಮೂರು ಮೂರ್ತಿ ಇಂದಿರೆ ಸಹಿತಾವಿರ್ಭೂತನಾಗಿ ಮುಂದಿನ ಮಹದಾದಿ ತತ್ವವ ನಿರ್ಮಿಸಿ ನಿಂದನಂತಾಸಂತರೂಪನಾದವನೆ 3 ಭವ ಚಕ್ರದೊಳು ತಂದು ನವ ನವ ಕರ್ಮಗಳನೆ ಮಾಡಿಸಿ ಅವರ ಯೋಗ್ಯತೆ ಮೀರದಲೆ ಫಲಗಳನಿತ್ತು ನಿತ್ಯ ತೃಪ್ತನಾಗಿರುವಿ 4 ಮಛ್ವಾದ್ಯನಂತವತಾರಗಳನೆ ಮಾಡಿ ಸ್ವೇಚ್ಛೆಯಿಂದ ಸುಜನರ ಸಲಹಿ ಕುಚ್ಛಿತ ಜನರಿಗೆ ತುಚ್ಛಗತಿಯನೀವೆ ಸ್ವಚ್ಛ ಬ್ರಮ್ಹಾದಿಕ ವಿವ್ಛಾ(?)ವಿಷಯನೆ 5 ನಾನಾವತಾರದಿ ನಂಬಿದ ಸುರರಿಗೆ ಆನಂದವಿತ್ತು ರಕ್ಷಿಪೆ ಕರುಣದಿ ದಾನವರಿಗೆ ಅಧ:ಸ್ಥಾನವ ನೀಡುವಿ ಮಾನವರನು ಮಧ್ಯಗತರ ಮಾಡಿಸುವಿ 6 ಹಿಂದೆ ಮುಂದಿನ ಭವದಂದವ ತಿಳಿಯದ ಮಂದಾಗ್ರೇಸರ ನಾನಾದೆಂಬುದನು ಅಂಧಕರಾರಣ್ಯದಿಂದ ಮೂಢನಾದಂ ದಿಂದ ಬಿನ್ನೈಪೆನು ಇಂದಿರಾಧವನೆ 7 ಮಾಡುವ ಕರ್ಮವು ನೋಡುವ ವಿಷಯಗ- ಳಾಡುವ ಮಾತು ಬೇಡುವ ಸೌಖ್ಯವು ನೀಡುವ ದಾನವೋಲ್ಯಾಡುವ ಚರ್ಯವ ನೋಡಲು ತಾಮಸ ಪ್ರಹುಡನಾಗಿಹೆನು 8 ಆದರು ನಿನ್ನಯ ಪಾದಾರವಿಂದ ವಿ- ನೋದ ಕಥಾಮೃತ ಪಾನದೊಳು ಸ್ವಾದ ಲೇಶದಾದರ ತೋರ್ಪದ- ನಾದಿ ಮೂರುತಿ ನೀನೆ ತಿಳಿಸಬೇಕದನೂ 9 ಇದರಿಂದಲೇ ಮುಂದೆ ಮದನನಯ್ಯನೆ ನಿನ್ನ ಪದವ ಕಾಣುವೆನೆನುತೊದರುವೆನು ಹೃದಯ ಮಂಟಪದಿ ನೀ ಹುದುಗಿರುವುದರಿಂದ ಕದವ ತೆರೆದು ತೋರೊ ವಿಧಿಭವವಿನುತಾ 10 ಕನ್ನೆ ಸುಶೀಲೆಯ ಕರಸೂತ್ರ ರೂಪದ ನಿನ್ನ ತಿಳಿಯದೆ ಕೌಂಡಿಣ್ಯನಂದು ಮನ್ನಿಸದಿರೆ ಮದ ಮೋಹಗಳೋಡಿಸಿ ನಿನ್ನ ರೂಪವ ತೋರ್ದ ನಿಜಪೂರ್ಣ ಸುಖದಾ 11 ಬ್ರಹ್ಮಾದಿಗಳನೆಲ್ಲ ನಿರ್ಮಿಸಿ ರಕ್ಷಿಸಿ ತಮ್ಮ ತಾವರಿಂiÀiದ ನಿಮ್ಮ ಸ್ತುತಿಪರೆ ಕು- ಕರ್ಮಿ ನಾನೆಂದಿಗಾದರೂ ಶಕ್ತನಹುದೆ 12 ಅದು ಕಾರಣದಿಂದ ಪದುಮನಾಭ ನಿನ್ನ ಪದ ಕಮಲಗಳಲಿ ರತಿಯನಿತ್ತು ಸದರದಿ ಸಲಹಯ್ಯ ವಿಧುಶೇಖರಾರ್ಚಿತ ಮದನನಯ್ಯ ಮರುದಾದಿ ವಂದಿತನೆ 13 ದೋಷರಾಶಿಗವಕಾಶನಾದರೂ ಯೆನ್ನ ಶ್ರೀಶ ನಿನ್ನ ದಾಸದಾಸನೆಂದು ಘೋಷವಾದುದರಿಂದ ಪೋಷಿಸಬೇಕಯ್ಯ ಶೇಷಗಿರೀಶ ಸರ್ವೇಶ ನೀ ದಯದಿ 14
--------------
ತುಪಾಕಿ ವೆಂಕಟರಮಣಾಚಾರ್ಯ
(ಅನಂತಪದ್ಮನಾಭ ಪ್ರಾರ್ಥನೆ) ಚಿಂತಿತದಾಯಿ ನಿರಂತರ ಸುಖದಾನಂತಪದ್ಮನಾಭಾ ಸಕಲಸುಜನಾಂತರ ಫಲದಾ ಪ. ಯಾಕೆಂದರೆ ಪೂರ್ಣಾ ನಂದನೀನೊಲಿಯಲು ಎಂದಿಗು ಕುಂದನು ಹೊಂದದಲಿರುವೆ ಸುಂದರ ವಿಗ್ರಹ ಸುಲಭದಿ ಸಕಲಾನಂದ ವಾರಿಧಿಯೊಳಿಳಿವೆ ಭವ ಬಂಧನ ಬಿಡಿಸುವ ದೊರೆ ನಿನ್ನರಿಯದೆ ಮಂದ ಬುದ್ಧಿಯಿಂದಿರುವುದು ಥರವೆ1 ನೀಲಾಳಕ ಪರಿಶೋಭಿತ ಮುಖಕಮಲಾಲಿಸು ಬಿನ್ನಪವÀ ಲೀಲಾಮೃತರಸ ಕುಡಿಸುತ ಕರುಣದಿ ಪಾಲಿಸು ವರಸುಖವಾ ಪದದೊಳಗಿರಿಸಿದ ದುರಿತ 2 ಹೆಂಡತಿ ಜನಿಸಿದ ಮನೆಯೊಳಗಿರುವುದೆ ಪುಂಡರೀಕನಾಥಾ ಪಂಡಿತರುಗಳಿದ ಕಂಡರೆ ನಗರೆ ಬ್ರಹ್ಮಾಂಡಕೋಟಿಭಾಸಾ ಅಂಡಲೆಯದೆ ಹೃನ್ಮಂಡಲದೊಳು ಶುಭಕುಂಡಲ ರಮೆಯೊಡಗೊಂಡು ಬೇಗದಲಿ ನಿಭ ಕುಂಡಲಿಗಿರಿಗ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಅನಂತೇಶ್ವರ ದೇವರನ್ನು ನೆನೆದು) ಯಾಕಿಲ್ಲಿ ಬಂದು ಮಲಗಿದೆಯೊ ಎಲಾ ಹರಿಯೇ ಲೋಕೋತ್ತಮಾನಂತೇಶ್ವರ ದೇವಾಲಯದಿ ಪ. ಬಿಡದೆ ಪಾಲ್ಗಡಲೊಳಗೆ ಕಡು ವೈಭವದಿ ತಡಿಗೆ ಝಡಿದು ಬರುತಿಹುದು ಭೋರ್ಗುಡಿಪ ತೆರೆಯ ಝಡಿವ ನಾದಕೆ ಒಡಂಬಡದೇಕಾಂತದಿ ಬಂದು ಮಡದಿ ಶ್ರೀದೇವಿ ಸಹಿತೊಡನೆ ಮಲಗಿದೆಯೋ 1 ನೀರೊಳಗೆ ಮುಳುಗಿ ವೇದವÀ ತಂದು ಬೆನ್ನಿನೊಳು ಭಾರವನು ಪೊತ್ತು ಬಹಳಾಲಸ್ಯವೋ ಧಾರುಣಿಯ ಸಲಹೆ ಭೋರ್ಗುಡಿಸಿ ಸ್ತಂಭದಿ ಬಂದ ಕ್ರೂರತನಕಿದುವೆ ವಿಸ್ತಾರ ಸಮಾಧಾನತೆಯೋ 2 ರೂಢಿಗೊಡೆಯ ತಾನಾಗಿ ಮೋಡಿಯೊಳು ಭೂದಾನ- ಬೇಡಿದೆನು ಎಂಬ ನಾಚಿಕೆಯ ಮನವೋ ಖೋಡಿ ನೃಪತಿಯರ ಹೋಗಾಡಿಸುತ ಕಾಡಿನೊಳು ಕೋಡಗರ ಕೂಡಿ ರಥ ಓಡಿಸಿದ ಬೇಸರವೋ 3 ಲೋಲಾಕ್ಷಿಯರ ವ್ರತವ ಹಾಳುಮಾಡುತ ಕಲಿಯ ಕಾಲದೊಳು ಗೈವಂತಮೇಲುಕಾರಿಯದ ಕಾಲೋಚಿತವ ಮನದೊಳಾಲೋಚಿಸುತ್ತಹಿಯ ಮೇಲೆ ಪವಡಿಸಿ ನಿದ್ರಾಲೋಲನಾಗಿಹೆಯೋ 4 ಯುಗಯುಗದೊಳವತಿರಿಸ ಜಗದ ಭಾರವನಿಳುಹಿ ಬಗೆಬಗೆಯ ನಾಟಕದಿ ಮಿಗೆ ಪಟ್ಟ ಶ್ರಮವ ತೆಗೆಯಲೋಸುಗ ಚರಣಯುಗವ ಮೃದುಕರದಿ ಶ್ರೀ ಸೊಗಸಿನಿಂದೊತ್ತುವ ಸೊಂಪೊಗರಿತೋ ನಿನಗೆ 5 ಲಲಿತ ವೈಕುಂಠದೊಳಗೆ ಜಲಜಭವಮುಖ್ಯಸುರ- ಗಲಭೆಯುಂಟೆಂದಲ್ಲಿ ನಿ¯ದೆ ಈಗ ಲಲನೆಯಳ ಕೂಡೆ ಸರಸಗಳನಾಡಲು ತನಗೆ ಸ್ಥಳವಿಲ್ಲವೆನುತಿಲ್ಲಿ ನೆಲಸಿಕೊಂಡಿಹೆಯೋ 6 ಸೇರಿರ್ದ ಶರಣ ಸಂಸಾರಿ ನೀನೆಂದು ಶ್ರುತಿ ಸಾರುವುದು ಕರುಣವನು ತೋರೆನ್ನ ದೊರೆಯೇ ದಾರಿದ್ರ್ಯದೋಷವಪಹಾರಿಸುತ ಇಷ್ಟಾರ್ಥ- ಸೇರಿಸೈ ಶ್ರೀ ಲಕ್ಷ್ಮೀನಾರಾಯಣನೆ ಹರಿಯೇ 7
--------------
ತುಪಾಕಿ ವೆಂಕಟರಮಣಾಚಾರ್ಯ
(ಅನುಭವ ಬಾರಾಮಾಸ ) ಏನೆಂದು ಹೇಳಲಿ ಶಾಂತಳೇ ಬುದ್ಧಿವಂತಳೇ | ವರ್ತ ಣೂಕದೆನ್ನ ಮಾತಾ | ಶ್ರೀನಾಥ ನಂಘ್ರಿಯ ನೋಡದೇ ಒಮ್ಮೆ ಮಾನವ ಜನು ಮದಿ ಬಂದೆನು ಹೊಂದಿ ನಿಂದೆನು | ಮೆರೆದೆನು ಸ್ವಹಿತಾ | ನಾನಾ ಹಂಬಲ ದೊಳು ಶಿಲುಕಿದ ಬಲು ಬಳಲಿದ | ದೊರಯದು ಪರಮಾರ್ಥ | ಶ್ಲೋಕ 1 ಭರತ ಖಂಡದಿ ಬಂದ ನೃದೇಹವಾ | ಮರೆದು ಮಾಡಲಿಬಾರದು ಹೇಯವಾ | ತ್ವರಿತ ನಂಬುದು ಶ್ರೀ ಹರಿ ಪಾದವಾ | ಗುರು ಮಹಿಪತಿ ಸಾರಿದ ಬೋಧವಾ | ಪದ ಮುಕುತಿ ಸಾಧನ ಮಾರ್ಗಶೀರ್ಷ ಮಾಸಾ ವಿಶೇಷಾ | ಧರಿಯೊಳು ಇದರಿಂದಾ | ಯುಕುತೊಲು ಹೋಗಿ ನಿರಂತರಾ ಸಾಧು ಸಂತರಾ | ಅವರ ಚರಣಾರವಿಂದಾ | ಭಕುತಿಲಿ ಮುಟ್ಟಿವಂದಿಸಲಿಲ್ಲಾ ಹೊಂದಿಸಲಿಲ್ಲಾ | ಅಖಿಳ ದೊಳಾರಿಗೆ ಬಾಗದೇ ದಿನನೀಗದೇ | ಮೋಟ ಮರ ನಿಲುಲುಂದಾ | ಶ್ಲೋಕ 2 ಮೆರೆವ ಅವಯವದೊಳು ಉತ್ತು ಮಂಗದಿ ನಿಂದು | ಹೊರಿಯ ಲುದರ ಕಾಗೀ ಬಾಗುವೀ ನೀಚಗಿಂದು | ಹರಿ ಶರಣರ ಕಂಡು ವಾಕ್ಯ ನಮನವೇನು | ಗುರು ಮಹಿಪತಿ ಸ್ವಾಮಿ ವಲಿಯನೆಂದಿಗೆ ತಾನು | ಪದ ಮಾಸ ಶೂನ್ಯವೇ ನೋಡು ಶ್ರವಣವೇ | ಮಾಡಿ ಸ್ಥಿರ ಮನುಚಿತಾ | ಸವಿ ಸವಿಯಲಿ ನಿತ್ಯ ನೂತನಾ ತೋರದನುಮಾನಾ | ಶ್ರೀ ಗೋವಿಂದ ಚರಿತಾ | ಹವಣದಿ ಸಂತರ ಮುಖದಿಂದಾ ಅನುಸರಣಿಂದಾ | ಕೇಳಲಿಲ್ಲನರತಾ | ಅವನಿಲಿ ದುಷ್ಟಪ ಕೀರ್ತಿಯಾ ಅನ್ಯ ವಾರ್ತರಿಯಾ | ಆಲಿಸಿದೇ ಸುಖ ಬಡುತಾ | ಶ್ಲೋಕ 3 ಕುಂಡಲ ವಿಟ್ಟಿಹಾ | ಹರಿ ಕಥಾಮೃತ ಕೇಳುದು ಬಿಟ್ಟಿಹಾ | ಗಿರಿಯ ಗುಹ್ಯವೋ ಕರ್ಣವೋ ಮಂದನಾ | ಅರಿತು ಸಾರಿದ ಮಹಿಪತಿ ನಂದನಾ | ಪದ ನೋಟ ಉನ್ಮನಿ ನದಿ ಮಾಘವೇ ಮಹಾಯೋಗವೇ | ಲಯ ಲಕ್ಷಿಯ ಲಿಂದು | ನೀಟದಿ ಹರಿಯಾವತಾರದಾ ಮೂರ್ತಿ ಧ್ಯಾನಕ ತಂದು | ಧಾಟಿಲಿ ಸಮ ದೃಷ್ಟಿ ಬಲಿಯದೇ ಅಲ್ಲ ಚಲಿಸದೇ | ನಾನಾ ಬಯಕೆಯ ವಿಡಿದು ತ್ರೋಟಕ ದೈವ ನೋಡಿದ ಮತ ಕೂಡಿದ | ನೀಚ ವೃತ್ತಿಗೆ ಬಿದ್ದು | ಶ್ಲೋಕ 4 ಅಂಗನೆಯರ ಶೃಂಗಾರ ನೋಡುವಾ | ರಂಗನಾಕೃತಿ ನೋಡಲಿ ಬಾಡುವಾ | ಕಂಗಳೋಸಿ ಖಿಗಿಲಿಗಳೋ ಮಂದನಾ | ಇಂಗಿತ್ಹೇಳಿದ ಮಹಿಪತಿ ನಂದನಾ | ಪದ ಪುಣ್ಯ ಫಲಗುಣ ಮಾಸವೇ ವಬಿಗಿಯೇರ ಸನವೇ | ಸನ್ನುತ ಶ್ರೀಹರಿ ನಾಮವಾ ವಿಡಿದು ಪ್ರೇಮನಾ | ಪದ ಪದ್ಯಲೀಗ | ಚೆನ್ನಾಗಿ ಕೀರ್ತನೆ ಮಾಡದೇ ಗತಿಬೇಡದೇ | ಪಾತಕಕೆ ಗುರಿಯಾಗೆ | ಅನ್ಯರ ನಿಹಪರ ಸ್ತುತಿಗಳಾ ಹುಸಿನುಡಿಗಳಾ | ಆಡಿಬರಡಾದೆ ನೆಲಿಗೆ | ಶ್ಲೋಕ 5 ಸಿರಿಕಾಂತಾ ನತಶಮಿತ ದುರಿತಧ್ವಾಂತ ಯನುತಾ | ಹರಿನಾಮಾ ಪ್ರೇಮ ವಿಡಿದು ಸ್ಮರಿಸಾದಿಪ್ಪವನುತಾ | ನರಾಧಮಾನೇ ಮಾವನ ಮುಖವೋ ನೃಪಮಾಯ ಮುಖವೋ | ಅರುಹಿದಾ ಬೋಧಾ ಗುರು ಮಹಿಪತಿ ಸ್ವಾಮಿ ಸುಖವೋ ಪದ ದೋಷನಾಶಕ ಪ್ರಣವಧ ಕ್ಷೇತ್ರಾ ಮಾಸವೀ ಚಿತ್ರಾ | ಪವನನಾ ನೆಲೆಗೊಳಿಸಿ | ಮೀಸಲ ರೇಚಕ ಪೂರ್ವಕಾ ಧೃಡ ಕುಂಭಕಾ | ದಿಂದ ಮಂತ್ರವ ಜಪಿಸಿ | ವಸುದೇವನ ಪಾದ ನಿರ್ಮಾಲ್ಯ ಆಘ್ರಾಣಿ ಸಲಿಲ್ಲಾ | ಭೋಗ ದ್ರವ್ಯವ ಬಯಸಿ | ಲೇಸಾದ ಪರಿಮಳವನೇ ತಂದು ವಾಸಿಸುತ ನಿಂದು | ಮೈಯ್ಯ ಮರ್ತೆನು ಚಲಿಸಿ ಶ್ಲೋಕ 6 ಪರಿಮಳಂಗಳ ವಾಸನೆಗ್ಹಿಗ್ಗುಯವಾಸಿರಿ | ತುಳಸಿಯ ತೋರಲು ಸಗ್ಗುವಾ | ಇರುವ ನಾಶಿಕೋತಿತ್ತಿಯೋ ಮಂದನಾ | ಅರಿತು ಸಾರಿದ ಮಹಿಪತಿ ನಂದನಾ | ಪದ ತನುವೆಂಬೋ ವೃಕ್ಷ ಕಿವೇ ಶಾಖಾ ಹಸ್ತಾ ಮೌಲಿಕಾ | ದೇವ ಪೂಜದರಿಂದ | ಘನವಾದಾ ತುಳಸಿ ಪುಷ್ಪಗಳನು ತಂದು ಹಲವನು | ಸಹಸ್ರ ನಾಮಗಳಿಂದಾ | ಅನುವಾಗಿ ಹರಿಗೆ ಏರಿಸಲಿಲ್ಲಾ ಅರ್ಪಿಸಲಿಲ್ಲಾ ಮರಹು ಆಲಸ್ಯದಿಂದಾ | ವನಿಯೊಳು ಪಗಡಿ ಪಂಚಿಗಳನು ಆಡಿ ದಿನವನು | ನೂಕಿದನು ಇದರಿಂದಾ | (ತನಗಿಂದ ದೀನದುರ್ಬಲರನು ಕಂಡು ಹೊಡೆವನು | ಹೋಗಾಡಿದ ನಿಜಾನಂದ ) ಶ್ಲೋಕ 7 ಹರಿಯ ಸೇವೆಯ ಮಾಡಲು ಬೀಳುವಾ | ಮೆರೆವ ಕಂಕಣ ಮುದ್ರಿಕೆ ತಾಳುವಾ | ಕರವೋ ಮದನಾ ಕೈಯ್ಯವೋ ಮಂದನಾ | ಅರಿತು ಸಾರಿದ ಮಹಿಪತಿ ನಂದನಾ | ಪದ ಸರ್ವ ವಿಷಯವತಿ ಜೇಷ್ಠವೇ ಬಲಿ ದಿಷ್ಟವೇ | ಮೃದು ಕಠಿಣ ವೆನ್ನದೇ | ಹರಿಯಂಗಣದಿ ಲೋಟಾಂಗಣವನು ಹಾಕುತಲಿ ತಾನು | ದೇವ ರೂಳಿಗದಿಂದೇ | ನೆರೆ ಹಡಪಿಗ ಪಾದುಕೆಯ ವಾ ಯಂಬನಾಮವಾ | ತಾಳಿ ಕರಸಿ ಕೊಳ್ಳದೇ | ತರಳೆ ತ್ಯಾಡಿಸುತಲಿ ತನ್ನಾ ಕಳೆ ದನುದಿನಾ | ಇದು ಯಾತರ ಛಂದಾ | ಶ್ಲೋಕ 8 ಪರೋಪಕಾರ ವಂಚನೆ ಮಾಡುವಾ | ಸುರಭಿ ಚಂದನ ಮಿಂಚಿಲೆ ತೀಡುವಾ | ಶರೀರೋ ಬೆಚ್ಚಿನ ಮಾಟವೋ ಮಂದನಾ | ಅರಿತು ಸಾರಿದ ಮಹಿಪತಿ ನಂದನಾ ಪದ ಆಷಾಡ ಗೇಯಲಿ ಹಸಿವೆಯ ಬಲು ತೃಷಿವಿಯು | ಸಕಲನು ಕೂಲದಿಂದಾ | ಲೇಸಾಗಿ ನೈವೇದ್ಯ ವದಗಿಸಿ ಹರಿಗರ್ಪಿಸಿ | ನಿಜ ತೀರ್ಥ ಪ್ರಸಾದಾ | ಭೂಷಣದಲಿ ನಾನು ಕೊಳಲಿಲ್ಲಾÀ ಸುಖ ಬಡಲಿಲ್ಲಾ | ದೋಷದನ್ನವ ಉಂಡು ವಡಲನು ನಾನು ಹೊರೆದನು ಬಯಸುತ ಜಿವ್ಹ ಸ್ವಾದಾ ಶ್ಲೋಕ 9 ವಿದತವಾದ ರಸ್ನಾವ ಉಂಬನು | ಮುದದಿ ತತ್ವದ ವಿದ್ಯವ ತುಂಬನು | ಉದರೋಶಾಲ್ಮಲಿ ಫಲವೋ ಮಂದನಾ | ಇದನು ಸಾರಿದ ಮಹಿಪತಿ ನಂದನಾ | ಪದ ಮನ ವಿಶ್ರಾವಣ ಸುಖ ಬೆರತಿದೇ ನೋಡು ನಿಂದಿದೇ | ಗುರು ಬೋಧಿಸಿದನು | ಮನನ ಮಾಡುತ ನಿಜಧ್ಯಾಸಾ | ಹಚ್ಚಿ ವಿಶೇಷಾ | ಪಡೆದು ಸಾಕ್ಷಾತ್ಕಾರವನು | ಚಿನುಮಯಾನಂದ ನೋಲಾಡದೇ ತಾಂ ಪೀಡಾಡದೇ | ಅಲ್ಲಿ ತೊಳಲಿದ | ಹರಿ ವಲುಮೆ ಇಲ್ಲದೇನು | ಶ್ಲೋಕ 10 ವಿಷಯ ಚಿಂತನೆ ಮಾಡಲು ಸಂಭ್ರಮಾ | ಕುಸುಮ ನಾಭನ ನೆನಿಯೆ ವಿಭ್ರಮಾ | ಕುಶಲ ಮಾನಸೋ ಪಶುವೋ ಮಂದನಾ | ಸ್ವಸುಖ ಸಾರಿದ ಮಹಿಪತಿ ನಂದನಾ ಪದ ಸುಕೃತ ಇದೇವೇ ಭಾದ್ರಪದವೇ | ನಡೆದ್ಹೋಗಿದ ರಿಂದಾ ಒಲಿದ ಪುಣ್ಯ ಕ್ಷೇತ್ರವಾಗಿಹಾ ಸಂತರಾಲಯಾ | ಪುಗುವುದೇ ಯಾತ್ರೆ ಛಂದಾ | ಜಲಜಾಂಬಕನ ಮಹಿಮೆ ಗಳುಂಟು ಅಲ್ಲಿ ಸುಖವುಂಟು | ತೊರೆದನು ಪುರವಿಂದಾ | ಸತಿ ಉದರದ ದಾವತಿಗಾಗಿ ತಿರುತಿರುಗೀ | ಜನುಮ ಶ್ಲೋಕ 11 ಧನದ ಆಶೆಗೆ ನಡೆಡತಾಕುವಾ | ಘನ ಪ್ರದಕ್ಷಿಣೆ ಮಾಡಲು ಬಳುಕುವಾ | ಮನುಜಪಾದವೋ ಪಾದವೋಮಂದನಾ | ಅನುವ ಸಾರಿದ ಪದ ಪ್ರತಿ ಪದಾಶಿವಿಜಯಂಬುದೇ ಗುರು ಭಕ್ತಿಂದೇ | ಶೃತಿ ಯಥಾದೇವೇ ತಥಾಗುರೌ ಎಂದು ನುಡಿವುದು ಅರ್ಥ ತಿಳಿದು | ನಂಬಿ ಭಜಿಸದೆವೆ | ಕ್ಷಿತಿಯೊಳು ನರರೆಂದು ಬಗೆದೆವು ಹಿತ ಮರದೆವು | ಬಾಹ್ಯ ದೃಷ್ಟಿ ಶ್ಲೋಕ 12 ಸಕಲ ವೃತ ತಪ ತಿರ್ಥಾ ಶಾಸ್ತ್ರ ಪೌರಾಣ ಬಲ್ಲಾ | ಅಖಳದಿ ಫಲವೇನು ಶ್ರೀ ಗುರು ಭಕ್ತನಲ್ಲಾ | ನಿಖಿಳಾ ಭರಣಗಳಿದ್ದು ವ್ಯರ್ಥ ಮಾಂಗಲ್ಯವಿಲ್ಲಾ | ಪಿಂತಿನ ತಪ್ಪವ ನೋಡದೇ ತಡ ಮಾಡದೇ | ಸಿರದಲ್ಲಾ ಭಯ ನೀಡಿ | ಅಂತರಂಗದ ಸುಖದೆಚ್ಚರಾ ಕೊಟ್ಟ ಸಾರಥಿ | ನಾಮ ಬಿಡದೆ ಕೊಂಡಾಡಿ
--------------
ಕಾಖಂಡಕಿ ಶ್ರೀ ಕೃಷ್ಣದಾಸರು
(ಆ) ಆಳ್ವಾರಾಚಾರ್ಯ ಸ್ತುತಿಗಳು (1) ಆಂಜನೇಯ ನೋಡಿರೈ ಕಣ್ದಣಿಯಾ ಸಜ್ಜನರೆಲ್ಲ ಪಾಡಿರೈ ಮನದಣಿಯಾ ಪ ಗಾಢಭಕುತಿಯನಾಂತು ಭಜನೆಯ ಮಾಡುವರ ದುರಿತಗಳನೋಡಿಸಿ ಕೂಡೆನಿರ್ಮಲರೆನಿಸಿ ಪೊರೆವಾ ರೂಢನಹ ಮಾರುತಿಯ ಮೂರ್ತಿಯ ಅ.ಪ ಉಡಿಯೋಳ್ ಘಂಟೆಗಳೆಸೆಯೆ ಚರಣದೊಳುಳ್ಳ ತೊಡರುಗಗ್ಗರಮುಲಿಯೆ ರ್ಕಡೆಯ ಕರ್ಣದಿ ಪೊಳೆಯೆ ಕಡಗ ಮಣಿಮಕುಟಗಳ ಪೇರುರ ದೆಡೆಯ ವಜ್ರದಪದಕ ಮೊದಲಹ ತೊಡಿಗೆಗಳ ಸಡಗರದೊಳೊಪ್ಪುವ ದೃಢತರದ ಮಾರುತಿಯ ಮೂರ್ತಿಯ 1 ಭರದಿಂದ ಶರನಿಧಿಯಾ ಲಂಘಿಸಿ ಪೊಕ್ಕಾ ನಿರುಪಮತರ ಲಂಕೆಯ ಗುರಿಗೊಂಡರಸಿ ಸೀತೆಯಾ ಕಂಡಾರಘು ವರನುರುಮುದ್ರಿಕೆಯ ಕರದೊಳಿತ್ತಾರಮಣಿಯಿಂ ವಿ ಸ್ಫುರಿಪ ಚೂಡಾಮಣಿಯ ಕೈಕೊಂ ಡಿರದೆ ಬಂದೊಡೆಯಂಗೆ ಸಲಿಸಿದ ಪರಮಬಲಯುತನಮಳಮೂರ್ತಿಯ 2 ವಾದವಿದೂರನನು ಪಾವನ ಮೃದು ಪಾದಾರವಿಂದನನು ವೇದಾಂತವೇದ್ಯನನು-ಸನ್ನುತಪರ ನಾದಾನುಮೋದನನು ಸಾದರದೊಳೈತಂದು ಪ್ರಾರ್ಥಿಪ ಸಾಧುಸಂತತಿಗೊಲಿದು ಪರಮಾ ಮೋದದಿಂ ಪರಮಾರ್ಥವಿಷಯವ ಬೋಧಿಸುವ ಮಾರುತಿಯ ಮೂರ್ತಿಯ 3 ರಂಗನಾಥನದೂತನ ಸತ್ಕರುಣಾಂತ ರಂಗನಾರ್ತಪ್ರೀತನ ಕಂಗೊಳಿಸುವ ನೂತನಪುರವರದೊಳು ಹಿಂಗದೊಪ್ಪಿರುವಾತನ ಮಂಗಳಾತ್ಮನ ಮೋಹದೂರನ ಸಂಗರಹಿತನ ಸತ್ಯಚರಿತನ ರಂಗದಾಸಪ್ರಣಿತಮಹಿಮೋ ತ್ತುಂಗ ಶ್ರೀ ಮಾರುತಿಯ ಮೂರ್ತಿಯ 4
--------------
ರಂಗದಾಸರು
(ಆ) ದೇವ, ಗುರುಸ್ತುತಿ ಅವತಾರತ್ರಯ ಪ್ರಾಣಪತಿ ಕಾಯೊ ನೀ ಜಾಣ ಜಗತ್ರಾಣಾ ಕಾಣದೆ ನಿನ್ನ ಮಹಿಮೆ ಧ್ಯಾನಿಸದೆ ಮರುಳಾದೆ ಪ ಸೂತ್ರ ನಾಮಕ ನೀನು ಛತ್ರಪುರದೊಳು ನೆಲೆಶಿ ಶತ್ರು ಪುಂಜವ ನಿಮಿಷ ಮಾತ್ರದಲಿ ತುಳಿದಿ ಗಾತ್ರದಲಿ ನೀ ಲಾಲಿಸು ಪಾತ್ರನೆಂದೆನಿಸೆನ್ನ ಕೃತ್ರಿಮದ್ವಿಜ ಸ್ತೋತ್ರ ಪಾತ್ರ ಕೃಷ್ಣನ ದಾಸ 1 ಕಾಮನೃಷನು ಹಿಂದೆ ರಾಮನಾಜ್ಞವ ತರಿಸಿ ಆ ಮಹಾಸುರರೇ ಮಧಾಮವನು ಸಾರೆ ಈ ಮಹಿಯೊಳಗೆ ನಿಸ್ಸೀಮನೊಬ್ಬನೆ ಯೆಂದು ಭೂಮಿಯಲಿ ನಿನ್ನ ಗುಣ ಸ್ತೋಮವನು ತೋರಿಸಿದೆ 2 ಅವತಾರ ತ್ರಯಗಳಲಿ ಸ್ವವಶವ್ಯಾಪಿ ಲಕ್ಷ್ಮೀ - ಧವನ ಮನವರಿತು ನೀ ಅವತರಿಸಿದೆ ಯುವತಿ ವೇಷದಿ ಗೌರೀಧವನ ಮೋಹಸಿದಂಥ ಶ್ರೀವತ್ಸಾಂಕಿತನಾದ ಅವನಿಗೊಡೆಯನ ದಾಸ 3
--------------
ಸಿರಿವತ್ಸಾಂಕಿತರು
(ಆ) ಲಕ್ಷ್ಮೀಸ್ತುತಿಗಳು ಶಂಬರಾರಿ ಜನನಿ ಪ ಬೆಂಬಿಡದೆನ್ನ ಹೃದಂಬುಜದೊಳಗವ ಲಂಬಿಸಿ ಸಲಹು ಮದಂಬೆ ಸನಾತನಿ ಅ.ಪ ಅಂಬುಜಮುಖಿ ಚಿಕುರೆ ಶರ ಕುಂಭಪಯೋಧರೆ ಬಿಂಬಫಲಾಧರೆ 1 ಕರ್ಣದೊಳೆಸೆವ ಸುವರ್ಣವಿಡಿದ ಪೊಸ ರನ್ನದೊಡವೆಗಳ ಮನ್ನಿಸುವಂತಿದೆ ರನ್ನೆ ಗುಣಾರ್ಣವೆ 2 ನೀಲಭುಜಗವೇಣಿ ಲೀಲೆಯಿಂದ ಶಾರ್ದೂಲ ಮಹೀಂದ್ರದೊ ಳಾಲಯಗೈದಲಮೇಲಮಂಗಾಮಣಿ 3
--------------
ವೆಂಕಟವರದಾರ್ಯರು
(ಆ) ವಿವಿಧ ದೇವತಾ ಸ್ತುತಿ ಬ್ರಹ್ಮನ ಸ್ತುತಿ ಚತುರವದನಗೊಂದಿಸುವೆನು ಮದನನಯ್ಯನ ಜ್ಯೇಷ್ಠಕುವರ ಚತುರವದನಗೊಂದಿಸುವೆನು ಪ ಜಗವ ಸೃಷ್ಟಿಪ ಗುರುವರನ ಮೂ- ನಿತ್ಯ ನೋಡುತಿಹನ ನಗವೈರಿಮುಖಸುರಪ್ರಿಯನ ನಿಗಮೋಕ್ತ ಯಾಗ ಮಾಡುವನ 1 ಸುರರು ಅಸುರರೆಂಬ ಭೇದ ವಿರದೆ ಸರ್ವರಿಗಿಷ್ಟವೀವನೆ ಪುರಹರಾದ್ಯಖಿಲಾಮರರು ನಿನ್ನ ಸ್ಮರಿಸುತಾಜ್ಞೆಯ ಧರಿಸುವರು 2 ಯಜ್ಞಕುಂಡದೊಳುದ್ಭವಿಸಿದ ಸ- ರ್ವಜ್ಞ ರಾಜೇಶ ಹಯಮುಖ ಸುಜ್ಞಾನ ವೇದಾರ್ಥಗಳನು ಬೋಧಿಸಿಷÀ್ಟ ಸಾ- ಯುಜ್ಯವ ನಿನಗೆ ಕೊಟ್ಟಿಹನು 3
--------------
ವಿಶ್ವೇಂದ್ರತೀರ್ಥ