ಒಟ್ಟು 327 ಕಡೆಗಳಲ್ಲಿ , 59 ದಾಸರು , 284 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಧೀಮಂತರ ದಯಪಡೆದು ಮಾಧವನ ಪದ ವಿಡಿದು | ಪ್ರೇಮದಿ ಭಜಿಸೆನ್ನ ಮನವೇ | ಪ ಕಾರ್ಮುಗಿಲದುಗ್ಧರಾಶಿಯನು ಶೃತಿಗೆ ಬೀಳಲ್ಪ | ಯೋರ್ಮನದಿ ಸಂತೋಷಿಪಂತೇ ನಿರ್ಮಳಾಂಗಣ ಕಥೆಯ ಘೋಷವೇನು ಕೇಳಿ ಅತಿ | ಪೆರ್ಮೆಯಿಂದಲೆ ನಲಿದು ಬಾಳು 1 ನೋಡಲಾಕ್ಷಣ ತನ್ನ ಮಾತೆಯನು ಮುದದಲಿಂ | ಲೋಡಿ ಬಪ್ಪುವ ಶಿಶುವಂತೆ | ರೂಢಿಯೊಳು ಸಜ್ಜನರ ಕಂಡಾಕ್ಷಣಕ ತನುವ | ನೀಡಿ ಸಾಷ್ಟಾಂಗದಿಂದೆರಗು 2 ಮಿಗಿಲಾಸೆಯನು ತ್ಯಜಿಸಿ ದಾಗಸದ-ಲಿಂಬರ್ವ | ನಿಗಳುಂಬ ಚಾತಕನ ತೆರದಿ | ಮುಗಳೆ ದಯದಿಂದ ಸಜ್ಜನ ಮುಖದಿ ಬಪ್ಪಬೋ | ಧೆಗಳ್ಪೊತನು-ವಾನುಗ್ರಹಿಸು ಧರಿಸು 3 ಮಣಿ ದೀಪವಾದಂತೆ ಸ | ಪಾದ ಕಮಲಗಳಾ | ಅತ್ಯಧಿಕ ಹರುಷದಿಂ ಹೃದಯದೊಳ್ ಧರಿಸಲ್ಕೆ | ಮೊತ್ತದ ಜ್ಞಾನ ತೊಳಗುವದು 4 ಗರ ಹೊಡೆದು | ಧರಿಯೊಳಗ ಗರ್ವಿಸಲಿ ಬ್ಯಾಡಾ | ಸಿರಿಯು ತೊಲಗಲು ಕುನ್ನಿಯಂತನ್ನ ದಾಸಿಂಗೆ | ಪರರು ಮನವಡಿದು ಬಳಲದಿರು 5 ಕಮಲಜನ ಪದಕ ಕತ್ತದೀವರ ಅನುಮತದ | ವಿಮಲಮಾರ್ಗ ಹೊಲಬ ನರಿದು | ಅಮಲೂಧ್ರ್ಪ ಪೌಂಡ್ರ ಹರಿ ಲಾಂಛನವು ತುಳಸಿ ಸರ ಕ್ರಮದಿಂದ ಧರಿಸಿ ಸುಖಿಯಾಗು 6 ಹರಿಪರದೈವವೆಂದು ಅರಿತು ಭಾವದಿ ನಿಂದು | ಹರಿ ಕೋಟಿ ನಿಭಕ ಮಿಗಿಲೆನಿಸಿ | ಮೆರೆವ ಮಹಿಪತಿ ನಂದನೋಡಿಯ ನಾಮಂಗಳನು | ಸ್ಮರಿಸಿ ಇರಳ್ಹಗಳ ಕೊಂಡಾಡು 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಧ್ಯಾನಿಸಿನ್ನು ಶ್ರೀನಿವಾಸನಾ ಶ್ರಿತಕಲ್ಪಭೂಜನ ಧ್ಯಾನಿಸಿನ್ನು ಶ್ರೀನಿವಾಸನಾ ಪ. ನಖಮಣಿಶ್ರೇಣಿವಿರಾ- ಜಿತ ನಳಿನಚರಣಯುಗಳನ ಸುಕುಮಾರ ಕಮನೀಯಾಂಗನ ಅಖಿಲ ಲೋಕಕ್ಷೇಮಧಾಮನ 1 ಪೀತಾಂಬರಧರ ವರ ಜೀ- ಮೂತನೀಲವರ್ಣನ ಶ್ರೀತರುಣೀಶುಭವಕ್ಷನ ಶ್ರೇತವಾಹನಸೂತನ ಖ್ಯಾತನ 2 ಶಂಖ ಚಕ್ರ ಗದಾ ಪುಷ್ಕ- ರಾಂಕ ಚತುರ್ಭುಜನ ಪಂಕಜನಾಭನ ಕೌಸ್ತುಭಾ- ಲಂಕೃತ ಶ್ರೀವರದೇವನ 3 ಚಂದ್ರಸಹಸ್ರಸಮಾನನ ಕುಂದಕುಟ್ಮಿಲರದನನ ಸುಂದರಾರುಣಾಧರಾರ- ವಿಂದದಳಾಯತನಯನನ 4 ಕನಕಕುಂಡಲಕರ್ಣಯುಗನ ಮಣಿಖಣಿತಕಿರೀಟನ ಗುಣನಿಧಿ ಲಕ್ಷ್ಮೀನಾರಾ- ಯಣನ ಸಂಕರ್ಷಣನ ದೃಢದಿ 5
--------------
ತುಪಾಕಿ ವೆಂಕಟರಮಣಾಚಾರ್ಯ
ನಂದ ಕುಮಾರ ಆನಂದ ಬಾ ಬಾ ಪ. ಚಂದಿರ ಸದೃಶ ನಂದನೆ ಬಾ ಬಾ ಎನ್ನಾನಂದ ಬಾ ಬಾ ಅ.ಪ. ನಿನ್ನ ಕಾಣದೆ ನಾ ನಿಲ್ಲಲಾರೆ ಕೃಷ್ಣಾ ನಿನ್ನ ಮುಖಬಿಂಬ ನೋಡಲೆಂತಾನಂದವೊ ನಿನ್ನ ಸುಳಿಪಲ್ಲಿನ ನಗೆ ಬೀರೋ ಕೃಷ್ಣಾ ನಿನ್ನ ನೋಡುವೆ ಪಾಡುವೆ ಆನಂದ ಬಾ ಬಾ 1 ಕರುಣಾಕರ ನೋಟವ ಬೀರೋ ಕೃಷ್ಣಾ ವೈಜಯಂತಿ ಮಾಲಾ ಶೋಭಾ ಕೃಷ್ಣಾ ಚರಣದಂದಿಗೆಯ ಗೆಜ್ಜೆ ನಾಟ್ಯದೊಳು ನಲಿದಾಡೊ ಕೃಷ್ಣಾ ಕುಣಿದಾಡೊ ಕೃಷ್ಣಾ 2 ಚೆಂದ ಮಾಮನ ನೀ ಕೇಳೆ ತೋರುವೆನು ಅಂದ ಕನ್ನಡಿಯೊಳ ರೂಪ ನೋಡುವೆನು ಸುಂದರಾಂಗ ಮುತ್ತನಿಟ್ಟು ನಲಿಯುವೆನು ಚಂದ್ರಬಿಂಬಧರಾ ಶ್ರೀ ಶ್ರೀನಿವಾಸ 3
--------------
ಸರಸ್ವತಿ ಬಾಯಿ
ನಂದ ಯಶೋದೆಯರಲ್ಲಿ ಬಂದು ಅವತರಿಸಿದ ಇಂದಿರಾಪತಿಯ ಮಹಿಮೆಯನಲುವಿನಿಂದ ಚಂದವನೆಲ್ಲ ರಚಿಸಿದ ಪ. ದೇವನಾರಾಯಣ ಭೂದೇವಿ ಮೊರೆ ಕೇಳಿ ದೇವಕಿಯಲ್ಲಿ ಅವತರಿಸಿದ ದೇವಕಿದೇವಿಯಲ್ಲಿ ಅವತರಿಸಿದ ಧರಾದೇವಿ ಭಾರವನೆಲ್ಲ ಇಳಿಸಿದ1 ದುಷ್ಟ ದೈತ್ಯರನಟ್ಟಿ ಆಪನೊಳು ಮನೆಕಟ್ಟಿಪಟ್ಟದ ರಾಣಿಯರ ಒಯ್ದಿಟ್ಟಪಟ್ಟದ ರಾಣಿಯರ ಒಯ್ದಿಟ್ಟ ಶೌರ್ಯವ ಎಷ್ಟು ವರ್ಣಿಸಲ್ಪಶವಲ್ಲ 2 ಹರಿಯು ವೈಕುಂಠದ ಪರಿಯ ತೋರುವೆನೆಂದುಧರೆ ಮೇಲಾಗ ಜನಿಸಿದ ಧರೆ ಮೇಲಾಗ ಜನಿಸಿದ ದ್ವಾರಕಾಪುರನಿರ್ಮಿಸೆಂದು ಜಲದೊಳು 3 ದೊರೆ ಕೃಷ್ಣಯ್ಯನ ಹಿರಿ ಮಡದಿಮನೆಪರಿಯ ವರ್ಣಿಸಲು ವಶವÀಲ್ಲಪರಿಯ ವರ್ಣಿಸಲು ವಶವಲ್ಲ ದ್ವಾರಕಾಸಿರಿಕೇಳಿ ಬ್ರಹ್ಮ ಬೆರಗಾದ4 ಅಪ್ಪ ರಾಮೇಶನು ಇಪ್ಪಂಥ ಅರಮನೆಯುಅಪ್ರಾಕೃತ ವೈಕುಂಠಅಪ್ರಾಕೃತ ವೈಕುಂಠ ವೆಂಬೋದುಸುಪ್ರಕಾಶವಾಗಿ ಹೊಳೆದೀತು5
--------------
ಗಲಗಲಿಅವ್ವನವರು
ನಂದತೀರ್ಥರಾನಂದದಿ ಭಜಿಸಿರೊ ಬಂದು ಸಲಹಬೇಕೆಂದು ಬೇಡುತ ಪ ಶ್ರದ್ಧೇ ರಮಣನು ಮಧ್ಯಗೇಹರ ಶುದ್ಧಕುಲದೊಳು ಉದ್ಭವಿಸಿದ 1 ಗೋಪ್ರದಾಯಕ ವಿಪ್ರವರ್ಯಗೆ ಕ್ಷಿಪ್ರದಲ್ಲಿ ಸುಪ್ರಜ್ಞೆಯಿತ್ತ 2 ದೂಷ್ಯವಾದ ದುರ್ಭಾಷ್ಯ ಖಂಡಿಸಿ ಶಿಷ್ಯರಿಗೆ ಸದ್ಭಾಷ್ಯ ಪೇಳಿದ 3 ಯವನ ನೃಪತಿಯ ಭವನಕೆ ಪೋಗಿ ಅವನ ಅರ್ಧರಾಜ್ಯವನೆ ತಂದ 4 ದೇವಗಂಗೆಯು ಪಾವನಾಂಶನ ಸೇವೆಮಾಡಿ ತಾ ಪಾವನಳಾದ 5 ಸಿರಿ ಸ್ವಾಮಿ ನೃಹರಿಯ ಪ್ರೇಮಬಲದಿ ನಿಸ್ಸೀಮರಾದ 6
--------------
ವಿದ್ಯಾರತ್ನಾಕರತೀರ್ಥರು
ನದಿಗಳು ಭಾಗೀರಥ್ಯಾದಿ ನದಿಗಳ ತಾರತಮ್ಯ ನಿಜ ಭಾಗವತ ತಿಲಕ ನಿಮಿರಾಜಗೊಲಿದು ವಸಿಷ್ಠ ರಾಗದಲಿ ಕೇಳಿ ಜನರಯ್ಯಾ ಪ ಒಂದು ದಿನ ಗೋದಾವರಿಯ ತಟದಿ ನಿಮಿರಾಜ ಸಂದು ಯಜ್ಞವ ಮಾಡುತಿರಲಾಗ ಪರಮೇಷ್ಠಿ ನಂದನೆನಿಪ ವಶಿಷ್ಠ ಮಹಮುನಿ ನಡೆತಂದ ಮೇಧಾಗಾರಕೆ ಬಂದ ಯತಿವರನ ಮಣಿಪೀಠದಲಿ ಕುಳ್ಳಿರಿಸಿ ಸುಂದರಾಧಿಪ ಬೆಸಸಿದಾ 1 ವ್ರತಿಪತಿ ವಶಿಷ್ಠ ವೈಷ್ಣವಕುಲ ಶಿರೋರತುನ ಶ್ರುತಿಶಾಸ್ತ್ರ ಸರ್ವಜ್ಞ ಗಂಗಾದಿ ಪುಣ್ಯತೀ ಮತ್ಪಿತನೆನುತ ಪದಕೆರಗುವಾ ಕ್ಷಿತಿಪನೋಕ್ತಿಯ ಕೇಳುತಾನಂದ ಶರಧಿಯೊಳು ಗತನಾಗಿ ರೋಮ ಲಕ್ಷಣ ಕಳೇವರದಿ ಪುಳ ನೃಪತಿಗಿಂತೆಂದನು 2 ಕೇಳು ಜನನಾಥ ಮಹಭಾಗ ನಿನ್ನಯ ಪ್ರಶ್ನ ದೇಳಿಗೆಗೆ ಎನ್ನ ಸಂತೋಷ ಕಲ್ಪತರು ತ ಶಿಷ್ಯರೊಳು ಮೌಳಿಮಣಿ ನೀನಹುದು ನಿಖಿಳ ನದಿಗೊಳಿಪ್ಪ ಶ್ರೀಲೋಲನ ಸುಮೂರ್ತಿಗಳು ತಾರÀತಮ್ಯ ಸುವಿ ಮಾನವ ಇದನಾಲಿಪುದು ನೀನೆಂದನು 3 ಹರಿಪಾದನಖದ ಸಂಸ್ಪರ್ಶ ಮಾತ್ರದಿಂದಲಿ ಸುರತರಂಗಿಣಿ ಶ್ರೇಷ್ಠಳೆನಿಸುವಳು ನದಿಗಳೊಳು ದೊರೆಮೆನಿಪನಾ ತೀರ್ಥಕೆ ಸರಿತಾಗಗಣ್ಯ ಗೋದಾವರಿ ನಳಿನಿಗಿಂ ಕೊರತೆಯೆನಿಪಳೈ ವತ್ತು ಗುಣದಲಿ ಶಂಖ ಚರಣ ಸುಗದಾಬ್ಜ ಶೋಭಿತ ವೀರನಾರಾಯಣ- ರಸೆನಿಪನಾ ಸಲಿಲಕೆ 4 ಹರಜಟೋದ್ಭವ ಕುಶಾವರ್ತಿಗೆ ಸಹಸ್ರಗುಣ ಚಾರು ಕಂ ಬುರಲಿ ವಾರುಚಿ ಧನುರ್ಧಾರಿ ಯಮನಂದನಲಿ ವಿಹರಿಸುತಿಹನಾಜಲದೊಳು ತುರುಗಾಯ್ದ ದೇವನಂಗಜ ನದಿಗೆ ಈರೈದು ವಾಗ್ದೇವಿ ಶರಧಿಯೊಳು ಪು ಗೋದ ರಂಗನಾಥನೆನಿಪ 5 ಆ ಯಮಳನದಿಗಳಿಗೆರಡು ಗುಣಾಧಮ ಸರಯು ತೋಯಾಧಿಪತಿ ರಾಮ ಸರಯು ನೀರೆಂದು ಗುಣ ವಿಹಾಯ ಸಮಮಣಿತನಯಳೆ ಸ್ಥಾಯಕೆ ಚತುರ್ಬಾಹು ವಿಷ್ಣು ಕಾವೇರಿಗೆ ನಾಯಕ ವರಾಹದೇವಾ6 ಸಿಂಧು ಭವನಾಶಿಗೀರ್ವರು ಸಮರು ಕ್ಷೀರಾಬ್ಧಿ ಮಂದಿರ ನೃಸಿಂಹರಲ್ಲಿಹರು ಭವನಾಶನಿಗೆ ತಂದೆಯೆನಿಪ ತ್ರಿವಿಕ್ರಮ ಒಂದೆನಿಸುವುವು ನಾಲ್ಕು ನದಿಗಳು ಗುಣಗಳಿಂದ ಮುಂದಿಹ ಪದದಿ ಪೇಳ್ವೆ ಪೆಸರು ಹರಿರೂಪ ನೆಲ ತಮ್ಮಿಂದೀರಗಿಂತೆಂದನೂ 7 ವಾಜಿವದನು ಮಂಝರಾನದಿಯೊಳಿಹನು ನವ ರಾಜೀವನಯನ ಶ್ರೀಧರ ಭೀಮರಥಿಯೊಳಿಹ ವಿರಾಜಿಪ ಮಲಾಪಹಾರಿ ಭಾಜನದೊಳಿಪ್ಪ ದುಷ್ಟ ಜನರನು ಮರ್ದಿಸುವ ಶ್ರೀ ಜನಾರ್ದನ ನಾಲ್ಕು ನದಿಗಳು ದ್ವಿಗುಣದಿಂದಾ ನಿತ್ಯ ನೈಜಭಕ್ತಿ ಜ್ಞಾನದಿ 8 ಭೀಮರಥಿ ಸಮ ಪಿನಾಕಿನಿಯೊಳಗೆ ಕೇಶವನು ಭೂಮಿಯೊಳು ಪೃಥಕು ಪೃಥಕು ಸುಖ ಜ್ಞಾನದಿ ಶ್ರೀ ಮನೋರಮ ಕೇಶವಾದಿ ರೂಪಗಳಿಂದ ಸ್ವಾಮಿಯೆನಿಸುವನಲ್ಲ ಸ್ನಾನಾದಿ ಸತ್ಕರ್ಮ ಮೋಕ್ಷ ಗಳೀವನೊ 9 ಈ ನದಿಗಳೆರಡು ಗುಣ ಪುಷ್ಕರಣಿನಿಚಯ ನ್ಯೂನವೆನಿಪವು ಮುಕ್ತಿ ದತ್ತಾತ್ರಯನು ಕೃಷ್ಣ ಮಾನಸ ಸರೋವರದೊಳು ಜ್ಞಾನಾತ್ಮ ವಾಮನನ ಶ್ರೀ ಭೂ ಸಹಿತ ಪ್ರಸ ನ್ನಾನನಾಬ್ಜದಿದರೆ ಜಘನಸ್ಥಿತಾಭಯ ಸು ಧೇನಿಪುದು ಎಂದಾ 10 ದೇವಖಾತಗಳು ಶತಗುಣಕಡಿಮೆ ಮಾನಸ ಸ ರೋವರಕೆ ಇತರ ಪುಷ್ಕರಣಿಗಳಿಗಲ್ಪಗುಣ ಪಾವನವಗೈವ ಕ್ಷುದ್ರಾ ಪ್ರಾವಹಿಗಳೀರೈದು ಗುಣದಿ ಕಡಿಮೆ ಲಕ್ಷ್ಮೀ ದೇವಿಪತಿ ನಾರಾಯಣನ ಚಿಂತಿಸೆಂದು ನೃಪ ಭವನೋವ ಪರಿಹರಿಪುದೆಂದು 11 ಈ ಸಲಿಲತೀರ್ಥಂಗಳೆರಡು ಗುಣದಿ ತಟಾಕ ಶೇಷಪರ್ಯಂಕ ಅಚ್ಯುತನಿಹನು ಸಜ್ಜನರ ವಾಸವಾಗಿಹನು ಚಕ್ರಿ ಘೋಷಗೈವ ಧರಾಂತಕೂಪಗಳೊಳಿರುತಿಹ ನಾ ಕೇಶನದಿಗಳ ತಾರÀತಮ್ಯ ರೂಪಗಳನುಪ ಪಾಸನಗೈವುದೆದೆಂದು 12 ಈ ತೆರದಿ ನಿಮಿರಾಜಗೋಸುಗ ವಶಿಷ್ಠಮುನಿ ತಾ ತಿಳಿದ ಕಥಾತಿಶಯ ಪರಮ ವಿಬುಧರು ಧ ಪ್ರೀತಿಯಿಂದಾಚರಿಸಲು ಶೀತಾಂಶು ಕಮಲಾಪ್ತರುಳ್ಳನಕ ಸುರಪತಿ ನಿ ಕೇತನದಿ ವಿವಿಧ ಭೋಗಗಳಿತ್ತು ಶ್ರೀ ಜಗ ಸಂಪ್ರೀತಿಯಿಂದನುರಾಗದೀ 13
--------------
ಜಗನ್ನಾಥದಾಸರು
ನಂದಿವಾಹನಾ ಪಾಲೀಸೊ ನೀ | ಕಂದ ನೆಂದನಾ ಪ ಕಂದು ಗೊರಳ ಮೌ | ಳೆಂದು ಶಿಖರ ಅಮರೇಂದ್ರ ಮುಖರು ಸುರ | ವೃಂದ ವ್ಯಂದ್ಯ ಪದಅ.ಪ. ನಂದ - ನಂದನಾ - ಪ್ರಿಯ ಸಖ | ಮಂದಜಾಸನಾಕಂದ ನೆನಿಸಿ ದುರ್ | ವೃಂದ ತ್ಯಜಿಸಿ ತವತಂದೆ ಯಾಜ್ಞೆಯಲಿ | ನಿಂದು ಸರಿದ ಹರ 1 ದಿತಿಸುತ | ಸ್ತೋಮ - ಪ್ರೀಯನೇ ||ಶಾಮ ಸುಂದರ ಹರಿ | ಪ್ರೇಮಾನ್ವಿತ ಸುತಕಾಮಾರಿಯೆ ಹರ | ಸಾಮಜವಾಸಾ 2 ಸೇವ್ಯ ನಂಘ್ರಿ ದಶದಿವ್ಯ ಕಲ್ಪ ತಪ | ಗೈಯ್ಯೆ ಶಯ್ಯನಾದೆ 3 ಯೋಗಿ ರೂಪ ಭವರೋಗ ವೈದ್ಯ ಹೃ | ದ್ರೋಗ ಕಳೆಯೊ ಶಿವ4 ಗೌರಿ ಮನೊ - ಹರಾ - ಕೈಲಾಸವಾಸ | ಕೈರಾತಾ ಕೃತಿಧರಾ ||ಗಿರಿ ಇಂದ್ರ ಕೀಲದಿ | ಘೋರ ತಪಸಿ ನರಸಾರೆ ನಿನ್ನ ಪದ | ಶೂರ ಪಡೆದ ಶರ 5 ಶುಕ | ಲಿಂಗಾಕಾರನೇ ||ತುಂಗ ಮಹಿಮ ನಿ | ಸ್ಸಂಗ ಹರಿಯ ದ್ವಿತಿಯಂಗ ಡಮರು ಶೂ | ಲಿಂಗಳ ಪಿಡಿದಿಹ 6 ತೈಜಸ - ತಾಮಸ | ಸಾಕಾರಿ - ಓಜಸಾ ||ನೀ ಕುಶಾಸ್ತ್ರದಲಿ | ಭೀಕರರನು ಅವಿವೇಕರ ಮಾಡ್ದೆ | ಪಿ | ನಾಕಿ ಧರ ಹರ 7 ರುಂಡ - ಮಾಲನೇ - ಮುನಿಜ ಮೃ | ಕಂಡ - ಪಾಲನೇ ||ಅಂಡಜ ಮಹ ಬ್ರ | ಹ್ಮಾಂಡ ದೊಡೆಯ ಪದಪುಂಡರೀಕದೊಳು | ಬಂಡುಣಿ ಎನಿಸಿಹೆ 8 ಶಂಭೊ - ಶಂಕರ - ಧೂರ್ಜಟೆಯೆ | ಅಂಚೆ - ಮನೋಹರಾ ||ಕಂಬು ಪಾಣಿ ಪದ | ಹಂಬಲಿಸುವೆ ಹೃದಯಾಂಬರದೊಳು ಎನ | ಬಿಂಬನ ತೋರಿಸು 9 ಸೋಮರ್ಕಾನಲ - ಈಕ್ಷಣಾ | ಭೀಮ - ಕೈಕಪಾಲ ||ಭೀಮ ಭವಾಟವಿ | ಧೂಮಕೇತು ಸಿರಿರಾಮ ಪದಾಶ್ರಿತ | ವೈಮನ ಕಳೆಯೊ 10 ಭಾವ - ಜಾರಿಯೇ - ಮುರುಹರ | ರಾವಣಾದಿ - ಪ್ರಿಯಾ ||ಸಾವಧಾನದೊಳು | ಭಾವ ಶುದ್ಧಿಸುತತೋರ್ವುವೆನಗೆ ಗುರು | ಗೋವಿಂದ ವಿಠಲನ 11
--------------
ಗುರುಗೋವಿಂದವಿಠಲರು
ನಮಾಮಿ ತಂದೆಯೇ | ಮುದ್ದುಮೋಹನಾನತೋಸ್ಮಿ ಸಿದ್ಧರೇ | ತ್ವತ್ವದಾಂಬುಜಂ ಪ ಸುಕೃತ ವೆಂಥದೋಗುರುಗಳ್ ನಿಮ್ಮಯಾ | ಕರುಣದೊರಕಿತು 1 ವಿಲಸಿತಾಮಲಾ ನಿ | ಷ್ಕಲ್ಮುಷ ಹೃದಯರೇಆಲವಾ ಬೋಧರಾ | ಒಲವ ಪಡೆದರೇ 2 ಹಲವು ಜನುಮದೀ | ಬಳಲಿ ಬಂದುದಾತಿಳಿದು ನೀವೆನ್ನಾ | ಪಾಲಿಸೀದಿರಿ3 ಕ | ಳಂಕ ವಿಹಿತವೂ 4 ಎಂದು ಕರುಣೆಯಿಂ | ತಂದೆ ವೆಂಕಟನಾಹೊಂದಿ ಭಜಿಪರಾ | ಅಂದು ಪ್ರೇರಿಸೀ5 ಕರೆದು ಎನ್ನನೂ | ತೆರಳು ಎನುತಲೀಒರೆದು ಮತಿಯನೂ | ದಾರಿ ತೊರ್ದಿರೀ 6 ಸೋಮ ಶೇಖರಾ | ಸಮ ಪದಸ್ಥನೇಸಾಮಾಜಾದ್ರಿಲೀ | ಪ್ರಮಾಥಿವತ್ಸರಾ 7 ವದ್ಯ ಫಾಲ್ಗುಣಾ | ಪ್ರತಿಪದಾದಿನಾಆದಿವಾರದೀ | ವಿದಿತ ಮಾರ್ಗದೀ 8 ಗುರು ಗೋವಿಂದನಾ | ನಾಮ ತಾರಕಾಅರುಹೀ ಪ್ರೀತಿಲೀ | ದಾರಿ ತೋರ್ದಿರೀ 9 ಕೋಮಲಾಂಗನೇ | ನಿಮ್ಮ ಮಹಿಮೆಯಾಪಾಮರಾನು ನಾ | ಗಮಿಸಲಾಪನೇ 10 ಗತಿಯೆ ನೀವೆಂದೂ | ಸತತ ತುತಿಸುವೆಅತುಳ ಮಹಿಮರೇ | ಹಿತವ ಮಾಡಿರಿ 11 ತವ ಪದಾರ್ಚನೇ ತ್ರಿ | ಸವನ ಸಂಧ್ಯವೂಹವನ ಹೋಮವೂ | ಭವದ ಶೋಷವೂ 12 ನೀವೆ ಬಂಧುವೂ | ನೀವೆ ಬಳಗವೂನೀವೆ ತಾಯಿಯೂ | ನೀವೆ ತಂದೆಯೂ 13 ನಿಂತು ನೀವೆನ್ನಾ | ಅಂತರಂಗದೀಮಂತವ್ಯ ರಂಗನಾ ಚಿಂತೆ ಪಾಲಿಸೀ 14 ಗುರು ಗೋವಿಂದ ವಿಠಲನಾ | ಸುರಚಿರಾಮಲಾಚರಣ ಪುಷ್ಕರ | ಸ್ಮರಿಪ ಗುರುವರಾ 15|
--------------
ಗುರುಗೋವಿಂದವಿಠಲರು
ನಮಾಮಿ ದಿವ್ಯ ತರಂಗೆ ಶಿವೆಗಂಗೆ ಕೃಪಾಪಾಂಗೆ ನಮಾಮಿ ಪ ದಯಾಸಾರೆ ಸುಧಾಕಾರೆ ಧಿಯಾದೊರೆ ಗುಣಾಕರೆ ತ್ರಯೀವಾಣಿ ಮಹಾವೇಣಿ ಸುರೂಪಿಣಿ ನಮಾಮಿ 1 ಶುಭಂ ದೇಹಿ ಕೃಪೆ ಪಾಹಿ ಶುಭೇ ಭಾಗೀರಥೀ ಸತೀ ಪರಂಪಾರೇ ಜಲಾಧಾರೆ ಜಿತಕ್ಷೀರೆ ನತಾಮರೆ ನಮಾಮಿ 2 ಗಿರೀಶಾಂಕಾತ್ ಪರಂಶೈಲಾತ್ ಧರಾಂ ಪ್ರಾಪ್ತೇ ಪುನೀಹಿಮಾಂ ಮಹಾಭೂತೆ ಸುವಿಖ್ಯಾತೇ ಧರಾನಾಥೇ ಸತಾಂಗತೇ ನಮಾಮಿ 3 ವರಂಧೇನುಪುರಸ್ತೋಹಂ ಭಜೆ ದೇವೀಂ ಭವಾಪಹಾಂ ಕನ್ಯಾಂ ಸುಪಾವನಾಂ ನಮಾಮಿ 4
--------------
ಬೇಟೆರಾಯ ದೀಕ್ಷಿತರು
ನಮೋ ನಮೋ ಮಾತೇ ಎನ್ನಯ ಶ್ರಮಾವ ಕÀಳಿ ದ್ಯೋತೆ ಪ ಕ್ಷಮಾತಳದಿ ನಿ ಸುಮಾಹಕಲ್ಪ ದೃಮೋಪಮಾಗಿಹೆ ಸಮಾನ ಸೋತ್ತಮೆ ಅ.ಪ ರಮಾಧವನರಾಣೀ ನೀ ತಮೋರೂಪ ಕಲ್ಯಾಣೀ ನಮಿಪೆ ನಿನ್ನನು ಕ್ಷಮಾದಿಪತ್ಯವ ಮಮೈವ ಪಾಲಿಸು ವಿಮಾನ ನಿಲಯಳೆ 1 ಧರಾತಳದಿ ಬಂದೂ ನೀ ದುರಾಳ ತತಿ ಕೊಂದೂ ಭರಾದಿ ಲೋಕದಿ ಮೆರಾದ ನಿನ್ನನು ಶಿರಾದಿ ನಮಿಸಿದೆ ವರಾವ ಪಾಲಿಸು 2 ಪಿತಾಮಹನ ಮಾತೇ ನೀ ವಿತಾತ ಗುಣ ಖ್ಯಾತೇ ದಾತಾ ಗುರುಜಗ - ನ್ನಾಥಾ ವಿಠಲನ್ನ ಪ್ರೀತಿಯ ಮಾನಿನಿ ದೂತಾನ ಪೊರೆವೋದು 3
--------------
ಗುರುಜಗನ್ನಾಥದಾಸರು
ನವನೀರದಾಭಗಾತ್ರ ಅವನೀಸುತಾಕಾಂತ ಪ. ಅಣೋರಣೀಯನೆನಿಸಿ ಅನಂತರೂಪ ಧÀರಿಸಿ ಪ್ರಣವ ಸ್ವರೂಪಿ ಮೆರೆವೈ1 ಅನಾಥನಾಥ ನೀನೇ ಸನಂದನಾದಿನುತನೇ ವನಜಾಸನನಂ ಪಡೆದವನೇ 2 ಮದಾಂಧರಾಗಿ ಕೆಡುವ ಪದಚ್ಯುತರ ಪೊರೆವ ವ ಧನ್ಯ ನೀನೆಲೆದೇವ 3 ಬಾರಯ್ಯ ಭಕ್ತಭರಣ ತೋರೀಗ ನಿನ್ನ ಚರಣ ಬಾರೆನ್ನ ಶೇಷಗಿರಿರಮಣ4
--------------
ನಂಜನಗೂಡು ತಿರುಮಲಾಂಬಾ
ನಾ ಧನ್ಯನಾದೆನಿಂದು | ಸತ್ಯ | ಬೋಧರಾಯರ ದಿವ್ಯ | ಪಾದಕಮಲವ ಕಂಡು ಪ ಹಿಂಗಿದವಖಿಳದೋಷಂಗಳು ಸನ್ಮುನಿಗಳವ ರಂಘ್ರಿ ಸಂದರುಶನದೀ ಗಂಗಾದಿತೀರ್ಥ ಭುಜಂಗಾದಿ ಮೊದಲಾದ ತುಂಗ ತೀರ್ಥಯಾತ್ರೆ ಫಲ ಸಮನಿಸಿತು1 ಆವ ಮುನಿಗಳೋ ಮತ್ತಾವ ದೇವತೆಗಳೋ ಆವಾವಬಲ್ಲ ಮತ್ತಾವಾಗಲೂ ಸೇವಿಸುವರ ಕೃಪಾವಲೋಕನದಿಂದ ಪಾವನ ಮಾಡಲು ಕೋವಿದಾರ್ಯರ ಕಂಡು 2 ಸೀತಾರಮಣ ಜಗನ್ನಾಥ ವಿಠ್ಠಲರೇಯಾ ಭೂತಳದೊಳಗೀ ಮಹಾತ್ಮರನಾ ಪ್ರೀತಿಯಂ ಸೃಜಿಸಿದನಾಥ ಜನರನ ಪು ನೀತರ ಮಾಡಲು ಆತ ತಕ್ಷಣದಿ 3
--------------
ಜಗನ್ನಾಥದಾಸರು
ನಾರಾಯಣಾ ಹರಿನಾರಾಯಣಾ ಕೃಷ್ಣಾ ನಾರಾಯಣಾ ಸ್ವಾಮಿ ನಾರಾಯಣಾ 1 ಅಚ್ಯುತಾನಂತ ಗೋವಿಂದ ಪರಬ್ರಹ್ಮ ಸಚ್ಚಿದಾನಂದ ಶ್ರೀ ನಾರಾಯಣಾ 2 ಭಕ್ತವತ್ಸಲ ದೇವಾ ಪಂಡವಾಪಕ್ಷಕಾ ಮುಕ್ತಿ ದಾಯಕ ಶ್ರೀ ನಾರಾಯಣಾ 3 ನಂದನಂದನ ಆನಂದ ಶಂಕರ ಪ್ರೀಯಾ ವಂದಿತಾ ಮುನಿಜನರ ನಾರಾಯಣ 4 ಇಂದಿರಾರಮಣ ಮುಕುಂದ ಮುರಹರಿ ಮಂದರಧರ ಹರಿನಾರಾಯಣ 5 ದ್ರೌಪದಿ ರಕ್ಷಕಾ ದಾನವಾ ಶಿಕ್ಷಕಾ ಕವಿಜನ ಪೋಷಕ ನಾರಾಯಣಾ 6 ರಾವಣ ಮರ್ದನಾ ಆಜೀವಲೋಚನಾ ಯದುಕುಲಾಬ್ದಿ ಚಂದ್ರ ನಾರಾಯಣಾ 7 ಅಕ್ರೂರವರದಾ ನಿಜಾನಂದ ಮೂರುತಿ ಚಕ್ರಧರ ಹರಿ ನಾರಾಯಣಾ 8 ಭವ ನಾಯಕ ವಿಷ್ಣು ನಾರಾಯಣಾ 9 ಗಂಗಜನಕ ದೇವೋತ್ತುಂಗ ಮಹಾನುಭಾವ ಶೃಂಗಾರ ಮೂರುತಿ ನಾರಾಯಣಾ 10 ಅಂಬುಜಾದಳ ನೇತ್ರಾ ಅಜಮಿಳಾರಕ್ಷಕ ಪತಿ ನಾರಾಯಣ 11 ಪಕ್ಷಿವಾಹನ ಜಗದೃಕ್ಷಾ ಸುಲಕ್ಷಣಾ ಲಕ್ಷ್ಮೀರಮಣ ಶ್ರೀ ನಾರಾಯಣಾ 12 ಕಮಲಸಂಭವಪಿತಾ ಕರುಣಪಯೋನಿಧಿ ಅಮಿತ ಪರಾಕ್ರಮ ನಾರಾಯಣಾ 13 ಮೂರ್ತಿ ಪೂಜಿತ ಸರ್ವತ್ರಾ ಪೂತನ ಸಂಹಾರ ನಾರಾಯಣಾ 14 ದಿನಕರಾ ಕುಲದೀಪಾ ದೀನ ದಯಾಪರ ಅನಿಮಿತ್ತ ಬಂಧು ದೇವಾ ನಾರಾಯಣಾ 15 ಕಾಲಿಯಾ ಮರ್ದನಾ ಗಂಗಾಧರಾರ್ಚಿತ ಕಲ್ಮಷರಹಿತ ಶ್ರೀನಾರಾಯಣಾ 16 ಪಾಲಿತಾ ಸುರಮುನಿ ಪಾಪವಿನಾಶನಾ ವಾಲಿ ಸಂಹಾರಕಾ ನಾರಾಯಣ 17 ದಶರಥನಂದನ ಧರಣಿರಕ್ಷಕಾ ಲವ ಕುಶಪಿತಾ ಶ್ರೀಹರಿನಾರಾಯಣಾ 18 ವೇದಗೋಚರ ನಿಗಮಾಗಮ ವೇದ್ಯ ಸು- ನಾದ ವಿನೋದ ಶ್ರೀನಾರಾಯಣ 19 ಕೋಟಿದರ್ಪಕ ರೂಪಲಾವಣ್ಯ ಭಕ್ತ ಸಂಕಟ ಪರಿಹಾರ ನಾರಾಯಣಾ 20 ವಾರಿಧಿ ಬಂಧನಾ ವನಚರ ಪಾಲನಾ ವೈಕುಂಠ ಶ್ರೀನಾರಾಯಣಾ 21 ಗಜರಾಜ ವರದಾ ಕಾಮಿತಫಲದಾಯಕಾ ಅಜಭವ ಪೂಜಿತಾ ನಾರಾಯಣಾ 22 ಸಾಧುಜನ ಪ್ರಿಯಾ ಸಾಮಗಾನವೇಣು ನಾದ ಲೋಲ ಕೃಷ್ಣ ನಾರಾಯಣಾ 23 ಯಾದವ ಕುಲದೀಪಾ ಯಶೋದಾನಂದನಾ ಯಜ್ಞರಕ್ಷಕಾ ಹರಿನಾರಾಯಣಾ 24 ಕೇಶವಾ ಮಾಧವಾ ಕೃಷ್ಣ ದಾಮೋದರಾ ವಾಸುದೇವ ಹರಿನಾರಾಯಣ 25 ಸುಂದರ ವಿಗ್ರಹಾಸುಗುಣ ವಿಲಾಸ ಆನಂದ ನಿಲಯಾ ಹರಿನಾರಾಯಣಾ 26 ವ್ಯಾಸಾಂಬರೀಷ ವಾಲ್ಮೀಕ ನಾರದಾ ಪಾರಾಶರ ವಂದಿತ ನಾರಾಯಣ 27 ದೋಷದೂರಾ ನಿರ್ದೋಷಾ ಪರಮಪುರಷ ಪೋಷಿತ ಜಗತ್ರಯ ನಾರಾಯಣಾ 28 ಮಕರಕುಂಡಲಧರಾ ಮಹಿಮಾ ಚರಾಚರಾ ಸಕಲಂತರ್ಯಾಮಿ ನಾರಾಯಣ 29 ಲೋಕನಾಯಕಾ ವಿಲಾಸ ಮೂರುತಿ ತ್ರೀಲೋಕ ವಂದ್ಯ ಹರಿನಾರಾಯಣಾ 30 ವಿಶ್ವವ್ಯಾಪಕಾ ಘನ ವಿಶ್ವರೂಪಾ ಮಹಾ ವಿಶ್ವೇಶ್ವರಾ ಹರಿನಾರಾಯಣಾ 31 ಅಖಿಲಾಂಡ ಕೋಟಿ ಬ್ರಹ್ಮಾಂಡ ನಾಯಕ ದೇವ ಸಕಲ ಕರ್ತ ನೀನೆ ನಾರಾಯಣಾ 32 ಆಪನ್ನ `ಹೆನ್ನೆ ವಿಠ್ಠಲ ' ನಾರಾಯಣಾ 33
--------------
ಹೆನ್ನೆರಂಗದಾಸರು
ನಿಂತು ಲಾಲಿಸಲಿ ರಾಧಾ ಕಂತುಪಿತನ ಪದನಾದ ಪ ಬಲದ ಕಾಲೆಡದೊಳಿಟ್ಟು ಇಳೆಗೆ ಎಡದ ಪದ ಕೊಟ್ಟು ಒಲಿದು ಮುರಲಿ ಮುಖವಿಟ್ಟು ಉಲಿಯೆ ಮಧುರ ರವ ಪುಟ್ಟಿ ಬಲಬಾಲರೆಲ್ಲ ನಲಿಯುತಲಿಗೋ ಪೂರ್ವ ಮಳೆಗರೆವುತಲಿ ನಾನೆಂತು ಬಣ್ಣಿಸಲಿ ಹರಿಯ ಲೀಲೆಗಳ ಉಲಿಯುವ ಶ್ರುತಿನಾದ ಬಲದ ಸಿಂಹದ ನಾದ ಸಲೆ ವಟುವಿನ ನಾದ ಬಲವಾದ ಪರಶುವಿನತಿನಾದವು ಯಶೋಜಿತ ನಾದವು ಬಲು ವಾಜಿನಾದಗಳ್ ಕೊಳಲಲಿ ಕೇಳುತ ನಿಂದು 1 ಪಾಲು ಮೊಸರುಗಳನುಂಡು ಲೀಲೆಯಾಡುತಿರೆ ಕಂಡು ಬಾಲೆಯರತಿ ಖತಿಗೊಂಡು ಗೋಳಿಡುತಲೆ ಹಿಂಡಿಂಡು ಎಮ್ಮಾಲಯದೊಳು ಬೆಣ್ಣೆ ಮೆಲುತಲಿ ಸಣ್ಣ ಬಾಲೆರಿಟ್ಟ ಪಾಲ್ ಕುಡಿವುತಲಿ ಕೆಳಮೇಲಾಗಿ ಧದಿಯನು ಸುರಿವುತಲಿ ಜಲದೊಳು ಧುಮುಕಿದ ಕಲಕದ ಚಲವಿಡಿದ ಬಲುಬೇರ ಕೋರೆಯಿಂದಗಿದು ತಿಂದಾ ಒಲಿದು ಕಂಬವ ನೋಡಿದಾ ಬಲಿಗೆ ಬಾಯಿ ತೆರೆದಾ ಮೊಲೆ ಕೊಟ್ಟ ಜನನಿಯ ಶಿರಕಡಿದಾ ಕುಲಹೀನೆಂಜಲ ತಿಂದಾ ಖಳಪೂತನಿಯಳಿದಾ ತಿಳಿಗೆಟ್ಟು ಮೈಬಟ್ಟೆ ಕಳೆದೊಗೆದಾ ಬಲು ಮಿಂದೇರಿ ವಾಜಿ ಭಟರ ಬೆನ್ನಟ್ಟಿದಾ ನಿಂತು 2 ಸುರಿವುತಿರಲು ಮಳೆ ಭಾರಿ ಚರಿವಾವ್ಗಳು ಹೌಹಾರಿ ಮರೆಯ ಕಾಣದೆಲೆ ಹೋರಿ ಕರವುತಿರಲು ಮುರವೈರಿ ಕಿರಿಬೆರಳಲಿ ಕೊಡೆವಿಡಿವುತಲಿ ಸಣ್ಣ ಕರಗಳಾವುಗಳ್ ಸಲಹುತಲಿ ಮುದ ಗೋವುಗಳ ನೋಡುತಲಿ ನಾನೆಂತು ಬಣ್ಣಿಸಲಿ ಶಿರಿವರನಾನಂದ ಭರದಿ ವೇದವ ತಂದ ನೆರೆಶೈಲನೆಗಹಿದ ಧರಾಲಲನೀಯ ನಾಸದಿ ಪಿಡಿದ ಸುರನದಿ ದ್ವಿಜರಿಗೆ ದಾನವ ಮಾಡಿದಾ ಹರಿಗೆ ಯಜಪದ ನೀಡ್ದಾ ಗುರುಪುತ್ರರನೆ ಪಡಿದಾ ಹರಿಯೇರಿ ಮೆರೆವುದು ನಿಂತು 3
--------------
ನರಸಿಂಹವಿಠಲರು
ನಿತ್ಯ ನಿಜಾನಂದನಿರ್ಲೇಪ ನಿಗಮಾಂತವೇದ್ಯ ನರಸಿಂಹ 1ವಿಶ್ವನಿರ್ಮಾಣಾದಿ ವಿವಿಧ ಶಕ್ತ್ಯಾತ್ಮಕವಿಧಿಹರ ರೂಪ ಶ್ರೀ ವೀರನರಸಿಂಹ 2ಪರಿಭ್ರಾಜಮಾನಾರ್ಕ ಪಾವಕ ಶಶಿಯುಕ್ತಪದ್ಮ ಮಹಾಯೋಗಪೀಠ ನರಸಿಂಹ 3ಸಮ ಕಾಲೋದಿತ ಸೂರ್ಯಶಶಿಕೋಟಿಸಂಕಾಶಸರಸಿಜಜಾತಾಯುತೋತ್ಸಂಗ ಸಿಂಹ 4ಬ್ರಹ್ಮಾಮರೇಂದ್ರಾದಿ ಬೃಂದ ಕಿರೀಟಾಗ್ರಮಣಿ ನೀರಾಜಿತ ಪಾದಪದ್ಮ ನರಸಿಂಹ 5ಧೃತ ಶಂಖ ಚಕ್ರಾಬ್ಜ ದಿವ್ಯ ಚತುರ್ಭುಜಧರಣೀಧರಾಚ್ಯುತ ದೇವ ನರಸಿಂಹ 6ಪ್ರಹ್ಲಾದಖೇದಾಪಹಾರಕ ಪರಿಪೂರ್ಣಆಹ್ಲಾದ ಸುಕೃತಾಟ್ಟಹಾಸ ನರಸಿಂಹ 7ಆಂತ್ರಮಾಲಿಕಾಕಂಠ ಅಮಿತ ನಖಾಯುಧಅಂಕಾರೋಪತ ದೈತ್ಯಕಾಯ ನರಸಿಂಹ 8ಮಕುಟಮಂಡಿತ ಶುಭ ಮಕರಕುಂಡಲ ಧರಪ್ರಕಟಿತಕರುಣಾಕಟಾಕ್ಷ ನರಸಿಂಹ 9ಕೇಯೂರ ಹಾರ ಕೌಸ್ತುಭಮಣಿ ಭೂತಕಾಂಚನಚೇಲ ಕಲುಷಹರ ಸಿಂಹ 10ಸಕಲ ಲೋಕಾಧೀಶ ಸಾಧು ಸಂರಕ್ಷಕಸುರ ಸಿದ್ಧ ಮುನಿ ವಂದ್ಯ ಶ್ರೀ ನರಸಿಂಹ 11ತೂಲನಾಮಕ ಗ್ರಾಮ ನಿಕಟಾದ್ರಿ ಸ್ಥಿರವಾಸಪಾಲಿತಬಹುಭುವನೇಶ ನರಸಿಂಹ 12ದ್ವಿತೀಯ ಶ್ರೀ ತಿರುಪತಿ ಕ್ಷೇತ್ರಸಮಾನಾದ್ರಿ ವೆಂಕಟಪತಿ ಪ್ರತಿವೇಷ ನರಸಿಂಹ 13ಓಂ ಅನಾದಿ ಬ್ರಹ್ಮಚಾರಿಣೇ ನಮಃ
--------------
ತಿಮ್ಮಪ್ಪದಾಸರು