ಒಟ್ಟು 102 ಕಡೆಗಳಲ್ಲಿ , 35 ದಾಸರು , 97 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭಳಿ ಭಳಿರೆ ಬಲಭೀಮ ಭಳಿರೆ ಸದ್ಗುಣಧಾಮಭಳಿರೆ ದ್ರೌಪದಿನಾಥ ಭಳಿರೆ ಶ್ರೀಹರಿದೂತಭಳಿರೆ ಅಪ್ರತಿಚರಿತ ಭಳಿರೆ ಬಲದೇವಸುತಭಳಿರೆ ಭೂಮಿಪಲಲಾಮ ಭೀಮ ಪ.ಯೋಚಿಸಿ ಖಳರು ನೆರೆದು ಭೂಚಕ್ರವಾಕ್ರಮಿಸೆಶ್ರೀ ಚಕ್ರಿ ದಯದಿ ಅಮೃತ ರೋಚಕುಲಜಾತ ಪಾಂಡು ಚಕ್ರವರ್ತಿ ಕಮಲಲೋಚನೆಯ ಪೃಥೋದರಾಬ್ಧಿ ಚಂದ್ರನಂತೆ ಜನಿಸಿಆ ಚಕ್ಷುವಿಹೀನ ಭವಾಬ್ಧಿಚೋರರೆದೆಶೂಲಗೋಚರಿಸುವಂತಿಳೆಗೆ ಸೂಚಿಸಿ ಮುಖೋದಯವಕೀಚಕ ಹಿಡಿಂಬ ಬಕ ನೀಚಮಾಗಧಮುಖರವಾಚಿಸಗುಡದೆ ಬಡಿದೆ ಭೀಮ 1ಕೊಬ್ಬಿದ ಖಳರು ಧಾತ್ರಿಗುಬ್ಬಸವ ತೋರುತಿರೆಅಬ್ಬರದಿ ಕರದ ಗದೆಗ್ಹಬ್ಬದೌತಣವಿಡುತಒಬ್ಬೊಬ್ಬರೊಮ್ಮೆ ಹನ್ನಿಬ್ಬರನ ಕರೆದುಉಬ್ಬುಬ್ಬಿ ರಣದಿ ಕುಣಿದೆಹಬ್ಬಿ ಬಹ ನಾಗರಥನಿಬ್ಬರದ ಬಿಂಕದವರೆಬ್ಬಿಸಿ ನಭಕೆ ಚಿಮ್ಮಿ ಬೊಬ್ಬಿರಿದು ಕೌರವರನಿಬ್ಬಗೆದು ಡಾಕಿನಿಯ ಉಬ್ಬಿಸಿದೆ ನಿನಗೆಪಡಿಹೆಬ್ಬುಲಿಗಳುಂಟೆ ಜಗದಿ ಭೀಮ 2ನಿರ್ಧರ ಪರಾಕ್ರಮ ಧನುರ್ಧರರ ಬೀಳ್ಗೆಡಹಿಸ್ವರ್ಧಾಮಗರು ತುತಿಸೆ ದುರ್ಧಾರ್ತರಾಷ್ಟ್ಟ್ರರಂದುರ್ಧಾಮಕೆಬ್ಬಟ್ಟಿದುರ್ಧರ್ಷಗುರುರಥವನೂಧ್ರ್ವಕ್ಕೊಗೆದುಲಿದು ಚೀರ್ದೆದುರ್ಧರ ಖಳಾನುಜನ ಮೂರ್ಧ ಕಾಲೊಳು ಮೆಟ್ಟಿಶಾರ್ದೂಲನಂದದಿ ಕೆಡದೊಡಲಿನಅರುಣಜಲಪೀರ್ದಂತೆ ತೋರ್ದೆ ಗೋವರ್ಧನಧರನನುಜÕವಾರ್ಧೀಸ್ಯರ್ಪಿಸಿದೆ ಮಝರೆ ಭೀಮ 3ಕಡಲೊಡೆಯನೆಡೆಗೆ ಬಲುಕೆಡುನುಡಿಯ ನುಡಿದವರಪಿಡಿ ಪಿಡಿದು ಖಡುಗದಿಂ ಕಡಿಕಡಿದು ಕಡೆಗಾಲದಮೃಡಕೋಟಿಯಂದದಲಿ ಕಡುರೋಷದಡಿಗಡಿಗೆಘುಡುಘುಡಿಸಿ ಹುಡುಕಿ ತುಡುಕಿಷಡಕ್ಷೋಹಿಣಿ ಪಡೆಯ ಹುಡಿ ಹುಡಿಗುಟ್ಟಿ ಪೊಡವಿ ದಿಗ್ಗಡಣ ಜಯದಂತಿ ಧಿಮ್ಮಿಡಿಸಿ ಕರ್ಮಡು ಪೊಕ್ಕುಕಡುಗಲಿಯ ತೊಡೆಮುರಿಯೆ ನಡುಮುರಿಯೆ ಗದೆಯಿಂದಹೊಡೆದೆಶಸುಪಡೆದೆ ಜಗದಿ ಭೀಮ 4ಅಪ್ಪಳಿಸಿ ಕುರುಪತಿಯ ಚಿಪ್ಪೊಡೆಯೆ ತಲೆದುಳಿದುಬಪ್ಪುವಾರುಷವೆಂಬ ಸುಪ್ತಸೂತ್ರದಿ ಅಜನಬೊಪ್ಪ ಕೃಷ್ಣನ ಕಟ್ಟುವ ಪರಾಕ್ರಮಿಗೆನುತಸುಪ್ರಾಯಶ್ಚಿತ್ತವೆನುತತಪ್ಪುಗಳನೊಂದೊಂದ ನೆಪ್ಪೆತ್ತಿ ತನ್ಮತಿಗೆಹೆಪ್ಪೆನುವ ವಾಗ್ಬಾಣ ಕುಪ್ಪಳಿಸಿ ಕೊಂದು ಶ್ರೇಯಃಪತಿ ಪ್ರಸನ್ವೆಂಕಟಾರ್ಪಣವ ಮಾಡಿ ವೈಷ್ಣವ ಪ್ರತತಿಯನು ಪೊರೆದೆ ಭೀಮ 5
--------------
ಪ್ರಸನ್ನವೆಂಕಟದಾಸರು
ಭಾಗೀರಥೀದೇವಿ ಭಯನಿವಾರಣೆ ಗಂಗೆ |ಸಾಗರನ ನಿಜರಾಣಿ ಸಕಲಕಲ್ಯಾಣಿ ಪಒಮ್ಮೆ ಶ್ರೀಹರಿ ಪಾದಕಮಲದಿಂದುದುಭವಿಸಿ |ಬ್ರಹ್ಮಕರ ಪಾತ್ರೆಯಲಿನಿಂದುಬಂದೆ ||ಶ್ರೀ ಮನ್ನಾರಾಯಣನ ಪಾದತೀರ್ಥವಾಗಿ |ಬೊಮ್ಮಾಂಡವನು ಪಾವನಮಾಡ ಬಂದೆ 1ದೇವಿ ನೀ ವಿಷ್ಣುಪಾದೋದಕವೆಂದೆನಿಸಿ |ದೇವತೆಗಳಿಗೆಲ್ಲ ಅಧಿಕವಾದೆ ||ದೇವರೆಲ್ಲರು ನೆರೆದು ತಲೆಬಾಗಿದರು ಮಹಾ-|ದೇವನ ಶಿರದಿಂದ ಧರೆಗಿಳಿದು ಬಂದೆ 2ಜಹ್ನವಿನುದರದಿ ಪೂಕ್ಕ ಕಾರಣದಿಂದ |ಜಾಹ್ನವಿಯೆಂದು ನೀನೆನಿನೆಕೊಂಡೆ ||ಮುನ್ನ ನರಕಕ್ಕಿಳಿದ ಸಗರರಾಯನ ವಂಶ- |ವನ್ನು ಪಾವನಮಾಡಿ ಪೊರೆಯಲು ಬಂದೆ 3ನಿಟ್ಟಿಸಲು ಮುನ್ನಾರು ಜನ್ನಪಾತಕಹರಣ |ದಿಟ್ಟಿಸಲು ಮೂರುಜನ್ಮದಿ ಮುಕುತಿಯು ||ಮುಟ್ಟಿ ಮಾಡಿದರೊಂದು ಸ್ನಾನಮಾತ್ರದಲಿ |ಸುಟ್ಟು ಹೋಹುದು ಸಾಸಿರಜನ್ಮ ಪಾಪ 4ಹಲವು ಪರಿಯಲಿ ಹರಿಯ ಸ್ಮರಣೆಯಿಲ್ಲದೆ ಭವ-|ದೊಳಗೆ ಸಿಲುಕಿ ಕಡುನೊಂದೆ ನಾನು ||ಹಲವು ಮಾತೇಕೆ ಶ್ರೀ ಪುರಂದರವಿಠಲನ |ಚೆಲುವಪದದಿಂದಿಳಿದು ಒಲಿದು ದಯೆ ಮಾಡೆ 5
--------------
ಪುರಂದರದಾಸರು
ಮಧ್ವಮುನಿಯೆ -ಗುರು- ಮಧ್ವಮುನಿಯೆಪಮಧ್ವಮುನಿ ನಮ್ಮೆಲ್ಲರ | ಉದ್ಧರಿಸುವ ಕಾಣಿರೊ ಅ.ಪಅಂದು ಹನುಮಂತನಾಗಿ | ಬಂದ ರಾಮಪದಾರ-ವಿಂದದಿ ನೆರೆದು ತುಂಬಿಯಂದದಿ ಶೋಭಿಸಿದ 1ಏಣಾಂಕವಂಶದಿ ಪುಟ್ಟಿ | ಕ್ಷೋಣಿಪಾಲಕ ಶಿರೋಮಾಣಿಕ್ಯವಾಗಿ ಹರಿಗೆ | ಪ್ರಾಣನೆಂದೆನಿಸಿಕೊಂಬ 2ಕಟ್ಟಕಡೆಯಲ್ಲಿ ಯೋಗ | ದಿಟ್ಟನಾಗಿಪುರಂದರ|ವಿಠಲಗಾವಾಸವಾದ | ಪೆಟ್ಟಿಗೆಯೊಲೊಪ್ಪುವಂಥ 3
--------------
ಪುರಂದರದಾಸರು
ರಂಗ ಕೊಳಲನೂದಲಾಗ |ಮಂಗಳಮಯವಾಯ್ತುಧರೆ-ಜ -ಪನಂಗಳು ಚೈತನ್ಯ ಮರೆದು |ರಂಗಧ್ಯಾನಪರರಾದರು ಅ.ಪಬಾಡಿದ ಮಾಮರಗಳು ಗೊನೆಯೊಡೆದವು |ತೀಡುತ ಮಾರುತ ಮಂದಗತಿಗೊಯ್ಯೆ ||ಬಾಡಿದ ಬರಲು ಫಲದ ಗೊಂಚಲು |ಪಾಡಲೊಲ್ಲವಳಿಕುಲಗಳು ||ಹೇಡಿಗೊಂಡವು ಜಕ್ಕವಕ್ಕಿ ಗಿಳಿ ಮಾ-|ತಾಡದೆ ಕಳೆಗುಂದಿದವು ಕೋಗಿಲೆ ||ಓಡಾಟ ವೈರಾಟ ಬಿಟ್ಟು ಖಗಮೃಗ |ಗಾಢ ನಿದ್ರಾವಶವಾದವು 1ಕೆಳಗಿನುದಕ ಉಬ್ಬೇರಿ ಬಂದುವು |ತುಳುಕಿ ಚೆಲ್ಲಾಡಿ ನಿಂದಳು ಯಮುನೆ ||ಮಳೆಯ ಮೋಡೊಡ್ಡಿ ಮೇಘಾಳಿ ಧಾರಿಟ್ಟುವು |ಕಲುಕರಗಿ ಕರಗಿ ನೀರಾದುವು ||ನಳಿನಚಂಪಕನಾಗಪುನ್ನಾಗಪಾ-|ಟಲ ಸೇವಂತಿಗೆ ಕುಂದ-ಮೊಲ್ಲೆ ಮಲ್ಲಿಗೆ ಬ-||ಕುಲ ಮಾಲತಿ ಜಾಜಿ ಪರಿಮಳಗೂಡಿ |ನೀಲಾಂಗನಂಘ್ರಿಗೆ ನೆರೆದುವು 2ಕೆಚ್ಚಲು ಬಿಗಿದು ತೊರೆದ ಮೊಲೆಯೊಳು |ವತ್ಸದೊಡಲಾಸೆಜರಿದುಎಳೆಹಲ್ಲ||ಕಚ್ಚದಲ್ಲಿಗಲ್ಲಿ ನಿಂದುವು ತಮ್ಮಯ |ಪುಚ್ಚವ ನೆಗಹಿ ನೀಂಟಿಸಿ ||ಅಚ್ಯುತನಾಕೃತಿ ನೋಡಲು ಸುರರಿಗೆ |ಅಚ್ಚರಿಯಾಯಿತು ಆವು ಕಂಡಾನಂದ ||ಪೆಚ್ಚಿ ಮುಕುಂದನ ಲೀಲಾವಿನೋದಕೆ |ಮೆಚ್ಚಿ ಕುಸುಮವ ಸುರಿದರು 3ಮುದ್ದು ಮೋಹನನ ಮಂಜುಳ ಸಂಗೀತ |ಸದ್ದನಾಲಿಸಿ ಗೋಪಾಂಗನೆಯರೆಲ್ಲ ||ಬುದ್ಧಿ ಸೂರಾಡಿ ತಮ್ಮಾಲಯವನೆ ಬಿಟ್ಟು |ಎದ್ದು ಪರವಶರಾದರು ||ಸಿದ್ದ ಮುನಿಜನರಿದ್ದ ಸಮಾಧಿಯಿಂ-|ದೆದ್ದೆದ್ದು ಕುಣಿದೆದ್ದರು ಎದುರಾಗಿ ||ಗದ್ದುಗೆಯರಸನ ಒಲಿಸಿಕೊಂಡರು |ಗೆದ್ದರು ಭವದ ಸಮುದ್ರವನು 4ಶ್ರೀಮನೋಹರ ಗೋಪಾಲ ಮೂರುತಿ |ಆ ಮಧು ಕುಂಜ ವನದಿ ತ್ರಿಭಂಗಿಯಲಿ ||ಹೇಮಾಂಬರವುಟ್ಟು ಗೀರುಗಂಧ ಕಸ್ತೂರಿ |ನಾಮ ಮುಕುಟದ ಬೆಳಕಿನಲಿ ||ದಾಮವನಮಾಲೆ ಶ್ರೀವತ್ಸಕೌಸ್ತುಭ|ಸ್ವಾಮಿ ಪುರಂದರವಿಠಲರಾಯನ |ರಾಮಶ್ರಿ-ಗುಂಡಶ್ರಿ ಮೇಘರಂಜನೆ ಪಾಡಿ |ಸಾಮಗಾನಪ್ರಿಯ ನಮೊ ಎಂದರು 5
--------------
ಪುರಂದರದಾಸರು
ಸಂತೆ ಮಾಡಿದರೆ ಸಂಸಾರ ಸಂತೆ ಮಾಡಿದನೆಸಂತೆಯವರ ನಂಬಿದರೆ ಕೆಟ್ಟುಹೊಗುವೆ ಕಾಣೆಪತಂದೆತಾಯಿ ನೆವಗಳಿಂದ ಸಂತೆಗೆ ಬಂದೆಬಂದು ಕೂಡಿದನುಗಂಡಜೋಡಾದೆನು ಎಂದೆಬಂದನೀಗ ಮಗೆನೆಂಬುವನು ಸೊಸೆಯು ಆತನ ಹಿಂದೆಬಂಧುಬಳಗ ಬಹಳಾಯಿತು ನೆರೆದುದು ಸಂತೆಯು ಮುಂದೆ1ಸಂತೆ ಮಾಡಿಕೊಂಡು ಗಂಡನೀಗ ತೆರಳಿದನೆಅಂತು ಸಂತೆಯ ಮಾಡಿ ಮಗನೀಗ ಹೋಗಿಹನುಇದಕು ಮೊದಲೇ ಸೊಸೆಯ ಇಹಲೋಕ ಬಿಟ್ಟಿಹಳುಇಂತು ಸಂತೆಯ ಮಾಡಿ ಬಯಲಿಗೆ ಬಿದ್ದೆನೇ2ದಾರಿಕಾರರೆಲ್ಲ ಸರಿದು ಸಂತೆ ಬಯಲಾಗೆಆರಿಗಾರು ಇಲ್ಲವಾಗಿ ನನ್ನ ಬಿಟ್ಟು ಹೋಗೆಧೀರ ಚಿದಾನಂದಗುರುಕೈಯ ಹಿಡಿದ ಬೇಗನೀರೆ ಅಂಜಬೇಡವೆಂದು ಮುಟ್ಟಿಸಿದ ಮನೆಗೆ3
--------------
ಚಿದಾನಂದ ಅವಧೂತರು
ಸ್ಥಿರದಿ ಸ್ಥಿರದಿ ನಿತ್ಯಾನಂದ ಭರಿತವಾಗಿರಲುಭರಿತವಾದಾನಂದ ಭರಿಸುತಿರಲುಪಆದಿಶಕ್ತಿಯು ಎಂಬ ಆಕಳನೆ ಬರಿಸಿಸಾಧುಗುರು ಕರುವೆಂಬುದದನೆ ಮುಂದಿರಿಸಿವೇದನಾಲಕು ಎಂಬ ಮೊಲೆಗಳನೆ ತೊರೆಸಿಭೇದರಹಿತಾದವರು ಹಿಂಡಿಲನು ಕರೆಸಿ1ಸ್ಥೂಲತನುವೆಂದೆಂಬ ಪಾತ್ರೆಯನೆ ತಂದುಲೋಲಸಾಂಖ್ಯವು ಎಂಬ ಕ್ಷೀರವನೆ ಕರೆದುಮೂಲಭೂತವದೆಂಬ ಹೆಪ್ಪನೆರೆದುಜೋಲುಮನಸಿನ ಬಡತನವನೆಲ್ಲ ಹರಿದು2ಸಾಧಕಾಂಗಗಳೆಂಬ ಮೊಸರನ್ನು ಮಥಿಸಿವಾದಹರವೆಂದೆಂಬ ಬೆಣ್ಣೆಯನು ತೆಗೆಸಿಸಾಧು ಶಾಂತಜÕವೆಂಬ ಪುಟದ ಮೇಲಿರಿಸಿಆತಘೃತಚಿದಾನಂದ ಜ್ಯೋತಿಯೊಡ ಬೆರಸಿ3
--------------
ಚಿದಾನಂದ ಅವಧೂತರು
ಹೇಗೆ ಉದ್ಧಾರ ಮಾಡುವನು - ಶ್ರೀಹರಿ|ಹೀಗೆ ದಿನಗಳೆದುಳಿದವನ ಪರಾಗದಿಂದಲಿ ಭಾಗವತರಿಗೆ |ಬಾಗದಲೆ ತಲೆ ಹೋಗುವಾತನ ಅ.ಪಅರುಣೋದಯಲೆದ್ದು ಹರಿಯೆನ್ನದಲೆ ಗೊಡ್ಡು |ಹರಟೆಯಲಿ ಹೊತ್ತು ಏರಿಸಿದವನ ||ಸಿರಿತುಲಸಿಗೆ ನೀರನೆರೆದು ನಿರಂತರ |ಧರಿಸದೆಮೃತ್ತಿಕೆತಿರುಗುತಲಿಪ್ಪನ ||ಗುರುಹಿರಿಯರ ಸೇವೆ ಜರೆದು ನಿರಂತರ |ಪರನಿಂದೆಯ ಮಾಡಿ ನಗುತಿಹನ ||ಪರಹೆಣ್ಣು ಪರಹೊನ್ನು ಕರಗತವಾಗಲೆಂದು |ಪರಲೋಕ ಭಯಬಿಟ್ಟು ತಿರುಗುವನ ||ತರುಣಿ ಮಕ್ಕಳನು ಇರದೆ ಪೋಷಿಸಲೆಂದು |ಪರರ ದ್ರವ್ಯ ಕಳವು ವಂಚನೆ ಮಾಳ್ಪನ2ನಡೆಯಿಲ್ಲ ನುಡಿಯಿಲ್ಲ ಪಡೆಯಲಿಲ್ಲ ಪುಣ್ಯವ |ಬಿಡವು ನಿನ್ನ ಪಾಪಕರ್ಮಗಳೆಂದಿಗು ||ಸಡಲಿದಾಯುಷ್ಯವು ಕಡೆಗೂ ಸ್ಥಿರವೆಂದು |ಕಡುಮೆಚ್ಚಿ ವಿಷಯದೊಳಿಪ್ಪನ ||ಒಡೆಯ ಶ್ರೀಪುರಂದರ ವಿಠ್ಠಲರಾಯನ |ಅಡಿಗಳ ಪಿಡಿಯದೆ ಕಡೆಗೂ ಕೆಟ್ಟವನ 3
--------------
ಪುರಂದರದಾಸರು