ಒಟ್ಟು 167 ಕಡೆಗಳಲ್ಲಿ , 46 ದಾಸರು , 146 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮನ್ಮಥ ಚರಿತೆ340 ವರಸಿದ್ಧಿ ಗಣೀಶನ ಬಲಗೊಂಡೀ- ಶ್ವರನ ಪದಕೆ ನಮಿಸಿ | ಶಾರದೆಯ ಹರುಷದಿ ಸಂಸ್ಮರಿಸಿ | ಚ ತುರ್ಮುಖಗಳ ನೆರೆ ಭಜಿಸಿ ಹರುಷದಿ ನುತಿ ಮಾಡಿ | ಮಾಡಿ- ದ ಕೃತಿಯ ಸುಜನರು ನೋಡಿ 1 ಕಾಮಜನಕ ನಿಷ್ಕಾಮಜನಾಪ್ತ | ಸು- ಧಾಮನ ಸಖ ಹರಿಯು | ಮೂರು ಲೋಕಗಳಿಗೆ ತಾ ದೊರೆಯು | ಎನ್ನಹೃ- ತ್ಕಮಲದೊಳೀಪರಿಯು ಕಾಮನ ಸುಚರಿತೆಯು | ಸಜ್ಜನರು- ಇಹಪರ ಸದ್ಗತಿಯು | 2 ಪೃಥಿವಿಯೊಳಿಹ ಸುಜನರು ಕೇಳಿ | ಮ ನ್ಮಥ ಚರಿತ್ರೆಯನು | ಸಹ- ರ್ಷೋತ್ಕರದಿ ನೀವ್ಗಳಿದನು | ಭಜಿಸೆ ಸ- ದ್ಗತಿಗಳನು ಕೊಡುವನು | ಶತಮುಖವಂದಿತ ಸಿರಿದೇವಿಯರಸ- ನೊಲಿದು ಪಾಲಿಸುವನು | ಜನರ ಕೋ- ರಿದ ಕೋರಿಕೆಗಳನು | ತಾ ಕೊಟ್ಟವರನು ಪಾಲಿಪ ತಾನು 3 ತಾರಕಾಸುರನ ಭಯದಿಂದಲಿ ವೃಂ- ದಾರಕರೆಲ್ಲ ಕೂಡಿ | ಮನದಿ ಆಲೋಚನೆಗಳ ಮಾಡಿ | ವನಜ ಸಂ- ಭವನಡಿಗಳ ಬೇಡಿ | ಯಾರು ನಮಗೆ ದಿಕ್ಕೆಂದು ಕಳವಳಿಸಿ ನಾರಾಯಣನ ತ್ವರಿತದಲಿ | ಕಂಡು ವಂ- ದಿಸಿದರು ತವಕದಲಿ | 4 ವಾರಿಜಾಕ್ಷ ಪರುಷೋತ್ತಮ ವಿಶ್ವಾ- ಧಾರ ಪರಾತ್ಪರನೆ | ಅನಂತನವ- ತಾರ ಕೃಪಾಕರನೆ | ನಾವೆಲ್ಲ ಸೇರಿದೆವೈ ನಿನ್ನನೆ | ತಾರಕಾಸುರನ ಬಾಧೆ ಪರಿಹರಿಪ- ರ್ಯಾರನು ನಾವ್ ಕಾಣೆವೈಯ್ಯ | ಉ-- ದ್ಧಾರ ಮಾಳ್ಪನು ನೀನೆ | ಭಕ್ತಜನ- ವಾರಿಧಿ ಚಂದ್ರಮನೆ | 5 ಎನಲು ಸುರರೊಡನೆ ನುಡಿದನಾಗಲಾ- ವನಜನಾಭ ತಾನು | ಈ ಕಾರ್ಯ- ಕೆನಾ ಮಾಡುವುದೇನು | ಭ- ವಾನೀಧವನಾಗಿ ಶಿವನು | ಘನತಪವನಾಚರಿಸುತ್ತ ಮೇರುಗಿರಿ ಗುಹೆಯೊಳು ಕುಳಿತಿಹನೊ | ಫಾಲದಲಿ ಉರಿಗುಣ್ಣುಳ್ಳವನು | ಏನಾದರು ಸರಿ ತಾ ಲೆಕ್ಕಿಸನು | 6 ಕಾಮನಿಂದ ಶಂಕರನ ತಪಕಿಡಿಸಿ ಕರುಣಿಸಬೇಕೆಂದು ಬೇಡಿ | ಕೊಂ- ಡರವ ನಿಮ್ಮೊಳು ದಯಮಾಡಿ | ತ- ಕ್ಕಯೋಚನೆಗೈಯ್ಯುವ ನೋಡೀ | ತಾಮಸನ ಮುರಿದು ನಿಮಗೆ ಸಂತತವ ಕೊಡುವನು ಮುದಗೂಡಿ | ಎಂದು ಪೇಳಿದ ಶ್ರೀಹರಿಯನುಡಿ | ಕೇಳಿ ಇಂದ್ರನು ಗುರುವನು ನೋಡಿ 7 ಚಂದದಿಂದ ಸೇರಿ | ಸ್ಮರಗೆಯಿದ- ರಂದವೆಲ್ಲವುಸುರಿ | ಅವನಮನ ಶೌರಿ ಕಂದನೆಯಂತಾದರು ತಂದರೆ ಸುಖ- ವೆಂದನುಪಕಾರಿ | ಗುರು ವಂದಿಸೆ ಸುರರ ದೊರಿ | ಬೀಳ್ಕೊಂಡು ಬಂದನು ಕುಸುಮಪುರಿ8 ಕುಸುಮಾವತಿಯಲಿ ಮೀನಕೇತನನ ಶಶಿನಿಭವದನೆಯರು | ಸೇ- ವಿಸುತಿರೆ ಹಸನಾದ ಪನ್ನೀರು | ಪುನಗು ಅಗರು | ಕುಸುಮಶರನ ಉಪಚರಿಸುತ ಬಾಲೆಯ- ರೆಸೆಯಲು ಮೋದದೊಳು | ರತಿ- ಕ್ರೀಡೆಯಲಿ ಮನಕರಗಲು | ಬೃ ಹಸ್ಪತಿಯನಿತರೊಳೈತರಲು 9 ಊಳಿಗದವರಿಂದ್ಹೇಳಿ ಕಳುಹೆ ಗುರು ಕೇಳಿ ಸುದ್ದಿ ಮಾರಾ | ತವಕ ಪರಿಪರಿಯುಪಚಾರ | ಶ್ರೀಪತಿಯ ಕುಮಾರ | ಬಂದಹದ- ನೇನೆನುತ ಪದಾರ | ವಿಂದ- ಕೆರಗಿದನಾ ಕುಸುಮಶರ 10 ಭಯದೊಳಮರರೆಲ್ಲ | ಕ್ಷೀರಸಾಗರಕೆ ಪೋಗಿ ಎಲ್ಲ | ಬಿನ್ನೈ- ಸಲು ಕೇಳಿ ಸಿರಿಯನಲ್ಲಾ | ಅರಘಳಿಗಾಲೋಚಿಸಿ ಎನ್ನೊಳುನುಡಿ- ದನುಕೇಳಿಸಿರಿಯನಲ್ಲಾ | ಖಳಗೆಧರೆ- ಪರಿ ಎಲ್ಲವನು ಬಲ್ಲ 11 ಕಾಮನು ಪುಷ್ಪ ಶರಗಳಿಂದೆಸೆಯಲು ಗೌ- ರಿಮನೋಹರನೂ | ಬ- ಹಿರ್ಮುಖನಾಗುತ ಶಂಕರನೂ | ನಿ- ಕ್ಷೇಮವ ಪಾಲಿಪನು | ರಜತಗಿ ರಿವಾಸಿ ಮಹೇಶ್ವರನು | ಇದಕೆ ಗುರಿಯಾದ ಎನ್ನ ಮಗನು 12 ನಾವು ಪೇಳಿರುವೆವೆಂದು ನಮ್ಮ ಸು- ಕುಮಾರ ಮನ್ಮಥನಿಗೆ | ಇದೆಲ್ಲಾ ಪೇ- ಳಿವಿವರಮಾಗೆ | ಕರೆದುಕೊಂ- ಡ್ಹೋಗಿ ಶಿವನ ಬಳಿಗೆ | ಪಾವಕಾಕ್ಷ ಬಲು ಕರುಣಾನಿಧಿಯಿ- ನ್ನೇನು ಚಿಂತೆ ನಮಗೆ | ಬೇಗನಡೆ ಯೆಂದ ಹರಿಯು ಎನಗೆ | ಸಕಲವೂ ತಿಳಿಸಿದೆ ನಾನಿನಗೆ | 13 ಪರಿಯೋಚನೆ ಮಾಡು | ಸ- ತ್ಕೀರ್ತಿಯ ಸಂಪಾದನೆ ಮಾಡು | ಭರದಿ ಹೂ ಶರಗಳ ನೀ ಹೂಡು | ಹರನ ತಪವ ಭಂಗಿಸಿ ನಮ್ಮೆಲ್ಲರ ಕರುಣದಿ ಕಾಪಾಡು | ತಂದೆಯ- ಪ್ಪಣೆಯ ಮನದಿ ನೋಡು | ಮೂಜಗದಿ ಯಾರು ನಿನಗೆ ಜೋಡು | 14 ಈ ಪರಿಪೇಳಿದ ಗುರುವಿನ ನುಡಿಯನು ಶ್ರೀಪತಿಯ ಕುಮಾರ | ರತಿಯೊಡನೆ ಮಾರ | ನುಡಿದಳಾ ಶಿವನು ಮಹಾಕ್ರೂರ | ಆಪತ್ತೊದಗುವುದೀಗ ಬೇಡ ಎಂ- ಕಂದರ್ಪಮನದಿ ಸೋತು | ಬೃಹಸ್ಪತಿ- ಗೆಂದ ಕಾಮನಿನಿತು 15 ಸಮ್ಮತಿಯಿದು ಕೇಳಿ | ಪೂಶರನ ಬಿಡಲು ಚಂದ್ರಮೌಳಿ | ಕೋಪಿಸಲಾ ಹಣೆಗಣ್ಣೆನಗಾಳೀ | ಬ್ರಹ್ಮಾಂಡಗಳಾದರು ದಹಿಸುವುದು ಎನ್ನಳವೇ ಎಂದಾ | ಈ ಕಾರ್ಯಕೆ ನಾನು ಬಾರೆನೆಂದ | ನುಡಿಗೆ ಸುರ- ಗುರುಮತ್ತಿಂತೆಂದ | 16 ಮರೆಹೊಕ್ಕಿರುವಮರರ ಪಾಲಿಸುನೀ ಕಂದರ್ಪ | ಜಗ- ತ್ಕಾರಣನೈನಿಮ್ಮಪ್ಪ | ಪೇಳ್ದನುಡಿ ನಡಿಸಲು ಬೇಕಪ್ಪಾ | ಪರಿಪರಿಯಲಿ ನೋಡಿದರು ಜಗದೊಳಗೆ ನಿನ್ನ ಸರಿಯಾರಪ್ಪಾ | ನಮ್ಮ ನುಡಿ ಮೀರಬಾರದಪ್ಪಾ | ಅಷ್ಟು ಪೇಳಿ- ದರು ಕಾಮವೊಪ್ಪಾ | 17 ಕಾಮನವೊಪ್ಪಿಸಿ ಕರದೊಯಿದಮರರು ಕೈಲಾಸವ ಸೇರಿ | ಅರುಹಿದರು ಗಿರಿರಾಜ ಕುಮಾರಿ | ಕೇಳಿನಡೆತಂದಳಾಗಗೌರಿ | ವ್ಯೋಮಕೇಶನಿಹ ಗವಿಯ ದ್ವಾರಕೇ ಬರಲು ನೋಡಿ ನಂದಿ | ತಾಯಿನೀ- ನಿಲ್ಲಿಗೇಕೆ ಬಂದಿ | ಏನು ಅ- ಪ್ಪಣೆಯೆಂದನು ನಂದಿ 18 ವಂದನೆ ಒಳಗೆ ಹೋಗುವನು ಇವನನೀ ತಡೆಯಬೇಡವಯ್ಯ | ಎನ್ನ ಕಂದನು ಇವ ಕೇಳಯ್ಯ | ಎಂದು ಪೇ- ಳಿದ ಗೌರಿಯ ನುಡಿಯಾ | ಮುದದಿ ಶಿರದೊಳಾಂತನು ನಂದೀಶ್ವರ ಮುಂದೆ ಕೇಳಿ ಕಥೆಯ | ಅನಿತರೊಳ್ ಬಂದ ಕಾಮರಾಯ | ಪೋಗ ಬಹು- ದೆಂದ ಪ್ರಥಮಗೇಯ | 19 ಕಾಮಪೊಕ್ಕನಂದು | ಕರದಿ ಜ- ಪಮಾಲೆ ಪಿಡಿದು ಮುಂದು | ಮ- ಹಾಮಂತ್ರಗಳ ಜಪಿಸುತಂದು | ನೇಮದೊಳೇಕೋಭಾವದೊಳಿರುತಿಹ ಸೋಮಧರನ ಕಂಡ | ಏ- ನು ಮಾಡುವದೆಂದು ಪ್ರಚಂಡಾ | ಇಕ್ಷುಧ- ನುಶರಗಳ ಕೈಕೊಂಡಾ | 20 ವಿನಯದಿಂದ ಪ್ರಾರ್ಥಿಸಿ ಮಾತಾಡಿಸು- ವೆನೆಂದು ಶಂಕರನ | ನುತಿಸಿ ಬೇಡಿ- ದನು ಶೂಲಧರನಾ | ಎಷ್ಟಾದರು ಕರಗಲಿಲ್ಲವನಮನಾ | ಪರಿಪರಿಯೋ- ಚನೆ ಮಾಡಿ ಮನ್ಮಥನು | ಬೆರಗಾಗುತಾ ನಿಂತಾ ಸಮಯನೋಡುತ- ಲಿರತಿಯ ಕಾಂತಾ | ಮನ ದಿ ಹೊಂದಿದನು ಮಹಾಚಿಂತಾ 21 ನೆಂದು ಯೋಚಿಸಿದನು | ಇ- ಕ್ಷು ಧನುವನು ಜೇ ಹೊಡೆದಾನು | ಮಹೇ- ಶನ ಮರ್ಮಸ್ಥಳಗಳನು | ಪುಷ್ಪ ಬಾಣಗಳೂಡೆಸೆಯೆ ಮ- ಶರಗಳನು ಸುರಿದಾನು | ಜ- ನರೆ ಕೇಳೀಯಾಶ್ಚರ್ಯವನು | 22 ಆ ಮಹೇಶ್ವರನ ಮೂಲ ತಿಳಿಯಲಿಂ- ದ್ರಾದಿಸುರರಿಗಳವೆ | ಕೇಳಿಯೀ ಕಾಮನೇನು ಲಕ್ಷ್ಯವೆ | ಕರಿಚರ್ಮಾಂಬರನಾ | ಮೀನ ಕೇ- ತನನ ಬಾಣಕೆ ಮನಾ | ಬಹಿರ್ಮು- ಖನಾಗಿ ನೋಡಿ ಸ್ಮರನಾ | 23 ಕಣ್ಣುತೆಗೆದು ಮುಕ್ಕಣ್ಣಯಲೋ ನಿನ- ಗೆನ್ನೊಳೇಕೆ ಪಂಥಾ | ಛೀ ಛೀನಡಿ ಹೋಗು ಹೋಗು ಭ್ರಾಂತ | ಎಂದು ತಾ- ತನ್ನನಿಜಸ್ವಾಂತ-| ವನ್ನು ಪೂರ್ವದಂದದಿ ತಪದಲ್ಲಿರಿಸಚ- ಪೋಲ್ವಂದದಲಾ ಶಾಂತಾ | ಶೂರ್ಪಕಾ- ರಿಯು ಎದುರಲಿ ನಿಂತಾ | 24 ನಾನು ಬಂದಾ ಕಾರ್ಯವ ಕೇಳದಲೆ ಇ- ದೇನೀ ಪುರಹರನು | ಛೀಹೋಗೋ- ಗೆಂದು ಗರ್ಜಿಸಿದನು | ಎನುತ ತೆ- ಗೆದೆಚ್ಚ ಪೂಶರವನು | ನಾನಾವಿಧದಲಿ ತನ್ನ | ಚಮತ್ಕಾ- ರಗಳ ತೋರಿಸಿದನು | ಮನದಿ ಭಯಗೊಳುತ ಮನಸಿಜನು | ಮುಂದಾಗುವ ಕಥೆಯ ಕೇಳಿಯಿನ್ನು 25 ಭರ್ಗಕಣ್ದೆರೆದು ನೋಡಲಾಕ್ಷಣದಿ ಭರದಿಂ ಮನ್ಮಥನಾ | ಕೋಪಕಿಡಿ- ಯಿಡುತ ಫಣೆಗಣ್ಣ | ತೆಗೆದು ನೋಡಲು ತಕ್ಷಣ | ಚಿಣ್ಣಾ ಭುಗ್ಗು ಭುಗ್ಗುಯೆಂದೇಳ್ವ ಉರಿಗಳಿಂ ದಗ್ಧನಾದ ಮದನಾ | ಭಸ್ಮದಂ- ತಿದ್ದು ಮರ್ಮಸದನಾ | ಅಗ್ನಿವ್ಯಾ ಪಿಸೆ ಬ್ರಹ್ಮಾಂಡವನಾ 26 ಸುರರು ಕಿನ್ನರರು ಗಡಗಡ ನಡುಗುತ ಬೆರಗಾದರು ನೋಡಿ | ಅವರ- ಶಿರವನಲ್ಲಾಡಿ | ಚರರು ಬಂದು ರತಿಗೀ ಸುದ್ದಿಯ ಪೇಳಿ- ದರು ದುಃಖ ಮಾಡಿ | ಕೇಳಿ ನಾರಿಯರು ಶೋಕವಮಾಡಿ | ರತಿಯು ನೆಲದೋಳ್ ಬಿದ್ಹೊರಳಾಡಿ | 27 ಹಾಹಾರಮಣಾ ಹಾ ನಿಜೇಶ ಹಾ ಪ್ರಾಣಕಾಂತಕಾಮಾ | ಎನ್ನ ಕರ್ಕಶನಿಸ್ಸೀಮ | ಸಾಹಸ ಮಾಡುವೆನೆಂದು ಪೋಗಿ ಶಂ- ಕರನಿಂದಲಿ ಮಡಿದೆ | ಪೇಳಿದಮಾ- ತ್ಕೇಳದೆ ನೀ ನಡೆದೇ | ಪೋಗಬೇ- ಡೆಂದು ನಾನು ನುಡಿದೆ 28
--------------
ಗುರುರಾಮವಿಠಲ
ಮರುಳು ಮನವೇ ವ್ಯರ್ಥ ಚಿಂತಿಸುವಿಯಾಕೋ ಹರಿ ತಾನೇ ಕಾಯ್ವ ಮನ ದೃಢವಿರಲಿ ಬೇಕೊ ಪ ಎಲ್ಲಿ ನೋಡಿದರಲ್ಲಿ ಇರುವಾತಾ ಎಲ್ಲರನು ಪೊರೆವಾತಾ ಬಲ್ಲಿದನು ಬಲಿಯ ತುಳದಾತಾ ಸೊಲ್ಲು ಸೊಲ್ಲಿಗೆ ಬಂದು ಎಲ್ಲಿವನು ಪೇಳಿದರೆ ಕಲ್ಲಾಗುವನೇ ಸ್ವಾಮಿ ಪ್ರಲ್ಹಾದ ತಾತಾ 1 ಹಬ್ಬಿರುವ ಮಾಂಸಗಾಗರ್ಭದೊಳಿರುವಾಗ ಉಬ್ಬಸವ ಬಡುವಾಗ ಸಲಹಿದವರ್ಯಾರೋ ಅಬ್ಬರದ ನೋವಿನೊಳು ಒಬ್ಬನೇ ಬರುವಾಗ ಹೆಬ್ಬಾಗಿಲವ ನಿನಗೆ ತೋರಿದವರ್ಯಾರೋ 2 ವರದ ಹನುಮೇಶವಿಠಲನ ಚರಣವ ನಂಬು ಮೊರೆಯಾಗ್ವನಲ್ಲಾ ಹರಿ ಕರುಣ ಸಾಗರನೋ ಕರಿರಾಜ ಕರಿಯಲಾಕ್ಷಣಕೆ ಅವಸರದಲಿ ಗರುಡವಾಹನ ಕೃಷ್ಣ ಬರಲಿಲ್ಲವೇನೋ 3
--------------
ಹನುಮೇಶವಿಠಲ
ಮಾತು ಸವಿಯೋ ಅವರ ಮಾತು ಸವಿಯೋ ಮಾತಿಲಾತ್ಮಾನುಭವದ ಸ್ಥಿತಿಯಗೂಡಿಸುವರ ಧ್ರುವ ನಿತ್ಯಾನಿತ್ಯದಿತ್ಯರ್ಥದ ತತ್ವಾರ್ಥಸಾರಾಯ ಬೀರಿ ಸತ್ಯ ಸನಾತನದ ಸುಪಥವಗೂಡಿಸುವರ 1 ಚಿತ್ತ ಶುದ್ದವನೆ ಮಾಡಿ ಮತ್ತವಾದ ಪರಬ್ರಹ್ಮಯ ಎತ್ತ ನೋಡಿದರತ್ತ ಪ್ರತ್ಯಕ್ಷ ತೋರಿಸುವರ 2 ಸ್ವಾನುಭವಾಮೃತವನು ಙÁ್ಞನಾಂಜನದುಲುಣಿಸಿ ತಾನೆ ತಾನಾದ ದೀನ ಮಹಿಪತಿ ಸ್ವಾಮಿಯ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಾತೆಂದೆನಬ್ಯಾಡಿ ಧ್ರುವ ಎಲ್ಲಿ ನೋಡಿದರೆ ತಾ ಅಲ್ಲಿಗಲ್ಲಿಗಿಹ್ಯ ಎಲ್ಲ ಕಡೆಯಲ್ಲೇಕೋಮಯವೊ ಸುಲ್ಲಭವಾಗಿಹ್ಯಬಲ್ಲ ಜ್ಞಾನಿಗೆ ಭಾಸುತಿಹ್ಯ ಫುಲ್ಲಲೋಚನ ಪ್ರಾಣದೊಲ್ಲಭನು 1 ಎತ್ತ ನೋಡಿದರತ್ತ ಸುತ್ತಸುತ್ತಲಿಹ್ಯ ನಿತ್ಯವಾಗಿಹ್ಯ ಹೃತ್ಕಮಲದಲಿ ತುತ್ತಾಯಿತ ತಾ ಮಾಡಿ ನಿತ್ಯಸಲಹುವ ಹತ್ತಿಲೆ ಹೊಳೆಯುತ ಚಿತ್ತದಲಿ 2 ಹಿಂದೆನೋಡಿದಿರಿಹ ಮುಂದೇನೋಡಿದಿರಿಹ್ಯ ಸಂಧಿಸಿಹನು ಅಂತರಾತ್ಮದಲಿ ತಂದೆ ತಾಯಿಯು ಬಳಗಾಗಿಹ್ಯ ತಾನೆ ಎಂದಿಗೆ ಅಗಲದೆ ಅನುದಿನದಲಿ 3 ಜನವನದೊಳಗಿಹ್ಯ ಜನಾರ್ಧನ ತಾನು ತನುಮನದೊಳು ಥಳಥಳಸುತಲಿ ಅನುಮಾನವಿಲ್ಲದೆ ಅನಿಮಿಷದಲಿ ನೋಡಿ ಆಣುರೇಣುದಲಿ ಪರಿಪೂರ್ಣನು 4 ಸಾರಿಚಲ್ಲೆದ ಪರಬ್ರಹ್ಮಸ್ವರೂಪವಿದು ಸೂರ್ಯಾಡಬಹುದು ಸುಜ್ಞಾನಿಗಳು ತೋರದು ಎಂದಿಗೆ ಗುರುಕೃಪೆಯಿಲ್ಲದೆ ತರಳಮಹಿಪತಿ ವಸ್ತುಮಯವಿದು 5
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಮಾನವ ಮೂಢಾ | ಕೇಳದೆ ನೀ ಕೆಡಬ್ಯಾಡಾ | ಶೀಲವರಿತುಕೋ ದೃಢಾ | ಹೇಳುವೆ ನಿಜ ಹಿತ ನೋಡಾ ಪ ಹಾದ್ಯರಿಯದೆ ಪ್ರಚಂಡಾ ಓದಿಕೆ ಯಾಕ ಉದಂಡಾ | ಸಾಧಿಸೋ ಸಾಧನ ಕಾಂಡದ ಬೋಧಿಪ ಮಾರ್ತಾಂಡ | ವಾದ ವಿತ್ತಂಡ ಬಿಡು ಪಾಷಂಡಾ 1 ಹರಿಗುಣ ಕೊಂಡಾಡು ನೀ ಅಖಂಡಾ ಕೇಳು ಕೇಳು ಪ್ರಾಣಿ | ಕರಣ ತ್ರಯಂಗಳ ಬೆರಿಸಿ ಮೊರೆಹೋಗಾಭಾವನೆ ಬಲಿಸಿ | ಗುರುವಿಗೆ ಭಾರೊಪ್ಪಿಸಿ ಇರು ಸಂಶಯವಾ ತ್ಯಜಿಸಿ | ನೆರೆ ಜೌಭಾಗಿಸಿ ತನ ಬಿಡು ಹೇಸಿ ಕುಜನ ದುರಾಶೀ ನದಿಯೊಳು ಸೋಸಿ 2 ಗರುವ ಮುರಿದು ನಿದ್ರ್ವಂದಾ ಚರಿಸಿ ಹಿರಿಯರ ವೃಂದಾ | ಪರಿಯಲಿ ನಡಿನೀ ನೆಂದಾ ಗುರುವರ ಮಹಿಪತಿ ಕಂದಾ | ಪಡದರ ಬಂದಾ | ಜನ್ಮಕ ಛಂದಾ ನೋಡಿದರಿಂದಾ ಕೇಳು ಪ್ರಾಣಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಾಯಾ ಕಾರ್ಯವಾಕೆಯೆ ಮಿಥ್ಯವೂಈ ರೀತಿುಂದಲಾತ್ಮನಿಛ್ಛೆಯಲಿದುಸೇರಿದಂತಿಹುದಾಗಿ ಭ್ರಾಂತಿಯು ಜಾರುವನ್ನೆಗ ಪೊಳೆಯಲು1ಮುನ್ನ ನೀ ಬಂದೆನೆಂಬಲ್ಲಿ ಪರವiನುಭಿನ್ನವಿಲ್ಲದೆ ಪೂರ್ಣವಾಗಿರಲಿನ್ನು ನಿನಗೆಡೆಯಾವದೂಅನ್ಯ ವಿಲ್ಲದನನ್ಯನೀಶನೆ ನಾನುನಿನ್ನ ಕಾರ್ಯದ ನೇತ್ರಮಾತ್ರಕ್ಕುನ್ನತ ಕೃತಿಯಾಗಿರೇ 2ಮರುಭೂಮಿಯೊಳು ಮುಸುಕೆ ಮಿತ್ರನ ಕಾಂತಿಕೆರೆಯ ನೀರಿನ ಹಾಗೆ ಕಾಣುತಲಿರಲು ನೋಡಿದರುದಕವೆಬರಿಯ ಚೌಳೆಂತಾ ಪರಿಯು ನಿನ್ನಯ ತೋರ್ಕೆನಿರತ ಉಂಟೆಂಬಂತೆ ನಿನ್ನಯ ಮರುಳಿನಿಂ ಮುಂದಿರುತಿರೆ 3ಹೊಳೆಯಲಿಲ್ಲವು ಹುಸಿಯಾಗಿ ನೀ ಮುನ್ನಬಳಿಕ ನಿನ್ನೊಳು ಬದ್ದನೆಂಬೀ ಬಗೆಯು ತನಗೆಂತಪ್ಪುದೂತಿಳಿದು ನೋಡಲು ತಾನೊಬ್ಬನಾತ್ಮನುಕಳೆದು ಕೂಡುವ ಮಾತು ಮಾತ್ರವೆಯಳವಿಗೊಂಡಿರವಿಷ್ಟಕೆ 4ಅರಿವಿನಾ ಘಟ್ಟಿಯಾಗಿಹೆ ನಾ ನಿತ್ಯವರಿವು ಮರವೆಗಳೆಂದು ತೋರ್ದರು ಕರಣಧರ್ಮಗಳಲ್ಲದೆಬೆರದು ಬೇರಾಹ ಬಗೆಯಂದಿಗಿಲ್ಲವುತಿರುಪತಿಯ ಶ್ರೀ ವೆಂಕಟೇಶನೆ ತರುಬಿಕೊಂಡಿರೆ ವಿಶ್ವವಾ 5ಕಂ||ನುಡಿಯಲು ಜೀವನು ಕೋಪದಿಕಿಡಿಗೆದರುವ ಕಂಗಳಿಂದಭಿಮಾನನ ಬಲದಿಂತಡೆಯದೆ ತನು ಜೀವನನಾರ್ಭಟಿಸುತ ವಾದಿಸಿದುದ ಪುಸಿತನ ಬಂತೆಂಬುದರಿಂ
--------------
ತಿಮ್ಮಪ್ಪದಾಸರು
ಮಾವನ ಮನೆಯೊಳಗೆ ಇರಬಹುದೆ ಕೋವಿದರು ಪ ಹರಣ ನೀಡಲು ಬಹುದುಬೇವ ಕಿಚ್ಚನು ಹಿಡಿದು ನುಂಗಬಹುದುಭಾವೆಯಳ ತಂದೆ ಮನೆಯಲಿ ಜೀವಿಪುದಕಿಂತಸಾವುದೇ ಲೇಸು ಅಭಿಮಾನಿಗಳಿಗೆ1 ಪರರ ಸೇರಲು ಬಹುದು ಪತಿತರಲ್ಲಿರಬಹುದುಕೊರಳ ಘಾತಕಂಗೆ ಶಿರ ಒಪ್ಪಿಸಬಹುದುತರುಣಿಯಳ ತೌರು ಮನೆಯಲಿ ಇರುವುದಕಿಂತತರುಗಿರಿ ಗುಹೆಯಲ್ಲಿ ಇದ್ದು ಜೀವಿಸಬಹುದು 2 ಮಾವ ಅತ್ತೆಯು ನೊಂದು ಅತ್ತಿಗೆಯು ತಾ ಜರಿದುಹೇವವನಿಕ್ಕಿ ಚೂರ್ಣವ ಮಾಡಲುಆವಾಗ ನೋಡಿದರು ಎನಗೆ ಹಿತರಿಲ್ಲೆಂದುಮಾವ ಹೊರಗಾಡುವನು ಚಿಕ್ಕ ನುಡಿಗಳನು 3 ಬಂದೊಂದು ತಿಂಗಳೊಳು ಬಹುಮಾನ ನಡತೆಗಳುಬಂದೆರಡು ತಿಂಗಳೊಳಗೆ ಹಿತವಾದವುಒಂದೊಂದಭದ್ರ ನುಡಿ ಒಳಗೊಳಗೆ ಹುಟ್ಟುವುವುಸಂದೇಹವೇಕೆ ಸಂಸಾರಿಗಳಿಗೆ4 ಈ ಪರಿಯಲುಂಬಂಥ ಅಳಿಯ ಭೋಜನಕಿಂತಗೋಪಾಳ ಲೇಸು ಅಭಿಮಾನಿಗಳಿಗೆಶ್ರೀಪತಿ ನೆಲೆಯಾದಿಕೇಶವನ ಚರಣ ಸ-ಮೀಪದಲಿ ವಾಸಿಪುದೆ ವಾಸಿ ಮನವೆ 5 * ಈ ಕೀರ್ತನೆ ಪುರಂದರದಾಸರ ಅಂಕಿತದಲ್ಲೂ ದೊರೆತಿದೆ.
--------------
ಕನಕದಾಸ
ಮಾವಿನಕೆರೆ ಎಲ್ಲಿರುವೆ ಬಾರಂಗ ಬಾ ಮೋಹನಾಂಗ ಎಲ್ಲಿರುವೆ ನೀಲಾಂಗ ಮಾಂಗಿರಿರಂಗ ಪ ಇಲ್ಲಿರುವೆಯಾರಂಗ ಸಲ್ಲಲಿತ ರಂಗ ಮೆಲ್ಲನೇ ರಂಗ ಓ ಮುದ್ದುರಂಗಾ ಅ.ಪ ಅಲ್ಲಿ ನೋಡಿದರಿಲ್ಲ ಇಲ್ಲಿ ಕಾಣಿಸಲಿಲ್ಲ ಬಲ್ಲೆ ನಾನೀ ಚೆಲ್ಲ ವರದಾತನಲ್ಲ ಇಲ್ಲಿ ತಿಳಿಗೊಳವಿಲ್ಲ ಮಲ್ಲಿಗೆಯ ಹೂವಿಲ್ಲ ಇಲ್ಲಿರುವ ಧೃಢವಿಲ್ಲ ನೀ ಬರುವೆ ಅರಿವಿಲ್ಲ 1 ಗಜರಾಜ ಕರೆದನೆ ಅಜಾಮಿಳನು ಕೂಗಿದನೆ ಅಜನು ಬಾರೆಂದನೆ ಲೋಕವಂದಿತನೆ ರಜತಾದ್ರಿ ವಾಸನೆ ಪೂಜಿಸಲು ಕರೆದನೊ ಸುಜನ ವರದಾಯಕನೆ ವಿಜಯ ಪೂರಿತನೇ 2 ವನವನದಿ ಸಂಚರಿಸಿ ದನಿದನಿಯನನುಸರಿಸಿ ಮನದಿ ನೋವನನುಭವಿಸಿ ಕನಸೆಂದು ಭಾವಿಸಿ ಕನವರಿಪ ಯೆನ್ನೊಳಗೆ ಕನಿಕರವ ಸೂಸಿ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಮೀಸಲಾಗಿ ನಿನ್ನದೊಂದು ಚೆಲ್ವರೂಪವನ್ನಿಡೋವಾಸುದೇವ ನಿನ್ನನಂತ ದಿವ್ಯರೂಪಗಳಲಿ ಎನಗೆ ಪ ಮಣಿವ ಭಕುತ ಜನರು ಕರೆದಕ್ಷಣಕೆ ಓಡಿಬಂದು ಮುಂದೆಕುಣಿದು ಕುಣಿದು ಕುಣಿದು ಹೋಗಿ ಬಂದುದಣಿದುಕೊಳುವ ಮೊದಲು ಎನಗೆ 1 ಎಷ್ಟು ನೋಡಿದರು ಎನಗೆತುಷ್ಟಿಯಿಲ್ಲವಯ್ಯ ಕೃಷ್ಣಅಷ್ಟಷ್ಟಕೆ ಹೋಗಿಬರುವಕಷ್ಟವೇಕೆ ದಯದಿ ಎನಗೆ 2 ಮಾಡಿದಘವ ಕುಟ್ಟಿ ಹಣಿವೆನೋಡಿ ನೋಡಿ ಪದಕೆ ಮಣಿವೆಹಾಡಿಹಾಡಿ ನಲಿದು ಕುಣಿವೆನಾಡೆ ಕುಣಿದು ತುಂಬ ತಣಿವೆ 3 ಸಾವಿರಾರು ಭಕ್ತಜನರುದೇವ ನಿನಗೆ ಗೈವೆಯೆಂತುಪಾವನಾತ್ಮ ಗದುಗು ವೀರನಾರಾಯಣ ದಯವ ತೋರಿ 4
--------------
ವೀರನಾರಾಯಣ
ಮುಕ್ತಿ ದೊರಕಿತು ಗುರುಕೃಪೆಯಿಂದಲಿ ಪ ಒಮ್ಮನದಿಂದಲಿ ವಿವರಿಸಿ ನೋಡಲುಕರ್ಮ ಬ್ರಹ್ಮಾಗಿ ತೋರಿತಕ್ಕ |ಅಮ್ಮಾ ಅಮ್ಮಾ ಈ ಮಾತು ಏನಂತ ಹೇಳಲಿನಿರ್ಮಳ ನಿಜ ವಸ್ತು ಕಾಣ ಬಂತಕ್ಕ 1 ಮಾತು ಮಾತಿನಲಿ ಸಪ್ತಧಾತುವಿನಲಿಮತ್ತೊಂದು ತೋರಿದ ಭುವನದಲಿ |ಎತ್ತ ನೋಡಿದರತ್ತ ವಸ್ತುವೇ ಪರಿಪೂರ್ಣವಿಚಾರದಿಂದಲಿ ಅನುಭವದಿಂದಲಿ2 ಇಂದು ಜ್ಞಾನಬೋಧಗೆ ಆನಂದವಾಯಿತುಸಂದೇಹ ಹೋಯಿತು ಮನಸಿನಲಿ |ಎಂದಿಗೂ ಅಳಿಯದ ಸೌಭಾಗ್ಯ ದೊರಕಿತುತಂದೆ ಗೋವಿಂದನ ವಾಕ್ಯದಲಿ 3
--------------
ಜ್ಞಾನಬೋದಕರು
ಯಾದವೇಂದ್ರ ಪರಿಮೋದವ ಸೂಸುತ ಹಾದಿಯ ಹಿಡಿದಾನು ತಾಗುಣ ಸಾಂದ್ರ ಯಾದವೇಂದ್ರ ಪ. ಛತ್ರ ಚಾಮರದವರು ಜತ್ತಾಗಿ ನಡೆದರುಚಿತ್ತಜನೈಯನ ಹತ್ತಿರ ಕೆಲರು1 ಆನೆ ಅಂಬಾರಿಯವರು ಶ್ರೀನಿವಾಸನ ಮುಂದೆ ನಾನಾ ಭೂಷಿತರಾಗಿ ಮಾನದಿ ತೆರಳಿ 2 ರಾಜಪುತ್ರರು ದಿವ್ಯ ವಾಜಿಗಳೇರುತ ಬಾಜಾರದೊಳು ವಿರಾಜಿಸಿ ನಡಿಯೆ3 ಮಂದಗಮನೆಯರ ರಥ ಮುಂದಾಗಿ ನಡೆದವುಇಂದಿರೆ ಅರಸನ ಸಂದಣಿ ನೋಡ 4 ಎಲ್ಲೆಲ್ಲಿ ನೋಡಿದರೆ ಪಲ್ಲಕ್ಕಿ ಸಾಲಾಗಿ ಫುಲ್ಲನಾಭನ ಮುಂದೆ ನಿಲ್ಲಿಸಿ ನಡಿಯೆ5 ನೋಡ ಬಂದವರೆಲ್ಲ ಗಾಡಿ ವಯಲುಗಳೇರಿರೂಢಿಗೊಡೆಯನ ಮುಂದೆ ಓಡಿಸಿ ನಡಿಯೆ 6 ತಂದೆ ರಾಮೇಶನು ಬಂದ ಬೀದಿಯ ಸೊಬಗುಇಂದಿರೆವಶವಲ್ಲ ಚಂದಾಗಿ ರಚಿಸೆ 7
--------------
ಗಲಗಲಿಅವ್ವನವರು
ಯಾರವನು ಹೊರಗೆನಿಂತ ಬಾರಾನ್ಯಾಕವನು ಪ ನೀರಮುಳುಗಿ ಬಂದು ಘೋರಪರ್ವತ ತಂದು ಧಾರುಣಿಯನು ಕದ್ದ ದನುಜನ ಕೊಂದು ನರಹರಿ ರೂಪದಿ ತರಳಗೊಲಿದುಪುಟ್ಟ ಚರಣದಿಂ ಧರಣಿಯನಳೆದ ಮಹಾತ್ಮನೋ 1 ಕೊಡಲಿಯ ಪಿಡಿದು ತಾ ಬಿಡದೆ ಕ್ಷತ್ರಿಯರನ್ನು ಮಡುಹಿ ಬಂದವನಿವನೇನೋ ಮಡದಿಗಾಗಿ ದೊಡ್ಡಅಡವಿಯೊಳು ಮನೆಕಟ್ಟಿ ಬಿಡದೆ ಗೋಕುಲದಲ್ಲಿ ನೆಲೆಸಿರುವಾತನೋ 2 ಬೆತ್ತಲೆ ನಿಂತ್ಹತ್ತಿ ಮತ್ತೆಕುದುರೆಯ ಚಿತ್ತಬಂದಂತೆ ತಾ ತಿರುಗುವನೋ ಉತ್ತಮನಾದ ಶ್ರೀ ಪ್ರಾಣನಾಥವಿಠಲನು ಎತ್ತನೋಡಿದರು ಸುತ್ತುತ್ತಲಿರುವನು 3
--------------
ಬಾಗೇಪಲ್ಲಿ ಶೇಷದಾಸರು
ಯೇನಾದರೇನು ಜ್ಞಾನವಿಲ್ಲದೆ ಮೋಕ್ಷವಿಲ್ಲಾ ಪ ವೇದವನೋದಿದರೇನು | ಶಾಸ್ತ್ರವ ನೋಡಿದರೇನು | ಕಾದಿ ಕಾದಾಡಿದರೇನು || 1 ಕಾಶಿಗೆ ತಾ ಹೋದರೇನು | ಕಾನನವ ಸೇರಿದರೇನು | ಕಾಶಿ ಪೀತಾಂಬರ ಉಟ್ಟರೇನು 2 ಜಪ ತಪವ ಮಾಡಲೇನು | ಜಾಣತನದೊಳ್ ಮೆರೆದರೇನು | ವಿಜಯವಿಠ್ಠಲನ್ನ ಸಾರಿದರೇನು 3
--------------
ವಿಜಯದಾಸ
ರಾಮನ ನಾಮವೆ ನಾನಾಕಾರ ಈ ನಾಮವನುಳಿದರೆ ಶೂನ್ಯಾಕಾರ ಪ ಕಾಮಿಸಿ ಭಜಿಸಿರೆ ಆನಂದಕರ ರಾಮಾ ರಾಮಾ ಜೈ ಜೈ ರಾಮಅ.ಪ ಹಾಡುವ ಭಕ್ತರ ಅನುಮತದಲ್ಲು ಬೀಡಲಿ ಮೊರೆವ ಶೀಲೆಯರಲ್ಲು ಸೂಡಿದೆ ನಿನ್ನಯ ರಾಮಾಕಾರ ರಾಮಾ ರಾಮಾ ಜೈ ಜೈ ರಾಮ 1 ಹೂ ಗಿಡ ಬಳ್ಳಿಗಳಲ್ಲೂ ರಾಮ ಖಗಮಿಗಗಳ ದನಿ ರಾಮನ ನಾಮ ರಾಗದಿ ನೋಡಿದರೆಲ್ಲೂ ರಾಮ ರಾಮಾ ರಾಮಾ ಜೈ ಜೈ ರಾಮ 2 ಪೂಜೆಯ ಹೂವಲು ರಾಮ ರಾಮ ತೇಜದ ಗಂಧದ ಪರಿಮಳ ರಾಮ ರಾಜಿಪ ದೇಗುಲವೆಲ್ಲ ರಾಮ ರಾಮಾ ರಾಮಾ ಜೈ ಜೈ ರಾಮ3 ಜಾಜಿಪುರೀಶನ ಪಾವನ ನಾವi ಸಾಜದಿ ನುತಿಸಿರೊ ರಾಮ ರಾಮ 4
--------------
ನಾರಾಯಣಶರ್ಮರು
ವಾಯುದೇವರು ಎಲ್ಲಿರುವೆ ತಂದೆ ಬಾರೊ ಮಾರುತಿ ಪ ಎಲ್ಲೆಲ್ಲಿನೋಡಿದರು ಅಲ್ಲಿ ನಿನ್ನ ಕೀರುತಿ ಅಲ್ಲಿನಿನ್ನಕೂಡಿರುವ ನಿತ್ಯಾಶ್ರೀಪತಿಅ.ಪ ವಾರಿಧಿಯ ಹಾರಿ ನೀ ಸೇರಿ ತ್ವರದಿ ಲಂಕೆಯ ಕ್ರೂರರನ್ನು ಕೊಂದು ಕುರುಹ ತಂದ ಮಹರಾಯ 1 ದುರುಳ ಕುರುಪನನ್ನು ಕೊಂದು ತರಳೆಯಮಾನ ಹರುಷದಿಂದ ಪೊರೆದು ನೀ ಮೆರೆದ್ಯೊ ಸುಮ್ಮಾನ 2 ಹಿತದಿ ಸತತ ಭಜಿಸಿ ಶೇಷ ವಿಠ್ಠಲನ ಮೋದಿಸಿದಿ 3
--------------
ಬಾಗೇಪಲ್ಲಿ ಶೇಷದಾಸರು