ಒಟ್ಟು 107 ಕಡೆಗಳಲ್ಲಿ , 37 ದಾಸರು , 93 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವ್ಯಾಸೋಕ್ತಿಯನುಸರಿಸಿ ಹತ್ತು ಅವತಾರವನುಶ್ರೀಶ ಮಾಡಿದ ದಿನದ ಕ್ಲಪ್ತಿಯಂ ಬರೆವೆ ಸಂ- |ತೋಷದಿಂ ಕೇಳ್ಪುದೆಲ್ಲರು ಪೊರೆವ ಹರಿಯು ಅಭಿ-ಲಾಷೆ ಪೂರೈಸಿ ಬಿಡದೇ ಪಕೃತಯುಗಪ್ರಭವಮಧು ಶುದ್ಧ ಪ್ರತಿಪದಜಲಧಿಸುತವಾರ ರೇವತೀ ವಿಷ್ಕಂಭ ಹಗಲು ಸಂ-ಯುತ ಹನ್ನೆರಡು ಘಳಿಗೆಗವತರಿಸಿಶ್ರೀ ಮತ್ಸ್ಯ ಹತಮಾಡಿ ತಮನೆಂಬನಾ ||ಚತುರಾಸ್ಯವೈವಸ್ವತರಿಗೊಲಿದು ಮೆರೆದ ನೀಕ್ಷಿತಿಯೊಳಗೆ ಮತ್ತಾಯುಗದಿಕೂರ್ಮರೂಪದಿಂಚ್ಯುತರಹಿತನವತಾರ ಮಾಡಿ ಮಾಡಿದ ಕಾರ್ಯ ಮತಿವಂತರಿಗೆ ಪೇಳೂವೆ 1ವಿಭವಾಬ್ದ ಜ್ಯೇಷ್ಠ ಶುಕ್ಲದ್ವಿತೀಯಬುಧವಾರಶುಭದ ರೋಹಿಣಿ ಋಕ್ಷ ಧೃತಿ ಯೋಗ ದಿವದಲ್ಲಿತ್ರಿಭುವನೇಶ್ವರ ನಾಲ್ಕು ಘಳಿಗೆಗುದಿಸಿಯಮೃತಕೃತುಭುಜರಿಗುಣಿಸಿ ಕರುಣದಿಂ ||ಅಭಯವಿತ್ತನ್ಯರನು ದಣಿಸಿ ಧರಿಸಿದನು ಜಲ-ಜಭವಾಂಡ ಮಂದರಾದ್ರಿಯ ಬೆನ್ನಮ್ಯಾಲಿಂದಸುಭುಜಾಹ್ವಯನ ಚರಿತೆ ಸ್ಮರಿಸೆ ಕ್ಲೇಶಹ ಮತ್ತೆ ನಭಗವಹನಾ ಯುಗದಲಿ 2ಶುಕ್ಲ ಸಂವತ್ಸರದಶುಭಮಾಘ ಮಾಸದಲಿಶುಕ್ಲ ಪಕ್ಷದ ಸಪ್ತಮೀ ಭಾನುವಾರದಲಿಅಕ್ಲೇಶಪ್ರದ ಅಶ್ವಿನೀ ಸಾಧ್ಯಯೋಗದಲಿ ಶುಕ್ಲಶೋಣಿತ ವಿದೂರ ||ಶುಕ್ಲಾಂಬರಧರ ಕಿಟಿರೂಪದಿಂದವತರಿಸಿಹಕ್ಲಾಸುರ ಹಿರಣ್ಯಶನ ತರಿದುತ್ವರತನ್ನಒಕ್ಲಾದವರ ಪೊರೆದ ಹಗಲೆಂಟು ಘಳಿಗೆಯೊಳು ಶುಕ್ಲಾಂಗಆ ಯುಗದಲಿ 3ಆಂಗಿರಸವೆಂಬ ಸಂವತ್ಸರದ ವೈಶಾಖತಿಂಗಳದಿಸಿತಪಕ್ಷಚತುರ್ದಶೀ ಶನಿವಾರತುಂಗಸ್ವಾತಿಪರಿಘದಿವಾಷ್ಟ ವಿಂಶತಿ ಘಳಿಗೆಗಾಂಗೇಯಗರ್ಭನೊರವು ||ಸಂಘಟನೆವಾಗಲಾ ಸಮಯದೊಳು ಸ್ತಂಭದಿಂಸಂಗರಹಿತಹರಿಘುಡಿಘುಡಿಸುತಲಿ ಉದಿಸಿನರಸಿಂಗಾಹ್ವಯದಿಹೇಮಕಶ್ಯಪನ ತರಿದು ತರಳಂಗೆ ಸನ್ಮುದವಿತ್ತನೂ4ತ್ರೇತಾಯುಗದಲದಿತಿ ದೇವಿ ಭಕುತಿಗೆ ಮೆಚ್ಚಿಧಾತಾಬ್ದ ಭಾದ್ರಪದಸಿತಪಕ್ಷದ್ವಾದಶೀಖ್ಯಾತಿ ವಿಷ್ಣುಭ ಶುಕ್ರ ಧೃತಿ ಹತ್ತೈದು ಘಟಗೆಪೋತಭಾವದಿ ದಿವವಲಿ ||ತಾಂ ತಾಳಿ ಅವತಾರವಂ ತ್ರಿವಿಕ್ರಮನಾಗಿಭೂತಲಾಗಸವಳೆದು ವೈರೋಚಿನಿಯ ತುಳಿದುಪ್ರೀತಿಪಡಿಸುತ ಶಕ್ರನಂ ಸ್ವರ್ನದಿಯ ಪಡೆದ ಈತಗೆಣೆಯಾರೊ ಜಗದಿ 5ಅದೆ ಯುಗದಲಿ ಪ್ರಮಾಥಿಯೆಂಬ ಸಂವತ್ಸ-ರದಲಿ ವೈಶಾಖ ಶುದ್ಧ ತೃತೀಯೆ ಸುಕರ್ಮ ಯೋ-ಗದಲಿ ರೋಹಿಣಿಮಂದಹನ್ನೊಂದು ಘಟರಾತ್ರಿಯೊದಗುತಿರೆಭೂಪತಿಗಳಾ ||ವಧೆಗೆ ವಿಪ್ರರ ವೃಂದವನು ಪೋಷಣೆಯ ಮಾಡು-ವದಕೆ, ಜಮದಗ್ನಿಯಿಂದವತರಿಸಿ ರಾಮ ನಾ-ಮದಲಿ ಪರಶುವ ಧರಿಸಿ ಈ ಧಾತ್ರಿಯೊಳು ಬಹು ಮೆರೆದಮತ್ತು ಆ ಯುಗದಲಿ 6ತಾರಣೆಂಬಬ್ಧ ಮಧುಮಾಸ ಶುಕ್ಲ ನವಮಿಯಆರನೇ ತಾಸು ದಿವದಲಿ ಪುನರ್ವಸು ಚಂದ್ರವಾರ ಶೂಲೆಂಬ ಯೋಗದಲಿ ದಶರಥನೃಪತಿಹಾರೈಸಿದುದಕೆ ಒಲಿದು ||ಶ್ರೀರಾಮನಾಮದಿಂದವತರಿಸಿ ದೈತ್ಯ ಪರಿವಾ-ರ ರಾವಣನ ಸಂಹರಿಸಿ ವಿಭೀಷಣಗೊಲಿದುವಾರಿಜೋದ್ಭವಮುಖ ದಿವೌಕಸರಿಗಾನಂದ ತೋರಿಸಿದ ಸೀತಾಪತಿ 7ಮೂರನೇ ಯುಗ ವಿರೋಧೀ ಶ್ರಾವಣವದಿ ಅ-ರ್ಧರಾತ್ರಿಯೊಳಷ್ಟಮೀ ರೋಹಿಣೀವಜ್ರಬುಧವಾರದಲಿ ಅಜನ ಬಿನ್ನಹಕೊಪ್ಪಿ ಕೃಷ್ಣಾವತಾರವನು ತಾಳಿ ಧರೆಗೆ ||ಭಾರವಾಗಿದ್ದ ಕಂಸಾದಿ ಖಲವೃಂದ ಸಂ-ಹಾರಮಂ ಗೈದು ಪಾಂಡವರ ಪೋಷಿಸಿವಿಪ್ರಗೋ ರಕ್ಷಣೆಯ ಮಾಡಿ ಧರ್ಮವಂ ಸ್ಥಾಪಿಸಿದ ಶ್ರೀರಮಣ ಮಧ್ವಸದನ 8ಕಲಿಖರಾಬ್ಧಾಷಾಢ ಶುದ್ಧ ದಶಮಿ ವಿಶಾಖನಳಿನಸಖವಾರ ಶುಕ್ಲಾಹ ಯೋಗ ದಿವಾಷ್ಟಘಳಿಗೆಯೊಳು ಜನನೆಂಬ ದೈತ್ಯನಲ್ಲವತರಿಸಿ ಬಲುದುರ್ಮತಿಯ ಪ್ರೇರಿಸಿ ||ಕಳೆಗೆಡಿಸಿ ಬುದ್ಧಾವತಾರವೆಂದೆನಿಸಿ ಶಿವ-ಗೊಲಿದು ತ್ರಿಪುರವ ಕೆಡಿಸಿ ಸಜ್ಜನರ ಸಂಶಯವಕಳದು, ಕರುಣಾಂಬುಧಿಯ ಮಹಿಮೆಯಂತಿಳಿಯಲಸದಳಮಾವಿಧಿಗೆ ಎಂದಿಗೂ 9ದನುಜಪತಿ ಯುಗ ದುರ್ಮುಖಾ ಮಾರ್ಗಶಿರ ಶುದ್ಧಶನಿವಾರ ದ್ವಿತೀಯೆ ಪೂರ್ವಾಷಾಢ ವೃದ್ಧಿ ಮೂ-ರನೆ ಘಳಿಗೆ ದಿವದ ಕಲ್ಕ್ಯವತಾರದಿಂಮ್ಲೇಂಛರನು ಸದೆದು ಭೂ ದಿವಿಜರಾ ||ಘನಮೋದ ಪಡಿಸಿ ವಾಜಿಯನೇರಿ ಮೆರೆದಾಡಿಅನಿಮಿಷರ ಕೈಯ್ಯ ಪೂ ಮಳೆಯಂಗರಿಸಿಕೊಂ-ಡನಘ ಬಲ್ಲವರಿಗಲ್ಲಲ್ಲೆ ಇರುತಿಹನುಪ್ರಣತಜನಕಾಮಧೇನೂ 10ಈ ಪರಿಯಲಚ್ಯುತನ ಅವತಾರ ಚರಿತೆ ಸಂ-ಕ್ಷೇಪದಿಂ ವಿರಚಿಸಿದೆ ಸದ್ಭಕ್ತಿಯಿಂದಿದನುಪಾಪಿಗಳಿಘೇಳದಲೆ ಕಾಲತ್ರಯದಿ ಪಠಸೆ ತಾಪತ್ರಗಳ ಕಳೆದು ||ಈ ಪೊಡವಿಯೊಳಗೆ ಬಹುಮಾನ ಮಾಡಿಸಿ, ತಂದೆ-ಯೋಪಾದಿ ಕ್ಷಣ ಬಿಡದೆ ಸಲಹಿ ಪ್ರಾಂತಕೆ ತನ್ನಆ ಪರಂಧಾಮ ವೈದಿಸುವನತಿ ಕರುಣಾಳು ಶ್ರೀಪ ಪ್ರಾಣೇಶ ವಿಠಲಾ 11
--------------
ಪ್ರಾಣೇಶದಾಸರು
ಶ್ರೀ ಶುಕ್ಲನಾಮ ಸಂವತ್ಸರ ಸ್ತೋತ್ರ147ಶುಕ್ಲ ಸಂವತ್ಸರದ ಮುಖ್ಯ ಸ್ವಾಮಿಯು ಸುಖಪೂರ್ಣ ಶೋಕಾದಿದೋಷ ದೂರ ಶ್ರೀ ಉಪೇಂದ್ರನಿಗೆ ಆನಮಿಸುವೇ ಪ.ದೇವಗುರುಬೃಹಸ್ಪತಿ ದೇವೇಂದ್ರ ಮೊದಲಾದ ಸರ್ವ ದೇವ ವಿಧಶಿವ ವಿಧಸೇವ್ಯಶ್ರೀ ಲಕ್ಷ್ಮೀಶ ಸರ್ವೇಶನು ತಾನೆಈ ವರುಷರಾಜ ಶುಕ್ರನೊಳು ಮತ್ತು ವರುಷನಿತ್ಯನಾಯಕರುಸಚಿವ ಸೇನಾ ಸಸ್ಯ ರಸ ನಿರಸಾಧಿ ಪತಿಗಳೊಳಾಗಿರುವ 1ಇದ್ದು ಶೃತಿಗಳ ನಡೆಸಿ ಲೋಕ ಜನರಿಂದ ವಿಹಿತಾ ವಿಹಿತಸಾಧನ ಗೈಸಿ ಸಜ್ಜನರಿಗೆ ಕಷ್ಟ ಬಾರದೇ ಕಾಯುವಸಾಧು ಸಾಧನ ಮಾಳ್ಪದಕೆ ಅನುಕೂಲ ಶುಕ್ಲ ಸಂವತ್ಸರಸಂತಾಪ ಸಿಡಿಲು ಗಾಳಿ ಔಷ್ಣವ ಜಯಿಸಬಹುದು ಹರಿದಯದಿ 2ಚೌರ್ಯ ಅಸತ್ಯ ನಿಂದಾ ನಿಷ್ಠುರ ದುಷ್ಟ ತನಾದಿಗಳುಸಂತ್ಯಜಿಸಿಪತಿತಾಯಿ ತಂದೆಗುರುಸೇವಾಹರಿಪೂಜೆಕಾಯವಾಙ್ಮನದಿಂದ ಮಾಳ್ಪರಿಗೆ ಮಧ್ವಹುದಬ್ಜಗನುತೋಯಜಾಸನ ಪಿತ ಪ್ರಸನ್ನ ಶ್ರೀನಿವಾಸ ಒಲಿದು ಸಂರಕ್ಷಿಸುವನು 3| ಶ್ರೀ ಕೃಷ್ಣಾರ್ಪಣಮಸ್ತು |
--------------
ಪ್ರಸನ್ನ ಶ್ರೀನಿವಾಸದಾಸರು
ಸಂಜೆಯೊಳಿಂತು ಬರುವರೆ | ಶಬ್ದ ಹೊರುವರೆ | ಜನಕಂಜದಲಿಹರೆ ಪಸಂಧ್ಯಾಕಾಲವು ಗೋವು ಬಾರವೆ,ವತ್ಸಬಳಲವೆ, ಹೀಗೆ ಬರುವುದು ಥರವೆ |ಅಂದಾರು ಅತ್ತಿ ಅತ್ತಿಗೆಯರು, ಇಷ್ಟು ಸಹಿಸಾರು, ಪತಿಗಳು ಸುಮ್ಮನಿರರು ||ಕಂದಗಳೆರೆವ ಸಮಯವಿದು, ಬಿಟ್ಟು ಬರುವುದು, ಚರ್ಯೆ ನೋಡಲ್ಕರಿದು |ಬಂದೊಂಧೆಳಲೆ ಮನೆಯೊಳು ದೀಪ, ಹಚ್ಚದಿರೆ ಪಾಪ, ಮಾಡಬೇಡಿರಿ ಕೋಪ 1ಗಂಡನೇ ದೈವ ಹೆಂಗಸರಿಗೆ, ತಿಳಿಯದೆ, ಹೀಗೆ ಬರುವರೆ ಯನ್ನ ಬಳಿಗೆ |ಬಂಡುಇದೇನಿರೆ ಬತ್ತಲೆ, ಬಂದಿರೆಲ್ಲೆಲೆ, ಆಭರಣವೆಲ್ಲಿವಲ್ಲೆ ||ಕಂಡ ಕಂಡಲ್ಲೆ ಹುಡುಕುವರು, ನಿಮ್ಮನ್ನಾಳ್ವರು, ಕಾಣದಲೆ ಮಿಡುಕುವರು |ತುಂಟಾಟ ಕಲಿಯಬಾರದು ಇಷ್ಟು, ಪೇಳುವಿನೆ ಒಟ್ಟು, ಕೇಳಿರೆ ಮನವಿಟ್ಟು 2ಆಯಿತು ನಾ ಗಂಡನಾದೇನೆ, ತಿಳಿಯದರೇನೆ, ಕಂಡವರು ನಗರೇನೆ |ಕಾಯೋ ಪ್ರಾಣೇಶ ವಿಠಲ ಎಂದು, ಯನ್ನ ಪದರೆಂದು, ನಮಸ್ಕರಿಸಿರೆ ಬಂದು ||ಈಯಾಟ ಸಲ್ಲ, ನಿಮ್ಮನೆಗೀಗ, ಸಾಗಿರೆ ಬೇಗ, ಪತಿಗಳ ಕೂಡಭೋಗ|ಆಯಾಸವಿಲ್ಲದೆ ಮಾಡಿರೆ, ಮಾತು ಕೇಳಿರೆ, ಭ್ರಾಂತರಾಗಬೇಡಿರೆ 3
--------------
ಪ್ರಾಣೇಶದಾಸರು