ಒಟ್ಟು 3048 ಕಡೆಗಳಲ್ಲಿ , 124 ದಾಸರು , 2249 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಕೋಲ ಹಾಡು) ಕೋಲು ಕೋಲೆನ್ನ ಕೋಲೆ ಕೋಲು ಕೋಲೆನ್ನ ಕೋಲೆ ಕೋಲು ಶ್ರೀ ರಾಮನ ಬಲಗೊಂಬೆ ರನ್ನದ ಪ. ಭೂಮಿಯೊಳಗೆ ಸೀತಾರಾಮನು ಜನಿಸಲು ಸೀಮೆಯ ನಾರಿ ಜನರೆಲ್ಲ ರನ್ನದಾ ಸೀಮೆಯ ನಾರಿ ಜನರೆಲ್ಲ ನೆರೆದು ಸು ಪ್ರೇಮದಿ ಪಾಡಿ ನಲಿದರು ರನ್ನದಾ 1 ಕುಂಡಲ ಕಂಠ ಮಾಲೆಯ ನೊಸಲಾ ತಿಲಕವು ರನ್ನದ ಮಾಲೆಯ ತಿಲಕನೊಸಲೊಳಗಿರಿಸಿದ ಬಾಲೇರು ಕೂಡಿ ನಲಿವುದ ರನ್ನದ 2 ಸಾರಸಂಭವ ಕ್ಷೀರ ವಾರುಧಿ ತಡಿಯಲ್ಲಿ ಭೋರನೆ ಬಂದು ಸ್ತುತಿಸಲು ರನ್ನದ ಭೋರನೆ ಬಂದು ಸ್ತುತಿಸಲು ರಾಮವ ತಾರನಾಗುವೆನೆಂದು ನುಡಿದನು ರನ್ನದ 3 ಪೃಥಿವಿ ನಾಯಕ ದಶರಥನಲ್ಲಿ ಜನಿಸಿದ ಕಥನೀಯ ಸುಗುಣ ಸಂಭೃತ ರಾಮರನ್ನದ ಕಥನೀಯ ಸುಗುಣ ಸಂಭೃತ ರಾಮ ಕೌಸಲ್ಯ ಸುತನೆಂದು ನಗುತ ಮನ್ಮಥನ ಜನಕನಿಗೆ 4 ಕೌಶಿಕ ಮುನಿಯ ಮಹಾಶೆ ಪೂರಿಸಿ ಯಜ್ಞ ಘಾಸಿ ಮಾಡಿದ ರಾಮ ಘಾಸಿ ಮಾಡಿದ ಜಗ ದೀಶನು ಸಕಲಾಭಿಲಾಷಾ ಪೂರಿಪೆನೆಂದು 5 ಪಾದ ಪಲ್ಲವವಿರಿಸುತ ಕಲ್ಲಾದ ಶಿಲೆಯನ್ನಹಲ್ಯೆ ಮಾಡಿದ ರಾಮ ಕಲ್ಲಾದ ಶಿಲೆಯನ್ನಹಲ್ಯೆ ಮಾಡಿದ ಸಿರಿ ನಲ್ಲ ಶಿವನ ಮಹ ಬಿಲ್ಲ ಮುರಿದನು 6 ಭೂತಳಾಧಿಪಜನವ್ರಾತಮಂಡಲದೊಳು ಸೀತೆಯನೊಲಿಸಿ ಶುಭದಿಂದ ರನ್ನದಾ ಸೀತೆಯನೊಲಿಸಿ ಶುಭದಿಂದ ಸ್ವಜನ ಸ- ಮೇತಾಯೋಧ್ಯಗೆ ಬಂದ ಖ್ಯಾತ ರಾಘವನಿಗೆ 7 ಜನಕನ ವಾಕ್ಯದಿಂದ ಜನಕಾತ್ಮಜೆಯ ಕೂಡಿ ವನಕಾಗಿ ನಡೆತಂದ ವನಜಾಕ್ಷ ರನ್ನದಾ ವನಕಾಗಿ ನಡೆ ತಂದ ವನಜಾಕ್ಷನಲ್ಲಿ ಶೂ- ರ್ಪನಖಿಯ ಮಾನಭಂಗವನು ಗೈದ ರನ್ನದಾ 8 ಖರದೂಷಣಾದಿ ದೈತ್ಯರ ಕೊಂದು ಮಾರೀಚ ದುರುಳನ ಸದೆದಾ ಧುರಧೀರ ರನ್ನದ ದುರುಳನ ಸದೆದಾ ಧುರಧೀರ ಶ್ರೀ ರಾಮ ಪರಿಪಾಲಿಸೆಮ್ಮನು ಕರುಣಾಳು ರನ್ನದ 9 ಪಾತಕಿ ದಶಕಂಠ ಸೀತೆಯನೊಯ್ದನೆಂದು ಕಾತರಗೊಂಡಂತೆ ಜನಕೆಲ್ಲ ರನ್ನದಾ ಕಾತರಗೊಂಡಂತೆ ಜನಕೆಲ್ಲ ತೋರ್ದ ರಘು ನಾಥನ ಮೊಖಲೀಲೆ ಖ್ಯಾತಿಯ ಪೊಗಳುತ10 ಮಂದರಾವಣ ಮೋಸದಿಂದ ಕೆಡಹಿದಂಥ ತಂದೆಯ ಸಖನಿಗಾನಂದ ಪದವನಿತ್ತ ತಂದೆಯ ಸಖನಿಗಾನಂದವ ಸಲಿಸಿ ಕ- ಬಂಧನ ದೈತ್ಯಯೋನಿ ಇಂದ ಬಿಡಿಸಿದಗೆ 11 ಬೇಡತಿ ಶಬರಿಯನ್ನು ನೋಡಿ ರಕ್ಷಣೆ ಮಾಡಿ ಪ್ರೌಢ ಮಾರುತಿಯಿಂದ ಕೂಡಿದ ರನ್ನದಾ ಪ್ರೌಢ ಮಾರುತಿಯನ್ನು ಕೂಡಿ ರವಿಜನ ಕಾ ಪಾಡಿ ವಾಲಿಯ ವಧೆ ಮಾಡಿದ ರನ್ನದಾ 12 ಪ್ರಾಣಾತ್ಮಜನು ನಾಗವೇಣಿಯ ವಾರ್ತೆಯ ತಾರೆ ಜಾಣತನದಲಿದ ಕ್ಷೀಣಾಂಬುಧಿಯೊಳಂದು ಜಾಣತನದಲಿದ ಕ್ಷೀಣಾಂಬುಧಿಯೊಳು- ಪ್ರ ವೀಣತನದಿ ಸೇತು ಕಾಣಿಸಿದವನಿಗೆ 13 ದೋಷಿ ರಾವಣನನು ನಾಶಗೈದಸುರಾರಿ ನೀಶ ನೀನೆನುತ ವಿಭೀಷಣಗೊರವಿತ್ತಾ ಈಶ ನೀನೆನುತಲಿವಿಭೀಷಣಗೊರವಿತ್ತ ವೈರಿ ಜಗದೀಶ ರಾಮನಿಗೆ 14 ಸೃಷ್ಟಿಜಾತೆಯ ಕೂಡಿ ಪಟ್ಟಾಭಿಷೇಕಗೊಂಡು ಶಿಷ್ಟ ರಕ್ಷಕನಾದ ಸಿರಿನಾಥ ರನ್ನದಾ ಶಿಷ್ಟ ರಕ್ಷಕನಾದ ಸಿರಿನಾಥ ವೆಂಕಟ ಬೆಟ್ಟದೊಡೆಯ ನಮ್ಮಭೀಷ್ಟವ ಕೊಡುವನ 15
--------------
ತುಪಾಕಿ ವೆಂಕಟರಮಣಾಚಾರ್ಯ
(ಖ) ಶತಸ್ಥಮರುತುಗಳು ಮರುತಗಳ ನಾಮವನು ಉದಯದಲಿಯೆದ್ದು | ದುರಿತ ಪರಿಹಾರವಾಗುವುದು ಪ ಪ್ರಾಣ ಅಪಾನನು ವ್ಯಾನ ಉದಾನ ಸ | ಮಾನ ಮತ್ತೆ ನಾಗ ಕೈಕಲಕೂರ್ಮ || ಏನೆಂಬೆ ದೇವದತ್ತನು ಧನಂಜಯ ಪ್ರವಾ | ಹನನು ವಿವಹ ಸಂಯಾ ಸಂವಾಹನೆಂದು 1 ಶೀಲ ಪರಾವಹ ಉದ್ವಹ ವಾಹಶಂಕು | ಕಾಲ ಶ್ವಾಸ ಅನಳ ಅನಿಲಪ್ರತಿಯೂ || ಬಾಲ ಕುಮುದಾಕಾಂತ ಶುಚಿಶ್ವೇತ ಅಜಿತಗುರು | ಮೇಲಾಗಿ ಸಂಸಾರ ಪ್ರವರ್ತಕ ಕಿಲರನ್ನ 2 ತರುವಾಯ ಅಜಿತ ಸಂಯನು ಕಪಿ ಜಡದೇವ | ಮರಳೆ ಮಂಡುಕ ಸತತ ಸಿದ್ಧ ರಕ್ತಾ || ಸರಸ ಕೃಷ್ಣ ಪಿಕಶುಕ ಯತಿ ಭೀಮಹನು | ಮರಿಯದಲೆ ಪಿಂಗ ಅಹಂಪ್ರಾಣ ಕಂಪನ 3 ಇವರ ಸಹಿತವಾಗಿ ಸೂತ್ರನಾಮಕ ಮೂಲ | ಪವಮಾನನೊಡನೆ ಗಣಣೆಯನು ಮಾಡಿ || ತವಕದಿಂದಲಿ ತಾರತಮ್ಯವನೆ ತಿಳಿದು | ನಿತ್ಯ 4 ಇವನೆ ಪಠಿಸಿದರೆ ಜನ್ಮ ಜನುಮದ ಪಾಪ | ಉದರಿ ಪೋಗುವದು ಲೇಶ ಉಳಿಯದೆ || ಪಮಮನಾಭ ನಮ್ಮ ವಿಜಯವಿಠ್ಠಲರೇಯನ | ಪದವ ಭಜಿಸುವದಕ್ಕೆ ಙÁ್ಞನವೇ ಪುಟ್ಟವದು 5
--------------
ವಿಜಯದಾಸ
(ಘಟಿಕಾಚಲದ ವಾಯುದೇವರನ್ನು ನೆನೆದು) ಒಲಿದು ಭಕ್ತನು ಸಲಹುವ ಘಟಿಕಾಚಲನಿವಾಸಿ ಹನುಮಾ ತ್ರಿಜಗದ್ವಲಯವÀ ನಡಸುವಿ ಪ. ಎರಡು ಭುಜಗಳನು ಧರಿಸಿ ಪ್ರಪಂಚದೊಳಗಿರುವ ನಿನ್ನ ರೂಪಾ ಸ್ಮರಿಸುವ ಜನರನು ಪೊರೆವ ದೊರೆಯೆ ಈರೆರಡು ಭುಜದಿ ಭೂಪಾ- ದರ ಸುದರ್ಶನಾಕ್ಷರ ಸಂಖ್ಯಾಂಗುಲಿ ವರಮಣಿಮಾಲೆಗಳಾ- ಧರಿಸಿ ಸನ್ಮುಖದೊಳಿರುವ ವಿಚಿತ್ರವನರಿವನಾವನಯ್ಯಾ ತೋರುವೆಯೊ 1 ಸರಮಣಿ ಹಸ್ತದಿ ಚರಿಸುವದೇನಿದು ಹರಿಯ ಗುಣಗಣಗಳೊ ಪರಿಪರಿಯಲಿ ನೀ ತರಿದಿಹ ದಿತಿಜರ ಶಿರಗಳ ಸಂಖ್ಯೆಗಳೊ ಬರುವ ಬ್ರಹ್ಮಪದ ಕುರುವರಿತಾಬ್ಧಗಳಿರವ ಚಿಂತಿಸುವುದೊ ನರಹರಿ ನಿನ್ನೊಳಗಿರಿಸಿದ ದೊರೆತನ ಚಿರತರ ಕಾರ್ಯಗಳೊ ಪರಿಹರಿಸದರನು 2 ಹಿಂದೆ ಅಂಜನಾನಂದನೆನಿಸುತ ಬಂದು ಧಾರುಣಿಯಲಿ ಇಂದಿರೇಶ ರಾಮನ ಪದಕಂಜದ್ವಂದ್ವ ಸಮಾಶ್ರೈಸಿ ಇಂದೀವರ ಸಖ ನಂದನನಿಗೆ ನಿಜ ಬಂಧುವಾಗಿ ಸಲಹಿ ಇಂದಿರಾ ಕೃತಿಗೆ ನಿಜ ರಾಮನ ಮುದ್ರೆಯ ಛಂದದಲಿ ಸಲಿಸಿ ಮುಷ್ಟಿಯಿಂಧೆಂದಿಸಿ ಮೆರೆದನೆ 3 ಸೋಮಕುಲದಿ ಜನಿಸ್ಯಾಮಹದೈತ್ಯರ ಸ್ತೋಮವ ನೆರೆ ತರಿದು ಭೂಮಿಜಾಂತಕನನೇಮದಿ ಜಗದೋದ್ದಾಮನ ಸರಿಸಿಗಿದೂ ಪಾಮರ ಕೀಚಕ ಬಕ ಕಿಮ್ಮೀರರ ನಾಮವಳಿಸಿ ಬಡಿದು ಭೂಮಿಪ ಕುರುಪನ ಹೋಮಿಸಿ ರಂಗದಿ ಕಾಮಿತಾರ್ಥಪಡದು ಧಾಮನಿರ್ಜರೋದ್ಧಾಮ ಸುಮಹಿಮ 4 ಕಲಿಯೊಳು ಮಿಥ್ಯಾವಾದಿಗಳಿಂದಲಿ ಕಲುಷಿತ ಸಜ್ಜನರ ವಾಸರ ಒಲುಮೆಯಿಂದಲುದಿಸಿ ಖಳರ ಕುಶಾಸ್ತ್ರದ ಬಲೆಗಳ ಖಂಡಿಸಿ ನಳಿನಜಾಂಡದೊಳಗೆ ಜಲಜನಾಭ ವೆಂಕಟಗಿರಿರಾಜನ ನೆಲೆಯ ತೋರಿ ಮೆರದೆ ಘಟಿಕಾಚಲದಲಿ ನೆಲಿಸಿದೆ 5
--------------
ತುಪಾಕಿ ವೆಂಕಟರಮಣಾಚಾರ್ಯ
(ಚಿತ್ರಾಪುರದ ದುರ್ಗಾ) ಚಿತ್ರಾಪುರ ನಾಯಕಿ ಪಾಲಿಸು ನಮ್ಮ ಗೋತ್ರ ವೃದ್ಧಿದಾಯಕಿ ಭ್ರಾತ್ರವ್ಯ ಭಯದಿಂದ ಭಜಿಸಿದ ವಿಧಿಯ ಸ್ತೋತ್ರಕೊಲಿದ ಮೊದಗಾತ್ರದೇವನ ರಾಣಿ ಪ. ಸರ್ವಮಂಗಲೆ ನಿನ್ನನು ಕಾಣಲು ಕಷ್ಟ ಪರ್ವತ ಪುಡಿಯಾದುದು ಶರ್ವ ಸುರೇಂದ್ರಾದಿ ಗೀರ್ವಾಣವಂದ್ಯೆ ನೀ ನಿರ್ವಹಿಸುವುದೆನ್ನ ಸರ್ವಕಾರ್ಯಗಳನ್ನು 1 ಕ್ಷುದ್ರರ ಮೋಹಿಸಲು ಹರಿಯು ನಿದ್ರಾ ಮುದ್ರೆಯ ಧರಿಸಿರಲು ರೌದ್ರ ರಕ್ಕಸ ಮಧುಕೈಟಭರನು ಕರು- ಣಾದ್ರ್ರ ಹೃದಯದಿಂದ ಕೊಲಿಸಿದ ಪತಿಯಿಂದ 2 ವಹಿಸಿದೆ ಸಕಲವನ್ನೂ ಸಹಿಸದ ಶತ್ರು ಪುಂಜಗಳನ್ನು ತ್ವರಿತದಿ ದಹಿಸು ದಾಸನೆಂದು ಗ್ರಹಿಸೆನ್ನ ಪಾಲಿಸು 3 ಚಂಡಮುಂಡರ ಶಿರವ ಕತ್ತರಿಸುತ ಚಂಡನಾಡಿದ ಭರವ ಕಂಡು ಮನಕೆ ರೋಷಗೊಂಡು ದೈತ್ಯರ ರಕ್ತ ಹಿಂಡಿ ದೇಹವ ತುಂಡು ತುಂಡು ಮಾಡಿದ ಧೀರೆ 4 ತಪ್ಪುಗಳೆಣಿಸದಿರೇ ಶೇಷಾದ್ರೀಶ- ನೊಪ್ಪಿದ ಗುರುವ ತೋರೆ ಅಪ್ಪಿಳಿಸರಿಗಳ ಚಿಪ್ಪನುಳಿಯದಂತೆ ತಪ್ಪಿಸು ಭಯವ ತಿಮ್ಮಪ್ಪನ ರಾಜನ ನೀರೆ 5
--------------
ತುಪಾಕಿ ವೆಂಕಟರಮಣಾಚಾರ್ಯ
(ಜಗನ್ನಾಥದಾಸರು) ಇಂದು ಪ ಕಂಗಳ ಧಣಿ ರಂಗವೊಲಿದ ಮಹಾತ್ಮರ ಅ.ಪ ದ್ವಾಪರದಲ್ಲಿಯ ಶಲ್ಯರು ಇವರಂತೆ ತಪಸಿ ಪ್ರಹ್ಲಾದನ ಅನುಜರು ಇವರಂತೆ ಕಪಟರಹಿತ ಕಲ್ಕೀರ ಭೂಪನ ರೂಪರೇಶೆಯ ನಿರ್ಮಿಸಿ ಮೆರೆದವರ 1 ಎಂಥ ಪುಣ್ಯವಂತರು ನಮ್ಮ ಹಿರಿಯರು ಇಂಥ ಮಹಾತ್ಮರ ಸೇವಿಸಿ ಬದುಕಲು ನಿಂತು ಮನದಿ ಇವರ ನಾಮ ಭ್ರಾಂತಿಯಾಗಲು ಸಂತೋಷದಿ ಶಾಂತ ಹೊಳೆ ಹರಿಸುವರನು 2 ಶಿಷ್ಟ ಸದಾಚಾರ ಸೃಷ್ಟಿಸಿ ಜಗದಲಿ ಶ್ರೇಷ್ಠ ದಾಸರೆಂದು ಖ್ಯಾತರಾಗಿಹರ ಅಷ್ಟಮಾಂಗ ಸಾಷ್ಟಾಂಗದಿ ಎರಗಲು ಸೃಷ್ಟೀಶ ಸಿರಿವತ್ಸಾಂಕಿತನ ತೋರ್ಪರ 3
--------------
ಸಿರಿವತ್ಸಾಂಕಿತರು
(ನಾರದ ಪ್ರಾರ್ಥನೆ) ನಾರದ ಮುನಿಯ ನಂಬಿರೋ ಸಜ್ಜನರೆಲ್ಲ ಪ. ನಾರದ ಮುನಿಯ ನಂಬಿ ಸೇರಿ ರಮೇಶನ ಘೋರದುರಿತ ಪರಿಹಾರಗೊಳಿಸುವಂಥ ಅ.ಪ. ಫಾಲದಿ ತಿಲಕ ನಾಮವು ಕಂಠದ ಮೇಲೆ ಜೋಲುವ ತುಳಸಿ ಮಾಲೆಯು ತಾಳ ವೀಣೆಗಳಿಂದ ಕಾಲಾನುಗುಣಸ್ವರ ಮಾಲೆ ತೋರುತ ಲಕ್ಷ್ಮೀಲೋಲನ ವಲಿಸಿದ 1 ವೇದೋಪನಿಷತ್ತುಗಳಗಾಂಧರ್ವ ವಿದ್ಯ ಹಾದಿಲಿ ತರಲು ಬಲ್ಲ ಬೋಧಿಪ ಪರತತ್ವ ವಾದವ ಸುರಕಾರ್ಯ ಸಾಧಿಸಿ ಹರಿಯ ಪ್ರಸಾದಕೆ ಪಾತ್ರನಾದ 2 ಪ್ರಲ್ಹಾದ ಧ್ರುವ ದ್ರೌಪದಿ ಮುಖ್ಯ ವೈಷ್ಣವ ರೆಲ್ಲರೀತನ ದಯದಿ ಎಲ್ಲ ಠಾವಲಿ ಲಕ್ಷ್ಮೀವಲ್ಲಭನಿಹನೆಂಬ ಸೊಲ್ಲ ತಿಳಿದು ಪರಮೋಲ್ಲಾಸ ಪಡೆದರು 3 ದೇವಾಸುರರ ಬಳಿಗೆ ಪೋಗುವ ತನ್ನ ಭಾವಾ ತೋರನು ಕಡೆಗೆ ಆವಾವ ಜನಕನುವೀವ ಮಾತುಗಳಾಡಿ ಪಾವನಾತ್ಮಕ ಹರಿ ಸೇವಾಫಲವ ಕೊಂಬ 4 ಬಂದನು ಕಲಿಯುಗದಿ ದಾಸರೊಳು ಪುರಂದರ ನಾಮದಲೀ ಮಂದಮತಿಯ ಕಳೆವಂದದಿ ಪ್ರಾಕೃತ ದಿಂದ ವೆಂಕಟಪತಿಯಂದವ ತಿಳಿಸಿದ 5
--------------
ತುಪಾಕಿ ವೆಂಕಟರಮಣಾಚಾರ್ಯ
(ಬಪ್ಪನಾಡ ದುರ್ಗಾಪರಮೇಶ್ವರಿ) ಬಪ್ಪನಾಡ ಭದ್ರಕಾಳಿ ತಪ್ಪು ಕ್ಷಮಿಸಿ ಸಲಹಮ್ಮ ನ- ಮ್ಮಪ್ಪ ಶ್ರೀನಿವಾಸ ದೇವನಪ್ಪುತಾನಂದಾಬ್ಧಿಗಿಳಿದ ಪ. ಸರಸಿಜಾಸನಾದಿ ದೇವ ವರರ ನೀನೆ ಸಲಹುವಿ ದುರುಳ ಜನರ ತರಿದು ಭೂಮಿ ಭರವನೆಲ್ಲ ಇಳುಹುವಿ ಚರಿಯ ತೋರ್ಪಮಾಯೆ ಅಲ್ಯ- ಲ್ಲಿರುವ ಶತ್ರು ಪುಂಜವ ಕತ್ತರಿಪದೇನಾಶ್ಚರ್ಯ ತಾಯೆ 1 ಶಂಬರಾರಿ ಪಿತನಪಾದ ನಂಬಿಕೊಂಡ ರಾತಿಯ ಅಂಬೆ ನಿನ್ನ ಕರುಣದಿಂದ ಸಂಭವಿಸಿದ ಖ್ಯಾತಿಯ ಡಂಬತನದ ಶುಂಭ ನೀಶುಂಭ ದಮನೆ ಶಕ್ತಿ ನಿನ- ಗೆಂಬುದೇನು ದಾಸದಾಸನೆಂಬದರಿತು ಸಲಹು ದೇವಿ 2 ಮೂಢಮತದಿ ಮುಂದೆ ಹೋಗಿ ಮಾಡಿದಂಥ ಕುಂದನು ಪ್ರ- ಹುಡೆ ಕ್ಷಮಿಸಬೇಕೆಂದಿಂದು ಓಡಿ ಬಂದು ನಿಂದೆನು ಮೂಡಲಾದ್ರಿವಾಸನಡಿಯ ಪಾಡುವನೆಂದೆನ್ನನು ಕಾ- ಪಾಡಿ ಕಡೆಹಾಯಿಸುವದೆಂದು ಬೇಡಿಕೊಂಬೆ ಭಯಹರಾಂಬೆ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಬಪ್ಪನಾಡಿನ ದೇವಿಯನ್ನು ಕುರಿತು) ದಯಮಾಡೆ ಬಾಗೆ ಶ್ರೀಪಂಚದುರ್ಗೆ ದಯಮಾಡೆ ಬಾಗೆಪ. ದಯಮಾಡೆ ಕೇವಲ ಭಯವಿಹ್ವಲನಲ್ಲಿ ದಯಸಾಗರೆ ಸೌಭಾಗ್ಯಸಂಪದವನ್ನುಅ.ಪ. ವೇದಾಂತವೇದ್ಯೆ ನಿಖಿಳಜಗದಾದಿವಿನೋದೆ ಮಧುರಬಿಂಬಾಧರೆ ನಿನ್ನಯ ಪರಿಹರಿಸಿ ಸರ್ವಾಪ- ರಾಧಗಳ ಕ್ಷಮಿಸಮ್ಮ ಕೈಟಭಸೂದನನ ಸೋದರಿ ಮಹೇಶ್ವರಿ 1 ಅಂಬುಜಚರಣೆ ಮಾಧುರ್ಯೋರುರಂಭಾಸಮಾನೆ ಲಂಬೋದರಪರಿರಂಭಕರಾಂಬುಜೆ ಮುಖೇಂದುಪದ್ಮ ದ- ರೋಲಂಬಕುಂತಳೆ ಶುಂಭ ಮರ್ದಿನಿ 2 ಸಿಂಧೂರನಯನೆ ನಿಖಿಲಾಮರವಂದಿತಚರಣೆ ನಿತ್ಯಾನಂದಪ್ರಕಾಶಿನಿ ಅಂಧಕಾಸುರವೈರಿಹೃದಯಾನಂದ ಪಾರಾವಾರ ಪೂರ್ಣಮಿ- ಸುರಥನರೇಂದ್ರವರದೆ ಮೃಗೇಂದ್ರವಾಹಿನಿ3 ರಜತಾದ್ರಿವಾಸೆ ಚಂಪಕನಾಸೆ ಸುಜದನೌಘಪೋಷೆ ಮಹಾಗಜಗೌರಿ ಶಂಕರಿ ತ್ರಿಜಗಜ್ಜನನಿ ಭಾವನಿ ಪಾರ್ವತಿ ಭುಜಗಭೂಷಣರಾಣಿ ಕಲುಷ- ದಿವಾಕರೆ ಮಾನಿತೋದ್ಧರೆ4 ತಪ್ಪು ಸಹಸ್ರವಿದ್ದರು ಮನದೊಳಿಪ್ಪುದಜಸ್ರ ಜಗದಾದಿಮಾಯೆ ಕಪ್ಪುಕಂಠನ ರಾಣಿ ವರಕಂದರ್ಪಧಿಕತರೂಪೆ ಸಾಧು ಪ- ದ ಪ್ರಸಾದವ ಪಾಲಿಸೆನ್ನಲಿ ಬಪ್ಪನಾಡಿನ ಭದ್ರದಾಯಕಿ5
--------------
ತುಪಾಕಿ ವೆಂಕಟರಮಣಾಚಾರ್ಯ
(ಬಪ್ಪನಾಡಿನ ಪಂಚದುರ್ಗೆ) ಮಂಗಲಂ ಶ್ರೀಪಂಚದುರ್ಗೆಗೆ ಜಯ ಮಂಗಲಾರತಿಯೆತ್ತಿ ಶ್ರೀಮಹೇಶ್ವರಿಗೆಪ. ಶಂಕರನಂಕಾಲಂಕಾರಿಗೆ ಕುಂಕುಮಬೊಟ್ಟಕಸ್ತೂರಿ ಲಲಾಟೆಗೆ ಪಂಕಜಗಂಧಿ ಶ್ರೀಪಾರ್ವತಿಗೆ1 ಕೋಕಿಲಗಾನೆಗೆ ಕೋಕಪಯೋಜೆಗೆ ಶ್ರೀಕಂಠನರ್ಧಾಂಗಿ ಶ್ರೀಗೌರಿಗೆ ಏಕದಂತನ ಜನನಿಗೆ ಜಗದಂಬೆಗೆ ಲೋಕನಾಯಕಿ ಶ್ರೀಮಹಾಕಾಳಿಗೆ2 ಕಂಜದಳಾಕ್ಷಿಗೆ ಕಲಧೌತಗಾತ್ರೆಗೆ ಕುಂಜರಗಮನೆ ಕಂಧರಜಾತೆಗೆ ಮಂಜೀರನೂಪುರರಣಿತಪದಾಬ್ಜೆಗೆ ನಂಜುಂಡನ ಮನಮಂಜುಳೆಗೆ3 ಅಂಗಜರೂಪೆಗೆ ಮಂಗಲದಾತೆಗೆ ಭೃಂಗಕುಂತಳೆ ಸರ್ವಮಂಗಲೆಗೆ ಬಂಗಾರಮಕುಟೋತ್ತಮಾಂಗದಿ ಧರಿಸಿದ ಸಂಗೀತಲೋಲೆಗೆ ಶರ್ವಾಣಿಗೆ4 ರೂಢಿಗಧಿಕ ಬಪ್ಪನಾಡಿಗೊಡತಿಯಾಗಿ ಮೂಡಿತೋರಿದ ಶ್ರೀಮುಕಾಂಬಿಕೆಗೆ ಕ್ರೋಡಾವತಾರ ಲಕ್ಷ್ಮೀನಾರಾಯಣ ಸೊಸೆ ಬೇಡಿದಿಷ್ಟವನೀವ ಸರ್ವೇಶೆಗೆ5
--------------
ತುಪಾಕಿ ವೆಂಕಟರಮಣಾಚಾರ್ಯ
(ಬಾಗಿಲು ತಡೆ) ಸಾರಸ ನಿಲಯೆ ಸಾಗರ ತನಯೆ ಸಾರೆ ಬಂದೆನು ಈಗ ಬೇಗ ಸಾರಿ ಬಾಗಿಲ ತೆಗೆ ಬೇಗ ಪ. ಸಾರು ಸಾರೆಲೊ ಸಾರಿಕೂಗುವನಾರೊ ಸಾರು ಬಾಗಿಲ ತೆಗೆ ನಾನು ಅ.ಪ. ಏಕಿಂತು ಕೋಪವೆ ಕೋಕಿಲಾರವೆ ನೀಂ ಕಟಾಕ್ಷಿಸು ಎನ್ನ ಮುನ ಸಾಕುಮಾಡುವುದಿದೆನ್ನ 1 ಸಾಕು ಸಾಕಿಂತು ಏಕೆ ಕೂಗುತಿರ್ಪೆ ಕಾಕು ನುಡಿಗಳುಸಲ್ಲ 2 ಪುಂಡರ ತಡೆವುದ ಕಂಡುಂಟು ಜಗದೊಳು ಗಂಡನ ತಡೆವರೆ ಭಾಮೆ ರಾಮೆ ಕಂಡವರೇನೆಂಬರೆ ಭಾಮೆ 3 ಗಂಡನಾರಿಗೆ ಹೆಂಡತಿಯಾರಿಗೆ ಪುಂಡಾಟವಾಡದೆ ಪೋಗು ಸಾಗು ಭಂಡನಾಗಿರ್ಪೆ ಪೋಗು 4 ವಲ್ಲಭೆ ನಿನ್ನೆದೆ ಕಲ್ಲಾಗಿರುವುದೆ ಬಲ್ಲವಳೆಂಬುವುದೆಲ್ಲೆ 5 ಬಲ್ಲೆ ಬಲ್ಲೆನೀ ಚಲ್ಲಾಟಗಳ ಸೊಲ್ಲಿಸದಾರನ್ನು 6 ದಶರಥರಾಮನೆ ಸೀತೆ ಖ್ಯಾತೆ ಪುಸಿಯಲ್ಲವೆಲೆ ಭೀತೆ 7 ನಿಶಿಚರರಿಲ್ಲಿಹರೇನೈ ಜ್ಞಾನಿ ವಿಷಮವರ್ತನವೇನೈ 8 ಅಂಗನೆ ನಿನ್ನ ಮೋಹನಾಂಗನಾದ ಶ್ರೀ ರಂಗ ನಾನೆಲೆ ಚಪ ಲಾಕ್ಷಿ ಲಕ್ಷ್ಮಿ | ಭಂಗಿಸಬೇಡೆನ್ನ ಲಕ್ಷ್ಮಿ 9 ತುಂಗ ವಿಕ್ರಮ ರಘು ರಾಮ ಶ್ಯಾಮ ರಂಗ ಕಾರುಣ್ಯಧಾಮ 10 ಪರಿ ಪೇಳುತೆ ಕೈಪಿಡಿದಳು ತ ನ್ನೋಪನ ವಂದಿಸಿ ರಾಣಿ ರಮಣಿ ಕೋಪರಹಿತೆ ಸುವಾಣಿ 11 ಭೂಪಶೇಷಾದ್ರೀಶನು ಕಾಂತೆಯ ಕೈಪಿಡಿದನು ನಲವೇರೆ ಅರರೆ ತಾಪಸನುತ ನಲವೇರೆ 12
--------------
ನಂಜನಗೂಡು ತಿರುಮಲಾಂಬಾ
(ಭೀಮನಕಟ್ಟೆ ಶ್ರೀರಾಮ) ಅಚ್ಯುತಪ್ರೇಕ್ಷ ಕರಾರ್ಚಿತ ರಾಮ ರಕ್ಷಿಸು ಚಂದನಚಾರ್ಚಿತ ರಾಮ ಪ. ದಾಸಾಗ್ರಣಿ ಭೀಮಸೇನನ ಮನ ದಾಸೆ ಪೂರಿಪೆನೆಂದು ಬಂದಿಲ್ಲಿ ವಾಸವಾಗಿಹೆ ತುಂಗಾ ತೀರದಿ ಜಾನ ಕೀಶ ನಿನ್ನನು ಕಂಡೆ ಮೋದದಿ 1 ಶ್ರೀ ರಾಮದುರಿತಾಬ್ಧಿವಾರಣ ಹಾದಿ ದೋರೊ ಮುಂದಕೆ ಫಲಪೂರಣ 2 ಕೀಶಗೆ ಕಪಿರಾಜ್ಯ ಕೊಡಿಸಿದಿ ವಿ- ಭೀಷಣನನು ತೋಷಗೊಳಿಸಿದಿ ಶೇಷಾದ್ರಿ ಶಿಖರದಿ ನಿಲಿಸಿದಿ ನೀನೆ ಪೋಷಿಪನೆಂದಿಗು ನಿರುತದಿ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಭೀಮಸೇನ ಪ್ರಾರ್ಥನೆ) ಭೀಮಸೇನ ಸಕಲಸತ್ವಧಾಮ ರಕ್ಷಿಸೆನ್ನ ಬೇಗ ಸಾಮಗಾನ ಲೋಲ ಕೃಷ್ಣ ಪ್ರೇಮರಸಕೆ ಪಾತ್ರನಾದ ಪ. ಮಂಗಲಾಚರಿತ್ರ ನಿನ್ನ ಅಂಗಸಂಗದಿಂದ ಬಹು ತುಂಗ ಗಿರಿಯು ಒಡೆದು ಶತಶೃಂಗವೆನಿಸಿತು ಅಂಗುಲಿ ಪ್ರಹಾರದಿಂದ ಶಿಂಗತತಿಗಳನ್ನು ಬಹಳ ಭಂಗಬಡಿಸಿ ಬಾಲಲೀಲ ರಂಗದಲ್ಲಿ ಬಲುಹ ತೋರ್ಪ 1 ಹಸಿದ ವೇಳೆಯಲ್ಲಿ ಮೆದ್ದ ವಿಷದ ಭಕ್ಷ್ಯ ಜೀರ್ಣಗೊಳಿಸಿ ಉಶನ ಮಂತ್ರದಿಂದ ಹಲ್ಲ ಮಸೆಯುತಾ ಬಂದ ಅಸುರ ವೇಶದಷ್ಟಾಕ್ಷಿಗಳ ಮಶಕದಂತೆ ಬಡಿದು ಕೆಡಹಿ ಕುಶಲದಿಂದ ನಿದ್ರೆಗೈದ ಅಸಮಶಕ್ತಿ ಪೂರ್ಣಮೂರ್ತಿ 2 ನಗಗಳ ಮೇಲೇರುತ್ತ ಹಣ್ಣುಗಳನೊಂದೊಂದಾಗಿ ಕರದಿ ತೆಗೆದು ತಿಂಬ ಕೌರವರನು ನಗುತ ನೋಡುತಾ ನೆಗೆದು ಬೀಳ್ವ ತೆರದಿ ತರುಮೂಲಗಳಾ ತುಳಿದು ಕೆಡಹಿ ದೇವಾ- ಕೊಂಡ 3 ಗೂಗೆಯಂತೆ ನಿನ್ನ ಬಳಿಗೆ ಸಾಗಿ ಬಂದು ಶಕುನಿಮುಖರು ಯೋಗನಿದ್ರೆ ತಿಳಿಯದೆ ಚೆನ್ನಾಗಿ ಬಂಧಿಸಿ ಭಾಗೀರಥಿಯ ಜಲದಿ ದೂಡೆ ವೇಗದಿ ಪಾತಾಳವೈದಿ ನಾಗಕನ್ಯೆರಿತ್ತ ರಸವ ಬೇಗ ಸವಿದು ತಿರುಗಿ ಬಂದ 4 ದುರುಳರಿಂದ ರಚಿತವಾದ ಅರಗಿನ ಮನೆಗೆ ಹೋಗಿ ಕಾಲ ನಿರುತಕಿನಿಸಿಲಿ ಇರುಳಿನಲ್ಲಿ ತಾನೆ ಅಗ್ನಿ ಇರಿಸಿ ಬೇಗಲೆದ್ದು ಸಹೋ ದರರನೆತ್ತಿ ಬಹು ಯೋಜನಕೆ ಸರಿದು ಪೋದ ಶಕ್ತರರಸ 5 ಡೊಂಬಿಮಾಳ್ಪನೆಂದು ಬಹಳ ಡಂಬರದಿಂದಿದಿರಾ ಹಿ- ಕದಂಬ ವೈರಿಯ ಅಂಬರದೊಳಗೈದಿ ವಜ್ರಕಂಬದಂತೆ ಹೊಳವ ಬಹು ಸ್ತಂಭದಿಂದ ಕೆಡಹುತ ಹೈಡಿಂಬನೆಂಬ ಮಗುವ ಪಡೆದ 6 ನಗರ ದೊಳ್ವೈದಿಕರಂತೆ ವಾಸವಾಗಿ ಪೋಕ ಬಕನ ಬಾಧೆಯಿಂದ ಶೋಕಗೊಳುವರ ಸಾಕುವೆನೆಂದೆದ್ದು ನಾನಾ ಶಾಖ ಭಕ್ಷಾನ್ನಗಳ ತಾನೆ ಸ್ವೀಕರಗೊಂಡಸುರನನ್ನು ಸೋಕಿ ಸೀಳಿ ಬಿಸುಟ ದೊರೆಯೆ 7 ವಿಪ್ರ ವೇಷದಿಂದ ದ್ರುಪದಸುತೆಯನೊಲಿಸಿ ಕೃದ್ಧ ನೃಪರ ಗೆದ್ದು ರುಕ್ಮಿಣೀಶ ಕೃಪೆಯಾ ಬಲಕೊಂಡು ಅಪರಿಗಣ್ಯ ಪೌರುಷಕಿಂನುಪಮೆಯಿಲ್ಲವೆಂದು ಸರ್ವ ಖಪತಿವರರು ಪೊಗಳುತಿರಲು ತ್ರಿಪುರವೈರಿಯಂತೆ ಮೆರೆದ 8 ಅಂಧ ನೃಪನ ಮಾತ ಕೇಳಿ ಇಂದ್ರಪ್ರಸ್ಥ ಪುರಕೆ ರಾಜ ನೆಂದು ನಿಂದು ಮಗಧಾದಿಗಳ ನೊಂದೆ ನಿಮಿಷದಿ ಕೊಂದು ರಾಜಸೂಯಮೇಧದಿಂದ ಸಕಲಯಜ್ಞೇಶಗೋ- ಕೊಂಡ 9 ದ್ಯೂತ ನೆವದಿ ಸಕಲ ರಾಜ್ಯ ಸೋತು ವನಕೆ ಪೋಗಿ ಲಕ್ಷ್ಮೀ- ನಾಥ ಕರುಣ ಬಲದಿಂದ ಸುರವ್ರಾತವಡಗಿಸಿ ಭೂತನಾಥನೋರದಿ ಬಹಳ ಖ್ಯಾತ ಕೀಚಕಾದಿಗಳನು ಘಾತಿಸಿ ಗಂಧರ್ವನೆಂದಜ್ಞಾತವಾಸ ಕಳದ ಧೀರ 10 ದುರುಳ ಕೌರವರನು ಗದೆಯ ತಿರುಹಿ ಕೆಡಹಿ ಧರಣಿಭರವ ಸುರಪಸೂನು ಸಹಿತಲ್ಲಿಳುಹಿ ಪರಮ ಹರುಷದಿ ಹರಿಯ ನೇಮದಿಂದ ನಾಗಪುರವನಾಳಿ ವಿಷ್ಣುಭಕ್ತಿ ಸುಜನ ತತಿಯ ಪೊರೆದು ಪದ್ಮಜಾತನಾಹ11 ದುಷ್ಟವೈರಿ ಜನರ ಗೆದ್ದು ಅಷ್ಟ ಭಾಗ್ಯ ಸಹಿತ ದೇಹ ಪುಷ್ಟಿ ಜ್ಞಾನ ದೃಷ್ಟಿಗಳನು ಕೊಟ್ಟು ಕರುಣಿಪಾ ಸೃಷ್ಟಿಗೊಡೆಯ ಸರ್ಪರಾಜ ಬೆಟ್ಟದಲ್ಲಿ ನಿಂದು ಭಕ್ತ- ಭೀಷ್ಟವರದನೊಲಿಪ ತೆರದಿ ಸುಷ್ಠುಪ್ರೇಮವಿಟ್ಟು ಕಾಯೊ 12
--------------
ತುಪಾಕಿ ವೆಂಕಟರಮಣಾಚಾರ್ಯ
(ಮಂಗಳೂರಿನ ಶ್ರೀ ವೆಂಕಟರಮಣ ದೇವರನ್ನು ನೆನೆದು) ವೈರಿ ವಿದಾರಣ ವೀರ ವೆಂಕಟಪತಿಯಾ ಪ. ಸುಜನಾರ್ತಿ ವಾರಣಾ ಮೃತ್ಯಬ್ಧಿತಾರಣ ಧೀರತನದಿ ಕಠಾರಿ ನಡುವಿಗೆ ಸೇರಿ ದಟ್ಟಿಯನುಟ್ಟು ಕೊಂಕಣ ಸ್ವಾರಿ ಬರುವನ 1 ಪಿಡಿವುತ್ತ ನಡುನಡು- ಮತ್ತಲ್ಲಿ ಮೆರೆವಾ ಸಿರಿನಲ್ಲ ದಾಸರ ಮಸ್ತಕದಿ ಕರ ಪಲ್ಲವವನಿರಿಸೆಲ್ಲರನು ತಡವಿಲ್ಲದಲೆ ಸುಖದಲ್ಲಿ ಸಲಹುವÀ 2 ಮಂಗಳಾಭಿದ ಪಟ್ಟಣಾಧೀಶಾ ಪದ್ಮಾ ಪುರುಷಾ ಶ್ರೀ ವೆಂಕಟೇಶಾ ತುಂಗವಿಧಿ ಮಾಲಿಕಾಭೂಷಾ ಅತಸೀ ಭಾಸಾ ಸ್ಮಿತಪೂರ್ಣಭಾಷಾ ಇಂಗಿತಗಳರಿತೀವ ಸೌಖ್ಯ ತರಂಗಗಳ ಸುರ ಸಾರ್ವಭೌಮ ಕು- ರಂಗ ನಯನಾಲಿಂಗಿತಾಂಗ ಮತಂಗಜಾವರಮೋಹಿರೂಪನ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಮದ್ರಾಸಿನ ತಿರ್ವಳಕೇಣಿ ಪಾರ್ಥಸಾರಥಿ) ಏನು ಮಾಡಲಿನ್ನು ನೀನಲ್ಲದೆ ಯಾದಾರ ಬೇಡಲಿನ್ನು ಪ. ಮಾನಿನಿ ದ್ರೌಪದಿ ಮೊರೆಯಿಡುವುದ ಕೇಳಿ ಸಾರಥಿ ದೇವ ಅ.ಪ. ನೀನಿತ್ತ ಸೌಭಾಗ್ಯದ ಗರ್ವದಿ ಎನ್ನ ಧ್ಯಾನಾದಿಗಳ ಮಾಡದೆ ನಾನಾ ವಿಧದ ದುರ್ಮಾನುವಾದುದರಿಂದ ನೀನೆ ಸದ್ಗತಿಯೆಂದು ಧ್ಯಾನಿಸಿಲ್ಲಿಗೆ ಬಂದೆ 1 ಬಡತನದಿಂದಿರಲು ಸಕಲ ಸುರ- ರೊಡೆಯ ನೀ ಕೈ ಪಿಡಿದು ರೂಢಿ ಮದದಿ ನಿನ್ನನು ಬಿಟ್ಟು ಕಡೆಗೆ ನಿನ್ನಯ ಪಾದದೆಡೆಗೆ ಬಂದೆನು ದೇವ 2 ಪಶ್ಚಿಮ ವಾರಿಧಿಯ ತೀರದಲಾದ ದುಶ್ಚರಿತ್ರೆಯ ತಾಳದೆ ಆಶ್ಚರ್ಯತಮವಾದ ಸಚ್ಚರಿತ್ರನೆ ನಿನ್ನ ನೆಚ್ಚಿ ಬಂದಿಹೆನೊ ವಿಪಶ್ಚಿತರೊಡೆಯನೆ 3 ನಕ್ಷತ್ರಗಳಂದಿಂದಲು ಯೆನ್ನಪರಾಧ- ವಕ್ಷಯವಾಗಿರಲು ಅಕ್ಷರಿ ವಂದ್ಯ ನೀ ಲಕ್ಷ ಬಿಡುವುದೆ ಕ- ಟಾಕ್ಷದಿಂದಲಿ ನೋಡಿ ರಕ್ಷಿಸು ಕರುಣದಿ 4 ಎಷ್ಟು ಕರ್ಮಿಯಾದರು ನಿನ್ನಲಿ ಮನ- ವಿಟ್ಟು ಬಂದಿರುವೆನಲ್ಲ ದುಷ್ಟಮರ್ದನ ಶಿಷ್ಟರಕ್ಷಣ ಭಾಜಕ ಜ- ನೇಷ್ಟದಾಯಕ ಸೃಷ್ಟ್ಯಾದೃಷ್ಟಕರ್ತ 5 ನಟನ ಮಾಡುವ ಬೊಂಬೆಯ ಪೋಲುವ ಯೆನ್ನ ಹಟದಿಂದ ದಣಿಸುವುದೆ ವಟಪತ್ರ ಶಾಯಿ ಧೂರ್ಜಟಿ ವಂದ್ಯ ಅಂಜಲಿ ಪುಟನಾಗಿ ಬೇಡುವೆ ಘಟಿಸೊಭಿಲಷಿತವ 6 ಎಂದಿಗಾದರು ನಿನ್ನಯ ಪಾದಯುಗಾರ- ವಿಂದ ದರ್ಶನವಾಗಲು ಭವ ಸಿಂಧುವ ದಾಟುವೆ- ನೆಂದು ಬಂದಿರುವೆ ಸನಂದನಾದಿ ವಂದ್ಯ 7 ಕೂರ್ಮ ವರಾಹ ನಾರಸಿಂಹ ವಾಮನ ಶ್ರೀ ಭಾರ್ಗವ ರಾಮಕೃಷ್ಣ ಬೌದ್ಧ ಕಲ್ಕಿಯಂಬ ದಿವ್ಯ ನಾಮಗಳನು ಬಿಟ್ಟು ಕಾಮಲಾಲಸನಾಗಿ 8 ಒಂದು ನಿಮಿಷವಾದರು ತತ್ವಾಧಾರ ವಿಂದ ದರ್ಶನ ಮಾಡಲು ಹೊಂದಿದಘಗಳೆಲ್ಲ ಬೆಂದು ಹೋಗುವುದೆಂದಾ- ನಂದತೀರ್ಥಚಾರ್ಯರೆಂದ ನುಡಿಯ ನಂಬಿ 9 ದ್ವೇಷಿ ಮಾನವರ ಮುಂದೆ ನಾನಾ ವಿಧ ಕ್ಲೇಶವ ತಾಳ್ದೆ ಹಿಂದೆ ಘಾಸಿಯಾಗಿ ನಾನಾ ದೇಶ ದಾಟಿ ಬಂದೆ ಮೀಸಲಾದೆ ನಿನ್ನ ದಾಸ ದಾಸ್ಯನೆಂದೆ 10 ಜನರೊಳು ಪ್ರಮಿತನಾಗಿ ಬಾಳಿದ ಮಾನ- ವನು ಮಾನಹೀನನಾಗಿ ತನುವ ಪೊರೆದನತಿ ಘನಕ್ಲೇಶವೆನುತ ಅ- ರ್ಜುನನಿಗೆ ಉಪದೇಶವನು ಪೇಳಿದವ ನೀನೆ 11 ಯುಕ್ತಿ ಒಂದನು ಕಾಣೆನು ದೇಹದಿ ದೃಢ ಶಕ್ತಿಯಿಲ್ಲದವ ನಾನು ಮುಕ್ತಾಶ್ರಯ ಸರ್ವ ಶಕ್ತಿ ನೀನಿಹ ಪರ- ಭುಕ್ತಿ ಮುಕ್ತಿದನೆಂಬ ವಿರಕ್ತಿಯಿಂದಲಿ ಬಂದೆ 12 ಕಾಸೆಲ್ಲ ವ್ಯಯವಾಯಿತು ಎನಗೆ ಪರದೇಶವಾಸವಾಯಿತು ಆಸೆ ಬಿಡದುದರ ಘೋಷಣೆಗಿನ್ನವ- ಕಾಶವೊಂದನು ಕಾಣೆ ಶ್ರೀಶ ನೀನರಿಯೆಯ 13 ನಿಲ್ಲಲಾಶ್ರಯವನು ಕಾಣೆ ಪೋಗುವೆನೆಂದ- ರೆಲ್ಯು ಮಾರ್ಗವನು ಕಾಣೆ ಬಲ್ಲಿದ ವೈರಿಗಳಲ್ಲಿ ತುಂಬಿಹರರಿ- ದಲ್ಲಣ ನೀ ಎನ್ನ ಸೊಲ್ಲ ಲಾಲಿಸು ಕೃಷ್ಣ 14 ಅಶನವಸನ ಕಾಣದೆ ದೇಶವ ಸುತ್ತಿ ಬಸಿದು ಬೆಂಡಾಗಿಹೆನು ಉಶನಾಂiÀರ್i ಶಿಷ್ಯನ ವಶದಿಂದೆತ್ತಿ ಪೃಥ್ವಿಯ ದಶನಾಯಕರಿಗಿತ್ತ ಅಸಮಸಾಹಸ ದೇವ 15 ಮಾಡಿದಪರಾಧಕೆ ಮಾನಹಾನಿ ಮಾಡಿದುದು ಸಾಲದೆ ಬೇಡುವೆ ದೈನ್ಯದಿ ಪಾಡುವೆ ಮಹಿಮೆಯ ರೂಢಿಯೊಳಗೆ ದಯಮಾಡು ಇನ್ನಾದರು 16 ಇನ್ನಾದರೂ ಮನದಿ ಪಶ್ಚಾತ್ತಾಪ ವನ್ನು ತಾಳೊ ದಯದಿ ಕಣ್ಣ ಕಟ್ಟಿ ಕಾಡಿನೊಳು ಬಿಟ್ಟ ತೆರದೊಳಿಂ- ತೆನ್ನನು ಬಳಲಿಪದನ್ಯಾಯವಲ್ಲವೆ 17 ನಷ್ಟವೇನಹುಣನು ಎನ್ನಲಿ ಕ್ರೋಧ ಬಿಟ್ಟು ಬಾಧಿಸುತ್ತಿರಲು ಕೃಷ್ಣ ನೀ ಕರುಣದಿ ಕಷ್ಟ ಬಿಡಿಸಿ ಕಡೆ ಗಿಷ್ಟು ತಾತ್ಸಾರದಿಂದ ಕಷ್ಟಗೊಳಿಸಿದೆ 18 ಇಂದ್ರಾದಿ ಸುರರುಗಳು ಕೆಲವು ಕಾಲ ನೊಂದು ಭಾಗ್ಯವ ಪಡದು ಇಂದಿರೇಶ ನಿನ್ನ ಬಂಧಕ ಶಕ್ತಿಯಾ ನಂದ ತಿಳಿದಂತೆ ಮಂದನಾನರಿವೆನೆ 19 ಆನೆಯ ಭಾರವನು ಹೊರಲು ಸಣ್ಣ ಶ್ವಾನ ಸಹಿಸಲಾಪದೆ ದೀನ ಮಾನವನೆಂದು ಧ್ಯಾನಿಸಿ ಮನದಲಿ ಘನ್ನ ದುಖ್ಖವ ಕಳೆಯಾನಂಥ ಮೂರುತಿ20 ನೀನಿತ್ತ ಮಾನವನು ನೀ ಕಳದುದ ಕಾನು ಮಾಡುವದೇನಯ್ಯ ದಾನವಾರಿ ಸುರಧೇನು ನಿನ್ಡಿಗಳ ಧ್ಯಾನ ಮಾಡುತಲಿ ಸುಮ್ಮಾನದಿಂದಿರುವೆನು 21 ಸಾಕು ಸಾಕು ಮಾಡಿದೆ ಎನ್ನನು ಬಹು ನೀಕರಿಸುತ ದೂಡಿದೆ ಬೇಕಾದರೆ ಭಕ್ತ ನೀ ಕಪಾಲನ ಪ- ರಾಕೆಂಬ ಬಿರುದಿಂದ ಸಾಕುವದುಚಿತವೆ 22 ಅಂಬರೀಷವರದ ಸ್ವಭಕ್ತ ಕು- ಟುಂಬಿಯಂಬ ಬಿರುದ ನಂಬಿದ ಮೇಲೆನಗಿಂಬುದೋರದೆ ವೃಥಾ ಡಂಬರವ್ಯಾಕಿನ್ನು ಶಂಬರಾರಿಯ ಪಿತ 23 ಹಂಸವಾಹನ ಜನಕ ದಾಸಮದ- ಭ್ರಂಶಕನೆಂದನ- ಕ ಸಂಶಯವಿಲ್ಲದೆ ತಿಳಿದೆನು ಮಾತುಳ ಕಂಸ ಮರ್ದನ ವಿಪಾಂಸ ಶೋಭಿತ ದೇವ 24 ತರಳ ಪ್ರಹ್ಲಾದ ಧ್ರುವಾದಿಗಳನೆಲ್ಲ ಪೊರೆದನೆಂಬ ಕಥೆಯ ಹಿರಿಯರು ಪೇಳ್ವರು ಭರವಸೆ ಎನಗಿಲ್ಲ ಸಿರಿನಲ್ಲ ನೀಯೆನ್ನ ಬರಿದೆ ಬಿಟ್ಟದ ಕಂಡು25 ವಿಜಯಸಾರಥಿ ನಿನ್ನಯ ಮೂರ್ತಿಯ ಕಂಡು ಭಜಿಸಿದ ಮೇಲೆನ್ನನು ವಿಜಯ ಪೊಂದಿಸದಿರೆ ತ್ರಿಜಗವು ನಗದೇನೊ ಭುಜಗ ಭೂಷಣ ವಂದ್ಯ ದ್ವಿಜರಾಜ ಗಮನನೆ 26 ಕುಂದಣ ವರ್ಣವಾದ ಕೇತಕಿಯನು ಗಂಧಕೆ ಮರುಳನಾಗಿ ಬಂದು ಕುಸುಮಧೂಳಿಯಿಂದ ಲಂಡನಾದ ತುಂದಿಲೋದರ ಮಿಳಿಂದನಂದದಿ ಸಿಕ್ಕಿ 27 ಬೇಡುವದೇನೆಂದರೆ ನಿನ್ನನು ಧ್ಯಾನ ಮಾಡಿ ಪಾಡುವ ಭಾಗ್ಯವ ನೀಡು ನೀಚರನೆಂದು ಬೇಡದಂದದಿ ಮಾಡು ರೂಢಿಯೊಳಗೆ ದಯಮಾಡು ನೀ ನಿರುಪದಿ 28 ಇನ್ನು ತಾ ತಾಳಲಾರೆ ಕ್ಷಣೆ ಕ್ಷಣೆ ನಿನ್ನ ಪೊಗಳಲಾರೆ ಪನ್ನಗಾಚಲವಾಸ ಪರಮ ಪುರುಷ ಪ್ರ- ಸನ್ನ ವೆಂಕಟೇಶ ಪಾಲಿಸು ಕೃಪೆಯಿಂದ 29
--------------
ತುಪಾಕಿ ವೆಂಕಟರಮಣಾಚಾರ್ಯ
(ಮೂಲ್ಕಿಯ ನರಸಿಂಹ ದೇವರು) ರಕ್ಷಿಸು ಮನದಾಪೇಕ್ಷೆಯ ಸಲಿಸುತ ಲಕ್ಷ್ಮೀನರಹರಿ ರಾಕ್ಷಸವೈರಿ ಪ. ಅಕ್ಷಮ ದುಶ್ಯೀಲ ದುವ್ರ್ಯಾಪಾರದಿ ಕುಕ್ಷಿಂಭರನೆಂದುಪೇಕ್ಷೆಯ ಮಾಡದೆ ಅ.ಪ. ಉಭಯ ಶುಚಿತ್ವವು ಊರ್ಜಿತವೆನೆ ಜಗ- ದ್ವಿಭು ವಿಶ್ವಂಭರ ವಿಬುಧಾರಾದ್ಯ ಶುಭಮತಿ ಸಂಸ್ಥಿತಿಯಭಯವ ಪಾಲಿಸೊ ತ್ರಿಭುವನಮೋಹನ ಪ್ರಭು ನೀನನುದಿನ1 ಸಿಂಧುಶಯನ ನಿತ್ಯಾನಂದ ಗುಣಾಬ್ಧೇ ಹಿಂದಣ ಪಾಪವು ಮುಂದೆಸಗದ ರೀತಿ ಮಂದರಾದ್ರಿಧರ ಮಾಮವ ದಯಾಕರ 2 ಪಾಪಾತ್ಮರಲಿ ಭೂಪಾಲಕನು ನಾ ಶ್ರೀಪತಿ ಕರುಣದಿ ಕಾಪಾಡುವುದು ಗೋಪೀರಂಜನ ಗೋದ್ವಿಜರಕ್ಷಣ ಕಾಪುರುಷರ ಭಯ ನೀ ಪರಿಹರಿಸಯ್ಯ 3 ಸರ್ವೇಂದ್ರಿಯ ಬಲ ತುಷ್ಟಿ ಪುಷ್ಟಿಯಿತ್ತು ಸರ್ವಾಂತರ್ಯದೊಳಿರುವನೆ ಸಲಹೊ ದುರ್ವಾರಾಮಿತ ದುರ್ವಿಷಯದಿ ಬೇ- ಸರ್ವೇನು ಪನ್ನಗಪರ್ವತವಾಸನೇ 4 ಶರಣಾಗತನಾಗಿ ಸೆರಗೊಡ್ಡಿ ಬೇಡುವೆ ವರ ಮೂಲಿಕಪುರ ದೊರೆಯೇ ಹರಿ ಲಕ್ಷ್ಮೀನಾರಾಯಣ ತ್ರಿಜಗ ದ್ಭರಿತ ಉತ್ಪ್ರೇರಕ ಸ್ಥಿರಭಕ್ತಿಯನಿತ್ತು 5
--------------
ತುಪಾಕಿ ವೆಂಕಟರಮಣಾಚಾರ್ಯ