ಒಟ್ಟು 415 ಕಡೆಗಳಲ್ಲಿ , 73 ದಾಸರು , 329 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಾಸರೆ ಪುರಂದರದಾಸರು ಲೇಸಾಗಿ ಎನಗೆ ಸುಮಾರ್ಗವನು ತೋರಿದರು ಪ ಅತಿ ಮುಗ್ಧನಾಗಿ ದುರುಳರಾ ದುರಾಚಾರದಲ್ಲಿ ಮತಿಗೆಟ್ಟು ಮಹಿಯೊಳಗೆ ತಿರುಗುತಿರಲೂ ಅತಿ ದಯಾಪರರಾಗಿ ತನ್ನವನಿವನೆಂದು ಹಿತದಲ್ಲಿ ಪೊರೆದು ಕುಮತಿಯ ಬಿಡಿಸಿದರು1 ಶಬ್ದಾದಿ ಮೊದಲಾದ ವಿಷಯಂಗಳಾ ಕರ್ಮ ದಬ್ಧ್ದಿಯೊಳಗೆ ಬಿದ್ದು ಪೊರುಳುತಿದ್ದಾ ಲುಬ್ಧಕನ ಕರೆದು ದೃಢವಾಗಿ ಸುಜ್ಞಾನದ ಅಬ್ಧಿಯೊಳಗಿಟ್ಟು ಕರುಣದಲಿ ನೋಡಿದರು 2 ಹಿಂದೆ ಏಸೇಸು ಜನ್ಮ ಜನಿಸಿ ಅನ್ಯ ಕಾಲ ನೊಂದ ನರನಾ ತಂದು ವೈರಾಗ್ಯದೊಳು ಪೊಗಸಿ ಸೌಖ್ಯವ ಪರಶಿ ತಂದೆ ಮಕ್ಕಳನು ಸಾಕಿದಂತೆ ಸಾಕಿದರು3 ಉಪದೇಶವಿತ್ತರು ಸುಪ್ರೀತಾರ್ಥದಲಿ ಬಂದು ಜಪ ನಿಜಾಸನ ಧ್ಯಾನ ಜ್ಞಾನದಿಂದ ಸಪುತೆರಡು ಲೋಕದ ಒಡೆಯನ್ನ ಪಾದವ ಸಫಲವಾಗುವಂತೆ ಸಾಧನವ ಪೇಳಿದರು 4 ದಾರಿದ್ರ ದೋಷವ ಸೇರಿದ ಮಾನವನಿಗೆ ಆರು ಕೊಡದಲೆ ಧೇನು ದೊರಕಿದಂತೆ ಕಾರುಣ್ಯದಲಿ ಗುರು ಪುರಂದರದಾಸರು ಮೂರುತಿ ವಿಜಯವಿಠ್ಠಲನ್ನ ತೋರಿಸಿದರು 5
--------------
ವಿಜಯದಾಸ
ದಾಸರೆಂದರೆ ಪುರಂದರದಾಸರಯ್ಯ ಪ ವಾಸುದೇವ ಕೃಷ್ಣನ್ನ ಸೂಸಿ ಪೂಜಿಸುವಅ.ಪ ಗ್ರಾಸಕಿಲ್ಲದೆ ಪೋಗಿ ಪರರ ಮನೆಗಳ ಪೊಕ್ಕುದಾಸನೆಂದು ತುಲಸಿ ಮಾಲೆ ಧರಿಸಿಬೇಸರಿಲ್ಲದೆ ಅವರ ಕಾಡಿ ಬೇಡಿ ಬಳಲಿಸುತಕಾಸುಗಳಿಸುವ ಪುರುಷನವ ದಾಸನೇ 1 ಡಂಭಕದಿ ಹರಿಸ್ಮರಣೆಮಾಡಿ ಜನರಾ ಮುಂದೆಸಂಭ್ರಮದಿ ತಾನುಂಬ ಊಟ ಬಯಸಿಅಂಬುಜೋದ್ಭವ ಪಿತನ ಆಗಮಗಳರಿಯದಲೆತಂಬೂರಿ ಮೀಟಲವ ಹರಿದಾಸನೇ 2 ಯಾಯವಾರವ ಮಾಡಿ ವಿಪ್ರರಿಗೆ ಮೃಷ್ಟಾನ್ನಪ್ರೀಯದಲಿ ತಾನೊಂದು ಕೊಡದ ಲೋಭಿಮಾಯ ಸಂಸಾರದಲಿ ಮಮತೆ ಹೆಚ್ಚಾಗಿಟ್ಟುಗಾಯನವ ಮಾಡಲವ ದಾಸನೇನೈಯ3 ಪಾಠಕನ ತೆರದಲ್ಲಿ ಪದಗಳನೆ ತಾ ಬೊಗಳಿಕೂಟ ಜನರ ಮನವ ಸಂತೋಷಪಡಿಸಿಗೂಟ ನಾಮಗಳಿಟ್ಟುಕೊಂಡ್ಹಿರಿಯ ತಾನೆನುತ,ತೂಟಕವ ಮಾಡಲವ ದಾಸನೇನೈಯ4 ಪುರಂದರ ದಾಸರಿವರೈಯ 5
--------------
ವ್ಯಾಸರಾಯರು
ದುಂಡು ಮುಖವುಳ್ಳ ಹುಡುಗನ ಕಂಡಿರಾಚಂಡನಾಡುತ ಬಂದ ಚದುರೆಯರ ಓಣಿಯಲಿ ಪ ಕರದೊಳಗೆ ಕೊಳಲಿಹುದು ಚರಣದೊಳು ರುಳಿಗೆಜ್ಜೆಕೊರಳೊಳಗೆ ಸರಪದಕ ಗುರುಳು ಮುಖದಿಜರದೊಲ್ಲಿ ಹೊದ್ದಿಹನು ಸ್ಮರನ ಮೋಹಿಪ ರೂಪಸಿರಿಯ ಕಂಡರೆ ಅವನ ಪರರು ಬಿಡರಮ್ಮ 1 ವಾರಿಜಾಕ್ಷೆರೆ ಬಹಳ ಜಾರಚೋರೆನ್ನ ಮಗವಾರೆನೋಟದಿ ಮನಸು ಹಾರಿಸುವನುಸಾರಿದರೆ ಮನೆಗಳಿಗೆ ದ್ವಾರಯಿಕ್ಕುತೆ ಬನ್ನಿದೂರು ಪೇಳಲು ಕೇಳಿ ಸಾರಿದೆನು ಮೊದಲೆ 2 ಕಂದನಾಗುವ ಕ್ಷಣದಿ ಒಂದೆ ಪ್ರಾಯದ ಪುರುಷಸುಂದರಾಂಗಿಯಳಾಗಿ ಬರುವನಂದಬಾಲನ ಮಹಿಮೆ ಬಂದು ನಂಬಲಿ ಬೇಡಿಇಂದಿರೇಶನು ಬಹಳ ಮಂದಿ ಮೋಹಿಸುವ 3
--------------
ಇಂದಿರೇಶರು
ದೂರ ನೋಡುವರೆ ರಂಗಯ್ಯ ಎನ್ನ ಪ ದೂರ ನೋಡುವರೇನೋ ಸಂಸಾರ ಶರಧಿಯೊಳಗೆ ಮುಳುಗಿ ದಾರಿಗಾಣದೆ ನೀನೆ ಗತಿ ಮು-ರಾರಿಯೆಂದು ಸಾರಿದ ಮೇಲೆ ಅ.ಪ ಆಸೆ ಬಿಡದೆಲೊ ಕಾಸುವೀಸಕೆ-ಕ್ಲೇಶ ಘನ್ನವೆಲೊ ಈಶ ಯಾರಿಗೆ ಪೇಳಲೊಶವೆಲೊ-ಶ್ರೀಶ ಎನ್ನ ಮನಸಿನಲ್ಲಿ ಬಹಳ ಘಾಸಿಪಟ್ಟೆನೊ-ದಾಶರಥಿ 1 ಭಕುತಿಯಿಲ್ಲವೊ ಅದರ ಹೊರತು-ಮುಕುತಿಯಿಲ್ಲವೊ ಯುಕುತಿಯಿಂದಲಿ ವಲಿವನಲ್ಲವೊ- ಮುಕುತಿದಾಯಕ ನಿನ್ನ ಕಾಣದೆ ಭಕುತಿಗೋಸುಗ ಪರರ ತುತಿಸಿ, ಕಕುಲಾತಿಯಿಂದಲೆನ್ನ- ಶಕುತಿಯೆಲ್ಲ ನಷ್ಟವಾಯಿತು 2 ಪೊರೆಯದಿರುವರೆ ಕರುಣಾಳುಯೆಂಬ-ಬಿರುದ ಬಿಡುವರೆ ಹರಿಯೆ ಯೆನ್ನ ಮರೆತು ಬಿಡುವರೆ- ಕರಿಯು ಹರಿಯೇ ಎಂದು ಕರೆಯೆ ಸಿರಿಗೆ ಪೇಳದೆ ಭರದಿ ಬಂದು, ಪೊರೆದೆಯೆಂಬ ವಾರ್ತೆಕೇಳಿ -ಮರೆಯ ಹೊಕ್ಕೆನೊ ವಿಜಯವಿಠ್ಠಲ 3
--------------
ವಿಜಯದಾಸ
ದೂರಮಾಡು ದೂರಮಾಡು ದುರ್ಜನ ನೆರೆಯ ಸಾರಸಾಕ್ಷನೆ ಬೇಗ ದುಷ್ಟಸಂಗತಿಯ ಪ ಸೇಂದಿ ಸೆರೆ ಕುಡಿದು ಮನಬಂದಂತೆ ಕುಣದಾಡಿ ನಿಂದಿಸಿ ಕಂಡವರಿಂ ತಿಂದು ಲತ್ತೆಯನು ಮಂದಿಯೋಳ್ಮುಖದೋರ್ವ ಹಂದಿಮನುಜರ ದರ್ಶ ನೆಂದೆಂದು ಬೇಡೆನಗೆ ಮಂದರಾದ್ರಿನಿಲಯ 1 ನೂತನದ ಮಾತಾಡಿ ಖ್ಯಾತಿಯಿಂ ತೋರ್ಪಡಿಸಿ ಮಾತುಮಾತಿಗೆ ವಂಚಿಸಾತುರಕೆ ಪರರ ಘಾತಗೈಯುವ ಮಹಪಾತಕರ ಸಂಗ ಮಮ ದಾತ ಜಗನ್ನಾಥ 2 ಧ್ಯಾನದಾಸರ ಕಂಡು ಜ್ಞಾನವಿಲ್ಲದೆ ತುಸು ಹೀನಮಾತುಗಳಾಡಿ ಏನುಕಾಣದಲೆ ಶ್ವಾನನಂದದಿ ಚರಿಪ ಮಾನಹೀನರ ನೆರಳು ಏನಿರಲುಬೇಡ ಮಮಪ್ರಾಣ ಶ್ರೀರಾಮ 3
--------------
ರಾಮದಾಸರು
ದೂರು ಯಾತಕ್ಕೆ ತರಲ್ಯಮ್ಮಾ | ಯಶೋದಮ್ಮ || ವಾರಿಜ ಮುಖಿಯರು ಶೇರದೆ ಹೇಳ್ವರು ಪ ವಂದು ದಿನ ನಾ ಮನಿಯ ಬಿಟ್ಟು ಹೋಗುವೆನೆಯಲ್ಲ್ಯೊ | ಬಂದು ಹೇಳುವರೆಲ್ಲ ಕೇಳು ಗೋಕುಲದೊಳು | ಸಂದು ಸಂದನೆ ತಿರುಗಿ ಮಂದಗಮನಿಯರು | ಹೊಂದಿ ಒದಗಿ ಬಾಯಂದದ್ದು ನಿಜಮಾತು 1 ಯನ್ನ ಮಾತನ್ನು ಸುಳ್ಳಾದರೆ | ಗೋವಳ್ಹಾರೇ ಮನ್ನಿಸಿ ಬದಿಗೆ ಕರೆದುಕೇಳು | ಅವರಿಗೆ ಹೇಳು ಕನ್ಯೆಯರೆಲ್ಲಾ ಬಂದು ಬೆಣ್ಣೆಗಳ್ಳನೆಂದು ಕಣ್ಣಿಲಿ ನೋಡದೆಯನ್ನ ದಂಡಿಸುವರೇ2 ಪರರ ಮನೆಯೊಳಗಿರುವ ಮಡಿಕೆ ಪಾತ್ರೆ ನಿನಗ್ಯಾಕೆ | ಸ್ಥಿರ ಕ್ಷೀರಾಂ ಬುಧಿಶಯನನಾಗಿ | ಇರವದು ಆಗಿ | ಪುರದ ಸ್ತ್ರೀಯರು ಯಲ್ಲ ದೊರೆ ಹೆನ್ನೆ ವಿಠಲನೆಂದು ಮರೆತು ಹೇಳಲಿ ಬಹು ಸ್ಥಿರವಾಗಿ ಮಾಡುವರೇನೆ 3
--------------
ಹೆನ್ನೆರಂಗದಾಸರು
ದೈತ್ಯರಲ್ಲೆ ದುರ್ಜನ ಸೇವೆ ಪ ಪರರ ಲಾಭವನು ಧರಿಯೊಳು ನೋಡುತ | ಧರಿಸಲಾರ ಧಿಕ್ಕರಿಸುತ ನುಡಿವನು | ಪರರ ಹಾನಿಯಲಿ ಮರುಗದೆ ಮನದೊಳು | ಹರುಷ ಬಡವುತ ಚರಿಸು-ನೈಯ್ಯಾ 1 ಖಳ್ಳೆದೆಯೊಳು ಮನದಲ್ಲಿ ಕಪಟವು | ಸೊಲ್ಲಿತೆ ನೋಡಲು ಬೆಲ್ಲನೆ ಬೀರುವಾ | ಒಳ್ಳಿತು ಗುಣಗಳ ಯಳ್ಳಿಲಿ ನಿತೈಣಿಸದೆ | ಕ್ಷುಲ್ಲತನದಿ ಕುಂದಲ್ಲಿಡುವ-ಕೈಯ್ಯಾ 2 ಸತಿ | ಎನ್ನ ಮಗÀನೆ ಮಗ ಯನ್ನ ಗುಣವೇಗುಣ | ತನ್ನನೆ ಹೊಗಳುತ ಅನ್ಯಕ್ಹಳಿವರೆ 3 ಆವದು ಅರಿಯದ ಭಾವಿಕ ಜನರನು | ತಾವೀಗ ಕಂಡರೆ ಆವನನುಗ್ರಹ | ಆವ ಮಂತ್ರ ನಿನಗಾವ ನ್ಯಾಸವೇ | ದಾವಾಗ ಛಲಣಿಯ ಭಾವಿಪರವರೇ 4 ತಂದೆ ಮಹಿಪತಿ ನಂದನ ಪ್ರಭುವಿನಾ | ಒಂದರಗಳಿಗೆಯ ಛಂದದಿ ಸ್ಮರಿಸದೆ | ನಿಂದೆಯ ಮನೆಯೊಳು ಸಂದಿಸಿ ಅನುದಿನಾ | ಮಂದ ಮತಿಯರೇ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದ್ರೋಹಿಗಳ ವಿವರವನು ನಾ ಪೇಳ್ವೆನಯ್ಯ ಕೂಡಿದೆಡೆಯಲಿ ಕಪಟವೆಸಗುವನೆ ದ್ರೋಹಿಮಾಡಿದುಪಕಾರವನು ಮರೆವವನೆ ದ್ರೋಹಿಚಾಡಿ ಕೊಂಡೆಗಳನಾಡಿ ನಡೆವವನೆ ದ್ರೋಹಿರೂಢಿಯೊಳು ಬಾಳುವರ ಸಹಿಸದನೆ ದ್ರೋಹಿ 1 ಸತಿಯಿದ್ದು ಪರಸತಿಯ ಬಯಸುವನೆ ದ್ರೋಹಿಹೆತ್ತವರೊಡನೆ ಕಲಹ ಮಾಡುವನೆ ದ್ರೋಹಿಯತಿಗಳನು ಒಂದೆ ಸಮ ನಿಂದಿಸುವನೆ ದ್ರೋಹಿಸತಿಯನ್ನು ಪರರ ವಶ ಗೈವವನೆ ದ್ರೋಹಿ 2 ಹೊನ್ನಿದ್ದು ಅನ್ನದಾನ ಮಾಡದವನೆ ದ್ರೋಹಿತನ್ನ ಗುರು ಸತಿಯ ಬಯಸುವವನೇ ದ್ರೋಹಿಸನ್ನುತಾಂಗ ಕಾಗಿನೆಲೆಯಾದಿಕೇಶವನತನ್ನೊಳಗೆ ತಾ ತಿಳಿದು ಸುಖಿಸದವ ದ್ರೋಹಿ 3
--------------
ಕನಕದಾಸ
ಧಣಿ ನೀನಿರಲು ತಣಿಸಿ ಪರರ ದಣಿವುದುಂಟೆ ಲೋಕದಿ ಪ ಕ್ಷಣ ಕ್ಷಣದಲಿ ಪೊರೆವ ಚಿಂತಾ ಮಣಿ ನೀನಿರೆ ತ್ರಿಭುವನಕೆ ಅ.ಪ ಕರದಲಿರುವ ಮಣಿಯ ಬೆಲೆಯ ನರಿಯದಂಥ ಮೂಢ ಜನರು ಪರರಿಗಿತ್ತು ಹರುಷದಿಂದ ಪುರಿಯ ಕೊಂಬ ತೆರದಲಿ 1 ದುರಿತ ದೂರ ಮಾಡಿ ಸಾರ ಫಲಗಳನ್ನು ಕೊಡುವ ನಾರಸಿಂಗ ಮಂತ್ರವಿರಲು ಭೈರವನನು ಜಪಿಸುವಂತೆ 2 ಪಡೆದ ಜನಕನಲ್ಲದೆನ್ನ ನುಡಿಗೆ ಒಲಿವರುಂಟೆ ಜಗದಿ ಕಡಲಶಯನ ಎನ್ನ ಕರವ ಪಿಡಿಯುತ ಪ್ರಸನ್ನನಾಗೋ 3
--------------
ವಿದ್ಯಾಪ್ರಸನ್ನತೀರ್ಥರು
ಧರೆಯೊಳು ನಾ ಬಂದು ಇರುಳು ಹಗಲು ನಿನ್ನ ಸ್ಮರಣೆಯ ಮಾಡದೆ ಪರರ ಬಾಗಿಲ ಕಾಯ್ದೆ ಮುರಲೀಧರ ಶ್ರೀಕೃಷ್ಣ ಪೊರಿಯೊ ತಪ್ಪನು ಕ್ಷಮಿಸಿ ಗೊಲ್ಲರ ಸಖದವನೇ ಶ್ರೀವತ್ಸಾಂಕಿತನೇ ನಾರದನಂದನ ನೀನು ಗಾರುಮಾಡಿಯೆನ್ನ ದೂರಗ್ರಹಿಸಲು ಈಗ ಆರು ಕಾಯರೋ ಜಾರ ಚೋರ ಕೃಷ್ಣ ಮಾರಜನಕ ನೀನು ಪಾರಗಾಣಿಸು ದೇವ ಶಿರಿವತ್ಸಾಂಕಿತನೇ
--------------
ಸಿರಿವತ್ಸಾಂಕಿತರು
ಧೀಮಂತರ ದಯಪಡೆದು ಮಾಧವನ ಪದ ವಿಡಿದು | ಪ್ರೇಮದಿ ಭಜಿಸೆನ್ನ ಮನವೇ | ಪ ಕಾರ್ಮುಗಿಲದುಗ್ಧರಾಶಿಯನು ಶೃತಿಗೆ ಬೀಳಲ್ಪ | ಯೋರ್ಮನದಿ ಸಂತೋಷಿಪಂತೇ ನಿರ್ಮಳಾಂಗಣ ಕಥೆಯ ಘೋಷವೇನು ಕೇಳಿ ಅತಿ | ಪೆರ್ಮೆಯಿಂದಲೆ ನಲಿದು ಬಾಳು 1 ನೋಡಲಾಕ್ಷಣ ತನ್ನ ಮಾತೆಯನು ಮುದದಲಿಂ | ಲೋಡಿ ಬಪ್ಪುವ ಶಿಶುವಂತೆ | ರೂಢಿಯೊಳು ಸಜ್ಜನರ ಕಂಡಾಕ್ಷಣಕ ತನುವ | ನೀಡಿ ಸಾಷ್ಟಾಂಗದಿಂದೆರಗು 2 ಮಿಗಿಲಾಸೆಯನು ತ್ಯಜಿಸಿ ದಾಗಸದ-ಲಿಂಬರ್ವ | ನಿಗಳುಂಬ ಚಾತಕನ ತೆರದಿ | ಮುಗಳೆ ದಯದಿಂದ ಸಜ್ಜನ ಮುಖದಿ ಬಪ್ಪಬೋ | ಧೆಗಳ್ಪೊತನು-ವಾನುಗ್ರಹಿಸು ಧರಿಸು 3 ಮಣಿ ದೀಪವಾದಂತೆ ಸ | ಪಾದ ಕಮಲಗಳಾ | ಅತ್ಯಧಿಕ ಹರುಷದಿಂ ಹೃದಯದೊಳ್ ಧರಿಸಲ್ಕೆ | ಮೊತ್ತದ ಜ್ಞಾನ ತೊಳಗುವದು 4 ಗರ ಹೊಡೆದು | ಧರಿಯೊಳಗ ಗರ್ವಿಸಲಿ ಬ್ಯಾಡಾ | ಸಿರಿಯು ತೊಲಗಲು ಕುನ್ನಿಯಂತನ್ನ ದಾಸಿಂಗೆ | ಪರರು ಮನವಡಿದು ಬಳಲದಿರು 5 ಕಮಲಜನ ಪದಕ ಕತ್ತದೀವರ ಅನುಮತದ | ವಿಮಲಮಾರ್ಗ ಹೊಲಬ ನರಿದು | ಅಮಲೂಧ್ರ್ಪ ಪೌಂಡ್ರ ಹರಿ ಲಾಂಛನವು ತುಳಸಿ ಸರ ಕ್ರಮದಿಂದ ಧರಿಸಿ ಸುಖಿಯಾಗು 6 ಹರಿಪರದೈವವೆಂದು ಅರಿತು ಭಾವದಿ ನಿಂದು | ಹರಿ ಕೋಟಿ ನಿಭಕ ಮಿಗಿಲೆನಿಸಿ | ಮೆರೆವ ಮಹಿಪತಿ ನಂದನೋಡಿಯ ನಾಮಂಗಳನು | ಸ್ಮರಿಸಿ ಇರಳ್ಹಗಳ ಕೊಂಡಾಡು 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಗಬಹುದು ನೀ ಮುಗುಳು ನಗೆಯಾ ಗುರುರಾಯಮಿಗೆ ಕಂಡು ದೇಹಾಭಿಮಾನಿಗಳ ಬಗೆಯಾ ಪತನ್ನ ತಾನರಿಯಲೀಸದ ಮಾಯೆಗೊಳಗಾಗಿಅನ್ಯರೇತೋಜಾತಮಾದ ದೇಹವ ನೋಡಿತನ್ನಿಂದ ತಾ ಕಾಣಪಡುತಿಹುದಿದಲ್ಲವೆಂದೆನ್ನಲಾರದೆ ದೋಷದಿಂದಾಉನ್ನತದ ಮಾಂಸ ರಕ್ತಾಸ್ತಿಮಲ ಮೂತ್ರಂಗಳಿನ್ನೆನೆದುನಾರುವ ನವದ್ವಾರ ಮಾರ್ಗದಿಂತನ್ನ ಮರಸುವದೇಹವೆತನ್ನದೆಂದು ಮರೆದುಣ್ಣುರಿವಾತಗಳ ಕಂಡೂ ಮಾಯೆ ಭಾಪೆನ್ನುತ್ತ ಬೆರಳೊಲದು ಕೊಂಡು ಬಗೆಗಂಡೂ 1ಬಿಟ್ಟ ಮನೆ ಜನ ಧನಂಗಳಲಿ ಮತ್ತೂ ಮನವನಿಟ್ಟು ವಾಂತ್ಯಾಶನವನುಂಬ ನಾಯಂದದಲಿಪಟ್ಟಣಂಗಳಲಿ ತಿರುಗುತ ಪರರ ಬಾಧಿಸುತಕೆಟ್ಟ ಬುದ್ಧಿುಂದ ಧೃತಿಗುಂದಿಕೊಟ್ಟಪುದು ಕರ್ಮವೆಂಬುದ ಮರೆತು ಗೇಣುದ್ದಹೊಟ್ಟೆ ಬಟ್ಟೆಗೆ ದೈನ್ಯ ಬಟ್ಟು ಮೂಢತೆುಂದಕೆಟ್ಟೆನಿನ್ನಾರು ರಕ್ಷಿಪರೆಂದು ಚಿಂತಿಸುವಹೊಟ್ಟೆಹೊರಕರನು ನೋಡುತ್ತಾ ಕಟಕಟಾಕೆಟ್ಟರಿವರೆಂದು ಹಾಸ್ಯವನು ಮಾಡುತ್ತಾ 2ತಾನಾತ್ಮನೆಂಬುದನು ಕೇಳಿದ್ದುದೃಷ್ಟಾನುಮಾನಂಗಳಿಂ ನಂಬಿಗೆಯೆುಲ್ಲದದರಲ್ಲಿಮಾನಾವಮಾನಂಗಳಿಂ ಹರುಷ ಶೋಕಾದಿಹೀನಬುದ್ಧಿಗಳ ಮಾಡುತ್ತಾಜ್ಞಾನಮಾರ್ಗದಲಿ ವಿಶ್ವಾಸವಿಲ್ಲದೆ ತನ್ನ ಕಾಣಲಾರದೆ ಭೇದ ಬುದ್ಧಿುಂ ವ್ರತತೀರ್ಥಸ್ನಾನಾದಿುಂದ ಮುಕುತಿಯ ಪಡೆಯಬೇಕೆಂಬಮಾನವರ ಭ್ರಾಂತಿಯನು ತಿಳಿದೂ ಇವರ್ಗಳಿಗೆಸ್ವಾನುಭವವಿಲ್ಲೆಂದು ಸಮತೆಯಲಿ ನಿಂದೂ 3ರಾಗವನು ಬಿಡಲಾರದಾಶಾಪಿಶಾಚಕೊಳಗಾಗಿ ಸತ್ಸಂಗ ಸತ್ಕಥೆಯ ಕೇಳಿಕೆಗಳನುನೀಗಿ ಧನಿಕರೊಳಿಚ್ಚಿತವನಾಡಿ ಸದ್ಧರ್ಮತ್ಯಾಗಿಯಾಗ್ಯನೃತಕ್ಕೆ ಪೊಕ್ಕೂಹೀಗೆ ತಿರುಗುತ ಪರಾನ್ನಾದಿ ಭೋಗಕ್ಕಾಗಿಕಾಗೆಯಂದದಲಲ್ಲಿಗಲ್ಲಿಗೆ ಸದ್ಗತಿುೀವಯೋಗ ಮಾರ್ಗವ ಬಿಟ್ಟುಭ್ರಾಂತರಾದಿರಿ ಮಹದ್ರೋಗಿಗಳ ಕಂಡು ಬೆಸಗೊಂಡು ಇವರ್ಗೆ ಭವರೋಗ ಬಿಡದೆಂದು ನಿಜಪದದಲ್ಲಿ ನಿಂದೂ 4ಇಂತರಿವ ಜನರಲ್ಲಿ ನಿಂತು ಸನ್ಮತಿುತ್ತುಚಿಂತೆಗಳ ಬಿಡಿಸುತ್ತಲಂತರಾತ್ಮಕನಾಗಿಸಂತಗೋಪಾಲಾರ್ಯ ಗುರುವರ್ಯನಾಗಿ ವೇದಾಂತದರ್ಥವನು ಬೋಧಿಸುತಾಅಂತವಿಲ್ಲದ ನಿಜವ ತೋರಿ ಪಾಲಿಸಿ ಮುದವಂತಾಳ್ದು ಸಕಲ ಸಂಶಯಗಳನು ಪರಿಹರಿಸಿಶಾಂತರಾದಿರಿ ಮೋಹಹೋುತ್ತು ನಿತ್ಯ ಸ್ವಾತಂತ್ರ್ಯವಾುತು ಗೆದ್ದಿರೆನುತಾಸಂತತಾನಂದಕನುಗೈದು ಕೈ ಹೊುದೂ 5
--------------
ಗೋಪಾಲಾರ್ಯರು
ನಂದ ಕುಮಾರ ಇಂದುಕುಲ ತಿಲಕ ಪ ಎಂದಿಗು ನಿನ್ನಯ ಸುಂದರ ಚರಣವ ವಂದಿಸಿ ನಲಿಯುವ ನಂದವೆನಗೆ ಕೊಡೊ ಅ.ಪ ಧನಕನಕಗಳನು ದಿನ ದಿನ ಗಳಿಸುವ ಅನುರಾಗಗಳನು ಕೊನೆಗಾಣಿಸೊ ದೇವ ವನಜಸಂಭವಪಿತ ಕನಸಿನಲ್ಲಿಯೂ ನಿನ್ನ ಮನನದಿ ಹಿಗ್ಗುವ ಮನವ ಎನಗೆ ಕೊಡೆಲೊ 1 ಭಯವಿಲ್ಲದೆ ದೋಷಮಯದ ನೋಟಗಳನು ಬಯಸುವ ಮತಿಯನು ಲಯಮಾಡೋ ದೇವ ಮಾಧವ ಎನ್ನ ನಯನಗಳಿಗೆ ನಿನ್ನ ಪ್ರಿಯ ರೂಪದ ಪರಿಚಯವ ಮಾಡಿಸೊ ಸದಾ 2 ಕಾಲವ ಕಳೆಯಲು ಆಲಸವಿಲ್ಲದೆ ಪೇಳಬಾರದ ನುಡಿ ಚಾಲನು ತೊಲಗಿಸೊ ಬಾಲ ಗೋಪಾಲ ಎನ್ನ ನಾಲಿಗೆಯಲಿ ನಿನ್ನ ಲೀಲೆಗಳನು ಸದಾ ಲಾಲಿಸಿ ಪೊಗಳಿಸೊ 3 ಪರಿಪರಿ ಭೋಗಕೆ ಪರಿದಾಡುತ ಸದಾ ಪರರ ಸೇವಿಸುತಿಹ ಕರಗಳ ನಿಲ್ಲಿಸೊ ಮುರಳೀಧರ ಕೃಷ್ಣ ಕರುಣದಿಂದಲಿ ಎನ್ನ ಕರಗಳಿಗೆ ನಿನ್ನ ವರಸೇವೆಯ ನೀಡೊ 4 ಭುವಿಯಲಿ ದುರುಳರ ಸವಿನುಡಿಗಳಿಗತಿ ಕಿವಿಗೊಟ್ಟು ಕೇಳುವ ಲವಲವಿಕೆಯ ಬಿಡಿಸೊ ದಿವಿಜರೊಡೆಯ ಎನ್ನ ಕಿವಿಯೊಳಗೆ ನಿನ್ನ ನವ ನವ ಚರಿತೆಯ ಸವಿರಸ ಸುರಿಸೆಲೊ 5 ಮಾಧವನನು ಮರೆತು ಪಾದಗಳಿಂದಲಿ ಮೇದಿನಿ ತಿರುಗುವ ಮೋದವೆನಗೆ ಬೇಡ ಯಾದವಪತಿ ನಿನ್ನ ಪಾದದರುಶನದ ವಿ ನೋದಕ್ಕೆ ಸುತ್ತಲು ಆದರ ಪೊಂದಿಸೊ 6 ಭಿನ್ನ ಅಂಗಗಳಿಂದ ಎನ್ನ ಕರ್ಮಗಳನು ನಿನ್ನ ಸೇವೆಯೆಂದು ಬಿನ್ನೈಸುವೆ ದೇವ ಎನ್ನ ದುರಿತಗಳ ಭಿನ್ನ ಮಾಡುತಲಿ ಪ್ರ ಸನ್ನನಾಗಿ ಎನಗೆ ಸನ್ಮತಿ ದಯಮಾಡೊ 7
--------------
ವಿದ್ಯಾಪ್ರಸನ್ನತೀರ್ಥರು
ನಂಬು ನರಮೃಗನಾ|ಮನುಜಾ| ಅಂಬುಧಿವಾಸ ಶ್ರೀ ದೇವನಾ ಪ ಕುಟಿಲ ಶಠಸುರನುಪಟಳ|ಘಟಿಸೆ ಖಟಮ ನವ್ಯಾಟಪ್ತ ಬಾಯೆನೆ ಶರಣಾ| ಖಟಖಠಾನೆಂದು ವಿಸ್ಫುಟವಾಗಿ|ಸ್ತಂಬ| ಛಟಛಟಾನೆನೆ ಬ್ರಮ್ಹಾಂಡ | ಘಟಪಟುವಂತೆ ಯಾರ್ಭಟದಿಂದಲೊಗೆದನಾ1 ಅರಿಯನರದವನ ಕರಳು ಸರಧರಿಸಿ| ಭರದಿ ಪೊರೆದೆ ಡಂಗುರನಾ ಹರನಾ ಗುರುಮಹೀಪತಿ ಪ್ರಭು ಚರಣಚರನೆನಿಸಿದ| ಸ್ಮರಹರ ಅಜಸುರ ಪರರೊಡೆಯನಾ2
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನರಸಿಂಹನ್ಯನ ಮನೆಯ ಹರಿಕಥೆ ಸಂದರ್ಭದಲ್ಲಿಆನಂದಮಾನಂದವಾನಂದವಾುತು ಸಾನಂದವಾದ ನಾರಸಿಂಹಯ್ಯಮಂದಿರದಲ್ಲಿ ಪರಾಮಮಹೋತ್ಸವ ಪ್ರೇಮದಿಮಾಡಲುಸ್ವಾ'ುೀಲಕ್ಷ್ಮಣಸೀತ ಸಮೇತರಾಗಿಬರಲು 1ಭಾರತ ರಾಮಾಯಣ ಭಾಗವತಾದಿ ಗ್ರಂಥಪಾರಾಯಣಂಗಳು ಭೂಸುರಾಧಿಪರು ಮಾಡಲು 2ಭಕ್ತಾಜನರು ಹರಿಭಜನೆ ಮಾಡಲು ರಾಗರಕ್ತೀಭಕ್ತೀ ಯುಕ್ತಶಕ್ತೀ ಪರರಾಗಿನಿರಲು 3ಪರಿಪರಿ ತೆರದಿ ವಾದ್ಯಪಂಕ್ತೀ ಮಂಟಪದಲ್ಲಿತಿರುವಾರಾಧನೆ ತೀರ್ಥಪ್ರಸಾದ 'ನಿಯೋಗ 4ಪರಮಭಾಗವತರು ಪಂಡಿತ ನಿಪುಣರುತರುಣೀಮಣಿಯರೆಲ್ಲ ತತ್ಸೇವೆಮಾಡಲು 5ಸಿರಿಶುಕ್ಲವರ್ಷ ಚೈತ್ರಶುದ್ಧ ಬಿದಿಗೆ ಭರಣಿಗುರುತುಲಸೀರಾಮಜನನ ಚಾರಿತ್ರೆನುಡಿಯಲು 6ಶ್ರೀಲಕ್ಷ್ಮೀದೇವಮ್ಮ ಸುಖಪ್ರಸು'ಸಿದಳುತುಲಸೀರಾಮಾಖ್ಯನನ್ನ ತತ್ಕಾಲ ಲಗ್ನದಲ್ಲಿ 7ಶ್ರೀಶಾ ತುಲಸೀರಾಮಸ್ವಾ'ುೀ ಪದಾರ'ಂದಆಶ್ರೀತರಂಗಸ್ವಾ'ುೀದಾಸಾನು ಸೇ'ಸಲು 8
--------------
ಮಳಿಗೆ ರಂಗಸ್ವಾಮಿದಾಸರು