ಒಟ್ಟು 698 ಕಡೆಗಳಲ್ಲಿ , 94 ದಾಸರು , 620 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನು ಸುಕೃತವೋ ಮಧುರಾ ನಗರಕೆ ಪ ಗಾನಲೋಲ ಹರಿ ತಾ ನೆಲೆಸಿಹುದು ಅ.ಪ ವರ ವಿಭವಗಳುಳ್ಳ ಪುರಗಳಂತಿರಲು ಪರಮ ಪುರುಷ ಹರಿ ವಿರಾಜಿಸುತಿರಲು 1 ಭೂಪ ನಗರಗಳಿಗೀ ಪರಿಯುಂಟೆ ಗೋಪಾಲಕ ಹರಿ ಕಾಪಾಡುತಿಹುದು 2 ಸುಮನಸಪುರವಾದ ಅಮರಾವತಿಗುಂಟೆ ಕಮಲನಯನ ಹರಿ ಸಮಾಗಮವು ಸದಾ 3 ದಿವಿಜರೊಡೆಯ ಹರಿ ಭುವಿಯಲಿ ಅರಿಸಿ ಅವತರಿಸುತ ತನ್ನ ಪ್ರವಾಸಗೈದುದು 4 ನಿರುಪಮ ಆನಂದಪೂರ್ಣ ಪ್ರಸನ್ನನು ಪರಿಪರಿ ವಿಧದಲಿ ವಿರಾಜಿಸುತಿರಲು 5
--------------
ವಿದ್ಯಾಪ್ರಸನ್ನತೀರ್ಥರು
ಏನುಕೌತುಕವೊ ಮ'ಪತಿರಾಯರದು ಘನಮ'ಮೆ ತಿಳಿಯದುಮೋಹಶಾಸ್ತ್ರಗಳ ರಚಿಸಲು ಬೇಕೆಂದು ಹರಿಯಾಜ್ಞೆಯನರಿದುಈ ಮ'ಯೊಳವತರಿಸಿ ಬಂದನೆಂದು ರುದ್ರಾಂಶನೆ ಅಹುದುಪದ್ಯ ಪದ್ಯಗಳಲಿ ಅತಿಗೂಢ ಅರ್ಥ 'ಹುದು ಮೂಢರಿಗೆ ತಿಳಿಯದದು 5ಮ ಎನ್ನಲು ಮನ ಪ್ರಸನ್ನವಾಗುವದು ಮ'ಮೆಯ ತಿಳಿಯುವದು' ಎನ್ನಲು 'ಡಿಸುವದು 'ತದಹಾದಿ ಸುಜನರ ಕೈವಾರಿಪ ಎನ್ನಲು ಪರಿಪರಿಯ ಕಷ್ಟದೂರಾ ಪರಮಾದರಕೆದ್ವಾರಾತಿ ಎನ್ನಲು ತಿಳಿಯಾಗುವದೈ ಬುದ್ಧಿ ಸರ್ವಾಂಗಶುದ್ಧಿ 6ಮ'ಪತಿರಾಯರು ತಪವಗೈದಸ್ಥಾನಾ ಅಲ್ಲಿಯ ವೃಂದಾವನಾಮೂರುಕ್ಷೇತ್ರ ಶಾಲಿಗ್ರಾಮದ ಸವನಾ ಮ'ಮೆಯು ಪರಿಪೂರ್ಣಾತೀರ್ಥ ಭಾ'ಯೊಳು ಸುರನದಿ ಅವತರಣಾ ಮ'ಪತಿ ಸುತಕೃಷ್ಣಾಕರುಣಾನಿಧಿ ಭೂಪತಿ'ಠ್ಠಲ ಪ್ರಿಯನಾ ಸಂತತ 'ಡಿಚರಣಾ7
--------------
ಭೂಪತಿ ವಿಠಲರು
ಏನೆಂದು ಬಣ್ಣಿಪೆನು-ಶ್ರೀಗುರುವರನ ನಾನಾಮಹಿಮೆಗಳನು ಪ ಸಾನುರಾಗದಿ ಸಕಲ ತೀರ್ಥಕ್ಷೇತ್ರವ ಚರಿಸಿ ಶ್ರೀನಿವಾಸನ ದಯದಿ ದೀನರನುದ್ಧರಿಸಿದ ಅ.ಪ ತೀರ್ಥಕ್ಷೇತ್ರದ ಮಹಿಮೆ ತೀರ್ಥಪ್ರಬಂಧದೊಳ್ ಕೀರ್ತಿಸಿ ಕವಿತಾ ಚಾತುರ್ಯವ ಪ್ರಕಟಿಸಿದ 1 ಕುಂಡಲೀಗಿರಿಯನು ಮಂಡಿಯಿಂದಲೇರಿ ಉ ದ್ದಂಡಗಂಡಕ ಶಿಲೆಯ ಹಾರ ಶ್ರೀಹರಿಗಿತ್ತ 2 ಕುಂಭಕೋಣೆಯಲಿದ್ದ ಡಾಂಭಿಕ ಪಂಡಿತ ಜಂಬೂಕಗಳ ಗೆದ್ದ ಕುಂಭಿಣೀಸುರ ಸಿಂಹ 3 ಮಾಘಕಾವ್ಯವ ಮೀರ್ದ ಆಮೋದ ಸುಂದರವಾದ ಶ್ಲಾಘ್ಯ ಶ್ರೀ ರುಕ್ಮಿಣೀಶ ವಿಜಯವೆಂದೆನಿಸಿದ 4 ಘನ ಕಾವ್ಯವ ರಚಿಸಿ ಪುಣ್ಯ ಪತ್ತನದಿ ವಿ ದ್ವನ್ಮಣಿಗಳಿಂದ ಮಾನ್ಯತೆ ಪಡೆದುದು 5 ತುಂಗ ಕರ್ಣಾಟಕ ನೃಪನ ಸಭೆಯೊಳು ಪ್ರ ಸಂಗಾಭರಣವೆಂಬ ಬಿರುದು ಪಡೆದ ಖ್ಯಾತಿ 6 ಪಾದ ಭೃಂಗ ಶ್ರೀ ಗುರುವಾದಿರಾಜರ ಪರಿಪರಿ ಚರಿತೆಯಾ 7
--------------
ವರಾವಾಣಿರಾಮರಾಯದಾಸರು
ಏನೆಂದು ಬಣ್ಣಿಸಲಿ ಎಲೆ ಧನವೆ ನಿನ್ನ ಮಾಣುವ ವಿಷಯಸುಖ ಅಹುದೆನಿಪ ಪರಿಯ ಪ ಏರಿಸುವಿ ಹಿರಿಕುದುರೆ ತೋರಿಸುವಿ ದುರ್ಮದವ ಹಾರಿಸುವಿ ಸುವಿಚಾರ ಮೀರಿಸುವಿ ಸುಪಥ ದೂರಿಸುವಿ ಮಹನೀತಿ ಘೋರಿಸುವಿ ಬಡವರನು ಕಾರಿಸುವಿ ತಿಂದನ್ನ ಧಾರುಣಿಯೊಳು 1 ಮೆರೆಸುವಿ ಅಂದಣದಿ ಸುರಿಸುವಿ ದುರ್ವಚನ ನರಸುವಿ ಎಡಬಲದಿ ಪರಿಪರಿಯ ಜನರ ತರಿಸುವಿ ಸತಿಸುತರ ಇರಿಸುವಿ ಅರಮನೆಯೊಳ್ ಮರೆಸುವಿ ಮಹಿಮರ ಸಂದರುಶನದ ಸುಖವ 2 ವೇದಶಾಸ್ತ್ರಕಿಳಿಸುವಿ ವಾದನುಡಿ ಕಲಿಸುವಿ ನೀ ಸಾಧುಸಜ್ಜನರ ನಿಜಬೋಧ ತೋರಿಸುವಿಯೋ ಭೇದನಿಕ್ಕುತ ವೈರ ಸಾಧಿಸುತ ಪರಲೋಕ ಸಾಧನೆಯ ಕೆಡಿಸ್ಯಮಬಾಧೆಗಾನಿಸುವಿ 3 ತೊಡಿಸುವಿ ವಿಧವಿಧದ ಒಡವೆವಸ್ತ್ರಂಗಳನು ನುಡಿಸುವಿ ಕಡೆತನಕ ಕಡುದುಗುಡ ಬಡಿಸುವಿ ಬಲುಜಂಬ ನಡೆಸುವಿ ದುಷ್ಷಥದಿ ಕೆಡಿಸುವಿಯೋ ಸಲೆ ಪುಣ್ಯಪಡೆದ ನರಜನುಮ 4 ಇನ್ನೆಷ್ಟು ಬಣ್ಣಿಸಲಿ ನಿನ್ನ ಕರುಣದ ಗುಣವ ನಿನ್ನ ನಂಬಲು ಬಿಡದೆ ಕುನ್ನಿಯೆಂದೆನಿಸಿ ಪನ್ನಂಗಶಯನ ಮಮ ಸನ್ನುತಾಂಗ ಶ್ರೀರಾಮ ನುನ್ನತಂಘ್ರಿಯ ಧ್ಯಾನವನ್ನು ಅಗಲಿಸುವಿ 5
--------------
ರಾಮದಾಸರು
ಏನೆಂದ್ಹೇಳಲಿ ತಂಗಿ _ ಏನೆಂದ್ಹೇಳಲಿ ತಂಗಿ _ ಏನೆಂದ್ಹೇಳಲಿ ರಂಗನ ಮಹಿಮೆಯ ಏನೆಂದ್ಹೇಳಲಿ ಪ ಘನ್ನಸಿರಿವಿಧಿ ಧ್ಯಾನಕೆ ನಿಲುಕದ ಅಗಣಿತ ಮಹಿಮೆಯ ಅ ಎಲ್ಲವ ಬಲ್ಲನು ಎಲ್ಲವ ಮಾಡುವ ಎಲ್ಲರ ಒಡೆಯನು ಇಲ್ಲದ ಸ್ಥಳವಿಲ್ಲ ಬಲ್ಲವರಿಲ್ಲವೆ ಫುಲ್ಲನಾಭನ ನಲ್ಲನು ಲಕ್ಷ್ಮಿಗೆ ಗೊಲ್ಲನು ಆದನೆ 1 ಅಂಗನೆ ಲಕ್ಷ್ಮಿಯ ಸೊಗಸಿಗೆ ನಿಲುಕದ ಅಂಗನೆ ಇಲ್ಲದೆ ಮಗನನು ಪಡೆದವ ಹಿಂಗದ ತಾನೆ ಅಂಗನೆ ಯಾದವ ರಂಗನ ಗೋಕುಲ ಹೆಂಗಳ ಕೂಡಿದನೆ2 ತಂದೆಯ ಕೊಂದನು ಕಂದನ ಸಲಹಿದ ಕಂದನ ಕೊಂದನು ತಂದೆಯ ಸಲಹಿದ ಬಂಧುಗಳೆನ್ನದೆ ಕೊಂದನು ವಂಶವ ತಂದೆಯು ಇಲ್ಲದೆ ಕಂದನು ಆಗುವನೇ 3 ದಾನವ ನೀಡಿದ ದಾನಿಯ ತುಳಿದನು ಮಾನವ ತೆಗೆದಾ ಹೀನನ ಸಲಹಿದ ದೀನರ ಸಲಹುವ ದಾನವರಳಿವನು ಜ್ಞಾನಿಗಮ್ಯನು ಮಾನಸ ಹಂಸನ 4 ಹಸಿವೆಯ ಅರಿಯದ ಅಸಮದೇವನು ಸೊಸಿಯು ನೀಡಿದ ಶಾಖವ ತಿಂದನೆ ಪಶುಪತಿ ಋಷಿಯನು ವಶವಾಗಿ ಮಾಡಿದ ಮಾಸದಮಹಿಮನು 5 ನಾಲ್ಮೊಗನಯ್ಯನು ಸುಳ್ಳನು ಹೇಳುತ ಕಳ್ಳನು ಆದನು ಗೊಲ್ಲರ ಭಕ್ತರಿಗೆ ಮೆಲ್ಲನೆ ಕುರುಕುಲ ಎಲ್ಲವ ಸವರಿದ ಬಲ್ಲಿದ ಕೃಷ್ಣಗÉ ಇಲ್ಲವೆ ಸಮರಧಿಕ 6 ಜಗವನು ಮಾಡುವ ಜಗವನು ಪಾಲಿಪ ಜಗವನು ಅಳಿಸುವ ಮಗುವಾಗಿ ಬಂದನೆ ಜಗಜೀವ ಭಿನ್ನನು ಜಗದೊಳು ವ್ಯಾಪ್ತನು ನಗುತಲಿ ಬಾಯಲಿ ಜಗವನು ತೋರಿದನೆ7 ಯಾಗವ ನಡೆಸಿದ ಯಾಗವ ಕೆಡಿಸಿದ ಯೋಗವ ಚರಿಸುತ ಯೋಗವ ಬೋಧಿಪನೆ ಬಾಗುವ ಭಕ್ತರ ನೀಗುವ ಕಲುಷವ ಆಗಮವಂದಿತ ಸಾಗರಶಯನನೆ8 ಹತ್ತವತಾರವ ನೆತ್ತಿದ ಮಹಿಮನು ಉತ್ತಮ ಭಕುತರ ತೆತ್ತಿಗನಾದನೆ ಬತ್ತಲೆ ಶಿಶುವಾಗಿ ಬಿತ್ತಿದ ಮೋಹವ ಬೆಸ್ತರಕುವರಿಗೆ ಆತ್ಮಜನಾದವನೆ9 ಚಕ್ರವಪಿಡಿದವ ನಕ್ರನ ತರಿದವ ಶಕ್ರನಕಾಯ್ದವ ವಕ್ರೆಯ ಕೂಡಿದನೆ ರಕ್ಕಸಯವನನ ಠಕ್ಕಿಲಿ ಅಳಿಸುತ ಭಕ್ತನಪೊರೆದಾ ಯುಕ್ತಗಳೊಡೆಯನೆ 10 ನಾರೆಂದೊದರಿದ ಉರುತರ ಪಾಪಿಯ ಭರದಿಂಪೊರೆಯೊ ಕರುಣಾಸಾಗರನೆ ನರಹರಿದೇವನು ಪರಿಪರಿರೂಪನು ಪರಿಪರಿಲೀಲೆಗೆ ಮೇರೆಯೆ ಇಲ್ಲಾವೇ 11 ವಾರಿಯಲಾಡುವ ಭಾರವ ಹೊರುವಾ ಕೋರೆಯ ತೀಡುವ ಘೋರವ ತೋರುವನೇ ವೀರರತರಿಯುವ ಕ್ರೂರರಸವರುವ ಜಾರನು ಆಗುವ ವೈರಿಗಳ್ವಂಚಿಪ ಏರುವ ತೇಜಿಯನೆ 12 ಅದ್ಬುತ ರೂಪವ ಕದನದಿ ತೋರಿದ ಬದರಿಯನಿಲಯಗೆ ತುದಿಮೊದಲಿಲ್ಲಾವೆ ಉದರದಿ ಮಗುವನು ಮುದದಿಂಸಲಹಿದ ಮುದಮುನಿ ಪ್ರಿಯನು ಹೃದಯದಿ ವಾಸಿಪನೆ 13 ವಿಷವನು ಕುಡಿದಾ ವೃಷಭವಾಹನ ಅಸುರನ ಭಯದಿಂ ಘಾಸಿಲಿ ಓಡುತಿರೇ ಮೋಸದಿ ಯುವತಿಯ ವೇಷವ ಧರಿಸುತ ಪಶುಪತಿ ಸಲಹಿದನೇ 14 ಭರದಿಂ ರಥವೆತ್ತಿ ನರನಂ ಕಾಯ್ದನು ಧರಣಿಯ ಒತ್ತುತ ಕುರುಪನ ಕೆಡಹಿದನೇ ಮರೆಸುತ ರವಿಯನು ಪೊರೆದನು ಚೇಲನ ಸುರವರಪೋಷಕ ಸಿರಿಪತಿ ಚದುರನ 15 ಗಂಗೆಯಪಡೆದ ಮಂಗಳ ಮಹಿಮನು ಹಿಂಗದೆ ಗೋಪರ ಸಂಗಡ ಆಡಿದನೇ ತಿಂಗಳ ಬೆಳಕಲಿ ಶೃಂಗರ ಸೊಬಗನು ಹೆಂಗಳ ಕೂಡುತ ಸಂಗೀತ ಪಾಡಿದನೆ 16 ಕಾಳಿಯ ಫಣೆಯಲಿ ಕಾಳಿಂದೀಶನು ತಾಳಕೆ ಕುಣಿಯುತ ಕೊಳಲನ್ನೂದಿದನೆ ಘೂಳಿಗಳಳಿಯುತ ನೀಲಳತಂದವ ಊಳಿಗ ಮಾಡಿದನೇ 17 ನಾರಿಯು ಮೊರೆಯಿಡೆ ಸೀರೆಯನೀಡಿದ ವಾರಿಜಾಕ್ಷನು ಸೀರೆಯ ಚೋರನೆ ನೀರೊಳು ಮುಳುಗಿದ ಪೋರರಿಗೆಲ್ಲ ತೋರಿದ ಜಗವನು ಸೂರಿಗಳೊಡೆಯನೆ 18 ಗರುಡನ ಏರುವ ಧರಣಿಯ ರಮಣನು ಏರುತಹುಡುಗರ ತುರುಗಳ ಕಾಯ್ದನೆ ಮಾರನಪಡೆದ ಮುರಹರಕೃಷ್ಣನು ಗಿರಿಯನು ಎತ್ತುತ ಹರುಷವ ಬೀರಿದನೇ 19 ಶೃತಿಗಳು ಪೊಗಳುವ ವ್ಯಾಪ್ತನ ನಿತ್ಯನ ಪಾತಕ ಹೋಗುವುದೇ ಅಂತಕ ಗತಿ ಮತಿ ಪ್ರೇರಕ ದಾತನು ಎಂತೆನೆ ಪ್ರೀತಿಲಿ ಸಲಹುವನೆ 20 ಮಜ್ಜಿಗೆ ಕಡೆಯುವ ರಜ್ಜುವಿನಿಂದಲಿ ಮೂರ್ಜಗನಯ್ಯನು ಕಟ್ಟಿಸಿಕೊಂಡಾನೆ ಲಜ್ಜೆಯ ಬಿಡುತಲಿ ಗೆಜ್ಜೆಯ ಕಟ್ಟುತ ಘರ್ಜಿಸಿ ಪಾಡಲು ಹೆಜ್ಜೆಯ ತೋರುವನೆ 21 ದಾಸರ ಪೋಷಿಪ ಶೇಷಗಿರೀಶನ ವಿಶೇಷವೆ ಬಣ್ಣಿಸೆ ಶೇಷಗೆ ಆಗದೆ ದೋಷವು ಇಲ್ಲದ ವಾಸುದೇವನೆ ತೋಷವ ನೀಡುವ ಸಾಸಿರ ನಾಮಕನೆ22 ಜಯಮುನಿ ಅಂತರ ವಾಯುವಿನಲ್ಲಿಹ ಜಯಕೃಷ್ಣವಿಠಲನು ಜೀಯನೆ ಜಗಕೆಲ್ಲ ನಯಭಯದಿಂದಲಿ ಹಯಮುಖನೊಲಿಸಲು ಭಯವನು ಹರಿಸುತ ನ್ಯಾಯದಿ ಪಾಲಿಪನೇ 23
--------------
ಕೃಷ್ಣವಿಠಲದಾಸರು
ಏಳಮ್ಮ ಕೊಲ್ಲಾಪುರಧೀಶೆ | ಇನ್ನೂ ಭಾಳ ಹೊತ್ತಾಯಿತು ವೈಕುಂಠವಾಸೆ ಪ. ಸೃಷ್ಟಿಸೆಂದೆನುತ ಆಂಬ್ರಣಿರೂಪದಿಂದ್ಹರಿ ಗಿಷ್ಟ ಸ್ತೋತ್ರವ ಮಾಡಿ ಎಬ್ಬಿಸಬೇಕು ಅಷ್ಟ ಭುಜದ ಲಕುಮಿ ಪ್ರಕೃತಿರೂಪಿಣಿಯಾಗಿ ಸೃಷ್ಟಿಕಾರ್ಯಕೆ ಅನುವಾಗಬೇಕು 1 ಸಕಲ ದೇವತೆಗಳ ಸೃಷ್ಟಿ ಮಾಡಲಿಬೇಕು ಮುಕುತಿಯೋಗ್ಯರ ಸೇವೆ ಕೊಳ್ಳಬೇಕು ಸಕಲರೂಪದಲಿ ಶ್ರೀಹರಿಯ ಸೇವಿಸಬೇಕು ಅಕಳಂಕÉ ಆದಿದೇವತೆ ಎನಿಸಬೇಕು 2 ಶ್ರೀ ಪದ್ಮಭವೆ ವೆಂಕಟೇಶನ ಕೂಡುತ ನೀ ಪರಿಪರಿ ಲೀಲೆಗೈಯ್ಯಬೇಕು ಗೋಪಾಲಕೃಷ್ಣವಿಠ್ಠಲನ ವಕ್ಷಸ್ಥಳ ವ್ಯಾಪಿಸಿ ಭಕ್ತರ ಕಾಪಾಡಬೇಕು 3
--------------
ಅಂಬಾಬಾಯಿ
ಏಳು ಏಳು ಏಳು ಲೋಕದ ಒಡಿಯನೆ | ಏಳು ಗೋವಳರಾಯ ಗೋಪೇರಿಗತಿ ಪ್ರಿಯಾ | ಅಪ್ರಾಕೃತ ಕಾಯಾ ಸುರಮುನಿ ಗೇಯಾ | ಏಳು ಗೋಪಾಲಕೃಷ್ಣ ಪ ಪುರಂದರನ ದಿಶೆಯಲ್ಲಿ ಗರುಡಾಗ್ರಜನು ಬರಲು | ಶರಧಿ ತೆರೆ ತಗ್ಗಿದವು ಉರಗ ಪೆಡೆ ಪಸರಿಸಿದಾ | ಹರಿದು ಪೋಯಿತು | ಕಾಳ | ಸುರ ವೈರಿಗಳು ಅಡಗಲು | ಅರಳಿದವು ಅರವಿಂದ | ಝಂಕರಿಸಿ ಶುಕಪಿಕ ಮೃಗಾದಿ ಯೆ-| ಕರುಣಾಳುಗಳ ದೇವನೆ 1 ಮೇರೆ ತಪ್ಪಿ ಬಂದಾ ರಥಸಹಿತ ಭಾಸ್ಕರನು ದಿಶದಿಶೆಗೆ ಕಿರಣಗಳ | ಹರಹಿಕೊಳುತಾ | ಹರಿ ಗುರುವೆ ಪೇಳಲಳವೆ | ಕಲಿಸಿ ಮಂದಿರದೊಳಗೆ ಎಳೆಬಾಳೆ | ಶೃಂಗರಿಸಿದರು ಅರವಿಂದನಾಭ ಚೆಲುವ 2 ಪರಮ ಮಂಗಳವಾದ ದ್ವಾರ ದ್ವಾರಗಳಿಗೆ | ವಿರಚಿಸಿತು ಕಳಿತೆ ತೋರಣ ಕನ್ನಡಿ ಮಲಕು | ಭರದಿಂದಲಿ ಬಿಗಿದು ಮೇಲ್ಕಟ್ಟು ಚಿತ್ತರದ ಗೊಂಬೆ | ಪರಿಚಾರವು ವಪ್ಪಲು | ಹಿರಿದು ಹೂವಿನ ಮಾಲೆ ಕಟ್ಟಿದವು | ಮಕರವು ತುರ ತೊ ಗರು ಪೊಗಳು ಕಾದೋದಕವು ತಂದಿರೆ | ಅರಸಾದ ಆದಿದೈವ3 ಪರಮ ಭಾಗವತರು ಬತ್ತೀಸರಾಗದಲಿ | ಸ್ವರಮಂಡಲಾ ತಾಳ ತಂಬೂರಿ ಕಿನ್ನುರಿಗ ಸರವೇಣಿ ನಾನಾ ಗೀತ | ಪರಿ ಪರಿ ಕೊಂಡಾಡುತಿರಲು | ಕುಣಿಯುತಿದೆ ಸುರನಿಕರ ಪರಿಪಾಲಿಕ 4 ಸುರ ನರೋರಗ ಯಕ್ಷಗರುಡ ಸಿದ್ಧ ವಿದ್ಯಾ | ಕಿನ್ನರ ಸಾಮ | ಪರಮೇಷ್ಟಿ ವಾಲಗಕೆ ಬಂದು ಎ- ದುರು ನಿಂದು ತುತಿಪನಾಹಕೊ ಭರಿತಾಭರಣವಿಟ್ಟು | ಸರಸ್ವತಿ ಭಾರತಿ ಗಿರಿಜೆ ಸುರನಾರಿಯರು ತಮ್ಮ | ಹರಿವಾಣ | ದಾರುತಿಯ ಪಿಡಿದು ನಿಂದೈಧಾರೆ ಶರಣಾಗತ ವತ್ಸಲಾ 5 ಕರಿ ತುರಗ ರಥಪಾಯದಳವು ದಟ್ಟಡಿಯಾಗಿ | ನೆರದಿದೆ ಸಭೆಯಲಿ ಸಪ್ತಾಂಗದವರುಂಟು | ಅರಿ ಶಂಖಗದಾ ಪದುಮಖೇಟ ನಂದನ ಮುಸಲಾ | ಪರಶು ನೇಗಲ ಸುಶಕ್ತಿ ಪರಿಪರಿಯ ದಿವ್ಯಾಯುಧವ ತಮತಮಗೆ | ಧರಿಸಿ ಸಂತೋಷದಲಿ ದಾತಾರ ನಿನ್ನಯ ಬರುವ ಹಾರೈಸಿ | ವೈರಿಗಳು ನೋಡುತಲಿ ಹಾರೆ ಕುರುವಂಶ ವಿನಾಶಕಾ 6 ಸುರಿಗೆ ಪಾರಿಜಾತದ ಮಲ್ಲಿಗೆ | ಸುರವನ್ನೆ ಬಕುಳ ಪಾರಿ ಭದ್ರ ಸಂಪಿಗೆ | ಮರುಗ ಮಲ್ಲಿ ಜಾಜಿ ಕಾಂಜಿ ಶಾವಂತಿಗೆ ಕರವೀರ ನಂದಾವರ್ತ | ಅರಗುಂದ ಕುಂತಾತಸಿದವನ ಮುಡಿವಾಳ | ಈರವಂತಿಕೆ ಕೇತಿಕಾ ಸರ್ವ ಕುಸುಮಗಳಿಗೆ | ಶಿರೋರತನವಾದ ಎಳದುಳಸಿ ಹಾರಗಳಿಗೆ | ಅರಿಗಳ ಮಸ್ತಕಾಂಕುಶಾ7 ಚರಣದಂದಿಗೆ ಪೆಂಡೆ ಪೊಂಗೆಜ್ಜಿ ಮಣಿಮಯದ | ಸರಪಳಿಯು ತೊಡೆದು ಬಿರುದಾವಳಿಗಳು ಪೀತಾಂ | ಕಾಂಚಿ ದಾಮಾ | ಸರಿಗೆ ನ್ಯಾವಳಹಾರ ತುಳಸಿ ಕೌಸ್ತಭ ಪದÀಕ | ಸಿರಿವತ್ಸ ಕನಕಕುಂಡಲ ನೊಸಲ ಮೃಗನಾಭಿ | ಕರದಾಭೂಷ ಫಣಿಮಕುಟ ಧರಿಪಾ ದೇವಿ ನಿನ್ನ | ದರುಶನ ಭಕ್ತರಿಗೆ ಲಾಭಾ 8 ಸಿರಿ ಏಳಲೀಸಳೊ ಹತ್ತವತಾರವನು ಧರಿಸಿದ ದಣವಿಕಿಯ | ಕರಿ ಕಾಯಲಿ ಬಂದ ಭರದ ಉನ್ನತವು | ರಣದೊಳಗೆ ಪಾರ್ಥನ್ನ ರಥದ ತುರುಗವ ನಡಿಸಿದ ಲಜ್ಜೆಯ | ಸುರತ ಕ್ರೀಡೆಯಲಿ ಸ್ತ್ರೀಯರೋಳಾದಂಜಿಕಿಯೊ | ವರವ ಕೊಡು ಎಂದು ಬಂದು ಮಮ ಭಕ್ತರ ಭಯವೊ | ಸಿರಿ ವಿಜಯವಿಠ್ಠಲ ಉಡುಪಿಯ ಕೃಷ್ಣ ನಿನಗೆ | ದರಿಲ್ಲವೆಂಬೊ ಘನವೊ9
--------------
ವಿಜಯದಾಸ
ಏಳು ಶ್ರೀನಿವಾಸ ಏಳು ಲಕ್ಷ್ಮೀರಮಣ ಏಳು ಬೆಟ್ಟದೊಡೆಯ ಏಳು ಭಕ್ತರ ಪ್ರೀಯ ಏಳಯ್ಯ ಬೆಳಗಾಯಿತು ಹರಿಯೇ ಪ. ಆದಿಶೇಷನ ಮೇಲೆ ಅಪ್ರಮೇಯನು ನೀನು ಆದರದಿ ಮಹಲಕ್ಷ್ಮಿಯೊಡನಿರಲೂ ಸುರರು ಸನಕ ಸನಂದನರು ಆದರಿಸೆ ಬಾ ಬೇಗ ಬಾಗಿಲನು ತೆಗೆದು ಆದಿಮೂರುತಿ ನಿನ್ನ ಮುಖ ದರ್ಶನವ ಮಾಡಿ ಮೋದ ಪಡುತಲೆ ಭಕ್ತ ಕೋಟಿ ಸ್ತುತಿ ಮಾಡಲು ಮಾಧವನೆ ಹಾಸು ಮಂಚವನಿಳಿದು ಬಾ ಕತ್ತಲೆ ಹರಿಪಾ ದಿವಾಕರನ ತೆರದಿ ಹರಿಯೇ ಏಳಯ್ಯ ಬೆಳಗಾಯಿತು 1 ಕಾಸಿದ್ಹಾಲನೆ ತಂದು ಕಾವಡಿಯಲಿ ತುಂಬಿ ಲೇಸಾಗಿ ನಿನ್ನ ಭಕ್ತರು ನಿಂತಿದಾರೆ ವಾಸುದೇವನೆ ನಿನಗೆ ಮಲ್ಲಿಗೆ ಕುಸುಮ ಭಾಸುರಾಂಗನೆ ತಂದು ಅರ್ಪಿಸಲು ಭಕ್ತರು ಏಸು ಹೊತ್ತಿನಿಂದ ತುಳಸೀ ದಳ ತಂದು ವಾಸುಕೀಶಯನಗೆಂದು ಭೂಸುರರು ನಿಂದಾರೆ ವೇದ ಘೋಷದಿಂದ ಈಸು ನುಡಿಗಳು ನಿನ್ನ ಕರ್ಣಕೇಳಲಿಲ್ಲವೆ ಏಸು ಮೆಚ್ಚಿಸಿಹಳೋ ಲಕ್ಷ್ಮೀ ನಿನ್ನ ಸರಸದೊಳು ವಾಸುಕೀಶಯನ ಹಾಸಿಗೆಯಿಂದೇಳೋ ದೊರೆಯೆ ಏಳಯ್ಯ ಬೆಳಗಾಯಿತು2 ಕರುಣಾಸಾಗರ ನಿನಗೆ ಕರುಣೆ ಬರುವಾತೆರ ಪರಿಪರಿಯ ಸ್ತೋತ್ರದೊಳು ನಾರಿಯೇರು ಕರೆವರೋ ಕರಗತ ಕಾಮಧೇನು ನೀನೆಂದು ಕರದೊಳಾರತಿಯ ಪಿಡಿದೂ ತರತರದ ಉಡಿಗೆ ತೊಡಿಗೆ ನಿನಗೀಯಲು ಸರಸರನೆ ದೇಶದೇಶದಿ ಬಂದು ನಿಂತಿದ್ದಾರೆ ಶರಧಿ ಗಂಭೀರನೆ ವರ ಶ್ರೀ ಶ್ರೀನಿವಾಸನೆ ಕರುಣೆ ತೋರುತ್ತ ನಿನ್ನ ಭಕ್ತರ ಮೇಲೆ ವರ ನಾರಿಯರ ನಾಟ್ಯ ವೈಭವದಿ ವರದುಂದುಭಿ ವಾದ್ಯದಲಿ ವರ ತಾಳ ಮೇಳದಿಂ ವರ ಶೇಷಾದ್ರಿವಾಸ ವೆಂಕಟೇಶನೆ ಏಳಯ್ಯ ಬೆಳಗಾಯಿತು 3
--------------
ಸರಸ್ವತಿ ಬಾಯಿ
ಏಳುತಲಿ ಎದ್ದು ಎಚ್ಚರಿಸುತ ನೀ ನೆನೆಯೊ | ಪಾಲಿಸುವ ಮೂಲೋಕ ಪರಮಾತ್ಮನಾ ಪ ಮೂರೊಂದು ಪದರದ ಚೀಲದೊಳು ಥಳಥಳಸಿ ದೋರುತಿಹ ರತ್ನ ಪರಿಚಿದ್ರೂಪನಾ | ಅರಿಗಳ ವಡೆದ ಘನ ತ್ರಿವೇಣಿ ತೀರದಲಿಹ | ಧೀರಯೋಗಿಯ ಕಂಗಳಾನಂದನ 1 ಬೇರು ಮೇಲಾಗಿ ಕೊಂಬುಗಳು ಕೆಳಗಾದ ಸಂ | ಸಾರ ವೃಕ್ಷವ ತ್ರಿಗುಣಮಯದಿಂದಲಿ || ವಾರಿಜಭವಾಂಡ ಪಿಂಡಾಂಡಗಳ ಪರಿಪರಿಯ | ತೋರಿ ತೋರದಲಿಪ್ಪ ನಿರ್ಲಿಪ್ತನಾ2 ನೋಡಿಸುವ ಕೇಳಿಸುವ ವಾಸಿಸುವ ಪರಿಮಳವ | ಆಡಿಸುವ ಕರಚರಣ ನುಡಿನುಡಿಸುವ | ರೂಢಿಯೊಳು ಸೂತ್ರಧಾರಕನಾಗಿ ಅಷ್ಟದಳದ | ಲಾಡುತಿಹ ಮಹೀಪತಿ ಸುತಪ್ರಭು ಭಕುತಿಯಲಿ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಒಂದು ದಿನ ನಾರದಮುನಿ ಗೋಕುಲದಿ ಇಂದಿರೇಶನ ಲೀಲೆಯಾ ನಿಂದು ನಭದಲಿ ನೋಡುತಾ | ಮೈಯುಬ್ಬಿ ಬಂದನಾ ವೈಕುಂಠಕೆ 1 ಸಿರಿದೇವಿ ಸಖಿಯರೊಡನೆ | ವನದಲ್ಲಿ ಪರಿಪರಿಯ ಕ್ರೀಡೆಯೊಳಿರೇ ಅರವಿಂದ ನಯನೆಯನ್ನೂ | ಕಂಡನಾ ಸುರಮುನಿಯು ಸಂಭ್ರಮದಲೀ 2 ಜಗನ್ಮೋಹನಾಕಾರಳೂ | ಶ್ರೀ ಹರಿಯ ಜಗ ಸೃಷ್ಟಿಗನುಕೂಲಳೂ ಬಗೆ ಬಗೆಯವತಾರಳೂ | ಕ್ಷಣ ಹರಿಯ ಅಗಲದಂತಿರುತಿಪ್ಪಳೂ 3 ಹರಿಗೆ ಗುಣದಿಂ ಕಿರಿಯಳೂ | ಮತ್ತೆಲ್ಲ ಪರಿಯಲ್ಲಿ ಹರಿಗೆ ಸಮಳೂ ಶರಣೆಂದವರ ಕಾಯ್ವಳೂ | ಬೊಮ್ಮಾದಿ ಸುರರ ಸೃಜಿಸುವ ಶಕ್ತಳೂ 4 ನಾಕ ಸ್ತ್ರೀಯರನೆ ಕೂಡೀ | ವನದಲ್ಲಿ ಲೋಕನಾಯಕಿ ರಮಿಸುತಾ ಶ್ರೀಕಾಂತನಗಲದವಳೂ | ಮುನಿಗೆ ತ ನ್ನೇಕರೂಪವ ತೋರ್ದಳೂ 5 ನೊಡಿ ನಮಿಸಿದನು ಸಿರಿಯಾ | ಹರಿಗುಣವ ಹಾಡಿ ಪಾಡಿದನು ಮೈಯ್ಯಾ ಮೂಡೆ ರೋಮಾಂಚ ಕೈಯ್ಯಾ | ಮುಗಿಯುತಲಿ ನೋಡಿದನು ಸಿರಿಯ ದಣಿಯಾ 6 ಪಲ್ಲವಾಧರೆ ನಗುತಲಿ | ತನ್ನ ಕರ ಪಲ್ಲವದಿ ಕೃಪೆಯ ಮಾಡೀ ಎಲ್ಲಿಂದ ಬಂದೆ ಮುನಿಪಾ ವಿಷಯವೇ ನೆಲ್ಲ ಪೇಳೆಂದೆನ್ನಲೂ 7 ಏನ ಪೇಳುವೆನೆ ತಾಯೆ | ನಿನ ಪತಿಯ ನಾನಾ ವಿಧ ಚರ್ಯೆಗಳನೂ ನಾನರಿಯಲಾರೆ ನಮ್ಮಾ | ನವನೀತ ಚೋರನಾಗಿರುವನಮ್ಮಾ 8 ನಾಕ ಭೂಲೋಕ ತಿರುಗೀ | ಭುವಿಯೊಳಗೆ ನಾ ಕಂಡೆ ಗೋಕುಲವನೂ ಹೇ ಕಮಲೆ ಕೇಳು ಅಲ್ಲೀ | ನಿನ ಪತಿಯು ಆಕಳಾ ಕಾಯುತಿಹನೂ 9 ಬಿಟ್ಟು ವೈಕುಂಠವನ್ನೂ | ಪ್ರಾಯ ಸತಿ ದಿಟ್ಟೆ ನಿನ್ನನು ತೊರೆದನೂ ಹುಟ್ಟಿ ಗೊಲ್ಲರ ಕುಲದಲೀ | ಬೆರತನಾ ಕೆಟ್ಟ ಹೆಂಗಳೆಯರಲ್ಲಿ 10 ನಳಿನಜಾಂಡವ ಸಾಕುವಾ | ಜಗದೀಶÀ ಗೋಪಿ ಬೈ ಗಳನು ತಾ ಕೇಳುತಿಹನೂ 11 ಮದನಮೋಹನರೂಪನೂ | ಗೊಲ್ಲತೆರ ಅಧರಾಮೃತವ ಸವಿವನೂ ಎದೆ ಗಂಟು ಪಿಡಿಯುತಿಹನೂ | ಚಂಡೆಂದು ಗದರಿಸಲು ನುಡಿಯುತಿಹನೂ 12 ಸಂಪೂರ್ಣ ಕಾಮ ತಾನು | ವನದಲ್ಲಿ ಗುಂಪು ಸ್ತ್ರೀಯರ ಕೂಡ್ವನೂ ಸಂಪನ್ನ ಭೋಗಿಸುವನೂ | ಕೊಳಲ ಪಿಡಿ ದಿಂಪುಗಾನವ ಗೈವನೂ 13 ವನದ ಸೊಬಗೇನುಸುರುವೇ | ಶ್ರೀರಮಣಿ ದನಕರುವ ಕಾಯುತ್ಹರಿಯಾ ವನವನವ ತಿರುಗುತ್ತಿರೇ | ಕೊಳಲ ಧ್ವನಿ ವನವೆಲ್ಲ ತುಂಬಿರುತಿರೇ 14 ತಿಳಿಯುದಕ ಯಮುನೆ ಮಳಲು | ದಿಣ್ಣೆಯಲಿ ಕೊಳಲೂದೆ ಹರಿ ಕೇಳಲೂ ಮೊಳೆತವಾ ಬಂಜೆ ಮೋಟೂ | ಮೃಗಪಕ್ಷಿ ಕುಳಿತು ಮೈಮರೆತು ಕೇಳೇ 15 ಓಡಿ ಬರುತಲಿ ತುರುಗಳೂ | ಬಾಲವ ಲ್ಲಾಡಿಸದೆ ಕಣ್ಣುಮುಚ್ಚಿ ಮಾಡಿಟ್ಟ ಪ್ರತಿಮೆಯಂತೆ | ಕಾಣುತಿರೆ ಆಡಿಸದೆ ಸರ್ಪ ಹೆಡೆಯಾ 16 ಶೃಂಗಾರ ಕೊಳಲನೂದೆ | ಜಡ ಚೇತ ನಂಗಳಾಗುತ ಚಿಗುರಲೂ ಅಂಗ ಮರೆಯುತ ಜೀವಿಗಳ್ | ಜಡದಂತೆ ಕಂಗಳನುಮುಚ್ಚಿನಿಲ್ಲೆ 17 ಅಷ್ಟ ಐಶ್ವೈರ್ಯದಾತಾ | ನಾರಿಯರ ತುಷ್ಟಿಪಡಿಸುತಲಿ ಖ್ಯಾತಾ ಶಿಷ್ಟ ಜನರನು ಪೊರೆಯುತಾ | ರಕ್ಕಸರÀ ಹುಟ್ಟಡಗಿಸುವನು ವಿಹಿತಾ 18 ಪೇಳಲಳವಲ್ಲವಮ್ಮಾ | ಶ್ರೀ ಹರಿಯ ಲೀಲೆ ಜಾಲಗಳ ಬ್ರಹ್ಮಾ ನೀಲಗಳರರಿಯರಮ್ಮಾ | ಆನಂದ ತಾಳಿದೆನು ಕೇಳೆ ರಮ್ಮಾ 19 ಇಷ್ಟು ಗೋಕುಲದಿ ನೋಡೀ | ಕಾಣದಿ ನ್ನೆಷ್ಟೋ ಎನ್ನುತಲಿ ಪಾಡೀ ಗುಟ್ಟು ಪೇಳಲು ಬಂದೆನೂ | ಸಿರಿದೇವಿ ಸಿಟ್ಟಾಗಬೇಡವಿನ್ನೂ 20 ಪರನಾರಿಯರ ಬೆರೆಯುತಾ | ಶ್ರೀ ಕೃಷ್ಣ ಮರೆತು ನಿನ್ನನು ಸುಖಿಸುತಾ ಪರಿ ಯೊಚಿಸಮ್ಮಾ | ಆಜ್ಞೆ ಕೊಡು ತ್ವರಿತದಲಿ ಪೋಪೆನಮ್ಮಾ 21 ಹರಿಚÀರ್ಯವೆಲ್ಲ ಕೇಳಿ | ಶ್ರೀ ತರುಣಿ ಪರಮ ಆನಂದ ತಾಳೀ ಬೆರಗಾದ ಪರಿತೋರುತಾ | ಮುನಿವರಗೆ ಪರಿ ಏನು ಮುಂದೆ ಎನಲೂ 22 ಸನ್ನುತಾಂಗನ ಕೂಡಲೂ | ಭೂತಳದಿ ಇನ್ನೇನುಪಾಯವೆನಲೂ ಪನ್ನಂಗ ವೇಣಿ ಉದಿಸೂ | ಭೀಷ್ಮಕಗೆ ಇನ್ನು ನೀ ಕುವರಿ ಎನಿಸೂ 23 ಎಂತೆಂತು ಹರಿಯಚರ್ಯೆ | ಸಿರಿಕಾಂತೆ ಅಂತಂತು ನಿನ್ನ ಚರ್ಯೆ ಸಂತೋಷಪಡಿಸಿ ಎಮ್ಮಾ | ಸಲಹಮ್ಮ ಶಾಂತೆ ನಾ ಪೋಪೆನಮ್ಮಾ 24 ಮತ್ತೊಮ್ಮೆ ನೋಳ್ಪೆನೆಂದೂ | ಗೋಕುಲದ ಹತ್ತಿರದಿ ನಭದಿ ನಿಂದೂ ಸುತ್ತು ಮುತ್ತಲೂ ನೊಡಲೂ | ಸಿರಿದೇವಿ ವ್ಯಾಪ್ತಳಾಗಲ್ಲಿ ಇರಲೂ 25 ವನದಿ ಹರಿವಕ್ಷದಲ್ಲೀ | ಸಿರಿದೇವಿ ಘನ ವೇಣೂರೂಪದಲ್ಲೀ ವನಲಕ್ಷ್ಮೀರೂಪದಲ್ಲೀ | ಗೋಪಿಯರ ಪ್ರಣಯ ಪ್ರಕಾಶದಲ್ಲೀ 26 ಎಲ್ಲೆಲ್ಲಿ ಸೌಂದರ್ಯವೋ | ಉಲ್ಲಾಸ ಎಲ್ಲೆಲ್ಲಿ ವೈಭವಗಳೋ ಎಲ್ಲೆಲ್ಲಿ ಹರಿಲೀಲೆಯೋ | ಸಿರಿದೇವಿ ಅಲ್ಲಲ್ಲಿ ತಾನಿರುತಿರೆ 27 ಸಿರಿ ಹರಿಯ ಚರಿಯ ನೊಡಿದ ಪ್ರತಾಪಾ ಧರೆಗಿಳಿದು ನಮಿಸಿ ನಿಂದಾ | ಕ್ಷಮಿಸೆಂದು ಸಿರಿ ಹರಿಗೆ ಸ್ತೋತ್ರಗೈದಾ 28 ಸಿರಿಹರಿ ವಿಯೋಗವಿಲ್ಲಾ | ಆವಾವÀ ಕಾಲ ದೇಶದಲ್ಲೀ ಅರಿಯದಜ್ಞಾನ ನುಡಿಯಾ | ಮನ್ನಿಸೋ ಮಾಯಾ 29 ಜಯ ಜಯತು ಸುರವಂದ್ಯನೇ ಜಯ ಜಯತು ದುಷ್ಟಹರಣ | ಗುಣ ಪೂರ್ಣ ಜಯ ಜಯತು ಶಿಷ್ಟ ಶರಣಾ30 ಸ್ತುತಿಸುತಂಬರಕಡರಿದಾ | ಸುರಮುನಿಪ ಚ್ಯುತದೂರನತಿ ವಿನೋದಾ ಪತಿತರನು ಕಾಯ್ವ ಮೋದಾ | ಸುಖತೀರ್ಥ ಯತಿಗೊಲಿದು ಉಡುಪಿಲ್ನಿಂದಾ 31 ಆಪಾರ ಮಹಿಮ ಶೀಲಾ | ಸರ್ವೇಶ ಗೋಪಿಕಾ ಜನ ವಿಲೋಲಾ ಆಪನ್ನ ಜನರ ಪಾಲ | ಗುರುಬಿಂಬ ಗೋಪಾಲಕೃಷ್ಣವಿಠಲಾ 32
--------------
ಅಂಬಾಬಾಯಿ
ಓಡಿ ಓಡಿ ಬಾ ಅಂಕದೊಳಾಡೋ ಕೂಸೇ ಬಾ ಪ ನೋಡುವೆ ನಿನ್ನ ರಾಮರ ಮುಖದಿ ಕೂಡಿ ಕರುಣಿಯೆ ಬಾ ಅ.ಪ. ಚೆಂಡು ಕೊಡುವೆನು ಬಾ ಗೋಲಿಗುಂಡು ಕೊಡುವೆನು ಬಾದುಂಡು ಕರದೊಳ್ ಗುಂಡು ಬಿಂದುಲಿ ಉಂಗುರನೀಡುವೆ ಬಾ 1 ಬೆಣ್ಣೆ ಕೊಡುವೆನು ಬಾ ಬಾಳೆಹಣ್ಣು ಕೊಡುವೆನು ಬಾಸಣ್ಣ ಸಣ್ಣ ಹೆಜ್ಜೆನಿಕ್ಕುತ ಮನ್ಮಥಪಿತನೆ ಬಾ 2 ನಾರಿವತ್ಸೆ ಬಾ ಮುತ್ತಿನ ಹಾರ ಹಾಕುವೆ ಬಾಪಾರಿಜಾತ ಮುಡಿಸಿದ ರುಕ್ಮಿಣಿಧೀರ ಕೃಷ್ಣನೆ ಬಾ 3 ಮುರಳೀಧರನೆ ಬಾ ಮುಂಗುರಗಳ ಭೂಷಿತ ಬಾಪರಿಪರಿವಸ್ತ್ರವನಿಟ್ಟು ನೋಡುವೆ ಮರಳಿ ಮರಳಿ ಬಾ 4 ನಂದನ ಕಂದನೆ ಬಾ ಮನಕಾನಂದಪಡಿಸುತ ಬಾನಿಂದಿರಲಾರೆ ನಿನ್ನನು ನೋಡದೆ ಇಂದಿರೇಶನೆ ಬಾ 5
--------------
ಇಂದಿರೇಶರು
ಔಷಧದ ಬೇರೊಂದನು ನಾರದನು ತಂದ ಪೋಷಣೆಗೆ ಸಕಲರೂ ಸವಿಯಲೆಂದ ಪ ಜ್ವರಭೇದಗಳಿಗೆಲ್ಲ ನರಹರಿ ಎಂಬ ಬೇರು ಶಿರವೇಧೆ ಎಂಬುದಕೆ ಹರಿಹರಿ ಎಂಬ ಬೇರು ವಾತ ರುಜೆಗಳಿಗೆ ಸಿರಿಲೋಲನೀ ಬೇರು ಪರಿಪರಿಯ ಭವಗಳಿಗೆ ನಾರಾಯಣಾ ಎಂಬ ಬೇರು 1 ಪಿತ್ತರೋಗಂಗಳಿಗೆ ಚಿತ್ತಜನಪಿತನೆಂಬ ಪೃಥ್ವಿಯೊಳಗತ್ಯಧಮ ವಿಭಂದ ರೋಗಗಳಿ ಗರ್ಥಿಯಿಂ ಲೇಪಿಸುವ ಸತ್ವಗುಣನಿಧಿಯೆಂಬ ನಿತ್ಯಶೌರಿಯ ನಾಮ ಶಿವಬೇರು 2 ನಾರದನು ಬೇರೂರೆ ನೀರೆರೆದ ಪ್ರಹ್ಲಾದ ಧೀರಬಲಿ ಬೆಳೆಯಿಸಿದ | ನೀರ ಗಜನೆರೆದ ವೀರದಶಶಿರನನುಜನೆಚ್ಚರದೊಳಿದ ಕಾಯ್ದ ನಾರಿ ದ್ರೌಪದಿ ಶಿರದಿ ಮೊಗ್ಗಾಗಿ ಧರಿಸಿದಂಥ 3 ಅರಳಿದ ಸುಮಗಳನು ಅಕ್ರೂರ ಪೋಷಿಸಿದ ತ್ವರಿತದಿ ಕಾಯ್ಗಳನು ಶುಕದೇವ ಕಾಯ್ದ ನರರೆಲ್ಲರೀ ಫಲವ ದಿನದಿನವು ಮೆಲಲೆಂದು ವರದ ಮಾಂಗಿರಿರಂಗ ಪೇಳುತಿಹನು 4
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಕಂಡು ಕೌತುಕ ಕಾಯದೊಳಗಿನಾಶ್ರಯ ಸಾಧನ ಕೊಂಡಾಡಲೆಷ್ಟೆಂದು ನಾ ಧ್ರುವ ಏಳು ಮೂರೆರಡು ನಾದಗಳು ಪರಿಪರಿಗಳುಕೇಳಬರುತಲ್ಯದ ತಾಳಮೃದಂಗ ಭೇರಿಗಳು ಸುಫೋಷಗಳು ಕೇಳಗುಡುತಲ್ಯದ 1 ಒಳಗೆ ಕಂಡೆ ನಾ ರಾಶಿ ಬೆಳಗಿನ ಮಳೆ ಮಿಂಚಿನ ತಳದ್ಹಿಡಿದು ತುಂಬೇದ ಕಳೆಕಾಂತಿ ರವಿಕೋಟಿ ಕಿರಣ ತೇಜ:ಸ್ಪುರಣ ಥಳಥಳಗುಡುತ್ಯದ 2 ಮಂಗಳಕರದಾನಂದೋದಯ ಮಹದಾಶ್ರಯ ರಂಗಮಯದೋರುತ್ಯದ ಸಂಗಸುಖ ಬೀರುತ್ಯದ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಂಡೆ ಕಂಗಳಲೆನ್ನ ಮಂಗಳಾತ್ಮನ ಕಂಡೆ ಕಂಡೆ ಮಂಗಳಾಂಗ ಶ್ರೀ ಗುರುರಂಗನ ಕಂಡೆ ಧ್ರುವ ಬಾಲ ಲೀಲೆ ತೋರಿದ ನೀಲವರ್ಣನ ಕಂಡೆ ಪಾಲಗಡಲಲಿಹ್ಯ ಗೋಪಾಲನ ಕಂಡೆ ಮೂಲರೂಪದಲಿ ಫಲ್ಗುಣಗೊಲಿದನ ಕಂಡೆ ಕುಲಕೋಟಿ ಬಂಧುವಾದ ಬಳಗನ ಕಂಡೆ 1 ಮೂರ್ತಿ ನಳಿನನಾಭವ ಕಂಡೆ ಪಾದ ಹೊಳೆವನ ಕಂಡೆ ಕಳ್ಳ ಮೊಸರ ಬೆಣ್ಣೆ ಮೆಲುವ ಚೆಲುವನ ಕಂಡೆ ಇಳೆಯೊಳು ಗೋಕುಲದಿ ಸುಳಿದನ ಕಂಡೆ 2 ಕಿರೀಟ ಕುಂಡಲಕರ್ಣ ಕೌಸ್ತುಭಧರನ ಕಂಡೆ ಪರಿಪರಿ ಭೂಷಣ ಸರ್ವಾಂಗನ ಕಂಡೆ ವಾಹನ ಸ್ವಾಮಿ ಉರಗಶಯನ ಕಂಡೆ ಸಿರಿಯ ಲೋಲಲಿಹ ಸರ್ವೋತ್ತಮನ ಕಂಡೆ 3 ಮದನ ಮೋಹನನ ಕಂಡೆ ಆದಿ ಅವಿನಾಶ ಶ್ರೀಧರನ ಕಂಡೆ ಯದುಕುಲೋತ್ತಮ ಮಧುಸೂದನನ ಕಂಡೆ ಸಾಧು ಹೃದಯ ಪ್ರಾಣ ಶ್ರೀಮಾಧವನ ಕಂಡೆ 4 ತುರುಗಳ ಕಾಯ್ದ ಶ್ರೀಹರಿ ಗಿರಿಧರನ ಕಂಡೆ ಮುರಹರನೆನಿಸಿದ ಸುರಾಧೀಶನ ಕಂಡೆ ಕರಿಯ ವರದಾಯಕ ಹರಿ ದಯಾಳುನ ಕಂಡೆ ನರಹರಿ ಶ್ರೀನಾರಾಯಣನ ಕಂಡೆ 5 ದುಷ್ಟಮರ್ದನ ದೂರ ವಿಷ್ಣುದೇವನ ಕಂಡೆ ಶಿಷ್ಟ ಜನ ಪಾಲಕ ಸೃಷ್ಟೀಶನ ಕಂಡೆ ದೃಷ್ಟಿಯೊಳು ಸುಳಿದು ದೃಷ್ಟಾಂತಾದವನ ಕಂಡೆ ಕಷ್ಟ ಪರಿಹರಿವ ಶ್ರೀಕೃಷ್ಣನ ಕಂಡೆ 6 ಗುರು ಶಿರೋಮಣಿ ತ್ರೈಲೋಕ್ಯನಾಥನ ಕಂಡೆ ಪರಮಭಕ್ತರ ಸಂಜೀವನ ಕಂಡೆ ಶರಣ ರಕ್ಷಕ ನಮ್ಮ ಕರುಣ ಸಿಂಧುನ ಕಂಡೆ ತರಳ ಮಹಿಪತಿ ಪ್ರಾಣಹೊರೆವ ಕಂಡೆ 7
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕಂಡೆ ಕಂಡೆನು ಸ್ವಾಮಿಯ ಸುಪ್ರೇಮಿಯಾ ಪ ಕಂಡೆ ಕಂಡೆನು ಕೃಷ್ಣರಾಯನ ಪುಂಡರೀಕ ದಳಾಯತಾಕ್ಷನ ಪಾಂಡವಪ್ರಿಯ ಪಾರ್ಥಸಖನ ಉ ದ್ದಂಡ ಮಹಿಮ ಸುರೇಂದ್ರವಂದ್ಯನ ಅ.ಪ. ಕನಕ ನವಮಣಿ ಖಚಿತ | ವಾಗಿಹ ಸಿಂಹಾ ಸನದೊಳು ಸಲೆ ಶೋಭಿತ | ಸುರುಚಿರ ದಿವ್ಯ ಘನನೀಲನಿಭರಂಜಿತ | ನಿರ್ಮಲಗಾತ್ರ ಕುಂಡಲ ಮಣಿ ಗಣದ ಹಾರಾದಿ ಬಹು ಭೂ ಷಣಗಳನುಪಮ ಕಾಂತಿಯಿಂದಲಿ ಮಿನುಗುವತಿ ಲಾವಣ್ಯ ಮೂರ್ತಿಯ 1 ಕೋಟಿ ಮನ್ಮಥರೂಪನ | ಶ್ರೀಕೃಷ್ಣನ ಹಾಟಕಾಂಬರಧಾರನ | ಕರುಣಾಮಯ ಕಂಬು ಕಂಠನ ಆಟಮಾತ್ರದಿ ಪ್ರಬಲ ದೈತ್ಯ ಮ ಹಾಟವಿಯ ನಿರ್ಧೂಮಗೈದನ ಖೇಟವಾಹನನೆನಿಪ ತ್ರಿಜಗದಿ ಸಾಟಿಯಿಲ್ಲದ ದೇವದೇವನ 2 ಮೆರೆವ ದ್ವಾರಕಾಧೀಶನ | ದ್ರೌಪದಿದೇವಿ ಮೊರೆ ಕೇಳಿ ಸಲಹಿದನ | ಭಜಿಪರ ಅವ ಸರಕೊದಗುವ ದೇವನ | ಶ್ರೀ ಕೃಷ್ಣನ ತರಳತನದಲಿ ಗೋಕುಲದಿ ತಾ ಪರಿಪರಿಯ ಲೀಲೆಗಳ ತೋರಿದ ಪರಮ ಪುರುಷನ ಕರಿಗಿರೀಶನ ಸರಿಯಧಕರಿಲ್ಲದ ಸುರೇಶನ 3
--------------
ವರಾವಾಣಿರಾಮರಾಯದಾಸರು