ಒಟ್ಟು 139 ಕಡೆಗಳಲ್ಲಿ , 50 ದಾಸರು , 130 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಶರಣು ನಿನಗೆ ಶರಣೆಂದೆನೊ ಹರಿಯೇ ಕರುಣಿಸಿ ಕಾಯೋ ಎನ್ನಧೊರಿಯೆ ಪ ಪರಮಕೃಪಾಕರ ಪಾವನ ನರಹರಿ ಪಾಲಿಸೊ ಎನ್ನನಿ--- ಶರಣೆಂದ ವಿಭೀಷಣನ ಆದಿಭಕ್ತರ ಶ್ರಮ ಪರಿಹರಿಸಿದಂಥ ಶ್ರೀಧರಾ 1 ಭಕ್ತಾ ಪಾಂಡವ ಪಕ್ಷಾ ಬಲಿಯ ಭೂಮಿಯ ಭಿಕ್ಷಾ ಯುಕ್ತಿಲಿ ನೀ ಸಾಧಿಸಿದ ಯೋಧನೆ ಮುಕ್ತಿದಾಯಕ ದೇವ ಮುರಹರ ಮಾಧವನೆ ಮೌಕ್ತಿಕ ಮುಕುಟ ಧರಿಸಿದನೆ 2 ಸುಂದರ ಮೂರುತಿ-----ಜಗತ್ಪತಿ ಇಂದಿರಾ ಹೃದಯಾನಂದನೆ ಬಂದ ಭಕ್ತರ ಬಿಡದೆ ಅಂದಿಗೆ ನೀನೆ ಪೊರೆದೆ----ಹೆನ್ನ ವಿಠ್ಠಲಾ ಸಲಹೋ ಎನ್ನ 3
--------------
ಹೆನ್ನೆರಂಗದಾಸರು
ಶರಣು ಶರಣು ಕೃಷ್ಣಕೃಷ್ಣ ಶರಣು ಶರಣು ರಾಮ ರಾಮ ಶರಣು ಶರಣು ಶ್ರೀನಿವಾಸ ಶರಣು ಶರಣು ಶ್ರೀ ಹರೇ ಪ ಗುರುಸು ಭಕ್ತಿ ನೀಡಿ ಎನಗೆ ವರಿಸಿ ಶುದ್ಧ ದಾಸನೆಂದು ಕರುಣ ತೋರೊ ಕೇಶವ ಅನಂತ ರೂಪಿಯೇ ಅ.ಪ ಲೇಸಿನಿಂದ ಬ್ರಹ್ಮಶಿವರ ಪ್ರೇರಿಸುತ್ತ ಜಗವ ಪೊರೆವೆ ದಾಸನೆಂದು ಮೊರೆಯ ಹೊಕ್ಕೆ ಕಾಯೊ ಕೇಶವಾ 1 ವಾರಿನಿಲಯ ದೋಷದೂರ ಪೂರ್ಣಕಾಮ ಮುಕ್ತರೀಶ ಶರಧಿ ನಾರಾಯಣ 2 ವೇದಮಾತೆ ಶೃತಿ ಸುಗೀತೆ ವೇದಮಾನಿ ಲಕ್ಷಿರಮಣ ಶೂನ್ಯ ಮಾಧವ 3 ವಿನುತ ಸಾರ ವೇದಬಲ್ಲ ಸಾಧು ಪ್ರಾಪ್ಯ ವೇದಪಾಲ ಶರಣು ಗೋವಿಂದ 4 ವಿಶ್ವಜನಕ ವಿಶ್ವಪಾಲ ವಿಶ್ವವ್ಯಾಪ್ತ ವಿಶ್ವಭೋಕ್ತ ವಿಶ್ವಜೂತಿ ವಿಶ್ವಬಲನೆ ಶರಣು ವಿಷ್ಣುವೆ 5 ಆದಿ ದೈತ್ಯರನ್ನು ಕೊಂದು ಮೇದಿನೀಯ ಪೊರೆದ ದೇವ ಬಾಧೆ ಹರಿಸು ಮೂರು ವಿಧಧ ಮಧುಸೂದನ 6 ಲೋಕತ್ರಯವ ನಳೆದ ನೇಕ ಏಕನಿನಗೆ ಸಾಟಿಯಾರು ಜೋಕೆಯಿಂದ ಸಾಕಬೇಕು ತ್ರಿ-ವಿಕ್ರಮ 7 ಸೋಮ ಹಳಿದ ಕಾಂತಿಧಾಮ ನೇಮದಿಂದ ಬಲಿಯ ಕಾಯ್ದೆ ಹೇಮ ಜ್ಯೋತಿ ಪೂರ್ಣ ಸುಖಿಯೆ ಶರಣು ವಾಮನ 8 ಬೊಮ್ಮಶಿವರ ಕುಣಿಸಿ ಆಳ್ವ ಅಮ್ಮ ಪ್ರಕೃತಿಯನ್ನು ಧರಿಸಿ ಸುಮ್ಮಗೇನೆ ಜಗವ ಕಾವೆ ಶರಣು ಶ್ರೀಧರ 9 ಕರಣ ವ್ರಾತದಲ್ಲಿ ನಿಂತು ಕರಣಕಾರ್ಯಗಳನು ನಡಿಸಿ ಕರಣ ಪತಿಗಳನ್ನು ಪೊರೆವೆ ಹೃಷಿಕೇಶನೆ 10 ಉದರದಲ್ಲಿ ಜಗವ ಪೊತ್ತು ಸದರದಿಂದ ಒಪ್ಪಿಕೊಂಡೆ ಉದರದಲ್ಲಿ ರಜ್ಜುಭಂಧ ದಾಮೋದರ 11 ಚೊಕ್ಕವಿಧಿಯ ಹಾಗೆ ಜಗವ ಕುಕ್ಷಿಯಲ್ಲಿ ಪಡೆದ ದೇವ ಶರಧಿ ಶಯನ ಪದ್ಮನಾಭನೆ12 ಭಕ್ತಜನರ ಪಾಪಸೆಳೆವ ಶಕ್ತ ಪ್ರಲಯ ಸ್ತುತಿಗೈವ ದೇವ ಮುಕ್ತಿದಾತ ವಿಶ್ವಕುಕ್ಷಿ ವಾಸುದೇವನೆ 14 ಮೇರೆಯಿರದ ಕಾಂತಿಮಯನೆ ಸೇರಿ ಭಾಸ ಕೊಡುವೆ ರವಿಗೆ ಬೀರಿ ಜ್ಞಾನ ಭ್ರಾಂತಿ ಹರಿಸು ಪ್ರ-ದುಮ್ನನೆ 15 ನೀ ನಿರೋಧ ಕಾಣೆ ಎಂದು ನೀನೆ ಸಿಗುವೆ ಭಕ್ತಿ ಬಲೆಗೆ ಕೃಪಣ ಕ್ಷಮಿಸು ಅನಿ-ರುಧ್ಧನೆ 16 ಕ್ಷರರು ಜೀವ ರಾಶಿ ಎಲ್ಲಕ್ಷರ ವಿರುಧ್ಧ ಲಕ್ಷ್ಮಿತಾನು ವರನು ಭಿನ್ನ ಉಭಯರಿಂದ ಪುರುಷೋತ್ತಮ 17 ಕರಣಗಳಿಗೆ ಸಿಗುವನಲ್ಲ ಕರಣಗಳಲಿ ಭೇದವಿಲ್ಲ ಕರಣಜಯವ ಸಿಧ್ಧಿಸೆನಗೆ ಅ-ಧೋಕ್ಷಜ18 ದೋಶರಹಿತ ಮುಕ್ತರೀಶ ನಾಶರಹಿತ ಲಕ್ಷ್ಮಿರಮಣ ಈಶಬಿಂಬ ಜೀವ ಹೃಸ್ಥ ನಾರಸಿಂಹನೆ 19 ಜೀವರೊಡನೆ ವಿತತ(ಇರುವೆ) ಅಚ್ಯುತ 20 ಇಂದ್ರನನುಜ-ನಿಜಮಹೇಂದ್ರ ತಂದೆ ಸುಖವ-ದಿವಿಜಣಕೆ ವಂದ್ಯ ವಂದ್ಯ-ವಂದಿಸುವೆನು ಶ್ರೀ- ಉಪೇಂದ್ರನೆ 21 ಸೃಷ್ಠಿಗೈದು ಜಗವ ಲಯಿಪೆ ದುಷ್ಟದಮನ ಶಿಷ್ಟವರದ ಹುಟ್ಟು ಸಾವು ಕಟ್ಟು ಬಿಡಿಸೊ ಶ್ರೀ ಜನಾರ್ದನ 22 ಯಜ್ಞಭೋಕ್ತ ಮನುವ ಪೊರೆದೆ ಭಗ್ನಗೈಸಿ ದೋಷವೆನ್ನ ಜ್ಞಾನ ನೀಡೋ ಸುಜ್ಞನೆನಿಸು ವಾಜಿವದನ ಶರಣು ಶ್ರೀಹರೇ 23 ವಿಭವ ಮೂರ್ತಿ ಭಕ್ತಮನವ ಪಾಪ ಸೆಳಿವೆ ರಿಕ್ತನಾನು ಸರ್ವವಿಧಧಿ ಕಾಯೊ ಶ್ರೀಕೃಷ್ಣ 24 ಸರ್ವ ಶಬ್ದವಾಚ್ಯ “ಶ್ರೀಕೃಷ್ಣವಿಠಲ”ನನ್ನು ನೆನೆಯೆ ಸರ್ವಸುಖಗಳಿತ್ತುಕಾವ ಜಿಷ್ಣು ತೆರದಿ ಸತ್ಯಹೋ 25
--------------
ಕೃಷ್ಣವಿಠಲದಾಸರು
ಶ್ರೀ ಕುಮಾರ ಚಾರು ಚರಣಕೆ ನಾ ನಮಿಪೆ ಕೃಪಾಕರ ಪ ಸುಂದರಾನನ ಸ್ಕಂಧ ಕಾಮಗೋ ವಿಂದಸುತ ಸುಂದರಾಂಗ ಪ್ರದ್ಯುಮ್ನನೆ ಇಂದಿರೇಶನ ದಯ ತಂದು ನೀ ಒದಗಯ್ಯ ವಂದಿಪೆ ನಿನ್ನರವಿಂದ ಪಾದಕೆ ನಾ 1 ಸೂರ ಪದುಮಾದಿ ಅಸುರರೆಲ್ಲ ನೀ ಮುರಿದು ಪೊರೆದೆಯೊ ಮೂರು ಜಗವ ಎನ್ನ ಘೋರ ಬಾಧೆಗಳನ್ನು ತರಿದು ನೀ ಪೊರೆಯಯ್ಯ ಧೀರ ಉದಾರನೆ ಸುರಸೇನಾಧಿಪ 2 ಸೋಮವದನ ಉಮೇಶಸುತ ಗುಹ ಪ್ರೇಮದಯದಿ ಭ್ರಮಾಕಲುಷ ಕೀಳೊ ಬೊಮ್ಮನ ತಾತ ಪ್ರಸನ್ನ ಶ್ರೀನಿವಾಸ ವಾಮನ ಶ್ರೀಶನ ಪ್ರೇಮ ಸುಪಾತ್ರನೆ 3
--------------
ಪ್ರಸನ್ನ ಶ್ರೀನಿವಾಸದಾಸರು
ಶ್ರೀ ರಮೇಶನೆ | ಶ್ರೀ ನಾರಸಿಂಹ ಶ್ರೀ ರಮೇಶನೆ ಪ. ಶ್ರೀ ರಮೇಶ ಸುರ ಸಾರ್ವಭೌಮ ಭವ ತಾರಕಗೊಳಿಸುವ ಕಾರಣಪುರುಷ ಅ.ಪ. ಆದಿಮೂಲನೆ | ಅಪಾರ ಮಹಿಮ ಖೇದದೂರನೆ ವಾದಿಪ ಪಿತನೊಳು ಸಾಧಿಪೆ ನಿನ ಮತ ಮೋದಗೊಳಿಸಿ ಪ್ರಹ್ಲಾದನ ಪೊರೆದೆ 1 ಶೌರಿ ಭೂಧರಾ ದೊರೆ ಕಾದಿದ ದುಷ್ಟ ದೈತ್ಯಾದಿಗಳ ಕೊಂಡು ಮೋದವಿತ್ತೆ ಭೂದೇವಿಗೆದೆ ಶ್ರೀಶಾ 2 ಭೂಪರೈವರು | ಎದುರಲ್ಲಿ ಇರಲು ಪಾಪಿ ಖೂಳರು ದ್ರೌಪದಿ ವಸನವ ಕೈಪಿಡಿದೆಳೆಯಲು ಪತಿ ಸಲಹೆನೆ ತಾಪವ ಬಿಡಿಸದೆ 3 ನೀರೊಳಾಡಿದೆ | ನೀ ಕಲ್ಲು ಪೊತ್ತು ನಾರಿಯ ತಂದೆ ನಾರಸಿಂಹ ವಟು ವೀರರಾಮಚಂದ್ರ ಜಾರಚೋರ ವಸ್ತ್ರದೂರನೆ ಕಲ್ಕಿ 4 ಗೋಪಾಲಕೃಷ್ಣ | ವಿಠ್ಠಲದೇವ ಕಾಪಾಡೊ ಕೃಷ್ಣ ರೂಪ ರೂಪಾಂತರ ವ್ಯಾಪಿಸಿ ಜಗದೊಳು ಶ್ರೀಪತಿ ಹೃದಯದಿ ರೂಪವ ತೋರೊ 5
--------------
ಅಂಬಾಬಾಯಿ
ಶ್ರೀ ರಾಘವೇಂದ್ರ ಶ್ರೀ ರಾಘವೇಂದ್ರ ಶ್ರೀ ರಾಘವೇಂದ್ರ ಎನ್ನಿರೋ ``ಶ್ರೀ ರಾಘವೇಂದ್ರಾಯನ ನಮಃ'' ಎಂಬ ಪ ನಾಮವ ಸ್ಮರಿಸಿ | ಸುಖಿಯಾಗು ಮನವೇ ಅ.ಪ ಸಂಸಾರ ಸಾಗರದಿ ಬೆಂದು ಬಳಲಿರುವೇನಯ್ಯ ಮುಂದೇನು ಗತಿ ಕಾಣೆ ಗಾಡಾಂಧಕಾರದೊಳು ಮುಳುಗಿ ಬೆಂಡಾದೆನೊ ಕರುಣಿಸೈ ಗುರುರಾಘವೇಂದ್ರಾ1 ತಂದೆ ತಾಯಿಯು ನೀನೆ ಬಂಧು ಬಳಗವು ನೀನೆಂದು ನಂಬಿದೆನೈ ಪ್ರಭವೆ ಸಂದೇಹವೇಕಿನ್ನು ಕಂದನೆನು ತೆಂದು ಕಾಯೋ ಗುರುವೇ ಶ್ರೀ ರಾಘವೇಂದ್ರ ಪ್ರಭುವೆ2 ಅಂಧತ್ವ ಮೂಕತ್ವ, ಬಧಿರತ್ವ ಎಕಲಾಂಗಿಗಳ ಹಿಂದೆ ಪೊರೆದೆ ನೀನೆಂಬ ವಾರ್ತೆಕೇಳಿ ನಿನ್ನ ಘನ್ನಮಹಿಮಾ ಶ್ರೀ ರಾಘವೇಂದ್ರಾ 3 ಭವರೋಗ ಗಳೆಲ್ಲ ಪರಿಹರಿವುದೊ ಸ್ಮರಣೆ ಮಾತ್ರದಿ ಸಕಲ ಪಾಪಗಳನೋಡಿಸಿ ಪುನೀತರನೆ ಮಾಡುವಿಯೊ ಗುರುವೆ 4 ಬಿಡೆನು ಬಿಡೆನು ನಿನ್ನಡಿಗಳಿಗೆ ಸೇವಿಸಲು ದೃಢ ಭಕುತಿಯನೆ ಕೊಡು ಎನಗೆ ಶ್ರೀ ರಾಘವೇಂದ್ರಾ ಅಪಾರ ಮಹಿಮ ಶ್ರೀ ರಾಘವೇಂದ್ರಾ 5
--------------
ರಾಧಾಬಾಯಿ
ಶ್ರೀ ರಾಘವೇಂದ್ರಸ್ತುತಿಗಳು ಏಕಯ್ಯ ಎನ್ನ ಮರೆತಿರುವೆ ಓ ರಾಘವೇಂದ್ರ ಪ ಯಾಕೀ ಪ್ರಕೋಪ ಇನ್ನೆಗಮಾಂ ಗೈದುದೇನು ಅ.ಪ ನೀನೆ ಶ್ರೀವೆಂಕಟಾರ್ಯಗೊಲಿದೆ ಪತಿತನ್ನ ಪೊರೆದೆ ದೀನಪಾಲಕ ಜ್ಞಾನಪರಿಪೂರ್ಣ ಮಾಂಗಿರೀಶ ಕೃಪಾರ್ಣ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಶ್ರೀ ಲಕ್ಷ್ಮೀನಾರಾಯಣ ಪ ಕಾಲ ಕಾಲ ಗಾನವಿಲೋಲ ಜಯ ಜಯ ಅ.ಪ ವಿರಿಂಚಿ ಸ್ತೋತ್ರ ಪಡೆದ ಮಹಾತ್ಮ ಜಯ ಜಯ 1 ಗಿರಿಯು ನೀರೊಳ್ ಮುಳುಗಲಾಕ್ಷಣ | ಗೆರೆದೆಯಮೃತವ ಪೊರೆದೆ ಕರುಣದಿ2 ಶೇಷಗಿರಿಯ ವರಾಹರೂಪನೆ 3 ಭರದೊಳಿರಲೊಡೆದ್ವಜ್ರ ಕಂಭದಿ | ಶರಣನು ಪೊರೆದಾ ನೃಸಿಂಹನೆ 4 ಳೊದಗಿರುವ ತ್ರಿವಿಕ್ರಮನೆ ಜಯ ಜಯ 5 ಸಮಗೊಳಿಸಿ ಪೊರೆದಮಲ ಭಾರ್ಗವ 6 ಕುಶಲವರ ಪಿತ ರಾಮಚಂದ್ರನೆ 7 ಕುವರಿಯರಸ ಗೋಪಾಲಕೃಷ್ಣನೆ 8 ದತಿಕುಶಲ ಬುದ್ಧಾವತಾರನೆ 9 ಲಟ್ಟಹಾಸದಿ ಮೆರೆವ ಕಲ್ಕಿಯೆ 10 ಮಾಧವ ಗತಿ ಜಗದ್ಗುರು ಸಚ್ಚಿದಾನಂದ 11
--------------
ಸದಾನಂದರು
ಶ್ರೀ ವೆಂಕಟೇಶ ಸ್ತೋತ್ರ(2) ವೈಕುಂಠವಾಸ ಹರಿ ಶ್ರೀ ಕಂಠನುತ ನಿನ್ನ ಸಾಕಾರರೂಪ ತೋರೋ ಯಾಕಿಂತು ನಿರ್ದಯವು ಈ ಕುಮತಿ ಮೇಲಿನ್ನು ನೀ ಕರುಣಿಸೀಗ ಕಾಯೊ 1 ವಾಕು ಲಾಲಿಸುತ ನೀ ಬೇಕೆಂದು ಬೆಟ್ಟದಲ್ಲಿ ಲೋಕದ ಜನರನ್ನು ಸಾಕುತ್ತ ನಿಂತಿರುವ ಆಕಳ ಕಾಯ್ದ ದೇವಾ 2 ಕನಸು ಮನಸೀನಲ್ಲಿ ವನಜಾಕ್ಷ ನಿನ ದಿವ್ಯ ಘನರೂಪವನ್ನೆ ತೋರೊ ಅನುರಾಗದಿಂದ ಸಲಹೋ 3 ವೆಂಕಟಗಿರಿನಿಲಯ ಮಂಕುಮತಿಯ ಬಿಡಿಸಿ ಸಂಕಟಗಳನೆ ಹರಿಸೊ ಶಂಖಚಕ್ರಾಂಕಿತನೆ ಪಂಕಜಪಾದ ಮನ ಪಂಕಜದೊಳಗೆ ತೋರೊ 4 ಪದ್ಮಾಕ್ಷ ಪದ್ಮಮುಖ ಪದ್ಮಾನಾಭನೆ ನಿನ್ನ ಪದ್ಮ ಪಾದವೆ ಗತಿಯೊ ಪದ್ಮಾವತಿಪ್ರಿಯ ಪದ್ಮಹಸ್ತಾನೆ ನಿನ್ನ ಪದ್ಮಾದಿ ನಿನ್ನ ತೋರೊ 5 ಸೃಷ್ಟಿ ಸ್ಥಿತಿ ಲಯಕೆ ಕರ್ತಾನೆ ಎನ್ನ ಮನ ದಿಷ್ಟಾವ ಸಲಿಸಿ ಕಾಯೋ ಥಟ್ಟಾನೆ ಮನಕೆ ತೋರೊ 6 ತತ್ವಾಧಿಪತಿಗಳೊಳು ವ್ಯಾಪ್ತಾನಾಗಿರುತಿರ್ದು ಕರ್ಮ ಮಾಳ್ಪೆ ಎತ್ತಾ ನೋಡಿದರು ಸುರರರ್ಥಿಯಿಂ ಸ್ತುತಿಸುವರೊ ನಿತ್ಯಾಮೂರುತಿ ನೀ ಎಂದೂ 7 ನಿಗಮಾದಿ ವೇದದಿಂ ಬಗೆಬಾಗೆ ಸ್ತುತಿಸಿ ಕೊಂ ಬಗಣೀತ ಮಹಿಮ ದೇವಾ ಖಗರಾಜ ವಾಹನನೆ ನಗೆಮೊಗದ ಚೆಲುವ ಪ ನ್ನಗಶಾಯಿ ಸಲಹೊ ಎನ್ನ 8 ನಿತ್ಯಾ ತೃಪ್ತಾನೆ ಹರಿ ನಿತ್ಯಾ ಪ್ರಾಪ್ತಾನೆ ಸಿರಿ ನಿತ್ಯಾ ವಿಯೊಗಿ ದೇವಾ ನಿತ್ಯ ನಿರ್ವೀಕಾರ ನಿತ್ಯಾ ಕಲ್ಯಾಣಪೂರ್ಣ 9 ಜೀವಾಂತರಾತ್ಮಕನೆ ಜೀವಾ ನಿಯಾಮಕನೆ ಜೀವಾದಿ ಭಿನ್ನ ದೇವಾ ಜೀವೇಶ ಜೀವರಿಂ ಸೇವ್ಯಾನೆಂದೆನಿಪ್ಪೆ ಜೀವಾರ ಕರ್ಮಕರ್ತ 10 ಸತ್ವಾರಜೋತಮದಿ ನಿತ್ಯಾ ಸೃಷ್ಟೀಸುತಲಿ ವ್ಯಾಪ್ತಾನಾಗಿರುವೆ ಜಗದಿ ಸತ್ಯಾಮೂರುತಿ ಜಗತ್ಕರ್ತಾ ಕಾರಣರೂಪ ಸತ್ಯಾಧಿಪತಿಯ ವಂದ್ಯ 11 ಆದಿಯಲಿ ಅಸುರ ತಾ ವೇದ ಕದ್ದೊಯ್ಯೆ ಛೇದೀಸಿ ತಮನ ಕೊಂದೂ ನಿಗಮ ತಂದಾದರದಿ ಸುತಗಿತ್ತೆ ಶ್ರೀಧರನೆ ಮಚ್ಛರೂಪಿ 12 ಸುರರೆಲ್ಲ ಕಂಗೆಟ್ಟು ಮೊರೆ ಇಡಲು ನಿನ್ನ ಬಲು ಕರುಣೆಯಿಂದಾಲಿ ಬಂದೂ ಗಿರಿ ಎತ್ತಿ ಅಮೃತವ ಸುರರೀಗೆ ತಂದಿತ್ತ ವರ ಕೂರ್ಮರೂಪಿ ಸಲಹೊ 13 ಆದಿಹಿರಣ್ಯಾಕ್ಷ ಮೇದಿನಿಯ ಕದ್ದೊಯ್ಯೆ ಛೇದೀಸಿ ಅವನ ಕಾಯಾ ಆದರಿಸಿ ಧರಣಿಯನು ಆ ದಿವಿಜರಿಗೆ ಇತ್ತೆ ವರಾಹ ಕಾಯೊ 14 ದುಷ್ಟಾದಾನವ ಸುತನು ಅಟ್ಟೂಳಿಪಡಿಸುತಿರೆ ಸೃಷ್ಟೀಶ ಪೊರೆಯೊ ಎನಲು ಪುಟ್ಟಿ ನೀ ಸ್ಥಂಭದಲಿ ಕುಟ್ಟೀ ಅಸುರನನ್ನು ಪುಟ್ಟಾನ ಕಾಯ್ದ ನೃಹರಿ15 ಇಂದ್ರಾಲೋಕಾವನು ಬಲೀಂದ್ರಾನಾಕ್ರಮಿಸಿರಲು ಪೇಂದ್ರಾ ನೀನಾಗಿ ಬಂದೂ ಇಂದ್ರಾರಿಗೇಸುತಲ ಚಂದಾದಿತ್ತು ನೀ ನಿಂದ್ರಾಗೆ ಸ್ವರ್ಗವಿತ್ತೆ 16 ಪಿತನ ಆಜ್ಞೇಗೆ ಪತಿವ್ರತೆ ಮಾತೆ ಶಿರವಳಿದು ಮತಿವಂತನೆನಿಸಿ ಮೆರೆದೇ ಖತಿಯಿಂದ ಕ್ಷತ್ರಿಕುಲ ಹತಗೈಸಿ ಮೆರೆದ ಅ ಪ್ರತಿ ಭಾರ್ಗವಾನೆ ಕಾಯೋ 17 ಸೇತು ಬಂಧನಗೈದು ಖ್ಯಾತ ರಾವಣನೊರಸಿ ಸೀತೇಯ ತಂದ ರಾಮಾ ಮಾತೆ ವಚನಕಾಯ್ದೆ ವಾತಾತ್ಮಜನ ಪೊರೆದೆ ಪ್ರೀತಿಯಿಂದೆನ್ನ ಕಾಯೊ 18 ವನದಲ್ಲಿ ನಿಂತು ಘನಧ್ವನಿಯಿಂದ ಕೊಳಲೂದಿ ವನಜಾಕ್ಷಿಯರನೆ ಕಾಯ್ದೆ ಮುನಿವಂದ್ಯ ಶ್ರೀ ಕೃಷ್ಣ ಮುನಿನಾರದಗೊಲಿದೆ ಸನಕಾದಿ ವಂದ್ಯ ಸಲಹೋ 19 ತ್ರಿಪುರಾಲಲನೆಯಾರ ವ್ರತಭಂಗವನೆಗೈದು ನಿಪುಣಾನೆಂದೆನಿಸಿ ಮೆರೆದೆ ಬುದ್ಧ ತ್ರಿಪುರಾರಿ ವಂದ್ಯ ಹರಿ ಕೃಪೆಮಾಡಿ ಸಲಹೊ ಎನ್ನ 20 ಕಲಿಬಾಧೆ ವೆಗ್ಗಳಿಸೆ ಛಲದಿಂದ ದುಷ್ಟರನು ತಲೆಯಾ ಚೆಂಡಾಡಿ ಮೆರೆದೆ ಬಲವಂತ ಹಯವೇರಿ ಕಲಿದೈತ್ಯರನು ಕೊಂದೆ ನಳಿನಾಕ್ಷ ಕಲ್ಕಿ ಕಾಯೊ 21 ಭಕ್ತಾವತ್ಸಲನಾಗಿ ಮುಕ್ತಾಜೀವರ ಕಾಯ್ವೆ ಶಕ್ತಾವಂತನೆ ಸ್ವಾಮಿ ಮುಕ್ತೀದಾಯಕ ನೀನೆ ಮುಕ್ತಾಶ್ರಯನು ನೀನೆ ಮುಕ್ತಾರಿಗೊಡೆಯ ನೀನೆ 22 ಬಂದೇಯೊ ಭಕ್ತರನು ಚಂದಾದಿಂದಲಿ ಪೊರೆಯ ಬೇ ಕೆಂದೂ ನೀ ನಾಗಗಿರಿಗೆ ನಂದಾಕಂದಾನೆ ಹರಿ ಇಂದಿರೆಯರಸ ಬಹು ಸುಂದಾರ ಶ್ರೀನಿವಾಸ23 ಹಿಂದೇ ಮಾಡೀದ ಪುಣ್ಯ ಬಂದೂ ತಾ ಒದಗಿಗೋ ವಿಂದಾನ ಗಿರಿಯ ಯಾತ್ರೇ ಸಂದೀಸೆ ವೇಂಕಟನ ಸಂದಾರುಶನದಿಂದ ದುರಿತ 24 ಜಯ ಗುರುಗಳಂತರ್ಯ ಜಯ ನಾಗಶಯನ ಹರೆ ಜಯ ವೆಂಕಟಾದ್ರಿನಿಲಯ ಜಯ ತಂದೆ ಮುದ್ದುಮೋಹನ ದಾಸವರದ ಜಯ ಪದ್ಮನಾಭ ಜಯ ಭೋ 25 ಸ್ವಾಮೀ ಕಾಸಾರದತಿ ಪ್ರೇಮಾದಿ ನೆಲಸಿ ಸುರ ಕಾಮೀತವೀವ ಪ್ರಭುವೇ ಸ್ವಾಮಿ ಶ್ರೀ ವೇಂಕಟನೆ ನೇಮಾದಿಂದಲಿ ಭಜಿಪೆ ಕಾಮೀತವೀಯೊ ದೇವಾ 26 ಇಷ್ಟೂ ಬಿನ್ನಪವನ್ನು ಕೃಷ್ಣಾಮೂರುತಿ ಕೇಳಿ ಕಷ್ಟಾವ ಬಿಡಿಸಿ ಕಾಯೋ ದಿಟ್ಟಾ ಶ್ರೀ ಗೋಪಾಲಕೃಷ್ಣವಿಠ್ಠಾಲಾನೆ ಶ್ರೇಷ್ಠಾ ಶ್ರೀ ಗುರುವರದನೇ 27
--------------
ಅಂಬಾಬಾಯಿ
ಶ್ರೀ ವೆಂಕಟೇಶ ಸ್ತೋತ್ರ(2) ವೈಕುಂಠವಾಸ ಹರಿ ಶ್ರೀ ಕಂಠನುತ ನಿನ್ನ ಸಾಕಾರರೂಪ ತೋರೋ ಯಾಕಿಂತು ನಿರ್ದಯವು ಈ ಕುಮತಿ ಮೇಲಿನ್ನು ನೀ ಕರುಣಿಸೀಗ ಕಾಯೊ 1 ವಾಕು ಲಾಲಿಸುತ ನೀ ಬೇಕೆಂದು ಬೆಟ್ಟದಲ್ಲಿ ಲೋಕದ ಜನರನ್ನು ಸಾಕುತ್ತ ನಿಂತಿರುವ ಆಕಳ ಕಾಯ್ದ ದೇವಾ 2 ಕನಸು ಮನಸೀನಲ್ಲಿ ವನಜಾಕ್ಷ ನಿನ ದಿವ್ಯ ಘನರೂಪವನ್ನೆ ತೋರೊ ಅನುರಾಗದಿಂದ ಸಲಹೋ 3 ವೆಂಕಟಗಿರಿನಿಲಯ ಮಂಕುಮತಿಯ ಬಿಡಿಸಿ ಸಂಕಟಗಳನೆ ಹರಿಸೊ ಶಂಖಚಕ್ರಾಂಕಿತನೆ ಪಂಕಜಪಾದ ಮನ ಪಂಕಜದೊಳಗೆ ತೋರೊ 4 ಪದ್ಮಾಕ್ಷ ಪದ್ಮಮುಖ ಪದ್ಮಾನಾಭನೆ ನಿನ್ನ ಪದ್ಮ ಪಾದವೆ ಗತಿಯೊ ಪದ್ಮಾವತಿಪ್ರಿಯ ಪದ್ಮಹಸ್ತಾನೆ ನಿನ್ನ ಪದ್ಮಾದಿ ನಿನ್ನ ತೋರೊ 5 ಸೃಷ್ಟಿ ಸ್ಥಿತಿ ಲಯಕೆ ಕರ್ತಾನೆ ಎನ್ನ ಮನ ದಿಷ್ಟಾವ ಸಲಿಸಿ ಕಾಯೋ ಥಟ್ಟಾನೆ ಮನಕೆ ತೋರೊ 6 ತತ್ವಾಧಿಪತಿಗಳೊಳು ವ್ಯಾಪ್ತಾನಾಗಿರುತಿರ್ದು ಕರ್ಮ ಮಾಳ್ಪೆ ಎತ್ತಾ ನೋಡಿದರು ಸುರರರ್ಥಿಯಿಂ ಸ್ತುತಿಸುವರೊ ನಿತ್ಯಾಮೂರುತಿ ನೀ ಎಂದೂ 7 ನಿಗಮಾದಿ ವೇದದಿಂ ಬಗೆಬಾಗೆ ಸ್ತುತಿಸಿ ಕೊಂ ಬಗಣೀತ ಮಹಿಮ ದೇವಾ ಖಗರಾಜ ವಾಹನನೆ ನಗೆಮೊಗದ ಚೆಲುವ ಪ ನ್ನಗಶಾಯಿ ಸಲಹೊ ಎನ್ನ 8 ನಿತ್ಯಾ ತೃಪ್ತಾನೆ ಹರಿ ನಿತ್ಯಾ ಪ್ರಾಪ್ತಾನೆ ಸಿರಿ ನಿತ್ಯಾ ವಿಯೊಗಿ ದೇವಾ ನಿತ್ಯ ನಿರ್ವೀಕಾರ ನಿತ್ಯಾ ಕಲ್ಯಾಣಪೂರ್ಣ 9 ಜೀವಾಂತರಾತ್ಮಕನೆ ಜೀವಾ ನಿಯಾಮಕನೆ ಜೀವಾದಿ ಭಿನ್ನ ದೇವಾ ಜೀವೇಶ ಜೀವರಿಂ ಸೇವ್ಯಾನೆಂದೆನಿಪ್ಪೆ ಜೀವಾರ ಕರ್ಮಕರ್ತ 10 ಸತ್ವಾರಜೋತಮದಿ ನಿತ್ಯಾ ಸೃಷ್ಟೀಸುತಲಿ ವ್ಯಾಪ್ತಾನಾಗಿರುವೆ ಜಗದಿ ಸತ್ಯಾಮೂರುತಿ ಜಗತ್ಕರ್ತಾ ಕಾರಣರೂಪ ಸತ್ಯಾಧಿಪತಿಯ ವಂದ್ಯ 11 ಆದಿಯಲಿ ಅಸುರ ತಾ ವೇದ ಕದ್ದೊಯ್ಯೆ ಛೇದೀಸಿ ತಮನ ಕೊಂದೂ ನಿಗಮ ತಂದಾದರದಿ ಸುತಗಿತ್ತೆ ಶ್ರೀಧರನೆ ಮಚ್ಛರೂಪಿ 12 ಸುರರೆಲ್ಲ ಕಂಗೆಟ್ಟು ಮೊರೆ ಇಡಲು ನಿನ್ನ ಬಲು ಕರುಣೆಯಿಂದಾಲಿ ಬಂದೂ ಗಿರಿ ಎತ್ತಿ ಅಮೃತವ ಸುರರೀಗೆ ತಂದಿತ್ತ ವರ ಕೂರ್ಮರೂಪಿ ಸಲಹೊ 13 ಆದಿಹಿರಣ್ಯಾಕ್ಷ ಮೇದಿನಿಯ ಕದ್ದೊಯ್ಯೆ ಛೇದೀಸಿ ಅವನ ಕಾಯಾ ಆದರಿಸಿ ಧರಣಿಯನು ಆ ದಿವಿಜರಿಗೆ ಇತ್ತೆ ವರಾಹ ಕಾಯೊ 14 ದುಷ್ಟಾದಾನವ ಸುತನು ಅಟ್ಟೂಳಿಪಡಿಸುತಿರೆ ಸೃಷ್ಟೀಶ ಪೊರೆಯೊ ಎನಲು ಪುಟ್ಟಿ ನೀ ಸ್ಥಂಭದಲಿ ಕುಟ್ಟೀ ಅಸುರನನ್ನು ಪುಟ್ಟಾನ ಕಾಯ್ದ ನೃಹರಿ 15 ಇಂದ್ರಾಲೋಕಾವನು ಬಲೀಂದ್ರಾನಾಕ್ರಮಿಸಿರಲು ಪೇಂದ್ರಾ ನೀನಾಗಿ ಬಂದೂ ಇಂದ್ರಾರಿಗೇಸುತಲ ಚಂದಾದಿತ್ತು ನೀ ನಿಂದ್ರಾಗೆ ಸ್ವರ್ಗವಿತ್ತೆ 16 ಪಿತನ ಆಜ್ಞೇಗೆ ಪತಿವ್ರತೆ ಮಾತೆ ಶಿರವಳಿದು ಮತಿವಂತನೆನಿಸಿ ಮೆರೆದೇ ಖತಿಯಿಂದ ಕ್ಷತ್ರಿಕುಲ ಹತಗೈಸಿ ಮೆರೆದ ಅ ಪ್ರತಿ ಭಾರ್ಗವಾನೆ ಕಾಯೋ 17 ಸೇತು ಬಂಧನಗೈದು ಖ್ಯಾತ ರಾವಣನೊರಸಿ ಸೀತೇಯ ತಂದ ರಾಮಾ ಮಾತೆ ವಚನಕಾಯ್ದೆ ವಾತಾತ್ಮಜನ ಪೊರೆದೆ ಪ್ರೀತಿಯಿಂದೆನ್ನ ಕಾಯೊ 18 ವನದಲ್ಲಿ ನಿಂತು ಘನಧ್ವನಿಯಿಂದ ಕೊಳಲೂದಿ ವನಜಾಕ್ಷಿಯರನೆ ಕಾಯ್ದೆ ಮುನಿವಂದ್ಯ ಶ್ರೀ ಕೃಷ್ಣ ಮುನಿನಾರದಗೊಲಿದೆ ಸನಕಾದಿ ವಂದ್ಯ ಸಲಹೋ 19 ತ್ರಿಪುರಾಲಲನೆಯಾರ ವ್ರತಭಂಗವನೆಗೈದು ನಿಪುಣಾನೆಂದೆನಿಸಿ ಮೆರೆದೆ ಬುದ್ಧ ತ್ರಿಪುರಾರಿ ವಂದ್ಯ ಹರಿ ಕೃಪೆಮಾಡಿ ಸಲಹೊ ಎನ್ನ 20 ಕಲಿಬಾಧೆ ವೆಗ್ಗಳಿಸೆ ಛಲದಿಂದ ದುಷ್ಟರನು ತಲೆಯಾ ಚೆಂಡಾಡಿ ಮೆರೆದೆ ಬಲವಂತ ಹಯವೇರಿ ಕಲಿದೈತ್ಯರನು ಕೊಂದೆ ನಳಿನಾಕ್ಷ ಕಲ್ಕಿ ಕಾಯೊ 21 ಭಕ್ತಾವತ್ಸಲನಾಗಿ ಮುಕ್ತಾಜೀವರ ಕಾಯ್ವೆ ಶಕ್ತಾವಂತನೆ ಸ್ವಾಮಿ ಮುಕ್ತೀದಾಯಕ ನೀನೆ ಮುಕ್ತಾಶ್ರಯನು ನೀನೆ ಮುಕ್ತಾರಿಗೊಡೆಯ ನೀನೆ 22 ಬಂದೇಯೊ ಭಕ್ತರನು ಚಂದಾದಿಂದಲಿ ಪೊರೆಯ ಬೇ ಕೆಂದೂ ನೀ ನಾಗಗಿರಿಗೆ ನಂದಾಕಂದಾನೆ ಹರಿ ಇಂದಿರೆಯರಸ ಬಹು ಸುಂದಾರ ಶ್ರೀನಿವಾಸ 23 ಹಿಂದೇ ಮಾಡೀದ ಪುಣ್ಯ ಬಂದೂ ತಾ ಒದಗಿಗೋ ವಿಂದಾನ ಗಿರಿಯ ಯಾತ್ರೇ ಸಂದೀಸೆ ವೇಂಕಟನ ಸಂದಾರುಶನದಿಂದ ದುರಿತ 24 ಜಯ ಗುರುಗಳಂತರ್ಯ ಜಯ ನಾಗಶಯನ ಹರೆ ಜಯ ವೆಂಕಟಾದ್ರಿನಿಲಯ ಜಯ ತಂದೆ ಮುದ್ದುಮೋಹನ ದಾಸವರದ ಜಯ ಪದ್ಮನಾಭ ಜಯ ಭೋ 25 ಸ್ವಾಮೀ ಕಾಸಾರದತಿ ಪ್ರೇಮಾದಿ ನೆಲಸಿ ಸುರ ಕಾಮೀತವೀವ ಪ್ರಭುವೇ ಸ್ವಾಮಿ ಶ್ರೀ ವೇಂಕಟನೆ ನೇಮಾದಿಂದಲಿ ಭಜಿಪೆ ಕಾಮೀತವೀಯೊ ದೇವಾ 26 ಇಷ್ಟೂ ಬಿನ್ನಪವನ್ನು ಕೃಷ್ಣಾಮೂರುತಿ ಕೇಳಿ ಕಷ್ಟಾವ ಬಿಡಿಸಿ ಕಾಯೋ ದಿಟ್ಟಾ ಶ್ರೀ ಗೋಪಾಲಕೃಷ್ಣವಿಠ್ಠಾಲಾನೆ ಶ್ರೇಷ್ಠಾ ಶ್ರೀ ಗುರುವರದನೇ 27 ಸೀತಾಪತಿವಿಠಲ ದಾಸಳ ನಿರ್ಯಾಣ ಪದ 266 ಮಾಧವನಾ ಪುರ ಸೇರಲು ಬೇಗ ಪ. ಪುಟ್ಟಿದಾರಭ್ಯದಿ ನಿಷ್ಟೆನೇಮದೊಳಿದ್ದು ಕಷ್ಟಪರಂಪರೆ ಸಹಿಸುತ ಜಗದಿ ಹರಿಯ ಕರುಣದಿ ಗುರುಕೃಪೆ ಪಡೆದಿ 1 ಹಿರಿಯೂರೆನ್ನುವ ಪುರ ವರ ವೇದಾವತಿ ತೀರ ಪರಮ ಸಾತ್ವಿಕರಲ್ಲಿ ಜನುಮ ತಳೆದಿ ತುಳಸಿಯ ವರದಿ ಮುದ್ದಿನಿಂ ಬೆಳೆದಿ 2 ಶಿಷ್ಟ ಸಂಪ್ರದಾಯ ಕಟ್ಟಿನೊಳಗೆ ನಿನ ಗಷ್ಟಮ ವರುಷದಿ ಮದುವೆಯ ಮಾಡಿ ಹರುಷವಗೂಡಿ ಹರಿಯ ಕೊಂಡಾಡಿ 3 ಸತಿ ರುಕ್ಮಿಣೀಬಾಯಿ ಹೆಸರಿನಿಂ ಬಾಳ್ವೆಯ ಬಹು ಅಲ್ಪಕಾಲ ಕೊಟ್ಟನೆ ಸಿರಿಲೋಲ ಮುಸುಕಿತು ಮಾಯಜಾಲ 4 ಸಂಸಾರ ಕೈಕೊಂಡು ವಂಶಕೊಬ್ಬನ ಪಡೆದು ಕಂಸಾರಿ ಕರುಣದಿ ಇರುತಿರೆ ನೀನು ವಿಧಿ ತಂದೊಡ್ಡಿದನು 5 ಎರಡು ವರ್ಷದ ಮಗುವ ಕರದಲ್ಲಿ ಕೈಕೊಂಡು ಪರಿಪರಿ ಕಷ್ಟದಿ ಶಿಶುವ ಬೆಳೆಸಿದೆ ವಿದ್ಯೆ ಕಲಿಸಿದೆ ಪುತ್ರಗ್ಹರಸಿದೆ 6 ಒಬ್ಬ ಆ ಮಗನರ್ಥಿ ಸಂಸಾರವನೆ ಕಂಡು ಉಬ್ಬಿ ಹರುಷಾದಲ್ಲಿ ಇರುತಿರೆ ನೀನು ಮೊಮ್ಮಕ್ಕಳನು ಪಡೆದೆ ನಾಲ್ವರನು 7 ಘಟಿಸುತ ಸ್ವಪ್ನದಿ ಸೇವೆಗೈಯ್ಯೆಂದು ಅಭಯವನಂದು ಕೊಡಲು ದಯಸಿಂಧು 8 ಮರುದಿನ ಮನೆಯಲ್ಲೆ ಭರದಿ ಸೇವೆಯ ಕೊಂಡು ಹರಿವಾಯುಗಳನಿಟ್ಟು ಸುತ್ತುವರಿಯುತ್ತ ಎಡವಿ ಬೀಳುತ್ತ ಪ್ರದಕ್ಷಿಣೆ ಬರುತಾ 9 ಒಲಿದು ಆ ಭಕ್ತಿಗೆ ವರನೇತ್ರವಿತ್ತನು ನಳಿನನಾಭನ ಭಕ್ತ ಘಟಿಕಾಚಲನಿಲಯ ಭಾರತಿಪ್ರೀಯ ದಿವಿಜರ ಒಡೆಯ 10 ಭಕ್ತಿ ವಿರಕ್ತಿ ಜ್ಞಾನವು ಚಿತ್ತದಿ ಮೂಡಿ ಸೋತ್ತಮರಾದ ಶ್ರೀ ವಿಬುಧರ ದಯದಿ ಮೋಕ್ಷಸಾಧನದಿ ದಿನಗಳ ಕಳೆದಿ 11 ಶ್ರವಣ ಕೀರ್ತನ ಸ್ಮರಣೆ ಮನನಾದಿಗಳನೆಲ್ಲ ತವಕದಿ ಕೈಕೊಂಡು ಮೋದದಿ ಮೆರೆದಿ ಕಷ್ಟವ ಮೆರೆದಿ ಹರಿಗುರು ದಯದಿ 12 ಪ್ರಥಮ ಯಾಮದಲೆದ್ದು ಜಿತಮನದಿಂದ ಶ್ರೀ ಪತಿಯ ಸ್ತೋತ್ರಗಳನ್ನು ವದನದಿ ಸತತ ಪರಿಯಂತ 13 ಉಚ್ಛಸ್ವರದಿ ನೀನು ಪಾಡಿದ್ಹಾಡುಗಳಿಂದು ಅಚ್ಚಳಿಯದೆ ನಮ್ಮ ಸ್ಮರಣೆಯೊಳ್ನಿಂತು ಹರುಷವನಾಂತು ಮರೆಯುವುದೆಂತು 14 ವೃದ್ಧಾಪ್ಯ ತಲೆದೋರೆ ಇದ್ದೊಬ್ಬ ಪುತ್ರನು ಪದ್ಮನಾಭನ ಪುರ ಸೇರಿ ನಿನ್ನಗಲಿ ದುಃಖದಿ ಬಳಲಿ ತೊಳಲಿದೆ ಬಳಲಿ 15 ಪೌತ್ರರಿಬ್ಬರು ನಿನ್ನ ಹೆತ್ತಮ್ಮನಂದದಿ ಚಿತ್ತದಿ ತಿಳಿದಿನ್ನು ಸಲಹುತ್ತಿರಲು ಹರಿದಯ ಬರಲು ದುಃಖ ಮರೆಯಲು 16 ಕಲ್ಯಾಣನಗರದಿ ಕಿರಿಯ ಮೊಮ್ಮಗನಿರೆ ಆಹ್ಲಾದದಿಂದ ನೀನವನಲ್ಲಿ ಇರಲು ಸದ್ಗುರು ಬರಲು ಜ್ಞಾನವೆರೆಯಲು 17 ಹರಿದಾಸಕೂಟದ ವರ ಅಂಕಿತವ ಕೊಂಡು ಗುರುಕರುಣವ ಪೊಂದಿ ನೀ ನಮಗೆಲ್ಲ ಸನ್ಮಾರ್ಗಕ್ಕೆಲ್ಲ ಮೊದಲಾದೆಯಲ್ಲ 18 ಶ್ರೀ ತಂದೆ ಮುದ್ದುಮೋಹನದಾಸರ ದಯದಿ ಸೀತಾಪತಿವಿಠ್ಠಲನ್ನ ಒಲಿಸಿದೆ ಧ್ಯಾನದೋಳ್ತಂದೆ ಆನಂದಪಡೆದೆ 19 ಕಂಚಿ ಕಾಳಹಸ್ತಿ ಶ್ರೀ ರಂಗಯಾತ್ರೆಯ ಸಂಚಿಂತನೇಯಿಂದ ಗೈದೆಯೆ ನೀನು ಗಳಿಸಿದೆ ಇನ್ನು ಭಕುತಿಯ ಪೊನ್ನು 20 ಉಡುಪಿ ಮಂತ್ರಾಲಯ ಸೇತು ರಾಮೇಶ್ವರ ಕಡು ಭಕ್ತಿಯಲಿ ತಿರುಪತಿ ಕ್ಷೇತ್ರ ಚರಿಸಿ ಕಷ್ಟವ ಸಹಿಸಿ ಶ್ರೀ ಹರಿಗೆ ಅರ್ಪಿಸಿ 21 ಕಡುಕೃಪೆಯಿಂದಂದು ಕಣ್ಣನ್ನೆ ಕೊಟ್ಟಂತ ಮೃಡಪಿತ ಘಟಿಕಾಚಲೇಶನ್ನ ಕೂಡಿ ಕಣ್ತುಂಬ ನೋಡಿ ತನುವನೀಡಾಡಿ 22 ಅಂತರಂಗದ ಬಿಂಬ ಸರ್ವಾಂತರ್ಯಾಮಿ ಎಂ ತೆಂಬಂಥ ಚಿಂತನೆ ಸಂತತಗೈದೆ ಅಭಿಮಾನ ತೊರೆದೆ ದ್ವಂದ್ವ ಸಹಿಸಿದೆ 23 ವ್ರತನೇಮ ಜಪತಪ ಸತತದಿಗೈಯ್ಯುತ್ತ ಕ್ಷಿತಿವಾರ್ತೆಗೆಳಸಾದೆ ಮನವನ್ನೆ ಸೆಳೆದು ಹರಿಪಾದಕ್ಕೆರದು ಹಿತವನ್ನೆ ಮರೆದು 24 ಭಾಗವತಾದಿ ಸಚ್ಛಾಶ್ತ್ರ ಶ್ರವಣಗೈದು ಜಾಗ್ರತಳಾದಿ ಭೂಸುರರ ಸೇವೆಯಲಿ ಸೂಕ್ಷ್ಮಧರ್ಮದಲಿ ಪುಣ್ಯಗಳಿಸುತಲಿ 25 ಸತತಬಿಂಬಕ್ರಿಯ ವ್ರತವಂದೆ ಕೈಕೊಂಡು ಜತನದಿ ಮರೆಯದೆ ಪ್ರತಿಕಾರ್ಯದಲ್ಲಿ ಅರ್ಪಿಸಿ ಹರಿಯಲ್ಲಿ ಇದ್ದೆ ಮೋದದಲಿ 26 ಮುಖ್ಯಪ್ರಾಣನ ದಯ ಮುಖ್ಯಮಾಡುತ ಇನ್ನು ಅಕ್ಕರೆ ಭಕ್ತಿಯ ತೋರಿದೆ ನೀನು ಬೆನ್ನು ಬಿಡದವನು ನಿನ್ನ ಸಲಹಿದನು 27 ಭಾರತಿಪತಿ ಮುಖ್ಯಪ್ರಾಣಾಂತರ್ಗತನೆಂಬ ವಾರುತಿ ಇಲ್ಲದ ವಚನವೆ ಇಲ್ಲಾ ನಿನ್ನ ಈ ಸೊಲ್ಲ ಮರೆಯಲೊಶವಲ್ಲ 28 ಶ್ರೀ ರಾಮಚಂದ್ರನ ಆರಾಧನೆಯಗೈದು ಸಾರತತ್ವವ ತಿಳಿದು ಸಾಧಿಸಿ ಪಥವ ಸಹಸ್ರಾರು ಜಪವ ಗೈದೆ ತಪವ 29 ನೀ ಹಾಡಿದ ಸ್ತೋತ್ರ ನಿನ್ನ ಸನ್ಮಾರ್ಗವ ನನ್ನೆಯಿಂದಲಿ ಎರೆದೆ ಹೆಣ್ಣು ಮಕ್ಕಳಿಗೆ ಸ್ಮರಿಸುವರೀಗೆ ಸತ್ಕೀರ್ತಿಯದಾಗೆ 30 ಹರಿ ಗುರು ವರತತ್ವ ದಿವಿಜರಭಿಮಾನಿಗಳ ನಿರುತದಿ ಚಿಂತಿಸಿ ಸಾಧನಗೈದೆ ಕಾಲವ ಕಳೆದೆ ಹರಿಪಾದಕ್ಕೆರೆದೆÀ 31 ಬಿಂಬಾನು ಸಂಧಾನ ಚತುರಳಾಗಿ ನೀನು ಸಂಭ್ರಮದಿಂದ ಶ್ರೀ ಮಧ್ವಶಾಸ್ತ್ರದಲಿ ಮನಸ ನೀಡುತಲಿ ಸುಖ ಸುರಿಯಲಿ 32 ಒದ್ದು ತಾಪತ್ರಯ ಸದ್ಗುರು ಕೃಪೆ ಪೊಂದಿ ಗೆದ್ದೆ ನೀ ಸುಲಭದಿ ಭವದ ಬಂಧನವ ಪಡೆದೆ ಹರಿ ದಯವ ಕೊಟ್ಟಿತೆ ಮುದವ 33 ಪೇಳಲೋಶವೆ ಹೇ ದಯಾಳು ನಿನ್ನಯ ಗುಣ ಬಾಳಿದೆ ಧರೆಯೊಳು ತೊಂಬತ್ತೈದೊರುಷ ವೃದ್ಧಾಪ್ಯದೋಷ ನಿನಗಿಲ್ಲ ಲೇಶ 34 ಇಂದ್ರಿಯಂಗಳು ಎಲ್ಲ ಒಂದು ಕುಗ್ಗದೆ ಒಬ್ಬ ರಿಂದಲು ಸೇವೆಯ ಕೊಳದೆ ಲವಲವಿಕೆ ಯಿಂದಿರುವ ಬಯಕೆ ಸಲಿಸೀತೆ ಮನಕೆ 35 ಕಿರಿಯ ಮೊಮ್ಮೊಗ ರಮಾಕಾಂತನಲ್ಲಿರುತಿರೆ ಕರೆಹೇಳಿ ಕಳುಹಿದ ಹರಿ ತನ್ನ ಪುರಕೆ ಕ್ಲಿಪ್ತಕಾಲಕ್ಕೆ ಆಗೆ ಮನವರಿಕೆ 36
--------------
ಅಂಬಾಬಾಯಿ
ಶ್ರೀ ಹನುಮ ಮಾಂ ಪಾಹಿ ಪವನ ಜ ಖಗ ವಾಹನನ ದಾಸ ನೇಹದಲಿ ಬಿಂಬರೂಪ ತೋರೆನಗೆ ಪ ಭಾನುಸುತ ಪವಮಾನ ನಂದನ ನೀನೆ ಸಲಹಿದೆ ಮಾನನಿಧಿ ರಾಮಬಾಣದಲಿ ಇಂದ್ರ ಸೂನುವಿನ ಪ್ರಾಣ ಹಾನಿಯ ಗೈಸಿ ಮೇಣ್ ಆ ಕಿಷ್ಕಿಂಧ ನಗರದಲ್ಲಿ ವಾನರೇಂದ್ರಗೆ ನಾನಾ ಪರಿಯಲ್ಲಿ ಆನಂದವಿತ್ತ ಜ್ಞಾನಿ ನಿನ್ನ ಅಧೀನದವನೆಂದೆಂದು 1 ಸುರೇಶನಂದನ ಮಾರುತನೆ ನಿನ್ನ ಕರುಣವು ಎನ್ನೊ ಳಿರದ ಕಾರಣ ಹರಿ ಮುನಿದನೆಂದು ಅರಿದು ಮನದಿ ದ್ವಾ ಪರದಲ್ಯವ ತರಿಸಿ ಗುರುವರ್ಯ ನಿಮ್ಮ ಚರಣ ಸೇವಿಸೆ ಪೊರೆದೆ ಅಂದು ಸಮರದಿ ಕೃಷ್ಣನ ಪರಮಕೃಪೆ ಪಡೆದವರಿಗೆ ನಿನ್ನಯ ಕರುಣ ಕಾರಣವೊ 2 ಮೂರನೆಯ ಅವತಾರದಿಂದಲಿ ಧಾರುಣಿಯೊಳು .......... ಬೀರಿದ್ದ ಶಾಸ್ತ್ರವ ಬೇರೊರಿಸಿ ಕೀಳ್ದು ತೋರಿಸಿದಿ ಹರಿಯ ಆರು ನಿನ್ನನು ಆರಾಧಿಪರೊ ಆ ಧೀರರಿಗೆ ದೋಷ ಸೇರಲಮ್ಮವು ಮಾರಪಿತ ಜಗನ್ನಾಥ ವಿಠಲನ ಕರುಣ ವಾಹುದೊ 3
--------------
ಜಗನ್ನಾಥದಾಸರು
ಶ್ರೀನಿವಾಸ ಜಗನ್ನಿವಾಸ ಪ ದೀನ ರಕ್ಷಕ ನಿಖಿಲ ಮಾನವರಮಾನಾಭಿಮಾನ ದೊಡೆಯನು ನೀನೇಯಲ್ಲದಿಲ್ಲಾ ಅ.ಪ. ನಕ್ರಮುಖದಲ್ಲಿ ಸಿಕ್ಕಿ ದುಃಖಿಸುವ ಕರಿರಾಜ ಚಕ್ರವರ್ತಿಯು ಶರಣು ಹೊಕ್ಕೆನನಲು ಚಕ್ರವನು ಪಿಡಿದು ನೀನಕ್ಕರೆಯೊಳೈತಂದು ನಕ್ರವದನವಸೀಳಿ ರಕ್ಷಿಸಿದೆ ಗಜವಾ-ದೇವ 1 ಹಿಂದೆ ನಾನಾನ್ನಗಿರಿಯಿಂದ ಬಹದಾರಿಯೊಳು ಸಂದುಗೆಳೀಚಲು ಭಂಡಿ ಸಂಜೆಯೊಳಗೆ ಮುಂದಾಗ ಜೊತೆಯೊಳಗೆ ಬಂದು ಜನಕೆಲ್ಲಿನೀ ಬಂದು ಬೆಳಕನು ತೋರಿ ಮಂದೆಗೂಡಿದೆ ಕೃಷ್ಣಾ 2 ಇಂದು ನಿಜ ಸತಿಯುನೊಂದಳುಬ್ಬಸರೋಗದಿಂದ ಗಾಳಿಯದೀಪದಂದಮಾಗಿ/ ನಂದಿಪೋಗದ ಮುನ್ನ ಬಂದು ನೀಮರೆಯಾಗು ಎಂದು ಮೊರೆಯಿಡಲೀಗ ಬಂದು ಸಲಹಿದೆ ತಂದೆ 3 ತುರುಗಾಯ್ವರಸುಗಳನು ಮರಳಿಪಡೆದೆ ನರಪೌತ್ರನನು ಬಾಣದುರಿಯಿಂದ ರಕ್ಷಿಸಿದೆ ಸರಿಯಾರು ನಿನಗೆ ಸುರನರಭುಜಂಗರಲ್ಲಿ4 ತರಳಧ್ರುವ ಪ್ರಹ್ಲಾದ ತರುಣಿ ಪಾಂಚಾಲಿ ಕುರು ವರವಿಭೀಷಣ ತಾಪಸರನುಪೊರೆದೆ ಶರಣರನು ಪಾಲಿಸುವ ಬಿರುದು ಧರಿಸಿಹ ವ್ಯಾಘ್ರಗಿರಿಯೊಳಗೆ ನೆಲಸಿರುವ ವರದ ವಿಠಲ ರಾಯ 5
--------------
ಸರಗೂರು ವೆಂಕಟವರದಾರ್ಯರು
ಶ್ರೀನಿವಾಸ ನಿನ್ನ ಕರುಣಾ ಏನೆಂದು ಸ್ತುತಿಪೆ ಪ. ಮಾನವರೊಳಗತಿ ಹೀನಬುದ್ಧಿಯಲಿ ಏನೊಂದು ಮಾರ್ಗ ಕಾಣದೆ ಬಹು ಬಳಲಿ ನಾನಾ ಚಿಂತೆಗಳಿಂದ ಧ್ಯಾನಿಪ ಸಮಯದಿ ತಾನಾಗಿ ಕರುಣಿಸಿ ಮಾನ ಪಾಲಿಸಿದಿ 1 ಹುಣಾರುವೆನ್ನನು ನಾನಾ ತರದೊಳು ಮಾನಹಾನಿಯ ಮಾಡಿ ಮರಳಿ ಬಾಧಿಸಲು ತಾನೆಂದು ಪೇಳುವರಿಲ್ಲದಂತಿರಲು ನೀನೆ ಬಂದೊದಗಿ ರಕ್ಷಿಸಿದೆ ಕೃಪಾಳು 2 ತದನಂತರದಲಿ ಕಷ್ಟದ ಬಾಧೆ ಸಹಿಸದೆ ಮದರಾಶಿಯೆಂಬ ಪಟ್ಟಣಕೆ ನಾ ಸರಿದೆ ಸದರವಲ್ಲೆಂದು ತಿಳಿದು ನಿನಗೊದರೆ ವಿಧಿಪಿತ ನೀನಲ್ಯು ಪ್ರೇರಿಸಿ ಪೊರೆದೆ 3 ಸಿರಿವರ ನಿನ್ನಯ ಪರಮ ಮಂಗಳಮೂರ್ತಿ ಹರುಷದಿಂದಲಿ ನೋಡಿ ಬರಲು ನಾನಿಲ್ಲಿ ದೊರೆತನದಲಿ ಮಾನಿತಪದಲ್ಲಿ ಇರಿಸಿ ನಿರಂತರ ಕಾವುದ ಬಲ್ಲಿ4 ಶರಣಾಗತ ರಕ್ಷಾಕರನೆ ಮಂದಿರದ ವರನಾಗಿ ಸಲಹುವ ದೊರೆ ನಿನ್ನ ಬಿರುದ ತರಳ ಬುದ್ಧಿಯೊಳೆಂತು ವರ್ಣಿಪೆ ವರದ ಕರುಣಾ ಸಾಗರ ವೆಂಕಟಾದ್ರಿಯೊಳ್ಮೆರೆದ 5
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀನಿವಾಸ ಪೂರಿಸಭಿಲಾಷ ಪ್ರಾಣ ಪಾಲೇಶ ಏನಿದು ಸಾವಕಾಶ ಪ. ಹಿಂದಿನ ಪ್ರಹ್ಲಾದ ಮೈಥಿಳ ಮತ್ತಜಾಮಿಗಳ ಭಾರತ ಕುಂಡಗೋಳ- ಗಾಂದಿನೀಸುತ ಧ್ರುವ ಪಾರ್ಶದಿ ಅಂಬರೀಷಾದಿ ಭಕ್ತರುಗಳಂತೆ ಎಂದೀ ಶ್ರುತಿ ಪುರಾಣಗಳ ಆದರೆ ನನ್ನನು ಬರಿದೆ ಇದು ರೀತಿಯೆ ನಿನಗೆ1 ಬಂದಡಿಗಡಿ ಇಡುತ ಸಾಮಜವಾಹನ ಬೇಡಿದಭೀಷ್ಟ ನೀಡಿದ ಬಳಿಕಾತನು ನುಡಿದ ಒಂದನಾದರು ಮನಕೆ ಅಭಯವನಿತ್ತು ಪೊರೆದೆ ನಾ ಮಾಡಿದಪರಾಧವು ಅತಿ ಸ್ವಲ್ಪವು ಅದಕೆಣೆಯಾಗದಿರಲು ಪಾಲಿಪರ ಕಾಂಬೆನೆಲ್ಲಿ 2 ಪಾರ್ಥಗೆ ಸಾರಥಿಯೆನಿಸುತ ರಥ ನಡಸುತ ಕುರುಸೇನೆಯೊಳಿರುತ ಗಾಂಗೇಯ ನಗುತ ಶೋಣಿತವ ಹರಿಸಲು ನಿಯಮದ ತೊರಿದೆ ಭಕ್ತವತ್ಸಲತೆಯ ತೋರಿದೆ ಸುಖವಾರಿದ ವೆಂಕಟಾದ್ರಿಯೊಳ್ಮೆರೆದೆ 3
--------------
ತುಪಾಕಿ ವೆಂಕಟರಮಣಾಚಾರ್ಯ
ಶ್ರೀನಿವಾಸ-ಶ್ರೀನಿವಾಸ-ಶ್ರೀನಿವಾಸ ಪ ಶ್ರೀನಿವಾಸ ನಾನಿಹೆ ನಿನ್ನ ದಾಸ-ನಿನ್ನ ದಾಸ ನಿನ್ನದಾಸ ಅ.ಪ. ಈಶ, ತರಿಯುವೆ ಕ್ಲೇಶಾ ಕೊಡುಲೇಶ, ಕೊಡುಲೇಶ ಜೀಯ, ಸಡಗರ ದೈವ ಬಡವನು ನಾನು ಕೊಡುವುದು ಏನು, ಅಡಿಗಳನೀಡು, ಇಡುವೆನು ಮೌಳಿ, ಇಡುವೆನು ಮೌಳಿ ಘನಸುಖದಾತ, ಚಿನ್ಮಯಗಾತ್ರ, ವನರುಹ ನೇತ್ರ, ಅನಿಲನಸೂತ್ರ ಅನುದಿನ ತನುಮನನಾಥ ತನುಮನನಾಥ ಕುಂದುಗಳಳಿದು, ಕಂದನ ಸಲಹೋ ಕಂದನ ಸಲಹೋ 1 ವೇದವ್ಯಾಸ, ವಾದಾಗಾರ, ಬೋಧಿಸಿವಿದ್ಯೆ ಸಾಧನೆಗೈಸೋ ವೇಧನ ತಂದೆ ವೇಧನತಂದೆ ಸೋದರ ಪ್ರಜೆಗಳು ದೈತ್ಯರ, ಖೇದವನೀಡ್ಡೆ ಖೇದವನೀಡ್ದೆ ಧೀರವರಾಹ, ಯಾಗಶರೀರ, ಬಹುಗಂಭೀರ ಶೃತಿಗಳಸಾರ ಸಾರ ಸಾರಕೆ ಸಾರ ಕಂಭದಿಬಂದೆ ಕಂದನ ಪೊರೆದೆ ಕಂದನ ಪೊರೆದೆ 2 ಬಲಿಯೆಡೆನಿಂದ ಬೇಡುವೆನೆಂದ ಬೇಡುವೆನೆಂದ ಮೂರಡಿಯಿಂದ ಬೆಳೆಯುತ ಬಂದ ಬೆಳೆಯುತ ಬಂದ ಭೂಮಿಯು ಮುಗಿಯೆ ಶಿರವನ್ನೀಯೆ, ಭಕ್ತನಕಾಯೆ, ಬಾಗಿಲಕಾಯ್ದೆ, ಬಾಗಿಲಕಾಯ್ದೆ ವಿಪ್ರರ ಪೊರೆದ, ವರಸಮರಿಲ್ಲ ವರಸಮರಿಲ್ಲ ಭಾರ್ಗವರಾಮ, ಋಷಿಗಣಸ್ತೋಮ, ದೈತ್ಯವಿರಾಮ, ಸತ್‍ಜನಪ್ರೇಮ, ಮಂಗಳ ನಾಮ ಮಂಗಳನಾಮ 3 ತಾರಕನಾಮ, ಕಲಿಗಿವ ಭೀಮ, ದಶರಥರಾಮ, ಸೀತಾರಾಮ ಜಯಜಯರಾಮ ಜಯಜಯರಾಮ ಲಕ್ಷ್ಮಣನಣ್ಣ, ಸಗುಣಸಂಪನ್ನ, ಜಗಕಿವ ಅನ್ನ, ಬಿಡಬಿಡಬೆನ್ನ ಪ್ರಾಣನೆ ಅನ್ನ, ಕೇವಲನಣ್ಣ, ರವಿಶಶಿಕಣ್ಣ, ಸಿದ್ಧವಿದಣ್ಣ ಆಗಿಸಿ ಯಾಗ, ಸಾಗುತ ಬಂದ ಸಾಗುತ ಬಂದ ಕೊಂದನು ಖಳರ, ಮುಂದಕೆ ನಡೆದ 4 ಮುಟ್ಟಿ, ಕಳ್ಳನ ಮೆಟ್ಟಿ ರಾಜ್ಯವಕೊಟ್ಟ ಜಗಜ್ಜಟ್ಟಿಜಗಜ್ಜಟ್ಟಿ ನಿಜಮುನಿಇವನೆ, ನಿಜವಿಧಿ ಇವನೆ, ಸರ್ವೇಶ, ಸರ್ವೇಶ ಬೆಣ್ಣೆಯ ತಿಂದ ಪೋರನು ಎನಿಸಿ, ಚೋರನು ಎನಿಸಿ ಎನಿಸಿ, ಕ್ರೂರನು ಎನಿಸಿ, ನಾರೇರ ವರಿಸಿ, ಭೂರಿದನೆನಿಸಿ, ಲೀಲೆಯ ತೋರ್ದ 5 ಊರಿಗೆ ಬಂದೆ, ಜರೆಸುತ ಬಂದು, ಬಹುಮಡಿನೊಂದು, ಮರಳಿಯು ಬಂದು ಕದನಕೆ ನಿಂದ, ಬಲುಭಂಢ, ಬಲುಭಂಢ ರಾತ್ರಿಯಲೊಂದು ಸಾಗಿಸಿ ಬಂದು, ವೊಕ್ಕೂ, ತಾಮುಕುಂದ ತಾಮುಕುಂದ, ಸೂತ, ಜಗವಿಖ್ಯಾತ ಕೊಲ್ಲಿಸಿದಾತ ಸರ್ವಸಮರ್ಥ, ಸರ್ವಸಮರ್ಥ ಕಾಲದಿ ಭೇದ ಇಲ್ಲವು ಎಂದು ವಿಭುಶರಣೆಂಬೆ, ವಿಭುಶರಣೆಂಬೆ 6 ವೇದಸುವೃಂದ, ತ್ರಿಪುರರಕೊಂದ, ಬಲ್ಲ, ಎಲ್ಲವ ಬಲ್ಲ ನಿತ್ಯವಿದೆಲ್ಲ, ತಿಳಿದವರಿಲ್ಲ, ಸಾರಿಸಾಕಲ್ಯ ಜಗವನೆಲ್ಲ, ಬಿಗಿದಿಹನಲ್ಲ, ನಾಮದಿನಲ್ಲ, ನಾಮದಿನಲ್ಲ, ಆದಿಯು ಇಲ್ಲ, ಮಧ್ಯವು ಇಲ್ಲ, ಕೊನೆತಾನಿಲ್ಲ, ಖೇದವು ಇಲ್ಲ, ಮೋದವೆ ಎಲ್ಲ, ಭಗನಿಹನಲ್ಲ ಅಪಜಯವಿಲ್ಲ, ಶ್ರೀಗಿವನಲ್ಲ, ಅಪ್ರತಿಮಲ್ಲ, ಪ್ರಕೃತಿಯು ಅಲ್ಲ, ಸ್ವಾಮಿಯು ಇಲ್ಲ, ತಾನೇ ಎಲ್ಲ ಪ್ರೇರಿಪನೆಲ್ಲ, ಭಿನ್ನನು ನಲ್ಲ, ಸರ್ವೋತ್ಕøಷ್ಠ 7 ಕುಜನರ ಮುರಿಯೆ, ಎನಿಸಿ, ಧರ್ಮವನುಳುಹಿ, ಭಕ್ತರಿಗೊಲಿದು, ಪೊರೆವುದು ಸತ್ಯ, ಪೊರೆವುದು ಸತ್ಯ, ಸತ್ಯರ ಸತ್ಯ, ಸಂತರ ಮಿತ್ರ, ಪರಮ ಪವಿತ್ರ, ಲೋಕವಿಚಿತ್ರ ಸುಖಚಾರಿತ್ರ, ಮಂಗಳಗಾತ್ರ, ನಿಖಿಳಸುಭರ್ತ, ಭಕ್ತರ ಭೃತ್ಯ ನತ ಜನಪಾಲ, ವೇದಗಳೆಲ್ಲ, ಶಬ್ದಗಳೆಲ್ಲ, ಘೋಷಗಳೆಲ್ಲ ನಾಮಗಳೆಲ್ಲ, ಇವನನೆ ಎಲ್ಲ, ಪೊಗಳುವವಲ್ಲ, ಮುಕ್ತರಿಗೆಲ್ಲ, ಪ್ರಕೃತಿಯ ಸತ್ತಾ, ಸಕಲವ ನೀತ, ನೀಡುವ ದಾತ, ಸರ್ವಸುವ್ಯಾಪ್ತ, ಸರ್ವಸ್ವತಂತ್ರ8 ವೇದವ್ಯಾಸ, ಬದರೀನಿವಾಸ, ವೇದಸ ಪೀಠ, ಸಾಧಿಸುವಂತ್ಯ ಮೋದಕವೀಂದ್ರ, ಮಧ್ವನಪೋಷ, ಆದರವೀಯೊ ಪಾದಗಳಲ್ಲಿ ವೇದಗಳಳಿಯೆ, ವಿಧಿ ಮುಖಸುರರು, ಪಿಡಿದರು ಪಾದ ಮಾಧವ ನೀನು ಮೇದಿನಿಗಿತ್ತೆ ಸೂತ್ರ ಗೈದ ಮಹೇಶ, ವೇದಕುಮಿಗಿಲು, ಭಾರತಕರ್ತ, ಭಾರತ ಕರ್ತ ಛಂದದಸುಕಾಯ ಕುಡಿಸೈ ಜೀಯ ಹರಿಸುತಮಾಯ, ಹರಿಸುತಮಾಯ, ಹರಿಸುತಮಾಯ 9 ಶ್ರೀ ಇಹವಕ್ಷ, ಜ್ಞಾನಸುಪಕ್ಷ, ಸರ್ವಾಧ್ಯಕ್ಷ, ದಿವಿಜರಪಕ್ಷ ಬೃಹತೀಭಕ್ಷ, ತಾನಿರಪೇಕ್ಷ, ಆಶ್ರಿತರಕ್ಷ, ಕರುಣ ಕಟಾಕ್ಷ, ಕರುಣಿಸು ರಕ್ಷ, ನೀಜಗರಕ್ಷ, ಅಜಗರ ಶೈಯ್ಯ, ಮನ್ಮಥನಯ್ಯ ಭವಬಿಡಿಸಯ್ಯ, ಭಯಹರಿಸಯ್ಯ ದಯಮಾಡಯ್ಯ ಶರಣುಪರೇಶ ಇಚ್ಛೆ ಅನೀಶಾ, ಕಳೆಕಳೆ ಆಶಾ, ಕಡಿಕಡಿಪಾಶಾ, ನಾಬಡದಾಸ, ತೈಜಸ ಶರಣು, ಪ್ರಾಜ್ಞನೆ ಶರಣು, ತುರ್ಯನೆ ಶರಣು, ಕಪಿಲನೆ ಶರಣು ಶರಣು ಅನಂತ, ಶರಣು ಅನಂತ 10 ವೆಂಕಟರಮಣ, ಕಿಂಕರನಾನು, ಸಂಕಟಹರಿನೊ ಶಂಕರತಾತ ತಿದ್ದೊ, ಪಂಕಜನಯನ ದಡ್ಡನು ನಾನು ಭಕ್ತಿಗಡ್ಡೆಗೆಸೇರಿಸು ಪ್ರಾಣನ ಆಣೆ ರಾಜರ ಆಣೆ ಜಯಮುನಿ ಆಣೆ, ಗುರುಗಳ ಆಣೆ, ಉರಗಾದ್ರಿವಾಸ, ಪದ್ಮಜಳೀಶ, ಹರಿಸುತ ದೋಷ, ಚರಣದಿವಾಸ, ನಿರುತಲೀಯೊ, ಕರುಣವ ಸುರಿಸಿ, ಮರುತನ ಮತದ ಅರುಹುತಲೆನಗೆ, ಸಂತತ ವೆಂಬೆ, ಸಂತತವೆಂಬೆ, ಸಂತತವೆಂಬೆ ನಂದದಿ ಪಠಿಸೆ ನಂದವು ಶಾಶ್ವತ, ಜಯಮುನಿಹೃಸ್ಥ, ಮಧ್ಯರಮೇಶ ಶ್ರೀಕೃಷ್ಣವಿಠಲ ವಲಿಯುವ ಸಿದ್ಧ, ವಲಿಯುವ ಸಿದ್ಧ 11
--------------
ಕೃಷ್ಣವಿಠಲದಾಸರು
ಶ್ರೀನಿವಾಸನೆ ನಿನ್ನ | ವರ್ಣಿಸಲು ಅಳವೇ ಮಾನನಿಧಿ ಗುಣಪೂರ್ಣ | ನಿನ್ನಂಘ್ರಿ ಭಜಿಪರ ಬನ್ನ ಪ. ವೈನತೇಯನ ವರೂಥ ನಾನಾ ಹಾರ ಪದಕದಿ ಮೆರೆವ ಸುಂದರ ಕಾಮಪೂರ್ಣ ಮುಖಾರವಿಂದನ ನೀ ಮನದಿ ತೋರುತ್ತ ಪೊರೆಯೊ ಅ.ಪ. ಶೇಷಪರ್ವತವಾಸ | ಭಕ್ತರನು ಸಲಹೋ ಈ ಕ್ಷಿತಿತ್ರಯಕೀಶ ಪೋಷಿಸುವೋ ಭಕ್ತರವಾಸಿ ನಿನ್ನದೊ ಶ್ರೀಶ ಲಕ್ಷ್ಮೀನಿವಾಸ ದೋಷದೂರನೆ ಎನ್ನ ಅವಗುಣ ದೋಷಗಳನೆಣಿಸದಲೆ ಸಲಹೊ ಶೇಷವರ ಪರ್ಯಂಕಶಯನ ವಿ- ಭೀಷಣ ಪ್ರಿಯ ಭೀಷ್ಮವರದ1 ಮಾಘ ಸಪ್ತಮಿ ಕುಂಭ | ಸಂಕ್ರಮಣ ದಿವ್ಯ ಯೋಗ ಶುಕ್ಲದಿ ಎಂಬ | ಸ್ಥಿರವಾರದಲ್ಲಿ ಆಗ ರಥದಲ್ಲಿ ಬಿಂಬ | ಭಕುತರಿಗೆ ಕಾಂಬ ಜಾಗು ಮಾಡದೆ ಸೂರ್ಯಮಂಡಲ ಬೇಗ ಬಿಗಿದಿಹ ಸಪ್ತ ಹಯಗಳ ಬಾಗಿ ಭಜಿಸಲು ಭಕ್ತವರ್ಗವು ನೀ ಜಗದಿ ಮೆರೆಯುತ್ತ ಪೊರೆದೆ 2 ವಿೂನನಾಗಿ ಮತ್ತೆ ವೇದವನೆ | ತಂದು ಆ ನಳಿನಭವಗಿತ್ತೆ ಅಲ್ಲಿಂದ ಸುರರಿಗೆ ಪ್ರಾಣದಾನವನಿತ್ತೆ ಮೇದಿನಿಯ ಪೊತ್ತೆ ನಾನೆ ಜಗಕೆಂಬ ದಾನವನ ಕೊಂದು ದಾನ ಬೇಡಿ ಭೂಮಿ ಅಳೆದು ಮಾನಿನಿ ಶಿರ ತರಿದು ಸೀತಾ ಮಾನಿನಿಗೆ ಅಂಬುಧಿಯ ಬಿಗಿದೆ 3 ಮಾನಿನಿಯರಿಗೆ ಕಾಣದೆ | ಬೆಣ್ಣೆಯನು ಕದ್ದು ಮಾನವೆಲ್ಲವ ಕಳೆದೆ ಅಲ್ಲಿಂದ ಮುಂದೆ ಮಾನವ ಬಿಟ್ಟು ನಿಂದೆ ಏನ ಹೇಳಲಿ ಹಯವನೇರಿ ದಾನವರ ಸಂಹರಿಸಿ ಮೆರೆದೆ ನಾನಾ ರೂಪ ನಾಟಕಧರ ನೀನೀ ಪರ್ವತದಲಿ ನಿಂದಿಹೆ 4 ದೇಹವ್ಯಾಪ್ತಕ ನೀನೆ | ದೇಹಗಳ ಕೊಟ್ಟು ಮೋಹಗೊಳಿಸುವ ನೀನೆ ದೇಹಸ್ಥನಾಗಿ ತೋರುವ ಬಿಂಬ ನೀನೆ | ಜೀವಾಕಾರನೆ ಈ ಹದನ ಎನಗಿನ್ನು ತಿಳಿಯದೊ ಮೋಹ ಹರಿಸಿ ಸುಜ್ಞಾನ ನೀಡೊ ಸ್ನೇಹ ಗೋಪಾಲಕೃಷ್ಣವಿಠ್ಠಲ ಶ್ರೀ ಹರಿಯೆ ಹೃದಯದಲಿ ನಿಲಿಸೊ 5
--------------
ಅಂಬಾಬಾಯಿ