ಒಟ್ಟು 407 ಕಡೆಗಳಲ್ಲಿ , 76 ದಾಸರು , 295 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಚಿಕ್ಕವನೇನೆ ಮಿಕ್ಕಾದಂಥ | ಮಕ್ಕಳಿಲ್ಲೇನೆ, ನಿಮ್ಮವರೊಳು ||ದಿಕ್ಕಿಲ್ಲವೇನೆ, ಇವಗೆ ತಕ್ಕ |ಬುದ್ಧಿಯ ಕಲಿಸುವವರಿನ್ನು ಪ ತಂಡ ತಂಡದಿ ಬರುತಿಹ ನಮ್ಮನ |ಕಂಡು ಆಡುವ ಆಟಕಿಯ ಬಿಟ್ಟು ||ಚೆಂಡು ಪುಟಿದು ಬಂತು ಬಚ್ಚಿಟ್ಟಿರ್ಯಾಕೆಂದು |ದುಂಡ ತೋಳಗಳೆತ್ತಿ ಭಂಡು ಮಾಡುವನಿವ 1 ಶಿಶುವೆಂದು ಎತ್ತಪ್ಪಿಕೊಂಡು ಮುದ್ದಿಡಲು |ದಶನಗಳಿಂದಧರ ನೋಯಿಸಲು ||ಆಶೆಯಲಸುವ ಪೀರಿದವನಿವನೆಂದಂಜಿ |ಸೊಸಿಯನ್ನಬ್ಬರಿಸಿ ಬೀದಿಯೊಳಂದು 2 ಆರಿಲ್ಲದಾಗೊಬ್ಬವನನ್ನು ಬಾಲಕನೆಂದು |ದ್ವಾರವಿಕ್ಕಿ ನೀರೆ ಮೇಲಿರಿಸಿ ||ಬಾರಯ್ಯ ಮುದ್ದು ಕೊಡಯ್ಯ ಎನೆ ಹದಿ- |ನಾರು ವರುಷದವನಾದ ರುಕ್ಮಭೂಷಾ 3
--------------
ರುಕ್ಮಾಂಗದರು
ಛೀ ನಿನ್ನ ಮೋರೆ ಮೇಲೆ - ಠೊಣ್ಯಛೀ ನಿನ್ನ ಮೋರೆ ಮೇಲೆ ಪ ನಿತ್ಯ ಪರಿ ಆಯುಷ್ಯವ ವ್ಯರ್ಥ ಕಳೆಯುತಿದ್ದೆ ಠೊಣ್ಯ 1 ಕಂಡ ಕಂಡಲ್ಲಿಗೆ ಪೋಗಿ ಧನಂಗಳ ಕೊಂಡು ಬರುತ್ತಲಿದ್ದೆಹೆಂಡಿರು ಮಕ್ಕಳು ಹಿತದವರೆಂದು ಕೊಂಡಾಡುತಲಿದ್ದೆಖೋಡಿ ಮಾತುಗಳನು ಹೇಳಿ ಮಂದಿಯ ಕುಂಡೆ ಚಿವುಟುತಿದ್ದೆಭಂಡ ಬಾಳು ಇದು ರಂಡೆ ಗಂಡ ಕಂಡ್ಯ ಯಮನ ಬಾಧೆ ಠೊಣ್ಯ2 ಮಾನವ ಜನ್ಮಕೆ ಬಂದು ಪುಣ್ಯ ಮತ್ತೇನೂ ಮಾಡದೆ ಹೋದೆದಾನವಾಂತ ಸತ್ಪಾತ್ರರಿಗೆ ನೀ ದೀನತ್ವವ ಪಡೆದೆಜ್ಞಾನಶೂನ್ಯ ಮದವೇರಿದ ಸೊಕ್ಕಿದ ಕೋಣಕೆ ಹುಟ್ಟಿದ್ದೆದೀನರಕ್ಷಕಾದಿಕೇಶವ ವಿಠಲಂಗೆ ನೀನತಿ ದೂರಾದೆ ಠೊಣ್ಯ 3
--------------
ಕನಕದಾಸ
ಜಯ ಪಾಂಡುರಂಗ ವಿಠಲ | ದಯದಿ ಪೊರೆ ಇವನಾ ಪ ಭಯ ಕೃತೂ ಭಯನಾಶ | ಹಯಮೊಗನೆ ಹರಿಯೇ ಅ.ಪ. ಹಿಂದಿನ ಸುಸಂಸ್ಕಾರ | ಛಂದದಲಿ ಅನುಭವಿಸಿಇಂದು ತವದಾಸ್ಯವನು | ಕಾಂಕ್ಷಿಸುವ ಹರಿಯೇಅಂದ ಪುಣ್ಯದರಾಶಿ | ಬಂದೊದಗಿತೋ ಎನೋಇಂದಿರಾ ನಂದದಾ | ನಂದವನೆ ಈಯೋ 1 ಕರ್ಮಾಕರ್ಮಗಳ | ಮರ್ಮವನೆ ತಿಳಿಸುತ್ತಧರ್ಮನಾಮಕ ನಿನ್ನ | ಪೇರ್ಮೆ ಸನ್ನಾಮಾಒಮ್ಮನದಿ ಸರ್ವದಾ | ಸುಸ್ಮರಣೆ ಈಯುವುದುದುಮ್ಮಾನಗಳ ಕಳೆದು | ಸಲಹಬೇಕಿವನಾ 2 ಪಂಚ ಭೇದ ಜ್ಞಾನ | ಸಂ ಚಿಂತನೆಯ ಕೊಟ್ಟುವಾಂಛಿತಾರ್ಥವನೀಡೋ | ಪಂಚ ಪಂಚಾತ್ಮಾಹೆಂಚು ಹಾಟಕದಿ ಸಮ | ಚಿಂತನೆಯು ಬರುತಿರಲಿಅಂಚೆವಾಹನ ಪಿತನೆ | ಸಂಚಿತಾಗಮ ಕಳೆಯೋ3 ಭೂರಿ ಭಕ್ತಿಗಳಾ 4 ಧೀವರರ ಆಶಿಷವು | ತೀವರಾಗಲಿ ಇವಗೆಮಾವಾರಿ ಪದಚಿಂತೆ | ಯಾವಾಗ್ಯೂ ಇರಲೀಕೇವಲಾನಂದಗಳು | ಭಾವದಲಿ ಮೈದೋರೆದೇವಗುರು ಗೋವಿಂದ | ವಿಠಲ ಪ್ರಾರ್ಥಿಸುವೆ 5
--------------
ಗುರುಗೋವಿಂದವಿಠಲರು
ಜಯಜಯತು ಜಾಹ್ನವಿಯೆ ಭಕ್ತ ಸಂಜೀವಿ ಜಯ ಮಂಗಳವನೀಯೆ ಜಯ ನಮ್ಮ ಕಾಯೆ ಪ ಕಮಲಜನು ಪಾತ್ರೆಯೊಳು ಧರಿಸಲಾ ಹರಿಪಾದ- ಕಮಲವನು ತೊಳೆಯಲಾವೇಗದಿಂದ ವಿಮಲ ಸಂಗತಿಯಿಂದ ಮಂದಾದಿನಿಯೆನಿಸಿ ಸುಮನ ಸಾವನಿಯಲ್ಲಿ ಮೆರೆದೆ ಸುರನದಿಯೆ1 ಧ್ರುವಲೋಕಕಿಳಿದು ಅಮರಾವತಿಯ ಸಾರಿದೆ ರವಿಯಂತೆ ಪೊಳೆಯುತ ಆ ಜನ ಮಧ್ಯದಿಂ ಭುವನದೊಳಗೀರೈದು ನೂರು ಯೋಜನದಗಲ ತವಕದಿಂದಲಿ ಧುಮುಕಿ ಚತುರ ಭಾಗವಾದೆ 2 ಶಿವನ ಮಸ್ತಕದಲ್ಲಿ ಶೋಭಿಸುವ ಮಹಮಹಿಮೆ ಭವದೊರೆ ಭಗೀರಥಗೆ ವಲಿದು ಬರುತ ಕವಿ ಜನ್ಹುಮುನಿಯಿಂದ ಪುಟ್ಟಿ ಹಿಮಗಿರಿ ದಾಟಿ ಜವನ ಭಗಿನಿಯ ಕೂಡಿ ಮಣಿಕರ್ಣಿಕೆಯ ನೆರದೆ 3 ಅಳಕನಂದನೆ ನಿನ್ನ ಸ್ಮರಣೆ ಮಾಡಿದ ಜನಕೆ ಕುಲಕೋಟಿ ಪಾವನವು ಸಂದೇಹವಿಲ್ಲ ಮಜ್ಜನ ಪಾನ ಮಾಡಿದಗೆ ಪೊಳೆಗೆ ವೈಕುಂಠಪುರ ಅವನ ಹೃದಯದಲಿ 4 ದೇಶದೇಶಗಳಿಂದ ಬಂದ ಸುಜನರ ಪಾಪ ನಾಶನವ ಮಾಳ್ಪ ನೀ ನಿಷ್ಕಾಮದಿ ಮಾಧವ ವಿಜಯವಿಠ್ಠಲನ ಸೋಸಿನಿಂದಲಿ ಪೊಗಳುತಿಹೆ ಸುವಿಖ್ಯಾತೆ 5
--------------
ವಿಜಯದಾಸ
ಟೀಕಾಚಾರ್ಯರ ಸ್ತೋತ್ರ ದಯದಿ ಪಾಲಿಸೋ ಜಯತೀರಥ ರಾಯಾ | ಅಕ್ಷೋಭ್ಯರ ತನಯಾ ಪ ಅತ್ಯಂತ್ಹರುಷದಿ ಎತ್ತಾಗಿರುತಿರಲೂ ಶ್ರೀ |ಆನಂದ ತೀರಥರೂನಿತ್ಯ ಪಠಿಸುವೋ ಪುಸ್ತಕ ಹೊರುತಿರಲೂ |ಗುರುರಾಯರು ಪೇಳಿದತತ್ವ ಗ್ರಂಥವನೆ ಕಿವಿಯಲಿ ಕೇಳುತಲೀ | ತಲೆಯನು ತೂಗುತಲೀಮತ್ತೆ ಪುಟ್ಟಿದ್ಯೋ ಮಂಗಳವೇಡೆಯಲೀ | ಅತಿ ಮತಿವಂತರಲೀ 1 ದೇಶಪಾಂಡೆರಾ ಕೂಸಾಗಿ ಜನಿಸೀ | ಘನ ರಾವುತನೆನಿಸೀದೇಶ ದೇಶದೋಳ್ ಸೈನ್ಯವನೇ ಚರಿಸೀ | ಹಣವನ್ನೇ ಗಳಿಸೀವಾಸುಕಿಯೆಂಬೋ ಗುರುತನೆ ತಪ್ಪಿಸೀ | ನದಿಗೇ ನೀರಡಿಸೀಶ್ರೀಶನಾಜ್ಞೆಯೊಳಿವರನೆ ಕರೆತರಿಸೀ |ಶಿಖೆ ಸೂತ್ರವ ತೆಗೆಸೀ2 ಹಿಂಡು ಜನ ಅಂಡಲಿಯುತ ಬದೂ | ಅಕ್ಷೋಭ್ಯ ತೀರಥರಾಕಂಡು ಭೇಟಿಯಾ ಮಾಡುತಲೇ ನಿಂದೂ | ಧೋಂಡೋ ರಘುನಾಥನಹೆಂಡತಿ ಗಂಡನ ಕೂಡಿಸಬೇಕೆಂದೂ | ಸುಮ್ಮನೆ ಕರೆತಂದೂ - ಪ್ರಚಡ ಸರ್ಪನಾ ರೂಪವ ತಾಳ್ದಂದೂ ಭಯವ ಪಟ್ಟರಂದೂ 3 ಮಧ್ವ ಶಾಸ್ತ್ರಗಳನುದ್ಧರಿಸುತಲದನಾ | ಟೀಕೆಯನೇ ಮಾಡೀವಿದ್ವಜ್ಜನರಿಗೆ ತಿದ್ದಿಯೆ ಪೇಳುತಲೀ |ನಾನಾ ಬಗೆಯಿಂದಲಿಪದ್ಧತಿ ತಿಳಿಸಿದ ಗುರುರಾಯರು ನೀವು | ಯತಿವರ ಸುರಧೇನುಅದ್ವೈತರ ಗುರು ವಿದ್ಯಾರಣ್ಯರ | ಗೆದ್ದ ಸಿಂಹ ನೀನೂ 4 ಆಷಾಢ ಬಹುಳ ಪಂಚಮಿಯೂ ಬರುತಾ ಕಳೆಬರವನೆ ಬಿಡುತಾವ್ಯಾಸ ವಿಠ್ಠಲನ ಪಾದದಲೇ ನಿರುತಾ | ಮಳಖೇಡದೊಳುವಾಸಿಪನೆಂಬೋ ಬಲು ಪ್ರಖ್ಯಾತಾ |ನಿಜಗುಣ ಗಣನೀತಾಬ್ಯಾಸರದಲೆ ಕೊಂಡಾಡಿದರೆ ನಿತ್ಯಾ | ಇಷ್ಟಾರ್ಥವನಿತ್ತಾ 5
--------------
ವ್ಯಾಸವಿಠ್ಠಲರು
ತತ್ವನಿರೂಪಣೆ ಆಟವಾಡುವ ಕೂಸು ನಾನು | ಕೃಷ್ಣ ಕಾಟಬಡಿಸುವೆ ನಿನ್ನ ಸಾಧನವ ನೀಡೊ ಪ. ಗುರುಗಳು ತಂದು ನಿನಗೊಪ್ಪಿಸಿದರೆಲೊ ದೇವ ಸರಿಯ ಸಖನೆಂದು ಅನುಗಾಲವೂ ಸಿರಿಯರಸ ಕೇಳಿನ್ನು ಹಿರಿಯನೆ ನೀನಹುದೊ ಕಿರಿಯತನದಿಂದ ನಾ ಆಟವಾಡುವೆನೊ 1 ಹೃದಯವೆಂಬೋ ಪುಟ್ಟ ಮನೆಯ ಕಟ್ಟಿ ಅಲ್ಲಿ ಮುದದಿಂದ ಅಷ್ಟದಳ ಪದುಮ ರಚಿಸಿ ಒದಗಿ ಬರುತಿಹ ದುಷ್ಟ ಅರಿಗಳನೆ ನುಗ್ಗೊತ್ತಿ ಪದುಮನಾಭನೆ ನಿನ್ನ ಜೊತೆಯವರೊಡನೆ2 ಅಂಬರ ಮಧ್ಯದಲಿ ಬಿಂಬವೆನ್ನುವ ದಿವ್ಯ ಬೊಂಬೆಯನೆ ಇಟ್ಟು ಸಂಭ್ರಮದಿ ಶೃಂಗರಿಸಿ ಹಾಡಿ ಪಾಡಿ ಕುಣಿದು ಆಂಬ್ರಣಿನುತ ನಿನ್ನ ನೋಡಿ ದಣಿಯುವೆನೊ 3 ಪುಂಡರೀಕಾಕ್ಷ ನಿನ್ನ ಕೊಂಡಾÀಡುವೊ ಬಹಳ ತಿಂಡಿಯನೆ ನೀಡೆನಗೆ ಅನುಗಾಲವೂ ಭಂಡು ಮಾಡುವರೊ ಬರಿಕೈಲಿದ್ದರೆ ಸಖರು ಕಂಡು ಕಂಡೂ ನೀನು ಸಮ್ಮನಿರಬೇಡೊ 4 ಎಷ್ಟು ಜನ ಸ್ನೇಹಿತರೊ ಈ ಮನೆಯೊಳೆಲೆ ದೇವ ಪುಟ್ಟನಾಗಿರುವೆ ನಾನೆಲ್ಲರಿಗೆ ಇನ್ನು ಕೊಟ್ಟರೆ ಸಲಕರಣೆ ಆಟವಾಡುವೆ ಅಳದೆ ಶ್ರೇಷ್ಠ ಶ್ರೀ ಗೋಪಾಲಕೃಷ್ಣವಿಠ್ಠಲನೆ 5
--------------
ಅಂಬಾಬಾಯಿ
ತನುವೆಂಬ ಭವನದಲಿ ಮನವೆಂಬ ಮಂಟಪದಿ ವನರುಹಾಸನ ವಿಹುದು ನಿನಗಾಗಿ ಕೃಷ್ಣಾ ಪ ಅನವರತ ಸ್ವಾಗತವ ಇನಿದಾಗಿ ಪೇಳುತಲಿ ಸನುಮತದೊಳೀರೈದು ಮುನಿವರರು ನಿಂದಿಹರು ಅ.ಪ ಎನಗೆ ತನಗೆಂದಿಬ್ಬರನುವಾಗಿ ಕಾದಿಹರು ಘನ ಮೌನಿಯಂತೊಬ್ಬ ಮಣಿಯುತಿಹನು ವನಜ ಸಂಭವ ಜನಕ ಮುನಿಯೊಡನೆ ನೀ ಬಂದು ಕನಕಮಂಟಪವೇರು ಅವರಿಬ್ಬರೋಡುವರು 1 ಕರಿಯ ಮೈಯವನೊಬ್ಬ ದುರದುರನೆ ನೊಡುವನು ಪರಿವಾರದವರನ್ನು ತೋರುತಿಹನೊಬ್ಬ ಕರದಿ ಸನ್ನೆಯ ಮಾಡುತಿಬ್ಬರೂ ಬರುತಿಹರು ತರಿದವರ ಮಂಟಪವನೇರೊ ಮಾಂಗಿರಿರಂಗ 2
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ತಾನಸÉ ತಾನಾದೆನ್ನ ಸ್ವಾಮಿ ಭಾನುಕೋಟಿ ಅಂತರ್ಯಾಮಿ ಧ್ರುವ ಕಾಣಬರುತಾದೆ ನೋಡಿ ಙÁ್ಞನವಂದಭ್ಯಾಸ ಮಾಡಿ ಭಾನು ಭವದಲಿ ಕೂಡಿ ನಾನು ನೀನೆಂಬುದೀಡ್ಯಾಡಿ 1 ತಿರುಗಿ ನೋಡು ದೋರುತಾನೆ ಅರುವಿನೊಳು ನಿಂತಾನೆ ಸಾರಸುಖ ಬೀರುತಾನೆ ಕೋರಿ ತಾರ್ಕಣ್ಯಾಗ್ಯಾನೆ 2 ಧ್ಯಾನ ಮೌನಾಗ್ಯಾನೆ ತಾನೆ ಜ್ಞಾನಗುರು ದೋರುತಾನೆ ದೀನ ಮಹಿಪತಿಗೆ ತಾನೆ ಖೂನ ಪರಿಪೂರ್ಣಾಗ್ಯಾನೆ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ತಿರುಮಲೇಶನೆ ನಿನ್ನ ಚರಣ ಪಂಕಜಯುಗಲ ನೆರೆನಂಬಿದವ ಧನ್ಯನೋ ಪ ಗುರು ಮೂಲ ಪುರುಷ ನಾರಪ್ಪಯ್ಯ ಮುನಿಗೊಲಿದು ಕುರಿಕಿಹಳ್ಳಿಯಲಿ ಬಂದಾ ನಿಂದಾ ಅ.ಪ ವರಋಷಿಯ ಪೂರ್ವದಲಿ ತಿರುಪತಿಯ ಮುಟ್ಟಿ ಮಲ- ಗಿರಲು ಸ್ವಪ್ನವ ಕಾಣುತ ತುರುರೂಪದಲಿ ನಾನೆ ಬರುವೆ ಕಾ- ರ್ಪರ ವನಕೆ ದರುಶನವÀÀ ಕೊಡುವೆ ನಿರುತ ಬರುತ ಬರುತಲಿ ವಿಪ್ರ ತಿರುಗಿ ನೋಡಲು ಪದದಿ ಕಿರುಗಜ್ಜೆಗಳ ನುಡಿಸುತಾ ಕುರಿಕಿ ಹಳ್ಳಿಯ ಸುಮಂದಿರನೆನಿಸಿ ಸಿರಿಸಹಿತ ವರಶಿಲೆಯ ಮೇಲೆ ಪಾ ಲ್ಗರಿದು ನೆಲೆಸಿರುವಂಥ 1 ತೋಂಡಮಾನಕ್ಷಿತಿಪ ಪುಂಡಲೀಕಾದಿ ಬಹು ತೋಂಡರಿಗೆ ಒಲಿದು ದೇವಾ ಕುಂಡಲಿ ಪರ್ವತದಿ ತಂಡತಂಡದಿ ಭಕುತ ಮಂಡಲಿಗೆ ಫಲವ ಕೊಡುವ ದುಂಡುಮುತ್ತಿನಹಾರ ಮುಕುಟ ರತ್ನಾಭರಣ ಮಂಡಿತನಾಗಿ ಮೆರೆವ ಕಂಡೆನಾನಿಮ್ಮ ಪದ ಪುಂಡಲೀಕವನು ಈ ಗುಂಡಿನಾ ತಿಮ್ಮಯ್ಯನೆಂದು ಕರೆಸಿಕೊಳುವಿ 2 ಕರಮುಗಿವೆ ಮನ್ಮನದಿ ಕರುಣದಲಿ ತೋರೋತವ ಪರಮ ಸುಂದರ ಚರಣವ ನಿರುತ ಸ್ಮರಿಸುವ ಜನರ ದುರಿತ ತಿಮಿರಕೆ ದಿವಾ ಕರನೆನಿಸಿ ಸುಖವಗರಿವಾ ಸೇವ್ಯ ಕಾರ್ಪರನಿಲಯನೆನಿಸೆ ಬಹು ಶರಣು ಜನರನು ಪೊರಿಯುವಾ ವರಕೃಷ್ಣ ಗರ್ಭದಲಿ ಒಪ್ಪುವ ಪಿಪ್ಪಲಸ್ಥಶ್ರೀ ನರಹರಿಯ ಬಳಿಯಲಿರುವಾಮೆರೆವಾ 3
--------------
ಕಾರ್ಪರ ನರಹರಿದಾಸರು
ತುಂಗಾತೀರದಿ ನೆಲಸಿಹಗೆ | ಮಂಗಳ ಗುರು ರಾಘವೇಂದ್ರನಿಗೆ | ಗಂಗಾಜನಕನ ಭಕುತ ಶ್ರೇಷ್ಠ ಯತಿ | ಪುಂಗವನೆನಿಸುತೆ ಮೆರೆವವಗೆ ||ಮಂಗಳಂ ಜಯ ಮಂಗಳಂ|| ಪ ದಾವಣಗೆರೆಯೊಳು ನಿಂದವಗೆ| ಕೋವಿದ ಭೂಸುರ ಸೇವ್ಯನಿಗೆ| ಧಾವಿಸಿ ಬರುತಿಹ ದೀನಜನಾಳಿಗೆ| ದೇವ ತರುವಿನಂತೀವನಿಗೆ ||ಮಂಗಳಂ ಜಯ ಮಂಗಳಂ|| 1 ಶುದ್ಧ ಟೀಕೆಗಳ ರಚಿಸಿದಗೆ| ಪರಿ | ಮೂರ್ತಿ ರಾಘವೇಂದ್ರನಿಗೆ ||ಮಂಗಳಂ ಜಯ ಮಂಗಳಂ|| 2 ಭಾಸುರ ರಘುವೀರಾರ್ಚಿಪಗೆ| ಶ್ರೀಶಕೇಶವ ಪಾದಾರಾಧಕಗೆ ಸುರ| ರೀಶನೆನಿಪ ರಂಗನಾಥನಿಗೆ | ಮಂಗಳಂ ಜಯ ಮಂಗಳಂ||3
--------------
ಶ್ರೀಶ ಕೇಶವದಾಸರು
ತುಂಗೆ ಬಂದಳು ದೇವೋತ್ತುಂಗ ವರಹನಾ ಮುಂಗೋರಿಯಲ್ಲಿ ಪುಟ್ಟಿ ಭಕ್ತ ನಿಕರನಾ ಹಿಂಗದೆ ಪೊರೆದು ಸುಖಂಗಳನೀವು ತಾ ಮಂಗಳಾಂಗೆ ಮಾತಂಗೆ ಸುಗಮನೆ ಪ ಕಾಳ ಪನ್ನಗವೇಣಿ ಕೋಕಿಲವಾಣಿ ಫಾಲ ಕಸ್ತುರಿ ಜಾಣೆ ಪಲ್ಲವಪಾಣಿ ವಾಲೆ ಮೂಗುತಿ ಅಣಿ ಮುತ್ತು ಕಠಾಣಿ ತೋಳು ಮಂದಾರಮಣಿ ಅರಿಗುಣಶ್ರೇಣಿ ಮೌಳಿಯಾ ಮೇಲಿನ ಜಾಳಿಗೆ ಸೂಸುಕಾ ವಾಲಲು ಕದಿಪಿನ ನೀಲಗೂದಲು ಭ್ರಮ ರಾಳಿಗಳಂತಿರೆ ಬಾಲ ಸುಧಾಕರ ಪೋಲುವ ವದನೇ1 ಕುಡುತೆಗಂಗಳ ನೀರೆ ಕಂಬುಕಂಧರೆ ಕಡಗ ಕಂಕಣದ್ವಾರೆ ಕೈಯ ಶೃಂಗಾರೇ ಜಡಿವ ಪದಕಹಾರೆ ಕಂಚಕಸೀರೆ ಮುಡಿದ ಪುಷ್ಪಂಗಳು ಮರೆ ಕುಚಗಳು ಅದರೆ ಬಡನಡುವಿನ ಕಡು ಉಡುವಿನ ಕಿಂಕಣಿ ಒಡನುಡಿಸುವ ಗೆಜ್ಜೆ ಕಾಲಂದಿಗೆ ಪೆಂಡೇ ಅ ಡಿಗಡಿಗೊಪ್ಪಲು ಕಡಲನ ಮಡದಿ 2 ತೀಡಿದ ಪರಿಮಳ ಗಂಧದ ಭೋಗಿ ಕೂಡಲಿಪುರದಲಿ ಭದ್ರಿವಂದಾಗಿ ಕೂಡಿ ಸೂಸಿದಳಂದು ಮುಂದಕ್ಕೆ ಸಾಗಿ ಆಡುತ ಪಾಡುತ ಬಲು ಲೇಸಾಗಿ ಬೇಡಿದ ಜನರಿಗೆ ಈಡಿಲ್ಲದ ವರವ ನೀಡುತ ನಿರುತರ ಮಾಡುತ ದಯವನು ನೋಡುತ ತಡವಿಲ್ಲದಲೆ 3 ಶೃಂಗಾರ ಮಾರ್ತಾಂಡೆ ಹರಿಹರ ಮಾತಾ ಅಂಗಾಧಿ ಪರ್ವತ ಪಂಚ ಪ್ರಖ್ಯಾತ ಹಿಂಗದೆ ಬಲಗೊಂಡು ಕೊಡ್ಲೀಗೆ ಬರುತ ಸಂಗೀತ ಗಾಯನದಿಂದ ವಾಲಗಗೊಳುತ ಸಂಗಮೆಯಾಗಿ ತಂಗಿಯ ಬೆರತೀಗ ಮಂಗಳ ಕ್ರೀಡೆಯಲ್ಲಿ ಪ್ರವೇಶಿಸಿ ಗಂಗೆ ಎನಿಸಿಳ್ಯಮನನಾದೇಳಗೆ 4 ಲೋಕದೊಳಗೆ ಪ್ರತಿರಹಿತ ಪೆಸರಾದ ಚೀಕನ ಬರವಿಯ ಅಶ್ವಥಮರದ ನೃಕಂಠೀರವನ ಪಾದದಿ ವ್ಯಾಧಿಷ್ಟರಾದ ಸೋಕಿ ಮೈಮರೆದಂಥ ನಮಿತರು ಕರದಾ ಪಾಕ ಪದಾರ್ಥಕೆ ಒಲಿದೊಲಿದಾಡುತ ಶ್ರೀಕರ ವಿಜಯವಿಠ್ಠಲಗೆರಗುತ ನಾಕಕನ್ನಿಕೆಯಂತೆ ಹೊಳೆದಳುಯಿಂದು5
--------------
ವಿಜಯದಾಸ
ತುಂಬಿತು ಬೆಳೆದಿಂಗಳು-ಈ ವನದೊಳುತುಂಬಿತು ಬೆಳೆದಿಂಗಳು ಪ ತುಂಬಿತು ಬೆಳೆದಿಂಗಳೀವನದೊಳಗೆಲ್ಲಅಂಬುಜನಾಥನು ಬಾರ ಕಾಣಕ್ಕ ಅ.ಪ. ಮಾಗಿ ಹೋಗಿ ವಸಂತವು ಬರುತಿದೆಕೋಗಿಲೆ ತುಂಬಿಲ್ಲಿ ಕೂಗುತಿದೆಆಗಲೆ ಎಳೆಮಾವು ತಳಿರೇಳುತಲಿದೆನಾಗಶಯನ ಕೃಷ್ಣ ಬಾರ ಕಾಣಕ್ಕ1 ಕಟ್ಟಿದ್ದ ಬಿಳಿಯೆಲೆ ತೊಟ್ಟಾರುತಲಿದೆಪಟ್ಲ ಜಾಜಿಯ ಮೊಗ್ಗು ಅರಳುತಿದೆಬಟ್ಟೆ ಬಟ್ಟೆಲಿ ನೋಡಿ ಕಣ್ಣು ಝುಮ್ಮಿಟ್ಟಿತುಧಿಟ್ಟತನದ ರಂಗ ಬಾರ ಕಾಣಕ್ಕ 2 ಕಾದ ನೀರು ಎಲ್ಲ ಆರಿ ಹೋಗುತಲಿದೆಕಾಯ್ದ ಮಲ್ಲಿಗೆ ಹೂವು ಬಾಡುತಿದೆಮದನನ ಬಾಧೆಯು ಬಹಳವಾಗಿದೆ ಈಗಮದನನೈಯನು ಕೃಷ್ಣ ಬಾರ ಕಾಣಕ್ಕ3 ಅಡವಿಲಿ ಕೆರೆಕಟ್ಟೆ ಕುಡಿವೋರಿಲ್ಲದೆ ಬತ್ತಿನಡೆವೋರಿಲ್ಲದೆ ದಾರಿ ಹಸಗೆಟ್ಟಿತುಕಾಡಮಲ್ಲಿಗೆ ಹೂವ ಕುಯ್ದು ಮುಡಿವರಿಲ್ಲನೋಡದೆ ಎನ್ನ ಜೀವ ಹಸಗೆಟ್ಟಿತಮ್ಮ 4 ಹಾಸಿದ್ಹಾಸಿಗೆ ಮಂಚ ಹಸಗೆಟ್ಹೋಗುತಿದೆಪೂಸಿದ ಶ್ರೀಗಂಧ ಬೆವರುತಿದೆಲೇಸಾದ ನಮ್ಮೆದೆ ಮಿಂಚೇರುತಲಿದೆವಾಸುದೇವನು ಕೃಷ್ಣ ಬಾರಕಾಣಕ್ಕ 5 ಕಾಯ ಹೊಳವು ಮಾಡಿ ಕುಚವ ಸೋರೆಯಮಾಡಿಮನವೆಂಬ ತಂತಿಯ ಹೂಡಿಕೊಂಡುಎರಡು ಕಂಗಳನ್ನು ಎರಡು ತಾಳವÀ ಮಾಡಿಮೇಳಕೊಪ್ಪುವೆ ರಂಗ ಬಾರ ಕಾಣಕ್ಕ6 ಒಳದೊಡೆ ನಡುಗಿತೆ, ನೆರಿಯು ಹಾರುತಲಿವೆಕಳಕಳಿಸುತಲಿದೆ ಕಳವಳವುಪುಳಕವಾಗುತಲಿದೆ ಕಳೆಯುಗುಂದುತಲಿದೆನಳಿನಾಭನು ಕೃಷ್ಣ ಬಾರ ಕಾಣಕ್ಕ7
--------------
ವ್ಯಾಸರಾಯರು
ತುರುಗಾಯ ಬಂದ ಗೋಪಿಯ ಕಂದಆನಂದದಿಂದ ಪ ಮೃಗ ಜಲಚರ ಮೋಹಿಸೆತರಳೇರ ಮನ ಸೂರೆಯಾಗೆ ಕೊಳಲಿನಿಂದ ಅ.ಪ. ತಂದೆಯ ಕಂದನೆಂದು ಕೊಂಕುಳೊಳಿಟ್ಟುಕಂದನ ಕೆಳಗಿಟ್ಟುಅಂದಿಗೆ ಗೆಜ್ಜೆ ಕಿವಿಗಳಿಗಿಟ್ಟುಮುತ್ತಿನ ಬಟ್ಟುಹೊಂದಿಸಿ ಗಲ್ಲದಲ್ಲಿ ತಾನಿಟ್ಟುಕಸ್ತೂರಿಯ ಬಟ್ಟುಮುಂದಾಗಿ ಮೂಗಿನ ಮೇಲಳವಟ್ಟುಮನೆಬಾಗಿಲ ಬಿಟ್ಟುಕಂದರ್ಪನ ಶರದಿಂದ ನೊಂದು ಬಹುಕಂದಿ ಕುಂದುತಲಿಂದುವದನೆಯರುಇಂದಿರೇಶನಾನಂದದ ಗಾನಕೆಚಂದ್ರಮುಖಿಯರೊಂದಾಗುತ ಬರುತಿರೆ 1 ಮುರಳಿಯ ಸ್ವರಕೆ ಮೋಹಿತರಾಗೆಕರುಗಳನು ತಂದುಕರದಿಂದಲೆತ್ತಿ ತೊಟ್ಟಿಲೊಳಗೆಇರಿಸುತ್ತ ಹಾಲಬೆರಸುತ್ತ ಮಜ್ಜಿಗೆ ಮೊಸರಿನೊಳಗೆಪರಮಾತ್ಮನ ನೆನೆದುಹೊರಟರು ಬಿಸಿಲು ಚಳಿ ಮಳೆಯೊಳಗೆಮನೆಮನೆಯೊಳಗೆತರಳರ ಬೆದರಿಸಿ ಮಾರ್ಜಾಲಕೆ ಮೊಲೆತ್ವರಿತದಿ ಉಣಿಸುತ ಸರಿಸರಿಯೆನುತಲಿಪರಿಪರಿ ಭ್ರಾಂತರಾಗಿ ನೋಡುತಪುರಮಾರ್ಗಕೆ ಬರುವರು ನಿರುಕಿಸುತ 2 ಮದನ ಶತಕೋಟಿ ತೇಜನು ಬಂದಸ್ತ್ರೀರೆದುರಲಿ ನಿಂದಅಧರಾಮೃತ ಪಾನವ ಮಾಡಿರೆಂದಬಾಯಾರಿದಿರೆಂದಬದಿಯಲ್ಲಿ ಬಂದು ಕುಳ್ಳಿರಿಯೆಂದಅವರಿರವನೆ ನೋಡ್ದಚದುರೇರ ಮೋಹಕನೆ ನಾನೆಂದವಾದ್ಯದ ರವದಿಂದಸದಯನೆದುರ ರಂಭೆ ಊರ್ವಶಿ ಮೇನಕೆಒದಗಿ ನಾಟ್ಯಗಳ ಚದುರತನದಲಾಡೆಮಧುಸೂದನ ಭಕ್ತರ ಕಾಯ್ವುದಕೀವಿಧದೊಳಗಾಡಿದ ರಂಗವಿಠಲ ತಾ 3
--------------
ಶ್ರೀಪಾದರಾಜರು
ತೆರಳಿ ಪೋದರಿಂದು ಪರಮ ಪದವನರಸುತ ಪ ಸಿರಿ ಶೇಷದಾಸಾರ್ಯರು ಅ.ಪ. ಸಿರಿಯುಕ್ತ ರಕಾಕ್ಷಿ ವರುಷ ಭಾದ್ರಪದಸಿತ ವರಪೌರ್ಣಿಮಾ ಸಹಿತವಾದ ಕವಿವಾರದಿ ಸರು ನಿಶಿಯೊಳು ಶತತಾರ ನಕ್ಷತ್ರ ಬರುತಿರೆ ನರಹರಿಯ ಚರಣಕಾಂಬ ಕಡು ತವಕದಿಂದ 1 ತಂದೆ ಮುದ್ದುಮೋಹನ ದಾಸವರ್ಯರಿಂದ ಕುಂದುರಹಿತನಾದ ಪ್ರಾಣನಾಥವಿಠಲ- ನೆಂದು ಅಂಕಿತೋಪದೇಶವನು ಕೈಕೊಂಡು ಬಂಧುರವಾದನೇಕ ಪದಗಳನು ರಚಿಸಿ 2 ದಾಸವೃತ್ತಿಯ ಕಂಡು ದೇಶ ದೇಶವ ಸುತ್ತಿ ಕರವ ನೀಡದೆ ಲೇಸು ಮಾಡುತಲಿ ಸಚ್ಛಿಷ್ಯರಿಗೆ ತತ್ತ್ವೋಪ- ದೇಶವನು ಪರಮ ಸಂತೋಷದಿಂದಗೈದು 3 ಆಶಪಾಶವ ತೊರೆದು ಮೀಸಲು ಮನರಾಗಿ ವಾಸುದೇವನ ನಾಮ ಸೋಸಿನಿಂದ ಭಜಿಸಿ ಸಾಸುವೆಯಷ್ಟಾದರಾಯಾಸವನುಪಡದೆ ಈ ಶರೀರ ವಿಶ್ವೇಶನಾಧೀನವೆಂದು 4 ಅಂಗೋಪಾಂಗವ ಮರೆದು ನಿಸ್ಸಂಗಯುತರಾಗಿ ಕಂಗಳನು ಮುಚ್ಚುತ ಭಂಗವಿಲ್ಲದ ಸುಖವ ಹಿಂಗದೆ ಕೊಡುವಂಥ ಮಂಗಳನ ಶ್ರೀ ರಂಗೇಶವಿಠಲನಂತರಂಗದಿ ನೋಡುತ5
--------------
ರಂಗೇಶವಿಠಲದಾಸರು
ತೆರಳಿದರೋ ತಂದೆ ಮುದ್ದು ಮೋಹನರೂಮರಳಿ ಬಾರವ ಪುರಿ ನರಹರಿ ಪೂರಕೇ ಪ ತರಳತನಾರಭ್ಯ ದ್ವಾದಶ ವತ್ಸರಪರಿಸರಾಗಮ ಪಠಿಸಿ ನಿಪುಣನೆನಿಸೀ |ಇರಲು ಬಂದರು ಮುದ್ದು ಮೋಹನ್ನದಾಸರುಕರಿಗಿರಿ ನರಹರಿ ರಥವ ಉತ್ಸವಕೇ 1 ಕರಿಗಿರಿ ಸನಿಯದ ನರಸಿಪುರದೊಳಿದ್ದವರಸುಬ್ಬರಾಯಾಖ್ಯ ಭರದಿಂದ ಬರುತಾ |ಗುರು ಮುದ್ದು ಮೋಹನರ ಪದಪಾಂಸು ಶಿರದಲ್ಲಿಧರಿಸಿ ಬಿನ್ನವಿಸಿದರುಪದೇಶ ಕೊಂಡಿರೆಂದೂ 2 ಪರಿಕಿಸಲೋಸುಗ ಅರುಣ ಉದಯ ಮುನ್ನಕರಿಗಿರಿ ಪುರಬಿಟ್ಟು ತೆರಳಲು ಅವರೂ |ಭರದಿ ಅಡ್ಡೈಸುತ ಗುರುಪಾದದಲಿ ಬಿದ್ದುವರ ಉಪದೇಶವ ಕೈಗೊಂಡ ಧೀರಾ 3 ಶುಭ ಅಂಕಿತವಾ |ತಂದೆ ಮುದ್ದು ಮೋಹನ್ನ ವಿಠ್ಠಲನೆಂದುಛಂದೋಗಮ್ಯನೆ ದಿವ್ಯ ನಾಮವನಿತ್ತರು 4 ದಾಸ ದೀಕ್ಷೆಯ ಪೊತ್ತು ದಾಸ ಕೂಟವ ನೆರಸಿಶೇಷಗಿರೀಶನೆ ಸರ್ವೇಶನೆನುತಾಎಸೆವ ಅಂಕಿತ ಮಂತ್ರ ಉಪದೇಶಗೈಯ್ಯುತ್ತದಾಸರ ಕ್ಲೇಶವ ಹರಿಸೀದ ಗುರುವೇ 5 ವರಚೈತ್ರ ಪಂಚಮಿ ವರುಷವು ವಿಕ್ರಮಶರಣರ ಪೊರೆಯಲು ಕರಿಗಿರಿಯಲ್ಲೀ |ಗುರು ಮುಖ್ಯ ಪ್ರಾಣ ಪ್ರತೀಕವ ನಿಲಿಸುತಆರು ಮೂರನೆ ದಿನ ಹರಿಯ ಸೇರುವೆ ನೆನುತಾ 6 ನರಲೀಲೆ ಕೊನೆಗೈದು ಪರಮ ಪುರುಷಹರಿಶಿರಿಯರಸಗೆ ಪ್ರೀತೆ ಪಾತ್ರನೆನಿಪಾನೂ |ವರ ಗುರು ಗೋವಿಂದ ವಿಠಲನ ಚರಣವಸ್ಮರಿಸಿ ಹಿಗ್ಗುತ ಪೊರಟ ನೀರಿಕ್ಷಿಸುತಾ7
--------------
ಗುರುಗೋವಿಂದವಿಠಲರು