ಒಟ್ಟು 3955 ಕಡೆಗಳಲ್ಲಿ , 115 ದಾಸರು , 2389 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

(ಜಗನ್ನಾಥದಾಸರು) ಇಂದು ಪ ಕಂಗಳ ಧಣಿ ರಂಗವೊಲಿದ ಮಹಾತ್ಮರ ಅ.ಪ ದ್ವಾಪರದಲ್ಲಿಯ ಶಲ್ಯರು ಇವರಂತೆ ತಪಸಿ ಪ್ರಹ್ಲಾದನ ಅನುಜರು ಇವರಂತೆ ಕಪಟರಹಿತ ಕಲ್ಕೀರ ಭೂಪನ ರೂಪರೇಶೆಯ ನಿರ್ಮಿಸಿ ಮೆರೆದವರ 1 ಎಂಥ ಪುಣ್ಯವಂತರು ನಮ್ಮ ಹಿರಿಯರು ಇಂಥ ಮಹಾತ್ಮರ ಸೇವಿಸಿ ಬದುಕಲು ನಿಂತು ಮನದಿ ಇವರ ನಾಮ ಭ್ರಾಂತಿಯಾಗಲು ಸಂತೋಷದಿ ಶಾಂತ ಹೊಳೆ ಹರಿಸುವರನು 2 ಶಿಷ್ಟ ಸದಾಚಾರ ಸೃಷ್ಟಿಸಿ ಜಗದಲಿ ಶ್ರೇಷ್ಠ ದಾಸರೆಂದು ಖ್ಯಾತರಾಗಿಹರ ಅಷ್ಟಮಾಂಗ ಸಾಷ್ಟಾಂಗದಿ ಎರಗಲು ಸೃಷ್ಟೀಶ ಸಿರಿವತ್ಸಾಂಕಿತನ ತೋರ್ಪರ 3
--------------
ಸಿರಿವತ್ಸಾಂಕಿತರು
(ಧರ್ಮಸ್ಥಳ ಮಂಜುನಾಥನನ್ನು ನೆನೆದು) ಯಾಕೆನ್ನ ಮೇಲೆ ನಿರ್ದಯ ಶ್ರೀಮಂಜುನಾಥ ಲೋಕೇಶ ಮಾಡು ನಿರ್ಭಯ ಪ. ಪಾಕಹಪ್ರಮುಖದಿವೌಕಸಮುನಿಜನಾ- ನೀಕವಂದಿತಪದಕೋಕನದ ಕೋವಿದ ಅ.ಪ. ಪಾಪಾತ್ಮಪಾಪಸಂಭವ ನಾನೆಂಬುವದಕಾ- ಕ್ಷೇಪವೇನಿಲ್ಲೋ ಮಾಧವ ಶ್ರೀಪರಮೇಶ್ವರ ಕೋಪಕಲುಷಹರ ತಾಪತ್ರಯಶಮನಾಪದ್ಭಾಂಧವ ಗೋಪತುರಂಗ ಮಹಾಪುರುಷ ಗಿರೀಶ 1 ಸೋಮಸುರ್ಯಾಗ್ನಿಲೋಚನ ಸದ್ಗುಣಪುಣ್ಯ- ನಾಮ ಪಾಪವಿಮೋಚನ ವ್ಯೋಮಕೇಶಾಚ್ಯುತಪ್ರೇಮ ಮಹಾಮಹಿಮ ಕಾಮಾರಿ ನಿನ್ನ ನಾ ಮರೆಹೊಕ್ಕೆನು ಹೇ ವiಹಾದೇವ ಸೋಮಚೂಡಾಮಣಿ 2 ಧರ್ಮಮಾರ್ಗನಿಯಾಮಕ ಸತ್ಯಾತ್ಮ ಪರ- ಬ್ರಹ್ಮ ಸುಜ್ಞಾನದಾಯಕ ನಿತ್ಯ ಸತ್ಕರ್ಮಪ್ರೇರಕ ಗಜ- ಚರ್ಮಾಂಬರಧರ ದುರ್ಮತಿಪ್ರಹರ ಭರ್ಮಗರ್ಭಜ ಭವಾರ್ಣವತಾರಕ 3 ಕಪ್ಪ ಕಾಣಿಕೆಗಳನು ತರಿಸುವರ- ಣ್ಣಪ್ಪದೈವವೆ ದೂತನು ತಪ್ಪದೆ ಚಂದಯ ಹೆಗ್ಗಡೆಯರ ಮನದೊ ಳಿಪ್ಪ ದಧಿಮಥನ ತುಪ್ಪದಂತೆಸೆವ ಕರ್ಪೂರಗೌರ ಸರ್ಪವಿಭೂಷಣ 4 ಪೊಡವಿಗಧಿಕವಾಗಿಹ ಕುಡುಮಪುರ- ಕ್ಕೊಡೆಯ ಭಕ್ತಭಯಾಪಹ ಕಡಲಶಯನ ಲಕ್ಷ್ಮೀನಾರಾಯಣಗತಿ- ಬಿಡೆಯದವನು ನಿನ್ನಡಿಗೆರಗುವೆ ವರ ಮೃಡಶಂಕರ ಕೊಡು ಕೊಡು ಮನದಷ್ಟವ 5
--------------
ತುಪಾಕಿ ವೆಂಕಟರಮಣಾಚಾರ್ಯ
(ಬಾಗಿಲು ತಡೆ) ಸಾರಸ ನಿಲಯೆ ಸಾಗರ ತನಯೆ ಸಾರೆ ಬಂದೆನು ಈಗ ಬೇಗ ಸಾರಿ ಬಾಗಿಲ ತೆಗೆ ಬೇಗ ಪ. ಸಾರು ಸಾರೆಲೊ ಸಾರಿಕೂಗುವನಾರೊ ಸಾರು ಬಾಗಿಲ ತೆಗೆ ನಾನು ಅ.ಪ. ಏಕಿಂತು ಕೋಪವೆ ಕೋಕಿಲಾರವೆ ನೀಂ ಕಟಾಕ್ಷಿಸು ಎನ್ನ ಮುನ ಸಾಕುಮಾಡುವುದಿದೆನ್ನ 1 ಸಾಕು ಸಾಕಿಂತು ಏಕೆ ಕೂಗುತಿರ್ಪೆ ಕಾಕು ನುಡಿಗಳುಸಲ್ಲ 2 ಪುಂಡರ ತಡೆವುದ ಕಂಡುಂಟು ಜಗದೊಳು ಗಂಡನ ತಡೆವರೆ ಭಾಮೆ ರಾಮೆ ಕಂಡವರೇನೆಂಬರೆ ಭಾಮೆ 3 ಗಂಡನಾರಿಗೆ ಹೆಂಡತಿಯಾರಿಗೆ ಪುಂಡಾಟವಾಡದೆ ಪೋಗು ಸಾಗು ಭಂಡನಾಗಿರ್ಪೆ ಪೋಗು 4 ವಲ್ಲಭೆ ನಿನ್ನೆದೆ ಕಲ್ಲಾಗಿರುವುದೆ ಬಲ್ಲವಳೆಂಬುವುದೆಲ್ಲೆ 5 ಬಲ್ಲೆ ಬಲ್ಲೆನೀ ಚಲ್ಲಾಟಗಳ ಸೊಲ್ಲಿಸದಾರನ್ನು 6 ದಶರಥರಾಮನೆ ಸೀತೆ ಖ್ಯಾತೆ ಪುಸಿಯಲ್ಲವೆಲೆ ಭೀತೆ 7 ನಿಶಿಚರರಿಲ್ಲಿಹರೇನೈ ಜ್ಞಾನಿ ವಿಷಮವರ್ತನವೇನೈ 8 ಅಂಗನೆ ನಿನ್ನ ಮೋಹನಾಂಗನಾದ ಶ್ರೀ ರಂಗ ನಾನೆಲೆ ಚಪ ಲಾಕ್ಷಿ ಲಕ್ಷ್ಮಿ | ಭಂಗಿಸಬೇಡೆನ್ನ ಲಕ್ಷ್ಮಿ 9 ತುಂಗ ವಿಕ್ರಮ ರಘು ರಾಮ ಶ್ಯಾಮ ರಂಗ ಕಾರುಣ್ಯಧಾಮ 10 ಪರಿ ಪೇಳುತೆ ಕೈಪಿಡಿದಳು ತ ನ್ನೋಪನ ವಂದಿಸಿ ರಾಣಿ ರಮಣಿ ಕೋಪರಹಿತೆ ಸುವಾಣಿ 11 ಭೂಪಶೇಷಾದ್ರೀಶನು ಕಾಂತೆಯ ಕೈಪಿಡಿದನು ನಲವೇರೆ ಅರರೆ ತಾಪಸನುತ ನಲವೇರೆ 12
--------------
ನಂಜನಗೂಡು ತಿರುಮಲಾಂಬಾ
(ಭಗವದ್ಭಕ್ತ ಸಂಮೋಹ ಪ್ರಾರ್ಥನೆ) ಗಜಮುಖನ ಪ್ರಪಿತಾಮಹನಹಿಮನ ಗಜೆಯರಸನ ಪಿತನ ಪೆತ್ತನ ಸಾರಥಿ ಪಾದ ಪಂಕಜವ ಭಜಿಸಿ ಭಾರತಿವರನ ನಮಿಸುವೆ ಅಜಭವಾದಿ ಗುರೂತ್ತಮರ ನಿಜ ವೃಜಿನಪಂಕ ನಿವೃತ್ತಿಗೊಳಿಸುವದೆಂದು ವಂದಿಸುವೆ 1 ಅವ್ಯವಹಿತಾಸದೃಶ ಭಕ್ತಿಯ ಸವ್ಯಸಾಚಿ ಸಹಾಯ ಸಲಿಸಾ ದಿವ್ಯ ಪದವಿಯ ಪಡೆವೆನೆಂದುಗತವ್ಯಳೀಕದಲಿ ಕಾವ್ಯ ವ್ಯಾಕರಣಗಳಿಂದ ವಹಿಸಿದ ಸೇವ್ಯ ಗುರು ಲಾ- ತವ್ಯ ಮುನಿವರರಂಘ್ರಿಕಮಲವ ನುತಿಸಿ ನಮಿಸುವೆನು 2 ಪುಂಡರೀಕ ದಲಾಯತಾಕ್ಷನೆ ಹಿಂಡು ದೈವದ ಗಂಡನೆಂದತಿ ಚಂಡ ಮೈಗಳ ಖಂಡಿಸಿದ ಯತಿಮಂಡಲೇಶ್ವರನ ಪಾಂಡ್ಯದೇಶದೊಳವತರಿಸಿದಾ ಖಂಡಲಾತ್ಮನ ನಮಿಪೆ ಮಮ ಹೃ- ನ್ಮಂಡಲದಿ ಪಾಲಿಸು ಸುಧಾರಸವುಂಡು ನಲಿವಂತೆ 3 ಮೋದತೀರ್ಥ ಮಹಾಬ್ಧಿಯನು ಕಡೆ- ದಾದಿಯಲಿ ನ್ಯಾಯಾಮೃತವ ತೆಗೆ- ದಾದರದಿ ಸಜ್ಜನರಿಗುಣಿಸಿದ ಗಾಢಮತಿಯುತನ ಮಾಧವನ ಗುಣತರ್ಕ ತಾಂಡವ ವೋದಿಸುತ ಚಂದ್ರಿಕೆಯ ತೋರಿದ ಬೋಧಕರ ಪ್ರಲ್ಹಾದಮುನಿ ಕರುಣದಲಿ ಸಲಹೆನ್ನ 4 ಮಂಗಳಾಂಬುತರಂಗ ತುಂಗಾ ಸಂಗಿ ಮಂತ್ರಾಲಯದಿ ನಿಂದು ಕು ರಂಗ ವೈರಿಯ ಪೂರ್ವ ಕರುಣಾಲಿಂಗನೋತ್ಸುಕನ ಪಂಗು ಬಧಿರಾದ್ಯಂಗ ಹೀನರ ಪಾಂಗ ನೋಟದಿ ಪಾಲಿಸುವ ಯತಿ ಪುಂಗವಾರ್ಜಿತ ರಾಘವೇಂದ್ರರ ನಮಿಪೆನನವರತ 5 ಜೋಲಿಸುವ ಕಂಠದಲಿ ತುಳಸೀ ಮಾಲೆಯನು ಕರಯುಗದಿ ವೀಣಾ ತಾಳಗಳ ಬಾರಿಸುತ ಸರ್ವತ್ರದಲಿ ಸಂಚರಿಸಿ ಶ್ರೀಲಲಾಮನ ಲೀಲೆಗಳಿಗನು- ಕೂಲರಾದ ಸುರರ್ಷಿ ನಾರದ ರಾಲಯಸಿ ತಪ್ಪುಗಳ ತಿದ್ದುವುದೆಂದು ನಮಿಸುವೆನು 6 ಸತ್ಯಭಾಮಾಕಾಂತನಿದಿರಲಿ ನಿತ್ಯ ನಡೆಸುವನೆಂಬ ಸೇವೆಗೆ ಒತ್ತಿಬಹ ವಿಘ್ನಗಳ ದೂರದಿ ಕಿತ್ತು ಬಿಸುಟುವರ ಹತ್ತು ದೆಶೆಯಲಿ ನಿಂತು ರಕ್ಷಿಪ ಕೃತ್ತಿವಾಸ ಸುರೇಶಮುಖ ದೇ- ವೋತ್ತುಮರ ನಾ ನಮಿಪೆ ತತ್ವದ ಭೃತ್ಯನಹುದೆಂದು 7 ಪಾವಮಾನ ಮತೀಯ ವೈಷ್ಣವ- ರಾವಳಿಗೆ ಶರಣೆಂಬೆ ನಿಮ್ಮ ಕೃ- ಪಾವಲಂಬನವಿತ್ತು ಕರುಣವ ಶುದ್ಧಿಕರಿಸುತಲಿ ದೇವ ದೇವವರೇಣ್ಯ ಭಕ್ತರ ಕಾವ ಶೇಷಗಿರೀಂದ್ರನಾಥನ ಸೇವಿಸುವ ಸುಖವಿತ್ತು ಸುಲಭದಿ ಸಲುಹಬೇಕೆಂದು 8
--------------
ತುಪಾಕಿ ವೆಂಕಟರಮಣಾಚಾರ್ಯ
(ಭೀಮಸೇನ ಪ್ರಾರ್ಥನೆ) ಭೀಮಸೇನ ಸಕಲಸತ್ವಧಾಮ ರಕ್ಷಿಸೆನ್ನ ಬೇಗ ಸಾಮಗಾನ ಲೋಲ ಕೃಷ್ಣ ಪ್ರೇಮರಸಕೆ ಪಾತ್ರನಾದ ಪ. ಮಂಗಲಾಚರಿತ್ರ ನಿನ್ನ ಅಂಗಸಂಗದಿಂದ ಬಹು ತುಂಗ ಗಿರಿಯು ಒಡೆದು ಶತಶೃಂಗವೆನಿಸಿತು ಅಂಗುಲಿ ಪ್ರಹಾರದಿಂದ ಶಿಂಗತತಿಗಳನ್ನು ಬಹಳ ಭಂಗಬಡಿಸಿ ಬಾಲಲೀಲ ರಂಗದಲ್ಲಿ ಬಲುಹ ತೋರ್ಪ 1 ಹಸಿದ ವೇಳೆಯಲ್ಲಿ ಮೆದ್ದ ವಿಷದ ಭಕ್ಷ್ಯ ಜೀರ್ಣಗೊಳಿಸಿ ಉಶನ ಮಂತ್ರದಿಂದ ಹಲ್ಲ ಮಸೆಯುತಾ ಬಂದ ಅಸುರ ವೇಶದಷ್ಟಾಕ್ಷಿಗಳ ಮಶಕದಂತೆ ಬಡಿದು ಕೆಡಹಿ ಕುಶಲದಿಂದ ನಿದ್ರೆಗೈದ ಅಸಮಶಕ್ತಿ ಪೂರ್ಣಮೂರ್ತಿ 2 ನಗಗಳ ಮೇಲೇರುತ್ತ ಹಣ್ಣುಗಳನೊಂದೊಂದಾಗಿ ಕರದಿ ತೆಗೆದು ತಿಂಬ ಕೌರವರನು ನಗುತ ನೋಡುತಾ ನೆಗೆದು ಬೀಳ್ವ ತೆರದಿ ತರುಮೂಲಗಳಾ ತುಳಿದು ಕೆಡಹಿ ದೇವಾ- ಕೊಂಡ 3 ಗೂಗೆಯಂತೆ ನಿನ್ನ ಬಳಿಗೆ ಸಾಗಿ ಬಂದು ಶಕುನಿಮುಖರು ಯೋಗನಿದ್ರೆ ತಿಳಿಯದೆ ಚೆನ್ನಾಗಿ ಬಂಧಿಸಿ ಭಾಗೀರಥಿಯ ಜಲದಿ ದೂಡೆ ವೇಗದಿ ಪಾತಾಳವೈದಿ ನಾಗಕನ್ಯೆರಿತ್ತ ರಸವ ಬೇಗ ಸವಿದು ತಿರುಗಿ ಬಂದ 4 ದುರುಳರಿಂದ ರಚಿತವಾದ ಅರಗಿನ ಮನೆಗೆ ಹೋಗಿ ಕಾಲ ನಿರುತಕಿನಿಸಿಲಿ ಇರುಳಿನಲ್ಲಿ ತಾನೆ ಅಗ್ನಿ ಇರಿಸಿ ಬೇಗಲೆದ್ದು ಸಹೋ ದರರನೆತ್ತಿ ಬಹು ಯೋಜನಕೆ ಸರಿದು ಪೋದ ಶಕ್ತರರಸ 5 ಡೊಂಬಿಮಾಳ್ಪನೆಂದು ಬಹಳ ಡಂಬರದಿಂದಿದಿರಾ ಹಿ- ಕದಂಬ ವೈರಿಯ ಅಂಬರದೊಳಗೈದಿ ವಜ್ರಕಂಬದಂತೆ ಹೊಳವ ಬಹು ಸ್ತಂಭದಿಂದ ಕೆಡಹುತ ಹೈಡಿಂಬನೆಂಬ ಮಗುವ ಪಡೆದ 6 ನಗರ ದೊಳ್ವೈದಿಕರಂತೆ ವಾಸವಾಗಿ ಪೋಕ ಬಕನ ಬಾಧೆಯಿಂದ ಶೋಕಗೊಳುವರ ಸಾಕುವೆನೆಂದೆದ್ದು ನಾನಾ ಶಾಖ ಭಕ್ಷಾನ್ನಗಳ ತಾನೆ ಸ್ವೀಕರಗೊಂಡಸುರನನ್ನು ಸೋಕಿ ಸೀಳಿ ಬಿಸುಟ ದೊರೆಯೆ 7 ವಿಪ್ರ ವೇಷದಿಂದ ದ್ರುಪದಸುತೆಯನೊಲಿಸಿ ಕೃದ್ಧ ನೃಪರ ಗೆದ್ದು ರುಕ್ಮಿಣೀಶ ಕೃಪೆಯಾ ಬಲಕೊಂಡು ಅಪರಿಗಣ್ಯ ಪೌರುಷಕಿಂನುಪಮೆಯಿಲ್ಲವೆಂದು ಸರ್ವ ಖಪತಿವರರು ಪೊಗಳುತಿರಲು ತ್ರಿಪುರವೈರಿಯಂತೆ ಮೆರೆದ 8 ಅಂಧ ನೃಪನ ಮಾತ ಕೇಳಿ ಇಂದ್ರಪ್ರಸ್ಥ ಪುರಕೆ ರಾಜ ನೆಂದು ನಿಂದು ಮಗಧಾದಿಗಳ ನೊಂದೆ ನಿಮಿಷದಿ ಕೊಂದು ರಾಜಸೂಯಮೇಧದಿಂದ ಸಕಲಯಜ್ಞೇಶಗೋ- ಕೊಂಡ 9 ದ್ಯೂತ ನೆವದಿ ಸಕಲ ರಾಜ್ಯ ಸೋತು ವನಕೆ ಪೋಗಿ ಲಕ್ಷ್ಮೀ- ನಾಥ ಕರುಣ ಬಲದಿಂದ ಸುರವ್ರಾತವಡಗಿಸಿ ಭೂತನಾಥನೋರದಿ ಬಹಳ ಖ್ಯಾತ ಕೀಚಕಾದಿಗಳನು ಘಾತಿಸಿ ಗಂಧರ್ವನೆಂದಜ್ಞಾತವಾಸ ಕಳದ ಧೀರ 10 ದುರುಳ ಕೌರವರನು ಗದೆಯ ತಿರುಹಿ ಕೆಡಹಿ ಧರಣಿಭರವ ಸುರಪಸೂನು ಸಹಿತಲ್ಲಿಳುಹಿ ಪರಮ ಹರುಷದಿ ಹರಿಯ ನೇಮದಿಂದ ನಾಗಪುರವನಾಳಿ ವಿಷ್ಣುಭಕ್ತಿ ಸುಜನ ತತಿಯ ಪೊರೆದು ಪದ್ಮಜಾತನಾಹ11 ದುಷ್ಟವೈರಿ ಜನರ ಗೆದ್ದು ಅಷ್ಟ ಭಾಗ್ಯ ಸಹಿತ ದೇಹ ಪುಷ್ಟಿ ಜ್ಞಾನ ದೃಷ್ಟಿಗಳನು ಕೊಟ್ಟು ಕರುಣಿಪಾ ಸೃಷ್ಟಿಗೊಡೆಯ ಸರ್ಪರಾಜ ಬೆಟ್ಟದಲ್ಲಿ ನಿಂದು ಭಕ್ತ- ಭೀಷ್ಟವರದನೊಲಿಪ ತೆರದಿ ಸುಷ್ಠುಪ್ರೇಮವಿಟ್ಟು ಕಾಯೊ 12
--------------
ತುಪಾಕಿ ವೆಂಕಟರಮಣಾಚಾರ್ಯ
(ಮಂಗಳೂರಿನ ಪ್ರಾಣದೇವರನ್ನು ನೆನೆದು) ಪಾಲಿಸೆನ್ನ ಪಾವಮಾನಿ ಪಾವನಾತ್ಮ ಸುಜ್ಞಾನಿ ಪ. ಮೂರ್ಲೋಕದ ಸಚರಾಚರಜಾಲದಂತರಂಗ ಕರುಣಿ ಅ.ಪ. ಮೂರವತಾರವ ಗೈದು ಮುರಾರಿಯ ಪೂಜಿಸಿದೆ ಪಾರಮೇಷ್ಠಿಪದ ಪೊಂದಿದೆ ಭಾರತಿಮನೋಹರ 1 ಪಾರಗಾಣರು ನಿನ್ನ ಮಹಿಮೆ ಫಾಲನಯನಾದಿಗಳು ಕ್ರೂರಕರ್ಮಿಗಳೇನರಿವರು ಶ್ರೀರಾಮಶರಣ್ಯ 2 ಅರಿವರ್ಗಗಳತಿಕ್ರಮವ ಧಿಕ್ಕರಿಸೈ ಸುಜ್ಞಾನವಿತ್ತು 3 ಸರ್ವಾಪರಾಧಗಳನು ಸಾಧುವರದ ಕ್ಷಮಿಸು ಗರ್ವಹಂಕಾರವೀಯದೆ ಗಜವರದನ ಭಕ್ತಿಯಿತ್ತು 4 ಕರಣೀಕಾಗ್ರಣಿ ಮಂಗಲಪುರವರ ಪ್ರಾಣೇಶ ವರ ಲಕ್ಷ್ಮೀನಾರಾಯಣ ಶರಣಾಗತರೀಶ 5
--------------
ತುಪಾಕಿ ವೆಂಕಟರಮಣಾಚಾರ್ಯ
(ಮಂಗಳೂರಿನ ಶ್ರೀ ವೆಂಕಟರಮಣ ದೇವರನ್ನು ನೆನೆದು) ವೈರಿ ವಿದಾರಣ ವೀರ ವೆಂಕಟಪತಿಯಾ ಪ. ಸುಜನಾರ್ತಿ ವಾರಣಾ ಮೃತ್ಯಬ್ಧಿತಾರಣ ಧೀರತನದಿ ಕಠಾರಿ ನಡುವಿಗೆ ಸೇರಿ ದಟ್ಟಿಯನುಟ್ಟು ಕೊಂಕಣ ಸ್ವಾರಿ ಬರುವನ 1 ಪಿಡಿವುತ್ತ ನಡುನಡು- ಮತ್ತಲ್ಲಿ ಮೆರೆವಾ ಸಿರಿನಲ್ಲ ದಾಸರ ಮಸ್ತಕದಿ ಕರ ಪಲ್ಲವವನಿರಿಸೆಲ್ಲರನು ತಡವಿಲ್ಲದಲೆ ಸುಖದಲ್ಲಿ ಸಲಹುವÀ 2 ಮಂಗಳಾಭಿದ ಪಟ್ಟಣಾಧೀಶಾ ಪದ್ಮಾ ಪುರುಷಾ ಶ್ರೀ ವೆಂಕಟೇಶಾ ತುಂಗವಿಧಿ ಮಾಲಿಕಾಭೂಷಾ ಅತಸೀ ಭಾಸಾ ಸ್ಮಿತಪೂರ್ಣಭಾಷಾ ಇಂಗಿತಗಳರಿತೀವ ಸೌಖ್ಯ ತರಂಗಗಳ ಸುರ ಸಾರ್ವಭೌಮ ಕು- ರಂಗ ನಯನಾಲಿಂಗಿತಾಂಗ ಮತಂಗಜಾವರಮೋಹಿರೂಪನ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಶೇಷದೇವರ ಪ್ರಾರ್ಥನೆ) ಸುಕೃತ ಭಾಗ್ಯವಂತನೋ ಗುರುಶೇಷ ಯಂತು ಬಣ್ಣಿಸುವುದಿನ್ನು ಮಾಂತರಂಗದಿ ಪ್ರೇಮ ಪಾತ್ರನಾಗಿರುವದೀ ಪ. ಶ್ರೀನಿವಾಸಗೆ ಮೂರು ಸ್ಥಾನದಿ ಸರಿಯಾಗಿ ತಾನೆ ಶಯನ ಪೀಠ ಛತ್ರನಾಗಿ ಜ್ಞಾನಾನಂದನ ಪರಮಾನುರಾಗದಿ ನೋಡಿ ಮಾನವ ಪಡೆದು 1 ರಾಮರೂಪದಿ ನಿಂದ ಸ್ವಾಮಿಗೆ ನಿರವಧಿ ಪ್ರೇಮದನುಜನಾಗಿ ಪರಿಚಿರಿಸಿ ಸೋಮವಂಶದಿ ಬಲರಾಮನೆನಿಸಿ ಸತ್ಯ- ಭಾಮಾವರನ ಜೇಷ್ಠ ನಾಮವ ಪಡೆದು 2 ಹಲವು ವಿಧದ ಪುಣ್ಯ ಫಲವ ನೀಡಲು ಲಕ್ಷ್ಮಿ ಲಲನೆ ಪದ್ಮಜೆಯರ ಬಲಗೊಳ್ಳುತಾ ಕಲಿಯುಗದಲಿ ಬಂದು ನೆಲೆಯಗೊಳ್ಳಲು ಶೇಷಾ- ಚಲನೆಂದು ಹರಿಗೆ ನಿಶ್ಚಲವಾದ ನಿಲಯಾಗಿ 3
--------------
ತುಪಾಕಿ ವೆಂಕಟರಮಣಾಚಾರ್ಯ
(ಶ್ರೀ ವಾದಿರಾಜರ ಪ್ರಾರ್ಥನೆ) ಭಾವಿಭಾರತಿವರನೆ ದಾಸನ ಬೇಗ ಕಾವ ಕಲುಷಹರನೆ ದೇವ ಋಜು ಗಣನಾಥನೀಪರಿ ಸಾವಕಾಶಕೆ ಸಮಯವಲ್ಲಿದು ಪ. ಅರಿಷಡ್ವರ್ಗದಿ ಸಿಲುಕಿ ಕ್ಷಣಕ್ಷಣ ಕರಗಿ ಕುಂದುತ ಬಂದೆನು ನಾನಾ ಪರಿಯ ಕ್ಲೇಶದಿ ನೊಂದೆನು ಮುಂದೇನು ದುರಿತಾರಾಶಿಗಳನ್ನು ಬೇಗದಿ ತರಿದು ಸಜ್ಜನಗುಣವ ಸುಲಭದಿ ಪೊರೆದನೆಂಬೈತಿಹ್ಯ ವಚನದಿ ಭರವಸದಿ ನಂಬಿರುವೆ ನಿನ್ನನು 1 ತುರಗ ವದನ ದೇವನ ವಲಿಸಿ ದೇವ ನರವರ ಸಂಘವನು ಕರದು ತಂಪೇರಿಸಿ ಸರಿಯೆನಿಸಿದನೆ ಹರಿಯೆ ತಾನೆಂದೊದರಿಕೊಂಡಿಹ ನರಕಭಾಜಿಗಳಾದ ಮೈಗಳ- ನರಿದು ವಾದದಿ ಮುರಿದು ಹಲ್ಲನು ಸಿರಿವರನ ಸತ್ಕರಿಸಿ ಪೂಜಿಪ2 ವನಜಾಕ್ಷ ರಾಮಭಕ್ತನಾಗಿಹ ವಿಭೀಷಣಗೆ ಮಾರುತಿಯಿಂದುತ್ತ- ಮುಂದಿನ ಫಲ ನೀಡೆಂದು ಮಣಿದು ಬೇಡುವೆ ನಿನ್ನ ಪದಯುಗ ವನರುಹಗಳನುವಶ್ಯದಾಯಕ ನಿತ್ಯ ಕರುಣಿಸು 3
--------------
ತುಪಾಕಿ ವೆಂಕಟರಮಣಾಚಾರ್ಯ
(ಶ್ರೀ ವಾದಿರಾಜರು) ದಿಟ್ಟದಿ ನಿನ್ನಯ ಪದಪದ್ಮವನ್ನು ಮನಮುಟ್ಟಿ ಭಜಿಸುವೆ ಕೃಷ್ಣರಾಯ ಪ ಸೃಷ್ಟಿ ನಿನ್ನಂಥ ಇಷ್ಟ ಪುಷ್ಟನ ಕಾಣೆ ಶ್ರೀ ಕೃಷ್ಣರಾಯ ಅ.ಪ ಇಷ್ಟನು ದುಷ್ಟ ಪಾಪಿಷ್ಠನಾಗುವುದುಚಿತವೇ ಕೃಷ್ಣರಾಯಾ ನಿನ್ನ ದೃಷ್ಟೀಲಿ ನೋಡೆನ್ನ ಶ್ರೇಷ್ಠ ಶ್ರೀಷ್ಮಿಪನಿಷ್ಟ ಕೃಷ್ಣರಾಯಾ 1 ಪಾಲನ ಪಾಲಿಪನನಿಲ್ಲಿಸಿದೇ ಕೃಷ್ಣರಾಯಾ 2 ಗರಳ ಸೇವಿಸಲು ಕಂಡುತ್ಯಜಿಸಿದೆ ಕೃಷ್ಣರಾಯಾತರಳೆಗೆ ನೀ ನಿನ್ನ ಸುಧಿಮಳೆಗರೆಯುತ ಅರಳಿಸೊ ಕೃಷ್ಣರಾಯಾ3 ವಡವುಟ್ಟಿದವರಂತೆ ದುಷ್ಟ ಪಾಪಿಷ್ಟ ಬೆನ್ನಟ್ಟುವನೋ ಕೃಷ್ಣರಾಯಾಗುಟ್ಟದಿ ನಿನ್ನಯ ದೃಷ್ಟಿಲಿ ನೋಡಿ ಆ ದುಷ್ಟನ ಸುಟ್ಟು ಹಾಕೊ ಕೃಷ್ಣರಾಯಾ4 ಮಧ್ಯಾನ್ಹ ಸಮಯದಿ ಮಧ್ವದಾಸನ ಭೂಷಿಪ ಶೇಷನ ವೈರಿಯ ಕೃಷ್ಣರಾಯಾದಾನವ ಗೈದು ದೂತಿಯ ಕರದಿಂದ ದೋಷಿಯೆಂದೆನಿಸಾದೆಸಲಹಿದೊ ಕೃಷ್ಣರಾಯಾ 5 ಅರಿಯದೆ ಪೋಗಿ ನಾಥಾ ತ್ರಿನಾಮನ ಕೂಡ ಭುಂಜಿಸಿದೆ ಕೃಷ್ಣರಾಯಾಅರಿಯು ನೀನಲ್ಲದೆ ಅನ್ಯರ ನಾಕಾಣೆ ಮೈಗಣ್ಣ ಕೃಷ್ಣರಾಯಾ 6 ಎನ್ನ ತನುಮನ ಧನಧಾನ್ಯ ಮನೆಯ ಮಕ್ಕಳೆಲ್ಲಾ ನಿನ್ನ ಚರಣಾಲಯವೋ ಕೃಷ್ಣರಾಯಾನಿನ್ನ ಗುಣಗಣಗಳೆಲ್ಲಾ ಅಗಣಿತವೋ ಅನ್ನಪೂರ್ಣೆಗೆಕೃಷ್ಣರಾಯಾ7 ಆದಿ ಅನಾದಿ ಅನೇಕನಾದಿ ಜನುಮದಿ ಎನ್ನಲ್ಲಿದ್ಯೋ ಕೃಷ್ಣರಾಯಾ ದೇವ ದೇವೇಶ ನೀನೆಂದು ದಯದಿಂದ ತೋರೋಕೃಷ್ಣರಾಯಾ 8 ಚರಣದ ಚರ್ಮಲ ಚಂದಸುವಸನ ತೋದ್ರ್ಯೋ ಕೃಷ್ಣರಾಯಾ ಆಲಸ್ಯ ಮಾಡುತ ತಾಳದೆ ನಿನ್ನ ಬಲಿನ ತೋದ್ರ್ಯೋಕೃಷ್ಣರಾಯಾ 9 ನಾರಂಗಿ ಫಲವನ್ನು ತಿಂದು ನೀ ನವರಸ ಭರಿತದಿ ನಿಂತ್ಯೋ ಕೃಷ್ಣರಾಯಾ ನಾರಿಯ ಮನವ ನೀನರಿತು ನಿನ್ನ ಮನವನಿತ್ತೆ ಕೃಷ್ಣರಾಯಾ 10 ಮೂರಾರು ಎರಡೊಂದು ನಿಂದಿಪ ಮತವನ್ನು ಛಂದದಿಖಂಡಿಸಿದೊ ಕೃಷ್ಣರಾಯಾಗಂಗಾದಿ ಕ್ಷೇತ್ರವು ಹಾಗದೇ ಚರಿಸಿ ತುಂಗದಿ ಬಂದು ಮೈಗಂಧ ತೋದ್ರ್ಯೋ ಕೃಷ್ಣರಾಯಾ 11 ಅಂಗದಿದ್ದುಕೊಂಡು ಪಂಚಭೇದವ ನರುಹಿದೆ ಕೃಷ್ಣರಾಯಾ ತಾರತಮ್ಯವನಿತ್ತು ನಿರುತದಿ ಸ್ಮರಿಸೆಂದು ತರುಳರಿಗುಪದೇಶಿಸಿದೆ ಕೃಷ್ಣರಾಯಾ 12 ಅರ್ಥಿಯಿಂದಲಿ ವೇದ ವೇದ್ಯತೀರ್ಥರ ಪ್ರಬಂಧ ತೀರ್ಥವ ತೋರಿ ನೀ ಕೃತಾರ್ಥನ ಮಾಡಿದೋ ಕೃಷ್ಣರಾಯಾಸತಿಸುತ ಜನನಿ ವಡಗೂಡಿ ವಿರೋಧಿಸೆ ಶಾಪವನಿತ್ತೆಕೃಷ್ಣರಾಯಾ 13 ಸತಿಜಾರನರಿತು ಮನದಲ್ಲಿ ಯೋಚಿಸಿ ಚೋರನಂದದಿ ಜರಿದು ಚರಿಸಿದಿ ಕೃಷ್ಣರಾಯಾಚರಿಸುತ ಧರೆಯೊಳು ಚೋರ ಜಾರನ ಪೊರೆದೆ ಕೃಷ್ಣರಾಯಾ14 ಅಂಗದಿ ಅಂಗಿತೊಟ್ಟು ಭಂಗವಿಲ್ಲದೆ ಕೂಡಲಗಿರಿಯಲಿ ಭುಂಜಿಸಿದೆ ಕೃಷ್ಣರಾಯಾತೀರ್ಥಗಿಂಡಿಯ ಮುಟ್ಟೆಂದು ಅಂಧಕರಾಯನು ಪೇಳಲು ಮುಟ್ಟಲಂಜದೆ ಗಾಡಿ ಧರಿಸಿದೆ ಕೃಷ್ಣರಾಯಾ 15 ತಂಡುಲವಿಲ್ಲದೆ ಪವಾಡತನದಿ ಕೂತುದ್ದಂಡ ಭೀಮನ ಸ್ಮರಿಸಿದೊ ಕೃಷ್ಣರಾಯಾ ತೊಂಡನ ಸತಿಯ ಕೈಗೊಂಡು ಪುಂಡ ಕಂಸಾರಿಯ ಸ್ಮರಿಸಿದೊ ಕೃಷ್ಣರಾಯಾ16 ಸ್ವಾದಿ ಕ್ಷೇತ್ರದಿ ಪೋಗಿ ಛತ್ರದಿ ಅರ್ಚಿಸಿಕೊಂಡ್ಯೋ ಕೃಷ್ಣರಾಯಾ ಮನವನ ಚರಿಸುತ ತಪವನೆಗೈಯುತ ಕಪಿಯನ್ನೇ ಪುಡುಕಿದ್ಯೊ ಕೃಷ್ಣರಾಯಾ 17 ಚಿಕ್ಕ ಬದಿರಲಿ ಪೋಗಿ ಬಲು ಅಕ್ಕರದಿ ನಿನ್ನ ಪಡೆದನ ಕಪ್ಪುಗೊರಳನ ರೂಪದಿ ಕಂಡ್ಯೋ ಕೃಷ್ಣರಾಯಾ ಸ್ವಪ್ನದಿ ಸರ್ವರ ಕಾಣುತ ಸ್ವಪದವಿಯನೇರಿದ್ಯೋಕೃಷ್ಣರಾಯಾ 18 ತಾಮಸ ಜೀವನು ಜವನಂತೆ ಜೂಜಿಸೆ ಜೀವನವರಿಸಿದ್ಯೋ ಕೃಷ್ಣರಾಯಾಲೇಖವು ಬರೆಯಲು ಲೋಕಾವಧರಿಸಿದ ವಾರುಣೀಶನಂತೆ ಪೌರುಷ ತೋರಿ ಫಣಿರೋಗ ನಿತ್ಯೋ ಕೃಷ್ಣರಾಯಾ 19 ಎನ್ನ ಜನ್ಮವಾದ ದಿನದಲ್ಲಿ ಜೀವೇಶರಾಯನ ಪೂಜಿಸಿದ್ಯೋ ಕೃಷ್ಣರಾಯಾಪೂಜಾದಿ ಪೂಜಿಸಿ ಪೂರ್ಣ ಆಯುವಿತ್ತು ಜೀವನುದ್ಧರಿಸಿ ಜೋಕೆಯೋ ಕೃಷ್ಣರಾಯಾ 20 ಅಕ್ಕನ ಕೈಯಲ್ಲಿ ದಿಕ್ಕಿಲ್ಲದವರಂತೆ ಸಿಕ್ಕು ಸುಖಬಟ್ಯೋ ಕೃಷ್ಣರಾಯಾ ದಿಟ್ಟದಿ ನಿನ್ನಯ ಗುಟ್ಟು ತಿಳಿಸಿ ಬೆಟ್ಟದೊಡೆಯ ತಂದೆವರದಗೋಪಾಲವಿಠಲನಪದಪದ್ಮಗಳನ್ನೆ ಮುಟ್ಟಿ ಭಜಿಸುವಂತೆ ದಿಟ್ಟನ ಮಾಡುಶ್ರೀ ಗುರು ಕೃಷ್ಣರಾಯಾ 21
--------------
ತಂದೆವರದಗೋಪಾಲವಿಠಲರು
(ಸರಸ್ವತಿ) ಸುಂದರೆ ಸುಗುಣಮಂದಿರೆ ನಿನ್ನ ಚರಣ ಚಂದಿರೆ ನಂಬಿದ ಶರಣಗಮನ ಸಿಂಧುರೆ ಅರವಿಂದನಯನ ಗಂಭೀರೆಅದ್ಭುತ ಮಹಿಮ ಶಂಕರೆ ಸುರಸೋಮ ಸಂತವಹರೆ ಪಂಕಜಪಾಣಿಧಾರೆ ಜಪಮಣಿ ಪುಸ್ತಕವಿರೆ ವೀಣಾಯುತ ಸಾರೆ ಸಾರುತ ವದನದಿ ಬಾರೆ ಬಂದು ಕರುಣಾವ ಬೀರೆ ಬೀರುತ ಮೊಗ ತೋರೆತೋರುತ ತಂದೆವರದಗೋಪಾಲವಿಠಲನಯನಿಸೆರೆಂತರೆ 1 ಸದನ ಸರಳೆ ನಿನ್ನ ಕಾಣುವ ಶರಣಳೆ ಯಂದ್ಯನಿಸು ಮನಬಾಗಿ ಬೇಡುವೆ ಸಾಧನವಾಗುವಂತೆ ವೈರಿಗಳುಪಟಳವ ಬಿಡಿಸೆ ತಾಯಿ ನಿನ್ನ ಪಾವನ ಪದುಮ ಪಾದನುಗ್ರಹದಿಂದಜಲಧಿಯೊಳಗಿಪ್ಪ ಜೀವಿಗಳಂತೆ ತಂಪಿನೊಳಿಪ್ಪೆ ಮಂತ್ರವಾಹನನ ರಾಣಿರಂಗಾ ತಂದೆವರದಗೋಪಾಲವಿಠಲನ ಮಂತ್ರವ ಬೋಧಿಸೆ 2 ಸಾರಥಿ ಸತಿ ಶಚಿ ಶಾಮಲ ಮಿಕ್ಕಿದವರ ಪೊರೆದಂತೆ ಪೊರೆಯಬೇಕು ಪರಶುಧಾರಿ ತಂದೆವರದಗೋಪಾಲವಿಠಲನ ತೋರೇ 3 ನಖ ಶಿಖ ಪರ್ಯಂತಾನಿಲವೋ ಹೃತ್ಸರಸಿಜದೊಳಗೆ ಪೊಳದು ನರಹರಿ ರೂಪಧಾರಿ ತಂದೆವರದಗೋಪಾಲವಿಠಲನ ಪ್ರೀಯೆ 4 ಮಂಗಳಾಂಗಿ ಮಹಾ ತುಂಗ ಮಹಿಮ ತುರಂಗ ವದನ ಚತುರಂಗ ಧರನ ಸರ್ವಂತರಂಗದೊಳು ತಂತುಬಿಡದೆ ಮಹಂತನೊಡಗೂಡಿ ಶಿರಿಕಂಠನುತ ತಂದೆವರದಗೋಪಾಲವಿಠಲನ ಪಠಿಸುವಳೆ 5 ಪಾದ ಕಂಡಮ್ಯಾಲೆ ಪಾತಕವೆಲ್ಲಿಹದೆ ತಂದೆವರದಗೋಪಾಲವಿಠಲನ ದಯದಿಂದ 6
--------------
ತಂದೆವರದಗೋಪಾಲವಿಠಲರು
* ನೆರದು ಗೋಪಿಯರೆಲ್ಲಾರು ಕೃಷ್ಣಯ್ಯನ ಶೆರಗಪಿಡಿದುಕೊಂಡು ಅರುಹಿದರತಿ ಬೇಗದಿ ಪ. ಹಾಲು ಕರವುತಿರಲು ತೊಲೆಗೆ ನಿಚ್ಚಣಿಕೆಯ ಹಾಕದೆ ಸುರಿದಾನು ನೆಲವಿನ ಪಾಲ್ಮೊಸರಾ 1 ಅಂಮೈಯ್ಯಾ ಇಲ್ಲಾ ಕಾಣೆ ಇವಳು ಯಂನ್ನಾ ಸುಂಮ್ಮಾನೆ ದೂರುವಳು ಹುಂಮ್ಮಿಂದ ನಾನವಳ ಅಟ್ಟಕ್ಕೆ ನೆಗವೊರೆ ಬೊಮ್ಮ ಜಟ್ಟಿಗನೆ ನಾನು 2 ಮತ್ತೊರ್ವಳಿಂತೆಂದಳು ನಿಂನಮಗ ಹತ್ತಿ ಗವಾಕ್ಷಿಯಿಂದಾ ಬಚ್ಚಿಟ್ಟ ಬೆಣ್ಣೆಯನೆಲ್ಲಾವ ಮೆದ್ದಾನು ಮಕ್ಕಳಿಗಿಲ್ಲದಂತೆ 3 ಗಡಿಗೆ ಬೆಣ್ಣೆಯ ಮೆಲ್ವಾರೆ ಇವನ ಹೊಟ್ಟೆ ಕೆರೆಭಾವಿಯೇನೆ ಅಮ್ಮಾ ಹುಡುಗರಿಗೆ ಎಂದು ಬಚ್ಚಿಟ್ಟ ಬೆಣ್ಣೆಯನೆಲ್ಲಾ ಹೊಡೆದರವರ ಮಕ್ಕಳು 4 ಮಲಗೋಮಂಚದ ಮೇಲೆ ನಾ ಮಲಗೀರೆ ಮೊರೆವ ಹಾವನು ಪಿಡಿದು ಅರಿಯದಂತೆ ಬಂದು ಮುಸುಕಿ- ನೊಳಗಿಟ್ಟು ಅರಿಯಾದೆ ಹೋದನಂಮಾ 5 ಹರನಡುಗುವ ಹಾವನು ನಾ ಪಿಡಿವಾರೆ ತರಳಾನು ತಡೆಕಾರನೆ ಹರಕೆಯ ಹೊತ್ತುದವಪ್ಪಿಸದಿದ್ದರೆ ಗುರುತು ತೋರÀಲು ಬಂತೇನೊ 6 ಮಕ್ಕಳ ಪಡೆದವರುಯಿಲ್ಲದ ಕಳ ವಿಕ್ಕಲಿ ಬಹುದೆ ಕೃಷ್ಣಗೆ ಸಿಕ್ಕಿದ ತಪ್ಪು ಸಹಿತವೆ ತಂದರೆ ನಾನು ತಕ್ಕ ಬುದ್ದಿಯ ಪೇಳುವೆ 7 ಅಣುಮಯರೂಪ ಕಾಣೆ ನಿಂನಯ ಮಗ ಚಿನುಮಯ ರೂಪ ಕಾಣೆ ಚಿನುಮಯ ರೂಪ ಹೆಳ ವನಕಟ್ಟೆ ಆದಿಕೇಶವ ರಂಗನೆ8
--------------
ಹೆಳವನಕಟ್ಟೆ ಗಿರಿಯಮ್ಮ
* ಹ್ಯಾಂಗಿರಲಿನ್ನು ರಂಗನ ಬಿಟ್ಟಿನ್ನಹ್ಯಾಗಿರಲಿಂನು ಮಂಗಳಾತ್ಮಜ ಹೆಳವನಕಟ್ಟೆರಂಗನ ಬಿಟ್ಟು ಹ್ಯಾಂಗಿರಲಿಂನು ಪ. ಸಿರಿಮನೋಹಾರಿ ಶರಣರಿಗಂತ:ಕರಣವ ತೋರಿ ತ್ವರಿತದಿದಿವ್ಯರಥಗಳನ್ನು ನೀಡಿ ಪರಮಾ ಸಂಭ್ರಮದಿಂದಾಯಿರುವೋನ ಮರದು ನಾ ಹ್ಯಾಂಗಿರಲಿನ್ನೂ 1 ಗಿರಿಮನಿ ಮಾಡಿ ಶರಣಗರಿತ:ಕರುಣವ ನೀಡಿ ಸರಸದಿ ಮನೋರಥಗಳ ತೋರಿ ಪರಮಾ ಸಂಭ್ರಮದಿಂದಾ ಇರುವನ ಮರದು ನಾ ಹ್ಯಾಂಗಿರಲಿನ್ನೂ 2 ಶರಣು ಪೊಕ್ಕಿರುವಾ ಗಿರಿಯಮ್ಮಗಾ ತುರದಿ ವಲಿದಿರುವ ಸರಕಿರಿಗೆಜ್ಜೆ ಧರಿಸಿ ಕುಣಿದಿರುವ ಸಿರಿನಾರಸಿಂಹನ ಚರಣವಾ ಮರೆದು ನಾ ಹ್ಯಾಂಗಿರಲಿನ್ನೂ 3
--------------
ಹೆಳವನಕಟ್ಟೆ ಗಿರಿಯಮ್ಮ
*ಆರಿಗಾದರು ಪೂರ್ವದ ಕಟ್ಟಳಿಯು ತಪ್ಪುದು ವಿಧಿಬರಹವು ಪ. ಪೊಡವಿಭಾರವ ಪೊತ್ತು ಮೃಡಗೆ ಭೂಷಣನಾಗಿ ಹೆಡೆಯಲ್ಲಿ ಮಾಣಿಕವಯಿಟ್ಟುಕೊಂಡು ಬಿಡದೆ ಶ್ರೀಹರಿಗೆ ಹಾಸಿಗೆ ಆದ ಫಣಿಪಂಗೆ ಅಡವಿಯೊಳಗಣ ಹುತ್ತ ಮನಿಯಾಯಿತೈಯ್ಯಾ 1 ಸುರಪತಿಯಗೆದ್ದು ಸುಧೆಯನೆ ತಂದು ಮತ್ತೆ ಮಾತೆಯ ಸೆರೆಯ ಪರಿಹರಿಸಿ ಬಹುಶಕ್ತನೆನಿಸಿಕೊಂಡ ಹದಿನಾಲ್ಕು ಲೋಕನಾಳುವವನ ಹೊತ್ತು ಇರುವವಗಾಯಿತು ಮನೆಯು ಮರದ ಮೇಲೆ 2 ರಾಮಚಂದ್ರನ ಸೇವೆಮಾಡಿ ಮೆಚ್ಚಿಸಿಕೊಂಡು ರಾವಣನ ಗರ್ವಮುರಿದು ಬಂದೂ ರೋಮರೋಮಕೆ ಕೋಟಿಲಿಂಗಧರಿಸಿದ ಹನುಮಂತಗೆ ಗ್ರಾಮಗಳ ಕಾಯ್ವದಾಯಿತೈಯ್ಯಾ 3 ಮೂರ್ಲೋಕಕಾಧೀಶ ಮುಕ್ಕಣ್ಣ ಶಿವನೆಂದು ಸಾರುತಿದೆ ವೇದ ಸಟೆಯಲ್ಲವಿದು ಪಾರ್ವತಿಗೆ ಪತಿಯಾದ ಕೈಲಾಸವಾಸನಿಗೆ ಊರಹೊರಗಣ ಕಾಡ ಕಾಯ್ವದಾಯಿತೈಯ್ಯಾ 4 ಮೀರಲಳವಲ್ಲಾ ಮುನ್ನಿನಾ ಕರ್ಮವನು ಕಾರಣಕರ್ತನಿಗಲ್ಲದೆ ಮಾರಪಿತ ಹೆಳವನಾಕಟ್ಟೆರಂಗೈಯ್ಯನ ಸೇರದ ಕಾಲವ್ಯರ್ಥವ್ಯಾದಿತೈಯ್ಯಾ 5
--------------
ಹೆಳವನಕಟ್ಟೆ ಗಿರಿಯಮ್ಮ
*ಸುದಿನ ದುರ್ದಿನಮೆಂಬುದವರವರ ಸಂಪ್ರಾಪ್ತಿ ಸುದಿನಮದು ಜನಿಸಿದೊಡೆ ದುರ್ದಿನಮದಳಿಯಲ್ಕೆ ವಿಧಿಲೀಲೆ ಜನನಮರಣಂಗಳೈ ರಕ್ತಾಕ್ಷಿ ಮಧುಮಾಸ ಸಿತಪಕ್ಷದ ಸದಮಲಾನ್ವಿತಮಪ್ಪ ತಾರಗೆಪುನರ್ವಸೂ ವಿಧುವಾರ ಪೂರ್ವಾಹ್ನಮಾಸೂರಿ ನಾಮಮೆದಿ ಮಾಂಗಿರಿಯ ರಂಗಪದಮಂ 1 ಬಂಧುಜನÀಮಿತ್ರರ್ಗೆ ದುರ್ದಾಂತ ದುರ್ದಿನಂ ಸಂದಮಾಂಗಿರಿರಂಗಪದನಳಿನಮಂ ಸೇರ್ದ ಸಿಂಧುಪುತ್ರಂ ಬಳಗದಾಸೂರಿಯಾತ್ಮಮದು ಚಿರಶಾಂತಿಯಂಪಡೆಯಲೈ ಚೆಂದವಹ ಕಮಲಮದು ಕಮನೀಯ ಕಾಂತಿಯಿಂ ದಂದವಡೆದಿರ್ಪುದೇ ನಿಡುಗಾಲಮದು ಬಳಿಕ ಕುಂದದಿರದೇಂ ನಿಜದೆಯಾದರ್ಶಜೀವನಂ ಶ್ರೀರಕ್ಷೆಯಲ್ತೆ ನಮಗೆ 2 ವರಮಹಾಲೆಕ್ಕಿಗರ ಶಾಖೆಯೊಳ್ ಪರಿಣತಿಯ ಕರಣಿಕಂ ತಾನಾಗಿ ವಿಶ್ರಾಮ ಜೀವನದೆ ಸರಸಕಾವ್ಯಾದಿ ಪದರಚನೆಯಿಂ ಗಮಕಿಗಳ ತಣಿಸಿಯಾನಂದಮುಣಿಸಿ ಸಿರಿಲೋಲ ಸುವಿಲಾಸ ಗೋಕರ್ಣಮಹಿಮೆಯಂ ಭರತಮಾರುತಿಭಕ್ತಿಯಾಳ್ವಾರುವೈಭವಂ ಸರಿಸದಲಿ ಕಾವ್ಯಪಂಚಕ ರಚಿಸಿ ಪಂಚತ್ವವೈದಿದರ್ ಧನ್ಯರಲ್ತೆ 3 ಕಿವಿಚುರುಕು ನಿಡುಮೂಗು ದೃಷ್ಟಿಪಾಟವಹೊಳಪು ಸವಿನೆನಪಿನಂಗಳಂ ಬೇವುಬೆಲ್ಲದಪದರು ರವಿಯೆಡೆಗೆ ನಿಟ್ಟಯಿಸಿ ಧೀರ್ಘಾಯುವೆಂದೆನಿಸಿ, ಶರದಶಕಗಳ ಕಳೆದನು ಇವಗೆ ಮಣಿವುದೆ ಬೆಲ್ಲ ಹರಿಚಿಂತನೆಯಬಲ್ಲ ದಿವರಾತ್ರಿ ಸಂತೃಪ್ತಿ ಮಾಳ್ಪಕಾರ್ಯಂಗಳಲಿ ತವಕದಿಂ ಸುತ್ತುವರೆದಿರ್ಪರೈ ಹಿರಿತನದ ನಮ್ರತೆಗೆ ಬೆರಗಾಗುತ 4 ಸುತರತ್ನರೀರ್ವರಂ ಸುತೆಯರಂ ಸೊಸೆಯರಂ ಹಿತಮಪ್ಪಮೊಮ್ಮಂದಿರಂ ನೆಂಟರಿಷ್ಟರಂ ಮಿತವಚನದಿಂ ನಲಿಸಿ ಮನದಳಲಿಗೆಡೆಮಾಡಿ ವೈಕುಂಠಮಂ ಸೇರಿದೈ ಶತಪತ್ರಲೋಚನದ ಪರಿಚರ್ಯೆಯಂ ಗೈದು ಶತವರುಷಮಂ ತುಂಬುಜೀವನವ ತಾಳ್ದೆ ಸ ತ್ಪಥವಿಡಿದು ನಿನಗಾತ್ಮಶಾಂತಿಯುಂಟಾಗಲೈ ತವಕುಲಂ ವರ್ಧಿಸಿರಲೈ5
--------------
ಪರಿಶಿಷ್ಟಂ