ಒಟ್ಟು 145 ಕಡೆಗಳಲ್ಲಿ , 42 ದಾಸರು , 124 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಸಿರಿ ನರಸಿಂಗನ ಪಾಡಿರೊ | ಮಂಗಳಮೂರುತಿ ಡಿಂಗರಿಗರ ಹೃಸ್ಸಂಗ ಕರುಣಾತರಂಗಾ ಪ ಮೊರೆಯಿಡಾ ಬಂದ | ಕಂಭದೊಳಿಂದ | ಲೋಕಸ್ವಾಮಿ | ಅಂತರ್ಯಾಮಿ || ಕರುಳಮಾಲೆ ಇಟ್ಟಾ | ಕೊರಳೊಳು ದಿಟ್ಟಾ | ಜಯವೆನುತಿರೆ ಮೆರೆದಾ | ಪ್ರಹ್ಲಾದವರದಾ 1 ಕೊಡುವನು ಚಲುವಾ | ಭಕುತರಿಗೊಲಿವ | ಹರಿ ನಮಗೆಲ್ಲಾ | ಭಕ್ತವತ್ಸಲಾ || ಗುಣಾಂಬುಧಿ ತೇಜ | ರಾಜಾಧಿ ರಾಜ | ಕರ್ತನು ಸಖ್ಯ 2 ಕನಕಮುನೀಶ್ವರ ತಪವನು ಮಾಡಲು ಮೆಚ್ಚಿ | ಬಂದನು ಮೆಚ್ಚಿ | ಕನಕ ವರುಷವನು ಗರೆವದು ಅಂದಿನ ದಿನದಿ | ಆನಂದವನಧಿ | ಕನಕ ನೃಕೇಸರಿ ಎನಿಸಿದಾ ಅಂದಿನಾರಭ್ಯಾ | ಈತನೆ ಸಭ್ಯಾ | ನುತಿಸಲು ಸುಳಿವಾ 3 ಇದು ಪುಸಿಯಲ್ಲಾ | ವೇದಾ | ಪೇಳ್ವದು ಮೋದಾ || ಅವನೇ ದನುಜಾ | ನಮಗೀತ ತಂದೆ 4 ನಿಧಿಯೊಳು ಧನದಾ | ದಿಕ್ಕಿಲಗಾಧಾ | ಮುನಿಜನ ಸಮ್ಮತ ಶ್ರುತಿ ಉಕ್ತಿಗಳಲ್ಲಿ ಅಕ್ಕು | ಕೇಳೀವಾಕು | ಮಾಡಲು ಭಕುತಿ | ಉಂಟು ವಿರಕುತಿ | ವಿಠ್ಠಲ ನರಸಿಂಗಾ | ರಿಪುಗಜ ಸಿಂಗಾ 5
--------------
ವಿಜಯದಾಸ
ಸೀತಾಪತಿವಿಠಲ ದಾಸಳ ನಿರ್ಯಾಣ ಪದ ಮಾಧವನಾ ಪುರ ಸೇರಲು ಬೇಗ ಪ. ಪುಟ್ಟಿದಾರಭ್ಯದಿ ನಿಷ್ಟೆನೇಮದೊಳಿದ್ದು ಕಷ್ಟಪರಂಪರೆ ಸಹಿಸುತ ಜಗದಿ ಹರಿಯ ಕರುಣದಿ ಗುರುಕೃಪೆ ಪಡೆದಿ 1 ಹಿರಿಯೂರೆನ್ನುವ ಪುರ ವರ ವೇದಾವತಿ ತೀರ ಪರಮ ಸಾತ್ವಿಕರಲ್ಲಿ ಜನುಮ ತಳೆದಿ ತುಳಸಿಯ ವರದಿ ಮುದ್ದಿನಿಂ ಬೆಳೆದಿ 2 ಶಿಷ್ಟ ಸಂಪ್ರದಾಯ ಕಟ್ಟಿನೊಳಗೆ ನಿನ ಗಷ್ಟಮ ವರುಷದಿ ಮದುವೆಯ ಮಾಡಿ ಹರುಷವಗೂಡಿ ಹರಿಯ ಕೊಂಡಾಡಿ3 ಸತಿ ರುಕ್ಮಿಣೀಬಾಯಿ ಹೆಸರಿನಿಂ ಬಾಳ್ವೆಯ ಬಹು ಅಲ್ಪಕಾಲ ಕೊಟ್ಟನೆ ಸಿರಿಲೋಲ ಮುಸುಕಿತು ಮಾಯಜಾಲ 4 ಸಂಸಾರ ಕೈಕೊಂಡು ವಂಶಕೊಬ್ಬನ ಪಡೆದು ಕಂಸಾರಿ ಕರುಣದಿ ಇರುತಿರೆ ನೀನು ವಿಧಿ ತಂದೊಡ್ಡಿದನು 5 ಎರಡು ವರ್ಷದ ಮಗುವ ಕರದಲ್ಲಿ ಕೈಕೊಂಡು ಪರಿಪರಿ ಕಷ್ಟದಿ ಶಿಶುವ ಬೆಳೆಸಿದೆ ವಿದ್ಯೆ ಕಲಿಸಿದೆ ಪುತ್ರಗ್ಹರಸಿದೆ 6 ಒಬ್ಬ ಆ ಮಗನರ್ಥಿ ಸಂಸಾರವನೆ ಕಂಡು ಉಬ್ಬಿ ಹರುಷಾದಲ್ಲಿ ಇರುತಿರೆ ನೀನು ಮೊಮ್ಮಕ್ಕಳನು ಪಡೆದೆ ನಾಲ್ವರನು 7 ಘಟಿಸುತ ಸ್ವಪ್ನದಿ ಸೇವೆಗೈಯ್ಯೆಂದು ಅಭಯವನಂದು ಕೊಡಲು ದಯಸಿಂಧು 8 ಮರುದಿನ ಮನೆಯಲ್ಲೆ ಭರದಿ ಸೇವೆಯ ಕೊಂಡು ಹರಿವಾಯುಗಳನಿಟ್ಟು ಸುತ್ತುವರಿಯುತ್ತ ಎಡವಿ ಬೀಳುತ್ತ ಪ್ರದಕ್ಷಿಣೆ ಬರುತಾ 9 ಒಲಿದು ಆ ಭಕ್ತಿಗೆ ವರನೇತ್ರವಿತ್ತನು ನಳಿನನಾಭನ ಭಕ್ತ ಘಟಿಕಾಚಲನಿಲಯ ಭಾರತಿಪ್ರೀಯ ದಿವಿಜರ ಒಡೆಯ 10 ಭಕ್ತಿ ವಿರಕ್ತಿ ಜ್ಞಾನವು ಚಿತ್ತದಿ ಮೂಡಿ ಸೋತ್ತಮರಾದ ಶ್ರೀ ವಿಬುಧರ ದಯದಿ ಮೋಕ್ಷಸಾಧನದಿ ದಿನಗಳ ಕಳೆದಿ 11 ಶ್ರವಣ ಕೀರ್ತನ ಸ್ಮರಣೆ ಮನನಾದಿಗಳನೆಲ್ಲ ತವಕದಿ ಕೈಕೊಂಡು ಮೋದದಿ ಮೆರೆದಿ ಕಷ್ಟವ ಮೆರೆದಿ ಹರಿಗುರು ದಯದಿ 12 ಪ್ರಥಮ ಯಾಮದಲೆದ್ದು ಜಿತಮನದಿಂದ ಶ್ರೀ ಪತಿಯ ಸ್ತೋತ್ರಗಳನ್ನು ವದನದಿ ಸತತ ಪರಿಯಂತ 13 ಉಚ್ಛಸ್ವರದಿ ನೀನು ಪಾಡಿದ್ಹಾಡುಗಳಿಂದು ಅಚ್ಚಳಿಯದೆ ನಮ್ಮ ಸ್ಮರಣೆಯೊಳ್ನಿಂತು ಹರುಷವನಾಂತು ಮರೆಯುವುದೆಂತು 14 ವೃದ್ಧಾಪ್ಯ ತಲೆದೋರೆ ಇದ್ದೊಬ್ಬ ಪುತ್ರನು ಪದ್ಮನಾಭನ ಪುರ ಸೇರಿ ನಿನ್ನಗಲಿ ದುಃಖದಿ ಬಳಲಿ ತೊಳಲಿದೆ ಬಳಲಿ 15 ಪೌತ್ರರಿಬ್ಬರು ನಿನ್ನ ಹೆತ್ತಮ್ಮನಂದದಿ ಚಿತ್ತದಿ ತಿಳಿದಿನ್ನು ಸಲಹುತ್ತಿರಲು ಹರಿದಯ ಬರಲು ದುಃಖ ಮರೆಯಲು 16 ಕಲ್ಯಾಣನಗರದಿ ಕಿರಿಯ ಮೊಮ್ಮಗನಿರೆ ಆಹ್ಲಾದದಿಂದ ನೀನವನಲ್ಲಿ ಇರಲು ಸದ್ಗುರು ಬರಲು ಜ್ಞಾನವೆರೆಯಲು 17 ಹರಿದಾಸಕೂಟದ ವರ ಅಂಕಿತವ ಕೊಂಡು ಗುರುಕರುಣವ ಪೊಂದಿ ನೀ ನಮಗೆಲ್ಲ ಸನ್ಮಾರ್ಗಕ್ಕೆಲ್ಲ ಮೊದಲಾದೆಯಲ್ಲ 18 ಶ್ರೀ ತಂದೆ ಮುದ್ದುಮೋಹನದಾಸರ ದಯದಿ ಸೀತಾಪತಿವಿಠ್ಠಲನ್ನ ಒಲಿಸಿದೆ ಧ್ಯಾನದೋಳ್ತಂದೆ ಆನಂದಪಡೆದೆ 19 ಕಂಚಿ ಕಾಳಹಸ್ತಿ ಶ್ರೀ ರಂಗಯಾತ್ರೆಯ ಸಂಚಿಂತನೇಯಿಂದ ಗೈದೆಯೆ ನೀನು ಗಳಿಸಿದೆ ಇನ್ನು ಭಕುತಿಯ ಪೊನ್ನು 20 ಉಡುಪಿ ಮಂತ್ರಾಲಯ ಸೇತು ರಾಮೇಶ್ವರ ಕಡು ಭಕ್ತಿಯಲಿ ತಿರುಪತಿ ಕ್ಷೇತ್ರ ಚರಿಸಿ ಕಷ್ಟವ ಸಹಿಸಿ ಶ್ರೀ ಹರಿಗೆ ಅರ್ಪಿಸಿ 21 ಕಡುಕೃಪೆಯಿಂದಂದು ಕಣ್ಣನ್ನೆ ಕೊಟ್ಟಂತ ಮೃಡಪಿತ ಘಟಿಕಾಚಲೇಶನ್ನ ಕೂಡಿ ಕಣ್ತುಂಬ ನೋಡಿ ತನುವನೀಡಾಡಿ22 ಅಂತರಂಗದ ಬಿಂಬ ಸರ್ವಾಂತರ್ಯಾಮಿ ಎಂ ತೆಂಬಂಥ ಚಿಂತನೆ ಸಂತತಗೈದೆ ಅಭಿಮಾನ ತೊರೆದೆ ದ್ವಂದ್ವ ಸಹಿಸಿದೆ 23 ವ್ರತನೇಮ ಜಪತಪ ಸತತದಿಗೈಯ್ಯುತ್ತ ಕ್ಷಿತಿವಾರ್ತೆಗೆಳಸಾದೆ ಮನವನ್ನೆ ಸೆಳೆದು ಹರಿಪಾದಕ್ಕೆರದು ಹಿತವನ್ನೆ ಮರೆದು 24 ಭಾಗವತಾದಿ ಸಚ್ಛಾಶ್ತ್ರ ಶ್ರವಣಗೈದು ಜಾಗ್ರತಳಾದಿ ಭೂಸುರರ ಸೇವೆಯಲಿ ಸೂಕ್ಷ್ಮಧರ್ಮದಲಿ ಪುಣ್ಯಗಳಿಸುತಲಿ 25 ಸತತಬಿಂಬಕ್ರಿಯ ವ್ರತವಂದೆ ಕೈಕೊಂಡು ಜತನದಿ ಮರೆಯದೆ ಪ್ರತಿಕಾರ್ಯದಲ್ಲಿ ಅರ್ಪಿಸಿ ಹರಿಯಲ್ಲಿ ಇದ್ದೆ ಮೋದದಲಿ 26 ಮುಖ್ಯಪ್ರಾಣನ ದಯ ಮುಖ್ಯಮಾಡುತ ಇನ್ನು ಅಕ್ಕರೆ ಭಕ್ತಿಯ ತೋರಿದೆ ನೀನು ಬೆನ್ನು ಬಿಡದವನು ನಿನ್ನ ಸಲಹಿದನು 27 ಭಾರತಿಪತಿ ಮುಖ್ಯಪ್ರಾಣಾಂತರ್ಗತನೆಂಬ ವಾರುತಿ ಇಲ್ಲದ ವಚನವೆ ಇಲ್ಲಾ ನಿನ್ನ ಈ ಸೊಲ್ಲ ಮರೆಯಲೊಶವಲ್ಲ 28 ಶ್ರೀ ರಾಮಚಂದ್ರನ ಆರಾಧನೆಯಗೈದು ಸಾರತತ್ವವ ತಿಳಿದು ಸಾಧಿಸಿ ಪಥವ ಸಹಸ್ರಾರು ಜಪವ ಗೈದೆ ತಪವ 29 ನೀ ಹಾಡಿದ ಸ್ತೋತ್ರ ನಿನ್ನ ಸನ್ಮಾರ್ಗವ ನನ್ನೆಯಿಂದಲಿ ಎರೆದೆ ಹೆಣ್ಣು ಮಕ್ಕಳಿಗೆ ಸ್ಮರಿಸುವರೀಗೆ ಸತ್ಕೀರ್ತಿಯದಾಗೆ 30 ಹರಿ ಗುರು ವರತತ್ವ ದಿವಿಜರಭಿಮಾನಿಗಳ ನಿರುತದಿ ಚಿಂತಿಸಿ ಸಾಧನಗೈದೆ ಕಾಲವ ಕಳೆದೆ ಹರಿಪಾದಕ್ಕೆರೆದೆÀ 31 ಬಿಂಬಾನು ಸಂಧಾನ ಚತುರಳಾಗಿ ನೀನು ಸಂಭ್ರಮದಿಂದ ಶ್ರೀ ಮಧ್ವಶಾಸ್ತ್ರದಲಿ ಮನಸ ನೀಡುತಲಿ ಸುಖ ಸುರಿಯಲಿ 32 ಒದ್ದು ತಾಪತ್ರಯ ಸದ್ಗುರು ಕೃಪೆ ಪೊಂದಿ ಗೆದ್ದೆ ನೀ ಸುಲಭದಿ ಭವದ ಬಂಧನವ ಪಡೆದೆ ಹರಿ ದಯವ ಕೊಟ್ಟಿತೆ ಮುದವ 33 ಪೇಳಲೋಶವೆ ಹೇ ದಯಾಳು ನಿನ್ನಯ ಗುಣ ಬಾಳಿದೆ ಧರೆಯೊಳು ತೊಂಬತ್ತೈದೊರುಷ ವೃದ್ಧಾಪ್ಯದೋಷ ನಿನಗಿಲ್ಲ ಲೇಶ 34 ಇಂದ್ರಿಯಂಗಳು ಎಲ್ಲ ಒಂದು ಕುಗ್ಗದೆ ಒಬ್ಬ ರಿಂದಲು ಸೇವೆಯ ಕೊಳದೆ ಲವಲವಿಕೆ ಯಿಂದಿರುವ ಬಯಕೆ ಸಲಿಸೀತೆ ಮನಕೆ 35 ಕಿರಿಯ ಮೊಮ್ಮೊಗ ರಮಾಕಾಂತನಲ್ಲಿರುತಿರೆ ಕರೆಹೇಳಿ ಕಳುಹಿದ ಹರಿ ತನ್ನ ಪುರಕೆ ಕ್ಲಿಪ್ತಕಾಲಕ್ಕೆ ಆಗೆ ಮನವರಿಕೆ 36 ತೊರೆದೈದು ದಿನ ಅನ್ನ ಹರಿಧ್ಯಾನಂಗತಳಾಗಿ ವರ ಗಂಗೆ ವದನದಿ ಪ್ರಾಶನಗೈದು ಅಭಿಮಾನ ತೊರೆದು ಭ್ರಾಂತಿಯ ಮೆರೆದು 37 ವರಹಜೆ ತುಂಗ ತೀರದಿ ಪ್ರಾಣನಾಥನ ಚರಣಮೂಲದಿ ಶಿವಮೊಗ್ಗ ಕ್ಷೇತ್ರದಲಿ ಹರಿಸ್ಮರಣೆಯಲಿ ಪ್ರಾಣ ಸಲಿಸುತಲಿ 38 ಸ್ವಭಾನುವತ್ಸರ ಭಾದ್ರಪದ ಬಹುಳ ಇದ್ದ ದಶಮಿ ದಿನ ಗುರುವಾರದಲ್ಲಿ ಮಧ್ಯರಾತ್ರಿಯಲಿ ತನು ತೊರೆದಿಲ್ಲಿ 39 ಕೇಶವದೂತರು ಮೀಸಲಿಂದಲಿ ನಿನ್ನ ಘಾಸಿಗೊಳಿಸದೆ ಕರೆದೊಯ್ದರೇನಮ್ಮ ಪೇಳೆ ಎನ್ನಮ್ಮ ಎಲ್ಲಿ ಪೋದ್ಯಮ್ಮ 40 ಹೆತ್ತಮ್ಮಗಿಂತಲೂ ಹೆಚ್ಚಾಗಿ ನಮ್ಮನ್ನು ಅರ್ಥಿಯಿಂ ಬೆಳೆಸಿದೆ ಅಭಿಮಾನದಿಂದ ಅನುರಾಗದಿಂದ ಬಹುಮಾನದಿಂದ 41 ಮೊಮಕ್ಕಳೆಂದರೆ ಬಹು ಪ್ರೀತಿ ನಿನಗಲ್ಲೆ ಒಮ್ಮೆ ನಾಲ್ವರು ಬಂದು ಇರುವೆವು ನಾವು ಆಲ್ಪರಿಯುವೆವು ಅಗಲಿ ಸೈರಿಸೆವು 42 ಅರ್ಥಿಲಿ ರಮಾಕಾಂತ ವಿಠಲಾಂಕಿತ ಕೃಷ್ಣ ಮೂರ್ತಿಯು ಪುತ್ರಗಿಂತಧಿಕದಿ ನಿನ್ನ ಅಂತ್ಯಕ್ರಿಯವನ್ನ ಮಾಡಿದ ಧನ್ಯ 43 ಶ್ರದ್ಧೆಯಿಂದಗ್ರಜನಿಂದ ಕೂಡುತ ನಿನ್ನ ಶುದ್ಧಭಾವದಿಗೈದ ಅಂತ್ಯಸೇವೆಯನು ಸ್ವೀಕರಿಸಿ ನೀನು ಹರಸಿ ಹಿತವನ್ನು 44 ತಿಳಿದು ತಿಳಿಯದೆ ನಾನು ಗೈದಪರಾಧವ ನಲವಿಂದ ಕ್ಷಮಿಸಿ ನಮ್ಮನು ಮನ್ನಿಸಿದೆ ಸಹನವ ತಳದೆ ಬಹು ಪ್ರೀತಿಗೈದೆ 45 ಎಲ್ಲ ಪರಿಯಲಿ ನಮ್ಮ ಕ್ಷಮಿಸಿ ಕಾಪಾಡಮ್ಮ ಬಲ್ಲಿದಳು ನೀನು ಆಶೀರ್ವದಿಸುವುದು ಸುಖವ ತೋರುವುದು ಕೃಪೆಯ ಮಾಡುವುದು 46 ಅಂಜನೆಕಂದ ನಿನ್ನವನೆಂಬ ಅಭಿಮಾನ ರಂಜಿಸೆ ಸಹಜದಿ ನಿನ್ನೊಳು ಮಾತೆ ಜಗದಿ ವಿಖ್ಯಾತೆ ಹರಿಗತಿಪ್ರೀತೆ 47 ಪತಿಗುರು ಪವನ ಹೃದ್ಗತಮೂರ್ತಿ ಚಿಂತನ ರತಳೆ ನಿನ್ನಯ ಚರಿತೆ ಪೇಳ್ದೆ ತಿಳಿದನಿತು ತಪ್ಪನು ಮರೆತು ಲಾಲಿಸು ಮಾತು 48 ಗೋಪಾಲಕೃಷ್ಣವಿಠಲನ ಸದ್ಭಕ್ತಳೆ ಶ್ರೀ ಪಾದಕ್ಕೆರಗಿ ನಾ ಜಯವ ಪಾಡುವೆನು ಧನ್ಯಳೇ ನೀನು ಮಾನ್ಯಳೆ ನೀನು 49
--------------
ಅಂಬಾಬಾಯಿ
ಸುದಯನೆ ಮಲಗಿದ್ಯಾ ತಂದೆ ಗೋವಿಂದ ಇದು ಏನು ಮಾಡಿದ್ಯೋ ಭಕುತರಾನಂದ ಪ ಗಳಿಗೆಬಿಡದೆ ಹೊನ್ನು ಅಳೆದಳೆದು ಬೇಸತ್ತು ಮಲಗಿದಿ ಸುಮ್ಮನೆ ಕಲಿಜನರ ಗತಿಯೇನು 1 ಮಹಂತರ ಅಧಿಕಾರ ಭ್ರಾಂತರೊಶಕೆ ನೀಡಿ ಚಿಂತೆ ಪರಹಿತ ಮರೆದು ಸಂತಸದ್ಹಾವಿನ ಮೇಲೆ 2 ಪ್ರತಿ ವರುಷದುತ್ಸವಕೆ ಅತಿಭಕುತಲಿ ಬರುವ ಸುತರೊಳು ದಯತಪ್ಪಿ ಅತಿ ಆನಂದದಲಿ 3 ರೂಢಿಯ ಮೇಲೆ ಗಾಢನಿದ್ರೆಯೊಳು 4 ಕಾಮಿತಜನರ ಸುರಕಾಮಧೇನಲ್ಲವೆ ನೀನು ಭೂಮಿಪಾಲಿಸು ಏಳು ಸ್ವಾಮಿ ಶ್ರೀರಾಮಯ್ಯ 5
--------------
ರಾಮದಾಸರು
ಸೇರಿದೆ ನಿನ್ನ ವೆಂಕಟರನ್ನ ಪಾಲಿಸು ಎನ್ನ ಅ- | ಪಾರ ಜನುಮಕ್ಕೆ ನೀನೆ ದೈವವೆಂದು ಪ ಶೂನ್ಯಜ್ಞನು ನಾನು ಅನ್ಯಾಥಾ ಗತಿ ಅರಿಯೆ | ಅನ್ಯರಲ್ಲಿಗೆ ಕೊಡದೆ ಧನ್ಯನ ಮಾಡೊ ಬಿಡದೆ 1 ಕಲ್ಪತರುವೆ ಎಂದು ವಪ್ಪದಿಂದಲಿ ಬಂದೆ | ಆಲ್ಪರಿಯದಂತೆ ನಾಗತಲ್ಪನೆ ಫಲವೀಯೋ 2 ವರುಷಾವರುಷ ಹೀಗೆ ದರುಶನಕೊಡು ಎನಗೆ | ಹರುಷವಾಗಲಿ ಪರಮಪುರುಷ ವಿಜಯವಿಠ್ಠಲಾ 3
--------------
ವಿಜಯದಾಸ
ಹರಿ ಗೋಪಾಲ ವಿಠಲ | ಪೊರೆಯ ಬೇಕಿವಳಾ ಪ ದುರಿತ ದುಷ್ಕøತವೆಲ್ಲ | ದೂರ ಓಡಿಸುತಾ ಅ.ಪ. ತರಳೆ ದ್ರೌಪದಿ ವರದ | ಮರಳ್ಯಹಲ್ಯಯ ಪೊರೆದತರಳ ಪ್ರಹ್ಲಾದನನ | ಪೊರೆದ ನರಹರಿಯೇ |ವರುಷ ಐದರ ಧೃವಗೆ | ವರದನಾಗೀ | ತೋರ್ದೆಕರುಣಾಳು ನಿನ್ಹೊರತು | ಬೇರನ್ಯಕಾಣೇ 1 ಕಂಸಾರಿ ನಿನ್ನ ಪದಪಾಂಸುವನೆ ಶಿರದಿ ನಿ | ಸ್ಸಂಶಯದಿ ಧರಿಸೀಶಂಸಿಸಲು ಮಹಿಮೆ ತವ | ದಾಸ್ಯ ಪಾಲಿಸುತಿನ್ನುಹಂಸವಾಹನ ಪಿತನೆ | ವಂಶ ಉದ್ಧರಿಸೋ 2 ಕರ್ಮ ಪ್ರಾಚೀನಗಳ | ಮರ್ಮ ತಿಳಿದವರ್ಯಾರೊಕರ್ಮನಾಮಕನೆ ದು | ಷ್ಕರ್ಮ ಪರಿಹರಿಸೀ |ಪೇರ್ಮೆಯಿಂದಿವಳ ಪೊರೆ | ನಿರ್ಮಲಾತ್ಮಕ ದೇವಧರ್ಮ ಗೋಪ್ತ ಸ್ವಾಮಿ | ಬ್ರಹ್ಮಾಂಡದೊಡೆಯಾ 3 ಮಧ್ವಮತ ಸಿದ್ಧಾಂತ | ಪದ್ಧತಿಗಳರುಹೃತ್ತಶುದ್ಧಸಾಧನ ಗೈಸೊ | ಮಧ್ವಾಂತರಾತ್ಮಾಅಧ್ವಯನು ನೀನೆಂಬ | ಶುದ್ಧ ಬುದ್ಧಿಯನಿತ್ತುಉದ್ಧರಿಸೊ ಈಕೆಯನು | ಪ್ರದ್ಯುಮ್ನ ದೇವಾ 4 ಸರ್ವಜ್ಞ ಸರ್ವೇಶ | ನಿರ್ವಿಕಾರನೆ ದೇವಸರ್ವದ ತವನಾಮ | ಸ್ಮರಿಪ ಸುಖವಿತ್ತುದುರ್ವಿ ಭಾವ್ಯನೆ ದೇವ | ಅಸ್ವತಂತ್ರಳ ಕಾಯೊಗುರ್ವಂತರಾತ್ಮ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಹರಿತ್ರಿವಿಕ್ರಮ ವ್ಯಾಸವಿಠಲ | ಪೊರೆ ಇವಳಾ ಪ ದುರಿತ ದುಷ್ಕøತವೆಲ್ಲ | ದೂರಮಾಡುತಲೀ ಅ.ಪ. ಸಾರ | ಪಠಿಸೆಂದು ಪೇಳ್ದಾ 1 ವರುಷ ಪೈಂಗಳ ಪುಷ್ಯ | ಆರಾಧನೆಯದಿನದಿಗುರುಗಳನು ಕಂಡೀಕೆ | ಅವರೆ ಇವರೆಂದುಭರದಿ ನಿಶ್ಚಯಿಸುತಲಿ | ಹರಿದಾಸ್ಯ ಕಾಂಕ್ಷಿಸುತಗುರುವೆಂದು ಎನ್ನ ಬಳಿ | ಪ್ರಾರ್ಥಿಸುತ್ತಿಹಳಾ 2 ಕಂಸಾರಿ ಕಳೆದು ಭವಸಂಸಕ್ತಳಾಗಿಸದೆ | ಉದ್ದರಿಸೊ ಇವಳಾಶಂಸಿಸೀ ತವಪಾದ | ಪಾಂಸುವನೆ ಧರಿಸಿ ನಿ-ಸಂಶಯದಿ ತವದಾಸ್ಯ | ಸಿದ್ದಿಸೊ ಹರಿಯೇ 3 ಪತಿತ ಪಾವನ ರಂಗ | ಪತಿವ್ರತೆಗೆ ಸುಜ್ಞಾನಭಕ್ತಿ ಹರಿಗುರುಗಳಲಿ | ಇತ್ತು ಅಧಿಕಧಿಕಾವತ್ತಿ ಬಹ ವಿಘ್ನಗಳ | ಹತ್ತಿಕ್ಕಿ ಪೊರೆಯೆಂದುಅರ್ಥಿಯಲಿ ಬಿನೈಪೆ | ಮರುತಂತರಾತ್ಮ 4 ದರ್ವಿ ಜೀವಿಯ ಪೊರೆಯೊ | ದುರ್ವಿಭಾವ್ಯನೆ ಹೃದಯಗಹ್ವರದಿ ತವರೂಪ | ತೋರ್ವ ಮನಮಾಡೀಸರ್ವತ್ರ ತವನಾಮ | ದಿವ್ಯ ಸಂಸ್ಕøತಿ ಈಯೊಸರ್ವೊತ್ತಮನೆ ಗುರು | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಹರಿವಾಸರದುಪವಾಸದ ಫಲವು ಕಂಡವರಿಗೆ ದೊರಕುವುದೆ ಪ. ಹಿರಿದು ಜನ್ಮಗಳಲಿ ಹರಿಯನಾರಾಧಿಪ ಪರಮ ಭಾಗವತರ ಭಕ್ತರಿಗಲ್ಲದೆ ಅ.ಪ. ಸ್ನಾನಸಂಧ್ಯಾನವು ಮೊದಲಾದ ಕರ್ಮ ನ್ಯೂನದ ಪಾಪಂಗಳು ದೀನತ್ವದಿಂದ ತುಚ್ಛರಕೈಯ ಹಿಡಿದ ದು ರ್ದಾನದ ಪಾಪಂಗಳು ಭಾನುಬಿಂಬವ ಕಂಡ ಹಿಮದಂತೆ ಚಿದಾನಂದವಾದ ವ್ರತಕೆ ಸರಿ ಬಾರದು 1 ಪರಸತಿಯರ ನೋಡಿ ಮನವಿಟ್ಟ ಪಾಪವು ಪರದೂಷಣೆಯ ಪಾಪವು ಪರಮಾತ್ಮನ ಹೊಗಳುವ ನಾಲಗೆಯಲ್ಲಿ ನರರ ಹೊಗಳುವ ಪಾಪವು ಪರ ವಸ್ತುಗಳನಪ- ಹರಿಸುವ ಪಾಪಂಗಳು ಕರಿ ಓಡುವಂತೆ ದುರಿತ ಕೋಟಿಗಳನು ಪರಿಹರಿಸುವ ಶ್ರೀ 2 ಆಡುವ ಅನೃತವಾಕ್ಯಗಳಿಂದ ಸಂಭವವಾಗುವ ಪಾಪಂಗಳು ನೋಡಿಕೊಳ್ಳದೆ ದುರಾನ್ನವನುಂಬ ದುರ್ದಾನದ ಪಾಪಂಗಳು ಮಾಡಬಾರದ ದಿನದಲಿ ಸ್ತ್ರೀಗೋಷ್ಠಿಯ ಮಾಡಿದ ಪಾಪಂಗಳು ಓಡುವುದಘಸಂಘ ಉತ್ತಮವಾಗಿಹ3 ಮತ್ತೆ ಈ ಬಹಳ ಪಾಪಗಳಿಗೆಲ್ಲ ತಾ ಪಕ್ಷ ಪ್ರಾಯಶ್ಚಿತ್ತವು ಉತ್ತಮವಾದ ವ್ರತಗಳಿಗೆಲ್ಲ ತಾ ಉತ್ತಮವೆನಿಸುವುದು ಚಿತ್ತಶುದ್ಧಿಯನಿತ್ತು ಜ್ಞಾನವೈರಾಗ್ಯದಿ ಭಕ್ತಿ ಮಾರ್ಗವನೀವುದು ಮುಕ್ತಿಗೆ ಸೋಪಾನವಾಗಿ ಭವಾಭ್ಧಿಯ ದಾಟಿಸಿ ಹರಿಯ ಸನ್ನಿಧಿಗೆ ದಾರಿಯನೀವ 4 ತೋರುವ ದಶಮಿ ದ್ವಾದಶಿಗಳು ಸಂಪುಟಾಕಾರದಿ ಹರಿದಿನವು ಮೂರುದಿನದ ವ್ರತ ನಾಲ್ಕು ಹೊತ್ತಿನ ಆಹಾರಗಳು ವರ್ಜಿತವು ಊರುದಾರಿಗಳ ನಡೆಯದೆ ತಾಂಬೂಲ ಚರ್ವಣಂಗಳೊರ್ಜಿತವು ಜಾಗರ ಮಾಡಿ ವ್ರತವಾಚರಿಸುವ 5 ಅತಿಶಯವಾದ ಶ್ರೀಹರಿದಿನದಿ ಪಿತೃತರ್ಪಣಗಳು ವಜ್ರ್ಯವು ಪ್ರತಿವರುಷದಲಿ ಆಚರಿಸುವ ತಾಯಿತಂದೆ ತಿಥಿಗಳೆಲ್ಲ ವಜ್ರ್ಯವು ಸತತವು ಮಾಡುವ ಯಜ್ಞಪುರುಷಗೆ ಆಹುತಿಗಳೆಲ್ಲ ವಜ್ರ್ಯವು ಇತರ ಭೋಗ ಕೃತ್ಯಗಳನೆಲ್ಲ ವರ್ಜಿತಮಾಡಿ ಈ ವ್ರತವನಾಚರಿಸುವ 6 ಹಲವು ವ್ರತಗಳಾಚರಿಸಿ ದಾನಂಗಳ ಹಲವು ಮಾಡಿದರೇನು ಹಲವು ಪುಣ್ಯತೀರ್ಥನದಿಯಲ್ಲಿ ಸ್ನಾನವÀ ಮುದದಿ ಮಾಡಿದರೇನು ಹಲವು ಪುರಾಣಂಗಳ ಹಲವು ಶಾಸ್ತ್ರಂಗಳ ಹಲವು ಕೇಳಿದರೇನು ಶ್ರೀಹಯವದನನ್ನ ದಿನಕೆ ಸರಿಬಾರದು 7
--------------
ವಾದಿರಾಜ
ಹಿಡಿ ಸಾಧು ಸಂತರಾ ಸಂಗೆನ್ನ ಮನವೆ | ಹಿಡಿ ಸಾಧು ಸಂತರ ಸಂಗಾ | ಪೊಡವಿಲಿ ಭವಭಯ ಬಿಡಿಸಿ ಮುಕುಂದನ | ಅಡಿಗಳ ತೋರಿಸಿ ಕಾವುದು ಹಿಡಿಹಿಡಿ ಪ ಐದು ವರುಷ ಮಗನೈದಿದ ತಪದಲಿ | ಸಾಧು ಸಂಗನೇ ಹೊರೆಯಿತು | ಸಾಧಿಸಿ ಗರ್ಭದಲಿರೆ ಸಾಧು ಸಂಗ | ಪ್ರ | ಲ್ಹಾದನ ಯಚ್ಚರಿಸಿತು | ಹಾದಿಯೊಳಗ ರಾಹುಗಳ ರಾಯಾಗಾಗಲು | ಸಾಧು ಸಂಗುದ್ಧರಿಸಿತು | ಮೇದಿನಿಪತಿ ಪರೀಕ್ಷಿತಗೇಳು ದಿನದಲ್ಲಿ | ಬೋಧಿಸಿ ಸದ್ಗತಿ ದೋರಿತು ಹಿಡಿಹಿಡಿ 1 ವನಜಭವನ ಲೋಕದಲಿ ಸಾಧು ಸಂಗವು | ಸನಕಾದಿಕರ ಹೊರೆಯಿತು | ವನದಲಿ ಯದುರಾಯಗಾಗಲು ಸತ್ಸಂಗ | ಅನುಭವ ಸುಖ ದೊರೆಯಿತು | ವಿನಯದಿ ಸತ್ಸಂಗ ದೇಹೂತಿ ಮೊದಲಾದ | ಮುನಿಜನರುದ್ಧರಿಸಿತು | ರಣದಲ್ಲಿ ಅರ್ಜುನಗಾಗಲು ಸತ್ಸಂಗ | ಅನುಮಾನ ನೀಗಿಸಿ ಕಾಯಿತು ಹಿಡಿಹಿಡಿ 2 ಅಂದಿಗೆಂದಿಗೆ ಸಿದ್ಧ ಸಾಧಕರೆಲ್ಲಾ | ನಂದನ ಸುಖ ಬಿಡಿಸಿತು | ಹಿಂದಿನ ಕಥೆಗಳಿರತಿರಲಿನ್ನು ಸತ್ಸಂಗ | ಇಂದೆನ್ನ ಧನ್ಯಗೈಸಿತು | ಪಾದ ಪದುಮಸಂಗ | ನಂದನುದ್ಧರಿಸಿತು | ಯಂದೆಂದಿಗಗಲದೆ ಮುಕ್ತಿಗೆ ಹೊಣೆಯಾಗಿ | ಕುಂದದಾ ಸುಖಕೈಯ್ಯ ಗೊಟ್ಟಿತು ಹಿಡಿಹಿಡಿ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಹೋಗುತಿದೆ ಹೊತ್ತು ಬರಿದೆ ವ್ಯರ್ಥವಾಗಿಹರಿಗುರುಗಳ ನೆನೆಯದೆ ಪ. ನರರ ನೂರಮೂವತ್ತೆರಡುಕೋಟಿವರುಷ ದಿವಸವೊಂದೆ ಬೊಮ್ಮಗೆಪರೀಕ್ಷಿಸಲು ಬ್ರಹ್ಮಕಲ್ಪಸಾಸಿರ ಕೋಟಿನರಕದೊಳಗೆ ಬಿದ್ದು ಮರಳಿ ಭವದಿ ಬಂದು1 ಒಂದೊಂದಕೆ ಇಪ್ಪತ್ತೊಂದುಲಕ್ಷ ಯೋನಿಎಂದೆನಿಸುವ ಸ್ವೇದಜ ಉದ್ಬಿಜಬಂದು ಜರಾಯುಜಾಂಡಜ ಕುಲದಿ ಪುಟ್ಟಿನೊಂದೆ ಎಂಬತ್ತುನಾಲ್ಕುಲಕ್ಷ ಯೋನಿಯಲಿ 2 ಮಾಸ ಒಂಭತ್ತು ಮತಿಗೆಟ್ಟು ಗರ್ಭದಿಹೇಸದೆಬಂದು ಜೀವಿಸಿ ಬಳಲಿಮೋಸವನರಿಯದೆ ಮುನ್ನಿನ ಕರ್ಮದಿಘಾಸಿಯಾದೆನೊ ಯೌವನಮದದಿ ಸೊಕ್ಕಿ 3 ಕೆಲಹೊತ್ತು ಚದುರಂಗÀ ಪಗಡೆ ಆಟಗಳಿಂದಕೆಲಹೊತ್ತು ಹಸಿವೆ ನಿದ್ರೆಗಳಿಂದಲಿಕೆಲಹೊತ್ತು ಕಾಕಪೋಕರ ಕತೆಗಳಿಂದಕೆಲಹೊತ್ತು ಪರನಿಂದೆ ಪರವಾರ್ತೆಗಳಿಂದ 4 ಕಾಲವು ಕಡೆಯಾಗಿ ಹರಿ ನಿಮ್ಮನರ್ಚಿಸೆವೇಳೆಯಿಲ್ಲದೆ ಹೋಯ್ತು ಬಂಜೆಯಾಗಿಜಾಲಿಸಿಹೋಗುತಿದೆ ಈ ವಿಧದಿ ಹೊತ್ತು ಬೇಗನೆಪಾಲಿಸಿ ದಯಮಾಡೊ ಸಿರಿಹಯವದನ 5
--------------
ವಾದಿರಾಜ
130-2ತೃತೀಯ ಕೀರ್ತನೆಶ್ರೀ ಹರಿಪಾದಾಬ್ಜರತ ಶ್ರೀ ವಿಷ್ಣು ತೀರ್ಥವನ-ರುಹಅಂಘ್ರಿಯುಗ್ಮದಲಿ ಶರಣಾದೆ ಸತತಪಮಹಾಕರುಣಿಯು ಪರಮಹಂಸ ಕುಲತಿಲಕರುಅಹರ್ನಿಶಿಒದಗುವರು ಶರಣು ಸುಜನರಿಗೆಅ ಪಸ್ಥೂಲಪ್ರವಿವಿಕ್ತಆನಂದ ಭುಕ್ ಅವ್ಯಯನಶೀಲತಮ ಮಂತ್ರ ಶ್ರೀ ಸತ್ಯವರವದನಸಲಿಲೋರುಹದಿಂದ ಶ್ರೀ ವಿಷ್ಣು ತೀರ್ಥರುಬಲುಭಕ್ತಿಯಿಂದಲಿ ಕೊಂಡರುಪದೇಶ 1ಪೂರ್ವಾಶ್ರಮದಲ್ಲಾಚರಿಸಿದ ರೀತಿಯಲಿತತ್ವಪ್ರಕಾಶಿಕಾ ಸುಧಾಭಾಗವತಸರ್ವಸಚ್ಛಾಸ್ತ್ರ ಬೋಧಿಸುತ ಕುಶಾವತಿಯಪವಿತ್ರ ತೀರದಿ ಮಾದನೂರು ಸೇರಿದರು 2ಸುಧಾವನ್ನು ತತ್ವಪ್ರಕಾಶಿಕವನ್ನುಒಂದು ನೂರೆಂಟು ಅವರ್ತಿ ಪಠಿಸುತಮಧ್ವಹೃತ್ಪದ್ಮಸ್ತ ಮಾಧವನ ಅರ್ಚಿಸುತಮಾದನೂರಲ್ಲೇವೆ ವಾಸಮಾಡಿದರು 3ಪೂರ್ವಾಶ್ರಮ ನಾಮ ಜಯತೀರ್ಥಾಂಕದಲ್ಲಿತತ್ವಪ್ರಕಾಶಿಕಾ ಸುಧಾ ಟಿಪ್ಪಣಿಯುಮೂವತ್ತು ಪ್ರಕರಣ ಶ್ರೀಭಾಗವತಸಾರೋ-ದ್ಧಾರವ ಚತುರ್ದಶಿ ಷೋಡಶಿ ಬರೆದಿಹರು 4ತತ್ವಬೋಧÀಕ ಸುಸ್ತೋತ್ರ ಬಿನ್ನಹರೂಪಆಧ್ಯಾತ್ಮ ರಸರಂಜಿನಿ ಅಮೃತ ಫೇಣಭಕ್ತಿಯಲಿ ಪಠಿಸಲುಅಪರೋಕ್ಷಪುರುಷಾರ್ಥಸಾಧನವಾಗಿಹುದನ್ನ ರಚಿಸಿಹರು ಇವರು 5ಹದಿನಾರು ನೂರೆಪ್ಪತೆಂಟು ಶಾಲಿಶಕಯದುಪತಿ ಅಷ್ಟಮಿ ಈಶ್ವರ ಶ್ರಾವಣದಿಜಾತರಾಗಿ ಶ್ರೀಹರಿಪಾದಾಂಬುಜದಲ್ಲಿಸದಾರತರಾದರು ಐವತ್ತು ವರುಷ 6ಕೃತಕೃತ್ಯ ಧನ್ಯ ಮನದಿಂದಲಿ ಈ ಮಹಾನ್ಐದೆಹರಿಪುರ ಲಯವ ಚಿಂತನೆ ಮಾಡಿಹದಿನೇಳ್ ನೂರಿಪ್ಪತ್ತು ಎಂಟು ಶಕ ಮಾಘ ತ್ರ -ಯೋದಶಿ ಕೃಷ್ಣದಲ್ಲಿ ಕೃಷ್ಣನ ಸೇರಿದರು 7ಮತ್ತೊಂದು ಅಂಶದಿ ವೃಂದಾವನದಲ್ಲಿಹರುಭಕ್ತಿಯಿಂ ಸ್ಮರಿಸಿದರೆ ಬಂದು ಸಲಹುವರುಬಹುದೂರ ಧಾರವಾಡ ಕುಶನೂರು ಮತ್ತೆಲ್ಲಬಹುದೂರದವರ ಸಹ ಸೇವಿಪರು ಇವರ 8ಬೃಹತಿಸಹಸ್ರಪ್ರಿಯ ಮಹಿದಾಸ ಜಗದೀಶಬ್ರಹ್ಮಪಿತ ಭಕ್ತಪಾಲಕ ಪರಮಹಂಸಮಹಿಶಿರಿಕಾಂತ `ಶ್ರೀ ಪ್ರಸನ್ನ ಶ್ರೀನಿವಾಸ'ಮಹಾಭಕ್ತ ಶ್ರೀ ವಿಷ್ಣು ತೀರ್ಥಾರ್ಯಶರಣು 9 ಪ
--------------
ಪ್ರಸನ್ನ ಶ್ರೀನಿವಾಸದಾಸರು
139-8ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಮಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಪ್ರಾಣೇಶ ಶ್ರೀಶವಿಠ್ಠಲ ದಾಸರುಗಳಿಗೆಇನ್ನು ಅನೇಕರಿಗೆ ಶಿಷ್ಯತ್ವ ಇತ್ತುಪುನಃ ಶಿಷ್ಯರ ಸಹ ಕ್ಷೇತ್ರಾಟನ ಮಾಡಿಸ್ವರ್ಣಪುರಿಯೈದಿದರು ಸತ್ಯಬೋಧರಲಿ 1ಕರ್ಜಗೀ ದಾಸಪ್ಪಗೆ ಶ್ರೀದಾಂಕಿತ ಕೊಟ್ಟುಶ್ರೀಜಗನ್ನಾಥದಾಸರು ಮುಂದು ಹೊರಟುಕರ್ಜಗೀ ಸಮೀಪದಲಿ ವರದಾತೀರದಲಿತ್ರಿಜಗಖ್ಯಾತ ಧೀರೇಂದ್ರರ ನಮಿಸಿದರು 2ಹರಿಹರ ಕ್ಷೇತ್ರವು ಮದ್ದೂರು ಅಬ್ಬೂರುಪುರುಷೋತ್ತಮ ಬ್ರಹ್ಮಣ್ಯರ ವಂದಿಸಿಶ್ರೀರಂಗಪಟ್ಟಣದಿ ರಂಗನ್ನ ಸೇವಿಸಿಗರಳುಂಡೇಶ್ವರನÀ ದರ್ಶನ ಮಾಡಿದರು 4ಮಂಡಲೇಶ್ವರರೇನು ರಾಜಪ್ರಮುಖರು ಏನುಪಂಡಿತೋತ್ತಮರೇನು ದಿವಾನುಗಳು ಏನುಅಂಡಕೋಟಿನಾಯಕಹರಿಯ ದಾಸರಿವರನ್ನಕೊಂಡಾಡಿ ಮರ್ಯಾದೆ ಮಾಡಿದರು ಎಲ್ಲೂ 5ಉಡುಗೊರೆಗಳು ಕನಕರತ್ನಾಭರಣಗಳುನಡೆಯಬಾರದು ಎಂದು ಪಲ್ಲಕ್ಕಿ ವಾಹನವುಈಡುಂಟೆ ಜಗನ್ನಾಥದಾಸರಿಗೆ ಮೈಸೂರುಮಾಡಿದ ಮರ್ಯಾದೆ ರಂಗನ ಅನುಗ್ರಹವು 6ಮೈಸೂರು ಕೊಂಗು ಕೇರಳ ಚೋಳ ಪಾಂಡ್ಯದೇಶಗಳಿಗೆ ಪೋಗಿಉಡುಪಿಕಂಚಿಶ್ರೀ ಶ್ರೀನಿವಾಸನ ಕ್ಷೇತ್ರ ಘಟಿಕಾಚಲವುಈಶಾನುಗ್ರಹವು ಮರ್ಯಾದೆ ಎಲ್ಲೆಲ್ಲೂ 7ಜಯಜಯ ಜಗತ್ರಾಣ ಮಧ್ವ ನಾಮಾಭಿದಪದ್ಯಾವಳಿಯು ಶ್ರೀಪಾದರಾಜರದುದಿವ್ಯ ಫಲಶ್ರುತಿ ಇದಕೆ ಜಗನ್ನಾಥದಾಸಆರ್ಯರು ಬರೆದಿಹರು ಸಜ್ಜನರು ಪಠಿಸಿ 8ತೀರ್ಥಾಭಿಮಾನಿಗಳ ತದಂತಸ್ಥ ಹರಿರೂಪಕ್ಷೇತ್ರ ವಾರ್ತೆಗಳನ್ನು ತತ್ವ ಬೋಧಿಸುವಕೀರ್ತನೆಗಳ ಮಾಡಿ ಹರಿಗರ್ಪಿಸಿದರುಓದಿದರೆ ಕೇಳಿದರೆ ಇಹಪರದಿ ಸುಖವು 9ಹರಿವಾಯು ಸುರವೃಂದ ಗುರುವೃಂದ ಪ್ರೀತಿಕರಭಾರಿಶುಭಫಲಪ್ರದವು ತತ್ವ ಸುವ್ವಾಲೆಹರಿಕಥಾಮೃತಸಾರ ವರ್ಣಿಸಲಶಕ್ಯವುಉರುಮಹಾಸೌಭಾಗ್ಯಾಕಾಂಕ್ಷಿಗಳು ಓದಿ 10ಹರಿಸಮೀರರು ತಾವೇ ಶ್ರೀಪಾದರಾಜರಲುಶಿರಿವ್ಯಾಸರಾಜ ಶ್ರೀವಾದಿರಾಜರಲುಪುರುಂದರದಾಸರಲು ನಿಂತು ಸ್ವಪ್ನದಿ ಪ್ರೇರಿಸೆಹರಿಕಥಾಮೃತಸಾರ ಬರೆದ ದಾಸಾರ್ಯ 11ಪ್ರಾರಂಭ ಹರಿಕಥಾಮೃತಸಾರ ಸ್ವಾದಿಯಲಿಶಿರಿವ್ಯಾಸವಾದಿರಾಜ ವೇದವೇದ್ಯರ ಮುಂದೆವರಚಿಪ್ಪಗಿರಿಯಲ್ಲಿ ವಿಜಯದಾಸರ ಮತ್ತುಶಿರಿಕೃಷ್ಣ ಸನ್ನಿಧಿಯಲಿ ಸುಶುಭಮಂಗಳವು 12ಗುರುಶ್ರೀಶವಿಠಲ ದಾಸಾರ್ಯರು ಕುಂಟೋಜಿರಾಯರೆಂಬುವ ಸೂರಿಕುಲ ತಿಲಕಾಗ್ರಣಿಯುಹರಿಕಥಾಮೃತಸಾರ ಮಂಗಳವ ಚಿಪ್ಪಗಿರಿಯಲ್ಲಿ ಮಾಡಿಹರು ನಮೋ ನಮೋ ಇವರ್ಗೆ 13ಹರಿಕಥಾಮೃತಸಾರ ಫಲಶ್ರುತಿ ಅನೇಕವುಸೂರಿವರ್ಯರು ಹರಿದಾಸರು ಹಾಡಿಹರುಭರಿತ ರಚನೆಗಳ ಗ್ರಂಥ ಪದ್ಯಂಗಳಬರೆದಿಹರು ಜಗನ್ನಾಥದಾಸಾರ್ಯಸೂರಿ 14ಶ್ರೀ ದಪ್ರಾಣೇಶಾದಿ ದಾಸಶಿಷ್ಯರ ಕೂಡಿಮೋದಮಯ ನರಹರಿ ಹನುಮಗುರುವೃಂದಆರಾಧಿಸಿ ಬರುವವರ ಉದ್ಧರಿಸುತ್ತಮುದದಿಂ ಕುಳಿತರು ಮಾನವೀಯಲ್ಲಿ 15ವರುಷ ಎಂಭತ್ತೆರಡು ತಿಂಗಳು ಒಂದುಆರುದಿನ ಮೂವತ್ತೇಳು ಘಟಿಕ ಅರ್ಧಧರೆಯಲ್ಲಿಹರಿಇಚ್ಛಾ ಸೇವಾರತರಾಗಿತೆರಳಿದರು ಜಗನ್ನಾಥದಾಸ ಹರಿಪುರಕೆ 16ಶಾಲಿಶಕ ಹದಿನೇಳು ನೂರಮೂವತ್ತೊಂದುಶುಕ್ಲ ಸಂವತ್ಸರ ಭಾದ್ರಪದ ಶುದ್ಧಮೂಲಾನಕ್ಷತ್ರ ರವಿವಾರ ನವಮಿಯಲ್ಲಿಮಾಲೋಲ ಸಹ ಜ್ವಲಿಸುತ್ತ ತೆರಳಿದರು 17ಅಮೃತ ಸೈಷಸೇತುಃ ನರಸಿಂಹ ಸ್ತಂಭದಲಿಇರುತಿಹನು ಅಲ್ಲೊಂದು ಅಂಶದಿ ಇಹರುಶ್ರೀ ರಾಘವೇಂದ್ರ ವೃಂದಾವನ ಶ್ರೀ ಸತ್ಯಬೋಧರ ಸಾನ್ನಿಧ್ಯ ಸ್ತಂಭದ ಮುಂದೆ 18&ಟಜquo;ಜ&ಡಿಜquo; ಯೆನಲು ಜಯ ಸಂಸಾರ ಭಯಹರವು&ಟಜquo;ಗ&ಡಿಜquo; ಯೆನಲು ಸರ್ವಪೀಡೆ ಪರಿಹಾರ&ಟಜquo;ನ್ನಾ&ಡಿಜquo; ಯೆನ್ನೆ ಸರ್ವೋತ್ತಮಸ್ವಾಮಿ ಸುಖವೀವ&ಟಜquo;ಥ&ಡಿಜquo; ಎನಲು ಅನ್ನಧನವಿತ್ತು ರಕ್ಷಿಸುವ 19ಜಯಜಯತು ಶ್ರೀ ಹಂಸವಿಧಿ ಮಧ್ವ ವ್ಯಾಸಮುನಿಜಯಜಯತುಪುರಂದರವಿಜಯದಾಸಾರ್ಯಜಯಜಯತು ಗೋಪಾಲದಾಸಾರ್ಯ ಜಯಜಯತುಜಯಜಗನ್ನಾಥ ದಾಸಾರ್ಯ ಜಯಜಯತು 20ವಾರಿಜಾಸನ ಪಿತನು ಪೂರ್ಣಪ್ರಜÕರ ಹೃತ್‍ಸ್ಥಶಿರಿಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥದಾಸಾರ್ಯ ಶರಣು 21- ನವಮ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
ಆರೇನ ಮಾಡುವರು ಆರಿಂದಲೇನಹುದುಪೂರ್ವಜನ್ಮದ ಕರ್ಮವಿಧಿ ಬೆನ್ನಬಿಡದು ಪಐದು ವರುಷದತರಳ ತಾನೆತ್ತ ತಪವೆತ್ತ |ಬೈದು ಮಲತಾಯಿ ಅಡವಿಗೆ ನೂಕಲು ||ಸುಯ್ದು ಕೋಪಾಗ್ನಿಯಲಿ ಪೊರಮಟ್ಟು ಪೋಪಾಗ |ಐದೆ ಬಂಧುಗಳಿದ್ದು ಏನ ಮಾಡಿದರು1ನೃಪರೊಳಗೆಅತಿ ಶ್ರೇಷ್ಠ ಬಲವಂತ ರಘುರಾಮ |ಅಪರಿಮಿತ ಶೂರ ಲಕ್ಷ್ಮಣದೇವರು |ಚಪಲಾಕ್ಷಿ ಸೀತೆಯನು ಖಳನು ಕದ್ದೊಯ್ವಾಗ |ವಿಪರೀತ ವೀರರಿದ್ದೇನ ಮಾಡಿದರು ? 2ಪಾಪಿ ದುಶ್ಯಾಸ ದ್ರೌಪದಿಯ ಸೀರೆಯ ಸೆಳೆದು |ಕೋಪದಿಂ ಮಾನಭಂಗವ ಮಾಡಲು ||ಆಪತ್ತು ಬೆನ್ನಟ್ಟಿ ಹಾ ಕೃಷ್ಣ | - ಎನುವಾಗ |ಭೂಪತಿಗಳೈವರಿದ್ದೇನ ಮಾಡಿದರು ? 3ರಣದೊಳಗೆ ಅಭಿಮನ್ಯು ಚಕ್ರವ್ಯೂಹವ ಪೊಕ್ಕು |ಸೆಣಸಿ ಷಡುರಥದೊಡನೆ ಹೊಯ್ದಾಡಲು ||ಅಣಕವಿಲ್ಲದೆ ಕಾದಿ ಅಸುವಳಿದು ಪೋಪಾಗ |ತ್ರಿಣಯಸಖಿ ಪಾರ್ಥರಿದ್ದೇನ ಮಾಡಿದರು 4ಬ್ರಹ್ಮಶಿರ ಕರಕಟ್ಟಿ ಶಿವನ ಪೀಡಿಸುತಿರಲು |ಸುಮ್ಮನೇ ಜಗವನೆಲ್ಲವ ತಿರುಗಿದ ||ಬೊಮ್ಮಮೂರುತಿಯಾದ ಪುರಂದರವಿಠಲನೇನಮ್ಮಅಳವಲ್ಲ ವಿಧಿಮೀರಿ ಬಾಳುವರೆ5
--------------
ಪುರಂದರದಾಸರು
ಎತ್ತಾರೆ ಹಿಂದಿನ ಮಾತು |ಭಾರತೀಶನಿನ್ನಭೃತ್ಯರು ತಮ್ಮನುವರಿತು | ನೀ ಸಲಹದಿದ್ದರೆ ಹೀಗೆಂದು ಪಮೂಗು ಹಿಡಕೊಂಡು ಕುಳಿತಿದ್ದಿ ನೂರತೊಂಭತ್ತೆಂಟು ಕಲ್ಪ |ಆಗಲೊಬ್ಬರೂ ನಿನ್ನನಾರೆಂದು ಕೇಳಾರೋ ||ಈಗ ದೇವರ ದಯೆಯಿಂದ ಹದಿನಾಲ್ಕು ಲೋಕಕ್ಕೆ ಮಂತ್ರಿ |ಯಾಗಿ ಸಂತೋಷದಿಂದ ಮೇಲು ಮೆರೆವುದಕ್ಕೀ ಗರ್ವವೆಂದು 1ಊರ ಸೇರದಲೆ ಕಂಡ ಗಿಡದ ತೊಪ್ಪಲುಗಳ ತಿಂದು |ಅರಣ್ಯದೊಳು ಬಹುಕಾಲ ಬದುಕಿದ್ದು ಮತ್ತೂ ||ಶ್ರೀರಾಮನಾಳಾಗಿ ಶಿಲೆಯ ಪೊತ್ತುದು ಜಗವೆಲ್ಲಾ ಬಲ್ಲದು ಮುಂದೆ |ವಾರಿಜಾಸನ ಪದವಿಯಾಳೆಂದುಹರಿನುಡಿದುದಕೀಗರ್ವವೆಂದು 2ತಿರಿದುಂಡು ಹನ್ನೆರಡಬ್ದ ವನವಾಸ ಅಜ್ಞಾತವೊಂದು |ವರುಷ ಮತ್ಸ್ಯಾಧಿಪನಾಗಾರದಲಿ ಪಾಕ ಮಾಡಿ ||ತರುಣೀ ಮಾನಭಂಗವ ನೋಡಿ ಸುಮ್ಮನಿದ್ದೆಯಾಗ ಕೃಷ್ಣ |ತರಿದು ದುರ್ಯೋಧನರ ರಾಜ್ಯ ನಿಮಗಿತ್ತುದಕೀ ಗರ್ವವೆಂದು 3ಎಲ್ಲರೂ ಕಂಡದ್ದು ಹುರಳಿ ಗುಗ್ಗರಿ ತಿಂದು ಭಿಕ್ಷಾರ್ಥಿಯಾಗಿ |ಮುಳ್ಳು ಮರದಡಿಯಲ್ಲಿ ಕುಳಿತದ್ದು ಹಿರಿಬದರಿಯಲ್ಲಿ ||ಸುಳ್ಳಲ್ಲ ವೇದವ್ಯಾಸಾನಂತ ವೇದಾರ್ಥ ತಿಳಿಸಿ ಸಕಲ |ಬಲ್ಲವನೆಂದು ಪೆಸರೂ ಕೊಟ್ಟದೆವೇ ಈ ಗರ್ವವೆಂದು 4ಏನೆಂಬುವ ಸರ್ವರಲ್ಲಿ ಹೊಕ್ಕು ಬಳಕೆ ಮಾಡುತಿದ್ದಿ |ಹೀನರು ನಿನಗೀಸು ನೀರ ಹಾಕಂದುಕೇಳಿ||ಪ್ರಾಣೇಶ ವಿಠಲನ್ನ ಭಜಿಸಿ ಪೂರ್ಣ ದಯಕೆ ಪಾತ್ರನಾಗಿ |ಮೀನಾಂಕಾರಿ ಮುಖರಿಂದರ್ಚನೆಗೊಂಬಕ್ಕೀ ಗರ್ವವೆಂದು 5
--------------
ಪ್ರಾಣೇಶದಾಸರು
ಎಂಥ ವಿಕ್ರಮಳೆ ನೀನುಎಂಥ ವಿಕ್ರಮಳೆ ನಿನಗೆಣೆ ಯಾರು ಶ್ರೀ ಲಕ್ಷ್ಮೀ-ಕಾಂತ ರೂಪದಿ ಕೊಂದೆ ಮಧುಕೈಟಭರ ದೇವಿಪಹರಿಕಿವಿಯಲಿ ಅವತರಿಸಿ ಮಧು ಕೈಟಭರ-ವರೆನಿಸಿ ಪಡೆಯೆ ವಿಧಿಯಿಂ ವರವಅರಿದುವಿಷ್ಣುವಿನಿಂದ ಮರಣ ಇವರಿಗೆಂದುಸ್ಮರಣೆಯ ಮಾಡಿದ ದೇವಿ ಪಾದಪಂಕಜಪರಮಮಂಗಳ ವಿಷ್ಣು ಎಬ್ಬಿಸು ಈ ಕ್ಷಣಹರಣವನೆ ಕಾಯಲಿ ಮೂರ್ವರು ನಿಮ್ಮಚರಣವ ನಂಬಿರಲಿ ಎತ್ತಿದಳಾಗಅರಳಿದವು ಕಣ್ಣು ಉಸಿರಾಡಿತು ಮೂಗಿನಲಿ1ಎದ್ದವನಚ್ಯುತ ಬ್ರಹ್ಮ ಏಳನೇ ಶರಧಿಯೊಳೆದ್ದ ಬಡಬನಂದದಲಿ ಮೃತ್ಯುವಗೆದ್ದ ಮೃತ್ಯುವಿನಂತಾಗಲು ಸಿಡಿಲಿನಮುದ್ದೆಯಂದದಿ ಕಣ್ಣ ಕಿಡಿಯುಕ್ಕೆ ಔಡಗಿ-ದೆದ್ದು ಚಕ್ರಕೆ ಕೈಯನಿಕ್ಕುತ ಹೊಯ್ದನುಅದ್ದಲು ಆ ಮಧುವ ಕೈಟಭನನ್ನುಒದ್ದು ಹಾಕಿದ ಶಿರವ ಇಬ್ಬರ ಕೂಡೆಬಿದ್ದರು ಮಹಾಹವ ಮೂರ್ವರ ಬಹು-ಯುದ್ಧವ ಹೇಳುವುದೇನು ಆ ಬಹು ರೌದ್ರವ2ಆದುದು ಪಂಚ ಸಹಸ್ರ ವರುಷ ಯುದ್ಧತೊಯ್ದರು ರಕ್ತದಿ ಕ್ರೋಧದುಬ್ಬಟ್ಟೆಯಿಂದಕಾದು ಕರಗಿದುದುಕವು ವಿಷ್ಣು ಬೇಸರ್ತ-ಮದ ಬೇಡಿರಿ ವರವನು ನೀಬೇಡೆನೆ ಕೊಟ್ಟ-ರಾದರೆ ಚಕ್ರದಿ ತಲೆ ಹರಿಯಲೆಂದುಛೇದಿಸಿದನು ಶಿರವ ಮೇಧಸು ಕೊಬ್ಬುಮೇದಿನಿಯಾದಿರವ ಹೊಗಳಿದ ಬ್ರಹ್ಮಮಾಧವನ ಸ್ತೋತ್ರವ ತಾನೆಯಾದಬೋಧಚಿದಾನಂದ ಬಗಳಾ ಚಾರಿತ್ರವ3
--------------
ಚಿದಾನಂದ ಅವಧೂತರು
ಎಲ್ಲೆಲ್ಲಿ ಭಾಗವತಾಂಶ ಮತ್ತೆಲ್ಲೆಲ್ಲಿ ಹರಿಸನ್ನಿವಾಸಎಲ್ಲೆಲ್ಲಿ ಕರೆದರೆ ದಾಸರಲ್ಲಲ್ಲಿಗೆಬಾಹರಮೇಶಪ.ಆವೆಡೆ ಲಕ್ಷವಂದನೆಯು ಆವಾವೆಡೆಗೆ ಭಕ್ತ ನರ್ತನೆಯುಆವೆಡೆ ಸುಪ್ರದಕ್ಷಿಣೆಯು ಆವಾವೆಡೆ ರಂಗನಾರಾಧನೆಯು 1ಎಂತು ದಂಡಿಗೆ ತಾಳ ಘೋಷ ಎಂತೆಂತು ಕಥಾಮೃತ ವರುಷಎಂತು ತತ್ವಾರ್ಥ ಜಿಜ್ಞಾಸ ಅಂತಂತೆ ಶ್ರೀಕಾಂತನ ಹರುಷ 2ಎಷ್ಟು ತಂತ್ರಸಾರಾರ್ಚನೆಯು ಎಷ್ಟೆಷ್ಟುಶ್ರುತಿಸೂತ್ರಗಳ ಧ್ವನಿಯುಎಷ್ಟು ತಾತ್ಪರ್ಯ ವರ್ಣನೆಯು ಅಷ್ಟಷ್ಟು ಕೃಷ್ಣನಕಂಠ ಮಣಿಯು 3ಏಸುಶ್ರೀಹರಿವ್ರತ ಮೌನ ಏಸೇಸು ಶ್ರೀ ಹರಿರೂಪಧ್ಯಾನಏಸುಸದ್ವ್ಯಾಖ್ಯಾನ ದಾನ ಆಸನ್ನ ಕೈವಲ್ಯನಿದಾನ4ಎನಿತು ಗುರುಪಾದಗಳ ಸ್ಮರಣೆ ಎನಿತೆನಿತು ಮಧ್ವಯತಿಗಳ ಸ್ಮರಣೆಎನಿತೇಕಾದಶಿಯ ಜಾಗರಣೆ ಅನಿತನಿತು ಸುಲಭ ಹರಿಸ್ಮರಣೆ 5ಆರು ಆರೂರು ಮೆಟ್ಟಿಹರು ಮತ್ತಾರೂರರಸರ ಕಟ್ಟಿಹರುಆರೀರ್ವರ ಪೊರಮಟ್ಟಿಹರು ಆರಾರಾಗಲಿ ಕೃಷ್ಣನವರು 6ಹೇಗೆ ಸಜ್ಜನರ ಉಲ್ಲಾಸ ಹಾಗ್ಹಾಗೆ ಮಹಾಮಹಿಮರಭಿಲಾಷಹೇಗೆ ಬುಧರ ಪರಿತೋಷ ಹಾಗಾಗುವುದು ಪ್ರಸನ್ವೆಂಕಟೇಶ 7
--------------
ಪ್ರಸನ್ನವೆಂಕಟದಾಸರು