ಒಟ್ಟು 1307 ಕಡೆಗಳಲ್ಲಿ , 75 ದಾಸರು , 901 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಇವನ ಪಾಲಿಸಿದರೆ ನಿನಗೆ ಪುಣ್ಯ ಪ ಅವನಿಯೊಳೆಂದೆಂದಿಗೂ ನಾನೆ ಧನ್ಯ ಅ.ಪ ನೆಟ್ಟ ಮುಳ್ಳು ಕಿತ್ತು ಬಿಸುಟಂತೆ ಮಾಡು | ಘಟ್ಟಿಯಾಗಿ ಭಕುತನ್ನ ಕಾಪಾಡು1 ಸಾಧನ ಪ್ರಾಣಿಗಳಿರಲಿ ಬೇಕು | ವಾಕು 2 ತ್ರಿಜಗದೊಳಗೆ ನಿ£ಗ್ಯಾರೆಣೆಯೆ | ವಿಜಯವಿಠ್ಠಲ ಕೇಳೆನ್ನ ದೊರೆಯೆ 3
--------------
ವಿಜಯದಾಸ
ಇಷ್ಟು ಮಾಡಿ ಕೈ ಬಿಟ್ಟು ಕೂಡ್ರುವದು ಶಿಷ್ಟರ ನಡತೆಲ್ಲೆಲ್ಲೂ ಗುರುವೇ ಬಲು ಕಷ್ಟದೊಳಗೆ ನಾ ಮುಳುಗಿರುವೆ ನೀ ಕೊಟ್ಟ ಅಭಯದಿಂ ಬದುಕಿರುವೆ ಸಿಟ್ಟು ಮಾತ್ರ ನೀನಾಗ ಬೇಡ ಪೊರೆ ಜಿಷ್ಣುಸಾರಥಿಯ ಪ್ರೀಯ ಮಗುವೆ ಬಾ ಬಾ ಗುರುವೆ ಪ ಇತ್ತರು ಸರಿಯಿಲ್ಲ ಈ ಮಾತು ಹೊರಗೆ ಪೇಳುವವಲ್ಲಾ ನಾ ನಿದ್ದೆ ಪೂರ್ವದಲಿ ಅತಿ ಖುಲ್ಲಾ ಶಿಲೆಯನು ಸುಂದರ ಮೂರ್ತಿಗೈದತೆರ ಬಲು ವಿಧದಲಿ ಸಲಹಿದಿಯಲ್ಲ ಹರಿಬಲ್ಲಾ ಜ್ಞಾನವಿತ್ತಿ ಹರಿಪಾದದಲ್ಲಿ ಅಭಿಮಾನವಿತ್ತಿ ಸುಖವೆಲ್ಲಾ ಬಲುಹೇಯವೆಂದು ತಿಳಿಸಿದಿಯಲ್ಲಾ ಮೇಲ್ವರದಿ ರಂಗನೊಲಿಯುವ ಸೊಲ್ಲಾ ಅಸನ ವಸನಗಳು ಕೊಟ್ಟು ಕೊನೆಗೆ ತುಚ್ಛಿಸುವ ನಿನ್ನ ಗುಣ ತಿಳಿಯಲಿಲ್ಲಾ ಇದು ಥsÀರವಲ್ಲಾ ನಿನ್ನ ಪಾದವೇ ಸಡಗರ ಸಿರಿ ಮೇಲೆ ಸುರಪುರಿ ಜ್ಞಾನನಿಧಿ ಥsÉರಿ ಕಾಶಿ ಗಯಾ ಮಧುರಿ ಹರಿ ಓಂ ಓಂ ಓಂ ನಿನ್ನ ನಾಮ ದುರಿತವೆಂಬೊ ಕರಿ ಕುಲಕೆ ಘನ ಹರಿ ಪರಿ ತಿಳಿದೆನೆಲೊಧೊರಿ ಹರಿ ಓಂ ಓಂ ಓಂ ಇನ್ನಾದರು ಕೋಪವತ್ವರಿ ಕರುಣಿ ಕಣ್ತೆರಿ ಸುತಗೆ ಸುಖಗರಿ ತೋರೋ ನಿನ್ನ ಮಾರಿ ಹರಿ ಓಂ ಓಂ ಓಂ ಎನ್ನಯ ಬಿsÀಷ್ಟಗಳನ್ನು ನೀಡದಿರೆ ನಿನ್ನ ವಿಮಲ ಕೀರ್ತಿಗೆ ಗುರುವೆ ಕುಂದನ್ನು ಬಿಡದೆ ತಿಳಿ ನಾ ತರುವೆ ಸಿಟ್ಟು ಮಾತ್ರ ನೀನಾಗ ಬೇಡ ಪೊರೆ ಜಿಷ್ಣು ಸಾರಥಿಯ ಪ್ರಿಯ ಮಗುವೆ ಬಾ ಬಾ ಗುರುವೆ 1 ಪಂಥವೇ ಹೇ ಮಹಾಕಾಂತ ಪ್ರಿಯ ನಿನ್ನ ಸಂತತಿಯೊಳು ಸೂರಿಗಳೊಡೆಯ ನೀನೆಂತು ಪೊಂದಿದೈ ನಿರ್ಭಿಡಿಯಾ ಇದು ಸಂತರು ಕೇಳಿದರಾಶ್ಚರ್ಯ ವಂತರು ಆಗರೆ ಸಾಕು ಮುಂದೆಯನ್ನಂತರಂಗವೇ ತವನಿಲಯ ಆಗಲಿ ಜೀಯಾ ಕಂದನ ಕಾಯುವದಂತು ಸಹಜ ಸಿರಿ ಹಿಂದಕೆ ಪಾಂಡವನೆಂಭಿರಿಯಾ ಆ ಗಂಧರ್ವನ ಮಗನಾದ ಗಯಾ ತಾ ಬಂದು ಹೋಗಲವನನು ಮೊರೆಯ ಸಿಂಧು ಜಪನ ಸಹ ಲಕ್ಷಿಸದಲೆ ತ್ವರ ತಂದು ಕೊಟ್ಟನವನಿಗೆ ವಿಜಯಾ ಮೇಲ್ಹರಿಯದಯಾ ಇದು ಅಲ್ಲದೆ ಬಹು ಭಕ್ತರು ಜ್ಞಾನಯುಕ್ತರು ಸುಧಿಯ ಭೋಕ್ತರು ನೆನೆದವರ ದು:ಖ ಬಿಡಿಸಿದರು ಸುಧೆಯ ಬಡಿಸಿದರು ಹರಿ ಓಂ ಓಂ ಓಂ ಬಲು ಹಿತದಿ ಶುಭವ ಕೋರಿದರು ತಾಪ ಹೀರಿದರು ವಾಕ್ಯ ಸಾರಿದರು ಹರಿಯ ತೋರಿದರು ಹರಿ ಓಂ ಓಂ ಓಂ ನೀನಾದರೂ ಬಹಳರ ಪೊರದಿ ಈ ಹೀನ ಓರ್ವ ನಿನ್ನಗೆಯರವೆ ಮರಿಯಬ್ಯಾಡ ಕರುಣೆ ಕರವ ಮುಗಿವೆ ಸಿಟ್ಟು ಮಾತ್ರ ನೀನಾಗ ಬೇಡ2 ಪರ ಖರೆ ಗುರುವಿಲ್ಲದ ಗತಿಯನ್ನು ಧರೆತ್ರಯದಿ ತೋರು ತುಸು ನೋಡೋಣ ಗಿರಿಧರಿಯ ಬಿಟ್ಟು ನಿಲ್ಲುವುದೇನು ಗುರುವೆ ತ್ರಿಟಿಯ ಬಿಟ್ಟೊರುಷವಾಗುತದೆ ಹಿರಿಯರಿ ಪೇಳ ವದಿನ್ನೇನು ಹೇ | ಸುರಧೇನು ಗುರುವೆ ಸುಖದ ಖಣಿ ಗುರುತನುಮಣಿ ಮಣಿ ತಿಳಿದೆ ನಾ ಮನದಾಗೆ ಪರಕಿಸಿದೆನ್ನನು ಪೊರೆಯೆ ಯನುತ ಬಾ ಯ್ತೆರೆಯುತ ಮಣಿಸುವೆ ಶಿರನಿನಗೆ ಮೂಜಗದಾಗೆ | ನಿನ್ನಿಂದ ಎನಗೆ ಸದ್ಬುದ್ಧಿ ಯೋಗದಾಸಿದ್ಧಿ ಕಾರ್ಯದಾಸಿದ್ಧಿ ಸ್ವರ್ಗದಾಸಿದ್ಧಿ ಹರಿ ಓಂ ಓಂ ಓಂ ನಿನ್ನಿಂದ ಪಡೆದ ವಿಜ್ಞಾನ ಹರಿಯರಾ ಖೂನಾ ಲೋಕದೊಳು ಮಾನ ಮುಕ್ತಿ ಸೋಪಾನ ಹರಿ ಓಂ ಓಂ ಓಂ ನೀನೇವೆ ಯನಗೆ ಆಭರಣ ಝಗಝಗಿಪ ವಸನ ಶ್ರೀಹರಿಯ ಚರಣ ವಿರಜಾನದಿ ಸ್ನಾನ ಹರಿ ಓಂ ಓಂ ಓಂ ನಿನ್ನೊಮ್ಮೆ ನೆನಸೆ ಪವಮಾನ ಕಾಯ್ವ ಪ್ರತಿದಿನ ಇದಕೆ ಅನುಮಾನ ಇಲ್ಲ ಏನೇನ ಹರಿ ಓಂ ಓಂ ಓಂ ಗಡ ಕೇಳ್ವಡೆಯನೆ ಕಡೆ ನುಡಿಯನ್ನದು ಭಿಡೆಯ ಇಡದೆ ನಾನುಡಿವೆ ಎನ್ನ ಮರೆತರೆ ಮಂಗನು ನೀ ನಿಜವೆ 3
--------------
ಅಸ್ಕಿಹಾಳ ಗೋವಿಂದ
ಈ ಉಪಾಯವು ತೋರಿ ಕೊಡುವೆನು ಪ ಉದಯದಲಿ ಎದ್ದೀಗ ಊರ ವಾರ್ತಿಯ ಬಿಟ್ಟು ಮುದದಿಂದ ವೃಂದಾವನ ಸೇವಿಸಿ ವದನದಲಿ ಶ್ರೀ ಹರಿಯನಾಮ ಗುಣಕಥೆಗಳನು ಪದೋಪದಿಗೆ ಪಾಡಿ ಕೊಂಡಾಡು ನಲಿದಾಡು 1 ಆಮೇಲೆ ದೇವರೆಡೆ ರಂಗವಾಲಿಯನಿಕ್ಕಿ ಕಾಮುಕನಾಗದಲೆ ಸ್ನಾನ ಸಂಧ್ಯಾ ನೇಮ ನಿತ್ಯವ ಮುಗಿಸಿ ದೇವತಾ ಪೂಜೆಗೈದು ಪ್ರೇಮದಿಂದಲಿ ದಾನ ಕರದಲ್ಲಿ ಮಾಡೊ 2 ಮಂಗಳ ಮೂರುತಿಯ ಅಂತರಂಗದಿ ನಿಲಿಸಿ ಶೃಂಗಾರದುಡಿಗೆ ಇಡಿಗಿಯನು ತೊಡಿಸಿ ಮಂಗಳಾರುತಿ ಬೆಳಗಿ ಮನದಲ್ಲಿ ನಲಿನಲಿದು ಕಂಗಳಿಂದಲಿ ನೋಡು ಹರಿಯ ಕೂಡಾಡು 3 ಮೂಲ ಗುಣ ಅವತಾರ ಮಹಿಮೆ ಮಹ ಉನ್ನತ ಲೀಲೆ ವಿನೋದ ಅತಿ ಆಶ್ಚರ್ಯವ ವ್ಯಾಳವ್ಯಾಳೆಗೆ ಪೋಗಿ ಉತ್ತಮ ಜ್ಞಾನಿಗಳಿಂದ ಕೇಳು ಕರ್ಣದಲಿ ಪರಮ ಹರುಷದಲೆ4 ಹರಿಚರಣಕ್ಕೇರಿಸಿದ ಶಿರಿ ತುಲಸಿ ಚಂಪಕ ವರ ಜಾಜಿ ಮಲ್ಲೆ ಮಲ್ಲಿಗೆ ಕ್ಯಾದಿಗೆ ಪರಿಪರಿ ಗಂಧ ಚಂದನ ದಿವ್ಯ ಪರಿಮಳ ಸರಕು ನಾಶಿಕದಲ್ಲಿ ಕೊಳ್ಳು ಸುಖ ಬಾಳು 5 ಅಶಿವರುಣ ಮಧ್ಯ ತ್ರಿವೇಣಿ ವಿಷ್ಣುಪಾದ ಎಸೆÀವ ಕುರುಕ್ಷೇತ್ರ ಅಯೋಧ್ಯ ಮಾಯಾ ವೃಷಭ ಗಿರಿ ಶ್ರೀರಂಗ ಕಂಚಿ ಮೊದಲಾಗ್ಯುಳ್ಳ ಹೆಸರಾದ ಪುಣ್ಯನಿಧಿ ಮಟ್ಟು ದುರಿತವ ಕುಟ್ಟು 6 ಬೇಸರದಲೀಪರಿಚರಿಸಿದರೆ ಜನನಾದಿ ನಾಶನವÀ ಮಾಡಿ ನಾರದವರದನು ದಾಸ ಪುರಂದರಗೆ ವೊಲಿದಂತೆ ವಿಜಯವಿಠ್ಠ ಲೇಶ ವೆಂಕಟ ನಿನಗೆ ಪರಮ ಪದವೀಯನೀವ 7
--------------
ವಿಜಯದಾಸ
ಈ ದೇಹ ಬಲು ಸಾಧನ ಭೂದೇವ ಜನ್ಮದಲಿ ಬಂದ ಕಾರಣ ನಮಗೆ ಪ ಶ್ವಸನ ಮತವೆ ಪೊಂದಿ | ನಸು ಚಿತ್ತದಲಿ ಯಿದ್ದು | ವಿಷಯಂಗಳೆಲ್ಲ ನಿರಾಕರಿಸಿ | ಋಷಿಮಾರ್ಗದಲಿ ನಡೆದು ವಿಹಿತಾರ್ಥದ ಸತ್ಯ | ನಿತ್ಯ ಸಜ್ಜನರ ಒಡಗೂಡು1 ಬಾಹುದ್ವಯದಲಿ ಶಂಖ ಚಕ್ರ ಧರಿಸಿ ಉ | ತ್ಸಾಹದಲಿ ದ್ವಾದಶ ಪುಂಡ್ರಗಳನಿಟ್ಟು | ಸ್ನೇಹಭಾವದಲಿ ಸತತ ಭಕುತಿಯ ಮಾಡು | ಇಹಲೋಕದಲಿ ಇಷ್ಟಾರ್ಥ ಬೇಡುತಲಿರು 2 ಅನಿಷಿದ್ದ ಕರ್ಮಗಳು ಆಚರಿಸಿ ಭೂತದಯ | ಅನುಗಾಲ ಇರಲಿ | ಬಂಧುಗಳ ಕೂಡಾ | ಮನಮೆಚ್ಚು ನಡೆದು ನೀ ಮಂದಮತಿಯನು ಕಳೆದು | ಘನಜ್ಞಾನದಲಿ ನಡೆದು ಗುಣವಂತನಾಗು 3 ಧರ್ಮೋಪದೇಶವನೆ ಮಾಡುತಲಿರು ನೀನು | ಪೇರ್ಮೆಯುಳ್ಳವನಾಗು ಪೃಥವಿಯೊಳಗೆ | ನಿರ್ಮತ್ಸರನಾಗು ವೈಷ್ಣವ ಜನರ ಕೂಡ | ದುರ್ಮತವ ಪೊಂದದಿರು ಅನಂತ ಜನ್ಮಕ್ಕೆ 4 ಕರ್ಣ ತುಲಸೀ ದಳ | ಬೆರಳಲ್ಲಿ ಪವಿತ್ರದುಂಗರವನಿಟ್ಟು | ಪರಮ ವಿರಕುತಿಯಲಿ ದೇಹವನು ದಂಡಿಸುವ | ಹಿರಿದಾಗಿ ಭಾಗವತನಾಗು ವ್ಯಾಕುಲವ ಬಿಡೋ 5 ವದನದಲಿ ಹರಿಸ್ಮರಣೆ ಮರೆಯದಿರು ಕಂಡಕಡೆ | ಉದರಕ್ಕೆ ಪೋಗಿ ಚಾಲ್ವಯದಿರು ಅಧಿಕರ ಆಪೇಕ್ಷಗಳ ಮಾಡದಿರು ಹರಿಯಿತ್ತ ದದು ಭುಂಜಿಸಿ | ಬಂದ ಕಾಲವನು ಹಿಂಗಳಿಯೊ 6 ತೀರ್ಥಯಾತ್ರೆಯ ಚರಿಸು ಕಥಾಶ್ರವಣವನು ಕೇಳು | ಅರ್ಥವನೆ ಬಯಸದಿರು ಬಾಕಿ ಬಸಿದು ವ್ಯರ್ಥ ನಿನ್ನಾಯುಷ್ಯ ಪೋಯಿತೆಂದೆನಿಸದೆ | ಪ್ರಾರ್ಥನೆಯ ಮಾಡು ಪ್ರತಿಕ್ಷಣಕೆ ಶ್ರೀ ಹರಿಚರಣ 7 ಪರಿಯಂತ | ಮಿತ ಆಹಾರ ಮಿತ ನಿದ್ರಿ ಮಿತ ಮಾತನು | ಸತತ ಮೀರದಲಿರು ಶೋಕಕ್ಕೊಳಗಾಗದಿರು | ಸತಿ ಸುತರು ಎಲ್ಲ ಶ್ರೀ ಹರಿಗೆ ಸೇವಕರೆನ್ನು 8 ಜಾಗರ ಗಾಯನ | ಮರಳೆ ಮರಳೆ ಮಂತ್ರ ಪಠನೆಯಿಂದ | ಧರೆಯೊಳಗೆ ಪುಣ್ಯವಂತನಾಗಿ ಸರ್ವದ | ಇರಬೇಕು ಇಹಪರಕೆ ಲೇಸು ಎನಿಸಿಕೊಂಡು9 ಸುಖ ದು:ಖ ಸೈರಿಸುತ ಅರಿಗಳಿಗೆ ಭಯಪಡದೆ | ನಖಶಿಖವಾಗಿ ಆನಂದ ವಿಡಿದೂ | ಮುಖದಲ್ಲಿ ಹರಿನಾಮ ಅಮೃತವೆ ಸುರಿಸುತ್ತ | ಸಖರೊಳಗೆ ಲೋಲಾಡು ಹರಿಗುಣವ ಕೊಂಡಾಡು10 ಸಕಲಾಧಿಷ್ಠಾನದಲಿ ಹರಿಯೆ ಲಕುಮಿ ತತ್ವ | ಕರ ಮುಗಿದು ತಿಳಿದು | ಮುಕುತಿ ಕರದೊಳಗಿಡು ವಿಜಯವಿಠ್ಠಲರೇಯನ | ವಿಕಸಿತ ಮನದಲ್ಲಿ ಭಜಿಸು ಬಲು ವಿಧದಿಂದ11
--------------
ವಿಜಯದಾಸ
ಈ ಮಾತುರ ನೀಯದಿದ್ದರೆ ನಿನ್ನ | ಧಾಮದಲ್ಲಿಗೆ ಪೋಗಿ ಸೇರಿ ಸುಖಿಪದೆಂತೋ ಪ ಹುಟ್ಟಿದಾರಭ್ಯದಿ ಹೊಟ್ಟಿ ಬಟ್ಟಿಯಲಿಂದ | ಕಷ್ಟ ಬಟ್ಟೆನೆಂದು ಹೇಳಲಿಲ್ಲಾ | ಸೃಷ್ಟೇಶ ಕಾಡುವ ಅಷ್ಟ್ಟ ಮಹಾಮದಗಳ ನಷ್ಟಗೊಳಿಸಿ ನಿನ್ನ | ನಿಷ್ಟಿಲಿಡೆಂದೆಲ್ಲದೆ 1 ಸತಿ ಸುತರಿಗೆ ಯೇನೋ | ಗತಿ ಗೋತ್ರವಿಲ್ಲೆಂದು | ಸತತ ನಿನ್ನ ಕೇಳಿ ದಣಿಸಿಲಿಲ್ಲಾ | ಪತಿತ ಪಾವನ ಎನಗೆ ಗತಿಯಾಗುವುದಕೆ | ಸುಪಥವನೆ ತೋರುವ | ಮತಿಕೊಡೆಂದೆನಲ್ಲದೆ2 ಕರುಣಿ ಬೇಡಿಕೊಂಬೆ | ಉರು ಕಾಲದಲಿ ನಿನ್ನ | ಶರಣರ ಸಂಗತಿಲೆನ್ನ ಇಟ್ಟು | ಪರಮ ಶುದ್ಧನ ಮಾಡಿ ವಿಜಯವಿಠ್ಠಲ ನಿನ್ನ | ಚರಣಸೇವೆ ನಿರಂತರ ಕೊಡೆಂದೆನಲ್ಲದೆ3
--------------
ವಿಜಯದಾಸ
ಈ ವೈಷ್ಣವ ಜನುಮ ಸಫಲವಿಂದು | ಈ ಉಡುಪಿ ಯಾತ್ರಿಗಭಿಮುಖವಾದುದು ಪ ಮನೋವಾಕ್ಕಾಯ ಕರ್ಮಗಳು ಬಲುಪರಿ ಇರಲು | ಮನುಜ ಪೋಗುವೆನೆಂದು ಒಮ್ಮೆ | ನೆನೆಸಿದ ಕ್ಷಣದಲ್ಲಿ ನಾಕವಾಗೋವು ಸು ಭವ ವನಧಿಗೆ ಇದೇ ಮೂಲ 1 ದೇಶದೊಳಗುಳ್ಳ ನಾನಾ ಯಾತ್ರೆ ತೀರಥಾ | ಏಸುಬಾರಿ ಪೋಗಿ ಬರಲಿ ಉಂಟೆ | ಈ ಸುಲಭ ಯಾತ್ರೆ ಕಂಡವರಿಗೆ ದೊರಿಯದು | ಲೇಸಾಗಿ ಕೇಳುವದು ಕುತ್ಸಿತ ಭಾವನೆ ಬಿಟ್ಟು 2 ಕೃಷ್ಣರಾಯನ ದರುಶನಕೆ ಮನಮಾಡಿದ | ಶಿಷ್ಟಾಚಾರಗೆ ಲಿಂಗಕಾಯ ಭಂಗಾ | ದಿಟ್ಟ ಮೂರುತಿ ವಿಜಯವಿಠ್ಠಲ ಕರುಣಿ ಜ್ಞಾನ | ಕೊಟ್ಟುಪಾಲಿಸುವ ಬಲು ಮೂರ್ಖರಾದರೂ ಸಿದ್ಧ3
--------------
ವಿಜಯದಾಸ
ಈ ಸೊಬಗು ಇನ್ನಾವ ಕ್ಷೇತ್ರದಲಿ ಕಾಣೆನಾ ಇಲ್ಲಿ | ವಾಸುದೇವ ಮುನಿಯಿದ್ದ ಕಾರಣ ಪ ರಾಜಧಾನಿಯ ನೋಡೆ ಇಂದ್ರಭವನಕೆ ಮೇಲು | ತೇಜದಲಿ ನೋಡೆ ಸೂರ್ಯನದೆ ಸೋಲು || ಪೂಜೆದಲಿ ನೋಡೆ ಸರ್ವ ಧರಣಿಗೆ ಮೇಲು | ಭೋಜನದಲಿ ನೋಡೆ ಅಮೃತಕೆ ಮೇಲು 1 ಉತ್ಸಾಹದಲಿ ನೋಡೆ ನಹಿ ಪ್ರತಿ ನಹಿ ಪ್ರತಿ | ಸತ್ಸಂಗತಿಯ ನೋಡೆ ಬುಧ ಸಂಗತಿ || ಸುಚರಿತೆಯ ನೋಡೆ ಶುದ್ಧ ಸತ್ವದ ನೀತಿ | ಮತ್ಸರ ಮೆರೆದು ನೋಡೆ ಇಲ್ಲೆ ಮುಕುತಿ 2 ಓಲಗದಲಿ ನೋಡೆ ಸತ್ಯಲೋಕಕೆ ಸಮ | ಪೇಳುವ ಕೀರ್ತನೆ ನೋಡು ವೇದಸ್ತೋಮ || ಬಾಲ ಉಡುಪಿಯ ಕೃಷ್ಣ ವಿಜಯವಿಠ್ಠಲರೇಯನ | ತಿಳಿದ ಮಾನವಗೆ ಫಲವು ನಿಷ್ಕಾಮಾ3
--------------
ವಿಜಯದಾಸ
ಈ. ಯತಿವರ್ಯ ನಮನ ಮಧ್ವರಾಯರಿಗೆ ನಮೋ ನಮೋ ಗುರು ಮಧ್ವಸಂತತಿಗೆನಮೋ ನಮೋ ಪ ಸಂತತ ಶುಭವಾದೆನುತ ದಾಸಜನರಿಗೇಕ ಚಿತ್ತದಿಂದವಂದಿಸಿ ಬೇಡುವೆ ಅ.ಪ. ಕುಸುಮನಾಭರ ಸಮ ನಾಲ್ವರುಯೆಂದೆನಿಪಹಸನಾದ ಗುರುಗಳ ಸ್ಮರಿಸುತಾನ್ಯಾಯಸುಧಾಕಾರರಿಗೆ ನಮೋ ನಮೋ 1 ರಘುಕುಲನಂದನ ಸುಬ್ರಮಣ್ಯತೀರ್ಥ ಕರದಿ ಪಾಲಿತಗೆಬಿಡದೆ ಬೋಧಿಸಿದ ತಲೆಗೆ ನಮೋ ನಮೋ 2 ರಘೋತ್ತುಮಾಖ್ಯರ ಕಾರುಣ್ಯಪರೆಂದೆನಿಪರಿಗೆಸೂರಿತಾರೇಶ ಜಾತ ವಿಜೇಂದ್ರತನಯನೆನಿಪಶ್ರೀ ಸುಧೀಂದ್ರ ಪೋಷಿತ ಸದ್ಗುರು ರಾಘವೇಂದ್ರತಾತಗೆನಮೋ ನಮೋ 3 ಗುರುಪುರಂದರ ದಾಸರ ಸುಜಾತರ್ಗೆ ನಮೋ ವೈಕುಂಠದಾಸರಿಗೆ ನಮೋ ನಮೋ ಚನ್ನ ಚಿಕ್ಕಬದರಿನಿಲಯನ್ನ ಕಂಡರ್ಗೆ ಕರುಣಾಪಾತ್ರರುಯೆನಿಪವರದಗುರುಗೋಪಾಲ ಸು ಜಗನ್ನಾಥರಾಯರಿಗೆನಮೋ ನಮೋ 4 ತತ್ವಮಸಿ ವ್ಯಾಸ ಶ್ರೀಧರ ಶ್ರೀಗುರು ಶ್ರೀಪತಿ ಪ್ರಾಣೇಶಗುರು ವಿಜಯ ರಾಮಚಂದ್ರದಾಸರಿಗೆ ನಮೋ ನಮೋಬಾದರಾಯಣಗುರು ವೆಂಕಟ ಶ್ರೀನಿವಾಸ ಜಯಜಯೇಶತಂದೆವರದಗೋಪಾಲವಿಠಲನ ದಾಸರಿಗೆ ನಮೋ ನಮೋ5
--------------
ತಂದೆವರದಗೋಪಾಲವಿಠಲರು
ಈತÀನೀಗ ವಿಜಯ ವಿಠ್ಠಲಾ ಯಾತನೆಯನು ಕಳೆದು ಪೊರೆವಾ ಪ ಕರೆದರೊಂದೆ ನುಡಿಗೆ ಬಂದು ಕರುಣದಿಂದ ಮುಂದೆ ನಿಂದು ಕರವ ಪಿಡಿದು ಅಂದು ಅಭಯ ಕರವ ಪಾಲಿಸಿದ ದಯಾಸಿಂಧು ಪರಿಪರಿಯಿಂದಲಿ ಹಿಂದು ಮುಂದು ದುರಿತದಿಂದ ನೊಂದು ಬಂದು ಮೊರೆ ವಿಚಾರಿಸಿ ಸಾಕಿದನಿಂದು 1 ಅಚ್ಯುತಾನಂತನೆಂಬ ನಾಮಾ ಅಚ್ಚು ಸುಧೆಯೆನಗೆ ನೇಮಾ ನಿಚ್ಚ ಉಣಲಿಕಿತ್ತ ಪ್ರೇಮಾ ಚಚ್ಚಲದಲಿ ಪೂರ್ಣಕಾಮಾ ಹೆಚ್ಚಿ ಬಪ್ಪ ಮದದಾ ಸ್ತೋಮಾ ನುಚ್ಚು ಮಾಡಿ ಬಿಡುವ ಭೀಮಾ ಸುಚ್ಚರಿತ ಸಾರ್ವಭೌಮಾ2 ಮೊದಲೆ ಗುರು ಪುರಂದರದಾಸರಾ ಹೃದಯದೊಳಗೆ ನಿಂದಾ ಶೃಂಗಾರಾ ಉದಧಿಯೋ ಇದು ಬಣ್ಣಿಸಿಬಲ್ಲ್ಲಿರಾ ತ್ರಿದಶರೊಳಗೆ ಕಾಣೆ ಜ್ಞಾನರ ಸದಮಲಾನಂದ ಪೂರ್ಣ ಇಂದಿರಾ ಸದನಾ ಪ್ರತಾಪಗುಣ ಪಾರಾವಾರಾ ಪದೋಪದಿಗೆ ಎನ್ನಯ ಮನೋಹರಾ3
--------------
ವಿಜಯದಾಸ
ಈತನೀಗ ಪ್ರಣವ ಪಾದ್ಯನೊ | ಭೂತ ಪ್ರೇತ ಪ್ರಮಥ ತತಿಗೆ | ನಾಥನೆನಿಪ ನಮಗೆ ನಿರುತ | ವಾಕನೊಳಗೆ ಹರಿಯ ತೋರುವ ಪ ಗಜದನುಜ ವಿನಾಶನೀತ | ಗಜವದನನ ಪೆತ್ತನೀತ | ಗಜನ ಸದದನೀತ ಪೆತ್ತಂ | ಗಜನ ಗೆದ್ದ ಗಂಭೀರನೀತ | ಗಜರಿಪುರಥ ರಮಣನೀತಾ ನಂ | ಗಜಮಾರಗೊಲಿದನೀತ | ಗಜ ವರದನ ಭಕ್ತರಘವೆಂಬೊ | ಗಜಕೆ ಕೇಸರಿಯಾಗಿಪ್ಪನೀತಾ 1 ದ್ವಿಜರಾಜ ಜುಟನೀತಸೋತ್ತಮ | ದ್ವಿಜಗೆ ಪಾಲಿಪನೀತ ಸತತಾ | ದ್ವಿಜ ಪನ್ನಗನ್ನ ಸಮಗುಣನೀತಾ | ದ್ವಿಜ ಕುಲದಲ್ಲಿ ಉದ್ಭವನೀತ | ದ್ವಿಜನ ಶಾಪವ ಕೈಕೊಂಡನೀತ | ದ್ವಿಜ ಭೂಷಣ ಯಾಗದಲಿ ಸೂರ್ಯನ | ಧ್ವಜವ ಕಿತ್ತಿದನೀತ ಕೈಲಾಸ | ದ್ವಿಜವಾಗಿವುಳ್ಳ ಉಗ್ರೇಶನೀತ2 ತ್ರಿಗುಣಾಕಾರ ನೀತ ಮೂರು | ಜಗವದಲ್ಲಣನೀತ ಮೇರು | ನಗಚಾಪನೀತ ನಾರಾಯಣಾಸ್ತ್ರದಿ | ನಗರನುರುಪಿ ಬಿಟ್ಟನೀತ | ಬಗೆಬಗೆಯ ಜೀವಿಗಳಿಗೆ ಬಿಡದೆ | ಅಗಣಿತ ಭೋಗ ಪ್ರದಾತನೀತ | ಮೃಗಲಾಂಛನದ ಮೊಗನಗೆ ಈತ | ನಿಗಮಾಶ್ರವದಗಧಿಕನೀತಾ 3 ಭಸುವ ರಾವಣ ಮಾಗಧ ಕಶ್ಯಪ | ಅಸುರಗಣಕೆ ವರವಿತ್ತನೀತ | ಪಶುವದನ ಪರಮೇಶ್ವರನೀತ | ವಿಷವ ಭಂಜನಭವ ಶಿವನೀತ | ಬಿಸಿಜ ಸಂಭವ ನಂದನನೀತ | ಅಸಮವೀರ ವೈಷ್ಣವನೀತ | ವಸುಧಿಯೊಳಗೆ ಶರಣ ಜನಕೆ | ವಶವಾಗಿಯಿಪ್ಪ ಉಗ್ರೇಶನೀತಾ 4 ಹೇಮಕೂಟಾದ್ರಿ ನಿಲಯನೀತ | ರಾಮದೇವ ವಾಸವಂದ್ಯ | ಸೋಮವರ್ಣನೀತ ಸಕಲ | ಕಾಮಿತಾರ್ಥವ ಕೊಡುವನೀತ | ಯಾಮ ಯಾಮಕೆ ಮನದೊಳು ನಿಂದು | ಕ್ಷೇಮ ಮಾರ್ಗಕ್ಕೆ ಪ್ರೇರಕÀನೀತ | ರಾಮ ವಿಜಯವಿಠ್ಠಲನಂಘ್ರಿ | ನಾಮನೆನಿಸಿ ಕೊಂಡಾಡುವನೀತಾ5
--------------
ವಿಜಯದಾಸ
ಈತನೀಗ ಭಾರತೀಶನು ತನ್ನ ಪ್ರೀತಿಸುವರ | ಮನದ ಮಾತು ಸಲಿಸಿ ಮುಕುತಿ ಈವ ಪ ಶರಧಿ ಜಿಗಿದು ಹಾರಿ ಲಂಕಾಪುರವ ಶೋಧಿಸಿ | ಹರಿಯ ರಾಣಿಗೆ ಕುರುಹನಿತ್ತು ಮರಗಳುರುಹಿ || ಮುರಿದು ಧರೆಗೆ ವರಿಸಿದಾತಾ ಅಪ ಧುರದೊಳಕ್ಷನ ಹರಣವಳಿದು | ಗುರುವರ್ಹತ್ತುಶಿರನ ಜರಿದು || ನಗರ ಉರುಪಿ ಮರಳಿ | ಹರಿಯ ಚರಣಕ್ಕೆರಗಿದಾತಾ 1 ಕುರುನಿಕರ ಕರುಬಿ ಬೊ-| ಬ್ಬಿರಿದು ನಿಂದುರವಣಿಸಿ ಎದುರಾ-|| ದರಿಗಳ ಶಿರ ತರಿದು ತಳೋ-| ದರಿಯ ಹರುಷಬಡಿಸಿದಾತಾ2 ಕರಿಯ ತೆರದಿ ದುಷ್ಟ ಸಂಕರನು | ತಿರುಗಲವನ ಮುರಿದು ಮತ್ತೆ || ಮರುತಮತದ ಬಿರುದನೆತ್ತಿ - |ಪರನೆ ವಿಜಯವಿಠ್ಠಲನೆಂದಾ 3
--------------
ವಿಜಯದಾಸ
ಈಶಾ ಕೈಲಾಸವಾಸಾ | ಕಾಶೀನಗರಾಧೀಶಾ | ಶೇಷಭೂಷಣ | ಗಿರೀಶಾ | ವಿಶ್ವೇಶ ಚಿತ್ತವಾಸಾ ಪ ಶಿವಸಿದ್ಧ ಸಾಧ್ಯ ಸೇವ್ಯಾ | ಭವವನಾಶವ ದಿವ್ಯ | ಕವಿ ಪ್ರಿಯ ಜ್ಞಾನ ದ್ರವ್ಯಾ ಹಾ || ಶಿವ ಓಂ ನಮಃ ಶಿವ | ಸÀವಚರಣ ನೋಡುವ | ಪವಿತ್ರ ಚಿತ್ತವ ಕೊಡು | ಧವಳ ಗಂಗಾಧರನೇ 1 ವ್ರಾತ | ಪತಿತ ಪಾವನ ತಾತ | ಕೃತುವೈ ಪದ್ಮಜಾತ ಹಾ || ಕ್ಷಿತಿಯೊಳು ನೀಲಲೋಹಿತ | ನೀನೇ ಗುರುವೆಂದು | ತುತಿಪ ಗತಿಗೆ ರಘು | ಪತಿನಾಮ ಎನಗೀಯೋ 2 ತ್ರಯನೇತ್ರ ಚಿತ್ರಗಾತ್ರ | ನಯ ನಮಿಪರ ಮಿತ್ರ ಜಯ | ಜಯಾಮರ ಸ್ತೋತ್ರ | ದಯಮಾಡೋ ಪುಣ್ಯ ಪಾತ್ರಾ ಹಾ || ಸಿರಿ | ವಿಜಯವಿಠ್ಠಲನ | ಭಕುತಿಯ ಕೊಡು ಅತಿ | ಶಯದಿ ಪಿನಾಕೀಶಾ 3
--------------
ವಿಜಯದಾಸ
ಉ. ದಾಸವರ್ಯ ಸ್ತುತಿ ವಿಜಯದಾಸರು ಬಾಲೆಯರ ಪಾಲಿಸೈ ದೀನಜನ ಪಾಲ ವಿಜಯಾಖ್ಯ ರಾಯಾ ಪ ಅಚ್ಚರವಲ್ಲ ಜೀಯಾ ಅ.ಪ. ಘನ ವ್ಯಾಧಿಯಂ ಪೀಡಿತಳಾಗಿ ಸೇವಿಸೆ ನೀನಾಗಿ ವಲಿದು ಅಭಯವನಿತ್ತು ನಿನ್ನ ದಾಸನೆಂದುಪದೇಶಿಶಿ ಜರಿದು ದೂರ ನೋಡುವರೇ ಪರಮ ಕರುಣಾಶರಧಿ ನಿನ್ನ ದ್ವಂದ್ವಗಳಿಗಭಿವಂದಿಪೆ 1 ಅನ್ಯಳಲ್ಲವೋ ರಾಯಾ ನಿನ್ನ ಪರಮ ಪ್ರೀತ್ಯಾಸ್ಪದನ ತನುಜಳೋ ಸದ್ಭಕುತಿಯುಳ್ಳವಳು ಸಲ್ಲೇಲ ಸಂಪನ್ನೆ ಸತ್ಯಭೇದ ಜ್ಞಾನ ಸಚ್ಚಿತ್ತಪುರಿರಾಜನಿಂದ ಪಡೆದು ನಿನಗೆ ಸರಿಯಾಗಿ ತೋರಿದ ಬಳಿಕ 2 ಬಹೂಪರಿಯಿಂದ ಬೇಡುವೆನೊ ತವಚರಣ ನಂಬದ ಶರಣೆಯೆಂತೆಂದು ಕಣ್ತೆರೆದು ಕರುಣಿಸೊನಿನ್ನ ಶರಣರೊಳು ಶರಣಾಧಮನಯ್ಯ ಉದಾಶಿಸದೆ ಸಲಹು ತಂದೆವರದಗೋಪಾಲವಿಠ್ಠಲನ ಪ್ರೀಯಾ 3
--------------
ತಂದೆವರದಗೋಪಾಲವಿಠಲರು
ಉದಯರಾಗ ಜನಿಸಲಾರೆನು ಜಗದೊಳಗೆ ಹರಿಯೆ ಪ ಕನಸಿನೊಳು ನೆನೆಯೆ ಕಂಪನವಾಗುತಿದೆ ಮನಕೆ ಅ.ಪ ವಾರಿಮಂಡಲ ವೃಷ್ಟಿಧಾರೆ ಧಾರುಣಿ ಜನಕ ದ್ವಾರದಿಂ ಸರಿದುಪೋಗಿ-ಸಾಗಿ ಜಾರಿ ಜನನೀ ಜಠರ ನಾರುವ ದುರ್ಗಂಧ ಸೇರಿ ಬೊಬ್ಬುಳಿಯ ತೆರದಿ-ಭರದಿ ವಾರಿವಾರಕೆ ಬೆಳೆದು ತಾರಿತಗಲಿ ಬಳಲಿ ಶರೀರವನ್ನೆ ಪೊತ್ತು-ತೆತ್ತು ಖಾರ ಕಟು ಲವಣಾದಿ ಘೋರತರ ಮಹಕ್ಲೇಶ ವಾರಿಧಿಯೊಳಗೆ ಮುಳುಗಿ ಮರುಗಿ ಸೊರಗಿ 1 ಲೇಶಾವಕಾಶವಿಲ್ಲದ ದೇಶದೊಳು ಸನ್ನಿ ವಾಸ ಉಲ್ಬಣದೊಳಿದ್ದು-ಕುದ್ದು ಘಾಸಿಯಲ್ಲಿ ಪರಿತಾಪ ಸೂಸಲು ಹಾಹಾಯೆಂಬ ಘೋಷಧ್ವನಿಯಿಂದ ಬೆದರಿ-ಅದರಿ ರೋಷವಾಗಿದ್ದ ಕ್ರಿಮಿರಾಶಿ ಮುಖ ಕಾಟದಿಂ ಏಸು ಬಗೆಯಿಂದ ನೊಂದು ಬೆಂದು ಶ್ವಾಸ ಬಿಡುವುದಕೆ ವ್ಯತ್ಯಾಸವಾಹುದು ಮುಂದೆ ಮೋಸಗೊಂಡು ಮತಿಗೆಟ್ಟು ಬೇಸರಿಕೆ ಅಕಟಕಟ 2 ಜಾನು ಮಧ್ಯದಲಿ ಶಿರಗೋಣು ತೂರಿಸಿಕೊಂಡು ಮಾಣದಲೆ ಬಿಕ್ಕಿ ಬಿಕ್ಕಿ-ಸಿಕ್ಕಿ ಏನೆಂಬೆ ಮಸೆದುಕ್ಕಿನ ಬಾಣ ಪೆಟ್ಟಿನ ಸಮ- ಬೇನೆಯಿಂದಧಿಕವಾಗೆ ಮೈಗೆ ಮೇಣು ಕೈಕಾಲುಗಳು ಕಾಣಿಕಾ ಕಾಲವಗ- ಲಾನು ಚರಿಸದಾದೆನೊ ಇನ್ನೇನೊ ಗಾಣ ತಿರುಗಿದಂತೆ ಗೇಣು ಬೈಲೊಳಗೆ ಈ ಆ-ನನ ಮೇಲಡಿಯಾಗಿ ಬಂದೆ-ನೊಂದೆ 3 ಸೂತಿಕಾಮರುತ ಬೀಸಿದಾತುರಕೆ ಬೆಸಸುವ ಯಾತನೆಗೆ ಕಾಣೆ ಲೆಖ್ಖ-ದು:ಖ ಗಾತುರವು ಕಿರಿದಾಗಿ ಪೋತಭಾವವ ವಹಿಸೆ ಭೂತಳಕೆ ಉಗ್ಗಿಬಿದ್ದು-ಎದ್ದು ಶೀತೋಷ್ಣ ಮಲರೋಗ ಭೀತಿ ಲಾಲನೆಯಿಂದ ಮಾತೆಯ ಮೊಲಿಯನುಂಡು-ಉಂಡು ಆ ತರುವಾಯ ಉಪನೀತ ವಿವಹಗಳಲ್ಲಿ ವ್ರಾತ ಕೈಕೊಂಡೆನಯ್ಯ ಜೀಯ 4 ಯೌವನದಿ ಚತುರ್ವಿಂಶತಿ ತತ್ವಜ್ಞಾನವ ಜರಿದು ಯುವತಿಯರ ರೂಪಲಾವಣ್ಯ ನೋಡಿ-ಬಾಡಿ ನೆವನೆವದಿ ಭೋಗಗಳ ಸವಿ ಸವಿದಿಪೇಕ್ಷಿಸಿ ಭವನ ಭವನವÀನು ಪೊಕ್ಕು -ಸೊಕ್ಕು ಅವರಿವರ ಜಾತಿಯೆನ್ನದೆ ಮಾತುಗಳನಾಡಿ ದಿವರಾತ್ರಿಯಲ್ಲಿ ಹೊರಳಿ-ಉರುಳಿ ಕವಿಜನರ ಧಿಕ್ಕರಿಸಿ ಕೋಣನಂತೆ ಸದಾ ಕಾಲ ಕಳೆದೆ ಉಳಿದೆ 5 ಹೆಂಡ್ರು ಮಕ್ಕಳಿಗಾಗಿ ಎನ್ನ ಹಿತಮನೆ ಮರೆದು ಕಂಡಕಂಡವರ ಕಾಡಿ-ಬೇಡಿ ಉಂಡುಟ್ಟು ಸುಖಪಟ್ಟು ಪಾರತ್ರಯವ ಜರೆದು ಕೊಂಡೆಯಲಿ ನಿಪುಣನಾಗಿ ತೂಗಿ ಮಂಡೆಯನು ಬಲಿತ ಪಶುವಿನಂತೆ ಮದವೇರಿ ಚಂಡ ವೃತ್ತಿಯಲಿ ನಡೆದು-ನುಡಿದು ಹಿಂಡು ಮಾತೇನು ಈ ಜರೆನರೇ ಬಂದೆನ್ನ ಲಂಡತನ ಪೋಗದಕಟ್ಟ-ಉಂಬೆ ವಿಕಟ 6 ನಾನಾ ಯೋನಿಗಳಲ್ಲಿ ಬರಲಾರೆ ಬರಲಾರೆ ನಾನು ಪೇಳುವುದು ಏನೋ-ಇನ್ನೇನೊ ನೀ ನೋಡಿದರೆ ಅನ್ಯ ಕಾವ ದೈವರ ಕಾಣೆ ಮಾನಸದೊಳಗೆ ಒಮ್ಮೆ-ಇಮ್ಮೆ ದೀನರಕ್ಷಕ ಬಿರುದು ಅನವರತ ನಿನ್ನದು ಎಣಿಸದಿರು ಎನ್ನ ದೋಷ ಲೇಶ ಶ್ರೀನಾಥ ವಿಜಯವಿಠ್ಠಲರೇಯ ನೀನೊಲಿದು ಧ್ಯಾನದಲ್ಲಿ ಬಾರೊ ನಿಜ ಮೂರುತಿಯ ತೋರೊ 7
--------------
ವಿಜಯದಾಸ
ಉದರ ಪೂರ್ತಿಯ ಕೊಡದಿರು ಉದಧಿಶಯನ ಪ ಮುದದಿ ನಿನ್ನನು ನೆನೆದು ಮಲಗುವೆನೊ ಸುಖದಿ ಅ.ಪ ಮುದದಿ ನಿನ್ನ ಚರಣವನು ಸ್ಮರಿಸುವುದು | ಪರಿಹಾರವು ಬಹು ಗರ್ವ ಹೆಚ್ಚುವುದು ಎನಗೆ | ಅರವಿಂದನಾಭ ಹರಿ ವರವಿದೆ ನಿನ್ನ ಕೇಳ್ವೆ | ಪರಿಹಾಸ್ಯ ನುಡಿಯಲ್ಲ ಪರಮ ಪಾವನಗೆ 1 ತನುಮನವು ನಿನ್ನ ವಿಷಯಕ್ಕೆರಗಲಿ | ಅನುಮಾನವಿದ್ದ ಪರಿಯೆಲ್ಲ ತೊಲಗಿ || ವನಜಸಂಭವನೈಯ್ಯ ವೈಕುಂಠಪತಿ ನಿನಗೆ | ಅನವರತ ದೊರೆ ಎಂಬೊ | ಘನತೆ ತಪ್ಪದೆ ಇರಲಿ2 ಗಜಮದದಿ ಕಂಗೆಟ್ಟ ಪರಿಯನ್ನ ಮಾಡದೇ | ಅಜಮಿಳಗೆ ಒಲಿದಂತೆ ಎನಗೆ ವೊಲಿದೂ || ಸುಜನ ರಕ್ಷಕನೆಂಬೊ ಬಿರುದು ಬೇಕಾದರೆ | ನಿಜವಾಗಿ ದಯಮಾಡೊ ವಿಜಯವಿಠ್ಠಲನೇ3
--------------
ವಿಜಯದಾಸ