ಒಟ್ಟು 186 ಕಡೆಗಳಲ್ಲಿ , 48 ದಾಸರು , 169 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಭೃಂಗ ಕುಂತಳೆಯರು ಮುಯ್ಯ ತಂದಾರೆಂದು ಪ. ಅಂದದ ವಸ್ತವಧರಿಸಿ ದೂತೆ ಚಂದದ ಸೀರೆ ಶೃಂಗರಿಸಿಇಂದಿರೇಶಗೆ ನಮಸ್ಕರಿಸಿತಾನು ಬಂದಾಳೆ ದ್ರೌಪತಿ ಸ್ಮರಿಸಿ 1 ಬಾಗಿಲಿಗೆ ಬಂದಾಳು ನೋಡಿದ್ವಾರಪಾಲಕಗೆ ಉಚಿತವ ಹೇಳಿಹೊನ್ನುಂಗುರಆತಗೆ ನೀಡಿಒಳಗೆ ಪೋದಳು ಹರಿಯ ಕೊಂಡಾಡಿ2 ವಂದಿಸಿ ಯದುನಾಥನಢಿಗೆಮಂದಹಾಸವ ಬೀರಿದೂತೆಯಡೆಗೆಬಂದಾರೈವರೆಂಬೊ ನುಡಿಗೆಆನಂದ ಬಟ್ಟ ಕೃಷ್ಣ ಬ್ಯಾಗನೆ3 ವೇಗದಿ ರುಕ್ಮಿಣಿಗೆಬಾಗಿ ಸುದ್ದಿ ಹೇಳಿ ಮುಯ್ಯದ ಬಗಿ ಬಗಿನಾಗವೇಣಿಯು ಹರುಷಾಗಿಕರೆಯ ಬರತೇವಂತ್ಹೇಳೆ ಹೋಗಿ4 ಪುತ್ಥಳಿ ಮನಕೆ ತಾರೆಂದು 5 ಗುರ್ತು ಹೇಳುವೆ ಕೇಳೊ ದೊರೆಯೆ ಕೃಷ್ಣಚರ್ಚೆ ಮಾತಿನ ಚಮತ್ಕಾರಿಯೆಶೃತ್ಯರ್ಥದಾ ಮಳೆಗರಿಯೆಪ್ರತಿಯುತ್ತರವಕೊಡೋದು ಮರಿಯೆ 6 ಕೋಕಿಲ ಸ್ವರದಂತೆ ಅಳಕು ಹರುಷಾಗಿರಾಮೇಶಗ್ಹಾಕಿ ಮಲಕುಆಗಮಾ ತರತಾಳೆ ಮಲಕುಎಲ್ಲಾ ನಾರಿಯರು ಅಕೆಗೆ ಅಳಕು 7
--------------
ಗಲಗಲಿಅವ್ವನವರು
ಮಂಗಳಂ ಮಧುಕೈಟ ಭಾರಿಗೇ - ಜಯಮಂಗಳ ಯದುಕುಲಾಂಬುಧಿ ಚಂದ್ರಗೇ ಪ ಗೋಕುಲದೊಳು ಪುಟ್ಟಿ ಗೋಗಣಂಗಳ ಕಾಯ್ದುರಾಕೇಂದು ವದನೇರ ಕೂಡಿದ ಸರಸಿಗೇ 1 ಪಾಲನ ಲಯ | ಒಟ್ಟಾಗಿ ಮಾಳ್ಪಂಥಕೃಷ್ಣೆ ಗಕ್ಷಯಫಲ ಕೊಟ್ಟಂಥ ಹರಿಗೇ2 ಬೃಹತೀ ಸಹಸ್ರನ್ನ ಬಹುವಾಗಿ ಉಂಡಗೇಮಹ ಋಷಿಗ್ವರವಿತ್ತ | ಶ್ರೀ ಉಪೇಂದ್ರಗೆ 3 ಲಕ್ಕುಮಿಯನು ತಾನು | ಲೆಕ್ಕಿಸದಲೆ ವೇಗಪೊಕ್ಕುಳಿಂದಲಿ ಅಜನ | ಪಡೆದ ಶ್ರೀಹರಿಗೇ 4 ಗರುಡ ಗಮನನಾಗಿ | ಕರಿಯ ಕಾಯಲಿ ಬಂದುಹರುಷವ ಪಡಿಸೀದ | ಗುರು ಗೋವಿಂದ ವಿಠಲಗೇ 5
--------------
ಗುರುಗೋವಿಂದವಿಠಲರು
ಮದ್ದಾನೆ ಗತಿ ಸಖಿ ಬಾರಮ್ಮಾ|| ಮುದ್ದು ಮೊಗದ ರಂಗನ ತಂದು ತೋರಮ್ಮಾ 1 ಇಂದು ಎನ್ನ ಚಿತ್ತ ಸ್ವಸ್ಥವಾಗದೇ| ಒಂದುಗಳಿಗಿ ಕ್ರಮಣವಾಗಿ ಹೋಗದೇ 2 ಬಿಗಿದವೇನೆ ಮಾಯಿ ಫಣಿಗಳು| ವೇಗದಿಂದ ಬರುತಿದೇ ತಂಗಾಳಿಗಳು 3 ಮಂದರಧರನು ಯಾಕೆ ಬಾರನೇ| ಚಂದ್ರ ಕಿರಣ ಝಳಕ ನಿಲ್ಲಲಾರೆನೇ 4 ಮೊದಲೆನ್ನ ಬಿನ್ನಹವ ಹೋಗಿ ನೀನು ಹೇಳಮ್ಮಾ 5 ಮೊದಲೆನ್ನ ಕೈಯ್ಯಾ ತಾ ಹಿಡುವರೇ| ತದನಂತರದಿ ತಪ್ಪ ನೋಡುವರೇ 6 ಆರಿಸಿಬ್ಯಾಡೆಂದು ಹೇಳಿ ಕುಂದೆನ್ನಾ| ಕರೆತಾರೆ ಮಹಿಪತಿ ಸುತ ಜೀವನಾ 7
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಮಧ್ವಮುನಿಯೆ ನಿನಗೆ ಎದ್ದು ಕರಗಳ ಮುಗಿವೆ | ಬುದ್ಧಿ ಪಾಲಿಸಿ ಎನ್ನ ಉದ್ಧರಿಸೊ ಗುರುವೇ ಪ ದುರುಳ ಪಾಮರ ಸಂಕರನೆಂಬುವನು | ದುರಾಚಾರಗಳು ಧರಿಯೊಳಗೆ ಕುಭಾಷ್ಯಗಳ ವ್ಯಾಪಿಸೀ | ಇರಲು ಉತ್ತಮ ಸಂಪ್ರದಾಯದಲ್ಲಿಪ್ಪ | ವರರು ಇರದಂತಾಗೆ ಸುಜನರು ಕೂಗೆ 1 ಮಲ್ಲ ಮಾಯಿಗಳ ಹಲ್ಲು ಮುರಿದ ಅಪ್ರತಿಮಲ್ಲ | ಇಳಿಯೊಳಗೆ ಶುದ್ದ ಭಾಷ್ಯ ರಚಿಸಿ ಲೇಸಾ | ಕಿಲಕಿಲನೆ ನಗುತ ಮೊಗ ಕಳೆವೇರುತಾ ವೇಗ | ನಳಿನನಾಭನ ಚರಣ ಮನದಲಿಟ್ಟ ಪರಣಾ 2 ಇಪ್ಪತ್ತು ಒಂದು ದುರ್ಮತದ ವರ ಕುವಾಕು | ಸರ್ಪನನ್ ಗರುಡ ಶೀಳಿದಂತೆ ಕೇಳಿ | ಇಪ್ಪ ಬಲು ಅಜ್ಞಾನ ಓಡಿಸಿ ಸುಜ್ಞಾನ | ತಪ್ಪದಲೆಗರದು ಸಂತರನೆಲ್ಲ ಪೊರೆದು 3 ಮಿಥ್ಯ | ಪಂಚವಿರಹಿತ ಹರಿ ಪರನೆಂದು ಸಾರೀ | ಚಂಚಲವ ಪರಿಹರಿಸಿ ಮರುತ ಮತ ಉದ್ಧರಿಸಿ | ಕಾಯ ಸುಖ ತೀರ್ಥರಾಯಾ4 ಸುರರಾದಿಗಳ ಮಣಿಯ ಆರಾರು ನಿನಗೆಣೆಯೇ | ಅರಸಿದರೆ ಕಾಣೆ ಹರಿ ಪದಗಳಾ ಆಣೆ | ಶಿರಿ ವಿಜಯವಿಠ್ಠಲನ್ನ ಭಜಿಸುವ ಯತಿರನ್ನ | ಶರಣಪಾಲಕ ಪೂರ್ಣಪ್ರಜ್ಞ ಗುಣಪೂರ್ಣ 5
--------------
ವಿಜಯದಾಸ
ಮನಕಧೀಶನೆನಿಪ ಗುರುವರಾ | ನಿನ್ನ ಪಾದನೆನೆವೆ ಕಳೆಯೊ ಮಲಿನ ಸತ್ವರಾ ಪ ಅನಿಲ ಸುತನು ಎನಿಸಿ ನೀನು | ಅನಿಲ ನೆನಿಸಿ ಪಾಪತೂಲಘನ ಸುಮೇರುವನ್ನೇ ದಹಿಸೊ | ಅನಲ ಈಕ್ಷಣಾನೆ ಶಿವನೆ ಅ.ಪ. ಅನುದಿನ ಪಾದ | ವನಜ ಭಜಿಪ ಶರಣರೀಗೆತೃಣವು ತೆರನು ಪಾಪ ನಿ5iÀು | ಎಣಿಸಿ ಪೊರೆವುದುಚಿತ5É್ಲ 1 ಗೌರಿಧವನೆ ವಿಷಯ ಮೋಹನ | ಕಳೆದು ವೇಗಸೂರಿ ಜನರ ಸಂಗ ಮಾಡುವ ||ಸಾರ ಮನವವಿತ್ತು ಸಲಹೊ | ಕ್ರೂರಿ ಜನರ ದೂರಮಾಡೊಘೋರಾಘೋರ ರೂಪಿ ಹರನೆ | ಮಾರಪಿತನ ಸಖನೆ ರುದ್ರ 2 ಶುಕ ವಿಭೂತಿ 3
--------------
ಗುರುಗೋವಿಂದವಿಠಲರು
ಮನವೆ ಪೇಳುವೆ ಪ ಅಂತರಂಗದಲಿ ಚಿಂತಿಪರಘಶುಲಧ್ವಾಂತ ದಿವಾಕರನಾ ಶ್ರೀವರನಾ ಅ.ಪ ಎಂತು ಸುಕೃತವೂ ಸಿರಿಕಾಂತನುಯನ್ನೊಳು ನಿಂತಿರುವನು ಎನುತ ಪರ್ವತ ಸಂತೋಷದಲಿರುವಂತೆ ತೋರುವದು ಸು- ಕಾಂತ ಶಿಖರದಿಂದ ಛಂದ 1 ವರಶಿಲೆಯೊಳಿರುವ ಹರಿಯ ಶೇವಿಸಲು ಹರುಷದಿ ಸುರನಿಕರ ಭಾಸುರ ತರುಲತೆರೂಪದಿ ಇರುತಿಹರೆನ್ನುತ ಮೆರೆವನು ಗಿರಿರಾಜಾ ಸುತೇಜಾ2 ಗಿರಿನಾಥಾ ತೋರುತ ಅರಳಿದ ಪೂವಿನ ಪರಿಮಳ ಬೀರುವ ಸುರಚಿರ ತರುವ್ರಾತಾ ಶೋಭಿತ3 ಪವನ ಶೇವಿತನು ಭುವನೋದರ ತಾ ದಿವಿಜರಿಂದ ಸಹಿತ ಸೇವಿತ ಅವನಿಧರನು ಮಾಧವನ ತೆರದಿ ತೋ ರು ವೆನೆಂಬುಗರ್ವಾದಿಂದಿರುವ 4 ಸಿದ್ಧಚಾರಣ ತಪೋವೃದ್ಧರಿದೇ ಸ್ಥಳ ಸಿದ್ಧಿದಾಯಕವೆಂದೂ ಬಂದೂ ಪದ್ಮಾಕ್ಷನ ಪದಪದ್ಮವ ಧ್ಯಾನಿಸು- ತಿದ್ದರು ಗುಹೆಗಳಲಿ ಪೂರ್ವದಲಿ5 ಮುನಿ ಮಾರ್ಕಾಂಡೇಯನು ಬಹುದಿನದಲಿ ಘನ ತಪವಾಚರಿಸಿ ಸೇವಿಸಿ ವನಜನಾಭನ ಪದವನಜ ಮಧುಪ ನೆಂ ದೆನಿಸುತಲಿರೆ ಗುಹದಿ ತಪೋನಿಧಿ6 ಗಿರಿಯ ಬಲದಿ ಅಹೋಬಲ ನರಸಿಂಹನ ದರ್ಶನವನು ಕೊಳುತ ನಿರುತ ಇರುತಿರಲೊಂದಿನ ಬರಲಾಷಾಢದ ಹರಿವಾಸರ ವೃತವಾ ಚರಿಸುವ 7 ದ್ವಾದಶಿ ಸಾಧನೆ ಬರಲು ಪ್ರತಿದಿನದಿ ಶ್ರೀದನ ದರ್ಶನದಾ ನೇಮದ ಸಾಧನೆ ವಿಷಯದಿ ಯೋಚಿಸುತಿರೆ ಹರಿ ಮೋದದಿ ಮುನಿಗೊಲಿದಾ ಸೂಚಿಸಿದಾ 8 ಅರುಣೋದಯದಲಿ ಸುರಗಂಗೆಯು ತಾ ವರ ಪುಷ್ಕರಣಿಯೊಳು ಬರುವಳು ತರುರೂಪದಿ ನಾ ಬರುವೆನು ಬಿಡದಿರು ಮರುದಿನದಾ ಚರಣೆ ಪಾರಣೆ9 ಎಂತು ಕರುಣವೊ ನಿರಂತರ ಭಜಿಪರ ಚಿಂತಿತ ಫಲವೀವ ಕೇಶವ ಇಂತು ಹರಿಯ ಗುಣ ಚಿಂತಿಸುತಿರಲು ನಿ ಶಾಂತದಿ ಸರೋವರದಿ ವೇಗದಿ10 ಭಾಗೀರಥಿ ಜಲದಾಗಮ ವೀಕ್ಷಿಸಿ ರಾಗದಿ ವಂದಿಸಿದ ತುತಿಸಿದ ಯೋಗಿವರನುತ ಸ್ನಾನವಮಾಡಿ ಬರುವಾಗಲೆ ಧ್ಯಾನಿಸಿದ ಹರಿಪದ11 ಆ ತರುವಾಯದಿ ಪಾರಿಜಾತ ತರು ವ್ರಾತವ ನೋಡಿದನು ವಂದಿಸಿದನು ಈತನೆ ನರಮೃಗನಾಥನೆನುತ ಮುನಿ ಪ್ರಾತ:ಪಾರಣವ ಮಾಡಿದ ಜವ12 ಮೀಸಲು ಮನದಲಿ ಶೇಷಶಯನಗಾ- ವಾಸಗಿರಿಯ ಸೇವಾ ಮಾಡುವ ಭೂಸುರ ಗಣದಭಿಲಾಷೆಗಳನು ಪೂರೈಸಿ ಪೊರೆವನೀತಾ ಪ್ರಖ್ಯಾತಾ 13 ಶ್ರೀಯುತ ಮಾರ್ಕಾಂಡೇಯರ ಚರಿತೆಯ ಗಾಯನ ಫಲವಿದನು ಪೇಳುವೆನು ಶ್ರೇಯಸ್ಸಾದನ ಕಾಯದಿ ಬಲದೀ- ಮಾನವ 14 ಸುರತರು ಕಾರ್ಪರ ಶಿರಿ ನರಸಿಂಹನೆ ಈತ ಎನ್ನುತ ನಿರುತ ಅನಂತನ ಗಿರಿಯ ಮಹಿಮೆಯನು ಸ್ಮರಿಸುವ ನರಧನ್ಯಾ ಸನ್ಮಾನ್ಯ 15
--------------
ಕಾರ್ಪರ ನರಹರಿದಾಸರು
ಮಾಧವನ ಚರಣಾರವಿಂದೆ ಪಾದೆ ಪ ಎದ್ದೋಡಿ ತಿರುಗಿ ನೋಡದೆ ಹೋಹವು ಸದ್ಬಕ್ತಿಯಿಂದ ನಿನ್ನನು ನೋಡಬೇಕೆನುತ ಉದ್ಯುಕ್ತವಾಗೆ ಬ್ರಹ್ಮಹತ್ಯ ಪರಿಹಾರವೊ 1 ಬಂದು ಹರುಷದಲಿ ಕಣ್ಣಲಿ ಕಂಡು ಶಿರವಾಗಿ ವಂದನೆಯ ಮಾಡಿ ಸಾಷ್ಟಾಂಗೆರಗಲೂ ದುರಿತ ರಾಸಿಗಳೆಲ್ಲ ಒಂದು ಉಳಿಯದಂತೆ ಬೆಂದು ಹೋಹವು 2 ಅತಿವೇಗದಿಂದ ಬಂದು ಸ್ನಾನವನು ಮಾಡಲು ಮತಿವಂತರನ ಮಾಡಿ ದುರ್ಮಾರ್ಗ ಬಿಡಿಸಿ ಸಿರಿ ವಿಜಯವಿಠ್ಠಲನ್ನ ಸ್ತುತಿಸಿ ಗತಿ ಪಡೆವಂತೆ ಧನ್ಯರನು ಮಾಡುವ ತಾಯಿ3
--------------
ವಿಜಯದಾಸ
ಮಾರುತೀ ನಮ್ಮಗುರು ಮೂರುತೀ ಪ ಮಾರುತಿ ಕರುಣಿಸು ಜ್ಞಾನಾ ಎನ್ನ ಸೇರಿದ ಸತತ ಅಜ್ಞಾನಾ ಆಹ ದೂರ ಓಡಿಸಿ ಹರಿ ಆರಾಧನೆ ಇತ್ತು ಪಥ ಸರ್ವಾಧಾರ ಉದಾರನೆ ಅ.ಪ. ದ್ವಿತೀಯ ಯುಗದಲ್ಲವತರಿಸಿ ಸೀತಾ ಅತಿ ವೇಗದಿಂದ ಉತ್ತರಿಸಿ ರವಿ ಸುತಗೊಲಿದವನುದ್ಧರಿಸಿ ಆಹಾ ಕ್ಷಿತಿಜದೇವಿಯಳನು ಸ್ತುತಿಸಿ ಮುದ್ರಿಕೆಯಿತ್ತು ದಿವಿಜರ ಸದೆದ ಭಾರತಿಯ ರಮಣನೆ 1 ಕುರುಕುಲದಲ್ಲಿ ಉದ್ಭವಿಸಿ ಬಲು ಗರಳ ಪದಾರ್ಥವ ಸಲಿಸಿ ಚೆಲ್ವ ತರಣಿ ರೂಪವನೆ ಸಿಂಗರಿಸಿ ನೀಚ ತರ ಕೀಚಕನ ಸಂಹರಿಸಿ ಆಹ ಜರೆಯ ಸುತನ ಸೀಳಿ ಧರಣಿಪಾಲಕರನ್ನು ಸೆರೆಯ ಬಿಡಿಸಿ ಕಾಯ್ದ ಪರಮ ಸಮರ್ಥನೆ 2 ಭೂತಳದೊಳಗೆ ಯತಿಯ ರೂಪ ನೀ ತಾಳಿದೆಯೋ ಶುಭಕಾಯ ಮಾಯಿ ವ್ರಾತ ಗೆಲಿದೆ ಮಧ್ವರಾಯಾ ಕಾಯ ಜಾತ ಜನಕಗತಿ ಪ್ರೀಯಾ ಆಹಾ ಭೂತನಾಥನೆ ಪರಮಾತುಮನೆಂಬ ಪಾತಕರರಿ ಜಗನ್ನಾಥವಿಠಲನ ದೂತ 3
--------------
ಜಗನ್ನಾಥದಾಸರು
ಮುದ್ದು ವೆಂಕಟ ವಿಠಲ | ಬುದ್ಧಿ ಪ್ರೇರಕನೇ ಪ ಉದ್ವೇಗ ಕಳೆದು ಸ | ದ್ವಿದ್ಯ ಪ್ರದನಾಗೋ ಅ.ಪ. ಭವ ಕೂಪದಿಂದೆತ್ತಿಓದಿ ಕರೆದ್ಯೊದುದನ | ಭಾವುಕಗೆ ತಿಳಿಪೇ 1 ಮಾನವ ಮನದಿ | ಶಂಕಿಸುತ್ತಿರಲೂಕೊಂಕುಗಳ ಪರಿಹರಿಪ | ವೆಂಕಟೇಶ ನಾನುಅಂಕನವ ದಯೆಗೈಸಿ | ಸಂಕಟವ ಕಳೆದಾ 2 ಸೃಷ್ಟಿ ಸ್ಥಿತಿ ಸಂಹಾರ | ಅಷ್ಟ ಕರ್ತೃಕ ಹರಿಯೆಪುಷ್ಠತವ ಮಹಿಮೆಗಳ | ಶಿಷ್ಟನಿಗೆ ತೋರೀಕಷ್ಟಗಳ ಪರಿಹರಿಸಿ | ಸುಷ್ಠು ಪಾಲಿಪುದಿವನಜಿಷ್ಣು ಸಖ ಭ್ರಾಜಿಷ್ಣು | ಕೃಷ್ಣ ಮೂರುತಿಯೇ 3 ಭವ ಬಂಧ ಕಳೆಯೋಮಧ್ವಶಾಸ್ತ್ರದಿ ಮನವು | ಸುವಿಚಾರಗೈವ ಪರಿಶ್ರೀ ವರನೆ ಕೃಪೆಗೈದು | ತತ್ವಗಳ ತಿಳಿಸೋ 4 ಪತಿ ಗುರೂ | ಗೋವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಮೂರುತಿ ಪುಟ್ಟ ಮೂರುತಿ ಪ. ಸಾರುತಿ ಹರಿಗುಣ ಬೀರುತಿ ತ್ರಿಜಗದಿ ಅ.ಪ. ತ್ರೇತೆಯ ಯುಗದಲಿ ಜನಿಸಿ | ರಾಮ ದೂತಕಾರ್ಯಕೆ ಮನವಿರಿಸಿ ಪ್ರೀತಿಯೊಳ್ ರವಿಜನ ಉಳಿಸಿ | ಬಹು ಖ್ಯಾತಿಯ ವಾಲಿಯನಲ್ಲೇ ಅಳಿಸಿ ವಾತವೇಗದಿ ವನಧಿಯ ದಾಟಿ ಉಂಗುರ ಸೀತೆಗಿತ್ತು ಲಂಕೆ ವೀತಿಹೋತ್ರನಿಗಿತ್ತ 1 ದ್ವಾರಕಿನಿಲಯನ ಒಲಿಸಿ | ಬಲು ಧೀರ ಭೀಮಸೇನನೆನಿಸಿ ಸೋಮಕುಲದಲಿ ಜನಿಸಿ | ಬಲು ಕಾಮಿ ಕೀಚಕನನ್ನು ವರೆಸಿ ಕಾಮಿನಿಗೋಸುಗ ಕಾಮುಕ ಕುರುಕುಲ ಧೂಮವೆಬ್ಬಿಸಿದ ನಿಸ್ಸೀಮ ಸುಗುಣಧಾಮ 2 ಪುಟ್ಟಯತಿಯ ರೂಪತಾಳಿ | ಬಲು ಗಟ್ಟಿ ಗೋಪೀ ಗೆಡ್ಡೆ ಸೀಳಿ ಪುಟ್ಟ ಕೃಷ್ಣನ ಕಂಡು ತೋಳಿ | ನಿಂದ ನಿಷ್ಟೆಯೊಳ್ ನೆತ್ತಿಯೊಳ್ ತಾಳಿ ಕುಟ್ಟಿ ಕುಮತಗಳ ವೈಷ್ಣವಾಗ್ರಣಿಯಾದ 3 ಸಾಕಾಯಿತೇ ಸ್ವಾಮಿಕಾರ್ಯ | ಇಲ್ಲಿ ಬೇಕಾಯಿತೇ ಮೌನಚರ್ಯಾ ಆ ಕಾಲದ ಎಲ್ಲ ಶೌರ್ಯ ಉಡುಗಿ ಏಕಾಂತದಲಿ ಹರಿಚರ್ಯಾ ವಾಕು ಉಚ್ಚರಿಸದೆ ಈ ಕುಧರಜೆ ತೀರ ಏಕಾಂತವಾಸನೆ 4 ಅಪಾರಮಹಿಮನೆ ಹಂಪೆ | ಯಲ್ಲಿ ಪರಿ ಇರುವುದು ತಂಪೆ ಪತಿ ಪದಕಂಜ ಕಂಪೆ | ಇಲ್ಲಿ ನೀ ಪಾರಣೆಯೆ ಮಾಳ್ಪ ಸೊಂಪೆ ಗೋಪಾಲಕೃಷ್ಣವಿಠ್ಠಲದಾಸ ನಿನ್ನಲ್ಲಿ ಸ್ಥಾಪಿಸಿದರೆ ವ್ಯಾಸರೀಪರಿ ಯಂತ್ರದಿ 5
--------------
ಅಂಬಾಬಾಯಿ
ಮೊದಲಿಗೆ ಶ್ರೀ ಯಮಧರ್ಮ ತನಯೆಶ್ರೀ ಕೃಷ್ಣನಂಗದಿಂದ ಜನಿಸಿದಳುಕಮಲಸಂಭವನ ಲೋಕದೊಳಗಿದ್ದುಕೃಷ್ಣ ಕೃಷ್ಣೆ ಎಂದೆನಿಸಿದಳು 1ಸುಮನಸರೆಲ್ಲರು ಪ್ರಾರ್ಥನೆ ಮಾಡಲುಕೈಲಾಸಕೆ ದಯಮಾಡಿದಳುಆ ಮಹಾದೇವನ ಜಟಾಜೂಟದಿಂಸಹ್ಯಾದ್ರಿಗೆ ಬಂದಿಳಿದಿಹಳು 2ಮುಂದೆ ಮುಂದೆ ತಾ ಸಾಗಿಬರತಿರಲುವೇಣಿನದಿಯು ಬಂದು ಕೂಡಿದಳುಕೃಷ್ಣ ವೇಣಿಗಳ ಸಂಗಮವಾಗಲುಕೃಷ್ಣವೇಣಿ ಎಂದೆನಿಸಿದಳು 3ಕೃಷ್ಣವೇಣಿ ಹರಿದಂಥ ಸ್ಥಳಗಳುಋಮುನಿಗಳು ತಪವ ಗೈದಿಹರುಋಮುನಿಗಳು ತಪವ ಗೈದಕ್ಷೇತ್ರಗಳುಪುಣ್ಯಕ್ಷೇತ್ರ ವೆಂದೆನಿಸಿದವು 4ಗಾಲವೃಗಳು ತಪವಗೈದಸ್ಥಳಗಾಲವಕ್ಷೇತ್ರವು ಗಲಗಲಿಯುಗಲಗಲಿಯಲ್ಲಿಯ ಚಕ್ರತೀರ್ಥರ ಋಬಂಡಿಗಳೇ ಗಾಲವರ ಆಶ್ರಮವು 5ಗಾಲವಕ್ಷೇತ್ರದ ಪಂಚಕೋಶವುಪುಣ್ಯಭೂ'ು ಎಂದೆನಿಸುವದುಗಾಲವಗಳ ಪುಣ್ಯದ ಬಲವೇಗಲಗಲಿಯ ಕೀರ್ತಿಗೆ ಕಾರಣವು 6ಗಾಲವೃಗಳ ನಂಬಿದ ಜನರಿಗೆಭೂಪತಿ'ಠ್ಠಲ ಒಲಿಯುವನುಗಾಲವೃಗಳ ಮರೆತುಬಿಟ್ಟರೆನಷ್ಟವಾಗುವದು ಗಲಗಲಿಯು 7
--------------
ಭೂಪತಿ ವಿಠಲರು
ಯಾಕೆ ದಯವುಬಾರದು ಗೋಪಾಲಕೃಷ್ಣಾ ಪ ಕರುಣನಾದ ದೇವ ಅ.ಪ ಬಿಡದಾನಂದಾದಿ ಇನ್ನು ಇಂದಿರೆ ರಮಣ 1 ನಿನ್ನ ಧ್ಯಾನಾವೇಗತಿ ಎನ್ನುತ ನೀ ಎಂದೆಂದಿಗಾಪ್ತನು ಛಲದಾನಿ ಇರುವದು ನಿನಗೆ ಎನ್ನ ದಿವ್ಯದಾನಿಗಳರಸ 2 ತ್ರಿಜಗವಂದಿತಧೊರಿಯೆ ಸದ್ಗುಣಶೀಲ ಸುಜನರ ಭಾಗ್ಯನಿಧಿಯೆ ಜಲದೊಳು ಯಿ ----- ಸುರನುತ-----ತ ಪರಾಕ್ರಮ 3
--------------
ಹೆನ್ನೆರಂಗದಾಸರು
ಯಾರು ಬಂದರೊನಮ್ಮ ದ್ವಾರಕೆಯೊಳಗಿಂದುಭೋರೆಂಬೊ ಕಾಳಿ ಹಿಡಿಸುತ ರಮಣಿ ಪ. ಮುತ್ತಿನ ತುರಾಯಿಯವರು ಹತ್ತಿವಾಜಿಮ್ಯಾಲೆ ಚಿತ್ತ ಚಲಿಸದಲೆ ಬರತಾರೆಚಿತ್ತ ಚಲಿಸದಲೆ ಬರತಾರೆರುಕ್ಮಿಣಿ ಅಚ್ಯುತನ ನೋಡೊ ಭರದಿಂದ ರಮಣಿ1 ರಥಿಕಾ ರಥಿಕರು ತಮ್ಮ ರಥವ ಮುಂದಕ್ಕೆ ಹಾಕಿ ಅತಿ ವೇಗದಿಂದ ಬರುತಾರೆ ರಮಣಿಅತಿ ವೇಗದಿಂದ ಬರುತಾರೆ ದೇವಕಿಯಸುತ ನಂಘ್ರ್ರಿನೋಡೊ ಭರದಿಂದ ರಮಣಿ2 ನಲ್ಲೆಯರು ಮುತ್ತಿನ ಪಲ್ಲಕ್ಕಿ ಮಂದಕೆ ಹಾಕಿನಿಲ್ಲದಲೆ ಬೇಗ ಬರತಾರೆನಿಲ್ಲದಲೆ ಬೇಗ ಬರತಾರೆ ಲಕ್ಷ್ಮ್ಮಿವಲ್ಲಭನ ನೋಡೊ ಭರದಿಂದ 3 ತೇರಿನ ಬೀದಿಲೆ ಭೋರೆಂಬೊ ರಭಸಿಗೆಊರಜನವೆಲ್ಲ ಬೆರಗಾಗಿಊರಜನವೆಲ್ಲ ಬೆರಗಾಗಿಉಪ್ಪರಗಿ ಏರಿ ನೋಡುವವರು ಕಡೆಯಿಲ್ಲ4 ಬೀಡುಬಿಟ್ಟಿದ್ದ ಬೈಲು ಗಾಡಿ ಏರಿದವರು ಓಡಿಸಿ ಬೇಗ ಬರತಾರೆಓಡಿಸಿ ಬೇಗ ಬರತಾರೆಹರಿಪಾದ ನೋಡಬೇಕೆಂಬ ಭರದಿಂದ5 ಮದ್ದು ಬಾಣಬಿರಸು ರಥಿಣಿರಭಸಿಗೆ ಎದ್ದು ಜನೆರೆಲ್ಲ ಬೆರಗಾಗಿಎದ್ದು ಜನೆರೆಲ್ಲ ಬೆರಗಾಗಿ ಮುಯ್ಯದ ಸುದ್ದಿ ಕೇಳುವರು ಹರುಷದಿ 6 ಮಿತ್ರಿ ತಿಲೋತ್ತಮಾ ಮತ್ತೆಮೇನಕೆಯರುಥೈ ಥೈ ಎಂದು ಕುಣಿಯುತಥೈ ಥೈ ಎಂದು ಕುಣಿಯುತ ಬರುವಾಗಹತ್ತು ದಿಕ್ಕುಗಳು ಬೆಳಗೋವೆ7 ರಂಭೆ ಊರ್ವಸಿಯರು ಸಂಭ್ರಮದಿ ಕುಣಿಯಲುತುಂಬಿತು ನಾದ ಧರೆಯೊಳುತುಂಬಿತು ನಾದ ಧರೆಯೊಳುರುಕ್ಮಿಣಿ ಬಂದವರಾರೆಂದು ಬೆರಗಾಗಿ ರಮಣಿ8 ವಜ್ರ ಹಚ್ಚಿದ ಮನೆಗಳುಜತ್ತು ದೀವಿಗೆಯ ಸೊಬಗಿನ ಜತ್ತು ದೀವಿಗೆಯ ಸೊಬಗಿನ ಮನೆಯೊಳುಮಿತ್ರೆಯರು ನೋಡಿ ಬೆರಗಾಗಿ 9 ಕುಂದಣ ರಚಿಸಿದ ಅಂದಣವನೇರಿಕೊಂಡುಸಂದಣಿಸಿ ಬೇಗ ಬರುತಾರೆಸಂದಣಿಸಿ ಬೇಗ ಬರುತಾರೆ ನಮ್ಮ ಮುಕುಂದನ ಮನೆ ಎದುರಿಗೆ 10 ಧೀರ ಧೀರರು ತಮ್ಮ ತೇರು ವಾಜಿಯ ಇಳಿದುವೀರ ರಾಮೇಶನ ಮನೆ ಮುಂದೆವೀರ ರಾಮೇಶನ ಮನೆ ಮುಂದೆ ಹೇಳಲಿನಾರಿ ಒಬ್ಬಳನ ಕಳುಹೆಂದ ರಮಣಿ 11
--------------
ಗಲಗಲಿಅವ್ವನವರು
ಯೇನು ಕರುಣಾಳೋ ದೇವವರೇಣ್ಯ ಯೇನು ಭಕುತರಧೀನನೋ ಪ ಕನ್ನಯ್ಯ ಧ್ಯಾನವಿತ್ತ ನಾರಾಯಣಾ ಅ.ಪ. ಅನಂತಾನಂತ ಜನುಮದಲ್ಲಿ ಅನ್ನೋದಕ ಕಾಣದಿದ್ದ ದರಿ ದ್ರನ್ನ ಕರವನೆ ಪಿಡಿದು ಮೃಷ್ಠಾನ್ನ ಭೋಜನ ಮಾಡಿಸಿ ಒಡನೆ ತಿರುಗೂವ ಕನ್ನಿ ಸಂಕಲ್ಪ ಕೆದುರುಗಾಣದೆ ಘನ್ನ ಮೂರುತಿ ಕೇಶವಾ 1 ಪಾವನವ ಮಾಡಿದನು ಬಲು ಕೃ ಪಾವಲೋಕನ ಪರಮ ಸೂರ್ಯರ್ ರಾವಣಾಸುರ ಮರ್ದನಾ ಕವಿ ಮನ್ನಿಸಿ ತಪ್ಪನೆಣೆಸದೆ ದೇವ ಜಗತ್ರಯ ಜಿತ ಕರಣ ವಸುದೇವ ದೇವಕೀನಂದನಾ2 ದೋಷರಾಶಿಯೊಳಿದ್ದು ಅನುದಿನ ಮೋಸಗೊಳಿಸುವ ಭವವನಧಿ ಮಧ್ಯ ಈಶ ಕಡಕಾಣಲಾರದೆ ಕ್ಲೇಶದಲಿ ಸಂಚರಿಸುತ್ತಿಪ್ಪ ಮಾನೀಶ ಪಶುವನು ನೋಡಿ ವೇಗದಿ ಲೇಸು ಕೊಡುವೆನೆಂದು ಆನಂದ ದಾಸರೊಳಗಿದ್ದ ನರಹರೀ 3 ಡಂಬಕಾ ಭಕುತಿಯನೆ ಬಿಡಿಸೀ ವೆಂಬೋದೆ ನಿರ್ಮಲ ಮಾಡೀ ಪಾದ ಇಂಬು ಬಯಸುವ ಸುಖವೆ ಪಾಲಿಸಿ ಪೊಂಬುಡೆಧರ ಗೋವಿಂದಾ 4 ಜಪತಪಾನುಷ್ಠಾನ ನಾನಾ ವುಪವಾಸ ವ್ರತದಾನ ಧರ್ಮಗ ಳಪರಿಮಿತವಾದ ಯಾಗ ಕನ್ಯಾದಾನ ನಾನಾಲೋಚನ ಸ್ವಪನದಲಿ ಕಾಣಿಸುವ ತಾನೆ ಕೃಪಣರಿಗೆ ವಲಿದಲ್ಲದೆ ಬಿಡ ಚಪಲ ವಿಜಯವಿಠಲಾ5
--------------
ವಿಜಯದಾಸ
ರಂಗನಂಘ್ರಿಯಂಗುಷ್ಠೆ ಸಂಗೆ ಭವಭಂಗೆ ಪ ಉಪೇಂದ್ರ ಭಗವಂತ ಪಟುರೂಪ ಧರಿಸಿ ಚಂದ್ರಮಂಡಲ ಮೀರಿ ಬೆಳದಜಾಂಡವನೊಡಿಯೆ ಸಾಂದ್ರಗುಣದಿಂದ ಉದ್ಭವಿಸಿದೆ ಜನನಿ 1 ಕಮಲವನು ತೊಳಿಯಲಾವೇಗದಿಂದ ವಿಮಲಗತಿಯಲಿ ಬಂದು ಮಂದಾಕಿನಿ ಎನಿಸಿ ಸುಮನ ಸಾವನಿಯಲ್ಲಿ ಪರಿದೆ ಸ್ವರ್ಣನದಿಯೇ2 ಧ್ರುವಲೋಕಕಿಳಿದು ಅಮರಾಲಯವ ಸಾರಿದೆ ತವಕದಿಂದಲಿ ಧುಮುಕಿ ಚತುರಭಾಗವಾದೆ ಭವ ಪರಿಹರಿಸಿ ಭಾಗೀರಥಿ ಎನಿಸಿದೆ 3 ಭವದೊರೆ ಭಗೀರಥಗೆ ಒಲಿದು ಬರುತ ಜವನ ಮನಿಯ ಕೊಡ ಮಣಿಕರ್ಣಿಕೆ ನೆರದೆ4 ಅಳಕನಂದನೆ ನಿನ್ನ ಸ್ಮರಣೆ ಮಾಡಿದ ಜನಕೆ ಕುಲಕೋಟಿ ಉದ್ಧಾರ ನಿಃಸಂದೇಹಾ ಮಜ್ಜನ ಪೊಳೆವ ವೈಕುಂಠಪುರ ಅವನ ಹೃದಯದಲಿ5 ಕುಲಪ್ರವಹವಾಗಿದ್ದ ಜೀವರ ಪುಣ್ಯವನು ಹೇಳಿ ಕೇಳುವವನಾರು ಮೂಲೋಕದಿ ಸೀಲಗುಣ ಸಂಪನ್ನೆ ವರುಣನರ್ಧಾಂಗಿನಿ ಕಾಲ ಕಾಲಕೆ ನಿನ್ನ ಧ್ಯಾನದಿಂದಲ್ಲಿರಿಸು 6 ದೇಶದೇಶದಲಿಂದ ಬಂದ ಸುಜನರ ಪಾಪ ಮಾಧವ ಚಲುವ ಶ್ರೀನಿವಾಸ ಯದುಪತಿ ವಿಜಯವಿಠ್ಠಲನ ಸುತೆ ಖ್ಯಾತೇ 7
--------------
ವಿಜಯದಾಸ