ಒಟ್ಟು 181 ಕಡೆಗಳಲ್ಲಿ , 47 ದಾಸರು , 167 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮಾಧವ ಬೇಡಿಕೊಂಬೆ ಪ ನೋಡಿ ನೀ ದಯಮಾಡಿ ಎನ್ನಯ ಪೀಡೆ ದೂರಮಾಡು ಬೇಗದಿಅ.ಪ ಅದ್ರಿಧರನೆ ಪರಮದಯಾಸ ಮುದ್ರ ಎನ್ನನು ಕೊಲ್ಲುವ ಕಡುದಾ ರಿದ್ರ್ಯಕಳೆದು ಬಯಲುಮಾಡಿ ಭದ್ರವಾಗಿ ಕಾಯೊ ಹರಿಯೆ 1 ಕ್ಷುದ್ರದನುಜರ ಸದೆದು ಭರದಿ ಅದ್ರಿಯೆತ್ತಿ ಭಕ್ತಜನರ ಸುಖ ಸ ಮುದ್ರದಿರಿಸಿ ಪೊರೆದೆಯೊ ಭುಜ ಗಾದ್ರಿಶಾಯಿ ಸುದೃಷ್ಟಿಲೆನ್ನ 2 ಎನ್ನ ಮನಸಿನ ಡೊಂಕ ತಿದ್ದಿ ನಿನ್ನ ಚರಣದಾಸನೆನಿಸಿ ಬನ್ನಬಡಿಸದೆ ಇನ್ನು ಜಗದಿ ಮನ್ನಿಸಿ ಪೊರೆ ವರದ ಶ್ರೀರಾಮ3
--------------
ರಾಮದಾಸರು
ಮಾನವ ಸಿಂಗನ ಪಾಡಿರೈ ಪ ಇಂಗಡಲಜೆಪತಿ | ಮಂಗಳ ಚರಿತ ಭು ಜಂಗಶಾಯಿ ಶುಭಾಂಗ ಅ.ಪ ಲಾಲಿಸಿ ದೇವ | ಮಹಾನುಭಾವ | ಅವತರಿಸಿದನು ಅಸುರಾಂತಕ | ಪ್ರೇಮದಲಿ ಗೋಕುಲದಲ್ಲಿ | ವಿಧಿ ಕುಲ ಜಾತ 1 ತಂದೆ ತಾಯ್ಗಳ ಬಂಧನ ಬಿಡಿಸಿದ ಧೀರ | ಭಕ್ತಮಂದಾರ | ಒಂದೆ ಬೆರಳಲಿ ಗೋವರ್ಧನ ಶೈಲವನು | ತಾ ಧರಿಸಿದನು ಮದವನು ಮುರಿದ | ಮೋದವಗರೆವ ಕರವ | ಕರುಣದಿ ಪಿಡಿವ 2 ಶ್ವೇತ ವಾಹನ ಸೂತ ಕಾಮಜನಕ ಸತ್ಯಭಾಮೆ ರಮಣ ಗೋಪಾಲ | ಸ್ವಾಮಿ ಕುಲಾಲ ಭೀಮಗೊಲಿದ ನಿಸ್ಸೀಮ ಮಹಿಮಾ ಶ್ರೀ ಗೌರಿ | ಮಾತುಳವೈರಿ ಹೇಮಾಂಬರಧರ ಶಾಮಸುಂದರ ವಿಠಲ | ಧೃತವನಮಾಲ3
--------------
ಶಾಮಸುಂದರ ವಿಠಲ
ಮಾಯಾ ನೋಡಮ್ಮ ಶ್ರೀಯರಸ ನೀಲಮೇಘ ಛಾಯ ಕೃಷ್ಣರಾಯ ತನ್ನ ಪ. ಕಾಶೀಶ ಮೃತ್ಯುಂಜಯಾಯಿ ವಿಷವಲ ಭಂಜನಾದಿಗಳೀತನಿಗಂಜಿ ಕೊಂಬುವರು ಮಂಜುಳಾತ್ಮ ನಿಜಕರಕಂಜದಿಂದ ಪಾದವೆತ್ತಿ ನಿರಂಜನ ತಾ ಲೀಲೆಯಿಂದ 1 ಪುಟಿತಹಾಟಕ ಮಣಿಘಟಿತ ಕಂಕಣಾಂಗದ ಕಟಿಸೂತ್ರಗಳನಿಟ್ಟು ನಟನಂದದೀ ವಟಪತ್ರಶಾಯಿವೋಷ್ಠಪುಟದಿ ಪಾದವನಿಕ್ಕಿ ಕಟಬಾಯೊಳಮೃತವಾ ಸ್ಫುಟವಾಗಿ ಸುರಿಸುತ 2 ಲಿಂಗದೇಹಭಂಗತಾಗಿನಂಗವನ್ನು ದೂರಗೈಸಿ ತುಂಗಮತಿವಂತ ಋಷ್ಯ ಶೃಂಗಾದಿಗಳು ನಿತ್ಯ ಮಂಗಳ ದೇವಿಯರ ಗಂಗೆಯ ಪಡೆದು ಶಿವಂಗ ಶುದ್ಧಿಗೈಸಿ 3 ಗೋಪಿ ಗೃಹ ಕರ್ಮರತಳಾಗಿರಲು ಒಮ್ಮನದಿಂದ ಅಮ್ಮರ ಗಣಾರಾಧಿತ ಕ್ಷಮೆಯನಳದ ಪಾದ ಸುಮ್ಮಗೆ ಕರದೊಳೆತ್ತಿ ಖಮ್ಮಗಿಹದೆಂದು ತನ್ನ 4 ಕರಪಲ್ಲವಾಧೃತ ಲೋಕವಂದ್ಯರೂಪ ಫಣಿ- ಶೇಖರಾದ್ರಿವಾಸ ಭಕ್ತನಾಕ ಭೂರುಹ ನೀಕರಿಸಿ ದುರಿತವ ಸೋಕದಂತೆ ನಮ್ಮನೀಗ ಸಾಕುವ ಪರಮ ಕರುಣಾಕರ ಶ್ರೀ ಕೃಷ್ಣ ತನ್ನ 5
--------------
ತುಪಾಕಿ ವೆಂಕಟರಮಣಾಚಾರ್ಯ
ಮಾಲಕೌಸ್ತುಭ ಸತ್ಯಭಾಮಲೋಲ ನೀಲಶಾಮಸುಂದರ ಕಾಲಕಾಲದಿ ಬಿಡದೆ ಎನ್ನ ಪಾಲಿಸಭವನೆ ಪ ಭುವನವೀರೇಳು ಸೂತ್ರಧಾರ ಭವದರೋಗಕ್ವೈದ್ಯ ಭಕ್ತಭಯ ಪರಿಹಾರ ಸತ್ಯ ಬುವಿಜಾಮನೋಹರ 1 ಕೋಮಲಾಂಗ ಭಜಕಜನರ ಕಾಮಿತಾರ್ಥ ಕೊಡುವ ಸುರ ಕಾಮಧೇನು ಕಲ್ಪವೃಕ್ಷ ಸ್ವಾಮಿ ದಯಾಕರ 2 ಸಾರ ಮಾಯಾಮೋಹವಿದೂರ ಕೇಶವ 3 ಪರಕೆ ಪರಮ ಪರಾತ್ಪರ ಮರಣರಹಿತ ಮಾರಮಣ ಉರಗಶಾಯಿ ಪರಮಪುರುಷ ಶರಣು ಸುಖಕರ 4 ನಿಗಮವೇದ್ಯ ನಿರುಪಮಾತ್ಮ ಅಗಣಿತಗಣಿತಗಮ್ಯಚರಿತ ಸುಗುಣ ಶಾಂತಾಕಾರ ಮೂರು ಜಗದ ಪಾಲಯಾ 5 ಸಕಲವಿಘ್ನದೂರ ನಿನ್ನ ಭಕುತಿಯಿಂದ ಭಜಿಸಿಬೇಡ್ವೆ ಮುಕುತಿಸಂಪದ ನೀಡಿ ಸಲಹು ಭಕ್ತವತ್ಸಲ 6 ಕಂದಮಾಡಿದಪರಾಧಗಳ ತಂದೆ ದಯದಿ ಕ್ಷಮಿಸಿ ಬಂದ ಬಂಧಗಳನು ಪರಿಹರಿಸಯ್ಯ ಸಿಂಧುಮಂದಿರ 7 ನಾನಾಯೋನಿಯೊಳಗೆ ಪುಟ್ಟಿ ಜ್ಞಾನಗೆಟ್ಟು ಬಳಲುವಂಥ ಹೀನ ಬವಣೆ ತಪ್ಪಿಸಯ್ಯ ದೀನಪಾಲ 8 ನಿರುತ ನಿನ್ನ ಚರಣದೆಡೆಗೆ ಬರುವ ಸುಲಭಮಾರ್ಗ ಆವು ದ್ವರವ ಪಾಲಿಸೊಲಿದು ಎನಗೆ ಕರುಣಸಾಗರ 9 ದೋಷದಾರಿದ್ರ್ಯಗಳೆಲ್ಲ ನಾಶಗೈದು ಹರಿಯೆ ನಿಮ್ಮ ದಾಸನೆನಿಸುದ್ಧಾರಮಾಡು ದೋಷನಾಶನ 10 ಮರೆಯಬಿದ್ದ ತರಳನನ್ನು ಕರುಣದೃಷ್ಟಿಯಿಂದ ನೋಡಿ ಸರ್ವಭಯ ಪರಿಹಾರಮಾಡು ಹರಿಸರ್ವೋತ್ತಮ 11 ನಿನ್ನ ಒಲವು ಬಲವು ಎನಗೆ ಅನ್ಯಬಲವ ಒಲ್ಲೆಸ್ವಾಮಿ ಮನ್ನಿಸಬೇಕಿನ್ನು ಮಗನ ಸನ್ನುತಾಂಗನೆ 12 ನಂಬಿ ಭಜಿಪ ಬಕ್ತಜನರ ಇಂಬುದಾಯಕ ನೀನು ಇಂಬುಗೊಟ್ಟು ಸಲಹು ಎನ್ನ ಅಂಬುಜಾಕ್ಷನೆ 13 ಏನುತಪ್ಪು ಇರಲು ನೀನೆ ದಯದಿ ಕ್ಷಮಿಸಿ ಇನ್ನು ನಾನಾಬೇನೆ ಕಳೆದು ಕಾಯೊ ಜಾನಕೀಶನೆ 14 ಚಾರುವೇದ ಪೊಗಳುವಂಥಪಾರ ನಿನ್ನ ದಿವ್ಯಮೂರ್ತಿ ತೋರಿಧನ್ಯನೆನಿಸು ಎನ್ನ ನಾರಸಿಂಹನೆ 15 ಭಾರ ನಿನ್ನದಯ್ಯ ಬಂದ ಘೋರ ತಾಪತ್ರಯಂಗಳಿಂದ ಪಾರುಮಾಡಿ ಕಾಯುವುದು ಕಾರುಣ್ಯ ನಿಧೆ 16 ಪ್ರಾಣಹಾರಿ ಹೋಗಲು ನಿನ್ನ ಧ್ಯಾನವಗಲದಂತೆ ಎನಗೆ ತ್ರಾಣಪಾಲಿಸಯ್ಯ ಮೊದಲು ಧ್ಯಾನದಾಯಕ 17 ದಾಸನರಿಕೆ ದಯದಿ ಪೂರೈಸಿ ಕಾಯಬೇಕು ದೇವ ಘಾಸಿಗೈಯದೆ ರಕ್ಷಿಸಯ್ಯ ದಾಸಪ್ರಿಯನೆ 18 ಕೆಟ್ಟಶಕುನರಿಷ್ಟ ಸ್ವಪ್ನ ತಟ್ಟಬೇಕೆ ನಿನ್ನ ಪಾದ ನಿಷ್ಠೆಯಿಂದ ಭಜಿಪರ್ಗೆ ಸೃಷ್ಟಿಕರ್ತನೆ 19 ನಿತ್ಯ ನಿರ್ಮಲಾತ್ಮ ನಿನ್ನ ನಿತ್ಯಭಕ್ತಿ ಸುಖವನಿತ್ತು ಸತ್ಯಸಂಧನೆನಿಸು ಎನ್ನ ಸತ್ಯರಾಧಾರ 20 ಮರವೆ ತರಿದು ಹರಿಯೆ ನಿಮ್ಮ ಕರುಣ ನೀಡಿ ಮರಣ ಭಯವ ಪರಿಹರಿಸಯ್ಯ ಸಿರಿಯವಲ್ಲಭ 21 ಭಾನುಕೋಟಿಪ್ರಕಾಶ ನಿನ್ನ ಧ್ಯಾನಿಸಿ ಮರೆಹೊಕ್ಕೆ ನಾನಾಬೇನೆ ಗೆಲಿಸಿ ಕಾಯೊ ದಾನವಾಂತಕ 22
--------------
ರಾಮದಾಸರು
ಮೂರು ನಾಮಗಳ ಧರಿಸಿರುವ ಕಾರಣವೇನು ಸಾರಿ ಪೇಳಲೊ ಈಗಲೆ ಪ. ಶ್ರೀ ರಮಾಪತಿ ಶ್ರೀನಿವಾಸ ವೆಂಕಟರಮಣ ಯಾರು ಇಟ್ಟರೋ ನಿನಗೆ ಈ ಮೂರು ನಾಮ ಅ.ಪ. ಶುದ್ಧ ವೈಷ್ಣವರೆಲ್ಲ ಶುದ್ಧ ಮೂರುತಿ ಎಂದು ಕರವ ಮುಗಿದು ಎದ್ದು ನೋಡಲು ನಿನ್ನ ಫಣಿಯೋಳೀ ತರವಿರಲು ಮಧ್ವಮತ ದೈವವೆಂದಿನ್ನು ತಿಳಿಯುವರೆ 1 ಮೂರುರೂಪನು ನಾನು ಮೂರು ಲೋಕಗಳಿಹವು ಮೂರು ಮಾಳ್ಪೆನು ಜಗವ ಮೂರು ಗುಣದಿ ಮೂರು ತಾಪವ ಗೆದ್ದು ಮೂರು ಮಾರ್ಗದಿ ಭಜಿಸೆ ಪಾರು ಮಾಡುವೆನೆಂದು ತೋರುವ ಸೊಬಗೊ 2 ಸಾಲದೆ ನಿನಗೆ ಸೌಂದರ್ಯಕೆ ಒಂದು ತಿಲುಕ ಪಾಲಸಾಗರಶಾಯಿ ಚಲುವಮೂರ್ತಿ ಕಾಲಕಾಲಕೆ ಜನರ ದೃಷ್ಟಿ ತಗುಲುವುದೆಂದು ಲೀಲೆಯಿಂದಲಿ ಹೀಗೆ ಧರಿಸಿದೆಯ ಪೇಳೊ 3 ಮೂರೆರಡು ಎರಡೊಂದು ಇಂದ್ರಿಯವನರ್ಪಿಸಲು ತೋರುವನು ನಿಜರೂಪ ಭಕ್ತಗೆಂದು ಸಾರುತ್ತಿದ್ದರು ವಾಯು ಅರಿಯದೆ ಭಜಿಸಿದರೆ ಮೂರುನಾಮವೆ ಗತಿ ಎನ್ನುವ ಬಗೆಯೊ 4 ಶ್ರೀಲೋಲ ಗೋಪಾಲಕೃಷ್ಣವಿಠ್ಠಲ ನಿನ್ನ ಈ ಲೀಲೆ ಬಗೆಯನು ಅರಿವವರ್ಯಾರೊ ವ್ಯಾಳಶಯನ ವೆಂಕಟೇಶ ಎನ್ನ ಮನದಿ ಕಾಲಕಾಲಕೆ ನಿನ್ನ ರೂಪವನೆ ತೋರೋ 5
--------------
ಅಂಬಾಬಾಯಿ
ಮೂಲನಾರಾಯಣ ವಟಪತ್ರಶಾಯಿ ಕಾಲಕಾಲಕೆ ವೊದಗಿ ನೀಯೆನ್ನ ಕಾಯೋ ಪ. ಎಂದೆಂದಿಗೂ ಎನಗೆ ತಂದೆ ನೀ ದೇವಾ ಯಿಂದೆನ್ನ ಕರಪಿಡಿಯೋ ಬಿಂದುಮಾಧವಾ ಅ.ಪ. ಸ್ವಚ್ಛ ಮನವಮಾಡು ಮತ್ಸರೂಪಕನೆ ತುಚ್ಛ ಮನಕೊಂದ ವಿಶ್ವವ್ಯಾಪಕನೆ 1 ಮುಂದೆನ್ನ ಉದ್ಧರಿಸು ಮಂಧರೋದ್ದರನೆ ಇಂದ್ರಾದಿ ಸುರರಿಂದ ವಂದ್ಯಾಸುರವರನೆ 2 ಹಿರಣ್ಯಾಕ್ಷನ ತರಿದಂಥ ಧೀರ ಭರಧಿ ವೇದವ ತಂದ ಮಹಿಮೆ ಅಪಾರ 3 ತರಳ ಪ್ರಹ್ಲಾದನ ತಲೆಗಾಯ್ದ ರೂಪ ಸರಳ ಮತಿಯನಿತ್ತು ಪಾಲಿಸು ಶ್ರೀಶ 4 ಬಲಿಯ ಸಿಕ್ಕನು ಮುರಿದೆ ಪ್ರಬು ನಿನ್ನ ಕೀರ್ತಿ ಯೊಳ ಎನ್ನ ಮನವಿಡು ವಾಮನಮೂರ್ತಿ 5 ಕ್ಷತ್ರಿಯ ಕುಂಭವ ಸವರಿದ ರಾಮ ಶತಷಟ್ಯಂದರ ಬಡಿದ ದಿವ್ಯ ನಾಮ 6 ದಾನವ ಕುಲಕುಟಾರ ಶ್ರೀ ರಾಮ ಮಾನಾಭಿಮಾನವು ನಿನ್ನದೋ ರಮ 7 ಮಲ್ಲರ ಗೆದ್ದಂಥ ದೂಕುಳ ವೈರಿ ಗೊಲ್ಲಬಾಲಕರ ಕೂಡಾಡಿದ ಶೌರಿ ಶೌರಿ 8 ತ್ರಿಪುರರ ಸ್ತ್ರೀಯರ ವ್ರತ ಕೆಡಿಸಿದ ಜಾಣ ಉಪಗಮನ ವೀಯೋ ವಿಶ್ವೇಶ ಸುಜ್ಞಾನ 9 ಕಲಿಮುಖದೈತ್ಯರ ಅಳಿಯುವ ಕಲ್ಕಿ ಸಲಹೋ ಬಳಲುವೆ ನಾನು ಭವದಿಂ ಶಿಲ್ಕಿ10 ಗುರು ಕಾಳೀಮರ್ಧನಕೃಷ್ಣ ಯಾವಾಗ್ಯು ಶರಣುಜನರಪಾಲ ಏನು ಬಂದಾಗ್ಯು 11
--------------
ಕಳಸದ ಸುಂದರಮ್ಮ
ಮೊದಲನೇ ಅಧ್ಯಾಯ ಪಾತಿವ್ರತ್ಯ ಮಹಾತ್ಮೆ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಬೋಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ನಿರ್ದೋಷ ಗುಣಪೂರ್ಣ ವಿಷ್ಣು ಸರ್ವೋತ್ತಮ ಸ್ವತಂತ್ರ ಶ್ರೀದ ಶ್ರೀಪತಿ ಜಗಜ್ಜನ್ಮಾದಿಕರ್ತನು ಸಚ್ಛಾಶ್ರ - ದಿಂದಲೇ ವೇದ್ಯನು ಮೂರು ವಿಧ ಜೀವರಿಗೆ ಯೋಗ್ಯ ಸಾಧನಕೆ ಗತಿಯ ಮಾಡುವ ಅವತಾರ ಲೀಲಾ 1 ಸುಪುಷ್ಪಭವ ಬ್ರಹ್ಮದೇವನೋಳ್ ತತ್ ಶಬ್ದವಾಚ್ಯನು ಶ್ರೀ ಪುರುಷೋತ್ತಮನೆ ಪ್ರಜಾಸೃಷ್ಟಿ ಮಾಡಿಸುವನು ತ್ರಿಪುರಾರಿ ಭಸ್ಮಧರ ರುದ್ರನೋಳ್ ತನ್ನಾಮದಲಿ ಶ್ರೀ ಪುರುಷೋತ್ತಮನೇ ಸಂಹಾರ ಮಾಳ್ಪ ಅಂತರ್ಯಾಮಿ 2 ಉರುಜ್ಞಾನ ಸುಖ ಬಲಾದ್ಯಮಿತ ಗುಣಧಾಮನ ಕರ ಚರಣಾದ್ಯವಯವಕ್ಕೂ ಅವಗೂ ಅವನು ಧರೆಯಲ್ಲಿ ಅವತಾರ ಮಾಡುವ ರೂಪಗಳಿಗೂ ಪರಿಪೂರ್ಣವಾಗಿ ಅಭೇದ ಭೇದಲೇಶವೂ ಇಲ್ಲ 3 ದ್ವಿ ಷೋಡಶ ಶುಭಲಕ್ಷಣ ತನುವುಳ್ಳ ಬ್ರಹ್ಮಗೂ ವಿಷಕಂಠ ರುದ್ರಗೂ ಪರಸ್ಪರ ಭೇದ ಅಂತಸ್ಥ ವಿಷ್ಣುಗೂ ಇವರುಗಳಿಗೂ ಭೇದವು, ಅಂತರ್ಯಾಮಿ ವಿಷ್ಣು ಒಬ್ಬನೇ ದ್ವಿರೂಪದಲ್ಲಿ ಇವರಲ್ಲಿಹ 4 ಹತ್ತಾವತಾರ ಮತ್ಸ್ಯಾದಿರೂಪಗಳು ಮಾತ್ರವಲ್ಲ ಅನಂತರೂಪನು ಅನಂತಗುಣ ಕ್ರಿಯಾವಂತನು ಕ್ಷಿತಿಯಲ್ಲಿ ಬಲಕಾರ್ಯಕ್ಕೆ ಕೆಲವು ಅವತಾರ ಹಿತಕರ ಹಲವು ಜ್ಞಾನಬೋಧಕ್ಕೇವೇ ಕೆಲವು 5 ಧ್ಯಾತ್ಮನು ಜ್ಞಾನಕಾರ್ಯಕ್ಕಾಗಿ ಅವತರಿಸುವನು ಶ್ರೀಮಾನ್ ಹಯಗ್ರೀವ ಸನತ್ಕುಮಾರ ದತ್ತ ಕಪಿಲ ಧೀಮಾನ್ ಪರಾಶರ ವಾಸವೀಸೂನು ಐತರೇಯಾದಿ 6 ದ್ವಾಪರದಲ್ಲೇವೆ ಅಲ್ಲಲ್ಲಿ ಕಲಿವಿಷ ಹರಡಿ ತಪೋಧನರು ಗೌತಮರು ಶಪಿಸೆ ಜ್ಞಾನಕುಂದೆ ಶ್ರೀಪ ವೇದವ್ಯಾಸ ಜ್ಞಾನ ತೇಜಃಪುಂಜ ಬಂದು ತೋರಿ ಆ ಪೀಡಿಸುವ ಅಜ್ಞಾನ ತರಿದು ಸಜ್ಞಾನ ಇತ್ತ 7 ಹಿಂದೆ ಬ್ರಹ್ಮದೇವರಾಜÉ್ಞಯಿಂ ಅತ್ರಿಋಷಿವರ್ಯರು ನಿಂತರು ಋಕ್ಷಗಿರಿಯಲ್ಲಿ ಅಪತ್ಯಾಪೇಕ್ಷೆಯಿಂದ ಅದ್ಭುತ ತಪವಚರಿಸಿ ಜಗದೀಶ್ವರ ಸಮ - ಪುತ್ರ ಕೊಡೆ ಚಿಂತಿಸಿ ಹರಿಯಲ್ಲಿ ಶರಣಾದರು 8 ಹರಿ ತಾನು ತನ್ನ ಅಧಿಷ್ಟಾನರಾದ ಬ್ರಹ್ಮೇಶ್ವರ ಕರಕೊಂಡು ಋಷಿ ಮುಂದೆ ನಿಂತು ಯುಕ್ತಮಾತನ್ನಾಡಿ ಮೂರು ಮಂದಿಗಳು ತಾವು ಪುತ್ರರಾಗುವೆವು ಎಂದ ತರುವಾಯ ತಾನಿತ್ತ ವರವ ಒದಗಿಸಿದನು 9 ಭಾಗವತ ಈ ವಿಷಯ ಒಳಗೊಂಡು ಇಹುದು ಪತಿ ವೇದವ್ಯಾಸ ಸಂಕೃತ ಈ ಭೂರಾದಿ ಜಗತ್ತಿನಲ್ಲಿ ಪ್ರಖ್ಯಾತ ಪುರಾಣಂಗಳೊಳ್ ಶ್ರೀ ಭಗವಾನ್ ದತ್ತಾತ್ರಯನ ಅವತಾರವು ವೇದ್ಯ 10 ಗೀರ್ವಾಣ ಛಂದಸ್ಸು ಅಷ್ಟಿಯಲಿ ಬರೆಯುವದೆಂದು ಶ್ರೀವರನ ಹಿತಾಜÉ್ಞಯಿಂ ಪ್ರಸನ್ನ ಶ್ರೀನಿವಾಸೀಯ ಶ್ರೀವಿಷ್ಣು ಸಹಸ್ರನಾಮ ಭಾಷ್ಯ ಕನ್ನಡದಲ್ಲಿ ಅಳವಡಿಸಿದಂತೆ ಅಷ್ಟೀ ಛಂದಸ್ಸಲಿ ಈ ಗ್ರಂಥವ 11 ಈ ಗ್ರಂಥದಲಿ ಶ್ರೀಭಾಗವತವು ಮಾರ್ಕಂಡೇಯವು ಭಾಗವತರಿಗೆ ಉಪಾಸನಾ ಹೇತು ಪಂಚರಾತ್ರ ಆಗಮವು ಒಳಗೊಂಡ ವಿಷಯಗಳು ಇವೆಯು ಕಾಯ ಶುದ್ಧಿಯಿಂ ಪಠಣೀಯವು 12 ಗುರುಮಂತ್ರ ಉಪದೇಶವಿಲ್ಲದಂತಹ ಸ್ತ್ರೀ ಜನ ಶೂದ್ರರು ಬ್ರಹ್ಮಬಂಧುಗಳು ಈ ಗ್ರಂಥ ಪಠಿಸಲು ಹರಿಭಕ್ತ ಸಾಧು ವೈದಿಕ ಬ್ರಾಹ್ಮಣರ ಅಪ್ಪಣೆ ಕೋರಿ ಅವರ ಅಪ್ಪಣೆಯಿಂದ ಓದಬಹುದು 13 ಪ್ರತಿಷ್ಠಾನಪುರದಲ್ಲಿ ಕೌಶಿಕಾಹ್ವಯ ದ್ವಿಜನು ವ್ಯಾಧಿ ಪೀಡಿತನು ಕುಷ್ಠಿ ನಡಮಾಡಲು ಅಶಕ್ತ ಆತನ ಪತ್ನಿಯು ಸಾಧುಗುಣವತಿ ಬಲುಶ್ರೇಷ್ಠ ಪತಿ ಹೇಳಿದಂತೆ ನಡೆಯುವಳು 14 ಒಂದು ದಿನ ಆ ಬ್ರಾಹ್ಮಣನು ನೋಡಿದ ಬಾಗಿಲಾಚೆ ಬೀದಿಯಲಿ ಹೋಗುತ್ತಿದ್ದ ಸುಂದರಿ ವೇಶ್ಯೆಯೋರ್ವಳಲಿ ಸೋತು ಮನ ಅವಳನ್ನು ತಾನು ಹೊಂದಬೇಕೆನ್ನಲು ಸಾಧ್ವಿಸತಿ ಪತಿಯನ್ನು ಎತ್ತಿದಳು ಸೊಂಟದಲಿ 15 ರಾತ್ರಿ ಕತ್ತಲೆಮಾರ್ಗ ತಿಳಿಯದಲೆ ಪತಿಯನ್ನು ಹೊತ್ತುಕೊಂಡು ಹೋಗುವಾಗ ಪತಿಯ ಕಾಲು ತಾಕಿತು ಹಾದಿಯಲ್ಲಿ ಕಬ್ಬಿಣ ಸಲಾಕದಲ್ಲಿ ಚುಚ್ಚಿಸಿ ಇದ್ದ ಕಟಿ ಸಮೀಪ ಹಾಹಾ 16 ಅನ್ಯಾಯದಿ ಆ ರಾಜ್ಯದರಸ ಆ ಮಹಾಮುನಿಯ ಧನಚೋರನೆಂದು ಶೂಲಕ್ಕೆ ಹಾಕಿಸಿದ್ದ ಆ ಶೂಲ ಕಾಣದೇ ಕೌಶಿಕನ ಕಾಲ್ತಗಲಿ ಬಲು ನೋವಾಗಿ ಮುನಿ ಶಾಪವಿತ್ತರು ಸೂರ್ಯೋದಯಲ್ಲೇ ಸಾಯೆಂದು 17 ಹಾಹಾ ಇದು ಏನು ಮುನಿಗಳಿಗೆ ನೋವಾಯಿತಲ್ಲಾ ಮಹಾತ್ಮರ ಶಾಪ ವೀಣಾಗಲಾರದು ಮಾಂಗಲ್ಯವ ಪತಿ ಅಂತಸ್ಥ ಶ್ರೀಹರಿಯ ಸ್ಮರಿಸಿ ಆ ಪತಿವ್ರತೆ ಹೇಳಿದಳು 18 ಸೂರ್ಯೋದಯವಾಗದಿದ್ದರೆ ಶಾಪವು ಫಲಿಸದು ಸೂರ್ಯೋದಯವಾಗಬೇಡಿ ಎಂದು ಹೇಳಿದಳು ಸಾಧ್ವಿ ಆರ್ಯಧರ್ಮ ಲೋಕಕಾರ್ಯ ಸರ್ವವೂ ಸ್ತಬ್ಧವಾದವು ಎಲೆಲ್ಲೂ ಕತ್ತಲೆಯು ಭಾನು ಉದಯಿಸಲಿಲ್ಲ 19 ಇಂದ್ರಾದಿ ದೇವರ್ಗಗಳು ಬ್ರಹ್ಮನಲಿ ಮೊರೆಯಿಡಲು ಪತಿವ್ರತೆ ಮಹಾತ್ಮನೆ ಮತ್ತೊಬ್ಬ ಪತಿವ್ರತೆಯೇ ಪ್ರತಿ ಮಾಡುವಳು ಅತ್ರಿಋಷಿ ಪತ್ನಿ ಅನಸೂಯಾ ಪತಿವ್ರತಾ ರತ್ನಳಾ ಸಹಾಯ ಕೇಳೆಂದರು ವೇಧ 20 ಶಕ್ರಾದಿ ಸುರರುಗಳು ಅನಸೂಯಾದೇವಿಯಲಿ ಕೋರಿಕೆ ಮಾಡಲು ಆಕೆ ದೇವತೆಗಳ ಸಮೇತ ಧೀರ ಪತಿವ್ರತೆಯಾದ ಕೌಶಿಕಾ ಗೃಹಕೆ ಹೋಗಿ ಪರಿಚಯ ಮಾಡಿಕೊಂಡು ಕೊಂಡಾಡಿದಳಾ ಸಾಧ್ವಿಯ 21 ಮಹಾಭಾಗರು ಇಂದ್ರಾದಿಗಳಿಗೂ ಅನಸೂಯಗೂ ವಿಹಿತೋಪಚಾರ ಪೂಜಾದಿಗಳ ಮಾಡಿ ಆ ಸಾಧ್ವಿ ಮಹಾಭಾಗ್ಯ ಆಗಮನ ಎನ್ನುತ್ತ ಕಾರಣವನು ಬಹು ಹಿತದಲಿ ಕೇಳಿದಳು ತನ್ನ ಸ್ಥಿತಿ ಹೇಳಿ 22 ಸೂರ್ಯ ಉದಿಸುವದಕ್ಕೆ ಪತಿ ಬದುಕಿಸಲ್ಪಡುವನು ಎನ್ನುತೆ ಕೌಶಿಕಾ ಸಾಧ್ವಿಯು ಅನುಮೋದನೆ ಕೊಂಡು ಇನ ಉದಿಸಲಿ ಎಂದ ಅಘ್ರ್ಯ ಕೊಟ್ಟಳು ಮುದದಿ 23 ಸೂರ್ಯ ಮುನಿಶಾಪ ಫಲಿಸಿತು ಬಿದ್ದ ಕೆಳಗೆ ಕೌಶಿಕ ತತ್‍ಕ್ಷಣವೇ ಬದುಕಿ ಎದ್ದ ಪತಿವ್ರತಾ ಶಿರೋಮಣಿ ಅನಸೂಯಾ ದೇವಿ ಪ್ರಭಾವ ಪತಿವ್ರತಾ ಮಹಾತ್ಮೆ ಜ್ವಲಿಸಿತು ಲೋಕದಲ್ಲಿ 24 ಕೌಶಿಕನ್ನ ಬದುಕಿಸಿದ್ದು ಮಾತ್ರವಲ್ಲದೇ ಸರ್ವ ಕುಷ್ಠಾದಿ ರೋಗ ಪರಿಹರಿಸಿ ಯುವವಾಗಿ ಮಾಡಿ ಅಯುಷ್ಯ ಬಹುನೂರು ವರ್ಷಗಳ ಅನುಗ್ರಹಿಸಿ ತುಷ್ಠಿ ಸುಖಜೀವನ ಒದಗಿಸಿದಳ್ ಅನಸೂಯಾ 25 ಅನಸೂಯೆಯ ಪಾತಿವ್ರತ್ಯ ಮಹಾತ್ಮೆಯ ಶ್ಲಾಘಿಸಿ ಏನು ವರ ಕೇಳಿದರೂ ಕೊಡುವವೆಂದು ಸುರಪ ಆನಿಮಿಷರು ಹೇಳಲು ಪತಿವ್ರತಾ ಶಿರೋಮಣಿ ವಿಧಿ ಶಿವ ತನ್ನಲ್ಲವತರಿಸಲೆಂದಳು 26 ತಥಾಸ್ತು ಎಂದ ದೇವತೆಗಳ ವರ ಸತ್ಯಮಾಡೆ ಸುತಪಸ್ವಿ ಅತ್ರಿಗೆ ಹಂಸ ವೃಷಾರೂಡರು ಪ್ರತ್ಯಕ್ಷದಿ ಹೇಳಿದಂತೆಯೂ ಅನಸೂಯ ಅತ್ರಿಗೆ ಪುತ್ರರೆಂದುದಿಸಿದರು ಸೋಮಸ್ತ ಬ್ರಹ್ಮೇಶ ವಿಷ್ಣು 27 ಮುಖ್ಯಪ್ರಾಣಾಂತರ್ಗತನೇ ಪಂಕಜಾಸನ ಪಿತನೆ ಶ್ರೀಕರಾರ್ಚಿತ ಶ್ರೀಪ್ರಸನ್ನ ಶ್ರೀನಿವಾಸ ಕಪಿಲ ಅರ್ಕಕೋಟ್ಯಾಮಿತ ತೇಜನೇ ಬ್ರಹ್ಮಾದ್ಯಮರ ಗುರೋ ಜಗದೀಶ ದತ್ತಾತ್ರಯನಮೋ ಪ್ರಿಯತಾಂ ಶರಣು 28 ಎರಡನೇ ಅಧ್ಯಾಯ ಶ್ರೀ ದತ್ತಾತ್ರಯ ಪ್ರಾದುರ್ಭಾವ ಸಾರ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಭೋಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ಬ್ರಹ್ಮಾವಿಷ್ಟನು ಸೋಮ ಔಷಧಿಗಳ ರಾಜನಾದ ಉನ್ಮಾದ ಚರ್ಯದಿ ಕೋಪ ಪ್ರಕಟಿಸಿ ಮೆರೆವರು ತಮ್ಮ ಶಿಷ್ಯರೊಡಗೂಡಿ ಶಿವಾವತಾರ ದೂರ್ವಾಸ ಸುಮ್ಮನಸ ಸಜ್ಜನ ಹಿತರು ದುಷ್ಟನಿಗ್ರಹರು 1 ತನ್ನನ್ನ ತಾನೇ ಸುತನಾಗಿ ದತ್ತಮಾಡಿಕೊಂಡನು ವಿಷ್ಣು ಅತ್ರಿ ದಂಪತಿಗೆ ಆದ ಕಾರಣ ಪ್ರಖ್ಯಾತೆ ಉನ್ನಾಮ ದತ್ತಾತ್ರಯ ಕ್ಷೋಣಿ ಯೋಗ್ಯಾಧಿಕಾರಿಗಳಿಂ ಘನಭಕ್ತಿಯಿಂ ಶುಚಿಯಿಂ ಜಪ್ಯ ಸ್ಮರಣೀಯಿಂ ಶ್ರೋತವ್ಯ ಜಯತು 2 ಕಲ್ಯಾಣತಮ ಪೂರ್ಣ ಅಮಲ ಗುಣಗಣ ಸಿಂಧು ಮಾಲೋಲ ಶ್ರೀವಕ್ಷ ಶ್ರೀಶನೇ ಪ್ರಾದುರ್ಭವಿಸಿದನು ಚೆಲುವ ಅನುಪಮ ಸೌಂದರ್ಯಸಾರ ಸರ್ವೋತ್ತಮ ಲೀಲಾನಂದಮಯ ಚಿನ್ಮಾತ್ರಗಾತ್ರ ಭಕ್ತೇಷ್ಟದಾತ 3 ಕಮಲಾಸನಾವಿಷ್ಟ ಸೋಮ ರುದ್ರಾವತಾರ ದೂರ್ವಾಸ ತಮ್ಮ ತಮ್ಮ ಉದ್ಯೋಗಸಾಧನಕೆ ಬೇರೆ ಬೇರೆ ಹೋಗೆ ಸುಮನೋಹರ ರೂಪ ಶ್ರೀಮನೋರಮ ದತ್ತಾತ್ರಯ ಸುಮಹಾ ಯೋಗಿಯಾದ ನಿಸ್ಸಂಗ ಯೋಗೇಶ್ವರೇಶ್ವರ 4 ಅತ್ರೇಯರು ಮೂವರು ಹೀಗೆ ಬೇರೆ ಬೇರೆಯಾಗಿಯೇ ತಮ್ಮ ತಮ್ಮ ರೂಪದಲ್ಲೇ ಇದ್ದರು ಒಂದಾಗಿ ಅಲ್ಲ ಸೋಮ ಶಿವ ದತ್ತರಿಗೆ ಬೇರೆ ಬೇರೆ ಮಂತ್ರವುಂಟು ಸೋಮ ಪಂಚ ಶಿವ ಪಂಚ ದತ್ತ ನವಅಕ್ಷರವು 5 ಪ್ರೋದ್ಯ ದಿವಾಕರ ಪೋಲ್ವ ವರ್ಣವುಳ್ಳ ಶುಭಗಾತ್ರ ಆದಿತ್ಯ ಸಹಸ್ರಾಮಿತ ಮಹೋತ್ಕøಷ್ಟ ತೇಜಃಪುಂಜ ವ್ಯಾಪ್ತ ಸರ್ವತ್ರ ಜ್ಞಾನಾಭಯಕರನು ಬ್ರಹ್ಮಾದಿ ತ್ರಿದಿವ ಸುಬೋಧಕನು ಕಪಿಲನು ದತ್ತಾತ್ರಯ 6 ಇಂಥ ಮಹಾಮಹಿಮನು ಕಪಿಲ ದತ್ತಾತ್ರಯನು ಅಧಿಕಾರಿಗಳಿಗೆ ಅಪರೋಕ್ಷಜ್ಞಾನ ಮೋಕ್ಷದಾತ ಶ್ರೋತೃ, ಮಂತ್ರ, ಧ್ಯಾತೃಗಳಿಗೆ ಕಪಿಲ ದತ್ತಾತ್ರಯ ಭಕ್ತಿ ಮೆಚ್ಚಿ ಸದಾ ಸಂರಕ್ಷಿಸಿ ಇಷ್ಟಾರ್ಥ ಕೊಡುವ 7 ಪದ್ಮ ಭವಾದ್ಯಮರರಿಂ ಧ್ಯಾತ ದತ್ತಾತ್ರಯ ಹರಿ ಮೇದಿನಿ ನರರಂತೆ ಅವತಾರ ಲೀಲೆ ಚರಿಸಿ ಅದ್ಭುತ ಯೋಗಾನುಷ್ಠಾನದಿ ಇರುತಿರೆ ಜನರು ಈತನ ಸೌಂದರ್ಯ ಯೋಗಸಾಮಥ್ರ್ಯ ಹೊಗಳಿದರು 8 ಸಹಸ್ರಾರು ಋಷಿಪುತ್ರ ಬ್ರಹ್ಮಚಾರಿಗಳು ಬಂದು ಅಹರ್ನಿಶಿ ಯೋಗೇಶ್ವರೇಶ್ವರ ದತ್ತನಾಶ್ರಮದಿ ಬಹಳುತ್ಸಾಹದಲಿ ಸುತ್ತು ಮುತ್ತು ಗುಂಪುಗೂಡಿ ಮಹಾಯೋಗಾಭ್ಯಾಸಕ್ಕೆ ಚ್ಯುತಿಯ ಕಲ್ಪಿಸಿದರು 9 ಯೋಗ್ಯರು ಸಜ್ಜನರು ಈ ಭಕ್ತ ಋಷಿಕುವರರು ಯೋಗ್ಯಸಾಧನೆ ಅವರವರ ಆಶ್ರಮದಲ್ಲಿಯೇ - ಗೈಯಲಿ ಬೇಕೆಂದು ಅವರುಗಳು ಹೋಗೋ ಉಪಾಯ ನಿಶ್ಚೈಸಿ ಮುಳುಗಿದ ದತ್ತನು ಸರೋವರದೊಳು 10 ಸುರಮಾನದಿ ಸಾವಿರವರ್ಷ ಭಗವಾನ್ ದತ್ತನು ಸರೋವರದೊಳಿದ್ದನು ಹೊರಜನಕ್ಕೆ ಕಾಣದೆ ಆ ಋಷಿಪುತ್ರರು ತೀರದಲಿ ಇಕೋ ಈಗ ನಾಳೆ ಬರುವನು ಮೇಲೆ ಎಂದು ಕಾಯುತ್ತಿದ್ದರು ದೃಢದಿ 11 ಜಲಧಿ ಉಕ್ಕಿ ಹರಿದು ಕ್ಷೋಣಿಯ ಮುಳುಗಿಸದೆ ಜಲಮಧ್ಯ ತಾನಿದ್ದು ಕಾಯುವ ವಡವಾ ಮುಖಾಗ್ನಿ ಜಲಮಧ್ಯದಿ ಈಗ ಹೊಕ್ಕಿರುವ ದತ್ತಾತ್ರಯನು ಮುಳುಗಿರುವುದು ಆಶ್ಚರ್ಯವಲ್ಲ ಈರ್ವರೂ ಏಕ 12 ಬಲುದೀರ್ಘ ದೇವವರ್ಷಗಳು ಸಾಸಿರವಾದರೇನು ಶೀಲತಮ ವರವಾಯುವು ವರುಣನು ಬುಧಾದಿ ಜಲಾಭಿಮಾನಿಗಳು ಕಿಂಕರರಾಗಿ ಇರುತಿಹರು ಜಲಶಾಯಿ ನಾರಾಯಣ ಅವತಾರ ದತ್ತನಿಗೆ 13 ಒಂದು ದಿನ ಕೆರೆನೀರು ಚಲಿಸಲು ಸಂತೋಷದಿ ಬಂದರೂ ಬಂದರೂ ಎಂದು ಕೂಗೆ ಋಷಿಕುವರರು ಇಂದಿರಾಪತಿ ದತ್ತ ಮೇಲೆದ್ದು ಬಂದ ಬದಿಯಲ್ಲಿ ಇಂದಿರಾಂಗಿ ನಾರೀಮಣಿ ಓರ್ವಳ ಆಲಿಂಗಿಸುತ 14 ಯಾರನ್ನೂ ಲೆಕ್ಕಿಸದೆ ಕಾಮವಿಲಾಸ ಕೇಳಿಯ ಆ ಸ್ತ್ರೀಯೊಡನೆ ಮಾಡುತ್ತಿದ್ದುದು ಕಂಡು ಯುವಕರು ಯೋಗಿ ಹೀಗಾದರೆ ಎನ್ನುತ ತ್ವರಿತ ತೆರಳಿದರು ಜುಗುಪ್ಸೆಯಲ್ಲಿ ತ್ಯಜಿಸಿ 15 ಆ ಪುಣ್ಯವಂತ ಋಷಿಪುತ್ರರು ತಿಳಕೊಳ್ಳಲಿಲ್ಲ ಆ ಸ್ಛುರದ್ರೂಪಿಣಿ ನಾರಿ ಸಾಕ್ಷಾತ್ ಲಕ್ಷ್ಮೀದೇವಿಯೆಂದು ವಿಪುಲ ಮನ ಹರುಷ ತೋರಿಸಿ ದತ್ತಾತ್ರಯನು ಕೈಪಿಡಿದು ಲಕ್ಷ್ಮಿಯ ಕರೆದುಹೋದ ಆಶ್ರಮಕೆ 16 ಯಾವ ತನ್ನಾಶ್ರಮದಿ ಸ್ವಾಧ್ಯಾಯ ಪ್ರವಚನಗಳ್ ದಿವ್ಯ ಯೋಗ ಅಭ್ಯಾಸ ಶಿಷ್ಯರ್ಗೆ ಶೀಕ್ಷಾದಿಗಳ್ ಯಾವಾಗಲೂ ಹಿಂದೆ ನಡೆಸುತ್ತಿದ್ದನೋ ಅಲ್ಲಿ ಈಗ ದೇವಿಯೊಡನೆ ಲೀಲಾವಿಲಾಸಗಳ ತೋರಿಸಿದ 17 ಮಂದ ಧೀಗಳು ಈ ವಿಡಂಬನೆ ಕಂಡು ಮೋದದಲಿ ಶ್ರೀದತ್ತ ಈ ರೀತಿ ಆದನಲ್ಲಾ ಎಂದು ಮಾತನಾಡೆ ಸುಧೀಗಳು ಬೃಹಸ್ಪತ್ಯಾದಿಗಳು ದತ್ತಾತ್ರಯನು ಮೋದಚಿನ್ಮಯ ನಿರ್ದೋಷ ಹರಿ ಶ್ರೀಶನೆ ಎಂದರÀು 18 ಮುಖ್ಯಪ್ರಾಣಾಂತರ್ಗತನೇ ಪಂಕಜಾಸನ ಪಿತನೆ ಶ್ರೀಕರಾರ್ಚಿತ ಶ್ರೀಪ್ರಸನ್ನ ಶ್ರೀನಿವಾಸ ಕಪಿಲ ಅರ್ಕಕೋಟ್ಯಮಿತ ತೇಜನೇ ಬ್ರಹ್ಮಾದ್ಯಮರ ಗುರೋ ಜಗದೀಶ ದತ್ತಾತ್ರಯ ನಮೋ ಪ್ರಿಯತಾಂ ಶರಣು 19 -ಇತಿ ಎರಡನೇ ಅದ್ಯಾಯ ಸಂಪೂರ್ಣಂ - ಮೂರನೇ ಅದ್ಯಾಯ ಸಂಪತ್‍ಲಕ್ಷ್ಮೀ ವೃತ್ತಾಂತ ಉದಿತ ಭಾಸ್ಕರನಿಭ ಅನಂತಾರ್ಕಾಮಿತ ತೇಜ ಪದ್ಮಜಾದಿ ದೇವರ್ಗೆ ಜ್ಞಾನಬೊಧಕನು ಅನಘ ಮುದಬಲ ಜ್ಞಾನಾದಿ ಗುಣಗರ್ಣಾಣವ ಸರ್ವತ್ರ ವ್ಯಾಪ್ತ ರಕ್ಷಕ ದತ್ತಾತ್ರಯ ಶ್ರೀಶನೆ ಶರಣು ಪ ಸುರಪ ಜಂಭಾಸುರನಿಂದ ಅಪಜಯವ ಕೊಂಡು ಸುರಗುರು ಪ್ರೇರಣೆಯಿಂ ದತ್ತಾತ್ರಯನಲಿ ಹೋಗಿ ಶರಣು ಹೊಕ್ಕು ಸೇವಗೈಯಲು ಆಗ ಅವನನ
--------------
ಪ್ರಸನ್ನ ಶ್ರೀನಿವಾಸದಾಸರು
ಯಾರೊಡನುಸುರವೆನೋ ಕಡಲಶಾಯಿ ಬಿಡದೆ ನಿನ್ನನು ಅಡಿಗಡಿಗೆ ಕೊಂಡಾಡುವ ಹುಡಗನ ಮೇಲಿಷ್ಟು ಕರುಣವಿಲ್ಲದರಿಂದ ಪ ಪೊಡವಿಯೊಳಗೆ ಜನಿಸಿರುವರೊಳಗೆ ನಾನೆ ಕಡೆ ಈಗ ಬಸುರಿನೋಳ್ ಪಡೆದ ಮಗನು ತನ್ನ ಮಡದಿ ಮಕ್ಕಳನು ಎನ್ನೊಡನಿತ್ತು ನಾಕಕೆ ನಡೆದನೆನಗೆ ನಡುಮರಣವ ಹೊರಸಿ 1 ಕೆಟ್ಟ ಬದುಕ ಕಾಣಲಾರೆ ಮಾಳ್ಪರೆ ಎನ್ನ ರಟ್ಟೆ ಬಲವು ತಗ್ಗಿ ಹೋಯ್ತು ಮೊಮ್ಮಕ್ಕಳ ಅಟ್ಟುಳಿ ಬರಿಸನ್ನವಸ್ತ್ರಾಭರಣಕೆಂದು ಕುಟ್ಟಿ ಕೊಂಬರು ಎನಗಿದಿರಾಗಿ ಶಿವನೇ 2 ನಾನು ಎಂಬುವರಿಲ್ಲ ಗೃಹಕೃತ್ಯದೊಳಗೆನ್ನ ಮಾನಿನಿಯೊರ್ವಳುಂಟಿದರೊಳು ಸೊಸೆಯಷ್ಟು ಏಕೆಂದ ರೇನು ಸಂಸಾರವಿದನು ಪವಮಾನ ಸುತನ ಕೋಣೆ ಲಕ್ಷ್ಮೀಶ ನಡೆಸು 3
--------------
ಕವಿ ಪರಮದೇವದಾಸರು
ರಂಗಾ ಮನೆಗೆ ಬಂದ ಪರಮ ಮಂಗಳದಾಯಿ ಹಿಂಗಿತು ದಾರಿದ್ರ್ಯವಿನ್ನು ಶೃಂಗಾರ ಭುಜಂಗ ಶಾಯಿ ಪ. ಪದ್ಮನಾಭ ಸಿರಿನಲ್ಲಕೃಷ್ಣ ತನ್ನ ಪಾದ ಪಲ್ಲವೆ ಶರಣೆಂದು ನಿಲ್ಲೆ ಧೈರ್ಯದಿ ಮೆಲ್ಲ ಮೆಲ್ಲಕಾಗಿ ತನ್ನ ವಲ್ಲಭೆಯ ಕೂಡಿ ಎನ್ನ ಸೊಲ್ಲ ಲಾಲಿಸುತ ಕಂಸದಲ್ಲಣ ತಡವಿಲ್ಲದಂತೆ 1 ಆರುವೆನನೆಂಬ ಹುಣ ಘೋರಭಾವದಿಂದಲುಂಡು ಗಾರುಮಾಳ್ಪ ಸಮಯದಲ್ಲಿ ಚೀರುತಿರುವುದ ಮಾರಜನಕ ಲಾಲಿಸಿ ಕೃಪಾರಸದಿ ಸಲಹಿ ನಿಜ ಪಾ ದಾರವಿಂದ ಯುಗ್ಮವನ್ನು ತೋರಿ ತಿರುಗಿ ಕಳುಹಿದಂಥ 2 ಭಕ್ತಾಭರಣನೆಂಬ ಬಿರುದ ವ್ಯಕ್ತವಾಗಿ ತೋರಿ ಸರ್ವೋ ದ್ವøಕ್ತ ಮಹಿಮ ತನ್ನೊಳ್ಪರಮಾ ಮತಿಯನಿತ್ತು ಮಾಯಾ ಶಕ್ತಿಯರಸ ವೆಂಕಟೇಶ ನಿತ್ಯ ಮುಕ್ತ ರಮೆಯ ಕೂಡಿ ನಗುತ 3
--------------
ತುಪಾಕಿ ವೆಂಕಟರಮಣಾಚಾರ್ಯ
ರಾಮ ರಘುಕುಲಾಬ್ಧಿ ಸೋಮಾ ಪ ಸಂತತ ಭಕ್ತ ಪ್ರೇಮಾ ಮಂಗಲಧಾಮಾ | ಪರಿಪೂರ್ಣ ನಿನ್ನಯ ನಾಮವೆ ಗತಿ ಎನಗೆ ಅ.ಪ. ಏಸಪರಾಧಗಳೆಣಿಸದೆ ದಯವಿಟ್ಟು | ದೋಷದೂರನ ಮಾಡೊ ಕೇಶವ ಕಮಲಾಕ್ಷಾ 1 ಪ್ರಣವಾಕಾರ ವಿಮಾನ ಮನಿಯಾಗಿಯಿಪ್ಪನೆ | ಫಣಿಶಾಯಿ ರಂಗೇಶ ಮಣಿಗಣ ಭೂಷಣನೆ2 ಇಕ್ವಾಕು ನೃಪವರದ ಸಾಕ್ಷಾತ್ತ ಪರಮಾತ್ಮಾ-| ಧ್ಯಕ್ಷ ವಿಜಯವಿಠ್ಠಲಾ ರಕ್ಷಿಸು ಬಿಡದೆನ್ನ3
--------------
ವಿಜಯದಾಸ
ರಾಮ ರಾವಣಧೂಮ ನಿಸ್ಸೀಮಾ ವೊ ಪ ಸ್ವಾಮಿ ನಿಮ್ಮ ಪದಾಬ್ಜ ಸೇವೆಗೆ ತಾಮಸವುತ್ತೇನು ಕರುಣಿಸೋ ಕಾಮಿತಾರ್ಥಗಳೀವಸಗುಣ ನಾಮ ಸರ್ವಸಭೀಮಾ ಸೀತಾರಾಮಾ 1 ನಿನ್ನ ಧ್ಯಾನದೊಳಿರುವ ಸಂಭ್ರಮ ಮೆನ್ನ ಮನಕದು ಫಲಿಸುಲೋಸುಗ ಚೆನ್ನಕೇಶವನೆಂದು ಭಜಿಸುವೆ ಪನ್ನಗಾಧಿಪಶಾಯಿ ಸೀತಾ 2 ನಿತರ ಚಿಂತೆಯ ನಳಿಸಿದಾ ನಿಜ ಯತಿ ಜನೋದ್ದಾರ ಯಕ್ಷರಕ್ಷಕ ಪತಿತಪಾವನಾದ ಮದ್ಗುರು ಸತಿ ಶಿರೋಮಣಿಯಾದ ಸೀತಾ 3
--------------
ಚನ್ನಪಟ್ಟಣದ ಅಹೋಬಲದಾಸರು
ಲಾಲಿ ಲಯ ಜಲ ಶಯ್ಯ | ಲೋಲ ಕೃಷ್ಣಯ್ಯಲಾಲಿ ವಟದೆಲೆ ಶಾಯಿ | ಹರಿಯೆ ತುರಗಾಯ ಲಾಲೀ ಪ ಕುಂಡಲ ಲೋಲ | ಸಿರಿಕೃಷ್ಣ ಬಾಲ1 ಪುಂಡರೀಕನಿಗೊಲಿದ | ಪಾಂಡವರ ಪ್ರೀಯಪಿಂಡಾಂಡದೊಳಗಿರುವ | ಬ್ರಹ್ಮಾಂಡದೊಡೆಯಉಂಡು ಉಟ್ಟದ್ದೆಲ್ಲ ನಿನಗೆಂಬ ಗೆಳೆಯಾಅಂಡಜಾಧಿಪ ತುರಗ | ಪೊರೆವ ಇದು ಖರೆಯ 2 ಅಮಿತ ಮಾಧವ ಶ್ರೀಶ ಮುಖ್ಯ ಪ್ರಾಣೇಶ 3 ಸೊಲ್ಲು ಬಾಯ್ತುಂಬಸಲ್ಲಿಪಗೆ ದಯ ತುಂಬ | ಉಣಿಪ ಮದ್ಬಿಂಬ 4 ಅಕ್ಷಯ ಹೊಯ್ಯೆ | ಶೀರೆಗಳ ಜಾಲಸುರಿಸಿದನೆ ತಾ ಗುರು | ಗೋವಿಂದ ವಿಠಲ 5
--------------
ಗುರುಗೋವಿಂದವಿಠಲರು
ವಿತ್ತ ಅಸಾರ್ಥಕತೆಯ ತಿಳಿದು ಪುರುಷಾರ್ಥ ಪ್ರದನು ಶ್ರೀ | ಹರಿಯ ಪ್ರಾರ್ಥಿಸೋ ಪ ಮಡದಿ ಮನೆ ಮಕ್ಕಳೆಲ್ಲ | ಬಿಡದೆ ನಿನ್ನ ಸೇವಿಸೋರುಹಿಡಿಯ ತುಂಬ ಹೊನ್ನು ಹಣವು | ಬಿಡದೆ ಬರುತಿರೇ 1 ಪ್ರಾಣ ಉತ್ಕ್ರಮಣ ಸಮಯ | ಮಾನಿನೀಯು ರೋದಿಪಾಳುಪ್ರಾಣ ಪೋದ ತನುವ ಸೋಕೆ | ತಾನೆ ಒಲ್ಲಳು 2 ಮಂದ ಮಾನವ 3 ಬಿಂಬ ಚಲಿಸೆ ತಾನು ಪ್ರತಿ | ಬಿಂಬ ಚಲಿಪ ಮತಿಯೆ ನಿಜವುಉಂಬು ಕೊಂಬ ಕೊಡುವುದೆಲ್ಲ | ಬಿಂಬದೆನ್ನೆಲೋ 4 ಇಂದಿರೇಶನರ್ಚಿಸೂತ | ಇಂದೆ ಗಳಿಸೊ ಪುಣ್ಯ ದ್ರವ್ಯನಂದ ಕಂದಗರ್ಪಿಸೋದು | ದ್ವಂದ್ವ ಕರ್ಮವ 5 ತನುವು ಮನವು ನಿನ್ನದಲ್ಲ | ಗುಣದ ಕಾರ್ಯ ನಿನ್ನದಲ್ಲನಾನು ನನ್ನದೆಂಬ ಮತಿಯು | ಹೀನ ತಿಳಿಯೆಲೋ 6 ನಿತ್ಯ ಬದ್ಧ ಜೀವಿ ನೀನು | ಸತ್ಯ ಸ್ವಾತಂತ್ರ ಹರಿಯುದತ್ತ ಕರ್ತೃತ್ವವಿಹುದು | ಕೃತ್ಯ ಉಂಬಲು 7 ಹರಿಯ ರೂಪ ಹೃದಯದಲ್ಲಿ | ಪರಿಕಿಸಾದೆ ಗತಿಯು ಇಲ್ಲಕರುಣಿಸಿಹನು ಮನುಜ ದೇಹ | ಹರಿಯ ಕಾಣಲು 8 ಮಧ್ವ ಮತದಿ ಜನ್ಮವಿರಲ | ಅವಿದ್ಯೆಗಳನ ನೀಗಿಕೊಂಡುಮಧ್ವಮುನಿಯ ಕರುಣ ಪಡೆದು | ಸಿದ್ಧನಾಗೆಲೋ 9 ಕಮಲ | ಭಾವದಿಂದ ಪೂಜಿಸಾದೆಸಾವು ಹುಟ್ಟು ತಪ್ಪೊದಿಲ್ಲ | ಕೋವಿದನಾದರು10 ಅಂಶದಿಂದ ಇರುತ ತಾವು | ಹಂಸ ಮಂತ್ರ ಸರ್ವರಲ್ಲಿವಿಂಶತ್ಯೇಕ ಸಾಸಿರಾವು | ಅಂತೆ ಷಟ್ಯತ 11 ದಿನಕೆ ಇಂತು ಜಪವ ಚರಿಸಿ | ವಿನಯದಿಂದನಿರುದ್ದನೀಗೆಎಣಿಕೆ ಮಾಡಿ ಅನಿಲ ಸಹಿತ | ತಾನೆ ಅರ್ಪಿಪ 12 ಪರ್ವಕಾಲದಿದನು ತಿಳಿದು | ಶರ್ವ ವಂದ್ಯ ಶೇಷಶಾಯಿಸರ್ವ ಕಾರ್ಯಗಳನು ಲಾ | ತವ್ಯ ಗಿತ್ತಿಹ 13 ದೈತ್ಯ ಜನರು ಅರಿಯದಂತೆ | ಯುಕ್ತನಾಗಿ ಬ್ರಹ್ಮ ವಾಯುಆಪ್ತ ವಾಕ್ಯ ಮೀರದಂತೆ | ಗುಪ್ತ ಚರಿಸುವ 14 ತತ್ವಕಿದು ವಿರುದ್ಧವಲ್ಲ | ವ್ಯಕ್ತ ವಿಹುದು ಲೋಕದಲ್ಲಿಮತ್ತೆ ಕ್ಷಣಕೆ ಒಪ್ಪೆನೆಂದು | ಇತ್ತು ಸ್ಥಾನವ 15 ಗೊತ್ತು ಮಾಡಿ ಪೋಗುವಂತೆ | ಭ್ರಾತೃ ವಾದಿರಾಜರೀಗೆಇತ್ತು ಪದವಿಗಳನು ತಾವು | ಸೂಕ್ತ ಪೇಳ್ವರು 16 ಭಾರತೀಶ ಕರ್ಮ ವೀಯೆ ಗುರುಗೋವಿಂದ ವಿಠಲ ಗತಿ ಇತ್ತು | ಕಾವ ಬಿಡದಲೆ 17
--------------
ಗುರುಗೋವಿಂದವಿಠಲರು
ವೆಂಕಟಾಚಲನೆ ಬಾರೊ ಶಂಕರಾಭರಣ ಶಾಯಿ | ಕಿಂಕರರಿಗೊಲಿದ ನಿಃಶಂಕ ಬಾರೊ ಪ ಇಂದಿರೆ ಕೂಡ | ಚಂದದಿಂದಲೊಪ್ಪುತಿಹ ಇಂದುವದನಾ || ಮಂದರೋದ್ಧಾರನೆ ಮಹನಂದ ಮೂರುತಿ | ವೃಂದಾರಕ ವಂದ್ಯಪಾಲ ವಂದಿಪೆ ನಿಂದು 1 ಲೌಕಿಕ ವಿಲಕ್ಷಣ ಅನೇಕ ಏಕಾ | ಸಾಕಾರ ವಿಗ್ರಹ ಪುಣ್ಯಶ್ಲೋಕ ವಿಭುವೆ || ಪ್ರಾಕೃತ ರಹಿತಗಾತ್ರ ಲೋಕಪಾವನ | ಶೋಕ ಮೂಲನಾಶನ ಅಶೋಕ ಜನಕಾ 2 ಮಣಿ ಅಗಣಿತ ಬಂಧು | ಆಗನಾಗಧಾರಕನೆ ನಾಗ ಭಂಜನಾ || ಆಕಾಶ ಗಂಗೆಯ ಅಂಗುಷ್ಟದಿ ಪೆತ್ತನೆ | ಆಗಲೀಗಲೆನ್ನದಲೆ ಸಾಗಿ ವೇಗದಿ 3 ಅಂಗ ಅಂಗಿ ಭಾವದಿಂದ ಅಂಗದೊಳಿದ್ದು | ಸಂಗಡ ತಿರುಗುವ ನೀಲಾಂಗ ನಿಃಸಂಗಾ || ಭೃಂಗ ಜಗದಂತ | ರಂಗ ರಂಗರಾಜ ಸುಖಸಂಗ ನಿಸ್ಸಂಗಾ 4 ಆಪ್ತಕಾಮಿ ಅಮೃತಾಂಗ ಗುಪ್ತ ಮಹಿಮ | ತಪ್ತ ಕಾಂಚನ ಸನ್ನಿಭ ವ್ಯಾಪ್ತ ನಿತ್ಯಾ || ತೃಪ್ತ ತೃಣ ಬೊಮ್ಮದಿ ನಿರ್ಲಿಪ್ತ ವ್ಯಾಪ್ತಾ | ಸಪ್ತ ಸಪ್ತ ಲೋಕೇಶ ಅತೃಪ್ತ ಲೀಲಾ 5 ನಿರ್ದೋಷ ವಸ್ತುವಿನಿಂದ ನಿರ್ಧರ ಮಾಡೆ | ಪೊಂದಿಪ್ಪವು ನಿನ್ನಲಿ ನಾಲ್ಕು ನಿರ್ದೋಷಂಗಳೂ || ಭದ್ರ ಫಲದಾಯಕ ಸಮುದ್ರಶಯನಾ | ಮಧ್ಯಜೀವಿ ವಂದ್ಯ ಸುಪ್ರಸಿದ್ಧ ಮೋಹನ 6 ಜೀವಾಭಿಮಾನಿ ಗಿರೀಶ ದೇವ ದೇವೇಶಾ | ಜೀವ ರಾಶಿಗಳ ಸ್ವಭಾವ ಪ್ರೇರಕಾ || ಜೀವನವಾಗಿ ನಮ್ಮನು ಕಾವುತಿಪ್ಪ | ರಾಜೀವ ನಯನ ವಿಜಯವಿಠ್ಠಲ ಪೂರ್ಣಾ 7
--------------
ವಿಜಯದಾಸ
ಶುಭ ಮಂಜುಳಗಾತ್ರ್ರೆಕುಂಜರದಂತೆ ಗಮನೆ ರಂಜಿತಾಂಗಿ ನಿರಂಜನಾಂಗಿ ಪ ಧರೆಯ ಮ್ಯಾಲೆ ಹಿರಿಯಳು ನಾ-ನಿರಲು ಲಜ್ಜೆ ತೊರೆದು ನೀನುಸರಸವಾಡೋದೆ ಮುರಹರನಕರೆದು ಭಾಮಿನಿ ಸುಗುಣೆ ಕಾಮಿನಿ 1 ಪತಿಯ ಪ್ರೀತಿ ಎನ್ನ ಮ್ಯಾಲೆಅತಿಶಯದಿ ಇರಲು ಜ್ಯೇಷ್ಠಸತಿಯಳೇನೇ ನೀನು ನೋಡುಮತಿಯ ರುಕ್ಮಿಣಿ ಸುಪದ್ಮಗಂಧಿನಿ2 ಒಂದು ಕಾಲದಲ್ಲಿ ದಾಸಿ-ಯಿಂದ ಪತಿಯು ಸರಸವಾಡಲುಬಂದಳೇನೇ ಅರಸಿ ಸಮ-ಳೆಂದು ಭಾಮಿನಿ ಸುಗುಣೆ ಕಾಮಿನಿ 3 ದಾಸಿ ಸಮಳು ನಾನು ಅಲ್ಲ ದೋಷ ಮಾತನಾಡಬೇಡಶ್ರೀಶನ ದಯರಾಶಿ ಇರಲುದಾಸಿಯೆ ರುಗ್ಮಿಣಿ ಸುಪದ್ಮಗಂಧಿನಿ 4 ಸಾರೆ ಕೃತ್ಯವಾರೆ ಹೂಡಿದ್ವಾರಾವತಿಯಿಂದ ಎನ್ನಸಾರೆ ಬಂದ ಪ್ರೀತಿಯು ಅ-ಪಾರೆ ಭಾಮಿನಿ ಸುಗುಣೆ ಕಾಮಿನಿ5 ಕಡಲಶಾಯಿ ತಡೆದರಿನ್ನುದಿಡುಗು ದೇಹ ಬಿಡುವೆನೆಂಬೊನುಡಿಯ ಕೇಳಿ ಪಿಡಿದನೆಬಿಡದೆ ರುಗ್ಮಿಣಿ ಸುಪದ್ಮಗಂಧಿನಿ 6 ಮಂದರಧರನು ಪ್ರೀತಿ-ಯಿಂದ ನಿನ್ನ ಪಡೆದನೇನೆಒಂದು ಮಣಿಯ ಕಾರಣದಿಬಂದೆ ಭಾಮಿನಿ ಸುಗುಣೆ ಕಾಮಿನಿ7 ಸುಮ್ಮನೆ ಬಂದವಳಿಗೆಬ್ರಹ್ಮ-ಲಗ್ನದಿ ಬಂದೆನಗೆಸಾಮ್ಯವೇನೆ ಯಾಕೆ ನಿನಗೆಹೆಮ್ಮೆ ರುಗ್ಮಿಣಿ ಸುಪದ್ಮಗಂಧಿನಿ. 8 ಮಾನಾದಿ ಭಕ್ತಿಯು ಕನ್ಯಾ-ದಾನವು ಲೋಕದೊಳಗುಂಟುಏನು ನಿನ್ನ ತಾತ ಕೊಟ್ಟದೀನ ಭಾಮಿನಿ ಸುಗುಣೆ ಕಾಮಿನಿ 9 ಎನ್ನ ಹಂಗದೆಂದುಪ್ರಸನ್ನ ಕೇಳಿ ಶತಧನ್ವನಬೆನ್ನಟ್ಟಿ ಕೊಂದನೇ ನೀ-ಚೆನ್ನ ರುಗ್ಮಿಣಿ ಸುಪದ್ಮ ಗಂಧಿನಿ 10 ವೀರ ಅರಸರ ಸ್ವಭಾವಚೋರರ ಕೊಲ್ಲಬೇಕೆಂಬೋಸಾರ ಪ್ರೀತಿಯದರಿಂದತೋರಿ ಭಾಮಿನಿ ಸುಗುಣೆ ಕಾಮಿನಿ11 ಇಂದ್ರಾದಿ ದೇವತೆಗಳೊಳುಸಾಂದ್ರಯುದ್ಧವನ್ನೆ ಮಾಡಿವೀಂದ್ರ ಎನಗೆ ಪಾರಿಜಾತತಂದ ರುಗ್ಮಿಣಿ ಸುಪದ್ಮಗಂಧಿನಿ12 ಕ್ಲೇಶ ನೋಡಿ ತಂದತರುವ ಭಾಮಿನಿ ಸುಗುಣೆ ಕಾಮಿನಿ13 ನಿಜಳೆಂದು ರಂಗನು ಎನ್ನವಿಜಯಯಾತ್ರೆಯಲ್ಲಿ ತನ್ನಭುಜಗಳಿಂದಾಲಂಗಿಸಿದಸುಜನೆ ರುಗ್ಮಿಣಿ ಸುಪದ್ಮಗಂಧಿನಿ 14 ಅರಸರ ಸ್ವಭಾವ ತಮ್ಮಅರಸೇರ ಮನೆಯೊಳಗಿಟ್ಟುಸರಸ ದಾಸೇರಿಂದ್ಹೋಗೋದುಸ್ಮರಿಸೆ ಭಾಮಿನಿ ಸುಗುಣೆ ಕಾಮಿನಿ 15 ಸಾರವಚನ ಕೇಳಿ ಭಾಮೆಮೋರೆ ಕೆಳಗೆ ಮಾಡುತಿರಲುನಾರಿ ರುಕ್ಮಿಣಿ ಭಾಮೆಯರನ್ನುವೀರ ಕರೆದನು ತಾ ಸೇರಿ ಮೆರೆದನು16 ಮಂಗಳಾಂಗ ಮಹಿಮ ಕೇಶವಾ-ಲಿಂಗಿಸಿದ ಭೈಷ್ಮಿಯನ್ನುತುಂಗಗುಣ ಗೋಪೀರಮಣರಂಗವಿಠಲನು ಅನಂಗಜನಕನು 17
--------------
ಶ್ರೀಪಾದರಾಜರು