ಒಟ್ಟು 150 ಕಡೆಗಳಲ್ಲಿ , 51 ದಾಸರು , 143 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಲಕ್ಷ್ಮೀ ದೇವಿ ಇಂದಿರೆ ನಾ ನಿನ್ನ ವಂದಿಸಿ ಬೇಡುವೆ ಬಂದು ನೀ ಪಾಲಿಸೇ ಚಂದಿರವದನೆ ಪ ಸಿಂಧು ಕುಮಾರಿಯೆ ಎಂದಿಗೂ ನಿನ್ನ ಪದ ದ್ವಂದ್ವವ ಸೇವಿಪೆನೆಂದು ನಾ ಬೇಡುವೆ ಅ.ಪ ದೇವಿ ನಿನ್ನಂಘ್ರಿಯ ಸೇವಿಸಿ ಪದ್ಮಭವ ಭಾವಿ ಫಣೇಶ ಸುರಾಧಿಪರೆಲ್ಲರು ಈ ವಿಧವಾದನುಭಾವವ ಪೊಂದಿರಲು ಈ ವಿಷಯಕೆ ಶ್ರುತಿ ಸಾವಿರವಿರುವುದೆ 1 ಪನ್ನಗವೇಣಿಯೆ ನಿನ್ನನೆ ನಂಬಿರಲು ಸಣ್ಣ ಮನುಜರ ವರ್ಣಿಪುದೇಕೆಲೆ ಎನ್ನಪರಾಧವ ಮನ್ನಿಸಿ ಕೃಪೆಯನು ಎನ್ನೊಳು ತೋರಲು ಧನ್ಯ ನಾನಾಗುವೆ 2 ತಾಮರಸಾಕ್ಷಿಯೆ ನಾಮಗಿರೀಶ ಶ್ರೀ ಸ್ವಾಮಿ ನೃಸಿಂಹನ ಕಾಮಿನೀಮಣಿಯೇ ಕೋಮಲಗಾತ್ರಯೆ ಶ್ರೀ ಮಹಾಲಕ್ಷ್ಮಿ ಎನ್ನ ಸಹೋದರಿ 3
--------------
ವಿದ್ಯಾರತ್ನಾಕರತೀರ್ಥರು
ಲೇಸಾಗಿ ಭಜಿಸುವೆ ಗೋಪಾಲದಾಸರ ರಾಶಿ ದುರಿತಂಗಳಾ ಪ ವಾಸವಾ ಪಿಡಿದ ವಜ್ರವೀಗಿರಿಯಂತೆ ನಿಶ್ಶೇಷದಿ ಭೇದಿಪರೊಇವರು ಅ.ಪ. ಸತಿ ಗಿರಿವಾಸ ನಾಮಕಳಾ ಸುರುಚಿರೋದರವೆಂಬೊ ಶರನಿಧಿಯಲ್ಲಿ ಚಂದಿರನಂತೆ ಉದಿಸಿಹರೋ ಇವರು 1 ಸದಮಲಮನದಲ್ಲಿ ಪದುಮನಾಭನ ನಾಮ ಪದೋಪದಿಯಲ್ಲಿ ಬಿಡದೇ ಪದರೂಪದಲ್ಲಿ ಪೊಗಳುವೊ ಸುಜನರಿಗೆ ಮೋಹವನುಣಿಸುತಿಹರೊ ಇವರು 2 ವಿಜಯದಾಸರೇ ತಮ್ಮ ನಿಜಗುರುಗಳೂ ಎಂದು ಭಜಿಪರೋ ಭಕುತಿಯಲ್ಲಿ ದ್ವಿಜವರ್ಯ ಜನಕಿಷ್ಟ ಸೃಜಿಸೋರು ಕಲ್ಪ ಭುಜದಂತೆ ನಿರುತದಲ್ಲಿ ಇಲ್ಲಿ 3 ತೊಂಡ ಪ್ರಹ್ಲಾದ ಪ್ರಿಯನ ಮಂಡಲ ಯತಿಗಳ ಬೆಳೆಪ ಯಾತ್ರೆಗಳ ಕೈಕೊಂಡು ಸೇವಿಸುತಿಹರೊ ಇವರು 4 ಭಕುತಿ ಪ್ರಾಚುರವಾಗೆ... ಹರಿನಾಮಪ್ರಕಟಿಸಿ ಕವನದಿಂದಾ ನಿಖಿಳಾಭೀಷ್ಟವನೀವ ಲಕುಮೀಪತಿಯೇ ಎಂದು ಭಕುತಗೆ ಬೋಧಿಪರೊ ಇವರು 5 ಆವಾವ ಕ್ರಿಯೆಗಳಲ್ಲಾವಾವ ಕಾಲದಿ ತಾವದಗಿನ್ನು ಹರಿಕಾವ ಸುಜೀವರ ಈ ವಿಧವೆಂದು ತನ್ನವರಿಗುಪದೇಶಿಪಾ6 ಭವ ತೋಯದಿ ಕಡೆಗೆತ್ತುವಾ . 7 ಸುಜನ ಜನರ ಕಾಯಕ್ಲೇಶವ ಕಳೆದು ಮಾಯಾರಮಣನ ವಲಿಸುವಂಥ ದಿವ್ಯ ಉಪಾಯವ ತೋರಿಪರೊ ಇವರು 8 ಮಂದ ಮನುಜ ನಾನು ಒಂದೊಂದಿವರ ಗುಣವೃಂದ ಪೊಗಳಲೊಶವೇ ತಂದೆ-ವರದಗೋಪಾಲವಿಠ್ಠಲನ ಹೊಂದಿ ಸೇವಿಪ ಗುರುವೇ 9
--------------
ತಂದೆವರದಗೋಪಾಲವಿಠಲರು
ವರಗುರು ತಂದೆ ಮುದ್ದು ಮೋಹನದಾಸರೆಗಿತ್ತರು ಲೇಸ ಪರಮ ಸಂಭ್ರಮದೊಳಿವರ ಸಹವಾಸ ಕರುಣಿಸಿದನು ಶ್ರೀಶ ಪ ರಾಗ ದ್ವೇಷಾದಿಗಳಿವರೊಳಗಿಲ್ಲ ಪಾಮರರಿವರಲ್ಲ ಶ್ರೀ ಗುರುಗಳೆನಗಿವರೆಂದು ಸ್ತುತಿಪನಲ್ಲ ಲಾಲಿಪುದೆನಸೊಲ್ಲ 1 ಶುಭ ಚರಿತೆಯನು ಜ್ಞಾನಿಗಳೆಂಬುದನು ಖುಲ್ಲ ಜನ ನಿಂದಿಸಿದರಾಗುವದೇನೊ ಅರಿಯೆನಯ್ಯ ನಾನು 2 ಪಾದ ಸರಸಿರುಹಕೆ ಭ್ರಮರರೆನಿಸುವ ಗುಣಯುತರ ಕುಜನಗಳೇನು ಬಲ್ಲರಯ್ಯ ಇವರ ಮಹಿಮಂಗಳ ವಿವರ 3 ಕರಿಗಿರಿಯೆಂಬ ವರಕ್ಷೇತ್ರದಲ್ಲಿ ವರುಷಂಪ್ರತಿಯಲ್ಲಿ ಹರಿದಾಸೋತ್ತಮ ಧರಣಿಸುರರನಲ್ಲಿ ಬಲು ಸೇವಿಪರಲ್ಲಿ 4 ಇಷ್ಟದೈವ ಅಪವರ್ಗಪ್ರದನೆಂಬ ಶ್ರೀ ನರಹರಿಯೆಂಬ ದಿಟ್ಟ ಶ್ರೀ ರಂಗೇಶವಿಠಲನ ಬಿಂಬಾಕೃತಿಯ ಸದಾ ಕಾಂಬ 5
--------------
ರಂಗೇಶವಿಠಲದಾಸರು
ವಾಣಿ ಪತಿಸುತ ವಿಠಲ | ದಿನೆಯನು ಪೊರೆಯೊ ಪ ಮಾನನಿಧಿ ತವದಾಸ್ಯ | ಕಾನಮಸಿ ಬೇಡುವಳನೀನಾಗಿ ಕೈ ಪಿಡಿದು | ಕಾಪಾಡೊ ಹರಿಯೇ ಅ.ಪ. ಶುದ್ಧ ಭಾವದ ವೃದ್ಧೆ ಶ್ರದ್ಧೆಯಲಿ ಸೇವಿಪಳುಮಧ್ವ ರಮಣನೆ ದೇವ ಉದ್ಧರಿಸೊ ಇವಳಾ |ಕೃದ್ಧಿಸುವ ಖಳರನ್ನು ಗೆದ್ದು ಸಂಸ್ಕøತಿಯೆಂಬಅಬ್ಧಿಯನೆ ದಾಟಿಸೋ | ಹದ್ದು ವಾಹನನೇ 1 ಭವ ಸಿಂದುವಿಲಿ | ಮಂದಳಾಗಿಹಳನ್ನುಕಂದರ್ಪಪಿತ ಹರಿಯ | ಕುಂದನೆಣಿಸದಲೇನಂದ ಮುನಿ ಮತ ತತ್ವ | ಸಂಧಿಸುತ ಇವಳೀಗೆಅಂದ ವೈರಾಗ್ಯವೆಂಬಾಭರಣ | ತೊಡಿಸೊ 2 ದೇವಾದಿ ದೇವ ಭವದಾವಾಗ್ನಿ ಪರಿಹರಿಸೆತೀವ್ರ ತವನಾಮ ಸ್ಮøತಿ | ಸರ್ವದಾ ಕರುಣಿಸೋ |ಈ ವಿಧದ ಭಿನ್ನಪವ | ನೀವೊಲಿದು ಸಲಿಸೆಂದುಭಾವದಲಿ ಬೇಡ್ವೆ ಗುರು | ಗೋವಿಂದ ವಿಠ್ಠಲಾ 3
--------------
ಗುರುಗೋವಿಂದವಿಠಲರು
ವೇದವ ತಂದು ವಿಧಿಗೀವಂದೆ ನೀಸಾಧು ಜನರ ಸಲಹಲಿ ಬಂದೆ ಪ. ಮೋದದಿಂದೆಮ್ಮ ಮನದಿ ನಿಂದೆ ನೀಬಾಧಿಪ ದುರಿತತತಿಯ ಕೊಂದೆ ಅ.ಪ. ಸಕಲ ಸುರರಿಗೆ ಶಿರೋರನ್ನ ನೀಅಕಳಂಕಾಶ್ರಿತಜನಮಾನ್ಯನಿಖಿಲ ನಿಗಮನಿಕರದಿ ವಣ್ರ್ಯ ನಿನ್ನಕರುಣಾಕಟಾಕ್ಷದಿ ನೋಡೆನ್ನ 1 ಕೈವಲ್ಯಪದವಿಯ ಕೊಡಬಲ್ಲ ನಿನ್ನಸೇವಿಪ ಸುಜನರಿಗೆಣೆಯಿಲ್ಲಭಾವಜಕೋಟಿಯಿಂದಚೆಲ್ವ ನೀಶ್ರೀವನಿತೆಗೆ ಸಿಲುಕುವನಲ್ಲ 2 ಹಯವದನ ಹೃದಯಸದನಜಯ ಶಶಿವರ್ಣ ಜಗತಿಪೂರ್ಣಭಯಹರ ಭಾಸುರ ಸಿರಿಚರಣ ನಿನ್ನದಯಪಾತ್ರಾನುದ್ಧರಿಸೆನ್ನ 3
--------------
ವಾದಿರಾಜ
ವೈಕುಂಠ ವಿಠ್ಠಲನೆ ನೀನಿವನ ಸಾಕಬೇಕಯ್ಯ ಶ್ರೀ ಹರಿಯೆ ಪ ನಾಕಪತಿಯೆ ನಿನ್ನ ತೋಕನೆಂದೆನಿಸಿ ಕೃಪಾಕರುಣೆ ಕಾಪಾಡ ಬೇಕೊ ಹರಿಯೆ ಅ.ಪ. ಪುಂಡಲೀಕ ವರದ ಪಾಂಡುರಂಗನೆ ನಿನ್ನತೊಂಡನಾಗಿಹನ ಕೈಗೊಂಡು ಕಾಪಾಡೊ ಹರಿಯೆ |ಅಂಡಜಸುವಾಹನನೆ ಮಾರ್ತಾಂಡ ಶತತೇಜಭಾಂಡ ಕಾರಕ ಭೀಮ ಗೊಲಿದಂತೆ ಒಲಿಯಬೇಕು 1 ಇಹಪರಗಳೆರಡಕ್ಕೂ ಅಹಿಶಯ್ಯ ನಿನ ಪಾದವಹಿಸೆ ಸೇವಿಪನಯ್ಯ ಸಹಜ ಭಕ್ತಿಯಲಿವಿಹಗೇಂದ್ರ ವಾಹನನೆ ಐಹಿಕದ ಭಯಹರಿಸಿವಿಹಿತ (ಕರುಣ)ದಿಂದಿವನ ಕಾಪಾಡು ಬೇಕು ಹರಿಯೇ 2 ವಿಘ್ನಹರ ನಿನ್ನಲ್ಲಿ | ಲಗ್ನ ಗೈಸಿಹಮನವ ನಿ-ರ್ವಿಘ್ನತೆಯ ನೀಡಯ್ಯ ಸರ್ವಕಾಲದಲಿಯಜ್ಞೇಶ ಯಜ್ಞ ಭುಗ್ ಯಜ್ಞಸಾಧನ ಯಜ್ಞಯಜ್ಞಾನು ಸಂಧಾನ ಸರ್ವಕಾರ್ಯದಲೀಯೊ 3 ವೃಂದಾರ ಕೇಂದ್ರ ರಿಂ | ವಂದ್ಯ ಹಯಮುಖ ಪಾದಭೃಂಗರೆಂದೆನಿಸುವ ಭಾವಿ ಮರುತರ ಚರಣದೀಸಂಧಿಸುತ ಧೃಡಭಕ್ತಿ ವೃಂದಾವನಾಖ್ಯಾನಸಂದೋಹ ಸುಜ್ಞಾನ ನೀನಿತ್ತು ಸಲಹೊ ಹರಿಯೇ 4 ಪತಿ ನಿನ್ನ ಹಂಬಲಿಸಿ ಬೇಡುವೆನುಇಂಬಿಟ್ಟು ತವ ಪಾದದ್ಹಂಬಲವ ನೀಯೋಉಂಬುಡುವ ಕ್ರಿಯೆಗಳಲಿ ಬಿಂಬ ಕ್ರಿಯೆಗಳ ತಿಳಿಸಿಬಿಂಬ ತವರೂಪ ಹೃದಯಾಂಬರದಿ ತೋರಿ ಸಲಹೋ 5 ಪಂಚಪಂಚಸುತತ್ವ | ಪಂಚ ಭೇದದಜ್ಞಾನಸಂಚಿಂತೆಯ ನೀಯೋ ವಾಂಛಿತಾರ್ಥದನೇಪಂಚ ಅವಿದ್ಯೆಯ ಕಳೆದು ಪಂಚಸು ಪರ್ವದಲಿಪಂಚಾಸ್ಯನಲಿ ನಿನ್ನ ಪಂಚರೂಪವ ತೋರಿಸೋ 6 ದಿವಿಜ ವಂದ್ಯಮಧ್ವಾಂತರಾತ್ಮ ಗುರು ಗೋವಿಂದ ವಿಠಲ ತವದಿವ್ಯ ರೂಪವ ತೋರಿ ಕಾಪಾಡೊ ಹರಿಯೆ 7
--------------
ಗುರುಗೋವಿಂದವಿಠಲರು
ಶಂಕರಾ ಪೊರೆಯಯ್ಯ ನಾ ನಿನ್ನ ಕಿಂಕರ ಪ ಪಂಕಜಾಸನಕುವರ ಮನದ ಶಂಕ ನಾಶಗೈಸಿ ಶೇಷಪ ರ್ಯಂಕಶಯನನ ಪಾದ ಪಂಕಜದೇಕ ಭಕುತಿಯನಿತ್ತು ಸಲಹಯ್ಯಅ.ಪ ನಿಟಿಲನಯನ ಧೂರ್ಜಟಿಯೆ ಸೋಮಧರಾ ಜಟಾಜೂಟನೆ ಕಠಿಣವೆನ್ನಯ ಕುಟಿಲಮತಿಯ ಜಟಿಲಕಳೆದು ನಿಷ್ಕುಟಿಲ ಮನದೊಳು ವಿಠಲಮೂರ್ತಿಯ ಧೇನಿಸಲು ಹೃ ತ್ತಟದಿ ದಿಟಮನ ಕೊಟ್ಟು ರಕ್ಷಿಸಯ್ಯ 1 ಘೋರ ದುರಿತಾಪಹಾರ ತ್ರಿಪುರಹರ ಕರುಣಾಸಮುದ್ರನೆ ನಿರುತ ಶ್ರೀಹರಿಚಾರುಚರಣಸ್ಮರಣೆ ಕರುಣಿಸಿ ಪೊರೆಯೋ ಗುರುವರ ಸುರನದೀಧರ ಪಾರ್ವತೀವರ ಕರಿಗೊರಳ ಕೈಲಾಸಮಂದಿರ2 ಸರ್ಪಭೂಷಣ ಶೂಲಿ ಡಮರುಧರ ಕಂದರ್ಪಹರ ಶಿವ ಸರ್ಪಗಿರಿ ಶ್ರಿ ವೆಂಕಟೇಶಗೆ ಸರ್ವಭಕ್ತಿ ಸಮರ್ಪಿಸಯ್ಯ ಆಪತ್ತುಹರ ಸಂಪತ್ತುಕರ ಶಾರ್ವರೀಕರಧರ ಶುಭಕರ 3 ಶಂಬರಾಂತಕವೈರಿ ಭಸಿತಧರ ಬೆಂಬಿಡದೆ ಸಲಹೊ ಶಂಭು ಶಚಿಪತಿಬಿಂಬ ಗುರುವರ ಸಾಂಬ ಪೊಂಬಸುರಕುವರ ತ್ರ್ಯಂಬಕಾ ತ್ರಿಪುರಾಂತಕ ಶುಕ 4 ಗಿರೀಶ ಸುರವರ ರುಂಡಮಾಲಾಧರ ಕರಿಚರ್ಮಾಂಬರ ನಿರುತ ಹೃದಯಸದನದೊಳನ ವರತ ಉರಗಾದ್ರಿವಾಸ ವಿಠಲನ ಚರಣಸರಸಿಜಮಧುಪ- ನೀ ಸುಖ ಸವಿದು ಸೇವಿಪ ವೈಷ್ಣವಾಗ್ರಣಿ5
--------------
ಉರಗಾದ್ರಿವಾಸವಿಠಲದಾಸರು
ಶೇಷ ಅತಿ ಶೋಭಿಸುತಿದೆ ಶ್ರೀಪತಿವಾಹನ ಪ ಚತುರದಶ ಲೋಕದಲಿ ಅಪ್ರತಿವಾಹನ ಅ.ಪ. ವಿನುತಕಶ್ಯಪ ಮುನಿಗೆ ತನಯನೆನಿಸಿದ ವಾಹನ ಅನುಜರನು ಕದ್ದೊಯ್ದ ಅತ್ಯಾಢ್ಯ ವಾಹನ ವನಧಿ ಮಧ್ಯಧಿ ನಾವಿಕರ ಭಕ್ಷಿಸಿದ ವಾಹನ ಜನಪನಾಜ್ಞದಿ ಕೂರ್ಮಾಗಜರ ನುಂಗಿದ ವಾಹನ1 ಕುಲಿಶಪಾಣಿಯ ಕೂಡೆ ಕಲಹ ಮಾಡಿದ ವಾಹನ ಒಳಹೊಕ್ಕು ಪೀಯೂಷ ತಂದ ವಾಹನ ಮಲತಾಯಿ ಮಕ್ಕಳನು ಮರುಳುಗೊಳಿಸಿದ ವಾಹನ ವಾಹನ 2 ಕಾಲನಾಮಕನಾಗಿ ಕಮಲಭವನಲಿ ಜನಿಸಿ ಕಾಲಾತ್ಮಹರಿಯ ಸೇವಿಪ ವಾಹನ ಕಾಳಗದಿ ಕಪಿವರರ ಕಟ್ಟುಬಿಡಿಸಿದ ವಾಹನ ವಾಲಖಿಲ್ಲರ ಪಿಡಿದ ವರವಾಹನ 3 ವಾಹನ ನಿಜ ರೂಪದಿ ಹರಿಸೇವೆಗೈವ ವಾಹನ ಆ ಪಿತೃಗಳಿಗಮೃತ ಪ್ರಾಪ್ತಿಸಿದ ವಾಹನ ವಾಹನ 4 ಪನ್ನಗಾಶನವಾಹನ ಪತಿತ ಪಾವನ ವಾಹನ ಸನ್ನುತಿಪ ಭಕ್ತರನು ಸಲಹುವ ವಾಹನ ಪನ್ನಗಾದ್ರಿನಿವಾಸ ಜಗನ್ನಾಥ ವಿಠ್ಠಲಗೆ ಉನ್ನತ ಪ್ರಿಯವಾದ ಶ್ರೀ ಗುರುಡವಾಹನ 5
--------------
ಜಗನ್ನಾಥದಾಸರು
ಶೇಷ-ರುದ್ರದೇವರು ಪಾದ ಭೂ- ಪಾದ ಪ. ಹರಿಗೆ ಹಾಸಿಗೆಯಾಗಿ ಹರುಷಪಡುವ ಪಾದ ಹರಿಯ ಮಂದಿರಲ್ಲಿ ಇರುವ ಪಾದ ಹರ ಪುರಂದರರಿಗೆ ಪೂಜ್ಯವಾಗಿಹ ಪಾದ ಪಾದ 1 ವಾರುಣಿ ದೇವಿಗೆ ವರನೆನಿಸಿದ ಪಾದ ಶ್ರೀ ರಾಮಗೆ ಕಿರಿಯನಾದ ಪಾದ ಘೋರ ಇಂದ್ರಾರಿಯ ಸಂಹರಿಸಿದ ಪಾದ ಪಾದ 2 ವಾಯುದೇವರು ಜೊತೆಗೆ ವಾದವಾಡಿದ ಪಾದ ನೋಯದೆ ಭೂಮಿಯನು ಪೊತ್ತಿಹ ಪಾದ ಶ್ರೀಯರಸನ ಪಾದಪದ್ಮ ಸೇವಿಪ ಪಾದ ಸುರರು ಪಾದ 3 ಸಪ್ತೆರಡು ಭುವನದಲಿ ಗುಪ್ತವಾಗಿಹ ಪಾದ ಚಿತ್ತದಭಿಮಾನಿಗೆ ಸೇವಕನಾದ ಪಾದ ಮತ್ತೆ ಮನ ಅಹಂಕಾರ ತತ್ವದೊಡೆಯನ ಪಾದ ಪಾದ 4 ಘೋರರೂಪವ ತೊರೆದು ಸೌಮ್ಯವಾಗಿಹ ಪಾದ ಸೇರಿದವರನು ಪೊರೆವ ಶ್ರೇಷ್ಠ ಪಾದ ಹಾರೈಸಿ ಗೋಪಾಲಕೃಷ್ಣವಿಠ್ಠಲನ ಪಾದ ಪಾದ 5
--------------
ಅಂಬಾಬಾಯಿ
ಶ್ರೀ ಗುರು ರಾಜರ ಸೇವಿಸಿರೋ---- ದಂಡ ಕಮಂಡಲ ಪಿಡಿದಿ ನಿಂದಿಹ ಹಸ್ತ ಭೂ ಮಂಡಲವೆಲ್ಲಾ ತಿರುಗಿ ಬಂದಿಹ ಹಸ್ತ ಬಿಡದೆ ಭಕುತರಾ ಸಲಹುವ ಹಸ್ತ ಪತಿ ಶ್ರೀ ರಘು ರಾಮರ ಸೇವಿಪ ಹಸ್ತಾ ಮತ್ತೆ ಭೂಸುರರಿಗೆಲ್ಲಾ ಅಭಯವೀಯುವ ಹಸ್ತ ಮುಕ್ತಿಮಾರ್ಗಕೆ ದಾರಿ ತೋರುತಿಹ ಹಸ್ತ ಚಿತ್ತಜನಯ್ಯನ ನೆನೆದು ಮನದಲ್ಲಿ ನಲಿಯುವ ಹಸ್ತಾ ಭೂತ ಪ್ರೇತಗಳನೆಲ್ಲ ಓಡಿಸುತಿಹ ಹಸ್ತ ಸಕಲವ್ಯಾಧಿಗಳ ಹರಿಸಿರಕ್ಷಿಪ ಹಸ್ತ ಸುವ ಜನರ ಉದ್ಧಾರ ಗೈಯುವ ಹಸ್ತ ಸರುವದಾ ಶಿರಿಪತಿಯ ಕೊಂಡಾಡುವ ಹಸ್ತಾ ಕನಸಿಲಿ ಬಂದು ಕಣ್ಣಪೊರೆ ತೆಗೆದಿಹ ಹಸ್ತ ಮುದದಲಿ ಮಗಿವಿಗೆ ಮಾತ ಕಲಿಸಿದ ಹಸ್ತ ಜೀವ ಕಳೆ ತುಂಬಿದ ಹಸ್ತ ಪರಮ ಪಾವನವಾದ ಶ್ರೀಗುರುರಾಜರ ಹಸ್ತಾ ಜಗವೆಲ್ಲ ನೋಡೆ ಪ್ರಖ್ಯಾತಿ ಪಡೆದಿಹ ಹಸ್ತ ನಗುತ ಮಂತ್ರಾಲಯದೊಳು ಬಂದು ನಿಂದಿಹ ಹಸ್ತ ಅಗಣಿತಮಹಿಮೆ ತೋರಿ ಮೆರೆಯುತಿಹಾ ಹಸ್ತ ಸರಿಗಾಣೆ ಧರೆಯೊಳು ಶ್ರೀರಾಘವೇಂದ್ರರ ದಿವ್ಯ ಹಸ್ತಾ.
--------------
ರಾಧಾಬಾಯಿ
ಶ್ರೀ ಜಗನ್ನಾಥದಾಸರ ಸ್ತೋತ್ರ ರಾಯರ ನೋಡಿರೈ ದಾಸರಾಯರ ಪಾಡಿರೈ |ಮಾಯ ರಮಣಪ್ರಿಯಾ |ಇವರ ಮನದೊಳಗೆ ಸುಳಿದಾ | ಶ್ರೀರಂಗವಲಿದ ಪ ಮೋದ |ಕಾಣಿಸುವದು ಜಗದೊಳಗೆ, ಇವರಿಗೆ ಕೀರುತಿಯ |ಪುಣ್ಯ ಮೂರುತಿಯು |ಧೇನಿಸಿ ಎರಡನೆ ಜನ್ಮದಿ, ಈತನೆ ಶಲ್ಯಾ |ತತ್ವವ ಬಲ್ಲಾ 1 ಮೂರನೆ ಜನ್ಮದಿ ಕೊಂಡಪ್ಪ, ರಾಜನದೂತ | ಸುಪ್ರಖ್ಯಾತಾ |ಸಾರ ಜನರ ಪ್ರಿಯ ಶ್ರಿ ಪುರಂದರದಾಸಾರ್ಯ |ಸುತ ಆಶ್ಚರ್ಯ |ತೋರುವ ಐದನೆ ಜನ್ಮದಿ ಶ್ರೀಹರಿದೂತ |ಗುರು, ಜಗನ್ನಾಥ 2 ನರಹರಿಯ ತುತಿಪ ವಂದಂಶದಿ ಸಾಂಶರೆಂದುಖಂಬದಿ ನಿಂದು |ಮೆರೆವರು ಊಧ್ರ್ವಪುಂಢವು ತುಲಸಿಯಮಾಲಾ |ಅಕ್ಷ ಸುಶೀಲಾ |ಪರಿಪರಿ ಸೇವಿಪ ಜನರಿಗಭೀಷ್ಟವ ಗೆರೆವಾ |ದುರಿತವ ತರಿವಾ 3 ದೇಶದೇಶವ ಜನರುಗಳೆಲ್ಲರು ಬಂದು |ನೋಡಲು ನಿಂದು |ಸೋಸಿಲಿ ದರುಶನಕೊಳಲವರಿಗೆ ಆನಂದ |ವಾಹುದು ಛಂದ |ಮೀಸಲಹುದು ಮನ, ಕೈಸೇರುವ ಶ್ರೀಪತಿಯೂ |ಹರ ಅಘತತಿಯು 4 ಎಷ್ಟು ಪೇಳಲಿ ಇವರ ಮಹಿಮೆ ತುತಿಸಲ್ಕೆ |ವಶವಲ್ಲ ಮನಕೆ |ನಿಷ್ಠಿಯಿಂದಿವರನು ತುತಿಸಲು ಶ್ರೀವರತುಷ್ಟಾ |ಪಾಪವು ನಷ್ಟಾ |ಸೃಷ್ಟಿಯೊಳಗೆ ಶ್ರೀಶ ಪ್ರಾಣೇಶವಿಠಲನ ದಾಸ |ದಾಸೋತ್ತಂಸ 5
--------------
ಶ್ರೀಶಪ್ರಾಣೇಶವಿಠಲರು
ಶ್ರೀ ರಘುದಾಂತರ ಚಾರುಚರಣಗಳು ಸೇವಿಪರಘಗಳನು ದೊರಗೈಸಿ ಕೃತಕೃತ್ಯನಾದೆನಾನು ಭವಭಯವೆನಗೇನು ಪ ಹೇಸಿಭವದಿ ಸುಖಲೇಶಕಾಣದಿರಲು ಬೇಸರವಾಗಲು ದೇಶ ದೇಶದೋಳು ಬರುಪರಿಯರಿತಿರುಗಿ ಚರಿಸಿ ತೋಷಬಡದೆ ಭವ ಬಂಧ ಕಡಿದೆ 1 ಹೀನಜನರ ಸಂಸರ್ಗದೋಷವನು ಕಲಿಮಲ ಕಲುಷವನು ದಹಿಪವು ಬಿಡು ಭ್ರಾಂತಿ ನಾನಾತೀರ್ಥ ಕ್ಷೇತ್ರ ಯಾತ್ರೆಫಲವು ಒದಗಿಸಿಕೊಡುತಿಹವು ಗುರುಗಳ ಪದಯುಗವು 2 ಗುರುಪದರಜದ ಮಹಿಮೆಯ ಪರಿಮಿತವು ವರ್ಣಿಸಲಸದಳವು ಶಿರದಿ ಧರಿಸೆಸಾರಿಸಕುಲಪಾವನವು ಎನಿಪುದು ನಿಶ್ಚಯವು ಶರೀರಕೆ ಲೇಪಿಸೆ ಸಕಲವ್ಯಾಧಿ ಭಯವು ಪರಿಹರವಾಗುವವು ನಿರುತಸೇವಿಸೆ ಮುಕುತಿಯೆ ಕರಗತವು ಅಹುದು ಶಾಶ್ವತವು 3 ತಿಳಿ ಮನಸಿಗೆ ತಂದು ಈ ನುಡಿ ಸಿದ್ಧಾಂತ ಕರುಣಿಪ ಕೈಬಿಡದೆ ಮನದಲಿ ಪೊಳೆಯುವನು 4 ಸಂತತ ಲಭಿಸುವವು ಪರಿಶುದ್ಧ ಭಕುತಿಯು ಬಡದಿರು ಸಂಶಯವ ಬಹುದುಃಖವ ಬಡುವ5
--------------
ವರದೇಶವಿಠಲ
ಶ್ರೀ ರಾಘವೇಂದ್ರರು ಇಂಥಾ ಗುರುಗಳ ಕಾಣಿನಾ | ಭೂತಳದೊಳು ಇಂಥಾ ಯತಿಗಳ ಕಾಣಿನಾ ಪ ಕಾಣಿ \ ಮಂತ್ರ ಮಂದಿರದಲ್ಲಿ ನಿಂತು ಭಜಕರಿಗೆ | ಚಿಂತೆ ಕಳೆವ ಕರುಣಿ ಅ.ಪ ದೇವಸ್ವಭಾವನೀತನು | ಸತತ ಪವನ ದೇವನಾವೇಶಯುಕ್ತನು || ಆವ ಸಂಶಯವ್ಯಾಕೆ | ದೇವಾಧಿದೇವ ನರಮೃಗ ದೇವನೀತನ ಭಕ್ತಿಗೆ | ಧಾವಿಸಿ ಬಂದ ಸ್ತಂಭದಿ ಭಾವ ಭಕ್ತಿಯಲಿ | ಸೇವಿಪರಿಗೆ ಭವ ನೋವು ಕಳೆದು ಸುರ | ಗೋವಿನ ತೆರ ವರ ವೀವನು ಕರುಣದಿ | ಕಾಮನು ಪರಮ ಪಾವನ ಚರಿತನು | ಕೋವಿದರೊಡೆಯನು 1 ವರಹಜ ತಟದಲ್ಲಿರುವ ಭಕ್ತರು ಕೂಗಿ ಕರೆದಲ್ಲಿಗೋಡಿ ಬರುವ | ಮರುತ ಶಾಸ್ತ್ರದ ಮರ್ಮ ಭರಿತವಾದಂಥ ದಿವ್ಯ ಪರಿಮಳ ಗ್ರಂಥವ ವಿರಚಿಸಿ ಬುಧರಿಗೆ ಗರೆದನು ಕರುಣದಿ ಪೊರೆದನು ಪರಮತ ಮುರಿದನು ಜಗದೋಳ್ ಮೆರೆದನು ಹೊಸ ಹೊಸ ಪರಿ ಸುಮಹೋತ್ಸವ ಹರುಷದಿ ಪ್ರತಿದಿನ ಗುರು ಸುಯಮೀಂದ್ರರ | ಕರದಿಂಗೊಂಬರು 2 ಮಂದಹಾಸನ ಶ್ರೀ ಶಾಮಸುಂದರ ರಂಘ್ರಿ ಸೇವಕ | ಕೇಸರಿ ಎನಿಸಿ ಗಂಧವಾಹನ ಮತ | ಸಿಂಧುವಿಗೆ ಶಶಿ ಯಂದದಿ ರಾಜಿಸಿ ವೃಂದಾವನವನು ಒಂದೆ ಮನದಲಿ ವಂದಿಸಿ ನಮಿಸುವ ವಂದ್ಯಾಂಧಕರಿಗೆ | ಕಂದರಕ್ಷಿಗಳ ಕುಂದದಿ ಕೊಡುವ | ಕರ್ಮಂದಿ ಕುಲಾಗ್ರಣಿ 3
--------------
ಶಾಮಸುಂದರ ವಿಠಲ
ಶ್ರೀ ವಾದಿರಾಜರು ಗುರುವರ ದಯಮಾಡೈ ಹಯಮುಖ ಪದಯುಗ ನಿಜ ಭಕ್ತಾಗ್ರಣೀ ಪ ಚರಣವ ನಂಬಿದೆ ಮುಂದಿನ ಪರಿಸರ ಸರಸರ ಸುರಿಸುತ ವರಗಳ ಕರುಣದಿ ಅ.ಪ ನಿನ್ನನೆ ನಂಬಿದ ಅನ್ಯರವಲ್ಲದ ಚಿಣ್ಣರ ಬಿಡುವರೆ ಘನ್ನಗುಣಾರ್ಣವ ಸಣ್ಣವರೆನ್ನೆದೆ ಮನ್ನಿಸಿ ಕೈಪಿಡಿ ಚಿನ್ಮಯ ನಂದನ ಅನ್ಯರ ಪೋಷಕನೆ 1 ದಾಸರ ದೋಷವಿನಾಶಗೈವುದು ಕ್ಲೇಶವ ಭಾವೀಶ್ವಾಸ ನಿಯಾಮಕಗೆ ವಾಸವ ಗುರುಶಿವ ಶೇಷಸುವಂದಿತ ವಾಸಿಸಿ ಹೃದಯದಿ ಭಾಸಿಸು ಹರಿದಾರಿ 2 ಆರ್ರ್ತಿವಿದೂರ ಪರಾರ್ಥಕೆ ನೆಲಸಿಹ ಖ್ಯಾತ ಕವೀಂದ್ರನೆ ಪ್ರೀತಿಯ ಬೇಡುವೆನು ಮಾತೆಯ ತೆರಮುರವ್ರಾತವ ನೋಡದೆ ನಾಥನೆ ನೀಡಿಸು ಆತ್ಮವಿಕಾಸವನು 3 ವಿಜ್ಞಾನಾಸಿಯ ದಾನವ ಗೈಯುತ ದೀನನ ಮೌಢ್ಯದಿ ಶೂನ್ಯವಗೈಯುತ ಪ್ರಾಜ್ಜನ ಮಾಡೈ ಪ್ರಾಜ್ಞಲಲಾಮನೆ ಆಜ್ಞಾಧಾರಕ ನಿನ್ನ ಜನುಮ ಜನುಮದಲಿ4 ವೇದವ್ಯಾಸರ ಪಾದಾರಾಧಕ ಮೋದಮುನೀಂದ್ರರ ಪ್ರೇಮವ ಪಡೆದಿಹನೆ ವೇದವ್ಯಾಸರ ಸೇವಿಪ ಭಾಗ್ಯವ ಸಾದರದಿಂ ಕೊಡು ಕಾಮಿತ ಕೊಡುವವನೆ5 ಹಿರಿಯರ ಕರುಣದಿ ಕಿರಿಯರ ಸಾಧನೆ ಶರಣನ ಭಾರವು ಸೇರಿದೆ ನಿಮ್ಮಡಿ ಹರಣವ ವಪ್ಪಿಸಿ ಚರಣವ ಪಿಡಿದಿಹೆ ಪೊರೆಯೈ ಮನತರ ಕುರುಡನು ನಾನಿಹೆ 6 ಮಿಥ್ಯಾಮತ ವಿಧ್ವಂಸನೆ ಗೈಯುವ ಸದ್ಗ್ರಂಥಂಗಳದಾತನೆ ಬಾಗುವೆನು ಪಾರ್ಥನಸಖ “ಶ್ರೀಕೃಷ್ಣವಿಠಲ”ನ ಭಕ್ತಿತರಂಗವ ನೀಡುತ ಕಾಯುತ 7
--------------
ಕೃಷ್ಣವಿಠಲದಾಸರು
ಶ್ರೀ ವಿಷ್ಣುತೀರ್ಥರು ಅಡಿಗಳ ಭಜಿಸುವ ಮನುಜರ ಬಿಡನೈ ತನ್ನ ಪ ಕಡು ಕರುಣೀ ಬಿಡು ಸ್ಮರಣೀ ನುಡಿ ಮನದೀ ಅಡವಿಗಳೊಡೆಯನ ಪದ ದೃಢದಿ ಪಿಡಿ ಮೂಢ ಮಾನವಾ ಅ.ಪ. ಕಂಕಣ ಕಟ್ಟೀ ಬಿಂಕವ ಮುರಿಯುತ ಕಿಂಕರ ಸಲಹುವ ಪಂಕಜನಯ್ಯನ ಪಂಕಜದೊಳು ತಾ ಮಿಂಚಿನಂದದಿ ಕಂಗಳಿಗೊಪ್ಪುವ ಮಂಗಳಾ ಮಂಟಪದಲಿ ಮೀನಾಂಕನ ಸಹತೋರುವ ಮದಗಜಸಿಂಹನು ಮಾದನೂರಿನಲಿ ನಿಂತಿಹ ಪವನತನಯನು ಕಮಲನಯನನು ಕರಾಳವದನ ಪರಕಪಾಲನಯನನು 1 ಸತಿ ಜಾಹ್ನವಿ ಧರಿಸಿದ ಕೊರಳೊಳು ಶಿರಮಾಲೆ ಕರಮಾಲೆ ಜಟಬಾಲೆ ಸಹಕುಶನದಿ ನಿಲಯನಪದ ಹೃದಯದಿ ಸ್ಮರಿಸುತ 2 ಮೊಮ್ಮಗನೆನಿಸಿ ತಾತನ ಮೋಹಿಸಿ ದಾತನ ತಲೆ ತರಿದವನು ಮಹಾಮುನಿಪುರದೊಳು ತೆರಳಿದ ಸಮಯದಿ ತನ್ನ ಸತಿಯೊಳು ಸರಸವನಾಡಿದನು ಕಾಳಕೂಟವಾ ತಾ ಪಾನಮಾಡಿ ಗರಗೊರಳೆಂದೆನಿಸಿದನೂ ಶಿರಿಸುತ ತಂದೆವರದಗೋಪಾಲವಿಠಲನ ಪದ ಧೇನಿಪನೋ ಸೇವಿಪನೋ ಪಾವಿನ ಪದನೋ ವನದೊಳು ನಿಂದು ಶ್ರೀರಾಮನ ಜಪಿಸುವ 3
--------------
ಸಿರಿಗುರುತಂದೆವರದವಿಠಲರು