ಒಟ್ಟು 176 ಕಡೆಗಳಲ್ಲಿ , 57 ದಾಸರು , 154 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಮೂರ್ಖ ತಿಳಿವನೆ ಗುರುವೆ ನಿನ್ನ ಬೋಧದ ಸವಿಯ ಅರ್ಕನಾ ತೇಜವನು ಗೊಗೆಯರಿದಪುದೇ ಪ ನೀನೆ ಪರಮಾತ್ಮನಿಹೆ ಎಂದು ನೀ ಬೋಧಿಸಲು ಮಾನವ ನಾನು ಪರಮಾತ್ಮನೆ ಏನಾದರೂ ಪೇಳಿ ಮೋಸಮಾಳ್ಪನು ಎಂದು ಸ್ವಾನುಭವ ಪಡೆಯದಲೆ ನಿನ್ನ ನಿಂದಿಸುವಾ 1 ಕರ್ಮದಾ ಸಂಕಲೆಯ ಕಟ್ಟಿಕೊಂಡಿಹ ಜೀವ ಕರ್ಮ ಕಳೆಯುವ ದಿವ್ಯ ಜ್ಞಾನವರಿಯುವನೇ ದುರ್ಮತಿಯು ದ್ವೇಷಿಸುತ ಬೋಧದಲಿ ಮನವಿಡದೆ ಧರ್ಮವಂತನು ಎಂಬ ಒಣ ಹೆಮ್ಮೆ ಪಡುತಿರುವ 2 ಈ ನಿಂದೆ ಸ್ತೋತ್ರಗಳಿಗೊಳಗಾಗುವವನೆ ನೀ ಸ್ವಾನುಭವಸಂವೇದ್ಯ ಕೇವಲಾನಂದಾ ನೀನೆ ಸರ್ವವ್ಯಾಪಿ ನಿನ್ನ ನಿಂದಿಸಿದೊಡೆ ತಾನು ತನ್ನನು ಬೈದು ದೂರಿಕೊಂಡಂತೆ 3 ಜಗದ ಸುಖಕಾಗಿ ಬಲು ಕಾತರಿಪ ಮನುಜನಿವ ಜಗದಾಚೆಗಿಹ ಪರಮಶಾಂತಿಯರಿಯುವನೇ ಸೊಗಸಾಗಿ ತಿಳಿಯುವೊಡೆ ಜಿಜ್ಞಾಸುವಲ್ಲದೆ ಅಘನಾಶಶಂಕರನೆ ಅನ್ಯರರಿಯುವರೇ 4
--------------
ಶಂಕರಭಟ್ಟ ಅಗ್ನಿಹೋತ್ರಿ
ಮೃಗಮೋಹಿನಿಯೊಡನೇಕೋ ಪಂಥ ಪ ಕಾಂತ ಸಿರಿಕಾಂತ ಸುರನಗರಾಧಿಪ ಅ- ನಂತ ಗುಣವಂತ ದೇವಾ ಎನ್ನ ಸಲಹೊ ಅ.ಪ ಸುಲಲಿತ ಲತಾಂಗಿ ನಿನ್ನೊಲುಮೆಯಲ್ಲಿ ನೆರೆಹೊಂಗಿ- ಸಲೆ ಮನವ ಮಾಡಿ| ನಿನ್ನಗಲಿ ಬಾಯಾರಿ ಬಲು ವಿರಹದಾಸರಿನ ಬೇಸರಿನಲ್ಲಿ ಯಿಂ_ ತಳಿದವಳ ಕಾಯೊ ಸಿರಿಧಾಮ ಗುಣಧಾಮ 1 ಕಳಕಳಿಪ ನೋಟ ಕಾತರಿಪ ವಿರಹದ ಹೂಟ ಅಳಲು ಮನ ಅಳಿನಿದ್ರೆ ನಿನಗಾಲಯ ಮುದ್ರೆ ಅಳಿದುಳಿಸು ಲಜ್ಜೆಗೇಡುಗಳ ಪಾಡುಗಳ ಇಂ- ತುಳಿದವಳ ಕಾಯೊ ಸಿರಿಧಾಮ ಗುಣಧಾಮ 2 ಮೂರಾರವಸ್ಥೆಗಳ ನೀರಿಕಡೆಯನವಸ್ಥೆ ಮಾತಿರುವಳೆ ಬಾಲೆ ನಿನಗೆದ್ದ ಮೇಲೆ ನಾರಿಯೆಡೆಗೈದರಲೆಗಲಿಪ್ಪಿ ಬಿಗಿದಪ್ಪಿ ಸೊಗಸೇ ತೋರಿಸಿದನಮರ ಪುರಿಪಾಲ ಸಿರಿಲೋಲ 3
--------------
ಕವಿ ಲಕ್ಷ್ಮೀಶ
ಮೆಚ್ಚಿದೆ ಯಾಕಮ್ಮ ಲಕ್ಕುಮಿದೇವಿ ಸಚ್ಚಿದಾನಂದಾತ್ಮ ಹರಿಯೆಂದರಿಯದಲೆ ಪ ರಕ್ಕಸಾಂತಕ ಹರಿಗೆ ಸೊಗಸಿನ ತಕ್ಕ ವಾಹನವಿಲ್ಲದಿದ್ದೊಡೆ ಹಕ್ಕಿಯ ಹೆಗಲೇರಿ ತಿರುಗುವ ಚಿಕ್ಕ ಬುದ್ಧಿಯ ಚಲುವ ಕೃಷ್ಣಗೆಅ.ಪ ನೀರೊಳು ಮುಳುಗಿ ಭಾರವಪೊತ್ತು ಧರಣಿಯ ಕೋರೆದಾಡೆಲಿ ತಂದ ಕ್ರೂರ ರೂಪನಿಗೆ ಮೂರಡಿ ಭೂಮಿಯ ಬೇಡಿ ಕ್ಷಿತಿಪರ ಕೊಂದು ನಾರು ವಸ್ತ್ರಗಳುಟ್ಟು ಸೀರೆ ಕದ್ದವಗೆ ಶೂರತನದಲಿ ತ್ರಿಪುರರಗೆದ್ದು ವಿ- ಹಾರ ಮಾಡ್ಡ ಏರ್ದ ಕುದುರೆಯ ಮಾರಪಿತ ಮಧುಸೂಧನನ ವ್ಯಾ- ಪಾರ ತಿಳಿಯದೆ ವಾರಿಜಾಕ್ಷಿ 1 ಹಾಸಿಕಿಲ್ಲದೆ ಹಾವಿನ ಮೇಲೆ ಮಲಗುವ ಹೇಸಿಕಿಲ್ಲದೆ ಎಂಜಲ್ಹಣ್ಣನೆ ಮೆಲುವ ದೋಷಕಂಜದೆ ಮಾವನ ಕೊಂದು ಮಧುರೆಲಿ ದಾಸಿ ಕುಬ್ಜೆಯ ಡೊಂಕು ತಿದ್ದಿ ಪರಿಮಳ ಪೂಸಿ ಸೋಸಿನಿಂದಲಿ ಕರಡಿ ಮಗಳನು ಯೋಚಿಸದೆ ಕೈಪಿಡಿದು ಸೌಳ- ಸಾಸಿರದ ಸತಿಯರನು ಕೂಡಿದ ವಾಸುದೇವನ ಮೋಸವರಿಯದೆ 2 ಮೋಸದಿಂದಲಿ ಬಂದು ಶಿಶುವನೆತ್ತಿದ ದೈತ್ಯ ದಾಸಿಯ ಕೊಂದ ಉದಾಸೀನದಿಂದ ಗ್ರಾಸಕಿಲ್ಲದೆ ಗೋಪೇರ ಮನೆಗಳ ಪೊಕ್ಕು ಮೀಸಲು ಬೆಣ್ಣೆ ಪಾಲ್ಮೊಸರನೆ ಸವಿದು ರಾಸಕ್ರೀಡೆಯ ವನಿತೆಯರ ಮನ ದಾಸೆ ಪೂರೈಸಿ ರಾತ್ರಿ ವೇಳದಿ ವಾಸುದೇವನು ಓರ್ವ ಸತಿಯೊಳು ಕ್ಲೇಶಪಡಿಸದೆ ಮೋಸವರಿಯದೆ3 ಅಖಿಳ ಮಹಿಮನೆನೆ ಊಳಿಗ ಮಾಡಬಹುದೆ ಚಂಡನಾಡುವ ನೆವದಿಂದ ಕಾಳಿಂಗನ ಮಂಡೆಯ ತುಳಿದು ನಾಟ್ಯವನಾಡಬಹುದೆ ಗಂಡುಗಲಿ ಅರ್ಜುನನು ರಥಕೆ ಬಂಡಿಬೋವನ ಮಾಡಬಹುದೆ ಪುಂಡಲೀಕನು ಇಟ್ಟೆಗೆಯ ಮೇ- ಲ್ಪಾಂಡುರಂಗ ನಿಲಿಸಬಹುದೆ4 ಕಮಲಾಕ್ಷ ಯಾಗಶಾಲೆಗೆ ಗೋಪರನು ಕಳುಹಿ ರಮೆಯರಸಗೆ ಬಹಳ್ಹಸಿವೆನುತಿರಲು ಕಮಲಾಕ್ಷನ ನುಡಿ ಗಮನಿಸದೆ ರುಷಿವರರಿಗೆ ಕಮಲ ಮುಖಿಯರೆಲ್ಲ ಪರಮ ಸಂಭ್ರಮದಿಂದ ಕಮಲನೇತ್ರಗೆ ವಿವಿಧ ಭಕ್ಷಗ- ಘೃತ ಪರಮಾನ್ನಗಳನು ಕಮಲನಾಭ ವಿಠ್ಠಲಗೆ ಅರ್ಪಿಸಿ ಶ್ರಮವ ಕಳೆದೈದಿದರು ಮುಕ್ತಿಯ 5 ಯಾಕೆ ಮೆಚ್ಚಿದೆಯಮ್ಮ ಲೋಕ ಸುಂದರಿಯೆಶ್ರೀ ಕಮಲಜಪಿತ ಲೋಕ ಮೋಹಕನ
--------------
ನಿಡಗುರುಕಿ ಜೀವೂಬಾಯಿ
ಮೇಲ್ ಮೇಲ್ ಮೇಲ್ ಮೇಲ್ ಹರಿನಾಮ ಮೇಲು ಮೂಜಗಸೂತ್ರ ಹರಿನಾಮ ಪ ಕಾಲಕುಜನಕುಲ ಹರಿನಾಮ ಪಾಲಸುಜನಗಣ ಹರಿನಾಮ ಜಾಲಮಾಯ ದರ್ಪಣ್ಹರಿನಾಮ ವಿಶ್ವ ಹರಿನಾಮ ಅ.ಪ ಶರನಿಧಿಮಂದಿರ ಹರಿನಾಮ ಶರಧಿಮಥನ ಮುರಹರಿನಾಮ ಪುರತ್ರಯಸಂಹರ ಹರಿನಾಮ ಸುರಗಣಭೋಜನ ಹರಿನಾಮ ಶರಣರ ಸಿರಿತಾನ್ಹರಿನಾಮ ಪರತರ ಪಾವನ ಹರಿನಾಮ1 ಶಾಪವಿಮೋಚನ ಹರಿನಾಮ ತಾಪತ್ರಯಗಳ್ಹರ ಹರಿನಾಮ ಗೋಪೇರಾನಂದ ಲೀಲ ಹರಿನಾಮ ಕಪಾಲಧರನುತ ಹರಿನಾಮ ಗೌಪ್ಯಕೆ ಗೌಪ್ಯದ ಹರಿನಾಮ 2 ದುರಿತ ದಾರಿದ್ರ್ಯ ದೂರ್ಹರಿನಾಮ ಪರಿಹರ ಜರಾಮರಣ್ಹರಿನಾಮ ನರನ ಸಿರಿಯ ಭಾಗ್ಯ ಹರಿನಾಮ ಸುರತರು ಹರಿನಾಮ ಅರಿವಿನ ಅರಮನೆ ಹರಿನಾಮ ಪರಕ ಪರಮಸಿರಿ ಹರಿನಾಮ 3 ನಿಜಮತಿ ಭಂಡಾರ ಹರಿನಾಮ ಕುಜಮತಿ ಖಂಡನ ಹರಿನಾಮ ಭಜಕರನಿಜಧೇನ್ಹರಿನಾಮ ಭುಜಗಾದ್ರಿ ಪರ್ಯಂಕ ಹರಿನಾಮ ದ್ವಿಜರಿಗಮೃತನಿಧಿ ಹರಿನಾಮ ಅಜನಿಗುತ್ಪತ್ತಿ ಮಂತ್ರ ಹರಿನಾಮ 4 ವೇದಗಳಾಧಾರ ಹರಿನಾಮ ಸಾಧುಸಂತ ಪ್ರೇಮ ಹರಿನಾಮ ಭೇದವಾದÀರಹಿತ್ಹರಿನಾಮ ಸಾಧಿಸಲಸದಲ ಹರಿನಾಮ ಆದಿ ಅನಾದಿವಸ್ತು ಹರಿನಾಮ ಭೋಧ ಸ್ವಾದಸಾರ ಹರಿನಾಮ 5 ಕಾಲ ಹರಿನಾಮ ಕೀಳರ ಎದೆಶೂಲ್ಹರಿನಾಮ ಶೀಲರ ಜಪಮಾಲ್ಹರಿನಾಮ ಲೋಲಗಾನಪ್ರಿಯ ಹರಿನಾಮ ಕೀಲಿ ವೇದಾಂತದ ಹರಿನಾಮ ಫಾಲನೇತ್ರಗೆ ಶಾಂತಿ ಹರಿನಾಮ 6 ಪ್ರಳಯಕೆ ಅಳುಕದ ಹರಿನಾಮ ಪ್ರಳಯ ಪ್ರಳಯಗೆಲುವ್ಹರಿನಾಮ ಮಲಿನದಿ ಸಿಲುಕದ ಹರಿನಾಮ ಚಲಿಸದ ನಿರ್ಮಲ ಹರಿನಾಮ ಬೆಳಗಿನ ಬೆಳಗೀ ಹರಿನಾಮ ಕುಲಮುನಿ ಪಾವನ ಹರಿನಾಮ 7 ವಿಷಮಸಂಸಾರಖಡ್ಗ ಹರಿನಾಮ ವ್ಯಸನಕಾಷ್ಠಕಗ್ನಿ ಹರಿನಾಮ ವಿಷಕೆ ಮಹದಮೃತ ಹರಿನಾಮ ಮಸಣಿಮಾರಿಧ್ವಂಸ ಹರಿನಾಮ ಅಸಮಸುಖದ ಋಣಿ ಹರಿನಾಮ ವಸುದೇಜೀವಜೀವಳ್ಹರಿನಾಮ8 ಧರ್ಮಶಾಸ್ತ್ರದ ಗುಟ್ಟು ಹರಿನಾಮ ಮರ್ಮ ತಿಳಿಸುವ ರಟ್ಟು ಹರಿನಾಮ ಕರ್ಮ ಕಡಿಯುವ ಶಸ್ತ್ರ ಹರಿನಾಮ ನಿರ್ಮಲಾನಂದ ಪದವೀ ಹರಿನಾಮ ನಿರ್ಮಾಣ ನಿಜಜ್ಞಾನ ಹರಿನಾಮ ಬ್ರಹ್ಮಕಿಟ್ಟಿಗುರಿ ಹರಿನಾಮ 9 ಭವಗುಣಮರ್ದನ ಹರಿನಾಮ ಭವನಿಧಿ ಸೇತುವೆ ಹರಿನಾಮ ಭವನ ಭೀತಿಹರ ಹರಿನಾಮ ರವಿಕುಲ ಪಾವನ ಹರಿನಾಮ ಬುವಿತ್ರಯ ಪವಿತ್ರ ಹರಿನಾಮ ಸಾಯುಜ್ಯಪದಸ್ಥಾನೀ ಹರಿನಾಮ 10 ಸತ್ಯಕ್ಕೆ ಬಹು ನಿರ್ಕು ಹರಿನಾಮ ಮಿಥ್ಯಕ್ಕೆ ಅನರ್ಥ ಹರಿನಾಮ ನಿತ್ಯಕ್ಕೆ ಮಹಸುರ್ತು ಹರಿನಾಮ ಚಿತ್ತಕ್ಕೆ ಚಿಜ್ಜ್ಯೋತಿ ಹರಿನಾಮ ಅರ್ತವರಿಗೆ ಗುರ್ತು ಹರಿನಾಮ ಭೃತ್ಯಜನರ ಮತ್ತು ಹರಿನಾಮ 11 ಮಾಯಕ್ಕೆ ಪ್ರತಿಮಾಯ ಹರಿನಾಮ ಮಾಯ ಕತ್ತಲುನಾಶ ಹರಿನಾಮ ಕಾಯಕ್ಕೆ ಶೋಭಾಯ ಹರಿನಾಮ ಭಾವಕ್ಕೆ ಪರಿಶುದ್ಧ ಹರಿನಾಮ ತಾಯಿತಂದೆ ಜೀವಕ್ಹರಿನಾಮ ಅಮೃತ ಹರಿನಾಮ 12 ಪುಣ್ಯ ಶರಧಿಗೆ ಚಂದ್ರ್ಹರಿನಾಮ ಮನ್ನಣೆ ಮೂಲೋಕದ್ಹರಿನಾಮ ಧನ್ಯರಿಗೆ ಧನ್ಯ ಹರಿನಾಮ ಉನ್ನತ ಸಾಮ್ರಾಜ್ಯ ಹರಿನಾಮ ಮುನ್ನ ಕೈವಲ್ಯಪದ ಹರಿನಾಮ ಸನ್ನಿಧಿ ವೈಕುಂಠ ಹರಿನಾಮ 13 ನಿಗಮಕೆ ಸೊಬಗಿನ ಹರಿನಾಮ ಸುಗುಣರೊಳ್ನೆಲೆಗೊಂಡು ಹರಿನಾಮ ಅಗೋಚರ ಆಗಮಕ್ಹರಿನಾಮ ಸೊಗಸುವ ಭಕ್ತರಲ್ಹರಿನಾಮ ಅಗಜೇಶ ಪೊಗಳುವ ಹರಿನಾಮ ಅಗಜೆಯು ಒಪ್ಪಿದ ಹರಿನಾಮ 14 ವಿಮಲ ಗುಣಗಣ ಹರಿನಾಮ ದಮೆ ದಯಾನ್ವಿತ ಹರಿನಾಮ ಶಮೆ ಶಾಂತಿಮಂದಿರ ಹರಿನಾಮ ಸುಮನಸ ಕಲ್ಪದ್ರುಮ ಹರಿನಾಮ ನಮಿತ ಸುರಾದ್ಯರಖಿಲ ಹರಿನಾಮ ಅಮಿತ ವಿಶ್ವರೂಪ ಹರಿನಾಮ 15 ಮೂರು ಕಾಲದರಿವದ್ಹರಿನಾಮ ಮೂರಾರಿಕ್ಕಡಿಗೈವುದ್ಹರಿನಾಮ ಪಾರಪಂಚ ಪರುಷ್ಹರಿನಾಮ ಸಾರಸೌಖ್ಯಾಂಬುಧಿ ಹರಿನಾಮ ದಾರಿ ವೈಕುಂಠಕ್ಕೆ ಹರಿನಾಮ ಸೇರಿ ದಾಸರನಗಲದ್ಹರಿನಾಮ 16 ಭಕ್ತವತ್ಸಲ ಜಯ ಹರಿನಾಮ ಮುಕ್ತಿದಾಯಕ ಜಯ ಹರಿನಾಮ ಹತ್ತಾವತಾರ ಜಯ ಹರಿನಾಮ ಸತ್ಯ ಶೀಲ ಜಯ ಹರಿನಾಮ ನಿತ್ಯ ನಿರುಪಮ ಜಯ ಹರಿನಾಮ ಕರ್ತು ಶ್ರೀರಾಮ ಜಯ ಹರಿನಾಮ 17
--------------
ರಾಮದಾಸರು
ಯಾರಿಗೆ ದೂರುವೆನು ಗಿರಿಯ ರಾಯ ಯಾರೆನ್ನ ಸಲಹುವರು ಪ ಸಾರಿದ ಭಕ್ತ ಸಂಸಾರಿ ನಿನ್ನಯ ಪಾದ ವಾರಿಜವನು ತೋರಿ ಕಾರುಣ್ಯವೆನಗೀಯೊ ಅ.ಪ ಕಷ್ಟ ಜನ್ಮದಿ ಬಂದೆನು ಧಾರುಣಿಯೊಳು ದುಷ್ಟರಿಂದಲೆ ನೊಂದೆನು ನಿಷ್ಟುರ ಬೇಡವೊ ನಿನ್ನ ನಂಬಿದ ಮೇಲೆ ಸೃಷ್ಟಿಪಾಲಕ ಎನ್ನ ಬಿಟ್ಟು ಕಳೆಯಬೇಡ 1 ಹಿಂದೆ ಮಾಡಿದ ಕರ್ಮವು ಈ ಭವದೊಳು ಮುಂದಾಗಿ ತೋರುತಿದೆ ಇಂದಿಲ್ಲ ಗತಿಯದರಿಂದ ನೊಂದೆನು ನಾನು ಮಂದರಧರ ಗೋವಿಂದ ನೀನಲ್ಲದೆ 2 ಹಗಲುಗತ್ತಲೆ ಸುತ್ತಿಯೆ ಕಂಗೆಡಿಸುತ್ತ ಹಗೆಯೊಳು ನಗಿಸುತಿದೆ ಉಗುರಿನಸಿಗಿಗೆ ಮಚ್ಚುಗಳೀಗ ನಾಟ್ಯವು ಸೊಗಸು ಹಾರಿಸಿ ಎದೆ ದಿಗಿಲುಗೊಳಿಸುತಿದೆ 3 ಬಾಡಿದ ಅರಳಿಯನು ಕಲ್ಲೀನ ಮೇಲೆ ಈಡಾಗಿ ನಟ್ಟಿದರೆ ಬೇಡಿಕೊಂಡರೆ ತಳಿರ್ಮೂಡಿ ಬರುವುದುಂಟೆ ರೂಢಿಗೊಡೆಯ ನೀನು ನೋಡದಿದ್ದರೆ ಮೇಲೆ 4 ಹಲವು ಪರಿಯ ಕಷ್ಟವ ನಿನ್ನಯ ಪದ ಜಲಜದ ಕರುಣದಲಿ ಸುಲಿಗೆಗೊಟ್ಟೆನು ನಾನು ಸೂರೆಗಾರರಿಗೆಲ್ಲ ಒಲವಾಗೆನ್ನೊಳು (ವರಾಹತಿಮ್ಮಪ್ಪ)15
--------------
ವರಹತಿಮ್ಮಪ್ಪ
ರಂಗ ಬಾರ ಬಾಲೆ ಕುರಂಗನಯನೆ ಕೇಳೆ ಪ ಹೀಂಗಿರಲಾರೆ ಶ್ರೀಹರಿಯ ಸಂಗ ಬಿಟ್ಟಮೇಲೆಈ ತಂಗಾಳಿಯ ದಾಳೆ ಬೆಳದಿಂಗಳಿÀನ ಢಾಳೆಗಿಳಿ ಭೃಂಗನ ಸ್ವರಗಳೆ ದೇವಾಂಗನಾ ಗಾಯನಗಳೆಅನಂಗಗಿದು ಪೇಳೆಅ.ಪ. ಪರ ಹೆಣ್ಣುಗಳನೆ ಕೂಡಿಬಲು ಬಣ್ಣಗೆಟ್ಟೋಡ್ಯಾಡಿ ಕಲಿಯನ್ನು ಸಂಹಾರಮಾಡಿ 1 ಯುಗಳಸ್ತನಗಳ ಮೇಲೆ ಒಳ್ಳೆ ಮುಗುಳು ಮಲ್ಲಿಗೆ ಮಾಲೆಬಗೆ ಬಗೆ ಅಲಂಕಾರದಿ ಸೊಗಸಿಲಿದ್ದ ವೇಳೆಖಗವಾಹನನು ಬಂದ ಎನ್ನ ಬಿಗಿದಪ್ಪುವೆನೆಂದನಗುತ ಮಾತನಾಡಳಿವಳು ಸುಗುಣೆಯಲ್ಲವೆಂದನಿಗಮ ಚೋರನ ಕೊಂದ ನಗವ ಬೆನ್ನಿಲಿ ತಂದಜಗವ ನೆಗಹುವೆನೆಂದ ಜಿಗಿದು ಕಂಭದಿ ಬಂದಮಗುವಿನಂದದಿ ನಿಂದ ಯಾತ್ರೆಗಳ ಮಾಡುವೆನೆಂದಅನ್ನಗಳ ಒಲ್ಲೆನೆಂದ ಬೆಣ್ಣೆಗಳ ಕದ್ದುತಿಂದನಗುತ ಬತ್ತಲೆನಿಂದ ತಾ ಸಿಗದೆ ಓಡುವೆನೆಂದ 2 ನಾರಿ ಈಗ ನಾನು ಮುರಾರಿಯ ಕಂಡೆನುವಾರಿಜಾಕ್ಷ ಬಾಯೆನ್ನಲು ಶಿರವ ಬಾಗಿದೆನೆಮಾರನಯ್ಯನು ಜಾಣೆ ಎನ್ನ ಮೋರೆಯ ನೋಡಿದನೆಜಾರನಾರಿ ಇವಳೆಂದು ಸೇರದೆ ಪೋದನೆನೀರೊಳಡಗಿದನೆ ಮೋರೆ ಮುಚ್ಚಿದನೆಕೋರೆ ತೋರಿದನೆ ಆ ಘೋರ ರೂಪಾದನೆಬ್ರಹ್ಮ-ಚಾರಿಯೆಂತೆಂದನೆ ಕ್ಷತ್ರಿಯರ ಸವರಿದನೆವಾರಿಧಿಯ ದಾಟಿದನೆ ಬಹುಜಾರನೆನಿಸಿದನೆನಾರೇರ ವ್ರತವಳಿದನೆ ಕುದುರೆ ಏರಿದ ಶ್ರೀಕೃಷ್ಣನೆ 3
--------------
ವ್ಯಾಸರಾಯರು
ರಂಗವಲಿದ ಗುರುರಾಯರ ನೀ ನೋಡೋ | ಅಂತರಂಗದಿ ಪಾಡೋ ಭಂಗ ಬಡಿಪ ದುರಿತಂಗಳ ಈಡ್ಯಾಡೋ ಸತ್ ಸಂಗವ ಬೇಡೋ ಅ.ಪ ಹಿಂದೆ ಮೂರೊಂದವತಾರ ಧರಿಸಿದಾತ ಇದು ಹಿರಿಯರು ಮಾತ | ಬಂದ ಮರಳಿ ಮಹೀತಳದಿ ಜಗನ್ನಾಥ ದಾಸಾರ್ಯ ಪ್ರಖ್ಯಾತ || ತಂದೆ ನಮಗೆ ತಿಳಿ ಎಂದೆಂದಿಗು ಎಂದೆಂದಿಗು ಈತ ಆನಂದ ಪ್ರದಾತ 1 ಬಣ್ಣಿಸಲೆನಗಿನ್ನೊಶವೆ ಇವರ ಚರಿಯ ಕಣ್ಣುಗಳಿಂದಲಿ ಕಾಣುತ ಪೂರ್ಣಯ್ಯತಾನಾಗಿ ವಿಧೇಯ ಧನ್ಯನೆನಿಸಿ ಸತ್ಪುಣ್ಯ ಪಡೆದುದರಿಯ ಪುಸಿಯಲ್ಲವೊ ಖರಿಯ 2 ದಾಸವರ್ಯರಾ ವಾಸಗೈದ ಸ್ಥಾನ ಗಯಕಾಶಿ ಸಮಾನ ಲೇಸು ಭಕ್ತಿಯಲಿ ಸೇವಿಸಲನುದಿನ ಕೊಡುವುದುಸುಜ್ಞಾನ ಶ್ವಾನ | ಯಾತಕೆ ಅನುಮಾನ 3 ಸಾರ ನಿರ್ಮಿಸಿರುವ ದೇಹಾಖ್ಯ ರಥವ ಸೊಗಸಿಲಿಂದ ತಾನೇರಿ ನಗುತ ಬರುವ ಚತುರ್ದಿಕ್ಕಿಲಿ ಮೆರೆವ ಮಿಗೆ ವಿರೋಧಿಸುವ ಪಾಪಿಗೆ ಪಲ್ಮುರಿವ ಪೊಗಳುವರಷತರಿವ 4 ಶಾಮಸುಂದರನ ಸುಕಥಾಮೃತಸಾರ | ರಚಿಸಿದ ಬಹುಚತುರ ಪಾಮರ ಜನರ ಪ್ರೇಮದಿ ಉದ್ಧಾರ ಮಾಡಲು ಗಂಭೀರ ಶ್ರೀಮಾನ್ ಮಾನವಿಕ್ಷೇತ್ರನೆ | ನಿಜಾಗಾರವೆಂದೆನಿಸಿದ ಧೀರ 5
--------------
ಶಾಮಸುಂದರ ವಿಠಲ
ರಘುಪತಿಯೆ ನಿನ್ನನ್ನೆ ಪೊಗಳುವ ಪದಗಳನುಸೊಗಸಾಗಿ ರಚಿಪಂತೆ ಬಗೆಯನ್ನು ನೀಡೋ ಪ ಪರರ ಪೊಗಳಿಕೆ ಬೇಡ ಪರರ ತೆಗಳಿಕೆ ಬೇಡಪರಮಪಾವನ ನಿನ್ನ ಮಹಿಮೆಯನು ಬಣ್ಣಿಸುವಸರಸ ನುಡಿಗಳು ಬಾಯೆ ಬರುವಂತೆ ಮಾಡೊ 1 ಒಂದು ಲಕ್ಷದ ನಾಮದೊಂದು ಮಣಿಮಾಡಿಕುಂದದಿಹ ಭಕ್ತಿಗುಣದಿಂದ ಪೋಣಿಸಿ ಪದ್ಯದಂಥ ಹಾರವ ಮಾಡಿ ನಿನ್ನೆಡೆಗೆ ಅರ್ಪಿಸಲುಮಂದ ಬುದ್ಧಿಯ ನನಗೆ ಶಕ್ತಿಯನೀಡೋ 2 ರಾಗ ನಿನಗೆಯೆ ತಾಳ ನಿನಗೆಯೆ ಗೊತ್ತುರಾಗ ತಾಳಗಳ ಮೇಳ ನನಗೇನು ಗೊತ್ತುರಾಗತಾಳಗಳಲ್ಲಿ ಹಗುರಾಗಿ ಹಾಡಲಿಕೆತೂಗಿ ಶಬ್ದಗಳಿಡಲು ಸನ್ಮತಿಯ ನೀಡೋ 3 ಸುರವರನೆ ಬೇಕಯ್ಯ ನಿನ್ನ ಪ್ರೇರಣೆ ಇದಕೆವರಕವಿಯು ಸು ಕುಮಾರವ್ಯಾಸನಿಗೆ ವರವಿತ್ತುಉರುತರದ ಕನ್ನಡದಿ ಭಾರತವ ಬರೆಯಿಸಿದತೆರದಿ ಗದುಗಿನ ವೀರನಾರಾಯಣನೆ ಸಲಹೊ 4
--------------
ವೀರನಾರಾಯಣ
ರಾಮನಾಮವ ನೆನೆ ಮನವೆಪ ರಾಮ ಎಂದವನೆ ಧನ್ಯನೆಂದು ಶ್ರುತಿತತಿಗಳು ಪೊಗಳುತಿರೆ ಅ ತರುಣತನದಿ ದಿನ ದಾಟಿತು ಸುಮ್ಮನೆಶರೀರದೊಳು ಸ್ವರವಾಡುತಲೆತರುಣಿ ಸುತರು ಸಂಸಾರವೆಂಬಶರಧಿಯೊಳಗೆ ಮುಳುಗಿರದೆ ಮನವೆ 1 ಬಗೆಬಗೆ ಜನ್ಮದಿ ಜನಿಸಿದೆ ನಾಳೆಗೆಸಿಗುವುದೆ ನಿಜದಿಂ ಈ ಸಮಯಮುಗುಧನಾಗಿ ಮತ್ತೆ ಜನಿಸಿ ಬರುವುದುಸೊಗಸು ಕಾಣುವುದೆ ಛಿ ಮನವೆ 2 ಚಿಂತೆಯನೆಲ್ಲ ಒತ್ತಟ್ಟಿಗಿಟ್ಟುಅಂತರಂಗದಲಿ ಧ್ಯಾನಿಸುತಕಂತುಪಿತ ಕನಕಾದಿಕೇಶವನಎಂತಾದರೂ ನೀ ಬಿಡಬೇಡ ಮನವೆ3
--------------
ಕನಕದಾಸ
ರಾಯ ಹರಿಯ ಪ್ರಿಯ ಕೃಷ್ಣರಾಯದಾರಿ ನೋಡುವನು ತೊರೆಯದಿ ಅಪ್ಪಣೆಯ ಬೇಡಿ ಎರಗಿ ನಿಂತಳು ಪ. ಹರಿಯ ಬದಿಯಲಿ ಹೋಗಿ ನೀನು ಪರಮ ಪ್ರೇಮದಿಂದಲೈವರು ಬರುವರು ಈ ಕ್ಷಣದಲಿ ಎಂದು ಎರಗಿ ಹೇಳಮ್ಮ1 ಚಿತ್ತಜನೈಯನ ನೋಡಿ ಚಿತ್ತಹರುಷ ಬಡಿಸೆವಮ್ಮವೃತ್ತಾಂತವ ಹೋಗಿ ಹೇಳೆ ಕೀರ್ತಿವಂತಗೆ2 ಮಿತ್ರೆ ದ್ರೌಪತಿಯು ದೂತೆಗೆ ತೃಪ್ತಿಪಡಿಸಿ ಭೋಜನಾದಿಮುತ್ತು ರತ್ನದ ವಸ್ತ ವಸ್ತ್ರಗಳೆ ಕೊಟ್ಟಳು 3 ಅಂಬುಜಾಕ್ಷೆ ದ್ರೌಪತಿಯುತಾಂಬೂಲ ಅಡಿಕೆ ಕೊಟ್ಟುಸಂಭ್ರಮದಿ ಆನೆ ಅಂಬಾರಿ ಕೊಟ್ಟಳು 4 ಕುಂತಿದೇವಿ ಮೊದಲಾದವರುಕಾಂತೆಯರ ಪರಿವಾರ ಸಹಿತ ಕಂತುನೈಯನ ಕರೆಯ ಬರಲು ನಿಂತಾರಂತ್ಹೇಳೆ 5 ಪಂಚ ಪಾಂಡವರ ಮಡದಿ ಪಾಂಚಾಲಿ ದೇವಿಯುತಾನು ಕೆಂಚೆಯರಿಂದ ಕೂಡಿಮುಂಚೆ ಬಾಹೋರಂತ್ಹೇಳೆ6 ಪನ್ನಂಗ ಶಯನನ ನೋಡದೆ ಅನ್ನ ಸೊಗಸವಮ್ಮ ನಮಗೆ ಚನ್ನರಂಗಯ್ಯನ ಮುಂದೆ ಇನ್ನು ನೀ ಹೇಳೆ 7 ಮುದ್ದು ರಂಗನಮುಖವ ನೋಡದೆ ನಿದ್ರೆ ಬಾರದಮ್ಮ ನಮಗೆ ಹದ್ದು ವಾಹನನ ಮುಂದೆ ಸುದ್ದಿ ನೀ ಹೇಳೆ 8 ವೀತ ದೋಷ ರಾಮೇಶನ ಪ್ರೀತಿ ಇರಲಿ ಅಂತೆ ಹೇಳಮ್ಮಆತನ ಕಾಣದೆ ಒಂದು ಮಾತು ಸೊಗಸದು 9
--------------
ಗಲಗಲಿಅವ್ವನವರು
ಲೋಭಿಯು ಬೇಡಲು ಲಾಭವೇನಿರುವುದು ನಾಭಿಯು ಒಣಗುವುದು ಪ ಲೋಭಿಗೆ ಧನದಿಂದ ಶೋಭೆಯುಂಟೆ ಮನ ಕ್ಷೋಭೆಯಲ್ಲದೆ ಸತತ | ತನ್ನಯ ಮನಕ್ಷೋಭೆಯಲ್ಲದೆ ಸತತ ಅ.ಪ ನೂರು ಛಿದ್ರಗಳಲ್ಲಿ ತೋರುತಿದ್ದರು ದೇಹ ಕೋರನು ನವವಸನ | ಏನೆಂದು ಕೋರನು ನವವಸನ ಮೂರು ಕಾಸಿಗೆರಡು ಮಾರುತಿದ್ದರು ಅದ ದೂರದಿ ತ್ಯಜಿಸುವನು | ನೂತÀನವಸ್ತ್ರ ದೂರದಿ ತ್ಯಜಿಸುವನು 1 ಬಂಧು ಜನರು ತನ್ನ ಮಂದಿರಕ್ಕಿಳಿಯಲು ನೊಂದುಕೊಳ್ಳುವ ಮನದಿ | ತತ್ತಳಿಸುತ ನೊಂದುಕೊಳ್ಳುವ ಮನದಿ ತೊಂದರೆಗಳ ಪೊಂದಿಹೆನೆನ್ನುತ ಮುಂದಕೆ ಸಾಗಿಸುವ | ಬಂದವರನು ಮುಂದಕೆ ಸಾಗಿಸುವ 2 ಮುಗ್ಗಿದ ಧವಸವು ಅಗ್ಗÀದಿ ಮಾರಲು ಹಿಗ್ಗುತ ಕೊಳ್ಳುವನು | ಸೊಗಸಿನಲಿ ಹಿಗ್ಗುವನು ಒಗ್ಗಿಹುದೆನ್ನುತ ನುಗ್ಗಿಸಿ ಉದರದಿ ಸಗ್ಗದೆ ನಡೆಯುವನು | ಪರನುಡಿಗೆ ಸಗ್ಗದೆ ನಡೆಯುವನು 3 ಹಣದಲಿ ಲೋಭಕೆ ಕೊನೆ ಮೊದಲಿಲ್ಲದೆ ಒಣಗಿಸುವನು ತನುವ | ಕಾರ್ಪಣ್ಯದಿ ಒಣಗಿಸುವನು ತನುವ ಗೆಣೆಯನಿವನು ನಾಲ್ಕಾಣೆಯ ಕಂಡರೆ ಕುಣಿಯುವನು ಮನದಲ್ಲಿ | ಎಣೆಯಿಲ್ಲದೆ ಕುಣಿಯುವ ಮನದಲ್ಲಿ4 ಕಿಕ್ಕಿರಿದರು ಧನ ಕಕ್ಕುಲತೆಯೊಳ್ ತನ್ನ ಮಕ್ಕಳ ಸಲಹುವನು | ರಕ್ಕಸನಿವ ಮಕ್ಕಳ ಸಲಹುವನು ಮಿಕ್ಕ ಧನವ ಬಲು ಅಕ್ಕರೆಯಿಂದ ಎವೆ ಯಿಕ್ಕದೆ ನೋಡುವನು | ನೇತ್ರದಿ ಎವೆಯುಕ್ಕದೆ ನೋಡುವನು 5 ನುಡಿದರೆ ಸವಿಮಾತ ಒಡವೆ ವಸನಗಳಿ ಗ್ಹಿಡಿವಳೆಂದರಿಯುತಲಿ | ಸಡಗರದಿ ಹಿಡಿವಳೆಂದರಿಯುತಲಿ ಕರವ ಪಿಡಿವ ತನ್ನ ಮಡದಿಯ ಕಂಡರೆ ಸಿಡಿಮಿಡಿಗÀುಟ್ಟುವನು | ನಿರ್ಘೃಣನಿವ ಸಿಡಿಸಿಡಿ ಗುಟ್ಟುವನು 6 ರಾಯರೆ ನಿಮ್ಮ ಸಹಾಯ ಹೊರತು ಕಾಣೆನೆನಲು ಕಾಯುವ ಧಣಿ ನಾರಾಯಣನೆನುತಲಿ ನುಡಿಯುವನು 7 ಈ ಧನವೆ ದೊಡ್ಡ ಸಾಧನವೆನ್ನುವ ಮೇಧಾವಿಯು ಇವನು | ಓದಲರಿಯದ ಮೇಧಾವಿಯು ಇವನು ಪಾದ ಕಮಲದಲಿ ಆದರವರಿಯನಿವ | ಎಂದೆಂದಿಗು ಆದರವರಿಯನಿವ 8 ಘನತೆಯು ಬೇಡವು ಜನತೆಯು ಬೇಡವು ಧನವಿದ್ದರೆ ಸಾಕು | ಈ ನರನಿಗೆ ಧನವಿದ್ದರೆ ಸಾಕು ಮನುಜ ಮುಟ್ಟದ ಗುಬ್ಬಿಯನನುಕರಿಸುತ ಜೀ ವನವನು ಕಳೆಯುವನು | ಕ್ಲೇಶದಿ ಜೀವನವನು ಕಳೆಯುವನು9 ಗಳಿಸಿದವನ ಧನ ಬಳಸಿದವನಿಗೆಂಬ ಮುಳುಗಿ ಮುಳುಗುತಿರುವ | ಕ್ಲೇಶಗಳಲಿ ಮುಳುಗು ಮುಳುಗುತ್ತಿರುವ 10 ಭುಜಗಶಯನ ಹರಿ ಸುಜನರು ತನ್ನನು ಅಜನೆಂದು ಕರೆಯುತಿರೆ | ಸೃಷ್ಟೀಶನ ಅಜನೆಂದು ಕರೆಯುತಿರೆ ತ್ಯಜಿಸದೆ ಹೆಸರನು ಅಜಗಳ ಸ್ತನದಂತೆ ಸೃಜಿಸಿದನೀ ಜನರ | ಪ್ರಸನ್ನ ಹರಿ ಸೃಜಿಸಿದನೀ ಜನರ 11
--------------
ವಿದ್ಯಾಪ್ರಸನ್ನತೀರ್ಥರು
ವಾಯುದೇವರು ಬಾರಯ್ಯ ಬಾರೋ ಮಾರುತಿ ಪ ಅಕ್ಷಯಕುವರನ | ಕುಕ್ಷಿಯನೋಡಲು | ಪಕ್ಷಿವಾಹನರಾಮ | ಈಕ್ಷಣ ಕರೆವ ಬಾ 1 ದುರುಳ ದುಶ್ಶಾಸನನ | ಉದರವ ಭಂಗಿಸೆ | ತರಳೆದ್ರೌಪತಿ ದೇವಿ | ಕರೆದಳೊ ಬೇಗ 2 ಮಧ್ವಮುನಿಯೆ ನಿನ್ನ | ಶುದ್ಧತತ್ವದಿ ನಮ್ಮ | ಉದ್ಧರಿಸಲು | ಅನಿರುದ್ಧನು ಕರೆವ ಬಾ 3 ಜಗದಿ ಭ್ರಾಂತೇಶನೆ | ಮೃಗಯಾಪುರದೊಳು | ಮಿಗಿಲು ರಥವನೇರಿ | ಸೊಗಸಿಲಿ ಬೇಗ ಬಾ 4 ಶ್ರೀಶಕೇಶವದೂತ | ಭೂಸುರವಿನುತ | ದಾಸರ ಸಲಹಲಿನ್ | ಈ ಸಮಯದಿ ಬೇಗ5
--------------
ಶ್ರೀಶ ಕೇಶವದಾಸರು
ವಾರಿಜ ಮುಖಿ ವಾರಿಜಾಕ್ಷಿ ವಾರಿಜ ಗಂಧಿ ವಾರಿಸನಳಿಯನನುಓರಂತೆ ನೀ ಪೋಗಿ ಕರೆತಾರೆನ್ನಯ ಪ್ರಾಣಾಧಾರ ಕೇಶವ ಮೂರ್ತಿಯ ಪ ನಗ ವೈರಿಯಣುಗನಣ್ಣನಯ್ಯನಾಪ್ತಗೆ ಮಿಗೆ ಹುಟ್ಟಿದನ ತಮ್ಮನಸೊಗಸು ವಸ್ತ್ರಕೆ ಸೋತನ ಸುರಪುತ್ರನ ವಾಜಿಯನಿವ ವೈರಿಯ ಪಗೆಯಜಗದೊಳಗೆ ಹಾಟಿದೊಳೇರಾಟದ ವನವ... ನವನಿಂದ ನಗೆತೋರಿನಾವುನಿನಗೆಅಗಣಿತಾಭರಣವೀವೆನು ಅಂಗಜಾಗ್ನಿಯ ತಗಹ ಬಿಡಿಸೆ ತರುಣಿ 1 ಮಿಹಿರ ನಂದನನ ತಂದೆಯ ಪಗೆಯವನ ಮಾವನ ಹಿತನ ಮನೆವೆಸರಮಹಿ ವನ ಕೃತಿಗೊಡೆಯನ ಬಂಟನನುಜನ ಸಹಿಸಿ ತಮ್ಮನ ಮಿತ್ರನ ಕುಹಕದಿ ಶಾಪವಡೆದಳು ಪ್ರಸ್ತರವಾಗಿ ಗಗನ ಮಧ್ಯದೊಳಿರಲು...ಸಿ ಶಾಪವ ದನುಜ... ಕ್ಷಿತಿಯೊಳು ವಿವರಿಸುವವನ ಕರೆತಾರೆ 2 ಸುರಭೇದ ಪ್ರಥಮ ದಾಸಿಯ ಪೆಸರನ ವಾಜಿಯರಸನ ನಖವೈರಿಯಮರೆಯ ಮಾರ್ಗದಿ ಗಮಿಸುವನಾಪ್ತನ ತಾಯ ಧರಿಸಿದಾತನ ಮಿತ್ರನಪೊರೆಯ ದೆಸೆಯ ದಿಕ್ಕರಿಯ ಕೋಪದಿ ಸೀಳ್ದನರಸಿಯಣ್ಣನನೀಕ್ಷಣಕರೆತಂದೆನಗೆ ಕೂಡಿಸು ಕಾಗಿನೆಲೆಯಾದಿಕೇಶವನ 3
--------------
ಕನಕದಾಸ
ವಿರಹ ನಿಲ್ಲದು ಕಾಣೊ ನಿನ್ನ ಕೂಡದೆ | ಗುರುತ ಮಾಡಿದ ಸೊಗಸು ಮರಿಯದೊ ಗೋಪಾಲ ಪ ಕಣ್ಣುನೋಟ ತಿರುಹಿ ನೀ ಕೈಯ ಮುದರಿ ವರಹ | ಹೊನ್ನು ಕಂಭದಲಿ ನಿಂದು ತೋರಿ | ಭ್ರಮಿಸಿ ಕುನ್ನಿಗೆ ಕಣಿಯನಿಕ್ಕಿ ಹೊಡೆಯೊನಾಗಿ | ಹೆಣ್ಣು ಭಾವನ ಕರೆದು ಸೂಚನೆ ಮಾಡಿದನು 1 ಪುಟ್ಟ ಹೆಜ್ಜೆಲೆ ಸಾಗಿ ಮುದ್ದು ಕೊಡಲು ಬಯಸಿ | ದೃಷ್ಟಿಯಿಂದ ನೋಡಲು ಭ್ರಾಂತಳಾಗಿ | ಅಟ್ಟ ಅಡಿವೆಯೊಳು ನಡಿವೆ ನಾ ಪೋಗಲು | ದುಷ್ಟ ನಾದಿನಿ ಕಂಡು ಮಾವಗೆ ಪೇಳಿದಳು 2 ಇಂದಿರೇಶ ತಾನಾಗಿ ಎದೆ ಮುಟ್ಟಿ ನಿನಗೆ | ಇಂದಿನ ದಿವಸ ನಾ ಭ್ರಮಿಸಿದ್ದು | ಒಂದೊಂದು ಬಗೆ ನೆನಿಸಿ ಕಲೆಕಲೆಗಳು ಕೆರಿದ್ಯಾಸೆ | ಮುಂದೆಗಾಣದೆ ನಡಿಯೆ ಗಂಡಾ ತಲೆದೂಗಿದನು3 ಬೀದಿಯೊಳಗೆ ನೀನು ಕುದರಿಯ ಕುಣಿಸುತ ಹಾದು ಪೋಗಲು ನಮ್ಮ ಮನಿಯ ಮುಂದೆ | ಪಾದಕ್ಕೆ ಕಪ್ಪನೆ ಇಟ್ಟು ತೊಟ್ಟ ಕುಪ್ಪಸ ಬಿಚ್ಚೆ | ಮದನ ನೋಡಿ ಮನೆಯಲ್ಲರಿಗೆ ಬೀರಿದನು4 ಪರಮಪುರುಷ ನೀನೆ ನಿನ್ನಂಗ ಸಂಗಕ್ಕೆ | ಸರಿಗಾಣೆ ಸ್ಮರಿಸೆ ಮನಸು ನಿಲ್ಲದೊ | ಸುರತ ಕೇಳಿಯ ಜಾಣ ವಿಜಯವಿಠ್ಠಲ ಎನ್ನ | ಕರೆದು ಮಸಕು ತೆಗೆದು ತರ್ಕೈಸೊ ಚನ್ನಿಗಾ 5
--------------
ವಿಜಯದಾಸ
ವಿಶೇಷ ಸಂದರ್ಭದ ಹಾಡುಗಳು ರಂಗನತೇರಿಗೆ ಬನ್ನಿರೋ ತೆಂಗು ಹೂ ಹಣ್ಣುಗಳ ತನ್ನಿರೋ ಬಂಗಾರದ ಗಿರಿಯಪ್ಪ ಎನ್ನಿರೋ ರಂಗ ಪರ್ಸಾದವ ಕೊಳ್ಳಿರೊ 1 ತೆಂಗಿನಮರ್ದುದ್ದ ತೇರೈತೆ ಅಲ್ಲಿ ರಂಗಿನ ಬಾವುಟ ಹಾರೈತೇ ಸಿಂಗಾರದಬಟ್ಟೆಯೇರೈತೇ ಹಂಗೂ ಹಿಂಗೂ ಜನ ಸೇರೈತೇ 2 ಬಾಳೆಕಂಬಗಳನು ಕಟ್ಟವ್ರೇ ತೋಳುದ್ದ ಹೂಸರ ಬಿಟ್ಟವ್ರೇ ತಾಳಮ್ಯಾಳ್ದೋರೆಲ್ಲಾ ನಿಂತವ್ರೇ ಬಾಳತುತ್ತೂರ್ಗೋಳನೂತ್ತವ್ರೇ 3 ತೇರಿನ ಗದ್ದುಗೆ ಬಂಗಾರ ತೋರಗಲ್ದಪ್ಪ ಅಲಂಕಾರ ಹಾರುವರ ಬಾಯಲ್ಲಿ ಓಂಕಾರ ರಂಗಪ್ಪಗಾಗೈತೆ ಸಿಂಗಾರ 4 ಭಟ್ಟರು ಮಂತ್ರವ ಹೇಳ್ತವ್ರೆ ಕಟ್ಟುನಿಟ್ಟಾಗಿ ನಿಂತವ್ರೇ ಬಟ್ಟಂದ ಹೂಗೊಳ ಹಾಕ್ತವ್ರೇ ಸಿಟ್ಟಿಲ್ಲದೆ ರಂಗ ನಗತವ್ನೇ 5 ಇಂಬಾಗಿ ಹೂರ್ಜಿಯ ಹಿಡಿದವ್ರೆ ದೊಂಬರೆಲ್ಲ ಕುಣಿತವ್ರೆ ಹಿಂಬದಿಯಲಿ ತೇರ ನಡೆಸವ್ರೇ 6 ಹಣ್ಣು ಜನ್ನವ ತೇರಿಗೆಸಿತಾರೆ ತಣ್ಣನೆ ಪಾನಕ ಕೊಡುತಾರೆ ಸಣ್ಣೋರೆಲ್ಲ ಕೈಮುಗಿತಾರೆ, ಹಣ್ಣು ಕಾಯ್ಗಳ ಗಾಲಿಗಿಡುತಾರೆ7 ತಕ್ಕೋ ಹಣ್ಕಾಯ ಎಂಬೋರು ಕೆಲವರು ನಕ್ಕು ಕುಣಿಯುವರೆಲ್ಲ ನೂರಾರು ಜನರು 8 ರಂಗಪ್ಪನ ತೆಪ್ಪ ತೇಲುತಿವೆ ಸಂಗೀತ ವಾದ್ಯ ಕೇಳುತಿವೆ ರಂಗುವiತಾಪು ಹೊಳೆಯುತಿವೆ ಮಂಗಳಾರತಿ ದೀಪ ಕಾಣುತಿವೆ 9 ಜೋಮಾಲೆ ಸರಗಳು ಹೊಳೆಯುತಿವೆ ನಾಮ ಮಂತ್ರಗಳೆಲ್ಲ ಮೊಳಗುತಿವೆ 10 ರಂಗಿನದೀಪ ಉರಿಯುವುದಣ್ಣ ಮಾಂಗಿರಿರಂಗನೆ ಬಲುಸೊಗಸಣ್ಣ 11
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್