ಒಟ್ಟು 322 ಕಡೆಗಳಲ್ಲಿ , 61 ದಾಸರು , 287 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಾವಲ್ಲಿ ಕೂತಿದ್ದೀಯೊ ರೋಗಿಷ್ಠ ಕಾಯ ಎನ್ನನು ಕಾಯ್ಕೊಂಡು ಪ ಜೀವಕಂಟಕನಾಗಿ ಹೇಯದಿಂದೊಡಗೂಡಿ ಆವಕಾಲದಿ ರೋಗದ್ಹೊರಳುತ ಎಲೆ ಖೋಡಿ ಅ.ಪ ಏನು ಕರ್ಮವ ಮಾಡಿದ್ದೋ ಪಾಪಾತ್ಮ ನೀ ಹೀನಸ್ಥಿತಿಯ ಪೊಂದಿದಿ ನಾನಾವಿಧದಿ ಮಹಬೇನೆಯಿಂ ನರಳುತ ನೀನೆನ್ನ ಜತೆಗೂಡಿ ಬನ್ನಬಡಿಸುವಿ ಪಾಪಿ1 ಹೊಲಸಿನ ದ್ವಾರದಿಂದ ಇಹ್ಯಕೆ ಬಂದಿ ಮಲಮೂತ್ರ ತುಂಬಿಕೊಂಡು ತೊಳೆಯದಿರಲು ನಿಮಿಷ ಹೊಲಸಿಕ್ಕಿನಾರುವಿ ತಿಳಿದುನೋಡಲು ನಿನ್ನ ಸಲಿಗೆಯಿಂ ನಾ ಕೆಡುವೆ 2 ಎನ್ನ ಜೊತೆಯ ಪೊಂದಿರ್ದ ಕಾರಣದಿಂ ನಾ ನಿನ್ನ ಕ್ಷೇಮವ ಬಯಸುವೆ ಎನ್ನಯ್ಯ ಶ್ರೀರಾಮನುನ್ನತಡಿಗಳ ನಂಬಿ ಸನ್ನುತಿಯಿಂ ಕ್ಷಮೆಬೇಡಿ ಧನ್ಯನಾಗೆಲೋದೇಹ್ಯ3
--------------
ರಾಮದಾಸರು
ದಾಸರಾಯರ ಪಾಡಿರೋ | ರಂಗನೊಲಿದ ಶ್ರೀ |ದಾಸರಾಯರ ಪಾಡಿರೋ ಪ ದಾಸರಾಯರ ಪಾಡಿ | ದೋಷಗಳೀಡಾಡಿಶಾಶ್ವತ ಲೋಕಗ | ಳಾಶಿಪ ಜನರೆಲ್ಲಾ ಅ.ಪ. ಮಾನವಿ ಕ್ಷೇತ್ರಸ್ಥಿತನೂ | ಘನಕರ್ಣೀಕ ನರಸಪ್ಪನೆಂಬ ದ್ವಿಜನೂ |ಜ್ಞಾನಿ ತಿಮ್ಮಣ್ಣನ ಸತಿಸಹಿತ ಸೇವಿಸೆಮಾನ್ಯ ಸಹ್ಲಾದ ತಾ ಸುತನಾಗಿ ಜನಿಸಿದ 1 ಶಾಲಿವಾಹನ ಶಕವೂ | ಮತ್ತೇಗಾಳಿಗಣಯುತ ಹತ್ತಾರ್ನೂರು |ಕೀಲಕವತ್ಸರ ಶುಕ್ಲ ಶ್ರಾವಣದಲ್ಲಿಶೀಲ ವೆರಡೆನೆ ದಿನ ಜನಿಸಿಹರನ್ನಾ 2 ಈತನು ಹರಿಭಕ್ತನೊ | ಪ್ರಹ್ಲಾದಗೆಪ್ರೀತಿಯ ಸೋದರನೋಧಾತ ಜನಕ ಹರಿ ಮಾತಿನಿಂದಲಿ ಇವಖ್ಯಾತನಾಗಿ ಶ್ರೀನಿವಾಸನೆಂದೆನಿಸಿದ 3 ಆದ ಸಕಾಲದಿ ದ್ವಿಜನು | ಸದ್‍ಬೋಧಿತ ವರದೇಂದ್ರರಿಂ |ಭೇದ ಮತದೊಳದ್ವಿತೀಯ ನೆಂದೆನಿಸುತ್ತವಾದಿ ನಿಗ್ರಹದೊಳತ್ಯಾದರವನೆ ಪೊತ್ತ4 ಒದಗಲುದ್ಧುøತ ಕಾಲವೂ | ಪ್ರಾಪ್ತಸಾಧು ವಿಜಯ ದಾಸರು | ಮುದದಿ ನರ್ತವಗೈದು ಕೀರ್ತನೆ ಪಾಡಲುಹದಗೆಟ್ಟನಿವನೆಂದು ಬಿರುನುಡಿ ನುಡಿದಂಥಾ5 ಒದಗಲುದರ ರೋಗವೂ | ಮುಂದೆಹದನ ಕಾಣದೆ ತಪಿಸಾಲು |ಮೋದ ತೀರ್ಥರ ರೂಪ ಆದರದಲಿ ಭಜಿಸಿಸಾಧು ಸೋತ್ತಮ ದ್ರೋಹ ಕಳವ ಮಾರ್ಗವ ತಿಳಿದ6 ವಿಜಯ ದಾಸರ ಪಾದವಾ | ತಮ್ಮಯನಿಜ ಶಿರದೊಳು ಪೊತ್ತು ಮೆರೆವಾ |ನಿಜ ಶಿಷ್ಯ ಗೋಪಾಲದಾಸರಲ್ಲಿಗೆ ಬಂದುಭಜಿಸೆ ಅವರ ಆಯು ನಾಲ್ವತ್ತು ಪಡೆದಂಥ 7 ಮಂತ್ರಿತ ಭಕ್ಕರಿಯಾ | ಭುಜಿಸೆ ದೇಹಯಂತ್ರ ಸಾಧನ ಕೊದಗಲೂ |ಮಂತ್ರೋಪದೇಶವ ಗೊಳ್ಳುತ ಮುದದಿಂದೆಯಂತ್ರೋದ್ಧಾರಕ ಪ್ರಿಯ ರಂಗನ ಒಲಿಸಿದ 8 ಇಂದು ಭಾಗದಿ ಸ್ನಾನವೂ | ಮಾಡುತಲಿರೆಸ್ಕಂಧಾ ರೋಹಿತ ಶಿಲೆಯಸ್ಥ |ಇಂದಿರಾ ರಮಣ ಶ್ರೀ ಜಗನ್ನಾಥ ವಿಠಲನಸುಂದರಾಂಕಿತವನ್ನು ಧರಿಸಿದ ಶಿರದಲ್ಲಿ 9 ಪಾಂಡುರಂಗನ ಕಾಣುತ | ತನ್ನಯದಿಂಡುಗೆಡಹಿದ ಆಕ್ಷಣಾ |ಅಂಡಜಾಧಿಪನುದ್ದುಂಡ ದೇವರ ದೇವಪುಂಡರೀಕಾಕ್ಷನ ಪಾದಕೆ ಶರಣೆಂದ 10 ಸ್ವಾದಿ ಕ್ಷೇತ್ರಕ್ಕ ಪೋಗೀ | ಪೂಜ್ಯರಾದವಾದಿರಾಜರ ಪೂಜಿಸೀ |ಸಾಧು ವರ್ಯರ ಆಜ್ಞಾಧಾರಕರಿವರಾಗಿಬುಧರಿಗೆ ಹರಿಕಥಾ ಸುಧೆಯ ಸಾರವನಿತ್ತ 11 ಪದ ಸುಳಾದಿಗಳಿಂದಲಿ | ಹರಿಯ ಪಾದಸದ್ವನಜವ ಸ್ತುತಿಸುತಲೀ |ಹೃದಯ ಸದ್ಮದಿ ತದ್ಧಿಮಿ ಧಿಮಿ ಧಿಮಿಕೆಂದುವಿಧಿಪಿತ ಹರಿಯನ್ನ ಕುಣಿಸಿ ಮೋದಿಸಿದಂಥ 12 ಸುವತ್ಸರವು ಶುಕ್ಲದೀ | ಸಿತಭಾದ್ರನವಮಿ ತಾರೆಯು ಮೂಲದೀ |ರವಿಯ ವಾರವು ಸಂದ ಶುಭದಿನದಲಿ ಗುರುಗೋವಿಂದ ವಿಠಲನ ಸೇರಿ ತಾಮೆರೆದಂಥ 13
--------------
ಗುರುಗೋವಿಂದವಿಠಲರು
ದುರ್ಗೇ ಪಾಲಿಸೆ ಹೇ ದುರ್ಗೇ ಪಾಲಿಸೆ ಪ ಭಾರ್ಗವಿ ಭಜಕರ ವರ್ಗವ ಕರುಣದಿ ಅ.ಪ ಸರ್ಗಸ್ಥಿತಿ ಲಯಕಾರಣೆ ಜಗಕೆ ಸು ಮಾರ್ಗದಿ ನಡೆಯಲನುಗ್ರಹ ಮಾಡೆ 1 ವಂದಿಸುವೆನು ಭವಬಂಧವ ಬಿಡಿಸ್ಯಾ ನಂದವ ಕರುಣಿಸು ನಂದಾತ್ಮಜಳೆ 2 ಕಡಲತನುಜೆ ತವಕಡು ಕರುಣದಲಿ ಬಡಜಭವ ಮುಖರು ಪಡೆದರು ಪದವನು 3 ನಭ ಸಂಚಾರಿಣೆ ಆಯುಧ ಭವ ಭಯಹಾರಿಣಿ ನಮೊನಮೋ4 ಇಂದಿರೆ ಪದುಮ ಸುಮಂದಿರೆ ತವಪದ ದ್ವಂದ್ವದಿ ಭಕುತಿಯ ಪೊಂದಿ ಸುಖಿಸುವಂತೆ 5 ವೀರರೂಪಿ ಅಸÀುರಾರಿಯೆ ತವಪರಿ ವಾರದ ಭಯವನು ತಾರದಿರೆಂದಿಗೂ 6 ಮಂಗಳಕೃಷ್ಣ ತರಂಗಿಣೆ ಕಾರ್ಪರ ತುಂಗಮಹಿಮೆ ನರಸಿಂಗನ ರಾಣಿ7
--------------
ಕಾರ್ಪರ ನರಹರಿದಾಸರು
ದೇವದೇವನೆ ಓವುದೆಮ್ಮನು ಶ್ರೀವಧೂವರನೇ ಸಾವಧಾನದಿ ಭಾವಿಸೈ ವಸುದೇವ ಕುವರನೇ ಪ. ನೀಲಮೇಘಶ್ಯಾಮ ರಮಾಲೋಲ ಪಾಲಿಸೈ ಬಾಲಗೋಕುಲಬಾಲ ಶ್ರೀ ವನಮಾಲ ಪಾಲಿಸೈ 1 ಭೋಗಿಶಯನ ಯೋಗಗಮ್ಯ ಸಾಗರಸ್ಥಿತ ಬಾಗಿ ನಮಿಪೆವು ರಾಗದಿಂ ಪೊರೆ ವಾಗಗೋಚರ 2 ಘಳಿಲನೈತಹುದಿಳೆಯ ರಮಣ ತಳುವ ಬೇಡುವೈ ಎಳೆಯರಾವು ಚಲವನರಿಯೆವು ಒಲವನೆರೆವೆವೈ3 ದೇಶದೇಳ್ಗೆಯೊಳಾಸೆಯಿಂದಿಹ ದಾಸರೆಂದು ನೀಂ ಲೇಸ ಪಾಲಿಸು ಆಶೆ ಸಲ್ಲಿಸು ಶೇಷಗಿರೀಶನೇ4
--------------
ನಂಜನಗೂಡು ತಿರುಮಲಾಂಬಾ
ದೇವನಾ ದರುಶನಾ ಜೀವನಾ ಪಾವನಾ ಗುರುವಿನಾ ಪ್ರವಚನಾ ಸಾವಿನಾ ನಾಶನಾ ಪ ಸ್ವಾತ್ಮದ ಜ್ಞಾನೋದಯ ಜಗದಿ ಪೂರ್ಣ ನಿರ್ಭಯ ಬ್ರಹ್ಮಪದದ ತನುಮಯ ತಾನೇ ಶುದ್ಧ ಚಿನುಮಯ 1 ಜ್ಞಾನದ ಪೂರ್ಣಾನುಭವ ನಿರ್ವಿಕಲ್ಪ ಸ್ಥಿತಿಯೆ ಶಿವಾ ದುರುಳ ಭವ ಗುರುವಿತ್ತಾತ್ಮಾನುಭವ 2 ಜೀವನ್ಮುಕುತಿ ಆನಂದ ತಿಳಿಯೆ ನೀನೆ ಮುಕುಂದ ಅರಿತು ನೋಡು ಇದನೆಂದ ಗುರುಶಂಕರನಾ ಕಂದಾ 3
--------------
ಶಂಕರಭಟ್ಟ ಅಗ್ನಿಹೋತ್ರಿ
ದ್ರೌಪದಿ ಸುಳಾದಿ ಪುರಂದರ ಗುರು ನಾಗೇಶಾವೇಶ ಗುರು ಶ್ರೀಪಾದ ರಾಯ ಗುರು ಯೋಗಿ ಟೀಕಾರ್ಯ ಗುರು ಶ್ರೀಮದಾಚಾರ್ಯ ಗುರು ನಾಗಶÀಯನ ನೀನು ಸಕಲ ಜಗದ್ಗುರು ಈತ ಗುರು ಸಂತತಿಗೆ ವಂದೀಸಿ ತಾತ್ವಿಕರ ಜಾಗು ಮಾಡದೆ ನಮಿಪೆ ಜ್ಞಾನ ಪ್ರದಾತರೆಂದು ಆಗಮ ಪೌರಾಣ ಶೃತಿ ತತಿಗಳೊಳೆಲ್ಲ ಆಗುವಳಭಿಮಾನಿ ಭಾರತೀದೇವಿ ಎಂದು ಈಗ ಈ ಮಹಿಮಳ ಚರಿತೆ ಬುದ್ಧಿಗೆ ದೇವಿ ತಾಗಿಸಿದಂದದಿ ಸಾಗಲಿ ನುಡಿವುದು ನಾಗರಾಜನ ಜನನಿ ಸ್ವಪ್ನದಿ ಸುಳಿದಳು ಕೂಗಿದೆ ಅಯೋನಿಜೆ ದುಃಖರಹಿತಳೆಂದು ಭಾಗವತರ ಕಾಯ್ವ ಭಾಗ್ಯ ಸಂಪನ್ನದೇವಿ ಯೋಗಿ ಜನರಿಗೆಲ್ಲ ಗುರುಪತ್ನಿ ಎಂದೆನಿಪೆ ಆಗಾಗ ಅವತರಿಸಿ ಅನಿಲನ ಕಾರ್ಯಕ್ಕೆ ಆಗುವೆ ಸಹಕಾರಿ ಅಸುರರ ಸಂಹಾರಿ ಶ್ರೀ ಗುರೋರ್ಗುರು ಹರಿ ಗೋಪಾಲಕೃಷ್ಣವಿಠಲ ಭಾಗವತರ ಕಾಯ್ವ ನಿನ್ನದ್ವಾರದಿ ಸ್ಮರಿಸೇ 1 ಕೃತಿಸುತೆ ಕೊಂಡದಿ ಉದಿಸಿ ಸುತೆ ಎನಿಸಿದೆ ದ್ರುಪದನಿಗೆ ಚ್ಯುತರಹಿತ ಯೌವನಯುತೆ ಐವರಿಗರಸಿಯು ಆದೆ ಪ್ರತಿಯಿಲ್ಲದ ಪತಿವ್ರತೆ ಸುರತತಿ ಜನನಿಯು ನೀನೌ ಮಾ- ರುತ ಸುತನಲ್ಲದೆ ನಿನಗಿನ್ನಿತರರ ಸಂಗವು ಉಂಟೆ ಸುತರಂದದಿ ನಾಲ್ವರ ತಿಳಿದತಿಶಯದಲಿ ಅವರವರಾ ಸತಿಯರ ನಿನ್ನೊಳಗಡಿಗಿಸಿ ರತಿ ಕಾಲದಲೊಲಿದಿತ್ತೆ ಮತಿವಂತರಿಗಲ್ಲದೆ ಪ್ರತಿ ಜನರಿಗೆ ಮೋಹಕವು ಕ್ಷಿತಿಯೊಳು ನೀನವತರಿಸೀ ಕ್ಷಿತಿಗೇ ತೋರಿದ ಲೀಲೆ ಅತಿ ಸೌಭಾಗ್ಯದಿ ಮೆರೆದೆ ಕ್ಷಿತಿಪತಿಸೂಯಾಗದಲಿ ಖತಿಗೊಳ್ಳಲು ಖಳ ಜನರು ಸ್ಥಿತ ಸಾಮ್ರಾಜ್ಯವ ಕಂಡು ಕ್ಷಿತಿಭಾರವನಿಳುಹಲು ಶ್ರೀಪತಿ ಪತಿಮನವರಿಯುತ ಕುರು ಪತಿಸಭೆಯಲಿ ಭ್ರಮಿಸುತ ಜಾರುತ ಸರಸಿಯೋಳ್ ಬೀಳುತಿರೆ ಪತಿ ಶ್ರೀಪತಿ ಮೊಗವೀಕ್ಷಿಸಿ ಅತಿ ಹಾಸ್ಯದಿ ನೀ ನಗಲು ಖತಿಗೊಳ್ಳಲು ಕುರುಪತಿ ಕಲಕಿತು ದ್ವೇಷದ ಭಾವಗಳು ಪತಿ ಭಾರದ ಹರಣಕೆ ಮೂಲಾಯಿತು ನಿನ್ನಯ ನಗೆ ಕಿಡಿ ತಾ ಕಾತುರಕ್ಕಸ ತರುಗಳಿಗೆ ಸೋಕಿತು ಕಾಮನ ಬಿಸಿಯು ಮತಿಹೀನರು ನಿನ್ನನು ಬಯಸುತ ಬರೆ ದ್ವೇಷಾಗ್ನಿ ಜ್ವಲಿ ಸುತ ವಾಯು ಸಹಾಯದಲಿ ಹುತಗೈಸಿದೆ ಖಳತತಿಯ ಪತಿಯಂತರ್ಗತ ಕೃಷ್ಣನ ನುತಿಸುತ ಭಕ್ತ್ಯಾಜ್ಯಾಹುತಿ ಕ್ಷಿತಿ ಭಾರವನಿಳುಹಿಸಿದೆ ಹಿತತಂಗಿಯೆ ಗೋಪಾಲಕೃಷ್ಣವಿಠ್ಠಲಗೇ ನೀ ಪ್ರತಿಯುಂಟೆ ನಿನಗೆ ಈ ಕ್ಷಿತಿಯೊಳು ನಾಕಾಣೆ 2 ಮಡಿಯದೆ ದುರ್ಯೊüೀಧನನು ಮುಡಿಯನು ಕಟ್ಟೆನು ಎಂಬ ದೃಢ ಸಂಕಲ್ಪಳೆ ಪುಷ್ಪ ಮುಡಿಯಲಪೇಕ್ಷಿಸಿದೆ ನೀ ಒಡೆಯುವರುಂಟೇ ಇದರ ಒಡಲಿನ ಮರ್ಮವ ದೇವಿ ಒಡೆಯ ವೃಕೋದರ ನಿನ್ನ ನುಡಿ ಕೇಳುತ ವನ ಪೊಕ್ಕು ಮಡುಹುತ ಯಕ್ಷರ ತಂದು ಮುಡಿಸಿದ ಸೌಂಗಂಧಿಕವ ಪೊಡವಿಯೊಳ್ಹರಡಿತು ವಾರ್ತೆ ಒಡಲರಿಯದೆ ಜನತತಿಗೆ ಪಿಡಿಯುತ ಕರದಲಿ ಪುಷ್ಪ ಒಡೆಯನ ಪ್ರೇಮದಿ ನೋಡಿ ಮುಡಿಸಿದೆ ಸಿರಿಹರಿ ಮುಡಿಗೆ ಕಡು ಭಕ್ತಿಯೊಳಂತರದಿ ಬಿಡುಬಿಡು ಬಿಂಕವ ಲೀಲೆ ಕೊಡು ಕೊಡು ಭಕ್ತಿಯ ಬಾಲೆ ಪಡಿಸಾನಂದವ ಶೀಲೆ ನುಡಿಸಡಿಗಡಿಗ್ಹರಿ ಲೀಲೆ ಒಡಗೂಡತ ಪತಿಯೊಡನೆ ನಡೆಸಿದ ಚರಿತೆಗಳೆಲ್ಲ ಕಡು ಮೋಹವು ರಜ ತಮರಿಗೆ ಕೊಡುವುದು ಸುಖ ಸುಜನರಿಗೆ ಪೊಡವಿಪತಿ ಗೋಪಾಲಕೃಷ್ಣವಿಠಲ ನಿನ್ನ ನಡೆನುಡಿ ಮೆಚ್ಚುತ ನಡೆಸಿದ ಭಾರತ ನಾಟಕವÀ 3 ಆನಂದ ಜ್ಞಾನಪೂರ್ಣೆ ಆಗಾಗ ಒದಗಿದ ಹೀನ ದುಃಖದ ಸÉೂೀಂಕು ಉಂಟೆ ನಿನಗೆ ಇನ್ನು ಪ್ರಾಣಪತಿಗಳೈವರೆದುರಲಿ ಖಳ ನಿನ್ನ ಮಾನ ಹಾನಿಯ ಗೈಸೆ ಜಗವೆ ತಲ್ಲಣಿಸಿತು ಮಾನಾಭಿಮಾನ ಬಿಟ್ಟು ಶ್ರೀನಿಧಿ ಗತಿ ಎನ್ನೆ ಅಕ್ಷಯ ವಸನವು ಪ್ರಾಣಪಂಚಕ ಹರಿಯಾಧೀನವೆಂಬುವ ತತ್ವ ಪ್ರಾಣಕ್ಕೆ ಪ್ರಾಣಬಿಂಬ ಸ್ವಾಮಿ ಎಂಬುವ ತತ್ವ ಮಾನಾಭಿಮಾನ ತೊರೆದು ಪ್ರಾಣೇಂದ್ರಿಯವ ಜರಿದು ಮಾನಸದಲಿ ಹರಿಯ ಸ್ಮರಿಸಿದರಕ್ಷಯ ಸ್ಥಾನಪ್ರಾಪ್ತಿಯು ಎಂಬ ತತ್ವರಹಸ್ಯಗ- ಳಾನು ಸೂಚಿಸೆ ನಿನ್ನ ಕೃತಿಯಲ್ಲದಿನ್ನಿಲ್ಲ ದಾನವರೆಲ್ಲ ನಿನ್ನ ಕಾಮಿಸಿ ನೋಡಲವರು ಏನೆಂಬೆ ಮಾಡಿದಂಥ ಅಲ್ಪಸ್ವಲ್ಪದ ಪುಣ್ಯ ಕ್ಷೀಣಗೈಸುತ ಸೆಳೆದು ಹೀನ ಪಾಪದಿ ನೂಕಿ ಹಾನಿಗೈಸಿದೆ ಪವಮಾನಸುತನಿಂದಲಿ ಮಾನುನಿಮಣಿ ಸರ್ವಕ್ಷೇಮ ಪಾಲಿಪ ಭಕ್ತ- ರಾನನದಲಿ ನೋಡೆ ಜ್ಞಾನಾನಂದವನಿತ್ತು ಹೀನ ನರಕದಿ ಬಿದ್ದ ಭ್ರಾತೃಸಹಿತದಿ ಕುರುಪ ಕಾಣದೆ ನಿನ್ನ ಮಹಿಮೆ ಜ್ಞಾನರಹಿತನಾಗಿ ಜಾಣೆ ಶ್ರೀ ಗೋಪಾಲಕೃಷ್ಣವಿಠ್ಠಲನ ನಿಜ ಜ್ಞಾನ ಪಾಲಿಸಿ ಕಾಯೆ ಭೀಮಸೇನನ ಜಾಯೆ 4 ಮುಕ್ತರ ಬಂಧುವೆ ನೀನು ಭಕ್ತಿಯದಾತಳÉ ನೀನು ತತ್ವ ತಿಳಿಸುವೆ ನೀನು ಚಿತ್ತದೆ ನೆಲಸುವೆ ನೀನು ಹತ್ತದು ದುಃಖವು ನಿನಗೆ ಸುತ್ತದು ಶೋಕವು ನಿನಗೆ ಮುಕ್ತಾರ್ಥವ ಕೊಡುವವಳೆ ಮತ್ತೆ ಅಯೋನಿಜಹಳೆ ಮುತ್ತು ಮಾಣಿಕ್ಯವು ನವರತ್ನದ ಆಭರಣಗಳ ಕಂಚುಕ ನೆತ್ತಿಲಿ ಮಕುಟವನಿಟ್ಟು ಚಿತ್ತದೊಲ್ಲಭನಂಕದಲಿ ಹತ್ತಿ ಸಿಂಹಾಸನದಲಿರೆ ಸುತ್ತಲು ಸೌಪಣ್ರ್ಯಾದಿ ಸುರಸ್ತ್ರೀಯರು ಓಲೈಸೆ ಚಿತ್ತದಿ ಸಿರಿಹರಿಯನು ಭಕ್ತಿಲಿ ಭಜಿಸುತ ಮುಕ್ತಾ- ಮುಕ್ತರ ಕೃಪಪಾಂಗದಲಿ ಸುತ್ತಲೀಕ್ಷಿಸಿ ಕಾವೆ ಭಕ್ತಿಲಿ ದ್ರೌಪದಿ ಎಂದು ಎತ್ತಿದ ಸ್ವರದಲಿ ಕೂಗೆ ಚಿತ್ತದೊಲ್ಲಭನೊಡನೆ ಚಿತ್ತೈಸೆನ್ನಯ ಮನಕೆ ಹತ್ತಿಕಾಡುವ ಎನ್ನ ದುಷ್ಕøತ ಕರ್ಮಗಳೆಲ್ಲ ಕತ್ತರಿಸುತ ಕಾಯಮ್ಮ ಸತ್ಯಾಪ್ರಿಯನನು ತೋರೆ ಆರ್ತಜನರ ಪಾಲ ಗೋಪಾಲಕೃಷ್ಣವಿಠ್ಠಲನ್ನ ಅರ್ಥಿಯಿಂದಲಿ ಎನ್ನ ಚಿತ್ತದಿ ತೋರೆಲೆ ಜನನಿ 5 ಜತೆ ತತ್ವದೇವತೆಗಳ ಜನನಿ ತತ್ವಾರ್ಥ ತಿಳಿಸೇ ಆಪ್ತ ಗೋಪಾಲವಿಠ್ಠಲನೆಂದೆನಿಸೇ
--------------
ಅಂಬಾಬಾಯಿ
ಧೇನಿಸೂ ಶ್ರೀಹರಿಯ ಮಹಿಮೆ ನೀ ಧೇನಿಸೊ ಪ ಧೇನಿಸು ಶ್ರೀಹರಿಯ ಲೀಲಾ ಸೃಷ್ಟಿ ಮಾನಸದಲಿ ನೆನೆಯೋ ಪರಿಯಾ ||ಆಹಾ|| ತಾನೆ ತನ್ನಯ ಲೀಲಾಜಾಲತನದಿ ತನ್ನ ಆನಂದದೊಳಿಪ್ಪ ಶ್ರೀ ಮುಕುಂದ ನನ್ನ ಅ.ಪ ಮೂಲ ನಾರಾಯಣ ದೇವ ತಾನು ಆಲದೆಲೆಯೊಳು ಲೀಲಾ ತೋರಿ ಬಾಲತನದಿ ತಾ ನಲಿವಾ ಅನೇಕ ಕಾಲ ಪರ್ಯಂತರದಿ ಸರ್ವ ||ಆಹಾ|| ಎಲ್ಲ ಜಗವ ತನ್ನ ಒಡಲೊಳಡಗಿಸಿ ಲೋಲನಾಗಿ ಬಾಲಕ್ರೀಡೆಯಾಡುವಪರಿಯಾ 1 ಇಂತು ಶಯನಗೈದ ಹರಿಯ ಅ- ನಂತ ವೇದಗಳಿಂದ ತ್ವರಿಯಾ ದುರ್ಗ ಸಂತಸದಿಂದ ಸಂಸ್ತುತಿಯ ಮಾಡೆ ಕಂತುಪಿತÀನು ತಾನೆಚ್ಚರಿಯ ||ಆಹಾ|| ಅಂತೆ ತÉೂೀರ್ದ ವಾಸುದೇವಾದಿ ಚತುರಾ- ಸಿರಿ ರೂಪಗಳ ಸಹಿತ 2 ಸಕಲ ರೂಪಗಳ ತನ್ನೊಳೈಕ್ಯಾ ಮಾಡಿ ಸಕಲ ಲಕುಮಿ ರೂಪಗಳಲಿ ಐಕ್ಯಾ ಇಟ್ಟು ಸಕಲ ಮರುತರ್ಗೆ ತನುಮುಖ್ಯಾ ಇತ್ತು ಸಕಲ ಕ್ರೀಡೆಯೊಳು ಸೌಖ್ಯಾ ||ಆಹಾ|| ಲಕುಮಿಯ ಸ್ತುತಿಗೆ ಒಲಿದು ತಾನೇತ- ನ್ನ ಕಡೆಗಣ್ಣಿಂದ ಪಂಚಜೀವರ ನೋಡಿದಾ 3 ಶುದ್ಧಸೃಷ್ಟಿಯೆಂಬುದೊಂದು ಪರಾ- ಧೀನ ವಿಶೇಷವು ಎಂದು ಮತ್ತೆ ಒಂದು ಮಿಶ್ರ ಸೃಷ್ಟಿಯೆಂದು-ಒಂದು ಕೇವಲ ಸೃಷ್ಟಿಯೆಂದೂ ||ಆಹಾ|| ತಮಾಂಧಕಾರವ ಪ್ರಾಶಿಸಿದ ವಿವರಾ 4 ತನ್ನೊಳೈಕ್ಯವಾಗಿದ್ದ ಮಹ ತಾನೆ ಪ್ರಕಟನಾಗಿ ನಿಂದ ಆಗ ಉನ್ನಂತ ಚತುರ ನಾಮದಿಂದ ||ಆಹಾ|| ಜನುಮ ಸ್ಥಿತಿ ಮೃತಿ ಮೋಕ್ಷದನಾಗಿರ್ಪ ಅನಿರುದ್ಧಾದಿ ಚತುರಮೂರ್ತಿಗಳ ವ್ಯಾಪಾರ5 ಪುರುಷನಾಮಕ ಪರಮಾತ್ಮ ತಾ ತರವರಿತು ಘನಮಾಡ್ದ ಮಹಿಮಾ ಸೃಷ್ಟಿ ತರತರ ಮಾಡ್ದ ಮಾಹಾತ್ಮ ||ಆಹಾ|| ಪ್ರಾಕೃತ ವೈಕೃತ ದೇವತೆ ಸುಮಾನ ಈ ಮೂರುವಿಧ ಸೃಷ್ಟಿಯಾನೆಸಗಿದ ಪರಿಯ ನೀ 6 ಮಹದಹಂಕಾರ ತತ್ವ ಪಂಚ ಮಹಭೂತಗಳು ಮನಸ್ತತ್ವ ಇನ್ನು ಮಹದಶೇಂದ್ರಯಗಳ ತತ್ವ ಮತ್ತೆ ಮಹತಾಮಿಶ್ರಾಂಧ ತಾಮಸ ತತ್ವ ||ಆಹಾ|| ಇಹುದು ಈ ಪರಿಯಲ್ಲಿ ಪ್ರಾಕೃತ ಸೃಷ್ಟಿಯು ಮುಹುರ್ಮುಹು ಇದನೆ ಆಲಿಸಿ ನಿನ್ನೊಳು 7 ವೈಕೃತದೋಳು ಸಕಲ ವೃಕ್ಷಾ ತಿರ್ಯಕ್ ಸಕಲ ಪ್ರಾಣಿಗಳ್ ಮನುಜ ಕಕ್ಷಾ ಎಲ್ಲ ವಿಕೃತ ಸೃಷ್ಟಿಯ ಮಾಡ್ದ ಅಧ್ಯಕ್ಷಾ ಇನ್ನು ಸುರಸಮಾನ ಸೃಷ್ಟಿಯ ಅಪೇಕ್ಷಾ ||ಆಹಾ|| ಸಕಲ ಸುರಾಸುರಪ್ಸರ ಗಂಧರ್ವರು ಪಿತೃಗಳು ಯಕ್ಷರಾಕ್ಷಸರ ಪರಿಯವರಾ 8 ಪುನ್ನಾಮ ವಿರಂಚಿ ಬ್ರಹ್ಮಾನು ಅಂದು ಘನ್ನವಾಸುದೇವ ತಾನು ಸೃಷ್ಟಿ ಯನ್ನ ಪ್ರಕಟಮಾಡಿದನು ಮುಂದೆ ಅನಿಲದೇವನು ಸಂಕರುಷಣನ ||ಆಹಾ|| ಅನಿಲನೆ ಸೂತ್ರನಾಮಕವಾಯುವಾಗಿಹ ಭಾವೀ ಬ್ರಹ್ಮನೀತನೆ ನಿತ್ಯಗುರುವೆಂದು 9 ಪ್ರದ್ಯುಮ್ನನಿಂದ ಸರಸ್ವತಿ ಇನ್ನು ಶ್ರಧ್ದಾನಾಮಕಳು ಭಾರತಿ ಸೃಷ್ಟಿ- ಯಾದ ವಿವರ ತಿಳಿಯೊ ಪೂರ್ತೀ ಇದೇ ಪ್ರದ್ಯುಮ್ನನ ಸೃಷ್ಟಿಯ ಕೀರ್ತಿ ||ಆಹಾ|| ಶ್ರದ್ಧಾದೇವಿಯೊಳು ಸೂತ್ರನ ವೀರ್ಯದಿಂ- ದುದ್ಭವಿಸಿದ ಜೀವ ಕಾಲನಾಮಕನು 10 ಈರ ಬ್ರಹ್ಮರಸೃಷ್ಟಿ ಚರಿತ್ರೆ ಚಿತ್ರ ಗಾತ್ರ ತರವೆಲ್ಲ ವಿಚಿತ್ರ ||ಆಹಾ|| ವಿರಂಚಿ ಬ್ರಹ್ಮ ಸರಸ್ವತಿಯಿಂದ ವೈ- ಕಾರಿಕ ರುದ್ರ ಶೇಷಗರುಡರ ನೀ 11 ಸೂತ್ರ ಶ್ರದ್ಧಾ ದೇವೇರಿಂದ ಪವಿ ತ್ರತೈಜಸ ರುದ್ರ ಬಂದಾ ಪ- ಪುತ್ರರಾಗಿಹರತಿ ಚೆಂದಾ ||ಆಹಾ|| ಪುತ್ರನಾದ ತಾಮಸ ರುದ್ರ ಶೇಷಗೆ12 ಪ್ರದ್ಯುಮ್ನ ಸೂಕ್ಷಶರೀರ ಕೊಟ್ಟು ಉದ್ಧಾರ ಮಾಡಿದ ಜೀವರ ಅನಿ ರುದ್ಧನ ಕೈಲಿ ಕೂಡಲವರಾ ಅನಿ ರುಧ್ದನು ಮಾಡ್ದ ವಿಸ್ತಾರಾ ||ಆಹಾ|| ತದಪೇಕ್ಷ ಮೂಲಪ್ರಕೃತಿಯಿಂದ ಗುಣತ್ರಿ- ವಿಧ ಕೊಂಡು ಮಹತ್ತತ್ವ ನಿರ್ಮಿಸಿದಾ 13 ಮಹತ್ತತ್ವದಿಂದಹಂಕಾರ ತತÀ್ತ ್ವ ಮಹದಹಂಕಾರವು ಮೂರುತರ ಇದ- ರೊಳು ಬ್ರಹ್ಮವೈಕಾರಿಕ ಶರೀರವಾಗಿ ಪರಿ ಈ ರೂಪ ವಿವರಾ ||ಆಹಾ|| ಅಹುದು ತೈಜಸದಿಂದ ಶೇಷನ ದೇಹವು ತಾಮಸದಿಂದಲಿ ರುದ್ರ ತಾನಾದನು 14 ಎರಡನೆಯ ಸಾರಿ ಪ್ರದ್ಯುಮ್ನ ಅರ್ಧ ನಾರೀ ರೂಪನಾಗಿ ಇನ್ನು ಎಡದಿ ಸ್ರೀರೂಪ ಜೀವರುಗಳನ್ನು ಬಲದಿ ಪುರುಷ ಜೀವರೆಲ್ಲರನ್ನು ||ಆಹಾ|| ಧರಿಸಿ ಅವರ ದೇಹಗಳನಿತ್ತು ಅ ನಿರುದ್ಧನ ಕೈಯೊಳಿತ್ತ ಪರಿಯನ್ನು 15 ಅದರಂತೆ ಅನಿರುಧ್ದದೇವ ತಾ ನದಕಿಂತ ಸ್ಥೂಲದೇಹವ ಮೂಲ ಪ್ರಕೃತಿಯಿಂದ ಗುಣವಾ ಕೊಂಡು ಅದುಭುತ ಮಹತ್ತತ್ವತೋರ್ವ ||ಆಹಾ|| ಅದುಭುತ ಮಹತ್ತತ್ವದಿಂದಹಂಕಾರ ಉದಿಸಿದ ಪರಿಯನು ಮುದದಿಂದಲಿ ಅರಿತು 16 ಪರಮ ಕರುಣೆಯಲೀ ರುದ್ರನು ಅರ್ಧ ನಾರೀರೂಪ ತಾಳಿ ಇನ್ನೂ ಎಡದಿ ಸುರರಸ್ತ್ರೀಗಳನ್ನು ಬಲದೀ ಸುರಪುರಷರನ್ನೂ ||ಆಹಾ|| ಭರದಿ ಪುಟ್ಟಿಸಿ ಪ್ರದ್ಯುಮ್ನನ ಕೈಲಿತ್ತ ಪರಿಪರಿ ಸೃಷ್ಟಿಯ ಕ್ರಮವರಿತು ನೀನೀಗ 17 ಅನಿರುಧ್ದ ದೇವನು ಜೀವರ ಸ್ಥೂಲ ತನುವ ಕೊಟ್ಟು ಪಾಲಿಪ ತದಭಿ- ಮಾನಿ ಶ್ರೀ ಭೂ ದುರ್ಗಾ ಮಾಡಿ ತಾನೆಲ್ಲರ ಸತತ ಪೊರೆವಾ ||ಆಹಾ|| ಮಹತ್ತತ್ತಾ ್ವಭಿಮಾನಿಗಳೆನಿಸಿದ ದೇವನ18 ಅಹಂಕಾರ ತತ್ತಾ ್ವಭಿಮಾನಿ ಅದಕೆ ಅಹಿಗರುಡರು ಅಭಿಮಾನಿ ಇನ್ನು ಅನಿರುದ್ಧಾದಿ ರೂಪತ್ರಯವು ಇದಕೆ ಇನ್ನು ನಿಯಾಮಕನು ಎನ್ನು ||ಆಹಾ|| ಮಹತ್ತತ್ವಾ ನಿಯಾಮಕ ವಾಸುದೇವನಿಂದ- ನವರತ ಈ ಸೂಕ್ಷ್ಮಪ್ರಮೇಯ ಗ್ರಹಿಸಿ ನೀನು 19 ಮನಸ್ತತ್ವಾಭಿಮಾನಿ ಸುರರಾ ಸೃಷ್ಟಿ ಯನ್ನೆ ವೈಕಾರಿಕದಿಂದಲವರಾ ಮಾಡಿ ಘನ್ನ ತೈಜಸದಿಂದಲಿಂದ್ರಿಯ ತತ್ಪವೆ- ಲ್ಲನೆಸಗಿದಂಥ ವಿವರಾ ||ಆಹಾ|| ಉನ್ನಂತ ತನ್ಮಾತ್ರ ಭೂತಪಂಚಕಗಳ ತಾಮಸದಿಂದಲಿ ಉದಿಸಿದ ಪರಿಯನು 20 ಯುಕ್ತಸ್ಥಾನಾದಿಗಳನ್ನು ಕೊಡೆ ಉತ್ತಮೋತ್ತಮನನ್ನು ತಾವು ಸುತ್ತಿ ಸ್ತುತಿಸಲು ಇನ್ನೂ ||ಆಹಾ|| ತತ್ವದೇವತೆಗಳ ಭಕ್ತಿಗೆ ಒಲಿದು ತತ್ವರೆಲ್ಲರ ತೋರೆ ರೂಪದಿ ಧರಿಸಿಟ್ಟನು21 ರಜಸುವರ್ಣಾತ್ಮಕವಾದ ಘನ ನಿಜ ಐವತ್ತು ಕೋಟಿ ಗಾವುದ ಉಳ್ಳ ಅಜಾಂಡವನ್ನು ತಾ ತೋರ್ದ ತನ್ನ ನಿಜಪತ್ನಿ ಉದರದಿ ಮಾಡ್ದ ||ಆಹಾ|| ಸೃಜಿಸಿ ಬ್ರಹ್ಮಾಂಡದಿ ತತ್ವಗಳೊಡಗೂಡಿ ನಿಜವಾಗಿ ತಾನೊಳ ಪೊಕ್ಕ ವಿರಾಟನ್ನ 22 ಪಾತಾಳಾದಿ ಸಪ್ತಲೋಕ ಕಡೆ ಪರಿಯಂತ ರೂಪ ತಾ ತಾಳಿದ ಆದ್ಯಂತ ಇಂತು ನಿರತನು ಸಚ್ಚಿದಾನಂದ ||ಆಹಾ|| ಇಂತು ವಿರಾಟ ತನ್ನಂತರದೊಳು ತತ್ವರೆಲ್ಲರ ತತ್‍ಸ್ಥಳದೊಳಿಟ್ಟು ಪೊರೆದನ್ನ23 ಸಕಲ ಉದಕ ಶುಷ್ಕದಿಂದ ಇರಲು ತಕ್ಕ ಮುಕ್ತಾಮುಕ್ತರ ಭೇದದಿಂದ ತಕ್ಕ ಸ್ಥಾನವೆ ಕಲ್ಪಿಸಿದ ಚೆಂದಾ ||ಆಹಾ|| ಅಕಳಂಕ ಪುನ್ನಾಮಕನು ಧಾಮತ್ರಯ ಮೊದಲಾದ ನರಕ ಪಂಚಕಗಳ ಮಾಡಿದ 24 ಉದಕ ಶೋಷಣೆಯನ್ನು ಮಾಡಿ ಇನ್ನುಮ- ಹದಹಂಕಾರವ ಕೂಡಿ ಭೂತ ಪಂಚಕವ ಮಿಳನ ಮಾಡಿ ಆಗ ಹದಿನಾಲ್ಕೂದಳಾತ್ಮಕ ಪದ್ಮತೋರಿ ||ಆಹಾ|| ಅದುಭುತ ಪದುಮದಿ ಉದಿಸಿದ ಬ್ರಹ್ಮನು ಚತುರ ನಾಲ್ಕುದಿಕ್ಕು ಮುದದಿಂದ ನೋಡಿದ 25 ಪದುಮದಲಿ ಚತುರಾಸ್ಯನಾಗಿ ಅದು ಭುತÀ ಮಹಿಮೆ ನೋಡುತ ತಾನೆ ಮುದದಿಂದ ಮೊಗತಿರುಗಿಸುತಾ ಅದ ಅದುಭುತ ಶಬ್ದಕೇಳುತ್ತಾ ||ಆಹಾ|| ತದಪೇಕ್ಷ ತಪವನಾಚರಿಸಿ ನಾಳದಿ ಬಂದು ಪದುಮನಾಭನು ತಾನು ಮುದದಿಂದ ನೋಡಿದ 26 ಪರಮಪುರುಷ ಉಕ್ತಿ ಲಾಲಿಸಿ ಮೆಚ್ಚಿ ವರವ ಕೊಟ್ಟು ಪಾಲಿಸಿ ಸೃಷ್ಟಿ ನಿರುತ ಮಾಡಲು ತಾ ಬೆಸಸೀ ತಾನು ಅವನಂತರದೊಳು ನೆಲೆಸೀ ||ಆಹಾ|| ಹೊರಗೂ ಒಳಗೂ ನಿಂತು ಸೃಷ್ಟಿಲೀಲೆಯ ತೋರ್ವ ಉರಗಾದ್ರಿವಾಸವಿಠಲ ವೇಂಕಟೇಶನ್ನ 27
--------------
ಉರಗಾದ್ರಿವಾಸವಿಠಲದಾಸರು
ಧ್ಯಾನವನು ಮಾಡು ಬಿಂಬ ಮೂರುತಿಯಪ ಆನಂದದಲಿ ಕುಳಿತು ಅಂತರಂಗದಲಿ ಅ.ಪ ಸದಾಚಾರನಾಗಿ ದ್ವಾದಶಗುರುಗಳಿಗೆರಗಿ ಮುದದಿಂದ ಮೂಲಮಂತ್ರವನು ಜಪಿಸಿ ಸದಮಲ ಭಕುತಿಯಲಿ ದೇಹಸ್ಥಿತಿಯನೆ ತಿಳಿದು ಪದಮಾಸನವ ಹಾಕಿ ಪರಮ ವಿಶ್ವಾಸದಲಿ1 ಅಂಗವನು ಚಲಿಸದೆ ಚೆನ್ನಾಗಿ ದೃಢವಾಗಿ ಕಂಗಳನೆ ಮುಚ್ಚಿ ಇಂದ್ರಿಯಗಳನೆ ತೆರೆದು ಮಂಗಳ ಶೋಭಿತ ಅಖಂಡ ಧ್ಯಾನದಂತ ರಂಗದೊಳಗೆ ನಿಲಿಸಿ ಎಲ್ಲವನು ಕಾಣೊ 2 ಭಗವದ್ರೂಪಗಳೆಲ್ಲ ಒಂದು ಬಾರಿ ಸ್ಮರಿಸಿ ಮಗುಳೆ ಪರಮ ಗುರುವಿನ ಮೂರ್ತಿಗೆ ತೆಗೆದು ಆಹ್ವಾನಮಾಡಿ ಅಲ್ಲಿಂದ ಹರುಷದಿ ಸ್ವಗುರು ಬಿಂಬಮೂರ್ತಿಯಲಿ ಐಕ್ಯವನೆ ಮಾಡು3 ತಿರುಗಿ ಮೆಟ್ಟಿಕೆ ಮೂರು ವೇಗದಿಂದಲಿ ನಿನ್ನ ಲ್ಲಿರುವ ಮೂರ್ತಿಯಲ್ಲಿ ಚಿಂತನೆಯ ಮಾಡೊ ಭರದಿಂದ ಎಲ್ಲವನು ತಂದು ಹೃದಯದಲ್ಲಿ ಸ್ಥಿರವಾಗಿ ಇಪ್ಪ ಮೂರುತಿಯೊಡನೆ ಕಲೆಸು 4 ಆತನೆ ಬಿಂಬ ಮೂರುತಿಯೆಂದು ತಿಳಿದುಕೊ ಆ ತರುವಾಯ ನಾಡಿಗಳ ಗ್ರಹಿಸಿ ಆ ತೈಜಸನ ತಂದು ವಿಶ್ವಮೂರ್ತಿಯಲ್ಲಿ ಪ್ರೀತಿಯುಳ್ಳವನಾಗಿ ಪತಿಕರಿಸು ಮರುಳೆ 5 ಜ್ಞಾನ ಪ್ರಕಾಶದಲಿ ಇದ್ದು ನಿನ್ನ ಹೃದಯ ಕಮಲ ಮಧ್ಯ ಮೂರ್ತಿ ನಿಲ್ಲಿಸಿ ಬಾಹ್ಯದಲಿ ಏನೇನು ಪೂಜೆಯನು ಉಳ್ಳದನು ಮಾಡೊ6 ಗುಣ ನಾಲ್ಕರಿಂದಲಿ ಉಪಾಸನವನೆ ಮಾಡು ಕ್ಷಣ ಕ್ಷಣಕೆ ಹರಿಪಾದವನು ನೋಡುತ ಅಣುರೇಣು ಚೇತನಾಚೇತನಕೆ ನೇಮಕ ಫಣಿಶಯನನಲ್ಲದೆ ಮತ್ತೊಬ್ಬರಿಲ್ಲವೆಂದು 7 ಮಮತೆಯನು ತೊರೆದು ಮೇಲೊಂದಪೇಕ್ಷಿಸದೆ ಸಮ ವಿಷಮ ತಿಳಿದೊಂದೆ ಭಕುತಿಯಲ್ಲಿ ಸ-ಮಾಧಿಗೊಳಗಾಗಿ ದಿವ್ಯ ದೃಷ್ಟಿಲಿ ಸರ್ವ ಕ್ರಮ ಅನುಕ್ರಮದಿಂದ ಭರಿತಭಾವುಕನಾಗೊ 8 ಪರಿ ಧೇನಿಸಲು ದೇವ ಕರುಣನ ಮಾಡೆ ಪಾಪ ಸಂಚಿತವು ಪ್ರಾರಬ್ಧ ನಾಶ ಅಪರೋಕ್ಷಿತನಾಗಿ ತನ್ನ ಯೋಗ್ಯತದಷ್ಟು ಗೋಪಾಲ ವಿಜಯವಿಠ್ಠಲನೊಲಿವನಾಗ9
--------------
ವಿಜಯದಾಸ
ನಡೀರೇ ನೋಡುವಾ ಗುರುಮೂರ್ತಿಯಾ | ಮಹಿಪತಿಯಾ | ತಡೆಯದೇ ಸಖಿಯರು ಪ ಪೊಡವಿಯೊಳಾನಂದ ಸ್ಥಿತಿಯಾ | ವರ ಯತಿಯಾ | ಅಡಿ ಕಮಲವ ಪಿಡಿದು | ಜಡಿದಿಟ್ಟು ಸದ್ಭಾವರತಿಯಾ | ಕರ ಮುಗಿದು 1 ಷೋಡಶ ಪರಿಸೇವೆ ಮಾಡುವಾ | ಪಾಡುವಾ | ನೋಡದೆಲೆ ಎಡ ಬಲವಾ | ಪಡ ಕೊಂಬಷ್ಟು ಸುಖವಾ 2 ಶರಣ ಬಂದ ವರಂಗೀಕಾರವಾ |ಮಾಡಿ ಹೊರವಾ | ದೋರಿ ಸನ್ಮಾರ್ಗ ಪೂರ್ಣಾ | ವರನಿಗಮದರ್ಥ ಸಾರವಾ | ನೋಡಿ ಬೀರುವಾ | ಕರುಣಿಪ ಕೃಷ್ಣನ ಪ್ರೀಯನಾ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನದಿಗಳ ಸ್ತೋತ್ರ ಕಾವೇರಿ ಕಲುಷ ಸಂಹರಳೆ ಕಾವೇರಿ ಪ ವಿಧಿ ಸುತೆ ನಮ್ಮ | ಕಾವುದು ಬಿಡದಲೆ ಅ.ಪ. ಅಮಿತಾಭ ಕವೇರ ನೃಪನು | ಪುಣ್ಯಶಮದಮದಿಂದಯುತನು | ಸಾರಿಹಿಮನಗ ತಪ್ಪಲುಗಳನು | ದಿವ್ಯಸಮಶತದಶ ವರ್ಷಗಳನು | ಆಹಸುಮನ ಸೋತ್ತಮನಾದ | ಬೊಮ್ಮನ ಧೇನಿಸಿಅಮಮಸುಘೋರವು | ವಿಮಲ ತಪವ ಗೈದ 1 ಬೊಮ್ಮ | ಅಚ್ಚ್ಯುತ ಮಾಯ ತನ್‍ಇಚ್ಛೆಯ ಸುತೆ ನಿನ | ಮೆಚ್ಚು ಪುತ್ರಿಯಹಳು 2 ಸ್ಮರಣೆ ಮಾತ್ರದಿ ವಿಷ್ಣುಮಾಯಾ | ದಿವ್ಯತರುಣಿ ರೂಪದಿ ಬ್ರಹ್ಮರಾಯ | ನೆದುರುಕರವ ಮುಗಿದು ಪೇಳು ಜೀಯಾ | ಎನೆಬರೆದನಾ5ದು ಕವೇರ್ಕನ್ಯಾ | ಆಹಸರಿತು ರೂಪದಿ ಮೋಕ್ಷ | ವg್ವ5ರ ವಹುದು ನೀಸರುವ ತೀರಥ ಮಯಿ | ಪರಿವುದು ಈ ಪರಿ 3 ಎರಡು ಅಂಶವು ನಿನಗಿಹುದೂ | ಒಂದುಸರಿತಾಗಿ ಪ್ರವಹಿಸುವೂದು | ಮತ್ತೆತರುಣಿ ರೂಪದಿ ಪತ್ನಿಯಹುದು | ಮುನಿವರ ಕುಂಭ ಸಂಭವಗಹುದು | ಆಹಕರೆಸಿ ಲೋಪಾಮುದ್ರೆ | ಮೆರೆವುದು | ಪತಿವ್ರತೆಶಿರೋಮಣಿ ಎನಿಸಿ ನೀ | ಮೆರೆವುದು ಭುವಿಯಲ್ಲಿ 4 ವರವಿತ್ತು ಮರೆಯಾಗೆ ಅಜನು | ನೃಪವರ ಸುತೆಯೊಡನೆ ಪೊರಟನು | ಕಾಲಕರ ಮರತನದಿ ಕಳೆದಾನು | ಮುಂದೆವ್ಯೆರಾಗ್ಯದಿಂ ಪೇಳಿದಾನು | ಆಹಪರಿಶುದ್ಧನಿಹೆ ನಿನ್ನ | ದರುಶನ ಮಾತ್ರದಿಪರಮ ನಿಷ್ಕಾಮದ | ಕರ್ಮವನೆಸಗುತ್ತ 5 ಹರಿಧ್ಯಾನದೊಳು ಬಲುರತ | ನಿರೆನರಪತಿ ಹರಿಲೋಕ ಗತ | ನಾಗೆತರುಣಿ ಕಾವೇರಿಯು ಸ್ಥಿತ | ಘೋರವರ ತಪವನ್ನು ಗೈಯ್ಯುತ್ತ | ಆಹಇg5ರಲೀ ಪರಿ ಪರಿ ಪರಿ ಬೇಡಿದಳ್ 6 ಸರಿದ್ರೂಪಳಾಗಿನ್ನು ಪರಿದೂ | ಹರಿಶರಣರ ಪಾಪವ ತರಿದೂ | ಮತ್ತೆಸರುವರ ತಾಪವ ಕಳೆದೂ | ಇನ್ನುಸರಿತು ಗಂಗಾದಿಗೆ ಹಿರಿದೂ | ಆಹವರ ಕೀರ್ತಿಯಿಂದಲಿ | ಮೆರೆಯುತ ಲೋಕೋಪಕರಳೆನಿಸಿ ಪ್ರವಹಿಸಿ | ಶರಧಿಯ ಸೇರ್ವಂಥ 7 ಸ್ಮರಣೆ ಮಾತ್ರದಿ ಪಾಪನಾಶಾ | ಮಾಳ್ಪಗಿರಿಯುಂಟು ಸಹ್ಯ ಆದ್ರೀಶ | ಅಲ್ಲಿತರು ರೂಪಮಲಕ ದೊಳ್ವಾಸಾ | ನಿನ್ನಚರಣ ಕಮಲವ ವಾಣೀಶಾ | ಆಹವಿರಜೆ ಪುಣ್ಯದ ಜಲ | ವರ ಕಂಬುವಿಲಿ ತುಂಬಿಎರದಭಿಷೇಚಿಸೆ | ಪರಿವುದದರ ಸಹ 8 ವರ ದತ್ತಾತ್ರೇಯ ನೆಂದೆನಿಸಿ | ತವಶಿರ ಸ್ಥಾನದಲ್ಲಿ ವಾಸೀಸಿ | ಎನ್ನಶರಣರ ಅಘಗಳ ಹರಿಸೀ | ನಿನ್ನವರ ದಕ್ಷಗಂಗೆಂದು ಕರೆಸೀ | ಆಹವರ ತವೋತ್ಸಂಗದಿ | ಶಿರವಿಟ್ಟು ಮಲಗುತ್ತಸರಿದ್ವರಳೆನಿಸುತ್ತ | ಮೆರೆಸುವೆ ನಿನ್ನನು 9 ಮಂಗಳ ಜಪತಪ ಸ್ನಾನ | ಮಿಕ್ಕಗಂಗಾದಿ ತೀರ್ಥಾನುಷ್ಠಾನ | ನಾಲ್ಕ್ಯುಗಂಗಳೊಳಗೆ ಮಾಳ್ಪ ನಾನಾ | ಕರ್‍ಮಂಗಳ್ತವೋತ್ಸುಂಗ ಶಿರಸ್ಥಾನ | ಆಹಮಂಗಳಾಮಲಕ ಜಲಂಗಳಿಗ ಸಮ ಕ-ಳೆಂಗಳ್ಷೋಡಶಕ್ಕೊಂದಂಗ ಸರಿ ಬರೆದು 10 ದಾತ | ತನ್ನಕಾಮಂಡುಲಿನೊಳ್ ನಿನ್ನ ಧೃತ | ಆಹನೇಮದಿಂದೊಂದಂಶ | ಲೋಪಾ ಮುದ್ರೆಯು ಆಗಿಆ ಮಹ ಮುನಿಯನ್ನ | ಪ್ರೇಮದಿ ವರಿಸುವೆ 11 ವರವಿತ್ತು ಮರೆಯಾಗೆ ಹರಿಯು | ಅತ್ತವರ ಮುನಿ ತಪಸಿನ ಧಗೆಯು | ಕಂಡುಸುರಜೇಷ್ಠ ಅವನೆದುರು ಹೊಳೆಯು | ಆಗಬರೆದನು ಜೀವನ ಧೊರೆಯು | ಆಹಹೊರಲಾರದವ ತಾನು | ವರ ಸನ್ಯಾಸದಿ ಮನವಿರಸಿರುವುದು ನಿರಾ | ಕರಿಸುತ್ತ ಪೇಳ್ದನು 12 ಚಕ್ರಧರ | ತುಂಬಿದ ಮನದಿಂದಹಂಬಲಿಸಿ ಕೈಗೊಂಡು | ಬೆಂಬಿಡದೆ ಸಲಹುವ 13 ಮುನಿವರಗಸ್ತ್ಯನು ಅಜನ | ಮಾತಮನವಿಟ್ಟು ಕೇಳುತ್ತ ವಚನ | ಪೇಳ್ದಅನುಕೂಲ ಭಾರ್ಯಳಾಳ್ವುದನ | ಯೋಗಅನುಕೂಲಿಸುವುದೆಂಬ ಹದನ | ಆಹವನಜ ಗರ್ಭನು ತನ್ನ | ತನುಜೆಯ ಸುಕನ್ಯಾಮಣಿಯ ಕಾವೇರಿಯ | ವಿನಯದಿ ವರಿಸೆಂದ 14 ನಗ ಶೃಂಗದಿರಿಸುತ್ತಮಿಗೆ ಚೆಲ್ವ ಸರಿತಾಗಿ | ಪೋಗಲನುಗ್ರಹಿಸು 15 ಮೋದ ತಾಳುತ್ತಸುಗುಣೆಯ ಬೆಸಸೀದ | ನಗು ಮುಖದಿಂದಲಿ 16 ಹೊರ ಮುಖಳಾದಳ್ ಕಾವೇರಿ | ಮುನಿವರನ ಸತ್ಕರಿಸಲು ನಾರಿ | ದ್ವಿಜವರ ಪೇಳೆ ಬ್ರಹ್ಮಗನುಸಾರಿ | ಆಕೆವರಗಳ ಬೇಡಲು ಭಾರಿ | ಆಹಸುರಜೇಷ್ಠ ನ್ವೊರೆದಂತೆ | ವರಗಳ ನೀಯಲುಸುರಕನ್ಯಾಮಣಿಯಾಗ | ವರಿಸಿದಳಾ ಮುನಿಯ 17 ವಾಹನ ಪತ್ನಿ ಸೇರಿ | ಶಿರಿಕಂಸಾರಿ ಗರುಡನ್ನ ಏರಿ | ಕ್ರತುಧ್ವಂಸಿ ಉಮಾ ನಂದಿ ಏರಿ | ಇಂದ್ರಶಂಸಿ ಸೈರಾವತನೇರಿ | ಆಹಸಾಂಶರು ಯೋಗ್ಯ ನಿರಂಶರು ಸೇರಿ ಪ್ರ-ಶಂಸನ ಗೈಯುತ್ತ ವೈವಾಹ ನಡೆಸಿದರ್ 18 ಮದುವೆ ವೈಭವ ಪೇಳಲಾರೆ | ಜಗದುದಯಾದಿ ನಡೆಪರಿಹಾರೆ | ಹರಿಮುದ ಪೊಂದಲಿನ್ನೆದುರ್ಯಾರೆ | ಎಲ್ಲರ್ವೊದಗಿ ಆಶೀರ್ವದಿಶ್ಯಾರೆ | ಆಹವಿಧ ವಿಧ ದುಡುಗೊರೆ | ಅದ ಪೇಳಲಳವಲ್ಲಅದುಭುತ ಜರುಗಿತು | ಉದ್ವಾಹ ಕಾರ್ಯವು 19 ಗಮನ | ಮತ್ತೆಕಾವೇರಿ ಸಹ ಮುನಿ ಹಿಮನ | ಕೇಳ್ಕೆಭಾವಿಸುತಲ್ಲೆ ಕೆಲದಿನ | ಆಹಆವಾಸಿಸಿರೆ ಋಷಿ | ಸಾರ್ವರ ಮನ ತಿಳಿದುಆಹ್ವಾನ ವಿತ್ತಳು | ಸಹ್ಯಾದ್ರಿ ಸನಿಯಕ್ಕೆ 20 ಗಮನ | ಆಹಇಂಬಿಟ್ಟನ್ನೊಂದಂಶ | ಲೋಪಾಮುದ್ರೆಯು ಕುಂಭಸಂಭವ ಸಹ ಸಹ್ಯ ಅದ್ರಿಗೆ ಗಮಿಸಿದಳ್ 21 ಉತ್ತರ ಹಿಮನಗ ಬಿಡುತ | ವನಸುತ್ತುತ ವಿಂಧ್ಯ ಮೀರುತ್ತ | ಹಾಂಗೆಉತ್ತಮ ಸಹ್ಯಾಚಲೇರುತ್ತ | ಅಲ್ಯುನ್ನತ್ತ ಬ್ರಹ್ಮಗಿರಿ ಸಾರುತ್ತ | ಆಹಉತ್ತಮ ಕ್ಷೇತ್ರದಿ ಜತ್ತಾಗಿ ಕಮಂಡಲಒತ್ತಟ್ಟಿಗಿರಿಸುತ್ತ ಪತ್ನಿಗೆ ಬೆಸಸಿದರ್ 22 ಕಾಲ ಮುದದಿ ಕರಕದಿಂದಅದುಭೂತವೆನೆ ಸರಿದ್ವರಳಾಗಿ ಪ್ರವಹಿಸು 23 ಪರಿ ಕಾಲ ಸಮೀಪವಾಗಲು ಸುರಪ 24 ಹರಿ ಮನೋಭಾವಾನು ಸಾರಿ | ಮಳೆಗರೆಯಲನ್ಯತರುವ ಸಾರಿ | ಶಿಷ್ಯರುಗಳಾಶ್ರಯಿಸಲು ಮೀರಿ | ಕುಂಡಸರುವೆ ತೀರಥಗಳು ಉಸುರಿ | ಆಹಪರ್ವ ಕಾಲವು ಇದು | ಪೊರಮಡು ಕಾವೇರಿಪರಿವೆವು ನಿನ ಪಿಂತೆ | ತೀರ್ಥಗಳಗ್ರಣಿಯೆ 25 ವಿಧಿ ಬಂದ ಹಂಸವನೇರಿ | ಆವಮುದದಿಂದ ವನಗಳ್ ಸಂಚಾರಿ | ಇನ್ನುಅದುಭೂತಾಮಿತ ತೀರ್ಥ ಗಿರಿ | ಕಂಡುಒದಗಿ ಕರಕದ ಜಲ ಭಾರಿ | ಆಹಮುದದಿ ಮೀಯುತ ಜಪ ಅದುಭೂತಾಷ್ಟಾಕ್ಷರಪದುಮ ಸಂಭವ ಹರಿಧ್ಯಾನದಿ ರತನಾದ 26 ಮಂದ ಮಾರುತ ಬೀಸೆ ವಿಮಲ | ಧಾತ್ರಿಗಂಧ ವೆಂದೆನುತಲಿ ಬಹಳ | ಮುದದಿಂದೆಚ್ಚರಗೊಂಡು ಕಂಗಳ | ಮುಂದೆಸುಂದರಾಮಲಕಾ ಕೃತಿಗಳ | ಆಹಎಂದು ಕಾಣದ ದೃಶ್ಯ | ವೆಂದೆನುತಲಿ ಮನದಿಂದ ಧೇನಿಸೆ ಅದು | ಛಂದದಿ ಮರೆಯಾಯ್ತು27 ಸಿರಿ ಹರಿಯು | ಸಿರಿವತ್ಸಾಂಕಿತನು ಬಾಹು ದ್ವಿದ್ವಯು | ಇಂದಮೆಚು5Àೂಪವ ತೋರೆ ವಿಧಿಯು | ಆಹ |ಸಚ್ಚರಿತೆಯ ಪಾಡೆ | ನಿಚ್ಚಳಾಮಲಕದಉಚ್ಚರೂಪವ ಕಂಡು | ಅರ್ಚಿಸಿದನು ಬಹಳ 28 ಗಾತ್ರ ಪಾದ | ಬಿಸಜಗಳ್ವಂದಿಸಿಬಿಸಜ ಸಂಭವ ಗೈದ | ಅಸಮ ಸಂಪೂಜೆಯ 29 ಧಾತಾ ಸ್ವ ಕುಂಡಿಕಾಸ್ಥಿತ | ವಿಮಲ ತೀರ್ಥವು ವಿರಜೆಯಿಂ ಹೃತ | ಶಂಖಪೂರ್ತಿಸಿ ಪೂಜಾ ಪದಾರ್ಥ | ಪ್ರೋಕ್ಷಿಸಿಪೂತಾತ್ಮಾಮಲಕದಿ ಸ್ಥಿv5 ಆಹಶ್ರೀ ತರುಣೀಶನ | ದತ್ತಾತ್ರೇಯನ ರೂಪಖ್ಯಾತ ಪೂಜಿಸುತಿರಲಶರೀರ ವಾಕ್ಕಾಯ್ತು 30 ಪರಿ ಗೈಯ್ಯುವ ಭಾಮಾ ಮಣಿಕುರಿತು ಪೇಳಿತು ವಾಣಿ ನೇಮ | ನೀನುಶರಧೀ ಸೇರುವ ಮನೋ ಕಾಮಾ | ಆಹಪರಿಪೂರ್ಣವಹುದೀಗ | ವರ ತುಲಾಪರ್ವದಿಶರತ್ಕಾಲ ಮುಕ್ತಿದ | ಪರಿವುದು ಕಾವೇರಿ31 ತತುಕ್ಷಣ ಮುನಿಯ ಕಮಂಡ್ಲು | ದೊಳುಸ್ಥಿತ ಸರ್ವ ತೀರ್ಥಮಾನಿಗಳೂ | ಪೇಳೆತುತುಕಾಲ ಕವೇರ ತನುಜಳೂ | ಶೀಘ್ರಉತು ಪತ್ತಿ ತಾಳಿ ಪರಿದಾಳೂ | ಆಹಇತರ ತೀರಥಗಳು | ಸರಿತು ರೂಪದಿ ಹಿಂದೆಅತಿ ತ್ವರೆಯಲಿ ಪ್ರವ | ಹಿತರಾಗಿ ಪೋದರು 32 ಋಷಿವರ್ಯ ಸ್ನಾನವ ಮಾಡಿ | ಪರಿಕ್ಷಿಸಲಾಗ ವಿಸ್ಮಯ ಕೂಡಿ | ಶಿಷ್ಯರಿಗುಸರಲಾಕ್ಷೇಪದ ನುಡಿ | ಅವರುಸಿರಿದರ್ ಮಳೆಯ ಗಡಿಬಿಡಿ | ಆಹರಸ ರೂಪದಲಿ ಪರಿವ | ಅಸಮ ಪತ್ನಿಯ ಕೂಗೆಋಷಿಗೆ ಶಾಂತಿಯ ಸೊಲ್ಲ | ಒಸೆದು ಪೇಳಿದಳವಳೂ 33 ಸುರವರ ಪೂಜ್ಯ ಧಾತ್ರಿಯು | ಇನ್ನುತರುವು ಆ ಮಲಕದ ಬಳಿಯು | ತೀರ್ಥವರ ಶಂಖ ಸಂಜ್ಞಿತ ತಿಳಿಯು | ಇಲ್ಲಿವಿರಜೆಯ ದೊಂದಿಹ ಕಳೆಯು | ಆಹವರ ನಭೊ ಗಂಗೆಯು | ಸರಿ ಸಹ್ಯಾಮಲಕವುವರಣಿಸಲಳವಲ್ಲ | ಸರಿದ್ವರ ಮಹಿಮೆಯ 34 ಕೈವಲ್ಯ | ದಾತನ ಒಲಿಮೆಯು 35 ಗಂಗಾನದೀಗಗಳು ತಮ್ಮ | ಪಾಪಹಿಂಗಿಸಲೋಸುಗವಮ್ಮ | ತುಲಾಮಂಗಳ ಮಾಸದಲಮ್ಮ | ಒಂದುತಿಂಗಳಿಹರಿಲ್ಲಿ ಸಂಭ್ರಮ್ಮಾ | ಆಹಗಂಗೆ ದಕ್ಷಿಣಾಖ್ಯೆ | ಮಂಗಳೆ ಜನಗಳಘಂಗಳ ಕಳೆಯುತ್ತ | ತುಂಗೋಪಕಾರಿಯೆ 36 ಕಾವೇರಿ ಪ್ರವಹಿಸಿ ಭರತ | ವರ್ಷಪಾವಿಸುತಿಹಳು ತಾ ನಿರುತ | ಬಂದುಸೇವಿಸೂವರ ಪಾಪ ತ್ವರಿತ | ದೂರಗೈವಳೆಂಬುವದೆ ನಿಶ್ಚಿತ | ಆಹಈ ವಿಧ ಮಹಿಮೆಯ ಓವಿ | ಪಾಲಿಸಿದನು |ಶ್ರೀವರ ಶ್ರೀ ಗುರು | ಗೋವಿಂದ ವಿಠಲಯ್ಯ 37
--------------
ಗುರುಗೋವಿಂದವಿಠಲರು
ನದಿಗಳು ಭಾಗೀರಥ್ಯಾದಿ ನದಿಗಳ ತಾರತಮ್ಯ ನಿಜ ಭಾಗವತ ತಿಲಕ ನಿಮಿರಾಜಗೊಲಿದು ವಸಿಷ್ಠ ರಾಗದಲಿ ಕೇಳಿ ಜನರಯ್ಯಾ ಪ ಒಂದು ದಿನ ಗೋದಾವರಿಯ ತಟದಿ ನಿಮಿರಾಜ ಸಂದು ಯಜ್ಞವ ಮಾಡುತಿರಲಾಗ ಪರಮೇಷ್ಠಿ ನಂದನೆನಿಪ ವಶಿಷ್ಠ ಮಹಮುನಿ ನಡೆತಂದ ಮೇಧಾಗಾರಕೆ ಬಂದ ಯತಿವರನ ಮಣಿಪೀಠದಲಿ ಕುಳ್ಳಿರಿಸಿ ಸುಂದರಾಧಿಪ ಬೆಸಸಿದಾ 1 ವ್ರತಿಪತಿ ವಶಿಷ್ಠ ವೈಷ್ಣವಕುಲ ಶಿರೋರತುನ ಶ್ರುತಿಶಾಸ್ತ್ರ ಸರ್ವಜ್ಞ ಗಂಗಾದಿ ಪುಣ್ಯತೀ ಮತ್ಪಿತನೆನುತ ಪದಕೆರಗುವಾ ಕ್ಷಿತಿಪನೋಕ್ತಿಯ ಕೇಳುತಾನಂದ ಶರಧಿಯೊಳು ಗತನಾಗಿ ರೋಮ ಲಕ್ಷಣ ಕಳೇವರದಿ ಪುಳ ನೃಪತಿಗಿಂತೆಂದನು 2 ಕೇಳು ಜನನಾಥ ಮಹಭಾಗ ನಿನ್ನಯ ಪ್ರಶ್ನ ದೇಳಿಗೆಗೆ ಎನ್ನ ಸಂತೋಷ ಕಲ್ಪತರು ತ ಶಿಷ್ಯರೊಳು ಮೌಳಿಮಣಿ ನೀನಹುದು ನಿಖಿಳ ನದಿಗೊಳಿಪ್ಪ ಶ್ರೀಲೋಲನ ಸುಮೂರ್ತಿಗಳು ತಾರÀತಮ್ಯ ಸುವಿ ಮಾನವ ಇದನಾಲಿಪುದು ನೀನೆಂದನು 3 ಹರಿಪಾದನಖದ ಸಂಸ್ಪರ್ಶ ಮಾತ್ರದಿಂದಲಿ ಸುರತರಂಗಿಣಿ ಶ್ರೇಷ್ಠಳೆನಿಸುವಳು ನದಿಗಳೊಳು ದೊರೆಮೆನಿಪನಾ ತೀರ್ಥಕೆ ಸರಿತಾಗಗಣ್ಯ ಗೋದಾವರಿ ನಳಿನಿಗಿಂ ಕೊರತೆಯೆನಿಪಳೈ ವತ್ತು ಗುಣದಲಿ ಶಂಖ ಚರಣ ಸುಗದಾಬ್ಜ ಶೋಭಿತ ವೀರನಾರಾಯಣ- ರಸೆನಿಪನಾ ಸಲಿಲಕೆ 4 ಹರಜಟೋದ್ಭವ ಕುಶಾವರ್ತಿಗೆ ಸಹಸ್ರಗುಣ ಚಾರು ಕಂ ಬುರಲಿ ವಾರುಚಿ ಧನುರ್ಧಾರಿ ಯಮನಂದನಲಿ ವಿಹರಿಸುತಿಹನಾಜಲದೊಳು ತುರುಗಾಯ್ದ ದೇವನಂಗಜ ನದಿಗೆ ಈರೈದು ವಾಗ್ದೇವಿ ಶರಧಿಯೊಳು ಪು ಗೋದ ರಂಗನಾಥನೆನಿಪ 5 ಆ ಯಮಳನದಿಗಳಿಗೆರಡು ಗುಣಾಧಮ ಸರಯು ತೋಯಾಧಿಪತಿ ರಾಮ ಸರಯು ನೀರೆಂದು ಗುಣ ವಿಹಾಯ ಸಮಮಣಿತನಯಳೆ ಸ್ಥಾಯಕೆ ಚತುರ್ಬಾಹು ವಿಷ್ಣು ಕಾವೇರಿಗೆ ನಾಯಕ ವರಾಹದೇವಾ6 ಸಿಂಧು ಭವನಾಶಿಗೀರ್ವರು ಸಮರು ಕ್ಷೀರಾಬ್ಧಿ ಮಂದಿರ ನೃಸಿಂಹರಲ್ಲಿಹರು ಭವನಾಶನಿಗೆ ತಂದೆಯೆನಿಪ ತ್ರಿವಿಕ್ರಮ ಒಂದೆನಿಸುವುವು ನಾಲ್ಕು ನದಿಗಳು ಗುಣಗಳಿಂದ ಮುಂದಿಹ ಪದದಿ ಪೇಳ್ವೆ ಪೆಸರು ಹರಿರೂಪ ನೆಲ ತಮ್ಮಿಂದೀರಗಿಂತೆಂದನೂ 7 ವಾಜಿವದನು ಮಂಝರಾನದಿಯೊಳಿಹನು ನವ ರಾಜೀವನಯನ ಶ್ರೀಧರ ಭೀಮರಥಿಯೊಳಿಹ ವಿರಾಜಿಪ ಮಲಾಪಹಾರಿ ಭಾಜನದೊಳಿಪ್ಪ ದುಷ್ಟ ಜನರನು ಮರ್ದಿಸುವ ಶ್ರೀ ಜನಾರ್ದನ ನಾಲ್ಕು ನದಿಗಳು ದ್ವಿಗುಣದಿಂದಾ ನಿತ್ಯ ನೈಜಭಕ್ತಿ ಜ್ಞಾನದಿ 8 ಭೀಮರಥಿ ಸಮ ಪಿನಾಕಿನಿಯೊಳಗೆ ಕೇಶವನು ಭೂಮಿಯೊಳು ಪೃಥಕು ಪೃಥಕು ಸುಖ ಜ್ಞಾನದಿ ಶ್ರೀ ಮನೋರಮ ಕೇಶವಾದಿ ರೂಪಗಳಿಂದ ಸ್ವಾಮಿಯೆನಿಸುವನಲ್ಲ ಸ್ನಾನಾದಿ ಸತ್ಕರ್ಮ ಮೋಕ್ಷ ಗಳೀವನೊ 9 ಈ ನದಿಗಳೆರಡು ಗುಣ ಪುಷ್ಕರಣಿನಿಚಯ ನ್ಯೂನವೆನಿಪವು ಮುಕ್ತಿ ದತ್ತಾತ್ರಯನು ಕೃಷ್ಣ ಮಾನಸ ಸರೋವರದೊಳು ಜ್ಞಾನಾತ್ಮ ವಾಮನನ ಶ್ರೀ ಭೂ ಸಹಿತ ಪ್ರಸ ನ್ನಾನನಾಬ್ಜದಿದರೆ ಜಘನಸ್ಥಿತಾಭಯ ಸು ಧೇನಿಪುದು ಎಂದಾ 10 ದೇವಖಾತಗಳು ಶತಗುಣಕಡಿಮೆ ಮಾನಸ ಸ ರೋವರಕೆ ಇತರ ಪುಷ್ಕರಣಿಗಳಿಗಲ್ಪಗುಣ ಪಾವನವಗೈವ ಕ್ಷುದ್ರಾ ಪ್ರಾವಹಿಗಳೀರೈದು ಗುಣದಿ ಕಡಿಮೆ ಲಕ್ಷ್ಮೀ ದೇವಿಪತಿ ನಾರಾಯಣನ ಚಿಂತಿಸೆಂದು ನೃಪ ಭವನೋವ ಪರಿಹರಿಪುದೆಂದು 11 ಈ ಸಲಿಲತೀರ್ಥಂಗಳೆರಡು ಗುಣದಿ ತಟಾಕ ಶೇಷಪರ್ಯಂಕ ಅಚ್ಯುತನಿಹನು ಸಜ್ಜನರ ವಾಸವಾಗಿಹನು ಚಕ್ರಿ ಘೋಷಗೈವ ಧರಾಂತಕೂಪಗಳೊಳಿರುತಿಹ ನಾ ಕೇಶನದಿಗಳ ತಾರÀತಮ್ಯ ರೂಪಗಳನುಪ ಪಾಸನಗೈವುದೆದೆಂದು 12 ಈ ತೆರದಿ ನಿಮಿರಾಜಗೋಸುಗ ವಶಿಷ್ಠಮುನಿ ತಾ ತಿಳಿದ ಕಥಾತಿಶಯ ಪರಮ ವಿಬುಧರು ಧ ಪ್ರೀತಿಯಿಂದಾಚರಿಸಲು ಶೀತಾಂಶು ಕಮಲಾಪ್ತರುಳ್ಳನಕ ಸುರಪತಿ ನಿ ಕೇತನದಿ ವಿವಿಧ ಭೋಗಗಳಿತ್ತು ಶ್ರೀ ಜಗ ಸಂಪ್ರೀತಿಯಿಂದನುರಾಗದೀ 13
--------------
ಜಗನ್ನಾಥದಾಸರು
ನಂದು ನಂದೆಂದೇಕೆ ಬಂಧ ಪಡೆಯುವಿಯೋ ಮಂದಮನ ತಂದೆ ಗೋವಿಂದ ತೋರುವ ಜಗಕೆ ಪ ಚಳಿಗಾಳಿ ನಿನ್ನದೆ ಮಳೆಬೆಳೆ ನಿನ್ನದೆ ಎಲೆಮನಸೆ ನೋಡು ನೀನೊಳಿತಾಗಿ ತಿಳಿದು 1 ನಿಶೆದಿನ ನಿನ್ನದೆ ವಸುಧೆಸ್ಥಿತಿ ನಿನ್ನದೆ ಪಶುವಿನಂದದಿ ಮನಸೆ ವ್ಯಸನದಲಿ ಬಿದ್ದು 2 ಆರುಮಾಡಿದ ಸೃಷ್ಟಿಗ್ಹಾರೈಸಿ ಕೆಡುವಿಯೋ ಮಾರಪಿತ ಶ್ರೀರಾಮ ಪಾದವಾರಿಜನಂಬದೆ 3
--------------
ರಾಮದಾಸರು
ನಂಬಿದೆನು ಜಗದಂಬೆ ನಿನ್ನನು ಪಾಲಿಸು ಸರ್ವಾ- ರಂಭಸೂತ್ರಳೆ ಇಂಬುದೋರಿನ್ನು ಪ. ಅಂಬುಜಾಂಬಕಿ ಶುಂಭಮರ್ದಿನಿ ಕಂಬುಗ್ರೀವೆ ಹೇರಂಬ ಜನನಿ ಶೋ- ಣಾಂಬರಾವೃತೆ ಶಂಭುಪ್ರಿಯೆ ದಯಾ- ಲಂಬೆ ಸುರನಿಕುರುಂಬಸನ್ನುತೆ ಅ.ಪ. ಕ್ರೂರದೈತ್ಯವಿದಾರೆ ಮಹದಾಕಾರೆ ಮಂಗಲೇ ವಿಶ್ವಾ- ಧಾರೆ ಕಲ್ಮಷದೂರೆ ಕದನಕಠೋರೆ ನಿಶ್ಚಲೆ ಪಾರಾ- ವಾರ ಸಮಗಂಭೀರೆ ಸುಗುಣವಿಹಾರೆ ನಿರ್ಮಲೆ ರತಿಶೃಂ- ಗಾರೆ ರಿಪುಸಂಹಾರೆ ತುಂಬುರು ನಾರದಾದಿಮುನೀಂದ್ರ ನುತಚರ- ಸೂರಿಜನ ಸುಮನೋರಥಪ್ರದೆ 1 ವಿಶಾಲಸುಗುಣಯುತೆ ಮುನಿಜನ- ಲೋಲತರುಣಮರಾಳೆ ಸಚ್ಚರಿತೆ ನವಮಣಿ ಮಾಲೆ ಮನ್ಮಥಲೀಲೆ ರಿಪುಶಿರಶೂಲೆ ಸಚ್ಚರಿತೆ ಹಿಮಗಿರಿ- ಬಾಲೆ ನೀಲತಮಾಲವರ್ಣೆ ಕ- ರಾಳಸುರಗಿ ಕಪಾಲಧರೆ ಸುಜ- ನಾಳಿಪಾಲನಶೀಲೆ ಹಿಮಕರಮೌಳಿಶೋಭಿತೆ ಕಾಳಿಕಾಂಬಿಕೆÉ2 ಶೋಕಮೋಹಾನಾನೀಕದೂರೆ ಪಿನಾಕಿಸುಪ್ರೀತೆ ಕೋಟಿ ದಿ- ಪರಾಕು ಶರಣಜನೈಕಹಿತದಾತೆ ಸುರನರ- ಲೋಕಮಾತೆ ನಿರಾಕುಲಿತೆ ಸುವಿವೇಕಗುಣವ್ರಾತೆ ಮಾನಸ- ವಾಕುಕಾಯದಿಂದ ಗೈದಾ ನೇಕ ದುರಿತವ ದೂರಗೈದು ರ- ಮಾಳಕಳತ್ರನ ಪಾದಭಕುತಿಯ ನೀ ಕರುಣಿಸು ಕೃಪಾಕರೇಶ್ವರಿ3 ಈಶೆ ಪಾಪವಿನಾಶೆ ಮಣಿಗಣಭೂರಿಪ್ರದೆ ಶಕ್ತಿವಿ- ಲಾಸೆ ವಿಗತವಿಶೇಷೆ ಕೃತಜಯಘೋಷೆ ಸರ್ವವಿದೆ ಮನ್ಮನ- ದಾಸೆಗಳ ಪೂರೈಸು ಸಜನರ ಪೋಷೆ ಕುಂದರದೆ ಶಂಕರೋ- ಲ್ಲಾಸೆ ಯೋಗೀಶಾಶಯಸ್ಥಿತೆ ವಾಸವಾರ್ಚಿತೆ ಶ್ರೀಸರಸ್ವತಿ ದೋಷರಹಿತೆ ಮಹೇಶೆ ಸುಗುಣರಾಶಿ ಸುರತತಿದಾಸಜನಯುತೆ4 ಸಾಮಗಾನಪ್ರೇಮೆ ರಾಕ್ಷಸ ಭೀಮೆ ರುದ್ರಾಣಿ ಅರಳ- ಗ್ರಾಮದೇವತೆ ಕ್ಷೇಮದಾಯಿನಿ ತಾಮರಸಪಾಣಿ ಪಶುಪತಿ- ವಾಮಭಾಗ ಲಲಾಮೆ ಮಂಗಲಧಾಮೆ ಫಣಿವೇಣಿ ಜಯಜಯ ಶ್ರೀಮಹಾಲಕ್ಷ್ಮಿ ನಾರಾಯಣಿ ರಾಮನಾಮಾಸಕ್ತೆ ಕವಿಜನ- ಸೋಮಶೇಖರಿ5
--------------
ತುಪಾಕಿ ವೆಂಕಟರಮಣಾಚಾರ್ಯ
ನಮೋ ನಮೋ ಕಮಲಾಲಯೆ ಸರ್ವೋ ತ್ತುಮ ನಾರಾಯಣನಂಕದ್ವಯ ಸಮುಪಸ್ಥಿತೆ ಸುಂದರ ಮದಗಜ ಗಮನೆ ಗುಣಪೂರ್ಣೆ ಶೋಭಾನೆ ಪ ಕಂಗಳ ಕುಡಿನೋಟದಿ ಕಂಜಜ ಗಂಗಾಧರ ಸುರಮುಖ ಸುಜನರ ಇಂಗಿತ ಫಲ ಪೂರೈಸಿಕೊಡುವ ಮಂಗಳ ಸುಚರಿತ್ರೆ ಭೃಂಗಾಳಿಗಳಂದದಿ ಸೊಗಯಿಪ ಮುಂಗುರುಳಿಂದೊಪ್ಪುವ ನಿಜಪತಿ ಸಂಗಡ ಬಾ ಹಸಿಯ ಜಗಲೀಗೆ 1 ಜಲಜಾಕ್ಷನ ವಿಮಲಾಂಗದಿ ಪ್ರತಿ ಫಲಿಸಿದ ರೂಪಗಳನೆ ನೋಡುತ ಪುಳಕೋತ್ಸವದಿಂದಲಿ ಪಾಡುತ ಹೊಲಬು ಗಾಣದಲೆ ತಲೆದೂಗುತ ಮಿಗೆ ಸಂತೋಷದಿ ಗಳರವದಿಂ ಪಾಡುತ ಶ್ರೀ ಭೂಲಲನೆ ಬಾ ಹಸಿಯ ಜಗಲೀಗೆ 2 ಪ್ರತಿಫಲಿಸಿಹ ರೂಪಗಳೆನ್ನವು ಕತಿಪಯರೂಪಗಳೆನಗಿಂದಲಿ ಅತಿಶಯವೆ ತೋರುತಲಿಪ್ಪವು ಪ್ರತಿ ಪ್ರತಿಕ್ಷಣದಿ ಶ್ರುತಿ ಪ್ರತೀಕನು ದಯದಿಂದೆನ ಗ್ಹಿತದಿಂದಲಿ ತೋರಿದನೆನುತಲಿ ನತಿಸುತ ನಗುತಿಪ್ಪ ಲಕ್ಷ್ಮೀ ಹಸಿಗೇಳು 3 ಆ ಬ್ರಹ್ಮಾಂಡಗಳೊಳ ಹೊರ ಗುಪಮರು ನಿನಗಿಲ್ಲವಾಗಲು ಅಪರಾಜಿತನಮಲ ಸುರೂಪ ಗಳಪರೋಕ್ಷಣದಿ ಕಾಂಬ ಚಪಲಾಂಬಕ ಕೃಪಣರ ಸಲಹಲು ಸ್ವಪತಿಯ ಶಿಪಿವರನಂಸಗೆ ಸುಫಲದೆ ಬಾಹಸಿಯ ಜಗುಲೀಗೆ 4 ವೀತಭಯನ ವಕ್ಷಸ್ಥಳವೆ ಪು ರಾತನ ಮನೆಯೆನಿಪುದು ಅವಿನಾ ಭುತರು ನೀವಿರ್ವರು ಅಮೃತಾ ಜಾತರು ಎಂದೆಂದೂ ಭೌತಿಕ ಮಂದಿರದೊಳು ನೆಲೆಸಿ ಪು ನೀತರ ಮಾಳ್ಪುದೆಮ್ಮ ಜಗ ನ್ನಾಥ ವಿಠಲನರ್ಧಾಂಗಿ ಜಗ ನ್ಮಾತೆ ವಿಖ್ಯಾತೆ ಬಾಹಸಿಯ ಜಗುಲೀಗೆ 5
--------------
ಜಗನ್ನಾಥದಾಸರು
ನಾರಾಯಣ ನಿಮ್ಮ ನಾಮ ನಾಲಿಗೆಲಿರಲಿ ನಾರಾಯಣ ಘೋರಪಾತಕವೆಲ್ಲ ಹಾರಿ ಹೋಗುವುದಯ್ಯ ನಾರಾಯಣ 1 ಸಾರ್ಯವಾಗುವುದು ಶ್ರೀಹರಿಯ ಪುರ ಅವರಿಗೆ ನಾರಾಯಣ ಮಾರಜನಕನÀ ಮೊದಲೆ ಮರೆಯದಿರೊ ಮನವೆ ನಾರಾಯಣ 2 ಎಷ್ಟೆಷ್ಟು ದುರಿತಗಳು ನಷ್ಟವಾಗಿ ಹೋಗುವುವು ನಾರಾಯಣ ಎಷ್ಟು ನಾಮವ ಬಿಡದೆ ನೆನೆಕಂಡ್ಯ ಮನವೆ ನಾರಾಯಣ 3 ಅಂತ್ಯಜಸ್ತ್ರೀ ಕೂಡಿ ಭ್ರಾಂತನಾಗ್ಯಜಮಿಳನು ನಾರಾಯಣ ಕಂತುನಯ್ಯನ ಮರೆತು ಕಾಲವನು ಕಳೆಯಲು ನಾರಾಯಣ 4 ಅಂತ್ಯಕಾಲಕೆ ಹರಿಯ ಸ್ಮರಣೆ ಜಿಹ್ವೆಗೆ ಬರಲು ನಾರಾಯಣ ಲಕ್ಷ್ಮೀ- ಕಾಂತ ಕರುಣಿಸಿ ಅವಗೆ ಕರೆದÀು ಮುಕ್ತಿಯ ಕೊಟ್ಟ ನಾರಾಯಣ5 ಲಕ್ಕುಮೀರಮಣನೆ ಸಕಲಗುಣಪರಿಪೂರ್ಣ ನಾರಾಯಣ ಮುಖ್ಯ ನೀ ಎನ ಮನದಿ ಹೊಕ್ಕರ್ಹೊಗಳುವೆನಯ್ಯ ನಾರಾಯಣ 6 ಘೋರ ವೇದವ ಕದ್ದು ನೀರೊಳಗಡಗಲು ನಾರಾಯಣ ಭೇದಿಸವನಕೊಂದು ವೇದವನು ತಂದಿಟ್ಟ ನಾರಾಯಣ 7 ಶ್ರುತಿಯ ಸುತಗೆ ಕೊಟ್ಟಿ ಸ್ತುತ್ಯನಾಗಜನಿಂದ ನಾರಾಯಣ ಮಚ್ಛರೂಪವ ಧರಿಸಿದಚ್ಯುತಗೆ ಶರಣೆಂಬೆ ನಾರಾಯಣ 8 ದೇವದೈತ್ಯರು ಕೂಡಿ ಸಾಗರವ ಕಡೆಯಲು ನಾರಾಯಣ ವಾಸುಕಿ ಸುತ್ತೆ ನಾರಾಯಣ 9 ಆಗ ಸುರರಸುರರಿಬ್ಭಾಗವಾಗಿ ನಿಂತು ನಾರಾಯಣ ಭಾಳ ತುಚ್ಛದಿ ಬಲಬಿಟ್ಟು ಬಾಯಿಂದೆಳೆಯೆ ನಾರಾಯಣ 10 ವಾಸುಕಿ ಬಿಡಲು ಅಸುರಜನ ಮಡಿದ್ಹೋಗೆ ನಾರಾಯಣ ಕುಸಿದು ಹೋಗಲು ಗಿರಿ ಕೂರ್ಮರೂಪಾದಿ ನಾರಾಯಣ11 ಅಮೃತ ದೈತ್ಯರು ಕೊಂಡೋಡಲು ನಾರಾಯಣ ಸೃಷ್ಟಿ ಆದಿಕರ್ತ ಶ್ರೀ (ಸ್ತ್ರೀ?) ರೂಪವನು ಧರಿಸಿದ ನಾರಾಯಣ 12 ಮುಂಚೆ ಮೋಹವ ಮಾಡಿ ವಂಚಿಸಿ ದೈತ್ಯರನೆ ನಾರಾಯಣ ಹಂಚಿ ಸುರರಿಗೆ ಅಮೃತಪಾನ ಮಾಡಿಸಿದಯ್ಯ ನಾರಾಯಣ 13 ದಿತಿಯ ಸುತನು ಬಂದು ಪೃಥಿವಿಯನೆ ಸುತ್ತೊಯ್ಯೆ ನಾರಾಯಣ ಅತಿಬ್ಯಾಗದಿಂದ ರಸಾತಳ ಭೇದಿಸಿ ನಾರಾಯಣ 14 ಕ್ರೂರ ಹಿರಣ್ಯಾಕ್ಷನ್ನ ಕೋರೆದಾಡೆಲಿ ಸೀಳಿ ನಾರಾಯಣ ವರಾಹ ನಾರಾಯಣ 15 ಬ್ರಹ್ಮನಿಂದ್ವರ ಪಡೆದು ಹಮ್ಮಿಂದ ಕÉೂಬ್ಬ್ಯಸುರ ನಾರಾಯಣ ದುರ್ಮತಿಯಿಂದ್ಹರಿಯ ದೂಷಿಸುತಲಿದ್ದ ನಾರಾಯಣ16 ಮತಿಹೀನ ತನ ಸುತಗೆ ಮತಿಯ ಹಿಡಿಸುವೆನೆಂದ ನಾರಾಯಣ ಪಾರ್ವತೀಪತಿ ನಾಮವನು ಹಿತದಿಂದ ಬರೆಯೆಂದ ನಾರಾಯಣ 17 ಹರಿ ಹರಿ ಹರಿಯೆಂದು ಬರೆಯಾ(ಯಲಾ?) ಬಾಲಕನೋಡಿ ನಾರಾಯಣ ಉರಿಯ ಹೊಗಿಸುವೆನೆಂದ ಉಗ್ರಕೋಪಗಳಿಂದ ನಾರಾಯಣ18 ಮೆಟ್ಟಿ ಸಾಗೀಯಿಂದೆ ಬೆಟ್ಟದಿಂದಲಿ ಕೆಡೆವೆ ನಾರಾಯಣ ಕಟ್ಟಿ ಶರಧಿಯಲ್ಲÁ್ಹಕಿ ವಿಷ್ಣುಭಕ್ತನು ಬರಲು ನಾರಾಯಣ19 ಪ್ರಹ್ಲಾದ ನಿನ್ನೊಡೆಯ ಎಲ್ಹಾನೆ ತೋರೆನಗೆ ನಾರಾಯಣ ಮಲ್ಲಮರ್ದನ ಸ್ವಾಮಿ ಇಲ್ಲದೇ ಸ್ಥಳವುಂಟೆ ನಾರಾಯಣ20 ಪೃಥ್ವಿಪರ್ವತದಲ್ಲಿ ಸಪ್ತದ್ವೀಪಗಳಲ್ಲಿ ನಾರಾಯಣ ಸುತ್ತೇಳು ಸಾಗರದಿ ವ್ಯಾಪ್ತನಾಗ್ಹರಿಯಿರುವ ನಾರಾಯಣ21 ಅಣುರೇಣು ತೃಣದಲ್ಲಿ ಇರುವ ಆಕಾಶದಲಿ ನಾರಾಯಣ ರವಿ ಸೋಮ ತಾರಾಮಂಡಲದಲ್ಲಿ ತಾನಿರುವ ನಾರಾಯಣ 22 ಹದಿನಾಲ್ಕು ಲೋಕದಲಿ ಹರಿ ವಿಶ್ವವ್ಯಾಪಕನು ನಾರಾಯಣ ಸರ್ವದಿಕ್ಕುಗಳಲ್ಲಿ ಸನ್ನಿಹಿತನಾಗಿರುವ ನಾರಾಯಣ 23 ಆರಣಿಯೊಳಗಗ್ನಿಯಂದದಿ ಜನಕೆ ತೋರದಿರೆ ನಾರಾಯಣ ಜನನ ಮರಣಿಲ್ಲ ಜಗಜನ್ಮಾದಿಕಾರಣಗೆ ನಾರಾಯಣ 24 ನೀನರಿಯೆ ನಿನ್ನಲ್ಲೆ ಜೀವರಾಶಿಗಳಲ್ಲೆ ನಾರಾಯಣ ಈ ಜಗತ್ತಿಗೊಬ್ಬ ಇದ್ದಾನೆ ಎನ್ನೊಡೆಯ ನಾರಾಯಣ25 ಮಂದಭಾಗ್ಯನೆಯೆನ್ನ ಮಾತು ನಿಜವೆಂದು ತಿಳಿ ನಾರಾಯಣ ಈ ಸ್ತಂಭದಲ್ಲಿದ್ದಾನೆ ಮಂದರೋದ್ಧರ ಸ್ವಾಮಿ ನಾರಾಯಣ26 ಬಂದು ಭರದಿಂದಸುರ ಕಂಬ ಕಾಲಿಂದೊದೆಯೆ ನಾರಾಯಣ ತುಂಬಿತಾ ಘನಘೋಷದಿಂದ ಘುಡಿಘುಡಿಸುತಲಿ ನಾರಾಯಣ27 ಸಿಡಿಲು ಗರ್ಜಿಸಿದಂತೆ ಖಡಿ ಖಡಿ ಕೋಪದಲಿ ನಾರಾಯಣ ಕಿಡಿಗಳ್ಹಾರುತ ಕಂಬವೊಡೆದು ರೋಷದಿ ಬಂದ ನಾರಾಯಣ 28 ಖಳನ ಸೆಳೆದಪ್ಪಳಿಸಿ ದುರುಳನುದರವ ಬಗೆದÀು ನಾರಾಯಣ ಕರುಳ ವನಮಾಲೆ ತನ ಕೊರಳಲ್ಲಿ ಧರಿಸಿದ ನಾರಾಯಣ29 ತಲ್ಲಣಿಸಿ ಸುರರಾಗ ಮಲ್ಲಿಗೆಮಳೆ ಕರೆಯೆ ನಾರಾಯಣ ಪ್ರಹ್ಲಾದಸಹಿತ ಶ್ರೀದೇವಿ ಮುಂದಕೆ ಬರಲು ನಾರಾಯಣ30 ಕರದಿ ಕಂಗಳ ಮುಚ್ಚಿ ಸಿರಿಯ ತೋಳಿಂದಪ್ಪಿ ನಾರಾಯಣ ತೊಡೆಯನÉೀರಿಸಿ ತನ್ನ ತರುಣಿಗಭಯವನಿಟ್ಟ ನಾರಾಯಣ 31 ಸ್ತೋತ್ರವನು ಮಾಡಲಜ ಬಿಟ್ಟುಗ್ರಕÉೂೀಪವನು ನಾರಾಯಣ ಕೊಟ್ಟ ಪ್ರಹ್ಲಾದ(ಗ್ವ)ರಗಳ ಲಕ್ಷ್ಮೀನರಸಿಂಹ ನಾರಾಯಣ32 ಅಜ್ಞಾನದಿಂದ ತಾ ಯಜ್ಞ ಮಾಡುತಲಿರಲು ನಾರಾಯಣ33 ಅದಿತಿಯಲ್ಲವತರಿಸೆ ಅತಿಬ್ಯಾಗ ಕಶ್ಯಪರು ನಾರಾಯಣ ಸುತಗೆ ಉಪನಯನ ಭಾಳ್ಹಿತದಿಂದ ಮಾಡಲು ನಾರಾಯಣ 34 ಯಜÉೂೀಪವೀತ ಕೈಪು ಕೃಷ್ಣಾಂಜಿನ ಧರಿಸಿ ನಾರಾಯಣ ಶೀಘ್ರದಿಂದ ವಟು ವಾಮನ್ಯಜಶಾಲೆಗೆ ಬರಲು ನಾರಾಯಣ35 ಬಲಿಯ ಯಜ್ಞದಿ ಬಂದು ಭಾಳ ಪೂಜಿತನಾಗಿ ನಾರಾಯಣ ಛಲವಿಟ್ಟು ಮನದೊಳಗೆ ಬಲಿಯ ಯಾಚನೆ ಮಾಡೆ ನಾರಾಯಣ 36 ನಾ ಕೊಡುವೆ ಬೇಡು ಬೇಕಾದಷ್ಟು ಅರ್ಥವನು ನಾರಾಯಣ ಸಾಕಾಗದೇನಯ್ಯ ಸಲ್ಲ ಧನದಾಸ್ಯೆನಗೆ ನಾರಾಯಣ 37 ದೃಢಮನಸಿನಲಿ ಭೂಮಿ ಕೊಡು ಮೂರು ಪಾದವನು ನಾರಾಯಣ ಕೊಡುವೆನೆಂದಾಕ್ಷಣದಿ ಎರಡು ಚರಣವ ತೊಳೆದ ನಾರಾಯಣ38 ಒಂದು ಪಾದದಲಿ ಭೂಮಂಡಲವ ವ್ಯಾಪಿಸಿ ನಾರಾಯಣ ಪಾದ ನಾರಾಯಣ 39 ಕಂಡು ಕಮಲಜನು ಕಮಂಡಲೋದಕ(ದಿ) ತೊಳೆಯ ನಾರಾಯಣ ಉಂಗುಷ್ಠ ನಖದಿ ಉತ್ಪನ್ನಳಾದಳು ಗಂಗೆ ನಾರಾಯಣ40 ರಕ್ಕಸಾಂತಕನು ತ್ರಿವಿಕ್ರಮ ರೂಪಾಗಿ ನಾರಾಯಣ ಆಕ್ರಮಿಸಿಕೊಂಡ ಹದಿನಾಲ್ಕು ಲೋಕವ ಸ್ವಾಮಿ ನಾರಾಯಣ41 ಕೊಟ್ಟ ವಚನವ ತಪ್ಪಿ ಭ್ರಷ್ಟÀನಾಗದೆ ಭೂಮಿ ನಾರಾಯಣ ಕೊಟ್ಟರಿನ್ನೀಪಾದಯಿಟ್ಟು ಬಿಡುವೇನೆಂದ ನಾರಾಯಣ 42 ಕಟ್ಟಿ ಪಾಶದಲಿ ಕಂಗೆಟ್ಟಾಗ ಬಲಿರಾಯ ನಾರಾಯಣ ಕೆಟ್ಟೆನೆನ್ನದಲೆ ಮನಮುಟ್ಟಿ ಸ್ತೋತ್ರವ ಮಾಡೆ ನಾರಾಯಣ43 ದುಷ್ಟಜನ ಮರ್ದಕನು ಸೃಷ್ಟಿಸ್ಥಿತಿಲಯ ಕರ್ತೃ ನಾರಾಯಣ ಸೃಷ್ಟಿಗೊಡೆಯಗೆ ದಾನಕೊಟ್ಟರೆಂಬುವರುಂಟೆ ನಾರಾಯಣ 44 ಬಂಧನ ಬಿಡಿಸಿ ಬಲಿರಾಯಗ್ವರಗ¼
--------------
ಹರಪನಹಳ್ಳಿಭೀಮವ್ವ