ಒಟ್ಟು 280 ಕಡೆಗಳಲ್ಲಿ , 70 ದಾಸರು , 257 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ತೆರಳಿದರು ಶ್ರೀ ಜಗನ್ನಾಥದಾಸಾರ್ಯರು ಸಿರಿಪತಿಯ ಸ್ಮರಿಸಿ ಹರಿಪುರಕೆ ಹರುಷದಲಿ ಪ ವರಶುಕ್ಲವತ್ಸರದ ಭಾದ್ರಪದ ಶಿತಪಕ್ಷ ಹರಿವಾರ ನವಮಿಯಲ್ಲಿ ಸುರಸಿದ್ಧ ಸಾಧ್ಯ ಸನ್ಮುನಿಗಣಾರ್ಚಿತ ಪಾದ ಹರಿಯೆ ಪರನೆಂದೆನುತಲಿ ಧರಣಿಯನು ತ್ಯಜಿಸಿ ಬಹುಮಾನಪೂರ್ವಕವಾಗಿ ಬೆರೆದು ಸುರಸಂದಣಿಯಲಿ ಪರಮಾರ್ಥವೈದಿ ಮನ ಹರಿಯ ಪಾದದಲಿಟ್ಟು ವರವಿಷ್ಣುದೂತ ವೈಮಾನಿಕರ ಒಡಗೂಡಿ 1 ಅತಿಪ್ರೇಮಿಗಳು ಹಸನ್ಮುಖರು ದಯೆ ಬೀರುವರು ಖತಿದೂರರಿವರು ಜಗದೀ ಮಿತಿಮೀರಿ ಶ್ರೀಹರಿಯ ಕಥೆ ನಾನಾ ಪರಿಯಲ್ಲಿ ಅತಿಶಯದಿ ಪೇಳಿ ಇಹಕೆ ಸತತವು ಶರಣರ್ಗೆ ಗತಿಯಾಗುವಂತೆ ಸ ತ್ವಥವಿಡಿಸಿ ಕರುಣದಿಂದ ಹಿತವಂತರೆನಿಸಿ ಸಮ್ಮತವಾಗಿ ಸರ್ವರಿಗೆ ಮತಿದೋರಿ ಕೊಟ್ಟು ಸದ್ಗತಿಯಗೋಸುಗವಾಗಿ 2 ಆಚರಣೆಯಲಿ ಒಂದರಘಳಿಗೆ ಬಿಡದೆ ಬಲು ಖೇಚರಾರೂಢ ಹರಿಯಾ ಸೋಚಿತಾರಾಧನೆಯ ಮಾಡಿ ಮರೆಯದಲೆ ಮಹಾ ವೈಚಿತ್ರ್ಯವನು ತೋರಿ ಈ ಚರಾಚರದಿ ಸಂಗೀತ ಸಾಹಿತ್ಯದಲಿ ಪ್ರಾಚಾರ್ಯವಂತರೆನಿಸೀ ಆ ಚತುರ್ದಶಭುವನಪತಿ ಶ್ರೀದವಿಠಲನ ಯೋಚನೆಯ ಬಿಡದೆ ಮಂಗಳ ಶಬ್ದವಾದ್ಯದಿಂ 3
--------------
ಶ್ರೀದವಿಠಲರು
ದಯಮಾಡೈ ಶ್ರೀ ಹರಿಯನಗಿಂದು ದಯಮಾಡೈ ಶ್ರೀಹರಿಯನಗಿಂದು ಪ ನಿಗಮಾಗಮ ಪೌರಾಣದ ಕತೆಯಾ ಬಗೆಯಲಿಯದ ಪಾಮರ ಪಾಥರಿಗೆ 1 ವಿಷಯಾ ಸಕ್ತಿಲಿ ನೆನೆಯದೆ ಹಿತವಾ ಪರಿ ದಿನಗಳಿದೀಗ 2 ಗುರುಮಹಿಪತಿ ಪ್ರಭು ಬಂದೆನು ಶರಣಾ ಬಿರುದವು ದೀನರ ಹೊರೆವುದು ನಿನಗೇ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದಾಸನಾಗಬೇಕು ಮನದಲಿ ಆಸೆಯಿಂಗಬೇಕು ಪ ಮೋಸಮೆಂಬುದಂಕುರಿಸದ ಅದರ ವಾಸನೆಯಂಟದ ಮಾನಸದಲಿ ಹರಿಅ.ಪ ಅತಿಮಾತಾಡುವ ಸತಿಯಿರಬೇಕು ಖತಿಯಿಂತೆರಳುವ ನೆಂಟರು ಬೇಕು ಹಿತವನು ಬಯಸದ ಸುತರೂ ಬೇಕು ಸತತಮಿವೆಲ್ಲರ ಸಹಿಸಿ ಭಜನೆಗೈವ 1 ತಣಿವಿಲ್ಲದೆ ತಿಂಬ ಅಣುಗರು ಬೇಕು ಹಣವ ಕೊಡೆಂಬುವ ಅಳಿಯರು ಬೇಕು ಋಣಬಾಧೆಗಳೊಳು ಕೊರಗಲು ಬೇಕು [ಅಣು ಅಣು ಕಾಡುವ ಸಂಸಾರಕಂಟದೆ] 2 ಮಾನಸವ ಬಿಗಿಹಿಡಿದಿರಬೇಕು ಧ್ಯಾನದೊಳಾತ್ಮಶಾಂತಿಯು ಬರಬೇಕು ಶ್ರೀನಿವಾಸನೇ ಶರಣೆನಬೇಕು ಜ್ಞಾನದಿ ಮಾಂಗಿರಿರಂಗನ ಪಾದದ 3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ದೃಷ್ಟಾಂತವಾಗಿದೆಯೈ ಪ ಕೃಷ್ಣಾ ನೀಮಾಡಿರ್ಪ ಸೃಷ್ಟ್ಯಾದಿಗಳೆಲ್ಲ ಅ.ಪ ಜನರು ನಡೆವದೀಗ ನೋಡಲ್ ಮನಕೇ ಬಂದಂತೆ ಕಾರ್ಯಂಗಳೊಡಗೂಡಲ್ 1 ಧೃಡವಾಗಿಯೇ ತೋರ್ಪುದು ನಡೆನುಡಿ ಮೊದಲಾದ ನರರು ಮಾಳ್ಪುದೆಲ್ಲ 2 ಚತುರಾವಸ್ಥೆಗಳಿಂದಲಿ ಹಿತವೇಬೇಕೆಂದರು ಅಹಿತವಾಗುತಿರುವುದು 3 ತನ್ನಿಂತಾನೆ ನಡೆವದು ಭಿನ್ನಾಭಿನ್ನವಾಗಿ ಭೇದ ಪ್ರಪಂಚವು 4 ಗುರುರಾಮವಿಠಲಾ ನೀ ಮಾಡಿರ್ಪ ಕಷ್ಟಗಳು 5
--------------
ಗುರುರಾಮವಿಠಲ
ದ್ವಾದಶನಾಮ ಸ್ತುತಿ ನಿನ್ನ ನೋಡಿ ಧನ್ಯನಾದೆನು ಶ್ರೀರಂಗನಾಥ ಪ ನಿನ್ನ ನೋಡಿ ಧನ್ಯನಾದೆ ಪನ್ನಗಶಯನ ರಂಗ ಮನ್ನಿಸಿ ರಕ್ಷಿಸು ಎನ್ನ ಮುನ್ನಜನ್ಮ ಬಾರದಂತೆ ಅ.ಪ. ಅರ್ಚ ಶೇಷಶಯನ ಲಕ್ಷ್ಮಿಗೆರಗಿ ಕೇಶವ ನಿಮ್ಮ ಸ್ತುತಿಸುವೆ 1 ಆದಿಸೃಷ್ಟಿಯಲ್ಲಿ ಬ್ರಹ್ಮನ ನಾಭಿಕಮಲದಲ್ಲಿ ಸೃಷ್ಟಿಸಿ ವೇದಸಾರವಾದ ಪ್ರಣವ ಓದಿ ಪೇಳಿದ ನಾರಾಯಣ 2 [ಆರ್ತಿ]ಯಿಂದ ಅಜನು ನಿಮ್ಮ ಮೂರ್ತಿಗಾಗಿ ತಪವ ಮಾಡೆ ಮಧುವೈರಿ ಮಾಧವಾ 3 ಪ್ರಣವಾಕಾರ ವಿಮಾನದಲ್ಲಿ ನಾಲ್ಕು ವೇದಶೃಂಗವಿರಲು [ವಿಷ್ಣು] ಪರವಾಸುದೇವರಿಂದ ಬಂದ ಶ್ರೀಗೋವಿಂದ 4 ಸತ್ಯಲೋಕದಲ್ಲಿ ನಿಂತು ನಿತ್ಯಪೂಜೆಯನ್ನು ಗ್ರಹಿಸಿ ಮತ್ತೆ ಇಕ್ಷ್ವಾಕುಗೊಲಿದ ವಿಶ್ವಮೂರುತಿ ವಿಷ್ಣುವೇ 5 ಸರಯು ತಮಸ ತೀರಮಧ್ಯದಿ ಹರಿಯೆ ನಿಮ್ಮನಿರಿಸಿ ದೊರೆಯು ಪರಮಪುರುಷನಿಂದ ಪೂಜೆ ಗ್ರಹಿಸಿದ ಮಧುಸೂದÀನ 6 ರಾಜ್ಯಾಭಿಷೇಕ ಕಾಲದಲ್ಲಿ ರಾಮಚಂದ್ರರು ರಾಕ್ಷಸೇಂದ್ರಗೆ ಕೊಡಲು [ರಾಜ್ಯವ] ಕಾವೇರಿ ಮಧ್ಯದಿನಿಂದು ತ್ರಿಜಗವಳೆದ ತ್ರಿವಿಕ್ರಮ 7 ಫಾಲ್ಗುಣ ಮೀನ ಉತ್ತರ ಫಲ್ಗುನೀ ನಕ್ಷತ್ರದಲ್ಲಿ ಬಾಲನಾಗಿ ಚಂದ್ರಪುಷ್ಕರಿಣಿ ತೀರದಿ ನಿಂದ ವಾಮನ 8 ಜಾಮಾತನೆನಿಸಿ ಗ್ರಹಿಸಿ[ದ] ಶ್ರೀದೇವಿ ಸಹಿತ ಶ್ರೀಧರ 9 ಮಳೆಯನಿಟ್ಟು ಧ್ವಜವಕಟ್ಟಿ ಸುರರ ಕರದು ಯಾಗವ ಮಾಡಿ ಯಾತ್ರದಾನದ [ತಳೆದ] ಹೃದಯವಾಸ ಹೃಷಿಕೇಶವ 10 ವೀರ ಮರುದಿನದಿ ಜಟಾಶೋಧಕರ ಮಂಟಪದಿ ನಿಂದು (?) [ಧೀರ] ಮುದುಕಿಗೊಲಿದು ದಧ್ಯಾನ್ನವ ಉಂಡ ಶ್ರೀಪದ್ಮನಾಭ 11 ನಾಲ್ಕು ದಿವಸದಲ್ಲಿ ನಾಗವೈರಿಯನ್ನು ಏರಿಬಂದು ಕಲ್ಪವೃಕ್ಷವು ಸರ್ಪವಾಹನ ಏರಿದ ದಾಮೋದರ 12 ಆರು ದಿವಸದಲ್ಲಿ ವರಿಯೂರಿಗೆ ಹೋಗಿ ನಿಮ್ಮ ಸಂತೈಸಿ ಮಾಲೆಧರಿಸಿದ ಸಂಕರ್ಷಣ 13 [ಮಾರನೆ] ದಿವಸದಲಿ ಚೂರ್ಣಾಭಿಷೇಕವನು ಧರಿಸಿ ವಾಸುದೇವ 14 ಎಲ್ಲೇಕೆರೆಗೆ ಪೋಗಿ ಭೂಮಿಯೆಲ್ಲ ನೋಡಿ ಹರುಷದಿಂದ ಅ[ಲ್ಲೆ] ತೇಜಿಯನೇರಿ ತೇರಿನೆದುರೆ ಪೇರಿಬಿಟ್ಟ ಪ್ರದ್ಯುಮ್ನ 15 ಪಂಗುನ್ಯತ್ತರವು ಬರಲು ಉಂಗುರವನು ಬೇಡಿತಂದು ಅನಿರುದ್ಧ 16 ತಿಂದ ಪಂಜಿನಪ್ರಹಾರ ಹರುಷದಿಂದ ಪುರುಷೋತ್ತಮ 17 ಪತ್ನಿಯೊಡನೆ ಪ್ರೇಮಕಲಹ ಅರ್ತಿಯಿಂದ ಮಾಡುತಿರಲು ವಿಷ್ಣು ಚಿತ್ತರ ವಾಕ್ಯದಿಂದ ಅರಸಿಗೇರಿದಾ ಅಧೋಕ್ಷಜಾ 18 ಮಂದರೋದ್ಧರ ತನ್ನ ಇಂದಿರೆಸಹಿತವಾಗಿ ಬಂದು ಗೋರಥವನೇರಿ ನಾಲ್ಕುಬೀದಿ ಮೆರೆದ ನಾರಸಿಂಹ 19 ವಾರಿಜಾಕ್ಷ ರಥವನಿಳಿದು ಕಾವೇರಿಯಲ್ಲಿ ತೀರ್ಥವಿತ್ತು ದರ್ಪಣದ ಗೃಹದಿ ನಿಂದ ಅರ್ತಿಯಿಂದ ಅಚ್ಚುತ 20 ಸಪ್ತ ಆವರಣವೆಲ್ಲ ಶಬ್ದವಿಲ್ಲದೆ ಸುತ್ತಿ ಬಂದು ಭಕ್ತ ಭಾಷ್ಯಕಾರರಿಗೊಲಿದ ದುಷ್ಟಮರ್ದನ ಜನಾರ್ಧನ 21 ಪೃಥವಿಯೊಳಗಾಶ್ಚರ್ಯವಾದ ಪ್ರತಿಯಿಲ್ಲದ ಪಲ್ಲಕ್ಕಿಯೇರಿ ಅತಿಶಯದಿಂದ ಬಂದ ಉರಗಶಯನ ಉಪೇಂದ್ರ 22 ಅಂದು ಸುರರ ಛಂದದಿಂದ ಮಂದಿರಕ್ಕೆ ಕಳುಹಿ ರಂಗ ಬಂದು ಭಕ್ತರ ಪಾಪ[ವ] ಪರಿಹರಿಸಿದಾ ಶ್ರೀಹರಿ 23 ಅಷ್ಟು ಚರಿತ್ರೆಯನ್ನು ಕೇಳಿ ಕಟ್ಟಿದ ಕಂಕಣವ ಬಿಚ್ಚಿ ಶ್ರೇಷ್ಠವಾದ ಸ್ಥಾನದಲ್ಲಿ ಮಂತ್ರಿ ಸಹಿತನಿಂದ ಶ್ರೀಕೃಷ್ಣ 24 ದಕ್ಷಿಣಗಂಗೆಯಾಗಿ ನಿಂದು ಭಕ್ತನ ದ್ವೀಪವನ್ನು ನೋಡುತ ಮುಕ್ತಿಮಾರ್ಗವನ್ನು ತೋರಿದ ಭಕ್ತವತ್ಸಲ ವೆಂಕಟರಂಗ 25
--------------
ಯದುಗಿರಿಯಮ್ಮ
ಧೇನುಪಾಲ ದಾಸಾರ್ಯಾ | ನುತಿಸುವೆಮಾನವೀಶನ ಪೊರೆದಾರ್ಯಾ ಪ ಕಾಣೆ ನಿನಗೆ ಸಮ ಕರುಣಾಳುಗಳನುಶ್ರೀನಿವಾಸರ ಪೊರೆದಾರ್ಯಾ ಅ.ಪ. ಯತಿವರ ವರದೇಂದ್ರರ ವರಬೋಧ ಪಡೆದು ಸಚ್ಛಾಸ್ತ್ರಗತಿಯನೆ ತಾ ಗಳಿಸುತಹಂ ಮತಿ ವಿಶಿಷ್ಟ ತಚ್ಛಾತ್ರ |ಹಿತವ ನುಡಿಯೆ ವಿಜಯಾರ್ಯಾಗತ ತಿಳಿದು ಸುಪಾತ್ರಕೃತಕನಟಿಸಿ ತಾ ಕಳುಹಿದವರ ಉಪಚಾರದಿ ಮಾತ್ರ 1 ಉತ್ತಮ ನಿಂದೆಯ ಕೃತಿಗೆ ಪ್ರಾಪ್ತಿ ಇವಗೆ ಅತಿರೋಗಇತ್ತ ಮಾತೆಗರಿವಾಯ್ತು ಸುತನ ಕ್ಷೀಣಾರ್ಯುರ್ಯೋಗ |ಅತ್ತ ಅನಿಲಾಜ್ಞೆ ಪೊತ್ತು ವಿಜಯಾರ್ಯಪದ ಸುಯೋಗಪ್ರಾಪ್ತಿಗೈಸಿ ಕ್ಷಮೆಯಾಚಿಸಿ ಆಯ್ತಿವಗೆ ತವಪದ ಯೋಗ 2 ಪರಿ ಯೋಗದಿಂದ ಮೆರೆದೆ ಸುರ ಭೂಸುರ ವೃಂದವು ಪೊಗಳುತಿರಲು ಆಗ 3 ಮೂರ್ತಿ ಕಂಡದೇವ |ರಂಗನೊಲಿಮೆಯಿಂದಂಗ ಜನಸ್ತ್ರದ ಸಂಗರಹಿತ ಭೂದೇವಇಂಗಿತಜ್ಞ ಎನಗೀಯೊ ಗುರುವೆ ದ್ವಂದ್ವ ಸಮರ್ಪಣ ಭಾವ 4 ಹೊತ್ತಿಹೆ ಬಿರುದನು ಭಕ್ತಿರೂಪಿ ಎನೆ ಗುರು ಭಾಗಣ್ಣಹತ್ತು ಎಂಟು ಮತ್ತೊಂದು ಮೊಗದವನ ವಿಶ್ವಮೂರ್ತಿಯನ್ನ |ಪೊತ್ತು ನೀನು ಹೃತ್ಕಂಜದೊಳಗೆ ಬಹು ತುತ್ತಿಪೆಯೊ ಅವನಕೃತ್ತಿವಾಸ ಸಖ ಸರ್ವೋತ್ತಮನೆನುತೊತ್ತಿ ಪೇಳ್ದ ಅಣ್ಣ 5 ಪರಿ ಮೆರೆದೆ ನೀನು ಅಂದುಯೋಗ ಇದನ ಕಂಡಾಗ ಜನರು ಭಯ ಭ್ರಾಂತರಾದರಂದು6 ಮೂರ್ತಿ ಗುರು ಗೋವಿಂದ ವಿಠಲನ ಪಾದತೋರೊ ಭೂಪ 7
--------------
ಗುರುಗೋವಿಂದವಿಠಲರು
ನಗುಮೊಗ ಚಂದಿರ ಸೊಗಸುಗಳಿಗೆ ಬಲು ಮುಗಿ ಬೀಳುತಲಿಹರೊ ನೀ ಸಿಗದಿರೊ ಪ ಹಗರಣದಲ್ಲಿ ಪನ್ನಗವೇಣಿಯರು ಸಿಗಲು ಆಗಲೆ ಬಲು ರಗಳೆ ಮಾಡುವುದು ಅ.ಪ ಬಲ ಪೂತನಿಯೊಮ್ಮೆ ಲಲನೆಯ ವೇಷದಿ ಬಲು ಮೋಸದಿ ವಿಷ ಮೊಲೆಯನ್ನು ಉಣಿಸಿದ್ದು ಲಲನೆಯರಿಗೆ ನಿನ್ನ ಸುಳುವನು ಕೊಡದಿರೊ 1 ಪತಿಗಳ ತ್ಯಜಿಸುವ ಸತಿಜನರಿರುವರು ಅತಿಮೋಸದಿ ನಿನ್ನ ಹಿತವ ಬಯಸುವರು ಮತಿಗೊಟ್ಟರೆ ಇವರು ಅತಿ ಸುಲಭದಿ ನಿನ್ನ ರತಿಯಲಿ ಸಂಸಾರ ಚ್ಯುತಿಯ ಪೊಂದುವರು 2 ರೆನ್ನುತ ಕರೆವರು ಕನ್ಯೆಯರುಗಳು ಸಣ್ಣ ಲೋಭಕೆ ಇವರನು ಸೇರಿದರೆ ಪ್ರ ಸನ್ನನಾಗದಿರೆ ನಿನ್ನನು ಬಿಡರೋ 3
--------------
ವಿದ್ಯಾಪ್ರಸನ್ನತೀರ್ಥರು
ನಂಬಿ ಭಜಿಸು ಹರಿಯಾ| ಅಂಬುಜನಾಭನ ಹಂಬಲದಿಂದಾ ಪ ಶ್ರವಣ ಕೀರ್ತನ ಮೊದಲಾಗಿಹ ನವವಿಧ| ಹವಣದ ಭಕುತಿಯ ಸವಿಸವಿಯಿಂದಾ 1 ಏನೂ ಇಲ್ಲದ ಮೂರು ದಿನದ ಸಂಸಾರಕ| ನಾ ನನ್ನದು ಯಂದೆನುತಲಿ ಶ್ರಮಿಸದೆ 2 ಶರೀರಿಂದ್ರಯಗಳು ಸ್ಥಿರವಿದ್ದ ಕೈಯಲಿ| ಜರೆ ಬಂದೆರಗುತ ಮರೆಸದೆ ಮುನ್ನಾ 3 ಕೇಳೀಕೋ ಗುರುವಿನಾ ತಿಳಿಯದಿದ್ದರೆ ಕೀಲರಿ| ಹೇಳುವ ಸ್ಪಹಿತವ ಜಾಳಿಸಿ ಸಂಶಯ4 ಹೊಂದಿದವರ ಕೈಯ್ಯಾ ಎಂದೆಂದು ಬಿಡನೆಂದು| ತಂದೆ ಮಹಿಪತಿ ಕಂದಗ ಸಾರಿದ5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ನಮಾಮಿ ತಂದೆಯೇ | ಮುದ್ದುಮೋಹನಾನತೋಸ್ಮಿ ಸಿದ್ಧರೇ | ತ್ವತ್ವದಾಂಬುಜಂ ಪ ಸುಕೃತ ವೆಂಥದೋಗುರುಗಳ್ ನಿಮ್ಮಯಾ | ಕರುಣದೊರಕಿತು 1 ವಿಲಸಿತಾಮಲಾ ನಿ | ಷ್ಕಲ್ಮುಷ ಹೃದಯರೇಆಲವಾ ಬೋಧರಾ | ಒಲವ ಪಡೆದರೇ 2 ಹಲವು ಜನುಮದೀ | ಬಳಲಿ ಬಂದುದಾತಿಳಿದು ನೀವೆನ್ನಾ | ಪಾಲಿಸೀದಿರಿ3 ಕ | ಳಂಕ ವಿಹಿತವೂ 4 ಎಂದು ಕರುಣೆಯಿಂ | ತಂದೆ ವೆಂಕಟನಾಹೊಂದಿ ಭಜಿಪರಾ | ಅಂದು ಪ್ರೇರಿಸೀ5 ಕರೆದು ಎನ್ನನೂ | ತೆರಳು ಎನುತಲೀಒರೆದು ಮತಿಯನೂ | ದಾರಿ ತೊರ್ದಿರೀ 6 ಸೋಮ ಶೇಖರಾ | ಸಮ ಪದಸ್ಥನೇಸಾಮಾಜಾದ್ರಿಲೀ | ಪ್ರಮಾಥಿವತ್ಸರಾ 7 ವದ್ಯ ಫಾಲ್ಗುಣಾ | ಪ್ರತಿಪದಾದಿನಾಆದಿವಾರದೀ | ವಿದಿತ ಮಾರ್ಗದೀ 8 ಗುರು ಗೋವಿಂದನಾ | ನಾಮ ತಾರಕಾಅರುಹೀ ಪ್ರೀತಿಲೀ | ದಾರಿ ತೋರ್ದಿರೀ 9 ಕೋಮಲಾಂಗನೇ | ನಿಮ್ಮ ಮಹಿಮೆಯಾಪಾಮರಾನು ನಾ | ಗಮಿಸಲಾಪನೇ 10 ಗತಿಯೆ ನೀವೆಂದೂ | ಸತತ ತುತಿಸುವೆಅತುಳ ಮಹಿಮರೇ | ಹಿತವ ಮಾಡಿರಿ 11 ತವ ಪದಾರ್ಚನೇ ತ್ರಿ | ಸವನ ಸಂಧ್ಯವೂಹವನ ಹೋಮವೂ | ಭವದ ಶೋಷವೂ 12 ನೀವೆ ಬಂಧುವೂ | ನೀವೆ ಬಳಗವೂನೀವೆ ತಾಯಿಯೂ | ನೀವೆ ತಂದೆಯೂ 13 ನಿಂತು ನೀವೆನ್ನಾ | ಅಂತರಂಗದೀಮಂತವ್ಯ ರಂಗನಾ ಚಿಂತೆ ಪಾಲಿಸೀ 14 ಗುರು ಗೋವಿಂದ ವಿಠಲನಾ | ಸುರಚಿರಾಮಲಾಚರಣ ಪುಷ್ಕರ | ಸ್ಮರಿಪ ಗುರುವರಾ 15|
--------------
ಗುರುಗೋವಿಂದವಿಠಲರು
ನಾ ನಿಮ್ಮ ದಾಸನಯ್ಯಾ ಸೀತಾರಾಮಾ ಪ ನಾನು ನಿಮ್ಮಯದಾಸನಹುದೊ ನೀನು ಯೀಜಗದೀಶನಹುದೊ ಭಾನು ಕೋಟಿ ಪ್ರಕಾಶನೇ ಸಂಗೀತ ಗಾನ ವಿನೋದರಂಗಾ 1 ಮತಿಹೀನ ನಾನಾದೆನೈ ಶಾಶ್ವತನಾ ಸ ದ್ಗತಿಯ ನೋಡದೆ ಹೋದೆನೈ ಹಿತವ ಪಾಲಿಸಬೇಕೊ ವೋ ಶ್ರೀ ಪತಿತಪಾವನ ರಂಗನಾಯಕ ಸತಿ ಶಿರೋಮಣಿ ಪರಮಸೀತಾ ಪತಿಯೆ ನಾನಿನ್ನ ಸುತನು ಕಾಣೈ 2 ಕಂದಯ್ಯಗಾರುಗತಿ ನಿನ್ನಯ ಚಲ್ವ ಚಂದಗಾದವೆ ಶೃತೀ ಹಿಂದೆ ಮಾಡಿದ ಕೊಲೆಗಳಂ ಬೆನ್ನ ಮುಂದೆ ಬಾರದಂತದ ಹರಿಯೋ ಇಂದಿರೇಶ ಮುಕುಂದ ಪರಮಾ ನಂದ ತುಲಸೀರಾಮ ದೇಶಿಕಾ 3
--------------
ಚನ್ನಪಟ್ಟಣದ ಅಹೋಬಲದಾಸರು
ನಾನಾ ಚಿಂತನೆ ಎನಗಿಲ್ಲ ಹರಿ ನಿನ್ನ ಚಿಂತನೆ ಎನಗನುಗಾಲ ಪ ಮಾನಾಪಮಾನದ ಭಯವಿಲ್ಲೆನಗೆ ತವ ಧ್ಯಾನವೊಂದೆ ನೀಡು ಬಹು ಮಿಗಿಲ ಅ.ಪ ಉಪವಾಸಬಿದ್ದರೆ ಆಡ್ಡಿಯಿಲ್ಲ ಎನ ಗಪರೂಪ ಊಟಾದರ್ಹಿಗ್ಗಿಲ್ಲ ಕಪಟದಿ ಬೈದರೆ ಅಹಿತಿಲ್ಲ ಜನ ನಿಪುಣನೆಂದರೆ ಎನಗ್ಹಿತವಿಲ್ಲ ಸುಪಥದಿ ನಡೆಸೆನ್ನ ಸಫಲನೆನಿಸಿ ನಿಮ್ಮ ಗುಪಿತ ಮಂತ್ರ ಮಾಡನುಕೂಲ 1 ಪರಮ ಬಡತನವಿರೆ ಪರವಿಲ್ಲ ಬಲು ಸಿರಿ ಸಂಪದವಿರೆ ಹರುಷಿಲ್ಲ ಸಿರಿವರ ನಿಮ್ಮಯ ಚರಣ ಸ್ಮರಣೆವೊಂದೆ ಸ್ಥಿರಮಾಡು ಮರೀದಂತೆ ಗೋಪಾಲ 2 ಕಾಮಿನಿಯರ ಪ್ರೇಮ ನಿಜವಿಲ್ಲ ಮತ್ತು ಹೇಮ ಮುತ್ತು ರತ್ನ ಇರೋದಲ್ಲ ಭೂಮಿಸೀಮೆಯ ಸುಖವಿಲ್ಲ ಇದು ನೇಮವಲ್ಲೊಂದಿನ ಬಟ್ಟಬೈಲ ಕ್ಷೇಮಮಂದಿರ ಭಕ್ರಪ್ರೇಮದಿ ಕೊಡು ಶ್ರೀರಾಮ ನಿಮ್ಮಡಿ ಭಕ್ತಿ ನುತಪಾಲ 3
--------------
ರಾಮದಾಸರು
ನಾನ್ಯಾಕೆ ಚಿಂತಿಸಲಿ ನಾನ್ಯಾಕೆ ಧೇನಿಸಲಿ ತಾನಾಗಿ ಶ್ರೀರಾಘವೇಂದ್ರಯತಿ ಒಲಿದ ಪ ಪೋರತನದವನು ಎರೆಡು ತೆರೆಗಳಲ್ಲಿ ದೂರಾಗಿ ಮೊರೆಯು ಅಲ್ಲವೆಂದು ಕಾರುಣ್ಯದಿಂದ ತಮ್ಮಯ ಗುರುತುಗಳ ತೋರಿ ಧೀರ ತಾ ಕರವನು ಪಿಡಿದ ಬಳಿಕ 1 ಜಗದೊಳಗೆ ಪದಾರ್ಥಗಳು ಗುಣದಿ ಭುಂಜಿಸುವಂಗೆ ಅಗದಂಕರನು ತಾನು ಬಳಿಗೆ ಬಂದು ಬಗೆಬಗೆಯಿಂದಲಿ ಸುರಸ ಪದಾರ್ಥಗಳು ಸೊಗಸಾಗಿ ಉಣಿಸಲು ಚಿಂತೆಯುಂಟೆ2 ಪೂರ್ಣಜಲ ಹರಿವ ವಾಹಿನಿ ಕಂಡು ಬೆದರುವಗೆ ಕರ್ಣಧಾರನು ತಾನೆ ಬಂದು ನಿಂದು ತೂರ್ಣದಲಿ ಕರಪಿಡಿದು ಹರಿಗೋಲ ಒಳಗಿಟ್ಟು ಫೂರ್ಣಿಸಲು ಅವನಿಗೆ ಚಿಂತೆಯುಂಟೆ 3 ತನ್ನಯ ಹಿತವು ತಾ ವಿಚಾರಿಸಲವಂಗೆ ಚನ್ನಾಗಿ ಪರಮ ಗುರು ತಾನೆ ಬಂದು ಸನ್ಮಾರ್ಗವನು ತಾನೆ ಪೇಳುವೆನೆನಲು ಇನ್ನು ಆಯಾಸವುಂಟೆ ಅವನಿಗೆ 4 ಏಸು ಜನ್ಮದಲಿ ಅರ್ಚಿಸಿದೆನೊ ನಾ ಇನ್ನು ಪಾದ ಪದುಮ ಲೇಸಾಗಿ ಈ ಸುಕೃತದಿಂದೆನ್ನ ಹರಿದಾಸ ಈ ಸುಗುಣ ಗುರುರಾಯ ಎನಗೆ ಒಲಿದ 5
--------------
ವ್ಯಾಸತತ್ವಜ್ಞದಾಸರು
ನಾನ್ಯಾರೋ | ಶ್ರೀಹರಿ ಪೇಳೋ ನಾನ್ಯಾರೋ ಪ ನಾನ್ಯಾರೆಂಬುದ ಪೇಳಿ ನೀನ್ಯಾರೆಂಬುದ ತಿಳುಹಿ ಸಾನುರಾಗದಿ ಪೊರೆವ ಪ್ರಭು ನೀನೆ ಬೇರಿಲ್ಲಅ.ಪ. ಎಲ್ಲಿಂದ ಬಂದೆ ನಾನಿಲ್ಲಿಗೆ ಮುಂದೆಲ್ಲಿಗೆ ಪಯಣ ಕೊಂಡೊಯ್ಯುವುದೇನೆಂಬುದರಿಯೆ1 ಜನನಗೊಂಡು ಮಾನುಷ ದೇಹ ತಳೆದನಾ ನೆನಗೆ ಹಿತವಹ ಕಾರ್ಯವನೇನನೆಸಗಿದೆ 2 ದೇಹವೆ ಮನಸೆ ಬುದ್ಧಿಯೇ ನಾನೆಂಬುದನಾರೆಂದರಿಯೆ ನೇಹದಿಂದಿರುವಂತರಾತ್ಮ ತೊಲಗಲು ಮುಂದೀ ದೇಹವು ಕಸಕಿಂತ ಕಡೆಯೆನಿಪುದ ಬಲ್ಲೆ 3 ಕರ್ಮಿ ಜೀವನು ನೀ ಸಾಕ್ಷಿ ನಿರ್ಲಿಪ್ತನು 4 ಏನರಿಯದಲ್ಪನ ಕೈಬಿಡದಿರು ನೀನೆ ಗತಿ ರಘುರಾಮವಿಠಲ ತಂದೆ 5
--------------
ರಘುರಾಮವಿಠಲದಾಸರು
ನಾರಾಯಣ ಕೃಷ್ಣ ಬೆಳಗಾಯಿತೇಳಯ್ಯ ಮೂರು ಲೋಕಂಗಳಿಗೆ ಮಂಗಳವ ಬೀರಯ್ಯ ಪ ಹರಿಹರಿ ಶ್ರೀನಿಲಯ ಪರವಾಸುದೇವ ಅ.ಪ ಬಂದಿರುವರೈ ಬ್ರಹ್ಮ ರುದ್ರೇಂದ್ರರು ತಂದೆ ತಂದಿರುವರೈ ಮಹನಿಧಿ ಕನಡಿ ಧೇನುಗಳ ನಿಂದು ಗಾನವಮಾಡುತಿರುವರಾನಂದದಿ ಗಂಧರ್ವರಪ್ಸರೆಯರಿಂದು ಕುಣಿದಾಡಿ ಕೂಡಿ 1 ದಾಸರೊಡೆ ತುಂಬುರರು ನಾರದರು ಜಯಜಯ ಶ್ರೀಶನೇ ಕೇಶವ ಗಜವರದ ಎಂದು ಆಶ್ರಯಿಸಿ ಚರಣಕ್ಕೆ ಶರಣೆಂದು ಮಣಿಯವರು ದೋಷನಾಶನ ಲೋಕಕಲ್ಯಾಣ ತ್ರಾಣ 2 ಪತಿವ್ರತಾ ಸ್ತ್ರೀಯರುಗಳತಿಶಯ ಮಡಿಯುಟ್ಟು ಹಿತವಾದ ಹುಗ್ಗಿ ಸಜ್ಜಿಗೆಯ ಗೈದು ಪತಿತಪಾವನ ನಿನಗೆ ದಧ್ಯನ್ನ ನೀಡುವರೊ ಕ್ಷಿತಿನಾಥ ನೀನವನು ತೋಷದಿಂ ಭುಜಿಸೊ 3 ರೋಗರುಜಿನಗಳಳಿದು ಆಯುವೃದ್ಧಿಯದಾಗಿ ಭಾಗವತ ಸಕುಟುಂಬ ಸಂತೋಷಗೂಡಿ ಭಾಗವತ ಭಾರತ ರಾಮಾಯಣಗಳ ಹಾಡಿ ಆಗಲೈ ಆಗಮಾರ್ಚನೆ ಆಲಯಗಳೊಳಗೆ 4 ಕಮಲಲೋಚನ ಕೆಟ್ಟ ಸ್ವಪ್ನ ಫಲವಳಿಸಿ ಯಮಕಂಟವಂ ಕಳೆದು ಭ್ರಮೆಗಳನು ನೀಗಿ ಸುಮನಸರ ಕೂಡಿ ಶ್ರೀಹರಿಯ ಗುಣಗಾನ ಮಾಡಿ ಅಮಿತ ಅಮೃತವುಣಿಸೈ 5 ಕ್ಷುಧ್ರಪಾಕೀ-ಚೀನ ಕೊಬ್ಬಿ ಛದ್ರಿಸುತು ಭದ್ರತೆಯನಾಡೊಳಗಸ್ಥಿರತೆಗೈಯುತ್ತ ಆದ್ರಿಅಂಬುಧಿ ಮಧ್ಯೆ ಭಾರತಿಯ ನಲಿಸುತ್ತ ಮುದ್ರೆಯುಂ ಧ್ವಜವನುಂ ನಿನ್ನವಾಗಿರಿಸೈ 6 ಕಾಲಕಾಲಗಳಲ್ಲಿ ಮಳೆಬಿಡದೆ ಸುರಿದು ಶಾಲಿಸಂತರ ಧಾನ್ಯ ಎಲ್ಲೆಲ್ಲು ಬೆಳೆದು ಮಹಿಷಿ ಶ್ರೀಲೋಲ ಕರುಣಿಸೈ ಕನಕವೃಷ್ಟಿಯನು 7 ಎದುರು ನೋಡುತ ನದಿಯು ಹರಿವುದು ಸಾಗರಕೆ ಮುದದಿಂದ ತಾವರೆಯು ಸೂರ್ಯನನ್ನು ವಿಧಿವಶದಿ ಪಾಪಿಗಳು ಯಮಲೋಕವನ್ನು ಸುಧೆಸವಿಯೆ ಭಕ್ತರು ಪರಮಪದವನ್ನು 8 ಮಕ್ಕಳಿಲ್ಲದ ಜನರು ಮಕ್ಕಳನು ಹಡೆದು ಲಕ್ಷ್ಮಿಯೊಲವನು ಹಾಡಿ ಜನರೆಲ್ಲ ದುಡಿದು ಭಕ್ತರಾಗುತ ಸರ್ವ ವಣಿಗೆಗಳು ನಡೆದು ಮುಕ್ತರಪ್ಪಂತೆಲ್ಲರ ಮಾಡು ಜಾಜೀಶ 9
--------------
ಶಾಮಶರ್ಮರು
ನಾರಾಯಣನು ನಾರಿಯಾದನು ನಾರಾಯಣನು ನಾರಿಯಾಗಲು ಉಗರು ಕಾಂತಿ ಪೋಗಿ ಸಾರಸುಂದರವ ತಿರಸ್ಕರಿಸೆ ಶೃಂಗಾರಸ ನಿಧೆ ಪ ಸುರರಸುರ ಕರೆಸಿ ವೈರೆವ ಮರೆಸಿ ಸ್ನೇಹದಿಂದಿರಿಸಿ ಈ ಕುಲ ವರಿಸಿ ನಿಮ್ಮೊಳು ಬೆರಸಿ ಸುಖವಂಕುರಿಸುವಂತೆ ಸಂಚರಿಸೆಂದು ಸರಸದಿಂದಲಾದರಿಸೆ ಸುರರ ಧರಿಸಿ ಬಿಡದುದ್ಧರಿಸುವೆ ನಿದ್ರಿ ತರಿಸಿ ದೈತ್ಯರ ವರಿಸೆಂದು ಸಿರಿ 1 ದಿತಿಜಾದಿತಿ ಜ್ಯಾತ ತತಿಗಳನು ಸ ಅಮೃತ ಬಪ್ಪದಕ್ಕೆ ಹಿತವ ಪೇಳುವೆನೆಂದತಿಶಯದಿಂದ ಚತುರಾತುಮ ಮಾರುತ ಪಿತಾ ಕ್ಷಿತಿಯೊಳು ನೂರು ಶತ ಯೋಜನ ಪರ್ವತ ಮಂದಾರುಂಟು ಜತೆಯಲಿ ಏಕಮತರಾಗಿ ಪೊಲ್ ಜಾತವ ಕಿತ್ತೆತ್ತಿಸಿತಾಬ್ಧಿಯೊಳು ಮಥಿüಸೆಂದು 2 ಹರಿ ನಿರೂಪವÀ ಧರಿಸಿ ಎಲ್ಲರು ಗಿರಿಯ ಬಳಿಗೆ ಹರಿದರಾಗಲೆ ಕಿರಿ ಬೆರಳ ಅಬ್ಬರದಾಟವು ಬೊಬ್ಬಿರುವ ಧ್ವನಿ ಭೀಕರ ಕರಿ ಶರಧಿ ಮಿಕ್ಕ ಗೋತುರ ಸಪ್ತದ್ವೀಪ ತರು ಮೃಗಾದಿ ಜೀವರು ತಲ್ಲಣಿಸೆ ಗಿರಿ ವೆಗ್ಗಳಿಪ ಭರಕಂದು3 ಸುತ್ತ ಈ ಪರಿಯಾಗುತ್ತಿರೆ ಇತ್ತ ಪ ರ್ವತವಲ್ಲಾಡಿಸಿ ಕಿತ್ತಿ ತೆಗೆದೆತ್ತಿ ಹೊತ್ತರಿತ್ತಂಡದಿ ಚಿತ್ತ ಮಾರ್ಗವನು ಹತ್ತಿ ಬರಲು ದೇವತೆಗಳು ಹೊತ್ತರದ್ರಿಮೂಲ ಎತ್ತಲಾರದಲೆ ತತ್ತಳಗೊಂಡು ಮಾರುತ್ತ ಅಡಿಗಡಿ ಎತ್ತಿಡಲರಿದು ದೈತ್ಯರ ವಂಚಿಸಿ ಆ ದಿತ್ಯರಿಗಿರಿಸಿದುತ್ತಮನೊ4 ವನಧಿsಯೊಳದ್ರಿ ದನುಜ ಮರರ ಗುಣವಿಳಹಿ ಸ ರ್ಪನ ತಂದೀಗ ನೇಣನೆ ಮಾಡಿದರು ಸುರರು ಬಾಲನು ದೈತ್ಯಯರು ಹೂಣಿಕೆಲಿ ವಿನಯದಿಂದ ಮಥಿüಸುವಾಗ ವದನದನಿಲಕೆ ಅನಿಮಿಷರು ತಲ್ಲಣಿಸೆ ಹರಿ ತನ್ನನು ನಂಬಿದವರ ಕಾಯಿದ ವಂಚನೆಯಿಂದ5 ಉಭಯ ಜನರು ಗಂಭೀರವಾದ ಕ್ಷೀರಾಂಬುಧಿ ಕಟವ ರಭಸಗೈದು ಕಕುಭದಲಿ ಪ್ರತಿ ಶಬ್ದಪುಟ್ಟಿ ಉ ದುಭವಿಸಿದವು ಶುಭಾ ಶುಭ ಪ್ರಭು ಧನ್ವಂತ್ರಿ ಸುಲುಭ ರಸ ತಾರೆ ವಿಭುದರೊಳಗೆ ಗಲಭೆಯ ಬೀಸಿ ಅ ನಿಬರು ಒಯ್ಯಲು ಋಭುಜಾದ್ಯರು ಅಬುಜಾಪ್ತ ಪೋದನಭವಾಗೆ6 ಹರಿ ತಿಳಿದ ಭಕ್ತರ ಮನೋಕ್ಲೇಶ ಸಿರಿ ಸ್ತುತಿಗಗೋಚರನೆನ್ನಲು ಧರಿಸಿ ಬಂದನು ಮಿರುಗುತಿಪ್ಪ ಸುಂ ದರ ನಾರೀ ರೂಪ ಪರದೈವ ಕುಸುಮ ಪೊಂಗೆಜ್ಜೆಯ ಸರಪಳಿಯ ಮೇಲೊಲಿವ ಕಾಂಚಿದಾಮ ಶರತ್ಕಾಲದ ಚಂದಿರನಂತೆ7 ಸಣ್ಣವನಾರಾ ಮೋಹನ್ನಕರವು ಪಾ ಕೌಸ್ತುಭ ರನ್ನ ವನಮಾಲೆ ಚಿನ್ನದ ಸರ ಶೋಭನ ಕರಡಿಗೆ ಚನ್ನಗೋಡಿ ಸರ ಬಣ್ಣ ಸರ ರನ್ನದಪದಕ ಕನ್ನಡಿ ಮಲಕು ಚನ್ನಪ ನ್ಯಾವಳ ಮುನ್ನೆ ಸರ್ವಹಾರ ಮೂರ್ತಿ 8 ಮುತ್ತಿನ ಚಿಂತಾಕ ಮುತ್ತಿನೋಲೆ ಜಾತ ಮುತ್ತಿನ ಮೂಗುತಿ ಮುತ್ತಿನಕ್ಷತಿಯು ಮುತ್ತಿನ ಸೂಸುಕಾ ಮುತ್ತಿನ ಜಡೆಯು ಮುತ್ತಿನ ಗೊಂಚಲು ಮತ್ತೆ ತೋಳು ಮುತ್ತು ಮೇಲಗೊಪ್ಪು ಕತ್ತಲೆ ಸೋಲಿಪ ಕಸ್ತೂರಿ ತಿಲಕಾ ನೆತ್ತಿಯ ಬೈತಲು ಸುತ್ತ ತಳಪು ಸುರೋತ್ತಮ ಚಂದ್ರಮಾ ನಿತ್ಯಾನಂದ ಪರುಷೋತ್ತಮನು 9 ನೀಲಗೂದಲು ಸುಫಲಾದಿ ಶ್ರವಣ ಭ್ರೂಲಾದಿಕÀವು ಚಂ ಕಪೋಲ ನಾಸಿಕ ತಾಂಬುಲದ ವದನ ನಾಲಿಗೆತಳ ವಿಶಾಲ ಭುಜ ಕಂದರ ಸುಂಡಾಲಾಕಾರವಾದ ತೋಳು ಕರತಳ ಪಾಲು ಬಪ್ಪ ಸ್ತನ ಸ್ಥೂಲೋದರ ನಾಭಿ ಲೀಲಾ ನಡವು ಪಂ ಚಳ ಊರು ಜಾನು ಲೋಲಾಡುತಾ 10 ಹರಡಿ ಕೈಕಟ್ಟು ಬೆರಳುಂಗುರವ ವರ ಕಂಕಣಾದಿ ಸರಿಗೆ ತಾಯಿತ ಸರ ಹುಲೆಯುಗರು ಎಣ್ಣೆ ನೂಲು ತರುಳಹಾರ ಚೌರಿಯಿಂದ ಪರಿಪರಿ ಚಿತ್ರ ಬರೆದ ಕಂಚುಕಾ ಸರಿಸರಿ ಬಂದಾಭರಣ ಧರಿಸಿ ಅರೆ ಶರಗು ಗಹ್ವರದಿ ಮಾಡುತ್ತ ಮರಿಯಾನೆ ಬಪ್ಪ ತೆರದಂತೆ 11 ಗಂಧ ಪಚ್ಚಿಕೊಂಡು ಒಂದು ಕರದೊಳು ಗಂಧ ವಿಳ್ಯವು ಮತ್ತೊಂದು ಕರದೊಳು ಕಂದುಕ ಪುಟಿಸುತ್ತೊಂದೊಂದು ಹೆಜ್ಚೆಯನು ನಿಂದಲ್ಲಿ ನಿಲ್ಲದೆ ಚಂದದಿಂದ ಬಂದಬಂದಂತೆ ಪೂ ಮಂದರಾದಿ ಮುಡಿಯಿಂದ ಉದರಲು ಮಂದಹಾಸದಿಂದ ವೇಗ ನಡೆ ತಂದು ಸಮೀಪದಿ ನಿಂದನು ಖಳರಿಗೊಂಡಿ ಮಾರಿ12 ದುರುಳ ಸಮೂಹ ಪರವಶನಾಗಿ ಬೆರಗಾಗಿ ನಿಲ್ಲೆ ಪರಿ ಏನೆನಲು ಇರದೆ ಪೇಳಲು ಶಿರವದೂಗುತ್ತಾತಾರವೆಂದ ಭರ ಯೌವ್ವನ ಸ್ತ್ರೀ ಪರಪುರಷರ ಸರಿತದಲ್ಲಿಗೆ ಚರಿಸಬಾರದು ಎರಡು ಬಲದವರು ಕರದಿ ಲೋಚನವ ಮುಚ್ಚಿ ಸಾಗಿರೆ ಪಂಙÂ್ತ 13 ಬಡಿಸೂವೆನೆ ಒಡನೆ ತಮ್ಮಯ ಪಡೆ ಸಮ್ಮತ ಸಾಲ್ಹಿಡಿದು ಕುಳ್ಳಿರೆ ನಡುವೆ ಪಿಯೂಷ ಪಿಡಿದು ದುಷ್ಟರ ಕಡಿಗೊಂದು ಬಿಂದು ಬಡಿಸದೆ ದೃಢ ಭಕ್ತರಿಗೆ ಕುಡಿಸುತ್ತಿರಲು ಬಡ ರಾಹು ತಾನು ದುಡುಗಿ ಸುರರಾ ಎಡೆಯೊಳಿರಲು ಕುಡಿತಿಯೊಳು ತಾ ಬಡಿಸಿ ಚಕ್ರವಾ ತುಡುಕಿದ14 ಓರ್ವನ ತರಿದು ಈರ್ವಗೆ ಮಾಡಿದ ಊರ್ವಿಗೆ ಕೆಡಹಿ ಗರ್ವ ಮುರಿದು ಸರ್ವಬಗೆಯಿಂದ ನಿರ್ವಾಹ ಕರ್ತನು ಓರ್ವನಲ್ಲದೆ ಮತ್ತೋರ್ವನಾರೊ ಗೀರ್ವಾಣ ಜನರ ನಿರ್ವಾಧಿಕವೊಹಿಸಿ ಪರ್ವತೆಡೆಯಿದ್ದ ದು ರ್ವಿಷಯಾಬ್ಧಿಗೆ ಚೀರ್ವನಾಗಿದ್ದ ವಿಜಯವಿಠ್ಠಲ ನಿರ್ವಾಣೇಶ15
--------------
ವಿಜಯದಾಸ