ಒಟ್ಟು 5751 ಕಡೆಗಳಲ್ಲಿ , 125 ದಾಸರು , 4114 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಗಿರಿತನುಜಾ ತನಯಂ ವಂದೇತಂ ಪ ಹರಿಹರ ವಿನುತಂ ಸುರಪತಿನಮಿತಂ ಕರಧೃತ ಪಾಶಾಂಕುಶ ದಯಭರಿತಂ ಅ.ಪ ಸಾಮಜವದನಂ ಮಣಿಮಯರದನಂ ಹೇಮಾಂಬರಧರ ಕರುಣಾಸದನಂ ಕಾಮಿತ ಫಲದಂ ಸರಸಿಜನಯನಂ ಶ್ರೀಮಾಂಗಿರಿವರದಾ ಭಾವಿತಮದನಂ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಗಿರಿಧರ ಗೋಪಾಲ | ಗಾನವಿಲೋಲ ಪ ವರನೀಲೋತ್ಪಲ ಶ್ಯಾಮಲ ಕೋಮಲ ಕರುಣಾಲವಾಲಾ ಗೋಪಾಲಬಾಲ ಅ.ಪ ಸಕಲ ಚರಾಚರ ಭರಿತ ಸುಖಂಕರ ಬಕಶಕಟಾಸುರನಿಕರ ಭಯಂಕರ ಶುಕಮೌನೀಶ್ವರನುತ ಕರುಣಾಕರ ಸುಕುಮಾರಾಂಗ ರಾಜಿತ ಮಾಂಗಿರಿವರ 1
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್
ಗಿರಿರಾಜ ಗಿರಿರಾಜ ಪ ತರಣಿಶತ ರುಚಿರ ತೇಜ ವೆಂಕಟ ಅ.ಪ. ತ್ರಿಜಗ ವಿ ಕರ ಸಮೀರಾಶನ 1 ಪಿನಾಕಿ ನಿಕರವನಾಳ್ವ ಲೋಕೈಕ ಶರಣ್ಯ 2 ನಂಬಿದ ಭಕುತ ಕುಟುಂಬಿಯೆಂಬದಂಬು ಜಾಂಬಕ ಬಲ್ಲೆ ಕೃಪಾಂಬುಧಿ ಕರುಣಿಸು 3 ಮನಸಿಜಪಿತ ನನ್ನ ಅನುದಿನ ಮಾಡೋ 4 ಸಟೆಯಲ್ಲೀ ನುಡಿ ದಿಟವೆಂಬುದು ಬುಧ ಕಟಕ ಜಗನ್ನಾಥ ವಿಠಲ ವಿಹಂಗಪ 5
--------------
ಜಗನ್ನಾಥದಾಸರು
ಗಿರಿರಾಜ ಚಿತ್ತವುದಾರ ಜೀಯಾ | ನಾ ನಿನ್ನ ಪಾದಕ್ಕೆರಗಿ ಯಾಚಿಸುತಲಿ ಮುಗಿವೆನು ಕೈಯಾ | ನೆರೆ ನಂಬಿದವರನುಎರವು ಮಾಡಲು ನಿನಗೊಳಿತೇನಯ್ಯಾ | ಪಿಡಿ ಬೇಗ ಕೈಯಾ ಪ ಕರುಣಿಗಳರಸನೆ ಕಾಮಿತ ಫಲದನೆ ಕರಿರಾಜನ ಭೀಕರ ಹರ ವಂಕಟ ಅ.ಪ. ಅಪಾರ ಮಹಿಮಾ ಆಪದ್ಬಂಧೂ | ಆಪನ್ನರ ಪಾಲಿಪ ವ್ಯಾಪಾರ ನಿನಗಲ್ಲದೆ ಮತ್ತೊಂದೂ | ನಾ ಕಾಣೆನೊ ಜಗದಿಭೂಪಾನೆ ಭೂಮಾ ಗುಣ ಗಣ ಸಿಂಧೂ | ಸ್ವಾಮಿಯೆ ಸಿರಿಗೆಂದೂ ||ಪಾಪದ ಪಂಕವು ಲೇಪವಾಗದಂ | ತೀ ಪರಿಪಾಲಿಸೊ ಶ್ರೀಪತಿ ಅಂಜನ 1 ತರು ಜಾತಿ ಮೃಗಪಕ್ಷಿಗಳಾಕಾರ | ಮೊದಲಾದ ರೂಪದಿಸುರರೂ ಕಿನ್ನರರೂ ತಮ್ಮ ಪರುವಾರ | ಒಡಗೂಡಿ ನಿನ್ನಾಶರಣರ ಚರಣಾರಾಧನೆಗೆ ವಿಸ್ತಾರ | ಈ ಬಗೆ ಶೃಂಗಾರಾ ||ದೊರೆತನ ಠೀವಿಗೆ ಧರಣಿ ಮಂಡಲದಿ | ಸರಿಗಾಣೆನೊ ಹೇ ತಿರುಪತಿ ವೆಂಕಟ 2 ಫಣಿ 3 ಕಲಿಯುಗದೊಳಗೀ ಪರ್ವತದಲ್ಲಿ | ಸರಿಗಾಣೆನೊ ಎಂದುನೆಲೆಸೀದೆ ನೀನೆ ಈ ಸ್ಥಳದಲ್ಲಿ | ವೈಕುಂಠಕಿಂತನೆಲೆಯಾ ವೆಗ್ಗಳವೆಂದು ನೀ ಬಲ್ಲಿ | ಅದ ಕಾರಣದಲ್ಲಿ ||ಜಲಜ ಭವಾದ್ಯರು ಒಲಿದೊಲಿಯುತ | ತಲೆದೂಗುವರೈ ಭಳಿರೆ ಕಾಂಚನ 4 ಸುವರ್ಣ ಮುಖರಿ ತೀರವಾಸ | ಆ ಬ್ರಹ್ಮೋತ್ಸವನವರಾತ್ರಿಯಲ್ಲಿ ನೋಡಲು ಶ್ರೀಶ | ಸಂ ಪದವಿಯನಿತ್ತುಕಾವನು ಕಲುಷದ ಭಯ ಬರಲೀಸ | ಶ್ರೀ ಶ್ರೀನಿವಾಸ ||ಶ್ರೀವರ ಭೂಧರ ವ್ಯಾಸವಿಠಲ* ಪ | ರಾವರೇಶ ಶ್ರೀ ದೇವನೆ ದೇವಾ 5
--------------
ವ್ಯಾಸವಿಠ್ಠಲರು
ಗಿರಿರಾಯಾ ಗಿರಿರಾಯಾ ಪ ಶರಣಾಗತರಿಗೆ ಕರುಣಾಕರ ವೆಂಕಟಅ.ಪ ಸ್ಮರಿಸುವೆ ನಿನ್ನನು ಸರಸಿಜಭವನುತ ಸ್ಮರತಾಮರತರು ದುರಿತವಿದೂರ 1 ಶ್ರೀಕರಭವಭಯ ನೂಕಿಸಿ ಎನ್ನನು ಸಾಕೆಲೋ ಭೂಧರಸೂಕರರೂಪ 2 ಆಪದ್ಬಾಂಧವ ಶ್ರೀಪತಿ ಎನ್ನನು ಕಾಪಾಡೆಲೊ ಸಕಲಾಪದ್ಧರ ವೆಂಕಟ3 ಕಾಮಿತ ಫಲಪ್ರದ ಈ ಮಹೀತಳದೊಳು ಸಾಮಜವರದ ಸುಧಾಮನ ಸಖ ಪೊರಿ 4 ದಾತಗುರುಜಗನ್ನಾಥವಿಠಲ ಪ್ರೀತನಾಗೊ ನಿನ್ನ ದೂತನು ನಾನೈ 5
--------------
ಗುರುಜಗನ್ನಾಥದಾಸರು
ಗಿರೀಶಮಾಮವ ಕರುಣ ಸುಧಾಬ್ಧೆಹರಶಂಕರ ಪಾವನ ವೇಷ ರಜತಾದ್ರಿವರವರ ತುಹಿನಾಂಶು ಶೇ-ಖರವಿಭೋ ಮಹೇಶ್ವರ ಪ ಸನ್ನುತ ಘನರೂಪಸ್ಫುರದುರಗಾಧಿಪ ಸುಕಲಾಪಸಮುದಂಚಿತ ಮಂಗಲತರರೂಪ1 ಘನತರ ತ್ರಿಪುರ ದಹನ ಶೂರವೃಷವಾಹನ ದುರ್ಗಾರ್ಧಶರೀರಮದನಾಂತಕವಾರಿಧಿಗಂಭೀರ 2 ಪ್ರವಿಮಲ ಮೃಗಧರ ಸರ್ವೇಶಶಮಿತಾಂಧಕ ಸಾಧಿತ ಬಹುದೋಷಾಶಶಿಕಂಧರ ಬಂಧುರ ಶುಭಕೋಶಸಾಕ್ಷಾತ್ಕೆಳದೀಶ್ವರ ರಾಮೇಶ 3
--------------
ಕೆಳದಿ ವೆಂಕಣ್ಣ ಕವಿ
ಗುಣವಂತರ ಗುಣವ ಗುಣವಂತನರಿವನುಗುಣಹೀನ ಗುಣವಂತನ ಗುಣವೇನ ಬಲ್ಲನೋ ಪ ಕಮಲಗಳ ಹೃದಯ ಭ್ರಮರಕ್ಕೆ ತಿಳಿಯುವುದುಕಮಲಗಳ ಗುಣ ಕಪ್ಪೆಗೇನು ತಿಳಿವುದೋವಿಮಲರಾ ಹೃದಯ ವ್ಯುತ್ಪನ್ನರಿಗೆ ಹೊಳೆಯುವುದುಕುಮತಿಗಳಿಗೆ ಕೋಮಲರ ಘನತೆಯೆಂತರಿವುದೋ 1 ಕೆಚ್ಚಲೊಳಿರುತಿಹುದು ಕರುವಿಗೆ ದೊರಕುವುದುಕೆಚ್ಚಲ ಕಚ್ಚಿರುವ ಉಣ್ಣೆಗದು ದೊರೆವುದೋಸಚ್ಚರಿತ್ರರ ಬೋಧೆ ಸತ್ಪುರುಷಗಂಟುವುದುಹುಚ್ಚ ತಾ ಬದಿಯಿದ್ದರೆ ಪರಿಣಾಮವೇನಹುದೋ 2 ಸಾಧುಗಳ ಮಹಿಮೆಯ ಸಾಧುಗಳ ಹೃದಯವುಸಾಧುಗಳ ಬೋಧೆಯ ಸಾಧು ಸಹವಾಸಬೋಧ ಚಿದಾನಂದ ಬಗಳೆಯಾದವರಿಗರಿವುವಾದಿಯಾಗಿಹ ಮೂರ್ಖರಿಗೆ ಗುಣವೇನು ತಿಳಿಯುವುದೋ 3
--------------
ಚಿದಾನಂದ ಅವಧೂತರು
ಗುಣಿಸುವೆ ಗಣನಾಥಾ ಪ ಗುಣಗಣ ಚರಿತನೆ ಗುಣದೊಳು ಮೊದಲಿಗನೆಂದು ಸಾರಿ ಸಾರಿ ನಿನ್ನ ಅ.ಪ. ಎಂದಿಗು ನಿನ್ನ ಪದದ್ವಂದ್ವ ನಂಬಿದ ಕಂದನ ಮಾತ ಲಾಲಿಸೊಇಂದುವರಿಯ ಎನ್ನ ಮಂದಿರದೊಳು ಬಂದು ತಂದೆ ಕರುಣದಿ ಪಾಲಿಸೊ 1 ಮಾರ ತಾಪಕೆ ಶಿಲುಕಿ ಮಾರಿ ಮೋರೆಯ ನೋಡಿ ಮರುಳಾದೆನೊಮಾರನನುಜನೆ ಎನ್ನ ಗಾರುಮಾಡದೆ ಪೊರೆಯೊ ನಿನ್ನ ಪಾದಕೆರಗಿದೆನಯ್ಯ 2 ಉಜ್ಜಿ ಕೂಪವ ನೋಡಿ ಮೆಚ್ಚಿ ಬಲುಪರಿ ಹುಚ್ಚನಾದೆನೊ ದೇವಾ ಇಚ್ಛೆ ಪೂರೈಸೊ ನಮ್ಮಸ್ವಚ್ಛ ತಂದೆವರದಗೋಪಾಲವಿಠಲನರ್ಚಕ 3
--------------
ತಂದೆವರದಗೋಪಾಲವಿಠಲರು
ಗುರು ಚರಣವನು ಸಂಸ್ಮರಿಸಿರೋ ಪಗುರು ಲಕ್ಷ್ಮಿ ವರಜಾತ | ಗುರು ಲಕ್ಷ್ಮಿಪ್ರಿಯ ತೀರ್ಥ ಚರಣ ಸರಸಿಜ ಭಜಿಸೆ | ಕರಣದಂತರ ಬಾಹ್ಯ ಪರಿಶುದ್ಧಿಯನೆ ಗೈದು | ಜ್ಞಾನ ಭಕ್ತಿಯನಿತ್ತು ಹರಿ ಪೊರೆವ ಸಂತತದಲಿ ಅ.ಪ. ಪೂರ್ವಾಶ್ರಮಾ ನಾಮ | ಭೂವಿಬುಧ ಕೃಷ್ಣಾಖ್ಯ ದೇವರಾಯನ ದುರ್ಗ | ದಾವ ನರಸೀಪುರದಿಆವಾಸಿಸುತ್ತಿರಲು | ಓರ್ವ ಸಖನಿವರ ಜ್ಞಾನಾನುಸಂಧಾನದಾ |ಭಾವ ತಿಳಿಯುತ ಮನದ | ಯಾವ ದೊಂದಭಿಲಾಷೆನೀವು ಸಲಿಸುವುದೆನ್ನೆ | ಆವುದೆನುತಲಿ ಕೇಳೆಯಾವ ಪನಸದ ಫಲವ | ಆಸ್ವಾದು ಮಧು ಒಡನೆಓವಿ ಕರಡಿಯು ಕಲಸಿದ 1 ಅದರ ಪ್ರಾಪುತಿಗಾಗಿ | ಬದಿವನನೊಂದಿನವುಬೆದರದಲೆ ಪೊಗುತಿರಲು | ಎದುರೊಂದು ಶಿಲೆ ಮೇಲೆವದಗಿ ಕಲಸಿದ ಕಂಡು | ಅದರೊಡನೆ ಮರನೇರೆ ಬಂದಿತದು ಮರಿಗಳೊಡನೆ |ಅದಕು ಇವರಿಂಗಾಯ್ತು | ಕದನವೂ ಕೆಲಕಾಲ ಒದಗೆ ಜಯ ವಿಬುಧರಿಗೆ | ಹದುಳದಲಿ ಗೃಹಸೇರಿಮುದದಿಂದ ಶ್ರೀಹರಿಯ | ಪದ ಸ್ಮರಣೆಯಲ್ಲವರು ದಿನಗಳನೆ ಕಳೆಯುತಿಹರು 2 ಯತಿ ಲಕ್ಷ್ಮಿ ವರರಿಂದ | ಯತಿಗಳಾಶ್ರಮ ಪೊಂದಿಹಿತದಿಂದಲಾ ಬೂದಿ | ನೆತ್ಯಾಖ್ಯ ಗ್ರಾಮದಲಿಸ್ಥಿತರಾಗಿ ಶಿಷ್ಯರಿಗೆ | ಹಿತದ ಉಪದೇಶವ ಪ್ರೀತಿಯಲಿ ಮಾಡುತಿರಲು |ಯತಿಗಳಾಶ್ರಮದಲ್ಲಿ | ಮತಿ ವಂತ ವಿಪ್ರೋರ್ವಕ್ಷಿತಿಯೊಳಾ ನಾಕನಿಭ | ಮಂತ್ರ ಮಂದಿರ ಸೇವೆ ಅತಿಹಿತದಲೆಸಗುತಿರೆ | ಯತಿಗಳಾಶೀರ್ವದಿಸೆ ಪಥವಾಯ್ತು ಪ್ರಿಯರಲ್ಲಿಗೇ 3 ಪತಿ ಸೇವೆ | ಯುಕುತನಾಗಿರಲ್ವೊರೆದು ನಾಲ್ವತ್ತು ದಿನ ಮಿತಿಯಲಿ |ಕಕುಲಾತಿ ತೊರೆದು ನಿಜ | ಭಕುತಿಯಿಂ ಗೈವುತಿರೆಲಕುಮಿ ಪ್ರಿಯರಾಚಾರ | ಉಕುತಿಯಲಿ ದುರ್ಭಾವಪ್ರಕಟವಾಗಲು ಮನದಿ | ಬಂಕಪುರ ಮಾರ್ಗವನೆ ತೆರಳಲನುವಾದನೂ 4 ಮತ್ತೆ ನರಹರಿ ತಾನು | ವ್ಯಕ್ತಯಿಂತೈಜಸನುಒತ್ತಿಪೇಳಲು ಬುಧನು | ಮತ್ತೆ ಗುರುಪದಕೆರಗಿಬಿತ್ತರಿಸೆ ತನ್ನಸ್ವಪ್ನ | ವಾರ್ತೆಗಳ ವಿಶ್ವಮಿತ್ರನ ಭಾವವನೆ ತೋರುತ |ಇತ್ತಲಿಂದೆರಡೊರ್ಷ | ಕಿತ್ತಪೆವು ಆಶ್ರಮವಆರ್ಥಿಯಿಂದಿರುತಿರ್ದು | ಹಸ್ತಿವರದನ ಸೇವೆಉತ್ಸಹದಲೆಸಗುವುದೆ | ನುತ್ತಲಾಶೀರ್ವದಿಸಿ ಚಿಂತಿಸುತ್ತಿರೆ ಹರಿಯನು 5 ಗ್ರಾಮದೊಳಗುಳ್ಳ ಖಲ | ಸ್ತೋಮ ಬಂದಡರುತ್ತಭೂಮಿ ಗೋಸುಗ ಕಲಹ | ಸೀಮೆ ಮೀರುತ ಗೈಯ್ಯೆಅ ಮಹಾಯತಿವರ್ಯ | ಭೂಮಿ ಕೃಷ್ಣಾಂಕಿತವುಕಾಮನೆಯ ಬಿಡಿರೆನುತಲಿ | ನೇಮದಲಿ ಘರ್ಜಿಸಲು |ಆ ಮಹಾ ದುಷ್ಟಜನ ಈ ಮರದ ಸಂಪದವ ಕಾಮಿಸುತ ಮನದಲ್ಲಿನೇಮದಿಂ ಪತ್ರೋರ್ವ | ಪಾಮರನ ಒಡನವರು ಯಾಮ ಸಂಜೆಲಿ ಕಳುಹಲು 6 ಪರಿವಾರ ಜನಕೆಲ್ಲ | ಇರುವ ನೆಲೆ ಬಿತ್ತರಿಸಿಸರಿಯುತಲಿ ಸುಕ್ಷೇಮ | ನೆರೆಯ ಸಾರುವುದೆನುತಒರೆಯಲೂ ಕೆಲವರು | ಮರೆಮಾಡಿ ತೃಣ ಬಣವಿ ನೆರೆ ಬಿಡದೆ ಸಾರುತಿರಲು |ವರನಿಶೀ ಸಮಯದಲಿ | ದುರುಳರೆಲ್ಲರು ಮಠಕೆಬರಬರುತ ಕವಣೆಕಲ್ | ನೆರೆಬೀರ್ವ ಜನಗಳೂಉರಿವ ತೃಣ ಬಣವಿಯಂ | ದುರೆ ಜ್ವಾಲೆ ಪರಿಕ್ರಮಣ ಭಯ ಭ್ರಾಂತಿಯಿಂದಿರುತಿರೆ 7 ಸಿರಿ ಹರಿಯ ನಮಿಸುತಿರಲು 8 ಪರಿ | ಚರರಿಘರಸುತ್ತ ಬಲುಪರಿಯ ಹರಿ ಮಹಿಮೆಗಳ | ಒರೆಯುತಾನಂದಾಶ್ರೂ ಸುರಿಸುತವ ಶೇಷನಿಶಿ | ಹರಿಕರುಣ ಸ್ಮರಣೆಯಲಿ ಸರಿಸಿದರು ಶಿಷ್ಯರೊಡನೇ 9 ಗರ ಮಿಶ್ರ | ಯತಿಗೆ ಬಡಿಸೇ ಜೀರ್ಣಿಸುತ ಪಾಪಿ ವಿಪ್ರರ್ಗೆ | ಗತಿಸಿದವು ಅಕ್ಷಿಗಳು ಮೃತ್ಯಂತಲಂದರಾಗಿ 10 ಗರ ಮಿಶ್ರ | ಸತ್ಯವಾದುದ ಕಂಡು ಪ್ರೋಕ್ಷಿಸಲು ಶಂಖದುದಕ |ವ್ಯಕ್ತವಾಯಿತು ಇವರ | ಉತ್ತುಂಗ ಮಹಿಮೆಗಳುಹಸ್ತಿವರದನು ಭೋಜ್ಯ | ವಸ್ತುಗಳ ಸ್ವೀಕರಿಸಿದತ್ತ ಮಾಡಲು ಪುನಃ | ಮತ್ತೆ ಜೀರ್ಣಿಸಿಕೊಂಡು ಹರಿಯನ್ನೆ ಚಿಂತಿಸುತಲಿ 11 ನೆಲೆಸಿರಲ್ಲಬ್ಬುರೊಳು | ಗಳ ಗ್ರಾಹಕರು ಮತ್ತೆಮಿಳಿತರಾಗುತ ರಾತ್ರಿ | ಛಲವ ಸಾಧಿಸೆ ನಿಶಿತಅಲಗು ಕತ್ತಿಯ ಪಿಡಿದು | ನೆಲಕೆ ಯತಿ ಶಿರವನ್ನು ಇಳಹುವ ಮತಿ ಮಾಡಲೂ |ಒಲವಿನಿಂ ಯತಿಯಕುಲ | ತಿಲಕ ವೃಂದಾವನವ ಬಳಸಿ ನಮಿಸಲು ಸಂಜೆ | ಯಲಿ ಪೇಳ್ದ ಬ್ರಹ್ಮಣ್ಯಒಳ ಪೊಗುತಲಾರಾಮ | ನೆಲೆಸೇರಿ ಮಠಸಾರಿ ಎಂದೆನುತ ಎಚ್ಚರಿಸಿದರ್12 ಮತ್ಸರಿಗಳಿನ್ನೊಮ್ಮೆ | ಕುತ್ಸಿತದ ಬುದ್ಧಿ ಮಹಉತ್ಸವದ ಸಮಯದಲಿ | ಹೆಚ್ಚು ಜನ ಸಂಧಿಸಿರೆನೆಚ್ಚಿದ್ದ ಪಾಚಕರು | ಉಚ್ಚಳಿಸಿ ಕೆಲಸಾರೆ ಕೆಚ್ಚಿದೆಯನೇ ತೋರುತ |ಮುಚ್ಚಿಮಠದ್ವಾರಗಳ | ಹೆಚ್ಚುತಲಿ ಪಲ್ಯಗಳ ಮತ್ಸಕೇತನ ಪಿತನು | ಮೆಚ್ಚುವಂದದಿ ಪಾಕಪೆಚ್ಚಿಸುತಲಿ ಹರಿಯ | ಅರ್ಚನೆಯ ಕೈಕೊಂಡು ಮೆಚ್ಚಸಿದರು ಸುಜನರ 13 ಜ್ವರತಾಪದಿಂದೊಮ್ಮೆ | ನೆರೆ ಬಳಲು ವಂತಿರ್ಪಗುರುವರರ ಕಂಡೋರ್ವ | ವರ ಶಿಷ್ಯ ಪ್ರಶ್ನಿಸಲುನೆರೆ ಬದುಕ ಬೇಕೆಂಬ | ಶರಿರವನೆ ತೊರೆವೆ ನೆಂಬೆರಡುಕ್ತಿ ಸಲ್ಲದಿದಕೊ |ನರರಾಡಿ ಕೊಳದಂತೆ | ವರ ಭಿಷಜ ತಾಕೊಟ್ಟವರಗುಳಿಗೆ ನುಂಗುವೆವು | ಹರಿ ಪೂಜೆ ವಿರುದ್ಧಜ್ವರ ಕುಂಟಿ ಧನ್ವಣತ್ರಿ | ವರಮಂತ್ರ ಕೈ ಸೇರಿ ಪರಿಪರಿ ಮೆರೆಯುತಿರಲು 14 ಯತಿವರರ ಮಹಿಮೆಗಳ | ತುತಿಸಲೆನ್ನಳವಲ್ಲಯುಕ್ತಿಯಲಿ ಅಪವಾದ | ಹೊತ್ತು ಕೊಳದಲೆ ಅವರು ಜಿತ ಇಂದ್ರಿಯತ್ವವನು | ಮತಿಮತಾಂ ಸುಜನಕ್ಕೆ ಪ್ರತಿರಹಿತದಿಂ ತೋರುತ |ಹಿತದಿಂದ ಲಾರಾಮ | ಸೇತು ಯಾತ್ರೆಯ ಗೈದುಕ್ಷಿತಿ ಚರಿಸಿ ಬರಬರುತ | ಹಿತಶಿಷ್ಯ ವ್ಯಾಜದಿಂಸತ್ಯ ಧೀರ್ರನು ಚರರ | ಕೃತ ಬಹಿಷ್ಕರ ಗೆಲ್ದು ಶಾಂತತೆಯನೇ ತೋರ್ದರು 15 ವರಲಕ್ಷ್ಮಿ ಪ್ರಿಯ ತೀರ್ಥ | ಕರಗಳಿಂದರ್ಚಿತವುಪರಿಸರಾರ್ಚಿತ ಯೋಗ | ನರಹರಿಯು ವ್ಯಾಸಮುನಿವರದ ಗೋಪತಿ ಕೃಷ್ಣ | ಸಿರಿವ್ಯಾಸಯತಿ ರಚಿತ ಎರಡೇಳು ರಜತ ಪ್ರತಿಮೆ |ಗುರುವರ ಬ್ರಹ್ಮಣ್ಯ | ವರದ ವಿಠ್ಠಲದೇವಸರ್ವಜ್ಞರರ್ಚಿಸಿದ | ವರ ಶರಣ್ಯ ವಿಠಲನುನಿರುತ ಪೂಜಿತವಾಗಿ | ಶರಿರ ಭೌತಿಕ ಬಿಡುವ ವರ ಸಮಯ ತಾನುಸುರಿರೆ16 ಸಂತೈಸಿ ಇತ್ತರಾಶಿಷವ 17 ನೀಲ ಕಾಲ | ವರುಷವನು ಪೈಂಗಳವು | ಎರಡೊಂದನೇ ಮಾಸವರಶುಕ್ಲ ಹರಿದಿನದಿ | ಸರಿತು ವರ ಕಣ್ವತಟಪರಮ ಸುಕ್ಷೇತ್ರದಲಿ | ವರಯೋಗ ಮಾರ್ಗದಲಿ ದೇಹ ಹರಿಗರ್ಪಿಸಿದರು 18 ಜಯ ಜಯತು ಶುಭಕಾಯ | ಜಯಜಯತು ತಪಶೀಲಜಯ ಶಮೋದಮವಂತ | ಜಯ ಶಾಪನುಗ್ರಹನೆಜಯಲಕ್ಷ್ಮಿ ವರಜಾತ ಜಯಲಕ್ಷ್ಮಿ ಪ್ರಿಯ ತೀರ್ಥ ಜಯ ಜಯತು ವಿಶ್ವಮಿತ್ರ |ಪ್ರಿಯ ಗುರುಗಳಾಂತರ್ಯ | ಜಯ ದೇವ ನೋಳ್ಪರಮಪ್ರಿಯನಾದ ತಂದೆ ಮುದ್ದು | ಮೋಹನ್ನ ವಿಠಲಾತ್ಮಜಯ ಗುರೂ ಗೋವಿಂದ | ವಿಠ್ಠಲನ ಭಜಿಸಿದರೆ ನಯಸುವನು ಪರಮಗತಿಗೆ 19
--------------
ಗುರುಗೋವಿಂದವಿಠಲರು
ಗುರು ನಿಮ್ಮ ದಯವೆನಗಾನಂದೋದಯ ಸರಿಸೌಖ್ಯಕರನೀವÀ ಮಹದಾಶ್ರಯ ಧ್ರುವ ಗುರುನಿಮ್ಮ ಕೃಪೆನೋಟ ಎನಗನುಭವದೂಟ ಸುರಸಯೋಗದ ಆಟ ಪರಮನೀಟ ಗುರು ಸುಬೋಧದ ಕೂಡಿ ಎನಗೆ ನಿಜ ಘನ ಪ್ರಗಟ ಕರಕಮಲ ಭಯದಮಾಟ ವರಮುಗುಟ 1 ಗುರುನಿಮ್ಮ ದಯಕರುಣ ಎನಗೆ ಸಕಲಾಭರಣ ವರ ಪ್ರತಾಪದೆ ವಿಜಯಾನಂದಘನ ಗುರು ನಿಮ್ಮ ಶ್ರೀ ಚರಣ ಎನಗೆ ಬಳಗವು ಪೂರ್ಣ ಹರುಷಗತಿ ಸಾಧನ ಪರಮಘನ 2 ಗುರು ನಿಮ್ಮ ಬಲವೆ ಬಲ ಎನಗನುದಿನ ದೆಲ್ಯಚಲ ಹೊರುಹುತಿಹ ನಾಮನಿಜ ಸರ್ವಕಾಲ ತರಳ ಮಹಿಪತಿಗೆ ನೀಮಾಡುತಿಹ್ಯ ಪ್ರತಿಪಾಲ ಗುರು ಭಾನುಕೋಟಿತೇಜನೆ ಕೃಪಾಲ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಗುರು ಪಾಂಡುರಂಗ ವಿಠಲ | ಪರಿಪಾಲಿಸಿವನಾ ಪ ಕರಣ ನೀಯಾಮಕನೆ | ಕರುಣವನೆ ತೋರೀ ಅ.ಪ. ಕರ್ಮ ಸ್ವಾಮಿ | ಎತ್ತಿಕರ ಪಿಡಿಯೋ 1 ಕರ್ಮ ನೆರವಾಗಲಿವನೀಗೆಪರಮ ಪಾವನ ಮೂರ್ತೆ ಹರಿ ಪಾಂಡುರಂಗಾ 2 ಭವ ಕಳೆಯೋ 3 ಪದ್ಧತಿಯ ತಪ್ಪದಲೆ | ಮಧ್ವಮತದಂಗವನುಉದ್ಧರಿಸೊ ಇವನಲ್ಲಿ | ಪದ್ಮನಾಭಾಖ್ಯಾಈ ಧರೆಯ ಸಂಸಾರ | ಬದ್ಧ ಲೌಕೀಕಗಳತಿದ್ದಿ ವೈದಿಕವೆನಿಸೋ | ಹದ್ದು ವಾಹನನೇ4 ಕೃದ್ಧಖಳ ಸಂತತಿಯ | ಒದ್ದು ಕಳೆಯುತ ಹರಿಯೆಹೃದ್ಗುಹದಿ ಮೈದೋರೊ | ಶಬ್ಧಗೋಚರನೇಮಧ್ವಾಂತರಾತ್ಮ ಗುರು | ಗೋವಿಂದ ವಿಠ್ಠಲನೆಮದ್ವಚನ ಸಲಿಸೆಂದು | ಪ್ರಾರ್ಥಿಸುವೆ ಹರಿಯೇ 5
--------------
ಗುರುಗೋವಿಂದವಿಠಲರು
ಗುರು ಪ್ರಜ್ಞಾನಿಧಿ ತೀರ್ಥ ಚರಣಾಬ್ಜ ಸೇವೆಯ ನಿರುತ ನೀಡಯ್ಯ ಯತಿವರ್ಯ ಯತಿವರ್ಯ ಪೂರ್ಣಪ್ರಜ್ಞಾರ್ಯರ ತತ್ತ್ವವರುಹಯ್ಯ ಅರುಹಯ್ಯ 1 ಕರುಣಾನಿಧಿಯೆ ನಿನ್ನ ಕಾರುಣ್ಯಕೆಣೆಯೆ ಶ್ರೀ ಕಾರುಣ್ಯ ವಿಠಲನಾ ದಯಾಪಾತ್ರ ದಯಾಪಾತ್ರ ಎನ್ನ ತಾಪತ್ರಯವ ಎನ್ನ ತಾಪತ್ರಯವ ಹರಿಸಿ ಸಲಹಯ್ಯ 2 ಶರಧಿ ದಾಟಿದ ಧೀರಾ ಗುರುತೂರ್ಯ ಶ್ರಮವಹಿಸಿ ಮೆರೆಯುವೆ ಮೆರೆಯುವೆ 3 ಮಾರ್ಗದೊಳು ಬರುತಿಹ ದುರ್ಮಾರ್ಗವನು ಜರಿದು ಸ ಯತಿವರ್ಯ ಎನ್ನ ಭವ ದುರ್ಗವನೆ ಹರಿಸಿ ಸಲಹಯ್ಯ ಸಲಹಯ್ಯ 4 ಗುರುವೆ ನಿನ್ನಯ ಕರುಣ ಕವಚವನೆ ತೊಡಿಸಯ್ಯ ಕಾರುಣ್ಯ ವಿಠಲನ ಅರ್ಚಿಪೆ ಅರ್ಚಿಪಾ ನಿನ್ನೊಳು ಕರುಣಾರಸಕೆ ಕುಂದುಂಟೆ ಕುಂದುಂಟೆ 5 ಹಿಂದಿಲ್ಲ ಮುಂದಿಲ್ಲ ಒಂದು ಬೋಧಿಪೋರಿಲ್ಲ ಮುಂದೆ ಬಾ ಎನ್ನುವರು ಮೊದಲಿಲ್ಲ ಮೊದಲಿಲ್ಲ ಇಂದು ನಾ ಮಂದನಾಗಿಹೆ ಎನ್ನ ಕರುಣಿಸೋ ಕರುಣಿಸೋ 6 ಬಂದುದಾಯಿತು ಜನ್ಮ ಸಂದು ಹೋಯಿತು ಆಯು ಕುಂದಿತೆನ್ನಯ ಕರಣ ಇಂದಿನಾ ಇಂದಿನಾ ಪರಿ ಪಥವೆನಗೆ ತೋರಯ್ಯ ತೋರಯ್ಯ7 ಮಂಕು ಮಾನವನ ಮನ ಡೊಂಕವನೆ ತಿದ್ದಿ ಶ್ರೀ ವೇಂಕಟೇಶನ ಭಕ್ತನೆನಿಸಯ್ಯ ಎನಿಸಯ್ಯ ನಿನ್ನಾ ಕಿಂಕರೊಳಗೆ ಕಿಂಕರನೆನಿಸಯ್ಯ 8 ಕಾರುಣ್ಯವಿಠಲಾಭಿನ್ನ ಶ್ರೀ ಉರಗಾದ್ರಿವಾಸವಿಠಲನ ನಿಜದಾಸ ನಿಜದಾಸ ನೀ ಪರಮೋದಾರ ಗುರುವರ್ಯ ಯತಿವರ್ಯ 9
--------------
ಉರಗಾದ್ರಿವಾಸವಿಠಲದಾಸರು
ಗುರು ಮಧ್ವೇಶ ವಿಠಲ | ಪೊರೆಯ ಬೇಕಿವಳ ಪ ಪರಮ ಭಕುತಿಲಿ ನಿನ್ನ | ದಾಸ್ಯ ಕಾಂಕ್ಷಿಪಳ ಅ.ಪ. ಹರಿಗುರೂ ಸದ್ಭಕ್ತಿ | ಹಿರಿಯರಲಿ ಅಸಕ್ತಿನಿರುತ ಕರುಣಿಸಿ ಇವಳ | ಪೊರೆಯೊ ಹರಿಯೇ |ಅರುಹ ಲೇನಿಹುದಿನ್ನು | ಸರ್ವಜ್ಞ ನೀನಿರುವೆಕರುಣದಲಿ ಪೊರೆಯೆಂದು | ಪ್ರಾರ್ಥಿಸುವೆ ಹರಿಯೇ 1 ಕೃದ್ಧಖಳ ಜನರನ್ನು | ಪ್ರಧ್ವಂಸ ಮಾಡುತಲಿಬುದ್ಧಿಯೊಳು ನೀ ನಿಂತು | ವಿದ್ಯೆ ಪ್ರದನಾಗೋಮಧ್ವಮತ ಪದ್ಧತಿಗಳುದ್ಧರಿಸಿ ಇವಳಲ್ಲಿಪದ್ಮನಾಭನೆ ಪೊರೆಯೊ | ಮಧ್ವಾಂತರಾತ್ಮಾ 2 ಕಂಸಾರಿ ಹರಿಯೇ 3 ನಿನ್ನ ಪ್ರೇರಣೆಯಂತೆ | ಕನ್ಯೆಗಂಕಿತವಿತ್ತೆನನ್ನೆಯಿಂ ಪೊರೆಯಿವಳ ಪನ್ನಂಗ ಶಯನಾ |ನಿನ್ನಂಥ ಕರುಣಾಳು | ಅನ್ಯರಾರಿಹರಯ್ಯಪನ್ನಗಾರಿಯ ವಾಹ | ಅನ್ನಂತ ಮಹಿಮಾ 4 ಪಾವನಾತ್ಮಕ ದೇವ | ಸಾರ್ವಕಾಲದಿ ನಿನ್ನಪಾವನ ಸ್ಮøತಿಯಿತ್ತು | ಶರ್ವವಂದ್ಯಾ ಭಾವದೊಳು ಮೈದೋರಿ | ಕಾವ್ಯದನೆ ಬಿನ್ನಪವಾನೀ ವೊಲಿದು ಸಲಿಸೊ ಗುರು | ಗೊವಿಂದ ವಿಠಲಾ 5
--------------
ಗುರುಗೋವಿಂದವಿಠಲರು
ಗುರು ಮುಖ್ಯಪ್ರಾಣದರಸನೆ ನೀ ಎನ್ನ ಕರುಣಿಸು ಕೃಪೆಯಿರಿಸು ಪ. ನಿತ್ಯ ಪರಿಪೂರ್ಣನಾಗುತ ಪರಮಾತ್ಮನ ಮತಕನುಸರಿಸಿ ಧರೆಗೆ ಭಾರವಾದ ದುರುಳರ ವಧೆಗೈದ ಮರುತಾತ್ಮಜ ಮನೋಹರ ಮೂರುತಿಯಾದ 1 ರಾಮನಪ್ಪಣೆಯಿಂದ ಆ ಮಹಾಂಬೋಧಿಯ ಭೀಮ ವಿಕ್ರಮನುರೆ ದಾಂಟಿ ಬಂದು ರಾಮಣೀಯಕರವಾದ ರಾಮಮುದ್ರಿಕೆಯನ್ನು ತಾ ಮಣಿಯುತ ಸೀತಾ ಮಾನಿನಿಗಿತ್ತ 2 ಆ ಮಹಾಲಕ್ಷ್ಮಿಯ ನೇಮವ ಕೈಗೊಂಡು ತಾಮಸಿಚರರ ನಿರ್ನಾಮಗೈದು ಹೇಮಲಂಕೆಯನುರೆ ಹೋಮವಗೈಯುತ ಚೂಡಾಮಣಿ ತಂದಿತ್ತ 3 ಕ್ರೂರ ಕೌರವಕುಲ ಘೋರ ಕಾನನಕೆ ಕು- ಠಾರನಾಗುತಲಿ ಸಂಹಾರಗೈದು ವಾರಿಜಾಕ್ಷನ ಕೃಪೆಯಿಂದ ಮಾಗಧನನ್ನು ಚೀರಿದ ಕುಂತಿಕುಮಾರ ಮೂರ್ಲೋಕದ 4 ಹರಿ ಸರ್ವೋತ್ತಮನೆಂದು ಧರೆಗೆ ಸಾರುತ ಬಂದು ವರ ವೈಷ್ಣವಮತ ಸ್ಥಿರವ ಮಾಡಿ ಧರಣಿಯೊಳಗೆ ತಾತ್ವರ್ಯನಿರ್ಣಯವೆಂಬ ಪರಮ ಗ್ರಂಥವಗೈದ ಗುರು ಮಧ್ವಾಚಾರ್ಯನೆ 5 ಇಂತೀ ಮೂರವತಾರವಾಂತು ದಾನವರಿಂಗೆ ಸಂತಾಪಗೈದ ಮಹಾತುಮನೆ ಚಿಂತಿತಾರ್ಥವನೀವ ಚಿಂತಾಮಣಿ ಎಂದು ಸಂತತ ಭಜಿಪೆನು ಶಾಂತ ಹುನುಮಂತನೆ 6 ಶ್ರೀ ರಾಘವ ಲಕ್ಷ್ಮೀನಾರಾಯಣನ ಪಾದ- ಚಾರಕನಾದ ಗಂಭೀರನಿಗೆ ನೀರಜಾಂಡದೊಳಾರು ಸಮಾನರು ಕ್ಷಿರಸಾಗರಶಯನ ನೀನೊಬ್ಬನಲ್ಲದೆ 7
--------------
ತುಪಾಕಿ ವೆಂಕಟರಮಣಾಚಾರ್ಯ
ಗುರು ಮುಖ್ಯಪ್ರಾಣದರಸನೆ ನೀ ಎನ್ನ ಕರುಣಿಸು ಕೃಪೆಯಿರಿಸು ಪ. ನಿತ್ಯ ಪರಿಪೂರ್ಣನಾಗುತ ಪರಮಾತ್ಮನ ಮತಕನುಸರಿಸಿ ಧರೆಗೆ ಭಾರವಾದ ದುರುಳರ ವಧೆಗೈದ ಮರುತಾತ್ಮಜ ಮನೋಹರ ಮೂರುತಿಯಾದ 1 ರಾಮನಪ್ಪಣೆಯಿಂದ ಆ ಮಹಾಂಬೋಧಿಯ ಭೀಮ ವಿಕ್ರಮನುರೆ ದಾಂಟಿ ಬಂದು ರಾಮಣೀಯಕರವಾದ ರಾಮಮುದ್ರಿಕೆಯನ್ನು ತಾ ಮಣಿಯುತ ಸೀತಾ ಮಾನಿನಿಗಿತ್ತ 2 ಆ ಮಹಾಲಕ್ಷ್ಮಿಯ ನೇಮವ ಕೈಗೊಂಡು ತಾಮಸಿಚರರ ನಿರ್ನಾಮಗೈದು ಹೇಮಲಂಕೆಯನುರೆ ಹೋಮವಗೈಯುತ ಚೂಡಾಮಣಿ ತಂದಿತ್ತ 3 ಕ್ರೂರ ಕೌರವಕುಲ ಘೋರ ಕಾನನಕೆ ಕು- ಠಾರನಾಗುತಲಿ ಸಂಹಾರಗೈದು ವಾರಿಜಾಕ್ಷನ ಕೃಪೆಯಿಂದ ಮಾಗಧನನ್ನು ಚೀರಿದ ಕುಂತಿಕುಮಾರ ಮೂರ್ಲೋಕದ 4 ಹರಿ ಸರ್ವೋತ್ತಮನೆಂದು ಧರೆಗೆ ಸಾರುತ ಬಂದು ವರ ವೈಷ್ಣವಮತ ಸ್ಥಿರವ ಮಾಡಿ ಧರಣಿಯೊಳಗೆ ತಾತ್ವರ್ಯನಿರ್ಣಯವೆಂಬ ಪರಮ ಗ್ರಂಥವಗೈದ ಗುರು ಮಧ್ವಾಚಾರ್ಯನೆ 5 ಇಂತೀ ಮೂರವತಾರವಾಂತು ದಾನವರಿಂಗೆ ಸಂತಾಪಗೈದ ಮಹಾತುಮನೆ ಚಿಂತಿತಾರ್ಥವನೀವ ಚಿಂತಾಮಣಿ ಎಂದು ಸಂತತ ಭಜಿಪೆನು ಶಾಂತ ಹುನುಮಂತನೆ 6 ಶ್ರೀ ರಾಘವ ಲಕ್ಷ್ಮೀನಾರಾಯಣನ ಪಾದ- ಚಾರಕನಾದ ಗಂಭೀರನಿಗೆ ನೀರಜಾಂಡದೊಳಾರು ಸಮಾನರು ಕ್ಷಿರಸಾಗರಶಯನ ನೀನೊಬ್ಬನಲ್ಲದೆ 7
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ