ಒಟ್ಟು 4950 ಕಡೆಗಳಲ್ಲಿ , 127 ದಾಸರು , 3086 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದಾಸರಾಯಾ ಎನ್ನ | ಬೆಂಬಿಡದಲೆ ಕಾಯೋ ಬಹು ಪರಿಯಿಂದ ದಾಸರಾಯಾ ಪ ಈರೇಳು ವರುಷವಾರಂಭಿಸಿ ಪ್ರತಿದಿನ | ದಾಸರಾಯ ಜಾವು ಮೂರುಗಳಲ್ಲಿ ಮುಕುಂದನ ಚರಣವ | ದಾಸರಾಯಾ | ಚಾರು ಮನಾಬ್ಜದಿ ಬಹಿರದಿ ಬಗೆ ಬಗೆ | ದಾಸರಾಯಾ | ಭೂರಿ ಭಕುತಿ ಭರಿತನಾಗಿ | ದಾಸರಯ್ಯಾ1 ಪುಂಗವ ಸುಮತೀಂದ್ರ ರಾಯ ಕರೆದ ನಿನ್ನ | ದಾಸರಾಯಾ | ಸಂಗೀತ ರಸನ ಪಾನಮಾಡಿ ಹರುಷದಿ | ದಾಸರಾಯಾ | ಹರಿ | ಡಿಂಗರೊಳುತ್ತುಂಗನೆನಿಸಿಕೊಂಡೆ ದಾಸರಾಯ 2 ಕುಶಲಗಾನವ ಕೇಳಿ ಗುರುಸತ್ಯ ಪೂರ್ಣರು | ದಾಸರಾಯಾ | ಪರಾ ವಸುನಾಮ ಗಂಧರ್ವನವತಾರ ನೀನೆಂದು | ದಾಸರಾಯಾ | ಪೆಸರಿಟ್ಟರಂದು ವಿದ್ವಜ್ಜನ ಮೆಚ್ಚಲು ದಾಸರಾಯಾ | ಎನ ಗೊಶವಹುದೇ ನಿಮ್ಮ ಮಹಿಮೆ ಕೊಂಡಾಡಲು |ದಾಸರಾಯಾ | 3 ಚರಿಸಿದೆ ಪುಣ್ಯಕ್ಷೇತ್ರಗಳ ಭಕುತಿಯಿಂದ | ದಾಸರಾಯಾ | ಪ್ರತಿ | ವರುಷ ಬಿಡದೆ ಶೇಷಗಿರಿಯವಾಸನ | ದಾಸರಾಯಾ | ಪರಿಯಂತ | ದಾಸರಾಯಾ | ಪರಿ ಚರಿಯವ ಕೈಕೊಂಡು ಪಡೆದೆ ಮಂಗಳಗತಿ ದಾಸರಾಯ 4 ಮುನಿಯು ಉಪೇಂದ್ರರಾಯರು ನಿಮ್ಮ ಚರಿತೆಯ | ದಾಸರಾಯಾಕೇಳಿ ಸಾನುರಾಗದಿ ಸರ್ವ ಮಂತ್ರೋಪದೇಶವ | ದಾಸರಾಯಾ | ಆನುಪೂರ್ವಕಮಾಡಿ ಅತಿ ಸಂತೋಷದಿ | ದಾಸರಾಯಾ | ಕೊಟ್ಟರು ಶ್ರೀ ನರಸಿಂಹ ಪ್ರತಿಮೆ ಸಾಲಿಗ್ರಾಮ | ದಾಸರಾಯಾ | 5 ಕಿಂಕರನೆನಿಸಿ ಪರಂದರದಾಸರೆ | ದಾಸರಾಯಾ | ಅವರಿಂ ದಂಕಿತ ವಹಿಸಿ ನಿಶ್ಯಂಕೆಯಿಂದ ನೀನು ದಾಸರಾಯಾ | ಪೊಂಕವ ಪೊಗಳುತ ಪೊಡವಿಯೊಳು ಚರಿಸಿದೆ | ದಾಸರಾಯಾ|ಭವ ಪಂಕವ ದಾಟ ಪರೇಶನನೈದಿದೆ | ದಾಸರಾಯಾ 6 ಪರಿಯಂತ ಕರ ಒಡ್ಡಲೊಲ್ಲೆನೆಂಬುವ ಛಲ | ದಾಸರಾಯಾ | ನಿನಗೆ ಸಲ್ಲಿತು ನಿಜ ಭಾಗವತರ ಪ್ರಿಯ | ದಾಸರಾಯಾ | ನಿಮ್ಮಾ ಅನುಭವೋಪಾಸನೆ ಏನು ತಿಳಿಯದು ದಾಸರಾಯಾ 7 ಕಮಲ ಧ್ಯಾನ ದಾಸರಾಯಾ | ಸ್ನಾನ ವರ ಮಂತ್ರ ಜಪ ತಪ ವಿಹಿತಾಚರಣೆಗಳು | ದಾಸರಾಯಾ ಪೆರತೊಂದು ಸಾಧನ ಮನ ವಾಕ್ಕಾಯಗಳಲಿ | ದಾಸರಾಯಾ | ನಾನೊಂದರಿಯೆ ದಯಾಬ್ಧಿ ಉದ್ಧರಿಸೆನ್ನ ಭವದಿಂದ ದಾಸರಾಯಾ 8 ನಾರಾಯಣಾತ್ಮಜ ಅನಂತಾರ್ಯರುದರದಿ ದಾಸರಾಯಾ |ಪುಟ್ಟಿ | ನೂರೊಂದು ಕುಲಗಳುದ್ಧಾರ ಮಾಡಿದೆ | ದಾಸರಾಯಾ | ಕಾರುಣ್ಯನಿಧಿ ಜಗನ್ನಾಥವಿಠಲ | ದಾಸರಾಯಾ | ನಿಮ್ಮ ಚಾರು ಚರಿತ್ರೆಯ ತುತಿಸಿ ಪಾವನನಾದೆ | ದಾಸರಾಯಾ 9
--------------
ಜಗನ್ನಾಥದಾಸರು
ದಾಸರಿವರ ನೋಡಿರೊ | ಗುರು ವಿಜಯ |ದಾಸರಿವರ ಪಾಡಿರೋ ಪ ವ್ಯಾಸರಾಜ್ಞೆಯಲಿಂದ | ವ್ಯಾಸ ಕಾಶಿಗೆ ಪೋಗಿ |ಶ್ರೀಶಾನುಗ್ರಹದಲಿ | ಭಾಸಿಸೀ ಮೆರೆದಂಥ ಅ.ಪ. ಎರಡನೆ ಯುಗದೊಳಗೆ | ಸುರಲೀಲ | ವರಕಪಿ ಎಂದೆನೆಸಿ |ಶಿರಿ ರಾಮಚಂದ್ರನ್ನ | ಚರಣ ಸೇವಕರಾಗಿಸುರ ವಿರೋಧಿಗಳ ಬಹಳ ಸಂಹರಿಸಿದ 1 ಯಾದವರಲಿ ಜನಿಸಿ | ನಿಕಂಪಾಖ್ಯ | ಶ್ರೀದಕೃಷ್ಣನ ಭಜಿಸಿ |ಮಾಧವ ಗೆದುರಾಂತ | ದೈತ್ಯರ ಸದೆಬಡಿದುಯಾದವೇಶನ ಪದ | ಕರ್ಪಿಸಿ ಮೆರೆದಂಥ 2 ಪುರಂದರ ದಾಸರ | ವರ ಗೃಹದಲಿ ಇದ್ದುಹರಿಚರಿತೆ ಶ್ರವಣದಿ | ವಿಪ್ರನಾಗ್ಯುದೀಸಿದ 3 ಮಧ್ವಪತಿಯ ನಾಮದಿ | ಭೃಗ್ವಂಶದಿ | ಮುದ್ದು ಮಗನೆನಿಸಿಮಧ್ವೇಶ ಹರಿಪಾದ | ಶ್ರದ್ಧೆಯಿಂದಲಿ ಭಜಿಸಿಮಧ್ವರಾಯರ ಮತ | ತುತಿಸಿ ಮೋದಿಸಿದಂಥ 4 ಚೀಕನಪರಿ ಕ್ಷೇತ್ರದೀ | ದಾಸಪ್ಪನು | ಆ ಕೂಸಮ್ಮನ ಉದರದಿಬೇಕಾಗಿ ಜನಿಸುತ್ತ | ಪ್ರಾಕು ಪ್ರಾರಬ್ದವನೇಕ ಬಗೆಯಲಿ ಉಂಡ | ಮಾಕಳತ್ರನ ಕಂಡ 5 ಪುರಂದರ | ದಾಸರೂಪಿಯಲಿಂದ |ಸೂಸಿ ಶಾಸ್ತ್ರವ ಮಧ್ವ | ಭಾಷ್ಯಾನು ಸಾರದಿ |ಭಾಷೆ ಕನ್ನಡದಲ್ಲಿ | ಮೀಸಲೆನಿಸಿ ಪೇಳ್ದ 6 ಧ್ಯಾನೋಪಾಸನೆ ಕರ್ಮವ | ಯೋಗ್ಯರಿಗೆ | ಗಾನಗೈದಿಹ ಸುಜ್ಞಾನೀ | ಮಾನ್ಯ ಮಾನದ ದುಷ್ಟ | ಗಾನಕೆ ಮನ ಕೊಡದೆಮೌನಿಯಾಗುವ ಮಾರ್ಗ | ದಾನವ ಮಾಡೀದ 7 ಸ್ವಪ್ನದಲ್ಲೆನಗವರೂ | ದರ್ಶನದಿ | ಕೃಪ್ಪೆಯಲನುಗ್ರಹಿಸಿ |ಅಪ್ಪಾರ ಮಹಿಮರು | ತಪ್ಪದೆ ತ್ರಯ ಬಾರಿಒಪ್ಪಿ ತೀರ್ಥವನಿತ್ತು ಕಳುಹಿದ ಮಹಾಂತ 8 ವತ್ಸರ ಕಾರ್ತೀಕ | ಸಿತ ದಶಮಿ | ಆವಗುರುವಾಸರದಿಭಾವಜ ಪಿತ ಗುರು | ಗೋವಿಂದ ವಿಠಲನಭಾವದಿ ಕಂಡು ಸುಯೋಗದಿ ಪೊರಟಂಥ 9
--------------
ಗುರುಗೋವಿಂದವಿಠಲರು
ದಾಸರೆ ಪುರಂದರದಾಸರು ಲೇಸಾಗಿ ಎನಗೆ ಸುಮಾರ್ಗವನು ತೋರಿದರು ಪ ಅತಿ ಮುಗ್ಧನಾಗಿ ದುರುಳರಾ ದುರಾಚಾರದಲ್ಲಿ ಮತಿಗೆಟ್ಟು ಮಹಿಯೊಳಗೆ ತಿರುಗುತಿರಲೂ ಅತಿ ದಯಾಪರರಾಗಿ ತನ್ನವನಿವನೆಂದು ಹಿತದಲ್ಲಿ ಪೊರೆದು ಕುಮತಿಯ ಬಿಡಿಸಿದರು1 ಶಬ್ದಾದಿ ಮೊದಲಾದ ವಿಷಯಂಗಳಾ ಕರ್ಮ ದಬ್ಧ್ದಿಯೊಳಗೆ ಬಿದ್ದು ಪೊರುಳುತಿದ್ದಾ ಲುಬ್ಧಕನ ಕರೆದು ದೃಢವಾಗಿ ಸುಜ್ಞಾನದ ಅಬ್ಧಿಯೊಳಗಿಟ್ಟು ಕರುಣದಲಿ ನೋಡಿದರು 2 ಹಿಂದೆ ಏಸೇಸು ಜನ್ಮ ಜನಿಸಿ ಅನ್ಯ ಕಾಲ ನೊಂದ ನರನಾ ತಂದು ವೈರಾಗ್ಯದೊಳು ಪೊಗಸಿ ಸೌಖ್ಯವ ಪರಶಿ ತಂದೆ ಮಕ್ಕಳನು ಸಾಕಿದಂತೆ ಸಾಕಿದರು3 ಉಪದೇಶವಿತ್ತರು ಸುಪ್ರೀತಾರ್ಥದಲಿ ಬಂದು ಜಪ ನಿಜಾಸನ ಧ್ಯಾನ ಜ್ಞಾನದಿಂದ ಸಪುತೆರಡು ಲೋಕದ ಒಡೆಯನ್ನ ಪಾದವ ಸಫಲವಾಗುವಂತೆ ಸಾಧನವ ಪೇಳಿದರು 4 ದಾರಿದ್ರ ದೋಷವ ಸೇರಿದ ಮಾನವನಿಗೆ ಆರು ಕೊಡದಲೆ ಧೇನು ದೊರಕಿದಂತೆ ಕಾರುಣ್ಯದಲಿ ಗುರು ಪುರಂದರದಾಸರು ಮೂರುತಿ ವಿಜಯವಿಠ್ಠಲನ್ನ ತೋರಿಸಿದರು 5
--------------
ವಿಜಯದಾಸ
ದಾಸರೆಂದರೆ ಪುರಂದರದಾಸರಯ್ಯ ಪ ವಾಸುದೇವ ಕೃಷ್ಣನ್ನ ಸೂಸಿ ಪೂಜಿಸುವಅ.ಪ ಗ್ರಾಸಕಿಲ್ಲದೆ ಪೋಗಿ ಪರರ ಮನೆಗಳ ಪೊಕ್ಕುದಾಸನೆಂದು ತುಲಸಿ ಮಾಲೆ ಧರಿಸಿಬೇಸರಿಲ್ಲದೆ ಅವರ ಕಾಡಿ ಬೇಡಿ ಬಳಲಿಸುತಕಾಸುಗಳಿಸುವ ಪುರುಷನವ ದಾಸನೇ 1 ಡಂಭಕದಿ ಹರಿಸ್ಮರಣೆಮಾಡಿ ಜನರಾ ಮುಂದೆಸಂಭ್ರಮದಿ ತಾನುಂಬ ಊಟ ಬಯಸಿಅಂಬುಜೋದ್ಭವ ಪಿತನ ಆಗಮಗಳರಿಯದಲೆತಂಬೂರಿ ಮೀಟಲವ ಹರಿದಾಸನೇ 2 ಯಾಯವಾರವ ಮಾಡಿ ವಿಪ್ರರಿಗೆ ಮೃಷ್ಟಾನ್ನಪ್ರೀಯದಲಿ ತಾನೊಂದು ಕೊಡದ ಲೋಭಿಮಾಯ ಸಂಸಾರದಲಿ ಮಮತೆ ಹೆಚ್ಚಾಗಿಟ್ಟುಗಾಯನವ ಮಾಡಲವ ದಾಸನೇನೈಯ3 ಪಾಠಕನ ತೆರದಲ್ಲಿ ಪದಗಳನೆ ತಾ ಬೊಗಳಿಕೂಟ ಜನರ ಮನವ ಸಂತೋಷಪಡಿಸಿಗೂಟ ನಾಮಗಳಿಟ್ಟುಕೊಂಡ್ಹಿರಿಯ ತಾನೆನುತ,ತೂಟಕವ ಮಾಡಲವ ದಾಸನೇನೈಯ4 ಪುರಂದರ ದಾಸರಿವರೈಯ 5
--------------
ವ್ಯಾಸರಾಯರು
ದಾಸವೃಂದ ಪೋಷಿಸೆನ್ನ ಜೀಯ ಶ್ರೀ ಪ್ರಾಣೇಶದಾಸರಾಯ ಪ ಭೂಸುರ ಸೇವಿತ | ಭಾಸುರ ಮಹಿಮ ಉ ದಾಶೀನ ಮಾಡದೆ | ದೋಷಗಳೆಣಿಸದೆ ಅ.ಪ ಪದುಮಸಂಭವ ಕುಲದಿ ಜನಿಸುತ ವಿದುರಾಗ್ರಜ ಜಗದಿ | ಯದುಪತಿ ಸುಕಥೆಯ ವಿಧ ವಿಧದಿ ಬೋಧಿಸಿ ಮದಡರುದ್ಧರಿಸಿದ | ಸದಮಲ ಹೃದಯ 1 ನತಜನ ಸುರತರುವೆನಿನ್ನನು ತುತಿಸಿಲೆನಗೊಶವೆ | ಸತತದಿ ಸೇವಿಸಿ | ಯತಿ ವರದೇಂದ್ರರ ಹಿತದಲಿ ಪಡೆದ ಪ್ರತಿ ಪ್ರಭಾಕರ 2 ತರತಮ ಭೇದವನು | ಶ್ರೀವರ ಹರಿದಿನ ಮಹಿಮೆಯನು ಸರಳಕನ್ನಡದಿ ವಿರಚಿಸಿ ಕವನವ ನೊರೆದು ಸಜ್ಜನರ ಪೊರೆವ ಮಹಾತ್ಮಾ 3 ವಾತಜಾತ ಸುಮತ ಸಾಗರ ಪೋತನೊಳೀತರ | ಯಾತಕೆ ನಿರ್ದಯ ನೀತವಕದಿ ಸಂಪ್ರೀತಿಯಿಂದೊಲಿದು 4 ಧಾಮರ ಸುವಿಧೇನು ಶಾಮಸುಂದರೆನ | ನಾಮನೆನೆವ ಸುಖ ಯಾಮ ಯಾಮಕೀಪಾಮರಗೀಯುತ 5
--------------
ಶಾಮಸುಂದರ ವಿಠಲ
ದಾಸಿಯಾಗುವೆನೇ ಗುರುವಿನ ಮನೆಯಾ | ನಿ | ರ್ದೋಷ ಪದವಿ ಈವ ನಿಜ ದೊರೆಯಾ ಪ ಮನೋಮಂಟಪದೊಳಗೆ ಅನುಮಾನ ಕಸನೀಗಿ | ಅನುದಿನ ನಿಶ್ಚಲದ ತಳಿಯಾ ಬಿಂಬಿಸಿ | ಮುನಿಯ ಸೇವೆ ಹಾರೈಸುವೆ ಬಿನಗು ಶಬ್ದಜ್ಞಾನಿಗಳ | ಮನಿಲಿ ನಿಂತು ಹೊತ್ತಂಗಳಿಯೆ ನೆನವಿಲಿರುತಾ 1 ತುಂಬಿ | ಸಾವಧಾನ ಸಿಂಬಿಲಿರಿಸಿಕೊಂಡು ಬರುತಾ | ದೇವ ಗುರುರಾಯ ನಡಿದಾವರೆಯ ಊಳಿಗಕ | ಆವಾಗ ತಂದೆರೆವೆನು ಹರುಷದಲಿ 2 ಅರಹು ಎಂಬ ಸೀರೆಯುಟ್ಟು ಕುರುಹುವೆಂಬ ಕುಪ್ಪಸದಲಿ | ಬೋಧ ಪಡಿಯದನ್ನ ಉಣುತಾ | ವರದ ತಂದೆ ಮಹಿಪತಿ ಚರಣವ ನೋಲೈಸಿ ಇಹಪರ | ವೆರಡು ಗೆಲಿದು ನಿಜಗತಿ ಪಡೆವೆನೋ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ದಿಂದ ಕಾಣಿಕೆಯನು ತಂದೆ ನಿನ್ನಡಿಗೆ ಪ ಹಾರಿಸಿಕೊಳ್ಳುವ ಶೂರನೆಂದು ತಂದೆ ಮುರಾರಿ ವಿಚಾರಿಸಿ 1 ಇಲ್ಲದವಸ್ತುವಿಗಲ್ಲದೆಲೋಕದೊ ಳೆಲ್ಲರಮಾನಸರುಲ್ಲಾಸವೂ ನಿಲ್ಲದೆ ದುರಿತಗಳೆಲ್ಲ ಸೇರಿಸಿಕೊಂಡು 2 ಬರಿಕೈಯೊಳೆಂದಿಗು ಬರಲಾಗದೆಂದು ಪರಿಕಿಸಿ ತಂದೆನೈ ವರದವಿಠಲ ಹರಿ3
--------------
ವೆಂಕಟವರದಾರ್ಯರು
ದಿನಗಳನು ಕಳೆವ ಜನರೆ ಸುಜನರು ವನಜನಾಭನ ದಾಸರ ಸಮಾಗಮದಿಂದ ಪ. ಅರುಣೋದಯದಲೆದ್ದು ಆಚಮನ ಕೃತಿಯಿಂದ ಪರಿಶುದ್ಧರಾಗಿ ಇಹಪರಗಳಿಂದ ಎರಡುವಿಧ ಸುಖವೀವ ಗುರುಮಧ್ವಮುನಿವರನ ಪರಮಮತವಿಡಿದು ಹರಿಕಥಾಮೃತ ಸವಿದು 1 ಸ್ನಾನವನು ಮಾಡಿ ಸಂಕಲ್ಪಪೂರ್ವಕದಿ ಸಂ- ಧ್ಯಾನ ಗಾಯಿತ್ರಿ ಗುರು ಮಂತ್ರ ಜಪವು ಭಾನುನಾಮಕನಾದ ಪರಮಾತ್ಮನಂಘ್ರಿಯನು ಧ್ಯಾನವನು ಮಾಡಿ ಅಧ್ಯಯನ ಪಾಠಗಳಿಂದ 2 ವಾಸುದೇವ ಅಡಿಗಡಿಗೆ ನೆನೆದು ಪಾವಕಗೆ ಪ್ರಾತರಾಹುತಿಯನಿತ್ತು ಭಾವಜ್ಞರಲಿ ಸಕಲಪುರಾಣಗಳ ಕೇಳಿ ಹೂವು ಶ್ರೀತುಲಸಿವನಗಳ ಸೇವೆಯನು ಮಾಡಿ 3 ನದನದಿಗಳಲಿ ಸ್ನಾನವನು ಮಾಡಿ ಕಂಠÀದಲಿ ಪದುಮಾಕ್ಷಿ ಶ್ರೀತುಲಸಿ ಮಾಲೆಗಳನು ಮುದದಿಂದ ಧರಿಸಿ ಮಧ್ಯಾಹ್ನ ಕಾಲದಿ ಬ್ರಹ್ಮ ಯ- ಜ್ಞ ದೇವ ಋಷಿ ಪಿತೃಗಳ ತೃಪ್ತಿಯನು ಬಡಿಸಿ4 ಸಾವಧಾನದಿ ತಂತ್ರಸಾರೋಕ್ತ ವಿಧಿಯಿಂದ ದೇವಪೂಜೆಯ ಮಾಡಿ ದೇವೇಶಗೆ ನೈವೇದ್ಯಗಳನಿಟ್ಟು ನಿತ್ಯತೃಪ್ತಗೆ ವೈಶ್ವ- ದೇವ ಬಲಿಹರಣ ಅತಿಥಿ ಪೂಜೆಗಳಿಂದ 5 ಪರಮ ಹರುಷದಿಂದ ದೇವ ಪ್ರಸಾದವನು ವರ ಮಾತೃ ಪಿತೃ ಸೋದರರು ಸಹಿತ ಪರಮ ಸಖರ ಪಂಙÂ್ತ ಪಾವನರೊಡಗೂಡಿ ನರಹರೆ ಎನುತ ಭೋಜನ ಮಾಡಿ ಮೋದಿಸುತ 6 ಸಾಯಾಹ್ನದಲಿ ಸಂಧ್ಯಾನ ಗಾಯಿತ್ರಿ ಜಪ ಶ್ರೀಯರಸನಂಘ್ರಿ ಸೇವೆಯನು ಮಾಡಿ ವಾಯುಸಖನೊಳಗಾಹುತಿಯನಿತ್ತು ಲಕ್ಷ್ಮೀನಾ- ರಾಯಣನ ಗುಣಗಳನು ಪೊಗಳುತಲಿ 7 ತನುಮನವÀ ಶ್ರೀಹರಿಯಾಧೀನವ ಮಾಡಿ ಅನುಸರಿಸಿ ಭಾಗ್ಯಬಡತನ ಎಣಿಸದೆ ಮನವರಿತು ಹರಿಕೊಟ್ಟುದು ತನ್ನದಲ್ಲದೆ ಅಧಿಕ ಅಣುಮಾತ್ರ ಬಾರದೆಂದು ಅಲ್ಪ ಸಂತುಷ್ಟನಾಗಿ8 ಈ ವಿಧದಿ ಅನುದಿನವಾಚರಿಸಿ ರಾತ್ರಿಯಲ್ಲೊಂದು ಜಾವ ಜಾವಕೆ ಎದ್ದು ನೆರೆಹೊರೆಯು ಕೇಳ್ವಂತೆ ಪಾವನ ಚರಿತ್ರ ಹಯವದನನ ನೆನೆದು 9
--------------
ವಾದಿರಾಜ
ದಿನದಿನದೊಳು ಬಿಡದೊನಜಾಕ್ಷ ಪಾದ ಭಜಿಸಿ ನೀ ಸುಖಿಯಾಗೊ ಮನವೆ ಪ ನಂಬುಗೆ ಕಾರಣ ಅಂಬುಜಾಕ್ಷನ ಶ್ರೀಪಾ ದಾಂಬುಜ ಒಲಿಸಲು ಕುಂಭಿಣಿಯೊಳಗೆ ನಂಬಿ ಪ್ರಹ್ಲಾದ ಕರೆಯೆ ಕಂಬದಿಂ ಬಂದವನ ಬೆಂಬಿಡದಲೆ ಕಾಯ್ದನೆಂಬೋಕ್ತಿ ಕೇಳಿ ತಿಳಿದು 1 ದುರಿತದ ತವರಿದು ನರಕಕ್ಕೆ ಬೇರೆಲೊ ಮರವೆಸಂಸಾರ ಮಹಸರಸಿನಸರೋವರ ಸುರಸಿನೊಳ್ ಸಿಲ್ಕಲು ತಿರುಗರೆಂಬುವ ಹರಿಶರಣರ್ವಾಕ್ಯಗಳು ಸ್ಥಿರನಂಬೀ ಅರಿತು 2 ಕಿರಿಕಿರಿ ಸಂಸಾರ ಪರಿಪರಿಬಾಧಿಪ ಉರಿಕಿನ ತಿಂಡಿಯಿದು ನೆರೆನಂಬಬೇಡ ಜರಸುಖವಿಲ್ಲದ ಎರವಿನ ಕಾಯಕ್ಕೆ ಹಿರಿಹಿರಿ ಹಿಗ್ಗಿ ಕೆಡದಿರು ವಿವರಿಸಿನೋಡಿ 3 ಸತಿಸುತರಿವರೆಲ್ಲ ಅತಿಭಾಗ್ಯ ಇರುವನಕ ಸತತ ನಿನ್ನಯ ಸೇವೆ ಹಿತದಿಂ ಮಾಳ್ಪರು ಗತಿಸಿ ಪೋಗಲು ಭಾಗ್ಯ ಸತಿಸುತರೆ ನಿನ ಗತಿವೈರಿಗಳು ಕಾಣೊ ಮತಿಹೀನ ಮನಸೆ 4 ಇರುಳು ಹಲವು ಪಕ್ಷಿ ನೆರೆದುಂಡು ವೃಕ್ಷದಿ ತಿರುಗಿ ಉದಯದೊಳು ಹಾರಿಹೋಗ್ವ ತೆರದಿ ಸರುವ ಅಸ್ಥಿರವೆಂದು ಅರಿತು ವಿಚಾರಿಸಿ ಸ್ಥಿರಸುಖವನು ಪಡೆಯೊ ಶ್ರೀರಾಮನಡಿಗ್ಹೊಂದಿ 5
--------------
ರಾಮದಾಸರು
ದಿಮ್ಮಾಕ ನಿನಗ್ಯಾಕೆ ಎಲೆ ಎಲೆ ಜಮ್ಮಾಸಿ ಜರ ತಿಳಿಕೊ ಪ ದಿಮ್ಮಾಕ ನಿನಗ್ಯಾಕೆ ಛೀಮಾರಿ ನಿನ್ನ ದಿಮ್ಮಾಕ ಮುರಿಲಿಕ್ಕೆ ಗುಮ್ಮವ್ವ ನಿಂತಾಳೆ ಅ.ಪ ಸೊಕ್ಕಿನಿಂದ ನಡೆವಿ ಮುಂದಿಂದು ಲೆಕ್ಕಕ್ಕೆ ತರದಿರುವಿ ಫಕ್ಕನೊಯ್ದೆಮನವರು ಉಕ್ಕಿನ ಪ್ರತಿಮೆಯ ತೆಕ್ಕೆಯೊಳಾನಿಸಿ ನಿನ್ನ ಒಕ್ಕಲಿಕ್ಕುವರವ್ವ 1 ತಾರತಿಗಡಿ ತುಸು ವಿ ಚಾರಮಾಡಿನೋಡು ಘೋರ ಯಮದೂತರು ಹಾರೆ ಕಾಸಿ ಯೋನಿ ದ್ವಾರದಿ ಸೇರಿಸಿ ಘೋರ ಬಡಿವರವ್ವ 2 ಪಾಮರಳಾದಲ್ಲೆ ಮುಂದಿನ ಕ್ಷೇಮವ ಮರೆತಲ್ಲೇ ಭೂಮಿಸುಖಕೆ ಮೆಚ್ಚಿ ತಾಮಸದಲಿ ಬಿದ್ದು ಸ್ವಾಮಿ ಶ್ರೀರಾಮನ ಪ್ರೇಮಕ್ಕೆ ದೂರಾದಿ 3
--------------
ರಾಮದಾಸರು
ದೀನನಾಥ ನೀನೆ ಪ್ರಭು ಧ್ಯಾನಮಾಳ್ಪೆ ಕಾಯೊ ಕರುಣಿ ಪ ಜಾಹ್ನವೀಜನಕ ಜನಾರ್ದನ ಜಾನಕೀಪ್ರಿಯ ಜಗದೊಡೆಯ ವೇಣುಗೋಪಾಲ ನಿನ್ನ ಧ್ಯಾನಾನಂದ ಪಾಲಿಸಭವ 1 ಕವಿದುಕೊಂಡು ದಹಿಸುತಿರುವ ತಾಪ ಭಯವ ತರಿದು ಸುವಿಚಾರ ಸುಜನಸಂಗ ಜವದಿ ನೀಡಿ ದಯದಿ ಪೊರೆ 2 ವಿಷಯದ್ವಾಸನೆ ಪರಿಹರಿಸಿ ಅಸಮಜ್ಞಾನ ಸೌಖ್ಯವಿತ್ತು ಒಸೆದು ನಿಮ್ಮ ವಿಮಲಚರಣ ಕುಸುಮದಾಸನೆನಿಸು ಶ್ರೀರಾಮ 3
--------------
ರಾಮದಾಸರು
ದೀಪವಿದ ಬೆಳಗುವೆನು ದೇವ ನೀ ನೋಡುವ್ಯಾಪಿಸಿದ ತಿಮಿರವನು ಪರಿಹರಿಸಿ ರಂಜಿಸುವ ಪಸಕಲ ದೇವಾತ್ಮಕದ ತಿಲ ತೈಲವಾಗಿರಲುಅಕಲುತ ವರ್ತಿುಂ ಮಿಳಿತವಾಗಿ ಪ್ರಕಟವಾಗಿರುವಗ್ನಿ ಪ್ರಭೆಯೊಡನೆ ಸ್ಫುಟವಾಗಿಮುಖ ಸಮೀಪದಿ ಮೂರು ಲೋಕಗಳ ಬೆಳಗುತಿಹ 1ಜ್ಞಾನವೇ ಗೋಘೃತವು ಮೂರ್ತಿಗಳೆ ವರ್ತಿಗಳುನೀನಿದಕೆ ಮೂಲ ಕಾರಣವಸ್ತುವೂಸಾನುಕೂಲದಿ ಗುಣಗಳೊಂದಾಗಿ ಚಿತ್ತಿನೊಳುಲೀನವಾಗಿರೆ ನಿರ್ಮಲಾಕೃತಿಯ ತಾಳಿರುವ 2ಎನ್ನ ಜೀವವೆ ದೀಪ ನಿನ್ನ ಪಾದವೆ ಬ್ರಹ್ಮಭಿನ್ನ ಭಾವವನುಳಿದು ಪೂರ್ಣರೂಪದಲಿನಿನ್ನೊಳಗೆ ನಿಲಿಸೆನ್ನ ಪುಣ್ಯತಮವೆಂದೆನಿಪಸ್ವರ್ಣಮಯ ತಿರುಪತಿಯ ವಾಸ ವೆಂಕಟರಮಣ 3 ಓಂ ಸಚ್ಚಿದಾನಂದವಿಗ್ರಹಾಯ ನಮಃ
--------------
ತಿಮ್ಮಪ್ಪದಾಸರು
ದುರಿತ ತರಿಯುವಾ ಪ ಯಂತ್ರೋದ್ಧಾರರಾ | ಅಂತರಂಗರಾಮಂತ್ರ ಮಂದಿರಾ | ಕಾಂತಿ ಭೂತರಾ 1 ಕುಂತಿ ಜಾತರಾ ಏ | ಕಾಂತ ಭಕ್ತರಾಸಂತ ಗುರಗಳ ನೀ | ವಿಂತು ನಂಬಿರೊ 2 ಪಂಕಜಾಕ್ಷನಾ | ಅಣಕ ಧರಿಸಿಹಾಬಿಂಕ ಗುರುಗಳಾ | ಲಂಕೇಶನನುಜರಾ 3 ಖಂಪಾತಾಳ ಭೂ | ವ್ಯಾಪಿಸಿರುವರಾಅಪಾರ ಮಹಿಮರಾ | ಕೋಪ ರಹಿತರಾ 4 ಮೂಕ ಬಧಿರರಾ | ನೇಕ ರೋಗಿಯರಾನೂಕಿ ತಾಪವಾ | ದುಃಖ ಕಳೆಯುವಾ 5 ಮಾಯಿ ಮತಗಳಾ | ಸಾಯ ಒಡೆದರಾಆರ್ಯ ಮಧ್ವರಾ | ಪ್ರೀಯ ಶಿಷ್ಯರಾ 6 ಗುರುಗೋವಿಂದ ವಿಠಲನಾ | ಚರಣ ಸರಸಿಜಾನಿರುತ ಸ್ಮರಿಪರಾ | ವರವ ಕೊಡುವರಾ 7
--------------
ಗುರುಗೋವಿಂದವಿಠಲರು
ದುರಿತ ತಿಮಿರಕೆ ಸೂರ್ಯ ಶರಣ ಜನ ಭಾಗ್ಯೋದಯ ಪ ನರಹರಿಯ ದಾಸಾರ್ಯ ಮರುತಮತ ಪರಿಚರ್ಯ ಶಿರಬಾಗಿ ಮುಗಿವೆ ಕೈಯ್ಯ ಅ.ಪ. ಘೋರತರ ಸಂಸಾರ ಸಾರತರವೆಂದರಿದು ಪಾರಮಾರ್ಥಿಕವ ತೊರೆದು ಭೂರಿ ನರಕದಿ ಬೆಂದು ಗಾರಾಗಿ ಪೋಪರಂದು ನಾರದರೆ ನೀವ್ ಬಂದು ನಾರಾಯಣಾ ಎಂದು ಚೀರಿದಾ ಧ್ವನಿಗೆ ಅಂದು ಘೋರ ಪಾತಕವೆಲ್ಲ ದೂರಾಗಿ ಸ್ವರ್ಗವನು ಸೇರಿ ಸುಖಿಸಿದರು ಎಂದು 1 ಸರಸಿಜಾಕ್ಷನ ಸ್ತುತಿಸಿ ವರ ಪಡೆದು ಧರಣಿಯೊಳು ಮೆರೆವ ಕನ್ನಡ ದೇಶದಿ ಸಿರಿಯಿಂದಲೊಪ್ಪುತಿಹ ಪುರಂದರಗಡದೊಳಗೆ ಇರುವ ಭೂಸುರ ವಂಶದಿ ವರಗರ್ಭದಲಿ ಜನಿಸಿದಿ ನರರಂತೆ ಚರಿಸುತ್ತ ಲೌಕಿಕೆ ಮರುಳಾಗಿ ಸರ್ವಭಾಗ್ಯವ ಗಳಿಸಿದಿ 2 ಚಿನಿವಾರ ವ್ಯಾಪಾರದನುವರಿತು ನವಕೋಟಿ ಧನಕಧಿಪನೆಂದೆನಿಸುತ ಧನಕನಕ ವಸ್ತು ವಾಹನನಿಚಯ ಸಂಗ್ರಹದಿ ತನುಮನಂಗಳ ಶ್ರಮಿಸುತ ಕನಸಿಲಾದರು ದಾನಧರ್ಮಗಳ ನೆನೆಯದೆಲೆ ದಿನಮಾನಗಳ ಕಳೆಯುತ ಇನಿತು ಮಾಯೆಗೆ ಸಿಲುಕಿ ತನ್ನ ಮರೆದಿರಲಾಗ ಘನ ಮಹಿಮ ಬಂದ ನಗುತ 3 ಅಂದು ತಾನೊಲಿದಿತ್ತ ಚೆಂದದಾ ವರಗಳನು ಇಂದು ಸಲಿಸುವೆನು ಎಂದು ಬಂದು ಬ್ರಾಹ್ಮಣ ರೂಪದಿಂದ ನಿಮ್ಮನು ಹರಿಸಿ ಕಂದನಿಗೆ ಮುಂಜಿಯೆಂದು ಮಂದ ಭಾಗ್ಯನ ತೆರದಿ ಪೊಂದಿ ಯಾಚಿಸಲು ನಿಂದು ಒಂದು ದುಡ್ಡನ್ನು ಲೋಭದಿಂ ದೆಸೆಯಲದನುಳಿದು ಸಿಂಧು 4 ಅತ್ತಣಿಂ ಶ್ರೀನಿಧಿಯು ಮತ್ತೆ ಮನೆಯೊಳು ನಿಮ್ಮ ಪತ್ನಿಯನು ಯಾಚಿಸಿದನು ಉತ್ತಮ ಪತಿವ್ರತೆಯೆ ಪುತ್ರನುಪನಯವೆಂದು ಇತ್ತ ಬಂದಿಹೆನೆಂದನು ಚಿತ್ತದೊಲ್ಲಭನ ಸಮ್ಮತಿಯಿಲ್ಲದೆಲೆ ನಾ ನಿತ್ತು ಕಳುಹೆನು ಏನನೂ ಅತ್ತ ಗಮಿಸಿರಿ ಎನಲು ಹೆತ್ತತಾಯ್ ನಿನಗಿತ್ತ ನತ್ತನ್ನು ಕೊಡು ಎಂದನು 5 ನಾಗಾರಿವಾಹನನ ನುಡಿಯು ಮನಸಿಗೆ ಹಿಡಿಯೆ ಮೂಗುತಿಯ ತೆಗೆದಿತ್ತಳು ಭಾಗ್ಯವಂತಳೆ ನಿನಗೆ ಲೇಸಾಗಲೆಂದ್ಹರಿಸಿ ಸಾಗಿ ಬಂದನು ಇತ್ತಲು ಹೋಗು ಹೋಗೆಲೊ ಮತ್ತೆ ನೀನೇಕೆ ಬಂದೆನಲು ಮೂಗುತಿಯ ಕ್ರಯಕೆ ಕೊಡಲು ಈಗ ಬಂದಿಹೆನೆಂದು ನಿಮಗದನು ತೋರಲು ಹೇಗೆ ಬಂದಿತು ಎನ್ನಲು 6 ಮನಕೆ ಸಂಶಯ ಮೂಡಿ ಚಿಂತಿಸುತಿರೆ ನೋಡಿ ವನಜನಾಭನು ಪೇಳ್ದನು ನನಗೀಗ ಧನಬೇಡ ನಿನ್ನಲ್ಲಿಯೇ ಇರಲಿ ಅನುವರಿತು ಬಹೆನೆಂದನು ಸಂತೈಸಿ ಪೊರಮಡಿಸಿ ನಿನಗೆ ನಾಮವನಿಡುವೆನು ಎನುತ ಹರುಷದಿ ನಗುತ ಮನೆಗೆ ಬರುತಲೆ ಕಂಡೆ ವನಿತೆಯಾ ಬರಿ ಮೂಗನು 7 ಮುತ್ತಿನಾ ಮೂಗುತಿಯು ಎತ್ತ ಹೋಯಿತು ಎನಲು ಮುತ್ತೈದೆ ಮನದಿ ನೊಂದು ಮತ್ತೆ ಮುರಿಯಿತು ಎಂದು ತತ್ತರಿಸುತಿರೆ ಕಂಡು ಇತ್ತ ತಾರೆನಲು ನಿಂದು ವಿಪ್ರ ಮತ್ತೇನು ಮಾಡುವರೊ ಕತ್ತಲೆಯು ಮುತ್ತಿ ತಿಂದು ಭಕ್ತವತ್ಸಲ ನಿಂಗೆ ತೆತ್ತರೀತನುವನ್ನು ಕುತ್ತು ಪಾರಾಹುದೆಂದು 8 ತರುವೆನೀಗಲೆ ಎಂದು ತೆರಳಿ ವಿಷವನೆ ಅರೆದು ಕರದಿ ಬಟ್ಟಲನು ಹಿಡಿದು ಹರಣದಾಸೆಯ ತೊರೆದು ಸಿರಿವರನ ಪದನೆನೆದು ಕುಡಿಯುವನಿತರೊಳು ತಿಳಿದು ಕರುಣದಿಂ ಮೂಗುತಿಯ ಗರಳದಲು ಕೆಡಹಲಾ ಮಣಿ ಹರುಷದಳೆದು ಪರಮ ಸಂಭ್ರಮದಿಂದ ಕೊಡಲದನು ನೀವ್ ಕೊಂಡು ಭರದಿ ಅಂಗಡಿಗೆ ಬಂದು 9 ಬೀಗ ಮುದ್ರೆಯ ತೆಗೆದು ನೋಡೆ ಭೂಸುರನಿತ್ತ ಮೂಗುತಿಯು ಕಾಣದಿರಲು ಹೇಗೆ ಹೋಯಿತು ಎಂದು ಮನದೊಳಚ್ಚರಿಗೊಂಡು ಬೇಗನೆ ಮನೆಗೆ ಬರಲು ಹೇಗೆಂದು ತಿಳಿಸದಿರಲು ನೀಗುವೆನು ತನುವನೆಂದು ಬೆದರಿಸಲು ಸಾಧ್ವಿಯಾ ಬಾಗಿ ವಂದಿಸಿ ನುಡಿದಳು 10 ವೃದ್ಧ ಬ್ರಾಹ್ಮಣನಾಗಿ ಹೆದ್ದೈವನೇ ಬಂದು ಪೊದ್ದಿಯಾಚಿಸಲು ಜರಿದೆ ಲುಬ್ಧನಾಗತಿಶಯದಿ ಬದ್ಧನಾದೆನು ದ್ರವ್ಯ ವೃದ್ಧಿಗೋಸುಗವೆ ಬರಿದೆ ಇದ್ದುದಕೆ ಫಲವೇನು ಸದ್ಧರ್ಮದಲಿ ಕೊಡದೆ ಉದ್ಧಾರವಿಲ್ಲೆಂದು ತಿಳಿದೆ ಶುದ್ಧ ಭಾವದಿ ಹರಿಯ ಪದ್ಮಪಾದವ ನೆನೆದು ಹೆದ್ದಾರಿ ಹಿಡಿದು ನಡೆದೆ 11 ಶಿಷ್ಟ ಬ್ರಾಹ್ಮಣರು ನೆಂಟರಿಷ್ಟ ಮಿತ್ರರಿಗೆ ವಿ- ಶಿಷ್ಟವನು ದಾನಗೈದು ನಿಷ್ಠೆಯಿಂ ಮಡದಿ ಮಕ್ಕಳನ್ನೊಡಗೊಂಡು ವಿಠ್ಠಲನ ಪುರಕೆ ನಡೆದು ಕಷ್ಟ ನಿಷ್ಠುರ ಸಹಿಸಿ ಕೃಷ್ಣನಂಘ್ರಿಯ ಭಜಿಸಿ ಇಷ್ಟಾರ್ಥ ಸಿದ್ಧಿಗೈದು ನೆಟ್ಟನೇ ಹಂಪೆ ಪಟ್ಟಣದಿ ವ್ಯಾಸಮುನಿ ಶ್ರೇಷ್ಠರಿಂದುಪದೇಶ ಪಡೆದು 12 ಮಧ್ವಮತ ಸಿದ್ಧಾಂತ ಪದ್ಧತಿಯನುದ್ಧರಿಸಿ ಗದ್ಯಪದ್ಯಗಳಿಂದಲಿ ಮಧ್ವಪತಿ ಪದಪದ್ಮ ಹೃದ್ಯದೊಳು ನೆನೆನೆನೆದು ಮುದ್ದಾಗಿ ವರ್ಣಿಸುತಲಿ ಮದ್ದಳೆಯ ತಾಳ ವೀಣೆಗಳ ಗತಿಹಿಡಿದು ಶುದ್ಧರಾಗಗಳಿಂದಲಿ ಉದ್ಧವನ ಸಖನೊಲಿದು ತದ್ಧಿಮಿತ ಧಿಮಿಕೆಂದು ಪೊದ್ದಿ ಕುಣಿಯುವ ತೆರದಲಿ 13 ಈರೆರೆಡು ಲಕ್ಷಗಳ ಮೇಲೆ ಎಪ್ಪತ್ತೈದು ಸಾ- ವಿರ ಗ್ರಂಥ ರಚಿಸಿ ಈರೆರೆಡು ದಿಕ್ಕಿನಲಿ ಚರಿಸಿ ತೀರ್ಥಕ್ಷೇತ್ರ ಸಾರ ಮಹಿಮೆಗಳ ತುತಿಸಿ ಶೌರಿದಿನದಲಿ ಮಾಳ್ಪ ವ್ರತನೇಮ ಉಪವಾಸ ಪಾರಣೆಯ ವಿಧಿಯ ತಿಳಿಸಿ ತಾರತಮ್ಯವು ಪಂಚ ಭೇದಗಳು ಸ್ಥಿರವೆಂದು ಸಾರಿ ಡಂಗುರವ ಹೊಯಿಸಿ 14 ತರುಣಿ ಮಕ್ಕಳು ಶಿಷ್ಯ ಪರಿವಾರಗಳ ಸಹಿತ ಧರೆಯನೆಲ್ಲವ ತಿರುಗುತ ಕರದಿ ಕಿನ್ನರಿ ಧರಿಸಿ ಸ್ವರವೆತ್ತಿ ಪಾಡುತಿರೆ ಕೊರಳುಬ್ಬಿ ಶಿರ ಬಿಗಿಯುತ ಎರಡು ಕಂಗಳು ಧಾರೆ ಸುರಿಯೆ ಬಾಷ್ಪೋದಕವ ಹರಿ ಮಹಿಮೆ ಕೊಂಡಾಡುತ ತಿರಿ ತಂದ ಧನದಿಂದ ವಿಪ್ರರಿಗೆ ಮೃಷ್ಟಾನ್ನ ಹರುಷದಿಂದಲಿ ಉಣಿಸುತ 15 ಗುಪ್ತವಾಗಿರೆ ಕಂಡು ವ್ಯಕ್ತ ಮಾಡುವೆನೆಂದು ಶಕ್ತನಹ ದೇವ ಬಂದ ಓಗರ ಉಂಡ ಸುತನಾಗಿ ನೀರ ತಂದ ಯತಿಯ ಪಂಕ್ತಿಗೆ ಭಾಗಿರಥಿಯನ್ನು ತರಿಸಿದ ಕ್ಷಿತಿಪತಿಗೆ ದೃಢ ತೋರಿದ ಸತಿಯೆಂದ ಮಾತಿಗೆ ಅತುಳ ಭಾಗ್ಯವನಿತ್ತು ಪಥದಲ್ಲಿ ತಲೆಗಾಯಿದ 16
--------------
ಲಕ್ಷ್ಮೀನಾರಯಣರಾಯರು
ದುರಿತ ಬ್ರಹ್ಮಾಸ್ತ್ರಜಯಜಯ ಜಯತು ಪ್ರತಿಯಿಲ್ಲದಸ್ತ್ರಾ ಪ ಉಟ್ಟಿಹ ಕಾಶಿಯ ಉಡಿಗೆತೊಟ್ಟಿಹ ಎದೆ ಕಟ್ಟುಕಟ್ಟಿದ ಖಡ್ಗ ಕಠಾರಿರಕ್ತದ ತಿಲಕವಿಟ್ಟುಮುಷ್ಠಿಯಲಿ ಮುದ್ಗರ ಶೂಲಧನು ಶರವಳವಟ್ಟುಬಿಟ್ಟ ಕಂಗಳ ಕಿಡಿಯುಛಟಛಟ ಛಟವಿಟ್ಟು 1 ಏರಿಸಿ ಪಟ್ಟೆಯ ಹಲಗೆಎಡಬಲ ನೋಡದೆಹರಿಯ ಘನ ಶತ್ರುವಿನನಾಲಗೆ ಹಿಡಿದೆಳೆಯೆವೀರ ಮಂಡಿಯ ಹೂಡಿಅವುಡನೇ ಕಡಿಕಡಿದೇಹಾರಿಸಿದೆ ತಲೆಗಳನುಹಾ ಎನುತಲಿ ಬಿಡದೆ 2 ಮುಕುಟ ಕಾಂತಿಯಮಿಹಿರಕೋಟೆಯ ಕಳೆಯು ಹಳಿಯೆಲಕಲಕನೆ ಬೆಳಗುತಿಹಕುಂಡಲ ಸರಪಳಿಯೆಚಕಚಕನೆ ಮೂಗುತಿಯಮುತ್ತು ಹೊಳೆಹೊಳೆ ಹೊಳೆಯೇಸಬಲೆ ಎನಿಪ ಚಿದಾನಂದಬಗಳಾಂಬ ತಿಳಿಯೆ3
--------------
ಚಿದಾನಂದ ಅವಧೂತರು