ಒಟ್ಟು 2835 ಕಡೆಗಳಲ್ಲಿ , 118 ದಾಸರು , 1997 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಬ್ಯಾಡವೊ ಕುವಾದಿ ಬ್ಯಾಡವೊ ಪ ಬ್ಯಾಡವೊ ಕೇಳು ಕುವಾದಿ ನೀ ನಾಡುವದುಚಿತವಲ್ಲ ಧಾದಿ | ಆಹಾ | ಮೂಢ ನಿನಿಗದಾವ ಖೋಡಿ ಬೋಧಿಸಿದನೊ ನಾಡಿಗೊಡಿಯ ರಂಗಗೀಡು ನೇನೆಂಬದುಅ.ಪ ಎಲ್ಲ ಜೀವರು ದೇವವೊಂದೆ ಭೇದ ವಿಲ್ಲೆಂದಾಡುವುದು ಧಂದೆ ಯಮ ಕೊಲ್ಲದೆ ಬಿಡ ನಿನ್ನ ಮುಂದೆ ನಿನ್ನ ಹಲ್ಲು ಮುರಿವನೊಂದೊಂದೆ || ಆಹಾ || ಉಳ್ಳಿಗಡ್ಡಿಯ ಉದ್ದಿ ಬೆಳ್ಳಗೆ ತೊಳೆದರೆ ಅಲ್ಲಕ್ಕೆ ಸರಿಯೇನೊ ಬಲ್ಲವರೊಪ್ಪಾರು 1 ಇದ್ದು ನೀ ಇಲ್ಲೆಂತೆಂಬಿ ಕಾಲಿ ಲೊದ್ದರೆ ಬಲು ನೊಂದು ಕೊಂಬಿ ಇ ಲ್ಲಿದ್ದವರೆಲ್ಲ ಬ್ರಹ್ಮ ನಾನೆಂಬಿ ಆ ಪರ ಬುದ್ಧಿಯಿಂದ ಶುದ್ಧ ಎಂತೆಂಬಿ || ಆಹಾ || ಬಿದ್ದುಹೋಯಿತು ನಿನ್ನ ಸಿದ್ದಾಂತವೆಲ್ಲವು ಸದ್ದು ಎನ್ನ ಕೂಡ ಗೆದ್ದು ಹೋಗಲಾರಿ ಬ್ಯಾಡವೊ 2 ಒಬ್ಬ ಬ್ರಹ್ಮ ಎಲ್ಲಾ ಮಾಯವೊ ಇ ನ್ನೊಬ್ಬನೆ ಎಲ್ಲಿಹ ಸುಖವೊ ಕುಹಕ ಶಾಸ್ತ್ರವೆಲ್ಲ ಮೃಷವೋ ಉಬ್ಬಿ ಆಡುವುದು ನಿರಯವು || ಆಹಾ || ಈ ಬಗೆಯಾಯಿತು ನಿನಗೊಬ್ಬಗೆ ಈ ಮಾತು ಬ್ಯಾಡವೊ 3 ಒಂದೆ ಆದರೆ ನಿನಗೆಲ್ಲ ನಿನ ತಂದೆಯಿಂದ ನೀ ಪುಟ್ಟಿದ್ದೆಲ್ಲ ನಿನ್ನ ತಂದೆ ನೀನು ಒಂದೆ ಎಲ್ಲಿ ಇನ್ನು ಛಂದಾಗಿ ನೀ ತಿಳಿಯೊ ಸೊಲ್ಲ || ಆಹಾ || ಸತಿ ನಿನಗೇನಾದಳೊ ಮನುಜ ಮಂದ ಮತಿಯೆ ತಾಯಿಗಂಡ ನೀನಾದೆಲ್ಲೋ 4 ಅನ್ನಕ್ಕೆ ಪರಬ್ರಹ್ಮನೆಂಬಿ ಈಗ ಅನ್ನ ಚಲ್ಲಲು ದೋಷವೆಂಬಿ ನಿತ್ಯ ಚನ್ನಾಗಿ ಪರಿಪೂರ್ತಿಗೊಂಬಿ ಈ ಅನ್ನ ನಾನು ವೊಂದೆ ಎಂಬೀ || ಆಹಾ || ನಿನ್ನ ದೇಹಕ್ಕೆ ರೋಗವು ಬಂದರೆ ನೀನು ಅನ್ನವ ಬಿಟ್ಟಿನ್ನು ಚನ್ನಾಗಿ ಮಲುಗುವಿ 5 ಭೇದವಿಲ್ಲೆಂತೆಂದರೆ ನೀನು ಮಾದಿಗರೆಲ್ಲ ಒಂದೇನೊ ಸರಿ ಹೋದವರೆಂಜಲ ತಿನ್ನೋ ಕಹಿ ಸ್ವಾದವು ನಿನಗಿಲ್ಲವಿನ್ನು ||ಆಹಾ|| ಓದನಾದರು ವೊಂದೆ ಮೇದ್ಯವಾದರು ವಂದೇ ಭೇದವಿಲ್ಲದೆ ತಿಂದು ಹೋದಿಯೋ ನರಕಕ್ಕೆ 6 ಎಲ್ಲವೂ ಬ್ರಹ್ಮಸ್ವರೂಪಾ ಬ್ಯಾರೆ ಇಲ್ಲೆಂದು ನಿನಗೆ ರೂಪಾ ಭೇದವಿಲ್ಲೆಂತೆಂಬುವದು ನಿಶ್ಚಯವು ವಾಕು ಸಲ್ಲದೆ ಇನ್ನು ಪೋದಾವು ||ಆಹಾ || ಬಲ್ಲಿದ ಪುರುಷನು ಮೆಲ್ಲನೆ ನಿನ್ನ ಸತಿ ಯಲ್ಲಿ ಮಲಗಿದರೆ ನೆಲ್ಲಿ ನೀ ಸೈರಿಸಿ7 ನಾಶವಿಲ್ಲೆಂಬುದೆ ಸತ್ಯ ದೋಷ ಮಿಥ್ಯ ಜಗ ಭೃತ್ಯ ಬಿಡದೆ ನಿತ್ಯ ||ಆಹಾ|| ದ್ವಾಸುಪರ್ಣವೆಂಬೊ ಈ ಶ್ರುತಿಗರ್ಥವು ಲೇಸಾಗಿ ತಿಳಿಯದೆ ಘಾಶಿಪಡುವಿ ವ್ಯರ್ಥ 8 ಈಶನು ನೀನಾದರೇನು ಸರ್ವ ದೇಶ ಪೋಷಿಸದೆ ಇಪ್ಪೋರೆ ನಿನ್ನ ಸಾ ಹಸ ವ್ಯರ್ಥ ಮಾಡೋರೆ ಹರಿ ದಾಸರು ಕಂಡು ಸಹಿಸೋರೆ ||ಆಹಾ || ಸತಿ ಸುತರು ಕ್ಲೇಶ ಪಡುವುದು ಬಿಡಿಸಲಾರಿಯೊ ಲೇಶ 9 ಗುರುದೈವವಿಲ್ಲವೊ ನಿನಗೆ ಒಬ್ಬ ಸರಿಯಿಲ್ಲ ಈ ಧರೆಯೊಳಗೆ ಯಾರು ಹಿರಿಯ ಕಿರಿಯರಿಲ್ಲ ನಿನಗೆ ನೀನು ಖರ ಶಬ್ದಕಿಂತ ಹೊರಗೆ ||ಆಹಾ || ಎರಡಿಲ್ಲಾಯೆಂಬೊದೆ ಇರುಳಿಲ್ಲ ಹಗಲಿಲ್ಲಾ ನರಕ ಸ್ವರ್ಗ ವಂದೇ ಅರಿಯಾದೆ ಮುಳುಗುವಿ 10 ವಂದನೆ ನಿಂದ್ಯಗಳೊಂದೇ ನಿನಗೆ ಗಂಧ ದುರ್ಗಂಧವು ವಂದೇ ಕೆಟ್ಟ ಹಂದಿಯೆಲ್ಲ ನೀನು ವಂದೇ ನಿನ್ನ ಕೊಂದರೆ ದೋಷವಿಲ್ಲವೆಂಬೆ ||ಆಹಾ|| ಎಂದಿಗೂ ಈ ಮಾತು ನಿಂದಾವೆ ನಿನಗಿನ್ನು ಮುಂದಕ್ಕೆ ಬರಲಾರಿ ಮಂದಮತಿಯೆ ಖೋಡಿ11 ಜಗದೊಳಗೆ ನೀ ನಿಂತು ಇದು ಜಗವಲ್ಲವೆಂಬೋದಕ್ಕಿಂತು ನೋಡಿ ನಗುವರೋ ಅಶುದ್ಧ ಜಂತು ಜಿಂಹ್ವೆ ಬಿಗಿದು ಕೋಯಿಸುವ ಯಮನಿಂತು ||ಆಹಾ || ಹಗಲು ಇರುಳು ವಂದೆ ನಗುತ ನಗುತಾ ಕಂಡು ತೊಗಲು ದೇಹವು ನಿನ್ನದಗೆ ಮಾಡುವುದು ವ್ಯರ್ಥ 12 ಸ್ವಾಮಿ ನಿನಗೆ ಬ್ಯಾರಿಲ್ಲಾ ನಿತ್ಯ ನೇಮ ಕರ್ಮವು ಬ್ಯಾರೆ ಸಲ್ಲ ಒಂದು ಕಾಮಿನಿ ನಿನಗೆ ಬೇಕಲ್ಲ ಪೂರ್ಣ ಕಾಮನು ನೀನೆಂಬೆಯಲ್ಲಾ ||ಆಹಾ|| ಗ್ರಾಮ ಭೂಮಿಗಳ್ಯಾಕೊ ತಾಮಸ ನಿನಗಿನ್ನು ತಾಮಸರಿಗೆಲ್ಲ ಸ್ವಾಮಿಯಾಗಿರು ಹೋಗೋ 13 ಕಾಣದೆ ಬಗಳುವೆ ಮಾಯಿ ನಾಯಿ ನಿನಗೆ ತಂದೆ ತಾಯಿ ಇನ್ನು ಕಾಣುತ ಬೊಗಳೋದು ನಾಯಿ ಈ ನಾಯಿ ಕಚ್ಚಿ ನೀ ಸಾಯಿ ||ಆಹಾ || ಬಾಯ ಮುರಿವಾ ನಿನ್ನ ನ್ಯಾಯದಿಂದಲಿ ವಾಯು ಕಾಯ ಖಂಡ್ರಿಸುವನೊ 14 ಇಷ್ಟು ಹೇಳಿದರೆ ನೀ ಕೇಳಿ ನೀ ವ್ಯರ್ಥ ನಿಷ್ಠುರಾಡಿ ನೀ ಬಾಳೀ ನಿನ್ನ ಕಟ್ಟಿಗೆ ಮುರಿದಂತೆ ಶೀಳಿ ಬಾಯ ಕುಟ್ಟಿ ತುಂಬುವ ಯಮಧೂಳಿ ||ಆಹಾ|| ಸೃಷ್ಟಿಗೊಡಿಯ ನಮ್ಮ ವಿಜಯವಿಠ್ಠಲನ ಮುಟ್ಟಿ ಭಜಿಸದಲೆ ಭ್ರಷ್ಟ ಮನುಜ ನೀ ಅಷ್ಟವೆಂದೆಂಬೋದು ಬ್ಯಾಡವೊ 15
--------------
ವಿಜಯದಾಸ
ಬ್ರಹ್ಮಕೊರವಂಜಿ ಸುರರು ಕಿನ್ನರರು ಸ್ಮರಣೆ ಮಾಡುವ ಪಾದ ಕುರುಪತಿಯ ಗರ್ವವನು ಪರಿಹರಿಸುವ ಪಾದ ಪರಮ ಯೋಗಿಗಳ ಹೃತ್ಕಮಲದಲ್ಲಿಹ ಪಾದ ಪಾದ ಪದ್ಮವನು ನೆನೆವೆ ನಾನು 1 ದಾನವಾರಿಯ ಚೆಲ್ವ ಜಾನು ಜಂಘೆಗಳೆಸೆವ ಮೀನ ಖಂಡಗಳ ಪೆರ್ದೊಡೆಯ ಸೊಬಗಿನ ಭಾನುಕೋಟಿ ಪ್ರಕಾಶದಂತೆ ವರಕಾಂತಿಯಲಿ ಆನಂದದಿಂದಲಿ ಮೆರೆವ ಮೂರುತಿಯ ನೆನೆವೆÀ ನಾನು 2 ಮಿಸುನಿ ಒಡ್ಯಾಣ ಕಾಂಚಿಯದಾಮ ತೆಳ್ವಸುರ ಬಿಸಜನಾಭನ ಬಾಹುಪುರಿಯ ಸೊಬಗಿನ ಎಸೆವ ಗದೆ ಶಂಕಚಕ್ರವು ಪದ್ಮಕರದಿ ಶೋ ಭಿಸುತಿರುವ ಕಂಬುಕಂಧರದ ಮೂರುತಿಯ ನೆನೆವೆ ನಾನು 3 ಕದಪು ಕಂಗಳು ಎಸೆಯೆ ಕರ್ಣಕುಂಡಲದ ಸಂಪಿಗೆಯ ನಾಸಿಕದ ರನ್ನ ತುಟಿ ಝಗಝಗಿಸೆ ಕುಡಿಹುಬ್ಬುಗಳು ಎಳೆಯ ಮನ್ಮಥನ ಚಾಪದಂತೆಸೆವ ಮೂರುತಿಯ ನೆನೆವೆÀ ನಾನು 4 ಅರೆದಿಂಗಳಂತೆಸೆವ ನೊಸಲ ಕಸ್ತೂರಿತಿಲಕ ಹೊಳೆÀವ ಕಿರೀಟ ಮಸ್ತಕದಿ ಢಾಳಿಸುವ ಅಲಸದೀರೇಳ್ಜಗವ ಕರುಣದಲಿ ರಕ್ಷಿಸುವ ಹೆಳವನಕಟ್ಟೆ ಶ್ರೀ ವೆಂಕಟೇಶ್ವರನ ನೆನೆವೆ ನಾನು 5 ಕಂಸಾಸುರನಿಟ್ಟ ಸೆರೆಯ ಮನೆಯೊಳು ಕಷ್ಟಪಡುತಲಿ ದೇವಕಿನಿ- ಮಿಷ ಯುಗವಾಗಿ ಕಳೆಯುತಿದ್ದಳು ನಿತ್ಯಾನಂದನ ನೆನೆಯುತಾ ಕಂಸರಿಪು ನಾರಾಯಣನು ಜನಿಸುವನೆಂದು ಅರುಹುವೆನೆನುತಲಿ ಧರಿಸಿದ ಆದನೆ ಕೊರವಿ 6 ಮಲ್ಲಿಗೆಯ ವನಮಾಲೆಯ ಚಂದ್ರಗಾವಿಯನುಟ್ಟು ಪಣೆಯೊಳು ತಿದ್ದಿತಿಲಕವನಿಟ್ಟನು ಗಂಧ ಕಸ್ತೂರಿ ಪರಿಮಳವನು ಲೇಪಿಸಿ ಸರ್ವಾಂಗದಿ ಭಾಸ್ಕರನಂದದಿ ಆದನೆ ಕೊರವಿ 7 ಗುಂಜಿಯ ದಂಡೆಯು ತೋಳಭಾಪುರಿ ಗಲ್ಲಕೊತ್ತಿದ ವೀಳ್ಯವು ಮಂಜಾಡಿಯಸರ ಹವಳ ಸರ ಹತ್ತೆಸರವಾ ಕೊರಳಲಿ ಹೊಳೆಯಲು ಅಂಜನವನಿಟ್ಟು ಅಲರಗಣ್ಣಿಗೆ ಅತಿಹರುಷದಿಂದ ಬೇಗದಿ ಆದನೆ ಕೊರವಿ 8 ಮುತ್ತು ಮಾಣಿಕ ಹೊನ್ನಗೂಡೆಯ ಪಿಡಿದು ಉತ್ತಮ ಶಿಶುವ ಬೆನ್ನಲಿ ಕಟ್ಟಿ ಚಿತ್ತದೊಳಗೆ ನರಹರಿ ಶರಣೆನುತ ಸತ್ಯಲೋಕದಿಂದಿಳಿದಳೆ ಕೊರವಿ 9 ಮಧುರಾ ಪಟ್ಟಣಕಾಗಿ ಬಂದಳೆ ಕೊರವಿ ಹದಿನಾರು ಬಾಗಿಲ ದಾಟಿ ನಡೆದಳು ಮದಗಜದಂತೆ ಮೆಲ್ಲಡಿಗಳನಿಡುತ ಬೆದರದೆ ಕೇರಿಕೇರಿಯಲಿ ಸ್ವರಗೈದು 10 ಮನೆಮನೆ ಬಾಗಿಲಗಳ ಮುಂದೆ ನಿಂತು ವನದ ಕೋಗಿಲೆಯಂತೆ ಯವ್ವಾ ಯವ್ವಾ ಎನುತ ವಿನಯದಿ ಸ್ವರಗೈವ ಕೊರವಿಯ ಕಂಡು ವನಿತೆ ದೇವಕಿ ಸನ್ನೆಮಾಡಿ ಕರೆದಳು 11 ಸನ್ನೆಮಾಡಿ ಕರದರೆ ಚೆನ್ನಕೊರವಂಜಿ ಬಂದು ಎನ್ನವ್ವ ಎನ್ನಕ್ಕ ಎನ್ನ ತಂದೆಯ ಹೆತ್ತವ್ವ ನಿನ್ನ ಮನದಾಯತವ ಹೇಳೇನು ಬಾರವ್ವ ಎನ್ನ ಕೂಸಿಗೆ ಒಂದಿಷ್ಟನ್ನವನಿಕ್ಕವ್ವ ಸೊಲ್ಲಕೇಳೆ ಸೊಲ್ಲಕೇಳೆ ಸಿರಿವಂತೆ ಬಾರೆ 12 ಮಲೆಯಾಳ ಕೊಂಕಣದೇಶ ಮಹಾರಾಷ್ಟ್ರ ಗುಜ್ಜರದೇಶ ಚೆಲುವ ಕಾಶ್ಮೀರ ಕಳಿಂಗ ಕರ್ನಾಟಕದೇಶ ತುಳುವ ತಿಲುಗ ದೇಶವನ್ನು ತಿರುಗಿ ಸೊಲ್ಲ ಹೇಳಿ ಬಂದೆ ಒಲುಮೆಯ ಕೊರವಂಜಿ ನಾನಲ್ಲವೆಯಮ್ಮ ಸೊಲ್ಲ ಕೇಳೆ ಸೊಲ್ಲ ಕೇಳೆ ಸಿರಿವಂತೆ ಬಾರೆ13 ಛಪ್ಪನ್ನ ದೇಶವನೆಲ್ಲ ಸುತ್ತಿ ಸೊಲ್ಲ ಹೇಳಿಬಂದೆ ತಪ್ಪ ಹೇಳುವ ಕೊರವಿ ನಾನಲ್ಲವೆಯಮ್ಮ ಕರ್ಪೂರ ವೀಳ್ಯವ ತಾರೆ ಕಾಂತೆ ನಿನ್ನ ಕೈಯ ತೋರೆ ಸೊಲ್ಲಕೇಳೆ ಸೊಲ್ಲಕೇಳೆ ಸಿರಿವಂತೆ ಬಾರೆ 14 ವಚನ :ಇತ್ತಿತ್ತ ಬಾರವ್ವ ವಿವರಿಸಿ ಹೇಳೇನು ಮುತ್ತಿನ ಮುಡಿಯವ್ವ ಮುದ್ದುಮುಖವ ತೋರೆ ಮತ್ತಗಜಗಮನೆ ಮಂದಹಾಸವದನೆ ರತ್ನದ ಸೆಳೆಗೋಲ ಪಿಡಿಯೆ ರಾಜೀವನೇತ್ರೆ ನಿನ್ನ ಚಿತ್ತದೊಳಗಣ ಮಾತ ಛಂದವಾಗಿ ಹೇಳ್ವೆನು ಕೇಳೆ ಅಮ್ಮಯ್ಯ ಬರಿಯ ಡಂಬಕದ ಕೊರವಿ ನಾನಲ್ಲ ಅರುಹುವೆನು ಮುಂದಣ ಕಥಾಂತ್ರವೆಲ್ಲವ ಮೊರದ ತುಂಬ ಮುತ್ತು ತಾರೆ ಮಾನಿನಿರನ್ನಳೆ ಕುರುಹ ಹೇಳೇನು ಇಲ್ಲಿ ಕುಳ್ಳಿರು ಬಾರೆಯವ್ವ15 ಎಂದ ಮಾತ ಕೇಳಿ ಹರುಷದಿಂದ ದೇವಕಿ ಮಿಂದು ಮಡಿಯನುಟ್ಟು ಕಾಂತೆ ಬಂದು ಕುಳಿತಳು ಇಂದುಮುಖಿಯು ಮೊರನ ತುಂಬ ಮುತ್ತನಿಟ್ಟಳು ತಂದು ಕೈಯತುಂಬ ಹೊನ್ನ ಕಾಣಿಕಿಟ್ಟಳು 16 ಗುಣಿಸಿ ಮುತ್ತಿನ ಅಕ್ಷತೆಯಿಟ್ಟು ಗುಪಿತದಿಂದಲಿ ನೆನೆದಳು ಮನದಭೀಷ್ಟವೀವ ಕೃಷ್ಣನ ಜನಿಸಿದೆನು ಮಧುರಾಪುರದ ಅರಸನುದರದಿ ಎನ್ನ ಸೋದರನೆಂಬ ಪಾಪಿ ಸೆರೆಯೊಳಿಟ್ಟನು17 ಎನ್ನ ಸುತನು ತನ್ನ ಕೊಲುವನೆಂಬ ಮಾತಿಗೆ ಎನ್ನ ಅಗ್ರಜ ಎನ್ನ ಮೇಲೆ ಖಡ್ಗವೆತ್ತಲು ಎನ್ನ ಪತಿಯು ಎನ್ನ ಮೇಲಣ ಮಮತೆಯಿಂದಲಿ ತನ್ನ ಸುತರ ಕೊಡುವೆನೆಂದು ಕೊಲೆಯನುಳುಹಿದ18 ಒಡನೆ ಹುಟ್ಟಿದ ಅಣ್ಣ ಎನಗೆ ವೈರಿಯಾದನು ಪಡೆದ ಪಡೆದ ಸುತರನರೆಯಲಪ್ಪಳಿಸಿದನು ಒಡೆಯ ಕೃಷ್ಣಸಲಹೊ ಎಂದು ಸ್ತುತಿಸಿ ದೇವಕಿ ಗಡಣದಿಂದ ಕೊರವಿ ತಾನು ಹೇಳ ಕುಳಿತಳು 19 ವಚನ :ತಿರುಪತಿ ತಿಮ್ಮಪ್ಪ ಚಳ್ಳಪಿಳ್ಳೆರಾಯ ಸುರಪುರವಾಸ ಲಕ್ಷ್ಮೀವರ ಕರುಣವಾಗು ವಂದನೆ ಸೊಲ್ಲ ಚಂದಾಗಿ ಹೇಳೇನು ಕೇಳೆಯಮ್ಮಯ್ಯಾ ಉರ್ಬಿಯೊಳತಿ ದಿಟ್ಟನಮ್ಮ ನಿಮ್ಮ ಮಗನು ಗರ್ಭದೊಳಿಹನು ಕಾಣಮ್ಮ ಕೊಬ್ಬಿದ ಕಂಸನ ಹಮ್ಮ ಮುರಿದು ನಿಮ್ಮ ನಿರ್ಬಂಧ ಬಿಡಿಸುವನಮ್ಮ 20 ಎಂಟನೆ ಗರ್ಭವಿದಮ್ಮ ನಿಮ್ಮುದರದಿ ಅಂಟಿಹ ಮಗನು ಕಾಣಮ್ಮ ಗಂಟಲ ಮುರಿವ ಕಾಣಮ್ಮ 21 ನಿಷ್ಕರುಣಿ ನಿಮ್ಮಣ್ಣನಮ್ಮ ನೀ ಪಡೆದಂಥ ಮಕ್ಕಳ ಕೊಲ್ಲುವ ಕಾಣಮ್ಮ ಚಕ್ರಧರನ ಕೈಯೊಳಮ್ಮ ಈ ಕಂಸನು ಸಿಕ್ಕುವುದು ತಡವಿಲ್ಲವಮ್ಮ 22 ವಚನ : ಈ ಮಾತು ಪುಸಿಯಲ್ಲ ಸ್ವಾಮಿಯ ಕರುಣ ಉಂಟು ಕೈಗೂಡಿತು ಕೇಳೆಯಮ್ಮಯ್ಯಾ ಕೈಯ ತೋರೆ ಕೈಯ ತೋರೆ ಕೈಯ ತೋರೆ ಅಮ್ಮಯ್ಯ ಕೈಯ ತೋರೆ ನಿನ್ನ ಮನದ ಕುರುಹ ಹೇಳುವೆ ಸೈಯೆನಿಸಿಕೊಂಬೆ ನಿನಗೆ ಸುಖವಾಕ್ಯವನು ಹೇಳಿ ಭಯ ಬೇಡವೇ ಅಮ್ಮಯ್ಯ ನಿನಗೆ ಭಾಷೆಯ ಕೊಡುವೆ 23 ಸಟೆಯ ಮಾತುಗಳಾಡಿ ಸೆಳೆದುಕೊಂಡು ಹೋಗಿ ಹೊಟ್ಟೆಯ ಹೊರೆವ ಕೊರವಿ ನಾನಲ್ಲವಮ್ಮ ನೆಟ್ಟನೆ ಸದಾಶಿವನ ತಟ್ಟಿ ಬಂದ ಕೊರವಿಯ ಮಾತ ದಿಟ್ಟವೆಂದು ಸೆರಗ ಗಂಟಿಕ್ಕಿಕೊಳ್ಳಮ್ಮ 24 ಅಂಗನೆ ನಿನ್ನ ಮನದ ಆಯಿತವ ಹೇಳೇನು ಮಾನಿನಿ ರನ್ನೆ ಬಂಗಾರದ ಕೈಯ ತೋರೆ ಬೊಗಸೆಗಂಗಳ ನೀರೆ ಹಿಂಗುವದು ನಿನ್ನ ಕಷ್ಟ ಹುಸಿಯಲ್ಲವಮ್ಮ 25 ವಚನ :ಚಂದ್ರವದನೆಯ ಚೆಲ್ವ ವಾಮಹಸ್ತವ ಚಂದದಿಂದಲಿ ಕೊರವಿ ವಿವರಿಸಿ ಹೇಳಿದಳು ಹಿಂದಣ ಕಷ್ಟವೆಲ್ಲ ಪರಿಹಾರವಾಯಿತು ಶುಭ ಶ್ರಾವಣ ಬಹುಳಾಷ್ಟಮಿ ರಾತ್ರೆಯ ನಡುವಿರುಳು ರೋಹಿಣಿ ನಕ್ಷತ್ರದಲ್ಲಿ ನಿಮ್ಮುದರದಿ ಕೃಷ್ಣ ಜನಿಸುವನು ಕಾಣೆ ಕೇಳಮ್ಮಯ್ಯ 26 ಪಂಕಜ ಪೀತಾಂಬರ ಅ- ಲಂಕಾರ ಮೂರುತಿಯಾಗಿ ಪುಟ್ಟುವ ಕೃಷ್ಣ ಶಂಕೆಯಗೊಳದಿರೆ ಕೇಳಮ್ಮಯ್ಯ 27 ಅಮ್ಮಾ ನಿಮ್ಮುದರದಿ ಬ್ರಹ್ಮನಪಿತ ಬಂದು ನಿಮ್ಮ ನಿರ್ಬಂಧವ ಬಿಡಿಸುವನು ಕಾಣೆ ಉಮ್ಮಯಗೊಳಬೇಡವೆ ಕೇಳಮ್ಮಯ್ಯ 28 ಆದಿಮೂರುತಿ ನಿಮ್ಮುದರದೊಳವತರಿಸಿ ಮೇದಿನಿ ಭಾರವನಿಳುಹಲು ಕಂಸನ ಭೇದಿಸುವನು ಕಾಣೆ ಕೇಳುಮ್ಮಯ್ಯ 29 ಏಳು ಮಕ್ಕಳ ಕಂಸ ಅರೆಯಲಪ್ಪಳಿಸಿದನೆ ಚಳ್ಳೆ ಬೀಜದಂತೆ ನುಣಿಚಿ ತಪ್ಪಿಸಿಕೊಂಬ ಕಳ್ಳಮಗನು ಪುಟ್ಟುವ ಕೇಳಮ್ಮಯ್ಯ 30 ವಚನ : ಇಂಥಾ ಮಗನು ನಿಮ್ಮುದರದಿ ಜನಿಸಲು ಕಾಂತ ವಸುದೇವರು ಗೋಕುಲಕೆ ಒಯ್ಯಲು ಸಂತೋಷದಿಂದಲ್ಲಿ ಬೆಳೆವನೆ ಕೃಷ್ಣ ಕೇಳಮ್ಮಯ್ಯ ಗೋಕುಲದೊಳಗೆ ಶ್ರೀ ಕೃಷ್ಣನನಿಟ್ಟು ದುರ್ಗೆಯ ಈ ಕಡೆಗೆ ಕೊಂಡುಬಹ ನಿಮ್ಮ ಪತಿಯು ಕಾಕು ಕಂಸಾಸುರನು ಆಕೆಯ ಪಿಡಿಯೆ ಗಗ- ನಾಕೆ ಹಾರಿ ಹೋಗುವಳು ಮಾಯಾಕಾರಿಯು 31 ಕ್ರೂರ ರಕ್ಕಸ ಎನ್ನ ಕೊಲ್ಲುವದೇತಕೋ ನಿನ್ನ ವೈರಿ ಕೃಷ್ಣ ಹೋಗಿ ಗೋಕುಲದೊಳಗೆ ಧೀರನಾಗಿ ಬೆಳೆದು ಸಂಹಾರವ ಮಾಡುವನೆಂದು ಸಾರಿ ಹಾರಿ ಹೋಗುವಳಂಬರಕೆ ದುರ್ಗಿ 32 ನಂದನ ಗೋಕುಲದಿ ಆನಂದದಿ ಬೆಳೆದಾನು ಕೃಷ್ಣ ಸಂದೇಹ ಬೇಡವವ್ವ ನಿಮ್ಮ ಮನದೊಳಗೆ ಬಂದು ಮz
--------------
ಹೆಳವನಕಟ್ಟೆ ಗಿರಿಯಮ್ಮ
ಬ್ರಹ್ಮವೆತ್ತಲು ಪರಬ್ರಹ್ಮವೆತ್ತಲುಬ್ರಹ್ಮ ತಾವೆಯೆಂದು ವಾಚಾಬ್ರಹ್ಮವನೆ ಬಗಳುತಿಹರಿಗೆ ಪ ಆಸೆಯೆಂಬದು ಅಳಿಯಲಿಲ್ಲ ಆಕಾಂಕ್ಷೆತಾ ಕಳೆಯಲಿಲ್ಲಪಾಶವೆಂಬುದು ಬಿಗಿದು ಉರುಲು ಬಿದ್ದಿಹುದುದೋಷವೆಂಬುದು ಅಡಗಲಿಲ್ಲ ದುಷ್ಕøತವೆಂಬುದು ಒಣಗಲಿಲ್ಲಕ್ಲೇಶ ಪಂಚಕದ ವಿಷಯದಿ ಕೆಡೆದಿಹ ಮನುಜರಿಗೆ 1 ಕಾಮವೆಂಬುದು ಕಡಿಯಲಿಲ್ಲ ಕ್ರೋಧವೆಂಬುದು ಅಳಿಯಲಿಲ್ಲತಾಮಸವೆಂಬುದು ಶರೀರ ತುಂಬಿಕೊಂಡಿಹುದುಕಾಮಿತವೆಂಬುದು ಹೋಗಲಿಲ್ಲ ಕಷ್ಟವೆಂಬುದು ನೀಗಲಿಲ್ಲಪಾಮರರಾಗಿ ದಾಹಕೆ ಸಿಕ್ಕುಬಿದ್ದಿಹ ಮನುಜರಿಗೆ2 ಮೋಹವೆಂಬುದು ಹರಿಯಲಿಲ್ಲ ಮೂರ್ಖತೆಯೆಂಬುದು ಕರಗಲಿಲ್ಲಊಹೆ ಎಂಬ ಕುಬುದ್ಧಿಯು ಉಡುಗಲಿಲ್ಲದೇಹ ಶೋಧನೆ ತಿಳಿಯಲಿಲ್ಲ ದೇಹಿ ಚಿದಾನಂದ ಅರಿಯಲಿಲ್ಲಕಾಹುರ ಮದದಲಿ ಮರೆತಿಹ ಮಂಕುವನು ಮನುಜರಿಗೆ 3
--------------
ಚಿದಾನಂದ ಅವಧೂತರು
ಬ್ರಹ್ಮಾಂಡನಾಯಕನ ಪ ಕೆಂಜೆಯ ಮೇಲÉೂಪ್ಪುವ ಶಶಿ ಹಸ್ತದ ಸದ್ಯೋಜಾತ ಸ್ವಯುಂಭುವ 1 ಬೆರಳುಕದೊಳಕ್ಷಮಾಲೆಯ ವಾಮ ದೇವನ2 ಭ್ರೂಕುಟಿ ಮುಖದ ಭಯವರದ ಜಪಮಾಲೆ ಪಾಶಾಂಕುಶ ಸರ್ಪಾಭರಣದ ಘೋರನ 3 ಉಗ್ರಾಸನ ಉರಿಗಣ್ಣಿಂದು ಮೌಳಿಯ ತುತ್ಪುರುಷನ 4 ಖಡ್ವಾಂಗ ಢಮರುಗ ಕರದ ಕಪಾಲೇಂದು ಮೌಳಿಯ ಈಶಾನ್ಯನ 5 ಕಂಡೆನು ಉತ್ತರದೊಳ್ ವಾಮದೇವನ ಕಂಡೆನು 6 ಫಣಿ ಬಂಧಿವಿದ್ದ ಕೆಳದಿ ರಾಮೇಶನ 7
--------------
ಕವಿ ಪರಮದೇವದಾಸರು
ಬ್ರಹ್ಮಾಸ್ತ್ರದ ನಿಜವನು ನಾ ಪೇಳುವೆಬ್ರಹ್ಮಾಸ್ತ್ರವೇ ಬ್ರಹ್ಮವುಬ್ರಹ್ಮಾಸ್ತ್ರ ತಾನೆಂದು ಭಜಿಸುವಾತನುಬ್ರಹ್ಮಾಸ್ತ್ರವೇ ಆತನು ಬ್ರಹ್ಮಾಸ್ತ್ರ ಪ ಪೀತಾಂಬರದುಡಿಗೆ ರಾಶಿಯು ಹಾಕಿದ ಎದೆಕಟ್ಟುಪೀತವಾಗಿಹುದೇ ಬ್ರಹ್ಮಾಸ್ತ್ರಪೀತವರಣ ಪೀತ ಪುಷ್ಟ ಗಂಧಾನುಲೇಪನಪೀತದಿಂದಿಹುದೇ ಬ್ರಹ್ಮಾಸ್ತ್ರ ಪ್ರೀತಸರ್ವವು ಆಗಿಪ್ರೀತ ಪ್ರೀತೆಯೆ ಆಗಿ ಪೀತಾವರಣವೆ ಬ್ರಹ್ಮಾಸ್ತ್ರ 1 ಬಿಗಿದ ಬತ್ತಳಿಕೆಯು ಎಡಹಸ್ತ ಶಾರ್ಙದಿಝಗಿ ಝಗಿಸುವುದೇ ಬ್ರಹ್ಮಾಸ್ತ್ರತೆಗೆದು ಕೆನ್ನೆಗೆ ಶರವನೆಳೆದು ರೌದ್ರದಿನಿಗಿನಿಗಿನಿಗಿಸುವುದೇ ಬ್ರಹ್ಮಾಸ್ತ್ರ 2 ವೀರ ಮಂಡಿಯ ಹಾಕಿ ಖಡ್ಗವ ಸೆಳೆದುತೂರತಲಿಹುದೇ ಬ್ರಹ್ಮಾಸ್ತ್ರಕಾರುವ ಕಿಡಿಗಳ ಕ್ರೂರ ದೃಷ್ಟಿಯಲಿಘೋರವಾಗಿಹುದೇ ಬ್ರಹ್ಮಾಸ್ತ್ರಬಾರಿಬಾರಿಗೆ ಹೂಂಕಾರಗೈಯುತ ಅವಡುಗಚ್ಚಿಮಾರಿಯಾಗಿಹುದೇ ಬ್ರಹ್ಮಾಸ್ತ್ರಸಾರ ಕಿಚ್ಚಿನ ಜ್ವಾಲೆ ಭುಗುಭುಗು ಛಟಛಟಎನುತಲಿಹುದದೇ ಬ್ರಹ್ಮಾಸ್ತ್ರ3 ದಿಸೆಗಳು ಮುಳುಗಿವೆ ಉರಿಯ ಕಾಂತಿಯಲಿರವಿಶತ ಕೋಟೆಯ ರಶ್ಮಿ ಚೆಲ್ಲುವುದೇ ಬ್ರಹ್ಮಾಸ್ತ್ರಪಸರಿಸಿ ಇಹ ಬ್ರಹ್ಮಾಂಡವನಂತವಭಸ್ಮ ಮಾಡುವುದೇ ಬ್ರಹ್ಮಾಸ್ತ್ರನುಸಿಗಳು ಅಸಂಖ್ಯಾದಿ ಬಹ್ಮರುದ್ರಾದ್ಯರಅಸುವ ಕೊಂಬುದೇ ಬ್ರಹ್ಮಾಸ್ತ್ರ 4
--------------
ಚಿದಾನಂದ ಅವಧೂತರು
ಭಕುತರ ರಿಣಕಂಜಿ ಅಡಗಿದರೇ | ಅಖಿಳದಿ ಬಿಡುವರೇ ಪ್ರಕಟಿಸಿ ಬಾ ರಂಗಯ್ಯಾ ಪ ಕತ್ತಲೆಯೊಳು ಹೆಜ್ಜೆ ದೋರದೇ ತಿರುಗುತಾ | ಮತ್ತೆ ದೊಡ್ಡ ಬೆಟ್ಟದಾ ಮರಿಲ್ಯಾಡುತಾ | ಅತ್ತಿತ್ತ ನೋಡದೆವೆ ಝುಡಪಿನೊಳಗ ಹೊಕ್ಕು | ಉತ್ತಮ ನರಮೃಗದಂತಡವಿಯ ಸೇರಿ1 ಬಡತನ ದೋರಲೆಂದು ಯಾಚಕನಾದರೇನು | ಕಡಲ ಬೊರಿಯಾ ಮನೆ ಮಾಡಿರಲೇನು | ಜಡೆಗಟ್ಟ ನಾರ ಸೀರೆನುಟ್ಟು ಉಪವಾಸ ಮಾಡಿ | ಗಿಡವೇರಿ ಮಡುಹೊಕ್ಕು ಕಳವಿಲಿ ತಿರುಗುತಾ 2 ಮುನಿಯಂತೆ ದಿಗಂಬರ ರೂಪವ ತಾಳಲೇನು | ಜನದ ಕಲಿಕೀ ಮಾತು ಕಡೆಗಾಣುದೇ | ಘನಗುರು ಮಹಿಪತಿ ಸುತ ಪ್ರಭು ನಿನ್ನೊಳಿದ್ದಾ | ಸಂತೈಸಿ ಶರಣರ ರಕ್ಷಿಸಯ್ಯಾ 3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಭಕುತರ ಸಂರಕ್ಷಣಾ ನಾರಾಯಣ ಪ ಖಗಪನ ಸ್ಕಂದರೋಹ ಅಘದೂರ ಅಭಯಹಸ್ತ ಸ್ವಗತಭೇದಶೂನ್ಯ ಸರ್ವಾವಸ್ಥೆಯೊಳೆನ್ನ ವಿಗತಕ್ಲೇಶನ ಮಾಡಿ ಸತತಕಾಪಾಡಲಿ ನಿಗಮವಿನುತ ಜಗದಾದಿ ವಂದ್ಯನೆ ದೇವಾ 1 ವರುಣಪಾಶಗಳಿಂ ಜಲಚರಜಂತುಗಳಿಂ ಮತ್ಸ್ಯ ಮೂರುತಿ ತಾ ರಕ್ಷಕನಾಗಿರಲಿ ಧಾರುಣಿ ನೆಲದೊಳು ಶ್ರೀ ವಾಮನ ಕಾಯಲಿ ಸರ್ವಾಕಾಶದೊಳು ತ್ರಿವಿಕ್ರಮ ಕಾಯಲಿ2 ದುರ್ಗರಣಾಗ್ರವನ ಅರಿವರ್ಗಗಳಲಿ ನರಹರಿದೇವ ಸಂರಕ್ಷಕನಾಗಿರಲಿ ಮಾರ್ಗಗಳಲ್ಲಿ ಹಿರಣ್ಯಾಕ್ಷ ವೈರಿಯು ಕಾಯಲಿ ದುರ್ಗಮಶೈಲದೊಳು ಶ್ರೀ ಭಾರ್ಗವ ರಕ್ಷಿಸಲಿ 3 ದಾಶರಥಿ ಪ್ರವಾಸದಲಿ ನಿತ್ಯ ದೇಶಾಂತರಗಳಲ್ಲಿದ್ದರು ಕಾಯಲಿ ಈಶ ಶ್ರೀಮನ್ನಾರಾಯಣ ಎನ್ನ ಕ್ರೂರ ಕರ್ಮಗಳಿಂದ ರಕ್ಷಿಸಲನುದಿನ ನರಾವತಾರ ಎನ್ನ ಗರುವಿನಿಂ ರಕ್ಷಿಸಲಿ 4 ವಿರೋಧಿವರ್ಗದಿ ದತ್ತಾತ್ರೇಯ ಕಾಯಲಿ ಸರ್ವಕರ್ಮಬಂಧಜ್ಞಾನದಿಂದ ಕಪಿಲಾ ಮೂರುತಿ ರಕ್ಷಿಸಲಿ ಅನುದಿನದಲಿ ಎನ್ನ ಸನತ್ಕೂ- ಮಾರನು ಎನ್ನ ಕಾಯಲಿ ಕಾಮದಲ್ಲಿ 5 ದಾನವ ಮಧುಕೈಟಭ ಹರೆ ಹಯವದನ ಘನ್ನಪರಾಧದಿ ರಕ್ಷಕನಾಗಿರಲಿ ಮನ್ನಿಸಿ ದೇವತೆಗಳು ಸಾಧನವೀಯಲಿ ಸನ್ನುತಾಂಗ ಧನ್ವಂತ್ರಿಮೂರುತಿ ಹರಿ ಎನ್ನ ರಕ್ಷಕನಾಗಿರಲಿ ರುಜೆಯೊಳು6 ಜ್ಞಾನರೂಪಿ ವೃಷಭ ಸೀತಾತಪದಿಂದ ಎ- ನ್ನನುದಿನ ಈ ದ್ವಂದ್ವÀದಿ ಕಾಯಲಿ ಯಜ್ಞಮೂರುತಿ ಲೋಕಾಪವಾದದಿ ಕಾಯಲಿ ಸುಜ್ಞಬಲರಾಮನು ದುರ್ಜನರ ಭಯದಿಂ ಅನುದಿನ ರಕ್ಷಿಸಲಿ 7 ಘನ್ನಮಹಿಮ ಶೇಷ ಸರ್ಪಬಾಧೆಗಳಿಂದ ಜ್ಞಾನದಾತೃ ಹರಿಸೇವೆಗೆ ಬರುತಿಹ ನಾನಾ ವಿಘ್ನಗಳಿಂದ ರಕ್ಷಿಸುತಿರಲಿ ಘನ್ನ ಮ- ಹಾ ನರಕ ಬಾಧೆಯಿಂ ತಪ್ಪಿಸಲಿ ಕೂರ್ಮಮೂರುತಿ ಕಾಪಾಡಲಿ ನಿತ್ಯದಿ 8 ವೇದವ್ಯಾಸನು ಶುಧ್ಧಜ್ಞಾನವನೀಯಲಿ ಬುದ್ಧಿಮೋಹದಿಂದ ಬುದ್ಧನುದ್ಧÀ್ದರಿಸಲಿ ಹೃದಯದ ಕಲಿಭಾಧೆ ಕಲ್ಕಿ ತಾ ಹರಿಸಲಿ 9 ಉದಯಕಾಲದಿ ಶ್ರೀ ಕೇಶವ ರಕ್ಷಿಸಲಿ ವೇಣು ಹಸ್ತ ಗೋವಿಂದ ಸಂಗಮದಲ್ಲಿ ಪೂರ್ಣಕರುಣೆ ಯಿಂದ ಎನ್ನ ಕಾಪಾಡಲಿ ಪೂರ್ವಾಹ್ನದಲಿ ನಾರಾಯಣ ರಕ್ಷಿಸಲಿ10 ಮಾಧವ ಅಪ ರಾಹ್ನದಲೆನ್ನ ರಕ್ಷಿಸಲಿ ಬಾಧೆಯಿಂ ಸಾಯಂಕಾಲದಿ ರಕ್ಷಿಸಲಿ 11 ಪ್ರದೋಷದಲಿ ಹೃಷೀಕೇಶ ರಕ್ಷಿಸಲೆನ್ನ ಪದುಮನಾಭ ಅರ್ಧರಾತ್ರಿಯಲಿ ಸಲಹಲಿ ಶ್ರೀಧರನೆನ್ನಪರಾತ್ರಿಯಲಿ ಸಲಹಲಿ12 ಜನಾದರ್Àನನು ಎನ್ನನು ಉಷಃಕಾಲದಲಿ ಸಂಧ್ಯಾಕಾಲದಿ ದಾಮೋದರ ರಕ್ಷಿಸಲಿ ಕಾಲನಾಮಕ ಬೆಳಗಿನಝಾವದಿ ಕಾಯಲಿ 13 ನಕ್ರನ ಹರಿಸಿದ ಚಕ್ರಾಯುಧವು ಎನ್ನ ಶತ್ರುಬಾಧೆಗಳಿಂದ ರಕ್ಷಿಸುತಿರಲಿ ವಿಕ್ರಮಗದೆಯು ಆಶ್ರಿತರುಪದ್ರದು- ಅನುದಿನ 14 ಪ್ರಮಥ ಭೂತ ಪಿಶಾಚ ಪ್ರೇತ ಭಯದಿ ಪಾಂಚಜನ್ಯ ಶಂಖರಾಜ ರಕ್ಷಿಸಲಿ ದುಮ್ಮನ ಶತ್ರು ಬಾಧೆಗಳಿಂದ ಖಡ್ಗವು ಖೇಟವು ಸರ್ವ ಅನಿಷ್ಟದಿಂ ರಕ್ಷಿಸಲಿ 15 ಅವನ ನಾಮರೂಪ ದಿವ್ಯಾಯುಧದ ಸ್ಮರಣೆ ಸರ್ವ ಬಂಧಗಳೆಲ್ಲ ತಕ್ಷಣದಲ್ಲಿ ನಿವಾರಣೆಯಾಗಿ ನಿವೃತ್ತಿಮಾರ್ಗಕ್ಕೆ ಶುಧ್ಧಭಾವ ಭಕುತಿಗೆ ಕಾರಣವು ಸತ್ಯ ಗರುಡ ವಿಷ್ಟಕ್ಸೇನ ಕಷ್ಟದಿಂದ ರಕ್ಷಿಸಲಿ 16 ಹರಿಯ ವಾಹನಾದಿಗಳು ವಿಪತ್ತುಗಳ ಹರಿಸಲಿ ಸರ್ವರಂತರ್ಯಾಮಿ ನಿನ್ನ ನಂಬಿರಲು ಸರ್ವಭಾಧೆಗಳಲ್ಲ ಪರಿಹಾರವಾಗಲಿ 17 ಕಾಲ ಸರ್ವಾವಸ್ಥೆಯೊಳೆನ್ನ ಸರ್ವೋತ್ತಮ ದೇವ ಸರ್ವದಾ ರಕ್ಷಿಸಲಿ ಸರ್ವರೊಡೆಯ ಶ್ರೀಮನ್ನಾರಾಯಣ ನಿನ್ನ ಕರುಣ ಕವಚವು ಎನಗಿರಲನುದಿನ 18 ಬಹಿರಾಂತರದಿ ಮೇಲ್ ಕೆಳಗು ಮಧ್ಯದಲ್ಲಿ ದಿಕ್ಕುವಿದಿಕ್ಕಿನೊಳು ಉರಗಾದ್ರಿವಾಸವಿಠಲ ಸ್ವಾಮಿ 19
--------------
ಉರಗಾದ್ರಿವಾಸವಿಠಲದಾಸರು
ಭಕುತವತ್ಸಲ ಶೀಲಾ-ಶೇಷಗಿರಿಯ ಲೋಲಾ ಪ ನೀ ಕರುಣಿಸೊ ಎನ್ನಾ-ಕುಲಸ್ವಾಮಿ ಘನ್ನಾಅ.ಪ ಮಂದಭಾಗ್ಯನು ನಾನು ವೃಂದಾರಕ ವಂದ್ಯ ತಂದೆ ಎನಗೆಂದೆಂದು ಅನಿಮಿತ್ತಬಂಧೂ ವಂದಿಪೆ ನಿನ್ನಯ ದ್ವಂದ್ವಪಾದದ ಧ್ಯಾನ ಅ- ದೊಂದನಾದರು ಇತ್ತು ಬಂಧವ ಪರಿಹರಿಸೊ ಹಿಂದೆ ನಿನ್ನಯ ನಾಮ ಒಂದೇ ಬಂಧಹರಿಸಿತು ಭಕುತವೃಂದಕೆ ಅಂದು ಅವರೇನೆಂದು ಕರೆದರೋ ಮಂದರೋದ್ಧರ ಬಂಧಮೋಚಕ1 ಓಲೈಪರೋ ಮುಕ್ತಜಾಲ ನಿನ್ನ ಕಾಲನಾಮಕ ಆಪತ್ಕಾಲಬಾಂಧವನೆಂದು ಕಾಲಿಗೆರಗುವೆ ಕೃಪಾಳು ನೀನಲ್ಲವೆ ಸೊಲ್ಲಲಾಲಿಸೊ ಲಕುಮಿನಲ್ಲ ನೀ ನಲ್ಲದಲೆ ಇನ್ನಿಲ್ಲವೆಂದಿಗೂ ಬಲ್ಲಿದರಿಗತಿಬಲ್ಲಿದನು ಆ- ವಲ್ಲಿ ನೆನೆದರೆ ಅಲ್ಲೇ ಪೊರೆವೆ 2 ಪುರಾಣಪುರುಷನೆ ಪರಮ ಕರುಣಿ ಎಂದು ಪುರಾಣದೊಳು ನೀನೆ ಪ್ರತಿಪಾದ್ಯನೊ ಕರಿ ಧ್ರುವ ಭೃಗು ಭೀಷ್ಮರ ಚರಿತೆಯ ನೋಡಲು ಹರಿ ನಿನ್ನ ಸರಿಯುಂಟೆ ದುರಿತಾಪಹಾರದಿ ಸ್ಮರಿಪರಘ ಪರಿಹರಿಪ ಶ್ರೀಪ ಸುರಪಹರಮುಖವಿಬುಧವಂದ್ಯ ದರಸುದರ್ಶನಧಾರಿ ಶ್ರೀ ವೇಂಕಟೇಶಉರುಗಾದ್ರಿವಾಸ ವಿಠಲಾ 3
--------------
ಉರಗಾದ್ರಿವಾಸವಿಠಲದಾಸರು
ಭಕುತಿ ಸುಲಭವಲ್ಲ ಶ್ರೀ ಹರಿ ಭಕುತಿ ಸುಲಭವಲ್ಲ ಪ ಮುಕುತಿಗೆ ಯುಕುತಿ ಬೇರೆಯಿಲ್ಲ ಶ್ರೀ ಹರಿ ಅ.ಪ ಉರುತರ ಕ್ಲೇಶಕೆ ಗುರಿಯಾಗುತಿರಲು ಹರಿ ಹರಿಯೆನ್ನುತ ಕಿರುಚುತ ಸತತವು ಕ್ಲೇಶ ಹರಿಯನು ಸುಲಭದಿ ಮರೆವುದು ಭಕುತಿಯ ತರವಾಗುವುದೇ 1 ಭುವಿಯಲಿ ಬಹು ವಿಧ ಸುವಿನೋದಗಳ ಸವಿಯನು ಪೊಂದಲು ವಿವಿಧ ಭಾಗ್ಯಗಳ ಸುವಿನಯದಲಿ ಮಾಧವನನು ಬೇಡಲು ಹವನ ಹೋಮಗಳು ಭಕುತಿಯಾಗುವುದೇ 2 ಶ್ರವಣ ಮನನ ವಿಧಿಧ್ಯಾಸಗಳಿಂ ಸಿರಿಪತಿ ಗುಣಗಣದಲಿ ದೃಢಮತಿಯನು ಮಾಡುತ ತನುಮನಗಳನÀರ್ಪಣೆಯನು ಮಾಡುತ ಮನಸಿಜ ಜನಕ ಪ್ರಸನ್ನನಾಗುವಂಥ 3
--------------
ವಿದ್ಯಾಪ್ರಸನ್ನತೀರ್ಥರು
ಭಕುತಿಯಲಿ ಭಜಿಸಿ ಹರಿಯ ಸುಖಿಸಬಾರದೇ ಪ ಪ್ರಕಟದಿ ಸಜ್ಜನ ನಿಕಟದಿ ತಾಮಸ| ಶಕಟ ಮುರಿದ ಸುರ ಮುಕುಟ ಮಣಿಯಾ ಅ.ಪ ತರಣೀಯಾ ಕೋಟಿ ಪ್ರಕಾಶದಿ ಧರಣಿಯಾ ರಮಣನ ನಾಮ| ಕರಿ ಕಿರಿಯನೆ ಶಿರಿ| ಗರುಡಗರಿಯದೇ ಭರದಿ ತಾ ಬರುತದೆ ಶರಣರಾ ಹೊರೆದ 1 ಮರುವಿನ ಕತ್ತಲೆ ನೂಕುವ ಚರಣವ ಅರವಿನ ದೀಪವ ಹಚ್ಚಿ| ಕುರುವಿನಾ ಚಿನ್ಮಯ ನೊಡಲು ಗುರುವಿನಾ| ಚರಣವ ಪೂಜಿಸಿ ಕರುಣವ ಸಾಧಿಸಿ ತರುಣೋಪಾಯದ ಚರಣವ ಬಲಿಯೋ 2 ಮನವಧಾನದಿ ನಿಲಿಸಿ ತನುವನಾ ಸೇವೆಗರ್ಪಿಸಿ| ಘನವನು ಮಾಡುತಾ ಸುಜನರಾ ಅನುವನು ಕನಸಿಲೇ| ಘನ ಗುರು ಮಹಿಪತಿ-ಜನ ಪ್ರಭುವಿನ ಅನುದಿನದಲಿ ಪಾಡಿ3
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಭಕುತೋದ್ಧಾರ ಪರಿಭವದ್ವೈದ್ಯ ನಿಖಿಲಬ್ರಹ್ಮಾಂಡ ಸುಸೂತ್ರ ಸಿರಿಬಾಧ್ಯ ನಿಖಿಲವ್ಯಾಪಕ ನಿಖಿಲರಕ್ಷ ಭಕುತರಾತ್ಮಕ ಭಕುತಪಕ್ಷ ಪ್ರಕಟರಕ್ಕಸಕುಲ ನಿರ್ಮೂಲನೆ ಮುಕುಟಮಾನಸ ಮನದಿ ಭಜಿಪರ ಮುಕುತಿದಾಯಕ ಮಣಿವೆನೈ ಮಹ ಮುಕುತಿಸಂಪದ ಕರುಣಿಸಭವ ಪ ಕಲ್ಪನೆಯಿಂದೊಂದೆತ್ರಯವೆನಿಸಿ ಕಲ್ಪ ಕಲಿಸಿ ಕಲ್ಪನೆಯಿಂದ ನಾಲ್ಕುಘೋಷ ರಚಿಸಿ ಕಲ್ಪನಿಲ್ಲದೆ ಕಲ್ಪಕಲ್ಪದರರ್ಹೊಗಳಿಸಿ ಕಲ್ಪಿತದಿ ನೆಲಸಿ ಕಲ್ಪಿತದಿ ಸಂಕಲ್ಪ ತೋರಿಸಿ ಕಲ್ಪಿತದಿಂ ಸಂಕಲ್ಪ ಮುಳುಗಿಸಿ ಕಲ್ಪ ಕಲ್ಪಾಂತರದಿ ಉದಿಸಿ ಕಲ್ಪತಕೆ ನೀ ಬೇರೆಯೆನಿಸಿ ಕಲ್ಪನದೊಳು ಕಲ್ಪ ಕೂಡಿಸಿ ಕಲ್ಪನಕೆ ಮಹಪ್ರಳಯವೆನಿಸಿ ಕಲ್ಪನೆಯನು ಮತ್ತು ತಿರುಗಿಸಿ ಕಲ್ಪಿಸಿದಿ ಪುನ:ಸಫಲವೆನಿಸಿ ಕಲ್ಪನೆಯನು ಪೊಗಳಲಿನ್ನಾವ ಕಲ್ಪನಕೆ ತುಸು ಶಕ್ಯವಲ್ಲವು ಕಲ್ಪ ಕಲ್ಪಾಂತರದಿ ಎನ್ನನು ಕಲ್ಪಿಸದಿರು ಕಲ್ಪತರುವೆ 1 ಕಲ್ಪಿಸಿದೆ ಕೋಟಿ ತ್ರಿದಶತ್ರಯೆನಿಸಿ ಕಲ್ಪ ಕಲ್ಪಕೆ ಕಲ್ಪಿತೀಯುವ ಮಂತ್ರ ಕಲ್ಪಿಸಿ ಕಲ್ಪಿಸಿದಿಯೊ ಕಲ್ಪ ಕಲ್ಪದಿ ಐದು ಮೇಲೆನಿಸಿ ಕಲ್ಪಸಾರೆನಿಸಿ ಕಲ್ಪನೆ ಮಹತಾರಕೆನಿಸಿ ಕಲ್ಪನೆ ಘನಗಾಯತ್ರೆನಿಸಿ ಕಲ್ಪನೆಯಲಿ ಸ್ಥೂಲವೆನಿಸಿ ಕಲ್ಪನೆ ಬಹುಸೂಕ್ಷ್ಮವೆನಿಸಿ ಕಲ್ಪನೆಯ ಮಹಕಾರಣೆನಿಸಿ ಕಲ್ಪನದಿ ಈ ಕಲ್ಪವಿರಿಸಿ ಕಲ್ಪನಕೆ ನೀನೆ ಸೂತ್ರನೆನಿಸಿ ಕಲ್ಪನಕೆ ನೀನೆ ಚೈತನ್ಯನೆನಿಸಿ ಕಲ್ಪ ಕುಣಿಸುವಿ ಕಲ್ಪನಿಲ್ಲದ ಕಲ್ಪದ ನೆಲೆಬುಡ ನೀನೆನ್ನಯ ಕಲ್ಪನೆಯೊಳುದಯನಾಗಿ ಕಲ್ಪನೆಯ ಕಡೆಗಾಣಿಸಭವ 2 ಕಲ್ಪ ಕಲ್ಪಕೆ ಆಚೆ ನೀನೆನಿಸಿ ಕಲ್ಪ ನಿರ್ಮಿಸಿ ಕಲ್ಪ ಕಲ್ಪದಿ ನೀನೆ ಆವರಿಸಿ ಕಲ್ಪ ನಡೆಸಿ ಕಲ್ಪ ಕಲ್ಪದಮೂಲ ನೀನೆನಿಸಿ ಕಲ್ಪದಿಂ ನುಡಿಸಿ ಕಲ್ಪದಲಿ ಮಿಥ್ಯಕಲ್ಪ ಪುಟ್ಟಿಸಿ ಕಲ್ಪದಲಿ ನಿಜಕಲ್ಪ ಸೃಷ್ಟಿಸಿ ಕಲ್ಪದಿಂ ತ್ರಿಕಲ್ಪ ರಕ್ಷಿಸಿ ಕಲ್ಪದಿಂ ಕಲ್ಪಕ್ಕೆ ಶಿಕ್ಷಿಸಿ ಕಲ್ಪವೇ ಮಹ ಮಾಯವೆನಿಸಿ ಕಲ್ಪದಿಂದಲೇ ಅದನು ಗೆಲಿಸಿ ಕಲ್ಪದಿಂ ಕಲ್ಪವನು ಬೆಳಗಿಸಿ ಕಲ್ಪದಿಂ ಕಲ್ಪವನು ತೊಲಗಿಸಿ ಕಲ್ಪನರಿಯುವ ಕಲ್ಪಕೆ ಮಹ ಕಲ್ಪನಿದು ಬಹು ಸುಲಭವೆನಿಸಿ ಕಲ್ಪಿತದಿಂ ರಕ್ಷಿಸುವ ಮಮ ಕಲ್ಪನಿಲ್ಲದವರ ಶ್ರೀರಾಮ 3
--------------
ರಾಮದಾಸರು
ಭಕ್ತವತ್ಸಲ ಹರಿ ಎಂಬ ಬಿರುದು ನಿನ ಗಿತ್ತವರ್ಯಾರಯ್ಯಾ ಹೇ ಜೀಯಾ ಪ ತತ್ತರಿಸುತಲಿಹರು ಈ ಜಗದೊಳು ಅ.ಪ ಪರಿಪರಿಯಲಿ ನಿನ್ನ ಮೊರೆಯ ಹೊಕ್ಕಿರುವ ಪರಮ ಸುಜನರುಗಳು ಈ ಧರೆಯೊಳು ಒರಳಿಗೊಡ್ಡಿರುವ ಶಿರಗಳುಳ್ಳವರಂತೆ ದುರುಳರ ಭಯದಿಂದ ನರಳುತಿರೆ 1 ವಾಸಕೆ ಗೃಹವಿಲ್ಲ ಲೇಶ ಸುಖಕೆ ಅವ ಕಾಶ ಇವರಿಗಿಲ್ಲ ಈ ಭುವಿಯೊಳು ಶ್ರೀಶನಾಗಿರೆ ನಿನ್ನ ದಾಸರೊಳಗೆ ಪರಿ ಹಾಸ ಮಾಡುತಲಿಹೆಯೋ ಜಗದೀಶ 2 ಪರಿ ಘನ್ನಬಿರುದುಗಳು ಇನ್ನು ಉಳಿವುದೆಂತೋ ನಾ ಕಾಣೆ ಸನ್ನುತಿಸುವವರಿಗೆ ಇನ್ನಾದರು ಸುಖ ವನ್ನು ನೀ ದಯಮಾಡೋ ಪ್ರಸನ್ನ 3
--------------
ವಿದ್ಯಾಪ್ರಸನ್ನತೀರ್ಥರು
ಭಕ್ತವತ್ಸಲನೆಂಬ ಬಿರುದು ನಿನಗಿರಲು ಭಕ್ತಜನಾಪತ್ತಿಗ್ಯಾಕೆ ನೀ ಬರದಿರುವಿ ಪ ಮುಕ್ತಿದಾಯಕನೆಂಬ ಯುಕ್ತ ಬಿರದ್ಹೊತ್ತಿರುವಿ ಚಿತ್ತಜಪಿತ ಭಕ್ತರ್ಹೊತ್ತಿಗ್ಯಾಕಿಲ್ಲೋ ನಿತ್ಯ ಬಿಡದ್ಹೊಗಳುವ ಸತ್ಯ ವೇದೋಕ್ತಿಗಳು ವ್ಯರ್ಥವೇನಯ್ಯಾ 1 ದೋಷನಾಶನೆ ನಿನ್ನ ಸಾಸಿರನಾಮಗಳಿಂ ಘೋಷಿಪರು ಮನುಮುನಿ ಬೇಸರಿಲ್ಲದಲೆ ದಾಸಜನರಾಶಕ್ಕೆ ಬೇಸತ್ತ ಬಳಿಕ ನಿನ ಗೀಸು ಬಿರುದುಗಳಿರ್ದು ಲೇಶವೇನಯ್ಯಾ 2 ಪರಮ ಕರುಣಾಕರ ಶರಣಜನಮಂದಾರ ಚರಣಸ್ಮರಿಪರ ಘೋರದುರಿತಪರಿಹಾರ ಖರೆಯಿರ್ದರಿಗೆನ್ನ ದುರಿತಮಂ ಪರಿಹರಿಸಿ ಕರುಣದಿಂ ರಕ್ಷಿಸೈ ಧರೆಗಧಿಕ ಶ್ರೀರಾಮ 3
--------------
ರಾಮದಾಸರು
ಭಕ್ತಿ ಒಂದೇ ಸಾಕು ಸಜ್ಜನರಿಗೆ | ಕು ಯುಕ್ತಿಯಾತಕೆ ಹಲವು ಬಗೆ ಪ ಶಕ್ತರಾಗಿಹ ಅಧಿಕಾರಿಗಳಿಗೆ ಕು- ಯುಕ್ತಿ ಏತಕೆ ಹಲವು ಬಗೆ ಅ.ಪ ದೀನರು ನಾವೆಂದು ದಿನ ದಿನದೀ ನಾನು ಎಂಬುದು ಬಿಟ್ಟಿರುವವಗೆ 1 ಲೇಸಾದ ದಾರಿಯೊಳ್ ನಡಿಯುವರಿಗೆ2 ಹರುಷ ಶೋಕಗಳೊಂದೆ ಸಮನಾಗಿ ತಿಳಿದು ಪುರುಷ ಪ್ರಯತ್ನಗಳನು ಮೆರೆದು ಗುರುರಾಮವಿಠಲನ ಸ್ಮರಿಪರಿಗೆ 3
--------------
ಗುರುರಾಮವಿಠಲ
ಭಕ್ತಿಯನು ಪಾಲಿಸುತ ಭಕ್ತರನು ಪಾಲಿಸುವ ಮುಕ್ತಿದಾಯಕ ಹರಿಯ ಸೇವೆಯನು ಮಾಳ್ಪೇ ಪ ಪಂಚೇಂದ್ರಿಯವ ಗೆದ್ದು ಪಂಚಾಮೃತಗಳಿಂದ ಕಂಚಿಪುರ ವಾಸಿಯ ಕಾಯವನು ತೊಳೆದೂ 1 ಆರು ಅಂಗಳ ಜೈಸಿ ಆರು ಶಾಸ್ತ್ರಗಳಿಂದ ಧಾರೆ ಪುರವಾಸಿಗೇ ಗಂಧ ಲೇಪಿಸುತಾ 2 ಚಾರು ವೇದಗಳಿಂದ ನಿತ್ಯ ಪುಷ್ಪವೇರಿಸುತ 3 ಎಂಟ ಕೀಳರ ಗೆದ್ದು ತುಂಟರೈವರ ಕೊಂದು ಬಂಟನಾಗುತ ಹರಿಯ ಮಹಿಮೆಯನು ಭಜಿಸಿ 4 ಶಾಪ ತಾಪವ ಕಳೆದು ತ್ರಿಪುರಾರಿ ವದ್ಯನಿಗೆ ಧೂಪದೀಪಗಳಿಂದ ಆರತಿಯ ಬೆಳಗೀ 5 ಅನುಮಾನವನು ತ್ಯಜಿಸಿ ಶ್ರೀ ಚೆನ್ನಕೇಶವನಿಗೆ ತನುಮನ ಧನದಿಂದ ಆತ್ಮವರ್ಪಿಸುವೇ 6
--------------
ಕರ್ಕಿ ಕೇಶವದಾಸ