ಒಟ್ಟು 1764 ಕಡೆಗಳಲ್ಲಿ , 104 ದಾಸರು , 1291 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

139-6ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಸ್ವರ್ಣಪುರಿಯಲಿ ಜಗತ್ ಪ್ರಖ್ಯಾತ ಸ್ವಾಮಿಗಳುಘನಮಹಿಮ ಸೂರಿವರ ಸತ್ಯಬೋಧಾರ್ಯರಸನ್ನಮಿಸಿ ಈ ಮಹಾಮೂರ್ತಿಗಳಾಹ್ವಾನದಿದಿನ ಕೆಲವು ನಿಂತರು ಜಗನ್ನಾಥ ಆರ್ಯ 1ಮೂರ್ಜಗವು ಅರಿವುದು ಸತ್ಯ ಬೋಧರ ಮಹಿಮೆವಾಜಿಮುಖ ಕೋಡ ನೃಹರಿ ರಾಮಪ್ರಿಯರುಪ್ರಜ್ವಲಿಪ ಸೂರ್ಯನ್ನ ರಾತ್ರಿಯಲಿ ತೋರಿಹರುಭಜಕರಸುರಧೇನುನಿವ್ರ್ಯಾಜ ಕರುಣೆ2ಶಿಷ್ಯರ ಸಹ ಜಗನ್ನಾಥದಾಸರು ತಮ್ಮನಿಯಮಗಳ ತಪ್ಪದೇ ಭಾಗವತಧರ್ಮಕಾಯವಾಙ್ಮನ ಶುದ್ಧಿಯಲಿ ಜ್ಞಾನ ಭಕ್ತಿಸಂಯುತದಿ ಮಾಳ್ಪುದು ಕಂಡರು ಮುನಿಗಳು 3ಹರಿದಾಸವರ ಜಗನ್ನಾಥದಾಸಾರ್ಯರಲಿಹರಿಯ ಒಲಿಮೆ ಅಪರೋಕ್ಷದ ಮಹಿಮೆನೇರಲ್ಲಿ ತಾ ಕಂಡು ಬಹುಪ್ರೀತಿ ಮಾಡಿದರುಹರಿಪ್ರಸಾದದ ಸವಿಯ ಅರಿತ ಆ ಗುರುಗಳು 4ಸ್ವರ್ಣಪುರಿಯಿಂದ ಜಗನ್ನಾಥದಾಸಾರ್ಯರುದಿಗ್ವಿಜಯದಿಂದಲಿ ಶಿಷ್ಯ ಜನಗುಂಪುಸೇವಕರ ಸಹ ಊರು ಊರಿಗೆ ಪೋದರುಆ ಎಲ್ಲ ಕ್ಷೇತ್ರದಲು ಧರ್ಮ ಪ್ರಚಾರ 5ಧರ್ಮ ಪ್ರಚಾರ ಹರಿಭಜನೆ ಪೂಜಾದಿಗಳುನಮಿಸಿ ಬೇಡುವವರ ಅನಿಷ್ಟ ಪರಿಹಾರಕರ್ಮಜ ದಾರಿದ್ರ್ಯಾದಿಗಳ ಕಳೆದು ಸಂಪದವಧರ್ಮ ಆಚರಣೆ ಬುದ್ಧಿಯ ಒದಗಿಸಿದರು 6ಸುರಪುರಾದಿ ಬಹು ಸ್ಥಳದಲ್ಲಿ ಪ್ರಮುಖರುಹರಿಭಕ್ತರು ಮಂಡಲೇಶ್ವರರು ಇವರಚರಣಕೆರಗಿ ಬಹು ಅನುಕೂಲ ಕೊಂಡರುಹರಿವಾಯು ಒಲಿಮೆ ಎಷ್ಟೆಂಬೆ ದಾಸರಲಿ 7ವರಪ್ರದ ವರದಾ ತೀರದಲಿ ಸಶಿಷ್ಯಧೀರೇಂದ್ರ ಯತಿವರ್ಯರ ಕಂಡು ನಮಿಸಿಆ ರಿತ್ತಿ ಕ್ಷೇತ್ರದಲಿ ವಾಸಮಾಡಿಹರುಧೀರೇಂದ್ರ ತೀರ್ಥರ ಅನುಗ್ರಹ ಕೊಂಡು 8ಸೂರಿಕುಲ ತಿಲಕರು ಉದ್ದಾಮ ಪಂಡಿತರುಧೀರೇಂದ್ರ ಗುರುಗಳು ಕಾರುಣ್ಯಶರಧಿಊರೊಳಗೆ ಹನುಮನ ಗುಡಿ ಇಹುದು ಪಾಶ್ರ್ವದಿಇರುವ ರಸ್ತೆಯ ಮೇಲೆ ದಾಸರ ಮನೆಯು 9ಸೋದಾಪುರ ಪೋಗೆ ತ್ರಿವಿಕ್ರಮ ದೇವರಮಂದಿರದ ಧ್ವಜಸ್ತಂಭದಲ್ಲಿವಾದಿರಾಜರು ಹಂಸಾರೂಢರಾಗಿರುವವರ್ಗೆವಂದಿಸಿ ತ್ರಿವಿಕ್ರಮರಾಯಗೆ ನಮಿಸಿದರು 10ಬದರಿಯಿಂದಲಿ ಈ ಸರಥ ತ್ರಿವಿಕ್ರಮನಭೂತರಾಜರ ಕೈಯಿಂದೆತ್ತಿ ತರಿಸಿಸೋದಾಪುರದಲ್ಲಿ ಪ್ರತಿಷ್ಠೆ ಮಾಡಿಹರುವಾದಿರಾಜರು ಭಾವಿಸಮೀರ ಲಾತವ್ಯ 11ಜಗನ್ನಾಥದಾಸರು ತ್ರಿವಿಕ್ರಮಗೆ ವಂದಿಸಿಅಗಾಧ ಸುಪವಿತ್ರೆ ಧವಳಗಂಗಾಸ್ನಾನಭಕುತಿಯಿಂ ಮಾಡಿ ಶಿವಹನುಮ ಕೃಷ್ಣರಿಗೆಬಾಗಿ ಅಶ್ವತ್ಥಸ್ಥರಿಗೆ ನಮಿಸಿದರು 12ಬಯಲಲ್ಲಿ ವೃಂದಾವನಗಳಲಿ ಗುರುಗಳಿಗೆವಿನಯದಿ ವಂದಿಸಿ ಭೂತನಾಥಗೆ ಬಾಗಿಶ್ರೀವ್ಯಾಸ ದೇವನಿಗೆ ಸನ್ನಮಿಸಿ ವೇದವೇದ್ಯರಿಗು ವಾದಿರಾಜರಿಗು ನಮಿಸಿದರು 13ಚತುದ್ರ್ವಾರ ಗೃಹದಲ್ಲಿ ಪಂಚವೃಂದಾವನವುಮಧ್ಯ ವೃಂದಾವನದಿ ಶ್ರೀವಾದಿರಾಜರುವೃಂದಾವನ ಮಹಿಮೆ ಚೆನ್ನಾಗಿ ತಿಳಿಯದಕೆಭಕ್ತಿ ಶ್ರದ್ಧೆಯಲಿ ನೋಡಿ ವೃಂದಾವನಾಖ್ಯಾನ 14ಹರಿಹರ ಕ್ಷೇತ್ರವು ಮದ್ದೂರು ಅಬ್ಬೂರುಪುರುಷೋತ್ತಮ ಬ್ರಹ್ಮಣ್ಯರ ವಂದಿಸಿಶ್ರೀರಂಗನಾಥನಿಗೆ ಎರಗಿ ಮಹಿಷೂರುಗರಳುಂಡ ಈಶ್ವರನ ಕ್ಷೇತ್ರಕ್ಕೆ ಪೋದರು 15ಕೇಶವನ ಪೂಜಿಸುತ ಪರ್ವತ ಗುಹೆಯಲ್ಲಿವಾಸಮಾಡುವ ಮಹಾ ಕರುಣಾಂಬುನಿಧಿಯುದಾಸಜನಪ್ರಿಯ ಶ್ರೀ ಪುರುಷೋತ್ತಮರಂಘ್ರಿಬಿ¸ಜಯುಗಳದಿ ನಾ ಶರಣು ಶರಣಾದೆ 16ಮಹಿಷೂರು ರಾಜ್ಯದ ಸರ್ಕಾರಿನಲ್ಲಿಮಹೋನ್ನತ ಸ್ಥಾನ ವಹಿಸಿದಧಿಕಾರಿಮಹಾಪಂಡಿತರುಗಳ ಸಭೆಯನ್ನು ಕೂಡಿಸಿವಿಹಿತದಿ ದಾಸರ ಪೂಜೆ ಮಾಡಿದನು 18ನಿರ್ಭಯದಿ ದಾಸರು ಘನತತ್ವ ವಿಷಯಗಳಸಭ್ಯರಿಗೆ ತಿಳಿಯದಿದ್ದವು ಸಹ ವಿವರಿಸಿದಸೊಬಗನ್ನು ಕಂಡು ವಿಸ್ಮಿತರು ಆದರು ಆಸಭೆಯಲ್ಲಿ ಕುಳಿತಿದ್ದ ದೊಡ್ಡ ಪಂಡಿತರು 19ಭಾಗವತಧರ್ಮದ ಪದ್ಧತಿ ಅನುಸರಿಸಿಭಗವಂತನ ಭಜನೆ ಸಭ್ಯರ ಮುಂದೆಆಗ ದಾಸರ ಅಪರೋಕ್ಷದ ಮಹಿಮೆರಂಗನೇ ಸಭ್ಯರಿಗೆ ತೋರಿಸಿಹನು 20ದಾಸರು ಶಿಷ್ಯರೊಡೆ ಯಾತ್ರೆ ಮಾಡಿದ್ದುಮೈಸೂರು, ಕೊಂಗು, ಕೇರಳ, ಚೋಳ, ಪಾಂಡ್ಯದೇಶಗಳು ಎಲ್ಲೆಲ್ಲೂ ಮರ್ಯಾದೆ ಸ್ವೀಕರಿಸಿಈಶಾರ್ಪಣೆ ಸರ್ವ ವೈಭವವೆನ್ನುವರು 21ಶ್ರೀಪಾದರಾಜರ ನಮಿಸಿ ವೆಂಕಟಗಿರಿಸುಪವಿತ್ರ ಘಟಿಕಾದ್ರಿ ಶ್ರೀಕಂಚಿಉಡುಪಿಶ್ರೀಪನ ಇಂಥಾ ಕ್ಷೇತ್ರಗಳಿಗೆ ಪೋಗಿಸ್ವಪುರಕ್ಕೆ ತಿರುಗಿದರು ಪೂಜ್ಯ ದಾಸಾರ್ಯ 22ಶ್ರೀಪಾದರಾಜರು ಪವಿತ್ರ ವೃಂದಾವನದಿಶ್ರೀಪತಿ ನರಹರಿ ಶಿಂಶುಮಾರನ್ನರೂಪಗುಣ ಕ್ರಿಯಾಮಹಿಮೆ ಧ್ಯಾನಿಸುತ ಇಹರುತಿರುಪತಿಮಾರ್ಗನರಸಿಂಹ ತೀರ್ಥದಲಿ23ಪುರುಷೋತ್ತಮರ ಸುತ ಬ್ರಹ್ಮಣ್ಯರ ಕುವರಶ್ರೀಕೃಷ್ಣ ಪ್ರಿಯತರ ವ್ಯಾಸಯತಿರಾಜಸೂರಿಕುಲ ಶಿರೋರತ್ನ ಶ್ರೀಪಾದರಾಜರಲಿಭಾರಿವಿದ್ಯೆಕಲಿತು ಪ್ರಖ್ಯಾತರಾದರು24ಹರಿರೂಪ ಗುಣಕ್ರಿಯ ಮಹಿಮೆಗಳ ಚೆನ್ನಾಗಿಪರಿಪರಿ ಸುಸ್ವರ ರಾಗದಲಿ ಕೀರ್ತನೆಸಂರಚಿಸಿ ಪಂಡಿತರು ಪಾಮರರು ಸರ್ವರಿಗುವರಸಾಧು ತತ್ವ ಬೋಧಿಸಿಹರು ದಾಸರು25ವಾರಿಜಾಸನ ಪಿತನು ಪೂರ್ಣ ಪ್ರಜÕರ ಹೃತ್‍ಸ್ಥಶಿರಿ ಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥ ದಾಸಾರ್ಯ ಶರಣು 26- ಇತಿ ಸಪ್ತಮ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
139-7ಶ್ರೀ ರಮಣಿ ಕರಕಮಲ ಪೂಜಿತ ಪದಾಂಬೋಜಸರಸಿಜಾಸನ ಶಿವಾದ್ಯಮರ ಜನವಿನುತಉರುಗುಣಾರ್ಣವ ಜಗಜ್ಜನ್ಮಾದಿಕರ್ತ ನರ-ಹರಿಗೆ ಪ್ರಿಯ ಜಗನ್ನಾಥದಾಸಾರ್ಯ ಶರಣು ಪ.ಹಂಸನಾಮಕ ಪರಂಬ್ರಹ್ಮ ವಿಧಿಸನಕಾದಿವಂಶಜ ಗುರುಗಳಲಿ ಜಗದೇಕ ಗುರುವುದಶಪ್ರಮತಿ ಈ ಮಧ್ವ ಮುನಿಯ ಪೀಳಿಗೆ ಜಾತವ್ಯಾಸಮುನಿ ಯೋಗಿವರ್ಯರಿಗೆ ಆ ನಮಿಪೆ 1ವ್ಯಾಸರಾಯರ ಮುಖ ಕಮಲದಿಂದುಪದೇಶದಾಸತ್ವ ಹೊಂದಿದರು ಪುರಂದರದಾಸಾರ್ಯದಾಸಶ್ರೇಷ್ಠರು ದಯಾನಿಧಿಯು ಈಪುರಂದರದಾಸಾರ್ಯರೇ ನಾರದರ ಅವತಾರ 2ಪುರಂದರಾರ್ಯರಹಸ್ತಕಂಜಸಂಜಾತರುಧೀರ ಭೃಗು ಅವತಾರ ವಿಜಯದಾಸಾರ್ಯಹರಿದಾಸವರ ವಿಜಯದಾಸರ ಶಿಷ್ಯರುಸೂರಿಸುರವರ್ಯ ಗೋಪಾಲ ದಾಸಾರ್ಯ 3ವಿಶ್ವೋಪಾಸಕರು ವರಗಣೇಶಾಂಶರುಈಶಾನುಗ್ರಹಿ ಗೋಪಾಲ ದಾಸಾರ್ಯಬೇಸರವಿಲ್ಲದೆ ಸ್ಮರಿಪ ಸಜ್ಜನರ ಪಾಲಿಪರುದಾಸತ್ವ ಜಗನ್ನಾಥದಾಸರಿಗಿತ್ತವರು 4ಸೂರಿಕುಲತಿಲಕನು ಜಗನ್ನಾಥ ದಾಸಾರ್ಯಈರೆರಡು ಮುಖ್ಯ ಜನ್ಮವಕೊಂಡಹಿಂದೆಗುರುಯುಕ್ ಪುರಂದರಾರ್ಯರವತ್ಸಗುರುರಾಯ ಸೇವಾರತಮದ್ರದೇಶಾಧಿಪ ಈ ರೀತಿ ಮೂರು 5ಮಾರೀಚ ದಿತಿ ಪೌತ್ರ ಮೊದಲನೆಯದಲ್ಲಿಧೀರ ಪ್ರಹ್ಲಾದನಿಗೆ ಭ್ರಾತ ಸಂಹ್ಲಾದಹರಿಅಧೋಕ್ಷಜನ್ನೊಲಿಸಿ ಕೊಂಬ ಮಾರ್ಗವ ಅರಿತನಾರದಾನುಗ್ರಹಿಯು ಉಪದೇಶಕೇಳಿ6ಹರಿಯ ಸೇವಿಸುವುದಕೆ ಶಿಷ್ಯರುದ್ಧಾರಕ್ಕೆಪ್ರಾರಬ್ಧ ಕರ್ಮವು ತೇದು ಹೋಗಲಿಕೆಧರೆಯಲ್ಲಿ ಪುನರ್ಜನ್ಮ ಕೊಂಡನು ಬ್ಯಾಗವಟ್ಟನರಸಿಂಹ ದಾಸರ ಮಗನೆನಿಸಿಕೊಂಡು 7ಸೂರಿಕುಲ ಶಿರೋಮಣಿ ವರದೇಂದ್ರ ಯತಿವರರುಶ್ರೀರಾಘವೇಂದ್ರರ ಸ್ಮರಿಪುದಿವರಲ್ಲಿಭಾರಿಪಂಡಿತ ಶ್ರೀನಿವಾಸ ಇವರಲ್ಲೋದಿಪೌರ ವಿದ್ಯಾರ್ಥಿಗಳಿಗೆ ಪಾಠ ಪೇಳ್ದ 9ಗರುವಕೊಳಗಾಗಿ ಈ ಶ್ರೀನಿವಾಸಾಚಾರ್ಯಕರುಣಾಶಾಲಿಗಳು ವಿಜಯದಾಸರನ್ನಕ್ಷುದ್ರ ಮಾತುಗಳಾಡಿ ಸ್ವೋತ್ತಮಾಪರಾಧದಿಂಘೋರವ್ಯಾಧಿ ಕೊಂಡು ಕುಗ್ಗಿದನು ತೀವ್ರ 10ಪರಿಪರಿ ಔಷಧೋಪಚಾರಗಳು ಸೋತುಹರಿಗುರು ಕ್ಷೇತ್ರಾಟನ ಸೇವಾದಿಗಳುಹರಿವಾಯುಸ್ತುತಿಕ್ಷೀರಅಭಿಷೇಕಫಲದಿಂಅರಿತನು ಅಪರಾಧಕ್ಷಮೆಬೇಡೆ ಹೊರಟ11ತ್ವರಿತದಲಿ ವಿಜಯಾರ್ಯರಲ್ಲಿ ಶರಣಾಗಿಕರುಣದಿ ಕ್ಷಮಿಸಿ ಉದ್ಧರಿಸಬೇಕೆಂದಕರುಣಿಸಮ ಚಿತ್ತರು ಶರಣನಿಗೆ ಹೇಳಿದರುಗುರುಗಳು ಗೋಪಾಲದಾಸರ ಕಾಣೆಂದು 12ತನ್ನಲ್ಲಿ ಗುರುಗಳು ಕಳುಹಿಸಿ ಬಂದಿಹನುದೀನನು ನಿಜ ಶರಣಾಗಿಹನು ಎಂದುಘನಮೂಮಂತ್ರ ಸಹ ಧನ್ವಂತರಿ ಜಪಿಸಿಧನ್ವಂತರಿಗೆ ಬಿನ್ನೈಸಿದರು ದಾಸರು 13ವಿಜಯಗೋಪಾಲ ವೆಂಕಟ ಜಗನ್ನಾಥನ್ನಪೂಜಿಸಿ ನೈವೇದ್ಯಾನ್ನ ಜೋಳದರೊಟ್ಟಿಭುಜಿಪುದಕೆ ಕೊಡುತ ಹರಿಗುರುಗಳ ಸ್ಮರಿಸುನಿಜ ಭಕ್ತಾಯುಷ್ಪ್ರದ ಸತ್ಪತಿ ಎಂದು 14ದ್ರವ ಮಾತ್ರ ಕೊಂಬ ಆ ರೋಗಿ ತಿಂದನು ರೊಟ್ಟಿದ್ರಾವಿಕ ಆಯಿತು ರೋಗ ದಿನ ದಿನದಿದೈವಾನುಗ್ರಹವಾಯ್ತುಗುರುಅನುಗ್ರಹದಿಂದಶ್ರೀ ವೆಂಕಟ ಶೈಲಾಧಿಪನು ಒಲಿದ 15ರೋಗ ನಿವೃತ್ತ ಆಚಾರ್ಯ ದಾಸರ ಸಹಪೋಗಿ ವೆಂಕಟಗಿರಿಯಲ್ಲಿ ಶ್ರೀನಿಧಿಗೆಭಕುತಿಯಿಂ ಸನ್ನಮಿಸಿ ಮಲಗೆ ನಿತ್ರಾಣದಲಿಬೇಗ ಗಜವರದಹರಿಬಂದು ತಾ ಪೊರೆದ16ಶ್ರೀನಿಧಿಃ ಸರ್ವ ಭೂತಾನಾಂ ಭಯಕೃದ್ಭಯನಾಶನನು ವಿಜಯಾರ್ಯರ ರೂಪದಲಿ ಪೇಳೆದಾನ ಎರೆದರು ಗೋಪಾಲ ದಾಸಾರ್ಯರುತನ್ನ ಆಯುಷ್ಯದಲಿ ನಲವತ್ತು ವರ್ಷ 17ರೊಟ್ಟಿ ಕೊಟ್ಟಾಗಲೇಗುರುಪ್ರೇರಣೆಯಂತೆಕೊಟ್ಟಿದ್ದರು ಆಯುಷ್ಯ ಆಚಾರ್ಯಗೆದಿಟವಾಗಿ ಜಗಕೆ ತಿಳಿಸೆ ವೆಂಕಟ ಈಗಕೊಡಿಸಿದನು ಆಯುರ್ದಾನದ ಧಾರೆ 18ಘನ್ನ ಹರಿಗುರು ಭಕ್ತಿ ಶಿಷ್ಯ ವಾತ್ಸಲ್ಯವಏನೆಂಬೆ ನಮ್ಮಗುರುಗೋಪಾಲ ದಾಸರದಾನಕ್ಕೆ ಎಣೆಯುಂಟೆ ಎಲ್ಲಾದರೂ ಯಾರೂತನ್ನ ಆಯುಷ್ಯವ ಕೊಡುವರೆ ಅನ್ಯರಿಗೆ 19ಏನೆಂಬೆಅನಿಮಿತ್ತ ಬಂಧುವೆಂಕಟಪತಿಯದೀನ ದಯಾಳತ್ವ ಆಚಾರ್ಯನಿಗೆತಾನೇವೆ ಗೋಪಾಲದಾಸರ ರೂಪದಿತಂದುಅನ್ನ ಕೊಟ್ಟ ಆಯುಷ್ಯವ ಕೊಡಿಸಿದವ 20ಶ್ರೀನಿವಾಸಾಚಾರ್ಯ ಹರಿತನ್ನ ದಾಸರಿಗೆತಾನೆ ಬಂದೊಲಿವುದು ನೇರಲ್ಲಿ ಕಂಡುತನ್ನನ್ನು ಹರಿದಾಸರಲಿ ಓರ್ವ ಮಾಡೆಂದುವಿನಯದಿಂ ಗೋಪಾಲದಾಸರ ಬೇಡಿದನು 21ವಿಜಯಗೋಪಾಲನ್ನವಿಜಯದಾಸರ ಸ್ಮರಿಸಿನಿಜ ಶಿಷ್ಯಾಚಾರ್ಯನಿಗೆ ಉಪದೇಶಿಸಿದರುಅಜಪದಾರ್ಹನು ಮಧ್ವನಲ್ಲಿ ಜ್ವಲಿಸುವಶ್ರೀತಶ್ರೀ ಜಗನ್ನಾಥ ಎಂದು ಧ್ಯಾನಿಸು ಎಂದು 22ಪೋಗಿ ಪಂಢÀರಪುರ ಭೀಮರತಿಯಲ್ಲಿಸ್ವಗುರು ಆದಿ ಹನ್ನೆರಡು ಸ್ಮರಿಸುಬಾಗು ಮಧ್ವಾಂತಸ್ಥ ಹರಿಗೆಮಜ್ಜನಮಾಡುಜಗನ್ನಾಥ ಹರಿತೋರ್ವ ಪೊಳೆವ ಹರಿನಾಮ 23ಝಗಿ ಝಗಿಪ ತೇಜಸ್ಸು ಶಿರೋಪರಿ ಕಂಡನುಮೂಗಿನೊಂದೊಂದಡಿ ಶಿರದ ಮೇಲೆ&ಟಜquo;ಜಗನ್ನಾಥ ವಿಠಲ&ಡಿಜquo; ನಾಮ ಪ್ರಜ್ವಲಿಸಿತುಜಗನ್ನಾಥ ತನ್ನಿಚ್ಛೆಯಿಂದಲೇ ತೋರ್ದ 25ಜಡಜ ಭವಪಿತ ಡರಕ ಜಗನ್ನಾಥ ವಿಠಲನನೋಡಿದರು ಜಗನ್ನಾಥದಾಸ ಆಚಾರ್ಯಪೊಡವಿಗೊಡೆಯನುವಿಜಯಗೋಪಾಲ ಜಗನ್ನಾಥವಿಠ್ಠಲ ಪ್ರಸನ್ನನಾದನು ಶ್ರೀನಿವಾಸ 26ವೆಂಕಟಗಿರಿನಾಥ ಪಂಢರಿ ಜಗನ್ನಾಥಅಕಳಂಕ ಗುಣನಿಧಿ ವಿಠಲಪ್ರಸನ್ನನಾಗಿದಾಸರು ಮೂಲ ಮಂತ್ರಾದಿಗಳಿಂದಏಕಾಗ್ರ ಚಿತ್ತದಲಿ ಭಜಿಸಿ ಸ್ತುತಿಸಿದರು 27ಪುರಂದರದಾಸಾರ್ಯರ ವಂದಿಸಿ ಅವರಿಂದವಿರಚಿತ ಶ್ರೀಮಧ್ವ ರಮಣ ನಿನ್ನಭಾರಿತತ್ವವಕೊಂಡಕೀರ್ತನೆ ಹಾಡುತ್ತಶ್ರೀಕರ ವಿಠಲನ ಮಂದಿರದೊಳು ಪೊಕ್ಕರು 28ವಿಶ್ವವಿಷ್ಣು ವಷಟ್ಕಾರಾದಿ ನಾಮನುದಾಸಪ್ರಿಯಜನ ವಿಠ್ಠಲ ರುಕ್ಮಿಣಿಯಕೇಶವಾದಿಪಾದಾಂತ ಸಂಸ್ತುತಿಸಿ ನಮಿಸಿದರುದಾಸರು ಶರಣು ತಾನೆನ್ನುತ ಮುದದಿ 29ಏನೆಂಬೆ ವಿಠ್ಠಲನ ರುಕ್ಮಿಣಿಯ ವಾತ್ಸಲ್ಯಅನುಪಮ ಔತಣ ದಾಸರಿಗೆ ಮಾಡಿಅನುತ್ತಮ ಪ್ರಸಾದ ಮಾಲಾದಿಗಳ ಕೊಟ್ಟುಅನುಗ್ರಹಿಸಿ ಕಳಿಸಿದರು ದಾಸರ ಸ್ವಪುರಕೆ 30ಮಳಖೇಡ ಕೃಷ್ಣ ಮಂತ್ರಾಲಯಕೆ ಪೋಗಿಅಲ್ಲಿರುವಗುರುದೇವತಾ ನಮನ ಮಾಡಿಗೋಪಾಲದಾಸ ಉದ್ಧಾರಕರ ಬಳಿಬಂದುಕಾಲಿಗೆರಗಿದರು ಕೃತಕೃತ್ಯ ಭಾವದಲಿ 31ವಾಸುದೇವಗೆ ಪ್ರಿಯ ಐಜಿ ಮಹಾತ್ಮರುವ್ಯಾಸತತ್ವಜÕ ಹರಿದಾಸ ಯತಿವರರುಸಸೋದರ ಪರಿವಾರ ಗೋಪಾಲದಾಸಾರ್ಯರಬಿಸಜಾಂಘ್ರಿ ಸನ್ನಮಸಿ ಹೊರಟರಲ್ಲಿಂದ 32ಚೀಕಲ ಪರಿವಿಯಲಿ ಏಕಾತ್ಮ ನರಹರಿಯಅಕಳಂಕ ದೃಢಭಕ್ತಿಯಿಂದ ಪೂಜಿಸುವಆ ಕರುಣಿ ವಿಜಯದಾಸರ ಕಂಡು ನಮಿಸಿಚಿಕ್ಕಂದಿ ಸ್ವಪುರ ಮಾನವಿಯಯೈದಿದರು 33ಮನುತೀರ್ಥ ತಟದಲ್ಲಿ ಮೀಸಲಾಗಿವರಿಗೆಅನ್ಯರಾಕ್ರಮಿಸದೇ ರಕ್ಷಿಸಲ್ಪಟ್ಟಮನೆಯಲ್ಲಿ ನರಹರಿಯ ಹನುಮನ್ನ ಪೂಜಿಸುತದಿನದಿನದಿ ಪ್ರವಚನ ಭಜನೆ ಮಾಡಿದರ 34ವಾರಿಜಾಸನ ಪಿತನು ಪೂರ್ಣಪ್ರಜÕರ ಹೃತ್‍ಸ್ಥಶಿರಿಪ್ರಸನ್ನ ಶ್ರೀನಿವಾಸನಿಗೆ ಪ್ರಿಯತರರುಪುರಂದರವಿಜಯಗೋಪಾಲದಾಸಾರ್ಯರಚರಣರತ ಜಗನ್ನಾಥದಾಸಾರ್ಯ ಶರಣು 35- ಅಷ್ಟಮ ಕೀರ್ತನೆ ಸಂಪೂರ್ಣಂ -
--------------
ಪ್ರಸನ್ನ ಶ್ರೀನಿವಾಸದಾಸರು
2 (ಅ) ಗುರುಸ್ತುತಿ165ಅಗಲಿ ಜೀವಿಸಬಹುದೆ ಕರುಣಿಯನಗಲಿ ಜೀವಿಸಬಹುದೆ ಪ.ಆಗಮಜÕನಬುಧಉಡುಗಣ ಚಂದ್ರನವಿಗಡಜನಾರ್ದನವರ್ಯರನುಳಿದುಅ.ಪ.ಇಳೆಯೊಳು ಸುರತರುವಿಲ್ಲದ ಕಾರಣನಳಿನನಾಭಾಜÕದೊಳವತರಿಸಿನೆಳಲೊಳಿರಿಸಿ ಬಹುಸಲಹಿಕರವಬಿಟ್ಟುಸಲೆ ಹರಿಪುರಕೆ ಪೋಗಿಹ ಮಾತಾಪಿತನ 1ಆರುಕರ್ಮಕ್ಕೆ ಎಳ್ಳನಿತು ಕುಂದಿಲ್ಲದೆಮೀರದೆ ಹರಿಪದಸೇವೆಯನುಸೂರೆ ಮಾಡಿದ ತತ್ವಸಾರವ ಜನರೊಳುಮೀರಿದ ಸುಗುಣನ ಪರಮಪಾವನನ 2ಸೀತಾಪತಿಯ ಪಾದಯಾತ್ರೆಯ ಕಾಲಕೆಇತರ ವಿಷಯ ಭ್ರಾಂತಿಯಜರಿದುಪ್ರತತಿಮತಿಗುಣಾನ್ಮುಕ್ತಿಮೇತೇ ವ್ರಜಂತಿಯೆಂದುಪಥವಿಡಿದ ಪ್ರಸನ್ವೆಂಕಟೇಶ ಪ್ರಿಯನ 3
--------------
ಪ್ರಸನ್ನವೆಂಕಟದಾಸರು
211ಶೃಂಗಾರವಾಗಿದೆ ಸಿರಿರಂಗನ ಮಂಚಅಂಗನೆಮಹಲಕುಮಿಯರಸ ಮಲಗುವ ಮಂಚಪಬಡಿಗ ಮುಟ್ಟದ ಮಂಚ | ಮಡುವಿನೊಳಿಹ ಮಂಚ |ಮೃಡನ ತೋಳಲಿ ನೆಲಸಿಹ ಮಂಚ ||ಹೆಡೆಯುಳ್ಳ ಹೊಸಮಂಚ ಪೊಡವಿ ಹೊತ್ತಿಹ ಮಂಚ |ಕಡಲ ಶಯನ ಶ್ರೀ ರಂಗನ ಮಂಚ 1ಕಣ್ಣು-ಮೂಗಿನ ಮಂಚ ಬೆನ್ನು ಬಾಗಿದ ಮಂಚ |ಹುಣ್ಣಿಮೆಯ ಚಂದ್ರಮನ ಅಡ್ಡಗಟ್ಟುವ ಮಂಚ ||ಬಣ್ಣ ಬಿಳುಪಿನ ಮಂಚ ಹೊನ್ನು ಕಾದಿಹ ಮಂಚ |ಚೆನ್ನಿಗ ಪರೀಕ್ಷೀತನ ಪ್ರಾಣವಕೊಂಡಮಂಚ2ಕಾಲಿಲ್ಲದೋಡುವ ಮಂಚ | ಗಾಳಿ ನುಂಗುವ ಮಂಚ |ನಾಲಗೆಯೆರಡುಳ್ಳ ವಿಷದ ಮಂಚ ||ಏಳು ಹೆಡೆಯ ಮಂಚ | ಮೂಲೋಕದೊಡೆಯನ ಮಂಚ |ಕಾಳಗದಲಿ ಕಿರೀಟಿಯ ಮುಕುಟಕೊಂಡಮಂಚ3ಹಕ್ಕಿಗೆ ಹಗೆಯಾದ ಮಂಚ | ರೊಕ್ಕ ಮುಟ್ಟದ ಮಂಚ |ರಕ್ಕಸರೆದೆದಲ್ಲಣನ ಮಂಚ ||ಸೊಕ್ಕು ಪಿಡಿದ ಮಂಚ | ಘಕ್ಕನೆ ಪೋಗುವ ಮಂಚ |ಲಕ್ಕುಮಿ ರಮಣ ಶ್ರೀ ಹರಿಯ ಮಂಚ 4ಅಂಕುಡೊಂಕಿನ ಮಂಚ | ಅಕಲಂಕ ಮಹಿಮ ಮಂಚ |ಸಂಕರುಕ್ಷಣನೆಂಬ ಸುಖದ ಮಂಚ |ಶಂಕರನ ಕೊರಳಿಗೆ ಪದಕವಾಗಿಹ ಮಂಚ |ವೆಂಕಟಪುರಂದರವಿಠಲ ರಾಯನ ಮಂಚ5
--------------
ಪುರಂದರದಾಸರು
212ತುಂಗೆ ಮಂಗಳತರಂಗೆ-ಹರಿಸರ್ವಾಂಗೇ |ಜಯಜಯ ಜಯತು ತುಂಗೆ ಪಆದಿಯಲೊಬ್ಬ ದೈತ್ಯ ಮೇದಿನಿಯಕದ್ದೊಯ್ದ |ಸಾಧಿಸಿ ರಸಾತಳದಲ್ಲಿರಿಸೆ ||ಭೇದಿಸಿದವನ ನಾಸಿಕದಲ್ಲಿ ಪುಟ್ಟಿದೆ |ಆದಿವರಾಹನ ದಾಡೆಯಲಿ ಬಂದೆ ದೇವಿ 1ಜಲವೆಲ್ಲ ಹರಿಮಯ, ಶಿಲೆಯೆಲ್ಲ ಶಿವಮಯ |ಮಳಲುಮಿಟ್ಟೆಗಳೆಲ್ಲ ಮುನಿಮಯವು ||ಬೆಳೆದ ದರ್ಭೆಗಳು ಸಾಕ್ಷಾತು ಬ್ರಹ್ಮಮಯ |ನಳಿನನಾಳವು ಸರ್ವ ವಿಷ್ಣುಮಯ 2ಇದೆ ವೃಂಧಾವನ, ಇದೆಕ್ಷೀರಾಂಬುಧಿ|ಇದೆ ವೈಕುಂಠಕೆ ಸರಿಮಿಗಿಲೆನಿಸಿದೆ ||ಇದೆ ಬದರಿಕಾಶ್ರಮ, ಇದೆ ವಾರಣಾಸಿಗೆ,ಅಧಿಕವೆಂದೆನಿಸಿದೆ ದೇವಿ ತುಂಗೆ 3ಧರೆಗೆ ದಕ್ಷಿಣವಾರಣಾಸಿಯೆಂದೆನಿಸಿದೆ |ಪರಮಪವಿತ್ರ ಪಾವನ ಚರಿತ್ರೆಯು ನಿನ್ನ ||ಸ್ಮರಣೆಮಾತ್ರದಿ ಕೋಟಿ ಜನ್ಮದಘವನಳಿವ |ಪರಮಸಾಯುಜ್ಯದ ಫಲವೀವ ದೇವಿ4ಪರಮಭಕ್ತ ಪ್ರಹ್ಲಾದಗೊಲಿದು ಬಂದ |ಪರಮನರಸಿಂಹಕ್ಚೇತ್ರವೆಂದೆನಿಸಿ ಮೆರೆದೆ ||ಧರೆಯೊಳಧಿಕವಾದ ಕೂಡಲಿ ಪುರದಲಿ |ವರದಪುರಂದರವಿಠಲನಿರಲು ಬಂದೆ5
--------------
ಪುರಂದರದಾಸರು
45ಅನುದಿನದಲಿ ಬಂದು ತನುವ ಸೂರೆಯಗೊಂಡು |ಎನಗೊಂದು ಮಾತ ಪೇಳೊ ಜೀವವೆ ! ಪಘನಕೋಪದಲಿ ಬಂದು ಯಮನವರಳೆದೊಯ್ವಾಗ |ನಿನಕೂಡಿನ್ನೇತರ ಮಾತೂ ಕಾಯವೆ! ಅ.ಪಬೆಲ್ಲದ ಹೇರಿನಂತೆ ಬೇಕಾದ ಬಂಧು - ಬಳಗ |ನಿಲ್ಲೊ ಮಾತನಾಡತೇನೆ ಜೀವವೆ ||ನಿಲ್ಲಗೊಡದೆ ಬಂದು ಯಮನವರೆಳೆದೊಯ್ವಾಗ |ಬೆಲ್ಲ ಬೇವಾಯಿತಲ್ಲೋ ಕಾಯವೆ ! 1ಸತ್ಕರೆ ಹೇರಿನಂತೆ ಸವಿದುಂಡು ಪಾಯಸವ |ದಿಕ್ಕೆಟ್ಟು ಹೋಗುತೀಯೋ ಜೀವವೆ ||ದಕ್ಕಗೊಡದೆ ಬಂದು ಯಮನವರೆಳೆದೊಯ್ವಾಗ |ಸಕ್ಕರೆ ವಿಷವಾಯ್ತೋ ಕಾಯವೆ ! 2ಅಂದಣದೈಶ್ವರ್ಯ ದಂಡಿಗೆ - ಪಲ್ಲಕ್ಕಿ |ಮಂದಗಮನೆಯರು ಜೀವವೆ ||ಮಂದಗಮನೆ ಯಾರೊ - ಮಡದಿ - ಮಕ್ಕಳು ಯಾರೋ -ಬಂದಂತೆ ಹೋಗ್ತೀನಿ ಕಾಯವೆ ! 3ಸೋರುವ ಮನೆಯಲಿ ಧ್ಯಾನ - ಮೌನಾದಿಗಳು |ಬೇರಿತ್ತು ನಿನ್ನ ಮನಸು ಜೀವವೆ ||ನೀರಮೇಲಣ ಗುಳ್ಳೆ ತೋರಿ ಹಾರಿದಂತೆ |ಯಾರಿಗೆ ಯಾರಿಲ್ಲ ಕಾಯವೆ ! 4ಹುಟ್ಟಿದ್ದು ಹೊಲೆಯೂರು ಬೆಳದದ್ದು ಮೊಲೆಯೂರು |ಇಟ್ಟದ್ದು ಈ ಊರು ಜೀವವೆ ||ಸೃಷ್ಟಿಗೊಡೆಯ ನಮ್ಮ ಪುರಂದರವಿಠಲನ |ಗಟ್ಟ ಪೂಜೆಯ ಮಾಡೊ ಕಾಯವೆ ! 5
--------------
ಪುರಂದರದಾಸರು
5 ತತ್ವವಿವೇಚನೆ371ಅಂಜನೆಸುತ ನಮೊ ಸ್ವಾಮಿಕಂಜಜಪದಪತಿ ಮೌಂಜಾಶ್ರಮಿ ಪ.ಪತಿತ ಪಾವನನಾಮಧೇಯ ಹನುಮಾಜೆÕಯಿಂದತೀತಾನಾಗತ ಅಜಾಂಡಜೆÕೀಯಾಮೃತ ಸಂಜೀವನಾದಿ ಚತುರೌಷಧ ತಂದೆಕ್ಷತಘಾತ ಪ್ಲವಗರ ಪ್ರತತಿ ರಕ್ಷಿಸಿದೆ 1ವ್ಯಾಘ್ರೇಶ್ವರಾಜಿತ ಸಮರ್ಥ ವಸುಧಾಹೃತಅಗ್ರಜಯಜ್ಞಾಧಿಕರ್ತಉಗ್ರ ಕೌರವಜನ ನಿಗ್ರಹ ಕೃಷ್ಣ ಮತಾಗ್ರಣಿ ಭೀಮ ಸಮಗ್ರ ಸುಜ್ಞಾನಿ 2ದುಷ್ಟೋಕ್ತಿ ಪೂರ್ವಪಕ್ಷಜಾರಿ ಭೇದೋಚ್ಚಾರಿವಿಷ್ಣುಪಕ್ಷ ಸಿದ್ಧಾಂತಸೂರಿಸೃಷ್ಟಿಲಿ ವರದ ವಾಸಿಷ್ಠ ಪ್ರಸನ್ವೆಂಕಟಾಧಿಷ್ಟನ ಪ್ರಿಯ ಮುನಿ ಶಿಷ್ಟರೊಡೆಯ ನೀ 3
--------------
ಪ್ರಸನ್ನವೆಂಕಟದಾಸರು
93ಅಕ್ಕಟಕ್ಕಟೆಂನಗಂಡ ವೈಷ್ಣವನಾದ ಕಾರಣ |ರಕ್ಕಸಾಂತಕನ ಭಜಿಸಿರಚ್ಚೆ ಗೋಡಾಯಿತೆಂನ ಬದುಕು |ಅಕ್ಕಟಕ್ಕಟರೆಂನಗಂಡಪ.ಅಡ್ಡಗಂಧ ಹಚ್ಚುವಾಗ ರುದ್ರದೇವರ ಭಜಿಸಿಲಾಗಿ |ಬಡ್ಡಿವಾಸಿಂರೊಳಗೆ ನಾಉ ಸುಖದೊಳಿದ್ದೆವು | ಅಡ್ಡಗಂಧವನು ಬಿಟ್ಟು ಶ್ರೀ ಮುದ್ರೆಯನು ಧರಿಸಲಾಗಿ |ಬಡ್ಡಿವಾಸಿಯಲ್ಲ ಹೋಗಿ ಬಾಯೊಳ್ಗೆ ಬಿದ್ದಿಂತಾಯಿತವ್ವ, ಅಕ್ಕಟ 1ಹೇಡಿಗೆ ತುಂಬ ದೇವರು ನಮ್ಮ ಮನೆಯೊಳಿರುವಕಾಲದಲ್ಲಿ | ವಡವೆ ವಸ್ತು ಸೌಭಾಗ್ಯ ಸುಖದೊಳಿದ್ದೆವುಹಾದಿಯ ತುಂಬ ಕರಿದು ಬಿಳಿದು ಸಾಲಿಗ್ರಾಮಭಜಿಸಲಾಗಿ | ವಡವೆ ವಸ್ತು ಎಲ್ಲ ಹೋಗಿ ಬಾಯೊಳ್ಹುಡಿಯುಬಿದ್ದಂತಾಯಿತವ್ವ | ಅಕ್ಕಟ | 2ಕಾಲಿಝಂಣಕಾಲದಲ್ಲಿ ಮೂಲಂಗಿ ಬೊಳ್ಳಳ್ಳಿಗೆಡ್ಡೆ ತಂದುಕೊಟ್ಟರೆ ದೇವಸುಖವ ಕೊಡುವನೂ |ವೀರವಿಷ್ಣುವಿಗೆ ಕೊಟ್ಟುತ್ರಾಹಿ ತ್ರಾಹಿ ಎನ್ನಲಾಗಿಪಚ್ಚೆ ಕರ್ಪೂರದಂತ ಬದುಕು ನಿಸ್ತುತವಾಗಿಹೋಯಿತವ್ವ | ಅಕ್ಕಟ3ಅತ್ತೆ ಕೇಳೆ ಹಿಂದೆನಂಮ ಮದುವೆ ಮುಂಜಿಕಾಲದಲ್ಲಿ | ಆರ್ತಿಗಾದರು ಒಮ್ಮೆ ಕಚ್ಚೆಕಟ್ಟಿದ್ದೇವೊಅರ್ಥಿಕಚ್ಚೆಯಂನು ಬಿಟ್ಟುನಿತ್ಯ ಕಚ್ಚೆ ಉಡೆಯಲಾಗಿವಿತ್ತಬದುಕುಯೆಲ್ಲ ಹೋಗಿ ವ್ಯರ್ಥವಾಗಿಹೋಯಿತವ್ವ | ಅಕ್ಕಟ4ಅತ್ತೆ ಮಾವ ಸತ್ತ ದಿವಸ ಪಿತ್ರುಕಾರ್ಯನಡಸಲಾಗಿ | ಕತ್ತೆ ನಾಯಿಹೊರಳಿದಂತೆ ನಂಟುನಂಟರಿಷ್ಟರೂ | ಶ್ರೀ ಪುರಂದರವಿಠಲನಭಜಿಸಲಾಗಿ | ತುತ್ತ ಗೊಂಬುದೊಂದು ಕೂಳುಬೆಲ್ಲದಹಾಗೆ ಆಯಿತವ್ವ5
--------------
ಪುರಂದರದಾಸರು
ಅ. ಗಣಪತಿ ಸರಸ್ವತಿಯರು261ಶ್ರೀ ಗಣನಾಥನಿಗೆ | ಶಾರದಾಂಬಿಕೆಗೆಶ್ರೀ ಗೌರಿ ಭೂದೇವಿ ಶ್ರೀದೇವಿಗೆ |ಶ್ರೀಗುರುಮಹಾವಿಷ್ಣು ಬ್ರಹ್ಮರುದ್ರಾದ್ಯರಿಗೆಸಿರಿಚರಣ ಪಂಕಜಗೆ ನಮಿಸಿ ನುತಿಸುವೆನು 1ಅಷ್ಟ ದಿಕ್ಪಾಲರಿಗೆ ಶಿಷ್ಯಮರುದ್ಗಣಗಳಿಗೆಅಷ್ಟವಸು ಸಪ್ತಋಷಿ ನವಗ್ರಹಾದ್ಯರಿಗೆ |ಶ್ರೇಷ್ಠ ಹನುಮಂತನಿಗೆ ಕನಕಾದಿ ದಾಸರಿಗೆಸೃಷ್ಟಿಯೊಳು ಕವಿಜನಕೆ ಕೈಮುಗಿವೆನು 2ವಿಪ್ರಕುಲ ಸಂಜಾತ ಮಯ್ಯೂರ ಮಡಿಪುರದೊ-ಳಿಪ್ಪ ವೆಂಕಟರಾಯ ಗೋಳೇರ ಸುಕುಮಾರ |ಸರ್ಪಶಯನನ ದಾಸ ಗೋವಿಂದನೆಂಬವನುಜಲ್ವಿಸಿಯೆ ವಿರಚಿಸಿದೆನೀ ಕೃತಿಯನು 3ಯತಿಗಣ ಪ್ರಾಸ ವಿಷಮಾಕ್ಷರಗಳೊಂದರಿಯೆಕೃತ ದೋಷ ರಾಗ ಲಯ ಭೇದವನು ತಿಳಿಯೆ |ಪೃಥುವಿಯೊಳು ಕವಿಗಳಂತಗ್ಗಳನು ನಾನಲ್ಲಅತಿಶಯದ ನ್ಯೂನತೆಯ ಬಲ್ಲ ಶ್ರೀನಲ್ಲ 4ತಪ್ಪು ಸಾವಿರವಿರಲು ತಿದ್ದಿ ಬಲ್ಲವರಿದನುಒಪ್ಪುವಂದದಿ ಜಗದಿ | ಮೆರೆಸಿ ವಾಚಕರುಸರ್ಪಶಯನನ ಕೃಪೆಗೆ ಪಾತ್ರರಾಗುತ ನೀವುಕ್ಷಿಪ್ರದಲಿ ಗೋವಿಂದದಾಸ£À£Àು ಪರಸಿ ಮನ್ನಿಪುದು 5
--------------
ಗೋವಿಂದದಾಸ
ಅಂಜಾನೆತನಯಧ | ನಂಜಾಯನಗ್ರಜ ||ಕಂಜಾಕ್ಷ ಶ್ರೀ ಮಧ್ವ | ಸಂಜಯವಂತಾ 1ಮಾರುತಿ ನಿನ್ನಯ | ಕೀರುತಿ ಜಗದೊಳು ||ಬೀರುತಿದ ಕೊ ನಾ | ಸಾರುತೀ ನೀಗಾ 2ರಾವಣಾನುಜ ಸು | ಗ್ರೀವಾ ವಿಪ್ರಜಾನಂತೆ ||ಭೂವರನಂತೆ ಕಾಯೋ | ದೇವೇಂದ್ರ ಪಾಲಾ3ಪ್ರಸ್ತುತಬಿನ್ನಪ| ವಿಸ್ತರಿಪಕೃತಿಸ ||ಮಸ್ತರೂ ಕೇಳಲಿ | ಆಸ್ಥೀಯಲಿಂದಾ4ಪ್ರಾಣೇಶ ವಿಠ್ಠಲಾ ಪ್ರೀ | ತಾನಾಗಬೇಕೀದಕೆ ||ಹೀನ ವಿಷಯಗಳಾ | ನಾನೊಲ್ಲೆ ದೇವ 5
--------------
ಪ್ರಾಣೇಶದಾಸರು
ಅಂತಕನ ದೂತರಿಗೆ ಕೃಪೆಯಿಲ್ಲವದರಿಂದ |ಚಿಂತೆಯನು ಬಿಟ್ಟು ಶ್ರೀ ಹರಿಯೆ ನೆನೆ ಮನವೆ ಪ.ದಿವರಾತ್ರಿಯೆನ್ನದೇ ತಿರುಗಿ ಲಂಪಟನಾಗಿ |ಸವಿಗಂಡ ಊಟಗಳ ಉಣಲರಿಯದೆ |ಅವನ ಕೊಂದು ಇವನ ಕೊಂದು ಅರ್ಥವನು ಗಳಿಸಿಕೊಂಡು |ಜವನ ದೂತರು ಬಂದು ಎಳೆವ ಹೊತ್ತರಿಯೆ 1ಮೊನ್ನೆ ಮದುವೆಯಾದೆ ಕರೆವುವು ಒಂದೆರಡಮ್ಮೆ |ನಿನ್ನೆ ಕೊಂಡೆನು ಕ್ಷೇತ್ರ ಫಲಬಾಹೊದು ||ಹೊನ್ನು ಹಣವುಂಟೆನಗೆ ಸಾಯಲಾರೆನು ಎನಲಾ |ತನ್ನ ದೂತರು ಬಂದು ಎಳೆವ ಹೊತ್ತರಿಯೆ 2ಹೊಸ ಮನೆಯ ಕಟ್ಟಿದೆನು ಗೃಹಶಾಂತಿ ಮನೆಯೊಳಗೆ |ಬಸಿರೆ ಹೆಂಡತಿ ಮಗನ ಮದುವೆಯು ನಾಳೆ ||ಹಸನವಾಗಿದೆ ಬದುಕು ಸಾಯಲಾರೆನು ಎನಲು |ವಿಷಮ ದೂತರು ಬಂದು ಎಳೆವ ಹೊತ್ತರಿಯೆ 3ಪುತ್ರ ಹುಟ್ಟಿದ ದಿವಸ ಹಾಲು ಊಟದ ಹಬ್ಬಮತ್ತೊಬ್ಬ ಮಗನ ಉಪನಯನ ನಾಳೆ ||ಅರ್ಥಿಯಾಗದೆ ಬದುಕು ಸಾಯಲಾರೆನು ಎನಲು |ಮೃತ್ಯು ಹೆಡತಲೆಯಲಿ ನಗುತಿಹುದರಿಯೆ 4ಅಟ್ಟಡಿಗೆ ಉಣಲಿಲ್ಲ ಇಟ್ಟ ನೀರ್ಮೀಯಲಿಲ್ಲ |ಕೊಟ್ಟ ಸಾಲವ ಕೇಳ್ವ ಹೊತ್ತ ಕಾಣೆ ||ಕಟ್ಟಕಡೆಯ ದಿವಸ ತಂಬಿದ ಬಳಿಕಿರಲಿಲ್ಲ |ಇಷ್ಟರೊಳು ಪುರಂದರವಿಠಲನ ನೆನೆಮನೆವೆ 5
--------------
ಪುರಂದರದಾಸರು
ಆ ಸುಖ ಹರಿಮರೆದವಗಯ್ಯದೋಷಾಂಧಃತಮದೊಳಗೇನು ಸುಖ ಪ.ಕಂಠತ ವ್ಯಸನ ಹೊಲಬಿಲ್ಲದೆ ಧರ್ಮಕಂಟಕಶಾಸ್ತ್ರವಿಚಾರಕಗೆಎಂಟುವೃಷಭಹೂಡಿ ಮಹಾಶ್ರಮಿಸಿ ಬರೆದಂಟು ಬೆಳೆದವನಿಗೇನು ಸುಖ 1ಅನಿರುದ್ಧಗಖಿಳವರ್ಪಿಸಿದಾನಲ್ಪಗುಣದೆ ಮತಿ ದೃಢವಿಲ್ಲದ ಮಾನವಗೆಹಣ ವೆಚ್ಚಿಸಿ ರಿಣದೆಗೆದಿಟ್ಟ ಧಾನ್ಯವತೃಣಸಮ ವಿಕ್ರಿಸಲೇನು ಸುಖ 2ಶಂಖಪಾಣಿಯ ನಿಂದಿಸಿ ಕರ್ಮಶಕ್ತಿಯಶಂಕರ ರವಿಗಣೋಪಾಸಕಗೆಸಂಖ್ಯೆ ಇಲ್ಲದ ವಸ್ತು ನಿಶ್ಶೇಷದಿಸುಂಕಕೆ ತೆತ್ತಿದರಾವ ಸುಖ 3ಆಧ್ಯಾತ್ಮಾನುಭವ ಗುರುಕೃಪೆ ಇಲ್ಲದೆವಿದ್ಯೋನ್ಮತ್ತ ದಯಾಶೂನ್ಯಗೆನದ್ಯೋಲ್ಲಂಘಿಸಿ ದಡದಲಿ ನಾವೆ ಮುಳುಗಿದರೆ ಪ್ರಾಣಿಗಳಿಗೇನು ಸುಖ 4ಪ್ರಸನ್ನವೆಂಕಟ ಪದಸರೋರುಹಗಳಪ್ರಸನ್ನೀಕರಿಸದೆ ಸಾಹಸಬಡುವಅಶುಭದನುಜರು ತಪಮಾಡಿ ತುದಿಯಲಿವಿಷಮಗತಿಗ್ಹೋಗಲೇನು ಸುಖ 5
--------------
ಪ್ರಸನ್ನವೆಂಕಟದಾಸರು
ಆಗಬಲ್ಲದೆ ಹೀಗಾಗಬಲ್ಲದೆಯೋಗಿಜನವಂದ್ಯನವರಿಗ್ಹೀಗೆ ಯಮನ ಮನೆಯ ಬಾಧೆ ಪ.ಕಾಮನಯ್ಯನರಮನೆಯಪ್ರೇಮದ ದಾಸಿಗೆ ಮಹಾಪಾಮರರಾಕ್ಷಸ ಕ್ರೂರಕಾಮುಕರ ಸಂಯೋಗವಾಗಬಲ್ಲದೆ 1ಸಜ್ಜನರರಸನÀ ಮನೆಯವಜ್ರಪಂಜರದ ಗಿಣಿಯುಮಜ್ಜಿಗೆ ಕಾಣದ ಮುದಿಮಾರ್ಜಾಲನ ಬಾಯಿತುತ್ತಿಗಾಗಬಲ್ಲದೆ 2ರಾಜಾಧಿರಾಜನ ಮನೆಯರಾಜಹಂಸವು ಕುಣಪಭೋಜಕನಾದ ವೃಕನಭೋಜಕನ ಅನುಕೂಲವಾಗಬಲ್ಲದೆ 3ಹರಿಯ ಬೇಂಟೆಯ ಮನೆಯಹರಿಣಗಣಗಳಿಗೆಗಿರಿಯ ಹಳುವದ ಹುಲಿಯಗರಜರದ ಘಸಣೆಯಾಗಬಲ್ಲದೆ 4ಪ್ರಸನ್ನವೆಂಕಟನ ಮನೆಯಕಸಕಡ್ಡಿಯೆಲ್ಲವುವಜ್ರವಿಷಮ ಯಮಬಂಟರೆಂಬಮುಸಲಕೆ ಹುಡಿ ಹಿಟ್ಟು ಆಗಬಲ್ಲದೆ 5
--------------
ಪ್ರಸನ್ನವೆಂಕಟದಾಸರು
ಆಗಮವ ತಮನೊಯ್ಯೆ | ಅವನ ಪಾತಾಳದಲಿ |ತಾಗಿದಲೆವರಿದು ವೇದಾವಳಿಗಳಾ |ಆಗ ತಂದ್ದತ್ತ ಮಚ್ಛಾಮಾರನೆ ವುದಯವಾಗುತಿದೆವುಪ್ಪುವಡಿಸೊ ಪಹರಿಯ ಭಾಗೀರಥಿ ಪಿತನೆ |ಭಾಗವತ ಜನಪ್ರಿಯನೆ |ಯೊಗಧೆಯ ವಪ್ಪುವಡಿಸೊ ಹರಿಯೆ | ಭಾಗೀರಥಿ ಪಿತನೆ 1ದೇವಾಸುರರು ಶಿಂದ್ಧು | ಮಥನದಲಿ ಗಿರಿ ಮುಳುಗೆ |ದೆವಾ ರಾಕ್ಷಿಸುತಾ ಕ್ಷಿಶನ ಉಳಿದೂ |ಆನೊಯಲು ವಾಗಿರಿಯ | ನಂತ ಕೂರ್ಮನೆ ವುದಯವಾಗುತಿದೆವಪ್ಪುವಡಿಸೊ ಹರಿಯೆ 2ಭೂತಳವ ಕಾದ್ದೊಯಿದ | ಹರಂಣ್ಯಕ್ಷನೆಂಬ ನರಪಾತಳದ |ಲೊರಶಿನಿಲಿಶಿದ ಜಗಂಗಳಾ | ಖ್ಯಾತಿ ಪಡೆದ ಪ್ರತಿಮ |ವರಹಾರೂಶಪನೆ ಸುಪ್ರಭಾತದಲಿವುಪ್ಪವಡಿಸೊ ಹರಿಯೇ 3ಭೂದೇವದೆವರನು | ಭಾಜಿಸುವ ಶಿವುವ ಪ್ರಹ್ಲಾದಗಾ | ಗಾಹವನುಕವಲುಗಿಶಿ ಉಗದೆ | ತೂದ ಕರುಳಿನಮಾಲೆ |ಯಪ್ಪನರಶಿಂಹ ಕಾರುಣೋದಯದೊ ವಪ್ಪವಡಿಸೊ ಹರಿಯೆ 4ಬರಿ ಭಕತಿಯಿಂದ ಮೊರಡಿನೆಲನ ಮಾತು ಕೂಡೆ |ನೆಲ ನಭನೆ ನೀರಡಿಯ ಮಾಡಿ ಬೆಳೆದೆ |ನಳಿನ ಜಾಂಡವನೊಡದೆ | ವಾಮನ ತ್ರಿವಿಕ್ರಮನೆಬೆಳಗಾಯಿತುಪ್ಪವಡಿಸೋಹರಿಯೆ 5ಕಾತ್ರ್ತವಿಯ್ರ್ಯಾರ್ಜುನನ ಕಡಿದು ಕ್ಷತ್ರಿಯ ಕುಮುದು |ಮಾತ್ರ್ತಂಡನಾದೆ ಮಾತೆಯ ಮಾತಿಗೆ ಆತ್ರ್ತಜನಬಂಧುವೆ | ಪರಶುರಾಮನೆ ಬ್ರಾಹ್ಮಿ ಮೂಹೋರ್ತದಲ್ಲಿವುಪ್ಪವಡಿಸೊ ಹರಿಯೆ 6ಪಂಪಾದಿಪನವರದ | ಅಮರಪತಿಯಾದ ಷ್ಕಂಪ್ಪರಾವಣನಗೆಲಿದವನನುಜಗೆ ಸಂತ್ಪಾರಂಪರೆಯಯಿತ್ತರಘುರಾಮದೆಶೆ | ಕೆಂಪಾಯಿತುಪ್ಪ ವಡಿಸೊಹರಿಯೆ 7ಯಿಂದು ರವಿಕುಲಗಳಲಿ | ಜನಿಶಿದಮಜರಾಜ| ಬೃಂದಾರಿಯಾಗಿಭೂಭರವಿಳಿಪಿದೆ | ನಂದನಂದನ ಕೃಷ್ಣ |ಆಂಗಯಗರಗಾಣ ಬಂದವಿದವುಪ್ಪ ವಡಿಸೊ ಹರಿಯೇ 8ತ್ರಿಪುರದಮಕಾರಿಗಳ | ಸತಿಯರಿಗೆವುಪಸತಿಗಳುಪದೆಶಗಳ ತೊಟ್ಟುಭ್ರಮಗೊಳಿಶಿದುತ್ರಿಪುರ ಹತಗಂಬಾದೆ |ತ್ರಿಪುರ ಸಾಧಕ ಜಾದ್ಕ ತಪ ನವಿದೆವುಪ್ಪವಡಿಸೊ ಹರಿಯೆ9ಆಶಿ ಖಾಡವಿಡಿದಾಶ್ವವೇರಿ ಕೋಪದಿ ವಿಷ್ಣು |ಯಶಶಿನಲಿ ಕಲ್ಕ್ಯಾವ | ತಾರನಾದೆ |ಕುಶಿರಿದರಿದಶಸುವೇಪದಶ್ಯೂಗಳಗೆಲಿದೆ | ಬಿಶಿಲಾಯಿತುಪ್ಪವಡಿಸೊ ಹರಿಯೆ 10ಯಿಂದ ಚಂದ್ದ್ರ್ಯಾದಿಗಳ್ ಬ್ರಹ್ಮ ರುದ್ದ್ರಾದಿಗಳುಪೇಂದ್ರಜಯ |ಜಯಯೆನುತ ಬಂದೈಧರೆ | ವೀಂದ್ದ್ರವಾಹನ ಪುರಂದರವಿಠಲಸೌಭಾಗ್ಯ ಸಾಂದ್ದ್ರನಿಧಿ ವುಪ್ಪವಡಿಸೊ ಹರಿಯೆ 11
--------------
ಪುರಂದರದಾಸರು
ಆಚ್ಯುತಾನಂತ ಗೋವಿಂದ-ಹರಿ |ನಾರಾಯಣ ನಿನ್ನ ನಾಮ-ಎನ್ನ |ಮಾಧವಮಂಗಳಗಾತ್ರ-ಸ್ವಾಮಿ |ಗೋವಿಂದ ಗೋಪಾಲ ಬಾಲ-ಸೋಳ |ವಿಷ್ಣುಚಕ್ರವು ಬಂದು ಸುತ್ತಿ-ಮೂರು |ಮಧುಸೂದನ ಮಾರಜನಕ-ನೀನು |ತ್ರಿವಿಕ್ರಮ ತ್ರೈಲೋಕ್ಯನಾಥ-ದೇವ |ವಾಮನರೂಪದಿ ಬಂದು-ಬಲಿಯ |ಶ್ರೀಧರ ಶೃಂಗಾರಾಧಾರ-ದಿವ್ಯ |ಹೃಷೀಕೇಶ ವೃಂದಾವನದಲಿ-ನೀ |ಪದ್ಮನಾಭನೆ ಕೇಳೊ ಮುನ್ನ-ಎನ್ನ |ದಾಮೋದರ ದನುಜಹರಣ-ಹರಿ |ಸಂಕರ್ಷಣ ಸರುವಾಭರಣ-ಇಟ್ಟು |ವಾಸದೇವ ಕೇಳೊ ನಿನ್ನ-ದಿವ್ಯ |ಪ್ರದ್ಯುಮ್ನ ನೀನೆಂದು ಕರೆಯೆ-ದುರ್ |ಅನಿರುದ್ದ ಗೋಕುಲದಲ್ಲಿ-ನೀಪುರುಷೋತ್ತಮಗಾರು ಸಾಟಿ?-ಶ್ರೀ |ಅಧೋಕ್ಷಜಅಸುರಸಂಹಾರಿ-ದೇವ |ನರಸಿಂಹರೂಪವ ತಾಳಿ-ಬಂದೆ |ಅಚ್ಯತ ನೀನಲೆ ಮುದ್ದು-ಗೋಪಿ |ಜನಾರ್ಧನ ಕೇಳೊ ಬನ್ನಪವ-ನೀ |ತೊಲಗಿಸು ಬಂದೆನ್ನ ಮನದ ಕಲುಷವ ||ಉಪೇಂದ್ರನುರಗನ ತುಳಿಯೆ-ಆಗ |ಹರಹರಿ ಎಂದರೆ ಪಾಪ-ರಾಶಿ |ಕೃಷ್ಣ ಕೃಷ್ಣನೆಂಬ ಸೊಲ್ಲ-ಕೇಳಿ |
--------------
ಪುರಂದರದಾಸರು