ಒಟ್ಟು 2086 ಕಡೆಗಳಲ್ಲಿ , 116 ದಾಸರು , 1514 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ವೇದಾಂತಸಾರಂ ಸುದೀರಂ ಪ ಮಾಧವ ರೂಪನೆ ಮಂಗಳ ಜಯ ಹರಿ ಅ.ಪ ಪಾವನ ಪಾದಂ ದೇವಾ ಸಭಾವಂ ಗೋವರ್ಧನಗಿರಿಧರ ಯತಿ [ಜನವಾ]ರಿಜಭೋಜಂ1 ಚಂದ್ರಪುರೀಶಂ ಚಕ್ರಧರೇಶಂ ಇಂದ್ರಸುರಾರ್ಚಿತ ಪದವಿನೋದಂ ನಾದಂ2 ವರದರಾಜಾ ಅಭಯ ವೈಷ್ಣವರೂಪಂ ಪರಮಗುರುವು ತುಲಶೀಮಣಿದೀಪ ಭೂಪಂ3
--------------
ಚನ್ನಪಟ್ಟಣದ ಅಹೋಬಲದಾಸರು
ವೇದಾಬಲು ಸ್ವಾದ ಪ ಸಾದರದಲಿ ಬಿಡದೋದಿ ಪಠಿಸುವಗೆ ಅ.ಪ ಆದಿಯನಾದಿಗಳ ಹಾದಿಯ ತೋರಿ ಸ- ಗುಹ್ಯ ಪ್ರತಿತಾರ್ಥಗಳಿಹ 1 ಘನಸಾಧನೆಗಳಿಗನುಕೂಲಿಸುವುದು 2 ಸ್ವರಿತೋದಾತ್ತನುದಾತ್ತ ಪ್ರಚಯಗಳಿಂ ಗುರುರಾಮವಿಠಲನ ಚರಣನೋಡುವದಕೆ ವೇದಾ 3
--------------
ಗುರುರಾಮವಿಠಲ
ವೈದೇಹಿ ಪಾಲಿಸೆನ್ನಂ ನಂಬಿದೆ ನಿನ್ನಂ ಪ. ವೇದವಿದಿತೇ ತವಪಾದವ ಸ್ಮರಿಸುವ ಕರವ ಅ.ಪ. ಕಾಮಿತಾರ್ಥವ ನೀಡುವಳೆಂಬುವ ಬಿರುದಾಂಕಿತೆಯಾಗಿರುವ ಕಾಮಜನನೀ ನಿನ್ನ ನಾಮ ಮಂತ್ರಗಳನ್ನು ನೇಮನಿಷ್ಠೆಯೋಳ್ ಜಪಿಸುವಂದದಿ ಸು ಪ್ರೇಮದಿಂದಲಿ ವಿಮಲಮತಿಕೊಡು 1 ಜಾನಕಿನಾಮವ ಧರಿಸಿ ದಾನವಕುಲವೆಂಬ ಕಾನನಂಗಳಿಗಂತು ಹವ್ಯ ವಾಹನನೆನಿಪ ರಾಮನ ಕೈಯಪಿಡಿದ ಪರಮಪಾವನೆ 2 ಶಮದಮಾದಿಗಳಿಂದ ಮೆರೆಯುತಲಿರ್ಪ ಕ್ಷಮೆಗೆ ನೀ ನೆಲೆಯೆಂದು ಯಮಿಕುಲವರ್ಯರು ನಮಿಸಿ ಸ್ತುತಿಸುತ್ತಿಹರು ವಿಮಲ ಶೇಷಾದ್ರಿನಾಥನ ರಮಣಿ ನಿನ್ನಡಿ ಮಣಿದು ಬೇಡುವೆ 3
--------------
ನಂಜನಗೂಡು ತಿರುಮಲಾಂಬಾ
ವೈಭವ ನೋಡಿರೈ ಪ ಗುರುವರೇಣ್ಯ ಸತ್ಯ ಪ್ರಮೋದ ತೀರ್ಥರು ಸಂಭ್ರಮದಲಿ ಮೆರೆದು ಬರುವ ವೈಭವ ನೋಡಿರೈ 1 ಪರಮಹಂಸ ಪರಿವ್ರಾಜಕಾದಿ ಸ ದ್ಬಿರುದುಗಳಿಂದಲಿ ಕರೆಸಿಕೊಳ್ಳುವ 2 ಅಂದಣದಲಿ ನಲುವಿಂದ ಪರಾಶರ ಕಂದನ ನಿರಿಶ್ಯಾನಂದ ಬಡುವ 3 ಸುಂದರ ರಾಜಮಹೇಂದ್ರ ಪುರದಿ ಜನ ಸಂದಹಿಯೋಳ್ಬುಧ ವೃಂದ ಬರುವ 4 ಮೋದತೀರ್ಥ ಸುಮತೋದಧಿ ಚಂದ್ರ ಪ್ರ ಮೋದ ತೀರ್ಥರಿವರೆಂದು ನುಡಿವ 5 ಮೇದಿನಿ ಸುರಕೃತ ವೇದ ಘೋಷಣ ಸು- ನಾದ ಭರಿತ ಬಹುವಾದ್ಯ ನಿನದ 6 ಪರವಶದಲಿ ತನುಮರೆದು ಕುಣಿವ7 ಕಂಡೆನು ಪರಮತ ಖಂಡನದಿ ಸುಧೆಯ ಮಂಡನೋತ್ಸವದಿ ಕಂಡುಬರುವ 8 ಚಲುವ ಗುರು ಚರಣ ಜಲಜಕೆ ನಮಿಸುತ ಲಲನೆಯರಾರುತಿ ಬೆಳಗುತಿರುವ 9 ನೇಮದಿ ಎಡಬಲ ಭೂಮಿಸುರರು ಕೈ ಚಾಮರ ಬೀಸುತ ಸಾಮ ಪಠಣ10 ಭಯವ ಪುಟ್ಟಿಸಿ ಹೃದಯದಿ ಮಾಯ್ಗಳ ಜಯ ಘೋಷದಿ ನಿರ್ಭಯದಿ ಬರುವ 11 ಕಾಣೆನು ಸತ್ಯಜ್ಞಾನ ತೀರ್ಥರ ಸ- ಮಾನ ಗುರುಗಳೆಂದಾನಮಿಸುವ 12 ಪಾವನತರ ಗೋದಾವರಿ ಸ್ನಾನದಿ ಶ್ರೀವರನಂಘ್ರಿಯ ಶೇವಿಸುವರ 13 ವಿದ್ವಜ್ಜನನುತ ಮಧ್ವಮುನಿಯ ಮತ ವೃದ್ಧಿಕಾರಿಣಿ ಪ್ರಸಿದ್ಧ ಸಭೆಯ 14 ಸಿರಿ ಕಾರ್ಪರ ನರಸಿಂಹನೆ ಪರನೆಂದರುಹುತ ಮೆರೆವ ಸಭೆಯ 15
--------------
ಕಾರ್ಪರ ನರಹರಿದಾಸರು
ವೈಶಾಖದುತ್ಸವ ಗೀತೆ ವರ್ಣಿಸಲಳವೆ ವೈಶಾಖದುತ್ಸವವಾ ಪ. ವೃಷಭಸೇರಿದ ವೈಶಾಖಮಾಸದ ಶುಕ್ಲ ಪಕ್ಷದ ಷಷ್ಠಿಯಲಿ ಕಂಕಣವ ಕಟ್ಟಿ ಪಟ್ಟದರಸಿ ಯರ್ಸಹಿತ ದಿಟ್ಟತನದಲಿ ಪೊರಟು ಶ್ರೇಷ್ಠವಾದ ಮಧ್ಯಮಂಟಪಕೆ ನಡೆತಂದ 1 ಮುದ್ದುಮೊಖ ಮುಗುಳ್ನಗೆಯು ವಜ್ರದ ಕಿರೀಟವು ತಿದ್ದಿದ ಕಸ್ತೂರಿತಿಲಕ ಹೊಳೆವ ವಜ್ರದ ಪದಕಗಳು ನಾಲ್ಕು ಮೂರನೆ ಧರಿಸಿ ಪ್ರಜ್ವಲಿಸುತ ಬಂದ ಅರ್ಜುನ ಸಾರಥಿಯು 2 ಶಿರದಿ ಪುಷ್ಪವ ಧರಿಸಿ ಪರಮಪುರುಷನು ತಾನು ಕೊರಳಲ್ಲಿ ವೈಜಯಂತಿಮಾಲೆಯನು ಧರಿಸಿ ಕರದಲ್ಲಿ ಪರಿಮಳದ ಗಂಧವನು ಧರಿಸಿ ಪರಮ ಪುರುಷನು ಬರುವ ಪರಿಯನೇನೆಂಬೆ 3 ದಂತದ ಉಯ್ಯಾಲೆಮಂಟಪದಲಿ ನಿಂದು ಕಂತುಪಿತ ಕರ್ಪೂರದಚೂರ್ಣದಲಿ ಮಿಂದು ಅಂತರಂಗದಿ ಭಕ್ತರಿತ್ತ ನೈವೇದ್ಯ ಉಂಡ ಲಕ್ಷ್ಮೀ ಕಾಂತನು ನಡೆತರುವ ಪರಿಯನೇನೆಂಬೆ 4 ಮುಂದೆ ದ್ರಾವಿಡವೇದ ಹಿಂದೆ ವೇದಘೋಷಗಳು ಆ ನಂದದಿಂ ಭಕ್ತರೆಲ್ಲ ಮುಂದೆ ಬರುತಿರಲು ಛಂದದಿಂ ರಂಭೆಯರ ಕೋಲಾಟಗಳ ನೋಡಿ ಇಂದಿರೆಯಿದಿರು ಮಂಟಪಕೆ ನಡೆತಂದ 5 ಸೃಷ್ಟಿಪತಿ ರಂಗನಿಗೆ ದೃಷ್ಟಿ ತಾಕುವುದೆಂದು ಹಿಟ್ಟಿನಾರತಿಯಿಂದ ದೃಷ್ಟಿಯನು ತೆಗೆದು ಶ್ರೇಷ್ಠವಾದ ಕರ್ಪೂರದ ಆರತಿಯನೆತ್ತಲು ಥಟ್ಟನೆ ತಿರುಗಿದನು ಕೃಷ್ಣಮೂರುತಿ ತಾನು 6 ಸಪ್ತದಿನದಲಿ ರಂಗ ರತ್ನಮೌಳಿಯ ಧರಿಸಿ ಮುತ್ತಿನಾ ಹಾರವನು ಹಾಕಿ ರತ್ನದ ಉಡದಾರ ಉಡಗೆಜ್ಜೆಯನು ಧರಿಸಿ ಪತ್ನಿ ಸಹಿತಲೆ ಬಂದು ಭತ್ತವನಳಿಸುವ ಸೊಬಗ 7 ಮುತ್ತಿನ ಕಿರೀಟವಿಟ್ಟು ಮುದದಿ ನಿಲುವಂಗಿ ತೊಟ್ಟು ರತ್ನದಾ ಹಸ್ತದಲಿ ಅಭಯವನು ಕೊಟ್ಟು ಕತ್ತಿ ಈಟಿ ಗುರಾಣಿ ಬತ್ತಳಿಕೆ ಅಳವಟ್ಟು ಹಸ್ತದಲಿ ಕಡಿವಾಣವಿಟ್ಟು ಬರುವ ಸೊಬಗ 8 ಹತ್ತಿ ಹಯವನು ರಂಗ ಒಂಭತ್ತು ದಿನದಲಿ ಮತ್ತೆ ಪುಷ್ಕರಣಿಯ ತೀರ್ಥದಲ್ಲಿ ಮಿಂದು ಅರ್ತಿಯಿಂ ಬಂದ ನೀರಾಳಿಮಂಟಪಕೆ 9 ಮಿಂದು ಮಡಿಯನೆ ವುಟ್ಟು ಛಂದದಿಂದಲೆ ರಂಗ ಬಂದು ಕಂಕಣವನ್ನು ಬಿಚ್ಚಿ ಆ ಘೃತ ಚೂತಫಲಗಳ ಸವಿದು ನಿಂದ ವೆಂಕಟರಂಗ [ಕರುಣಾಂತರಂಗ] 10
--------------
ಯದುಗಿರಿಯಮ್ಮ
ವ್ಯರ್ಥ ಕೆಟ್ಟರು ಯಿಂದು ನರಮನುಜರು ಸಾರ್ಥಕ ಮಾಡಿಕೊಳ್ಳರು ಶರೀರವುಳ್ಳವರು ಪ ಮರುಳಾಟ ಪರ ಬುದ್ಧಿಯೊಳು ಮುಳುಗಿ ವಿಷಯವ ಭೋಗಿಸಿ ಮದ್ದು ತಿಂದಂತೆ ಇದ್ದಾದರು ಉದಯದಲಿ ಎದ್ದು ಕುಳಿತು ಒಮ್ಮೆ ಹರಿಯಂದು ನುಡಿಯದೆ 1 ಹರಿವ ಜಲವ ಮಿಂದು ಹರಿಗೆ ಅರ್ಪಿಸುತೇವೆಂದು ಬರಿದೆ ಬಾರದೆ ಬಿಂದು ಜಲ ತಂದು ಅರಘಳಿಗೆ ಅಚ್ಯುತಗೆ ಭಕುತಿಯಲಿ ಅಭಿಷೇಕ ಯರದು ಯಮಬಾಧೆ ಕಳೆಯಲರಿಯದ ಮಂಕು 2 ಅಡವಿಯಿಂದಲಿ ಒಂದು ತುಳಸಿದಳವನೆ ತಂದು ತಡಿಯದಲೆ ತಾವರೆದಳನಯನನ ಕರವ ಮುಗಿದು ಮುಕುತಿ ಪಡಿಯಲೊಲ್ಲದ ಪರಮ ಪಾಪಿಷ್ಟ ಜನರಯ್ಯಾ3 ಪತ್ರ ಫಲ ಪುಷ್ಪ ತೋಯ ಮುಂದಿರಿಸಿ ನೀಲ ಗಾತ್ರಗೆ ನೈವೇದ್ಯವೆಂದು ಬಗೆದು ಸ್ತೋತ್ರವನೆ ಮಾಡಿ ಪ್ರದಕ್ಷಿಣೆ ನಮಸ್ಕಾರ ನಿತ್ಯ ಒಂದೊಂದು ಮಾಡದೆ ಕರ್ಮಿಗಳು4 ಇಂದಿನ ಹಮ್ಮು ನಾಳಿಗೆಯಿಲ್ಲ ಈ ದೇಹ ಇಂದು ಬಂದದೆ ನಾಳೆ ಬರಲರಿಯದೂ ಸಿಂಧುಶಯನ ನಮ್ಮ ವಿಜಯವಿಠ್ಠಲನ ಮನ ಬಂದಾಗ ನೆನೆದು ಭವವನದಿ ಉತ್ತರಿಸದೆ 5
--------------
ವಿಜಯದಾಸ
ವ್ಯರ್ಥದಲಿ ತೋರುವನೆ ತ್ರೈಲೋಕ್ಯಕರ್ತ ಭಕ್ತನಾದರೆ ಪರಮ ಮುಕ್ತಿ ಸೇರುವುದು ಪ ಉತ್ತಾನ ಭೂಪತಿಯ ಪುತ್ರನಂತಿರಬೇಕು ಸತ್ಯವೊಂದಿರಬೇಕು ಹರಿಶ್ಚಂದ್ರನಂತೆ ಭಕ್ತಿರಸವಿರಬೇಕು ಪ್ರಹ್ಲಾದನಂತೆ ಹಸ್ತವಿರಬೇಕು ಶ್ರೀರಾಮ ಭಕ್ತನಂತೆ 1 ವ್ರತವ ಮಾಡಲು ಬೇಕು ಅಂಬರೀಶನ ಪರಿಯ ಪಥವ ನಡೆಯಲು ಬೇಕು ವಿಹಗನಂತೆ ಶತಮುಖವ ರಚಿಸಿದರೆ ಪುರುಹೂತನಂತಿಹನು ಯತಿಯಾಗಬೇಕು ಗುರುಮಧ್ವಪತಿಯಂತೆ 2 ಗೀತಸೇವನೆ ಬೇಕು ನಾರದರ ತೆರನಂತೆ ಪ್ರೀತನಾಗಲು ಬೇಕು ಪಾರ್ಥನಂತೆ ನೀತಿಶಾಸ್ತ್ರವು ಬೇಕು ಶುಕಶೌನಕರಂತೆ ಖ್ಯಾತಿಯಿರಬೇಕು ರವಿಜಾತನಂತೆ 3 ಶುದ್ದನಾಗಿರಬೇಕು ಉದ್ಧವನ ತೆರನಂತೆ ಬದ್ಧನಾಗಿರಬೇಕು ಅಕ್ರೂರನಂತೆ ಹೊದ್ದಿಕೊಂಡಿರಬೇಕು ಫಣಿರಾಜನಂದದಲಿ ಮುದ್ದಾಗಿಯಿರಬೇಕು ಆ ವಿದುರನಂತೆ 4 ವೇದವೋದಲು ಬೇಕು ವ್ಯಾಸಮುನಿಯಂದದಲಿ ಆದರಿಸಬೇಕು ತಾ ಧರ್ಮನಂದದಲಿ ಪಾದಪೂಜೆಯು ಬೇಕು ಲಂಕಾಧಿಪತಿಯಂತೆ ಭೇದ ನೋಡಲು ಬೇಕು ವಸಿಷ್ಠನಂತೆ 5 ಸ್ಮøತಿಯ ನೋಡಲು ಬೇಕು ಪಾರಾಶರಂದದಲಿ ಮಿತಿಯಿರಲು ಬೇಕು ಆ ಭೀಷ್ಮನಂದದಲಿ ಜೊತೆಯಾಗಿಯಿರಬೇಕು ಪುಂಡರೀಕನ ತೆರದಿ ವ್ರತವಿರಲು ಬೇಕು ರುಕುಮಾಂಗನಂದದಲಿ 6 ದಾನ ಮಾಡಲು ಬೇಕು ಬಲಿಯ ಪ್ರೌಢಿಕೆಯಿಂದ ಧ್ಯಾನವಿರಬೇಕು ಋಷಿ ಗಾಗ್ರ್ಯನಂದದಲಿ ಪ್ರಾಣ ಸಂದೇಹದೊಳು ಕರಿರಾಜನಂದದಲಿ ಕಾಣಬೇಕಾ ಹರಿಯ ಅಜಮಿಳನ ತೆರದಿ 7 ಜಪಗಳನು ತಪಗಳನು ದಾನಧರ್ಮಂಗಳನು ಅಪರೂಪವಾಗಿರ್ದ ಪೂಜೆಗಳನು ಉಪವಾಸವನು ಮಾಡಿ ವ್ರತ ನೇಮ ನಿಷ್ಠೆಗಳ ಕಪಟವಿಲ್ಲದೆ ರಚಿಸಿ ಕಂಡರೈ ನಿನ್ನ 8 ಇವರಂತೆ ನೋಡುವರೆ ಸ್ಥಿರವಿಲ್ಲ ಬುದ್ಧಿಗಳು ಇವರ ದಾಸರ ದಾಸ ದಾಸ ನಾನು ನಿತ್ಯ ಮನದೊಳಗೆ ನಿಲುವಂತೆ ಭಾವಿಸೈ ಕೋನೇರಿ ವರಾಹತಿಮ್ಮಪ್ಪ 9
--------------
ವರಹತಿಮ್ಮಪ್ಪ
ವ್ಯಾಸಕೂಟ ದಾಸಕೂಟ ಎನ್ನದಿರೊ ಹೀನಮಾನವ ಪ ಈಶ ಹೊರತು ಮಿಕ್ಕ ಜನರು ದಾಸರೇ ಸರಿ ಅ.ಪ. ವೇದವ್ಯಾಸದೇವ ದೇವ ಸರ್ವರಿಗೆ ಈಶ ಕಾಣಿರೋ ಮೋದಮುನಿಯು ಆತನಿಗೆ ಮುಖ್ಯದಾಸ ಶಾಸ್ತ್ರಸಿದ್ದವೋ ಎಂದಮೇಲೆ ನೀನು ಯಾರು ಸಾಕ್ಷಿಕೇಳಿ ಬೇಗ ನುಡಿಯಲೋ ಛಂದ ಭಜಿಸಿ ಜ್ಞಾನ ಘಳಿಸಿ ದಾಸನೆಂದು ಹರಿಯ ಭಜಿಸೆಲೋ 1 ಧರ್ಮಶಾಸ್ತ್ರ ಮರ್ಮಬಿಟ್ಟು ಓದಿ ಓದಿ ಏನು ಫಲವೊ ನಿತ್ಯ ತೃಪ್ತ ನಿರ್ಜರೇಶ ನೊಲಿಮೆ ಮುಖ್ಯವೋ ಕಮಲೆಯರಸ ಕಲ್ಪವೃಕ್ಷ ಹೃಸ್ಥದೊರೆಯ ಕಾಣಬೇಕೆಲೋ ಕರ್ಮಬಿಡದೆ ಆಶೆತೊರೆದು ಕರ್ಮಪತಿಯ ಶರಣು ಪೊಗೆಲೋ 2 ವೇದಶಾಸ್ತ್ರ ಸ್ಮøತಿಗಳಲ್ಲಿ ಪೇಳಿರುವ ತತ್ವಗಳನ್ನು ನಡತೆಯಿಂದ ನಡಿಸಿ ನಡಿಸುತ ಇಂದಿರೇಶನ ದಾಸಜನರು ಪದಗಳಿಂದ ಪಾಡಿ ಪಾಡುವ ಖೇದವಳಿದು ಸಾಧು ಜನಕೆ ನಂದ ಸೂರೆಗೈದು ನಲಿವರೋ 3 ವೇಷದಿಂದ ಭಾಷೆಯಿಂದ ಶ್ರೀಶನೊಲಿಮೆ ಕಾಣಲಾಗದೋ ದಾಸನೆಂದು ದೈನ್ಯದಿಂದ ದ್ವೇಷ ತ್ಯಜಿಸಿ ಕೂಗಬೇಕೆಲೋ ಕುಣಿದು ಕುಣಿಯಲೊ 4 ಶಕ್ತಿಜರಿದ್ವಿರಕ್ತಿಬೇಡಿ ಭಕ್ತಿಯಿಂದ ಭಜಿಸಿ ಭಜಿಸೆಲೊ ಶಕ್ತ ವಿಜಯಸೂತ ಶ್ರೀ ವಾಯುಹೃಸ್ಥ “ಕೃಷ್ಣವಿಠಲ” ಯುಕ್ತಿಯಿಂದ ಬಂಧಬಿಡಸಿ ನಿತ್ಯಸುಖವ ನಿತ್ತು ಕಾಯ್ವನೊ ಭಕ್ತಿಯಿಂದ ಶಕ್ಯನಾದ ಜ್ಞಾನ ಘಳಿಸಿ ಕೊಲ್ಲು ಸಂಶಯ 5
--------------
ಕೃಷ್ಣವಿಠಲದಾಸರು
ವ್ಯಾಸರಾಯರ ಸೇವೆ ಲೇಸಾಗಿ ಮಾಡಲು ದಾಸನೆಂದೆನಿಸಿಕೊಂಬ ಪ ಸಾಸಿರನಾಮದ ವಾಸುದೇವನ ಭಕ್ತ ಕಾಷಾಯ ವಸ್ತ್ರಧರಅ.ಪ ತಾ ಸಹಗಮನದಿ ಪತಿಸಹ ಪೋಗುವ ಆ ಸ್ತ್ರೀಯು ಬ್ರಹ್ಮಣ್ಯತೀರ್ಥರಲ್ಲಿಗೆ ಪೋಗೆ ಶ್ರೀಶ ಬದರಿಯಲ್ಲಿ ಪೇಳಿದ ಮಹಿಮೆಯ ಆ ಸುಮಹಿಮ ಪ್ರಹ್ಲಾದನ್ನ ಸ್ಮರಿಸುತ್ತ ಮೋಸ ಬರುವುದೆಂದಾಲೋಚನೆ ಇಲ್ಲದೆ ಸತಿ ವಂದಿಸೆ ಸುಮಂಗಲ್ಯವನಿತ್ತು ಆ ಸಮಯದಿ ಮಂತ್ರಾಘ್ರ್ಯಾವನೆ ಕೊಂಡು ತಾ ಸುಮ್ಮಾನದಿ ಬನ್ನೂರಿಗೆ ಪೋಗ್ಯತಿ ಯಾ ಸತಿಪತಿಯ ಪ್ರಾಣವನುಳಿಹಿ ರನ್ನ ತಾ ಸಮೀಪದಿ ಮಠದಲ್ಲಿ ವಾಸಮಾಡಿಸಿ ಕುಸುಮಾಕ್ಷತೆ ಫಲ ಮಂತ್ರಿಸಿ ಆಕೆಗೆ ಕೊಟ್ಟು ಆ ಸುಮಂಗಲಿಯಲ್ಲಿ ಪ್ರಹ್ಲಾದ ಪುಟ್ಟಿದ ಆ ಸಮಯದಿ ಚಿನ್ನದ ಹರಿವಾಣದಲಿ ಶಿಶು ತಾನು ಬಿಡದೆ ಕಣ್ವ ನದಿಯಲ್ಲೀ ಶಿಷ್ಯರಿಗೆ ತೊಳಸಿ ತಂದು ಮಠಕೆ ಆಗ ವಾಸುದೇವನಭಿಷೇಕ ಕ್ಷೀರವನ್ನು ಆ ಸುರಭಿಯ ಕರೆದಭಿಷೇಕÀವನೆ ಕೊಂಡ ಲೇಸಿನಿಂದಲಿ ಮೊಲೆಯುಂಡು ಬೆಳೆದನು ವಾಸವನುತ ದೇವೇಶನ ಪಾಡುತ ವಾಸವಾದರು ಮಳೂರಿನಲಿ1 ಆ ಶಂಕುಕÀರ್ಣನೇ ಶೇಷಾವೇಶದಲ್ಲಿ ಶ್ರೀಶನ ಕÀಂಭದಿ ತೋರಿಸಿದಾತನೆ ತಾ ಸುಮ್ಮಾನದಿ ನರಸಿಂಹನ ಪೂಜೆಗೆ ತಾಸು ಬಿಡದೆ ಆಸೆ ತೀರಿಸಿದಾತನೆ ಈಸು ಮಹಿಮೆಗೆ ವ್ಯಾಸ ನಾಮಕರಣವು ಆ ಸುಮನೋಯತಿ ಆಶೀರ್ವಾದವಮಾಡೆ ತಾ ಸುಮ್ಮನಿರದಲೆ ಕೃಷ್ಣನ್ನ ಸ್ಮರಿಸುತ್ತ ಈ ಶಿಶುಬೆಳೆಯೆ ಆಭರಣದಿ ಶೋಭಿತ ವೀ ಸುಮತಿಯ ಮಂಗುರುಳಿಗೆ ಮುತ್ತಿನ ಗೊಂಡೆ ಆ ಸುಮನೋಹರಗಳೆಲೆ ಮಾಗಾಯಿ ಭೂಸುರ ನಿಕರವ ಮೋಹಿಪ ಬಗೆವಂಟಿ ಭೂಸುರ ಕರ್ಣಕೆ ಚಳತುಂಬು ಬಾವಲಿ ನಾಸಿಕಛಂದವು ಪದ್ಮವಿಕಸಿತ ಮುಖನೇತ್ರ ಸೂರ್ಯ ಕಾಂತಿಯ ಮುಖ ಫಣೆ ತಿಲಕನ ನೃ ಕೇಸರಿ ಪ್ರಾಯಗೆ ಹಾರಪದಕÀವಿಟ್ಟು ಆ ಸುಕರಗಳಲಿ ಉಂಗುರ ಪೊಳೆಯುತ ಆ ಸುಕಾಂತಿಯ ಕಡಗ ಸರಪಳಿ ವಂಕಿಯೂ ಲೇಸು ವಡ್ಯಾಣವ ನಡುವಿಗೆ ಧರಿಸಿ ಆ ಸಣ್ಣ ಪಾದಕ್ಕೆ ಗೆಜ್ಜೆ ಕಾಲ್ಗಡಗವು ಈ ಶಿಶುವಿನ ಹರಿ ಆಡಿಸುವಾ 2 ವರ್ಷವೈದಕೆ ಚೌಲ ಅಕ್ಷರಾಭ್ಯಾಸ ವತ್ಸರ ಉಪನಯನ ಮಾಡಿ ಧೀರಗೆ ಸಪ್ತ ವರ್ಷಕೆ ತುರ್ಯಾಶ್ರಮ ಕಾರುಣ್ಯದಿಂದ ಶ್ರೀಪಾದರಾಯರಲ್ಲಿ ಅರುಹಿಸಲು ವೇದಶಾಸ್ತ್ರ ನಿಗಮಪಾಠ ಸಾರವ ತರ್ಕತಾಂಡವ ಚಂದ್ರಿಕೆಯ ಮಾಡಿ ಸೂರಿಶಿಷ್ಯ ವಾದಿರಾಜನ್ನ ಪಡೆದೆಯೋ ಶೂರಕೇಸರಿಯಂತೆ ವಾದಿದಿಗ್ಗಜಗಳ ಧಾರಿಣಿಯಲ್ಲಿ ತಲೆ ಎತ್ತದಂತೆ ಮಾಡಿ ನೂರೆಂಟು ಮಂದಿ ಶೂರವಾದಿಗಳಿಂದ ವಾರಿಧಿ ಕಟ್ಟಿ ಮಾರುತಿಯನು ಪ್ರತಿಷ್ಠೆಯ ತಾಮಾಡಿ ಶ್ರೀ ರುಕ್ಮಿಣಿಪತಿ ಗೋಪಾಲ ಕೃಷ್ಣನ ಸಾರಸಾಕ್ಷನ ಸೇವೆ ಅನುದಿನವು ಮಾಡಿ ಪುರಂದರ ದಾಸರಿಗಂಕಿತಾ ಪಾರ ಕುಹುಯೋಗವ ನೂಕಿ ಭೂಷತಿಯನು ಕಾಯ್ದ ಪಾರ ಮಹಿಮೆ ಫಾಲ್ಗುಣ ಬಹುಳ ಚೌತಿಯು ಶ್ರೀ ರಮಣನ ಪುರಿಯಾತ್ರೆಗೆ ರಥವೇರಿ ತೋರಿದ ವರದ ವಿಜಯವಿಠ್ಠಲನಾ ಪಾ ಸೇರೀದರಿವರು ಆನಂದದಿ * 3 * ಈ ಕೀರ್ತನೆ ವರದ ವಿಜಯವಿಠಲಾಂಕಿತದಲ್ಲಿ ದಾವಣಗೆರೆಶ್ರೀನಿವಾಸದಾಸಕೃತ ವ್ಯಾಸರಾಜ ಚರಿತೆಯಲ್ಲಿ ಉಪಲಬ್ಧವಿದೆ.
--------------
ವಿಜಯದಾಸ
ವ್ಯಾಸಾ ಬದರಿ ನಿವಾಸಾ | ಎನ್ನಯ | ಕ್ಲೇಶ ನಾಶನಗೈಸು ಮೌನೀಶಾ | ಸಾಸಿರ ಮಹಿಮನೆ | ದೋಷರಹಿತ ಸುರ ಭೂಸುರ ಪರಿಪಾಲ ಶಾಶ್ವತ ವೇದ ಪ ಸತ್ಯವತಿ ವರಸೂನು ಭವತಿಮಿರ ಭಾನು | ಭೃತ್ಯವರ್ಗದ ಸುರಧೇನು | ಸತ್ಯಮೂರುತಿಯೆ ನೀನು | ಸ್ತುತಿಪೆ ನಾನು || ಹೊತ್ತು ಹೊತ್ತಿಗೆ ಸೂಸುತ್ತಿರಲೆನಗದು | ಅತ್ಯಂತ ಸುಖತರ | ಸುತ್ತವ ಸುಳಿಯೆಂದೆತ್ತಿ ಕಡೆಗೆಯಿಡು | ಎತ್ತ ನೋಡಲು ವ್ಯಾಪುತ ಸದಾಗಮ 1 ಲೋಕ ವಿಲಕ್ಷಣ ಋಷಿ | ಗುಣವಾರಿ ರಾಸಿ | ವೈಕುಂಠ ನಗರನಿವಾಸಿ | ನಾಕಾರಿಗಳ ಕುಲದ್ವೇಷಿ ಚಿತ್ರ ಸನ್ಯಾಸಿ | ಬೇಕೆಂದು ಭಜಿಪೆ ನಿಲಸಿ | ಜೋಕೆ ಮಾಡುವುದ | ನೇಕ ಪರಿಯಿಂದ | ನಿಕರ ತರಿಸದೆ | ಭೂಕಾಂತರು ನೋಡೆ | ಸಾಕಾರ ದೇವ ಕೃಪಾಕರ ಮುನಿ ದಿವಾಕರ ಭಾಸಾ2 ನಿರುತ ಎನ್ನಯ ಅರಿಷ್ಟ | ಮೆರೆವ ಉನ್ನತ ವಿಶಿಷ್ಟ | ಉರಗ ಕಿನ್ನರ ಗಂಧರ್ವರ | ಕರಕಮಲಗಳಿಂದ | ವರಪೂಜೆಗೊಂಬ | ಸಿರಿ ಅರಸನೆ ನಮ್ಮ ವಿಜಯವಿಠ್ಠಲ ಪರಾ | ಶರಸುತ ಬಲು ವಿಸ್ತರ ಜ್ಞಾನಾಂಬುಧೆ || 3
--------------
ವಿಜಯದಾಸ
ಶತ್ವ್ರಾಂತಕನು ಸುಜ್ಞಾನ ಭಕ್ತಿಯೇ ಕಾಂತೆ ಜನಕಜೆಜೀವಹನುಮನು ಸುಪಥಸುಗ್ರೀವ 1 ಸಾಧನಾತ್ಮಕಕೌಶಿಕನಮಖ ಕಾದುಸಲಹಿದವಿಘ್ನವೇದು ರ್ಮೇಧೆತಾಟಕಿದುಷ್ಟಸಂಗಸುಬಾಹುಮುಖಖಳರೂ ಸಾಧರವೆವರಯಜ್ಞಗೌತಮ ಭೂದಿವಿಜಸತಿಶಾಪಮೋಕ್ಷವೆ ಶೋಧನಿಷ್ಕøತಿತಾರ್ತಿಚಾಪವಧರ್ಮವೆನಿಸುವುದು 2 ಪರುಶುರಾಮ ಸಮಾಗಮವುವಿ ಸ್ತರಿಸಿನೋಡೆಸಮತ್ವವಿಪಿನಾಂ ತರವೆಕರ್ಮಸುವೃತ್ತಿಮುನಿಗಳು ರಾವಣನತಂಗಿ ಪರಿಕಿಸಲುದುರ್ವೃತ್ತಿಗಳುತತ್ ಪರಿಜನಖರಾದಿಗಳುಭ್ರಾಂತಿಯು ನೆರೆಕನಕಮೃಗದಶವದನನಿಂದ್ರಿಯಗಳೆನಿಸುವನು 3 ಅರುಣತನಯನುಧರ್ಮನೋಡೆ ಶ ಸುರಪಸುತದುಷ್ಕರ್ಮಚಪಲವೆಕಪಿಸಮೂಹಗಳು ಹಿರಿಯಮಗನೆಸಹಾಯವಾಸೆಯೆ ಶರಧಿಲಂಕೆಯೆದೇಹಲಂಕಿನಿಯೇದುರಭಿಮಾನ 4 ಮಣಿಯೆಜ್ಞಾಪಕಸ್ವಸ್ಥಚಿತ್ತತೆ ವನವಶೋಕವುತ್ರಿಜಟೆಕನಸೇ ಘನವೆನಿಪಸಂಸ್ಕಾರದುಷ್ಕರ್ಮಾಖ್ಯವನಭಂಗಾ ದನುಜಪತಿಸುತಮುಖರವಧೆಯೇ ಮುನಿಮತವುದುರ್ವೃತ್ತಿಪರಿಹರ ವನಜಸಂಭವನಸ್ತ್ರವೇಸನ್ಮಾರ್ಗವೆನಿಸುವುದು 5 ಮಮತೆಲಂಕೆಯದಹಿಸಿಮತ್ತೆಹ ಪಮಶರಧಿ ಬಂಧನವೆಯಾಸೆನಿರೋಧನಂತರವು ಕ್ರಮದಿಧರ್ಮವಿಭೀಷಣನಸುರ ದಮನವಿಂದ್ರಿಯಜಯವುಮಿಗೆ ಹೃ ತ್ಕಮಲವೇಸಾಕೇತಪುರವು ಸಮಾಧಿಯಭಿಷೇಕಾ 6 ವಧೆಯಗೈಸಿದಕಾಲಜ್ಞಾನದಿಲವಣ ಮುಖ್ಯರನು ವಿಧವಿಧದಯಜ್ಞಗಳವಿರಚಿಸಿ ಸದಮಲಾತ್ಮನುಸಕಲರಿಂದೈ ದಿದಸಹಸ್ರಪಾದನು ಶ್ರೀಗುರುರಾಮವಿಠ್ಠಲನು 7
--------------
ಗುರುರಾಮವಿಠಲ
ಶಂಭು ಸ್ವಯಂಭುಗಳ ಹೃದಂಬರಕಿಂದು-ಬಿಂಬದಂತಿಹ ಕಂಬುಧರನ ನಂಬು ಮನುಜಡಂಬ ಮತವ ಹಂಬಲಿಸದೆ ಪ. ಕೃದ್ಧ ಖಳರ ಗೆದ್ದು ವೇದವೇದ್ಯವೆನಿಪ ಶುದ್ಧಸುಧೆಯಉದ್ಧರಿಸಿದ ಮಧ್ವಮುನಿ ಪ್ರಸಿದ್ಧವರಗೆ ಊಧ್ರ್ವಹರಿಯಹೊದ್ದಿ ಬದುಕು ಊಧ್ರ್ವಪುಂಡ್ರ ಶ್ರೀಮುದ್ರೆಯನ್ನುಸದ್ವ್ರತಿಯಾಗು ವೃದ್ಧರಂಘ್ರಿಪದ್ಮಕೆರಗು ಕದ್ಯಕರಗದಾದ್ವವ (?) ಬಿಡು 1 ವಿತ್ತ ಪುತ್ರಮಿತ್ರರರ್ಥಿಗೆ ಸುತ್ತ ತಿರುಗುತಿರದೆತೀರ್ಥಕ್ಷೇತ್ರಯಾತ್ರೆಗಳನು ಹೊತ್ತು ಹೊತ್ತಲಿ ವರ್ತಿಸುತಿರುಭಕ್ತರೆ ನಿನ್ನ ಮಿತ್ರರು ಹರಿಭಕ್ತಿಯ ನಿನಗಿತ್ತು ಮತ್ತೆಮುಕ್ತಿಪಥವ ಹತ್ತುವ ಸಂಪತ್ತ ನಿನ್ನತ್ತ ಮಾಡು 2 ಕೋಪವ ಕಳೆ ತಾಪವ ತಾಳು ಪಾಪದ ಬಲು ಲೇಪಕಂಜುಭೂಪರ ಸೇವೆ ಆಪತ್ತಿಹುದು ತಾಪಸರ ಸಮೀಪವ ಸೇರುಶ್ರೀಪತಿ ಹಯವದನನ ಪದದೀಪದ ಬೆಳಕಿನಲಿ ವಿಷಯಕೂಪವ ಕಳೆದಾಪರಮನಲಿ ಪರಸೇವೆಲಾ [ಪೂ]ರನಾಗು 3
--------------
ವಾದಿರಾಜ
ಶಯನ ಸಮಯಕಂ||ಸಂದಣಿ ಹರೆಯದೆ ಭಕ್ತರವೃಂದವು ಕೈವಾರಿಸುತ್ತ ಬರಲೆಡಬಲದೊಳ್‍ಇಂದಿರೆ ಧರಣಿಯು ಸಹಿತಾಮಂದಸ್ಮಿತಮುಖನು ನೋಡುತೈತಹನೊಲವಿಂದೇವ ಶಯನಕೆ ಬರುವ ಸಮಯ ಬಳಿಕೀಗದೇವತೆಗಳೆಲ್ಲರನು ಕಳುಹಿ ನಿಜ ಮಂದಿರಕೆ ಪಶ್ರೀದೇವಿ ಭೂದೇವಿಯರು ತಮ್ಮ ಕರಗಳಲಿಆದಿಪುರುಷನ ಕರಗಳನು ಪಿಡಿದು ಮುದದಿಮಾಧವನ ಮುಖಪದ್ಮವನು ನೋಡಿ ಹರುಷದಲಿವೇದವೇದ್ಯನ ಪೀಠದಿಂದಿಳಿಸಿ ತರುತಿಹರು 1ಸನಕಾದಿ ಭಾಗವತ ಮೂರ್ತಿ ತಾನಿದಿರಿಟ್ಟು ಮತ್ತೀಗಮನದೊಳಗೆ ನೆಲಸುವಂದದಿ ಮುಂದೆ ನಿಂದಿಹನು 2ತನ್ನಿಂದ ನಿರ್ಮಿಸಿದ ಫಲಪತ್ರಗಳಮನ್ನಿಸುತ ಭಕ್ತಿಯಲಿ ಭಕ್ತರಿತ್ತುದನುಉನ್ನತದ ಪದವಿಯನು ಬಳಿಕಿತ್ತು ಬರುತಿಹನುಪನ್ನಗಾರಿಧ್ವಜನು ತಿರುಪತಿಯ ವೆಂಕಟನು 3ಓಂ ವೇಣುನಾದ ವಿಶಾರದಾಯ ನಮಃ
--------------
ತಿಮ್ಮಪ್ಪದಾಸರು
ಶರಣಾಗತ ರಕ್ಷಿಸಿ ಸ್ವಾಮಿ ಪೊರೆವುದು ಎನ್ನನು ಹರಿಯೇ ಶರಣಾಗತನೊಳು ನಿರ್ದಯ ಸರಿಯೇ ಕರುಣಾಕರ ಗುಣನಿಧಿಯೇ ಪ ಅಪರಾಧಗಳನು ಕ್ಷಮಿಸಿ ಸ್ವಾಮಿ ಕಾಪಾಡೋ ಮಾಧವನೇ ಅಪಾರಪರ ಮಹಿಮನೇ ಪುರಾಣ ಪುರುಷೋತ್ತಮನೇ 1 ಸಂಕಟಪರಿಹಾರಕನೇ ನಮ್ಮ ವೆಂಕಟ ವಿಠಲನೆ 2 ಸೃಷ್ಟಿಕರ್ತನು ನೀನೆ ಸ್ವಾಮಿ ಅಷ್ಟೈಶ್ವರ್ಯವೂ ನೀನೆ ಶಿಷ್ಟರ ಪಾಲಿಪ ನೀನೆ ದುಷ್ಟರ ಸಂಹಾರಕನೇ 3 ವೇದ ಪುರಾಣವು ನೀನೆ ಮೇಧಿನಿಗಧಿಪತಿ ನೀನೆ ಮಾಧವ ಮಧುಸೂದನನೇ ಆದಿ ಮೂರುತಿ ನೀನೆ 4 ಹನುಮೇಶ ವಿಠಲನೇ ಸ್ವಾಮಿ ಜನನಿ ಜನಕನು ನೀನೆ ಜ್ಞಾನ ಪ್ರದಾಯಕ ನೀನೆ ಘನ ಮುಕ್ತಿಗೊಡೆಯನು ನೀನೆ 5
--------------
ಹನುಮೇಶವಿಠಲ
ಶರಣು ವೆಂಕಟ ರಮಣ ಭಕ್ತ ಸಂಕಟ ಹರಣ ಶರಣು ಶೇಷಾದ್ರೀಶ ಪರಿಹೃತನೆ ಭವಪಾಶ ಶರಣು ಸರ್ವರಿಗಾದ್ಯ ಅಜಭವಸುರಾರಾಧ್ಯ ಶರಣು ವೇದಾಂತ - ವೇದ್ಯ ಪ ದುರಿತ ನಾಮ ವಿಶ್ವಂಭರಿತ ಶರಣು ಘನಕಾರುಣಿಯೆ ದೇವ ಚೂಡಾಮಣಿಯೆ ಶರಣು ಮಹಿಪತಿ ನಂದ ನೋಡಿಯ ಪರಮಾನಂದ ಶರಣು ಶ್ರೀ ಹರಿಮುಕುಂದಾ 1
--------------
ಕಾಖಂಡಕಿ ಶ್ರೀ ಕೃಷ್ಣದಾಸರು