ಒಟ್ಟು 11932 ಕಡೆಗಳಲ್ಲಿ , 136 ದಾಸರು , 6615 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಏನು ಪುಣ್ಯವ ಮಾಡಿ ನಾನಿಂದು ನಿನ್ನ ಕಂಡೆ ದೀನ ವತ್ಸಲ ಸ್ವಾಮಿ ಕೃಷ್ಣ ಪ ಜ್ಞಾನಗಮ್ಯನೆ ನಿನ್ನ ಕಾಣಲು ಮನದಲ್ಲಿ ನಿತ್ಯ ಧ್ಯಾನವ ಮಾಡುವರಯ್ಯ ಅ.ಪ. ಶ್ರುತಿ ಶಾಸ್ತ್ರಗಳನೋದಿ ಮಥನವ ಮಾಡುವ ಮತಿಸಾಧನದಿಂದ ನಿನ್ನರಸುವರೊ ಪತಿತಪಾವನ ನಿನ್ನ ಕರುಣವೊಂದಿಲ್ಲದಿರೆ ಇತರ ಸಾಧನವೆಲ್ಲ ಗತಿದೋರದೋ ಸ್ವಾಮಿ 1 ನಿನ್ನ ಭಕ್ತರು ಮಾಳ್ಪ ಸಾಧನಂಗಳಿಗೆಲ್ಲ ನಿನ್ನ ಕಾರುಣ್ಯವೇ ಕಾರಣವಲ್ಲವೆ ನಿನ್ನ ನುತಿಸ ಬಂದ ನರರ ಕ್ಷೇಮದ ಭಾರ ನಿನ್ನದೆಂದು ತಿಳಿದು ನೀನಾಗಿ ಪೊರೆಯುವೆ 2 ಏನೊಂದು ಸಾಧನವರಿಯದ ಎನಗೀಗ ನೀನಾಗಿ ದಯಮಾಡಿ ಮೈದೋರಿದೆ ಏನು ಧನ್ಯನೊ ನಾನು ಆನಂದಕೆಣೆಗಾಣೆ ದಾನವಾಂತಕ ಸ್ವಾಮಿ ಕರಿಗಿರೀಶನೆ ಕೃಷ್ಣ 3
--------------
ವರಾವಾಣಿರಾಮರಾಯದಾಸರು
ಏನು ಭಯ ನನಗೆ ಏನು ಭಯತಾನೆಯಾದ ಪರಬ್ರಹ್ಮ ತಾನೆಯಾಗಿ ತಾನಿಹಗೆ ಪ ಕಾಮಿಸಿ ಸುತರು ಸೊಸೆಯು ಕೊನೆಯಿಲ್ಲದ ಬಯಕೆಯಾಗೆಕಾಮನನ್ನು ಕಾಲಲೊದ್ದು ಕಸಕೆ ಮಾಡಿದವಗೆ 1 ಇಹಪರ ವಾಸನೆಯನೆಲ್ಲ ಲೋಕ ವಾಸನೆಯದಹಿಸಿ ಬೂದಿಯನ್ನೆ ಮಾಡಿ ಧೂಳಿಪಟ ಮಾಡಿದವಗೆ 2 ಬಣ್ಣ ಬಣ್ಣದ ಕ್ರೋಧಮದಗಳ ಬಳಿದು ಶೋಕ ಮೋಹವನುಣ್ಣಗೆ ಮಾಡಿ ಎಲ್ಲವ ನುಂಗಿ ನೀರು ಕುಡಿದವಗೆ 3 ಕ್ಲೇಶ ದುಷ್ಟಗುಣ ವೆಂಬುದೆಲ್ಲವಹೊಟ್ಟು ಮಾಡಿ ಹಾರಲೊದ್ದಿಹ ದಿಟ್ಟ ಮಾನವಗೆ4 ಕಪಟ ಮೋಹ ಮೊಳೆಯ ಕಿತ್ತುಬಯಲು ಚಿದಾನಂದ ಸದ್ಗುರು ಬ್ರಹ್ಮವಾಗಿ ತೂಗುವಗೆ 5
--------------
ಚಿದಾನಂದ ಅವಧೂತರು
ಏನು ಭ್ರಮೆ ಮನುಜರಿಗೆ ಎಷ್ಟು ಮಮತೆ ಪ್ರಕೃತಿಯಲಿಮೀನು ಗಾಳವÀ ನುಂಗಿ ಮೋಸಹೋದ ತೆರನಂತೆ ಧ್ರುವ ಸತಿ ನನ್ನ ಸುತರೆಂದೆನಿಸಿಹೊನ್ನುಗಳ ಗಳಿಸಿ ಹೆಚ್ಚಾಗಿ ಹೋರ್ಯಾಡಿಸಣ್ಣವರ ಮದುವೆ ಸಂಭ್ರಮದಿ ಮಾಡುವೆನೆಂದುಅನ್ನ ಮೊದಲು ಕಾಣದೆ ಅಂತರ ಪಿಶಾಚಿಯಂತೆ 1 ಬಲುವೋದಿಕೆಯಲ್ಲಿ ಬಲ್ಲವರೆನಿಸಬೇಕೆನುತಹಲವು ಬುದ್ಧಿಯಲ್ಲಿ ಹಿರ್ರನೆ ಹಿಗ್ಗುತಮಲಿನ ಮನಸಿನಜ್ಞಾನದಲಿ ತಾನರಿಯದೆ 2 ಮಿಗಿಲು ಆಸೆಗೆ ಬಿದ್ದು ಬಗೆ ಬಗೆ ಹೂಣಿಕೆಯಲಿಹೊಗದಲ್ಲಿ ಹೊಗುವರು ಹೂ ಬಿಟ್ಟು ತಿಳಿಯರುಖಗವಾಹನ ಮುದ್ದು ರಂಗವಿಠಲನ ನಾಮ ಸ್ಮರಿಸಲುವಿಗಡ ಸಂಸಾರ ಹಗರಣ ನೀರಗುಳ್ಳೆಯಂತೆ3
--------------
ಶ್ರೀಪಾದರಾಜರು
ಏನು ಮಹಿಮರೊ ನಮ್ಮ ಶ್ರೀ ಗುರುಗಳು ಶ್ರೀನಿಧಿಗೆ ಪರಮ ಪ್ರಿಯರೆನಿಸಿ ಮೆರೆಯುವರು ಪ. ಶಾಂತತ್ವವೆಂತೆಂಬ ಕವಚವನೆ ತೊಟ್ಟಿಹರು ದಾಂತತ್ವದಾ ನಡುಕಟ್ಟು ಕಟ್ಟಿಹರು ಸಂತೋಷ ಸುಖದಲಿ ಅಂತರಂಗದಿ ಹರಿಯ ಚಿಂತನೆಯ ಮಾಡುತಲಿ ಮುಕ್ತಿಪೊಂದಿಹರು 1 ವೈರಾಗ್ಯವೆಂತೆಂಬ ಆಯುಧವ ಧರಿಸಿಹರು ಸೇರಿದವರನು ಪೊರೆವ ಕಂಕಣವ ಕಟ್ಟಿ ನಾರಸಿಂಹನ ನಾಮ ಕರ್ಣಭೂಷಣ ಧರಿಸಿ ನಾರಾಯಣನ ಗುಣದ ಹಾರ ಧರಿಸಿಹರು 2 ಪರರಿಗುಪಕಾರವನೆಸಗುವ ಭುಜದ ಕೀರುತಿಯು ವರತತ್ವ ಅರುಹುವ ವನಮಾಲಿಕೆಯು ಸಿರಿ ಭಕ್ತಿಗುಣಗಳೆಂತೆಂಬೊ ವಸನಗಳು ಧರಿಸಿರುವ ಮಹಿಮರ ಸರಿಗಾಣೆ ಜಗದಿ 3 ಕುಂದದೆ ಭಕ್ತರನು ಪೊರೆಯುವ ಭಾರದ ಅಂದದಾ ಮುಕುಟ ಶಿರದಲ್ಲಿ ಧರಿಸಿ ತಂದೆ ಮುದ್ದುಮೋಹನದಾಸರೆಂದೆನಿಸುತ ಮಂದಜ್ಞ ಮನ ಪಾಪ ಪಾದುಕೆಯ ಮೆಟ್ಟಿಹರು 4 ಎಷ್ಟು ಹೇಳಲು ಸಾಧ್ಯ ಶ್ರೇಷ್ಠ ಗುರುಗಳ ಚರಿತೆ ಪಟ್ಟವಾಳ್ವರು ಜ್ಞಾನ ಸಾಮ್ರಾಜ್ಯವ ಕೆಟ್ಟ ಭವರೋಗವನು ಸುಟ್ಟು ಭಸ್ಮವ ಮಾಡಿ ಶ್ರೇಷ್ಠ ಗೋಪಾಲಕೃಷ್ಣವಿಠ್ಠಲನ ತೋರ್ವರು5
--------------
ಅಂಬಾಬಾಯಿ
ಏನು ಮಾಡಲಯ್ಯ ಬಯಲಾಸೆ ಬಿಡದು ಪ ಮಾನವ ಮೃಗೇಂದ್ರ ರಾಮಚಂದ್ರ ರಕ್ಷಿಸಯ್ಯ ಅ ಜ್ಯೋತಿರ್ಮಯವಾದ ದೀಪದ ಬೆಳಕಿಗೆ ತಾನುಕಾತರಿಸಿ ಬೀಳುವ ಪತಂಗದಂದದಲಿಧಾತುಗೆಟ್ಟು ಬೆಳ್ಳಿ ಬಂಗಾರದಲಿ ಮೆರೆವಧೂರ್ತೆಯರ ನೋಡುವೀ ಚಕ್ಷುರಿಂದ್ರಿಯಕೆ 1 ಅಂದವಹ ಸಂಪಗೆಯ ಅರಳ ಪರಿಮಳವುಂಡುಮುಂದುವರಿಯದೆ ಬೀಳ್ವ ಮಧುಪನಂತೆಸಿಂಧೂರ ಗಮನೆಯರ ಸಿರಿಮುಡಿಯೊಳಿಪ್ಪ ಪೂಗಂಧ ವಾಸಿಸುವ ಘ್ರಾಣೇಂದ್ರಿಯಕೆ 2 ಗಾಣದ ತುದಿಯೊಳಿಪ್ಪ ಭೂನಾಗನಂ ಕಂಡುಪ್ರಾಣಾಹುತಿಯೆಂದು ಸವಿವ ಮೀನಿನಂತೆಏಣಾಕ್ಷಿಯರ ಚೆಂದುಟಿಯ ಸವಿಯ ಸವಿಸವಿದುಜಾಣತನದಲಿ ನಲಿವ ಜಿಹ್ವೇಂದ್ರಿಯಕೆ 3 ದಿಮಿದಿಮ್ಮಿ ಘಣಘಣಾ ಎಂಬ ಘಂಟೆಯ ರವಕೆಜುಮುಜುಮನೆ ಬೆಮೆಗೊಳ್ಳುವ ಹರಿಣದಂತೆರಮಣಿಯರ ರಂಜಕದ ನುಡಿಗಳನು ಕೇಳಿ ಪ್ರ-ಣಮವೆಂದು ತೋಷಿಸುವ ಕರ್ಣೇಂದ್ರಿಯಕೆ 4 ತ್ವಕ್ಕು ಮೊದಲಾದ ಪಂಚೇಂದ್ರಿಯಗಳೊಳು ಸಿಕ್ಕಿಕಕ್ಕುಲಿತೆಗೊಂಬುದಿದ ನೀನು ಬಿಡಿಸೊಸಿಕ್ಕಿಸದಿರು ಸಿಕ್ಕಿಗೆ ಆದಿಕೇಶವರಾಯದಿಕ್ಕಾಗಿ ನಿನ್ನಂಘ್ರಿಯೊಳೆನ್ನ ಮನವನಿರಿಸೊ 5
--------------
ಕನಕದಾಸ
ಏನು ಮಾಡಲಿ ವಿಠಲ ಏನು ತಿಳಿಯದು ವಿಠಲ ಏನಿತ್ತು ಮೆಚ್ಚಿಸಲಿ ವಿಠಲಾ ಪ. ಜ್ಞಾನ ಮೊದಲೇ ಇಲ್ಲ ಧ್ಯಾನ ಮಾಡುವುದರಿಯೆ ನೀನಾಗೆ ವಲಿದೆನ್ನ ಸಲಹಯ್ಯ ವಿಠಲಯ್ಯ ಅ.ಪ. ತಂದೆತಾಯಿಯು ನೀನೆ ಬಂಧು ಬಳಗವು ನೀನೆ ತಂದವನುಭವದಲ್ಲಿ ಎನ್ನ ನೀನೆ ಮುಂದೆ ಪೊರೆವವ ನೀನೆ ಹಿಂದೆ ಪೊರೆದವ ನೀನೆ ಇಂದು ಪೊರೆಯುವನು ನೀನೇ ಒಂದರಿಯೆ ತವ ಪದದ್ವಂದ್ವವೆ ಗತಿ ಎಂದು ಇಂದು ಚರಣದಿ ಬಿದ್ದೆ ಪೊರೆಯಯ್ಯ ವಿಠಲಯ್ಯ 1 ಹಿಂದಿನಾ ಭಕ್ತರನು ಪೊರೆದ ಕೀರುತಿ ನೋಡೆ ಒಂದು ನಿಜವೆಂದರಿಯೆ ವಿಠಲಾ ಇಂದೆನ್ನ ಕರಪಿಡಿದ ಮುಂದಕ್ಕೆ ಕರೆದು ನೀ ಒಂದು ಮಾತನಾಡೆ ವಿಠಲಾ ಅಂದಿನಾ ಭಕ್ತವತ್ಸಲನೆಂಬ ಕೀರ್ತಿ ನಿಜ ವೆಂದು ತಿಳಿಯುತಲಿ ಆನಂದಿಸುವೆ ವಿಠಲಯ್ಯ 2 ಸಿರಿವಂತರಿಗೆ ವಲಿವ ಬಿರುದೊಂದು ಘನವೆ ಕೇಳ್ ಪರಿ ವಿಠಲಾ ಪರಿಪರಿಯಲಿ ನಿನ್ನ ಚರಣ ಪಿಡಿದಾಲ್ಪರಿಯೆ ಥರವೆ ಗರುವಿಕೆ ಪೇಳು ವಿಠಲಾ ತೆರದು ನೋಡದೆ ನೇತ್ರ ಕರದಭಯ ಪೇಳದಲೆ ಪರಿ ಕರುಣೆಗೆ ಸರಿಯೆ ಪೇಳ್ ವಿಠಲಯ್ಯ3 ಹಿಂದೆ ಕೆಲವರ ಕಾಯ್ದುದೊಂದೆ ಕೀರ್ತಿಯು ಜಗದಿ ಮಂದಿ ಹೊಗಳುವರದನೆ ಮತ್ತೆ ಮತ್ತೆ ಇಂದು ಮುಂದೆ ಅಂಥ ಬಂದ ಭಕ್ತರು ಇಲ್ಲೆ ಇಂದಿಲ್ಲವೇ ನಿನಗೆ ಆ ಶಕ್ತೀ ಇಂದಿನವರಲಿ ಅಂಥ ಭಕುತಿ ಇಲ್ಲವೆ ಪೇಳು ಇಂದಿರೇಶನೆ ಎನಗೆ ವಲಿಯದಿಹೆ ವಿಠಲಯ್ಯ 4 ಅಂತರಂಗದಿ ನಿಂತು ಶಾಂತತ್ವ ಕೊಡುವುದಕೆ ಚಿಂತೆ ಏತಕೆ ಪೇಳು ವಿಠಲಾ ಸಂತತದಿ ನಿನಧ್ಯಾನ ಚಿಂತನೆಯ ಕೊಡು ಎನಗೆ ಚಿಂತಿತಾರ್ಥಪ್ರದನೆ ವಿಠಲಾ ಕಂತುಪಿತ ಗೋಪಾಲಕೃಷ್ಣವಿಠ್ಠಲ ಗುರುಗ ಕರ ಪಿಡಿದು 5
--------------
ಅಂಬಾಬಾಯಿ
ಏನು ಮಾಡಲಿಯನ್ನ ಮನಸಿನಟ್ಟುಳಿ ಘನ | ನೀನೆ ನಿಲಿಸೋ ಹರಿಯೇ ದೊರೆಯೆ ಪ ಪರಮ ಪಾವನ ನಿನ್ನ ಚರಿತವ ಕೇಳದು | ಬರಡ ಮಾತಿಗೆ ಪ್ರೇಮಾ ನೇಮಾ 1 ಸಿರಿವರ ಮೂರ್ತಿಯನು ನೋಡಲೊಲ್ಲದು | ಸತಿಯರ ರೂಪಕೆಳಸುವದು ಹರಿದು 2 ಸಂತರ ಚರಣಕೆರಗಿ ಬಿಗಿದಪ್ಪದು | ಭ್ರಾಂತ ಜನರೊಳಗೆ ಸಂಗಾ 3 ಹರಿಯಂದೊದರಲು ನಾಲಿಗೆ ಬಾರದು | ಪರನಿಂದೆ ಜಪಿಸುವದು ಸರಿದು 4 ಸಿರಿ ಚರಣಾರ್ಪಿತ ತುಲಸಿಯ ಸೇರದು | ಪರಿಮಳದಲಿ ಬೋಗಿಲಿ ಸಾಗಿ 5 ಗುರು ಮಹಿಪತಿ ಪ್ರಭು ನಿನ್ನೆಚ್ಚರಿದಿ ಮನ | ವಿರಿಸಿಯನ್ನನುಳಹೋ ಸಲಹೋ 6
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಮಾಡಲೀ ಮನ ಮಾತು ಕೇಳದೇನು ಮಾಡಲಿ ಶ್ರೀ ನರಹರಿಯ ನೆನೆಯದೆ ಕಂಡ ಹೀನ ವಿಷಯದಲ್ಲಿ ಶ್ವಾನನಂತೆ ಪೋಪರೇನು ಪ ಸಾಧು ಸಜ್ಜನರ ಬೋಧನೆಯ ಜರಿಸಿ ಮಾಧವನೆ ನಿನ್ನ ಪಾದಕೊಯಿರಿ ಮಾಳ್ಪೊದೇನು 1 ಕಾಯ ಬಾಂಧವರ ಮಾಯಪಾಶಕ್ಹಾಕೆ ತೋಯಜಾಕ್ಷ ಎನ್ನ ಬಾಯ ಬಿಡಿಸೊರೈಯ್ಯ 2 ಗಜ ಸಿಕ್ಕಿಬಿದ್ದು ನೈಜ ದಿಕ್ಕುಕಾಣದಂತೆ ಸಿಕ್ಕೆ ವಿಷಯದಲ್ಲಿ 3 ತಂದು ತಂದು ಗೋವಿಂದ ನಿನ್ನಲಿಡೆ ಸಂದುಗೊಂಡು ಬಿಡಿಸಿಕೊಂಡು ಪೋಪುದೈಯ್ಯ 4 ದೇಹಗೇಹದಲ್ಲಿ ಸ್ನೇಹ ಇಡಿಸಿ ಕೆಡಿಸಿ ಶ್ರೀ ಹಯವದನ ಮೋಹಪಾಶಕ್ಹಾಕೋದೇನು 5 ವಾಕು ಕೇಳೋ ತಂದೆ ಪಾದ ಒಂದೇ ಸಾಕಬೇಕೊ ಇಂದೆ 6 ಹೀನಬುದ್ಧಿಬಿಡಿಸಿ ಜ್ಞಾನ ನಿನ್ನಲಿರಿಸಿ ಗಾನಲೋಲ ಕಾಯೋ ಶ್ರೀ ನರಹರಿಯೆ 7
--------------
ಪ್ರದ್ಯುಮ್ನತೀರ್ಥರು
ಏನು ಮಾಡಿದರೆ ನಾ ನಿನ್ನ ಕಾಂಬೆಶ್ರೀನಿವಾಸನೆ ಭಕ್ತ ದೀನಜನ ಬಂಧೊ ಪ ಪರಮೇಷ್ಠಿ ಸುತನು ಕೊಟ್ಟ ಹರಿಮಂತ್ರ ತುಷ್ಟನಾಗುತ ನರಹರಿಯದೃಷ್ಟಿಯಿಂದ ಕಂಡವನಾ ಭೆಟ್ಟಿ ಸಾಧಿಸಲ್ಯಾ 1 ಹುಡುಗತನದಲಿ ತಂದೆ ತೊಡೆಯಾಸಿಗೆ ಬರೆ ತಾಯಿ-ನುಡಿದ ಮಾತನು ಕೇಳಿ ಅಡವಿಯೊಳಗೆಮೃಡ ಶಿಷ್ಟನುಪದೇಶವನು ನಂಬಿ ವೈಕುಂಠವನುಪಡೆದಿರುವ ಬಾಲಕನ ನಡತೆ ನಂಬಿರಲ್ಯಾ 2 ಐದು ಮಂದಿ ತನ್ನ ಕಾದುಕೊಳ್ಳದೆ ಇರಲುದುರುಳನೊಬ್ಬನು ರಾಜಬೀದಿಯೊಳಗೆಕೂದಲು ಹಿಡಿದೆಳೆದು ತರಲು ಶ್ರೀಧರನೆ ಎಂದೊದರಿಮೋದಿಸಿದ ಕಾಮಿನಿಯ ಹಾದಿ ಸೇರಿರಲ್ಯಾ 3 ಸತಿ ಸಹಾಯ ವೃಂದದಿ ಸಹಾಯ ಭೂತನಾಗಿಪ್ರೀತಿಯಲಿ ಲಂಕಾನಾಥನಾಗಿಹ ಮುನಿಪೋತ ರಾಕ್ಷಸನ ಸಖ ನೀತಿ ಸಾಧಿಸಲ್ಯಾ4 ಹೇ ಸುರಾರ್ಚಿತ ಮನುಜ ಕೇಸರಿಯ ಸುರಗೀತಾವಾಸುದೇವ ದ್ವಾರಕೀಶ ಕೃಪಾ ದಾಶರಥೆಶ್ರೀವೆಂಕಟೇಶ ಬದರಿನಿವಾಸ ದಾಸರ ಕಾಯೋಆದರದಿ ಇಂದಿರೇಶ ಕರುಣಾಬ್ಧಿ 5
--------------
ಇಂದಿರೇಶರು
ಏನು ಮಾಡಿದರೇನು ನಾನಾ ಸಾಧನೆಗಳನು | ಜ್ಞಾನಿಗಳ ಕೂಡದನಕಾ ಮರುಳೇ ಪ ಸಕಲ ಸಾಮಗ್ರಿಯನು ತಂದಿರಲೇನು ಪಾ | ಕಕೆ ವಹ್ನಿ ಇಲ್ಲದನಕಾ ಮರುಳಾ 1 ಪ್ರಕಟವಾಗಿರಲು ನಯನಾದಿಂದ್ರಿಯಗಳಿಗೆ ಐಂ | ದ್ರಿಕ ಬೆಳಗವಿಲ್ಲದನಕಾ ಮರುಳೇ 2 ಹಸನ ಭೂಮಿಯ ಮಾಡಿ ಬೀಜ ಉಡಿಗಟ್ಟಿರಲು | ವಸೆದು ಮಳೆಯಾಗದನಕಾ ಮರುಳೇ 3 ಪ್ರಕಟಿಸಿದ ಅನ್ನ ಭಕ್ಷದಿ ಶಾಖಗಳಿರಲು | ಯಶವಾಜ್ಯ ಬಡಿಸದನಕಾ ಮರುಳೇ 4 ತುಂಬಿ ಕುಳಿತೇನು ದೊಡ್ಡವರೆಲ್ಲಾ ನಾವಿಯೊಳು | ಅಂಬಿಗನು ಬಾರದನಕಾ ಮರುಳೇ 5 ನಂಬಿ ಗುರು ಮಹಿಪತಿಸುತಸ್ವಾಮಿ ಶ್ರೀಚರಣ | ದಿಂಬವನು ಪಡೆಯದನಕಾ ಮರುಳೇ 6
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಏನು ಮಾಯವೊ ಹರಿಯೆ ಶ್ರೀನಿವಾಸನೆ ನಿನ್ನ ಧ್ಯಾನಿಸುವವರನು ಪೊರೆವೆ ಸಾನುರಾಗದಲಿ ಪ ಜ್ಞಾನಿಗಳು ಹಗಲಿರುಳು ಮೌನದಿಂದಲಿ ಭಜಿಸಿ ದಾನವಾಂತಕ ನಿನ್ನ ಧ್ಯಾನ ಮಾಡುವರು ಅ.ಪ ಬಡತನದಿ ಬಹು ವ್ಯಥೆಯ ಪಡುತ ಸತಿಸುತರಿರಲು ನುಡಿಯೆ ಭಯ ಭಕ್ತಿಯಲಿ ಒಡೆಯರಿಲ್ಲೆಮಗೆ ಮೃಡಸಖನು ಇಹನೆನಲು ಹಿಡಿಯವಲಿಯ ಕೊಡಲು ಕೆಡದ ಸೌಭಾಗ್ಯವನು ಒಡನೆ ನೀಡಿದೆಯೊ 1 ಅಂದು ದುಶ್ಖಾಸನ ನೃಪನಂದನೆಯ ಬಾಧಿಸುತ ನಿಂದು ಸೀರೆಯ ಸೆಳೆಯೆನೊಂದು ದುಃಖಿಸುತ ಇಂದಿರಾಪತಿ ಕೃಷ್ಣ ಇಂದೆನಗೆ ನೀನೆ ಗತಿ ಎಂದೊಡಕ್ಷಯವಿತ್ತು ಅಂದು ಸಲಹಿದೆಯೊ 2 ಮಡುವಿನಲಿ ಗಜರಾಜ ಪಿಡಿದ ಮಕರಿಗೆ ಸಿಲುಕಿ ಮಡದಿ ಮಕ್ಕಳನಗಲಿ ಕಡೆಗೆ ಸೊಂಡಿಲಲಿ ಪಿಡಿದ ಕುಸುಮವನು ಜಗದೊಡೆಯಗರ್ಪಿತವೆನಲು ದಡದಡನೆ ಬಂದೆಯೊ ಮಡದಿಗ್ಹೇಳದಲೆ 3 ಅಂದು ದೂರ್ವಾಸಮುನಿ ಬಂದು ಶಿಷ್ಯರ ಸಹಿತ ಇಂದೆಮಗೆ ಹಸಿವೆನಲು ನೊಂದು ಶ್ರೀಹರಿಯೆ ತಂದೆ ನೀ ಸಲಹೆನಲು ಬಂದೆ ಬಹಳ್ಹಸಿವೆಯಲಿ ಒಂದು ಪತ್ರದ ಶಾಖ ಉಂಡು ಸಲಹಿದೆಯೊ 4 ಹಿಂದಜಾಮಿಳ ತನ್ನ ಬಂಧುಬಳಗವ ತ್ಯಜಿಸಿ ಅಂದು ಇಹಸುಖದಿ ಆನಂದ ಪಡುತಿರಲು ಬಂದರಾಗ ಯಮಭಟರು ನಿಂದು ಬಾಧಿಸುತಿರಲು ಕಂದನಾರಗನೆನಲು ಅಂದು ಸಲಹಿದೆಯೊ 5 ಚಿಕ್ಕವನು ಪ್ರಹ್ಲಾದ ಮಕ್ಕಳಾಟದ ಧ್ರುವನು ರಕ್ಕಸಾಂತಕನ ಮೊರೆ ಇಕ್ಕಿ ಪ್ರಾರ್ಥಿಸಲು ತಕ್ಕವರಗಳನಿತ್ತು ತಕ್ಕೈಸಿ ಅಣುಗನನು ಮಿಕ್ಕಭಕುತರ ಪೊರೆದೆ ಲಕ್ಕುಮಿಯ ರಮಣ 6 ಈ ಪರಿಯಲಿ ಬಹುಭಕುತರಾಪತ್ತುಗಳ ಹರಿಸಿ ಶ್ರೀಪತಿಯ ರಕ್ಷಿಸಿದಿ ಆಪನ್ನಜನರ ಗೋಪತಿ ಕೃಷ್ಣ ಜಗದ್ವ್ಯಾಪಕನೆ ನೀ ಸಲಹಿ ತಾಪಸರ ಒಡೆಯ ಹೃದ್ವ್ಯಾಕುಲವ ಕಳೆವೆ 7 ಕಾಳಿ ಮಡುವನೆ ಧುಮುಕಿ ಕಾಳಿಂಗನ್ಹೆಡೆ ತುಳಿದೆ ಕಾಳದೇವಿಯರಮಣ ಕಾಲಿಗೆರುಗುವೆನು ಕಾಳಯುಕ್ತಿನಾಮ ಸಂವತ್ಸರದಿ ಸುಜನರಿಗೆ ಭಾಳ ಸುಖಹರುಷಗಳ ಲೀಲೆ ತೋರಿಸುವ 8 ಭ್ರಮಿಸಿ ಇಹ ಸುಖದಿ ಮನ ಶ್ರಮ ಪಡುತಲಿರೆ ದೇವ ರಮೆಯ ರಮಣನೆ ಪೊರೆಯೊ ಮಮತೆಯನು ಬಿಡದೆ ಕಮಲಸಂಭವಜನಕ ಕಮಲನಾಭ ವಿಠ್ಠಲ ಸುಮನಸರ ಒಡೆಯ ಹೃತ್ಕಮಲದಲಿ ಪೊಳೆವ 9
--------------
ನಿಡಗುರುಕಿ ಜೀವೂಬಾಯಿ
ಏನು ವರ್ಣಿಸಿದ ಕವೀಶ್ವರ ನಾರಿಯಜ್ಞಾನಕೆ ಹಾನಿಯ ಮುಕ್ತಿಗೆ ಮೃತ್ಯುವಕಾನನ ರೂಪು ನರಕ ಕುಂಡವೆಂಬಳತಾನು ಕೆಡಲು ಸುಳ್ಳು ಸ್ತುತಿ ಮಾಡಿದ ಪ ಗುದ್ದಲಿ ಮೂಗನು ಸಂಪಿಗೆ ನನೆ ಎಂದಬುದ್ದಲಿ ಮುಖವನು ಪದ್ಮಮುಖವೆಂದಇದ್ದಲಿ ತನುವನು ಇಂದ್ರನೀಲವೆಂದಹದ್ದಿನ ಕೈಯನು ಹರಿ ಸುಂಡಲೆಂದ 1 ಬೆಳ್ಳುಳ್ಳಿ ಹಲ್ಲನು ದಾಳಿಂಬ ಬಿತ್ತವೆಂದಹುಲ್ಲೆಗಣ್ಣೆಂದನು ಸುಳಿಗಣ್ಣಮಲ್ಲಿಗೆ ಮೊಳೆಯೆಂದನು ಮುರುಕಿ ಮಾತುಗಳನ್ನುಜೊಲ್ಲು ಸುರಿವುದಕೆ ಅಮೃತವೆಂದನು 2 ಕುಂಭ ಕುಚವೆಂದನು ಮಾಂಸದ ಮುದ್ದೆಯಬಿಂಬಾಧರವೆಂದನು ಹಂದಿಯ ತುಟಿಯಕಂಬ ಬಾಳೆ ಎಂದನು ಕೊರಡು ತೊಡೆಯನುಬಿಂಬ ಕನ್ನಡಿ ಎಂದನು ಕುಣಿಗಲ್ಲವ 3 ಕಲಹಂಸ ನಡಿಗೆಯೆಂದ ಕೋಣನ ನಡಿಗೆಯಅಳಿಕುಂತಳವೆಂದ ಮುರುಟು ಕೂದಲನುಬಲು ಸಿಂಹನಡುವೆಂದ ಮೊಸಳೆ ನಡುವನ್ನುಹೊಳೆವ ಬೊಂಬೆಯೆಂದ ಕೊಳಕು ಮೈಯನ್ನು 4 ಹೊಲಸು ಮೂಳಿಗೆ ನಾನಾ ಹೋಲಿಕೆಗಳನಿಟ್ಟುತಿಳಿದಂತೆ ಕವಿತಾನು ವರ್ಣಿಸಿದ ಕೊಂಡಾಡಿಸುಲಭ ಚಿದಾನಂದ ಸುಪಥವ ಕಾಣದಲೆಕಳಕೊಂಡ ಕವಿತಾನು ಬಹು ಪುಣ್ಯ ಪಥವ 5
--------------
ಚಿದಾನಂದ ಅವಧೂತರು
ಏನು ಸುಕೃತದ ಫಲವೋ ಶ್ರೀನಿವಾಸನೆ ಹೇಳು ಹಾನಿಯಾಗಿಯೆ ಅವಮಾನ ತೋರುತಿದೆ ಪ ವಾಸುದೇವನೆ ಎನ್ನ ಈಸು ದಿನ ಪರಿಯಂತ ಬೇಸರಿಲ್ಲದೆ ಕಾಯ್ದೆ ಲೇಸ ಕರುಣಿಸಿದೆ ಈಸಾಡಿದೆನು ನಾನು ಈ ಗೃಹದೊಳೀಗೇನು- ದಾಸಿನವು ನಿನಗಾಯಿತು ಮೋಸ ಯೋಚಿಪರೆ 1 ಹಗಲುಗತ್ತಲೆಯಾಗಿ ಮೊಗವು ಕಾಣದೆ ಎನಗೆ ಜಗದುದರ ನಿನ್ನಾಣೆ ನಗೆಯಾಯ್ತು ಜಗಕೆ ಹಗಯ ಮಧ್ಯದಿ ಸಿಲುಕಿ ಮೃಗವು ಬಾಯ್ಬಿಟ್ಟಂತೆ ಮಿಗ ಕ್ಲೇಶಬಟ್ಟು ನರಮೃಗವು ತಾನಾದೆ 2 ಆರು ಹಿತವರು ಇಲ್ಲ ಧಾರುಣಿಯ ಬಲವಿಲ್ಲ ಪಾರಾಗಿ ನಾಚಿಕೆಯು ಬೇರೂರಿತು ಘೋರ ಅಡವಿಯೊಳಗೆ ಗಾರುಗತ್ತಲೆ ಸುತ್ತಿ ಮಾರಿದೆಯ ಚೋರರಿಗೆ ದಾರಿಗಾಣಿಸದೆ 3 ದೊರೆಯು ಮನ್ನಿಸಿ ಕೊಡಲು ನೆರೆಹೊರೆಯ ಕರೆಕರೆಯು ಹರದಿಯೊಳು ನಂಬಿಗೆಯು ಕಿರಿದಾಯಿತು ನೆರವಾಗಿ ತೋರುತಿದೆ ಬರಿಯ ವೃಕ್ಷದ ತೆರದಿ ಮರುಳು ಕಣ್ಣಿಗೆ ಇರುವೆ ಕರಿಯ ತೆರನಂತೆ 4 ಇನ್ನು ಬಂಧಿಸಬೇಡ ಎನ್ನಿಂದ ಅಳವಲ್ಲ ಬನ್ನಬಡುವುದು ಎಲ್ಲ ನಿನ್ನ ಮನಕರುಹು ಕರ್ಮ ಬೆನ್ನು ಬಿಡುವಂದದಲಿ ಪನ್ನಗಾದ್ರಿನಿವಾಸ ಪಾಲಿಸೈ ಲೇಸ 5 ದಾಸ ಬಳಲಿದನೆಂಬ ಹೇಸಿಕೆಯ ಮಾತುಗಳ ಕಾಸಕೊಟ್ಟೇಕೆ ನಿರಾಸೆ ಮಾಡುವಿಯೊ ಬೇಸರಾಗದೆ ಪಂಥವಾಸಿಯಿಲ್ಲವೆ ನಿನಗೆ ಸಾಸಿರಾಕ್ಷನೆ ಎನಗೆ ಲೇಸಿತ್ತು ಸಲಹೊ 6 ಪಡೆದ ತಂದೆಯು ನೀನೆ ಕೊಡುವ ಒಡೆಯನು ನೀನೆ ಕಡೆಗೆ ಕೈವಿಡಿದು ಎನ್ನ ರಕ್ಷಿಪನು ನೀನೆ ಮಡದಿ ಮಕ್ಕಳನೆಲ್ಲ ಬಿಡದೆ ಸಲಹುವ ನೀನೆ ಪೊಡವಿಗಧಿಪತಿಯಾದ ವರಾಹತಿಮ್ಮಪ್ಪ 7
--------------
ವರಹತಿಮ್ಮಪ್ಪ
ಏನು ಸುಕೃತವ ಮಾಡಿ ಜನಿಸಿದಳೊ ಯಶೋದೆ ದೀನಪಾಲಕ ನಿನ್ನ ಮಗನೆಂದು ಮನದಣಿಯೆ ಸೇವಿಪೆಳೊ ಪ. ಅನುದಿನ ಜಪತಪಾನುಷ್ಠಾನದಿಂದಿರುತಾ ಪಾದ ಸೇವಿಪ ಮುನಿಗಳಿಗೆ ದೊರೆಯುವ ವನಜನಾಭನೆ ನಿನ್ನ ವನರುಹಾನನ ನೋಡಿ ದಿನದಿನದಿ ಸುಖಿಸುವ ಘನ ಪುಣ್ಯ ಗಳಿಸಿದಳೋ 1 ದುಷ್ಟರನು ಸಂಹರಿಸಿ ಮೈ ಎಷ್ಟು ನೋವೊ ಎಂದು ದಿಟ್ಟೆ ಬಿಸಿನೀರೆರೆಯುವಳೊ ಇಷ್ಟ ಮೂರುತಿ ನಿನ್ನ ಶ್ರೇಷ್ಠತರ ಆಭರಣ ದಿಟ್ಟ ಕೃಷ್ಣ ನಿನಗಿಟ್ಟು ನೋಡುವಳೊ 2 ಕಸ್ತೂರಿ ತಿಲಕವನು ಶಿಸ್ತಿನಲಿ ಶೃಂಗರಿಸಿ ಕಸ್ತೂರಿರಂಗ ಶ್ರೀ ಶ್ರೀನಿವಾಸ ನಿನ್ನೆತ್ತಿ ತೊಡೆಯಲ್ಲಿ ಸ್ವಸ್ಥದೊಳು ಮಲಗೆಂದು ಪೊಂಬಟ್ಟಲೊಳು ಕ್ಷೀರವನು ಹಸ್ತಿವರದನೆ ಕುಡಿಯೆಂದು ಜೋಗುಳವ ಪಾಡುವಳೊ 3
--------------
ಸರಸ್ವತಿ ಬಾಯಿ
ಏನು ಸುಕೃತವೋ ಮಧುರಾ ನಗರಕೆ ಪ ಗಾನಲೋಲ ಹರಿ ತಾ ನೆಲೆಸಿಹುದು ಅ.ಪ ವರ ವಿಭವಗಳುಳ್ಳ ಪುರಗಳಂತಿರಲು ಪರಮ ಪುರುಷ ಹರಿ ವಿರಾಜಿಸುತಿರಲು 1 ಭೂಪ ನಗರಗಳಿಗೀ ಪರಿಯುಂಟೆ ಗೋಪಾಲಕ ಹರಿ ಕಾಪಾಡುತಿಹುದು 2 ಸುಮನಸಪುರವಾದ ಅಮರಾವತಿಗುಂಟೆ ಕಮಲನಯನ ಹರಿ ಸಮಾಗಮವು ಸದಾ 3 ದಿವಿಜರೊಡೆಯ ಹರಿ ಭುವಿಯಲಿ ಅರಿಸಿ ಅವತರಿಸುತ ತನ್ನ ಪ್ರವಾಸಗೈದುದು 4 ನಿರುಪಮ ಆನಂದಪೂರ್ಣ ಪ್ರಸನ್ನನು ಪರಿಪರಿ ವಿಧದಲಿ ವಿರಾಜಿಸುತಿರಲು 5
--------------
ವಿದ್ಯಾಪ್ರಸನ್ನತೀರ್ಥರು