ಒಟ್ಟು 5271 ಕಡೆಗಳಲ್ಲಿ , 121 ದಾಸರು , 3265 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ದೇಹದ ಒಳಗಿಹ್ಯ ದೇವರ ತಿಳಿದಿಹ ಆತನೆ ದೇಹಾತೀತನು ಮಾ 1 ಆತನೇ ಶ್ರೀಹರಿಭಕ್ತನು ಮಾ2 ಲಿಂಗವಂತನು ಮಾ3 ಷಟಸ್ಥಳ ಶೋಧಿಸಿ ಸಾಧಿಸಿ ತಿಳದಿಹ ಆತನೆ ಶೀಲವಂತನು ಮಾ 4 ಶುದ್ಧಾತ್ಮ ಶಿವತತ್ವ ಸೂತ್ರವ ತಿಳದಿಹ ಆತನೆ ಶಿವಭಕ್ತನು ಮಾ 5 ದೃಢ ನಿರ್ವಾಣೆಯು ಮಾ 6 ಆತನೆ ಮಹಾಪಂಡಿತನು ಮಾ 7 ಆತನೆ ಆಚಾರ ನಿಷ್ಠನು ಮಾ 8 ಐದು ತತ್ವದ ಗತಿಗಳ ತಿಳದಿಹ ಆತನೆ ಮಹಾ ವೈದಿಕನು ಮಾ 9 ಪಂಚ ಮುದ್ರೆಯ ಸ್ಥಾನವು ತಿಳದಿಹ ಆತನೆ ಸುಬ್ರಾಹ್ಮಣನು ಮಾ 10 ಗುರುವೆಂದರುವದು ಮಾ 11 ಆತನೆ ಸಿದ್ದ ಶರಣನು ಮಾ 12 ಆತನೆ ಮಹಾ ಸತ್ಪುರುಷನು ಮಾಟ 13 ಆತನೆ ವರಗುರು ಮೂರ್ತಿಯು ಮಾ 14 ಅವತಾರ ಮಹಿಮನು ಮಾ 15 ಆತನೆ ಸಾಧು ಸಂತನು ಮಾ 16 ಸದ್ಗುರು ಮೂರ್ತಿಯು ಮಾ 17 ಮಹಾ ಜ್ಞಾನಿಪುರುಷನು ಮಾ 18 ಮರುಳಮಂಕ ಮನುಜರು ಮಾ 19 ಆತನೆ ಶ್ರೀ ಗುರುದಾಸನು ಮಾ 20 ಮಹಿಪತಿ ಭವನಾಶವಾಯಿತು ಮಾ 21
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ದೇಹವ್ಯಾಕೆ ಇಂಥ ದೇಹವ್ಯಾಕೆ ಪ ಹರಿಯ ಪಾದಕೆರಗದಂಥ ಶಿರವು ಏಕೆ ಪರಮ ಪುರುಷನ ಪಾಡದಂಥ ವದನವ್ಯಾಕೆ 1 ಹರಿಯಸ್ಮರಣೆ ಕೇಳದಂಥ ಕರ್ಣವ್ಯಾಕೆ ಹರಿಯಮೂರ್ತಿನೋಡದಂಥ ಕಂಗಳ್ಯಾಕೆ 2 ಹರಿಯ ನಿರ್ಮಾಲ್ಯವಾಘ್ರಾಣಿಸದಂಥ ನಾಸವ್ಯಾಕೆ ಹರಿಯ ನೈವೇದ್ಯ ಭುಂಜಿಸದಂಥಾ ಉದರವ್ಯಾಕೆ 3 ಶರಣಜನರ ಚರಣ ತೊಳೆಯದ ಕರವು ಏಕೆ4 ಜಿಹ್ವೆ ಏಕೆ ಜಾಣರೆಲ್ಲರು ತಿಳಿದು ನೋಡಿ ಬದುಕಿ ಜೋ 5
--------------
ಬಾಗೇಪಲ್ಲಿ ಶೇಷದಾಸರು
ದೇಹಿಯೆಂಬವನೊಡನೆ ನಾಸ್ತಿಯೆನಬೇಡ ಕಾಯೊ ವೆಂಕಟಪತಿಯೆ ಕಾರುಣ್ಯವಾರಿಧಿಯೆ ಪ ಮಾಡಿದಪರಾಧಗಳ ನೋಡಿ ಕ್ಷಮಿಸಿಯೆ ಯೆನಗೆ ರೂಢಿಯೊಳು ಬೆಳೆಸಿರಿಯ ಕೈಗೂಡಿಸಿ ಆಡಿ ತಪ್ಪಿದ ನುಡಿಯ ಕೂಡಿ ನಡೆಸುತ ಮುಂದೆ ಬೇಡಿದಿಷ್ಟವನಿತ್ತು ಮಾತಾಡಬೇಕೆನುತ 1 ನರನಾದ ಕುರಿಯಿದನು ಸಲಹಬೇಕೆಂದೆನುತ ಮೊರೆಯಿಟ್ಟು ನಿನ್ನಡಿಗೆ ಶರಣಾದೆನು ಕರುಣವಾರಿಧಿ ನಿನ್ನ ಚರಣದಾಭರಣನಿಗೆ ಹರಣವನು ಮರೆವಾಗೆ ಸ್ಮರಣೆ ನೀಡೆನುತ 2 ಗುಣವಾದ ಪತ್ರಿಕೆಯ ಕ್ಷಣದೊಳಗೆ ಹರಿದೆನ್ನ ಕಣುಮನಕೆ ದೃಢವಾದ ಗುಣವ ತೋರೆನುತ ಫಣಿಶಯನ ನಿನ್ನಡಿಗೆ ಮಣಿದು ಬೇಡುವೆ ನಾನು ಉಣಲಾಗದೋಗರವ ಉಣಿಸಬೇಡೆನುತ 3 ಕೆಟ್ಟ ಕೆಲಸವನಿದಿರು ದೃಷ್ಟಿಗಿಕ್ಕದೆÀಯೆನ್ನ ಬಿಟ್ಟು ಕಳೆಯಲು ಬೇಡ ಸೃಷ್ಟಿಪಾಲಕನೆ ಇಟ್ಟಡಿಯ ಕಮಲವನು ಮುಟ್ಟಿ ಭಜಿಸುವೆ ನಾನು ಹುಟ್ಟಿದೀ ಬವರದೊಳು ಕಷ್ಟ ಬೇಡೆನುತ 4 ಶುದ್ಧ ಸ್ನಾನವ ತೊರೆದು ಇದ್ದ ಜಪಗಳ ಮರೆದು ಕರ್ಮ ಒದ್ದು ಕಳೆದು ಉದ್ದಂಡವಾಗಿ ನಡೆದಿರ್ದ ಪಾಪಂಗಳನು ತಿದ್ದಿಟ್ಟು ಎನ್ನನುರೆ ಉದ್ಧರಿಸಬೇಕಯ್ಯ 5 ಪೊಡೆವಿಯೊಳಗೆನ್ನಂಥ ಕಡುಮೂರ್ಖರನು ಕಾಣೆ ಮಡದಿಯೆಂಬಡವಿಯೊಳು ಕೈದುಡುಕಿದು ಪಡೆದ ಮಕ್ಕಳ ಮುಂದೆ ಕಡೆ ಹಾಯುವವರಿಲ್ಲ ಒಡೆಯನಾಗಿಯೆ ಯೆನ್ನ ಬಿಡದೆ ಸಲಹೆನುತ 6 ನಾರಿ ಮಕ್ಕಳಿಗೆಲ್ಲ ಮೀರಿದಾಪತ್ತಿನಲಿ ತೋರಿಸುವೆ ನಿನ್ನ ಚರಣಂಗಳೆನುತ ಹಾರೈಸಿದ್ಹರಕೆಯಿದು ಭಾರವಾಗಿಯೆ ಶಿರದಿ ಏರಿದುದನಿಳುಹುವರೆ ದಾರಿ ತೋರೆನುತ 7 ತ್ರಾಹಿ ವೆಂಕಟರಾಯ ಕಾಯೊ ನಿನ್ನಯ ಮಾಯೆ ಮೋಹಿಸುತ ಜಗವೆಲ್ಲ ಬಾಯ ಬಿಡುತಿಹುದು ದೇಹಿಯೆನುತಿಹ ಜನಸಹಾಯನಲ್ಲವೆ ನೀನು ಮಾಯವಾಗದೆ ಮುಂದೆ ಆಯತನ ತೋರೆನುತ 8 ಸುರವಂದ್ಯ ಮುರಮಥನ ಗುರುದೈವ ಪರಮಾತ್ಮ ವರಲಕ್ಷ್ಮಿಕರವೆನಿಪ ಹರಿವೆಂಕಟೇಶ ಮರೆವಾಗದಿರು ಯೆನ್ನ ಕರೆದು ನೆರೆ ಸೌಖ್ಯವನು ಸ್ಥಿರವಾಗು ಎನ್ನೊಡನೆ ವರಾಹತಿಮ್ಮಪ್ಪ 9
--------------
ವರಹತಿಮ್ಮಪ್ಪ
ದೊರೆಯೆನ್ನನು ಕಾಯೈ ಶ್ರೀಚಕ್ರಪಾಣಿ ಪ ನಿರುತವು ಶರಣೆಂದೆನ್ನುತ ಕೋರುವೆ ಪರಿಯೊಳುಸೇರೇ ಬಂದಿಹೆ ಕರಪಿಡಿ ಅ.ಪ ಆಯುರಾರೋಗ್ಯ ಸುಖಸಂಪದಕೊಡುವ ಸೌಭಾÀಗ್ಯ ಕರ್ತೃವು ಶ್ರೇಯದ ವಿದ್ಯೆಯ ಕರುಣಿಸ ಪ್ರಭೆಯೊಳು ಸನ್ಮಾನವೀವಾ ಧ್ಯೇಯನೇಭತ್ತಿಜ್ಞಾನವೈರಾಗ್ಯವನಿತ್ತುವಿಮುಕ್ತಿಕೊಡುವ ಅ ನ್ಯಾಯದೆ ನಡೆವರ ವ್ಯರ್ಥರಗೈವನು ನೀನೈ ಶ್ರೀಶ್ಯಾಮಸುಂದರ 1 ಮನ್ನರೋಗಕ್ಕೆ ನಿನ್ನ ಪಾದತೀರ್ಥ ಔಷಧವು ಬೇಡ ಉನ್ನತ ಭಯಕ್ಕೆ ಸುದರ್ಶನ ಸ್ಮರಣೆ ಮಂತ್ರವೇತಕ್ಕೆ ಇನ್ನಿತರ ಕಷ್ಟಗಳಿಗೆಲ್ಲ ನಿನ್ನ ನಾಮಮಂತ್ರ ಭಜನ ಚೆನ್ನಪಾದಕೃಪೆ ಇನ್ನೊದಗಿಹುದೈ ನಾಂ ನಿತ್ಯಸಂತೊಷಿ 2 ನಿರಾಯಾಸದಿಂ ದಾಸಗಂತ್ಯದಲಿ ಪ್ರಶಾಂತನಾಗಿ ಹರಿನಾರಾಯಣ ನಾರಾಯಣಯೆಂದು ಕರೆವಂತೆ ಮಾಡಿ ಹರುಷದಿ ನೋಹರಾಕಾರವ ತೋರಿ ವೈಕುಂಠಕೆನ್ನನು ಕರುಣದಿ ಕರೆದೊಯ್ ಅಜಪೂಜಿತ ಹೆಜ್ಜಾಜಿಕೇಶವ 3
--------------
ಶಾಮಶರ್ಮರು
ದೋಷ ದೂರ ಜನಾರ್ದನ ದೋಷ ದೂರಾ ಪ ದೋಷ ದೂರ ಎನ್ನ ಸಾಕುವುದು ಪರಾಶರವರದಾ ಅ ಬಲು ಕಾಲಗಳಿಂದ ನೆಲೆಯ ಕಾಣದೆ ನಿನ್ನ ಚೆಲುವ ಚರಣ ದ್ವಂದ್ವ ನೆಳಲನಾಶ್ರೈಸಿದೆ 1 ಪುಂಡರೀಕ ಪಾದ ತಿಮಿರ ಮಾರ್ತಾಂಡ ಮುರವೈರಿ 2 ಅಜಗೆ ಪ್ರಸನ್ನ ವಿರಜಭಾಗ್ಯ ಸಂಪನ್ನ ವಿಜಯಮೂರುತಿ ನಮ್ಮ ವಿಜಯವಿಠ್ಠಲರೇಯ 3
--------------
ವಿಜಯದಾಸ
ದೋಷ ದೂರಿಸೈಯ್ಯಾ ಎನಗೆ ನೀ ತೋಷವೀವುದಯ್ಯಾ ಪ ಆಸವ ಶ್ರೀತುಲಸೀವಾಸನಿಲಯ ಸ- ರ್ವೇಶಹರಿಯ ದುರ್ವಾಸ ವಿಠಲರಾಯ ಅ.ಪ. ರಾಘವ ರಘುಕುಲ ಸೋಮನ ಸದಯ ಸ- ರ್ವಾಘ ಹರಿದ ನಿಖಿಳಾಗಮಗಳೊಡೆಯ 1 ಯಾದವ ಯದುಕುಲ ತಿಲಕಾವ್ಯಯ ಮಧು- ಸೂದನ ತ್ರಿದಶನು ವೇದ್ಯದಾಸ ವಂದ್ಯಾ 2 ನರಹರಿಕರುಣಾರ್ಣವ ಶರಣರ ಗುರು ಕರುಣವಿರಿಸು ನರಸಿಂಹವಿಠಲರಾಯ 3
--------------
ನರಸಿಂಹವಿಠಲರು
ದೋಷ ರಾಸಿಯಳಿದು ಪ ಭಾಸುರ ಗುಣಗಣ ಭವ್ಯ ಶರೀರ ಅ.ಪ ಚಿತ್ತ ನಿನ್ನ ಪದ ಸೇವೆಯೊಳಿರಲಿ-ಚಿಂತೆ ಇತರ ಬಿಡಲಿ ಅಂತರಂಗದಲ್ಲಾನಂದಿಸಲಿ-ಅಹಂಕೃತಿಯನ್ನೆ ಬಿಡಲಿ ಪಂಕಜ ಪಂಥವ ಪಾಲಿಸೊ ಪರಮ ಪುರುಷ ಹರಿ 1 ಅರಿಷಡ್ವರ್ಗಗಳಟವಿಯ ಖಂಡಿಸು-ಆನಂದದಲಿರಿಸು ದುರ್ಮತಿಯನೆ ಬಿಡಿಸು ಸನ್ನುತ ನಿರುತವು ನಿಲ್ಲಿಸೋ ನೀರಜಾಕ್ಷ ಹರಿ2 ತ್ರಿಜಗನ್ಮೋಹನಾಕಾರ ತ್ರಿ-ಗುಣಾತೀತ ತೀರ್ಥಪಾದ ಭಜಕರ ಪಾವನ ಭವನುತ ಚರಣ-ಋಜಗಣನುತಾಭರಣ ವಿದಾರಣ ಕೋವಿದನುತ ಹರಿ 3
--------------
ವಿಜಯದಾಸ
ದೋಷನಾಶ ಜಗದೀಶ ಈಶ ಕೈ ಲಾಸವಾಸ ಸದಾನಂದ ಹರ ಜೈಜೈ ಪರಮಾನಂದ ಪ ದಂಡಧರನೆ ಹರ ರುಂಡಮಾಲ ರುದ್ರ ಕೆಂಡನಯನ ಸದಾನಂದ ಹರ ಜೈ ಜೈ ಪರಮಾನಂದ1 ಗೌರಿನಾಥ ಪ್ರಭು ಮಾರಮರ್ದನ ಮೃಡ ವಾರಿಧಿಧರ ಸದಾನಂದ ಹರ ಜೈ ಜೈ ಪರಮಾನಂದ 2 ಅಗಜಾವಲ್ಲಭ ನಿಗಮವಂದ್ಯ ಭಕ್ತ ರಘನಾಶನ ಸದಾನಂದ ಹರ ಜೈ ಜೈ ಪರಮಾನಂದ 3 ಗಜಚರ್ಮಾಂಬರ ಸುಜನರ ಪರಿಪಾಲ ತ್ರಿಜಗಪೂಜ್ಯ ಸದಾನಂದ ಹರ ಜೈ ಜೈ ಪರಮಾನಂದ 4 ತ್ರಿಪುರಸಂಹರ ನುತ ಸುಫಲದಾಯಕ ಮಹ ಕೃಪಾಕರ ಶಿವ ಸದಾನಂದ ಹರ ಜೈ ಜೈ ಪರಮಾನಂದ 5 ನೀಲಕಂಠ ಭವಮಾಲನಿವಾರ ತ್ರಿ ಶೂಲಧಾರಿ ಸದಾನಂದ ಹರ ಜೈ ಜೈ ಪರಮಾನಂದ 6 ಚಂದ್ರಚೂಡ ಶರಣೇಂದ್ರ ಮೃಕಂಡುಮುನಿ ಕಂದಗೊಲಿದ ಸದಾನಂದ ಹರ ಜೈ ಜೈ ಪರಮಾನಂದ 7 ಫಾಲನಯನ ಸುಖದಾಲಯ ನುತಜನ ಮೇಲುಮಂದಿರ ಸದಾನಂದ ಹರ ಜೈ ಜೈ ಪರಮಾನಂದ 8 ಭವ ಭೂತಿಖ್ಯಾತ ಜಗ ದಾತ ಸದಾನಂದ ಹರ ಜೈಜೈ ಪರಮಾನಂದ 9 ನಾದತೀತ ಅಮರಾದಿವಿನುತ ಮಹ ದಾದಿದೇವ ಸದಾನಂದ ಹರ ಜೈ ಜೈ ಪರಮಾನಂದ 10 ನತಜನ ಸುಖದಾಶ್ರಿತ ಹಿತಮತಿ ದೇ ನುತಿಪೆ ಸತತ ಸದಾನಂದ ಹರ ಜೈಜೈ ಪರಮಾನಂದ 11 ಭಾಗವತರ ಪ್ರಿಯ ಭಗವತ್ಶಿಖಾಮಣಿ ನಾಗಭೂಷ ಸದಾನಂದ ಹರ ಜೈ ಜೈ ಪರಮಾನಂದ 12 ಖೊಟ್ಟಿಲೋಹ ಸುಟ್ಟು ಕಿಟ್ಟತೆಗೆವಂತೆನ್ನ ಭ್ರಷ್ಟತ್ವಕಳಿ ಸದಾನಂದ ಹರ ಜೈ ಜೈ ಪರಮಾನಂದ 13 ಹರಣಪೋದರು ಹರಿಚರಣಸ್ಮರಣೆಬಿಡ ದ್ವರವ ಪಾಲಿಸು ಸದಾನಂದ ಹರ ಜೈ ಜೈ ಪರಮಾನಂದ 14 ಲಿಂಗಪುರೇಶ ಶಿವಲಿಂಗರೂಪ ಭವ ಭಂಗಸಂಗ ಸದಾನಂದ ಹರ ಜೈ ಜೈ ಪರಮಾನಂದ 15 ಮಂದರಧರನಡಿ ಚಂದದೊಲಿಸಿ ಎನಗಾ ನಂದಕೊಡು ಸದಾನಂದ ಹರ ಜೈ ಜೈ ಪರಮಾನಂದ 16 ಮಂಗಳಮೂರುತಿ ತುಂಗವಿಕ್ರಮ ಶ್ರೀ ರಂಗ ರಾಮ ಭಕ್ತಾನಂದ ಹರ ಜೈ ಜೈ ಪರಮಾನಂದ 17
--------------
ರಾಮದಾಸರು
ಧನಪ್ರದ ಶ್ರೀಕರ ಕಾರುಣ್ಯ ಸ್ತೋತ್ರ ಧನಕೀರ್ತಿಗಳ ಹುಡುಕಿ ತಿರುಗಾಡಲಾರೆ ಧನಕೀರ್ತಿಗಳ ಕೊಡುವಿ ನೀನಾಗಿ ನೀನೆ ಪ ಶ್ರೀಕರನೇ ನೀನಾಗಿ ನೀನೇ ಸುಧಾಮನಿಗೆ ಬೇಕಾದ ಸೌಭಾಗ್ಯ ಧನ ಧಾನ್ಯವಿತ್ತಿ ಸಾಕಿ ಸಲಹುವ ಸ್ವಾಮಿ ನೀನಿರಲಿಕೆ ನಾನು ಏಕೆ ತಿರುಗಾಡುವುದು ಕುಳಿತಲೆ ಕೊಡುವಿ 1 ಪತಿ ಹೃಸ್ಥ ಶ್ರೀ ರಮಾಪತಿ ಸರ್ವ ಪ್ರೇರಕಾಂತರ್ಯಾಮಿ ಆರ್ತಿಹರ ನೀನು ವರಜ್ಞಾನ ಯೋಗಿವರ್ಯನು ರೈಕ್ವ ಕುಳಿತಲೆ ಪೌತ್ರಾಯಣ ದ್ವಾರ ಭಾರಿ ಧನವಿತ್ತೆ 2 ದೇವ ವೃಂದದಿ ಪ್ರವರ ಗುರು ವಾಯು ಪ್ರೇರಿಸಲು ದೇವ ಶರ್ಮನು ಬಂದು ಏನೂ ಬೇಡದಲೆ ನಿವ್ರ್ಯಾಜ ಭಕ್ತಿ ಆನಂದದಲಿ ಸ್ತುತಿಸಿದನು ದ್ರವಿಣಾದಿ ಧನವಿತ್ತಿ ನೀನಾಗಿ ನೀನೇ 3 ಸರ್ವದೊಳು ನೀನಿರುವಿ ಸರ್ವವಶಿ ನಿಸ್ಸಂಗ ಸರ್ವಧಾರಕ ಶ್ರೀಶ ಸರ್ವಗುಣ ಪೂರ್ಣ ಭೂಮಿಯಲಿ ಮಾರ್ಜಾಲ ತನ್ನ ಮರಿಯ ತಾನೇ ಎತ್ತಿ ಕಾಯುವಂತೆ ನೀ ಎನ್ನ ಸರ್ವದಾ ಕಾಯುತಿ ಕೃಪೆಯಿಂದ 4 ಶಂಖ ನಿಧಿ ಪದ್ಮನಿಧಿ ರವಿ ಸೋಮಕೈಗಳಲಿ ಶಂಖಾರಿಧರ ದ್ರವ್ಯ ಕೊಡುವ ಹಸ್ತಗಳು ಸ್ವಾಂಕಸ್ಥ ಲಕ್ಷ್ಮೀ ಸಮೇತ ಗರುಡಾ ರೂಢ ಶ್ರೀಕರನೇ ಅಜಪಿತ ನಮೋ ಪ್ರಸನ್ನ ಶ್ರೀನಿವಾಸ 5
--------------
ಪ್ರಸನ್ನ ಶ್ರೀನಿವಾಸದಾಸರು
ಧನವಂತನಾದವನೆ ಘನವಂತ ಜಗದಿ ಧನವಂತನಾಗದವ ಹೆಣಕೆ ಕಡೆ ಇಹ್ಯದಿ ಪ ಧನಿಕನ ಮನೆಮುಂದೆ ದಿನಕರನ ಪ್ರಭೆಯಂತೆ ಜನಸಮೂಹ ನೆರೆಯುತಿಹ್ಯದನುದಿನವು ಬಿಡದೆ ಮಣಿದು ಅವನಿಗೆ ತಮ್ಮ ಮನೆಯ ಪರಿವ್ಯಿಲ್ಲದೇ ಮನ್ನಿಪರು ಅವನೊಚನ ಘನಭಕುತಿಲಿಂದ 1 ಸಿರಿಯಿಲ್ಲದವ ಬಂದು ಶರಣೆಂದು ಕರಮುಗಿಯೆ ಗರುವದಿಂ ಕೂಡ್ರುವರು ಶಿರವೆತ್ತಿ ನೋಡದೆ ತಿರುಕುದೆ ಇವನು ಹೆರಕೊಂಡು ತಿನಲಿಕ್ಕೆ ತಿರುಗುವನು ಎಂದೆನುತ ತಿರಿಸುವರು ಹೀನ 2 ಬಂಧುಬಳಗವುಯೆಂದು ಬಂದು ಕರೆಯಲವನ ಮುಂದೆ ನುಡಿಯುವರು ನಿನ್ನ ಮಂದಿರಕೆ ಬಂದು ಚಂದದಿಂದುಂಡೇವೇನೆಂದು ಜರೆವರು ಮನಕೆ ಬಂದ ತೆರದವನ ಮನನೊಂದಳಲುವಂತೆ 3 ಹತ್ತಿರದವರಾರು ಹತ್ತಿರಕೆ ಬಾರರು ಸತ್ತ್ಹೆಣನ ಕಂಡಂತೆ ಮತ್ತಿವನ ಕಂಡು ಅತ್ತಿತ್ತ ಪೋಗುವರು ಸುತ್ತಿ ಪಥಸೇರುವರು ಆರ್ಥಿಲ್ಲದವನಿರವು ವ್ಯರ್ಥ ಮತ್ರ್ಯದೊಳು 4 ಹರಿದ್ಹೋಗ ಸಿರಿಯೆಂದು ಅರಿಯದೆ ಗರುವದಿ ಚರಿಸುವ ಅಧಮಜನರಿರವೇನು ಜಗದಿ ಗರುವಿಕರ ಸಿರಿಗಿಂತ ಶರಣರ ಬಡತನವೇ ಪಿರಿದೆಲೋ ಶ್ರೀರಾಮ ಅರಿದು ನಾನು ಬೇಡ್ವೆ 5
--------------
ರಾಮದಾಸರು
ಧನ್ಯ ಧನ್ಯ ಧನ್ಯ ಧನ್ಯ ಗುರುವರಾ ಧನ್ಯ ತಂದೆ ಮುದ್ದುಮೋಹನ್ನ ಗುರುವರಾ ಪ. ಮಾನ್ಯ ವಿಭುದ ಮಾನ್ಯ ಜಗದ್ಮಾನ್ಯ ಗುರುವರಾ ಅ.ಪ. ಪುಟ್ಟಿದಂದಿನಿಂದಿನ್ವರೆಗೆ ತೊಟ್ಟು ದಾಸತ್ವ ದೀಕ್ಷೆ ಕರ್ಮ ಜಪತಪಂಗಳಾ ಕರ್ಮ ಮಾಡಿ ಮುಗಿಸಿ ಶ್ರೇಷ್ಠ ಜ್ಞಾನ ಕವಚ ತೊಟ್ಟು ದಿಟ್ಟತನದಿ ಮೆರೆದ ಗುರುವು ಮುಟ್ಟಿದರೀಗ ಹರಿಯ ಪುರವ 1 ಭಕ್ತಿ ಭೂಷಣ ತೊಟ್ಟು ವಿರಕ್ತಿ ಖಡ್ಗ ವರೆಯಲ್ಲಿಟ್ಟು ಮುಕ್ತಿ ಮಾರ್ಗಕೆಲ್ಲ ದೀಕ್ಷೆ ಇತ್ತು ಸುಜನಕೆ ವ್ಯಕ್ತಾವ್ಯಕ್ತ ಮಹಿಮೆಯಿಂದ ವ್ಯಕ್ತಿತ್ವವನು ತೋರಿಕೊಳದೆ ಉಕ್ತಿಗೊಶರಮಾಡಿಕೊಂಡ ಶಕ್ತಿ ಪೇಳಲಳವೆ ಎನಗೆ 2 ಕರ್ಮ ಕುರುಹನರುಹಿ ನಮ್ಮ ಮಧ್ವಮತಕೆ ದಿವ್ಯ ಸಮ್ಮತವಾಗಿ ವಮ್ಮನದ ಸುಜ್ಞಾನ ಬೆಳಕು ತಮ್ಮ ನಂಬಿದರಿಗೆ ತೋರಿ ಬÉೂಮ್ಮನೈಯ್ಯನ ಪುರಕೆ ಸಾರ್ದ ನಮ್ಮ ಗುರುವರಾ 3 ದಾಸಕೂಟ ಸಭಾಸ್ಥಳದಿ ದಾಸ ಪ್ರಾಣರಾಯನ ನಿಲಿಸಿ ದಾಸಜನಕೆ ಮುಕ್ತಿ ಸ್ಥಾನ ಕರಿಗಿರಿ ಎನಿಸಿ ವ್ಯಾಸತೀರ್ಥರಿಂದ ಬಂದ ದಾಸಕೂಟ ನಿಜವೆಂದೆನಿಸಿ ದಾಸಜನರ ಮೆರಸಿ ನೃಹರಿ ದಾಸಕೂಟ ಸಭಾಸ್ಥಾಪಕ 4 ವ್ಯಾಳಶಯನನಾದ ಗೋಪಾಲಕೃಷ್ಣವಿಠ್ಠಲನ್ನ ಲೀಲೆಯಿಂದ ಯನ್ನ ಹೃದಯದಲ್ಲಿ ನಿಲ್ಲಿಸೀ ಕಾಲ ಕಾಲಕ್ಕೆ ಇತ್ತು ಪಾಲಿಸಿದಾ ಪರಮ ಪ್ರಿಯ ಕೃಪಾಳೂ ಗುರುವರಾ 5
--------------
ಅಂಬಾಬಾಯಿ
ಧನ್ಯರಾದರು ಗುರುಗಳನು ಪೂಜಿಸುತ ಇನ್ನಿವರ ಪಾತಕವು ತೊಲಗಿತು ಜಗದಿ ಪ. ತಂದೆ ಮುದ್ದುಮೋಹನದಾಸ ರಾಯರನು ಚಂದದಿಂ ಸತಿಸಹಿತ ಕರೆತಂದು ಮನೆಗೆ ಮಂದರೋದ್ಧರನ ಪದಸೇವೆ ಇದು ಎಂದರಿತು ಮಂದಹಾಸದಲಿ ನಸುನಗುತ ಸದ್ಭಕ್ತರು 1 ಮಂಗಳೋದಕದಿಂದ ಮಜ್ಜನವಗೈಸುತಲಿ ಅಂಗಗಳನೊರೆಸುತಲಿ ನಾಮಗಳನ್ಹಚ್ಚಿ ರಂಗನಾಥನಿಗರ್ಪಿಸುತ ಪುಷ್ಪಹಾರವನ್ಹಾಕಿ ಶೃಂಗಾರವನೆಗೈದು ಶ್ರೀ ಗುರುಗಳನ್ನು 2 ಪಚ್ಚೆಕರ್ಪೂರ ಕೇಸರಿಯಿಂದ ಕೂಡಿದ ಅಚ್ಚ ಗಂಧವನ್ಹಚ್ಚಿ ಅಕ್ಷತೆಯನಿಟ್ಟು ಮಚ್ಛರೂಪಿಯ ನೆನೆದು ಪಾದಕಮಲವ ತೊಳೆದು ನಿಚ್ಚಳದ ಭಕ್ತಿಯಲಿ ನಿಜ ಭಕ್ತರೆಲ್ಲ 3 ಸತಿಸಹಿತ ಕುಳ್ಳಿರಿಸಿ ಗುರುಗಳನು ಪೀಠದಲ್ಲಿ ಅತಿಶಯದಿ ಕುಡಿಬಾಳೆ ಎಲೆಗಳನೆ ಹಾಕಿ ಮತಿಯಿಂದ ರಂಗೋಲೆಗಳನ್ಹಾಕಿ ಲವಣ ಸ- ಪರಿಯಂತ ಬಡಿಸುತಲಿ 4 ಅನ್ನಾದಿ ಸಕಲ ಷಡ್ರಸಗಳನೆ ಬಡಿಸುತ್ತ ಘನ್ನ ಮಹಿಮರಿಗೆ ಭಕ್ಷಾದಿಗಳ ಬಡಿಸಿ ಸನ್ನುತಿಸುತಲಿ ತೀರ್ಥ ಆಪೋಷನವನ್ಹಾಕಿ ಪನ್ನಗಶಯನನಿಗೆ ಅರ್ಪಿಸುತ ಮುದದಿ 5 ಘೃತಶರ್ಕರಾದಿಗಳನಡಿಗಡಿಗೆ ಬಡಿಸುತಲಿ ನುತಿಸಿ ಗಾನಗಳಿಂದ ಗುರುಮಹಿಮೆಯ ದಧಿ ಕ್ಷೀರದನ್ನಗಳನುಣಿಸುತಲಿ ಘೃತ ಕ್ಷೀರದಿಂದ ಕೈ ತೊಳೆದು ಸಂಭ್ರಮದಿ 6 ಯಾಲಕ್ಕಿ ಕರ್ಪೂರ ಮಿಳಿತ ವೀಳೆಯವನಿತ್ತು ವೇಳೆವೇಳೆಗೆ ತಪ್ಪು ಕ್ಷಮೆಯ ಬೇಡುತಲಿ ವ್ಯಾಳಶಯನಗರ್ಪಿಸುತ ಉಡಿಗೆ ತೊಡಿಗೆಗಳನಿತ್ತು ಮಾಲೆಹಾಕುತ ಆರತಿಯನೆತ್ತಿ ಮುದದಿ 7 ಹರಿಪ್ರೀತನಾಗುವನು ಗುರು ಹೃದಯದಲಿ ನಿಂತು ಕರ್ಮ ತೊಡಕುಗಳು ಸರಸಿಜಾಕ್ಷನು ತಾನು ಹರುಷಪಡುವನು ದಯದಿ ಕರಕರೆಯ ಸಂಸಾರ ಕಡಿದು ಗತಿ ಈವ 8 ಗುರುದ್ವಾರ ಒಲಿಯುವನು ಹರಿಯು ಮೋಕ್ಷಾರ್ಥಿಗಳ ಅರಘಳಿಗೆಯಗಲದಲೆ ಕಾಯುವನು ಸತತ ಗುರು ಅಂತರ್ಯಾಮಿ ಶ್ರೀ ಗೋಪಾಲಕೃಷ್ಣವಿಠ್ಠಲ ತ್ವರಿತದಿಂ ಹೃದಯದಲಿ ತೋರ್ವನು ತನ್ನ9
--------------
ಅಂಬಾಬಾಯಿ
ಧನ್ವಂತ್ರಿ ನಿನ್ನ ಸ್ಮರಿಸಿ ಧನ್ಯರಾಗಿಹರ ಪಾದ ಧ್ಯಾನದೊಳಿರೆಸೆನ್ನ ಧನ್ಯನೆಂದೆನಿಸೊ ಪ ನಿನ್ನ ದಾಸರ ಕೀರ್ತಿ ನಿನ್ನ ದಾಸರ ವಾರ್ತೆ ನಿನ್ನ ನಾಮಾಮೃತವು ಎನ್ನ ಕಿವಿ ತುಂಬಿರಲಿ ಅ.ಪ ನಿನ್ನ ಪಾದದ ಸ್ಮರಣೆಯನ್ನು ಮಾಳ್ಪರ ಸಂಗ ಇನ್ನು ಪಾಲಿಸು ದೇವನೆ ಘನ್ನ ಮಹಿಮನೆ ಪರಮ ಪುಣ್ಯಶೀಲರ ಸೇವೆ ಇನ್ನು ಕರುಣಿಸೊ ಕೇಶವಾ ಸನ್ನುತಾಂಗನೆ ಭವಭಯವನ್ನು ಬಿಡಿಸೆಂದು ನಾ ನಿನ್ನ ಮೊರೆಯಿಡುವೆ ಹರಿಯೇ ಚನ್ನ ಶ್ರೀಗೋಪಾಲ ಗೋವಿಂದ ಕೇಶವ ನಿನ್ನ ನಾಮನಿರಂತರವು ಪಾ- ವನ್ನ ಮಾಡಲಿ ಎನ್ನ ಜಿಹ್ವೆಯಾ 1 ಆದರದಿ ನಿನ್ನ ಸ್ಮರಿಪ ಸಾಧುಜನರ ಸಂಗ ಭೇದವಿಲ್ಲದೆ ಕರುಣಿಸೊ ಆದಿ ಮೂರುತಿ ನಿನ್ನ ಆದರದಿ ಸ್ಮರಿಪ ಪರ- ಮಾದರವ ನಿತ್ತು ಸಲಹೊ ಮೋದ ಪಡುವ ಭಾಗ್ಯ ಮಾಧವನೆ ದಯಪಾಲಿಸೋ ಮಾಧವ ಜನಾರ್ದನ ಕ್ರೋಧಿ ಸಂವತ್ಸರವು ಭಕುತರ ಕ್ರೋಧಗಳ ಕಳೆಯುತ್ತ ಸಲಹಲಿ2 ಶರಣೆಂದು ಬೇಡುವೆ ಪರಿಪರಿ ಅಘಗಳ ಪರಿಹರಿಸೆಂದು ನಾ ಸ್ಮರಿಸಿಬೇಡುವೆನು ಸರಸಿ ಜೋದ್ಭವÀಪಿತನೆ ಸರಸಿಜಾಕ್ಷಿಯ ಕೂಡಿ ಹರುಷದಿ ನೆಲಸೆನ್ನ ಹೃದಯದಲಿ ದೇವ ಸರಸಿಜನೇತ್ರನೆ ಬಿಡದೆ ನಿನ್ನನು ಸ್ಮರಿಪ ಕಡುಭಾಗವತರ ಸಂಗವನೆ ನೀಡೈ ಮೃಡನ ಸಖನೆ ನಿನ್ನಂಘ್ರಿ ಸ್ಮರಿಸುವ ಭಾಗ್ಯ ತಡೆಯದಲೆ ಪಾಲಿಸುತ ಪೊರೆ ಶ್ರೀ ಕಮಲನಾಭ ವಿಠ್ಠಲನೆ ದಯದಲಿ 3
--------------
ನಿಡಗುರುಕಿ ಜೀವೂಬಾಯಿ
ಧರಣಿಪತಿ ನಿನ್ನಯ ಕರುಣವೆಂಬುದೆ ಸಾಕು ಪ ಉರಗಾದ್ರಿನಿಲಯ ವಾಸಾ ಧರೆ ನರಾಧಮರೆನ್ನ ಪರಿಪರಿ ಪೀಡಿಸಿ ಜರಿದುಗೈವರು ಪರಿಹಾಸ ಅ.ಪ. ಮಾನವನು ಬಿಡದೆ ಕಾಯ್ದ ಕಂದು ಗೊರಳನ ಬೆನ್ನಟ್ಟಿಬರೆ ರಕ್ಕಸನು ಪೆಣ್ಣಾಗಿಯವನುರುಹಿದಿ ನರನನುಡಿ ನಿಜಮಾಡಿದಿ ಗೀತವಾದಿ ಕೃಷ್ಣ 1 ಭರದಿಯವನುದ್ಧರಿಸಿದೀ ಪಾಂಡವರಿಗೊಲಿದು ಪೊಂದಿ ನಿಜ ಬೆರಳಿನಲ್ಲಿ ಗೋವರ್ಧನವ ಪಿಡಿದೆತ್ತಿ ಗೋವಿಂಡು ಸಂತೈಸಿದಿ ಕರುಣ ಶರಧೀ ಕೃಷ್ಣಾ2 ಉಣಿಸಿ ದೇಹವ ಬೆಳೆಸಿದೆ ಸುರಿದು ಆಯುಷ್ಯ ಗಳಿಸಿದೆ ವಿಷಯದಲ್ಯಭಿಮಾನ ತಾಳಿ ಮೆರೆದೆ ಕಲಿಯ ಬಾಧೆ ಕೃಷ್ಣಾ 3
--------------
ನರಸಿಂಹವಿಠಲರು
ಧರಣೀ ರಮಣಾ ರಾಮ | ದುರಿತಹರಣ ನಾಮ ಪ ಸುರನಾಯಕವೈರಿ ಭೀಮಾ | ಸರಸೀರುಹನಯನ ರಾಮಾ ಅ.ಪ ಶರಣಜನ ಸಂಸೇವಿತ ಭಾವಿತ 1 ರಕ್ಷ ನಿತ್ಯಪೂರ್ಣಕಟಾಕ್ಷ 2 ರಥಾಂಗ ಮಾಂಗಿರೀಶ ದೇವೋತ್ತುಂಗ3
--------------
ಅಸೂರಿ ರಾಮಸ್ವಾಮಿಅಯ್ಯಂಗಾರ್