ಒಟ್ಟು 7932 ಕಡೆಗಳಲ್ಲಿ , 127 ದಾಸರು , 4530 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಕೊರವಂಜಿ ಪದ ಬಾರೆ ಸತ್ಯಭಾಮೆ ತೋರೆ ನಿಮ್ಮ ಸುಹಸ್ತದ ಠೇವೆ ಧ್ರುವ ಸರ್ಕನೆ ಬಾರವ್ವಾ ಅರಿಕ್ಯುಳ್ಳ ಗರತಿ ಕರವ ಕೊರವತಿ ತಾರ್ಕಣ್ಯ ಬರುತಾದ ಪರಮ ಸುವಾರ್ತಿ ತರ್ಕರಹಿತ ವಸ್ತು ಕರಕೊ ಸುಮೂರ್ತಿ 1 ಓಯವ್ವ ಅವ್ವ ಬಾರೆ ನಮ್ಮವ್ವ ದೈವುಳ್ಳ ಗರತಿ ನೀನವ್ವ ದೈವ ಬರುದೆ ನಿನ್ನೊಳಗವ್ವ ಕೈದೋರೆ ಕೈದೋರೆ ಕೈದೋರೆ ನಿಮ್ಮ 2 ಕೈದೋರೆ ಕೈದೋರೆ ಕೈದೋರೆ ನಿಮ್ಮ ಕೈಯ ಲಕ್ಷಣ ನೋಡಿ ಹೇಳುವೆನಮ್ಮ ಅಯ್ಯ ಬರುತಾನೆ ಆಶೇಲಿ ನಿಮ್ಮ ಕೈಗೊಟ್ಟು ಕೇಳೆ ನಿಜ ಗುಹ್ಯವರ್ಮ 3 ಸುಳ್ಳು ಮಾತನಾಡಿ ಒಡಲ ಹೊರಳವಲ್ಲ ಬಲ್ಲಷ್ಟು ಬೊಗಳುವೆ ವಿಷಯ ದಾಸ್ಯವಳಲ್ಲ ಉಳ್ಳಷ್ಟು ಹೇಳುವೆ ಕೇಳೆ ಶಿವ ಸೊಲ್ಲ ಹೇಳುವ ಮಾತಿದು ಘನ ಗುರು ತಾ ಬಲ್ಲ 4 ಕೊರವಂಜಿ ಮಾತಿದು ಕಿವಿಗೊಟ್ಟು ಕೇಳಮ್ಮ ಬರುತಾನ ಉದರಲಿ ಹುಟ್ಟಿ ಸಗುಣ ನಿಮ್ಮ ತಾರಿಸುವ ಸ್ವಾಮಿ ಪತಿತ ಪಾವನ ನಿಮ್ಮ ಹರಷದೋರುವ ನಿತ್ಯಾನಂದೋ ಬ್ರಹ್ಮ 5 ಎಂದ ಮಾತನೆ ಕೇಳಿ ಬಂದಳು ಭಾವೆಮ್ಮ ಚೆಂದ ಉಳ್ಳ ಸುರಸ ವಾಕ್ಯ ಕೇಳಿದಳೊಮ್ಮೆ ಬಂದು ಹರುಷದಿ ಪೂರ್ಣ ಸಂದಿಸಿಟ್ಟಳು ಪ್ರೇಮ ಒಂದೆ ನಿಜಸುಮಾತ್ಹೇಳ್ಯೆಂದಳು ನೇಮ 6 ಎಲ್ಲಿಂದ ಬಂದೆವ್ವ ಸೊಲ್ಲ ಬೀರುತ ಶಿವ ಬಲ್ಲ ಮಹಿಮಳೆಂದು ನಾನರಿಯೆನವ್ವ ಇಲ್ಲೆವೆ ಕಂಡೆ ನಾ ಸೊಲ್ಲಿನ ಮಹಿಮರು ಎಲ್ಲ ನೆಲೆನಿಭೇಳೌವ್ವ 7 ಸರಿಯ ಬಂದರ ನಿನ್ನ ಮರಿಯೆನವ್ವ ಎಂದು ಖರೆ ಉಳ್ಳ ಮಾತನೆ ಹೇಳೆ ನಿಜ ಒಂದು ಹಿರಿಯರಗೀ ಮಾತು ಸರಿಯ ಬಾವ್ಹಾಂಗಿಂದು ಬೀರವ್ವ ನಿಜಸಾರವಿಂದು 8 ಲಕ್ಷ ಎಂಬತ್ತುನಾಲ್ಕು ಗ್ರಾಮವ ನೋಡಿ ಲಕ್ಷಿಸುತ ಬಂದ ಲಕ್ಷಣ ನಿಜಗೂಡಿ ಲಕ್ಷುಮಿ ಕರದೋರುತದ ನಿಮ್ಮೊಳೊಡಮೂಡಿ ಅಕ್ಷಯಾನಂದ ಬರುತಾನೆ ಇದರಿಡಿ 9 ಕರ ಕೊಟ್ಟಳು ಸುಶೀಲೆ ವರ ಕೃಪೆಯಲಿ ಕೊರವಂಜಿ ಮಾತಲಿ ಅರಿತಳು ತಾ ತನ್ನಲಿ ಪರಮಾನಂದ ಲೀಲೆ ಬೆರದಳು ಕೇಳಿ 10 ನುಡಿಯುವ್ವ ಸಲಲಿತವಾದ ನಿಜವಾಕ್ಯ ಬಡುವಂತೆ ಹರುಷವು ನೋಡಿ ತ್ರಯಲೋಕ್ಯ ಬಡಸವ್ವ ನನಗಿಂದು ಇದೆ ನಿಜ ಮುಖ್ಯ ಕುಡಲಿಕ್ಕೆ ನಿನಗಿದು ಶಕ್ಯ 11 ಮನದಂತೆಯಾದರ ನೆನದೇನವ್ವ ನಿಮ್ಮ ಅನುಕೂಲಾಗುವ ಪುಣ್ಯ ಪೂರ್ವಾರ್ಜಿತ ನಮ್ಮ ಸಾನುಕೂಲಾಗುವಂತೆ ಬೇಡಿಕೊಳ್ಳಮ್ಮ ನೆನಿ ಎಕನಾತಿ ಎಲ್ಲಮ್ಮ 12 ಒಡಮೂಡಿ ಬಂದರ ಉಡಿಯ ತುಂಬೇನವ್ವ ಜಡಿತಾಭರಣದುಡಿಗಟ್ಟೆ ನಿನಗವ್ವ ಹಿಡಿಯದೆ ಅನುಮಾನ ನುಡಿ ನಿಜ ಸಾರವ್ವ ಕುಡಲಿಕ್ಕೆ ನಿಧಾನದವ್ವ 13 ಕೈಯ ಲಕ್ಷಣದಲಿ ಶ್ರೇಯ ತೋರುತಲ್ಯದ ದಯ ಉಳ್ಳ ಮಹಿಮದ ಸೋಹ್ಯ ಬೀರುತಲ್ಯದ ಭಯವಿಲ್ಲದ ಭಾಗ್ಯ ಅಚಲ ತಾನಾಗ್ಯದ ಜಯಜಯಕಾರ ಭಾಸುತದ 14 ಪುಣ್ಯ ಪ್ರಭೆಯ ಚೆನ್ನಾಗಿ ಭಾಸುತಲ್ಯದೆ ಕಣ್ಣಿಗೆ ಸುಚಿನ್ಹ ಹೊಳವುತದೆ ಚಿನ್ನುಮಯದ ಸುಪುತ್ಥಳಿ ಬರುತದೆ ಬಣ್ಣ ಬಣ್ಣದ ಸುಖ ಬೀರುತದೆ 15 ಅಂಗದೊಳಗ ನಿಮ್ಮ ರಂಗ ಬರುತಾನಮ್ಮ ಕಂಗಳಿಗಿದರಿಡುತದೆ ಹರುಷವು ನಿಮ್ಮ ಭವ ಬಂಧದ ದುಷ್ಕರ್ಮ ಮಂಗಳಕರಾನಂದೊ ಬ್ರಹ್ಮ 16 ನಿನ್ನ ಭಾಗ್ಯಕ ಸರಿ ಇಲ್ಲೆ ಸಂಜೀವನಿ ಚೆನ್ನಾಗಿ ಕೇಳೆ ನೀ ಭಾವೆಗುಣಮಣಿ ಧನ್ಯವಾಯಿತು ನಿನ್ನಂದೆವೆ ಯತಿಮುನಿ ನಿನ್ನೊಳಗುಂಟು ದೇವಶಿಖಾಮಣಿ 17 ಭಾವೆ ನಿನ್ನಿಂದ ಪಾವನ್ನವಾಯಿತು ಜಗ ದೇವಾಧಿದೇವ ಮೂಡುವ ನಿನ್ನೊಳಗೀಗ ಕಾವಕರುಣ ಪ್ರತ್ಯಕ್ಷವಾಗುವ ಯೋಗ ಸುವಿದ್ಯ ಭಾಸುವ ದಿವ್ಯಭೋಗ 18 ಉಂಡ ಊಟ ಕಂಡ ಕನಸು ಪಿಂಡಲಕ್ಷಣ್ಹೇಳುವೆ ಮಂಡಲೊಳಗ ಮಂಡಿಸಿಹ್ಯ ಮಹಿಮೆ ನೀನಗ್ಹೇಳುವೆ ಹಿಂಡದೈವದೊಡಿಯ ನಿನ್ನೊಡಲೊಳಗ ತಾಳುವೆ ಪಂಡಿತರಿಗೆ ಪ್ರಿಯವಾದಾಗ್ಯ ಖಂಡನೀನೆ ಬಾಳುವೆ 19 ನೀನೆ ಜಗಕ ತಾರಿಸುವ ದೈವದೋರಿಕುಡುವೆ ನೀನೆ ಭಕ್ತಜನರ ಜನ್ಮಸಾರ್ಥಕವು ಮಾಡುವೆ ಜ್ಞಾನಗಮ್ಯವಾದ ವಸ್ತುಹಿಡದು ನೀನೆ ಕುಡುವೆ ನಿತ್ಯ ಆಡುವೆ 20 ಅಮ್ಮ ನಿಮ್ಮೊಳು ಘಮ್ಮನ್ಹೊಳುವ ತಮ್ಮ ಬರುತಾನ ಸುಮ್ಮಾನಿಹ್ಹಾ ಸಮೀಪಲೆ ಧಿಮ್ಮ ಹಿಡಿದ ಹಮ್ಮಿನೊಳು ಘುಮ್ಮವಾದರು ಬ್ರಹ್ಮಾದಿಗಳೆ ನಮ್ಮ ನಿಮ್ಮದೆಂಬು ಭ್ರಮೆ ಸುಮ್ಮನ್ಯಾಕಿದೊ ಅಮ್ಮಕೇಳೆ 21 ಬಯಕಿ ಲಕ್ಷಣ ನಿನ್ನ ಹೇಳ್ಹೆನವ್ವಾ ತಾಯಿ ಮಾಯಿಕ ಗುಣ ಸುಟ್ಟು ತಿಂದೇನೆಂಬುದು ಬಾಯಿ ಕೈಕಚ್ಚಿಲೆ ಶುದ್ದಿಲ್ಲಾದವರ ತಾಳದು ಸೋವಿ ಐರಾವತ ಬರುತಾನ ನಿನ್ನೊಳು ಪನ್ನಂಗಶಾಯಿ 22 ಬಾಹ್ಯನಿಷ್ಟರ ಕಂಡು ಬದಿಗೆ ಬರಗುಡಿ ನೀನು ಅಹಂಭಾವಕ ಹೇಸಿ ವಾಕರಿಸುವೆ ನೀನು ಗುಹ್ಯ ಹೇಳುವೆ ನಾನು ಸಾಹ್ಯ ಮಾಡುವ ಶ್ರೀಗುರು ತಾನು 23 ಕಾಮಕ್ರೋಧ ಕರದು ತಿಂದೇನೆಂಬುದು ಬಯಕಿ ನೇಮದಿಂದಲಿ ಮದ ಮತ್ಸರನೆ ನೂಕಿ ಪ್ರೇಮವಿಲ್ಲದವರ ಎಂದಿಗಾದರ ಸೋಕಿ ವರ್ಮಿಕರಿಗೆ ನೀ ಕೈಯಗುಡುವಾಕಿ 24 ಆಸಿ ಎಂಬುದು ಅಟ್ಟುಅರದೇನೆಂಬುದು ಬ್ಯಾಗ ಹುಸಿನುಡಿವೆಂಬದು ಹುರವಾದೀಗ ಹಸನಾದ ಬಯಕೀದು ಋಷಿ ಮುನಿಗಳ ಯೋಗ ಲೇಸು ಲೇಸು ನಿನ್ನ ಅಂತರಂಗ 25 ಧನ್ಯವಾದ ರಾಜಯೋಗವ ಬಯಸುದು ಉನ್ಮನವಾಗಿ ಊರ್ಜಿತವಾದೇನೆಂಬುದು ಸ್ವಾನುಭವದ ಸುಖ ಸೂರ್ಯಾಡೇನೆಂಬುದು ಭಿನ್ನ ಭೇದಕ ಕಣ್ಣ ತ್ಯರಿಯದಿದು 26 ವಾಸುದೇವನ ಭಕ್ತಿ ಆಶ್ರೈಸೇನೆಂಬುದು ಶ್ವಾಸೋಚ್ಛ್ವಾಸಕ ಒಮ್ಮೆ ಬಯಸುವುದು ವಿಷಯ ಪ್ರಪಂಚಕ ಹೇಸಿ ತಾ ಜರೆವುದು ಕುಸುಮನಾಭನ ಸೇವೆ ಇಚ್ಛಿಸುವದು 27 ಒಮ್ಮೆ ಸರಸ್ವತಿ ಕೂಡ ಸರಸಾಡೇನೆಂಬುದು ಒಮ್ಮೆ ಲಕ್ಷುಮಿ ಕೂಡ ಲೋಲಾಡೇನೆಂಬುದು ಒಮ್ಮೆ ಪಾರ್ವತಿ ಕೂಡ ಪವಡೀಸೆನೆಂಬುದು ಒಮ್ಮೆ ಏನುನೊಲ್ಲ್ಯೆನೆಂಬುದು 28 ಹೇಳೇನೆಂದರೆ ನಿನ್ನ ಬಯಕಿಯ ಉಲ್ಹಾಸ ತಿಳಿಯದಿನ್ನೊಬ್ಬರಿಗ ಗರ್ಭದ ಸುವಾಸ ಉಲವುತದೆ ನಿನ್ನೊಳು ಸುಪ್ರಕಾಶ ಥಳಥಳಗುಡುತಿಹ್ಯ ಬಾಲವೇಷ 29 ಧನ್ಯ ಧನ್ಯ ನಿನ್ನ ಗರ್ಭಹೊಳುವ ಹೊಂಬಣ್ಣವು ಒಡಲು ನಿನ್ನ ಪುಣ್ಯ ಪಾವನ್ನವು ಧನ್ಯ ಧನ್ಯ ನಿನ್ನ ದರುಷಣದ ಜೀವನವು ಧನ್ಯ ಧನ್ಯ ನಿನ್ನ ಕಂಡ ಜನರ ಜೀವಪ್ರಾಣವು 30 ಭಾವೆ ನಿನ್ನಿಂದ ಖ್ಯಾತಿಪಡೆದ ಪ್ರಹ್ಲಾದನು ದೇವ ದೇವ ಬಂದು ಸ್ತಂಭದೊಳು ಮೂಡಿದನು ಆವಾವ ಠಾವಿನೊಳು ಬಂದು ರಕ್ಷಿಸಿದನು ಜೀವ ಜೀವ ತಾನೆ ಅಗಿ ಪ್ರಾಣನುಳಹಿದನು 31 ನಿನ್ನ ಬಲಗೊಂಡು ದ್ರೌಪದಿಯ ಖ್ಯಾತಿಪಡೆದಳು ಪುಣ್ಯ ಉಳ್ಳ ಮಹಿಮನಂಘ್ರಿ ಕಣ್ಣಾರ ಕಂಡಳು ಚೆನ್ನಾಗಿ ಬಂದು ಸ್ವಾಮಿ ಲಜ್ಜೆಗಾಯ್ದು ಸಭೆಯೊಳು ಬಣ್ಣ ಬಣ್ಣ ವಸ್ತ್ರ ಪೂರಿಸಿದಾನೇಕಗಳು 32 ಸ್ತುತಿಯು ಮಾಡಲು ನಿನ್ನ ಯತಿಮುನಿಗಳವಲ್ಲ ಗತಿಯ ಪಡೆದರು ಸಕಲ ಮುನಿಜನರೆಲ್ಲ ಅತಿ ಹರುಷವು ಕೂಡಿದರು ಜಗದೊಳಗ್ಯಲ್ಲ ಹಿತದೋರುತಿದೆ ವಸ್ತು ಮಯವೆಲ್ಲ 33 ಹೊಳೆವ ಸುಳಿವ ಚೆಲುವ ನಿನ್ನೊಳಗ ನಲುವನೆ ಕಳವಿಲೊಯಿದ ವೇದನುಳುಹಿದವನು ಬೆಳೆವನೆ ಭಾರ ತಾಳಿದವನು ಉಲುವನೆ ನೆಲವ ಗೆದ್ದ ಬಲಿಯು ನಿನ್ನೊಳಗೆ ಒಲುವನೆ 34 ಸೀಳಿ ದೈತ್ಯನ ಕೊಂದ ಶೂರ ಘಮಗುಡತಾನೆ ಅಳದು ಭೂಮಿಯ ಕೊಂಡು ಬೆಳದವ ಬರುತಾನೆ ತಿಳಿದು ಪಿತರ ಸೂಡುಕೊಂಡವ ಬರುತಾನೆ ಬಲುಪರಾಕ್ರಮದವ ತೋಳುತಾನೆ 35 ತಾಂ ಸಂಚರಿಸ್ಹ್ಯಾನ ನಿನ್ನೊಳಗ ಮೂಡಿ ಬರುತಾನೆ ಬ್ಯಾಗೆ ನಗುತ ಬರುತಾನೆ ಈಗ ಕೈಯಗೊಟ್ಟು ಬರುತಾನೆ ನಿನಗೆ 36 ಸಾಧೀಸಿ ಕೇಳೆ ಕಿವಿಗೊಟ್ಟು ಒದುಗುವ ತಾಂ ಇದರಿಟ್ಟು ಉದಿಯವಾಗುವ ದಯವಿಟ್ಟು ಸದ್ಬಕ್ತರಿಗೆ ಕೈಯಗೊಟ್ಟು 37 ಹುಟ್ಟುವ ಶಿಶುವಿನ ಘಟಣಿಯ ಬಹಳ ಗುಟ್ಟೊಡಿಯಲು ತಾಂ ಮುಟ್ಟನು ತಾಳ ಕಟ್ಟುವ ದೈತ್ಯರ ದಿಟ್ಟ ಮಾ ಸಾಳ ದೃಷ್ಟಿಸಿ ನೋಡುವ ನಿಷ್ಠರ ಮೇಳ 38 ಶಿಶುವಿನ ಲಕ್ಷಣ ಬಲು ಅಗಾಧ ಪರಿ ಮಾಟವು ಋಷಿಗಳ ಬೋಧ ಹಸು ನೀರಡಿಸರವುದು ಶ್ರೀಪಾದ ಬಸುರಿನ ಬಯಕಿದು ಬಲುಸುಸ್ವಾದ 39 ಘಮಗುಡುತದೆ ಅನಾಹತದ ಧ್ವನಿಯು ಕ್ರಮ ತಿಳಿವದು ಸುಯೋಗದ ಮನಿಯು ಧಿಮಿಗುಡುತದ ಆನಂದದ ಖಣಿಯು ಭ್ರಮ ಬಿಡಿಸುವ ಘನ ಚಿಂತಾಮಣಿಯು 40 ಹುಟ್ಟಿ ಬರುತಾನಿವ ಶಿಷ್ಟರ ಮನಿಲಿವ ದುಷ್ಟ ಮರ್ದನ ದೇವ ನಿಷ್ಠರಿಗೆ ಕಾವ ಎಷ್ಟೆಂದ್ಹೇಳಲವ್ವ ಸೃಷ್ಟಿಗಧಿಕನಿವ ಮುಟ್ಟಿ ಮುದ್ರಿಸುವ ದಿಟ್ಟೆದೆ ಕೂಸವ್ವ 41 ವರ್ಣಿಸಲಾಗದು ಶಿಶುವಿನ ವಿವರಣ ದಣಿಯಿತು ಕೊಂಡಾಡಿ ವೇದಸುಪುರಾಣ ಖೂನ ತಿಳಿಯದು ತಾನು ಶಾಸ್ತ್ರಕ ಸಂಪೂರ್ಣ ದ್ಯಾನ ಮೋನಕ ದೂರಗಮ್ಯ ಸ್ಥಾನ 42 ಗುಟ್ಟು ತಿಳಿಯದ ವಸ್ತು ಹುಟ್ಟಿಬಾಹುದು ಕೇಳಿ ಉಂಟಾಗುವದು ನಿನ್ನೊಳು ನೆನದಾಗಳೆ ಘಟ್ಯಾಗಿ ಅನುಭವಿಸುತ ನೀನೆ ಬಾಳೆ ದೃಷ್ಟಿಯೊಳೀಗುಟ್ಟು ಆರೀಗ್ಹೇಳೆ 43 ಬಸುರು ಬಯಕೆಂಬುದು ಹೆಸರಿಸಲಳವಲ್ಲ ಹಸನಾಗಿ ಅನುಭವಿಸುವ ಪುರುಷನೆ ಬಲ್ಲ ವಾಸುದೇವನ ಕಾಣದಿಹ್ಯದೆ ಕಣ್ಣಲ್ಲ ಆಸಿ ಅಳಿದವರೆ ತಾಂ ತಿಳಿದರೆಲ್ಲ 44 ಹುಟ್ಟುವ ಲಕ್ಷಣ ಕೇಳೆ ನೀ ಕಿವಿಗೊಟ್ಟು ಮುಟ್ಟಿ ಮುದ್ರಿಸಿಹ್ಯ ಗುರು ಕಟಾಕ್ಷವ ಕೊಟ್ಟು ಇಟ್ಟುಕೊ ಈ ಮಾತು ಆರಿಗ್ಹೇಳೆ ಬಿಟ್ಟು ಗಂಟು ಕಟ್ಟಿದ ಮಾತು ಹೇಳೆಬಿಟ್ಟು 45 ಆಲಕ್ಷವೆಂಬ ಸುನಕ್ಷತ್ರದಲಿ ಪುಟ್ಟಿ ಸುಲಕ್ಷಣದಲಿ ಬರುತಾನೆ ಜಗಜಟ್ಟಿ ನೆಲಯುಗೊಂಡಾಡಿಸಿ ಮನಮುಟ್ಟಿ 46 ಜನ್ಮನಾಮೆಂಬುದು ಕೂಸಿನ ನಿರ್ಗುಣ ಸಮಸ್ತರಿಗೆ ನಡವ ನಾಮವೆ ಸಗುಣ ಬ್ರಹ್ಮಾನಂದದಿ ಲೋಲ್ಯಾಡುವ ಪರಿಪೂರ್ಣ ಕಮಲನಯನ ಸ್ವಾಮಿ ರಮಾರಮಣ 47 ಕೂಸು ಎಂದರ ತಾನು ಕೂಸು ಎನಲಾಗದು ವಾಸವಾಗ್ಯಾಡುದು ವಿಶ್ವಲಿದು ಹೆಸರನೇಕಪರಿಯಲಿ ಕರಿಸಿಕೊಂಡು ಲೇಸು ಲೇಸಾಗಿ ತಾ ಆಡುವುದು 48 ಹಿಂದ ಅಡಿದ ಆಟ ಮಂದದೆ ಆಡುದು ಎಂದಿಗ್ಯದರ ಗುಟ್ಟು ತಿಳಿಯಗುಡುದು ಒಂದಿಸಿದವರ ತನ್ನೊಳು ಕೂಡಿಕೊಂಬುದು ಒಂದೆ ವಸ್ತುವಾಗಿ ತೋರುವುದು 49 ಹೇಳುವೆ ಕೇಳೆ ಶಿಶುವಿನ ಆಟ ತಿಳಿಯಲು ಜಗದೊಳು ಬಲು ಅವ್ಹಾಟ ನೆಲಿ ತಿಳಿದವರಿಗೆ ತೋರುದದು ನೀಟ ನಲಿನಲಿದಾಡುವ ಸಲಲಿತದಾಟ 50 ಒಮ್ಮೆ ನೀರನೆ ಚಲಿಪಿಲಿ ಮಾಡುವ ಒಮ್ಮೆ ಬಾಗಿ ಜಗನೆಗುವ ಒಮ್ಮೆ ಹಲ್ಲಿಲೆ ಬೇರನೆ ಅಗಳುವ ಒಮ್ಮೆ ಬರುತಲಿ ಗುರುಗುಡುವ 51 ಒಮ್ಮೆ ಬಲು ಗಿಡ್ಡಾಗಿ ತೋರುವ ಒಮ್ಮೆ ಪರಾಕ್ರಮ ಹಿಡುವ ಒಮ್ಮೆ ವನದೊಳಗಾಡುತ ಹೋಗುವ ಒಮ್ಮೆ ಕಡವ ಬೆಣ್ಣೆಯ ಮೆಲುವ 52 ಒಮ್ಮೆ ಬತ್ತಲೆ ತ್ರಿಪುರದಲಿ ಸುಳಿವ ಒಮ್ಮೆ ಏರುವ ತಾ ಹಯವ ಒಮ್ಮೊಮ್ಮಾಗುವ ತಾನೆವೆ ಸಗುಣವ ಒಮ್ಮೊಮ್ಮಾಗುವ ನಿರ್ಗುಣವ 53
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಕೊಳಲಕೃಷ್ಣ ಬಂದು ನಿಲ್ಲೊ ಹೃದಯ ಕಮಲದಿ ನಳಿನನಾಭ ನಿನ್ನ ದಿವ್ಯ ಚಲುವ ರೂಪದಿ ಪ. ಶಿರದಿ ಮಕುಟ ಫಣೆಯ ತಿಲುಕ ಒಲಿವ ಮುಂಗುರುಳು ನಾಸಿಕ ಗಲ್ಲ ಹೊಳೆಯುತ 1 ಕರ್ಣದಲಿ ಕುಂಡಲಗಳು ಸ್ವರ್ಣ ಕಂಠವು ನಿನ್ನ ದಂತ ಹೊಳೆಯುತಿರಲು ಚನ್ನ ಶ್ರೀಹರಿಯೆ 2 ಅಧರ ಉರದಿ ಲಕ್ಷಿಯು ನಳಿತೋಳಿನಲಿ ಶಂಖ ಚಕ್ರ ವೇಣು ಪಿಡಿದಿಹ 3 ಕಮಲ ಮಾಲೆ ಮೇಲೆ ತುಳಸಿಯು ಮಾರಜನಕ ಹೊಳೆವೊ ಜರಿಯ ಪೀತ ವಸನವು 4 ರಕ್ತವರ್ಣ ವಸನ ಉಟ್ಟು ಕಟ್ಟಿ ಕಿರುಗೆಜ್ಜೆ ಮುಕ್ತರೊಡೆಯ ಮುಕ್ತಿಕೊಡುವ ಪಾದಕಮಲವು 5 ಕ್ಲೇಶ ಕಳೆಯುತ ದಾಸ ಜನರ ಕಾಯ್ವ ಕೃಷ್ಣ ಘಾಸಿಗೊಳಿಸದೆ 6 ಗುರುಗಳಲ್ಲಿ ನಿಂತು ಎನ್ನ ಹರುಷಪಡಿಸೊ ನೀ ಪರಮಪುರುಷ ನರಹರಿಯೆ ದುರಿತದೂರನೆ 7 ನೀರೊಳಾಡಿ ಭಾರಪೊತ್ತು ಕೋರೆ ತೋರಿದೆ ಘೋರರೂಪಿ ಬ್ರಹ್ಮಚಾರಿ ಕ್ಷತ್ರಿಯಾರಿ ನೀ 8 ಶ್ರೀ ಹರಿ ರಾಮ ಕೃಷ್ಣ ಬೌದ್ಧ ಕಲ್ಕಿಯೆ ಗೋಪಾಲಕೃಷ್ಣವಿಠ್ಠಲ ರೂಪ ತೋರೊ ನೀ 9
--------------
ಅಂಬಾಬಾಯಿ
ಕೊಳಲನೂದಿದ ಕೃಷ್ಣ ನಳಿನನಾಭಾಎಳೆಯ ಗೋಗಳ ಕೂಡ ನಲಿದಾಡುವಾ ಪ ಹಿಂಡು ಗೋಗಳ ಕೂಡೆಕಂಡಕಂಡವರನ್ನು ಕರೆಯುತಲಿಗುಂಡು ಗೋಲಿ ಬುಗುರಿ ಚಂಗುಳನೆ ಕಟ್ಟಿಕೊಂಡು ಪೋದರು ತಂಡ ತಂಡವಾಗಿ 1 ತಾಯಿ ಕಟ್ಟಿರುವಂಥಾ ಥೋರ ಬುತ್ತಿಯ ಗಂಟು ತೂಗುತ ಯಮುನೆಯ ತೀರದಲ್ಲಿತಂದ ಉಪ್ಪಿನಕಾಯಿ ತಿಂದ ಎಂಜಲವನ್ನುತೀರಿದವರಿಗೆಲ್ಲ ತಾ ಕೊಡುತಾ ಇಂದಿರೇಶನು 2 ಕೊಟ್ಟ ತಿಂದ ಉಪ್ಪಿನಕಾಯಿಆನಂದ ಬಟ್ಟರು ಗೋಪನಂದನರುಹಿಂದಿಯ ಪುಣ್ಯವು ಬಂದೊದಗಿತುಹರಿ ತಿಂದ ಎಂಜಲನಿತ್ತಾ ನಂದಬಾಲಾ 3
--------------
ಇಂದಿರೇಶರು
ಕೊಳಲನೂದುವ ಚದುರನ್ಯಾರೆ ಪೇಳಮ್ಮಯ್ಯತಳಿರಂದದಿ ತಾ ಪೊಳೆವ ಕರದಿ ಪಿಡಿದು ಪ ನಾದದಿ ತುಂಬಿತು ಗೋವರ್ಧನಗಿರಿಯಾದವಕುಲ ಘನ ಒರೆದಿತು ಖಗಕುಲ ಸಾಧಿಸಿ ನೋಡಲು ಕೃಷ್ಣನ ಈಗಲೆಸಾಧ್ಯವೆ ನೀ ಬೃಂದಾವನದೊಳು1 ಮೇವು ಮರೆತವು ಗೋವುಗಳೆಲ್ಲವುಸಾವಧಾನದಿ ಹರಿದಳು ಯಮುನಾಆವು ಕಾವುತಲಿ ಗೋವಳರೆಲ್ಲರಹಾವ ಭಾವದಲಿ ಬೃಂದಾವನದೊಳು 2 ಕದಂಬ ವನದೊಳು 3
--------------
ವ್ಯಾಸರಾಯರು
ಕೊಳಲನೂದುವ ನಮ್ಮ ಚಲುವ ಕೃಷ್ಣಯ್ಯ ನಳಿನಾಕ್ಷಿಯರ ಮಧ್ಯೆ ಪೊಳೆವ ರಂಗಯ್ಯ ಪ. ಕರದ್ವಯದಲಿ ಶಂಖ ಚಕ್ರಪಿಡಿದಿಹ ಕಿರುನಗೆ ನಗುತ ಸುಲಿಪಲ್ಲಿನ ಚಲುವ ಸ್ವರಗಳ ಪಿಡಿಯುತ ವೇಣು ನುಡಿಸುವ ಸರಸಿಜನಾಭ ಹೃನ್ಮಂದಿರದಿ ಮೆರೆವ 1 ಜಗವ ಮೋಹಿಸುವಂಥ ನಗೆಯ ಮೊಗ ಚೆಲುವ ಹೆಗಲು ಎಡದಲ್ಲಿ ಗಲ್ಲ ತಗುಲಿಸಿ ಇರುವ ಸತಿ ಹೆಗಲಲಿ ಇಡುವ ನಗಧರ ನರ್ತನವಾಡಿ ಮುದವೀವ 2 ಕಾಲಕಡಗ ಗೆಜ್ಜೆ ಪಾಡಗರುಳಿಯು ಮೇಲೆ ಪೀತಾಂಬರ ಜರಿಯ ವೈಭವವು ಸಾಲ ಮುತ್ತಿನಹಾರ ಪದಕದ್ವಜ್ರಗಳು ಓಲಾಡುವ ನೀಲಾಂಬರ ಹೊದ್ದಿಹ ಒಲಪು 3 ಕಂಠ ಕೌಸ್ತುಭಮಣಿ ಅಧರದ ಕೆಂಪು ಕರ್ಣ ಕದಪು ಕನ್ನಡಿಯು ಬಂಟರಾದವರನ್ನು ಪೊರೆಯುವ ದೃಷ್ಟಿ ವೈ - ನಾಸಿಕ ಫಣೆಯ ತಿಲುಕವು 4 ಶ್ರೀಪತಿ ಮುಂಗುರುಳು ಶಿರದಲ್ಲಿ ಮಕುಟ ಪಾಪವ ದಹಿಸುವ ಪಾವನ ವೇಣು ಆಪಾದ ಮೌಳಿಯ ರೂಪದ ಚಲುವ ಗೋಪಾಲಕೃಷ್ಣವಿಠ್ಠಲ ಎನ್ನ ಕಾವ 5
--------------
ಅಂಬಾಬಾಯಿ
ಕೊಳಲನೂದೆಲೋ ಕೃಷ್ಣ ಕೊಳಲನೂದೆಲೊ ಪ ಕೊಳಲನೂದು ಮನದ ದುಗುಡಕಳೆದು ಮತ್ತೆ ಮನಕೆ ಪ್ರಶಾಂತೆತಳೆಯುವಂತೆ ನಿತ್ಯಮಂ_ಜುಳ ಸ್ವರಗಳನ್ನು ತೆಗೆದು ಅ.ಪ. ತುಂಬಿ ನಳಿನಬೆರಳುಗಳು ತೂತು ಮುಚ್ಚಿತೆರೆದು ಸವಿಯ ನಾದದಲ್ಲಿ ನಿಸಾರ ನಿ ದ ಪ ಮ ಪ ನಿ ಎಂದು 1 ಇಲ್ಲಿ ಪೀಠದಿ ಎದ್ದು ನಿಲ್ಲು ಥಾ7ಟದಿಮಲ್ಲಿಗೆ ವನಮಾಲೆ ಕೊರಳೊಳಲ್ಲಾಡುತಿರಲು ರೂಪದಲ್ಲಿ ಮನವಿನೈಕ್ಯವಾಗಿತಲ್ಲೀನರಾಗುವಂತೆ ಕೃಷ್ಣಾ 2 ಎದ್ದುನಿಂತು ಮಾಟದಿ ನಿಂತು ಮುದ್ದು ನೋಟದಿಬಿದ್ದವರನು ನೋಡಿ ನಮಗೆಶುದ್ಧ ಬುದ್ಧಿ ಕೊಟ್ಟು ನಮ್ಮದುದ್ಧರಿಪುದು ಗದುಗಿನ ಪ್ರಸಿದ್ಧ ವೀರನಾರಾಯಣ 3
--------------
ವೀರನಾರಾಯಣ
ಕೊಳಲನೂದೋ ಇನ್ನೊಮ್ಮೆ ರಂಗಯ್ಯಾ ಕೊಳಲನೂದೋ ಇನ್ನೊಮ್ಮೆ ಕೃಷ್ಣಯ್ಯಾ ಪ ಕೊಳಲನೂದೋ ದ್ವಾರಕಾ ಪುರನಿಲಯಾ ಅ.ಪ. ಎಡಹೆಗಲಲ್ಲೆಡಗಲ್ಲಂವ ನೀಡೀ ಕುಡಿ ಹುಬ್ಬುಗಳಲ್ಲಾಡಿಸುತ್ತ 1 ಮೃದುತರ ತುದಿ ಬೆರಳಿಂದೊತ್ತುತ ಮಧುರಾಧರದಲ್ಲಿಟ್ಟು ರಂಗಯ್ಯ2 ನಾದ ಮೂರುತಿ ಗೋಪೀಜನಲೋಲಾಶ್ರೀದವಿಠಲ ಗೋಪಾಲಬಾಲ3
--------------
ಶ್ರೀದವಿಠಲರು
ಕೊಳಲೂದೋ ಕೃಷ್ಣ ಕೊಳಲೂದೊ ಪ ಕೊಳಲೂದಲು ಮನ ತಳೆವುದು ಮನವಿದೊಬಳಲಿಪ ಚಿಂತೆಯ ಕಳೆವುದು ನಾದೊ ಅ.ಪ. ಸವಿಸವಿ ಸ್ವರಗಳು ಕಿವಿಗಳ ಹೊಗಲದು _ಭವಿಸುದೆನ್ನೊಳು ಭಕುತಿಯನಾದೊ 1 ತನು ಕೊಳವೆಯಲಿ ನಿನದುಸಿರನು ಕೊಡೆಇನಿದು ನುಡಿದು ಪಾವನ ತನುವಹುದೊ 2 ಸ್ವರಮಧುರತೆಯು ಶಿರದೊಳು ಚರಿಸುತೆನಿರುತ ನಿನ್ನಯ ಸ್ಮರಣೆಯ ನೀವುದೊ 3 ಮಧುರ ನಿನ್ನಯ ಗಾನವ ಕೇಳ್ವುದುಗದುಗು ವೀರನಾರಾಯಣನ ಮಹಾ ಪ್ರಸಾದೊ 4
--------------
ವೀರನಾರಾಯಣ
ಕೊಳಲೂದೋ ರಂಗಯ್ಯ ರಂಗ ನೀ ಕೊಳಲೂದೋ ಕೃಷ್ಣಯ್ಯ ಪ ಕೊಳಲೂದೋ ಗೋವಳರೊಡಗೂಡಿ ಚೆಲುವ ಶ್ರೀ ವೇಣುಗೋಪಾಲ ಕೃಷ್ಣ ನೀ 1 ಕಡಲೊಳಗಿದ್ದು ಬಂದ್ಹಡಗದಿಂದಲಿ ಕಡಗೋಲ ಪಿಡಿದ ಉಡುಪಿಯ ಕೃಷ್ಣ ನೀ 2 ಎಂಟು ಮಂದ್ಯತಿವರ್ಯರು ನಿನ್ನ ಸೇವೆಗೆ ಬಂಟರಾಗಿಹರ್ವೈಕುಂಠಪತಿ ಕೃಷ್ಣ ನೀ 3 ನಿಜಭಕ್ತರು ಕೈಬೀಸಿ ಕರೆಯಲು ರಜತಪೀಠದ ಪುರವಾಸ ಕೃಷ್ಣ ನೀ 4 ಸತ್ಯವಾದ ಜ್ಞಾನ ಪೂರ್ಣಾನಂದ- ತೀರ್ಥರ ಕರವಶವಾದ ಕೃಷ್ಣ ನೀ 5 ಅಂದಿಗೆ ಕಿರುಗೆಜ್ಜೆ ಘಲ್ಲು ಘಲ್ಲೆನುತ ಕಾ- ಳಿಂಗನ್ನ್ಹೆಡೆಯಲಿ ಕುಣಿದಾಡೊ ಕೃಷ್ಣ ನೀ 6 ದಾಸರ ಮನದಭಿಲಾಷೆ ಪೊರೈಸಿ ಭೀ- ಮೇಶಕೃಷ್ಣನೆ ದಯ ಮಾಡೊ ರಂಗ ನೀ 7
--------------
ಹರಪನಹಳ್ಳಿಭೀಮವ್ವ
ಕೊಳಲೇನು ಪುಣ್ಯವ ಮಾಡಿ ಕೃಷ್ಣನ ಕರವನೈದಿತೆ ಪ ಬಹಳುಗ್ರತಪವ ಮಾಡದೆ ಇಂಥÀ ಭೋಗವಾದೀತೇ ಅ.ಪ. ಧರಿಸಲ್ಹರಿಯು ಜಗವಮೋಹಿಪ ಶಕುತಿ ಬಂದಿತೇ ಸ್ಮರನ ಬಾಧೆಯು ಆತನ ನುಡಿಗೆ ಸ್ಮರಗೈದಿತೇ 1 ವಾರಿಜಾಕ್ಷನ ಮುಖರಿಗಿಂಥಾ ಸಾಹಸ ಬಂದಿತೇ ಶ್ರೀ ರಮೆಯರಿಂಗೆ ಬಲವಾದಸೂಯೆ ದೊರಕಿತೇ 2 ಭುವನಸದನ ಜೀವರಿಗೆ ಪಾದಪವಾಳೀತೇ ಜಗನ್ನಾಥವಿಠಲನ ಮುಖರಿಗೆ ಶಬ್ದವಿಲ್ಲ ಧೋಯಿತೇ 3
--------------
ಜಗನ್ನಾಥದಾಸರು
ಕೋನೇರಿ ವಾಸ ವಿಠಲ | ನೀನೆ ಪೊರೆ ಇವನ ಪ ಕಾಣೆ ನಿನ್ಹೊರತು ಕಾ | ರುಣ್ಯ ಮೂರುತಿ ಹರಿಯೆ0ಜ್ಞಾನಗಮ್ಯನೆ ಸಲಹೊ | ಮಾಣದಲೆ ಇವನಾ ಅ.ಪ. ಸುಕೃತ | ರಾಶಿ ಫಲಿಸಿತೊ ಇವಗೆ ದಾಸ ದೀಕ್ಷೆಯಲಿ ಬಹು | ಆಶೆ ತೋರುವನೋವಾಸವಾನುಜ ನಿನ್ನ | ದಾಸತ್ವ ಪಾಲಿಸುತಪೊಷಿಸೂವುದು ಬಿಡವೆ | ಶೇಷಾದ್ರಿವಾಸಾ 1 ತೈಜಸನು ಗುರುವಾದಿ | ರಾಜಾಖ್ಯ ರೂಪದಲಿಮಾಜದಲೆ ಪೇಳ್ವ ವಿ | ಭ್ರಾಜದಂಕಿತವಾವಾಜರೂಪಯು ಹರಿಯೇ | ಯೋಜಿಸಿಹೆ ಇವಗೆನಿವ್ರ್ಯಾಜ ಕರುಣಿಯೆ ಪೂರ್ಣ | ತೇಜೌಜ ನಿಧಿಯೇ 2 ಮಧ್ವ ಸಮಯದ ಜ್ಞಾನ | ವೃದ್ಧಿ ಗೈಸಿವನಲ್ಲಿಅದ್ವೈತ ತ್ರಯದರಿವು | ಬುದ್ಧಿಗೇ ನಿಲುಕೀಅಧ್ವಯನು ಹರಿಯೆಂಬ | ಸಿದ್ಧಾಂತ ಮನಸಿನಲಿಬದ್ಧವಾಗುವ ತೆರದಿ | ಸಿದ್ಧಿಸೋ ಹರಿಯೇ 3 ಕಂಸಾರಿ ತವನಾಮ | ಶಂಸನ ಪ್ಲವದಿಂದಸಂಸಾರ ನಿಧಿ ತರಣ | ಸಂಶಯವು ರಹಿತಾಅಂಶ ಅವತಾರ ಆ | ವೇಶ ವಿಷಯಗಳ ನಿಸ್ಸಂಶಯದಿ ತಿಳಿಸಿ ಪದ | ಪಾಂಸು ಸೇವೆ ಈಯೋ 4 ಸರ್ವಜ್ಞ ಸರ್ವೇಶ ಸರ್ವಮೂಲನೆ ದೇವದುರ್ವಿಭಾವ್ಯದೆ ಹರಿಯೆ | ಶರ್ವವಂದ್ಯಾಸರ್ವಾಂತರಾತ್ಮ ಗುರು | ಗೋವಿಂದ ವಿಠ್ಠಲನೆದರ್ವಿ ಜೀವಿಯ ಪೊರೆಯೆ | ಪ್ರಾರ್ಥಿಸುವೆ ಹರಿಯೆ 5
--------------
ಗುರುಗೋವಿಂದವಿಠಲರು
ಕೋಪ ಮಾಡುವರೆ - ಕೃಪಾಳು ನೀನು ಕೋಪ ಮಾಡುವರೆ ಪ ಕೋಪ ಮಾಡುವರೇನೋ ಸಂಸøತಿ ಕೂಪದೊಳು ಬಿದ್ದ್ಹೊರಳುತಿಹನ ನೀ ಪರಾಮರಿಸಿನ್ನು ಕೀರ್ತಿ ಕ- ಲಾಪವನು ಕಾಪಾಡಿಕೊಳ್ಳದೆ ಅ.ಪ. ನಾಥನು ನೀನು ಎಂದೆಂದಿಗೂ ದೂತನು ನಾನು ಸಿದ್ಧಾಂತವು | ನೀತವಿದಿನ್ನು ಕೋತಿ ಕುಣಿವುದು ಕೊರವ ಕುಣಿಸಿದ ರೀತಿಯಲಿ ಜಗತೀತಳದಿ - ವಿ ಖ್ಯಾತಿಯಲ್ಲವೆ ಮಾತು ಪುಸಿಯೇ ನೀ ತಿಳಿದು ಕರುಣಿಸದೆ ಬರಿದೆ 1 ಅರಿತವ ನೀನು - ಷಡ್ವರ್ಗದಿ ಬೆರತವ ನಾನು - ಚರಣಂಗಳಿಗೆರಗುವೆನಿನ್ನು ಅರಿತು ನೆನೆಯೆ ಪ್ರಪನ್ನರೊಮ್ಮೆಗೆ ಎರವು ಮಾಡದೆ ಪೊರೆವೆನೆಂಬುವ ಬಿರುದನುಳಿದು ಕರುಣವಿಲ್ಲದೆ ಮರೆಯ ಹೊಕ್ಕವರೊಡನೆ ಕೆರಳಿ 2 ಏನಾದರೇನು - ನೀನಲ್ಲದೆ ಪ್ರಾಣ ಸತಿಸುತ ದ್ರವ್ಯ ಮಾನಪ- ಮಾನ ಅಭಿಮಾನಗಳು ನಿನ್ನವು ದೀನ ಜನ ಮಂದಾರ ಗುಣಗಳ ಪೂರ್ಣ ಲಕ್ಷ್ಮೀಕಾಂತ ಪ್ರಭುವೆ 3
--------------
ಲಕ್ಷ್ಮೀನಾರಯಣರಾಯರು
ಕೋಪದೊಳು ಜಮದಗ್ನಿ ತಾಪದೊಳು ಮಾರ್ತಾಂಡ ಭೂಪರೊಳು ರಘುನಾಥನೆನ್ನ ನಾಥ ದ್ವೇಷದೊಳು ಭಾರ್ಗವನು ರೋಷದೊಳು ದೂರ್ವಾಸ ಮೋಸದೊಳ್ ಶ್ರೀಕೃಷ್ಣ ಮುದ್ದು ಕೃಷ್ಣ ಭೋಗದೊಳು ದೇವೇಶ ರಾಗದೊಳು ಗಿರಿಜೇಶ ತ್ಯಾಗದೊಳು ಶಿಬಿರಾಯ ಮದನಕಾಯ ಜ್ಞಾನದೊಳು ಜನಕನು ಧ್ಯಾನದಲಿ ದತ್ತರ್ಷಿ ಸೂನೃತದಿ ಹರಿಶ್ಚಂದ್ರ ಮಾನನಿಧಿಯು ಧನಿಕನೆಂದೆನಲಷ್ಟಸಿದ್ಧಿದಾತಂದೆ ಘನವಂತನೆನೆ ಪ್ರಣವಸ್ವರೂಪಗೆ ಧಣಿಯೆನಲು ಮೂಜಗಕ್ಕೊಡೆಯನಿವÀನೆ ಎಣೆಯುಂಟೆ ಶೇಷಾದ್ರಿವಾಸನಿವಗೆ
--------------
ನಂಜನಗೂಡು ತಿರುಮಲಾಂಬಾ
ಕೋಪವೇನೋ ಕೃಷ್ಣ ಕೋಪವೇನೊ ಪಾಪಿ ಜನಗಳಿಗೆ ನಿನ್ನ ರೂಪವÀ ತೋರಿದೆನೆಂದು ಪ ಪೇಳು ಕೃಷ್ಣ ನಿನ್ನ ಕೇಳುವೆನೊ ಗಾಳಿ ಚಳಿಮಳೆಗಳಲಿ ನಿನ್ನ ಧಾಳಿಯ ಮಾಡಿದೆನೆಂದು 1 ಸುಳ್ಳಿದಲ್ಲ ಕೃಷ್ಣ ಒಲ್ಲೆನೆಲ್ಲ ಹಳ್ಳ ಕೊಳ್ಳಗಳಲಿ ನುಗ್ಗಿ ಹಳ್ಳಿ ಹಳ್ಳಿಗೆ ತೋರಿದೆನೆಂದು 2 ಗುಟ್ಟಿದಲ್ಲ ಕೃಷ್ಣ ಬಿಟ್ಟಿದ್ದಲ್ಲ ಹೊಟ್ಟೆಪಾಡಿಗಾಗಿ ನಿನ್ನ ರಟ್ಟುಮಾಡಿ ದಣಿಸಿದೆನೆಂದು 3 ನಿನ್ನ ತ್ಯಾಗ ಕೃಷ್ಣ ಎನ್ನ ಯೋಗ ಮನ್ನಿಸಲಾರೆಯ ದಯದಿ ಚಿನ್ಮಯ ಪ್ರಸನ್ನ ಕೃಷ್ಣ 4
--------------
ವಿದ್ಯಾಪ್ರಸನ್ನತೀರ್ಥರು
ಕೋಪವ್ಯಾತಕೊ ಕರುಣಾನಿಧೆ ಭೂಪನೆಂದು ನಿನ್ನ ನಂಬಿದೆ ಶ್ರೀಪತೇ ಶರಣಾಗತ ಮೇಲಾಪದ್ಗಣ ತರಬಾರದು ಬರಿದೆ ಪ. ಆವ ಕಾಲಕು ನಿನ್ನ ಸೇವೆ ಮಾಡುವುದೆನ್ನ ಪಾವನವಂತಿರಲು ನೋವನು ಪೊಂದಿಪುದ್ಯಾವ ಘನತೆ ಭದ್ರನಾವನೆ ನಿನಗೆ 1 ಹಸ್ತಪಾದಾದಿಗಳನಿತ್ತುದೆ ಸೇವನಗೆಂದುತ್ತಮ ಭಾವವಿಡ- ಪರಿ ಚಿತ್ತಜ ಜನಕ 2 ನಿತ್ಯ ನೇಮಂಗಳನು ತಕ್ಕಕಾಲದಿ ನಡೆಸುತ ಶಕ್ತಿಯನಿತ್ತು ಸಲಹು ಪುರುಷೋತ್ತಮ ನಿರುಪದಿ 3 ಮುನ್ನಿನ ಭವಗಳನೆಲ್ಲ ಕಳೆದ ಮ- ಹೋನ್ನತಿಯನು ತವ ಕರುಣದಿ ಸೇರಿದೆ4 ತಪ್ಪುಗಳೆಷ್ಟಿದ್ದರೂ ಒಪ್ಪಿಕೊ ಮುನಿಸದಿರು ಅಪ್ಪ ನೀನೆಂಬುವಶ್ರುತಿ ಕೃತ ಬಿರುದನು ತಪ್ಪಿಸಿಕೊಳದಿರು ಸರ್ಪ ಗಿರೀಶನೆ 5
--------------
ತುಪಾಕಿ ವೆಂಕಟರಮಣಾಚಾರ್ಯ