ಒಟ್ಟು 12958 ಕಡೆಗಳಲ್ಲಿ , 134 ದಾಸರು , 6175 ಕೀರ್ತನೆಗಳಲ್ಲಿ ಈ ಪದವನ್ನು ಬಳಸಿರುತ್ತಾರೆ

ಒಳ್ಯಾವರ ಕೇಳಿ ಉಳುವ ಉಪಾಯದ ಮಾತು ಧ್ರುವ ನಿಜ ಕಂಡು ಸುಖದಲಿ ಹೇಳ್ಯಾಡಿಕೊಳ್ಳುದು ಜಗದಲಿ ತಿಳಿದು ಮನದಲಿ 1 ಪಾಮರ ಹೊಡಹುಳ್ಳಿ ಉಳ್ಳವರ ಪಾದಕೆ ಬಲಗೊಳ್ಳಿ ಕಳೆದುಹೋಗುದು ತಳ್ಳಿ 2 ಮಹಿಪತಿ ಸ್ವಧನ ಹೊಳೆವುತದೆ ಸದ್ಗುರುಕರುಣ ಬಲಗೊಂಬುದು ಪೂರ್ಣ 3
--------------
ಕಾಖಂಡಕಿ ಶ್ರೀ ಮಹಿಪತಿರಾಯರು
ಒಳ್ಳಾದು ಬರುತಾದೆ ಒಳ್ಳಾದು ಬರುತಾದೆ | ಒಳ್ಳಾದು ಬರುತಾದೆ ಕೈಯ್ಯದೋರೆ | ಗೋಪೆಮ್ಮ ಕೈಯ ನೋಡೇನು ಪ ಹೆತ್ತವಸರ ಬುಟ್ಟಿ ಹೊತ್ತದಿವ್ಯಂಬರ ಕೊರವಿ | ಉತ್ತಮದಾ ನುಡಿಗಳನು ಸತ್ಯಾಪುರದಿ ಹೇಳಬಂದೆ | ಕೈಯ್ಯದೋರೆ 1 ಮಥುರಾನಗರದಲ್ಲಿ ಮದನಮೋಹನಾ ಜನಿಸಿ | ಸದೆದು ಕಂಸಾದ್ಯರೆಲ್ಲಾ | ವದಗಿ ಹರಿವಾ ಕರಿಯಾ ನಿಮ್ಮ | ಕೈಯ್ಯದೋರೆ 2 ವರ ಉಗ್ರಶೇನನಿಗೆ ಅರಸು ತನವಾ ಕೊಟ್ಟು | ಪರಿ ಕರುಣೆಯಿಂದಾ | ಶರಣರನು ಹೊರೆವ ನಮ್ಮಾ ಕೈಯ್ಯದೋರೆ 3 ಮೌನಾಕಾ ವಲಿಗೆ ಹಾಕಿ | ತಾನು ಗೋಕುಲದಿ ಬೆಳೆದು ನಾನಾ ಉಪಾಯದಿ ಬಂದಾ | ದಾನವರ ಗೆದ್ದಾ ನಮ್ಮ | ಕೈಯ್ಯದೋರೆ 4 ಭಾರ ನಿಳುಹಲಾಗಿ | ಮಹಿಪತಿ ಸುತಪ್ರಭು | ಮಹಿಮೆ ದೋರ ಬಂದಾನಮ್ಮ | ಕೈಯ್ಯದೋರೆ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಒಳ್ಳೆವಾಜಿಯ ಕಲಿತಿದ್ದಿತಾಳೊ ಬುದ್ಧಿಲ್ಲ ಕೇಳೊಒಳ್ಳೆ ವಾಜಿಯ ಕಲಿತಿ ತಾಳೊಸುಳ್ಳು ಕೆಲಸವ ಹೇಳಿ ಸುಳಿಯುವಿ ನೆರೆಮನೆಯಚಲುವನರಿಯುತ ಚಲುವೆರಿಬ್ಬರ ಕುಚೋದ್ಯದಲಿ ಪ. ಹೆಣ್ಣು ಕೊಟ್ಟವನಿಗೆ ಕಣ್ಣು ಕಾಣದು ಏನೊಇನ್ನೆಲ್ಲಿ ವರನ ಕಾಣದೆ ಇನ್ನೆಲ್ಲಿ ವರನ ಕಾಣದೆ ಇಂಥವಗೆಹೆಣ್ಣು ಕೊಟ್ಟವನು ಬಲು ಹೇಡಿ 1 ಕೊಟ್ಟರೇನಾಯಿತು ಅಟ್ಟುಣಲು ಬಲ್ಲಹುಟ್ಟು ಗತಿಯಂತು ಮೊದಲಿಲ್ಲಹುಟ್ಟು ಗತಿಯಂತು ಮೊದಲಿಲ್ಲ ದಾನವಕೊಟ್ಟ ಬಲೀಂದ್ರ ಇದು ಬಲ್ಲ 2 ಕುಲವಿಲ್ಲಗೋತ್ರವಿಲ್ಲ ನೆಲೆಯಿಲ್ಲ ಆಚಾರವಿಲ್ಲಬಲುದೈತ್ಯರೊಳು ಹಗೆಯಾದ ಬಲುದೈತ್ಯರೊಳು ಹಗೆಯಾದ ಇಂಥವಗೆ ಜಲನಿಧಿ ಮಗಳ ಕೊಡಬಹುದೆ 3 ಮೂರು ಗುಣಗಳ ಮೀರಿದವ ನೀಚನೆನಿಸುವ ಇವನು ನೀಚನೆನಿಸುವಇವನ ಗುಣಯಾರು ಅರಿಯರು ಧರೆ ಮ್ಯಾಲೆ4 ಹಾಲು ಕೆನೆಯ ಕದ್ದು ಬಾಲೆರೆಲ್ಲರಪೀಡಿಸಿಬಾಲನಾಗಿ ಒರಳ ಎಳೆಯುತಬಾಲನಾಗಿ ಒರಳ ಎಳೆಯುತಜನನಿಗೆ ಚಾಲವರೆದದ್ದು ಮರೆತೇನೊ5 ಬೆಣ್ಣಿ ಮೊಸರು ಕದ್ದು ಹೆಣ್ಣುಮಕ್ಕಳ ಕಾಡಿಸಿ ಮುನ್ನ ತೊತ್ತಿನ ಮನೆಯಲ್ಲಿಮುನ್ನ ತೊತ್ತಿನ ಮನೆಯಲ್ಲಿ ಉಂಡುನೀ ಹೆಣ್ಣಾಗಿದ್ಯಲ್ಲೊ ರಮಿಯರಸು6
--------------
ಗಲಗಲಿಅವ್ವನವರು
ಒಳ್ಳೇದೋ ಒಳ್ಳೇದೋ ಎಲ್ಲ ಸ್ಥಳವ ಬಿಟ್ಟು | ಇಲ್ಲಿ ಅಡಗಿದ ಬಲ್ಲಿದ ತನವೇ ಪ ಬಿಡೆ ಬಿಡೆನೊ ಎನ್ನ ಒಡಿಯ ತಿರುಮಲ ನಿನ್ನ | ಉಡಿಯ ಪೀತಾಂಬರ ಪಿಡಿದು ನಿಲಿಸಿಕೊಂಬೆ 1 ಎರವು ಮಾಡಿ ತಿರುಗಿಸಿದಿ ನೀ ಎನ್ನ ಕೊರಳಿಗೆ ನಿನ್ನ ಚರಣ ಕಟ್ಟಿಕೊಂಬೆ 2 ಅತ್ತ ಇತ್ತಲಿ ನೋಡಿನೆತ್ತ ಪೋಗಲಿ ಎನ್ನ | ಚಿತ್ತದಲಿ ನಿನ್ನ ಹತ್ತೆಗಟ್ಟಿಕೊಂಬೆ 3 ಅತ್ತಿಯ ಮಕ್ಕಳಿಗೆ ತೆತ್ತಿಗ ನೀನಾಗಿ | ವಿತ್ತವಿತ್ತದರಾದ ರಾಸಿ ಸಿರಿಯಲ್ಲಿ 4 ಇರಳು ಹಗಲು ಬಿಡದೆ ಗುರು ಪುರಂದರಗೊಲಿದೆ | ಬಿರಿದು ಏನೊ ಇಷ್ಟು ವಿಜಯವಿಠಲಾ5
--------------
ವಿಜಯದಾಸ
ಓ ದೇವ ನೀನೆಂಥ ಕರುಣಾಳೊ ಮಾದೇವ ನೀನೆಂಥ ಕರುಣಾಳೊ ಪ ಕಾಲನ ಕಾಲಲೊದ್ದು ಬಾಲನಿಗಾಯುಷ್ಯ ಪಾಲಿಸಿದೆ ನೀನೆಂಥ ಕರುಣಾಳೊ 1 ಸುರೇಂದ್ರ ಪ್ರಮುಖರ ಪೊರೆಯಲು ಗರಳವ ಕೊರಳೊಳು ಧರಿಸಿದೆ ಕರುಣಾಳು 2 ಘೋರ ಭವಾಂಬುಧಿ ತಾರಣೋಪಾಯವ ಬೀರಿದೆ ಜಗಕೆಲ್ಲ ಕರುಣಾಳು 3 ಕ್ಷೀರವ ಬೇಡಲು ಕ್ಷೀರೋದಧಿಯನಿತ್ತೆ ಪೋರನಿಗೆ ಇನ್ನೆಂಥ ಕರುಣಾಳು 4 ಶ್ರೀಕಾಂತ ಹಿತ ಸಖ ಶ್ರೀಕಂಠ ನಿನ್ನಂಥ ನಾ ಕಾಣೆ ಧರೆಯೊಳು ಕರುಣಿಗಳ 5
--------------
ಲಕ್ಷ್ಮೀನಾರಯಣರಾಯರು
ಓಂ ನಮೋ ನಾರಾಯಣಾಯ ತೇ ನಮೋ ನಮೋ ನಮೋ ಪ ಓಂ ನಮೋ ಓಂಕಾರಾದಿ ನೀ ಘನ್ನ ಮಹಿಮ ಅಷ್ಟಾಕ್ಷರಾತ್ಮಕನೆ ಅ.ಪ ಪ್ರಣವ ಪ್ರತಿಪಾದ್ಯ ನೀ ಅಷ್ಟಾಕ್ಷರದೊಳು ವಿಶ್ವತÉೈಜಸ ಪ್ರಾಜ್ಞ ತುರ್ಯಾತ್ಮ ಅಂತರಾತ್ಮ ಪರಮಾತ್ಮ ಜ್ಞಾನಾತ್ಮ ವರ್ಣಾತ್ಮಕ ನೀ ಓಂಕಾರದೊಳು ಅಉ ಮನಾದಬಿಂದು ಘೋಷ ಶಾಂತ ಅತಿಶಾಂತದೊಳು ಪ್ರತಿಪಾದ್ಯಮೂರುತಿ ಹರೆ1 ಪ್ರಣವದೊಳು ಆದಿವರ್ಣದಿಂದಭಿವ್ಮಕ್ತಿ ಕಾಲಗಳ್‍ವ್ಯಕ್ತವೊ ಪ್ರಾಣ ಲಕುಮಿಯಭಿಮಾನಿಗಳನಂತ ವೇದಗಳಿಂ ವಿಶ್ವಮೂರುತೀ ಹರೆ2 ವಯ್ಯ ಕವರ್ಗ ವರ್ಗವೈದು ಪಂಚಭೂತಗಳಂ ವರ್ಣದೊಳಭಿಮಾನಿಗಳ್ ಭೂತಕ ಗಣಪ ಪ್ರಹವವಾಯು ತೈಜಸ ಮೂರುತೇ3 ಪ್ರತಿಪಾದ್ಯನೆ ಮಕಾರ ವಾಚ್ಯ ಶ್ರೀ ಪ್ರಾಜ್ಞ ನಿನ್ನಿಂದಭಿ- ವ್ಯಕ್ತಿ ಚವರ್ಗ ಪಂಚಕ ಜ್ಞಾನೇಂದ್ರಿಯ ವೈದು ಸೂರ್ಯ ಪ್ರಾಣ ದಿಗ್ದೇ- ವತೆಗಳಿಹರು ಪ್ರತಿಗಾಣಿನೊ ಶ್ರೀ ಪ್ರಾಜ್ಞಮೂರುತಿ ಹರೆ4 ನಾದವಾಚ್ಯಪ್ರತಿಪಾದ್ಯ ತುರ್ಯನೆ ಅಭಿವ್ಯಕ್ತ ಪಂಚವರ್ಣ ಟವರ್ಗ ಕರ್ಮೇಂದ್ರಿಯಗಳ್ ಶ್ರೀ ತುರ್ಯ ಮೂರುತೆ 5 ಬಿಂದುವಾಚ್ಯ ಪ್ರತಿಪಾದ್ಯ ನೀನಾತ್ಮ ಬಿಂದುವಿಂದ ತವರ್ಗ ಪೊಂದಿಕೊಂಡಿಹುದು ತನ್ಮಾತ್ರಪಂಚಕ ಪಂಚವಾಯುಗಳಿಹರಯ್ಯ ಬಂಧ ಮೋಚಕ ನೀ ಕಾರಣ ಹರೆ 6 ಘೋಷದಿಂದಲಭಿವ್ಯಕ್ತಿ ಪಂಚಮನೋ ವೃತ್ತಿಗಳದರಭಿಮಾನಿ ಓಷಧೀಧರ ಖಗಪ ಶೇಷೇಂದ್ರ ಕಾಮರು ಪಕಾರ ಪಂಚವರ್ಣ ದೋಷರಹಿತ ಮನೋಧಾಮದಿ ನೀ ದೊರೆ 7 ಕಾರಾದಿ ಸಪ್ತವರ್ಣ ಸಪ್ತಧಾತುಗಳಲ್ಲಿ ಪರಿ ಅರಿಯೆನೊ ಹರಿಯೆ 8 ಅತಿ ಶಾಂತದೊಳು ಪ್ರತಿಪಾದ್ಯನಾಗಿಹೆ ಜ್ಞಾನಾತ್ಮ ಹಕಾರಾದಿ ತ್ರೈವರ್ಣ ಅದರಿಂದ ಗುಣಕ್ರಿಯವೊ ತತುಕ್ರಿಯ ಜಾಗೃತ ಸ್ವಪ್ನ ಸುಷುಪ್ತಿ ವಿಶ್ವಾದಿರೂಪದಿಂದ ಉರಗಾದ್ರಿವಾಸವಿಠಲ ಮೂರುತೇ 9
--------------
ಉರಗಾದ್ರಿವಾಸವಿಠಲದಾಸರು
ಓಂ ನಮೋ ಮಹೀಪತಿ ಸದಾನಂದ ಗುರುಮೂರ್ತಿ | ಸನ್ನುತ ನಿಮ್ಮ ಖ್ಯಾತಿ ಪೊಗಳಲಾಪೆನೆ ಕೀರ್ತಿ ಪ ತನ್ನ ತಾ ಮರೆದವರಾ | ನೀನು ಕೊಟ್ಟು ಎಚ್ಚರಾ | ಮುನ್ನಿ ನಂದದಿ ಮಾಡಿ | ಓಡಿಸಿದೇ ಭವದೂರಾ 1 ಸಹಜ ಬೀರುವ ವಚನಾ | ಅದೇ ಉಪದೇಶ ಜ್ಞಾನಾ| ಇಹ ಪರಕ ನಿಧಾನಾ | ಮಾಡುವದು ಸಾವಧಾನಾ2 ವೇದ ಸಿದ್ಧಾಂತದಲ್ಲಿ | ರಾಜಯೋಗ ಮನೆಯಲ್ಲಿ | ಬೋಧಿಸುವ ವಸ್ತು ನೀನೇ | ಸರಿಗಾಣೆ ನಾನೆಲ್ಲಿ3 ಏನು ಪುಣ್ಯವೋ ಎನ್ನಾ | ಅದೇ ಬಾಲಕ ನಿನ್ನಾ | ತಾನೇನ ಸಾಧುವೆನಗ | ಇರಲು ನಿಮ್ಮ ದಯಾಘನಾ 4 ದಾಸರಾ ದಾಸನೆಂದು | ಇನ್ನು ನೋಡದೆವೆ ಕುಂದು | ಭಾಸಿ ಪಾಲಿಸು ಕೃಷ್ಣಗ ಎಂದೂ | ಕೈಯ್ಯಾ ಬಿಡೆನೆಂದು5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಓಂ ನಮೋ ರಾ‌ಘವೇಂದ್ರಾಪ ಓಂ ನಮೋ ರಾಘವೇಂದ್ರಾ ಘನದಯ ದಾಸಾಂದ್ರಾ ವಾರಿಧಿ ಪೂರ್ಣಚಂದ್ರಾ1 ಶ್ರೀರಾಮ ಜಯರಾಮ ಸ್ವಾಮಿ ಜಯಜಯ ರಾಮಾ ಈರೀತಿ ಸ್ಮøತಿಸಲಿಕೆ ಕೊಡುವಿ ವೈಕುಂಠ ಧಾಮಾ2 ಉಗ್ರ ವೃತ ತಪದಿಂದಾ ಜಪ ಅನುಷ್ಠಾನದಿಂದಾ ಶ್ರೀಘ್ರದಿಂದ ಪಡಕೊಂಬಾ ಫಲಕಾಮ ಸನ್ನಿಧಾ3 ಹನುಮಬಲ್ಲಾ ಹರಬಲ್ಲಾ ಋಷಿನಾರದ ಬಲ್ಲಾ ನೆನವನಾಮ ಸವಿಯಲೋ ಹೇಳಲಿಕೆ ಅಳವಲ್ಲಾ 4 ಮರಳು ಮಾನವರಂತಾ ಎನ್ನ ನೋಡಬ್ಯಾಡ ಡೊಂಕಾ ಗುರುಮಹಿಪತಿ ಸ್ವಾಮಿ ನಾಮ ವೆನೆವ ನಿ:ಶಂಕಾ 5
--------------
ಕಾಖಂಡಕಿ ಶ್ರೀ ಕೃಷ್ಣದಾಸರು
ಓಂಕಾರ ಪ್ರತಿಪಾದ್ಯ ಶಂಖಚಕ್ರಾಭಯಕರ ಬಿಂಕದಿಂದ ಬಾಕು ಟೊಂಕದಿ ಕಟ್ಟಿ ಮೆರೆವ ದೇವ 1 ಇಷ್ಟು ಜನರ ರೋಗ ತೊಟ್ಟಿ ತೀರ್ಥದಿಂದ ಕಳೆವ ಕಷ್ಟದ ಕಂಕಣ ಕಟ್ಟಿ ಮೆರೆವ ದೇವಾ 2 ದೇಶದೇಶದಿ ಬರುವ ದಾಸ ಜನರ ಅರ್ಥಿ ಕಾಸುವೀಸಕೆ ಕೊಟ್ಟು ಲೇಸಾಗಿರುವಿಯಿಲ್ಲಿ 3 ನಾಮ ತೀರ್ಥ ಪ್ರಸಾದ ಕಾಮಿಸೆ ವಿಕ್ರಯಿಸುವ ನೇಮಗಳನೆ ಕೊಟ್ಟು ತ್ರಿಧಾಮ ನಿಲಯನೆ 4 ಮಂಗಳ ಮಹಿಮನೆ ಗಂಗಾಜನಕನೆ ಅಂಗಜನಯ್ಯನೆ ವೆಂಕಟರಮಣನೆ 5 ತಾಳ ತಂಬೂರಿ ದಮ್ಮಡಿ ಮೇಳದೊಳು ದಾಸರು ವೇಳೆ ವೇಳೆಗೆ ಸೇವಿಸೆ ಕಾಳ ದೋಷವ ಕಳೆವ 6 ರಮಾ ಸೇವಿತÀ ವಿಜಯ ರಾಮಚಂದ್ರವಿಠಲ ನಿತ್ಯ ನಿನ್ನ ನಾಮಗಳನೆ ನುಡಿಸೊ 7
--------------
ವಿಜಯ ರಾಮಚಂದ್ರವಿಠಲ
ಓಂಕಾರಾ ಕಾರಾ ಶಿವನೇ | ಪಾಲಯ ಮಾಂ ಪ ವೈಕಾರಿಕಾದಿ ತ್ರ್ಯಾಕಾರ ಹರನೆಸ್ವೀಕರಿಸುವುದೀ ತೋಕನ ಬಿನ್ನಪ ಅ.ಪ. ನರ್ಮದೆ ಕಾವೇರೀ ಸಂಗಮಾ | ಶೈಲವಾಸಾ |ಹಮ್ರ್ಯ ದೊಳಗೆ ಇಹ | ಬೊಮ್ಮನಯ್ಯಾ ಪದಕಮ್ಮಲ ಕಾಂಬ ಸು | ಹಮ್ಮ ನೀಯೊ ಹರ 1 ವ್ರಾತ ತುತಿಸೆ ಬಲುಪ್ರೀತಿಲಿ ತ್ರಿಪುರಾ | ರಾತಿ ಎನಿಸಿದೇ 2 ಬದರೀಯಾ ವಾಸವಾ | ನಾರಾಯಣನಾ |ಪದದ ಉದಕ | ಅಭಿಷೇಚಿಸುವೆನುಮುದದಿ ಕೊಳ್ಳೊ ಗುರು | ಗೋವಿಂದ ಪೌತ್ರಾ 3
--------------
ಗುರುಗೋವಿಂದವಿಠಲರು
ಓಡದಿರು ಓಡದಿರು ಖೋಡಿ ಮನವೆ ಮೂಢತನದಲಿ ಬರುವ ಕೇಡುಗಳನರಿದರಿದು ಪ. ಬೀಸುವದು ಬಿರುಗಾಳಿ ಸೂಸುವದು ಉರಿಮಳೆಯು ಪೆಸರಿಲ್ಲದೆ ಕತ್ತಲೆಯು ಮುಸುಕುತಿಹುದು ಈಸು ನೆಲಸಿಹ ಘೋರ ಭೀಷಣಾಟವಿಯೊಳಗೆ ಬೀಸುವನು ಬೇಡನೊಬ್ಬನು ಬಲೆಯನಿಕದಕೊ1 ಅತ್ತೆಯೆಂಬುವಳು ನಿನ್ನ ನೆತ್ತಿಯಲಿ ತೈಲವನು ಒತ್ತಿ ಮೋಹದಿ ವಹಿಸಿಕೊಂಡಿರುವಳು ಅತ್ತ ಕಡೆ ಬೇಡ ಹಿಂದೊತ್ತಿ ಬರುವರೆ ಬೇಗ ತುತ್ತಾಗ ಎನುತ ಬಾಯ್ ತೆರೆದಿರುವಳು 2 ಮುಂಗಡಯೊಳ್ ಸಾಲಾಗಿ ಅಂಗಡಿಗಳಿರುತಿಹವು ಹಂಗಿಗನು ನೀನಾಗಿ ಬೇಡ ಅವರ ಸಂಗ ಗೈಯುತ ವ್ಯಾಪಾರಂಗಳನು ಮಾಡಿದರೆ ಭಂಗಿಯನು ಕೊಟ್ಟು ಬಲು ಭಂಗಪಡಿಸುವರಯ್ಯ 3 ಖೂಳತನ ಬೇಡ ಬಾ ಮಾಳಿಗೆಗೆ ಹೋಗುವ ಏಳು ಮೆಟ್ಟಲ ದಾಂಟಿ ಲೋಲತನದಿ ಅಲದೆಲೆ ಮಂಚದಲಿ ಲೋಲನಾಗಿಹನ ಪದ ಆಲಿಂಗನದಿ ಬಲು ಕುಶಾಲಿನಲ್ಲಿರು ಕಂಡ್ಯ 4 ಈ ರೀತಿಯಲಿ ನಿನಗೆ ಸಾರಿ ಪೇಳಿದೆ ನೋಡು ಭೂರಿ ಮಾಯಾಭ್ರಾಂತಿಗೊಳಗಾಗದೆ ಕಾರಣಿಕ ಲಕ್ಷ್ಮೀನಾರಾಯಣನ ಪಾದ ವಾರಿಜದಿ ನಲಿದು ಸುಖಿಯಾಗು ನೀ ಮನವೆ 5
--------------
ಪಾವಂಜೆ ಲಕ್ಷ್ಮೀನಾರ್ಣಪ್ಪಯ್ಯ
ಓಡದಿರು ಓಡದಿರು ಖೋಡಿ ಮನವೆ ಮೂಢತನದಲಿ ಬರುವ ಕೇಡುಗಳನರಿದರಿದುಪ. ಬೀಸುವದು ಬಿರುಗಾಳಿ ಸೂಸುವದು ಉರಿಮಳೆಯು ಪೆಸರಿಲ್ಲದೆ ಕತ್ತಲೆಯು ಮುಸುಕುತಿಹುದು ಈಸು ನೆಲಸಿಹ ಘೋರ ಭೀಷಣಾಟವಿಯೊಳಗೆ ಬೀಸುವನು ಬೇಡನೊಬ್ಬನು ಬಲೆಯನಿಕದಕೊ1 ಅತ್ತೆಯೆಂಬುವಳು ನಿನ್ನ ನೆತ್ತಿಯಲಿ ತೈಲವನು ಒತ್ತಿ ಮೋಹದಿ ವಹಿಸಿಕೊಂಡಿರುವಳು ಅತ್ತ ಕಡೆ ಬೇಡ ಹಿಂದೊತ್ತಿ ಬರುವರೆ ಬೇಗ ತುತ್ತಾಗ ಎನುತ ಬಾಯ್ ತೆರೆದಿರುವಳು 2 ಮುಂಗಡಯೊಳ್ ಸಾಲಾಗಿ ಅಂಗಡಿಗಳಿರುತಿಹವು ಹಂಗಿಗನು ನೀನಾಗಿ ಬೇಡ ಅವರ ಸಂಗ ಗೈಯುತ ವ್ಯಾಪಾರಂಗಳನು ಮಾಡಿದರೆ ಭಂಗಿಯನು ಕೊಟ್ಟು ಬಲು ಭಂಗಪಡಿಸುವರಯ್ಯ 3 ಖೂಳತನ ಬೇಡ ಬಾ ಮಾಳಿಗೆಗೆ ಹೋಗುವ ಏಳು ಮೆಟ್ಟಲ ದಾಂಟಿ ಲೋಲತನದಿ ಅಲದೆಲೆ ಮಂಚದಲಿ ಲೋಲನಾಗಿಹನ ಪದ ಆಲಿಂಗನದಿ ಬಲು ಕುಶಾಲಿನಲ್ಲಿರು ಕಂಡ್ಯ4 ಈ ರೀತಿಯಲಿ ನಿನಗೆ ಸಾರಿ ಪೇಳಿದೆ ನೋಡು ಭೂರಿ ಮಾಯಾಭ್ರಾಂತಿಗೊಳಗಾಗದೆ ಕಾರಣಿಕ ಲಕ್ಷ್ಮೀನಾರಾಯಣನ ಪಾದ ವಾರಿಜದಿ ನಲಿದು ಸುಖಿಯಾಗು ನೀ ಮನವೆ5
--------------
ತುಪಾಕಿ ವೆಂಕಟರಮಣಾಚಾರ್ಯ
ಓಡಿ ಓಡಿ ಬಾ ಅಂಕದೊಳಾಡೋ ಕೂಸೇ ಬಾ ಪ ನೋಡುವೆ ನಿನ್ನ ರಾಮರ ಮುಖದಿ ಕೂಡಿ ಕರುಣಿಯೆ ಬಾ ಅ.ಪ. ಚೆಂಡು ಕೊಡುವೆನು ಬಾ ಗೋಲಿಗುಂಡು ಕೊಡುವೆನು ಬಾದುಂಡು ಕರದೊಳ್ ಗುಂಡು ಬಿಂದುಲಿ ಉಂಗುರನೀಡುವೆ ಬಾ 1 ಬೆಣ್ಣೆ ಕೊಡುವೆನು ಬಾ ಬಾಳೆಹಣ್ಣು ಕೊಡುವೆನು ಬಾಸಣ್ಣ ಸಣ್ಣ ಹೆಜ್ಜೆನಿಕ್ಕುತ ಮನ್ಮಥಪಿತನೆ ಬಾ 2 ನಾರಿವತ್ಸೆ ಬಾ ಮುತ್ತಿನ ಹಾರ ಹಾಕುವೆ ಬಾಪಾರಿಜಾತ ಮುಡಿಸಿದ ರುಕ್ಮಿಣಿಧೀರ ಕೃಷ್ಣನೆ ಬಾ 3 ಮುರಳೀಧರನೆ ಬಾ ಮುಂಗುರಗಳ ಭೂಷಿತ ಬಾಪರಿಪರಿವಸ್ತ್ರವನಿಟ್ಟು ನೋಡುವೆ ಮರಳಿ ಮರಳಿ ಬಾ 4 ನಂದನ ಕಂದನೆ ಬಾ ಮನಕಾನಂದಪಡಿಸುತ ಬಾನಿಂದಿರಲಾರೆ ನಿನ್ನನು ನೋಡದೆ ಇಂದಿರೇಶನೆ ಬಾ 5
--------------
ಇಂದಿರೇಶರು
ಓಡಿ ಬಾರೋ ರಂಗಯ್ಯ ಓಡಿ ಬಾರೋ ಕೃಷ್ಣಯ್ಯ ಪ. ನೋಡಿ ನಿನ್ನ ಮುತ್ತನೀಡುವೆ ಹಾಡಿ ಜೋಗುಳವ ಪಾಡುವೆ ಅ.ಪ. ಮೊಸರು ಭಾಂಡ ಒಡೆದು ಬೆಣ್ಣೆ ಹಸುಳೆ ಮೆದ್ದು ಬಾಯೆಲ್ಲಾ ರಸಿಕಸಿಯಾಗಿರುವ ಮೈಗೆ ಬಿಸಿ ನೀರೆರೆವೆನೊ ರಂಗ 1 ಬಿಸಿ ದೋಸೆಯ ಕೊಡುವೆನೆ ಮೊಸರೋಗರವ ಉಣಿಸಿ ನಿನಗೆ ಹಸುರಂಗಿಯ ತೊಡಿಸುವೆ ಕೃಷ್ಣಾ 2 ಮುದ್ದು ಮುದ್ದಾದ ಪಾದ ಹೆಜ್ಜೆನಿಟ್ಟು ಬಾರೆಲೊ ಮುದ್ದೆ ಬೆಣ್ಣೆ ಹಣ್ಣು ಕೊಟ್ಟು ಮುದ್ರೆಯುಂಗುರವನಿಟ್ಟು ನೋಡುವೆ 3 ಅಣ್ಣ ಬಲರಾಮನೊಡನೆ ಚಿಣ್ಣ ಆಡಬಾರೆಲೊ ಚಿಣ್ಣಿಕೋಲು ಚಂಡು ಬುಗುರಿ ಚಿಣ್ಣ ಕೊಡುವೆನೋ ಕೃಷ್ಣಾ 4 ಶೃಂಗಾರವ ಮಾಡುವ ಶ್ರೀ ಶ್ರೀನಿವಾಸ ಬಾರೆಲೊ ಮುದ್ದು ಕಂಗಳಿಗೆ ಕಪ್ಪನ್ಹಚ್ಚಿ ರಂಗ ನಿನ್ನ ನೋಡುವೆದಣಿಯ5
--------------
ಸರಸ್ವತಿ ಬಾಯಿ
ಓಡಿಬಾರೋ ಶ್ರೀ ಮನ್ಮಥ ಜನಕನೆ ನೀಡುವೆ ತನುಮನವಾ ಪ. ನೋಡಿ ಮುದ್ದಾಡಿ ಕೊಂಡಾಡಿ ನಾ ಬೇಡುವೆಈಡಿಲ್ಲದ ನಿನ್ನೊಡನಾಡುವ ಸುಖ ಅ.ಪ. ಕಾಡಿನ ಸುಖಕೆ ಮತ್ತೀಡಿಲ್ಲ ಧರೆಯೊಳುಮಾಡುವೆ ಶಪಥವನುಹಾಡಿಪಾಡಿ ಕೈಜೋಡಿಸಿ ಕುಣಿಯುತಮಾಡಿದೆವೊ ನಾವ್ ರಾಸಕ್ರೀಡೆಯ 1 ನಿರಂಜನ ಮೂರ್ತೆ 2 ನೀರಜನಾಭನೆ ತೋರೋಕರಪಲ್ಲವಮೀರಿವೆ ಹೃದಯ ಸಂತಾಪಗಳುಮಾರ ಮೋಹನ ಸಾರುವೆ ನಿನ್ನಯಜಾರ ಬುದ್ಧಿಯ ತಾಪವ ನೀಗಿಸು 3 ಕಮಲ ವಿಹಂಗಮರಾಜ 4 ನೀನೇ ದಯಾಪರ ನೀನೇ ಭಕ್ತೋದ್ಧಾರನೀನೇ ಗತಿ ಪರನಾರೆರಿಗೆಪಾಣಿಮುಗೆವೆಯಮ್ಮ ವಾಣಿಯ ಲಾಲಿಸಿ ವೇಣುನಾದ ತೋರೊ ತಂದೆ ಶ್ರೀನೃಹರೇ 5
--------------
ತಂದೆ ಶ್ರೀನರಹರಿ